Karnataka Election: ತಂದೆ ಇಲ್ಲದೆ 17 ವರ್ಷ ಆಗಿದೆ; ಡಿಕೆಶಿ ತಂದೆಯಂತೆ ನಿಂತು ಬೆಳೆಸಿದ್ದಾರೆ: ಐಶ್ವರ್ಯ ಮಹದೇವು - Vistara News

ಕರ್ನಾಟಕ

Karnataka Election: ತಂದೆ ಇಲ್ಲದೆ 17 ವರ್ಷ ಆಗಿದೆ; ಡಿಕೆಶಿ ತಂದೆಯಂತೆ ನಿಂತು ಬೆಳೆಸಿದ್ದಾರೆ: ಐಶ್ವರ್ಯ ಮಹದೇವು

Karnataka Election: ಸಾಲಿಗ್ರಾಮದಲ್ಲಿ ಏರ್ಪಡಿಸಿದ್ದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಡಿಕೆಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಕೆ.ಆರ್.ನಗರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನೂ ಘೋಷಣೆ ಮಾಡಿದ್ದಾರೆ.

VISTARANEWS.COM


on

Aishwarya Mahadevu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ನನ್ನ ತಂದೆ ಮಂಚನಹಳ್ಳಿ ಮಹದೇವು ಶಾಸಕರಾಗಿದ್ದರು. ಅವರು ಇಲ್ಲವಾಗಿ 17 ವರ್ಷ ಆಗಿದೆ. ಎಲ್ಲರಿಗೂ ತಂದೆ ಇರುತ್ತಾರೆ, ತಂದೆಯೇ ಬೆಳೆಸುತ್ತಾರೆ. ನನಗೆ ತಂದೆ ಇಲ್ಲ. ಆಗಿನಿಂದ ಈಗಿನವರೆಗೂ ನನ್ನನ್ನು ತಂದೆ ರೀತಿ ಬೆನ್ನೆಲುಬಾಗಿ ನಿಂತು ಬೆಳೆಸುತ್ತಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಎಂದು ಎಐಸಿಸಿ ವಕ್ತಾರೆ ಐಶ್ವರ್ಯ ಮಹದೇವ್ (Aishwarya Mahadevu) ಅವರು ಚುನಾವಣೆ (Karnataka Election) ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಏರ್ಪಡಿಸಿದ್ದ ಸಮಾವೇಶದಲ್ಲಿ ಹೇಳಿದರು.

ಸಾಲಿಗ್ರಾಮದಲ್ಲಿ ಏರ್ಪಡಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಕೀಯ ಅಂದರೆ ಜವಾಬ್ದಾರಿ ಎಂದು ಡಿ.ಕೆ. ಶಿವಕುಮಾರ್‌ ಸಾಹೇಬರು ಹೇಳಿಕೊಟ್ಟಿದ್ದಾರೆ. ಒಂದೇ ಒಂದು ವೋಟ್ ಹಾಕಿದರೂ ಆ ಒಬ್ಬ ವ್ಯಕ್ತಿ ಪರವಾಗಿ ಇರಬೇಕು. ಈ ಕ್ಷೇತ್ರದಲ್ಲಿ ಏನಾಗಿದೆ ಎಂಬುದು ಗೊತ್ತಿದೆ. ಐದು ವರ್ಷಕ್ಕೊಮ್ಮೆ ಬರುತ್ತಾರೆ.
ಪಕ್ಷದಿಂದ ಪಕ್ಷಕ್ಕೆ ಹೋಗುತ್ತಾರೆ ಎಂದು ಹೇಳುವ ಮೂಲಕ ಕೆ.ಆರ್.‌ ನಗರ ಕಾಂಗ್ರೆಸ್‌ ಅಭ್ಯರ್ಥಿ ಆಕಾಂಕ್ಷಿ ಡಿ.ರವಿಶಂಕರ್‌ ಹೆಸರು ಹೇಳದೆ ವ್ಯಂಗ್ಯವಾಡಿದರು.

ಕಣ್ಣೀರಾದ ಐಶ್ವರ್ಯ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡುತ್ತಾ, ಮಹದೇವು ನನ್ನ ಸ್ನೇಹಿತ, ಅವನೊಂದಿಗೆ ನಾನೂ ಶಾಸಕನಾಗಿದ್ದೆ. ಈಗ ಮಹದೇವ್ ಇಲ್ಲ. ಅವನ ಮಗಳು ಐಶ್ವರ್ಯ ಇದ್ದಾಳೆ. ಆ ಹೆಣ್ಣು ಮಗಳಿಗೂ ಒಳ್ಳೆಯ ಭವಿಷ್ಯವಿದೆ. ಯಾರಿಂದಲೂ ಅದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಡಿ.ಕೆ.ಶಿವಕುಮಾರ್ ಹೀಗೆ ಹೇಳುತ್ತಿದ್ದಂತೆ ಐಶ್ವರ್ಯ ಮಹದೇವ್ ಅವರು ಆಸನದಿಂದ ಎದ್ದು ನಿಂತು ಕೈಮುಗಿದು ಕಣ್ಣೀರಿಟ್ಟರು.

