Bruce Willis: ʻಡೈ ಹಾರ್ಡ್ʼ ಸಿನಿಮಾ ನಟ ಬ್ರೂಸ್ ವಿಲ್ಲೀಸ್‌ಗೆ ಬುದ್ಧಿಮಾಂದ್ಯತೆ: ಚಿಕಿತ್ಸೆಯೇ ಇಲ್ಲ ಎಂದ ಕುಟುಂಬಸ್ಥರು! - Vistara News

ಸಿನಿಮಾ

Bruce Willis: ʻಡೈ ಹಾರ್ಡ್ʼ ಸಿನಿಮಾ ನಟ ಬ್ರೂಸ್ ವಿಲ್ಲೀಸ್‌ಗೆ ಬುದ್ಧಿಮಾಂದ್ಯತೆ: ಚಿಕಿತ್ಸೆಯೇ ಇಲ್ಲ ಎಂದ ಕುಟುಂಬಸ್ಥರು!

ʻಡೈ ಹಾರ್ಡ್ʼ ಸಿನಿಮಾ ನಟ ಬ್ರೂಸ್ ವಿಲ್ಲೀಸ್‌ಗೆ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಜೀವನ ಮತ್ತಷ್ಟು ಕಷ್ಟ ಆಗಲಿದೆ ಎಂದು ಕುಟುಂಬದವರೇ ಹೇಳಿಕೆ ನೀಡಿದ್ದಾರೆ.

VISTARANEWS.COM


on

Bruce Willis Diagnosed With Untreatable Dementia
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಾಲಿವುಡ್‌ “ಡೈ ಹಾರ್ಡ್” ಖ್ಯಾತಿಯ ನಟ ಬ್ರೂಸ್ ವಿಲ್ಲೀಸ್ (Bruce Willis) ಅವರು ಬುದ್ಧಿಮಾಂದ್ಯ ರೋಗದಿಂದ ಬಳಲುತ್ತಿದ್ದಾರೆ. ​​ಫ್ರಂಟೊಟೆಂಪೊರಲ್ ಡಿಮೆನ್ಶಿಯಾ (FTD) ಎನ್ನುವುದು ಬುದ್ಧಿಮಾಂದ್ಯದ ಒಂದು ವಿಧ. ಮುಂದಿನ ದಿನಗಳಲ್ಲಿ ಅವರ ಜೀವನ ಮತ್ತಷ್ಟು ಕಷ್ಟ ಆಗಲಿದೆ ಎಂದು ಕುಟುಂಬದವರೇ ಹೇಳಿಕೆ ನೀಡಿದ್ದಾರೆ.

ʻʻಅವರು ಬರುಬರುತ್ತ ಸಂವಹನ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಇದೀಗ ಈ ರೋಗದ ಒಂದು ಲಕ್ಷಣವಾಗಿದೆ ಎಂದು ಹೇಳಿದ್ದಾರೆ. ಈ ರೋಗಕ್ಕೆ ಯಾವುದೇ ಚಿಕಿತ್ಸೆಗಳಿಲ್ಲ, ಮುಂಬರುವ ವರ್ಷಗಳಲ್ಲಿ ಬದಲಾಗಬಹುದು ಎಂದು ನಾವು ಭಾವಿಸುತ್ತೇವೆ” ಎಂದು ಕುಟುಂಬ ತಿಳಿಸಿದೆ.

