Swami koragajja : ಕೊರಗಜ್ಜನ ಕೋಲಕ್ಕೆ ಅಡ್ಡಿ ಆಗದಿರಲಿ ಎಂದು ರೋಡ್‌ ಶೋವನ್ನೇ ರದ್ದು ಮಾಡಿದ ಅಮಿತ್‌ ಶಾ! - Vistara News

ಕರ್ನಾಟಕ

Swami koragajja : ಕೊರಗಜ್ಜನ ಕೋಲಕ್ಕೆ ಅಡ್ಡಿ ಆಗದಿರಲಿ ಎಂದು ರೋಡ್‌ ಶೋವನ್ನೇ ರದ್ದು ಮಾಡಿದ ಅಮಿತ್‌ ಶಾ!

ಫೆಬ್ರವರಿ 11ರಂದು ಅಮಿತ್‌ ಶಾ ಅವರು ಮಂಗಳೂರಿಗೆ ಬಂದಾಗ ರೋಡ್‌ ಶೋ ಆಯೋಜಿಸಲಾಗಿತ್ತು. ಆದರೆ ಅದು ಸಾಗುವ ದಾರಿಯಲ್ಲಿ ಕೊರಗಜ್ಜನ ಕೋಲವೂ (Swami koragajja) ನಿಗದಿಯಾಗಿದೆ. ಅದಕ್ಕೆ ತೊಂದರೆ ಆಗದಿರಲಿ ಎಂಬ ಕಾರಣಕ್ಕೆ ರೋಡ್‌ ಶೋವನ್ನೇ ರದ್ದು ಮಾಡಲಾಗಿದೆ.

VISTARANEWS.COM


on

Amit shah koragajja
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಗಳೂರು: ಕರಾವಳಿ ಭಾಗದಲ್ಲಿ ಜನರು ಅತ್ಯಂತ ಭಕ್ತಿ ಭಾವದಿಂದ ನಡೆದುಕೊಳ್ಳುವ ಕೊರಗಜ್ಜ ದೈವದ (Swami koragajja) ಕಾರಣಿಕದ ಮುಂದೆ ಸ್ವತಃ ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೇ ತಲೆ ಬಾಗಿದ್ದಾರೆ. ಕೊರಗಜ್ಜನ ಕೋಲಕ್ಕೆ ಯಾವ ಕಾರಣಕ್ಕೂ ಸಮಸ್ಯೆ ಆಗಬಾರದು ಎಂಬ ಕಾರಣಕ್ಕೆ ತಮ್ಮ ನಿಯೋಜಿತ ರೋಡ್‌ ಶೋವನ್ನೇ ರದ್ದುಪಡಿಸಿದ್ದಾರೆ.

ಕೇಂದ್ರ ಗೃಹ ಸಚಿವರು ಫೆಬ್ರವರಿ ೧೧ರಂದು ಕರಾವಳಿಯಲ್ಲಿ ಕೆಲವೊಂದು ಸರ್ಕಾರಿ ಕಾರ್ಯಕ್ರಮ, ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುವುದಕ್ಕಾಗಿ ಆಗಮಿಸುತ್ತಿದ್ದಾರೆ. ಈ ವೇಳೆ ಅವರು ಮಂಗಳೂರಿನಲ್ಲಿ ಒಂದು ರೋಡ್‌ ಶೋ ನಡೆಸಲು ಪ್ಲ್ಯಾನ್‌ ಆಗಿತ್ತು. ವಿಮಾನ ನಿಲ್ದಾಣದಿಂದ ಬರುವ ಮಾರ್ಗದಲ್ಲಿ ಕಾವೂರಿನಿಂದ ಪದವಿನಂಗಡಿ-ಮೇರಿಹಿಲ್‌ ಅವರಿಗೆ ಸುಮಾರು ಎರಡೂವರೆ ಕಿ.ಮೀ. ಉದ್ದಕ್ಕೆ ರೋಡ್‌ ಶೋನಲ್ಲಿ ಅವರು ಭಾಗವಹಿಸುವುದೆಂದು ತೀರ್ಮಾನವಾಗಿತ್ತು. ರಸ್ತೆಯ ಇಕ್ಕೆಲಗಳಲ್ಲಿ ಸುಮಾರು ೩೦೦೦೦ ಜನರನ್ನು ಸೇರಿಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದರು.

