BCCI Selection Committee: ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದ ರೇಸ್​ನಲ್ಲಿ ವೆಂಕಟೇಶ್ ಪ್ರಸಾದ್, ಶಿವಸುಂದರ್ ದಾಸ್ - Vistara News

ಕ್ರಿಕೆಟ್

BCCI Selection Committee: ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದ ರೇಸ್​ನಲ್ಲಿ ವೆಂಕಟೇಶ್ ಪ್ರಸಾದ್, ಶಿವಸುಂದರ್ ದಾಸ್

ಬಿಸಿಸಿಐ ಮೂಲಗಳ ಪ್ರಕಾರ ಶಿವಸುಂದರ್ ದಾಸ್ ಅವರು ಭಾರತ ಕ್ರಿಕೆಟ್​ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ನೆಮಕಗೊಳ್ಳುವುದು ಬಹುತೇಕ ಖಚಿತ ಎಂದು ವರದಿಯಾಗಿದೆ.

VISTARANEWS.COM


on

Shiv Sunder Das
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಖಾಸಗಿ ವಾಹಿನಿಯೊಂದು ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಟೀಮ್ ಇಂಡಿಯಾದ ಕುರಿತು ಹಲವು ಆಘಾತಕಾರಿ ವಿಚಾರಗಳನ್ನು ಬಹಿರಂಗಪಡಿಸಿದ ಚೇತನ್ ಶರ್ಮಾ(Chetan Sharma) ಭಾರತ ಕ್ರಿಕೆಟ್​ ತಂಡದ ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇದೀಗ ಈ ಸ್ಥಾನಕ್ಕೆ ಶಿವಸುಂದರ್ ದಾಸ್ ಮತ್ತು ವೆಂಕಟೇಶ್ ಪ್ರಸಾದ್ ಹೆಸರು ಕೇಳಿಬಂದಿದೆ.

ಸದ್ಯ ಬಿಸಿಸಿಐ ಆಯ್ಕೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಘಟಾನುಘಟಿ ಮಾಜಿ ಆಟಗಾರರ ಹೆಸರು ಕೇಳಿಬಂದಿದ್ದರೂ ಕನ್ನಡಿಗ ಹಾಗೂ ಟೀಮ್​ ಇಂಡಿಯಾ ಮಾಜಿ ಆಟಗಾರ ವೆಂಕಟೇಶ್ ಪ್ರಸಾದ್ ಅಥವಾ ಶಿವಸುಂದರ್ ದಾಸ್ ಹೆಸರು ಮುಂಚೂಣಿಯಲ್ಲಿ ಕಾಣಿಸಿಕೊಂಡಿದೆ.

ಈ ಹಿಂದೆ ಟಿ20 ವಿಶ್ವ ಕಪ್‌ ಮತ್ತು ಏಷ್ಯಾಕಪ್​ನಲ್ಲಿ ಭಾರತ ತಂಡ ನಿರಾಶಾದಾಯಕ ಪ್ರದರ್ಶನ ನೀಡಿದ ಕಾರಣ ತಲೆದಂಡವಾಗಿ ಬಿಸಿಸಿಐ(BCCI ) ಚೇತನ್​ ಶರ್ಮಾ ಅವರನ್ನು ಆಯ್ಕೆ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿತ್ತು. ಈ ಸಮಯದಲ್ಲಿಯೂ ಉಭಯ ಆಟಗಾರರ ಹೆಸರು ಕೇಳಿಬಂದಿತ್ತು. ಆದರೆ ಬಿಸಿಸಿಐ ಮತ್ತೆ ಚೇತನ್​ ಶರ್ಮಾ ಅವರಿಗೆ ಅಧ್ಯಕ್ಷ ಸ್ಥಾನ ನೀಡಿ ಅಚ್ಚರಿ ಮೂಡಿಸಿತ್ತು. ಇದೀಗ ಮತ್ತೆ ಇವರ ಹೆಸರು ಕೇಳಿ ಬಂದಿದೆ.

ಬಿಸಿಸಿಐ ಮೂಲಗಳ ಪ್ರಕಾರ ಶಿವಸುಂದರ್ ದಾಸ್ ಅವರು ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಬಿಸಿಸಿಐ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಒಂದು ವೇಳೆ ಆಯ್ಕೆ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಆಯ್ಕೆಯಾದರೆ ಟೀಮ್​ ಇಂಡಿಯಾದಲ್ಲಿ ಮೇಜರ್​ ಸರ್ಜರಿ ಆಗುವುದು ನಿಶ್ಚಿತ. ಏಕೆಂದರೆ ಕಳಪೆ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಕೆ.ಎಲ್​ ರಾಹುಲ್​ ಬಗ್ಗೆ ಕೆಲ ದಿನಗಳ ಹಿಂದೆ ಕಿಡಿಕಾರಿದ್ದರು.

