Bob Blackman: ಪ್ರಧಾನಿ ಮೋದಿ ಬಗೆಗಿನ ಬಿಬಿಸಿ ಸಾಕ್ಷ್ಯಚಿತ್ರವನ್ನು ಖಂಡಿಸಿದ ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್‌ಮನ್ - Vistara News

ದೇಶ

Bob Blackman: ಪ್ರಧಾನಿ ಮೋದಿ ಬಗೆಗಿನ ಬಿಬಿಸಿ ಸಾಕ್ಷ್ಯಚಿತ್ರವನ್ನು ಖಂಡಿಸಿದ ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್‌ಮನ್

ಬಿಬಿಸಿಯು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಿರ್ಮಿಸಿರುವ ಸಾಕ್ಷ್ಯಚಿತ್ರ ವಿಚಾರದಲ್ಲಿ ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್ಮನ್ (Bob Blackman) ಅವರು ಬಿಬಿಸಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬ್ರಿಟಿಷ್ ಮೂಲದ ಮಾಧ್ಯಮ ಸಂಸ್ಥೆಯಾಗಿರುವ ಬಿಬಿಸಿ(BBC) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ವಿರುದ್ಧ ತಯಾರಿಸಿರುವ ಸಾಕ್ಷ್ಯಚಿತ್ರದ ಕುರಿತಾಗಿ ಬ್ರಿಟಿಷ್ ಸಂಸತ್ತಿನ ಸಂಸದರಾದ ಬಾಬ್ ಬ್ಲ್ಯಾಕ್‌ಮನ್ (Bob Blackman) ಅವರು ಅಸಮಾಧಾನ ಹೊರಹಾಕಿದ್ದಾರೆ. ಇದು ಬಿಬಿಸಿ ಪ್ರಚಾರಕ್ಕೆಂದು ಮಾಡಿಕೊಂಡಿರುವ ವಿಡಿಯೊ ಎಂದು ಅವರು ದೂರಿದ್ದಾರೆ.

ಭಾರತದ ಮಾಧ್ಯಮ ಸಂಸ್ಥೆಯಾದ ಎಎನ್ಐ ಜತೆ ಸಂದರ್ಶನದಲ್ಲಿ ಮಾತನಾಡಿರುವ ಬಾಬ್ ಅವರು, “ಇದು ನಿಜಕ್ಕೂ ನಾಚಿಕೆಗೇಡಿನ ಪತ್ರಿಕೋದ್ಯಮದ ಅವಮಾನಕರ ತುಣುಕು. ಬಿಬಿಸಿ ಇಂತಹ ವಿಡಿಯೊವನ್ನು ಎಂದಿಗೂ ಪ್ರಸಾರ ಮಾಡಬಾರದು. 2002ರ ಗಲಭೆಯಲ್ಲಿ ಮೋದಿ ಅವರಿಗೆ ಸಂಬಂಧವಿದೆ ಎನ್ನುವುದಕ್ಕೆ ಯಾವುದೇ ಸಾಕ್ಷಿಯಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಈ ವಿಡಿಯೊದಲ್ಲಿ ಅಂತಹ ಪ್ರಮುಖ ಅಂಶಗಳನ್ನೇ ತೋರಿಸಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: IT Survey at BBC Offices: 58 ಗಂಟೆ ಬಳಿಕ ಬಿಬಿಸಿ ಕಚೇರಿಗಳಲ್ಲಿ ‘ಸಮೀಕ್ಷೆ’ ನಿಲ್ಲಿಸಿದ ಐಟಿ, ಸಿಕ್ಕ ದಾಖಲೆ ಏನು?

ಹಾಗೆಯೇ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆದಿರುವ ಬಗ್ಗೆಯೂ ಮಾತನಾಡಿರುವ ಬಾಬ್, “ಇದು ಇಂದು, ನಿನ್ನೆಯ ಸಮಸ್ಯೆಯಲ್ಲ. ಭಾರತದಲ್ಲಿನ ಆದಾಯ ತೆರಿಗೆ ಅಧಿಕಾರಿಗಳು ಮತ್ತು ಬಿಬಿಸಿ ನಡುವೆ ಚರ್ಚೆಗಳು ಹಲವು ಕಾಲದಿಂದ ನಡೆಯುತ್ತಿದೆ. ಪ್ರಸಾರಕರು ಸಂಬಂಧಿತ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು” ಎಂದು ನುಡಿದಿದ್ದಾರೆ.

