Valentines week : ಮನಸ್ಸನ್ನು ಹಗುರಾಗಿಸುವ ಹಗ್‌ ಡೇ; ಏನಿದರ ಮಹತ್ವ? ಆಚರಣೆ ಹೇಗೆ? - Vistara News

Latest

Valentines week : ಮನಸ್ಸನ್ನು ಹಗುರಾಗಿಸುವ ಹಗ್‌ ಡೇ; ಏನಿದರ ಮಹತ್ವ? ಆಚರಣೆ ಹೇಗೆ?

ಪ್ರೇಮಿಗಳ ದಿನಕ್ಕೆ (Valentines week) ಎರಡು ದಿನ ಮೊದಲು ಬರುವುದು ಹಗ್‌ ಡೇ ಅಂದರೆ ಅಪ್ಪುಗೆಯ ದಿನ. ಈ ದಿನದ ವಿಶೇಷತೆಯೇನು? ಅಪ್ಪುಗೆಯಿಂದಾಗಿ ಏನು ಲಾಭ ಎನ್ನುವುದರ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಇದು ಪ್ರೇಮಿಗಳ ವಾರ(Valentines week). ಪ್ರೀತಿ ಪಾತ್ರರಿಗೆ ಪ್ರೀತಿ ಹೇಳಿಕೊಳ್ಳುವುದರಲ್ಲಿ, ಪ್ರೀತಿ ತೋರಿಸುವುದರಲ್ಲಿ ಇಡೀ ಜಗತ್ತೇ ನಿರತವಾಗಿದೆ. ಫೆ.14ಕ್ಕೆ ಬರುವ ಪ್ರೇಮಿಗಳ ದಿನಕ್ಕೂ ಮೊದಲೇ ಕಿಸ್‌ ಡೇ, ಪ್ರಾಮಿಸ್‌ ಡೇ, ಚಾಕೋಲೇಟ್‌ ಡೇನಂತಹ ವಿಶೇಷ ದಿನಗಳಲ್ಲಿ ಆಚರಿಸಿ, ವಿಶೇಷವಾಗಿ ಪ್ರೀತಿ ಹೇಳಿಕೊಳ್ಳಲಾಗುತ್ತಿದೆ. ಅದರಲ್ಲಿ ಒಂದು ವಿಶೇಷವೆಂದರೆ ಈ ಹಗ್‌ ಡೇ.

ಇದನ್ನೂ ಓದಿ: Cow Hug Day: ಪ್ರೇಮಿಗಳ ದಿನದಂದು ‘ಗೋವುಗಳನ್ನು ಅಪ್ಪುವ ದಿನ’ ಆಚರಿಸಿ, ಅನಿಮಲ್‌ ವೆಲ್‌ಫೇರ್‌ ಬೋರ್ಡ್‌ ನೋಟಿಸ್
ಹಗ್‌ ಡೇ ಅಥವಾ ಅಪ್ಪುಗೆಯ ದಿನವನ್ನು ಪ್ರೇಮಿಗಳ ವಾರದ ಆರನೇ ದಿನವಾಗಿ ಆಚರಿಸಲಾಗುತ್ತದೆ. ಪ್ರಾಮಿಸ್‌ ಡೇ ನಂತರ ಹಾಗೂ ಕಿಸ್‌ ಡೇಗೂ ಮೊದಲು ಬರುವ ಈ ದಿನ ಅದರದ್ದೇ ಆದ ವಿಶೇಷತೆಯನ್ನು ಹೊಂದಿದೆ.
ಪ್ರೀತಿಯೇ ಒಂದು ರೀತಿಯಲ್ಲಿ ಪವಾಡ. ಅದು ಮನಸ್ಸಿನಲ್ಲಿ ತುಂಬಿದ್ದಾಗ ಮಾತುಗಳೂ ಹೊರಡುವುದು ಕಷ್ಟವೇ. ಹೀಗಿರುವಾಗ ಪ್ರೀತಿ ಹೇಳಿಕೊಳ್ಳುವುದು ದೊಡ್ಡದೊಂದು ಸಾಹಸವಿದ್ದಂತೆ. ಆದರೆ ಎಷ್ಟೋ ಬಾರಿ ಬಾಯಿಯಲ್ಲಿ ಹೇಳಲಾಗದ್ದನ್ನು ಈ ಪ್ರೀತಿಯ ಅಪ್ಪುಗೆ ಮಾಡಿ ತೋರಿಸುತ್ತದೆ. ಪ್ರೀತಿಯ ಆಳ ಎಷ್ಟಿದೆ ಎನ್ನುವುದನ್ನೂ ಅಪ್ಪುಗೆಯಲ್ಲೇ ಹೇಳಬಹುದು ಹಾಗೆಯೇ ನಾನೆಂದೆಂದಿಗೂ ನಿನ್ನೊಡನಿದ್ದೇನೆ ಎನ್ನುವುದನ್ನೂ ಇದೇ ಅಪ್ಪುಗೆಯಲ್ಲೇ ತಿಳಿಸಬಹುದು. ಅಂತಹ ವಿಶೇಷವಾದ ಅಪ್ಪುಗೆಯನ್ನು ನೀಡಿ, ಪ್ರೀತಿ ಪಾತ್ರರ ಬದುಕನ್ನು ಹಂಚಿಕೊಳ್ಳುವ ಭರವಸೆ ನೀಡುವುದಕ್ಕೆಂದೇ ಈ ವಿಶೇಷ ದಿನವನ್ನು ಆಚರಿಸಲಾಗುತ್ತದೆ.


