Leopard death: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು - Vistara News

ದಾವಣಗೆರೆ

Leopard death: ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತಡರಾತ್ರಿ ಆಹಾರ ಅರಸಿ ಬಂದ ಚಿರತೆಯೊಂದು ಹೆದ್ದಾರಿಯಲ್ಲಿ ವಾಹನವೊಂದಕ್ಕೆ ಸಿಕ್ಕಿ ಮೃತಪಟ್ಟಿದೆ.

VISTARANEWS.COM


on

Leopard death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಸಾವಿಗೀಡಾಗಿದೆ. ದಾವಣಗೆರೆಯ ಆನಗೋಡು ಬಳಿ‌ ಈ ದುರ್ಘಟನೆ ನಡೆದಿದೆ.

ತಡರಾತ್ರಿ ಚಿರತೆಯೊಂದು ರಸ್ತೆ ದಾಟುವಾಗ ಅವಘಡ ಸಂಭವಿಸಿದೆ. ಆನಗೋಡು ಸುತ್ತಾಮುತ್ತ ಓಡಾಡುತ್ತಿದ್ದ ಚಿರತೆ ಇದೆನ್ನಲಾಗಿದೆ. ಚಿರತೆಗಳು ತಡರಾತ್ರಿ ಬೇಟೆ ಹುಡುಕಿಕೊಂಡು ರಸ್ತೆ ಆಸುಪಾಸಿಗೆ ಬರುವುದು, ನಾಯಿಗಳನ್ನು ಹೊತ್ತೊಯ್ಯುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇಂಥ ಸಂದರ್ಭದಲ್ಲೇ ವಾಹನ ಚಿರತೆಗೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Tiger, leopard died: ಕೆರೆಗೆ ಬಿದ್ದು ಹುಲಿ, ಉರುಳಿಗೆ ಸಿಲುಕಿ‌ ಚಿರತೆ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka rain : ಚಿಕ್ಕಮಗಳೂರಿನ ಭದ್ರಾ ನದಿಯ ಅಬ್ಬರಕ್ಕೆ ಮತ್ತೊಂದು ಹಸು ಕೊಚ್ಚಿ ಹೋದರೆ, ಬೈಂದೂರಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪ್ರತ್ಯಕ್ಷಗೊಂಡಿದೆ. ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ಇದ್ದರೆ, ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಗೆ (Karnataka rain) ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಮತ್ತೊಂದು ಹಸು ಬಲಿಯಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ. ಹೆಬ್ಬಾಳ ಸೇತುವೆ ಮೇಲೆ 5-6 ಅಡಿ ನೀರು ಹರಿಯುತ್ತಿದ್ದು, ಸೇತುವೆ ತುದಿಯಲ್ಲಿದ್ದ ಹಸು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳೆದ ವಾರವೂ ಹಸುವೊಂದು ಇದೇ ಸೇತುವೆ ಮೇಲೆ ಕೊಚ್ಚಿ ಹೋಗಿತ್ತು. ಇದೀಗ ಮತ್ತೊಂದು ಹಸು ನೋಡನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಣ್ಣೂರ ಬಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆ ಇದಾಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಮೇಲೆ ಮಾತ್ರ ವಾಹನಗಳು ಸಂಚಾರಿಸುತ್ತಿವೆ. ಮಲಪ್ರಭಾ ನದಿಗೆ 5,000 ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಕೊಣ್ಣೂರು, ವಾಸನ, ಲಖಮಾಪುರ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತ

ಕ್ಷಣ ಕ್ಷಣಕ್ಕೂ ನೇತ್ರಾವತಿ ನದಿ ನೀರಿನ ಹರಿವು ಏರಿಕೆ ಆಗುತ್ತಿದ್ದು, ಬಂಟ್ವಾಳದ ಮಣಿಹಳ್ಳದ ಕಡವಿನಬಾಗಿಲು ಬಳಿ ಏಳು ಮನೆಗಳು ಜಲಾವೃತಗೊಂಡಿದೆ. ನದಿ ನೆರೆ ನೀರಿನಿಂದ ಮನೆಗಳು ಮುಳುಗಿದೆ. ಅಪಾಯದ ಮಟ್ಟವನ್ನು ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು, ಮನೆಗಳು ಕುಸಿಯುವ ಭೀತಿ ಇದೆ. ಮನೆಯಂಗಳದಲ್ಲಿ ಎದೆ ಮಟ್ಟದಲ್ಲಿ ಹರಿಯುತ್ತಿದೆ. ಬಂಟ್ವಾಳದ ಹಲವು ಭಾಗಗಳಲ್ಲಿ ಭಾರೀ ನೆರೆ ಸೃಷ್ಟಿಯಾಗಿದೆ. ಶಂಭೂರು ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿದೆ. ಸ್ಥಳೀಯ ನಿವಾಸಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಬೈಂದೂರಿನಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ

ಉಡುಪಿಯ ಬೈಂದೂರು ತಾಲೂಕಿನ ನಾಗೂರು ಉಡುಪರ ಹಿತ್ತಲಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪತ್ತೆಯಾಗಿದೆ. ತೋಟದಲ್ಲಿ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ತೇಲಾಡುತ್ತಿತ್ತು. ಮೊಸಳೆ ನೋಡಿ ಹೌಹಾರಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳು ಕಾಣ ಸಿಗುವುದೇ ಅಪರೂಪ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಾಗೂರಿನ ರತ್ನಾಕರ ಉಡುಪ ಎನ್ನುವವರ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಯತ್ನದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ತೇಲಿ ಬಂದಿರುವ ಶಂಕೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

Karnataka Rain : ಭಾರಿ ಮಳೆಗೆ ನಾನಾ ಅವಾಂತರವೇ ಸೃಷ್ಟಿಯಾಗಿದೆ. ಕೊಡಗಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತುಳಿದು ಜಾನುವಾರು ಮೃತಪಟ್ಟರೆ, ಹಾಸನದಲ್ಲಿ ಗರ್ಭಗುಡಿಯ ಎದುರು ನಾಗರಹಾವು ಪ್ರತ್ಯಕ್ಷಗೊಂಡಿತ್ತು. ಮತ್ತೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ.

VISTARANEWS.COM


on

By

karnataka Rain
Koo

ಕೊಡಗು: ಕೊಡಗು‌ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ವಿದ್ಯುತ್ ತಂತಿ ತುಂಡಾಗಿ ಬಿದ್ದು 6 ಜಾನುವಾರು ಮೃತಪಟ್ಟಿವೆ. ಗ್ರಾಮದ ರೈತ ಬೊಜ್ಜoಗಡ ನಟರಾಜ್ ಅವರಿಗೆ ಸೇರಿದ ಜಾನುವಾರು ಮೃತಪಟ್ಟಿವೆ. ಭಾರಿ ಮಳೆಗೆ 11 ಕೆವಿ ವಿದ್ಯುತ್ ತಂತಿ ರಸ್ತೆಗೆ ತುಂಡಾಗಿ ಬಿದ್ದಿತ್ತು. ಗದ್ದೆಯಿಂದ ಕೊಟ್ಟಿಗೆಗೆ ಸಾಲಾಗಿ ಬರುತ್ತಿದ್ದಾಗ ಕರೆಂಟ್‌ ಶಾಕ್‌ ಹೊಡೆದು, ಒಂದರ ಹಿಂದೆ ಒಂದು ಜಾನುವಾರುಗಳು ದುರ್ಮರಣ ಹೊಂದಿವೆ.

Karnataka Rain
Karnataka Rain

ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ಹೇಮಾವತಿ ಜಲಾಶಯದಲ್ಲಿ ಒಳಹರಿವು ಏರಿಕೆಯಾಗುತ್ತಲೇ ಇದೆ. ಹೇಮಾವತಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೇಮಾವತಿ ಜಲಾಶಯದಿಂದ ಹೊರಬಿಡುತ್ತಿರುವ ನೀರು ಧುಮ್ಮಿಕ್ಕುವುದನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ಬರುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಾಸನದ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಹಾಸನದಲ್ಲಿ ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿರುವ ಹೊಳೆಮಲ್ಲೇಶ್ವರ ದೇವಾಲಯದಲ್ಲಿ ಬೆಳ್ಳಂಬೆಳಿಗ್ಗೆ ನಾಗರಹಾವು ಪ್ರತ್ಯಕ್ಷಗೊಂಡಿದೆ. ಹೇಮಾವತಿ ನದಿ ದಡದಲ್ಲೆ ಇರುವ ಹೊಳೆಮಲ್ಲೇಶ್ವರ ದೇವಾಲಯವು ನದಿ ನೀರಿನಿಂದ ಜಲಾವೃತವಾಗಿದೆ. ಮಂಗಳವಾರ ದೇವಾಲಯದೊಳಗೆ ನಾಗರಹಾವು ಕಾಣಿಸಿಕೊಂಡಿದೆ. ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು ಕಂಡು ಜನರು ಆತಂಕಗೊಂಡಿದ್ದರು. ಹೇಮಾವತಿ ನದಿ ನೀರು ನುಗ್ಗಿರುವುದರಿಂದ ಗರ್ಭಗುಡಿ ಬಾಗಿಲು ಮುಚ್ಚಿತ್ತು.