ೊ‘ಎಫ್‌ಟಿಡಿ ಒಂದು ಕೆಟ್ಟ ಕಾಯಿಲೆ. ನಮ್ಮಲ್ಲಿ ಅನೇಕರು ಇದನ್ನು ಈವರೆಗೆ ಕೇಳಿಲ್ಲ. ಇದು ಯಾರಲ್ಲಿ ಬೇಕಿದ್ದರೂ ಕಾಣಿಸಿಕೊಳ್ಳಬಹುದು. 60 ವರ್ಷದ ವ್ಯಕ್ತಿಗಳಿಗೆ FTD ಕಾಣಿಸಿಕೊಳ್ಳುತ್ತದೆ. ಆದರೆ, ಇದನ್ನು ಪತ್ತೆಹಚ್ಚಲು ಅನೇಕ ವರ್ಷಗಳೇ ಬೇಕಾಗಬಹುದು. ಈ ರೋಗಕ್ಕೆ ಯಾವುದೇ ಔಷಧ ಇಲ್ಲ. ಮುಂದಿನ ವರ್ಷಗಳಲ್ಲಿ ಏನಾದರೂ ಪಾಸಿಟಿವ್ ಬದಲಾವಣೆ ಆಗಬಹುದು ಎಂದು ನಾವು ಭಾವಿಸುತ್ತೇವೆ’ ಎಂದು ಬ್ರೂಸ್ ಕುಟುಂಬದವರು ಮಾಧ್ಯಮಕ್ಕೆ ಮಾಹಿತಿ ಹಂಚಿಕೊಂಡಿದ್ದಾರೆ. ‘ಡೈ ಹಾರ್ಡ್’ ಮತ್ತು ‘ದಿ ಸಿಕ್ಸ್ತ್ ಸೆನ್ಸ್’ ನಂತಹ ಹಿಟ್‌ ಚಿತ್ರಗಳಲ್ಲಿ ಅವರು ಮೆಚ್ಚುಗೆ ಗಳಿಸಿದ್ದರು.

ಇದನ್ನೂ ಓದಿ: Dhrishyam Movie : ಹಾಲಿವುಡ್‌ಗೂ ಹಾರಿದ ದೃಶ್ಯಂ ಸಿನಿಮಾ! ಚೀನಾ, ಕೋರಿಯಾ ಭಾಷೆಗಳಿಗೂ ಸಿನಿಮಾ ರಿಮೇಕ್‌

ಇದನ್ನೂ ಓದಿ: ನಿಕ್​ ಜೋನಸ್​ ಮತ್ತು ಸೋದರರಿಗೆ ಹಾಲಿವುಡ್​ ವಾಕ್ ಆಫ್ ಫೇಮ್​ ಗೌರವ; ಅಪ್ಪನ ಸಂಭ್ರಮಕ್ಕೆ ಸಾಕ್ಷಿಯಾದ ಮಗಳು ಮಾಲತಿ

FTD ಎಂದರೇನು?

ಫ್ರಂಟೊಟೆಂಪೊರಲ್ ಡಿಮೆನ್ಶಿಯಾ (FTD) ಮೆದುಳಿನ ಮುಂಭಾಗ ಮತ್ತು ನ್ಯೂರಾನ್‌ಗಳಿಗೆ ಹಾನಿಯುಂಟು ಮಾಡುತ್ತದೆ. ಭಾವನಾತ್ಮಕ ಸಮಸ್ಯೆಗಳು, ಸಂವಹನದಲ್ಲಿ ತೊಂದರೆ, ಕೆಲಸ ಅಥವಾ ನಡಿಗೆಯ ಮೇಲೆ ಪರಿಣಾಮ ಬೀರುತ್ತದೆ. ಈ ರೋಗಲಕ್ಷಣಗಳದ ಜೀವಿತಾವಧಿ ಸರಾಸರಿ 7 ರಿಂದ 13 ವರ್ಷಗಳವರೆಗೆ ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

Actor Darshan: ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

VISTARANEWS.COM


on

Actor Darshan case Police Serve Notice To Siddarudha Who Claimed To Met Darshan
Koo

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ (Renuka Swamy Murder case) ಕೂಡಾ ನಟ ದರ್ಶನ್ (Actor Darshan) ಅಭಿಮಾನಿಯಾಗಿದ್ದವನು. ಆದರೆ ಅದೇ ಅಭಿಮಾನಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ನನ್ನು ಸಿದ್ಧಾರೂಢ ಎಂಬ ಮಾಜಿ ಕೈದಿ ಭೇಟಿಯಾಗಿದ್ದಾಗಿ ಹೇಳಿಕೊಂಡಿದ್ದ, ಈತನಿಗೆ ಈಗ ಪೊಲೀಸ್ ಇಲಾಖೆ ನೋಟಿಸ್‌ ನೀಡಿದೆ.

