ಅದಾನಿ ಗ್ರೂಪ್‌ಗೇ ವಿದ್ಯುತ್‌ ಯೋಜನೆ ನೀಡಲು ಲಂಕಾದ ಮೇಲೆ ಮೋದಿ ಒತ್ತಡ ಹಾಕಿದ್ರಾ? ಇಲ್ಲ ಎಂದ ರಾಜಪಕ್ಸ - Vistara News

ದೇಶ

ಅದಾನಿ ಗ್ರೂಪ್‌ಗೇ ವಿದ್ಯುತ್‌ ಯೋಜನೆ ನೀಡಲು ಲಂಕಾದ ಮೇಲೆ ಮೋದಿ ಒತ್ತಡ ಹಾಕಿದ್ರಾ? ಇಲ್ಲ ಎಂದ ರಾಜಪಕ್ಸ

ಲಂಕಾದ ವಿದ್ಯುತ್‌ ಯೋಜನೆಗಳ ಬಗ್ಗೆ ಅಲ್ಲಿನ ವಿದ್ಯುತ್‌ ಇಲಾಖೆ ಉನ್ನತ ಅಧಿಕಾರಿ ಆಡಿರುವ ಮಾತು ಭಾರಿ ಚರ್ಚೆಗೆ ಗ್ರಾಸವಾಗಿದೆ. ಅದಾನಿಗೆ ವಿದ್ಯುತ್‌ ಯೋಜನೆ ನೀಡಲು ಮೋದಿ ಒತ್ತಡ ಹೇರಿದ್ದಾರೆ ಎಂಬುದನ್ನು ಲಂಕಾ ನಿರಾಕರಿಸಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಶ್ರೀಲಂಕಾದಲ್ಲಿ ಸ್ಥಾಪನೆಯಾಗಲಿರುವ ವಿದ್ಯುತ್‌ ಯೋಜನೆಯೊಂದನ್ನು ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್ಸ್‌ಗೇ ನೀಡಬೇಕು ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಒತ್ತಡ ಹಾಕಿದ್ದಾರೆ ಎಂಬ ಅಲ್ಲಿನ ಹಿರಿಯ ಅಧಿಕಾರಿಯೊಬ್ಬರ ಹೇಳಿಕೆ ಬಿರುಗಾಳಿ ಎಬ್ಬಿಸಿದೆ. ಆದರೆ, ಈ ಅಧಿಕಾರಿಯೇ ಇದೀಗ ತಮ್ಮ ಹೇಳಿಕೆಯನ್ನು ಹಿಂದೆ ಪಡೆದಿದ್ದಾರೆ. ಜತೆಗೆ ಶ್ರೀಲಂಕಾದ ಅಧ್ಯಕ್ಷ ಗೊಟಬೊಯಾ ರಾಜಪಕ್ಸ ಕೂಡಾ ಇಂಥ ಯಾವ ಒತ್ತಡವೂ ಇಲ್ಲ ಎಂದು ಹೇಳಿದ್ದಾರೆ.

ಶ್ರೀಲಂಕಾದ ಉತ್ತರ ಮನ್ನಾರ್‌ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿರುವ 500 ಮೆಗಾ ವ್ಯಾಟ್‌ ಸಾಮರ್ಥ್ಯದ ನವೀಕರಿಸಬಲ್ಲ ವಿದ್ಯುತ್‌ ಮೂಲಗಳ ಯೋಜನೆಯನ್ನು ಗೌತಮ್‌ ಅದಾನಿ ಅವರ ಕಂಪನಿಗೇ ಕೊಡಬೇಕು ಎಂದು ತನ್ನ ಮೇಲೆ ಭಾರಿ ಒತ್ತಡವಿದೆ ಎಂದು ಅಧ್ಯಕ್ಷ ರಾಜಪಕ್ಸ ತನ್ನ ಮುಂದೆ ಹೇಳಿಕೊಂಡಿದ್ದಾರೆ ಎಂದು ಶ್ರೀಲಂಕಾದ ಸಿಲೋನ್‌ ಎಲೆಕ್ಟ್ರಿಸಿಟಿ ಬೋರ್ಡ್‌ನ ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ಅವರು ಹೇಳಿದ್ದರು. ಕೊಲಂಬೊದಲ್ಲಿ ಸಂಸದೀಯ ಮಂಡಳಿಯೊಂದರ ಮುಂದೆ ಶುಕ್ರವಾರ ನೀಡಿದ ಈ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು.
ರಾಜಪಕ್ಸ ಅವರು ಈ ಯೋಜನೆಯನ್ನು ಅದಾನಿ ಅವರಿಗೇ ನೀಡುವಂತೆ ತಿಳಿಸಿದರು ಎಂದು ಸಭೆಯಲ್ಲಿ ಹೇಳಿದ್ದರೆನ್ನಲಾಗಿದೆ. ಅಧ್ಯಕ್ಷರು ಫರ್ಡಿನಾಂಡೋ ಅವರನ್ನು ಕರೆಸಿಕೊಂಡು ಈ ಮಾತು ಹೇಳಿದ್ದಾರೆ ಎನ್ನಲಾಗಿದೆ.‌

