ವಿಸ್ತಾರ ಸಂಪಾದಕೀಯ: ಅಲ್ಪಸಂಖ್ಯಾತರ ಹಿತರಕ್ಷಣೆಯಲ್ಲಿ ಭಾರತ ನಂ.1 - Vistara News

ದೇಶ

ವಿಸ್ತಾರ ಸಂಪಾದಕೀಯ: ಅಲ್ಪಸಂಖ್ಯಾತರ ಹಿತರಕ್ಷಣೆಯಲ್ಲಿ ಭಾರತ ನಂ.1

ಈ ದೇಶದ ಮುಖ್ಯಮಂತ್ರಿ, ರಾಜ್ಯಪಾಲ, ರಾಷ್ಟ್ರಪತಿ ಹುದ್ದೆಯನ್ನೂ ಭಾರತೀಯ ಅಲ್ಪಸಂಖ್ಯಾತರು ಜನಮತದಿಂದಲೇ ಅಲಂಕರಿಸಿದ್ದಾರೆ. ಅಲ್ಪಸಂಖ್ಯಾತರು ಭಾರತದಲ್ಲಿ ಗರಿಷ್ಠ ಸ್ವಾತಂತ್ರ್ಯ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಈಗ ಅಂತಾರಾಷ್ಟ್ರೀಯ ವರದಿಯೇ ಹೇಳಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ, ಅಲ್ಪಸಂಖ್ಯಾತರನ್ನು (Minority Community) ಒಳಗೊಳ್ಳುವ ಕ್ರಮಗಳಲ್ಲಿ ಭಾರತ ನಂ.1 ಸ್ಥಾನದಲ್ಲಿದೆ ಎಂದು ಸಿಪಿಎ (ಸೆಂಟರ್ ಫಾರ್ ಪಾಲಿಸಿ ಅನಾಲಿಸಿಸ್) ಜಾಗತಿಕ ವರದಿ ಹೇಳಿದೆ. ಇದೊಂದು ಸ್ವತಂತ್ರ ಅಂತಾರಾಷ್ಟ್ರೀಯ ಸಂಸ್ಥೆ. 110 ರಾಷ್ಟ್ರಗಳಲ್ಲಿ ಸಮೀಕ್ಷೆ ನಡೆಸಿದಾಗ ಭಾರತವೇ ಅಲ್ಪಸಂಖ್ಯಾತರಿಗೆ ಹೆಚ್ಚು ಸುರಕ್ಷಿತ ಜಾಗ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಯಾವುದೇ ನಿರ್ಬಂಧ ಇಲ್ಲ. ಭಾರತದ ಸಂವಿಧಾನವು ಸಂಸ್ಕೃತಿ ಮತ್ತು ಶಿಕ್ಷಣ ಎರಡರಲ್ಲೂ ಧಾರ್ಮಿಕ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸುವ ವಿಶಿಷ್ಟ, ವಿಶೇಷ ವಿಧಿಗಳನ್ನು ಹೊಂದಿದೆ ಎಂದೂ ಈ ವರದಿ ಉಲ್ಲೇಖಿಸಿದೆ. ಭಾರತದ ನಂತರದ 4 ಸ್ಥಾನಗಳಲ್ಲಿ ಪನಾಮಾ, ಜಪಾನ್, ದಕ್ಷಿಣ ಕೊರಿಯಾ ಮತ್ತು ಅಮೆರಿಕ ದೇಶಗಳಿವೆ.

ಈ ವರದಿಯ ಸಾರಾಂಶ ಭಾರತಕ್ಕೆ ಜಾಗತಿಕವಾಗಿ ಹೆಮ್ಮೆಯ ಸಂಗತಿ. ಆದರೆ ಇದು ಹೊಸ ಸಂಗತಿಯೇನಲ್ಲ. ತಮಾಷೆ ಎಂದರೆ, ನರೇಂದ್ರ ಮೋದಿಯವರ ಆಡಳಿತದಲ್ಲಿ ಮುಸ್ಲಿಮರು ಆತಂಕ ಅನುಭವಿಸುತ್ತಿದ್ದಾರೆ ಎಂದು ಪ್ರಚಾರ ಮಾಡಲು ಹೊರಟಿದ್ದ ಬಿಬಿಸಿ ಸುದ್ದಿಸಂಸ್ಥೆಯ ಮಾತೃನೆಲವಾದ ಇಂಗ್ಲೆಂಡ್‌ ಈ ವರದಿಯಲ್ಲಿ 54ನೇ ಸ್ಥಾನದಲ್ಲಿದೆ! ಭಾರತದ ಅಲ್ಪಸಂಖ್ಯಾತ ನೀತಿಯು ವೈವಿಧ್ಯತೆಯನ್ನು ಬೆಳೆಸುವ ಕಾರ್ಯತಂತ್ರದ ಮೇಲೆ ರೂಪಿಸಲ್ಪಟ್ಟಿದೆ. ಉಳಿದ ಯಾವುದೇ ದೇಶಗಳ ಸಂವಿಧಾನವು ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಬೆಂಬಲಕ್ಕೆ ಸ್ಪಷ್ಟವಾದ ಖಾತರಿಗಳನ್ನು ಹೊಂದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಅಲ್ಪಸಂಖ್ಯಾತರು ಭಾರತದಲ್ಲಿ ಗರಿಷ್ಠ ಸ್ವಾತಂತ್ರ್ಯ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಸಾರಲು ಈ ವರದಿಯೇನೂ ಬೇಕಿರಲಿಲ್ಲ.