ಐಶ್ವರ್ಯ ನನ್ನ ತೀರ್ಮಾನಕ್ಕೆ ಬಿಟ್ಟಿದ್ದಾಳೆ- ಡಿಕೆಶಿ

ಕೆ.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದಿಂದ ಐಶ್ವರ್ಯ ಮಹದೇವು ಅರ್ಜಿ ಹಾಕಿದ್ದಳು. ಅಣ್ಣ, ನಾನು ಅರ್ಜಿ ಹಾಕಿರೋದು ನಿಜ. ನೀವು ಏನೇ ತೀರ್ಮಾನ ಕೈಗೊಂಡರೂ ಸರಿ ಅಂತ ಹೇಳಿದ್ದಾಳೆ. ಹೀಗಾಗಿ ಈಗ ಒಂದೇ ಅರ್ಜಿ ಉಳಿದುಕೊಂಡಿದೆ. ಅದು ರವಿಶಂಕರ್‌ದ್ದಾಗಿದೆ. ಅವರನ್ನು ಗೆಲ್ಲಿಸಿ ನನ್ನೊಂದಿಗೆ ವಿಧಾನಸೌಧಕ್ಕೆ ಕಳುಹಿಸಿಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳುವ ಮೂಲಕ ಈ ಕ್ಷೇತ್ರಕ್ಕೆ ಟಿಕೆಟ್‌ ಘೋಷಣೆ ಮಾಡಿದರು.

ರೈತರ ಆದಾಯ ಡಬಲ್‌ ಎಲ್ಲಾಯ್ತು?

ಮೈಸೂರಿನಲ್ಲಿ ಮೈಸೂರು ಪಾಕು, ‌ಮಂಡ್ಯದಲ್ಲಿ ಬೆಲ್ಲ, ಶಿವಮೊಗ್ಗದಲ್ಲಿ ಅಡಿಕೆ ಹಾರ, ಹಣ್ಣಿನ ಹಾರಗಳನ್ನು ಹಾಕಿದ್ದರು. ಕೆ.ಆರ್.ನಗರದಲ್ಲಿ ಇತಿಹಾಸ ಸೇರುವ ಭತ್ತದ ಹಾರ ಹಾಕಲಾಗಿದೆ. ಈ ಭೂಮಿಯ ಭತ್ತ ವಿಶೇಷವಾದುದು. ಇದನ್ನು ಸರ್ಕಾರ ಬಿತ್ತನೆ ಭತ್ತವಾಗಿ ಖರೀದಿ ಮಾಡುತ್ತದೆ. ವಿಶೇಷ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ನಿಮಗೆಲ್ಲರಿಗೂ ಧನ್ಯವಾದವನ್ನು ಹೇಳಬಯಸುತ್ತೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಿಂದಿನ ಬಜೆಟ್ ಬಗ್ಗೆ ಉತ್ತರ ಕೊಡುವಂತೆ ಕೇಳಿದ್ದೇನೆ. ರೈತರ ಆದಾಯ ಡಬಲ್ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ, ಅವರು ಆದಾಯವನ್ನು ಡಬಲ್‌ ಮಾಡಿಕೊಂಡರು ಎಂದು ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ಕೃಷಿ ಗೊಬ್ಬರ, ದಿನನಿತ್ಯದ ಪದಾರ್ಥಗಳ ಬೆಲೆ ಹೆಚ್ಚಳವಾಗಿದೆ. ಸ್ವಿಸ್ ಬ್ಯಾಂಕ್‌ನಲ್ಲಿದ್ದ ಕಪ್ಪು ಹಣ ಯಾರಿಗಾದರೂ ಬಂತಾ? ನಾವು ಶೇಕಡಾ 95ರಷ್ಟು ಭರವಸೆ ಈಡೇರಿಸಿದ್ದೆವು. ಆದರೂ ಸೋತಿದ್ದೇವೆ ಎಂದು ಡಿಕೆಶಿ ಬೇಸರ ವ್ಯಕ್ತಪಡಿಸಿದರು.