ಬ್ರಿಟಿಷ್ ಸರ್ಕಾರವು ಭಾರತವನ್ನು ಬಲವಾದ ಸ್ನೇಹಿತ ಎಂದು ಪರಿಗಣಿಸುತ್ತದೆ. ಉಭಯ ದೇಶಗಳು ವ್ಯಾಪಾರ ಒಪ್ಪಂದಗಳ ಮಾತುಕತೆ ನಡೆಸುತ್ತಿವೆ. ನಾವು ಒಂದು ವರ್ಷದ ಹಿಂದೆ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ, ಈಗ ಭದ್ರತೆ, ರಕ್ಷಣೆ ಮತ್ತು ಇತರ ವಿಷಯಗಳ ಬಗ್ಗೆ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ. ಈ ಪ್ರಕ್ರಿಯೆಯನ್ನು ಅಡ್ಡಿಪಡಿಸುವ ಯಾವುದೇ ವಿಚಾರವಾದರೂ ಅದು ಅತ್ಯಂತ ವಿಷಾದನೀಯ. ಬಿಬಿಸಿ ಸಾಕ್ಷ್ಯಚಿತ್ರವು ಕೂಡ ಅತ್ಯಂತ ವಿಷಾದನೀಯ. ಇದು ಇಂಗ್ಲೆಂಡ್-ಭಾರತದ ಸಂಬಂಧವನ್ನು ಅಡ್ಡಿಪಡಿಸಲೆಂದೇ ಮಾಡಿದಂತೆ ಕಾಣುತ್ತದೆ. ಇದು ದೊಡ್ಡ ಅವಮಾನ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ ಸಂಸದ ಬಾಬ್.

ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾಗಿಯೂ ಮಾತನಾಡಿರುವ ಅವರು, “ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರವು ದೇಶದ ಆರ್ಥಿಕತೆಯನ್ನು ಪರಿವರ್ತಿಸುವಲ್ಲಿ ಗಮನಾರ್ಹ ಕೆಲಸ ಮಾಡಿದೆ. ಈಗ ಭಾರತ ವಿಶ್ವದ ಪ್ರಮುಖ ಆರ್ಥಿಕತೆಯ ಹಾದಿಯಲ್ಲಿದೆ. ಹಾಗಿರುವಾಗ ಈ ರೀತಿಯ ಸುಳ್ಳು ತುಂಬಿರುವ ಸಾಕ್ಷ್ಯಚಿತ್ರ ಮಾಡಿರುವುದು ದೊಡ್ಡ ತಪ್ಪು” ಎಂದಿದ್ದಾರೆ.

ಇದನ್ನೂ ಓದಿ: IT Raid : ಅವರು ಸತ್ಯ ಹೇಳಿದ ಬಿಬಿಸಿಯವರನ್ನೇ ಬಿಟ್ಟಿಲ್ಲ, ನಮ್ಮನ್ನು ಬಿಡ್ತಾರಾ?; ಪ್ರಭಾಕರ ರೆಡ್ಡಿ ಐಟಿ ದಾಳಿಗೆ ಎಚ್‌ಡಿಕೆ ಪ್ರತಿಕ್ರಿಯೆ

“ಇಂತಹದ್ದೊಂದು ಸಾಕ್ಷ್ಯಚಿತ್ರವನ್ನು ಬಿಬಿಸಿ ಎಂದಿಗೂ ಪ್ರಸಾರ ಮಾಡಬಾರದು. ಏಕೆಂದರೆ ಬಿಬಿಸಿ ವಿಶ್ವಾದ್ಯಂತ ಖ್ಯಾತಿಯನ್ನು ಹೊಂದಿದೆ. ಒಂದು ವೇಳೆ ಈ ವಾಹಿನಿಯೇ ಇದನ್ನು ಬಿತ್ತರಿಸಿದರೆ ಜನರು ಅದನ್ನು ನಿಜ ಎಂದು ಭಾವಿಸಿಬಿಡುತ್ತಾರೆ. ಇದು ಸತ್ಯಕ್ಕೆ ದೂರವಾಗಿದೆ” ಎಂದೂ ಸಂಸದರು ಹೇಳಿದ್ದಾರೆ. ಬ್ಲ್ಯಾಕ್‌ಮ್ಯಾನ್ ಅವರು ಆಡಳಿತಾರೂಢ ಕನ್ಸರ್ವೇಟಿವ್‌ನ ಸದಸ್ಯ ಮತ್ತು ಹ್ಯಾರೋ ಈಸ್ಟ್‌ನ ಸಂಸದರಾಗಿದ್ದಾರೆ.

