Kiara Sidharth Wedding : ಮದುವೆ ಆದ ಮೇಲೆ ಕಿಯಾರಾ ಮತ್ತು ಸಿದ್ದಾರ್ಥ್‌ 70 ಕೋಟಿ ರೂ. ಬೆಲೆ ಬಾಳುವ ಬಂಗಲೆಗೆ ಶಿಫ್ಟ್‌? - Vistara News

ಬಾಲಿವುಡ್

Kiara Sidharth Wedding : ಮದುವೆ ಆದ ಮೇಲೆ ಕಿಯಾರಾ ಮತ್ತು ಸಿದ್ದಾರ್ಥ್‌ 70 ಕೋಟಿ ರೂ. ಬೆಲೆ ಬಾಳುವ ಬಂಗಲೆಗೆ ಶಿಫ್ಟ್‌?

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ (Kiara Sidharth Wedding) ಕಿಯಾರಾ ಮತ್ತು ಸಿದ್ದಾರ್ಥ್‌ ಜುಹುವಿನಲ್ಲಿ ಬಂಗಲೆಯೊಂದಕ್ಕೆ ಶಿಫ್ಟ್‌ ಆಗಲಿದ್ದಾರೆ. ಅದಕ್ಕೆಂದು ಸಿದ್ದಾರ್ಥ್‌ ಹಲವು ದಿನಗಳಿಂದ ಮನೆ ಹುಡುಕಾಟ ಮಾಡಿದ್ದಾರೆ ಎಂದು ವರದಿಯಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಬಾಲಿವುಡ್‌ ನಟ ಸಿದ್ದಾರ್ಥ್‌ ಮಲ್ಹೋತ್ರಾ ಮತ್ತು ನಟಿ ಕಿಯಾರಾ ಅಡ್ವಾಣಿ ಫೆಬ್ರವರಿ 6ರಂದು ದಂಪತಿಗಳಾಗಲಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆಂದು (Kiara Sidharth Wedding) ರಾಜಸ್ಥಾನದ ಜೈಸಲ್ಮೇರ್‌ ತಲುಪಿರುವ ಈ ಜೋಡಿ ವಿವಾಹವಾದ ನಂತರ ದೊಡ್ಡ ಬಂಗಲೆಗೆ ಶಿಫ್ಟ್‌ ಆಗಲಿದ್ದಾರೆ ಎಂದು ವರದಿಯಿದೆ.

ಬಾಂದ್ರಾದಲ್ಲಿರುವ ಸಿದ್ದಾರ್ಥ್‌ ಕಳೆದ ಕೆಲ ದಿನಗಳಿಂದ ಮನೆ ಹುಡುಕಾಟದಲ್ಲಿ ಬಿಜಿ ಆಗಿದ್ದಾರೆ. ಜುಹುವಿನಲ್ಲಿ ಸಮುದ್ರ ಕಾಣಿಸುವಂತಹ ಮನೆಯನ್ನು ಅವರು ಹುಡುಕುತ್ತಿದ್ದಾರೆ. ಈಗಾಗಲೇ ಹಲವಾರು ಮನೆಗಳನ್ನು ಹುಡುಕಿದ್ದು, ಅದರಲ್ಲಿ ಒಂದು ಮನೆಯ ಬೆಲೆ 70 ಕೋಟಿ ರೂ. ಎಂದೂ ಹೇಳಲಾಗಿದೆ. ಇನ್ನೂ ಯಾವುದೇ ಮನೆಯನ್ನು ಅಂತಿಮಗೊಳಿಸಿಲ್ಲವಾದ್ದರಿಂದ ಅವರು ಮತ್ತೊಮ್ಮೆ ತಾವು ವೀಕ್ಷಿಸಿರುವ ಮನೆಗಳ ವಿವರವನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Kiara Sidharth Wedding : ಕಿಯಾರಾ ಸಿದ್ಧಾರ್ಥ್‌ ಮದುವೆಯಲ್ಲಿ ಬಗೆಬಗೆಯ ತಿನಿಸುಗಳು; ಇಲ್ಲಿದೆ ನೋಡಿ ಊಟದ ಮೆನ್ಯೂ

ಕಿಯಾರಾ ಮತ್ತು ಸಿದ್ದಾರ್ಥ್‌ ವಿವಾಹವು ಜೈಸಲ್ಮೇರ್‌ನ ಸೂರ್ಯಗರ್‌ ಪ್ಯಾಲೇಸ್‌ನಲ್ಲಿ ಫೆ.7ರಂದು ಜರುಗಲಿದೆ. ಈ ಜೋಡಿ ಫೆ.12ರಂದು ಮುಂಬೈನಲ್ಲಿ ಅದ್ಧೂರಿ ಆರತಕ್ಷತೆ ಕಾರ್ಯಕ್ರಮ ನಡೆಸಲಿದ್ದು, ಅದಕ್ಕೆ ಬಾಲಿವುಡ್‌ ಸೆಲೆಬ್ರಿಟಿಗಳ ಜತೆ ಮಾಧ್ಯಮದವರನ್ನೂ ಆಹ್ವಾನಿಸಲಿದ್ದಾರೆ ಎಂದು ಸುದ್ದಿಗಳಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Janhvi Kapoor: 2018ರಲ್ಲಿ ಜಾನ್ವಿ ಕಪೂರ್ ಬಾಲಿವುಡ್ ಪ್ರವೇಶಿಸಿದರು. ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಮಹಿಯಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. . ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

