Maha Shivaratri 2023 : ಶಿವನ ಮಹಾ ಮಹೋತ್ಸವ ಮಹಾ ಶಿವರಾತ್ರಿ - Vistara News

ಧಾರ್ಮಿಕ

Maha Shivaratri 2023 : ಶಿವನ ಮಹಾ ಮಹೋತ್ಸವ ಮಹಾ ಶಿವರಾತ್ರಿ

ಇಂದು ಮಹಾ ಶಿವರಾತ್ರಿ (Maha Shivaratri 2023 ). ಈ ಹಬ್ಬದ ಮಹತ್ವವೇನು? ಈ ಆಚರಣೆಯಲ್ಲಿ ಮಹರ್ಷಿಗಳ ಕೊಡುಗೆ ಏನು? ಇದನ್ನು ಹೇಗೆ ಆಚರಿಸಬೇಕು? ಎಂದು ಸಂಸ್ಕೃತ ಭಾಷೆ ಮತ್ತು ಭಾರತೀಯ ಸಂಸ್ಕೃತಿಗಳ ಅಧ್ಯಯನ-ಸಂಶೋಧನೆಗಳನ್ನು ನಡೆಸುತ್ತಿರುವ ವಿದ್ವಾನ್ ನರಸಿಂಹ ಭಟ್ ಬಡಗು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Maha Shivaratri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Maha Shivaratri 2023

ವಿದ್ವಾನ್ ನರಸಿಂಹ ಭಟ್ ಬಡಗು
ಭಾರತೀಯರ ಜೀವನಪದ್ಧತಿ ಅತಿ ವಿಶಿಷ್ಟವಾದದ್ದು. ಅದಕ್ಕೆ ಕಾರಣವಿಷ್ಟೆ; ಇವರ ಬದುಕು ಒಂದು ದಿನ ಹುಟ್ಟುವುದು ಇನ್ನೊಂದು ದಿನ ಸಾಯುವುದು ಮತ್ತು ಈ ಹುಟ್ಟುಸಾವುಗಳ ಮಧ್ಯೆ ಹಾಗೂ ಹೀಗೋ ಒಂದಷ್ಟು ದಿನ ಜೀವನವನ್ನು ಸವೆಸುವುದು ಇಷ್ಟೇ ಅಲ್ಲ. ಈ ಬದುಕಿಗೆ ಯಾವ ಅರ್ಥವೂ ಇಲ್ಲ. ಪಶುಗಳೂ ಇಂತಹ ಬದುಕನ್ನು ನಡೆಸುತ್ತವೆ. ಇದಕ್ಕಿಂತಲೂ ಭಿನ್ನವೂ ಇದರ ಜೊತೆಗೂಡಿದ್ದೂ ಆದ ಯಾವ ಅಂತರಂಗದ ಬದುಕುಂಟೋ ಅದೇ ನಿಜವಾದದ್ದು ಎಂದು ಸಾರಿದ ಭಾರತೀಯ ಮಹರ್ಷಿಗಳು ಇಂದ್ರಿಯ ತೃಪ್ತಿಯನ್ನು ಬಿಟ್ಟಿಲ್ಲ. ಆತ್ಮತೃಪ್ತಿಯನ್ನು ಮರೆತಿಲ್ಲ. ಇವೆರಡರ ಸಮನ್ವಯದ ಬಾಳಾಟವನ್ನೇ ಜೀವನ’ ಎಂದರು.