ಇದನ್ನೂ ಓದಿ Chetan Sharma resign: ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿಯ ಮುಖ್ಯಸ್ಥನ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ

ಎಂಟು ವರ್ಷ ಅಂತಾರಾಷ್ಟ್ರೀಯ ಪಂದ್ಯ ಆಡಿದ ಹೊರತಾಗಿಯೂ ಇಷ್ಟೊಂದು ಕಳಪೆ ಪ್ರದರ್ಶನ ನೀಡುವುದು ಸರಿಯಲ್ಲ. ಅಶ್ವಿನ್​ ಅವರಂಥ ನುರಿತ ಆಟಗಾರ ಇರುವ ಹೊರತಾಗಿಯೂ ರಾಹುಲ್​ಗೆ ಟೆಸ್ಟ್​ ತಂಡದಲ್ಲಿ ಉಪನಾಯಕನ ಸ್ಥಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸರಣಿ ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಅವರು ಒಂದೊಮ್ಮೆ ಆಯ್ಕೆ ಸಮಿತಿ ಮುಖ್ಯಸ್ಥನಾದರೆ ರಾಹುಲ್​ಗೆ ಕಂಟಕವೊಂದು ಕಾದಿದೆ ಎನ್ನಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

Rohit Sharma : ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳಿಂದ ಸೋಲಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಕೊನೆಗೊಳಿಸಿತು ಮತ್ತು ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಭಾರತವನ್ನು ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿದ ನಂತರ, ನಾಯಕ ರೋಹಿತ್ ಶರ್ಮಾ ಅವರು ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರೊಂದಿಗೆ ಟಿ 20 ಪಂದ್ಯಗಳಿಂದ ನಿವೃತ್ತಿ ಘೋಷಿಸಿದರು.

VISTARANEWS.COM


on

Rohit Sharma
Koo

ನವದೆಹಲಿ: ವಿಶ್ವ ಕಪ್ ಗೆಲುವಿನ ಬಳಿಕ ಟಿ20 ಮಾದರಿಗೆ ನಿವೃತ್ತಿ ಹೇಳಿರುವ ರೋಹಿತ್ ಶರ್ಮಾ (Rohit Sharma) ಇದೀಗ ಅದು ಕೇವಲ ವಿಶ್ರಾಂತಿ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಅವರು ನಿವೃತ್ತಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ನಲ್ಲಿ ನಡೆದ 2024 ರ ಟಿ 20 ವಿಶ್ವಕಪ್ ಗೆಲುವಿನ ನಂತರ ರೋಹಿತ್ ಟಿ20 ಕ್ರಿಕೆಟ್​ನಿಂದ ನಿವೃತ್ತಿ ಹೇಳಿದ್ದರು. ಅದಕ್ಕೆ ಮೊದಲು ಕೊಹ್ಲಿ ನಿವೃತ್ತಿ ಘೋಷಿಸಿದ್ದರು. ಆದರೆ ರೋಹಿತ್​ ಆ ರೀತಿ ಮಾಡಿದ್ದು ಯಾಕೆ ಎಂಬುದು ಗೊತ್ತಿಲ್ಲ.

ವಿಶ್ವ ಕಪ್​ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರ ಕೊನೆಗೊಳಿಸಿತ್ತು. ಎರಡನೇ ಟಿ 20 ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿತು. ಭಾರತವನ್ನು ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿದ್ದರು.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಮುಂಚಿತವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿತ್, ಅವರು ನಾನು ಇನ್ನೂ ನನ್ನು ನಿವೃತ್ತಿಗೆ ಹೊಂದಾಣಿಕೆಯಾಗಿಲ್ಲ. ದೊಡ್ಡ ಟಿ 20 ಅಂತಾರಾಷ್ಟ್ರೀಯ ಟೂರ್ನಿಗೆ ಮೊದಲು ತಂಡಕ್ಕೆ ಮತ್ತೆ ಸೇರಿಕೊಳ್ಳುತ್ತೇವೆ ಎಂದು ಅನಿಸುತ್ತದೆ ಎಂದು ಹೇಳಿದರು.

ಈ ಹಿಂದೆ ನಡೆದಂತೆ ನನಗೆ ಟಿ 20 ಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ನಾನು ಭಾವಿಸುತ್ತೇನೆ. ದೊಡ್ಡ ಪಂದ್ಯಾವಳಿ ಮುಂದೆ ಬರಲಿದೆ ಮತ್ತು ನಾವು ಮತ್ತೆ ಟಿ 20 ಗಳಿಗೆ ಸಿದ್ಧರಾಗಬೇಕಾಗಿದೆ. ಆದ್ದರಿಂದ ನಾನು ಫಾರ್ಮಾಟ್​ನಿಂದ ಸಂಪೂರ್ಣವಾಗಿ ಹೊರಗುಳಿದಿದ್ದೇನೆ ಎಂದು ನಾನು ಭಾವಿಸುವುದಿಲ್ಲ”ಎಂದು ಶರ್ಮಾ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಟಿ20 ವಿಶ್ವ ಕಪ್​ನಲ್ಲಿ ರೋಹಿತ್ ಶರ್ಮಾ ಭರ್ಜರಿ ಆಟ

