Balipa Narayana Bhagavata: ಬಲಿಪ ನಾರಾಯಣ ಭಾಗವತ ನಿಧನಕ್ಕೆ ಪ್ರಧಾನಿ, ಸಿಎಂ ಸಂತಾಪ - Vistara News

ಕರ್ನಾಟಕ

Balipa Narayana Bhagavata: ಬಲಿಪ ನಾರಾಯಣ ಭಾಗವತ ನಿಧನಕ್ಕೆ ಪ್ರಧಾನಿ, ಸಿಎಂ ಸಂತಾಪ

ಯಕ್ಷಗಾನದ ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಾದ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Balipa narayana Bhagavata
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಕ್ಷಗಾನದ ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರಾದ ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ʼʼಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದರು. ಯಕ್ಷಗಾನದ ಹಿನ್ನೆಲೆ ಸಂಗೀತಕ್ಕೆ ತಮ್ಮ ಜೀವಿತವನ್ನು ಅರ್ಪಿಸಿದ್ದರು. ತಮ್ಮ ವಿಶಿಷ್ಟ ಶೈಲಿಗಾಗಿ ಹೆಸರಾಗಿದ್ದರು. ಅವರ ಸಾಧನೆಯು ಮುಂಬರುವ ತಲೆಮಾರುಗಳ ಸ್ಮರಣೆಯಲ್ಲಿ ಇರುತ್ತದೆ. ಅವರ ಸಾವಿನಿಂದ ನೋವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇನೆʼʼ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ.

“ತೆಂಕುತಿಟ್ಟು ಯಕ್ಷರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಕಂಚಿನ ಕಂಠದ ಬಲಿಪ ಶೈಲಿಯ ಹಾಡುಗಾರಿಕೆಗೆ ಪ್ರಸಿದ್ಧರಾಗಿದ್ದ ಭಾಗವತರ ನಿಧನದಿಂದ ಯಕ್ಷಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ.” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Balipa Narayana Bhagavata : ಬಲಿಪ ಪರಂಪರೆಯ ಬಲಿಷ್ಠ ಕೊಂಡಿ, ಯಕ್ಷ ಲೋಕದ ದಂತ ಕಥೆ ಬಲಿಪ ನಾರಾಯಣ ಭಾಗವತರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

Lok Sabha Election 2024

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಇವರಿಗೆಲ್ಲ ಸಚಿವ ಸ್ಥಾನ ಫಿಕ್ಸ್?‌

Modi 3.0 Cabinet: ಇಂದು (ಜೂನ್‌ 9) ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಿಂದ ಆರಿಸಿ ಬಂದಿರುವ ಸಂಸದರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಫಿಕ್ಸ್‌ ಎಂಬ ಮಾತು ಕೇಳಿ ಬರುತ್ತಿದೆ. ಮೋದಿ ಅವರ ಜತೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದರೂ ಈ ಪಟ್ಟಿಗೆ ಸೇರುವುದು ಖಚಿತ. 4+1 ಫಾರ್ಮುಲಾದ ಪ್ರಕಾರ ಒಟ್ಟು ಐವರು ಮೋದಿ ಸರ್ಕಾರದಲ್ಲಿ ಸಚಿವರಾಗುವ ಸಾಧ್ಯತೆ ಇದೆ.

VISTARANEWS.COM


on

Modi 3.0 Cabinet
Koo

ಬೆಂಗಳೂರು: ಬಹುಮತದೊಂದಿಗೆ ಎನ್‌ಡಿಎ (NDA) ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಇಂದು (ಜೂನ್‌ 9) ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದಿಂದ ಆರಿಸಿ ಬಂದಿರುವ ಸಂಸದರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಫಿಕ್ಸ್‌ ಎಂಬ ಮಾತು ಕೇಳಿ ಬರುತ್ತಿದೆ. ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ. ಹಾಗಾದರೆ ಸಚಿವ ಸ್ಥಾನದ ರೇಸ್‌ನಲ್ಲಿ ಯಾರೆಲ್ಲ ಇದ್ದಾರೆ ಎನ್ನುವ ಮಾಹಿತಿ ಇಲ್ಲಿದೆ (Modi 3.0 Cabinet).