ಈ ಮಾನವಶರೀರವು ಇಹ ಮತ್ತು ಪರಗಳನ್ನು ಅತ್ಯಂತ ವ್ಯವಸ್ಥಿತವಾಗಿ ಅನುಭವಿಸಲೆಂದೇ ಭಗವಂತ ನಮಗೆ ಕೊಟ್ಟ ಅನುಗ್ರಹಯಂತ್ರ. ಅನೇಕ ಜನ್ಮಗಳ ಪುಣ್ಯದಿಂದ ಮಾತ್ರ ಮಾನವಜನ್ಮವನ್ನು ಪಡೆಯಲು ಸಾಧ್ಯ. ಆದ್ದರಿಂದ ಈ ಜನ್ಮದಲ್ಲೇ ಈ ಜೀವಕ್ಕೆ ಉತ್ತಮ ಸಂಸ್ಕಾರವನ್ನು ಕೊಡುವುದರ ಮೂಲಕ ಜೀವವು ದೇವನಲ್ಲಿ ಒಂದಾಗಬೇಕು. ಅದಕ್ಕೆಂದೇ ಭಗವಂತ ನಮಗಾಗಿ ಕೊಟ್ಟ ಉತ್ತಮಕಾಲಘಟ್ಟವನ್ನೇ “ಹಬ್ಬ” “ಪರ್ವ” “ಮಹೋತ್ಸವ” ಇತ್ಯಾದಿ ಪದಗಳಿಂದ ಕರೆಯಲಾಗಿದೆ. ಇಂತಹ ವಿಶೇಷಕಾಲಘಟ್ಟಗಳಲ್ಲಿ `ʻಶಿವರಾತ್ರಿ’ ಎಂಬ (Maha Shivaratri 2023) ವಿಶಿಷ್ಟ ಪರ್ವವೂ ಒಂದಾಗಿದೆ.

ಇಂದು ಈ ಶಿವರಾತ್ರಿಮಹೋತ್ಸವವನ್ನು ಭಯಂಕರವಾಗಿ ಆಚರಿಸಲಾಗುತ್ತಿದೆ. ಅದರ ಒಂದು ಝಲಕ್ಕನ್ನು ನೋಡುವುದಾದರೆ; ಇದು ರಾತ್ರಿ ಆಚರಿಸುವ ಹಬ್ಬ. ರಾತ್ರಿಯೆಲ್ಲಾ ಎಚ್ಚರವಾಗಿರುವ ಕಾಲ. ಅದಕ್ಕಾಗಿ ಜಾಗರಣೆ ಮಾಡಬೇಕು ಎಂಬಿಷ್ಟೇ ಅಂಶದಿಂದ ಜಾಗರಣೆಯನ್ನು ವಿದ್ಯುದ್ದೀಪದಿಂದ ರಾತ್ರಿಯನ್ನೇ ಹಗಲಾಗಿಸಿಕೊಂಡು ಬಗೆಬಗೆಯ ಆಟದಲ್ಲಿ ಕೂಟದಲ್ಲಿ ಕಾಲವನ್ನು ಕಳೆಯಲಾಗುತ್ತಿದೆ. ಜೂಜು ಮೋಜು ಮಸ್ತಿಯಲ್ಲೇ ಕಾಲಕಳೆಯುವ ಜನರು ಒಂದು ಕಡೆಯಾದರೆ ಉಪವಾಸ ಜಾಗರಣೆ ಇವೆಲ್ಲ ಮೂಢನಂಬಿಕೆಯ ಆಚರಣೆಗಳು ಎಂದು ಹೇಳುತ್ತಾ ಕಂಠಪರ್ಯಂತ ತಿಂದು ಗಡದ್ದಾಗಿ ನಿದ್ದೆ ಮಾಡಿ ಸುಖವಾಗಿ ರಾತ್ರಿ ಕಳೆಯಿತು! ಎಂದು ಹೇಳುವವರು ಇನ್ನೊಂದು ಕಡೆ.

