Viral Video: ಸಿರಿಯಾ ಭೂಕಂಪದ ಮಧ್ಯೆ ಮನಕಲಕುವ ದೃಶ್ಯ, ಅವಶೇಷಗಳಡಿಯಲ್ಲೇ ಹುಟ್ಟಿದ ಮಗುವಿನ ರಕ್ಷಣೆ - Vistara News

ವಿದೇಶ

Viral Video: ಸಿರಿಯಾ ಭೂಕಂಪದ ಮಧ್ಯೆ ಮನಕಲಕುವ ದೃಶ್ಯ, ಅವಶೇಷಗಳಡಿಯಲ್ಲೇ ಹುಟ್ಟಿದ ಮಗುವಿನ ರಕ್ಷಣೆ

ಸಿರಿಯಾ ಭೂಕಂಪದಲ್ಲಿ ಸಂತ್ರಸ್ತೆಯಾಗಿದ್ದ ಗರ್ಭಿಣಿಯೊಬ್ಬರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದ್ದಾಗಲೇ ಮಗು ಜನನವಾಯಿತು ಎಂದು ಪತ್ರಕರ್ತ ಹೋಶಂಗ್​ ಹಸ್ಸನ್​ ತಿಳಿಸಿದ್ದಾರೆ.

VISTARANEWS.COM


on

syria earthquake New born Baby pulled alive from Rubble
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟರ್ಕಿ-ಸಿರಿಯಾದ ಭಯಂಕರ ಭೂಕಂಪನಕ್ಕೆ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ಕಟ್ಟಡಗಳು/ ಮನೆಗಳಡಿ ಸಿಲುಕಿರುವವರನ್ನು ಹೊರ ತೆಗೆದು ರಕ್ಷಿಸುವುದೇ ಸವಾಲಾಗಿದೆ. ಅದೆಷ್ಟೋ ಜನರಂತೂ ಅವಶೇಷಗಳಡಿಯೇ ಹೆಣವಾಗಿ ಹೋಗಿದ್ದಾರೆ. ಇದೆಲ್ಲದರ ಮಧ್ಯೆ ಸಿರಿಯಾದಲ್ಲಿ (syria earthquake) ನವಜಾತ ಶಿಶುವೊಂದು ಪವಾಡ ಸದೃಶ್ಯವಾಗಿ ಬದುಕುಳಿದಿದೆ. ಆಗಷ್ಟೇ ಹುಟ್ಟಿದ ಶಿಶುವದು. ಭದ್ರತಾ ಸಿಬ್ಬಂದಿಯೊಬ್ಬರು ಅದನ್ನು ಎತ್ತಿಕೊಂಡು ಬಂದು ರಕ್ಷಣೆ ಮಾಡಿದ ವಿಡಿಯೊ ವೈರಲ್ ಆಗಿದೆ.

ಈ ವಿಡಿಯೊವನ್ನು ಪತ್ರಕರ್ತ ಹೋಶಂಗ್​ ಹಸ್ಸನ್​ ಅವರು ಶೇರ್ ಮಾಡಿಕೊಂಡಿದ್ದಾರೆ. ‘ಸಿರಿಯಾ ಭೂಕಂಪದಲ್ಲಿ ಸಂತ್ರಸ್ತೆಯಾಗಿದ್ದ ಗರ್ಭಿಣಿಯೊಬ್ಬರನ್ನು ರಕ್ಷಿಸುವ ಕಾರ್ಯಾಚರಣೆ ನಡೆಯುತ್ತಿದ್ದಾಗಲೇ ಮಗು ಜನನವಾಯಿತು. ಆ ನವಜಾತ ಶಿಶುವನ್ನು ರಕ್ಷಿಸಲಾಗಿದೆ’ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಸಿರಿಯಾದ ಆಫ್ರಿನ್​ ಎಂಬಲ್ಲಿ ಈ ಘಟನೆ ನಡೆದಿದ್ದು, ಅವಳ ತಾಯಿ ಅಕ್ಷರಶಃ ಅವಶೇಷಗಳಡಿಯಲ್ಲೇ ಆಗಿ ಹೋಗಿದ್ದರು. ಮಗು ಬದುಕಿದ್ದೇ ಪವಾಡ ಎಂದು ಹೇಳಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ನೋಡಿದ ನೆಟ್ಟಿಗರು ಭಾವನಾತ್ಮಕ ಕಮೆಂಟ್​​ಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: Viral Video: ಟರ್ಕಿ ಭೂಕಂಪನದ ಭಯಾನಕ ದೃಶ್ಯಗಳು; ಕುಸಿದು ಬಿದ್ದ ಅಪಾರ್ಟ್​ಮೆಂಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ ಸೇರಿ ಇತರರೂ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಘಟನೆಯಲ್ಲಿ ಅವರು ಮೃತಪಟ್ಟಿದ್ದಾರೆ. ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ ಸೇರಿ ಇತರರೂ ನಿಧನ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಕ್ಷಣಾ ತಂಡ ಕಾರ್ಯಾಚರಣೆಯಲ್ಲಿ ನಿರತವಾಗಿದೆ.

“ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಕೂಡ ಇದ್ದರು. ಮಂಜು ಕವಿದ ವಾತಾವರಣದ ಕಾರಣ ಪೈಲೆಟ್ ತುರ್ತು ಲ್ಯಾಂಡಿಂಗ್ ಮಾಡಲು ಮುಂದಾಗಿದ್ದರು. ಆದರೆ ಲ್ಯಾಂಡಿಂಗ್ ವೇಳೆಯೇ ಹೆಲಿಕಾಪ್ಟರ್ ಅಪಘಾತವಾಗಿದೆ ಎಂದು ಇರಾನ್ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ. ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಮತ್ತು ಇತರ ಗಣ್ಯರು ಅಜರ್‌ಬೈಜಾನ್‌ಗೆ ತೆರಳಿದ್ದರು. 

ಕವಿದ ದಟ್ಟ ಮಂಜು ಮತ್ತು ಹವಾಮಾನ ವೈಪರೀತ್ಯ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ಸದ್ಯ ಅದರ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ರೆಡ್ ಕ್ರೆಸೆಂಟ್ ಸದ್ಯದಲ್ಲೇ ವಿವರವಾದ ಮಾಹಿತಿಯನ್ನು ನೀಡಲಿದೆ ಎಂದು ಹೇಳಿದೆ. ಸದ್ಯ ಇದು ಅಪಘಾತವೇ, ವಿಧ್ವಂಸಕ ಕೃತ್ಯವೇ ಎನ್ನುವ ಅನುಮಾನ ಮೂಡಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದರು. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದರು. ಜತೆಗೆ ವಿಶ್ವದ ನಾನಾ ದೇಶಗಳ ನಾಯಕರೂ ರೈಸಿ ಅವರು ಸುರಕ್ಷಿರತಾಗಿ ಪತ್ತೆಯಾಗಲಿ ಎಂದು ಪ್ರಾರ್ಥಿಸಿದ್ದರು.

ಇದನ್ನೂ ಓದಿ: Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

Continue Reading

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Ebrahim Raisi:ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಹೆಲಿಕಾಪ್ಟರ್‌ ಪತನಗೊಂಡ ಸ್ಥಳವನ್ನು ರಕ್ಷಣಾ ಕಾರ್ಯಾಚರಣೆ ಪಡೆ ಪತ್ತೆ ಹಚ್ಚಿದೆ. ಹೆಲಿಕಾಪ್ಟರ್‌ ಹುಡುಕಾಟ ಕಾರ್ಯಾಚರಣೆಯಲ್ಲಿ ತೊಡಗಿದ್ದ ಮಾನವ ರಹಿತ ವೈಮಾನಿಕ ವಾಹನ(UAV)ಹೆಲಿಕಾಪ್ಟರ್‌ ಪತನಗೊಂಡಿರುವ ಸ್ಥಳವನ್ನು ಪತ್ತೆ ಹಚ್ಚಿದ್ದು, ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಇರಾನಿಯನ್‌ ಸುದ್ದಿ ವಾಹಿನಿ ಎಕ್ಸ್‌ನಲ್ಲಿ ಶೇರ್‌ ಮಾಡಿದ್ದು, ರೆಡ್ ಕ್ರೆಸೆಂಟ್ ಶೋಧ ಮತ್ತು ಪಾರುಗಾಣಿಕಾ ತಂಡಗಳು ಅಧ್ಯಕ್ಷರನ್ನು ಹೊತ್ತ ಹೆಲಿಕಾಪ್ಟರ್ ಅಪಘಾತದ ಸ್ಥಳಕ್ಕೆ ತಲುಪಿವೆ. ಅಧ್ಯಕ್ಷರು ಮತ್ತು ಅವರ ಸಹಚರರು ಬದುಕುಳಿದಿದ್ದಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ರೆಡ್ ಕ್ರೆಸೆಂಟ್ ಮಾಹಿತಿಯನ್ನು ನೀಡಿಲ್ಲ ಎಂದು ಹೇಳಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ:Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

