Donations To Political Parties: ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕ ದೇಣಿಗೆಯಲ್ಲಿ ಬಿಜೆಪಿ ಪಾಲು 80%, ಬೇರೆ ಪಕ್ಷಗಳಿಗೆ ಸಿಕ್ಕ ಹಣ ಎಷ್ಟು? - Vistara News

ದೇಶ

Donations To Political Parties: ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕ ದೇಣಿಗೆಯಲ್ಲಿ ಬಿಜೆಪಿ ಪಾಲು 80%, ಬೇರೆ ಪಕ್ಷಗಳಿಗೆ ಸಿಕ್ಕ ಹಣ ಎಷ್ಟು?

Donations To Political Parties: ದೇಶದ ರಾಷ್ಟ್ರೀಯ ಪಕ್ಷಗಳು 2021-22ನೇ ಹಣಕಾಸು ವರ್ಷದಲ್ಲಿ ಸಂಗ್ರಹಿಸಿದ ದೇಣಿಗೆ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ವರದಿ ಪ್ರಕಟಿಸಿದೆ.

VISTARANEWS.COM


on

bjp karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಜಕೀಯ ಪಕ್ಷಗಳು ೨೦೨೧-೨೨ನೇ ಸಾಲಿನಲ್ಲಿ ಪಡೆದ ದೇಣಿಗೆ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ವರದಿ ನೀಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಬಿಜೆಪಿಯೇ ಹೆಚ್ಚಿನ ದೇಣಿಗೆ ಪಡೆದಿದೆ. ಅದರಲ್ಲೂ, ರಾಷ್ಟ್ರೀಯ ಪಕ್ಷಗಳಿಗೆ ನೀಡಿದ ದೇಣಿಗೆಯಲ್ಲಿ (Donations To Political Parties) ಬಿಜೆಪಿ ಪಾಲು ಶೇ.೮೦ರಷ್ಟು ಇರುವುದು ಗಮನಾರ್ಹವಾಗಿದೆ.

೨೦೨೧-೨೨ನೇ ಸಾಲಿನಲ್ಲಿ ದೇಶದ ಎಂಟು ರಾಷ್ಟ್ರೀಯ ಪಕ್ಷಗಳಿಗೆ ೭೮೦ ಕೋಟಿ ರೂ. ದೇಣಿಗೆ ನೀಡಲಾಗಿದೆ. ಇದರಲ್ಲಿ ಬಹುಪಾಲು ಅಂದರೆ ೬೧೪ ಕೋಟಿ ರೂ. ಬಿಜೆಪಿಗೆ ಲಭಿಸಿದರೆ, ಕಾಂಗ್ರೆಸ್‌ ೯೫ ಕೋಟಿ ರೂ. ಸೆಳೆದಿದೆ. ಮೂರನೇ ಸ್ಥಾನದಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷವಿದ್ದು (NCP), 58 ಕೋಟಿ ರೂ. ದೇಣಿಗೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ಸ್ವೀಕರಿಸಿದ ೬೧೪ ಕೋಟಿ ರೂ.ನಲ್ಲಿ ಕಾರ್ಪೊರೇಟ್‌ ವಲಯದ ಪಾಲು ೫೪೮ ಕೋಟಿ ರೂ. ಇದೆ.

ರಾಜಕೀಯ ಪಕ್ಷಗಳು ಚುನಾವಣೆ ಆಯೋಗಕ್ಕೆ ವಾರ್ಷಿಕವಾಗಿ ದೇಣಿಗೆ ಕುರಿತು ಸಲ್ಲಿಸುವ ಮಾಹಿತಿ ಆಧರಿಸಿ ಎಡಿಆರ್‌ ವರದಿ ಪ್ರಕಟಿಸುತ್ತದೆ. ಇದರಂತೆ, ಈ ಬಾರಿಯೂ ಬಿಜೆಪಿಯೇ ಹೆಚ್ಚು ದೇಣಿಗೆ ಸೆಳೆದಿದೆ. ರಾಜಕೀಯ ಪಕ್ಷಗಳ ದೇಣಿಗೆ ಸಂಗ್ರಹವು ೩೧.೫ರಷ್ಟು ಏರಿಕೆಯಾಗಿದೆ. ಇದು ೨೦ ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿನ ಹಣ ಸ್ವೀಕರಿಸಿದ ದೇಣಿಗೆಯ ವರದಿಯಾಗಿದೆ. ಅಚ್ಚರಿಯ ಸಂಗತಿ ಎಂದರೆ, ಮಾಯಾವತಿ ನೇತೃತ್ವದ ಬಿಎಸ್‌ಪಿಗೆ ಒಬ್ಬರೂ ೨೦ ಸಾವಿರ ರೂ. ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ದೇಣಿಗೆ ನೀಡಿಲ್ಲ.