ಮೋದಿ ಅವರ ಜತೆ ಕ್ಯಾಬಿನೆಟ್ ದರ್ಜೆಯ ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದರೂ ಈ ಪಟ್ಟಿಗೆ ಸೇರುವುದು ಖಚಿತ. 4+1 ಫಾರ್ಮುಲಾದ ಪ್ರಕಾರ ಒಟ್ಟು ಐವರು ಮೋದಿ ಸರ್ಕಾರದಲ್ಲಿ ಸಚಿವರಾಗುವ ಸಾಧ್ಯತೆ ಇದೆ. ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಸಿಗುವುದು ಪಕ್ಕಾ ಎನ್ನಲಾಗಿದೆ. ಇವರ ಜತೆಗೆ ಪ್ರಹ್ಲಾದ ಜೋಶಿ ಅವರಿಗೂ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ಸಿಗಲಿದೆ. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರೂ ಸಚಿವರಾಗಿ ಮುಂದುವರಿಯಲಿದ್ದು, ಕರ್ನಾಟಕದ ಕೋಟಾದಲ್ಲಿ ಸಚಿವ ಸ್ಥಾನ ಫಿಕ್ಸ್ ಎನ್ನುವ ಮಾತು ಕೇಳಿ ಬಂದಿದೆ. ಇನ್ನೊಂದು ಒಂದು ಸ್ಥಾನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಡಾ.ಮಂಜುನಾಥ್ ಅವರಿಗೆ ಲಭಿಸುವ ಸಾಧ್ಯತೆ ಇದೆ.

ಮತ್ತೊಂದು ಸ್ಥಾನಕ್ಕೆ ಬಾರಿ ಪೈಪೋಟಿ ನಡೆದಿದೆ. ಬಹುತೇಕ ಮಾಜಿ ಸಿಎಂ ಬಸವರಾಜ ಬೊಮ್ಮಯಿ ಅವರಿಗೆ ಇದು ಒಲಿಯುವ ಸಾಧ್ಯತೆ ಇದೆ. ಈ ನಡುವೆ ನಾಲ್ಕು ಬಾರಿ ಸಂಸದರಾಗಿರುವ ಬಿ.ವೈ.ವಿಜಯೇಂದ್ರ ಅವರಿಂದಲೂ ಸಚಿವ ಸ್ಥಾನ ಪಡೆಯುವ ಕಸರತ್ತು ನಡೆಯುತ್ತಿದೆ ಎನ್ನಲಾಗಿದೆ. ಇನ್ನೂ ಒಂದು ಸ್ಥಾನ ಹೆಚ್ಚು ಸಿಕ್ಕಿದರೆ ಬಹುತೇಕ ದಲಿತ ಕೋಟಾದಲ್ಲಿ ಗೋವಿಂದ ಕಾರಜೋಳ ಇಲ್ಲವೇ ರಮೇಶ್ ಜಿಗಜಿಣಿಗೆ ಲಕ್ ಹೊಡೆಯಲಿದೆ ಎನ್ನುವ ಚರ್ಚೆಯೂ ಆರಂಭವಾಗಿದೆ.

ಇನ್ನು ಹಿರಿಯ ನಾಯಕರಾದ ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ವಿ.ಸೋಮಣ್ಣ ಮತ್ತು ಡಾ.ಸುಧಾಕರ್‌ ಅವರಿಗೆ ಅದೃಷ್ಟ ಒಲಿಯುವ ಸಾಧ್ಯತೆ ಇಲ್ಲ. ಹೀಗಾಗಿ ಸದ್ಯ ಯಾರೆಲ್ಲ ಸಚಿವರಾಗುತ್ತಾರೆ ಎನ್ನುವ ಕುತೂಹಲ ಮುಂದುವರಿದಿದೆ.

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

ಎನ್‌ಡಿಎ ಮೈತ್ರಿಕೂಟದ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾಗಿರುವ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಜೂನ್‌ 7) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ, ನೂತನ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಬೆಂಬಲ ನೀಡಿರುವ ಪತ್ರದೊಂದಿಗೆ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾದ ಅವರು ಹಕ್ಕು ಮಂಡಿಸಿದ್ದಾರೆ. ಇನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿ ಅವರಿಗೆ ದ್ರೌಪದಿ ಮುರ್ಮು ಅವರು ಸಕ್ಕರೆ ಮಿಶ್ರಣ ಆಗಿರುವ ಮೊಸರನ್ನು ತಿನ್ನಿಸಿ, ಶುಭ ಕೋರಿದ್ದಾರೆ.