ಸನ್ನಡತೆ ಆಧಾರದಲ್ಲಿ ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಬೇಕಿದ್ದ ಸಿದ್ಧಾರೂಢ ಅವರು ದರ್ಶನ್‌ನ ಭೇಟಿ ಮಾಡಲೇಬೇಕು ಎನ್ನುವ ಆಸೆ ಹೊಂದಿದ್ದರು. ಅದಕ್ಕಾಗಿ ಅವರು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು ಎನ್ನಲಾಗಿತ್ತು. ಇದಕ್ಕೆ ಜೈಲು ಅಧಿಕಾರಿ ಕೂಡ ಒಪ್ಪಿಕೊಂಡಿದ್ದರು ಎನ್ನಲಾಗಿತ್ತು. ಆದರೆ ಸಿದ್ಧರೂಢರನ್ನು ಭೇಟಿಯಾಗೋದಿಕ್ಕೆ ದರ್ಶನ್‌ ಒಪ್ಪುತ್ತಾರಾ? ಅವರಿಗೆ ಮನಸಿದ್ಯಾ ಅಂತ ಅಧಿಕಾರಿಗಳು ದರ್ಶನ್‌ನ ಕೇಳಿದ್ದರು. ಆದರೆ ದರ್ಶನ್‌ ಹಿಂದೂ ಮುಂದೂ ನೋಡಲೇ ಇಲ್ಲ. ಒಂಚೂರು ಯೋಚನೆ ಮಾಡದೇ ತನ್ನನ್ನು ಭೇಟಿಯಾಗಲು ಬಯಸುತ್ತಿರುವ ಅಭಿಮಾನಿಯ ಭೇಟಿಗೆ ಒಪ್ಪಿಕೊಂಡಿದ್ದರು. ಸಿದ್ಧಾರೂಢ ಅವರನ್ನು ಒಳ ಕಳುಹಿಸುವಂತೆ ಮನವಿ ಮಾಡಿದ್ದರು. ಎನ್ನಲಾಗಿತ್ತು. ಸಿದ್ಧಾರೂಢ, ತಾವು ದರ್ಶನ್ ಅನ್ನು ಜೈಲಿನಲ್ಲಿ ಭೇಟಿಯಾಗಿದ್ದು, ದರ್ಶನ್​ಗೆ ಯೋಗ ಹೇಳಿಕೊಟ್ಟೆ, ಧ್ಯಾನ ಹೇಳಿಕೊಟ್ಟೆ, ದರ್ಶನ್ ಜೊತೆಗೆ ಹಲವು ಸಮಯ ಮಾತನಾಡಿದೆ ಎಂದೆಲ್ಲ ಹೇಳಿಕೊಂಡಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.

ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲು ಅಧಿಕಾರಿಗಳು

ಜೈಲಲ್ಲಿ ನಟ ದರ್ಶನ್ ಭೇಟಿಯಾಗದೆ‌ ಸಿದ್ದರೂಢ ಸುಳ್ಳು ಕಥೆ ಕಟ್ಟಿದ್ದಾರೆ ಎನ್ನಲಾಗಿದೆ. ದರ್ಶನ್ ಭೇಟಿ ಮಾಡಿಸಲೇ ಇಲ್ಲವೆಂದು ಕಾರಾಗೃಹ ಇಲಾಖೆಗೆ ಜೈಲಾಧಿಕಾರಿಗಳು ರಿಪೋರ್ಟ್ ಕೊಟ್ಟಿದ್ದಾರೆ. ಸನ್ನಡತೆ ಮೇಲೆ ರಿಲೀಸ್ ಆಗಿರುವ ಸಿದ್ದರೂಢ ಮಾಧ್ಯಮ ಹೇಳಿಕೆ ಬಗ್ಗೆ ಜೈಲಾಧಿಕಾರಿಗಳು ಚರ್ಚೆ ಮಾಡಿದ್ದಾರೆ.  ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