ಎಚ್‌.ವಿಶ್ವನಾಥ್ ಇರುವವರಲ್ಲಿ ಪ್ರಜ್ಞಾವಂತ ನಾಯಕರಾಗಿದ್ದಾರೆ. ಅವರು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಎಲ್ಲ ಕಡೆ ಹೋಗಿ ಬಂದರು. ಈಗ ಸಾಯುವುದರೊಳಗೆ ಕಾಂಗ್ರೆಸಿಗನಾಗಿ ಸಾಯಬೇಕು ಎಂದಿದ್ದಾರೆ. ಅವರೇನು‌ ದಡ್ಡರೆ? ಅವರದ್ದೇ ಆದ ರಹಸ್ಯ, ಸ್ವಾರಸ್ಯ ಎರಡೂ ಇದೆ ಎಂದು ಶಿವಕುಮಾರ್‌ ಹೇಳಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ನನ್ನ‌ನ್ನು ಜೋಡೆತ್ತು ಎಂದು ಕರೆದರು. ಆದರೆ, ನಾನು ಅವರಿಗೆ ಮೋಸ ಮಾಡಿದ್ದೆನಾ? ಸ್ಥಳೀಯವಾಗಿ ಏನೇ ಅಂದರೂ ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಬಂದು ಅವರ ಮಗ ನಿಖಿಲ್‌ ಕುಮಾರಸ್ವಾಮಿ ಪರ ಮಂಡ್ಯದಲ್ಲಿ ಭಾಷಣ ಮಾಡಿದ್ದರು. ಆದರೆ, ಜನ ಗೆಲ್ಲಿಸಲಿಲ್ಲ. ಅದಕ್ಕೆ ನಾವೇನು ಮಾಡುವುದು? ಮಾಜಿ ಸಿಎಂ ಸಿದ್ದರಾಮಯ್ಯ ಸಾಧ್ಯವಿಲ್ಲ ಎಂದರೂ ನಾವು ಕೈಜೋಡಿಸಿದೆವು. ಆದರೆ ನೀವು ಉಳಿಸಿಕೊಂಡಿರಾ ಎಂದು ಎಚ್‌ಡಿಕೆ ಅವರನ್ನು ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದರು.

ಇದನ್ನೂ ಓದಿ: ಈ ಐಟಿ ಕಂಪನಿಯಲ್ಲಿ ಕೆಲಸದ ಅವಧಿ ಮುಗಿದ ಮೇಲೆ ಕಂಪ್ಯೂಟರ್​ ಎಚ್ಚರಿಕೆ ನೀಡುತ್ತದೆ!; ಶಟ್​ಡೌನ್​​ಗೆ 10 ನಿಮಿಷ ಮಾತ್ರ ಟೈಮ್​

ನಾನು ಇಲ್ಲಿ ಯಾರ ವಿರುದ್ಧವೂ ಮಾತನಾಡಲು ಬಂದಿಲ್ಲ. ನಾನು ಈ ಮನೆ ಮಗನಾಗಿದ್ದೇನೆ. ನನಗೂ ಒಂದು ಅವಕಾಶ ಕೊಡಿ. ನೀವೆಲ್ಲರೂ ಸೇರಿ ವಿಧಾನಸೌಧದ ಮೂರನೇ ಮಹಡಿ ಹತ್ತಲು ಶಕ್ತಿ ಕೊಡಿ. ಕೋವಿಡ್‌ನಿಂದ ನಿಮ್ಮ ಬದುಕು ಕಷ್ಟ ಆಯ್ತು. ಆಗ ಮೋದಿ ಜಾಗಟೆ ಬಾರಿಸಿ ಅಂದ್ರು. ಅದರಿಂದ ನಿಮ್ಮ ಕಷ್ಟ ದೂರ ಆಯ್ತಾ? ನಿಮ್ಮ ಕಷ್ಟ ದೂರ ಆಗಬೇಕು ಅಂದ್ರೆ ಜೆಡಿಎಸ್‌ಗೆ ಮತ ಹಾಕಬೇಡಿ. ನಿಮ್ಮ ಬದುಕು ಹಸನಾಗಲು ಕಾಂಗ್ರೆಸ್‌ಗೆ ಮತ ಹಾಕಿ.
ಕಮಲ ಕೆರೆಯಲ್ಲಿ ಇದ್ದರೇ ಚೆನ್ನ. ತೆನೆ ಹೊಲದಲ್ಲಿದ್ದರೇ ಚೆನ್ನ. ಹಾಗೇ ಕೈ ಅಧಿಕಾರದಲ್ಲಿ ಇದ್ದರೇ ಚೆನ್ನ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

MP Renukacharya : ಎಂ.ಪಿ ರೇಣುಕಾಚಾರ್ಯ, ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

ಇಂದು ಬೆಳಗ್ಗೆ ಬೆದರಿಕೆ ಕರೆ ಬಂದಿದ್ದು, ʼನಿನಗೂ ನಿನ್ನ ಮಗನಿಗೂ ಇವತ್ತು ರಾತ್ರಿ ಒಳಗೆ ಮುಗಿಸ್ತೀವಿʼ ಎಂದು ಕರೆ ಮಾಡಿದವರು ಬೆದರಿಸಿದ್ದಾರೆ. 912250155161 ಹಾಗೂ 60695539248 ನಂಬರ್‌ಗಳಿಂದ ಕರೆ ಮಾಡಲಾಗಿದೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

MP Renukacharya
Koo

ಬೆಂಗಳೂರು: ಮಾಜಿ ಸಚಿವ, ಹೊನ್ನಾಳಿ (Honnali) ಮಾಜಿ ಶಾಸಕ, ಬಿಜೆಪಿ (BJP) ಮುಖಂಡ ಎಂಪಿ ರೇಣುಕಾಚಾರ್ಯ (MP Renukacharya) ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ (murder threat) ಒಡ್ಡಲಾಗಿದೆ. ಮಗನನ್ನೂ ಕೊಲೆ ಮಾಡುತ್ತೇವೆ ಎಂದು ಬೆದರಿಸಲಾಗಿದೆ.