VISTARANEWS.COM


on

Janhvi Kapoor views on Gandhi Ambedkar casteism
Koo

ಬೆಂಗಳೂರು: ಬಾಲಿವುಡ್‌ ನಟಿ ಜಾನ್ವಿ ಕಪೂರ್ (Janhvi Kapoor) ಅವರು ಸೌತ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜತೆಗೆ ಆಗಾಗ ಇವರು ಸಂದರ್ಶನ ನೀಡುತ್ತಲೇ ಇರುತ್ತಾರೆ. ಇದೀಗ ಸಂದರ್ಶನವೊಂದರಲ್ಲಿ ಜಾನ್ವಿ ಕಪೂರ್ ಅವರ ಮಾತುಗಳು ಕೆಲವರಿಗೆ ಅಚ್ಚರಿ ತಂದಿದೆ. ಗಾಂಧಿ ಹಾಗೂ ಅಂಬೇಡ್ಕರ್ ನಡುವಿನ ಜಾತಿವಾದದ ( Janhvi opened up on casteism) ಕುರಿತ ಚರ್ಚೆಯ ಬಗ್ಗೆ ತಮಗೆ ಆಸಕ್ತಿ ಇರುವುದಾಗಿ ನಟಿ ಹೇಳಿಕೊಂಡಿದ್ದಾರೆ. ನಟಿ ಶ್ರೀದೇವಿ ಮಗಳ ಸಾಮಾಜಿಕ ಆಸಕ್ತಿಯ ಬಗ್ಗೆ ಮತ್ತು ಅವರ ಪ್ರೌಢತೆಯ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಜಾನ್ವಿ ಕಪೂರ್‌ ಅವರು ಸಂದರ್ಶನ ವೇಳೆ ತಮಗೆ ಇತಿಹಾಸದಲ್ಲಿ ತುಂಬ ಆಸಕ್ತಿ ಇದೆ ಎಂದರು. ಜತೆಗೆ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಭಾರತೀಯ ಸಂವಿಧಾನದ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರು ಜಾತಿವಾದದ ಬಗ್ಗೆ ವ್ಯಕ್ತಪಡಿಸಿದ್ದ ಅಭಿಪ್ರಾಯಗಳ ಬಗ್ಗೆ ಚರ್ಚೆ ನಡೆಸುವುದನ್ನು ನೋಡಲು ಬಯಸುತ್ತೇನೆ ಎಂದು ಜಾನ್ವಿ ಹೇಳಿದರು.

ನಟಿ ಮಾತನಾಡಿ ʻʻಅಂಬೇಡ್ಕರ್ ಅವರಿಗೆ ತಮ್ಮ ನಿಲುವು ಏನು ಎಂಬುದು ಮೊದಲಿನಿಂದಲೂ ಸ್ಪಷ್ಟವಾಗಿತ್ತು. ಹಾಗೇ ನಿಷ್ಠುರರಾಗಿದ್ದರು. ಆದರೆ ಗಾಂಧಿಯವರ (ಜಾತಿಭೇದ) ದೃಷ್ಟಿಕೋನವು ಹೆಚ್ಚು ಹೆಚ್ಚು ತೆರೆದುಕೊಂಡಂತೆ ವಿಕಸನಗೊಂಡಿತು ಎಂದು ನಾನು ಭಾವಿಸುತ್ತೇನೆ. ನಮ್ಮ ಸಮಾಜದಲ್ಲಿರುವ ಈ ಜಾತಿವಾದದ ಸಮಸ್ಯೆ ಬಗ್ಗೆ ಮಾತನಾಡುವುದಾದರೆ, ಮೂರನೇ ವ್ಯಕ್ತಿಯಿಂದ ಆ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುವುದಕ್ಕೂ, ಅಲ್ಲಿದ್ದು ನಿಜವಾಗಿ ಬದುಕುವುದಕ್ಕೂ ಬಹಳ ವ್ಯತ್ಯಾಸವಿದೆʼʼ ಎಂದು ಅಭಿಪ್ರಾಯಪಟ್ಟರು.