“ನಾನು ಸ್ಪಷ್ಟವಾಗಿ ಹೇಳುತ್ತೇನೆ. ಬಿಬಿಸಿ ಬ್ರಿಟಿಷ್ ಸರ್ಕಾರದ ಅಂಗವಲ್ಲ. ವಾಸ್ತವವಾಗಿ, ಬಿಬಿಸಿ ಆಗಾಗ್ಗೆ ಬ್ರಿಟಿಷ್ ಸರ್ಕಾರವನ್ನೂ ಟೀಕಿಸುತ್ತದೆ. ಮಾಧ್ಯಮಗಳು ಪ್ರಶ್ನೆಗಳನ್ನು ಕೇಳಬಹುದು. ಆದರೆ ಅದಕ್ಕೆ ವಿರುದ್ಧವಾದ ಪುರಾವೆಗಳು ಇದ್ದಾಗ ಮತ್ತು ಅದು ಸ್ಪಷ್ಟವಾಗಿಲ್ಲದಿದ್ದಾಗ, ಸುಳ್ಳು ಸುದ್ದಿಗಳನ್ನು ಬಿತ್ತರಿಸಬಾರದು” ಎಂದು ಬಾಬ್ ಬ್ಲ್ಯಾಕ್‌ಮನ್ ಸಂದರ್ಶನದಲ್ಲಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಡೆದಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಸಲಾಗುವ ಈ ಪ್ರವೇಶ ಪರೀಕ್ಷೆ ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಹೆದ್ದಾರಿಯಾಗಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) ನಡೆಸಿರುವ 2024ರ ವರ್ಷದ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಗೊಳ್ಳಲಿದೆ . COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್​​ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

  • ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.
  • ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.
  • ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.
  • ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

Continue Reading

ದೇಶ

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

PM Modi: ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ಇದರಿಂದ ಯಾರಿಗೆ ಅನುಕೂಲವಾಯಿತು ಎಂಬುದು ಅವರಿಗೆ ಮೂರು ಹಂತದ ಮತದಾನ ಮುಗಿದ ಬಳಿಕ ಬೇರೆಯವರು ಹೇಳಿದರು ಎಂಬುದಾಗಿ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹುತೇಕ ಸಂದರ್ಭದಲ್ಲಿ ಗಂಭೀರವಾಗಿರುತ್ತಾರೆ. ಚುನಾವಣೆ ಭಾಷಣಗಳು, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವಾಗಂತಲೂ ತೀಕ್ಷ್ಣವಾಗಿ ಮಾತನಾಡುತ್ತಾರೆ. ಟೀಕೆ, ಆರೋಪ, ಆಕ್ರೋಶ ಹೊರಹಾಕುತ್ತಾರೆ. ಹಾಗೆಯೇ, ಪ್ರತಿಪಕ್ಷಗಳನ್ನು ಅವರು ವ್ಯಂಗ್ಯ ಮಾಡುತ್ತಾರೆ. ಹಾಸ್ಯ ಚಟಾಕಿ ಮೂಲಕವೂ ಟಾಂಗ್‌ ಕೊಡುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ 400 ಸೀಟು ಗೆಲ್ಲುತ್ತದೆ ಎಂಬುದನ್ನು ಪದೇಪದೆ ಹೇಳಿ ಪ್ರತಿಪಕ್ಷಗಳು ಕೂಡ ತಮ್ಮ ಪರವಾಗಿ ಪ್ರಚಾರಕ್ಕೆ ಹೇಗೆ ಬಳಸಿಕೊಂಡರು ಎಂಬುದನ್ನು ಖುದ್ದು ನರೇಂದ್ರ ಮೋದಿ ಅವರೇ ಹೇಳಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ಗೆ ಸಂದರ್ಶನ ನೀಡುವ ವೇಳೆ ಚಾರ್‌ ಸೌ ಪಾರ್‌ ಅಭಿಯಾನದ ಕುರಿತು ತಮಾಷೆಯಾಗಿ ಮಾತನಾಡಿದ್ದಾರೆ. “ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ನಾನು ಅವರನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂಬುದು ಪ್ರತಿಪಕ್ಷಗಳ ನಾಯಕರಿಗೆ ಗೊತ್ತೇ ಆಗಲಿಲ್ಲ. 3 ಹಂತಗಳ ಮತದಾನ ಮುಗಿದ ಬಳಿಕ, ನೀವೇಕೆ 400 ಸೀಟು ಗೆಲ್ಲುತ್ತಾರೋ, ಇಲ್ಲವೋ ಎಂಬುದರ ಕುರಿತು ಚುನಾವಣೆ ಪ್ರಚಾರ ಮಾಡುತ್ತಿದ್ದೀರಿ ಎಂಬುದಾಗಿ ಬೇರೆ ಯಾರೋ ಪಕ್ಷಗಳಿಗೆ ಹೇಳಿದರು” ಎಂದು ನಗುತ್ತಲೇ ಪ್ರತಿಪಕ್ಷಗಳನ್ನು ಯಾಮಾರಿಸಿದ ರೀತಿಯನ್ನು ಮೋದಿ ವಿವರಿಸಿದರು.