ವೈಜ್ಞಾನಿಕ ಕೊಡುಗೆ:
ಅಂದ ಹಾಗೆ ಅಪ್ಪುಗೆಯಿಂದ ಮನಸ್ಸು ಹಗುರಾಗುತ್ತದೆ ಎನ್ನುವ ವಿಚಾರವನ್ನು ನಾವೆಲ್ಲರೂ ಒಪ್ಪಿಯೇ ಒಪ್ಪುತ್ತೇವೆ. ಅದಕ್ಕೆ ವೈಜ್ಞಾನಿಕ ಕಾರಣ ಇದೆ ಕೂಡ. ಎರಡು ದೇಹಗಳು ಅಪ್ಪಿಕೊಂಡಾಗ ದೇಹದಲ್ಲಿ ಆಕ್ಸಿಟೋಸಿಸ್‌ ಬಿಡುಗಡೆಯಾಗುತ್ತದೆ. ಇದು ಮನಸ್ಸಿನ ಒತ್ತಡ, ಆತಂಕ ಮತ್ತು ಖಿನ್ನತೆಯನ್ನು ಕಡಿಮೆ ಮಾಡುವುದಕ್ಕೆ ಸಹಾಯ ಮಾಡುತ್ತದೆ. ಹಾಗೆಯೇ ದೇಹದಲ್ಲಿನ ರಕ್ತದೊತ್ತಡವನ್ನು ಕಡಿಮೆ ಮಾಡುವುದಕ್ಕೆ ಮತ್ತು ಇಮ್ಯೂನಿಟಿ ಸಿಸ್ಟಂ ಅನ್ನು ಹೆಚ್ಚಿಸುವುದಕ್ಕೂ ಸಹಕಾರಿ. ಈ ಕಾರಣಗಳಿಂದಾಗಿ ನಮಗೆ ಅಪ್ಪುಗೆಯಿಂದಾಗಿ ಮನಸ್ಸಿಗೆ ಉಲ್ಲಾಸವುಂಟಾಗುತ್ತದೆ. ಅಪ್ಪುಗೆಯು ಪ್ರೀತಿ, ಸಾಂತ್ವನ ಮತ್ತು ಬೆಂಬಲವನ್ನು ವ್ಯಕ್ತಪಡಿಸುವ ಮೌಖಿಕ ಮಾರ್ಗವಾಗಿದೆ. ಇದು ಸರಳವಾದ ವಿಚಾರವೇ ಆದರೂ ಜೀವನದ ಮೇಲೆ ದೊಡ್ಡ ಪರಿಣಾಮ ಬೀರಬಹುದಾಗಿದೆ.


ಅಪ್ಪುಗೆಯಲ್ಲೂ ಇದೆ ವಿಧಗಳು:
ಅಪ್ಪುಗೆ ಎಂದ ಮಾತ್ರಕ್ಕೆ ಒಂದೇ ಬಗೆಯ ಅಪ್ಪುಗೆ ಎಂದೇನಲ್ಲ. ಅಪ್ಪಿಕೊಳ್ಳುವುದಕ್ಕೂ ಹಲವಾರು ಬಗೆಯಿದೆ. ಹಾಗೆಯೇ ಪ್ರತಿಯೊಂದು ಬಗೆಗೂ ಅದರದ್ದೇ ಆದ ಅರ್ಥವಿದೆ.


ಬೀರ್‌ ಹಗ್‌:


ಈ ರೀತಿಯ ಅಪ್ಪುಗೆಯು ಆರೋಗ್ಯಕರ ಸಂಬಂಧದ ಅತ್ಯುತ್ತಮ ಸೂಚನೆಯಾಗಿದೆ. ಲೈಂಗಿಕತೆಯನ್ನು ಮೀರಿದ ಅನ್ಯೋನ್ಯತೆ, ನಂಬಿಕೆ ಮತ್ತು ರಕ್ಷಣೆಯ ಸಂಕೇತವಾಗಿದೆ.