2024 ರ ಟಿ 20 ವಿಶ್ವಕಪ್​​ನಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಭಾರತದ ಆರಂಭಿಕ ಆಟಗಾರ ತಮ್ಮ ಟಿ 20 ಐ ವೃತ್ತಿಜೀವನಕ್ಕೆ ಪರಿಪೂರ್ಣ ವಿದಾಯ ಹೇಳಿದ್ದರು. ಬಲಗೈ ಬ್ಯಾಟ್ಸ್ಮನ್ ಎಂಟು ಇನ್ನಿಂಗ್ಸ್​ಗಳಿಂದ 36.71 ಸರಾಸರಿಯಲ್ಲಿ 257 ರನ್ ಗಳಿಸಿದ್ದಾರೆ. ಮೂರು ಅರ್ಧಶತಕಗಳೊಂದಿಗೆ 156.70 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಇದನ್ನೂ ಓದಿ: MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

151 ಇನ್ನಿಂಗ್ಸ್ಗಳಲ್ಲಿ 32.05ರ ಸರಾಸರಿಯಲ್ಲಿ 4231 ರನ್ ಗಳಿಸಿರುವ 37ರ ಹರೆಯದ ರೋಹಿತ್​​, ಜಂಟಿ ದಾಖಲೆಯ 5 ಶತಕ ಮತ್ತು 32 ಅರ್ಧಶತಕಗಳೊಂದಿಗೆ 140.89ರ ಸ್ಟ್ರೈಕ್ ರೇಟ್​​ನೊಂದಿಗೆ ಟಿ20ಐನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

ನಾಗ್ಪುರ ಮೂಲದ ಕ್ರಿಕೆಟಿಗ 2023 ರ ಏಕದಿನ ವಿಶ್ವಕಪ್ ನಂತರ ಮೊದಲ ಬಾರಿಗೆ ಏಕದಿನ ಕ್ರಿಕೆಟ್​​ಗೆ ಮರಳಲಿದ್ದಾರೆ. ಭಾರತದ ನಾಯಕ 11 ಇನ್ನಿಂಗ್ಸ್​ಗಳಿಂದ 54.27 ಸರಾಸರಿಯಲ್ಲಿ 597 ರನ್ ಗಳಿಸುವ ಮೂಲಕ ಮತ್ತು 125.94 ಸ್ಟ್ರೈಕ್ ರೇಟ್ ಮೂಲಕ ಮಿಂಚಿದ್ದರು ಆಗಸ್ಟ್ 1 ರಿಂದ ಪ್ರಾರಂಭವಾಗಲಿರುವ ಮುಂಬರುವ ಸರಣಿಯಲ್ಲಿ ರೋಹಿತ್ ತಮ್ಮ ಫಾರ್ಮ್ ಅನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ.

Continue Reading

ಪ್ರಮುಖ ಸುದ್ದಿ

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MS Dhoni: 2019ರ ವಿಶ್ವ ಕಪ್​ನಲ್ಲಿ ಪ್ರಬಲ ಪ್ರದರ್ಶನದೊಂದಿಗೆ ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತವು ಹೆಚ್ಚಿನ ಭರವಸೆ ಹೊಂದಿತ್ತು. ಆದಾಗ್ಯೂ, ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್​ನಲ್ಲಿ ನಡೆದ ಸೆಮಿಫೈನಲ್ ಭಾರತ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಗೆ 240 ರನ್ ಗಳ ಟಾರ್ಗೆಟ್ ಭಾರತಕ್ಕೆ ನೀಡಿತ್ತು. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ವಿಸ್ತರಿಸಲಾಗಿತ್ತು. ಭಾರತ ಗೆಲುವಿನ ನೆಚ್ಚಿನ ತಂಡವಾಗಿತ್ತು.

VISTARANEWS.COM


on

MS Dhoni
Koo

ನವದೆಹಲಿ: 2019ರ ಏಕ ದಿನ ವಿಶ್ವ ಕಪ್​ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೋತಿರುವುದು ತಮ್ಮ ವೃತ್ತಿ ಜೀವನದ ಅತ್ಯಂತ ‘ಹೃದಯ ವಿದ್ರಾವಕ ಕ್ಷಣ’ ಎಂಬುದಾಗಿ ಧೋನಿ (MS Dhoni) ಹೇಳಿದ್ದಾರೆ. 2019 ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವು ಶತಕೋಟಿ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಬೇಸರಕ್ಕೆ ನೂಕಿತ್ತು. ಜುಲೈ ರಂದು ನಡೆದ ಈ ಪಂದ್ಯವು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಭಾವನೆಗಳನ್ನು ಕೆರಳಿಸಿತ್ತು. ಭಾರತಕ್ಕೆ ನಾಟಕೀಯ ಸೋಲಾಗಿತ್ತು. ಇದು ಕೇವಲ ನಷ್ಟವಲ್ಲ, ಇದು ಶತಕೋಟಿ ಕನಸುಗಳ ಅಂತ್ಯವಾಗಿತ್ತು. ಯಾಕೆಂದರೆ ಅದು ಧೋನಿ ಆ ಪಂದ್ಯದಲ್ಲಿ ರನ್​ ಔಟ್ ಆಗಿದ್ದು ಸೋಲಿಗೆ ಕಾರಣವಾಗಿತ್ತು.

2004 ರಲ್ಲಿ ಚೊಚ್ಚಲ ಪಂದ್ಯದಲ್ಲೇ ರನ್ ಔಟ್ ಮಾಡುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ವಿಕೆಟ್ ಕೀಪರ್-ಬ್ಯಾಟರ್​ ತಮ್ಮ ಏಕದಿನ ವೃತ್ತಿಜೀವನವನ್ನು ರನ್​ಔಟ್​ ಆಗುವ ಮೂಲಕ ಕೊನೆಗೊಳಿಸಿದ್ದರು. ಆ ವಿಶ್ವ ಕಪ್​ ಬಳಿಕ ಧೋನಿ ವಿದಾಯ ಹೇಳಿದ್ದರು.