ನಮ್ಮ ದೇಶದಲ್ಲಿ ಆರು ಧರ್ಮಗಳ (ಮುಸ್ಲಿಂ, ಕ್ರೈಸ್ತ, ಸಿಖ್‌, ಜೈನ, ಬೌದ್ಧ, ಪಾರ್ಸಿ) ಅಲ್ಪಸಂಖ್ಯಾತರು ಒಟ್ಟಾಗಿ ಒಟ್ಟಾರೆ ಜನಸಂಖ್ಯೆಯ 19.3%ದಷ್ಟು ಇದ್ದಾರೆ. ಅಲ್ಪಸಂಖ್ಯಾತರ ಹಿತವನ್ನೂ ಬಹುಸಂಖ್ಯಾತರಂತೆಯೇ ಕಾಯಲು ನಮ್ಮ ಸಂವಿಧಾನದಲ್ಲೂ ʼಧರ್ಮನಿರಪೇಕ್ಷತೆʼಯನ್ನು ಸೇರಿಸಲಾಗಿದೆ. ಅಲ್ಪಸಂಖ್ಯಾತ ಹಿತಚಿಂತನೆ ನೋಡಿಕೊಳ್ಳುವುದಕ್ಕಾಗಿಯೇ ಕೇಂದ್ರದಲ್ಲಿ ʼಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯʼ ಇದೆ. ಈ ದೇಶದ ಮುಖ್ಯಮಂತ್ರಿ, ರಾಜ್ಯಪಾಲ, ರಾಷ್ಟ್ರಪತಿ ಹುದ್ದೆಯನ್ನೂ ಭಾರತೀಯ ಅಲ್ಪಸಂಖ್ಯಾತರು ಜನಮತದಿಂದಲೇ ಅಲಂಕರಿಸಿದ್ದಾರೆ.

ಭಾರತದ ಜನಸಂಖ್ಯೆಯ ಸುಮಾರು 14%ದಷ್ಟು, ಅಂದರೆ 20 ಕೋಟಿ ಮಂದಿ ಮುಸ್ಲಿಮರು ಇಲ್ಲಿ ಇದ್ದಾರೆ. ಇದು ದೇಶದ ಎರಡನೇ ಅತಿ ದೊಡ್ಡ ಧಾರ್ಮಿಕ ಸಮುದಾಯ. ಇಂಡೋನೇಷ್ಯಾ ಹಾಗೂ ಪಾಕಿಸ್ತಾನದ ಬಳಿಕ ಅತಿ ಹೆಚ್ಚು ಮುಸ್ಲಿಮರು ಇರುವ ದೇಶ ಎಂದರೆ ಭಾರತ. ಇನ್ನುಳಿದ ಇಸ್ಲಾಮಿಕ್‌ ದೇಶಗಳೆನಿಸಿಕೊಂಡವು ಕೂಡ ಭಾರತದಷ್ಟು ಸಂಖ್ಯೆಯ ಮುಸ್ಲಿಮರನ್ನು ಹೊಂದಿಲ್ಲ. ಭಾರತದಲ್ಲಿ ಎರಡೂ ಧರ್ಮಗಳೂ ಸಾಕಷ್ಟು ಕೊಡುಕೊಳ್ಳುವಿಕೆ ಮಾಡಿಕೊಂಡು ಸಾಮರಸ್ಯದಿಂದ ಬಾಳುತ್ತಿವೆ. ಪಾಕಿಸ್ತಾನ, ಇರಾನ್ ಮುಂತಾದ ಅಪ್ಪಟ ಮುಸ್ಲಿಂ ದೇಶಗಳಿಗಿಂತ ಭಾರತೀಯ ಮುಸ್ಲಿಮರು ಹೆಚ್ಚು ಸ್ವಾತಂತ್ರ್ಯ ಮತ್ತು ಸೌಕರ್ಯ ಹೊಂದಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಅಪಾಯ ಇಲ್ಲ ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ ಭಾಗವತ್ ಕೂಡ ಇತ್ತೀಚೆಗೆ ಹೇಳಿದ್ದರು. ಹಾಗೆ ನೋಡಿದರೆ ಮುಸ್ಲಿಂ ದೇಶಗಳಲ್ಲೇ ಮುಸ್ಲಿಮರು ಸುರಕ್ಷಿತವಾಗಿಲ್ಲ. ಪಾಕಿಸ್ತಾನ, ಆಫ್ಘಾನಿಸ್ತಾನದ ಮಸೀದಿಗಳಲ್ಲೇ ಬಾಂಬ್ ಇಟ್ಟು ಸ್ಫೋಟಿಸಲಾಗುತ್ತಿದೆ. ಇನ್ನು ಅಲ್ಲಿಯ ಅಲ್ಪಸಂಖ್ಯಾತರು ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಆ ದೇಶಗಳಲ್ಲಿ ಅರಾಜಕತೆ ಇದೆ. ಅಲ್ಲಿಯ ಜನ ಎರಡು ಹೊತ್ತಿನ ತುತ್ತಿಗೆ ಪರದಾಡುತ್ತಿದ್ದಾರೆ.

