Prerane : ನಾಯಕತ್ವಕ್ಕಾಗಿ ಅಧ್ಯಾತ್ಮಿಕ ಪ್ರಜ್ಞೆ - Vistara News

ಧಾರ್ಮಿಕ

Prerane : ನಾಯಕತ್ವಕ್ಕಾಗಿ ಅಧ್ಯಾತ್ಮಿಕ ಪ್ರಜ್ಞೆ

ಭಗವದ್ಗೀತೆಯೊಂದಿಗೆ ಅನುಸಂಧಾನ ಮಾಡಿ ನಮ್ಮ ಅಧ್ಯಾತ್ಮಿಕ ಪ್ರಜ್ಞೆಯನ್ನು ಹೆಚ್ಚಿಸಿಕೊಂಡು, ಅದರಿಂದಾಗಿ ನಮ್ಮ ಅಧ್ಯಾತ್ಮ ಸಾಧನೆಗೂ ನೆರವು ಪಡೆದು ಪ್ರಾಪಂಚಿಕ ಜೀವನವನ್ನೂ ಚೆನ್ನಾಗಿಸಿಕೊಳ್ಳೋಣ ಎನ್ನುತ್ತಾರೆ ಆಧ್ಯಾತ್ಮ ಚಿಂತಕ ಜಿ. ನಾಗರಾಜ. ಅವರ ವಿಶೇಷ ಲೇಖನ ಇಂದಿನ ಪ್ರೇರಣೆ (Prerane) ಅಂಕಣದಲ್ಲಿದೆ.

VISTARANEWS.COM


on

bhagavad gita prerane
ಕಲೆ: ವಾದಿರಾಜ್ ಪ್ರಸನ್ನ (ಕಾಫಿಪುಡಿ ಕಲೆ )
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಿ ನಾಗರಾಜ
ಅಧ್ಯಾತ್ಮವೆಂದೊಡನೆಯೇ ಪ್ರಾಪಂಚಿಕ ಜೀವನದಿಂದ ದೂರವಿರುವಿಕೆ, ವಿರಕ್ತಿ, ತ್ಯಾಗಗಳೇ ಮನಸ್ಸಿಗೆ ಬರುತ್ತವೆ. ಅಧ್ಯಾತ್ಮಿಕ ಪ್ರಜ್ಞೆ ವೈರಾಗ್ಯವನ್ನುಂಟು ಮಾಡುವುದು, ಕೆಲವರನ್ನು ಪ್ರಾಪಂಚಿಕ ಜೀವನದಿಂದ ವಿರಕ್ತ ಜೀವನಕ್ಕೆ ಆಕರ್ಷಿಸುವುದು ಸತ್ಯವಾದರೂ ಸಹ ಎಲ್ಲರಿಗೂ ಹಾಗೆಯೇ ಆಗುತ್ತದೆಂದೇನಿಲ್ಲ. ಪ್ರಾಪಂಚಿಕ ವ್ಯವಹಾರಗಳ ನಡುವೆ ಇದ್ದುಕೊಂಡೂ ಸಹ ಅಧ್ಯಾತ್ಮಿಕತೆಯನ್ನು ಬೆಳೆಸಿಕೊಳ್ಳಬಹುದು. ಇಂತಹ ಸನ್ನಿವೇಶಗಳಲ್ಲಿ ಅಧ್ಯಾತ್ಮ ಪ್ರಜ್ಞೆ ಪ್ರಾಪಂಚಿಕ ಜೀವನಕ್ಕೂ ಪೋಷಕವಾಗಿರುತ್ತದೆ.

ಇದಕ್ಕಿರುವ ಸರ್ವೋತ್ಕೃಷ್ಟ ಉದಾಹರಣೆಯೆಂದರೆ ಕೃಷ್ಣಾರ್ಜುನರ ಸಂವಾದ (ಭಗವದ್ಗೀತೆ). ಇಲ್ಲಿ ಶ್ರೀಕೃಷ್ಣ ಪರಮಾತ್ಮನ ಗೀತೋಪದೇಶದಿಂದ ಪ್ರಬೋಧಗೊಂಡ ಅರ್ಜುನನ ಅಧ್ಯಾತ್ಮ ಪ್ರಜ್ಞೆ, ಆತ ಏಕ ಮನಸ್ಸಿನಿಂದ ಯುದ್ಧಮಾಡುವಂತೆ ಮಾಡಿತು. ಶ್ರೀ ಡಿ.ವಿ.ಗುಂಡಪ್ಪನವರ ಭಗವದ್ಗೀತಾಧಾರಿತ ಗ್ರಂಥವಾದ ಜೀವನಧರ್ಮಯೋಗವು ಭಗವದ್ಗೀತೆಯು ಪ್ರಾಪಂಚಿಕ ಜೀವನವನ್ನು ಚೆನ್ನಾಗಿಟ್ಟುಕೊಳ್ಳುವುದಕ್ಕೆ ಪೋಷಕವಾಗಿದೆಯೆಂಬುದನ್ನು ಸಾರುತ್ತದೆ.