ಪಾಕ್‌ನಲ್ಲಿ ಉಗ್ರರ ಹತ್ಯೆ ಹಿಂದೆ ಇರೋದು ಯಾರು?

ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬುದಾಗಿ ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ಪಾಕಿಸ್ತಾನದವರು ಇದರ ಕುರಿತು ಚಿಂತೆ ಮಾಡುತ್ತಾರೆ. ಆದರೆ, ಪಾಕಿಸ್ತಾನದಲ್ಲಿ ಉಗ್ರರು ಹತ್ಯೆಗೀಡಾದರೆ, ಭಾರತದಲ್ಲಿರುವ ಕೆಲವರ ಕಣ್ಣಿನಲ್ಲಿ ನೀರು ಏಕೆ ಬರುತ್ತದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ” ಎಂದಷ್ಟೇ ಹೇಳಿದರು. ಸಂದರ್ಶನದ ವೇಳೆ ರಾಹುಲ್‌ ಗಾಂಧಿ, ಪ್ರತಿಪಕ್ಷಗಳು, ಅಭಿವೃದ್ಧಿ, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ ಸೇರಿ ಹಲವು ವಿಷಯಗಳ ಕುರಿತು ಮೋದಿ ಮಾತನಾಡಿದರು.

ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿರು. “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟರು.

ಇದನ್ನೂ ಓದಿ: Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Continue Reading

ದೇಶ

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

Naxals: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಇದಾದ ಕೆಲ ಹೊತ್ತಿನಲ್ಲಿ ನಕ್ಸಲರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಈ ವೇಳೆ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ಏಳು ಮಾವೋವಾದಿಗಳನ್ನು ಹತ್ಯೆ ಮಾಡಿದ್ದಾರೆ. ಇದರೊಂದಿಗೆ 2024ರಲ್ಲಿ ಭದ್ರತಾ ಸಿಬ್ಬಂದಿಯ ಸ್ಕೋರ್‌ 107 ಆಗಿದೆ.