ಇಲ್ಲಿನ ಸುರಕ್ಷತೆಯ ಮಾತು ಕ್ರೈಸ್ತರಿಗೂ ಅನ್ವಯಿಸುತ್ತದೆ. ಇಲ್ಲಿನ ಜನಸಂಖ್ಯೆಯ 2.3% (ಸುಮಾರು 2.8 ಕೋಟಿ) ಕ್ರೈಸ್ತರಿದ್ದಾರೆ. ಕ್ರೈಸ್ತ ಮಿಷನರಿಗಳು ತಮ್ಮ ಧರ್ಮ ಪ್ರಚಾರಕ್ಕೆ ಭಾರತಕ್ಕೆ ಬಂದ ಕಾಲದಿಂದಲೂ ಹಿಂದೂಗಳು ಅವರ ಜತೆ ಸಹಿಷ್ಣುತೆಯಿಂದ ಬದುಕಿ ಬಾಳಿದ್ದಾರೆ. ಕ್ರೈಸ್ತರಾದ ಪಾಶ್ಚಾತ್ಯರ ಜ್ಞಾನಶಾಖೆಗಳ ಧಾರಾಳ ಉಪಯುಕ್ತತೆಯನ್ನು ಭಾರತ ಪಡೆದಿದೆ. ಕ್ರೈಸ್ತರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳು ಶತಮಾನಗಳಿಂದಲೂ ನಮ್ಮ ಜನಜೀವನದ ಜತೆ ಹಾಸುಹೊಕ್ಕಾಗಿವೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ರಕ್ಷಣೆ ಮತ್ತು ಇಂಧನದಲ್ಲಿ ಸ್ವಾವಲಂಬನೆಯತ್ತ ಭಾರತದ ಹೆಜ್ಜೆ

ಈ ವರದಿ ಹಾಗೂ ಅಂಕಿಅಂಶಗಳು ನಮ್ಮ ಕಣ್ಣು ತೆರೆಸಬೇಕು. ಇಷ್ಟಾಗಿಯೂ ಕೆಲವು ಜನ ಆಗಾಗ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗುತ್ತಿರುವುದು, ತಾವು ಭಾರತದಲ್ಲಿ ಅನುಭವಿಸುತ್ತಿರುವ ಸ್ವಾತಂತ್ರ್ಯವನ್ನು ಅವಮಾನಿಸಿದಂತೆಯೇ ಸರಿ. ಅಲ್ಪಸಂಖ್ಯಾತರಿಗೆ ಇಲ್ಲಿ ರಕ್ಷಣೆಯಿಲ್ಲ ಎಂದು ಹುಯಿಲೆಬ್ಬಿಸುವುದನ್ನೇ ಕಾಯಕ ಮಾಡಿಕೊಂಡ ಕೆಲವರಿದ್ದಾರೆ. ವಿಶ್ವಸಂಸ್ಥೆ ಸೇರಿದಂತೆ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕೆಲವು ದೇಶಗಳು ಆಗಾಗ ಭಾರತದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯ ಪ್ರಶ್ನೆ ಎತ್ತುತ್ತಿವೆ. ಅಂಥ ದೇಶಗಳು, ಈಗ ಬಿಡುಗಡೆಯಾಗಿರುವ ಸಿಪಿಎ ವರದಿಯಲ್ಲಿ ತಮ್ಮ ದೇಶದ ಸ್ಥಾನ ಯಾವ ಕ್ರಮಾಂಕದಲ್ಲಿದೆ ಎನ್ನುವುದನ್ನು ಮೊದಲು ನೋಡಿಕೊಳ್ಳಲಿ. ದೇಶದೊಳಗಿದ್ದು ಅಪಪ್ರಚಾರ ಮಾಡುವ ಹಿತಶತ್ರುಗಳೂ ಇದನ್ನು ಗಮನಿಸಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

Vitamin D:ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

VISTARANEWS.COM


on

Foods rich in vitamin D
Koo

ನವದೆಹಲಿ:ವಿಟಮಿನ್‌ ಡಿ(Vitamin D) ಕೊರತೆ ಎಂಬುದು ಪ್ರಪಂಚಾದ್ಯಂತ ಹೆಚ್ಚಿನ ಜನರಲ್ಲಿ ಅತ್ಯಂತ ಸಾಮಾನ್ಯವಾಗಿ ಕಂಡು ಬರುವ ಪೌಷ್ಟಿಕಾಂಶ ಕೊರತೆ(Nutrient shortages)ಯಾಗಿದೆ. ಇದು ಸಾಮಾನ್ಯವಾಗಿ 65 ವರ್ಷ ಮೇಲ್ಪಟ್ಟ ಜನರಲ್ಲಿ ಕಂಡು ಬರುವ ಪೌಷ್ಠಿಕಾಂಶ ಕೊರತೆ. ಪ್ರಪಂಚದ ಶೇ.13ರಷ್ಟು ಜನರಲ್ಲಿ ವಿಟಮಿನ್‌ ಡಿ ಕೊರತೆ ಕಂಡು ಬರುತ್ತದೆ. ವಿಟಮಿನ್‌ ಡಿ ಕೊರತೆಯಿಂದ ಎಲುಬು, ಗಂಟು ನೋವು, ಸಂಧು ನೋವು, ಮೂಡ್‌ ಚೇಂಜ್‌ ಹೀಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಆದರೆ ಇದೀಗ ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌(Cancer)ಗೆ ಕಾರಣವಾಗಲಿದೆ ಎಂಬ ಶಾಕಿಂಗ್‌ ವರದಿಯೊಂದು ಹೊರ ಬಿದ್ದಿದೆ. ವಿವಿಧ ಅಧ್ಯಯನಗಳ ವರದಿ ಪ್ರಕಾರ ವಿಟಮಿನ್‌ ಡಿ ಕೊರತೆಯಿಂದ ಓವರಿಯನ್‌, ಸ್ತನ ಸೇರಿದಂತೆ ವಿವಿಧ ಕ್ಯಾನ್ಸರ್‌ಗೆ ತುತ್ತಾಗುವ ಸಾಧ್ಯತೆ ಇದೆ.