ಇನ್ನು ಕಾರ್ಪೊರೇಟ್ ವಲಯದಲ್ಲಿ ಈ ವಿಷಯ ಸ್ಪಿರಿಚುಯಲ್ ಇಂಟಲಿಜೆನ್ಸ್ (Spritiual Intelligence) ಎನ್ನುವ ಶೀರ್ಷಿಕೆಯಲ್ಲಿ ಚಾಲ್ತಿಗೆ ಬರುತ್ತಿದೆ. ನಾಯಕತ್ವದ ಸ್ಥಾನಗಳನ್ನು ನಿರ್ವಹಿಸುವುದಕ್ಕೆ ಈ ಸ್ಪಿರಿಚುಯಲ್ ಇಂಟಲಿಜೆನ್ಸ್ ಅಗತ್ಯ ಎಂದು ಪ್ರಭಾವೀ ಮ್ಯಾನೇಜ್ಮೆಂಟ್ ವಿದ್ಯಾಲಯಗಳು ಗುರುತಿಸಿ ಸಾರಲಿಕ್ಕೆ ಆರಂಭಿಸಿವೆ. ಏನಿದು ಸ್ಪಿರಿಚುಯಲ್ ಇಂಟಲಿಜೆನ್ಸ್ ಅಥವಾ ಅಧ್ಯಾತ್ಮಿಕ ಪ್ರಜ್ಞೆ? ನಾಯಕತ್ವ ನಿರ್ವಹಣೆಗೆ ಏಕೆ ಬೇಕು ಈ ಸ್ಪಿರಿಚುಯಲ್ ಇಂಟಲಿಜೆನ್ಸ್? ಯಾರು ಹೀಗೆ ಹೇಳುತ್ತಿದ್ದಾರೆ ಎನ್ನುವುದನ್ನು ವಿವರವಾಗಿ ಪರಾಮರ್ಶೆ ಮಾಡೋಣ.

ಅಧ್ಯಾತ್ಮ ಪ್ರಜ್ಞೆಯ ಒಂದು ಮುಖ್ಯ ಭಾಗವೆಂದರೆ, ನಾನು ಯಾರು? ನನ್ನ ಗುರಿ ಏನು? ನನ್ನತನವರಿತು, ನನ್ನಗುರಿಯನ್ನರಿತು ಯಾವ ಯಾವ ಸನ್ನಿವೇಶಗಳಿಗೆ ನಾನು ಹೇಗೆ ಪ್ರತಿಕ್ರಿಯಿಸಬೇಕು? ಯಾವ ಸನ್ನಿವೇಶಗಳಲ್ಲಿ ನನ್ನ ಕರ್ತವ್ಯವೇನು ಎಂದು ನಿಶ್ಚಯ ಮಾಡಿ ಕಾರ್ಯರೂಪಕ್ಕೆ ತಂದು ಯಶಸ್ಸನ್ನು ಕಾಣುವ ಒಂದು ನಡೆಯನ್ನು ಇಂದು ಅಧ್ಯಾತ್ಮ ಪ್ರಜ್ಞೆ ಎಂದು ಗುರುತಿಸುತ್ತಿದ್ದಾರೆ. ಅದು ಇಂದಿನ ಪ್ರಾಪಂಚಿಕ ವ್ಯವಹಾರ ಕ್ಷೇತ್ರದಲ್ಲಿ ಹೇಗೆ ಅನ್ವಯವಾಗುತ್ತದೆಂದು ನೋಡೋಣ.

prerane

ಒಮ್ಮೆ ಕೋಕಕೋಲ ಸಂಸ್ಥೆಯು ಪೇಯಗಳ ಮಾರುಕಟ್ಟೆಯ ಅದ್ವಿತೀಯ ಸ್ವಾಮ್ಯವನ್ನು ಹೊಂದಿತ್ತು. ಪೆಪ್ಸಿ ಸಂಸ್ಥೆಯು ಮಾರುಕಟ್ಟೆಗೆ ಇಳಿದ ನಂತರ ಕೋಕಕೋಲಾದ ಗಣನೀಯ ಮಾರುಕಟ್ಟೆ ಪಾಲನ್ನು ತನ್ನದಾಗಿ ಮಾಡಿಕೊಂಡು ಬಿಟ್ಟಿತು. ಇದರಿಂದ ವ್ಯಗ್ರಗೊಂಡ ಕೋಕಕೋಲದ ನಾಯಕತ್ವ ತಂಡ ಈ ಪರಿಸ್ಥಿತಿಗೆ ಹೇಗೆ ಪ್ರತಿಕ್ರಿಯಿಸಬೇಕೆಂದು ಆಲೋಚಿಸುತ್ತಿರುವಾಗ ಕೋಕಕೋಲಾದ ನಾಯಕರು (ಸಿಇಓ) ತಮ್ಮ ತಂಡದ ಸದಸ್ಯರಿಗೆ ಬಿರುಸಿನ ಚಿಂತನೆ ನಡೆಸಿ ನಿಮ್ಮ ಐಡಿಯಾಗಳನ್ನು ಪಟ್ಟಿ ಮಾಡಿ ಎಂದು ಹೇಳಿ ತಾವು ಹೊರನಡೆದು ಮತ್ತೆ ಮುಕ್ಕಾಲು ಗಂಟೆಯ ನಂತರ ಮತ್ತೆ ಸಭೆಗೆ ಬಂದರು. ಅಷ್ಟರಲ್ಲಿ ತಂಡದವರು ತಮ್ಮ ಕಾರ್ಯಾವಳಿಯನ್ನು ಪಟ್ಟಿ ಮಾಡಿದ್ದರು. ಆ ಪಟ್ಟಿಯಲ್ಲಿ ಪೆಪ್ಸಿ ಪಾಲಾಗಿದ್ದ ಮಾರುಕಟ್ಟೆ ಪಾಲನ್ನು ತಿರುಗೆ ತಮ್ಮದಾಗಿಸಿಕೊಳ್ಳುವುದು ಹೇಗೆನ್ನುವ ಬಗ್ಗೆ ನಾನಾ ತಂತ್ರಗಳಿದ್ದವು.