ಲಂಕಾ ನಿರಾಕರಣೆ
ಫರ್ಡಿನಾಂಡೋ ಅವರ ಹೇಳಿಕೆ ಬಿರುಗಾಳಿ ಎಬ್ಬಿಸುತ್ತಿದ್ದಂತೆಯೇ ಸ್ವತಃ ಅಧ್ಯಕ್ಷ ಗೊಟಬೊಯಾ ರಾಜಪಕ್ಸ ಅವರು ಟ್ವಿಟರ್‌ನಲ್ಲಿ ಹೇಳಿಕೆಯನ್ನು ನೀಡಿ, ಮನ್ನಾರ್‌ ಪವನ ವಿದ್ಯುತ್‌ ಯೋಜನೆಯನ್ನು ನಿರ್ದಿಷ್ಟ ವ್ಯಕ್ತಿ ಇಲ್ಲವೇ ಕಂಪನಿಗೆ ನೀಡುವಂತೆ ತಮ್ಮ ಮೇಲೆ ಯಾರೂ ಒತ್ತಡ ಹಾಕಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಈ ಸಂಬಂಧ ಅಧಿಕೃತ ಹೇಳಿಕೆಯನ್ನು ಹೊರಡಿಸಲಾಗುವುದು ಎಂದು ತಿಳಿಸಿದ್ದರು. ಬಳಿಕ ಅಧಿಕೃತ ಹೇಳಿಕೆಯನ್ನೂ ಬಿಡುಗಡೆ ಮಾಡಲಾಯಿತು.
ʻʻಪ್ರಸ್ತುತ ದೇಶದಲ್ಲಿ ಭಾರಿ ಪ್ರಮಾಣದ ವಿದ್ಯುತ್‌ ಕೊರತೆ ಇದೆ. ಅದನ್ನು ತುಂಬಿಕೊಳ್ಳುವುದಕ್ಕೆ ಮೆಗಾ ವಿದ್ಯುತ್‌ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕು ಎಂದು ಅಧ್ಯಕ್ಷರು ಬಯಸಿದ್ದಾರೆ. ಆದರೆ, ಯೋಜನೆಗಳನ್ನು ನೀಡುವಾಗ ಯಾವುದೇ ಅನಗತ್ಯ ಒತ್ತಡಕ್ಕೆ ಒಳಗಾಗಬಾರದು ಎಂದು ಸೂಚಿಸಿದ್ದಾರೆ. ದೇಶದಲ್ಲಿ ದೊಡ್ಡ ಪ್ರಮಾಣದ ವಿದ್ಯುತ್‌ ಯೋಜನೆಗಳ ಸಂಖ್ಯೆ ತುಂಬಾ ಕಡಿಮೆ ಇದೆ. ಆದರೆ, ಇವುಗಳ ಅನುಷ್ಠಾನದಲ್ಲಿ ದೇಶದ ಪಾರದರ್ಶಕ ಮತ್ತು ಉತ್ತರದಾಯಿ ವ್ಯವಸ್ಥೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅಧ್ಯಕ್ಷರು ಸೂಚಿಸಿದ್ದಾರೆʼ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಸ್ಪರ್ಧಾತ್ಮಕ ಬಿಡ್ಡಿಂಗ್‌ಗೆ ವಿದಾಯ
ದೇಶದ ಪ್ರಮುಖ ವಿದ್ಯುತ್‌ ಯೋಜನೆಗಳ ಗುತ್ತಿಗೆಯನ್ನು ನೀಡು ವಿಚಾರದಲ್ಲಿ ಲಂಕಾ ಸರಕಾರ ನಿಯಮಾವಳಿಗಳನ್ನು ಬದಲಾಯಿಸಿ, ಸ್ಪರ್ಧಾತ್ಮಕ ಬಿಡ್ಡಿಂಗ್‌ನ್ನು ರದ್ದುಪಡಿಸಿತ್ತು. ಈ ಬೆಳವಣಿಗೆ ನಡೆದ ಎರಡೇ ದಿನದಲ್ಲಿ ಅದಾನಿ ಒತ್ತಡದ ಆರೋಪ ಕೇಳಿಬಂದಿದೆ. ಈ ಬಗ್ಗೆ ಅದಾನಿ ಗ್ರೂಪ್‌ ಅಥವಾ ಭಾರತ ಸರಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಲಂಕಾದಲ್ಲಿ ಹೆಚ್ಚುತ್ತಿದೆ ಅದಾನಿ ಪಾರಮ್ಯ
ಈ ವಿವಾದದ ಸತ್ಯಾಸತ್ಯತೆ ಏನೇ ಇದ್ದರೂ ದ್ವೀಪ ರಾಷ್ಟ್ರದಲ್ಲಿ ಅದಾನಿ ಗ್ರೂಪ್‌ನ ಪ್ರಾಬಲ್ಯ ದಿನೇ ದಿನೇ ಹೆಚ್ಚುತ್ತಿರುವುದು ಮಾತ್ರ ಸತ್ಯವಾಗಿದೆ. ಕಳೆದ ವರ್ಷ ಕೊಲಂಬೊ ಬಂದರಿನಲ್ಲಿ ಪಶ್ಚಿಮ ಕಂಟೈನರ್‌ ಟರ್ಮಿನಲ್‌ ಸ್ಥಾಪನೆಯ ಗುತ್ತಿಗೆಯನ್ನು ಅದಾನಿ ಗ್ರೂಪ್‌ ಪಡೆದಿದೆ. ಇದೊಂದು ಆಯಕಟ್ಟಿನ ಪ್ರಮುಖ ಬಂದರು ಕೆಲಸವಾಗಿದ್ದು, ಶೇಕಡಾ 51 ಪಾಲುದಾರಿಕೆಯನ್ನು ಅದಾನಿ ಗ್ರೂಪ್‌ ಹೊಂದಿದೆ. ಇದರ ಜತೆಗೇ ಕಳೆದ ಮಾರ್ಚ್‌ನಲ್ಲಿ ಮನ್ನಾರ್‌ ಮತ್ತು ಪೂಣೆರಿನ್‌ ವಿದ್ಯುತ್‌ ಯೋಜನೆಗಳೂ ಅದಾನಿ ಗ್ರೂಪ್‌ ಪಾಲಾಗಿವೆ.
ಇತ್ತ ಲಂಕಾದ ವಿರೋಧ ಪಕ್ಷಗಳು ʻರಾಜಪಕ್ಸ ಸರಕಾರವು ಮೋದಿ ಅವರ ಗೆಳೆಯರು ಹಿಂಬಾಗಿಲಿನಿಂದ ಲಂಕಾ ಪ್ರವೇಶಿಸಲು ದಾರಿ ಮಾಡಿಕೊಡುತ್ತಿದ್ದಾರೆ” ಎಂದು ಆರೋಪಿಸಿವೆ.