ಇದೀಗ ನಟಿ ಈ ಬಗ್ಗೆ ಮಾತನಾಡಿದ್ದಕ್ಕೆ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ಇಂಥ ಸಾಮಾಜಿಕ ಚಿಂತನೆಯ ಮಾತುಗಳು ಪ್ರಮುಖ ನಟಿಯ ಬಾಯಿಯಿಂದ ಕೇಳಿದ್ದು ಆಶ್ಚರ್ಯವಾಯಿತು. ಅಂಬೇಡ್ಕರ್, ಗಾಂಧಿ ಮತ್ತು ಜಾತಿವಾದದ ಕುರಿತು ಜಾನ್ವಿ ಕಪೂರ್‌ ಹೇಳಿದ್ದು ಗಮನ ಸೆಳೆಯಿತು. ನಟಿ ಸ್ವರಾ ಭಾಸ್ಕರ್ ಅವರು ಆಗಾಗ ರಾಜಕೀಯ ವಿಷಯಗಳ ಬಗ್ಗೆ ಮಾತನಾಡುತ್ತಾರೆʼʼ ಎಂದು ಜನ ಕಮೆಂಟ್‌ ಮಾಡಿದ್ದಾರೆ. “ಈ ಮಟ್ಟದ ತಿಳಿವಳಿಕೆ ಮತ್ತು ಅಧ್ಯಯನವನ್ನು ನೋಡುವುದು ಬಹಳ ಅಪರೂಪ ಎಂದು ನಟಿಯನ್ನು ಹೊಗಳಿದ್ದಾರೆ.” ಮತ್ತೊಬ್ಬರು “ನಟಿ ಸ್ವರಾ ಭಾಸ್ಕರ್‌ ಕೂಡ ರಾಜಕೀಯ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಇದರಲ್ಲೇನು ವಿಶೇಷತೆ ಇಲ್ಲ” ಎಂದಿದ್ದಾರೆ.

ಇದನ್ನೂ ಓದಿ: Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

2018ರಲ್ಲಿ ಜಾನ್ವಿ ಕಪೂರ್ ಬಾಲಿವುಡ್ ಪ್ರವೇಶಿಸಿದರು. ಜಾನ್ವಿ ಕಪೂರ್ (Janhvi Kapoor) ಮತ್ತು ರಾಜ್‌ಕುಮಾರ್ ರಾವ್ ಅವರು ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼ ಚಿತ್ರದಲ್ಲಿ ಎರಡನೇ ಬಾರಿಗೆ ತೆರೆ ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ. ಈಗಾಗಲೇ ನಟ ನಟಿ ಚಿತ್ರದ ಪ್ರಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. . ʻಮಿಸ್ಟರ್ ಆ್ಯಂಡ್ ಮಿಸಸ್ ಮಹಿʼಯಲ್ಲಿ, ರಾಜ್‌ಕುಮಾರ್ ಅವರು ಮಹೇಂದ್ರ ಸಿಂಗ್ ಧೋನಿ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಜಾನ್ವಿ ಮಹಿಮಾ ಎಂಬ ಪಾತ್ರವನ್ನು ನಿರ್ವಹಿಸಿಲಿದ್ದಾರೆ.

ʼದೇವರ’ ನಂತರ ಮತ್ತೊಂದು ತೆಲುಗು ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ನಟಿಸಲು ಸಿದ್ಧರಾಗಿದ್ದಾರೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ 16ನೇ ಚಿತ್ರದಲ್ಲಿ ರಾಮ್ ಚರಣ್ ಜತೆ ತೆರೆ ಹಂಚಿಕೊಳ್ಳಲಿದ್ದಾರೆ. ಜಾನ್ವಿ ಕಪೂರ್ ಕೊನೆಯದಾಗಿ ವರುಣ್ ಧವನ್ ಜತೆ ‘ಬವಾಲ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಆರ್‌ಸಿ 16’ ಮತ್ತು ‘ದೇವರ’ ಜತೆಗೆ , ಸುಧಾಂಶು ಸರಿಯಾ ಅವರ ‘ಉಲಾಜ್’ ಮತ್ತು ವರುಣ್ ಧವನ್ ಎದುರು ‘ಸನ್ನಿ ಸಂಸ್ಕರಿ ಕಿ ತುಳಸಿ ಕುಮಾರಿ’ ಸಿನಿಮಾಗಳನ್ನು ಹೊಂದಿದ್ದಾರೆ.

ಸುಧಾಂಶು ಸರಿಯಾ ನಿರ್ದೇಶನದ ಉಲಾಜ್ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಗೊಂಡಿದೆ. ಈ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರು ರಾಜತಾಂತ್ರಿಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಟೀಸರ್ ನಲ್ಲಿ ಜಾನ್ವಿ ಕಪೂರ್ ಅವರು ದೇಶಭಕ್ತರ ಕುಟುಂಬದಿಂದ ಬಂದ ಯುವ ರಾಜತಾಂತ್ರಿಕ ಸುಹಾನಾ ಪಾತ್ರದಲ್ಲಿ ನಟಿಸಿದ್ದಾರೆ.

Continue Reading

ಬಾಲಿವುಡ್

Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

Karan Johar: . ಕರಣ್‌ ಹೊಸ ಪ್ರಾಜೆಕ್ಟ್‌ ಘೋಷಿಸುತ್ತಿದ್ದಂತೆ, ಆಯೇಶ್ ಶ್ರಾಫ್ ಕಮೆಂಟ್‌ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹಲವರು ಶಾರುಖ್ ಖಾನ್ ಮತ್ತು ಕಾಜೋಲ್ ಅವರನ್ನು ಮತ್ತೆ ಒಟ್ಟಿಗೆ ತೆರೆಯ ಮೇಲೆ ನೋಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಆಡ್ವಾಣಿಯನ್ನು ಒಟ್ಟಿಗೆ ತೆರೆ ಮೇಲೆ ತನ್ನಿ ಎಂದು ಮನವಿ ಕೂಡ ಮಾಡಿದ್ದಾರೆ.