ಅಷ್ಟು ಇಷ್ಟು ಭಗವಂತ, ಧರ್ಮ, ಎಂದೆಲ್ಲ ನಂಬಿದವರು ಸಾಧ್ಯವಾದಷ್ಟು ಉಪವಾಸದ ಹೆಸರಿನಲ್ಲಿ ಅಲ್ಪಸ್ವಲ್ಪ ತಿಂದು ತಿಳಿದಷ್ಟು ಪೂಜೆ ಮಾಡಿ ಈ ರಾತ್ರಿಯನ್ನು ಹಾಗೂಹೀಗೂ ಕಳೆದು ಶಿವರಾತ್ರಿಯನ್ನು ಆಚರಿಸಿದೆ ಎಂದು ಧನ್ಯಭಾವವನ್ನು ಅನುಭವಿಸುವವರು ಇನ್ನು ಹಲವರು. ಸ್ವಲ್ಪಮಪ್ಯಸ್ಯ ಧರ್ಮಸ್ಯ ತ್ರಾಯತೇ ಮಹತೋ ಭಯಾತ್’ ಅಷ್ಟೊ ಇಷ್ಟೊ ತಿಳಿದೋ ತಿಳಿಯದೋ ಧರ್ಮವನ್ನು ಆಚರಿಸುವುದು ಉತ್ತಮಪಕ್ಷವೇ. ಹಾಗಾದರೆ ಶಿವರಾತ್ರಿ ಎಂದರೇನು? ಈ ಆಚರಣೆಯಲ್ಲಿ ಮಹರ್ಷಿಗಳ ಕೊಡುಗೆ ಎನು? ಇದನ್ನು ಹೇಗೆ ಆಚರಿಸಬೇಕು? ಎಂಬಿತ್ಯಾದಿ ವಿಷಯಗಳನ್ನು ಶ್ರೀರಂಗಮಹಾಗುರುವಿನ ನೋಟದ ಜೊತೆ ತಿಳಿಯುವ ಪ್ರಯತ್ನ ಮಾಡೋಣ.

ಪುರಾಣಕಥೆಗಳು ಹೇಳುವುದೇನು?

ಒಮ್ಮೆ ಬ್ರಹ್ಮದೇವನು ವೈಕುಂಠಕ್ಕೆ ತೆರಳುತ್ತಾನೆ. ಆಗ ಶ್ರೀವಿಷ್ಣುವು ಶ್ರೀದೇವೀ ಭೂದೇವಿಯರಿಂದ ಸೇವೆಪಡೆಯುತ್ತಿದ್ದನು. ಬ್ರಹ್ಮದೇವನ ಆಗಮನವನ್ನು ಅಲಕ್ಷಿಸಿದ್ದನು. ಇದಕ್ಕೆ ಕೋಪಕೊಂಡ ಬ್ರಹ್ಮದೇವನು; ʻʻಅಯ್ಯಾ ! ಮಹಾವಿಷ್ಣುವೇ! ಈ ಸೃಷ್ಟಿಕರ್ತಾ ಬ್ರಹ್ಮನೇ ಬಂದರೂ ತಿರಸ್ಕಾರವೇ? ಎದ್ದೇಳು! ನಾನು ನಿನ್ನ ಪಿತಾಮಹ ಬಂದಿದ್ದೇನೆʼʼ ಎಂದ. ಅತ್ತ ಮಹಾವಿಷ್ಣುವು ತನ್ನ ಶಯನದಿಂದಲೇ; ʻʻನಿನಗೆ ಮಂಗಳವಾಗಲಿ! ನೀನೂ ಬಂದು ಈ ಆಸನದಲ್ಲಿ ಕುಳಿತುಕೊʼʼ ಎಂದನು. ಆ ಕ್ಷಣದಲ್ಲಿ ಬ್ರಹನು ಇನ್ನಷ್ಟು ಕೋಪದಿಂದ; ʻʻನಿನ್ನ ರಕ್ಷಕ ನಾನು. ಈ ಸೃಷ್ಟಿಗೇ ಕಾರಣ. ಇಷ್ಟಿದ್ದೂ ನನ್ನನ್ನು ಅಪಮಾನಿಸಿರುವೆಯಲ್ಲʼʼ ಎಂದನು.