ಇದನ್ನೂ ಓದಿ: Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

ಇದೇ ತಿಂಗಳ ಎಂಟನೇ ತಾರೀಖು ಬಳ್ಳಾರಿ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸಿದ್ಧಾರೂಢ ಬಂದಿದ್ದ. ಆತನನ್ನು ಒಂಬತ್ತನೇ ತಾರೀಖು ಬಿಡುಗಡೆ ಮಾಡಿದ್ದೆವು. ಆತ ಇಲ್ಲಿ ದರ್ಶನ್ ಅನ್ನು ಭೇಟಿ ಆಗಿಲ್ಲ. ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲಧಿಕಾರಿಗಳು ಹೇಳಿದ್ದಾರೆ.

ಸಿದ್ಧಾರೂಢ ಮಾಧ್ಯಮದ ಮುಂದೆ ಹೇಳಿದ್ದೇನು?

ʻʻನಿನ್ನನ್ನ ಕಾನೂನು ಕ್ಷಮಿಸಿ ಒಂದು ಅವಕಾಶವನ್ನು ಕೊಟ್ಟಿದೆ. ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೋ, ಹೆಂಡತಿ ಮಕ್ಕಳ ಜತೆ ಪ್ರೀತಿಯಿಂದ ಬದುಕು ಅಂತ ಸಲಹೆಯನ್ನು ಕೊಟ್ಟಿದ್ದರಂತೆ. ದರ್ಶನ್ ಆಡಿರುವ ಈ ಮಾತುಗಳನ್ನು ಕೇಳಿದರೆ ನಿಜಕ್ಕೂ ಅವರಿಗೆ ಪಾಪಪ್ರಜ್ಞೆ ಕಾಡುತ್ತಿದೆ. ತಾನು ಮಾಡಿರುವ ತಪ್ಪಿನ ಅರಿವು ಆದಂತಿದೆʼʼ ಎಂದು ಸಿದ್ಧಾರೂಢ ತಿಳಿಸಿದ್ದರು.

ಜುಲೈ 8ರಂದು ಜೈಲಾಧಿಕಾರಿಗಳ ಅನುಮತಿ ಪಡೆದು ನಟ ದರ್ಶನ್‌ರನ್ನು ಭೇಟಿಯಾದ ಸಿದ್ಧರೂಢ, ಪಿರಮಿಡ್‌ ಧ್ಯಾನವನ್ನು ಹೇಳಿಕೊಟ್ಟಿದ್ದರಂತೆ. ನಾನು ನಿಮ್ಮ ಅಭಿಮಾನಿ ಎಂದಾಗ ಸಿದ್ಧರೂಢರನ್ನು ದರ್ಶನ್‌ ತಬ್ಬಿಕೊಂಡರಂತೆ. ಹತ್ತು ನಿಮಿಷ ಧ್ಯಾನ ಮಾಡಿದ ದರ್ಶನ್‌ ಇದು ಚೆನ್ನಾಗಿದೆ, ನಾನು ಇನ್ಮೆಲೆ ಇದನ್ನೂ ಮಾಡ್ತಿಲಿ ಎಂದು ಜೈಲಿನಿಂದ ಬಿಡುಗಡೆಗೊಂಡ ಕೈದಿ ಸಿದ್ಧಾರೂಢ ಹೇಳಿದ್ದಾರೆ. ದರ್ಶನ್‌ ಅವರನ್ನು ನೋಡಿದಾಗ ಬೇಸರ ಆಯಿತು. ಆದರೆ ಅವರು ನೀನು ನಾನ್‌ ಸೆಲೆಬ್ರಿಟಿ, ನಾನು ನಿನ್ನ ಸೆಲೆಬ್ರಿಟಿ ಎಂದು ಆಟೋಗ್ರಾಫ್‌ ಕೊಟ್ಟರು ಅಂತ ದರ್ಶನ್‌ ಕುರಿತು ಸಿದ್ಧರೂಢ ವಿವರಿಸಿದ್ದರು.