ಇದನ್ನೂ ಓದಿ: Corporate Donation | 5 ವರ್ಷದಲ್ಲಿ ಗುಜರಾತ್‌ನಿಂದ ಬಿಜೆಪಿಗೆ 163 ಕೋಟಿ ರೂ. ಕಾರ್ಪೊರೇಟ್ ದೇಣಿಗೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Anant Ambani Video: ಮುಕೇಶ್ ಅಂಬಾನಿ, ಅವರ ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಜುಲೈ 12ರಂದು ನಡೆಯಲಿರುವ ತಮ್ಮ ಮಗ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಆಮಂತ್ರಣವನ್ನು ನೀಡಿದರು. ಈ ಸಂದರ್ಭದಲ್ಲಿನ ಒಂದು ದೃಶ್ಯ ಈಗ ವೈರಲ್‌ ಆಗಿದೆ.

VISTARANEWS.COM


on

By

Anant Ambani
Koo

ಮಹಾರಾಷ್ಟ್ರ (maharastra) ಮುಖ್ಯಮಂತ್ರಿ (Chief Minister) ಏಕನಾಥ್‌ ಶಿಂಧೆ ಅವರಿಗೆ ಮದುವೆ ಆಮಂತ್ರಣ ನೀಡಲು ಹೋದ ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (mukesh ambani) ಅವರ ಮಗ ಅನಂತ್ ಅಂಬಾನಿ (Anant Ambani Video), ಸೀದಾ ಮುಖ್ಯಮಂತ್ರಿಯ ಹೆಗಲ ಮೇಲೆಯೇ ಕೈ ಹಾಕಿ ಫೋಟೋಗೆ ಪೋಸ್ ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಎಷ್ಟೇ ಶ್ರೀಮಂತಿಕೆ ಇದ್ದರೇನು? ಕಾಮನ್‌ಸೆನ್ಸ್‌ ಇಲ್ಲದಿದ್ದರೆ ಎಲ್ಲವೂ ವ್ಯರ್ಥ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮುಕೇಶ್ ಅಂಬಾನಿ, ಅವರ ಮಗ ಅನಂತ್ ಅಂಬಾನಿ ಮತ್ತು ಸೊಸೆ ರಾಧಿಕಾ ಮರ್ಚೆಂಟ್ (Radhika Merchant) ಅವರು ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮತ್ತು ಅವರ ಕುಟುಂಬವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಜುಲೈ 12ರಂದು ನಡೆಯಲಿರುವ ತಮ್ಮ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹದ ಆಮಂತ್ರಣವನ್ನು ನೀಡಿದರು.

ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಬೆಳಗ್ಗೆ ಹಂಚಿಕೊಂಡಿರುವ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಸಾವಿರಾರು ಮಂದಿ ವೀಕ್ಷಿಸಿದ್ದಾರೆ. ವಿಡಿಯೋದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮುಖ್ಯಮಂತ್ರಿ ಶಿಂಧೆ ಅವರ ಹೆಗಲಿಗೆ ಕೈ ಹಾಕಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ಎಷ್ಟೇ ದೊಡ್ಡ ವ್ಯಕ್ತಿಯಾದರೂ ಮುಖ್ಯಮಂತ್ರಿಯ ಹೆಗಲಿಗೆ ಕೈ ಹಾಕಿ ಫೋಟೋ ಗೆ ಪೋಸ್ ನೀಡಿರುವುದು ಸರಿಯೇ ಎನ್ನುವ ಪ್ರಶ್ನೆ ಎದ್ದಿದ್ದು ನೆಟ್ಟಿಗರು ಸಾಕಷ್ಟು ರೀತಿಯಲ್ಲಿ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಅನಂತ್ ಅಂಬಾನಿ ಮುಂಬಯಿನಲ್ಲಿ ರಾಧಿಕಾ ಅವರೊಂದಿಗಿನ ಮದುವೆಗೆ ವೈಯಕ್ತಿಕವಾಗಿ ಆಹ್ವಾನಿಸಲು ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮನೆಗೆ ಸೋಮವಾರ ಭೇಟಿ ನೀಡಿದರು. ರಿಲಯನ್ಸ್ ಫೌಂಡೇಶನ್‌ನ ಅಧ್ಯಕ್ಷೆ ಮತ್ತು ಸಂಸ್ಥಾಪಕಿ ನೀತಾ ಅಂಬಾನಿ ಅವರು ಸೋಮವಾರ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಿ ದೇವರಿಗೆ ಮದುವೆಯ ಆಮಂತ್ರಣ ನೀಡಿದರು.