ಆಗ ಮಹಾವಿಷ್ಣುವು ʻʻನನ್ನ ನಾಭಿಕಮಲದಲ್ಲಿ ಹುಟ್ಟಿರುವುದರಿಂದ ನೀನು ನನ್ನ ಮಗʼʼ ಎಂದನು. ಹೀಗೆ ನಾನು ಸೃಷ್ಟಿಕರ್ತಾ ಎಂದು ಬ್ರಹ್ಮನೂ, ನಾನು ನಿನ್ನನ್ನೇ ಸೃಷ್ಟಿಸಿದ ತಂದೆ ಎಂದು ವಿಷ್ಣುವೂ ಹೀಗೆ ಇಬ್ಬರ ಮಧ್ಯೆ ವಿವಾದ ಆರಂಭವಾಯಿತು. ಬ್ರಹ್ಮನು ಪಾಶುಪತವನ್ನೂ ವಿಷ್ಣುವು ಮಾಹೇಶ್ವರಾಸ್ತ್ರವನ್ನೂ ಪ್ರಯೋಗಿಸಲು ಮುಂದಾದರು. ಇದರಿಂದ ದೇವಗಣ ಭಯಗ್ರಸ್ತವಾಯಿತು. ಹೆದರಿ ಕೈಲಾಸದಲ್ಲಿರುವ ಶಿವನ ಬಳಿ ಓಡಿದರು.

ಈ ಮೊದಲೇ ವಿಷಯವನ್ನು ತಿಳಿದ ಶಿವನು ʻʻನಾನು ಈ ವಿವಾದವನ್ನು ಪರಿಹರಿಸುವೆʼʼ ʻʻಶಿವಲಿಂಗತಯೋದ್ಭೂತಃ ಕೋಟಿಸೂರ್ಯಸಮಪ್ರಭಃʼʼ ಎಂದು ಶಿವನು ತನ್ನ ಜ್ಯೋತಿರ್ಮಯರೂಪವನ್ನು ಪ್ರಕಟಪಡಿಸಿದನು. ಆಗ ಈ ಎರಡೂ ಅಸ್ತ್ರಗಳೂ ಲಿಂಗದಲ್ಲಿ ಲೀನವಾದವು. ಈ ಅವತಾರದ ದಿನವನ್ನೇ ʻಮಹಾಶಿವರಾತ್ರಿ’ ಎಂದು ಕರೆಯಲಾಗಿದೆ. (ಈಶಾನಸಂಹಿತಾ) ಇದೊಂದು ಕೇವಲ ಕಥೆಯಲ್ಲ. ತಾತ್ತ್ವಿಕವಾದ ಹಿನ್ನೆಲೆಯೂ ಉಂಟು. ಅದನ್ನು ಮುಂದೆ ನೋಡೋಣ.

ಮಹಾಕಾಲನಿಗೆ ಯಾವುದು ಕಾಲ?

ಮಹಾಕಾಲನಾದ ಶಿವನ ಆರಾಧನೆಗೆ ವಿಶೇಷವಾದ ಕಾಲ ಕೃಷ್ಣಪಕ್ಷದ ಚತುರ್ದಶೀ. ಪ್ರತಿಮಾಸದಲ್ಲೂ ಕೃಷ್ಣಪಕ್ಷದಲ್ಲಿ ಬರುವ ಚತುರ್ದಶಿಗೂ ಶಿವರಾತ್ರಿ ಎಂದೇ ಹೆಸರು. ಆದರೆ ಮಾಘಮಾಸದ ಕೃಷ್ಣಪಕ್ಷದ ಚತುರ್ದಶಿಗೆ ʻಮಹಾಶಿವರಾತ್ರಿ’ ಎಂದು ಕರೆಯಲಾಗುತ್ತದೆ. ಪ್ರತಿಯೊಂದು ತಿಥಿಯೂ ಒಂದೊಂದು ದೇವತೆಯ ಅಧಿಷ್ಠಾನವಾಗಿರುತ್ತದೆ. ಚತುರ್ಥಿಗೆ ಗಣೇಶ ಅಧಿಷ್ಠಾನ ದೇವತೆಯಾದಂತೆ ಚತುರ್ದಶಿಗೆ ಶಿವನು ಅಧಿಷ್ಠಾನ ದೇವನಾಗಿರುತ್ತಾನೆ. ಅಂದರೆ ಆಯಾ ತಿಥಿಯು ಆಯಾ ದೇವತೆಯ ಉಪಾಸನೆಗೆ ಪ್ರಶಸ್ತವಾದ ಕಾಲ ಎಂಬುದಾಗಿ ನಮ್ಮ ಪರಂಪರೆ ಸಾರಿದೆ. ಇದರಲ್ಲೂ ರಾತ್ರಿಯು ಶಿವನ ಉಪಾಸನೆಗೆ ಅತ್ಯಂತ ಶ್ರೇಷ್ಠವಾಗಿದೆ.