Continue Reading

Lok Sabha Election 2024

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪೇಜಾವರ ಶ್ರೀ

Modi 3.0 Cabinet: ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರೂ ಭಾಗವಹಿಸಲಿದ್ದು, ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಶನಿವಾರ ಕಿರಿಯ ಪೇಜಾವರ ಶ್ರೀಗಳಿಗೆ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಆಹ್ವಾನ ಲಭಿಸಿತ್ತು. ತಡರಾತ್ರಿ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಆಹ್ವಾನಿಸಲಾಗಿತ್ತು. ಹೀಗಾಗಿ ಇಂದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ.

VISTARANEWS.COM


on

Modi 3.0 Cabinet
Koo

ಉಡುಪಿ: ಲೋಕಸಭೆ ಚುನಾವಣೆ(Lok Sabha Election 2024)ಯ ಫಲಿತಾಂಶ ಹೊರಬಿದ್ದಿದ್ದು, ಸ್ಪಷ್ಟ ಬಹುಮತದ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಕೇಂದ್ರದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ. ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ (Narendra Modi) ಇಂದು (ಜೂನ್‌ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ (Modi 3.0 Cabinet). ಈ ಕಾರ್ಯಕ್ರಮದಲ್ಲಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwa Prasanna Swamiji) ಅವರೂ ಭಾಗವಹಿಸಲಿದ್ದು, ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಶನಿವಾರ ಕಿರಿಯ ಪೇಜಾವರ ಶ್ರೀಗಳಿಗೆ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದ ಆಹ್ವಾನ ಲಭಿಸಿತ್ತು. ತಡರಾತ್ರಿ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಆಹ್ವಾನಿಸಲಾಗಿತ್ತು. ಹೀಗಾಗಿ ಇಂದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಬೆಳಿಗ್ಗೆ 11.30ಕ್ಕೆ ಹೊರಡಲಿರುವ ವಿಮಾನದಲ್ಲಿ ಶ್ರೀಗಳು ಪ್ರಯಾಣ ಬೆಳೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೇಜಾವರ ಶ್ರೀಗಳು ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್​ನ ಸದಸ್ಯರಾಗಿದ್ದಾರೆ. ದೇಗುಲ ನಿರ್ಮಾಣ ಕಾರ್ಯ ಹಾಗೂ ಯೋಜನೆಯಲ್ಲಿ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ. ಅವರು ಜನವರಿಯಲ್ಲಿ ನಡೆದ ಪ್ರಾಣ ಪ್ರತಿಷ್ಠೆ ಹಾಗೂ ದೇಗುಲದ ಧಾರ್ಮಿಕ ವಿಧಿ, ವಿಧಾನಗಳಲ್ಲೂ ಮಾರ್ಗದರ್ಶನ ನೀಡಿದ್ದರು.

ಸಿದ್ಧತೆ ಪೂರ್ಣ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಏಳು ವಿದೇಶಿ ನಾಯಕರು ಸೇರಿದಂತೆ ಒಟ್ಟು 8,000 ಗಣ್ಯರು ಉಪಸ್ಥಿತರಿರಲಿದ್ದಾರೆ. ಇನ್ನು ಗಣ್ಯರಲ್ಲಿ ವಿವಿಧ ವೃತ್ತಿಪರರು, ಸಾಂಸ್ಕೃತಿಕ ಕಲಾವಿದರು ಸೇರಿದ್ದಾರೆ. ಸಂಜೆ 7:31ರ ಹೊತ್ತಿಗೆ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸುವ ಮೊದಲು ಮಹಾತ್ಮ ಗಾಂಧೀಜಿ ಅವರ ಸಮಾಧಿಸ್ಥಳವಾದ ರಾಜ್‌ಘಾಟ್‌ಗೆ ತೆರಳಿ ನಮನ ಸಲ್ಲಿಸಲಿದ್ದಾರೆ. ಇದಾದ ನಂತರ ತಮ್ಮ ರಾಜಕೀಯ ಗುರುವಾದ ಅಟಲ್‌ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳವಾದ ಸದೈವ ಅಟಲ್‌ಗೆ ಭೇಟಿ ನೀಡಿ, ಅವರಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ.

7 ವಿದೇಶಿ ನಾಯಕರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಭಾರತದ ಏಳು ನೆರೆಯ ರಾಷ್ಟ್ರಗಳ ನಾಯಕರು ಭಾಗಿಯಾಗಲಿದ್ದಾರೆ. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿರಲಿದ್ದಾರೆ.