ರಾಹುಲ್‌ ಗಾಂಧಿ ಹೇಳಿದ್ದೇನು?
ಲಂಕಾದ ಅಧಿಕಾರಿಯ ಹೇಳಿಕೆ ಭಾರತದಲ್ಲಿ ರಾಜಕೀಯ ವಾಗ್ದಾಳಿಗೂ ಕಾರಣವಾಗಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು, ʻʻಬಿಜೆಪಿಯ ಸ್ವಜನಪಕ್ಷಪಾತ ಪಾಕ್‌ ಜಲಸಂಧಿಯನ್ನು ದಾಟಿ ಶ್ರೀಲಂಕಾಕ್ಕೂ ವಿಸ್ತರಿಸಿದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lonavla Tragedy: ಲೋನಾವಲಾದಲ್ಲಿ ಇದುವರೆಗೆ 37 ದುರಂತ ಪ್ರಕರಣಗಳು; 47 ಮಂದಿ ದಾರುಣ ಸಾವು

Lonavla Tragedy: ಲೊನೋವಲಾದಲ್ಲಿರುವ ಭೂಷಿ ಅಣೆಕಟ್ಟಿನಲ್ಲಿ ಇದುವರೆಗೆ 37 ದುರಂತಗಳು ಸಂಭವಿಸಿದ್ದು, ಪ್ರವಾಸಿಗರ ನಿರ್ಲಕ್ಷ್ಯದಿಂದಾಗಿಯೇ ಇಂತದ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಇತ್ತೀಚೆಗೆ ನಡೆದ ದುರಂತ ಕೂಡ ಪ್ರವಾಸಿಗರ ನಿರ್ಲಕ್ಷ್ಯದಿಂದಲೇ ನಡೆದಿದೆ. ಇನ್ನು ಇಂತಹ ದುರಂತಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಘೋಷಿಸಿದೆ. ಅದೂ ಅಲ್ಲದೇ ಮೃತ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ನೀಡಿದೆ.

VISTARANEWS.COM


on

Lonalva Tragedy
Koo

ಮುಂಬೈ: ಮುಂಬೈ ಸಮೀಪದ ಲೋನಾವಾಲಾ(Lonavla Tragedy)ದಲ್ಲಿ ಉಕ್ಕಿ ಹರಿಯುತ್ತಿದ್ದ ಜಲಪಾತದ ಮಧ್ಯದಲ್ಲಿ ನಿಂತಿದ್ದ ಪುರುಷ, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ನಾಲ್ಕು ದಿನಗಳ ಹಿಂದೆ ನಡೆದಿತ್ತು. ಆದರೆ ಇದೇ ಜಾಗದಲ್ಲಿ ಕಳೆದ ಏಳು ವರ್ಷಗಳಲ್ಲಿ ಇಂತಹದ್ದೇ ಘಟನೆಗಳು ಹಲವು ಬಾರಿ ನಡೆದಿದ್ದು, ಬರೋಬ್ಬರಿ 47 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಲೊನೋವಲಾದಲ್ಲಿರುವ ಭೂಷಿ ಅಣೆಕಟ್ಟಿನಲ್ಲಿ ಇದುವರೆಗೆ 37 ದುರಂತಗಳು ಸಂಭವಿಸಿದ್ದು, ಪ್ರವಾಸಿಗರ ನಿರ್ಲಕ್ಷ್ಯದಿಂದಾಗಿಯೇ ಇಂತದ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಇತ್ತೀಚೆಗೆ ನಡೆದ ದುರಂತ ಕೂಡ ಪ್ರವಾಸಿಗರ ನಿರ್ಲಕ್ಷ್ಯದಿಂದಲೇ ನಡೆದಿದೆ. ಇನ್ನು ಇಂತಹ ದುರಂತಗಳನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಘೋಷಿಸಿದೆ. ಅದೂ ಅಲ್ಲದೇ ಮೃತ ಕುಟುಂಬಕ್ಕೆ ತಲಾ 5ಲಕ್ಷ ರೂ. ಪರಿಹಾರ ನೀಡಿದೆ.