ಶಿವನಿಗೂ ರಾತ್ರಿಗೂ ಸಂಬಂಧವಿದೆ. ಸತ್ತ್ವ-ರಜಸ್ಸು-ತಮಸ್ಸು ಎಂಬ ತ್ರಿಗುಣಗಳಿಗೆ ತ್ರಿಮೂರ್ತಿಗಳಲ್ಲಿ ಕ್ರಮವಾಗಿ ವಿಷ್ಣು-ಬ್ರಹ್ಮ-ಮಹೇಶ್ವರರು ಅಧಿಪತಿಯಾಗಿರುತ್ತಾರೆ. ಕಾಲದಲ್ಲೂ ಬೆಳಿಗ್ಗೆ ಮಧ್ಯಾಹ್ನ ರಾತ್ರಿ ಹೀಗೆ ಒಂದೊಂದು ಕಾಲಕ್ಕೂ ಒಂದೊಂದು ದೇವತೆಯ ಪ್ರಾಧಾನ್ಯವಿರುತ್ತದೆ. ರಾತ್ರಿಯಲ್ಲಿ ತಮಸ್ಸಿನ ಆಧಿಕ್ಯವಿರುವುದರಿಂದಗೆ ಶಿವನಿಗೆ ಪ್ರಾಧಾನ್ಯ.

ಶಿವನನ್ನು ಸಂಹಾರಕರ್ತಾ ಎಂದು ಕರೆಯಲಾಗುತ್ತದೆ. ಸ್ವಾಭಾವಿಕವಾಗಿ ರಾತ್ರಿಯು ಸಂಹಾರಕಾಲದ ಪ್ರತಿನಿಧಿ. ಇಂದ್ರಿಯಗಳನ್ನು ಸೆಳೆದುಕೊಳ್ಳುವ ಕಾಲ. ಜೀವಿಯು ಕರ್ಮಚೇಷ್ಟೆಗಳನ್ನೆಲ್ಲಾ ಬಿಟ್ಟು ಚೈತನ್ಯವನ್ನು ಉಪಸಂಹರಿಸಿಕೊಂಡು ನಿದ್ದೆಗೆ ಜಾರುವ ಕಾಲವಿದು.ಚʻʻಯಸ್ಯಾಂ ಜಾಗೃತಿ ಭೂತಾನಿ ಸಾ ನಿಶಾ ಪಶ್ಯತೋ ಮುನೇಃ”(ಗೀತಾ-69) ಎಂಬಂತೆ ಸಾಮಾನ್ಯ ಜೀವಿಯು ಜಾಡ್ಯನಿದ್ದೆಯಲ್ಲಿದ್ದರೆ ಮುನಿಯಾದವನು ಆಜಾಡ್ಯನಿದ್ರೆ –ಸಮಾಧಿಯಲ್ಲಿ ಮುಳುಗಿರುತ್ತಾನೆ. ಸಾಧಕನಿಗಿದು ಸಾಧನೆಗೆ ಪರ್ವಕಾಲವಾಗಿದೆ.