ವಿಟಮಿನ್‌ ಡಿ ಕೊರತೆ ಹೇಗೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ?

ವಿಟಮಿನ್‌ ಡಿ 3 ಮತ್ತು ಕ್ಯಾಲ್ಸಿಯಂ ಮಾತ್ರೆ ಸೇವನೆಯಿಂದ ಕ್ಯಾನ್ಸರ್‌ ತಡೆಯಲು ಸಾಧ್ಯವಿಲ್ಲ ಎಂದು ಅಧ್ಯಯನ ವರದಿ ಹೇಳಿದೆ. ವಿಟಮಿನ್‌ ಡಿ ಕ್ಯಾನ್ಸರ್‌ ಸೆಲ್‌ಗಳ ವಿಡಿಜನ್‌ ಮತ್ತು ಅವುಗಳ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೇ . ಅದರ ಕೊರತೆ ಆದಲ್ಲಿ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರ್‌ಗೆ ತುತ್ತಾಗು ಸಾಧ್ಯತೆ ಹೆಚ್ಚಿರುತ್ತದೆ. ವೈದ್ಯರ ಹೇಳುವ ಪ್ರಕಾರ ವಿಟಮಿನ್‌ ಡಿ ಮನುಷ್ಯನ ಎಲುಬುಗಳ ಆರೋಗ್ಯ ಕಾಪಾಡುವುದು ಮಾತ್ರವಲ್ಲದೇ ದೇಹದಲ್ಲಿರುವ ದೋಷಯುಕ್ತ ಜೀನ್‌ಗಳನ್ನು ಸರಿಪಡಿಸುವ ಪ್ರಕ್ರಿಯೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ. ಈ ಪ್ರಕ್ರಿಯೆಗೆ MMR ಎಂದು ಕರೆಯಲಾಗಿದ್ದು, ಇದಕ್ಕೆ ವಿಟಮಿನ್‌ ಡಿ ಅಗತ್ಯ ಹೆಚ್ಚಾಗಿದೆ. ಇನ್ನು ವಿಟಮಿನ್‌ ಡಿ ಕೊರತೆ ಕ್ಯಾನ್ಸರ್‌ ಗೆ ಕಾರಣವಾಗುತ್ತದೇಯೇ ಎಂಬ ವಿಷಯದ ಬಗ್ಗೆ ಮತ್ತಷ್ಟು ಅಧ್ಯಯನ ಮುಂದುವರೆದಿದೆ.

ವಿಟಮಿನ್ ಡಿ ಕೊರತೆ ಉಂಟಾಗದಿರಲು ಏನು ಮಾಡಬೇಕು?

1. ವಿಟಮಿನ್ ಡಿ ಕೊರತೆಗೆ ಪ್ರಮುಖ ಮದ್ದು ಎಂದರೆ ಬೆಳಗ್ಗೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ನಿಲ್ಲುವುದು. ತ್ವಚೆಯ ಮೇಲೆ ಯುವಿ-ಬಿ ಕಿರಣಗಳು ಬಿದ್ದಾಗ ಕೊಲೆಸ್ಟ್ರಾಲ್ ವಿಟಮಿನ್ ಡಿ ಆಗಿ ಪರಿವರ್ತನೆ ಆಗುವುದು. ನಿಮ್ಮ ತ್ವಚೆಯ ಬಣ್ಣದ ಮೇಲೆ ನೀವು ಬಿಸಿಲಿನಲ್ಲಿ ನಿಲ್ಲುವ ಸಮಯಲ್ಲಿ ವ್ಯತ್ಯಾಸವಿರುತ್ತದೆ. ಕಪ್ಪು ಬಣ್ಣದ ತ್ವಚೆಯವರು ಬಿಳಿ ಬಣ್ಣದ ತ್ವಚೆಯವರಿಗಿಂತ ಹೆಚ್ಚು ಹೊತ್ತು ಬಿಸಿಲಿನಲ್ಲಿ ನಿಲ್ಲಬೇಕು. ಇನ್ನು ವಯಸ್ಸು ಹೆಚ್ಚಾದಂತೆ ಬಿಸಿಲಿನಲ್ಲಿ ಹೆಚ್ಚು ಹೊತ್ತು ನಿಂತರೆ ಒಳ್ಳೆಯದು.

ಇದನ್ನೂ ಓದಿ:

2. ಮೀನು ಹಾಗೂ ಸಮುದ್ರ ಆಹಾರಗಳಲ್ಲಿ ವಿಟಮಿನ್ ಡಿ ಇರುತ್ತದೆ. ಬೂತಾಯಿ, ಮೃದ್ವಂಗಿಗಳು, ಸಿಗಡಿ, ಬಂಗುಡೆ ಈ ಮೀನುಗಳಲ್ಲಿ ವಿಟಮಿನ್ ಡಿ ಅಂಶವಿರುತ್ತದೆ.