ಇಂದು ಬೆಳಗ್ಗೆ ಬೆದರಿಕೆ ಕರೆ ಬಂದಿದ್ದು, ʼನಿನಗೂ ನಿನ್ನ ಮಗನಿಗೂ ಇವತ್ತು ರಾತ್ರಿ ಒಳಗೆ ಮುಗಿಸ್ತೀವಿʼ ಎಂದು ಕರೆ ಮಾಡಿದವರು ಬೆದರಿಸಿದ್ದಾರೆ. 912250155161 ಹಾಗೂ 60695539248 ನಂಬರ್‌ಗಳಿಂದ ಕರೆ ಮಾಡಲಾಗಿದೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ರೈತ ವಿರೋಧಿ ಸರಕಾರ: ರೇಣುಕಾಚಾರ್ಯ

ಈ ಸರ್ಕಾರ ರೈತ ವಿರೋಧಿ ಸರ್ಕಾರ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ ಎಂದು ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದ ಸಂದರ್ಭದಿಂದ ಇಲ್ಲಿಯವರೆಗೆ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಆತ್ಮಹತ್ಯೆಗೆ ಕಾರಣ ಕಂಡುಹಿಡಿದು ಸಾಲ ಮನ್ನಾ ಮಾಡುವುದು ಸೇರಿದಂತೆ ರೈತಪರ ಯೋಜನೆಗಳನ್ನು ರೂಪಿಸಬೇಕು ಎಂದಿದ್ದಾರೆ.

ಅಮಾನತು ಆದೇಶ ಹಿಂಪಡೆಯಬೇಕು: ಚನ್ನಗಿರಿ ಪೊಲೀಸ್‍ ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸರ ಮೇಲೆ ಹಲ್ಲೆ ನಡೆದರೂ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಂಡಿಲ್ಲ. ಬದಲಿಗೆ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಹಾಗೂ ಪೊಲೀಸ್‍ ಇನ್‌ಸ್ಪೆಕ್ಟರ್ ನಿರಂಜನ ಅವರನ್ನು ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಿ, ತುಷ್ಟೀಕರಣ ನೀತಿ ಅನುಸರಿಸಿರುವುದು ಖಂಡನೀಯ. ಸರ್ಕಾರ ಕೂಡಲೇ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ನಿಗಮದ ಬಹುಕೋಟಿ ಹಗರಣ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯ ಸಿಗಬೇಕಾದರೆ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ ಫೈರ್‌ ಬ್ರ್ಯಾಂಡ್‌ಗಳ ಸೋಲು ಗೆಲುವಿನ ಲೆಕ್ಕಾಚಾರ ಹೇಗಿದೆ? ಎಕ್ಸಿಟ್‌ ಪೋಲ್‌ ಹೇಳೋದೇನು?

Continue Reading

ಕರ್ನಾಟಕ

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Drowns in Lake: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿದ್ದಾಗ ಯುವಕ ನೀರುಪಾಲಾಗಿದ್ದಾನೆ.

VISTARANEWS.COM


on

Drowns in Lake
Koo

ಧಾರವಾಡ: ಕೆರೆಯಲ್ಲಿ ಮುಳುಗಿ ಯುವಕ ಮೃತಪಟ್ಟಿರುವ ಘಟನೆ (Drowns in Lake) ಜಿಲ್ಲೆಯ ನವಲಗುಂದ ತಾಲೂಕಿನ ಹಾಲಕುಸುಗಲ್ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ.

ಮುನ್ನಾ ಮಕ್ತುಮ್ ಸಾಬ್ ಹೆಬಸೂರ(22) ಮೃತ ಯುವಕ. ನೆನ್ನೆ ಸಂಜೆ ಕೆರೆಯಲ್ಲಿ ಯುವಕ ನಾಪತ್ತೆಯಾಗಿದ್ದ. ಅಗ್ನಿ ಶಾಮಕ ದಳದಿಂದ ಮೃತ ಯುವಕನ ಶವಕ್ಕಾಗಿ ಶೋಧ ನಡೆಸಲಾಗುತ್ತಿದೆ.

ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

ಯಾದಗಿರಿ: ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿಯ ತಾಲೂಕಿನ ಸಂಗವಾರ ಗ್ರಾಮದಲ್ಲಿ ನಡೆದಿದೆ. ನಂಜುಂಡ ನಾಗಣ್ಣೋರ್ (26) ಆತ್ಮಹತ್ಯೆ ಮಾಡಿಕೊಂಡ ರೈತ. ಬ್ಯಾಂಕ್ ಹಾಗೂ ವೈಯಕ್ತಿಕವಾಗಿ ಸೇರಿ 5 ಲಕ್ಷ ಸಾಲ ರೈತ ಮಾಡಿದ್ದರು. 2.5 ಎಕರೆ ಜಮೀನಿನಲ್ಲಿ ಉಳುಮೆ ಮಾಡಿಕೊಂಡಿದ್ದ ರೈತ, ಕಳೆದ ವರ್ಷ ಬರಗಾಲಕ್ಕೆ ಸಿಕ್ಕಿ ಸಾಲ ತೀರಿಸಲಾಗದೇ ನೊಂದಿದೆ. ಹೀಗಾಗಿ ನೇಣಿಗೆ ಶರಣಾಗಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಲ್ಲಿ ಗೃಹ ಪ್ರವೇಶದ ಊಟ ತಿಂದ ವೃದ್ಧೆ ಸಾವು; 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Food Poisoning