Continue Reading

ವಿದೇಶ

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ಹೆಲಿಕಾಪ್ಟರ್ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿರುವ ಕಾರಣ ಹುಡುಕಾಟ ನಡೆಯುತ್ತಲೇ ಇದೆ. ಇದುವರೆಗೆ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter Crash) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದ್ದು, ಹಲವು ಗಂಟೆಗಳ ಕಾರ್ಯಾಚರಣೆ ಬಳಿಕವೂ ಹೆಲಿಕಾಪ್ಟರ್‌ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಸುಮಾರು 40 ತಂಡಗಳು ಶೋಧ ಕಾರ್ಯ ನಡೆಸುತ್ತಲೇ ಇವೆ. ಇಷ್ಟಾದರೂ ಹೆಲಿಕಾಪ್ಟರ್‌ ಪತ್ತೆಯಾಗಿರುವ ಕಾರಣ ಇಬ್ರಾಹಿಂ ರೈಸಿ ಸೇರಿ ಹಲವರ ಪ್ರಾಣಕ್ಕೆ ಕುತ್ತುಂಟಾಗಿರುವ ಸಾಧ್ಯತೆ ಇದೆ ಎಂದು ಇರಾನ್‌ ಅಧಿಕಾರಿಗಳು ತಿಳಿಸಿದ್ದಾರೆ.

ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶ ಬೆಟ್ಟಗಳ ಮಧ್ಯೆ ಹೆಲಿಕಾಪ್ಟರ್‌ ಪತನಗೊಂಡಿರುವ ಕಾರಣ ಶೋಧ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತ್ತೆಗಾಗಿ ಹಲವು ಸಿಬ್ಬಂದಿ ಇರುವ ಸುಮಾರು 40 ತಂಡಗಳನ್ನು ಇರಾನ್‌ ರಚಿಸಿದೆ. ಬೆಟ್ಟಗಳಲ್ಲಿ ಭದ್ರತಾ ಸಿಬ್ಬಂದಿಯು ಎಡೆಬಿಡದೆ ಶೋಧ ಕಾರ್ಯ ಕೈಗೊಂಡರೂ ಮುನ್ನಡೆ ಸಿಗುತ್ತಿಲ್ಲ. ಹೆಲಿಕಾಪ್ಟರ್‌ ಪತನದ ಬಳಿಕ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದ್ದು, ಬದುಕುಳಿಯುವ ಸಾಧ್ಯತೆ ತೀರಾ ಕ್ಷೀಣ ಎಂದು ಹೇಳಲಾಗುತ್ತಿದೆ.

ಹೆಲಿಕಾಪ್ಟರ್‌ನಲ್ಲಿ ಯಾರಿದ್ದರು?

ಹೆಲಿಕಾಪ್ಟರ್‌ನಲ್ಲಿ ಇಬ್ರಾಹಿಂ ರೈಸಿ ಜತೆಗೆ ವಿದೇಶಾಂಗ ವ್ಯವಹಾರಗಳ ಸಚಿವ ಹುಸೇನ್‌ ಅಮೀರಬ್ದೊಲ್ಲೈ, ಪೂರ್ವ ಅಜರ್‌ಬೈಜಾನ್‌ ಗವರ್ನರ್‌ ಮಲೇಕ್‌ ರಹಮತಿ ಹಾಗೂ ಪೂರ್ವ ಅಜರ್‌ಬೈಜಾನ್‌ನಲ್ಲಿರುವ ಇರಾನ್‌ ಸುಪ್ರೀಂ ಲೀಡರ್‌ನ ಪ್ರತಿನಿಧಿ ಅಯೊತೊಲ್ಲಾ ಮೊಹಮ್ಮದ್‌ ಅಲಿ ಅಲೆ-ಹಶೇಮ್‌ ಅವರು ಕೂಡ ಇದ್ದರು. ಇದುವರೆಗೆ ಹೆಲಿಕಾಪ್ಟರ್‌ ಎಲ್ಲಿದೆ ಎಂಬುದರ ಸುಳಿವೇ ಸಿಗದ ಕಾರಣ ಇವರೆಲ್ಲರ ಪ್ರಾಣಕ್ಕೆ ಕುತ್ತು ಎದುರಾಗಿರಬಹುದು ಎಂದು ಹೇಳಲಾಗುತ್ತಿದೆ.