Continue Reading

ಸ್ಯಾಂಡಲ್ ವುಡ್

Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Golden Star Ganesh: ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

VISTARANEWS.COM


on

Golden Star Ganesh krishnam pranaya sakhi in famous social media
Koo

ಬೆಂಗಳೂರು: ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

“ಮುಂಗಾರು ಮಳೆ” ಯ ನಂತರ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: Ajith Kumar: ಪ್ರಶಾಂತ್ ನೀಲ್- ಅಜಿತ್ ಭೇಟಿಯಾಗಿದ್ದು ನಿಜ; ಸಿನಿಮಾ ಬಗ್ಗೆ ಮ್ಯಾನೇಜರ್ ಹೇಳಿದ್ದೇನು?

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Continue Reading

ಬಾಲಿವುಡ್

Taapsee Pannu: ಸೆಲ್ಫಿಗೆ ಪೋಸ್‌ ಕೋಡೋಕೆ ಆಗಲ್ವಾ? ತಾಪ್ಸಿ ಪನ್ನು ಮೇಲೆ ಸೋಷಿಯಲ್ ಮೀಡಿಯಾ ಸ್ಟಾರ್ ಕೆಂಡ!

Taapsee Pannu: ಚಿತ್ರದ ಪ್ರಚಾರದ ವೇಳೆ ವೇದಿಕೆಯಲ್ಲಿ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಅನನ್ಯ ದ್ವಿವೇದಿ ಭಾಗಿಯಾಗಿದ್ದರು. ಬಳಿಕ ವೇದಿಕೆಯಲ್ಲಿ ತಾಪ್ಸಿ ಪನ್ನುಗೆ ಸೆಲ್ಫಿ ಕೇಳಿದರು. ಆದರೆ, ನಗುಮುಖದಿಂದಲೇ ತಾಪ್ಸಿ ಪನ್ನು ಸೆಲ್ಫಿಗೆ ನಿರಾಕರಿಸಿದರು. ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಅನನ್ಯ ದ್ವಿವೇದಿ ಆ ನಂತರ ತಾಪ್ಸಿ ವಿರುದ್ಧ ಹರಿಹಾಯ್ದಿದ್ದಾರೆ. ತಾಪ್ಸಿ ಪನ್ನುಗೆ ಉತ್ತಮ ಪಿಆರ್ ತರಬೇತಿಯ ಅಗತ್ಯವಿದೆ ಎಂದು ಕಮೆಂಟ್ ಮಾಡಿದ್ದಾರೆ.

VISTARANEWS.COM


on

Taapsee Pannu Denying Selfie, Netizens Defend Actress
Koo

ಬೆಂಗಳೂರು: ತಾಪ್ಸಿ ಪನ್ನು (Taapsee Pannu) ಟಾಲಿವುಡ್‌ನಲ್ಲಿ ಮಿಂಚಿ ಇದೀಗ ಬಾಲಿವುಡ್‌ನಲ್ಲಿ ಮಿಂಚಲು ರೆಡಿಯಾಗುತ್ತಿದ್ದಾರೆ. ಜತೆಗೆ ಆಗಾಗ ವಿವಾದಕ್ಕೂ ಗುರಿಯಾಗುತ್ತ ಇರುತ್ತಾರೆ. ಇದೀಗ ನಟಿ ʻಖೇಲ್ ಖೇಲ್ ಮೇʼ ಸಿನಿಮಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಚಿತ್ರದ ಪ್ರಚಾರದ ವೇಳೆ ವೇದಿಕೆಯಲ್ಲಿ ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಅನನ್ಯ ದ್ವಿವೇದಿ ಭಾಗಿಯಾಗಿದ್ದರು. ಬಳಿಕ ವೇದಿಕೆಯಲ್ಲಿ ತಾಪ್ಸಿ ಪನ್ನುಗೆ ಸೆಲ್ಫಿ ಕೇಳಿದರು. ಆದರೆ, ನಗುಮುಖದಿಂದಲೇ ತಾಪ್ಸಿ ಪನ್ನು ಸೆಲ್ಫಿಗೆ ನಿರಾಕರಿಸಿದರು. ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಅನನ್ಯ ದ್ವಿವೇದಿ ಆ ನಂತರ ತಾಪ್ಸಿ ವಿರುದ್ಧ ಹರಿಹಾಯ್ದಿದ್ದಾರೆ. ತಾಪ್ಸಿ ಪನ್ನುಗೆ ಉತ್ತಮ ಪಿಆರ್ ತರಬೇತಿಯ ಅಗತ್ಯವಿದೆ ಎಂದು ಕಮೆಂಟ್ ಮಾಡಿದ್ದಾರೆ.