2019ರ ವಿಶ್ವ ಕಪ್​ನಲ್ಲಿ ಪ್ರಬಲ ಪ್ರದರ್ಶನದೊಂದಿಗೆ ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತವು ಹೆಚ್ಚಿನ ಭರವಸೆ ಹೊಂದಿತ್ತು. ಆದಾಗ್ಯೂ, ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್​ನಲ್ಲಿ ನಡೆದ ಸೆಮಿಫೈನಲ್ ಭಾರತ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಗೆ 240 ರನ್ ಗಳ ಟಾರ್ಗೆಟ್ ಭಾರತಕ್ಕೆ ನೀಡಿತ್ತು. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ವಿಸ್ತರಿಸಲಾಗಿತ್ತು. ಭಾರತ ಗೆಲುವಿನ ನೆಚ್ಚಿನ ತಂಡವಾಗಿತ್ತು.

ಇದನ್ನೂ ಓದಿ: SL vs IND : ಲಂಕಾಗೆ ಗಾಯದ ಸಂಕಟ; ಏಕದಿನ ಸರಣಿಯಿಂದ ದಿಲ್ಶಾನ್ ಮಧುಶಂಕಾ, ಮತೀಶಾ ಪಥಿರಾನಾ ಔಟ್

ಭಾರತದ ಚೇಸಿಂಗ್​ ಕೆಟ್ಟದಾಗಿ ಪ್ರಾರಂಭವಾಯಿತು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟರ್​ಗಳು ವಿಫಲಗೊಂಡರು. ಈ ವೇಳೆ ಅಭಿಮಾನಿಗಳಲ್ಲಿ ಅಪನಂಬಿಕೆಯ ಭಾವನೆ ಹರಡಿತು. ನಂತರ ರವೀಂದ್ರ ಜಡೇಜಾ ಮತ್ತು ಎಂಎಸ್ ಧೋನಿ ಇನ್ನಿಂಗ್ಸ್ ಕಟ್ಟುವ ಕೆಲಸ ಆರಂಭಿಸಿದರು. ಇದು ತಂಡದಲ್ಲಿ ಹಾಗೂ ಅಭಿಮಾನಿಗಳಿಗೆ ಭರವಸೆ ಮೂಡಿಸಿತು.

ಜಡೇಜಾ 59 ಎಸೆತಗಳಲ್ಲಿ 77 ರನ್ ಗಳಿಸಿದರು. ಅವರು ಔಟಾದ ನಂತರ ಭಾರತಕ್ಕೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳ ಅವಶ್ಯಕತೆಯಿತ್ತು. ಕೂಲ್ ಆಟಗಾರ ಧೋನಿ ರಾಷ್ಟ್ರದ ಭರವಸೆಗಳ ಭಾರವನ್ನು ಹೊತ್ತಿದ್ದರು. ಗೆಲುವಿಗೆ 10 ಎಸೆತಗಳಲ್ಲಿ 25 ರನ್​ಗಳ ಅವಶ್ಯಕತೆಯಿತ್ತು. ಅದು ಕಷ್ಟವಾಗಿರಲಿಲ್ಲ.

ಧೋನಿ ರನೌಟ್

ಮಾರ್ಟಿನ್ ಗಪ್ಟಿಲ್ ಅವರ ಫೀಲ್ಡಿಂಗ್​ ಧೋನಿಯನ್ನು ಕ್ರೀಸ್ ನಿಂದ ಹೊರಗಿಡಿತು. ಧೋನಿಯ ರನೌಟ್ ಭಾರತದ ವಿಶ್ವಕಪ್ ಕನಸನ್ನು ಭಗ್ನಗೊಳಿಸಿತು. ಅವರು ಪೆವಿಲಿಯನ್ ಗೆ ಹಿಂತಿರುಗುತ್ತಿದ್ದಂತೆ ಸ್ಟೇಡಿಯಮ್​ ಮೌನವಾಯಿತು. ಪ್ರಪಂಚದಾದ್ಯಂತದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದರು.

ಈ ಸೋಲು ಹೃದಯ ವಿದ್ರಾವಕ ಘಟನೆ ಎಂದು ಧೋನಿ ಒಪ್ಪಿಕೊಂಡಿದ್ದಾರೆ. “ಇದು ಕಷ್ಟಕರವಾಗಿತ್ತು ಏಕೆಂದರೆ ಇದು ನನ್ನ ಕೊನೆಯ ವಿಶ್ವಕಪ್ ಎಂದು ನನಗೆ ತಿಳಿದಿತ್ತು. ಆದ್ದರಿಂದ ಗೆಲುವು ನನಗ ಅನಿವಾರ್ಯವಾಗಿತ್ತು. ಆದರೆ ರನ್​ಔಟ್​​ ಹೃದಯ ವಿದ್ರಾವಕ ಕ್ಷಣವಾಗಿತ್ತು, “ಎಂದು ಧೋನಿ ಕಾರ್ಯಕ್ರಮವೊಂದರಲ್ಲಿ ಹೇಳಿದರು.