ಬ್ಯಾಕ್‌ ಹಗ್‌:


ಬೀರ್‌ ಹಗ್‌ನಂತೆಯೇ, ಹಿಂದಿನಿಂದ ಯಾರನ್ನಾದರೂ ಬಿಗಿಯಾಗಿ ತಬ್ಬಿಕೊಳ್ಳುವುದು ಸಂಬಂಧದ ಮತ್ತೊಂದು ನಿರ್ಣಾಯಕ ತೋರಿಕೆಯಾಗಿದೆ. ಈ ರೀತಿ ಸಂಗಾತಿಯನ್ನು ತಬ್ಬಿಕೊಳ್ಳುವುದು ಜೀವನದಲ್ಲಿ ತಮ್ಮ ರಕ್ಷಕನಾಗಿರುತ್ತೇನೆ ಹಾಗೂ ಯಾವುದೇ ಸಮಸ್ಯೆ ಆಗುವುದಕ್ಕೆ ಬಿಡುವುದಿಲ್ಲ ಎಂದು ಹೇಳುವ ಈ ದೈಹಿಕ ಭಾಷೆಯಾಗಿದೆ.


ಫ್ರೆಂಡ್ಲಿ ಹಗ್‌:


ಈ ಅಪ್ಪುಗೆಯು ನಿಮ್ಮ ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ನೀವು ನೀಡಬಹುದಾದ ಸುರಕ್ಷಿತ ರೀತಿಯ ಅಪ್ಪುಗೆಗಳಲ್ಲಿ ಒಂದು. ಬೆನ್ನನ್ನು ತಟ್ಟಿ ಅಪ್ಪಿಕೊಳ್ಳುವುದು ಯಾರಿಗಾದರೂ ನೀವು ಅವರಿಗಾಗಿ ಇದ್ದೀರಿ, ನೀವು ಅವರ ಬಗ್ಗೆ ಕಾಳಜಿ ವಹಿಸುತ್ತೀರಿ ಎಂದು ತೋರಿಸುವ ಮಾರ್ಗವಾಗಿದೆ.


ಸೈಡ್‌ ಹಗ್‌:


ವ್ಯಕ್ತಿಯ ಒಂದು ಬದಿಯಲ್ಲಿ ನಿಂತು ಅವರ ಸೊಂಟ ಅಥವಾ ಭುಜದ ಸುತ್ತ ತೋಳುಗಳಿಂದ ತಬ್ಬಿಕೊಳ್ಳುವುದನ್ನು ಸೈಡ್ ಹಗ್ ಎಂದು ಕರೆಯಲಾಗುತ್ತದೆ. ಈ ಅಪ್ಪುಗೆಯು ಹೆಚ್ಚೇನು ಸ್ನೇಹಿತರಲ್ಲದ ಪರಿಚಯಸ್ಥರಲ್ಲಿ ಸಾಮಾನ್ಯವಾಗಿದೆ.


ವೈಸ್ಟ್‌ ಹಗ್‌:
ಈ ರೀತಿಯ ಅಪ್ಪುಗೆಯಲ್ಲಿ ಇಬ್ಬರ ಸೊಂಟಗಳು ಸಂಪೂರ್ಣವಾಗಿ ತಬ್ಬಿಕೊಂಡಿರುತ್ತವೆ. ಅವರ ತೋಳುಗಳು ಪರಸ್ಪರರ ಸೊಂಟದ ಸುತ್ತಲೂ ಇರುತ್ತದೆ. ಇದು ಪ್ರಣಯದ ಅಪ್ಪುಗೆಯಾಗಿದೆ. ಇದು ನಿಮ್ಮ ಸಂಬಂಧದಲ್ಲಿ ಎಷ್ಟು ಪ್ರೀತಿ ಮತ್ತು ವಾತ್ಸಲ್ಯ ಇದೆ ಎನ್ನುವುದನ್ನು ತೋರಿಸುತ್ತದೆ.


ಐ ಕಾಂಟ್ಯಾಕ್ಟ್‌ ಹಗ್‌:


ಇದು ನಿಮ್ಮ ಸಂಬಂಧದ ಭೌತಿಕ ಅಂಶಗಳನ್ನು ಮೀರಿ ಹೋಗಲು ಅನುಮತಿಸುವ ರೀತಿಯ ಅಪ್ಪುಗೆಗಳಲ್ಲಿ ಒಂದಾಗಿದೆ.