3. ಬೆಳಸುವ ಅಣಬೆಗಳಿಗಿಂತ ನೈಸರ್ಗಿಕವಾಗಿ ಸಿಗುವ ಅಣಬೆಗಳಲ್ಲಿ ವಿಟಮಿನ್ ಡಿ ಅಧಿಕವಿರುತ್ತದೆ.

4. ಮೀನು ತಿನ್ನದವರು ಮೊಟ್ಟೆಯನ್ನು ತಿಂದರೆ ಅದರಲ್ಲಿ ಸ್ವಲ್ಪ ಪ್ರಮಾಣದ ವಿಟಮಿನ್ ಡಿ ದೊರೆಯುವುದು. ಮೊಟ್ಟೆಯ ಬಿಳಿ ಜತೆಗೆ ಅರಿಶಿಣ ಕೂಡ ತಿನ್ನಿ.

5. ಇನ್ನು ದನದ ಹಾಲು ಕುಡಿಯುವುದು, ಸೋಯಾ ಹಾಲು, ಕಿತ್ತಳೆ ಜ್ಯೂಸ್‌ ಇವುಗಳನ್ನು ಕೂಡ ಡಯಟ್‌ನಲ್ಲಿ ಸೇರಿಸಿ.
ಓಟ್‌ಮೀಲ್ ಹಾಗೂ ಧಾನ್ಯಗಳಲ್ಲಿ ಕೂಡ ಸ್ವಲ್ಪ ಪ್ರಮಾಣದಲ್ಲಿ ವಿಟಮಿನ್ ಡಿ ಇರುತ್ತದೆ.

Continue Reading

ದೇಶ

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

Lok Sabah Election: ಮುಂದಿನ ಐದು ಹಂತಗಳಲ್ಲಿ ಕಡಿಮೆ ಮತದಾನದ ಪ್ರವೃತ್ತಿ ಮುಂದುವರಿಯದಂತೆ ನೋಡಿಕೊಳ್ಳುವಂತೆ ಪಕ್ಷದ ವರಿಷ್ಠರು ರಾಜ್ಯ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 543 ಸ್ಥಾನಗಳಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ 50% ಅನ್ನು ಗೆಲ್ಲುವ ಗುರಿಯೂ ಇದೆ.

VISTARANEWS.COM


on

Lok sabaha election
Koo

ನವದೆಹಲಿ: ಲೋಕಸಭಾ ಚುನಾವಣೆಯ (Lok Sabha Election) ಮೊದಲ ಎರಡು ಹಂತಗಳಲ್ಲಿ ಮತದಾನದ ಪ್ರಮಾಣವು ಕುಸಿದಿರುವುದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿಗೆ) ಆತಂಕಕಾರಿ ಬೆಳವಣಿಗೆಯಾಗಿದೆ. ಮತದಾರರ ನಿರಾಸಕ್ತಿಯ ಹಿನ್ನೆಲೆಯಲ್ಲಿ ಪಕ್ಷದ ಬಾಹುಳ್ಯವನ್ನು ದ್ವಿಗುಣಗೊಳಿಸಲು ಮತ್ತು ಅದರ ಮತ ಹಂಚಿಕೆ ಕಡಿಮೆಯಾಗದಂತೆ ನೋಡಿಕೊಳ್ಳಲು ತನ್ನ ಕಾರ್ಯಕರ್ತರಿಗೆ ಸೂಚನೆ ನೀಡಿದೆ.

ಹಿರಿಯ ನಾಯಕರ ಪ್ರಕಾರ ಬಿಹಾರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಂತಹ ರಾಜ್ಯಗಳಲ್ಲಿನ ಮತದಾನದ ಪ್ರಮಾಣವು ಕೇಂದ್ರ ನಾಯಕತ್ವವು ರಾಜ್ಯ ಘಟಕಗಳ ಸಾಮರ್ಥ್ಯವನ್ನು ಪ್ರಶ್ನಿಸಿದೆ. ಚುನಾವಣೆಯ ಮೇಲ್ವಿಚಾರಣೆ ನಡೆಸುತ್ತಿರುವ ರಾಜ್ಯ ಉಸ್ತುವಾರಿಗಳಿಂದ ವಿವರ ವಿವರಣೆಯನ್ನು ಕೋರಿದೆ. ಆದರೆ ಕಡಿಮೆ ಮತದಾನ ಆಡಳಿತ ಪಕ್ಷದ ಬಗ್ಗೆ ಕೋಪ ಅಥವಾ ನಿರಾಸಕ್ತಿಯ ಸೂಚಕವಾಗಿ ಎಂದು ಹೇಳಲಾಗುವುದಿಲ್ಲ ಎಂಬ ಉತ್ತರವನ್ನು ಕೇಂದ್ರದ ನಾಯಕರು ಪಡೆದುಕೊಂಡಿದ್ದಾರೆ.