ಅನನ್ಯಾ ವೈರಲ್ ವೀಡಿಯೊದಲ್ಲಿ ಈ ಬಗ್ಗೆ ಕಮೆಂಟ್‌ ಮಾಡಿದ್ದು ಹೀಗೆ. ʻʻಹಲವಾರು ಕ್ಯಾಮೆರಾಗಳಿಗೆ ಪೋಸ್‌ ನೀಡುತ್ತಿರುವಾಗ,ಸೆಲ್ಫಿಯನ್ನು ಏಕೆ ನಿರಾಕರಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನಂತಹ ಪ್ರಭಾವಿಗಳನ್ನು ಕರೆದ ಕಾರಣವೆಂದರೆ ಅವರ ಹಾಡನ್ನು ಪ್ರಚಾರ ಮಾಡಲು! ಆಕೆಗೆ ನಿಜವಾಗಿಯೂ ಉತ್ತಮ PR ತರಬೇತಿಯ ಅಗತ್ಯವಿದೆʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

Tapsee strikes again! Swipe for more
byu/Away-Enthusiasm8771 inBollyBlindsNGossip

ವೀಡಿಯೊ ರೆಡ್ಡಿಟ್‌ನಲ್ಲಿಯೂ ಕಾಣಿಸಿಕೊಂಡಿದೆ ಮತ್ತು ನೆಟಿಜನ್‌ಗಳು ಈ ಬಗ್ಗೆ ಕಮೆಂಟ್‌ ಮಾಡಿದ್ದಾರೆ. ʻʻನಟಿಯದ್ದು ಯಾವುದೇ ತಪ್ಪು ಇಲ್ಲ. ಸೆಲ್ಫಿ ಕೊಡುವ ಅಗತ್ಯ ಇಲ್ಲʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. “ಬಾಲಿವುಡ್‌ನ ಅಭಿಮಾನಿ ಅಥವಾ ಫಾಲೋವರ್‌ ನಾನು ಅಲ್ಲ. ಆದರೆ ನಾನು ಎರಡೂ ದೃಷ್ಟಿಕೋನಗಳಿಂದ ವಿಷಯಗಳನ್ನು ನೋಡಲು ಪ್ರಯತ್ನಿಸುತ್ತೇನೆ. ಬಹುಶಃ ಆಕೆಯ ಮೇಕ್ಅಪ್ ಅಥವಾ ಕೂದಲಿಗೆ ಟಚ್‌ಅಪ್ ಅಗತ್ಯವಿದೆ ಎಂದು ಅವರು ಭಾವಿಸಿರಬಹುದುʼʼಎಂದು ಕಮೆಂಟ್‌ ಮಾಡಿದ್ದಾರೆ.