ಮಳೆಗಾಲದಲ್ಲಿ ಈ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಂತೆ, ಈ ಕುಟುಂಬವು ಭಾನುವಾರ ಮಧ್ಯಾಹ್ನ ಭೂಷಿ ಅಣೆಕಟ್ಟಿನ ಹಿನ್ನೀರಿನ ಬಳಿಯ ಜಲಪಾತದಲ್ಲಿ ಪಿಕ್ನಿಕ್ ಗೆ ಹೋಗಿತ್ತು. ರಾಪ್ಸೋಡಿಕ್ ಜಲಪಾತದ ಮಧ್ಯದಲ್ಲಿರುವ ಬಂಡೆಯ ಮೇಲೆ ನಿಂತಿದ್ದರು. ಮುಂಜಾನೆಯಿಂದ ಈ ಪ್ರದೇಶದಲ್ಲಿ ಭಾರಿ ಮಳೆ ಬಂದಿದ್ದ ಕಾರಣ ಅಣೆಕಟ್ಟು ಉಕ್ಕಿ ಹರಿದಿತ್ತು. ಇದು ಜಲಪಾತದಲ್ಲಿ ನೀರಿನ ಹರಿವನ್ನು ಹೆಚ್ಚಿಸಿತು. ಕುಟುಂಬದ ಸದಸ್ಯರು ಕೊಚ್ಚಿ ಹೋಗುತ್ತಿದ್ದ ಕ್ಷಣಗಳು ಬೇರೆ ಪ್ರವಾಸಿಗ ಕ್ಯಾಮೆರಾದದಲ್ಲಿ ದಾಖಲಾಗಿದೆ.

ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ, ರಭಸವಾಗಿ ಹರಿಯುವ ನೀರಿನಲ್ಲಿ ಅವರೆಲ್ಲರೂ ಕೊಚ್ಚಿ ಹೋಗಿದ್ದರು. ಅವರು ಸಹಾಯಕ್ಕಾಗಿ ಕಿರುಚಿದರೂ ಅಲ್ಲಿದ್ದವರಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಇತರ ಪ್ರವಾಸಿಗರು ಸಹ ದಡದಲ್ಲಿ ಜಮಾಯಿಸಿ ಸಹಾಯಕ್ಕಾಗಿ ಕೂಗಿದ್ದರು. ರಭಸವಾಗಿ ಹರಿಯುವ ನೀರಿನಿಂದ ಆಗ ಅವರ ರಕ್ಷಣೆಗೆ ಹೋಗಲು ಸಾಧ್ಯವಾಗಲಿಲ್ಲ.

ಪೊಲೀಸರ ಪ್ರಕಾರ, ಪ್ರವಾಸಿಗರು ಜಲಪಾತಕ್ಕೆ ಜಾರಿ ಕೆಳಭಾಗದ ಜಲಾಶಯದಲ್ಲಿ ಮುಳುಗಿದ್ದಾರೆ. ಜಲಪಾತದ ತಳದಲ್ಲಿ ಅವರು ನಿಂತಿದ್ದ ಪಾಚಿ ಬಂಡೆಗಳ ಮೇಲೆ ನಿಂತಿದ್ದ ಕಾರಣ ಅವರಿಗೆ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಈ ಅಪಘಾತವು ಜಲಪಾತ ಮತ್ತು ಕೆಳಭಾಗದ ಅಣೆಕಟ್ಟಿನ ಭದ್ರತಾ ವ್ಯವಸ್ಥೆಗಳ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಅದೇ ಸ್ಥಳದಿಂದ ಬಂದ ಮತ್ತೊಂದು ವೀಡಿಯೊದಲ್ಲಿ ನೂರಾರು ಜನರು ಅಣೆಕಟ್ಟಿನ ಅಂಚಿನಲ್ಲಿ ಮತ್ತು ಅದರ ಗೋಡೆಯ ಮೇಲೆ ನಿಂತಿರುವುದು ಕಾಣಬಹುದು. ಪ್ರವಾಸಿಗರು ಪ್ರವಾಹದ ನೀರಿನಲ್ಲಿ ಯಾವುದೇ ಸುರಕ್ಷತೆ ಇಲ್ಲದೆ ಸಂಭ್ರಮಿಸುತ್ತಿರುವುದು ಕಂಡು ಬಂದಿದೆ. ಈ ಪ್ರದೇಶದಲ್ಲಿ ಯಾವುದೇ ಭದ್ರತಾ ವ್ಯವಸ್ಥೆ ಕಂಡುಬಂದಿಲ್ಲ.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Continue Reading