ವಿಶ್ವ ಕಪ್​ ಅತ್ಯುತ್ತಮ ಸಮಯವಾಗಿತ್ತು. ಆದರೆ, ರನ್​ಔಟ್ ಬಳಿಕ ಆದ ಸೋಲು ಬೇಸರ ಮೂಡಿತು. ಅದರಿಂದ ಸುಧಾರಿಸಿಕೊಳ್ಳುವುದಕ್ಕೆ ಸ್ವಲ್ಪ ಸಮಯ ತೆಗೆದುಕೊಂಡೆ. ಅದರ ನಂತರ ನಾನು ಅಂತರರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ, ಆದ್ದರಿಂದ ನನಗೆ ಸಾಕಷ್ಟು ಸಮಯ ಸಿಕ್ಕಿತು ಎಂದು ಧೋನಿ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

SL vs IND : ಲಂಕಾಗೆ ಗಾಯದ ಸಂಕಟ; ಏಕದಿನ ಸರಣಿಯಿಂದ ದಿಲ್ಶಾನ್ ಮಧುಶಂಕಾ, ಮತೀಶಾ ಪಥಿರಾನಾ ಔಟ್

SL vs IND :ಫೀಲ್ಡಿಂಗ್ ಅಭ್ಯಾಸದ ಸಮಯದಲ್ಲಿ ಮಧುಶಂಕಾ ಎಡ ಸ್ನಾಯುಸೆಳೆತದ ಗಾಯದಿಂದ (ಗ್ರೇಡ್ 2) ಬಳಲುತ್ತಿದ್ದಾರೆ. ಮೂರನೇ ಟಿ 20 ಐ ಸಮಯದಲ್ಲಿ ಕ್ಯಾಚ್ ಪಡೆಯಲು ಡೈವಿಂಗ್ ಮಾಡುವಾಗ ಪಥಿರಾನಾ ಅವರ ಬಲ ಭುಜದ ಮೇಲೆ ಗಾಯವಾಘಿತ್ತು. ಅವರು ನೋವಿನಿಂದ ಬಳಲುತ್ತಿರುವುದರಿಂದ ಅವರು 50 ಓವರ್​ಗಳ ಸ್ವರೂಪದಲ್ಲಿ ಕಾಣಿಸಿಕೊಳ್ಳುವುದಿಲ್ಲ.

VISTARANEWS.COM


on

Koo

ಬೆಂಗಳೂರು: ರೋಹಿತ್​ ಶರ್ಮಾ (Rohit Sharma) ನೇತೃತ್ವದ ಪ್ರವಾಸಿ ಭಾರತ ವಿರುದ್ಧದ ಏಕದಿನ ಸರಣಿಗೆ (SL vs IND) ಮುಂಚಿತವಾಗಿ ಶ್ರೀಲಂಕಾದ ವೇಗದ ಬೌಲರ್​ಗಳಾದ ದಿಲ್ಶಾನ್ ಮಧುಶಂಕಾ ಮತ್ತು ಮಥೀಶಾ ಪಥಿರಾನಾ ಗಾಯದ ಕಾರಣ ಹೊರಗುಳಿದಿದ್ದಾರೆ. ಮಧುಶಂಕಾ ಮತ್ತು ಪಥಿರಾನಾ ಇಬ್ಬರೂ ಇತ್ತೀಚೆಗೆ ಉಭಯ ತಂಡಗಳ ನಡುವಿನ ಟಿ 20 ಐ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಅವರಿಬ್ಬರೂ ಕ್ರಮವಾಗಿ ಒಂದು ಮತ್ತು ಐದು ವಿಕೆಟ್​ಗಳನ್ನು ಪಡೆದಿದ್ದಾರೆ.

ಫೀಲ್ಡಿಂಗ್ ಅಭ್ಯಾಸದ ಸಮಯದಲ್ಲಿ ಮಧುಶಂಕಾ ಎಡ ಸ್ನಾಯುಸೆಳೆತದ ಗಾಯದಿಂದ (ಗ್ರೇಡ್ 2) ಬಳಲುತ್ತಿದ್ದಾರೆ. ಮೂರನೇ ಟಿ 20 ಐ ಸಮಯದಲ್ಲಿ ಕ್ಯಾಚ್ ಪಡೆಯಲು ಡೈವಿಂಗ್ ಮಾಡುವಾಗ ಪಥಿರಾನಾ ಅವರ ಬಲ ಭುಜದ ಮೇಲೆ ಗಾಯವಾಘಿತ್ತು. ಅವರು ನೋವಿನಿಂದ ಬಳಲುತ್ತಿರುವುದರಿಂದ ಅವರು 50 ಓವರ್​ಗಳ ಸ್ವರೂಪದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಬದಲಿ ಆಟಗಾರರಾಗಿ ಮೊಹಮ್ಮದ್ ಶಿರಾಜ್ ಮತ್ತು ಇಶಾನ್ ಮಾಲಿಂಗ ಅವರನ್ನು ಆಯ್ಕೆದಾರರು ಹೆಸರಿಸಿದ್ದಾರೆ. ಇಬ್ಬರೂ ಯುವ ಆಟಗಾರರು ಇನ್ನೂ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಇನ್ನೂ ಪದಾರ್ಪಣೆ ಮಾಡಿಲ್ಲ. ಇವರಲ್ಲದೆ, ಕುಸಾಲ್ ಜನಿತ್, ಪ್ರಮೋದ್ ಮಧುಶನ್ ಮತ್ತು ಜೆಫ್ರಿ ವಾಂಡರ್ಸೆ ಅವರನ್ನು ಸ್ಟ್ಯಾಂಡ್​ಬೈ ಆಟಗಾರರಾಗಿ ತಂಡಕ್ಕೆ ಸೇರಿಕೊಂಡಿದ್ದಾರೆ.