VISTARANEWS.COM


on

Karan Johar announces new film on birthday
Koo

ಬೆಂಗಳೂರು: ಇಂದು ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ (Karan Johar ) ಅವರಿಗೆ 52ನೇ ಹುಟ್ಟುಹಬ್ಬದ ಸಂಭ್ರಮ. ಕರಣ್ ಜೋಹರ್ ಅವರು ಚಲನಚಿತ್ರ ನಿರ್ಮಾಪಕರಾದ ಯಶ್ ಜೋಹರ್ ಮತ್ತು ಹಿರೂ ಜೋಹರ್ ದಂಪತಿಯ ಪುತ್ರ. ‘ಕುಚ್ ಕುಚ್ ಹೋತಾ ಹೈ’ ಚಿತ್ರದ ಮೂಲಕ ನಿರ್ದೇಶನಕ್ಕೆ ಪದಾರ್ಪಣೆ ಮಾಡಿದ್ದರು. ʻಕಭಿ ಖುಷಿ ಕಭಿ ಗಮ್’, ‘ಕಭಿ ಅಲ್ವಿದಾ ನಾ ಕೆಹೆನಾ’, ‘ಮೈ ನೇಮ್ ಇಸ್ ಖಾನ್’, ‘ಸ್ಟೂಡೆಂಟ್ ಆಫ್ ದಿ ಇಯರ್’ ಹೀಗೆ ಅನೇಕ ಹಿಟ್‌ ಸಿನಿಮಾವನ್ನು ಕರಣ್‌ ನಿರ್ದೇಶಿಸಿದ್ದಾರೆ. ಇದೀಗ ಈ ವಿಶೇಷ ದಿನದಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ಆದರೆ ಟೈಟಲ್‌ ಇನ್ನೂ ಘೋಷಣೆ ಮಾಡಿಲ್ಲ.

ʻʻಗೆಟ್‌ ಸೆಟ್‌ ಗೋ, ಅನ್‌ಟೈಟಲ್‌ ನರೇಷನ್‌ ಡ್ರಾಪ್ಟ್‌ , ಕರಣ್ ಜೋಹರ್ ಡೈರೆಕ್ಷನ್‌ʼʼ ಎಂದು ಬರೆದು ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದಾರೆ. ಕರಣ್‌ ಹೊಸ ಪ್ರಾಜೆಕ್ಟ್‌ ಘೋಷಿಸುತ್ತಿದ್ದಂತೆ, ಆಯೇಶ್ ಶ್ರಾಫ್ ಕಮೆಂಟ್‌ ಮೂಲಕ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹಲವರು ಶಾರುಖ್ ಖಾನ್ ಮತ್ತು ಕಾಜೋಲ್ ಅವರನ್ನು ಮತ್ತೆ ಒಟ್ಟಿಗೆ ತೆರೆಯ ಮೇಲೆ ನೋಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಕೆಲವರು ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಆಡ್ವಾಣಿಯನ್ನು ಒಟ್ಟಿಗೆ ತೆರೆ ಮೇಲೆ ತನ್ನಿ ಎಂದು ಮನವಿ ಕೂಡ ಮಾಡಿದ್ದಾರೆ.

ನಿನ್ನೆಯಷ್ಟೇ , ಕರಣ್ ಅವರು ಮುಂಬೈನಲ್ಲಿ ಬರ್ತ್‌ಡೇ ಪಾರ್ಟಿ ಆಯೋಜಿಸಿದ್ದರು. ಕಾಜೋಲ್, ಅನಿಲ್ ಕಪೂರ್, ಫರಾ ಖಾನ್ ಮತ್ತು ಇತರರು ಭಾಗಿಯಾಗಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: Karan Johar: ‘ಕಳಪೆ’ ಮಿಮಿಕ್ರಿ ಕಂಡು ಕರಣ್ ಜೋಹರ್ ಗರಂ; ಕ್ಷಮೆಯಾಚಿಸಿದ ಹಾಸ್ಯನಟ!

ಕರಣ್‌ ಫ್ಯಾನ್ಸ್‌ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳು ಸೋಷಿಯಕಲ್‌ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ. ಕರೀನಾ ಕಪೂರ್ ಖಾನ್ ಅವರು ಕರಣ್ ಅವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಮಲೈಕಾ ಅರೋರಾ ಕೂಡ ʻʻ ಹ್ಯಾಪಿ ಡೇ ಯೂ ಸೆಕ್ಸಿ ಬಾಯ್‌..ʼʼ ಎಂದು ವಿಶ್‌ ಮಾಡಿದ್ದಾರೆ.