ಅದನ್ನು ನೋಡಿದ ಸಿಇಓ., ʻʻನೋಡಿ ಇಲ್ಲಿ ನೀವು ಪಟ್ಟಿ ಮಾಡಿರುವ ತಂತ್ರಗಳೆಲ್ಲದರ ಹಿಂದೆ ಮಾರುಕಟ್ಟೆಯ ಒಟ್ಟಳತೆ ನಿಗದಿತ ಆ ಪರಿಧಿಯೊಳಗೇ ನಾವು ಪೆಪ್ಸಿಯಿಂದ ನಮ್ಮ ಪಾಲನ್ನು ಪುನಃ ಪಡೆಯುವುದು ಹೇಗೆಂದು ಚಿಂತಿಸುತ್ತಿದ್ದೀರಿ. ಆದರೆ, ಮೂಲತಃ ನಮ್ಮ ಗುರಿಯೇನು, ಸಧ್ಯದ ಪರಿಸ್ಥಿತಿಯಲ್ಲಿ ನಮ್ಮ ಗುರಿಯತ್ತ ಸಾಗುವುದು ಹೇಗೆಂದು ಯೋಚಿಸಬೇಕು. ಪಪ್ಸಿಯಿಂದಾಗಿ ಮಾರುಕಟ್ಟೆ ಪಾಲು ಕಡಿಮೆಯಾಗಿ ನಮ್ಮ ಆದಾಯ ಕಡಿಮೆಯಾಗಿದೆ. ಆದುದರಿಂದ ನಮ್ಮ ಆದಾಯವನ್ನು ಮತ್ತೆ ಹೆಚ್ಚಿಸಿಕೊಳ್ಳುವುದು ಹೇಗೆಂದು ಯೋಚಿಸಬೇಕೇ ಹೊರತು ಪೆಪ್ಸಿಯ ಪಾಲನ್ನೇ ಕಸಿದುಕೊಳ್ಳಬೇಕು ಅಂದುಕೊಂಡರೆ ಅದು ಬಹಳ ಸೀಮಿತ ಚಿಂತನೆಯಾಗುತ್ತದೆ. ಆದಾಯ ಹೆಚ್ಚಿಸಿಕೊಳ್ಳಬೇಕೆಂದರೆ, ಪೆಪ್ಸಿಯ ಪಾಲನ್ನು ಪುನಃ ಕಸಿಯವುದು ಒಂದು ಮಾರ್ಗವಷ್ಟೇ! ಆದರೆ ಅದು ಬಹಳ ದುರ್ಗಮವಾಗಿ ಕಾಣುತ್ತದೆ. ಅದರ ಬದಲು ಮಾರುಕಟ್ಟೆಯ ಗಾತ್ರವನ್ನೇ ಹೆಚ್ಚಿಸುವುದು ಹೇಗೆಂದು ನೋಡಿ. ಮಾರುಕಟ್ಟೆಯನ್ನೇ ವಿಸ್ತರಿಸಿದರೆ ನಮಗಿರುವ ಶೇಕಡವಾರು ಪಾಲಿನಲ್ಲೇ ನಮ್ಮ ಆದಾಯವೂ ಹೆಚ್ಚುತ್ತದೆ. ಆದಾಯ ಹೆಚ್ಚಿಸುವುದು ನಮ್ಮ ಗುರಿ ಅಷ್ಟೇ ಹೊರತು ಪೆಪ್ಸಿಯೊಂದಿಗೆ ಸೆಣೆಸುವುದಲ್ಲʼʼ ಎಂದರು.

ನಂತರ ಮತ್ತೊಮ್ಮೆ ಚಿಂತನಾ ಸಭೆ ನಡೆಸಿದ ತಂಡ, ಕೊಕಕೋಲ, ನೀರು, ಹಣ್ಣಿನ ರಸ, ಮುಂತಾದ ಅನೇಕ ಪೇಯಗಳನ್ನು ಮಾರುಕಟ್ಟೆಗೆ ತಂದು ಅದರಿಂದಾಗಿ ಮಾರುಕಟ್ಟೆಯು ವಿಸ್ತರಿಸಿ ಕೋಕಕೋಲದ ಆದಾಯವೂ ಹೆಚ್ಚಿತು.

ಇಲ್ಲಿ, ಪೆಪ್ಸಿ ತಂದೊಡ್ಡಿದ ಪರಿಸ್ಥಿತಿಯ ಸೆಳೆತಕ್ಕೆ ಒಳಗಾಗಿ ಪೆಪ್ಸಿಯೊಡನೆ ಸೆಣೆಸಾಟ ಎನ್ನುವ ಸುಳಿಗೆ ಸಿಲುಕದೇ ತಮ್ಮ ಮೂಲಗುರಿ ಏನೆನ್ನುವುದನ್ನು ಸ್ಪಷ್ಟವಾಗಿಟ್ಟುಕೊಂಡು ಅದಕ್ಕೆ ಬದ್ಧರಾಗಿ ಕಾರ್ಯಾಚರಣೆ ರೂಪಿಸಿ ಇಂದಿಗೂ ವರ್ಧಿಸುತ್ತಿರುವ ಒಂದು ವಾಣಿಜ್ಯ ಸಂಸ್ಥೆಯನ್ನಾಗಿ ಕೋಕಕೋಲ ಸಂಸ್ಥೆಯನ್ನು ಉಳಿಸಿಕೊಂಡರು. ಇಲ್ಲಿ ತಮ್ಮ ಮೂಲಗುರಿಯ ಬಗ್ಗೆ ಇರುವ ಸ್ಪಷ್ಟತೆ, ಅದರ ಬಗ್ಗೆ ಬದ್ದತೆ ಇತ್ಯಾದಿಯನ್ನು ಸ್ಪಿರಿಚುಯಲ್ ಇಂಟಲಿಜೆನ್ಸ್ ಎಂದು ಪರಿಗಣಿಸುತ್ತಾರೆ. ಕೋಕಕೋಲ ನಾಯಕರಿಗೆ ಭಗವದ್ಗೀತೆಯಿಂದ ಈ ಸ್ಪಿರಿಚುಯಲ್ ಇಂಟಲಿಜೆನ್ಸ್ ಬಂದಿತೋ ಇಲ್ಲವೋ ತಿಳಿಯದು. ಆದರೆ ಕೋಕಕೋಲ ನಾಯಕರು ಸ್ಪಿರಿಚುಯಲ್ ಇಂಟಲಿಜೆನ್ಸ್ ಅನ್ನು ಮೆರೆದಿರುವುದಂತೂ ಉಂಟು.