VISTARANEWS.COM


on

Naxals
Koo

ರಾಯ್‌ಪುರ: ದೇಶದಲ್ಲಿ ಮಾವೋವಾದಿಗಳನ್ನು (Naxalites) ನಿಗ್ರಹಿಸಲು ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು (Security Forces) ಪ್ರಸಕ್ತ ವರ್ಷದಲ್ಲಿ ಸಾಲು ಸಾಲಾಗಿ ಎನ್‌ಕೌಂಟರ್‌ ಮಾಡುತ್ತಿದ್ದಾರೆ. ಛತ್ತೀಸ್‌ಗಢ, ತೆಲಂಗಾಣ, ಮಹಾರಾಷ್ಟ್ರ ಸೇರಿ ಹಲವೆಡೆ ಕಾರ್ಯಾಚರಣೆ ಮೂಲಕ ಹತ್ಯೆಗೈಯುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದಲ್ಲಿ (Chhattisgarh) 7 ಉಗ್ರರನ್ನು ಭದ್ರತಾ ಸಿಬ್ಬಂದಿಯು (Security Forces) ಗುರುವಾರ (ಮೇ 23) ಎನ್‌ಕೌಂಟರ್‌ ಮಾಡಿದ್ದಾರೆ. ಇದರೊಂದಿಗೆ ಭಧ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿಯೇ 107 ಮಾವೋವಾದಿಗಳನ್ನು ಹತ್ಯೆ ಮಾಡಿದಂತಾಗಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ. ಬೆಳಗ್ಗೆ 11 ಗಂಟೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಇದಾದ ಕೆಲ ಹೊತ್ತಿನಲ್ಲಿ ನಕ್ಸಲರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಬಿಜಾಪುರ ಹಾಗೂ ನಾರಾಯಣಪುರ ಗಡಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮುನ್ನಡೆ ಸಾಧಿಸಿದ ಭದ್ರತಾ ಸಿಬ್ಬಂದಿಯು ಏಳು ಉಗ್ರರನ್ನು ಹತ್ಯೆಗೈದಿದ್ದಾರೆ. ಇನ್ನೂ ಕಾರ್ಯಾಚರಣೆ ಮುಂದುವರಿದಿದೆ” ಎಂದು ನಾರಾಯಣಪುರ ಎಸ್‌ಪಿ ಪ್ರಭಾತ್‌ ಕುಮಾರ್‌ ತಿಳಿಸಿದ್ದಾರೆ.

5 ತಿಂಗಳಲ್ಲಿ 107 ನಕ್ಸಲರ ಖತಂ

ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿಯು ನಕ್ಸಲರ ವಿರುದ್ಧ ಭಾರಿ ಸಮರ ಸಾರಿದ್ದಾರೆ. ಶುಕ್ರವಾರ ಹತ್ಯೆಗೈದ 12 ನಕ್ಸಲರು ಸೇರಿ ಪ್ರಸಕ್ತ ವರ್ಷದ ಐದು ತಿಂಗಳಲ್ಲಿ 107 ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದಾರೆ. 2023ರಲ್ಲಿ ಭದ್ರತಾ ಸಿಬ್ಬಂದಿಯು 22 ಮಾವೋವಾದಿಗಳನ್ನು ಎನ್‌ಕೌಂಟರ್‌ ಮಾಡಿದ್ದರು. ಲೋಕಸಭೆ ಚುನಾವಣೆಗೆ ವೇಳೆಯೇ ತೆಲಂಗಾಣ ಗಡಿ ಹಾಗೂ ಛತ್ತೀಸ್‌ಗಢದ ಸುಕ್ಮಾ, ಬಿಜಾಪುರ ಸೇರಿ ಹಲವೆಡೆ ಮಾವೋವಾದಿಗಳ ಉಪಟಳ ಜಾಸ್ತಿ ಇರುತ್ತದೆ. ಹಾಗಾಗಿ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮೇ ‌13ರಂದು ಮಹಾರಾಷ್ಟ್ರದಲ್ಲಿ ಮೂವರು ಮಾವೋವಾದಿಗಳನ್ನು ಭದ್ರತಾ ಸಿಬ್ಬಂದಿಯು ಹತ್ಯೆ ಮಾಡಿದ್ದರು. ಗಡ್ಚಿರೋಲಿ ಜಿಲ್ಲೆಯ ಕಟ್ರಂಗಟ್ಟ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿಗಳು ಅಡಗಿರುವ ಕುರಿತು ಗುಪ್ತಚರ ಮೂಲಗಳಿಂದ ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದರು. ಭಾರಿ ಪ್ರಮಾಣದ ದಾಳಿ, ಅಕ್ರಮ ಚಟುವಟಿಕೆಗೆ ಯೋಜನೆ ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಲೇ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದರು.