ಇದನ್ನೂ ಓದಿ: MS Dhoni : ಸಿಎಸ್​​ಕೆಗೆ ನ್ಯಾಯ ಸಲ್ಲಿಸುವೆ; ಐಪಿಎಲ್ ನಿವೃತ್ತಿ ಕುರಿತು ಸ್ಪಷ್ಟನೆ ನೀಡಿದ ಎಂಎಸ್​ ಧೋನಿ

ಮಥೀಶಾ ಪಥಿರಾನಾ ಮತ್ತು ದಿಲ್ಶಾನ್ ಮಧುಶಂಕಾ ಅವರು ಗಾಯದ ಕಾರಣ ಏಕದಿನ ಸರಣಿಯಲ್ಲಿ ಭಾಗವಹಿಸುವುದಿಲ್ಲ. ದಿಲ್ಶಾನ್ ಮಧುಶಂಕಾ ಅವರು ಅಭ್ಯಾಸದ ಸಮಯದಲ್ಲಿ ಫೀಲ್ಡಿಂಗ್ ಮಾಡುವಾಗ ಎಡ ಸ್ನಾಯುಸೆಳೆತದ ಗಾಯದಿಂದ (ಗ್ರೇಡ್ 2) ಬಳಲುತ್ತಿದ್ದರು. ಭಾರತ ವಿರುದ್ಧದ ಮೂರನೇ ಟಿ 20 ಪಂದ್ಯದ ವೇಳೆ ಕ್ಯಾಚ್ ಹಿಡಿಯಲು ಡೈವಿಂಗ್ ಮಾಡುವಾಗ ಪಥಿರಾನಾ ಅವರ ಬಲ ಭುಜಕ್ಕೆ ನೋವು ಮಾಡಿಕೊಂಡಿದ್ದರು ಎಂದು ಶ್ರೀಲಂಕಾ ಕ್ರಿಕೆಟ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕ್ರಿಕೆಟ್ ಆಯ್ಕೆದಾರರು ಮೇಲಿನ ಇಬ್ಬರ ಬದಲಿ ಆಟಗಾರರಾಗಿ ಮೊಹಮ್ಮದ್ ಶಿರಾಜ್ ಮತ್ತು ಇಶಾನ್ ಮಾಲಿಂಗ ಅವರನ್ನು ಕರೆತಂದಿದ್ದಾರೆ. ಈ ಮಧ್ಯೆ, ಈ ಕೆಳಗಿನ ಮೂವರು ಆಟಗಾರರನ್ನು ಸ್ಟ್ಯಾಂಡ್ಬೈಗಳಾಗಿ ತಂಡಕ್ಕೆ ಸೇರಿಸಲಾಗಿದೆ.1) ಕುಸಾಲ್ ಜನಿತ್ 2) ಪ್ರಮೋದ್ ಮಧುಶನ್ 3) ಜೆಫ್ರಿ ವಾಂಡರ್ಸೆ, “ಎಂದು ಅವರು ಹೇಳಿದರು.

ಚಮೀರಾ ಮತ್ತು ತುಷಾರ ಅವರ ಸೇವೆಯೂ ಅಲಭ್ಯ

ಭಾರತ ವಿರುದ್ಧದ ಇತ್ತೀಚಿನ ಟಿ 20 ಐ ಸರಣಿಗೆ ಮುಂಚಿತವಾಗಿ ದುಷ್ಮಂತ ಚಮೀರಾ ಮತ್ತು ನುವಾನ್ ತುಷಾರಾ ಅವರ ಸೇವೆಗಳನ್ನು ಕಳೆದುಕೊಂಡ ಶ್ರೀಲಂಕಾ ಇದೀಗ ಮತ್ತೆ ಗಾಯದ ಸಂಕಟಗಳನ್ನು ಎದುರಿಸುತ್ತಿದೆ. ಟಿ 20 ಐ ಸರಣಿಗೆ ಮುಂಚಿತವಾಗಿ ತಂಡದ ಅಭ್ಯಾಸದ ಸಮಯದಲ್ಲಿ ಫೀಲ್ಡಿಂಗ್ ಮಾಡುವಾಗ ತುಷಾರ ಅವರ ಎಡ ಹೆಬ್ಬೆರಳಿಗೆ ಗಾಯವಾಗಿತ್ತು ಮತ್ತು ಉಸಿರಾಟದ ಸೋಂಕಿನಿಂದಾಗಿ ಚಮೀರಾ ಅವರನ್ನು ಹೊರಕ್ಕೆ ಇಡಲಾಗಿತ್ತು.