ದೇಶ

Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

Hathras Stampede: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇದೀಗ ಘಟನೆ ನಡೆದ ಬಳಿಕ ತಲೆ ಮರೆಸಿಕೊಂಡಿರುವ ಸ್ವಯಂಘೋಷಿತ ʼದೇವ ಮಾನವʼ ನಾರಾಯಣ ಸಾಕಾರ್‌ ಹರಿ ಆಲಿಯಾಸ್‌ ಭೋಲೇ ಬಾಬಾ ಇದೀಗ ಘಟನೆಗೆ ಸಮಾಜಘಾತುಕ ಶಕ್ತಿ ಕಾರಣ ಎಂದು ದೂರಿದ್ದಾರೆ. ತಾನು ಸ್ಥಳದಿಂದ ನಿರ್ಗಮಿಸಿದ ಬಹಳ ಸಮಯದ ನಂತರ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತ (Hathras Stampede) ಪ್ರಕರಣದ ಆಘಾತದಿಂದ ದೇಶ ಇನ್ನೂ ಹೊರ ಬಂದಿಲ್ಲ. ಭೋಲೆ ಬಾಬಾ (Bhole Baba) ಅವರ ಸತ್ಸಂಗ ಕಾರ್ಯಕ್ರಮದಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು 121 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಬಳಿಕ ತಲೆ ಮರೆಸಿಕೊಂಡಿರುವ ಸ್ವಯಂಘೋಷಿತ ʼದೇವ ಮಾನವʼ ನಾರಾಯಣ ಸಾಕಾರ್‌ ಹರಿ ಆಲಿಯಾಸ್‌ ಭೋಲೇ ಬಾಬಾ ಇದೀಗ ಘಟನೆಗೆ ಸಮಾಜಘಾತುಕ ಶಕ್ತಿ ಕಾರಣ ಎಂದು ದೂರಿದ್ದಾರೆ.

ಅಜ್ಞಾತ ಸ್ಥಳದಿಂದ ಹೇಳಿಕೆ ಬಿಡುಗಡೆ ಮಾಡಿರುವ ಭೋಲೇ ಬಾಬಾ, ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ತಾನು ಸ್ಥಳದಿಂದ ನಿರ್ಗಮಿಸಿದ ಬಹಳ ಸಮಯದ ನಂತರ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ಭೋಲೇ ಬಾಬಾ ಹೇಳಿದ್ದೇನು?

“ನಾನು / ನಾವು ಮೃತರ ಕುಟುಂಬಗಳಿಗೆ ಸಂತಾಪವನ್ನು ಸಂತಾಪ ಸೂಚಿಸುತ್ತಿದ್ದೇವೆ. ಅವರ ಕುಟುಂಬಕ್ಕೆ ನೋವು ಮರೆಸುವ ಶಕ್ತಿ ಲಭಿಸಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಭು / ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ. ಕೆಲವು ಸಮಾಜ ವಿರೋಧಿ ಶಕ್ತಿಗಳು ಸೃಷ್ಟಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ವಕೀಲ ಎ.ಪಿ.ಸಿಂಗ್ ಅವರಲ್ಲಿ ವಿನಂತಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಪ್ರಾಥಮಿಕ ವರದಿಯಲ್ಲಿ ಏನಿದೆ?

ʼʼ80 ಸಾವಿರ ಜನರಿಗಾಗಿ ಅನುಮತಿ ಪಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಭೋಲೆ ಬಾಬಾ ಮಧ್ಯಾಹ್ನ 12.30ರ ಸುಮಾರಿಗೆ ಸತ್ಸಂಗ ಪೆಂಡಾಲ್‌ಗೆ ಆಗಮಿಸಿದ್ದರು. ಕಾರ್ಯಕ್ರಮವು 1 ಗಂಟೆ ನಡೆಯಿತು. ನಂತರ ಮಧ್ಯಾಹ್ನ 1.40ರ ಸುಮಾರಿಗೆ ಭೋಲೆ ಬಾಬಾ ಪೆಂಡಾಲ್‌ನಿಂದ ಹೊರಬಂದರು” ಎಂದು ವರದಿ ತಿಳಿಸಿದೆ.

ʼʼಭೋಲೆ ಬಾಬಾ ಹೊರಡುವ ವೇಳೆ ವೇಳೆ ಲಕ್ಷಾಂತರ ಮಂದಿ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣ” ಎಂದು ತನಿಖೆಯ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

ಕಾಲ್ತುಳಿತದಿಂದ ಮೃತಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಘಟನೆ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ. ಬುಧವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಮತ್ತು ಗಾಯಾಳುಗಳನ್ನು ಸಂತೈಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ಕ್ರಮವಾಗಿ 2 ಲಕ್ಷ ರೂ. ಮತ್ತು 50 ಸಾವಿರ ರೂ. ಪರಿಹಾರ ಧನವನ್ನು ಈಗಾಗಲೇ ಘೋಷಿಸಲಾಗಿದೆ.

Continue Reading

ದೇಶ

Hathras Stampede: ಹತ್ರಾಸ್‌ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!

Hathras Stampede:ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 105, 110, 126(2), 223, ಮತ್ತು 238ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಕಾಲ್ತುಳಿತ(Hathras Stampede)ಕ್ಕೆ ಧಾರ್ಮಿಕ ಕಾರ್ಯಕ್ರಮ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ಮುಖ್ಯ ಸೇವಾಧರ್‌ ದೇವ್‌ಪ್ರಕಾಶ್‌ ಮಧುಕರ್‌ ಮತ್ತು ಇತರೆ ಆಯೋಜಕರ ವಿರುದ್ಧ ಸಿಕಂದ್ರ ರಾವ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಆದರೆ ಸತ್ಸಂಗ ನಡೆಸಿದ್ದ ಭೋಲೇ ಬಾಬಾ(Bhole Baba) ಹೆಸರು ಎಫ್‌ಐಆರ್‌ನಲ್ಲಿ ದಾಖಲಾಗಿಲ್ಲ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 105, 110, 126(2), 223, ಮತ್ತು 238ರ ಅಡಿಯಲ್ಲಿ ಈ ಪ್ರಕರಣ ದಾಖಲಿಸಲಾಗಿದೆ. ಈ ಮಧ್ಯೆ ಸತ್ಸಂಗ ಕಾರ್ಯಕ್ರಮ ಆಯೋಜಿಸಿದ್ದ ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ. ಅವರ ಪತ್ತೆಗಾಗಿ ಉತ್ತರ ಪ್ರದೇಶ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಭೋಲೆ ಬಾಬಾ ಅವರಿಗಾಗಿ ಮೈನ್ಪುರಿ ಜಿಲ್ಲೆಯ ರಾಮ್ ಕುಟೀರ್ ಚಾರಿಟಬಲ್ ಟ್ರಸ್ಟ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತಾದರೂ ಅವರು ಕ್ಯಾಂಪಸ್ ಒಳಗೆ ಕಂಡುಬಂದಿಲ್ಲʼʼ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಕುಮಾರ್ ತಿಳಿಸಿದರು.