ಕಡಿಮೆ ಮತದಾನವು ಪ್ರತಿಪಕ್ಷಗಳು ಮತ್ತು ಅದರ ನಾಯಕತ್ವದ ಕೊರತೆಯ ಪ್ರತಿಫಲ ಎನ್ನಲಾಗಿದೆ. ಭ್ರಮ ನಿರಸನಗೊಂಡಿರುವ ಮತದಾರರು ಮತ ಚಲಾಯಿಸಲು ಹೊರಬರುತ್ತಿಲ್ಲ ಎಂದು ಬಿಜೆಪಿ ನಾಯಕರು ವಾದಿಸಿದ್ದಾರೆ.

ಈ ಹೇಳಿಕೆ ಹೊರತಾಗಿಯೂ, ಮುಂದಿನ ಐದು ಹಂತಗಳಲ್ಲಿ ಕಡಿಮೆ ಮತದಾನದ ಪ್ರವೃತ್ತಿ ಮುಂದುವರಿಯದಂತೆ ನೋಡಿಕೊಳ್ಳುವಂತೆ ಪಕ್ಷದ ವರಿಷ್ಠರು ರಾಜ್ಯ ಉಸ್ತುವಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ 543 ಸ್ಥಾನಗಳಲ್ಲಿ 400 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ 50% ಅನ್ನು ಗೆಲ್ಲುವ ಗುರಿಯೂ ಇದೆ.

ವಾರಾಂತ್ಯ ಕಾರಣವೇ?

ವಾರಾಂತ್ಯದಲ್ಲಿ ಮತದಾನದ ದಿನವನ್ನು ನಿಗದಿಪಡಿಸಿದ್ದರಿಂದ ಹೀಗಾಗಿದೆ ಎಂದೂ ಹೇಳಲಾಗುತ್ತಿದೆ. ಬೇಸಿಗೆಯ ತಾಪ ಹಾಗೂ ನಗರ ಮತದಾರರ ಉದಾಸಿನ ಪ್ರವೃತ್ತಿಯೂ ಇದಕ್ಕೆ ಕಾರಣ ಎನ್ನಲಾಗಿದೆ. ಆದರೆ ಮೋದಿಯನ್ನೇ ನೆಚ್ಚಿಕೊಂಡಿರುವುದು ಕೂಡ ಪ್ರಭಾವ ಬೀರಿದೆ ಎನ್ನಲಾಗಿದೆ. “ಕೆಲವು ಪ್ರದೇಶಗಳಲ್ಲಿ ಸಂಸದರು ಮತ್ತು ಶಾಸಕರು ನಿರೀಕ್ಷೆಯಂತೆ ಪ್ರಚಾರ ಮಾಡಲಿಲ್ಲ. ಮೇಲಿನಿಂದ ಉತ್ಸಾಹದ ಕೊರತೆಯು ನಮ್ಮ ಚುನಾವಣಾ ಪ್ರಚಾರದ ಪ್ರಮುಖ ಕೇಂದ್ರಗಳಾಗಿರುವ ಬೂತ್ ಕಾರ್ಯಕರ್ತರ ಮೇಲೆ ಪರಿಣಾಮ ಬೀರಿದೆ. ಈ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ ಎಂದು ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Pralhad Joshi : ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್​ನಿಂದ ನಾಟಕ; ಪ್ರಲ್ಹಾದ್ ಜೋಶಿ ಲೇವಡಿ

ಎರಡನೇ ಹಂತದಲ್ಲಿ ಶೇ.63.5ರಷ್ಟು ಮತದಾನವಾಗಿದ್ದರೆ ಮಧ್ಯಪ್ರದೇಶದಲ್ಲಿ 2019ರಲ್ಲಿ ಶೇ.67.7ರಷ್ಟು ಮತದಾನಕ್ಕೆ ಹೋಲಿಸಿದರೆ ಮಧ್ಯ ಪ್ರದೇಶದಲ್ಲಿ ಈ ಬಾರಿ ಶೇ.58.3ರಷ್ಟು ಮತದಾನವಾಗಿದೆ. 2019ರಲ್ಲಿ 62.8% ರಿಂದ 58.99% ರಷ್ಟು ಮತದಾನವಾಗಿದೆ ಮತ್ತು ಬಿಹಾರದಲ್ಲಿ ಮತದಾನವು 2019 ರಲ್ಲಿ 62.93% ರಿಂದ 58.5% ಕ್ಕೆ ಇಳಿದಿದೆ.

ರಾಜಸ್ಥಾನದ ಎಲ್ಲಾ 25 ಸ್ಥಾನಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮತದಾನವು 61.60% ಆಗಿದ್ದು, ಇದು 2019 ರಲ್ಲಿ ದಾಖಲಾದ 66.07% ಕ್ಕಿಂತ ಕಡಿಮೆ.

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಏಪ್ರಿಲ್ 19 ರಂದು ನಡೆದ ಮೊದಲ ಹಂತದ ಮತದಾನದ ಕೊನೆಯಲ್ಲಿ 102 ಲೋಕಸಭಾ ಸ್ಥಾನಗಳಲ್ಲಿ 65.5% ರಷ್ಟು ಮತದಾನವಾಗಿತ್ತು. ಇದು 2019 ರಲ್ಲಿ ಇದೇ ಹಂತದಲ್ಲಿ ದಾಖಲಾದ 69.9% ಕ್ಕೆ ಹೋಲಿಸಿದರೆ ಕಡಿಮೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ, ಈ ಕುಸಿತವು ಇಬ್ಬರು ಹೊಸ ಮುಖ್ಯಮಂತ್ರಿಗಳಾದ ಭಜನ್ ಲಾಲ್ ಶರ್ಮಾ ಮತ್ತು ಮನೋಜ್ ಯಾದವ್ ಅವರ ನಾಯಕತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದೂ ಹೇಳಲಾಗಿದೆ.