ಇದನ್ನೂ ಓದಿ: Modi 3.0 Cabinet: ಮೋದಿ 3ನೇ ಅವಧಿಯಲ್ಲಿ ಯಾರಿಗೆಲ್ಲ ಮಂತ್ರಿ ಭಾಗ್ಯ? ರೇಸ್‌ನಲ್ಲಿ ಯಾರಿದ್ದಾರೆ? ಇಲ್ಲಿದೆ ಪಟ್ಟಿ

ಸದ್ಯ ಯಾರಿಗೆಲ್ಲ ಮೋದಿ ಅವರ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ದೊರೆಯಲಿದೆ ಎನ್ನುವ ಚರ್ಚೆ ಆರಂಭವಾಗಿದೆ. ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಎನ್‌ಡಿಎ ಮೈತ್ರಿಕೂಟದ ಹಲವು ಸಂಸದರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಜತೆಗೆ ಟಿಡಿಪಿಯ ರಾಮ್‌ ಮೋಹನ್‌ ನಾಯ್ಡು, ಲಾಲನ್‌ ಸಿಂಗ್‌, ಸಂಜಯ್‌ ಝಾ, ಜೆಡಿಯುನ ರಾಮನಾಥ್‌ ಠಾಕೂರ್‌, ಲೋಕ ಜನ ಶಕ್ತಿ ಪಕ್ಷದ ಚಿರಾಗ್‌ ಪಾಸ್ವಾನ್‌, ಕರ್ನಾಟಕದ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಬೆಂಗಳೂರು

Robbery Case: ನಗರದಲ್ಲಿ ಬೀಡು ಬಿಟ್ಟಿದೆ ತುಪ್ಪ ಕಳ್ಳತನ ಮಾಡೋ ಗ್ಯಾಂಗ್; ನಂದಿನಿ ಪಾರ್ಲರ್‌, ಸೂಪರ್ ಮಾರ್ಕೆಟ್‌ ಇವರ ಟಾರ್ಗೆಟ್‌

Robbery Case: ಬೆಂಗಳೂರು ನಗರದಲ್ಲಿ ಹೊಸ ರೀತಿಯ ಕಳ್ಳತನ ಆರಂಭವಾಗಿದೆ. ಇದೀಗ ಕಳ್ಳರು ತುಪ್ಪವನ್ನೇ ಟಾರ್ಗೆಟ್‌ ಮಾಡಿ ಕಾರ್ಯ ಪ್ರವೃತ್ತರಾಗಿದ್ದಾರೆ. ನಂದಿನಿ ಪಾರ್ಲರ್‌ಗಳು, ಸೂಪರ್ ಮಾರ್ಕೆಟ್‌ಗಳೇ ಇವರ ಮುಖ್ಯ ಗುರಿ. ಅದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ಅನ್ನಪೂರ್ಣೇಶ್ವರಿ ನಗರದಲ್ಲಿ 15 ಲೀಟರ್ ತುಪ್ಪ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ತುಪ್ಪ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತುಪ್ಪ ದುಬಾರಿಯಾಗಿರುವುದರಿಂದ ಕಳ್ಳರು ಇದನ್ನೇ ಟಾರ್ಗೆಟ್‌ ಮಾಡಿದ್ದಾರೆ.

VISTARANEWS.COM


on

Robbery Case
Koo

ಬೆಂಗಳೂರು: ನಗರದಲ್ಲಿ ಹೊಸ ರೀತಿಯ ಕಳ್ಳತನ ಆರಂಭವಾಗಿದೆ. ಇದೀಗ ಕಳ್ಳರು ತುಪ್ಪವನ್ನೇ ಟಾರ್ಗೆಟ್‌ ಮಾಡಿ ಕಾರ್ಯ ಪ್ರವೃತ್ತರಾಗಿದ್ದಾರೆ. ನಂದಿನಿ ಪಾರ್ಲರ್‌ಗಳು, ಸೂಪರ್ ಮಾರ್ಕೆಟ್‌ಗಳೇ ಇವರ ಮುಖ್ಯ ಗುರಿ. ಅದಕ್ಕೆ ಇತ್ತೀಚಿನ ಉದಾಹರಣೆ ಎಂಬಂತೆ ಅನ್ನಪೂರ್ಣೇಶ್ವರಿ ನಗರದಲ್ಲಿ 15 ಲೀಟರ್ ತುಪ್ಪ ಎಗರಿಸಿ ಕಳ್ಳರು ಪರಾರಿಯಾಗಿದ್ದಾರೆ. ತುಪ್ಪ ಕಳವು ಮಾಡುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ (Robbery Case).