ಮೈಸೂರು: ಗೃಹ ಪ್ರವೇಶದಲ್ಲಿ ಊಟ ತಿಂದ ವೃದ್ಧೆಯೊಬ್ಬರು ತೀವ್ರ ಅಸ್ವಸ್ಥಗೊಂಡು (Food Poisoning) ಮೃತಪಟ್ಟಿದ್ದಾರೆ. ಶಿವಮ್ಮ (65) ಮೃತ ದುರ್ದೈವಿ. ಮೈಸೂರಿನ ಮಾರ್ಬಳ್ಳಿಯಲ್ಲಿ ಘಟನೆ ನಡೆದಿದೆ.

ಮಾರ್ಬಳ್ಳಿಯಲ್ಲಿ ನಿನ್ನೆ ಭಾನುವಾರ ಮನೆಯೊಂದರ ಗೃಹ ಪ್ರವೇಶ ಕಾರ್ಯಕ್ರಮವಿತ್ತು. ಈ ಗೃಹ ಪ್ರವೇಶ ಕಾರ್ಯದಲ್ಲಿ ಗ್ರಾಮಸ್ಥರು ಊಟ ಸೇವಿಸಿದ್ದರು. ಊಟದ ಬಳಿಕ ಸುಮಾರು ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿಗೆ ವಾಂತಿ, ಭೇದಿ ಶುರುವಾಗಿತ್ತು.

ಇತ್ತ ತೀವ್ರ ಅಸ್ವಸ್ಥಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಲವರಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚಿಕಿತ್ಸೆ ಕೊಡಲಾಗಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

ಬರ್ತ್‌ ಡೇ ಪಾರ್ಟಿಯಲ್ಲಿ ಭಾರೀ ಶೂಟೌಟ್‌-27 ಮಂದಿಗೆ ಗುಂಡೇಟು

ಅಕ್ರಾನ್‌ : ಕೆಲವೊಮ್ಮೆ ಸಣ್ಣ ಪುಟ್ಟ ಗಲಾಟೆ ಜಗಳ, ಕೋಪ, ಎಡವಟ್ಟಿನಿಂದಾಗಿ ಅದೆಂಥಾ ದೊಡ್ಡ ಸಂಭ್ರಮಾಚರಣೆ ಆಗಿದ್ದರೂ ಅದನ್ನು ಒಂದು ಕ್ಷಣದಲ್ಲಿ ಸ್ಮಶಾನವನ್ನಾಗಿಸಿ ಬಿಡುತ್ತದೆ. ಅಂತಹದ್ದೇ ಒಂದು ಘಟನೆ ಅಮೆರಿಕದ ಓಹಿಯೋ ರಾಜ್ಯದಲ್ಲಿ ನಡೆದಿದೆ. ಸಂಭ್ರಮದಿಂದ ನಡೆಯುತ್ತಿದ್ದ ಬರ್ತ್‌ ಡೇ ಪಾರ್ಟಿ(Birthday Party) ದುರಂತ ಅಂತ್ಯ ಕಂಡಿದೆ. ಏಕಾಏಕಿ ಶೂಟೌಟ್‌(Shootout) ನಡೆದಿದ್ದು, ಬರೋಬ್ಬರಿ 27 ಮಂದಿಗೆ ಗುಂಡೇಟು ಬಿದ್ದಿದೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಓಹಿಯೋ ರಾಜ್ಯದ ಅಕ್ರಾನ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಕೆಲ್ಲಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ 10 ಗಂಟೆಗೆ ಬರ್ತ್‌ ಡೇ ಪಾರ್ಟಿವೊಂದನ್ನು ಆಯೋಜಿಸಲಾಗಿತ್ತು. ಹೀಗಾಗಿ ಸುಮಾರು 200ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮನೆಯ ಎದುರುಗಡೆ ಇರುವ ರಸ್ತೆಯಲ್ಲಿ ಜನ ಕಿಕ್ಕಿರಿದಿದ್ದ ಹಿನ್ನೆಲೆ ಟ್ರಾಫಿಕ್‌ ಸಮಸ್ಯೆಯೂ ಉಂಟಾಗಿತ್ತು ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಸ್ತೆ ಕ್ಲಿಯರ್‌ ಮಾಡುವಂತೆ ಸೂಚಿಸಿದ್ದರು. ಇದಾದ ಬಳಿಕ ಅವರು ಅಲ್ಲಿಂದ ತೆರಳಿದ್ದರು. ಇದಾದ ಕೆಲವೇ ಹೊತ್ತಲ್ಲಿ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಪೊಲೀಸರಿಗೆ ಬ್ಯಾಕ್‌ ಟು ಬ್ಯಾಕ್‌ ಕರೆಗಳು ಹೋಗಿವೆ. ಸ್ಥಳಕ್ಕೆ ಬಂದು ನೋಡಿದಾಗ 25ಜನ ಗುಂಡೇಟು ತಗುಲಿ ಗಂಭಿರವಾಗಿ ಗಾಯಗೊಂಡು ಸ್ಥಳದಲ್ಲೇ ಜೀವನ್ಮರಣದ ನಡುವೆ ಹೋರಾಡುತ್ತಿದ್ದರು.