ಇನ್ನೊಂದು ಉದಾಹರಣೆಯೆಂದರೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ. ಅವರು ಅತ್ಯಂತ ಯಶಸ್ವೀ ನಾಯಕರಲ್ಲೊಬ್ಬರು. ಅವರು ಭಗವದ್ಗೀತೆಯ “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ” ಎನ್ನುವ ವಾಕ್ಯವನ್ನು ಅಕ್ಷರಶಃ ಪಾಲಿಸುತ್ತಿದ್ದರು. ಪ್ರತಿಯೊಂದು ಪಂದ್ಯದಲ್ಲಿಯೂ ಅವರ ಸಂಪೂರ್ಣ ಅಂಟು ಪ್ರಯತ್ನದೊಂದಿಗೆ ಇರುತ್ತಿತ್ತು. ಫಲಿತಾಂಶದ ಕಡೆಗೆ ಅಂಟಿಕೊಳ್ಳದೇ ಅತ್ಯುತ್ತಮ ಪ್ರಯತ್ನವನ್ನೇ ಪಡಬೇಕೆಂಬ ಅವರ ನೀತಿಯಿಂದಾಗಿ ಬಹಳ ಕ್ಲಿಷ್ಟಕರ ಪಂದ್ಯಗಳಲ್ಲಿಯೂ, ಸೋಲುವಂತಹ ಪಂದ್ಯಗಳಲ್ಲಿಯೂ ಅವರು ಒತ್ತಡಕ್ಕೊಳಗಾಗದೇ, ಸ್ಥಿಮಿತದಲ್ಲಿದ್ದು ಉತ್ತಮ ಪ್ರಯತ್ನವನ್ನು ಪಟ್ಟು ಪಂದ್ಯವನ್ನು ಗೆಲ್ಲುತ್ತಿದ್ದರು.

ಫಲಕ್ಕಿಂತ ಹೆಚ್ಚಿಗೆ ಪ್ರಯತ್ನಕ್ಕೆ ಆಂಟಿಕೊಳ್ಳುವುದೂ ಸಹ ಸ್ಪಿರಿಚುಯಲ್ ಇಂಟಲಿಜೆನ್ಸ್ ನ ಒಂದು ಅಂಶವೇ ಎನ್ನುವುದು ಇಲ್ಲಿ ಗಣನೀಯ.

ಈ ಸ್ಪಿರಿಚುಯಲ್ ಇಂಟಲಿಜೆನ್ಸ್ ಅನ್ನು ಹೇಗೆ ವರ್ಧಿಸಿಕೊಳ್ಳುವುದು? ಇದಕ್ಕೆ ನಾನಾ ಮಾರ್ಗಗಳಿದ್ದರೂ ಭಗವದ್ಗೀತೆಯ ಅನುಸಂಧಾನವು ಸ್ಪಿರಿಚುಯಲ್ ಇಂಟಲಿಜೆನ್ಸ್ ಅನ್ನು ಹೆಚ್ಚಿಸಿಕೊಳ್ಳುವುದಕ್ಕಿರುವ ಅತ್ಯುತ್ತಮ ಸಾಧನ. ಕೋಕಕೋಲ ಸಿಇಓ ಅವರೇ ಆಗಲಿ, ಧೋನಿಯೇ ಆಗಲಿ ಭಗವದ್ಗೀತೆ ಓದಿದ್ದರೋ ಇಲ್ಲವೋ ತಿಳಿಯದು. ಆದರೆ ಅಂತಹ ನಾಯಕತ್ವದ ಸ್ಥಾನದಲ್ಲಿರುವವರಿಗೆ ಪಾಠ ಮಾಡುವ ನಾಯಕತ್ವ ಕ್ಷೇತ್ರದ ಅತ್ಯಂತ ಪ್ರಭಾವೀ ಬರಹಗಾರರಾದ ಸ್ಟೀಫನ್ ಕವೆ ಅವರು ತಮ್ಮ ಪ್ರಭಾವೀ ಪುಸ್ತಕವಾದ “The seven habits of highly effective people” ಭಗವದ್ಗೀತೆಯಿಂದ ಪ್ರೇರಿತವಾಗಿದೆಯೆಂದು ಸ್ಪಷ್ಟವಾಗಿ ನುಡಿದಿದ್ದಾರೆ.

ಒಂದು ಕಾಲದಲ್ಲಿ “Fortune 500” ಪಟ್ಟಿಯ ಐನೂರು ಸಂಸ್ಥೆಗಳಲ್ಲಿ ಮುನ್ನೂರೈವತ್ತಕಿಂತ ಹೆಚ್ಚು ಸಂಸ್ಥೆಗಳು ಸ್ಟೀಫನ್ ಕವೆ ಅವರ ಪುಸ್ತಕವನ್ನು ತಮ್ಮ ನಾಯಕತ್ವ ತರಬೇತಿ ಪಠ್ಯದಲ್ಲಿ ಅಳವಡಿಸಿಕೊಂಡಿದ್ದರು. ಹೀಗೆ ಪರೋಕ್ಷವಾಗಿ ಭಗವದ್ಗೀತೆಯ ಪ್ರಭಾವವು ಕಾರ್ಪೊರೇಟ್ ಕ್ಷೇತ್ರದ ನಾಯಕರನ್ನು ಹೇಗೆ ಪ್ರಭಾವಗೊಳಿಸಿತ್ತು ಎಂದು ತಿಳಿಯುತ್ತದೆ.

ಹೀಗೆ ವಿಶ್ವಮಾನ್ಯವಾಗಿರುವ ಭಗವದ್ಗೀತೆ ಅನುಸಂಧಾನ ಮಾಡಿ ನಮ್ಮ ಅಧ್ಯಾತ್ಮಿಕ ಪ್ರಜ್ಞೆಯನ್ನು ಹೆಚ್ಚಿಸಿಕೊಂಡು, ಅದರಿಂದಾಗಿ ನಮ್ಮ ಅಧ್ಯಾತ್ಮ ಸಾಧನೆಗೂ ನೆರವು ಪಡೆದು ಪ್ರಾಪಂಚಿಕ ಜೀವನವನ್ನೂ ಚೆನ್ನಾಗಿಸಿಕೊಳ್ಳೋಣ.

– ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನು ಓದಿ : Prerane : ಐಕ್ಯತೆಯನ್ನು ಅರಸುವ ಹಂಬಲ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Tumkur News: ವಿಜೃಂಭಣೆಯಿಂದ ನಡೆದ ಶ್ರೀ ಬೇವಿನಳಮ್ಮ ದೇವಿ ಜಲಧಿ ಮಹೋತ್ಸವ

Tumkur News: ಕೊರಟಗೆರೆ ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ ನೆರೆವೇರಿತು. ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

VISTARANEWS.COM


on

Shree Bevinalamma Devi Jaladhi Mahotsav celebration in koratagere taluk
Koo

ಕೊರಟಗೆರೆ: ತಾಲೂಕಿನ ಚನ್ನರಾಯದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವವು ಶ್ರದ್ಧಾ ಭಕ್ತಿಯಿಂದ (Tumkur News) ನೆರೆವೇರಿತು.

ಶ್ರೀ ಬೇವಿನಳಮ್ಮ ದೇವಿಯ ಜಲಧಿ ಮಹೋತ್ಸವ ಅಂಗವಾಗಿ ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಇದನ್ನೂ ಓದಿ:Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

ಸಾಹಿತಿ ಡಾ. ನರಸಿಂಹಮೂರ್ತಿ ಮಾತನಾಡಿ, ಸುಮಾರು 250 ವರ್ಷಗಳ ಇತಿಹಾಸವುಳ್ಳ ದೇವಗಾನಿಕೆ ಶ್ರೀ ಬೇವಿನಳಮ್ಮ ತಾಯಿ ಏಳು ಜನ ಅಕ್ಕತಂಗಿಯರಲ್ಲಿ ತಾಯಿಯು ಒಬ್ಬಳು. ಈ ತಾಯಿಯ ಜಾತ್ರೆ-ಜಲಧಿ ವಿಶೇಷವಾಗಿ ಆಚರಣೆ ಮಾಡುತ್ತಾ ನಮ್ಮ ಪೂರ್ವಿಕರು ಬಂದಿದ್ದಾರೆ. ಹಾಗೆ ನಾವು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಾ ಬಂದಿದ್ದೇವೆ. ಈ ದೇವಿಯ ಜಾತ್ರೆಯನ್ನು ಐದು ವರ್ಷಕ್ಕೊಮ್ಮೆ ಮಾಡುತ್ತಿದ್ದು, ಜಲಧಿಯನ್ನು ವರ್ಷಕ್ಕೊಮ್ಮೆ ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ವೇಳೆ ಕಾಂಗ್ರೆಸ್ ಮುಖಂಡ ಮಂಜುನಾಥ್ ಮಾತನಾಡಿ, ಜಟ್ಟಿ ಅಗ್ರಹಾರ ಎಂದರೇ ಜಟ್ಟಿ ಮನೆತನದವರಿಗೆ ರಾಜ ಮಹಾರಾಜರು ಉಡುಗೊರೆಯಾಗಿ ನೀಡಿದಂತಹ ಇತಿಹಾಸವುಳ್ಳ ಗ್ರಾಮವಾಗಿದ್ದು, ಇಲ್ಲಿ ನೆಲೆಸಿರುವ ಗ್ರಾಮ ಶಕ್ತಿ ಬೇವಿನಳಮ್ಮ ತಾಯಿಯು ಗ್ರಾಮಕ್ಕೆ ಯಾವುದೇ ತೊಂದರೆ ತೊಡಕುಗಳು ಆಗದಂತೆ ಕಾಪಾಡಿಕೊಂಡು ಬರುತ್ತಿದ್ದಾಳೆ. ಬರಗಾಲವಿರುವುದರಿಂದ ಅದ್ದೂರಿಯಾಗಿ ಜಾತ್ರೆ ಮಾಡಲು ಆಗದ ಕಾರಣ ಜಲಧಿಯನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಈ ಸಂದರ್ಭದಲ್ಲಿ ಪೂಜಾರು ಲಕ್ಷ್ಮೀಶ್, ಗ್ರಾಮಸ್ಥರಾದ ತಿಮ್ಮರಾಜು, ಮಧುಸೂಧನ್, ಟೈಗರ್ ನಾಗರಾಜು, ಬಸವರಾಜು, ಕೇಬಲ್ ಸಿದ್ದಗಂಗಯ್ಯ, ಮಂಜುನಾಥ್, ಹನುಮಂತರಾಜು, ಚಂದ್ರಕುಮಾರ್, ಸಿದ್ದರಾಜು, ದೇವರಾಜು, ನಾಗರಾಜು, ಕೆಂಪರಾಜು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

Bengaluru News: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನದಿಂದ ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಸಮಾರೋಪ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

VISTARANEWS.COM


on

udupi Shree Bhandarakeri math annual award programme in bengaluru
Koo

ಬೆಂಗಳೂರು: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (Bengaluru News) ತಿಳಿಸಿದರು.

ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ಬೆಂಗಳೂರಿನ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 81ನೇ ಅಧಿವೇಶನ ಸಮಾರೋಪ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 24ನೇ ಆರಾಧನೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ರಾಜ ಪ್ರಭುತ್ವ ಇದ್ದಾಗ ಮಹಾರಾಜರೇ ಪ್ರಜೆಗಳಿಗೆ ಸಂತೋಷವಾಗುವ ರೀತಿ ರಾಜ್ಯಭಾರ ಮಾಡುತ್ತ ಇದ್ದರು. ರಾಮ ಇದಕ್ಕೆ ಆದರ್ಶ ಪುರುಷ. ಆದರೆ ಇಂದು ಪ್ರಜಾಪ್ರಭುತ್ವ ಇದೆ. ಪ್ರಜೆಗಳೇ ಸಮಾಜಕ್ಕೆ ಹಿತವಾಗುವಂತೆ ಬಾಳಬೇಕು. ಇತರರಿಗೆ ನೆಮ್ಮದಿ, ಸಂಭ್ರಮ ನೀಡುವ ಉದಾತ್ತ ಮನೋಭಾವ ರೂಢಿಸಿಕೊಂಡರೆ ನಾಡು ಸುಭಿಕ್ಷವಾಗಿರುತ್ತದೆ ಎಂದರು.

ಇದನ್ನೂ ಓದಿ: Harbhajan Singh : ಭಾರತ ತಂಡದ ಕೋಚ್ ಆಗಲು ಉತ್ಸಾಹ ತೋರಿದ ಹರ್ಭಜನ್​ ಸಿಂಗ್​

ಶ್ರೀ ಭಂಡಾರ ಕೇರಿ ಗುರುಗಳು ವೇದವ್ಯಾಸರ ಜಯಂತಿಯನ್ನು ರಾಷ್ಟ್ರಗುರು ವೇದವ್ಯಾಸ ಜಯಂತಿಯನ್ನಾಗಿ ಆಚರಿಸಬೇಕೆಂದು ಸಂಕಲ್ಪ ಮಾಡಿ, ಆ ನಿಟ್ಟಿನಲ್ಲಿ ಕಳೆದ ಎರಡು ದಶಕಗಳಿಂದ ವಿಶೇಷವಾದ ಕಾರ್ಯಕ್ರಮವನ್ನು ರೂಪಿಸುತ್ತಿದ್ದಾರೆ. ಪಂಡಿತರಿಗೆ, ವಿದ್ವಾಂಸರಿಗೆ ಸಾಕಷ್ಟು ಮನ್ನಣೆ ನೀಡಿ ಗೌರವಾದರಗಳನ್ನು ದಯ ಪಾಲಿಸಿದ್ದಾರೆ. ಶ್ರೀ ಭಂಡಾರಕೇರಿ ಗುರುಗಳ ಆಶಯ ಈಡೇರಿ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಗವಾನ್ ವೇದವ್ಯಾಸರ ಜಯಂತಿಯನ್ನು ಎಲ್ಲರೂ ಸಂಭ್ರಮಿಸುವಂತಾಗಲಿ ಎಂದು ಪೇಜಾವರ ಶ್ರೀಗಳು ಆಶಿಸಿದರು.

ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಮತ್ತು 48 ದಿನಗಳ ಮಂಡಲೋತ್ಸವದಲ್ಲಿ ಶ್ರೀ ಪೇಜಾವರ ಶ್ರೀಗಳು ವಿಶೇಷ ಸಾನಿಧ್ಯ ವಹಿಸಿ ಎಲ್ಲಾ ಕಾರ್ಯವನ್ನು ಸಾಂಗವಾಗಿ ನೆರವೇರಿಸಿ ಕೊಟ್ಟಿದ್ದು ವಿಶ್ವದ ಹೆಮ್ಮೆ ಎಂದು ತಿಳಿಸಿದರು.

70 ಜನರಿಗೆ ಸನ್ಮಾನ ಸಂಕಲ್ಪ

ಶ್ರೀ ವೇದವ್ಯಾಸ ಜಯಂತಿ ಸಂದರ್ಭದಲ್ಲಿ ಮೂವರು ಪಂಡಿತರಿಗೆ ಶ್ರೀಮಠ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಇದರೊಂದಿಗೆ ನಮ್ಮ ಎಪ್ಪತ್ತನೇ ವರ್ಧಂತಿ ಸಮಾರಂಭವೂ ನಡೆಯುತ್ತಿದ್ದು, ಈ ವರ್ಷ ಪೂರ್ಣ 70 ಜನ ಪಂಡಿತರಿಗೆ ಸನ್ಮಾನ ಮತ್ತು ಗೌರವವನ್ನು ಮಾಡಿ ಅವರನ್ನು ಪ್ರೋತ್ಸಾಹಿಸುವ ಸಂಕಲ್ಪ ಮಾಡಲಾಗಿದೆ ಎಂದು ಭಂಡಾರ ಕೇರಿ ಶ್ರೀಗಳು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ವೇದವ್ಯಾಸ ಜಯಂತಿ ಅಂಗವಾಗಿ ಬೆಳಗ್ಗೆ 8ಕ್ಕೆ ಹೋಮ, 9ಕ್ಕೆ ವೇದ ಶಾಸ್ತ್ರ ವಿನೋದ, ಮಧ್ಯಾಹ್ನ 2ಕ್ಕೆ ವಸಂತ ಉತ್ಸವ, ಸಂಜೆ 5ಕ್ಕೆ ಶ್ರೀ ವಿದ್ಯಾಮಾನ್ಯರ ಭಾವಚಿತ್ರ ಶೋಭಾಯಾತ್ರೆ ನೆರವೇರಿತು.