ʻʻನಟಿ ಎಂಬ ಕಾರಣಕ್ಕೆ ಪ್ರತಿ ಸೆಲ್ಫಿಗೂ ಹೌದು ಎಂದು ಹೇಳಬೇಕಿಲ್ಲ. ಬಹುಶಃ ಅವರು ಸೆಲ್ಫಿಗಳನ್ನು ಇಷ್ಟಪಡುವುದಿಲ್ಲ, ವೃತ್ತಿಪರ ಕ್ಯಾಮೆರಾಗಳು ಇವೆʼʼ ಎಂದು ನಟಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಅಕ್ಷಯ್ ಕುಮಾರ್, ತಾಪ್ಸಿ ಪನ್ನು ಮತ್ತು ಫರ್ದೀನ್ ಖಾನ್ ಅಭಿನಯದ ʻಖೇಲ್ ಖೇಲ್ ಮೇʼ ಚಿತ್ರದ ಹೊಸ ಮೋಷನ್ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ. ಚಿತ್ರದಲ್ಲಿ ವಾಣಿ ಕಪೂರ್, ಆಮಿ ವಿರ್ಕ್, ಆದಿತ್ಯ ಸೀಲ್ ಮತ್ತು ಪ್ರಜ್ಞಾ ಜೈಸ್ವಾಲ್ ಕೂಡ ನಟಿಸಿದ್ದಾರೆ. ಈ ವರ್ಷ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ”ಫಿರ್ ಆಯಿ ಹಸೀನ್ ದಿಲ್‌ ರುಬಾ” ಚಿತ್ರದಲ್ಲಿ ಕೂಡ ತಾಪ್ಸಿ ಕಾಣಿಸಿಕೊಂಡಿದ್ದಾರೆ. ಆಗಸ್ಟ್ 09ರಂದು ಈ ಚಿತ್ರ ನೆಟ್‌ಪ್ಲಿಕ್ಸ್‌ನಲ್ಲಿ ಪ್ರಸಾರವಾಗಲಿದೆ.

Continue Reading

ಬಿಗ್ ಬಾಸ್

Bigg Boss OTT 3: ಅನಿಲ್​ ಕಪೂರ್ ʻವರ್ಸ್ಟ್‌ ನಿರೂಪಕʼ ಎಂದ ನೆಟ್ಟಿಗರು ; ಬೇಸತ್ತ ವೀಕ್ಷಕರು!

Bigg Boss OTT 3: ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕುತ್ತಿದ್ದಾರೆ. ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ,ಮತ್ತೆ ಹೋಸ್ಟ್ ಆಗಿ ತೆಗೆದುಕೊಳ್ಳಬೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Bigg Boss OTT 3 Anil Kapoor as the worst ever host of Bigg Boss
Koo

ಬೆಂಗಳೂರು: ಈ ವರ್ಷ, ನಟ ಅನಿಲ್ ಕಪೂರ್ ಅವರು ಸಲ್ಮಾನ್ ಖಾನ್ ಬದಲಿಗೆ ಬಿಗ್ ಬಾಸ್ ಹಿಂದಿ OTT ಯ (Bigg Boss OTT 3) ಮೂರನೇ ಸೀಸನ್‌ನ ನಿರೂಪಕರಾಗಿದ್ದಾರೆ. ಮೊದಲಿಗೆ ಅನಿಲ್‌ ಕಪೂರ್‌ ಎಂದು ಅನೌನ್ಸ್‌ ಆದಾಗ ಪ್ರೇಕ್ಷಕರಲ್ಲಿ ನಿರೀಕ್ಷೆ ಇದ್ದಿತ್ತು. ಆದರೀಗ ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕುತ್ತಿದ್ದಾರೆ. ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ,ಮತ್ತೆ ಹೋಸ್ಟ್ ಆಗಿ ತೆಗೆದುಕೊಳ್ಳಬೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಇದೀಗ ನೆಟ್ಟಿಗರು ʻʻಬಿಗ್ ಬಾಸ್‌ನ ಅತ್ಯಂತ ಕೆಟ್ಟ ಹೋಸ್ಟ್ʼʼಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಹೀಗೆ ಬರೆದುಕೊಂಡಿದ್ದಾರೆ. ʻʻಅನಿಲ್‌ ಕಪೂರ್‌ ಅವರದ್ದು ಫೇಕ್‌ ನಗು, ಫೇಕ್‌ ಕೋಪ,ಒಟ್ಟಾರೆ ಫೇಕ್‌ ವ್ಯಕ್ತಿತ್ವ ಹೊಂದಿರುವವರುʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻನಾನು ಬಿಗ್ ಬಾಸ್ ಅನ್ನು ಹಲವು ವರ್ಷಗಳಿಂದ ನೋಡಿಕೊಂಡು ಬರುತ್ತಿದ್ದೆ. ಇದೇ ಮೊದಲ ಬಾರಿ ವೀಕೆಂಡ್‌ನಲ್ಲಿ ಕಾರ್ಯಕ್ರಮ ನೋಡುತ್ತ ಮಧ್ಯಕ್ಕೆ ಎದ್ದು ಹೋದೆ. ಈ ಸೀಸನ್ ಹೋಸ್ಟ್ ಮತ್ತು ಸ್ಪರ್ಧಿಗಳು ಸರಿಯಿಲ್ಲ. ದೇವರಿಗೆ ಧನ್ಯವಾದ. ಅಂತೂ ಮುಂದಿನ ವಾರ ಸೀಸನ್‌ ಕೊನೆಗೊಳ್ಳುತ್ತದೆʼʼಎಂದು ಕಮೆಂಟ್‌ ಮಾಡಿದ್ದಾರೆ. “ಅನಿಲ್ ಕಪೂರ್ ಒಬ್ಬ ಒಳ್ಳೆಯ ನಟ. ಅವರು ಹೋಸ್ಟ್ ಆದರೆ ವಿಚಿತ್ರವಾಗಿ ಕಾಣುತ್ತಾರೆʼʼಎಂದು ಬರೆದುಕೊಂಡಿದ್ದಾರೆ