ದೇವರ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಈಗಷ್ಟೇ ಬಾಬಾ ಭೋಲೆನಾಥ್ ಅವರ ದರ್ಶನ ಪಡೆದಿದ್ದೇನೆ. ಹಿಂದೂ ಸಂಪ್ರದಾಯದ ಪ್ರಕಾರ ನಾವು ಮೊದಲು ಭಗವಂತನ ಆಶೀರ್ವಾದವನ್ನು ಪಡೆಯುತ್ತೇವೆ. ನಾನು ಬಾಬಾಗೆ ಮದುವೆಯ ಆಮಂತ್ರಣವನ್ನು ನೀಡಿದ್ದೇನೆ. ನನಗೆ ತುಂಬಾ ಸಂತೋಷವಾಗಿದೆ. 10 ವರ್ಷಗಳ ಅನಂತರ ಇಲ್ಲಿಗೆ ಬಂದಿದ್ದೇನೆ. ಅಭಿವೃದ್ಧಿ ಮತ್ತು ಕಾಶಿ ವಿಶ್ವನಾಥ ಕಾರಿಡಾರ್, ನಮೋ ಘಾಟ್, ಸೌರಶಕ್ತಿ ಸ್ಥಾವರಗಳು ಮತ್ತು ಸ್ವಚ್ಛತೆಯನ್ನು ನೋಡಲು ನನಗೆ ಸಂತೋಷವಾಗಿದೆ. ಬದಲಾವಣೆಯನ್ನು ನೋಡಲು ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದರು.

10 ವರ್ಷಗಳ ಹಿಂದೆ ಕಾಶಿ ವಿಶ್ವನಾಥ ದೇವಸ್ಥಾನದ ದರ್ಶನಕ್ಕೆ ಬಂದಿದ್ದೆ. ಇಲ್ಲಿನ ಕುಶಲಕರ್ಮಿಗಳೊಂದಿಗೆ ನನಗೆ ವಿಶೇಷ ಬಾಂಧವ್ಯವಿದೆ. ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ರಿಲಯನ್ಸ್ ಫೌಂಡೇಶನ್ ಮತ್ತು ಸ್ವದೇಶ್ ಮಾಧ್ಯಮದ ಮೂಲಕ ನಾವು ಅವರಿಗೆ ಜಾಗತಿಕ ಮನ್ನಣೆ ಮತ್ತು ಗೌರವವನ್ನು ನೀಡಲು ಬಯಸುತ್ತೇವೆ ಎಂದು ಅವರು ಹೇಳಿದರು.


ಜುಲೈ 12ರಂದು ಮದುವೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ಎಂಡಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜುಲೈ 12 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಸಾಂಪ್ರದಾಯಿಕ ಕೆಂಪು ಮತ್ತು ಚಿನ್ನದ ಬಣ್ಣದ ಕಾರ್ಡ್ ಅನ್ನು ಆಹ್ವಾನ ಪತ್ರಿಕೆ ಒಳಗೊಂಡಿದೆ ಎನ್ನಲಾಗಿದೆ.