Continue Reading

ದೇಶ

Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

Lok Sabha Election 2024: ಅಮೇಥಿ ಕ್ಷೇತ್ರದಿಂದ ರಾಹುಲ್‌ ಗಾಂಧಿ ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯನ್ನು ಕಣಕ್ಕಿಳಿಸುವಂತೆ ಕೇಂದ್ರೀಯ ಕಾಂಗ್ರೆಸ್‌ ಎಲೆಕ್ಷನ್‌ ಸಮಿತಿ(CEC) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮನವಿ ಮಾಡಿದೆ.

VISTARANEWS.COM


on

Priyanka Gandhi Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಯ ಎರಡನೇ ಹಂತದ ಮತದಾನ ಮುಕ್ತಾಯಗೊಂಡರೂ ಅಮೇಥಿ (Amethi) ಮತ್ತು ರಾಯ್‌ಬರೇಲಿ (Raebareli) ಯಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸದೇ ಕಾಂಗ್ರೆಸ್‌ ಇನ್ನೂ ಗುಟ್ಟಾಗಿಯೇ ಇಟ್ಟಿದೆ. ಈ ಎರಡೂ ಕ್ಷೇತ್ರಗಳಲ್ಲಿ ಗಾಂಧಿ ಕುಟುಂಬದ ಕುಡಿಗಳನ್ನೇ ಕಣಕ್ಕಿಳಿಸಬೇಕೆಂದು ಬಹುತೇಕ ಎಲ್ಲಾ ಕಾಂಗ್ರೆಸ್‌ ಮುಖಂಡರ ಆಶಯವಾಗಿದೆ. ಇದಕ್ಕೆ ಪೂರಕ ಎಂಬಂತೆ ಅಮೇಥಿ ಕ್ಷೇತ್ರದಿಂದ ರಾಹುಲ್‌ ಗಾಂಧಿ(Rahul Gadhi) ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ(Priyanka Gandhi)ಯನ್ನು ಕಣಕ್ಕಿಳಿಸುವಂತೆ ಕೇಂದ್ರೀಯ ಕಾಂಗ್ರೆಸ್‌ ಎಲೆಕ್ಷನ್‌ ಸಮಿತಿ(CEC) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ(Sona Gandhi)ಗೆ ಮನವಿ ಮಾಡಿದೆ. ಈ ಬಗ್ಗೆ ತಮ್ಮ ಮನವಿಯನ್ನು ಸಲ್ಲಿಸಿರುವ CEC ಸದಸ್ಯರು ಅಂತಿಮ ನಿರ್ಧಾರವನ್ನು ಮಲ್ಲಿಕಾರ್ಜುನ ಖರ್ಗೆಗೆ ಬಿಟ್ಟಿದ್ದಾರೆ.

2019ರವರೆಗೆ ಕಾಂಗ್ರೆಸ್‌ನ ಭದ್ರಕೋಟೆಯಂತಿದ್ದ ಅಮೇಥಿ ಮತ್ತು ರಾಯ್‌ ಬರೇಲಿ ಮೇಲೆ ಇಡೀ ದೇಶದ ಚಿತ್ತವೇ ನೆಟ್ಟಿದೆ. 2019ರಲ್ಲಿ ಬಿಜೆಪಿ ನಾಯಕಿ ಸ್ಮೃತಿ ಇರಾನಿ ರಾಹುಲ್‌ ಗಾಂಧಿಯವರನ್ನು ಸೋಲಿಸುವ ಮೂಲಕ ಕಾಂಗ್ರೆಸ್‌ ಮೊದಲ ಬಾರಿಗೆ ಅಮೇಥಿಯಲ್ಲಿ ಕಳೆದುಕೊಂಡಿತ್ತು. ಇನ್ನು ಸೋನಿಯಾ ಗಾಂಧಿಯವರು ರಾಜ್ಯಸಭೆಗೆ ಆಯ್ಕೆಯಾದ ನಂತರ ಅವರು ರಾಯ್‌ಬರೇಲಿಯನ್ನು ತೊರೆದಿದ್ದರು. ಇದಾದ ಬಳಿಕ ಪ್ರಿಯಾಂಕಾ ಗಾಂಧಿ ವಾಧ್ರಾ ರಾಯ್‌ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಬಹಳ ಕೇಳಿ ಬಂದಿತ್ತು. ಇದೀಗ ಮತ್ತೆ ಈ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಇನ್ನೂ ಗುಟ್ಟಾಗಿ ಇಡುವ ಮೂಲಕ ಭಾರೀ ಕುತೂಹಲ ಮೂಡಿಸಿದೆ.