ಇನ್ನು ಘಟನೆಯಲ್ಲಿ 27ವರ್ಷದ ಒಬ್ಬ ಯುವಕ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಬಹಳ ಗಂಭೀರವಾಗಿದೆ. ಇನ್ನು ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ, ರೈಫಲ್‌ನಿಂದ ಕೇಸಿಂಗ್‌ಗಳು ಸೇರಿದಂತೆ ಎರಡು ಬಂದೂಕುಗಳು ಮತ್ತು ಅನೇಕ ರೀತಿಯ ಶೆಲ್ ಕೇಸಿಂಗ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Vijayanagara News: ಹೊಸಪೇಟೆಯಲ್ಲಿ ರಕ್ತದಾನ ಶಿಬಿರಕ್ಕೆ ಎಸ್ಪಿ ಶ್ರೀಹರಿಬಾಬು ಚಾಲನೆ

Vijayanagara News: ಹೊಸಪೇಟೆ ನಗರದ 27 ವಾರ್ಡ್‌ನ ಚಪ್ಪರದಳ್ಳಿ ಪ್ರದೇಶದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ್ ಮೇಟಿ) ಬಣದ ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಅವರ ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರ ಜರುಗಿತು.

VISTARANEWS.COM


on

Vijayanagara SP Shriharibabu drives to blood donation camp in Hosapete
Koo

ಹೊಸಪೇಟೆ: ನಗರದ 27ನೇ ವಾರ್ಡ್‌ನ ಚಪ್ಪರದಳ್ಳಿ ಪ್ರದೇಶದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ್ ಮೇಟಿ) ಬಣದ ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಅವರ ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರ (Vijayanagara News) ಹಮ್ಮಿಕೊಳ್ಳಲಾಗಿತ್ತು.

ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್. ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಕ್ತದಾನವು ಶ್ರೇಷ್ಠ ದಾನ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡುವ ಮೂಲಕ ಅಪಾಯದಲ್ಲಿ ಇರುವ ಅಮೂಲ್ಯ ಜೀವವನ್ನು ಉಳಿಸಬಹುದು ಎಂದು ತಿಳಿಸಿದರು.

ಇದನ್ನೂ ಓದಿ: Election Commission of India: “64 ಕೋಟಿ ಜನರಿಂದ ಮತದಾನ; ವಿಶ್ವದಾಖಲೆ ಬರೆದ ಭಾರತ”- ಚು.ಆಯೋಗ ಶ್ಲಾಘನೆ

ಹೊಸಪೇಟೆ ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡ ಮಾತನಾಡಿದರು. ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ್ ಮೇಟಿ) ಬಣದ ವಿಜಯನಗರ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಮಾತನಾಡಿದರು.

ರಕ್ತದಾನ ಶಿಬಿರದಲ್ಲಿ 25ಕ್ಕೂ ಅಧಿಕ ಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು‌. ಶಿಬಿರದಲ್ಲಿ ವಿಜಯನಗರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿಎಲ್, ತಹಸೀಲ್ದಾರ್‌ ಶೃತಿ ಮಳ್ಳಪ್ಪಗೌಡ ಅವರು, ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರವನ್ನು ವಿತರಿಸಿದರು.

ಇದನ್ನೂ ಓದಿ: Heat Wave: ಒಡಿಶಾದಲ್ಲಿ ಬಿಸಿಗಾಳಿ ಶಾಖಕ್ಕೆ ಒಂದೇ ದಿನ 45 ಜನ ಬಲಿ

ಈ ಸಂದರ್ಭದಲ್ಲಿ ಹೊಸಪೇಟೆ ನಗರಸಭೆ ಸದಸ್ಯ ಹುಲಗಪ್ಪ, ಮುಖಂಡರಾದ ಪ್ರಕಾಶ್, ವೆಂಕಟೇಶ, ಪರಂಗಟ್ಟಿ ಶೇಖರ್, ನಾಗರಾಜ್, ಸೋಮಣ್ಣ, ಮರುಳಸಿದ್ದಪ್ಪ, ಬಸಪ್ಪ, ಚೇತನ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading

ಮೈಸೂರು

Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

Mysore News: ಮೈಸೂರಿನ ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ಶ್ರೀ ವ್ಯಾಸರಾಜ ಮಠ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಭಾನುವಾರ ಸಂಜೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಚಾಲನೆ ನೀಡಿ, ಬಳಿಕ ಆಶೀರ್ವಚನ ನೀಡಿದರು.