ಕರಣ್‌ ಕೊನೆಯದಾಗಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ ಸಿನಿಮಾ ನಿರ್ದೇಶಿಸಿದ್ದರು. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಕಮರ್ಷಿಯಲ್ ಹಿಟ್ ಆಗಿತ್ತು. ಪ್ರಸ್ತುತ ಅವರು ಹಲವಾರು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮತ್ತೊಂದೆಡೆ, ಕರಣ್ ಜೋಹರ್ ಅವರ ಸಲ್ಮಾನ್ ಖಾನ್ ಅವರ ‘ದಿ ಬುಲ್’ ಶೀರ್ಷಿಕೆಯ ಚಿತ್ರ ಸೆಟ್ಟೇರಲು ಸಜ್ಜಾಗಿದೆ.

Continue Reading

ಸಿನಿಮಾ

Crew on OTT: ಈ 5 ಕಾರಣಕ್ಕಾಗಿ ಟಬು, ಕರೀನಾ ನಟಿಸಿರುವ ʼಕ್ರ್ಯೂʼ ಸಿನಿಮಾ ನೋಡಬಹುದು

ಮಾರ್ಚ್ 29 ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಈಗ ಒಟಿಟಿಯಲ್ಲಿ (Crew on OTT) ಬಿಡುಗಡೆಯಾಗಿದೆ. ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿರುವ ಈ ಚಿತ್ರ ಪರಿಪೂರ್ಣ ಮನರಂಜನೆಯನ್ನು ಪ್ರೇಕ್ಷಕರಿಗೆ ಒದಗಿಸಲು ಸಫಲವಾಗಿದೆ.

VISTARANEWS.COM


on

By

Crew on OTT
Koo

ಟಬು (Tabu), ಕರೀನಾ ಕಪೂರ್ ಖಾನ್ (Kareena Kapoor Khan) ಮತ್ತು ಕೃತಿ ಸನೋನ್ (Kriti Sanon) ನಟಿಸಿರುವ ‘ಕ್ರ್ಯೂ’ ಚಿತ್ರ ಒಟಿಟಿಯಲ್ಲಿ (Crew on OTT) ಮೇ 24ರಂದು ಬಿಡುಗಡೆಯಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡ ಬಳಿಕ ಅತ್ಯುತ್ತಮ ಕಾಮಿಡಿ ಚಲನಚಿತ್ರವಾದ ಕ್ರ್ಯೂ ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾಗಿದೆ. ರಾಜೇಶ್ ಎ. ಕೃಷ್ಣನ್ ನಿರ್ದೇಶನದ ‘ಕ್ರ್ಯೂ’ ಈಗ ವಿಶ್ವದ 190 ದೇಶಗಳಲ್ಲಿ ಪ್ರದರ್ಶನ ಕಾಣಲಿದೆ.

ನೆಟ್‌ಫ್ಲಿಕ್ಸ್‌ನಲ್ಲಿ ಚಿತ್ರದ ಪ್ರಥಮ ಪ್ರದರ್ಶನದ ಕುರಿತು ಮಾತನಾಡಿದ ನಿರ್ಮಾಪಕರಾದ ರಿಯಾ ಕಪೂರ್ ಮತ್ತು ಏಕ್ತಾ ಆರ್ ಕಪೂರ್ , ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಕ್ರ್ಯೂ ಅನ್ನು ನೆಟ್‌ಫ್ಲಿಕ್ಸ್‌ ಗೆ ತರಲು ನಾವು ರೋಮಾಂಚನಗೊಂಡಿದ್ದೇವೆ. ಈ ಚಿತ್ರವು ಸ್ನೇಹ, ವಂಚನೆ ಮತ್ತು ದೃಢತೆಯನ್ನು ಹಾಸ್ಯದ ಮೂಲಕ ಹೇಳಲು ಪ್ರಯತ್ನಿಸುತ್ತದೆ ಎಂದು ತಿಳಿಸಿದ್ದಾರೆ.

ಪ್ರಪಂಚದಾದ್ಯಂತ ಪ್ರೇಕ್ಷಕರು ನೆಟ್‌ಫ್ಲಿಕ್ಸ್‌ನಲ್ಲಿ ಪ್ರತ್ಯೇಕವಾಗಿ ಸಸ್ಪೆನ್ಸ್, ಹಾಸ್ಯ ಮತ್ತು ನಾಟಕದ ಅನುಭವವನ್ನು ಪಡೆಯಲು ಕಾಯುವುದು ಸಾಧ್ಯವಿಲ್ಲ. ಇದು ಪ್ರೇಕ್ಷಕರನ್ನು ಆಸನದ ತುದಿಯಲ್ಲಿ ಕುರಿಸುವಂತೆ ಮಾಡುವ ಕಥೆಯಾಗಿದೆ ಎಂದು ಹೇಳಿದ್ದಾರೆ.

ಬಹುತೇಕ ದಿವಾಳಿಯಾದ ಏರ್‌ಲೈನ್‌ನ ಹಿನ್ನೆಲೆ ಕಥೆಯನ್ನು ಒಳಗೊಂಡಿರುವ ‘ಕ್ರ್ಯೂ’, ತಮ್ಮ ಜೀವನ ನಿರ್ವಹಣೆಗೆ ಪ್ರಯತ್ನಿಸುತ್ತಿರುವ ಮೂವರು ಮಹಿಳೆಯರು ಸುಳ್ಳಿನ ಜಾಲದಲ್ಲಿ ಸಿಕ್ಕಿಹಾಕಿಕೊಳ್ಳುವ ಕಥೆಯ ಸುತ್ತ ಸುತ್ತುತ್ತದೆ.