ಒಬ್ಬರೇ ಇರುವ ಅಂಗಡಿಗಳನ್ನ ಟಾರ್ಗೆಟ್‌ ಮಾಡುವ ಕಳ್ಳರು ಕೆಜಿಗಟ್ಟಲೇ ತುಪ್ಪ ಖರೀದಿಸುವ ನೆಪದಲ್ಲಿ ಆಗಮಿಸುತ್ತಾರೆ. ವಳಿಕ ಮತ್ತೊಂದು ವಸ್ತು ಕೇಳಿ ಮಾಲೀಕರು ಅತ್ತ ತಿರುಗುವಷ್ಟರಲ್ಲಿ ತಂದಿಟ್ಟ ತುಪ್ಪವನ್ನು ಎತ್ತಿಕೊಂಡು ಪರಾರಿಯಾತ್ತಾರೆ. ಕಳೆದ ಒಂದು ತಿಂಗಳ ಹಿಂದೆ ಇದೇ ರೀತಿ ನಂದಿನಿ ಪಾರ್ಲರ್‌ ಒಂದರಿಂದ 15 ಕೆಜಿ ತುಪ್ಪ ಖರೀದಿಸಿ ಖದೀಮರು ಪಾರಾರಿಯಾಗಿದ್ದರು.

ಅಂದು ಕೆಂಗೇರಿ ಕೊಮ್ಮಘಟ್ಟ ನಂದಿನಿ ಪಾರ್ಲರ್‌ನಲ್ಲಿ ಕೈಚಳಕ ತೋರಿದ್ದ ಕಳ್ಳರು ಪೇಡ ಖರೀದಿ ನೆಪದಲ್ಲಿ ತುಪ್ಪ ಕದ್ದೊಯ್ದಿದ್ದರು. ಇದೀಗ ಅದೇ ರೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರದಲ್ಲಿ ಕಳ್ಳರು ಕೈ ಚಳಕ ತೋರಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಪೇರ್ ಪ್ರೈಸ್ ಎಂಬ ಸೂಪರ್ ಮಾರ್ಕೇಟ್‌ನಲ್ಲಿ ಈ ಘಟನೆ ನಡೆದಿದೆ. ಇಲ್ಲಿಂದಲೂ 15 ಲೀಟರ್ ತುಪ್ಪ ಖರೀದಿಸಿದ ಇಬ್ಬರು ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಈ ದೃಶ್ಯ ಸಿಸಿ ಟಿವೆ ಕ್ಯಾ,ಮೆರಾದಲ್ಲಿ ಸೆರೆಯಾಗಿದೆ.

ಕಾರಿಗೆ ಬೈಕ್ ಅಡ್ಡ ಹಾಕಿ ಬಾನೆಟ್‌ಗೆ ಒದ್ದ ಬೈಕ್ ಸವಾರ

ಬೆಂಗಳೂರು: ದಾರಿ ಬಿಡುವ ಸಂದರ್ಭದಲ್ಲಿ ಬೈಕ್‌ ಮತ್ತು ಕಾರು ಚಾಲಕನ ಮಧ್ಯೆ ಜಗಳ ನಡೆದಿರುವ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಮೂಲಕ ನಗರದಲ್ಲಿ ನಡೆಯುತ್ತಿರುವ ರೋಡ್ ರೇಜ್‌ಗೆ ಮತ್ತೊಂದು ಘಟನೆ ಸೇರ್ಪಡೆಯಾದಂತಾಗಿದೆ.

ಜಕ್ಕೂರಿನಲ್ಲಿ ಯೂ ಟರ್ನ್ ಮಾಡುವ ವೇಳೆ ಕಾರು ಚಾಲಕ ಪ್ರವೀಣ್ ಹಾಗೂ ದ್ವಿಚಕ್ರ ವಾಹನ ಸವಾರನ ನಡುವೆ ಕಿರಿಕ್ ನಡೆದಿದೆ. ಈ ವೇಳೆ ಕಾರನ್ನು ಅಡ್ಡ ಹಾಕಿ ಕಾರ್‌ನ ಬಾನೆಟ್‌ಗೆ ಒದ್ದು ಬೈಕ್‌ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಫಾಲೋ ಮಾಡಿಕೊಂಡು ಬಂದಿದ್ದ ದ್ವಿಚಕ್ರ ವಾಹನ ಸವಾರ ಶ್ರೀರಾಮಪುರ ವಿಲೇಜ್ ಬಳಿಯೂ ಕಿರಿಕ್‌ ಮಾಡಿದ್ದಾನೆ. ಕಾರ್ ಡ್ಯಾಷ್ ಕ್ಯಾಮ್‌ ಬೈಕ್‌ ಸವಾರನ ಕೃತ್ಯ ಸೆರೆಯಾಗಿದೆ.

ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಬೆಂಗಳೂರು: ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

Continue Reading

ಮಳೆ

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Rain News : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯು ಮುಂದುವರಿಯಲಿದೆ. ಜೂ.9 ರಿಂದ 14ರವೆರೆಗೆ‌ ವ್ಯಾಪಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್‌ ಇದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯದಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ (Karnataka Weather Forecast) ಸುರಿಯಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Rain News) ನೀಡಿದೆ. ಕೆಲವೊಮ್ಮೆ ಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು, ಸಿಡಿಲಿನ ಆರ್ಭಟ ಇರಲಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡಕ್ಕೂ ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಭಾರೀ ಗಾಳಿಯೊಂದಿಗೆ (40-50 kmph) ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವೊಮ್ಮೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಜತೆಗೆ ಮೇಲ್ಮೈ ಮಾರುತಗಳು ಕೆಲವೊಮ್ಮೆ ಬಲವಾದ ಮತ್ತು ಬಿರುಗಾಳಿಯ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಸೈಬರ್‌ ಸೇಫ್ಟಿ ಅಂಕಣ cyber safety column 2
ಅಂಕಣ21 mins ago

ಸೈಬರ್‌ ಸೇಫ್ಟಿ ಅಂಕಣ: ಭಾರತದ ಭವಿಷ್ಯಕ್ಕೆ ಬ್ಲಾಕ್‌ಚೈನ್‌ನ ಬೆನ್ನೆಲುಬು

Modi 3.0 Cabinet
Lok Sabha Election 202423 mins ago

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಇವರಿಗೆಲ್ಲ ಸಚಿವ ಸ್ಥಾನ ಫಿಕ್ಸ್?‌

Pawan Kalyan Thammudu Re release
ಟಾಲಿವುಡ್34 mins ago

Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

IND vs PAK
ಕ್ರೀಡೆ38 mins ago

IND vs PAK: ಇಂದು ಪಾಕ್​ ವಿರುದ್ಧ ಆಡಲಿದ್ದಾರಾ ಟೀಮ್​ ಇಂಡಿಯಾ ನಾಯಕ ರೋಹಿತ್​?

Modi 3.0 Cabinet
ದೇಶ39 mins ago

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ?

ರಾಜಮಾರ್ಗ ಅಂಕಣ ramoji rao
ಅಂಕಣ39 mins ago

ರಾಜಮಾರ್ಗ ಅಂಕಣ: ಮನರಂಜನೆಯ ಮಹಾ ದೊರೆ, ಕನಸುಗಾರನ ನಿರ್ಗಮನ

WI vs UGA
ಕ್ರೀಡೆ1 hour ago

WI vs UGA: ಉಗಾಂಡ ವಿರುದ್ಧ 134 ರನ್​ಗಳ ಭರ್ಜರಿ ಗೆಲುವು ಸಾಧಿಸಿದ ವಿಂಡೀಸ್​

Modi 3.0 Cabinet
Lok Sabha Election 20241 hour ago

Modi 3.0 Cabinet: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಪೇಜಾವರ ಶ್ರೀ

Israel-Hamas Conflict
ವಿದೇಶ1 hour ago

Israel-Hamas Conflict: ಹಮಾಸ್‌ ಉಗ್ರರ ಸೆರೆಯಲ್ಲಿದ್ದ ನಾಲ್ವರ ರಕ್ಷಣೆ; 265 ದಿನಗಳ ನರಕಯಾತನೆ ಬಳಿಕ ತಾಯ್ನಾಡಿಗೆ ವಾಪಾಸ್‌

Uttarakaanda Movie in bhavana menon
ಸ್ಯಾಂಡಲ್ ವುಡ್2 hours ago

Uttarakaanda Movie: ‘ಉತ್ತರಕಾಂಡ’ದ ವೀರವ್ವ ಪಾತ್ರದಲ್ಲಿ ಭಾವನಾ‌ ಮೆನನ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