ಮುಖ್ಯ ವಿವಾಹ ಸಮಾರಂಭಗಳು ಜುಲೈ 12ರಂದು ಪ್ರಾರಂಭವಾಗುತ್ತವೆ. ಜುಲೈ 13ರಂದು ಶುಭ ಆಶೀರ್ವಾದ್ ದಿನವಾಗಿರುತ್ತದೆ. ಜುಲೈ 14 ರಂದು ಮಂಗಲ್ ಉತ್ಸವ ಅಥವಾ ಮದುವೆಯ ಆರತಕ್ಷತೆ ನಡೆಯಲಿದೆ. ಪ್ರತಿ ಕಾರ್ಯಕ್ರಮಕ್ಕೂ ಡ್ರೆಸ್ ಕೋಡ್ ಇರಲಿದೆ. ಈ ಎಲ್ಲಾ ಕಾರ್ಯಗಳು ಬಿಕೆಸಿಯಲ್ಲಿರುವ ಜಿಯೋ ವರ್ಲ್ಡ್ ಸೆಂಟರ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಕೊಟ್ಟ ಪ್ರೇಮ ಪತ್ರ ಪ್ರಿಂಟ್ ಆಗಿದ್ದ ಗೌನ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌!

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ 2022ರಲ್ಲಿ ಕುಟುಂಬ ಸದಸ್ಯರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ರಾಜಸ್ಥಾನದ ರಾಜಸಮಂದ್‌ನ ನಾಥದ್ವಾರ ಪಟ್ಟಣದ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ಸಾಂಪ್ರದಾಯಿಕ ‘ರೋಕಾ’ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

ಫೆಬ್ರವರಿಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹಪೂರ್ವ ಆಚರಣೆಗಳ ಭಾಗವಾಗಿ, ಅಂಬಾನಿ ಕುಟುಂಬವು ಗುಜರಾತ್‌ನ ಜಾಮ್‌ನಗರದಲ್ಲಿರುವ ವಿಸ್ತಾರವಾದ ದೇವಾಲಯದ ಸಂಕೀರ್ಣದಲ್ಲಿ 14 ಹೊಸ ದೇವಾಲಯಗಳನ್ನು ನಿರ್ಮಿಸಲು ಅನುಕೂಲ ಮಾಡಿಕೊಟ್ಟಿತು. ಮಾರ್ಚ್ 1ರಿಂದ 3ರವರೆಗೆ ಜಾಮ್‌ನಗರ ನಗರದಲ್ಲಿ ಮೂರು ದಿನಗಳ ಪೂರ್ವ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು.

Continue Reading

ದೇಶ

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ ಎಂದು ಕಾಂಗ್ರೆಸ್‌ ಮಾಜಿ ನಾಯಕ ಆಚಾರ ಪ್ರಮೋದ್‌ ಕೃಷ್ಣಂ ಹೇಳಿದರು.

VISTARANEWS.COM


on

Acharya Pramod Krishnam
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ (Rahul Gandhi) ಗಾಂಧಿ ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿದ್ದಾರೆ. ಪ್ರತಿಪಕ್ಷ ನಾಯಕನಾಗಿ ಅವರು ಕಾಂಗ್ರೆಸ್‌ ಜತೆಗೆ ಇಂಡಿಯಾ ಒಕ್ಕೂಟವನ್ನೂ (INDIA Bloc) ಸಂಸತ್‌ನಲ್ಲಿ ಪ್ರತಿನಿಧಿಸಲಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್‌ನಂತೆ ಪ್ರತಿಪಕ್ಷಗಳನ್ನೂ ರಾಹುಲ್‌ ಗಾಂಧಿ ನಿರ್ನಾಮ ಮಾಡಲಿದ್ದಾರೆ” ಎಂದು ಅವರು ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಯೊಂದಿಗೆ ಆಚಾರ್ಯ ಪ್ರಮೋದ್‌ ಕೃಷ್ಣಂ ಮಾತನಾಡಿದರು. “ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ” ಎಂದು ಹೇಳಿದರು. ಸಂಸತ್‌ನಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಜೈ ಪ್ಯಾಲೆಸ್ತೀನ್‌ ಎಂದು ಅಸಾದುದ್ದೀನ್‌ ಓವೈಸಿ ಘೋಷಣೆ ಕೂಗಿದ ಕುರಿತು ಪ್ರತಿಕ್ರಿಯಿಸಿದ ಅವರು, “ಇದು ಭಾರತ ಸಂಸತ್ತು. ಭಾರತದ ಸಂಸತ್‌ನಲ್ಲಿ ಹಾಗೆ ಘೋಷಣೆ ಕೂಗುವುದು ಸರಿಯಲ್ಲ. ಅವರು ಕೂಡಲೇ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಾಂಗ್ರೆಸ್‌ ನಾಯಕರೂ ಆಗಿದ್ದರು. ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಇವರನ್ನು ಕೆಲವು ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಕಲ್ಕಿ ದೇವಾಲಯಕ್ಕೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಚಾಟನೆ ಮಾಡಿತ್ತು. ಇದಾದ ಬಳಿಕ ನರೇಂದ್ರ ಮೋದಿ ಅವರು ಕಲ್ಕಿ ದೇವಾಲಯಕ್ಕೆ ಭೇಟಿ ನೀಡಿ, ಆಚಾರ್ಯ ಪ್ರಮೋದ್‌ ಕೃಷ್ಣಂ ಅವರನ್ನು ಹೊಗಳಿದ್ದರು.

“ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕಾಗಿ ಹೋರಾಡಿದರು. ಇದಕ್ಕೂ ಮೊದಲಿನ ಸರ್ಕಾರಗಳು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಅವಕಾಶ ಕೊಡಲಿಲ್ಲ. ಕಾನೂನು ಹೋರಾಟವನ್ನೂ ಪ್ರಮೋದ್‌ ಕೃಷ್ಣಂ ಅವರು ಮಾಡಬೇಕಾಯಿತು. ಕಲ್ಕಿ ಮಂದಿರ ನಿರ್ಮಾಣವಾದರೆ ಕಾನೂನು ಸುವ್ಯಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದರು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಲ್ಕಿ ಮಂದಿರ ನಿರ್ಮಾಣಕ್ಕಶಂಕುಸ್ತಾಪನೆ ನೆರವೇರಿಸಲಾಗುತ್ತದೆ” ಎಂದು ಪ್ರತಿಪಕ್ಷಗಳಿಗೆ ಮೋದಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದರು.

ಇದನ್ನೂ ಓದಿ: Parliament Session 2024: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಹುಲ್‌ ಗಾಂಧಿ ಮಾಡಿದ್ದೇನು ಗೊತ್ತಾ? ವೈರಲಾಯ್ತು ವಿಡಿಯೋ

Continue Reading

ದೇಶ

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Arvind Kejriwal: ತಮ್ಮ ಅರ್ಜಿಯನ್ನು ಹಿಂಪಡೆಯಲು ಕೇಂಜ್ರಿವಾಲ್‌ ಅವರಿಗೆ ನ್ಯಾ. ಮನೋಜ್‌ ಮಿಶ್ರಾ ಮತ್ತು ಎಸ್‌ವಿಎನ್‌ ಭಟ್ಟಿ ಇದ್ದ ನ್ಯಾಯಪೀಠ ಅವಕಾಶ ನೀಡಿತು. ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ (ಜೂನ್‌ 21) ಬೆಳಗ್ಗೆ ಆದೇಶ ಹೊರಡಿಸಿತು. ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ಹಗರಣ (Delhi Excise Policy Case) ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌(Arvind Kejriwal) ಅವರನ್ನು ಸಿಬಿಐ ಇಂದು ಔಪಚಾರಿಕವಾಗಿ ಅರೆಸ್ಟ್‌ ಮಾಡಿತ್ತು. ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ ಸಿಬಿಐ ಐದು ದಿನಗಳ ಕಾಲ ತನ್ನ ಕಸ್ಟಡಿಗೆ ಕೇಳಿತ್ತು. ಮತ್ತೊಂದೆಡೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ತಾವು ಸಲ್ಲಿಸಿದ್ದ ಅರ್ಜಿಯನ್ನು ಕೇಜ್ರಿವಾಲ್‌ ಹಿಂಪಡೆದಿದ್ದಾರೆ.