ಇನ್ನು ಭೋಲೆ ಬಾಬಾ ಮೈನ್‌ಪುರಿ ನಗರದ ಹೊರವಲಯದಲ್ಲಿರುವ ಅವರ ಆಶ್ರಮದಲ್ಲಿದ್ದಾರೆ ಎನ್ನಲಾಗಿದ್ದು, ಆಶ್ರಮಕ್ಕೆ ಬಿಗಿ ಬಂದೋಬಸ್ತ್‌ ನೀಡಲಾಗಿದೆ. ಆದರೆ ಮೈನ್‌ಪುರಿಯಲ್ಲಿರುವ ಆಶ್ರಮದ ಬಳಿ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳು ಭೋಲೆ ಬಾಬಾ ಆಶ್ರಮದಲ್ಲಿ ಇರುವುದನ್ನು ತಳ್ಳಿಹಾಕಿದ್ದಾರೆ ಮತ್ತು ಮಂಗಳವಾರದ ಘಟನೆಯ ಹಿನ್ನೆಲೆಯಲ್ಲಿ ಆಶ್ರಮದೊಳಗಿನ ಭೋಲೆ ಬಾಬಾ ಅವರ ಅನುಯಾಯಿಗಳ ಸುರಕ್ಷತೆಗಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಮಂಗಳವಾರ ಫುಲ್ರೈ ಗ್ರಾಮದಲ್ಲಿ ಆಯೋಜಿಸಲಾಗಿದ್ದ ‘ಸತ್ಸಂಗ’ದಲ್ಲಿ ಸುಮಾರು 2.5 ಲಕ್ಷ ಜನ ಸೇರಿದ್ದರು. ಆದರೆ ಸಂಘಟಕರು ಇದನ್ನು ಮರೆಮಾಚಿದ್ದರು. ಸಂಘಟಕರು ಕೇವಲ 80,000 ಜನ ಭಾಗಿಯಾಗಿದ್ದರು ಎಂದು ಹೇಳಿದ್ದರು. ಹೀಗಾಗಿ ಸತ್ಸಂಗ’ದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಲಕ್ಷಗಟ್ಟಲೆ ಇರುತ್ತದೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ಸಂಘಟಕರನ್ನು ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗಿದೆ.

ಸತ್ಯಂಗ ಮುಗಿಸಿ ಭೋಲೆ ಬಾಬಾ ಅವರು ಅಪರಾಹ್ನ 3.30ರ ಸುಮಾರಿಗೆ ಸ್ಥಳದಿಂದ ಹೊರಡುವಾಗ ಕಾಲ್ತುಳಿತ ಸಂಭವಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಈಗಾಗಲೇ ಆದೇಶಿಸಿದ್ದಾರೆ. ಹತ್ರಾಸ್ ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರಕಾರವು ಎಸ್‌ಐಟಿ ರಚಿಸಿದ್ದಲ್ಲದೇ, ಹೈಕೋರ್ಟ್‌ನ ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಿದೆ. ಹತ್ರಾಸ್‌ನ ಜಿಲ್ಲಾಸ್ಪತ್ರೆಗೆ ಭೇಟಿ ಕೊಟ್ಟು ಗಾಯಾಳುಗಳನ್ನು ವಿಚಾರಿಸಿದ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು, ”ಈ ದುರಂತ ಅತೀವ ಬೇಸರ ತರಿಸಿದೆ. ಇದೊಂದು ಆಕಸ್ಮಿಕವೋ ಅಥವಾ ದೊಡ್ಡ ಸಂಚಿನ ಭಾಗವೋ ಎಂಬುದು ಗೊತ್ತಾಗಬೇಕಿದೆ. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕಿದೆ. ಸರಕಾರವು ಆಗ್ರಾದ ಎಡಿಜಿ ಅನುಪಮ್‌ ಕುಲಶ್ರೇಷ್ಠ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಹಾಗೆಯೇ ಹೈಕೋರ್ಟ್‌ ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ನಿರ್ಧರಿಸಲಾಗಿದೆ,” ಎಂದು ಮಾಧ್ಯಮಗಳಿಗೆ ವಿವರ ನೀಡಿದರು.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading

ವಾಣಿಜ್ಯ

Stock Market: ಷೇರು ಮಾರುಕಟ್ಟೆಯಲ್ಲಿ ಮುಂದುವರಿದ ಗೂಳಿಯ ಅಬ್ಬರ; ಸಾರ್ವಕಾಲಿಕ ಎತ್ತರಕ್ಕೆ ಜಿಗಿದ ಸೆನ್ಸೆಕ್ಸ್

Stock Market: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ ಕೂಡ ಸೆನ್ಸೆಕ್ಸ್  ಮತ್ತು ನಿಫ್ಟಿ ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ. ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು.