ಆಗಸ್ಟ್ 2 ರ ಗುರುವಾರದಿಂದ ಪ್ರಾರಂಭವಾಗುವ ಮೂರು ಏಕದಿನ ಪಂದ್ಯಗಳಲ್ಲಿ ಶ್ರೀಲಂಕಾ ಭಾರತವನ್ನು ಎದುರಿಸಲಿದೆ. ಮುಂಬರುವ ಸರಣಿಯಲ್ಲಿ ಭಾರತ ವಿರುದ್ಧದ ಎಲ್ಲಾ ಮೂರು ಸ್ವರೂಪಗಳಲ್ಲಿ ಹತ್ತು ಪಂದ್ಯಗಳ ಸುದೀರ್ಘ ಸೋಲಿನ ಸರಣಿಯನ್ನು ಕೊನೆಗೊಳಿಸಲು ಆತಿಥೇಯರು ಉತ್ಸುಕರಾಗಿದ್ದಾರೆ. ಜುಲೈ 30 ರಂದು ಮುಕ್ತಾಯಗೊಂಡ ಟಿ 20 ಐ ಸರಣಿಯಲ್ಲಿ ಆತಿಥೇಯರು 3-0 ವೈಟ್ವಾಶ್ ಸೋಲು ಅನುಭವಿಸಿದ್ದರು.

Continue Reading

ಕ್ರೀಡೆ

Paris Olympic: ಐತಿಹಾಸಿಕ ಪದಕ ಗೆದ್ದ ಸ್ವಪ್ನಿಲ್‌ ಕುಸಾಲೆಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

Paris Olympic: ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ

VISTARANEWS.COM


on

Paris Olympic
Koo

ಪ್ಯಾರಿಸ್​: ಪ್ಯಾರಿಸ್​ ಒಲಿಂಪಿಕ್ಸ್(Paris Olympic)​ 50 ಮೀಟರ್‌ ರೈಫಲ್ 3 ಪೊಸಿಷನ್‌ನಲ್ಲಿ ಕಂಚಿನ ಪದಕ ಗೆದ್ದು ಈ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನ್ನುವ ಇತಿಹಾಸ ನಿರ್ಮಿಸಿದ ಶೂಟರ್​ ಸ್ವಪ್ನಿಲ್‌ ಕುಸಾಲೆ(Swapnil Kusale) ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu), ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಗುರುವಾರ ನಡೆದ 50 ಮೀ. ರೈಫ‌ಲ್‌ 3 ಪೊಸಿಶನ್‌ ಫೈನಲ್​ ಪಂದ್ಯದಲ್ಲಿ ಸ್ವಪ್ನಿಲ್ ಅವರು 451.4 ಅಂಕ ಗಳಿಸಿ ಕಂಚಿನ ಪದಕ ತಮ್ಮದಾಗಿಸಿಕೊಂಡರು. ಸ್ವಪ್ನಿಲ್‌ ಫೈನಲ್​ ಪಂದ್ಯದ ಪ್ರೋನ್‌ನಲ್ಲಿ 156.8, ನೀಲಿಂಗ್‌ನಲ್ಲಿ 153.3 ಮತ್ತು ಸ್ಟ್ಯಾಂಡಿಂಗ್‌ನಲ್ಲಿ 195 ಅಂಕಗಳಿಸಿ ಮೂರನೇ ಸ್ಥಾನ ಪಡೆದು ಕಂಚಿನ ಪದಕ್ಕಕೆ ಕೊರಳೊಡ್ಡಿದರು. 463.6 ಅಂಕ ಗಳಿಸಿದ ಚೀನಾದ ಲಿಯು ಯುಕುನ್ ಚಿನ್ನ ಮತ್ತು ಉಕ್ರೇನ್​ನ ಕುಲಿಶ್ ಸೆರ್ಹಿ(461.3) ಬೆಳ್ಳಿ ಪದಕ ಗೆದ್ದರು.

“ಸ್ವಪ್ನಿಲ್ ಕುಸಾಲೆಯವರ ಅಸಾಧಾರಣ ಪ್ರದರ್ಶನ!. ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಕಂಚಿನ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರು ಈ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಕೂಡ. ನಿಮ್ಮ ಈ ಸಾಧನೆ ಪ್ರತಿಯೊಬ್ಬ ಭಾರತೀಯನು ಸಂತೋಷಪಡುವಂತೆ ಮಾಡಿದೆ” ಎಂದು ಮೋದಿ ಟ್ವೀಟ್​ ಮೂಲಕ ಅಭಿನಂದಿಸಿದ್ದಾರೆ.