ಮನಸಸ್ಪತಿಯ ಜಾಗೃತವಾಗುವ ಪರ್ವ

ಶುಕ್ಲಪಕ್ಷದಲ್ಲಿ ಚಂದ್ರನು ವೃದ್ಧಿಹೊಂದುತ್ತಾ ಕೃಷ್ಣಪಕ್ಷದಲ್ಲಿ ಕ್ಷೀಣಿಸುತ್ತಾ ಹೋಗುತ್ತಾನೆ. ಚಂದ್ರನ ಪ್ರಭಾವ ಇಡೀ ಬ್ರಹ್ಮಾಂಡದ ಮೇಲೆ ಬೀರುತ್ತದೆ. ಅಲ್ಲದೇ ಚಂದ್ರನನ್ನು ಮನಸ್ಸಿಗೆ ಅಧಿಪತಿ ಎಂದು ಜ್ಯೋತಿಷ್ಯಶಾಸ್ತ್ರವು ಹೇಳುತ್ತದೆ. ಹಾಗಾಗಿ ಚಂದ್ರನ ವೃದ್ಧಿಕ್ಷಯಗಳು ನಮ್ಮ ಮನಸ್ಸಿನ ಮೇಲೂ ಪ್ರಭಾವವನ್ನು ಬೀರದಿರದು. ಈ ಕೃಷ್ಣಪಕ್ಷದ ರಾತ್ರಿಯು ವಿಶೇಷವಾದ ತಮಸ್ಸಿನ ಆವರಣವಾಗಿರುವುದರಿಂದ ಸಾಮಾನ್ಯ ಜೀವಿಯು ಜಾಡ್ಯನಿದ್ದೆಗೆ ಜಾರುವುದು ಸಹಜ. ಮತ್ತು ಈ ಗಾಢವಾದ ತಮಸ್ಸಿನ ಕಾಲವೇ ರಾಕ್ಷಸೀಶಕ್ತಿಗಳು ಪ್ರಬುದ್ಧರಾಗುವ ಸನ್ನಿವೇಶವಿರುತ್ತದೆ.

ನೈತಿಕ ಸಾಮಾಜಿಕ ಅಪರಾಧಗಳು ಘಟಿಸುವ ಕಾಲವೂ ಇದೇ ಆಗಿದೆ. ಇದೇ ಕಾಲವು ತಮಸ್ಸಿನ ಅಧಿಪತಿಗೆ ಪ್ರಿಯವಾದದ್ದು. ಮಂದಮತಿಗಳು ಈ ಕಾಲವನ್ನು ನಿದ್ದೆಯಲ್ಲಿ ಕಳೆಯುತ್ತಾರೆ. ಪ್ರಾಜ್ಞರಾದವರು ಈ ಕಾಲವನ್ನು ಸದುಪಯೋಗಪಡಿಸಿಕೊಳ್ಳುತ್ತಾರೆ. ಅವರಿಗಿದು ಸಂಧ್ಯಾಕಾಲ. ಮಧ್ಯರಾತ್ರಿಯನ್ನೂ ಸಂಧ್ಯಾಕಾಲಗಳಲ್ಲಿ ಒಂದೆಂದೂ ಇದು ಸಾಧನೆಗೆ ಅತ್ಯಂತ ಪ್ರಶಸ್ತ ಎಂದು ತೀರ್ಮಾನಿಸಲಾಗಿದೆ.