ಅಮೇಥಿಯಲ್ಲಿ ಸ್ಪರ್ಧಿಸುವ ಬಗ್ಗೆ ಸ್ವತಃ ರಾಹುಲ್‌ ಗಾಂಧಿಯೇ ಒಲವು ತೋರಿದ್ದು, ಪಕ್ಷ ಬಯಸಿದ್ದಲ್ಲಿ ಅಮೇಥಿಯಿಂದ ಸ್ಪರ್ಧಿಸುವುದಾಗಿ ಹೇಳಿದ್ದರು. ಈಗಾಗಲೇ ಕೇರಳದ ವಯನಾಡಿನಲ್ಲಿ ಕಣಕ್ಕಿಳಿದಿರುವ ರಾಹುಲ್‌ ಗಾಂಧಿ ಈ ಬಾರಿಯೂ ಎರಡನೇ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಮತ್ತೊಂದೆಡೆ ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಎರಡೂ ಕೇತ್ರಗಳ ಅಭ್ಯರ್ಥಿ ಘೋಷಣೆಗೆ ಇನ್ನೂ ಸಮಯ ಇದೆ. ಜನರಿಂದ ಯಾವ ಅಭ್ಯರ್ಥಿಯ ಹೆಸರು ಕೇಳಿ ಬರುತ್ತದೋ ಅಂಥವರಿಗೆ ಸೀಟ್‌ ಕೊಡಲಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

ಕಾಂಗ್ರೆಸ್‌ ಮುಖಂಡರ ಕ್ಷೇತ್ರ ಬದಲಾವಣೆ ಬಗ್ಗೆ ಬಿಜೆಪಿ ಆಗಾಗ ವ್ಯಂಗ್ಯ ಆಡುತ್ತಿದೆ. ಈ ಬಗ್ಗೆ ಟಾಂಗ್‌ ಕೊಟ್ಟ ಖರ್ಗೆ, ನಮ್ಮನ್ನು ಹಾಸ್ಯ ಮಾಡುವ ಬಿಜೆಪಿಗರು ಮೊದಲು ಅಟಲ್‌ ಬಿಹಾರಿ ವಾಜಪೇಯಿ ಮತ್ತು ಎಲ್‌.ಕೆ.ಆಡ್ವಾಣಿ ಅದೆಷ್ಟು ಬಾರಿ ಕ್ಷೇತ್ರ ಬದಲಾಯಿಸಿ ಚುನಾವಣೆ ಸ್ಪರ್ಧಿಸಿದ್ದಾರೆ ಎಂಬುದನ್ನು ಲೆಕ್ಕ ಹಾಕಲಿ. ವಯನಾಡಿನ ಜನರು ತಮ್ಮ ಕ್ಷೇತ್ರದಲ್ಲೇ ರಾಹುಲ್‌ ಗಾಂಧಿ ಸ್ಪರ್ಧಿಸಬೇಕೆಂದು ಬಯಸಿದ್ದರು. ಹೀಗಾಗಿ ಅವರು ಅಲ್ಲಿಗೆ ಹೋಗಿದ್ದಾರೆ. ನಾಯಕನಾದವನು ಜನರ ಆಶಯಕ್ಕೆ ಅನುಗುಣವಾಗಿ ನಡೆಯಬೇಕು ಎಂದು ತಿರುಗೇಟು ಕೊಟ್ಟರು.

Continue Reading

ಪ್ರಮುಖ ಸುದ್ದಿ

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading
Advertisement
Foods rich in vitamin D
ದೇಶ1 min ago

Vitamin D: ಎಚ್ಚರ..ಎಚ್ಚರ! ಕ್ಯಾನ್ಸರ್‌ಗೂ ಕಾರಣವಾಗುತ್ತೆ ವಿಟಮಿನ್‌ ಡಿ ಕೊರತೆ

TCS World 10K
ಕ್ರೀಡೆ9 mins ago

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

IPL 2024 Points Table
ಕ್ರೀಡೆ26 mins ago

IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

PM Narendra Modi proposing arecanut millets and fisheries
Lok Sabha Election 202435 mins ago

PM Narendra Modi: ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

PM Narendra Modi in Sirsi
Lok Sabha Election 202452 mins ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ವೈರಲ್ ನ್ಯೂಸ್1 hour ago

Viral Video: ಹೆಂಡತಿಯನ್ನ ಥಳಿಸಿ ಫ್ಲೈ ಓವರ್‌ನಿಂದ ತಳ್ಳೋಕೆ ಯತ್ನಿಸಿದ ಪಾಪಿ ಗಂಡ; ಆಮೇಲೆ ಆಗಿದ್ದೇನು?

Lok sabaha election
ದೇಶ2 hours ago

Lok Sabha Election: ಮತದಾನ ಪ್ರಮಾಣ ಕುಸಿತ; ಬಿಜೆಪಿಗೆ ಆತಂಕ!

PM Narendra Modi Live in Sirsi campaign meeting here
Lok Sabha Election 20242 hours ago

PM Narendra Modi Live : ಪ್ರಧಾನಿ ಮೋದಿಯ ಶಿರಸಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Samantha Ruth Prabhu shocking secrets
ಟಾಲಿವುಡ್2 hours ago

Samantha Ruth Prabhu: ಸಮಂತಾಗೆ ಜನುಮ ದಿನದ ಸಂಭ್ರಮ! ಈ ನಟಿಯ ಸೀಕ್ರೆಟ್‌ ಸಂಗತಿಗಳಿವು!

PM Narendra Modi Cm Siddaramaiah many questions to PM Modi Challenge for answer
Lok Sabha Election 20242 hours ago

PM Narendra Modi: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ 10 ಪ್ರಶ್ನೆ; ಉತ್ತರಕ್ಕಾಗಿ ಸವಾಲು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra Modi in Sirsi
Lok Sabha Election 202453 mins ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ6 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202423 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಟ್ರೆಂಡಿಂಗ್‌