VISTARANEWS.COM


on

Stock Market
Koo

ಮುಂಬೈ: ಭಾರತೀಯ ಷೇರು ಮಾರುಕಟ್ಟೆ (Stock Market)ಯಲ್ಲಿ ಗೂಳಿ ಅಬ್ಬರ ಜೋರಾಗಿದೆ. ಗುರುವಾರ (ಜುಲೈ 3) ಕೂಡ ಸೆನ್ಸೆಕ್ಸ್ (Sensex) ಮತ್ತು ನಿಫ್ಟಿ (Nifty) ಜಿಗಿದು ನೂತನ ದಾಖಲೆ ಬರೆದಿದೆ. ಇಂದು ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲೇ ಸೆನ್ಸೆಕ್ಸ್‌ 336.51 ಅಂಕ ಅಥವಾ ಶೇ. 0.42 ಏರಿಕೆಯೊಂದಿಗೆ ಸಾರ್ವಕಾಲಿಕ 80,323.30 ಗಡಿ ತಲುಪಿದೆ. ಇನ್ನು ನಿಫ್ಟಿ 83.50 ಪಾಯಿಂಟ್‌ ಅಥವಾ ಶೇ. 0.34 ಹೆಚ್ಚಳದೊಂದಿಗೆ 24 ಸಾವಿರದ ಗಡಿ ದಾಟಿ 24,370ಕ್ಕೆ ಏರಿದೆ.

ಬುಧವಾರ ಸೆನ್ಸೆಕ್ಸ್ 570ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಕಂಡು ಮೊದಲ ಬಾರಿಗೆ 80 ಸಾವಿರ ಅಂಕಗಳ ಗಡಿ ದಾಟಿತ್ತು. ಜತೆಗೆ ನಿಫ್ಟಿ ಕೂಡ 24,291.75 ಅಂಕಗಳ ಹೊಸ ಶಿಖರ ಏರಿತ್ತು. ಜಾಗತಿಕವಾಗಿ ಪೂರಕ ವಾತಾವರಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಈ ಸಂಚಲನ ಮೂಡಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಜೂನ್ 10ರ ನಂತರ ಇಲ್ಲಿಯವರೆಗೆ ಸೆನ್ಸೆಕ್ಸ್‌ನಲ್ಲಿ 3,000ಕ್ಕೂ ಹೆಚ್ಚು ಪಾಯಿಂಟ್‌ಗಳು ಏರಿವೆ. ವಿಶೇಷ ಎಂದರೆ 1980ರ ದಶಕದಲ್ಲಿ ಪ್ರಾರಂಭವಾದ ನಂತರ ಸೆಕ್ಸೆಕ್ಸ್‌ ಮೊದಲ ಬಾರಿಗೆ 80,400ರ ಗಡಿಯನ್ನು ಸಮೀಪಿಸಿದೆ. ಭಾರತದಲ್ಲಿ ಮಾನ್ಸೂನ್ ಪ್ರಗತಿಯೂ ಹೂಡಿಕೆದಾರರ ವಿಶ್ವಾಸವನ್ನು ಹೆಚ್ಚಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಎಚ್‌ಸಿಎಲ್‌ ಟೆಕ್, ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್, ಎಂ & ಎಂ, ಟಿಸಿಎಸ್, ಬಜಾಜ್ ಫೈನಾನ್ಸ್, ಟಾಟಾ ಸ್ಟೀಲ್ ಮತ್ತು ಟೆಕ್ ಎಂ ಮುಂತಾದ ಪ್ರಮುಖ ಲಾರ್ಜ್ ಕ್ಯಾಪ್ ಷೇರುಗಳಲ್ಲಿ ಶೇ. 1.35ರಷ್ಟು ಏರಿಕೆಯಾಗಿದೆ. ಜತೆಗೆ ಬಿಎಸ್ಇ ಮಿಡ್‌ಕ್ಯಾಪ್‌ ಮತ್ತು ಸ್ಮಾಲ್‌ಕ್ಯಾಪ್‌ ಸೆನ್ಸೆಕ್ಸ್ ಕ್ರಮವಾಗಿ ಶೇ. 0.36 ಮತ್ತು ಶೇ. 0.57ರಷ್ಟು ಏರಿಕೆ ದಾಖಲಿಸಿವೆ. ಇನ್ನು ಎಚ್‌ಡಿಎಫ್‌ಸಿ ಬ್ಯಾಂಕ್, ಸಿಪ್ಲಾ, ಡಾ.ರೆಡ್ಡೀಸ್, ಶ್ರೀರಾಮ್ ಫೈನಾನ್ಸ್ ಮತ್ತು ಅದಾನಿ ಎಂಟರ್‌ಟೈನ್‌ಮೆಂಟ್‌ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ.