ಪ್ರಶಸ್ತಿ ಪ್ರದಾನ

ಉಡುಪಿ ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲದ ದಾಮೋದರಾಚಾರ್ಯರ ಪರವಾಗಿ ಅವರ ಶಿಷ್ಯ ಸಂತಾನ ಕೃಷ್ಣ ಅವರಿಗೆ (1 ಲಕ್ಷ ರೂ. ನಗದು, ಸನ್ಮಾನ ಪತ್ರ, ಸ್ಮರಣಿಕೆ), ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಮಧ್ವೇಶ ನಡಿಲ್ಲಾಯ ಅವರಿಗೆ (ರಾಜಹಂಸ ಪ್ರಶಸ್ತಿ), ಬಸವನಗುಡಿ ಶ್ರೀ ಜಯತೀರ್ಥ ವಿದ್ಯಾಪೀಠದ ಪಂಡಿತ ಸತ್ಯಬೋಧಾಚಾರ್ಯ ಹೊನ್ನಾಳಿ ಅವರಿಗೆ (ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿ) ತಲಾ 50 ಸಾವಿರ ರೂ. ನಗದು, ಸನ್ಮಾನ ಪತ್ರ ನೀಡಿ, ಗೌರವಿಸಲಾಯಿತು.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಶ್ರೀ ಭಂಡಾರಕೇರಿ ಶ್ರೀಗಳು ‘ಶ್ರೀ ರಾಮ ಲಲನ ಲಾಲನ ಲಲಾಮ ತೀರ್ಥ’ ಎಂದು ಬಿರುದು ನೀಡಿ, ಸನ್ಮಾನಿಸಿದರು. ನೂರಾರು ಜನ ವಿದ್ವಾಂಸರು, ಪಂಡಿತರು ಇದಕ್ಕೆ ಸಾಕ್ಷಿಯಾದರು.

Continue Reading

ಕರ್ನಾಟಕ

Koppala News: ಅಂಜನಾದ್ರಿ ದೇಗುಲ ಹುಂಡಿ ಎಣಿಕೆ; 5‌ ವಿದೇಶಿ ನಾಣ್ಯಗಳು ಪತ್ತೆ

Koppala News: ಗಂಗಾವತಿ ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿರುವ ಹಣ ಎಣಿಕೆ ಮಾಡಿದಾಗ ಪಾಕಿಸ್ತಾನ, ಮೊರಾಕ್ಕೊ, ಶ್ರೀಲಂಕಾ, ಅಮೆರಿಕಾ ಮತ್ತು ನೇಪಾಳ ದೇಶದ ನಾಣ್ಯಗಳು ಪತ್ತೆಯಾಗಿವೆ. ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ ಒಟ್ಟು 31.21 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಂಗ್ರಹವಾಗಿದೆ.

VISTARANEWS.COM


on

5 foreign coins found in anjanadri temple hundi counting
Koo

ಗಂಗಾವತಿ: ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಚಿಕ್ಕರಾಂಪುರದ ಅಂಜನಾದ್ರಿ (Anjanadri) ಬೆಟ್ಟದ ಆಂಜನೇಯನ ದೇವಸ್ಥಾನದಲ್ಲಿನ (Anjaneya Temple) ಕಾಣಿಕೆ ಹುಂಡಿಯಲ್ಲಿ (Koppala News) ಸಂಗ್ರಹವಾಗಿರುವ ಹಣ ಎಣಿಕೆ ಮಾಡಿದಾಗ ಐದು ದೇಶಗಳ ನಾಣ್ಯಗಳು ಪತ್ತೆಯಾಗಿವೆ.

ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಸೂಚನೆ ಮೆರೆಗೆ, ತಹಸೀಲ್ದಾರ್ ಯು. ನಾಗರಾಜ್ ನೇತೃತ್ವದಲ್ಲಿ ಕಂದಾಯ ಇಲಾಖೆ ಹಾಗೂ ದೇಗುಲ ಸಿಬ್ಬಂದಿ ಮಂಗಳವಾರ ಕಾಣಿಕೆ ಪೆಟ್ಟಿಗೆಯಲ್ಲಿ ಸಂಗ್ರಹವಾದ ಹಣ ಎಣಿಕೆ ನಡೆಸಿದರು. ಈ ಸಂದರ್ಭದಲ್ಲಿ ಪಾಕಿಸ್ತಾನ, ಮೊರಾಕ್ಕೊ, ಶ್ರೀಲಂಕಾ, ಅಮೆರಿಕಾ ಮತ್ತು ನೇಪಾಳ ದೇಶದ ನಾಣ್ಯಗಳು ಪತ್ತೆಯಾಗಿವೆ.

ಇದನ್ನೂ ಓದಿ: Bengaluru News: ಸಮಾಜಕ್ಕೆ ಸಂತೋಷ ನೀಡುವ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪೇಜಾವರ ಶ್ರೀ

ಪಾಕಿಸ್ತಾನದ ಐದು ರೂಪಾಯಿ ಮುಖ ಬೆಲೆಯ ನಾಣ್ಯ, ಯುನೈಟೆಡ್ ಸ್ಟೇಟ್ ಆಫ್ ಆಮೆರಿಕಾದ ಒಂದು ಸೆಂಟ್‌, ಮೊರಾಕ್ಕೊದಾ ಒಂದು ದಿರಮ್, ನೇಪಾಳದ ಒಂದು ನಾಣ್ಯ ಹಾಗೂ ಶ್ರೀಲಂಕದ ಐದು ರೂಪಾಯಿ ನಾಣ್ಯಗಳು ಹುಂಡಿಯಲ್ಲಿ ಪತ್ತೆಯಾಗಿವೆ.

30.21 ಲಕ್ಷ ರೂ. ಸಂಗ್ರಹ

ಐದು ವಿದೇಶಿ ನಾಣ್ಯ ಸೇರಿದಂತೆ ಅಂಜನಾದ್ರಿ ದೇಗುಲದ ಕಾಣಿಕೆ ಹುಂಡಿಯಲ್ಲಿ ಒಟ್ಟು 31.21 ಲಕ್ಷ ರೂಪಾಯಿ ಮೊತ್ತದ ನಗದು ಹಣ ಸಂಗ್ರಹವಾಗಿದೆ. ಕಳೆದ ಮಾರ್ಚ್‌ 27 ರಿಂದ ಇಲ್ಲಿವರೆಗೂ ಅಂದರೆ ಮೇ 21ರ ವರೆಗಿನ ಒಟ್ಟು 56 ದಿನಗಳಲ್ಲಿ 31.21 ಲಕ್ಷ ಮೊತ್ತದ ಹಣ ಸಂಗ್ರಹವಾಗಿದೆ.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಹುಂಡಿ ಎಣಿಕೆಯ ವೇಳೆ ಶಿರಸ್ತೇದಾರ್‌ ರವಿಕುಮಾರ ನಾಯಕ್ವಾಡಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್, ಮಹೇಶ್ ದಲಾಲ, ಹಾಲೇಶ ಗುಂಡಿ, ದೇಗುಲದ ವ್ಯವಸ್ಥಾಪಕ ವೆಂಕಟೇಶ ಹಾಗೂ ಸಿಬ್ಬಂದಿ ಇದ್ದರು.