VISTARANEWS.COM


on

Mantralaya Sri Subudhendra Theertha Swamiji ashirvachan
Koo

ಮೈಸೂರು: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ ಇದೆ. ಹಾಗಾಗಿ ವಿದ್ಯಾರ್ಥಿಗಳು ವೇದ ವಿದ್ಯೆ ಸಂಪಾದನೆಗೆ ಶ್ರಮಿಸಬೇಕು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ: Team India : ಈ ಕೆಲಸ ಇಷ್ಟವಿದೆ; ಟೀಮ್ ಇಂಡಿಯಾ ಕೋಚ್​ ಹುದ್ದೆಯ ಬಗ್ಗೆ ಮೊದಲ ಹೇಳಿಕೆ ನೀಡಿದ ಗೌತಮ್ ಗಂಭೀರ್​

ನಗರದ ಕೃಷ್ಣಮೂರ್ತಿಪುರಂನ ಶ್ರೀ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಸೋಸಲೆ ಶ್ರೀ ವ್ಯಾಸರಾಜ ಮಠ ಹಮ್ಮಿಕೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಭಾನುವಾರ ಸಂಜೆ ಚಾಲನೆ ನೀಡಿದ ನಂತರ ಶ್ರೀಗಳು ಆಶೀರ್ವಚನ ನೀಡಿದರು.

ಸೋಸಲೆ ವಿದ್ಯಾಪೀಠದ ವಿದ್ಯಾರ್ಥಿಗಳು ಸಮರ್ಥವಾಗಿ ಅಧ್ಯಯನ ನಡೆಸಿ ಶ್ರೀ ಜಯತೀರ್ಥರು ರಚಿಸಿದ ಸುಧಾ ಗ್ರಂಥದ ಬಗ್ಗೆ ಉತ್ತಮ ವ್ಯಾಖ್ಯಾನ ನೀಡಿದ್ದಾರೆ. ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಈ ವಿದ್ಯಾರ್ಥಿಗಳಿಗೆ ಪಾಠ, ಪ್ರವಚನ ಮಾಡಿ ವಿದ್ಯಾರ್ಜನೆಗೆ ಶ್ರಮಿಸಿದ್ದಾರೆ. ಇದು ಯತಿಗಳು ಮುಂದಿನ ಪೀಳಿಗೆಗೆ ಮಾಡುವ ಮಾದರಿ ಕಾರ್ಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ನಿರ್ಭೀತಿಯಿಂದ, ಸಂಸ್ಕೃತದಲ್ಲಿ ಸುಲಲಿತವಾಗಿ ವಿಷಯದ ಅನುವಾದ, ವ್ಯಾಖ್ಯಾನ ಮತ್ತು ಮಂಡನೆ ಮಾಡುವ ಶೈಲಿಯನ್ನು ಕರಗತ ಮಾಡಿಕೊಂಡರೆ ಮುಂಬರುವ ದಿನಗಳಲ್ಲಿ ನಾಡಿನ ಖ್ಯಾತ ವಿದ್ವಾಂಸರಾಗಬಹುದು. ಇಂದು ಸುಧಾ ಪರೀಕ್ಷೆ ನೀಡಿದ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಸಾಧನಾ ಮಾರ್ಗದಲ್ಲಿ ಇದ್ದಾರೆ. ಪುಸ್ತಕ ನಿರಪೇಕ್ಷವಾಗಿ ವಿದ್ಯಾರ್ಥಿಗಳು ಮುಕ್ತ ಸಭೆಯಲ್ಲಿ ಪಂಡಿತರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದ್ದಾರೆ. ಇದು ಅವರ ಕೌಶಲ ಮತ್ತು ಜ್ಞಾನದ ಉತ್ತಮ ಹಂತದ ದರ್ಶನ ಮಾಡಿಸಿದೆ ಎಂದು ಮಂತ್ರಾಲಯ ಶ್ರೀಗಳು ನುಡಿದರು.

ಸೋಸಲೆ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ವಿದ್ವತ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳಲು ಇದೇ ಸೂಕ್ತ ಸಮಯ; ಮತ್ತೆ ಬಂಗಾರದ ದರ ಇಳಿಕೆ

ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಗುರುಕುಲ ಪದ್ಧತಿ ಅಧ್ಯಯನ ಮಾಡಿದ ಹಿರಿಯ ವಿದ್ಯಾರ್ಥಿಗಳಾದ ಸುಘೋಷ ಆಚಾರ್ಯ ಮತ್ತು ಪ್ರಣವ ಆಚಾರ್ಯ ಅವರು ಶ್ರೀಮನ್ ನ್ಯಾಯಸುಧಾ ಗ್ರಂಥದ ನವಿ ಲಕ್ಷಣತ್ವಾಧಿಕರಣದ ಮೌಖಿಕ ಪರೀಕ್ಷೆಯನ್ನು ಎದುರಿಸಿ ಪಂಡಿತರ ಪ್ರಶ್ನೆಗಳಿಗೆ ಸೂಕ್ತವಾದ ಉತ್ತರ ನೀಡಿದರು.