ಹಗ್‌ ಡೇ ಆಚರಣೆ ಹೇಗೆ?
ಈ ವರ್ಷದ ಹಗ್‌ ಡೇ ಫೆ.12ರಂದು ಇದೆ. ಭಾನುವಾರವಾಗಿರುವ ಈ ದಿನ ನೀವು ನಿಮ್ಮ ಅದೆಷ್ಟೇ ಬಿಜಿ ಇದ್ದರೂ ನಿಮ್ಮ ಪ್ರೀತಿ ಪಾತ್ರರಿಗಾಗಿ ಬಿಡುವು ಮಾಡಿಕೊಳ್ಳಿ. ಅವರ ಬಳಿಗೆ ಹೋಗಿ ಪ್ರೀತಿಯಿಂದ ಅಪ್ಪುಗೆ ನೀಡಿ. ಈ ರೀತಿ ಮಾಡಿದಾಗ ಬೇರೆ ಯಾವುದೇ ಮಾತಿನ ಅವಶ್ಯಕತೆಯೂ ಇರುವುದಿಲ್ಲ. ನಿಮ್ಮ ಅಪ್ಪುಗೆಯೇ ನಿಮ್ಮ ಪ್ರೀತಿಯನ್ನು ಅವರಿಗೆ ತಿಳಿಸಿರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

VISTARANEWS.COM


on

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಇಂದು ಅಂಚೆ ಮತಗಳ ಮರು ಎಣಿಕೆ ಮಾಡಲಾಯಿತು. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು.
ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ.ರಾಜೇಗೌಡ ಅವರು ಜಯಭೇರಿ ಬಾರಿಸಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

VISTARANEWS.COM


on

ಪಶ್ಚಿಮ ಬಂಗಾಳದ ಚುನಾವಣೋತ್ತರ ಸಮೀಕ್ಷೆಯ ಟ್ರೆಂಡ್‌ ಪಕ್ಕದ ಬಾಂಗ್ಲಾದೇಶಕ್ಕೆ ಆತಂಕ ಉಂಟುಮಾಡಿದೆ. ಎಂಟು ಎಕ್ಸಿಟ್‌ ಪೋಲ್‌ಗಳ ಪೈಕಿ ಆರು ಸಮೀಕ್ಷೆಗಳು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ಸೂಚನೆ ನೀಡಿವೆ. ಈ ಮುನ್ಸೂಚನೆಯೇ ಬಾಂಗ್ಲಾದೇಶದ ಆತಂಕಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಸಂಸದ ಆಖ್ತರ್‌ ಹೊಸೈನ್‌ ಈ ವಿಷಯವನ್ನು ಅಲ್ಲಿನ ಸಂಸತ್ತಿನಲ್ಲಿ ಎತ್ತಿದ್ದಾರೆ. “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಅದು ಅಲ್ಲಿನ ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ಹೊರಗಟ್ಟುತ್ತದೆ. ಇದು ಬಾಂಗ್ಲಾದೇಶದಲ್ಲಿ ಅತಿದೊಡ್ಡ ಮಾನವೀಯ, ಅರ್ಥಿಕ ಹಾಗೂ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ. ಇದು ನಮ್ಮ ಅತಿದೊಡ್ಡ ಆತಂಕಕ್ಕೆ ಕಾರಣವಾಗಿದೆʼʼ ಎಂದು ಹೇಳಿದ್ದಾರೆ.
ಗಡಿದಾಟಿ ಭಾರತಕ್ಕೆ ಬಂದಿರುವ ಅಕ್ರಮ ಬಾಂಗ್ಲಾ ದೇಶಿ ನುಸುಳುಕೋರರನ್ನು ಬಿಜೆಪಿ ಹೊರಗಟ್ಟಿದರೆ ಅವರಿಗೆ ಹೊಸ ನೆಲೆ ಕಲ್ಪಿಸುವುದು ಹೇಗೆ ಎಂಬ ಚಿಂತೆ ಬಾಂಗ್ಲಾದೇಶವನ್ನು ಕಾಡುತ್ತಿದೆ. ಬಾಂಗ್ಲಾದೇಶದ ಅಕ್ರಮ ನುಸುಳುಕೋರರ ಸಮಸ್ಯೆಯೇ ಪಶ್ಚಿಮ ಬಂಗಾಳದ ಅತಿದೊಡ್ಡ ಚುನಾವಣಾ ವಿಷಯವಾಗಿತ್ತು. ಅಧಿಕಾರಕ್ಕೇರಿದ ತಕ್ಷಣವೇ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವುದಾಗಿ ಬಿಜೆಪಿ ಹೇಳಿತ್ತು.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading
Advertisement
Latest13 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest19 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest20 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