Continue Reading

ಧಾರ್ಮಿಕ

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Pretha Maduve: ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ.

VISTARANEWS.COM


on

pretha maduve
Koo

ಮಂಗಳೂರು: ಕರ್ನಾಟಕ ಕರಾವಳಿಯ (karnataka Coastal) ತುಳುನಾಡಿನ (Tulunadu) ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ (Pretha Maduve) ಸಜ್ಜಾಗಿದ್ದ ವಧುವಿಗೆ (bride) ವರ (groom) ಹಾಗೂ ದಿನಾಂಕ ಫಿಕ್ಸ್‌ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ (Souls) ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ (Folk) ರೀತಿಯಲ್ಲಿ ನಡೆಯುತ್ತದೆ.

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಧುವೊಬ್ಬಳಿಗೆ ʼವರ ಬೇಕಾಗಿದೆ’ ಎಂಬ ಜಾಹೀರಾತು ಭಾರಿ ಸುದ್ದಿಯಾಗಿತ್ತು. ಈ ʼವಧುʼ ಒಂದು ವಾರದ ಮಗುವಾಗಿದ್ದಾಗಲೇ ತೀರಿಕೊಂಡಿದ್ದಳು. ಇದು ನಡೆದು 30 ವರ್ಷಗಳು ಆಗಿವೆ. ಜ್ಯೋತಿಷ್ಯ ಪ್ರಕಾರ ನೋಡಿದಾಗ, ಹೆಣ್ಣುಮಗಳ ಆತ್ಮಕ್ಕೆ ವಿವಾಹ ಆಗಬೇಕು ಎಂದು ಕಂಡುಬಂದಿತ್ತು ಎನ್ನಲಾಗಿದೆ. ಈ ಮಗುವಿಗೆ ನಾಮಕರಣವೂ ಆಗಿರಲಿಲ್ಲ. ನಂತರ ಆಕೆಗೆ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಜಾಹೀರಾತು ಪ್ರಕಟಿಸಲಾಗಿತ್ತು.

Pretha Maduve

ಇದೀಗ ಈ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ನೊಬ್ಬ ನಿಗದಿಯಾಗಿದ್ದಾನೆ. ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ” ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ ಬಾಯಾರು ಸಮೀಪದ ನಿವಾಸಿ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಮೊದಲ ಕರೆ ಅದಾಗಿತ್ತು. ಬಳಿಕ ಸರಿಹೊಂದುವ ಸುಮಾರು 30ಕ್ಕೂ ಅಧಿಕ ಸಂಬಂಧದವರು ಸಂಪರ್ಕಿಸಿದ್ದರು. ಪ್ರಶ್ನಾಚಿಂತನೆಯಲ್ಲಿ ಅವಲೋಕಿಸಿದಾಗ ಬಾಯಾರುವಿನ ವರ ಅಂತಿಮಗೊಳಿಸುವ ಬಗ್ಗೆ ಸಲಹೆ ಬಂದಿತ್ತು.

ಪ್ರೇತ ಮದುವೆಯಲ್ಲಿ, ಜೀವಂತ ಇರುವಾಗ ನಡೆಯದಿದ್ದ ಮದುವೆ ಕ್ರಮಗಳನ್ನು ಎರಡೂ ಕುಟುಂಬ ವರ್ಗ ಸೇರಿ ಸಾಂಕೇತಿಕವಾಗಿ ನಡೆಸುತ್ತವೆ. ಮುಂದಿನ ರವಿವಾರ “ಪ್ರೇತ ವರ’ನ ಕಡೆಯವರು “ವಧು’ವಿನ ಮನೆಗೆ ಬರಲಿದ್ದಾರೆ. ಬಳಿಕ ನಾವು ಅವರ ಮನೆಗೆ ಹೋಗುತ್ತೇವೆ. ಬಳಿಕ ನಿಶ್ಚಿತಾರ್ಥ. ಆಟಿಯಲ್ಲಿ ಮದುವೆ ನಿಗದಿಯಾಗಿದೆ ಎನ್ನುತ್ತಾರೆ ಪುತ್ತೂರು ನಿವಾಸಿ.

ಜಾಹೀರಾತು ಹಾಗೂ ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ. ವಿವಿಧ ಸಮಾಜದ ಬಂಧುಗಳು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಗೆ ಪ್ರೇತ ವರ ಬೇಕಾಗಿದ್ದ ಹಾಗೆಯೇ ನೂರಾರು ಮನೆಗೆ ವಧು-ವರ ಬೇಕಾಗಿದ್ದ ವಿಚಾರ ಆ ಸಂದರ್ಭ ಬೆಳಕಿಗೆ ಬಂತು. ಈ ಕುರಿತು ಜಾಗೃತಿಯೊಂದು ಮೂಡಿದಂತಾಗಿದೆ ಎನ್ನುತ್ತಾರೆ ಸಂಬಂಧಪಟ್ಟ ಮನೆಯವರು.

ಇದನ್ನೂ ಓದಿ: Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

Continue Reading
Advertisement
Drone Prathap Helping People To Get Eye Surgery on Birthday
ಸಿನಿಮಾ3 mins ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ25 mins ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ36 mins ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ1 hour ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ1 hour ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ1 hour ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ2 hours ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ3 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು20 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು21 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