ದೇಶೀಯ ಮಾರುಕಟ್ಟೆಯ ಜತೆಗೆ ಜಾಗತಿಕ ಮಾರುಕಟ್ಟೆಗಳೂ ಸಕಾರಾತ್ಮಕವಾಗಿ ಸ್ಪಂದಿಸಿವೆ. ಟೆಕ್ ಷೇರುಗಳ ಲಾಭದಿಂದ ವಾಲ್ ಸ್ಟ್ರೀಟ್ ದಾಖಲೆಯ ಗರಿಷ್ಠ ಮಟ್ಟದಲ್ಲಿ ಕೊನೆಗೊಂಡಿದೆ. ಎಸ್ & ಪಿ 500 ಶೇ. 0.51ರಷ್ಟು ಮತ್ತು ನಾಸ್ಡಾಕ್ ಕಾಂಪೊಸಿಟ್ ಶೇ. 0.88ರಷ್ಟು ಏರಿಕೆಯಾಗಿದೆ. ಇನ್ನು ಜಪಾನ್‌ನ ನಿಕೈ 225 ಶೇ. 0.27, ಕೊರಿಯಾದ ಕೋಸ್ಪಿ ಶೇ. 0.87 ಮತ್ತು ಏಷ್ಯಾ ಡೌ ಶೇ. 1ರಷ್ಟು ಏರಿಕೆ ದಾಖಲಿಸಿವೆ. ಹಾಂಗ್‌ಕಾಂಗ್‌ನ ಹಾಂಗ್ ಸೆಂಗ್ ಕೂಡಾ ಶೇ. 0.56ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Stock Market: ಮೊದಲ ಬಾರಿಗೆ 80,000 ಗಡಿ ದಾಟಿದ ಸೆನ್ಸೆಕ್ಸ್: 24,250 ಪಾಯಿಂಟ್‌ ತಲುಪಿದ ನಿಫ್ಟಿ

ಯುಎಸ್ ಫೆಡರಲ್ ರಿಸರ್ವ್ ಅಧ್ಯಕ್ಷ ಜೆರೋಮ್ ಪೊವೆಲ್ ಅವರು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಪ್ರಗತಿ ಸಾಧಿಸುದ್ದೇವೆ ಎಂದು ಹೇಳಿಕ ನೀಡಿದ ನಂತರ ಮಾರುಕಟ್ಟೆಗಳು ಧನಾತ್ಮಕ ಪ್ರದರ್ಶನ ತೋರುತ್ತಿವೆ. ಮಂಗಳವಾರ ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿತ್ತು. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿತ್ತು. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿತ್ತು. 

Continue Reading
Advertisement
Lonalva Tragedy
ದೇಶ7 mins ago

Lonavla Tragedy: ಲೋನಾವಲಾದಲ್ಲಿ ಇದುವರೆಗೆ 37 ದುರಂತ ಪ್ರಕರಣಗಳು; 47 ಮಂದಿ ದಾರುಣ ಸಾವು

Gold Rate Today
ಚಿನ್ನದ ದರ10 mins ago

Gold Rate Today: ಕೈ ಸುಡುತಿದೆ ಚಿನ್ನದ ದರ; ಆಭರಣ ಖರೀದಿಸುವ ಮುನ್ನ ಬೆಲೆ ಚೆಕ್‌ ಮಾಡಿ

Juhi Chawla mother-in-law uninvited nearly 2000 guests her wedding
ಬಾಲಿವುಡ್19 mins ago

Juhi Chawla: ಮದುವೆಗೆ 2000 ಜನಕ್ಕೆ ನೀಡಲಾಗಿತ್ತು ಆಮಂತ್ರಣ; ಆದರೆ ಅತ್ತೆ ಹಿಂಪಡೆದರು ಎಂದ ಜೂಹಿ ಚಾವ್ಲಾ!

Karnataka Rain
ಮಳೆ29 mins ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

dengue fever mysore death
ಪ್ರಮುಖ ಸುದ್ದಿ38 mins ago

Dengue Fever: ಡೆಂಗ್ಯು ಜ್ವರಕ್ಕೆ ಮೈಸೂರು ಜಿಲ್ಲೆಯಲ್ಲಿ ಆರೋಗ್ಯಾಧಿಕಾರಿಯೇ ಮೊದಲ ಬಲಿ!

Hathras Stampede
ದೇಶ42 mins ago

Hathras Stampede: ಹತ್ರಾಸ್‌ ಕಾಲ್ತುಳಿತಕ್ಕೆ ಸಮಾಜಘಾತುಕ ಶಕ್ತಿ ಕಾರಣ ಎಂದ ಭೋಲೇ ಬಾಬಾ

Virat Kohli
ಕ್ರೀಡೆ43 mins ago

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Shiva Rajkumar Bhairavana Kone PaaTa Title announce
ಸ್ಯಾಂಡಲ್ ವುಡ್1 hour ago

Shiva Rajkumar: ‘ಭೈರವನ ಕೊನೆ ಪಾಠ’ದಲ್ಲಿ ಶಿವರಾಜ್‌ಕುಮಾರ್‌; ಹ್ಯಾಟ್ರಿಕ್ ಹೀರೊಗೆ ಹೇಮಂತ್‌ ರಾವ್‌ ಆ್ಯಕ್ಷನ್‌ ಕಟ್‌!

rain news no entry falls
ಪ್ರಮುಖ ಸುದ್ದಿ1 hour ago

Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

Tornado Effect in Udupi
ಉಡುಪಿ1 hour ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ29 mins ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ1 hour ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ಧದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ6 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಟ್ರೆಂಡಿಂಗ್‌