ಮತ್ತೆ ತ್ರಿವೇಣಿ ಸಂಗಮ ಮುಳುಗಡೆ

ಬಿಟ್ಟು ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ಅಲ್ಲಲ್ಲಿ ಗುಡ್ಡದ ಸಣ್ಣ ಪ್ರಮಾಣದ ಮಣ್ಣು ಕುಸಿಯುತ್ತಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಇದೆ. ಇತ್ತ ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಕ್ಷೇತ್ರ ಮತ್ತೆ ಭರ್ತಿಯಾಗಿದೆ. ಮತ್ತೊಮ್ಮೆ ಭಗಂಡೇಶ್ವರ ದೇಗುಲದ ಮೆಟ್ಟಿಲವರೆಗೂ ನೀರು ಬಂದಿದೆ. ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿದೆ. ವಿದ್ಯುತ್ ಸಂಪರ್ಕ‌ ಕಲ್ಪಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ

ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ. ಭದ್ರಾ ನದಿಯ ಪ್ರವಾಹಕ್ಕೆ ರಸ್ತೆ ಮುಳುಗಿದ್ದು, ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಮೇಲೆ 8-10 ಅಡಿ ನೀರು ನಿಂತಿದೆ. ಇತ್ತ ಕಳಸ-ಹೊರನಾಡು-ಕೊಟ್ಟಿಗೆಹಾರ ಮಾರ್ಗವು ಸಂಪೂರ್ಣ ಬಂದ್ ಆಗಿದೆ. ಭದ್ರೆಯ ಅಬ್ಬರಕ್ಕೆ 20 ಮನೆಯ ಕುಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ. ಹಳ್ಳಿಯಿಂದ ಹೊರಬರಲು ಯಾವುದೇ ಮಾರ್ಗ ಇಲ್ಲದೆ ಪರದಾಟ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

ಬೆಳಗಾವಿಯಲ್ಲಿ ದನ ಮೇಯಿಸುವಾಗ ಕರಡಿ ದಾಳಿ

ಮನೆಗೆ ಮರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದೆ. ದನ ಮೇಯಿಸುವ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ‌ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದ ಬಳಿ ನಡೆದಿದೆ. ನಾರಾಯಣ ಚೌರಿ (65) ಕರಡಿ ದಾಳಿಗೆ ಒಳಗಾದವರು. ಕರಡಿ ದಾಳಿ ಮಾಡುತ್ತಿದ್ದಂತೆ ನಾರಾಯಣ ಚೌರಿ ಚಿರಾಡಿದ್ದಾರೆ. ಚಿರಾಟ ಕೇಳಿ ಓಡಿ ಬಂದಿದ್ದ ಅಕ್ಕ ಪಕ್ಕದ ಜನ ಓಡಿಸಿದ್ದಾರೆ. ನಾರಾಯಚ ಚೌರಿ ಬೆನ್ನು ಮೈಮೇಲೆ ಪರಚಿ ದಾಳಿ ಮಾಡಿದೆ. ಗಾಯಗೊಂಡ ನಾರಾಯಣ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯಪುರದಲ್ಲಿ ಜಾನುವಾರು ಕೊಂದ ಕಾಡು ಪ್ರಾಣಿ