ಮಾರ್ಚ್ 29ರಂದು ಬಿಡುಗಡೆಯಾದ ಕಾಮಿಡಿ ಚಿತ್ರ ‘ಕ್ರ್ಯೂ’ ಬಿಡುಗಡೆಯಾದ ಒಂಬತ್ತು ದಿನಗಳಲ್ಲಿ ಜಾಗತಿಕವಾಗಿ 100 ಕೋಟಿ ರೂ. ಆದಾಯ ಗಳಿಸಿದೆ. ಇದರಲ್ಲಿ ದಿಲ್ಜಿತ್ ದೋಸಾಂಜ್, ಕಪಿಲ್ ಶರ್ಮಾ, ಶಾಶ್ವತ ಚಟರ್ಜಿ, ರಾಜೇಶ್ ಶರ್ಮಾ, ಕುಲಭೂಷಣ್ ಖರ್ಬಂದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಾಲಿವುಡ್ ನ ಹಾಸ್ಯ ಚಿತ್ರವಾದ ಕ್ರ್ಯೂ ಪರಿಪೂರ್ಣ ಮನರಂಜನೆಯನ್ನು ಒದಗಿಸುವುದರಲ್ಲಿ ಸಂದೇಹವಿಲ್ಲ ಎಂದು ಅವರು ವಿವರಿಸಿದ್ದಾರೆ.

ಈ ಐದು ಕಾರಣಕ್ಕಾಗಿ ಈ ಚಿತ್ರವನ್ನು ಪ್ರತಿಯೊಬ್ಬರೂ ವೀಕ್ಷಿಸಬಹುದು.

ಇದನ್ನೂ ಓದಿ: Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

1. ಎಲ್ಲರನ್ನೂ ಮೋಡಿ ಮಾಡಲಿದೆ

‘ಕ್ರ್ಯೂ’ ಚಿತ್ರ ವೀಕ್ಷಿಸುತ್ತಾ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಾಸ್ಯದ ಸಂಪೂರ್ಣ ಮನೋರಂಜನೆಯನ್ನು ಸವಿಯಬಹುದು. ಖಂಡಿತ ಈ ಚಿತ್ರ ಯಾರನ್ನೂ ನಿರಾಶೆಗೊಳಿಸುವುದಿಲ್ಲ. ಆರ್ಥಿಕ ಬಿಕ್ಕಟ್ಟಿನ ನಡುವೆ ತಮ್ಮ ಜೀವನವನ್ನು ಸುಗಮವಾಗಿ ಸಾಗುವಂತೆ ಮಾಡಲು ಪ್ರಯತ್ನಿಸುತ್ತಿರುವ ಮೂವರು ಗಗನಸಖಿಯರ ಮೇಲೆ ಚಲನಚಿತ್ರವು ಕೇಂದ್ರೀಕೃತವಾಗಿದೆ. ‘ಕ್ರ್ಯೂ’ ವಾಸ್ತವವಾಗಿ ಸಿನಿ ಪ್ರಿಯರನನ್ನು ನಗೆಗಡಲಿನಲ್ಲಿ ತೇಲಿಸಿ ಮೋಡಿ ಮಾಡುತ್ತದೆ.

2. ಸಸ್ಪೆನ್ಸ್‌

ಹಾಸ್ಯಮಯ ಚಿತ್ರವಾದರೂ ಸಸ್ಪೆನ್ಸ್‌ಗೆ ಬಂದಾಗ ಚಿತ್ರ ಸೂಪರ್ ಎನ್ನುವಂತೆ ಮಾಡುತ್ತದೆ. ಚಿತ್ರದಲ್ಲಿ ಯಾವುದೇ ಕ್ಷಣವೂ ಬೇಸರ ತರಿಸುವುದಿಲ್ಲ. ಕರೀನಾ ಮತ್ತು ಟಬು ತಮ್ಮ ಅಭಿನಯದಿಂದ ಎಲ್ಲರ ಮನಗೆದ್ದಿದ್ದಾರೆ.

3. ಅಪರೂಪದ ಕಥೆ

ಮೂವರು ನಟಿಯರನ್ನೇ ಮುಖ್ಯ ಭೂಮಿಕೆಯಲ್ಲಿ ಇರಿಸಿರುವ ಈ ಚಿತ್ರ ಬಾಲಿವುಡ್ ಚಲನಚಿತ್ರಗಳಲ್ಲಿ ಅಪರೂಪದ ಚಿತ್ರವಾಗಿದೆ. ಚಲನಚಿತ್ರವು ಸ್ತ್ರೀ ಸ್ನೇಹದ ವಿವಿಧ ಪದರಗಳನ್ನು ಪರಿಶೋಧಿಸುತ್ತದೆ.