ಇದನ್ನೂ ಓದಿ Paris Olympics: ಒಲಿಂಪಿಕ್ಸ್​ ಅಭಿಯಾನ ಮುಗಿಸಿದ ಬಾಕ್ಸರ್​ ನಿಖತ್ ಜರೀನ್; ಪ್ರೀ ಕ್ವಾರ್ಟರ್​ನಲ್ಲಿ ಸೋಲು

“ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಸ್ವಪ್ನಿಲ್ ಕುಸಾಲೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು!. ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಭಾರತ ಮೂರು ಪದಕ ಗೆದ್ದಿರುವುದು ಇದೇ ಮೊದಲು. ಇಡೀ ಶೂಟಿಂಗ್ ತಂಡ ಭಾರತಕ್ಕೆ ಹೆಮ್ಮೆ ತಂದಿದೆ. ಮುಂಬರುವ ಈವೆಂಟ್‌ಗಳಿಗಾಗಿ ನಾನು ನಮ್ಮ ಎಲ್ಲಾ ಆಟಗಾರರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಸ್ವಪ್ನಿಲ್ ಕುಸಾಲೆ ಅವರು ಭವಿಷ್ಯದಲ್ಲಿ ಇನ್ನಷ್ಟು ಪ್ರಶಸ್ತಿಗಳನ್ನು ಗೆಲ್ಲಲಿ ಎಂದು ಹಾರೈಸುತ್ತೇನೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್​ ಮಾಡಿದ್ದಾರೆ.

ರೈಲ್ವೆ ಟಿಕೆಟ್ ಕಲೆಕ್ಟರ್


ಮಹಾರಾಷ್ಟ್ರದ ಕೊಲ್ಹಾಪುರದ ಕಂಬಳವಾಡಿ ಗ್ರಾಮದ 28 ವರ್ಷದ ಸ್ವಪ್ನಿಲ್ ಕುಶಲೆ ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಆಟಗಾರ ಮಹೇಂದ್ರ ಸಿಂಗ್​ ಅವರ ಅಪಟ್ಟ ಅಭಿಮಾನಿ. ಜತೆಗೆ ಧೋನಿಯಂತೆಯೇ ಇವರು ಕೂಡ ರೇಲ್ವೆ ಟಿಕೆಟ್ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಧೋನಿಯವರ ಬಯೋಪಿಕ್ ಸಿನೆಮಾವನ್ನು ಪದೇ ಪದೇ ವೀಕ್ಷಿಸಿದ ಬಳಿಕ ಸ್ವಪ್ನಿಲ್ ಕೂಡ ಪೂರ್ಣಪ್ರಮಾಣದಲ್ಲಿ ಶೂಟಿಂಗ್‌ನಲ್ಲಿ ತೊಡಗಿಕೊಂಡರು. ಧೋನಿಯವರಂತೆ ಶಾಂತ ಸ್ವಾಭಾವದ ಈ ಶೂಟರ್​ ಇದೀಗ ಒಲಿಂಪಿಕ್ಸ್‌ ಪದಕವೊಂದನ್ನು ಗೆದ್ದು ಇತಿಹಾಸದ ಪುಟ ಸೇರಿದ್ದಾರೆ. 2015ರ ಕುವೈತ್​ ಏಷ್ಯನ್‌ ಶೂಟಿಂಗ್‌ ಚಾಂಪಿಯನ್‌ಶಿಪ್‌ ಜೂನಿಯರ್‌ ವಿಭಾಗದಲ್ಲಿ ಚಿನ್ನ, 59ನೇ ಹಾಗೂ 61ನೇ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲೂ ಚಿನ್ನ ಗೆದ್ದ ಸಾಧನೆ ಮಾಡಿದ್ದಾರೆ. 

Continue Reading
Advertisement
ICW 2024
ಫ್ಯಾಷನ್30 mins ago

ICW 2024: ಟ್ರೆಂಡ್‌ ಲಿಸ್ಟ್‌ಗೆ ಸೇರಿದ ಇಂಡಿಯಾ ಕೌಚರ್‌ ವೀಕ್‌ನ ಡಿಸೈನರ್‌ ವೇರ್‌ಗಳಿವು!

Diksha Daga
ಕ್ರೀಡೆ35 mins ago

Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

Puja Khedkar
ದೇಶ44 mins ago

Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ

Road Accident
ಕರ್ನಾಟಕ51 mins ago

Road Accident : ತಿರುಪತಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್‌ ಫೇಲ್‌; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Amazoan Fraud
Latest1 hour ago

Online Shopping Fraud: ಅಮೆಜಾನ್‌ನಲ್ಲಿ 55,000 ರೂ. ಮೊಬೈಲ್ ಫೋನ್ ಆರ್ಡರ್ ಮಾಡಿದವನಿಗೆ ಸಿಕ್ಕಿದ್ದು ಟೀ ಕಪ್!

Movies on Israel
ಸಿನಿಮಾ2 hours ago

Movies on Israel: ಪ್ಯಾಲೇಸ್ತಿನ್‌ ಉಗ್ರರ ವಿರುದ್ಧ ಇಸ್ರೇಲ್ ಸೇಡು! ಮೈನವಿರೇಳಿಸುವ ಈ ಸಿನೆಮಾಗಳನ್ನು ನೋಡಲೇಬೇಕು!

Rohit Sharma
ಪ್ರಮುಖ ಸುದ್ದಿ2 hours ago

Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

BJP Padayatra
ಕರ್ನಾಟಕ2 hours ago

BJP Padayatra: ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಸಾಥ್;‌ ಪ್ರೀತಂ ಗೌಡ ಭಾಗಿ ಆಗ್ತಾರಾ? ವಿಜಯೇಂದ್ರ ಹೇಳಿದ್ದಿಷ್ಟು

karnataka Weather Forecast
ಮಳೆ2 hours ago

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Paris Olympics
ಕ್ರೀಡೆ2 hours ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