ವಿಜಯಪುರದ ಕಂದಗನೂರ ಗ್ರಾಮದ ರೈತರು ಕಾಡು ಪ್ರಾಣಿಯ ಕಾಟಕ್ಕೆ ಆತಂಕಕ್ಕೆ ಒಳಗಾಗಿದ್ದಾರೆ. ಸಿದ್ರಾಮಪ್ಪ ಬೂಲಿ ಎಂಬ ರೈತನ ತೋಟದಲ್ಲಿದ್ದ ಆಕಳು ಕರು ಹಾಗೂ ಎಮ್ಮೆ ಕರುವನ್ನು ಕಾಡು ಪ್ರಾಣಿ ಕೊಂದು ಹಾಕಿದೆ. ಚಿರತೆ ಕೊಂದಿರಬಹುದೆಮದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಂದಗನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡು ಪ್ರಾಣಿ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು. ಬೋನ್ ಹಾಕಿದ್ದಾರೆ. ಇನ್ನೂ ಜಾನುವಾರಗಳ ಮೇಲೆ ಚಿರತೆ ಅಲ್ಲ ಕತ್ತೆಕಿರುಬ ಇರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Karnataka Rain : ಕೆಲವೆಡೆ ಬಿಡುವು ನೀಡಿದ್ದ ಮಳೆಯು ಮತ್ತೆ ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ಚಿಕ್ಕೋಡಿಯಲ್ಲಿ ಹೆಸ್ಕಾಂ ಸಿಬ್ಬಂದಿ ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ್ದಾರೆ. ಹಾಸನದಲ್ಲಿ ಶಾಲೆ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲೂ ಮಳೆಯ ( Karnataka Rain) ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ. ಮನೆಯಿಂದ ಹೊರಬರಲು ಆಗದೆ ಸಣ್ಣ ಬೋಟ್ ಬಳಸಿ ನೆರೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಶಾಲೆ, ಮದರಸ, ಸಂತೆ ಮಾರುಕಟ್ಟೆ, ಮನೆಗಳು ಜಲಾವೃತಗೊಂಡಿದೆ. ಸದ್ಯ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಬೋಟ್ ಬಳಕೆ ಮಾಡುವಂತಾಗಿದೆ.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆಯು ಕೋಡಿ ಹೊಡೆದಿದೆ. ಪರಿಣಾಮ ಭತ್ತ ನಾಟಿ ಮಾಡಿದ್ದ ಜಮೀನು ಜಲಾವೃತಗೊಂಡಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭೂ ಕುಸಿದಿದೆ. ಮಲ್ಲೇಶ್ವರ ಗುಡ್ಡದಲ್ಲಿ ಭಾರಿ ಪ್ರಮಾಣದ ಧರೆ ಕುಸಿದು, ರಸ್ತೆಯ ಅರ್ಧ ಭಾಗಕ್ಕೆ ಗುಡ್ಡದ ಮಣ್ಣು ಬಂದಿದೆ. 2019ರಲ್ಲಿ ಕುಸಿತ ಕಂಡಿದ್ದ ಸ್ಥಳದ ಸಮೀಪವೇ ಧರೆ ಕುಸಿದಿದೆ. ಬಾಳೆಹೊಳೆ, ಚನ್ನಹಡ್ಲು, ಬಾಳೆಹೊನ್ನೂರು ರಸ್ತೆಯಲ್ಲಿ ಘಟನೆ ನಡೆದಿದೆ.

ತುಂಗಾ ನದಿಯ ಅಬ್ಬರ ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಜಲಾವೃತವಾಗಿದ್ದು, ಅಂಗಡಿ ಮಳಿಗಗಳು, ಭಾರತಿ ತೀರ್ಥ ರಸ್ತೆಯೂ ಮುಳುಗಡೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿಯತ್ತ ಜನರ ಓಡಾಟಕ್ಕೆ ನಿಷೇಧ ಹೇರಲಾಗಿದೆ. ತಾತ್ಕಾಲಿಕವಾಗಿ ಸುಮಾರು 20ಕ್ಕೂ ಹೆಚ್ಚು ಅಂಗಡಿ ಮಳಿಗೆಗಳು ಕ್ಲೋಸ್ ಆಗಿವೆ. ಇನ್ನೂ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಮುಳುಗಡೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾ.ಹೆ.173ರ ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದ್ದರಿಂದ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಕಳೆದ ಮೂರು ದಿನದಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣ ಸೋಮವಾರ ರಾತ್ರಿಯಿಡೀ ಭಾರೀ ಮಳೆಗೆ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆ ಹರಿಯುತ್ತಿರೋ ನೀರಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಸೇತುವೆ ಜಲಾವೃತವಾಗಿದೆ. ಟಿಪ್ಪರ್ ಲಾರಿ ಚಾಲಕ ಸೇತುವೆ ಮೇಲೆ ಸಂಚರಿಸಲು ಹೋಗಿ ಭಯಗೊಂಡು ವಾಪಾಸ್‌ ಆಗಿದ್ದಾರೆ. ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

karnataka Rain
karnataka Rain

ಇದನ್ನೂ ಓದಿ: Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ ಹೆಸ್ಕಾಂ ಸಿಬ್ಬಂದಿ