ತಮ್ಮ ಅರ್ಜಿಯನ್ನು ಹಿಂಪಡೆಯಲು ಕೇಂಜ್ರಿವಾಲ್‌ ಅವರಿಗೆ ನ್ಯಾ. ಮನೋಜ್‌ ಮಿಶ್ರಾ ಮತ್ತು ಎಸ್‌ವಿಎನ್‌ ಭಟ್ಟಿ ಇದ್ದ ನ್ಯಾಯಪೀಠ ಅವಕಾಶ ನೀಡಿತು. ರೋಸ್‌ ಅವೆನ್ಯೂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಇ.ಡಿ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸುವವರೆಗೂ ಬಿಡುಗಡೆ ಮಾಡಬಾರದು ಎಂಬುದಾಗಿ ದೆಹಲಿ ಕೋರ್ಟ್‌ ಶುಕ್ರವಾರ (ಜೂನ್‌ 21) ಬೆಳಗ್ಗೆ ಆದೇಶ ಹೊರಡಿಸಿತು. ಜಾಮೀನಿಗೆ ಸಂಬಂಧಿಸಿದ ಆದೇಶಕ್ಕೆ ತಡೆಯಾಜ್ಞೆ ನೀಡಲಾಗಿದೆ. ಇನ್ನೂ 2-3 ದಿನಗಳ ಬಳಿಕ ಆದೇಶ ಹೊರಡಿಸಲಾಗುವುದು ಎಂಬುದಾಗಿ ಕೋರ್ಟ್‌ ಹೇಳಿತ್ತು. ಅದೂ ಅಲ್ಲದೇ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೋಸ್‌ ಅವೆನ್ಯೂ ಕೋರ್ಟ್‌ ಆದೇಶಕ್ಕೆ ದೆಹಲಿ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಕೇಜ್ರಿವಾಲ್‌ಗೆ ಅಲ್ಲೂ ರಿಲೀಫ್‌ ಸಿಕ್ಕಿರಲಿಲ್ಲ.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು.

ಇದನ್ನೂ ಓದಿ:Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Continue Reading

ವಾಣಿಜ್ಯ

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

5G Spectrum: ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. ಇದರೊಂದಿಗೆ 5ಜಿ ತರಂಗಗಳ ಹರಾಜು ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ಸರ್ಕಾರಕ್ಕೆ 11,300 ಕೋಟಿ ರೂ. ಆದಾಯ ಲಭಿಸಿದೆ.

VISTARANEWS.COM


on

5G Spectrum
Koo

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ 5ಜಿ ತರಂಗಗಳ ಹರಾಜು (5G Spectrum) ಪ್ರಕ್ರಿಯೆ ಭಾನುವಾರ ಮುಕ್ತಾಯಗೊಂಡಿದೆ. ಕೇಂದ್ರ ಸರ್ಕಾರವು (Central Government) 11,300 ಕೋಟಿ ರೂಪಾಯಿಗೆ 5ಜಿ ತರಂಗ ಹರಾಜು ಮಾಡಿದ್ದು, ದೇಶದ ಪ್ರಮುಖ ಖಾಸಗಿ ಟೆಲಾಕಾಂ ಕಂಪನಿಯಾದ ಭಾರ್ತಿ ಏರ್‌ಟೆಲ್‌ (Bharti Airtel) 6,857 ಕೋಟಿ ರೂ.ಗೆ ತರಂಗಗಳನ್ನು ಖರೀದಿಸುವ (5G Spectrum Auctions) ಮೂಲಕ ಹರಾಜಿನಲ್ಲಿ ಬೃಹತ್‌ ಬಿಡ್ಡರ್‌ ಎನಿಸಿದೆ.

ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. “ಗ್ರಾಹಕರಿಗೆ ಅತ್ಯುತ್ತಮ, ಅತ್ಯಾಧುನಿಕ ಹಾಗೂ ಕ್ಷಿಪ್ರಗತಿಯ ಸೇವೆಗಳನ್ನು ಒದಗಿಸುವ ದಿಸೆಯಲ್ಲಿ ಭಾರ್ತಿ ಏರ್‌ಟೆಲ್‌ ಕಂಪನಿಯು 5ಜಿ ತರಂಗಗಳನ್ನು ಖರೀದಿಸಿದೆ. ಇದರಿಂದ ದೇಶದ ಮೂಲೆ ಮೂಲೆಗಳಿಗೂ 5ಜಿ ಸೇವೆಯನ್ನು ವಿಸ್ತರಿಸುವ ನಮ್ಮ ಉದ್ದೇಶಕ್ಕೆ ಈಗ ಬಲ ಬಂದಂತಾಗಿದೆ” ಎಂದು ಹರಾಜು ಪ್ರಕ್ರಿಯೆ ಮುಗಿದ ಬಳಿಕ ಕಂಪನಿಯ ಎಂಡಿ ಹಾಗೂ ಸಿಇಒ ಗೋಪಾಲ್‌ ವಿಠಲ್‌ ಮಾಹಿತಿ ನೀಡಿದ್ದಾರೆ.