ಈ ಸಂದರ್ಭದಲ್ಲಿ ಮಂತ್ರಾಲಯದ ಹಿರಿಯ ವಿದ್ವಾಂಸರಾದ ಮಹಾಮಹೋಪಾಧ್ಯಾಯ ರಾಜಾ ಎಸ್. ಗಿರಿ ಆಚಾರ್ಯ, ಗುರುಸಾರ್ವಭೌಮ ವಿದ್ಯಾಪೀಠದ ಪ್ರಾಚಾರ್ಯ ವಾದಿರಾಜ ಆಚಾರ್ಯ, ಶ್ರೀನಿವಾಸಮೂರ್ತಿ ಆಚಾರ್ಯ, ಬೆಂಗಳೂರಿನ ಪೇಜಾವರ ವಿದ್ಯಾಪೀಠದ ಪ್ರಾಧ್ಯಾಪಕ ಪಂಡಿತ ಮಾತರಿಶ್ವಾಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಶ್ರೀನಿಧಿ ಆಚಾರ್ಯ ಪ್ಯಾಟಿ, ಹಿರಿಯರಾದ ವಿದ್ವಾಂಸ ಶೇಷಗಿರಿ ಆಚಾರ್ಯ, ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಇತರರು ಹಾಜರಿದ್ದರು.

ಇಂದಿನ ಕಾರ್ಯಕ್ರಮ ಏನೇನು?

ಜೂ. 3ರಂದು ಸೋಮವಾರ ದಿನಪೂರ್ಣ ನಾಲ್ವರು ವಿದ್ಯಾರ್ಥಿಗಳಿಗೆ ಶ್ರೀ ಸುಧಾ ಗ್ರಂಥದ ಮೇಲಿನ ಮೌಖಿಕ ಪರೀಕ್ಷೆ, ವ್ಯಾಖ್ಯಾನಗಳು ನಡೆಯಲಿದೆ. ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನದ ಶ್ರೀ ಸತ್ಯಾತ್ಮ ತೀರ್ಥರು, ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯನಿಧಿ ತೀರ್ಥರು, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರು ತಮ್ಮ ತಮ್ಮ ಸಂಸ್ಥಾನ ದೇವರುಗಳಿಗೆ ಪೂಜೆ ಸಮರ್ಪಿಸಲಿದ್ದಾರೆ. ನಂತರ ವಿದ್ವತ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಇಡೀ ದಿನದ ಕಲಾಪ ಸಂಪನ್ನಗೊಳ್ಳಿದೆ. ನಾಡಿನ ವಿವಿಧ ಮಠ- ಪೀಠದ ವಿದ್ವಾಂಸರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: 2nd PUC Exam 3: ದ್ವಿತೀಯ ಪಿಯುಸಿ ಪರೀಕ್ಷೆ-3ರ ದಂಡಸಹಿತ ಶುಲ್ಕ ಪಾವತಿಗೆ ಇಂದೇ ಕೊನೇ ದಿನ

ರಂಜಿಸಲಿದೆ ದಾಸವಾಣಿ

ಜೂ.3 ರಂದು ಸೋಮವಾರ ಸಂಜೆ 6ಕ್ಕೆ ವಿದ್ವಾನ್ ಸಮೀರಾಚಾರ್ಯರಿಂದ ದಾಸವಾಣಿ ಸಂಗೀತ ಕಛೇರಿ ನಡೆಯಲಿದೆ.

Continue Reading
Advertisement
Battery Life Tips
ಗ್ಯಾಜೆಟ್ಸ್47 seconds ago

Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

MP Renukacharya
ಕ್ರೈಂ8 mins ago

MP Renukacharya : ಎಂ.ಪಿ ರೇಣುಕಾಚಾರ್ಯ, ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

Nataša Stanković
ಕ್ರೀಡೆ17 mins ago

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Drowns in Lake
ಕರ್ನಾಟಕ26 mins ago

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Vijayanagara SP Shriharibabu drives to blood donation camp in Hosapete
ಆರೋಗ್ಯ27 mins ago

Vijayanagara News: ಹೊಸಪೇಟೆಯಲ್ಲಿ ರಕ್ತದಾನ ಶಿಬಿರಕ್ಕೆ ಎಸ್ಪಿ ಶ್ರೀಹರಿಬಾಬು ಚಾಲನೆ

Mantralaya Sri Subudhendra Theertha Swamiji ashirvachan
ಮೈಸೂರು28 mins ago

Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

Tumkur Lok Sabha Constituency
ಪ್ರಮುಖ ಸುದ್ದಿ43 mins ago

Tumkur Lok Sabha Constituency: ತುಮಕೂರಿನ ಅದೃಷ್ಟ ಪರೀಕ್ಷೆಯಲ್ಲಿ ಗೆಲ್ಲುವರೇ ವಿ. ಸೋಮಣ್ಣ?

Prajwal Revanna Case
ಕರ್ನಾಟಕ55 mins ago

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Road Accident
ಶಿವಮೊಗ್ಗ56 mins ago

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Anant-Radhika Bash legendary singer Andrea Bocelli performs
ಬಾಲಿವುಡ್58 mins ago

Anant-Radhika Bash: ಪ್ರಿ ವೆಡ್ಡಿಂಗ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌; ಸಂಗೀತ ಪ್ರದರ್ಶನಕ್ಕೆ ಮನಸೋತ ಅತಿಥಿಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