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಕ್ಕೆ ಚಿಕ್ಕೋಡಿ ಉಪವಿಭಾಗದ ನದಿಗಳು ಸಮುದ್ರದಂತಾಗಿದೆ. ಪ್ರವಾಹ ಸಮಯದಲ್ಲಿ ಹೆಸ್ಕಾಂ ಸಿಬ್ಬಂದಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗುಳ ಗ್ರಾಮದಲ್ಲಿ ನೀರಿನಲ್ಲಿ ಧುಮುಕಿ ವಿದ್ಯುತ್ ಸರಿಪಡಿಸಿದ್ದಾರೆ. ಆನಂದ ಹೆರವಾಡಿ ಹೆಸ್ಕಾಂ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಬಳಿ ಇರುವ ಸೇತುವೆ ಜಲಾವೃತಗೊಂಡಿದೆ. ಅಥಣಿ ಗೋಕಾಕ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಕೃಷ್ಣಾ ನದಿ ದಂಡೆಯ 20 ಗ್ರಾಮಗಳಿಗೆ ನದಿ ನೀರು ಕಂಟಕ ಎದುರಾಗಿದೆ.

ಹಾಸನದಲ್ಲಿ ಶಾಲೆ ಜಲಾವೃತ

ಹಾಸನದಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಅರಕಲಗೂಡು ತಾಲೂಕಿನ ಯಗಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯು ಸಂಪೂರ್ಣ ಜಲಾವೃತಗೊಂಡಿತ್ತು. ಭಾರಿ ಮಳೆಗೆ ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದಲ್ಲಿ ಘಟನೆ ನಡೆದಿದೆ. ಮಠಸಾಗದ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತ ಗೊಂಡಿರುವುದರಿಂದ ಜನರು ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಮಠಸಾಗರ-ಕೃಷ್ಣಾಪುರ-ಸಕಲೇಶಪುರ ರಸ್ತೆ ಮುಳುಗಡೆಯಿಂದಾಗಿ ರಸ್ತೆ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು, ಗ್ರಾಮಸ್ಥರ ಪರದಾಡಿದರು.

ಬೇಲೂರು ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆಯು ಕೊಚ್ಚಿ ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಳ್ಳಕ್ಕಿ-ಮೈಲಹಳ್ಳಿ-ಆಲೂರು-ಬೇಲೂರು-ಕೋನೇರ್ಲು ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಟ್ ಆಗಿದೆ. ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿದೆ.

ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬೆಟ್ಟಿಗೇರಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರೆ ಜರಿದು ಕಾಂಕ್ರೀಟ್ ರಸ್ತೆ ಕುಸಿದು ಬೀಳುವ ಹಂತದಲ್ಲಿದೆ. ಶ್ರೀರಾಮ ಮತ್ತು ಶ್ರೀದೇವಿ ದೇವಸ್ಥಾನದ ರಸ್ತೆಯ ಸಮೀಪ ಬರೆ ಕುಸಿದು ಮಣ್ಣೆಲ್ಲ ಕೆಳಭಾಗದ ಗದ್ದೆಗೆ ಬಂದು ನಿಂತಿದೆ. ನಾಟಿಗೆ ತಯಾರಾಗಿದ್ದ ಭತ್ತದ ಗದ್ದೆಗೆ ಮಣ್ಣು, ನೀರು ನುಗ್ಗಿ ಅಪಾರ ಹಾನಿಯಾಗಿದೆ. 30 ಮನೆಗಳಿರುವ ಗ್ರಾಮಕ್ಕೆ ತೆರಳುವ ರಸ್ತೆ ಇದೀಗ ಅಪಾಯದಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Road Accident : ತುಮಕೂರಿನಲ್ಲಿ ಕಾರು-ಬೈಕ್‌ ಅಪಘಾತ; ಮಗಳು, ಮೊಮ್ಮಗಳ ಕಣ್ಣೇದುರೇ ಪ್ರಾಣಬಿಟ್ಟ ತಂದೆ

Road Accident : ತುಮಕೂರಿನಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ದಾರುಣವಾಗಿ ಮೃತಪಟ್ಟರೆ, ಇತ್ತ ಚಲಿಸುತ್ತಿದ್ದ ಬಸ್‌ನಿಂದ ಬಿದ್ದಿದ್ದ ವಿದ್ಯಾರ್ಥಿ ಅಸುನೀಗಿದ್ದಾನೆ. ಬಳ್ಳಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಗುಂಡಿಗಿಳಿದರೆ, ಚಾಮರಾಜನಗರದಲ್ಲಿ ಗೂಡ್ಸ್‌ ಆಟೋ ಪಲ್ಟಿಯಾಗಿದೆ.