ಇದನ್ನೂ ಓದಿ: Naxals in Karnataka : ಕುಕ್ಕೆ ಸುಬ್ರಹ್ಮಣ್ಯ ಸಮೀಪ ಮತ್ತೆ ಕಾಣಿಸಿಕೊಂಡ ನಕ್ಸಲರು

Continue Reading

ತಂತ್ರಜ್ಞಾನ

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

WhatsApp AI: ವಾಟ್ಸ್‌ಆ್ಯಪ್‌ ಫೀಚರ್‌ಗಳ ಕುರಿತು ವಿಶ್ವಾಸಾರ್ಹ ಮಾಹಿತಿ ನೀಡುವ ಡಬ್ಲ್ಯೂಎ ಬೀಟಾ ಇನ್ಫೋ ಈ ಕುರಿತು ಮಾಹಿತಿ ನೀಡಿದೆ. ವಾಟ್ಸ್‌ಆ್ಯಪ್‌ ಬಳಕೆದಾರರು ಆ್ಯಪ್‌ನಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನದ ಮೂಲಕ ತಮ್ಮ ಪ್ರೊಫೈಲ್‌ ಫೋಟೊ ಸೆಟ್‌ ಮಾಡಬಹುದಾಗಿದೆ. ಹೊಸ ಫೀಚರ್‌ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

VISTARANEWS.COM


on

WhatsApp AI
Koo

ನವದೆಹಲಿ: ಮೆಟಾ ಒಡೆತನದ ವಾಟ್ಸ್‌ಆ್ಯಪ್‌ (WhatsApp) ನಿಯಮಿತವಾಗಿ ಹೊಸ ಹೊಸ ಫೀಚರ್‌ಗಳನ್ನು ಪರಿಚಯಿಸುವ ಮೂಲಕ ಗ್ರಾಹಕರಿಗೆ ನೂತನ ಅನುಭವ, ಸೌಕರ್ಯಗಳನ್ನು ನೀಡುತ್ತದೆ. ಈಗ ವಾಟ್ಸ್‌ಆ್ಯಪ್‌ ಮತ್ತೊಂದು ಫೀಚರ್‌ ಬಿಡುಗಡೆ ಮಾಡಲಿದ್ದು, ಗ್ರಾಹಕರ ಡಿಪಿ ಅಥವಾ ಪ್ರೊಫೈಲ್‌ ಫೋಟೊಗಳು (Profile Photo) ಇನ್ನು ಎಐ ಜನರೇಟೆಡ್‌ (ಕೃತಕ ಬುದ್ಧಿಮತ್ತೆ) (WhatsApp AI) ಆಗಲಿವೆ. ಇತ್ತೀಚೆಗಷ್ಟೇ ಎಐ ಸ್ಟಿಕ್ಕರ್‌ಗಳನ್ನು (ಎಮೋಜಿ) ಪರಿಚಯಿಸಿದ್ದ ವಾಟ್ಸ್‌ಆ್ಯಪ್‌ ಈಗ ಮತ್ತೊಂದು ಫೀಚರ್‌ ಮುಂದಿಡುತ್ತಿದೆ.

ವಾಟ್ಸ್‌ಆ್ಯಪ್‌ ಫೀಚರ್‌ಗಳ ಕುರಿತು ವಿಶ್ವಾಸಾರ್ಹ ಮಾಹಿತಿ ನೀಡುವ ಡಬ್ಲ್ಯೂಎ ಬೀಟಾ ಇನ್ಫೋ ಈ ಕುರಿತು ಮಾಹಿತಿ ನೀಡಿದೆ. ವಾಟ್ಸ್‌ಆ್ಯಪ್‌ ಬಳಕೆದಾರರು ಆ್ಯಪ್‌ನಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನದ ಮೂಲಕ ತಮ್ಮ ಪ್ರೊಫೈಲ್‌ ಫೋಟೊ ಸೆಟ್‌ ಮಾಡಬಹುದಾಗಿದೆ. ಐಎ ಆಧಾರಿತ, ಬಳಕೆದಾರರ ವ್ಯಕ್ತಿತ್ವ, ಆಸಕ್ತಿ ಅಥವಾ ಮನಸ್ಸಿನ ಸ್ಥಿತಿ (Mood) ಆಧಾರದ ಮೇಲೆ ಹೊಸ ಪ್ರೊಫೈಲ್‌ ಫೋಟೊ ಕ್ರಿಯೇಟ್‌ ಮಾಡಬಹುದಾಗಿದೆ ಎಂದು ಡಬ್ಲ್ಯೂಎ ಬೀಟಾ ಇನ್ಫೋ ಮಾಹಿತಿ ನೀಡಿದೆ.

employee attacked the boss and broke the iPhone for removing him from the WhatsApp group