ತರಂಗಗಳ ಹರಾಜು ಮೊತ್ತ ಕುಸಿತ

ತರಂಗಗಳ ಹರಾಜು ಪ್ರಕ್ರಿಯೆಗೆ 2022ಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ಮೊತ್ತ ಲಭಿಸಿದೆ. 2022ರಲ್ಲಿ 72,097 ಎಂಎಚ್‌ಝಡ್‌ ರೇಡಿಯೊ ತರಂಗಗಳ ಮಾರಾಟದಿಂದ 1.5 ಲಕ್ಷ ಕೋಟಿ ರೂ. ಆದಾಯ ಲಭಿಸಿತ್ತು. ಆ ವರ್ಷದಲ್ಲಿ ಕೇಂದ್ರ ಸರ್ಕಾರವು ಮೊದಲ ಬಾರಿಗೆ 5ಜಿ ತರಂಗಗಳ ಹರಾಜು ನಡೆಸಿತ್ತು. ಆ ವರ್ಷ ಸರ್ಕಾರವು ತರಂಗಗಳ ಹರಾಜಿನಿಂದ ದಾಖಲೆ ಮೊತ್ತದ ಆದಾಯ ಗಳಿಸಿತ್ತು. ಮುಕೇಶ್‌ ಅಂಬಾನಿ ಅವರ ಜಿಯೋ ಒಂದೇ ಸುಮಾರು 88 ಸಾವಿರ ಕೋಟಿ ರೂ. ಕೊಟ್ಟು 5ಜಿ ತರಂಗಗಳನ್ನು ಖರೀದಿಸಿತ್ತು.

ಎರಡನೇ ದಿನದ (ಬುಧವಾರ-ಜೂನ್‌ 26) ಹರಾಜಿನಲ್ಲಿ ಕೇಂದ್ರ ಸರ್ಕಾರವು ಸುಮಾರು 96,238 ಕೋಟಿ ರೂ. ಮೌಲ್ಯದ ತರಂಗಗಳನ್ನು ಮಾರಾಟ ಮಾಡುವ ಉದ್ದೇಶ ಹೊಂದಿತ್ತು. ಆದರೆ, ಸರ್ಕಾರದ ಗುರಿಯಲ್ಲಿ ಶೇ.12ರಷ್ಟು ಗುರಿ ಮಾತ್ರ ಸಾಧಿಸಲಾಯಿತು ಎಂದು ತಿಳಿದುಬಂದಿದೆ. ದೇಶದಲ್ಲಿ ಜಿಯೋ, ಏರ್‌ಟೆಲ್‌ ಸೇರಿ ಹಲವು ಟೆಲಿಕಾಮ್‌ ಕಂಪನಿಗಳು 5 ಜಿ ಸೇವೆಗಳನ್ನು ಒದಗಿಸುತ್ತಿವೆ. ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆಯು ಲಭ್ಯವಿದೆ. ಈಗಾಗಲೇ ಕೇಂದ್ರ ಸರ್ಕಾರವು 6ಜಿ ಅಳವಡಿಕೆಗೆ ಚಿಂತನೆ ನಡೆಸಿದೆ.

ಇದನ್ನೂ ಓದಿ: 5G India: ಭಾರತದ 5ಜಿ ವೇಗಕ್ಕೆ ಸಾಟಿ ಇಲ್ಲ; ನಮ್ಮ ಸ್ಪೀಡ್‌ ಮುಂದೆ ಜಪಾನ್‌, ಬ್ರಿಟನ್‌ ಕೂಡ ಹಿಂದೆ!

Continue Reading
Advertisement
Paris Fashion Week
ಫ್ಯಾಷನ್12 mins ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ16 mins ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest30 mins ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ55 mins ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest1 hour ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ1 hour ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest1 hour ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ1 hour ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್1 hour ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

5G Spectrum
ವಾಣಿಜ್ಯ1 hour ago

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