VISTARANEWS.COM


on

By

Road Accident
ಚಾಮರಾಜನಗರದಲ್ಲಿ ಗೂಡ್ಸ್‌ ಆಟೋ ಪಲ್ಟಿ, ತುಮಕೂರಿನಲ್ಲಿ ಮೃತಪಟ್ಟ ಬೈಕ್‌ ಸವಾರ ನಾಗೇಶ್‌
Koo

ತುಮಕೂರು: ಇಂಡಿಕಾ ಕಾರು ಹಾಗೂ ಬೈಕ್ ನಡುವೆ ಅಪಘಾತ (Road Accident) ಸಂಭವಿಸಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟರೆ, ಒಂದು ವರ್ಷದ ಮಗು ಹಾಗೂ ತಾಯಿಗೆ ಗಂಭೀರ ಗಾಯಗೊಂಡಿದ್ದಾರೆ. ನಾಗೇಶ್ (60) ಮೃತ ದುರ್ದೈವಿ. ತುಮಕೂರು ಹೊರವಲಯದ ಮಲ್ಲಸಂದ್ರ ಬಳಿಯ ಕೆಎಂಎಫ್ ಡೈರಿ ಸಮೀಪ ಅಪಘಾತ ನಡೆದಿದೆ.

ಚನ್ನರಾಯನಪಟ್ಟಣ ತಾಲೂಕಿನ ಅಣತಿಕೋಡಿಹಳ್ಳಿ ನಿವಾಸಿಯಾಗಿದ್ದ ನಾಗೇಶ್, ಮಂಗಳವಾರ ಬೆಳಗ್ಗೆ ಮಲ್ಲಸಂದ್ರದಲ್ಲಿದ್ದ ಮಗಳ ಮನೆಗೆ ಬಂದಿದ್ದರು. ಕಾಗ್ಗೇರೆ ಬಳಿಯಿರುವ ದೇವಸ್ಥಾನದ ಕಾರ್ಯಕ್ರಮಕ್ಕೆ ಹೋಗಿ ಮನೆಗೆ ಹಿಂತಿರುವಾಗ ಅಪಘಾತ ನಡೆದಿದೆ.

ಇಂಡಿಕಾ ಕಾರು ಡಿಕ್ಕಿ ಹೊಡೆದು ಬೈಕ್‌ನಿಂದ ಕೆಳಗೆ ಬಿದ್ದ ನಾಗೇಶ್ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ನಾಗೇಶ್‌ ಅವರ ಮಗಳು ಸ್ವಾತಿ ಹಾಗೂ ಒಂದು ವರ್ಷದ ಮಗುವಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವಿಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇತ್ತ ಅಪಘಾತದ ಬಳಿಕ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Road Accident
Road Accident

ಬಳ್ಳಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗಿಳಿದ ಬಸ್‌

ಚಾಲಕನ ನಿಯಂತ್ರಣ ತಪ್ಪಿದ ಬಸ್‌ವೊಂದು ರಸ್ತೆ ಬದಿಯ ಗುಂಡಿಗಿಳಿದಿದೆ. ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮ ಬಳಿ ಅಪಘಾತ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಜನ ಪ್ರಯಾಣಿಕರು ಸಂಡೂರಿನಿಂದ ಅಂಕಮನಾಳ ಗ್ರಾಮಕ್ಕೆ ತೆರಳುತ್ತಿದ್ದರು. ಬಸ್ಸಿಗೆ ಅದಿರು ತುಂಬಿದ ಲಾರಿ ಎದುರಿಗೆ ಬಂದಿದ್ದು, ಲಾರಿ ತಪ್ಪಿಸಲು ಹೋಗಿ‌ ಬಸ್‌ ಗುಂಡಿಗಳಿದಿದೆ. ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಗುಂಡಿಯಿಂದ ಹೊರ ಬಾರದೆ ಬಸ್‌ ಲಾಕ್‌ ಆಗಿತ್ತು.