ಕನ್ನಡದಲ್ಲಿ ನಟ ಸುದೀಪ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಕೂಡ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅನಿಲ್​ ಕಪೂರ್​ ಅವರು ಅತಿ ಕಳಪೆ ನಿರೂಪಕ ಎಂಬ ಟೀಕೆಗೆ ಒಳಗಾಗಿದ್ದಾರೆ. ಈಗ ಹಿಂದಿ ‘ಬಿಗ್​ ಬಾಸ್​ ಒಟಿಟಿ 3’ ಕೊನೇ ಹಂತ ತಲುಪಿದೆ. ಶೀಘ್ರದಲ್ಲೇ ಇದರ ಫಿನಾಲೆ ನಡೆಯಲಿದೆ. ಇಷ್ಟು ದಿನಗಳ ಕಾಲ ಅನಿಲ್​ ಕಪೂರ್​ ಅವರ ನಿರೂಪಣೆಯನ್ನು ನೋಡಿದ ವೀಕ್ಷಕರು ಬೇಸತ್ತಿದ್ದಾರೆ. ಇನ್ನೆಂದೂ ಅನಿಲ್​ ಕಪೂರ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡುವುದು ಬೇಡ ಎಂದು ಜನರು ತಾಕೀತು ಮಾಡುತ್ತಿದ್ದಾರೆ.

ಇದನ್ನೂ ಓದಿ: Bigg Boss OTT 3: ‘ಅತ್ತಿಗೆ, ನೋಡಲು ಬ್ಯೂಟಿಫುಲ್‌’ ಅಂದಿದ್ದೇ ತಡ ಕೆನ್ನೆಗೆ ಬಾರಿಸಿಯೇ ಬಿಟ್ಟ ಇಬ್ಬರು ಹೆಂಡತಿಯರ ಮುದ್ದಿನ ಗಂಡ!

ಈ ಶೋನಲ್ಲಿ ರಣವೀರ್ ಶೋರೆ, ಲವಕೇಶ್ ಕಟಾರಿಯಾ, ಸನಾ ಸುಲ್ತಾನ್, ಸನಾ ಮಕ್ಬುಲ್, ಸಾಯಿ ಕೇತನ್ ರಾವ್, ಶಿವನಿ ಕುಮಾರಿ, ವಿಶಾಲ್ ಪಾಂಡೆ, ನೇಜಿ, ಅರ್ಮಾನ್ ಮಲಿಕ್ ಮತ್ತು ಕೃತಿಕಾ ಮಲಿಕ್ ಬಿಗ್‌ ಬಾಸ್‌ ಸ್ಪರ್ಧಿಗಳು.

Continue Reading
Advertisement
Mysuru News
ಕ್ರೈಂ18 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್22 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ25 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ27 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ28 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು43 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ50 mins ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ56 mins ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Golden Star Ganesh krishnam pranaya sakhi in famous social media
ಸ್ಯಾಂಡಲ್ ವುಡ್1 hour ago

Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

Kangana Ranaut
ದೇಶ1 hour ago

Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