ಇಬ್ರಾಹಿಂ ರೈಸಿಗಾಗಿ ಮೋದಿ ಪ್ರಾರ್ಥನೆ

ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನಗೊಂಡಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್‌ ಪತನದ ಸುದ್ದಿ ತಿಳಿದು ಆತಂಕವಾಗಿದೆ. ಇರಾನ್‌ ಜನರ ಭಾವನೆಗಳ ಜತೆ ನಾವಿದ್ದೇವೆ. ಇಬ್ರಾಹಿಂ ರೈಸಿ ಹಾಗೂ ಅವರ ಜತೆಗಿದ್ದ ಎಲ್ಲರೂ ಸುರಕ್ಷಿತವಾಗಿರಲಿ ಎಂಬುದಾಗಿ ಪ್ರಾರ್ಥಿಸುತ್ತೇನೆ” ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್‌ ಪತನಗೊಂಡಿರಬಹುದು ಎಂದು ಇರಾನ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹವಾಮಾನ ವೈಪರೀತ್ಯವು ಶೋಧ ಕಾರ್ಯಾಚರಣೆಗೂ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ. 2021ರಿಂದಲೂ ಇಬ್ರಾಹಿಂ ರೈಸಿ ಅವರು ಇರಾನ್‌ ಅಧ್ಯಕ್ಷರಾಗಿದ್ದಾರೆ.

ಇದನ್ನೂ ಓದಿ: Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Continue Reading

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದೆ ಎಂಬುದಾಗಿ ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನವಾಗಿದೆ ಎಂಬುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದರೆ, ಇನ್ನೂ ಕೆಲವು ಮಾಧ್ಯಮಗಳು ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ ಎಂದು ವರದಿ ಮಾಡಿವೆ. ಹಾಗಾಗಿ, ಹೆಲಿಕಾಪ್ಟರ್‌ ಪತನವಾಗಿದೆಯೋ, ತುರ್ತು ಲ್ಯಾಂಡ್‌ ಆಗಿದೆಯೋ ಎಂಬ ಮಾಹಿತಿ ನಿಖರವಾಗಿ ಲಭ್ಯವಾಗಿಲ್ಲ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ. ಆದಾಗ್ಯೂ, ಇರಾನ್‌ ಸರ್ಕಾರದಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇರಾನ್‌ ಬೆಂಗಾವಲು ಪಡೆ ಇದ್ದ ಹೆಲಿಕಾಪ್ಟರ್‌ ಪತನಗೊಂಡಿದೆ. ಅದರಲ್ಲಿ, ಇಬ್ರಾಹಿಂ ರೈಸಿ ಅವರು ಇದ್ದರೋ, ಇಲ್ಲವೋ ಎಂಬುದರ ಮಾಹಿತಿ ನಿಖರವಾಗಿಲ್ಲ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳುತ್ತಿದೆ ಎಂಬುದಾಗಿ ಸಚಿವರೊಬ್ಬರು ತಿಳಿಸಿದ್ದಾರೆ ಎಂಬುದಾಗಿ ಬಿಬಿಸಿ ವರದಿ ತಿಳಿಸಿದೆ. ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶದಲ್ಲಿ ಪತನಗೊಂಡಿರುವುದಾಗಿ ವರದಿಗಳು ಮಾಹಿತಿ ನೀಡಿವೆ. ಪತನಗೊಂಡಿರುವ ಹೆಲಿಕಾಪ್ಟರ್‌ ಪತ್ತೆಹಚ್ಚಲು ಸಿಬ್ಬಂದಿಯು ಹರಸಾಹಸ ಪಡುತ್ತಿದೆ ಎಂದು ಕೂಡ ತಿಳಿದುಬಂದಿದೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ತುರ್ತು ಭೂಸ್ಪರ್ಶ ಮಾಡಿದ ಕಾರಣದಿಂದಾಗಿ ಯಾರಿಗೂ ಅಪಾಯವಾಗಿಲ್ಲ ಎಂದು ಮತ್ತೊಂದಿಷ್ಟು ಮೂಲಗಳು ತಿಳಿಸಿವೆ.

ಇದನ್ನೂ ಓದಿ: US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Continue Reading
Advertisement
actor Chetan Kumar Ahimsa
ಸಿನಿಮಾ24 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ43 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್47 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್48 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ1 hour ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ1 hour ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