Road Accident
Road Accident

ಚಾಮರಾಜನಗರದಲ್ಲಿ ಗೂಡ್ಸ್‌ ಆಟೋ ಪಲ್ಟಿ

ಚಾಮರಾಜನಗರದ ಹೊನ್ನಳ್ಳಿ ಗ್ರಾಮದ ಸಮೀಪ ಗೂಡ್ಸ್ ಆಟೋ ಪಲ್ಟಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಹಿಳೆಯರು ಕೂಲಿ ಕೆಲಸಕ್ಕೆಂದು ಅಮಚವಾಡಿ ಗ್ರಾಮದಿಂದ ನಿಜಲಿಂಗನಪುರಕ್ಕೆ ಗೂಡ್ಸ್ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಗಾಯಾಳುಗಳಿಗೆ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Road Accident
Road Accident

ದಾವಣಗೆರೆಯಲ್ಲಿ ಬೈಕ್ ಹಾಗೂ ಕೆಎಸ್ಆರ್‌ಟಿಸ್‌ ನಡುವೆ ಅಪಘಾತ

ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಬಸ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಬೈಕ್ ಸವಾರ ರಸ್ತೆ ದಾಟುವಾಗ ಏಕಾಏಕಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಕೆಎಸ್ಆರ್ಟಿಸಿ ಬಸ್ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಬಸ್‌ನಿಂದ ಬಿದ್ದಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನಿನ್ನೆ ಸೋಮವಾರ ಚಲಿಸುತ್ತಿದ್ದ ಬಸ್‌ನಿಂದ ಬಿದ್ದ ವಿದ್ಯಾರ್ಥಿ ಹಿಂಬದಿ ಚಕ್ರಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ. ಇದೀಗ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾನೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನಿಹಟ್ಟಿ ಪಿ ಎ ಗ್ರಾಮದಲ್ಲಿ ಘಟನೆ ನಡೆದಿದೆ. ಸರ್ಕಾರಿ ಬಸ್ ಮೂಲಕ ಶಾಲೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿತ್ತು.

ಸಿಂದಗಿ ಪಟ್ಟಣದ ಎಚ್‌ಜಿ ಹೈಸ್ಕೂಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಸಂದೀಪ ಶಿವಪ್ಪ ಗಿಡ್ಡನಗೋಳ ಮೃತ ದುರ್ದೈವಿ. ಗಂಭೀರ ಗಾಯಗೊಂಡಿದ್ದ ಸಂದೀಪ್‌ನನ್ನು ಸಿಂದಗಿ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಮೃತಪಟ್ಟಿದ್ದಾನೆ. ಇತ್ತ ಈ ಘಟನೆ ಖಂಡಿಸಿ ಬನ್ನಿಹಟ್ಟಿ ಪಿ ಎ ಹಾಗೂ ಸಿಂದಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ವಿದ್ಯಾರ್ಥಿ ಸಾವಿನಿಂದ ಬನ್ನಿಹಟ್ಟಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Nirmala Sitharaman
ದೇಶ4 seconds ago

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲೂ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Paris Olympics 2024
ಪ್ರಮುಖ ಸುದ್ದಿ9 mins ago

Paris Olympics 2024 : 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ ಫೆನ್ಸಿಂಗ್​ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಪಂದ್ಯ ಗೆದ್ದ ಈಜಿಫ್ಟ್​​ನ ನಾದಾ ಹಫೀಜ್​

karnataka Rain
ಮಳೆ31 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ44 mins ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ50 mins ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ54 mins ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

8th Pay Commission
ದೇಶ60 mins ago

8th Pay Commission: 8ನೇ ವೇತನ ಆಯೋಗ ಜಾರಿಯಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

Richest Cricketers
ಕ್ರಿಕೆಟ್60 mins ago

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

Puneeth Kerehalli
ಕರ್ನಾಟಕ1 hour ago

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

IPL 2025
ಕ್ರಿಕೆಟ್1 hour ago

IPL 2025: ಬಿಸಿಸಿಐ ಈ ನಿಯಮ ಜಾರಿಗೆ ತಂದರೆ ಧೋನಿ ಮುಂದಿನ ಐಪಿಎಲ್​ ಆಡುವುದು ಅನುಮಾನ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ31 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ24 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