4. ಹೃದಯ ಗೆಲ್ಲುವ ಅಭಿನಯ

ಚಿತ್ರದಲ್ಲಿ ಎದ್ದುಕಾಣುವ ಒಂದು ವಿಷಯವೆಂದರೆ ಮುಖ್ಯ ಪಾತ್ರ ಮತ್ತು ಪೋಷಕ ಪಾತ್ರಗಳ ಪ್ರಭಾವಶಾಲಿ ಅಭಿನಯ. ಟಬು, ಕೃತಿ ಸನೋನ್ ಮತ್ತು ಕರೀನಾ ಕಪೂರ್ ಖಾನ್ ಅವರು ತೆರೆಯ ಮೇಲೆ ಅದ್ಭುತವಾದ ಒಡನಾಟವನ್ನು ಹಂಚಿಕೊಂಡಿದ್ದಾರೆ. ಏತನ್ಮಧ್ಯೆ, ಕಪಿಲ್ ಶರ್ಮಾ ಮತ್ತು ದಿಲ್ಜಿತ್ ದೋಸಾಂಜ್ ಅವರು ಸಣ್ಣ ಅವಧಿಗೆ ಬಂದುಹೋದರೂ ಪ್ರೇಕ್ಷಕರ ಹೃದಯ ಗೆಲ್ಲುತ್ತಾರೆ.

5. ಹಾಸ್ಯ ಚಿತ್ರ

ಮಹಿಳೆಯರು ಹಾಸ್ಯ ಚಿತ್ರಗಳನ್ನು ಚೆನ್ನಾಗಿ ಮಾಡಬಲ್ಲರು ಎಂಬುದನ್ನು ಈ ಚಿತ್ರ ಪ್ರತಿಪಾದಿಸುತ್ತದೆ. ಹಾಸ್ಯ ಚಿತ್ರಗಳನ್ನು ಮಹಿಳಾ ನಟಿಯರು ಉತ್ತಮವಾಗಿ ಮಾಡಬಹುದು ಎಂಬುದನ್ನು ‘ಕ್ರ್ಯೂ’ ಸಾಬೀತುಪಡಿಸುತ್ತದೆ.

Continue Reading

Latest

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Aishwarya Rai : ಈ ತಿಂಗಳ ಆರಂಭದಲ್ಲಿ, ಐಶ್ವರ್ಯಾ ರೈ ಬಚ್ಚನ್ ಮಗಳು ಆರಾಧ್ಯ ಅವರೊಂದಿಗೆ ಕಾನ್​ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದರು. ಅವರು ಈ ವರ್ಷ ಬ್ಯಾಕ್ ಟು ಬ್ಯಾಕ್ ರೆಡ್ ಕಾರ್ಪೆಟ್ ನಲ್ಲಿ ಕಾಣಿಸಿಕೊಂಡರು. ಕೈಂಡ್ಸ್ ಆಫ್ ಕೈಂಡ್ನೆಸ್ ಪ್ರದರ್ಶನದ ಸಮಯದಲ್ಲಿ ಮಾಜಿ ವಿಶ್ವ ಸುಂದರಿ ಫಾಲ್ಗುಣಿ ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಅಂಚುಗಳ ಬೆಳ್ಳಿ ಮತ್ತು ನೀಲಿ ಬಣ್ಣದ ಉಡುಪನ್ನು ಧರಿಸಿ ರೆಡ್ ಕಾರ್ಪೆಟ್​ನಲ್ಲಿ ನಡೆದಿದ್ದರು.

VISTARANEWS.COM


on

Aishwarya Rai
Koo

ನವದೆಹಲಿ: ಐಶ್ವರ್ಯಾ ರೈ ಬಚ್ಚನ್ (Aishwarya Rai) ತಮ್ಮ ತಾಯಿ ಬೃಂದಾ ರೈ ಅವರ ಹುಟ್ಟುಹಬ್ಬದ ಆಚರಣೆಯ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಮ್ ಪ್ರೊಫೈಲ್​ನಲ್ಲಿ ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ, ನಟಿ ತನ್ನ ತಾಯಿ ಬೃಂದಾ, ಮಗಳು ಆರಾಧ್ಯ ಮತ್ತು ಕೆಲವು ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಪೋಸ್ ನೀಡುವುದನ್ನು ಕಾಣಬಹುದು. ಈ ಮೂವರು ಹುಟ್ಟುಹಬ್ಬದ ಕೇಕ್​ನೊಂದಿಗೆ ಪೋಸ್ ನೀಡುವುದನ್ನು ಕಾಣಬಹುದು. “ಲವ್ ಯು ಬರ್ತ್ ಡೇ ಗರ್ಲ್, ಡಿಯರ್ ಮಮ್ಮಿ-ದೊಡ್ಡಾ” ಎಂದು ಐಶ್ವರ್ಯಾ ರೈ ಬಚ್ಚನ್ ಬರೆದಿದ್ದಾರೆ. ತನ್ನ ತಾಯಿಯ ಫೋಟೋವನ್ನು ಹಂಚಿಕೊಂಡ ಮಾಜಿ ವಿಶ್ವ ಸುಂದರಿ ಮತ್ತೊಂದು ಪೋಸ್ಟ್​ನಲ್ಲಿ “ಹುಟ್ಟುಹಬ್ಬದ ಶುಭಾಶಯಗಳು ಪ್ರೀತಿಯ ಅಮ್ಮ. ನಿನ್ನನ್ನು ಶಾಶ್ವತವಾಗಿ ಪ್ರೀತಿಸುತ್ತೇನೆ.” ಎಂದು ಬರೆದುಕೊಂಡಿದ್ದಾರೆ.