ವಾಟ್ಸ್‌ಆ್ಯಪ್‌ ಈಗ ಬೀಟಾ ವರ್ಷನ್‌ನಲ್ಲಿ (ನಿಯಮಿತ ಬಳಕೆದಾರರಿಗೆ ಅಪ್‌ಡೇಟೆಡ್‌ ವರ್ಷನ್‌ ಆ್ಯಪ್‌ ಬಳಸಲು ಕೊಟ್ಟು, ಅವರ ಅಭಿಪ್ರಾಯ ಸಂಗ್ರಹಿಸುವುದು) ಅಪ್‌ಡೇಟ್‌ ಆಗಿರುವ ಅಪ್ಲಿಕೇಶನ್‌ ಬಿಡುಗಡೆ ಮಾಡಿದೆ. ಆ್ಯಂಡ್ರಾಯ್ಡ್‌ ಬಳಕೆದಾರರಿಗೆ ಹೊಸ ಫೀಚರ್‌ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಅನಗತ್ಯವಾದ, ಅನ್‌ರೀಡ್‌ (Unread) ಮೇಸೇಜ್‌ಗಳನ್ನು ಅಳಿಸಿ ಹಾಕುವುದು ಸೇರಿ ಹಲವು ಫೀಚರ್‌ಗಳನ್ನೂ ಶೀಘ್ರದಲ್ಲೇ ಪರಿಚಯಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಒರಿಜಿನಲ್‌ ಫೋಟೊ ಬೇಕಾಗಿಲ್ಲ

ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಮೂಲಕ ವಾಟ್ಸ್‌ಆ್ಯಪ್‌ ಪ್ರೊಫೈಲ್‌ ಫೋಟೊ ಕ್ರಿಯೇಟ್‌ ಮಾಡಲು ಒರಿಜಿನಲ್‌ ಫೋಟೊಗಳನ್ನು ಬಳಸಬೇಕಿಲ್ಲ. ಆಯಾ ವ್ಯಕ್ತಿಯ ಮನಸ್ಥಿತಿ, ಖುಷಿ, ದುಃಖವನ್ನು ಅಭಿವ್ಯಕ್ತಪಡಿಸುವ ರೀತಿಯಲ್ಲಿ ಕೃತಕ ಬುದ್ಧಿಮತ್ತೆ ಮೂಲಕ ಪ್ರೊಫೈಲ್‌ ಫೋಟೊ ತಯಾರಿಸಬಹುದಾಗಿದೆ. ಹಾಗೆಯೇ, ಬಳಕೆದಾರರ ಖಾಸಗಿತನವನ್ನು ಕಾಪಾಡಲು ವಾಟ್ಸ್‌ಆ್ಯಪ್‌ ಆದ್ಯತೆ ನೀಡಿದೆ. ಯಾರದ್ದೋ ವ್ಯಕ್ತಿಯ ಒರಿಜಿನಲ್‌ ಫೋಟೊ ಬಳಸಿ, ಎಐ ಮೂಲಕ ಇಮೇಜ್‌ ಕ್ರಿಯೇಟ್‌ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವುದನ್ನು ನಿಗ್ರಹಿಸುವ ತಂತ್ರಜ್ಞಾನ ಹೊಂದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Fake News: ವಾಟ್ಸ್‌ಆ್ಯಪ್‌ನಲ್ಲಿ ಸಿಕ್ಕಿದ್ದೆಲ್ಲ ಫಾರ್ವರ್ಡ್‌ ಮಾಡಿದರೆ 3 ವರ್ಷ ಜೈಲು; ಹೊಸ ಕಾನೂನು ಬಗ್ಗೆ ಇರಲಿ ಎಚ್ಚರಿಕೆ

Continue Reading
Advertisement
karnataka weather Forecast
ಮಳೆ40 mins ago

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

COMEDK UGET 2024
ಪ್ರಮುಖ ಸುದ್ದಿ2 hours ago

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

Tips On Tea
ಆರೋಗ್ಯ2 hours ago

Tips On Tea: ಚಹಾ ಅತಿಯಾಗಿ ಕುದಿಸುವುದು ಒಳ್ಳೆಯದಲ್ಲ! ಏಕೆ ಗೊತ್ತಾ?

Dina Bhavishya
ಭವಿಷ್ಯ2 hours ago

Dina Bhavishya : ಆತುರದಲ್ಲಿ ಈ ರಾಶಿಯವರು ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Narendra Modi
ದೇಶ7 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ8 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ8 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ9 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