ಅಮಿತ್‌ ಶಾ ಅವರು ವಿಮಾನ ನಿಲ್ದಾಣದಿಂದ ಕಾವೂರುವರೆಗೆ ಬಂದು ಅಲ್ಲಿಂದ ಪದವಿನಂಗಡಿ ಅಥವಾ ಮೇರಿಹಿಲ್‌ವರೆಗೆ ರೋಡ್‌ ಶೋ ನಡೆಸಿ ಬಳಿಕ ಅಲ್ಲಿ ಒಂದು ಸಭಾಂಗಣದಲ್ಲಿ ಉನ್ನತ ನಾಯಕರ ಜತೆ ಚರ್ಚೆ ನಡೆಸುವ ವ್ಯವಸ್ಥೆ ಮಾಡಲಾಗಿತ್ತು. ಯಾವ ಸಭಾಂಗಣ ಎನ್ನುವುದನ್ನು ತಾಂತ್ರಿಕ ಕಾರಣಗಳಿಗಾಗಿ ಬಯಲು ಮಾಡಿರಲಿಲ್ಲ.

ಪದವಿನಂಗಡಿಯಲ್ಲಿರುವ ಕೊರಗಜ್ಜನ ಗುಡಿ

ಈ ನಡುವೆ, ರೋಡ್‌ ಶೋ ದಾರಿಯಲ್ಲಿ ಬೋಂದೆಲ್‌ನಿಂದ ಪದವಿನಂಗಡಿ ನಡುವೆ ಬರುವ ಕೊರಗಜ್ಜನ ಒಂದು ಗುಡಿಯೊಂದಿದ್ದು ಫೆಬ್ರವರಿ ೧೧ರಂದು ಕೋಲ ನಡೆಯಲಿದೆ ಎನ್ನುವ ವಿಷಯ ಬಿಜೆಪಿ ನಾಯಕರಿಗೆ ಗೊತ್ತಾಗಿದೆ. ಈ ಗುಡಿ ಪ್ರಧಾನ ರಸ್ತೆಯ ಪಕ್ಕದಲ್ಲೇ ಇದ್ದು ಕೋಲ ನಡೆಯುವ ಸಂದರ್ಭದಲ್ಲಿ ಇಲ್ಲಿ ಸಾಕಷ್ಟು ಜನರು ಭಾಗವಹಿಸುತ್ತಾರೆ.

ರೋಡ್‌ ಶೋ ಮಾಡಬೇಕು ಎಂದಿದ್ದರೆ ಈ ಭಾಗದಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಮತ್ತು ಭದ್ರತೆಗೂ ತೊಂದರೆ ಆಗುತ್ತದೆ. ತುಂಬಾ ಜನರ ಸೇರಲು ಅವಕಾಶವಿರುವುದಿಲ್ಲ. ಹೀಗಾಗಿ ಇದನ್ನು ಗಮನಿಸಿದ ಸಂಘಟಕರು ಅಮಿತ್‌ ಶಾ ಅವರಿಗೆ ವಿಷಯ ತಿಳಿಸಿದರು ಎನ್ನಲಾಗಿದೆ. ಯಾವ ಕಾರಣಕ್ಕೂ ಕೊರಗಜ್ಜನ ಕೋಲಕ್ಕೆ ತೊಂದರೆಯಾಗಬಾರದು, ಬೇಕಿದ್ದರೆ ರೋಡ್‌ ಶೋ ರದ್ದು ಮಾಡಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದೀಗ ಮಂಗಳೂರಿನಲ್ಲಿ ಆಯೋಜನೆಗೊಂಡಿರುವ ಈ ರೋಡ್‌ ಶೋವನ್ನೇ ರದ್ದು ಮಾಡಲಾಗಿದೆ. ಪದವಿನಂಗಡಿ-ಮೇರಿಹಿಲ್‌ನಲ್ಲಿ ಆಯೋಜಿಸಲಾಗಿರುವ ಸಭೆಯನ್ನು ವಿಮಾನ ನಿಲ್ದಾಣದ ಬಳಿಯೇ ಇನ್ನೊಂದು ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading
Advertisement
Latest47 minutes ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest24 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest1 day ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