ಈ ತಿಂಗಳ ಆರಂಭದಲ್ಲಿ, ಐಶ್ವರ್ಯಾ ರೈ ಬಚ್ಚನ್ ಮಗಳು ಆರಾಧ್ಯ ಅವರೊಂದಿಗೆ ಕಾನ್​ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದರು. ಅವರು ಈ ವರ್ಷ ಬ್ಯಾಕ್ ಟು ಬ್ಯಾಕ್ ರೆಡ್ ಕಾರ್ಪೆಟ್ ನಲ್ಲಿ ಕಾಣಿಸಿಕೊಂಡರು. ಕೈಂಡ್ಸ್ ಆಫ್ ಕೈಂಡ್ನೆಸ್ ಪ್ರದರ್ಶನದ ಸಮಯದಲ್ಲಿ ಮಾಜಿ ವಿಶ್ವ ಸುಂದರಿ ಫಾಲ್ಗುಣಿ ಶೇನ್ ಪೀಕಾಕ್ ವಿನ್ಯಾಸಗೊಳಿಸಿದ ಅಂಚುಗಳ ಬೆಳ್ಳಿ ಮತ್ತು ನೀಲಿ ಬಣ್ಣದ ಉಡುಪನ್ನು ಧರಿಸಿ ರೆಡ್ ಕಾರ್ಪೆಟ್​ನಲ್ಲಿ ನಡೆದಿದ್ದರು. ಅದಕ್ಕೂ ಮೊದಲು, ಅವರು ಚಿನ್ನದ ಅಲಂಕಾರಗಳೊಂದಿಗೆ ಕಪ್ಪು ಮತ್ತು ಬಿಳಿ ಉಡುಪನ್ನು ಧರಿಸಿದ್ದರು.

ಉಮ್ರಾವ್ ಜಾನ್, ಗುರು, ಕುಚ್ ನಾ ಕಹೋ ಮತ್ತು ರಾವಣ್ ಚಿತ್ರಗಳ ನಟಿಯಾಗಿರುವ ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ಏಪ್ರಿಲ್ 20, 2007 ರಂದು ವಿವಾಹವಾಗಿದ್ದರು. ದಂಪತಿಗಳು ತಮ್ಮ ಮಗಳು ಆರಾಧ್ಯಳನ್ನು 2011ರಲ್ಲಿ ಸ್ವಾಗತಿಸಿದ್ದರು.

ಇದನ್ನು ಓದಿ: koti kannada movie : ಕಾಂಚಾಣದ ಕನಸು; ಕೋಟಿ ಸಿನಿಮಾದ ‘ಜನತಾ ಸಿಟಿ’ ಹಾಡು ಬಿಡುಗಡೆ

ಐಶ್ವರ್ಯಾ ರೈ ಬಚ್ಚನ್ ಕೊನೆಯ ಬಾರಿಗೆ ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ 2 ಚಿತ್ರದಲ್ಲಿ ತ್ರಿಷಾ, ವಿಕ್ರಮ್, ಕಾರ್ತಿ, ಜಯಂ ರವಿ, ಶೋಭಿತಾ ಧುಲಿಪಾಲ ಮತ್ತು ಐಶ್ವರ್ಯಾ ಲಕ್ಷ್ಮಿ ಅವರೊಂದಿಗೆ ಕಾಣಿಸಿಕೊಂಡರು. ಈ ಚಿತ್ರವು ಕಳೆದ ವರ್ಷ ಬಿಡುಗಡೆಯಾಯಿತು ಮತ್ತು ಇದು ಗಲ್ಲಾಪೆಟ್ಟಿಗೆಯಲ್ಲಿ ಹಿಟ್ ಆಗಿ ಹೊರಹೊಮ್ಮಿತು.

Continue Reading
Advertisement
lok sabha election 2024 voting dhoni
ಪ್ರಮುಖ ಸುದ್ದಿ21 mins ago

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

SRH vs RR
ಕ್ರೀಡೆ33 mins ago

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

Exam date announced for recruitment of 4000 posts including PSI exam
ಉದ್ಯೋಗ48 mins ago

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

Udupi Gang War
ಪ್ರಮುಖ ಸುದ್ದಿ49 mins ago

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

google maps kerala river
ವೈರಲ್ ನ್ಯೂಸ್56 mins ago

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Samarjit Lankesh Love you Samantha Song Teaser
ಸ್ಯಾಂಡಲ್ ವುಡ್57 mins ago

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Fake Intelligence Bureau officer arrested
ಬಾಗಲಕೋಟೆ1 hour ago

Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Janhvi Kapoor views on Gandhi Ambedkar casteism
ಬಾಲಿವುಡ್1 hour ago

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Karan Johar announces new film on birthday
ಬಾಲಿವುಡ್1 hour ago

Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

foolish to link Rakesh death to Prajwal case says CM Siddaramaiah
ರಾಜಕೀಯ1 hour ago

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