ʻʻನಿಶಿ ಭ್ರಮಂತಿ ಭೂತಾನಿ ಶಕ್ತಯಃ ಶೂಲಭೃದ್ಯತಃ” – ಶಿವ ಮತ್ತು ಅವನ ಅನುಚರರು ಸಂಚರಿಸುವ ಕಾಲವೂ ಇದೇ ಆಗಿದೆ. ʻʻಇಲ್ಲಿ ಶಿವನ ಸಹಚಾರಿಗಳಾಗಿ ಹೇಳಲ್ಪಟ್ಟಿರುವ ಭೂತಗಳು ಭಯ ಅಥವಾ ಬೀಭತ್ಸಗಳಿಗೆ ಕಾರಣರಾಗಿರುವ ಜೀವಿಗಳಲ್ಲ. ಜ್ಞಾನಿ ಭಕ್ತರಾದ ಪರಿವಾರಗಳು. ಆರಾಧಿಸುವವರಿಗೆ ಇಷ್ಟಾರ್ಥವನ್ನು ಅನುಗ್ರಹಿಸುವ ಶಕ್ತಿ ಇವುಗಳಿಗಿದೆ. ಅವು ಸಂಹಾರಕಾರ್ಯದಲ್ಲೂ ಶಿವನಿಗೆ ಸಹಾಯ ಮಾಡುತ್ತವೆ” ಎಂದು ಶ್ರೀರಂಗಮಹಾಗುರುಗಳು ವ್ಯಾಖ್ಯಾನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಚತುರ್ದಶೀ ನಿರ್ಣಯ ಹೇಗೆ?

ʻʻಮಾಘಮಾಸಸ್ಯ ಕೃಷ್ಣಾಯಾಂ ಚತುರ್ದಶ್ಯಾಂ ಸುರೇಶ್ವರ!|
ಅಹಂ ವತ್ಸ್ಯಾಮಿ ಭೂಪೃಷ್ಠೇ ರಾತ್ರೌ, ನೈವ ದಿವಾ ಕಲೌ || (ನಾಗರಖಂಡ)

ಎಂಬ ವಚನಾನುಸಾರ ಮಾಘ ಕೃಷ್ಣ ಚತುರ್ದಶಿಯು ಮಹಾಶಿವರಾತ್ರಿ ಎಂದು ಪರಿಗಣಿತವಾಗಿದೆ. ಇನ್ನು ಕೆಲವು ಕಡೆ ʻʻಫಾಲ್ಗುನಸ್ಯ ಚತುರ್ದಶ್ಯಾಂ ಕೃಷ್ಣಪಕ್ಷೇ ಸಮಾಹಿತಾಃ” (ಹೇಮಾದ್ರಿ ತೀರ್ಥಖಂಡ) ಎಂಬುದಾಗಿ ಫಾಲ್ಗುಣ ಮಾಸವನ್ನು ಸ್ವೀಕರಿಸಲಾಗುತ್ತದೆ. ಏನೇ ಆದರೂ ಚತುರ್ದಶಿಯು ಶಿವದೇವತಾತ್ಮಕವಾದ ತಿಥಿಯಾಗಿದೆ.

ತಿಥಿಯ ನಿರ್ಣಯ ಹೇಗೆ?
೧. “ಸರ್ವಾಪಿ ಶಿವರಾತ್ರಿಃ ಪ್ರದೋಷವ್ಯಾಪಿನ್ಯೇವ” (ನಿರ್ಣಯಾಮೃತ) “ಸೂರ್ಯಾಸ್ತದ ಅನಂತರ ಎರಡು ಘಂಟೆಯ ಕಾಲವೇ ಪ್ರದೋಷಕಾಲ. ಈ ಸಮಯದಲ್ಲಿ ಚತುರ್ದಶೀ ತಿಥಿಯು ಇರಬೇಕು.
೨. “ಪ್ರದೋಷನಿಶೀಥೋಭಯವ್ಯಾಪ್ತಿಃ ಇತಿ ಮಾಧವಃ ʼʼಪ್ರದೋಷ ಮತ್ತು ರಾತ್ರಿಯ ಎಂಟನೆ ಮುಹೂರ್ತದವರೆಗೆ ಚತುರ್ದಶೀ ಇರಬೇಕು.
೩. ಎರಡು ರಾತ್ರಿಯೂ ವ್ಯಾಪ್ತವಾಗಿದ್ದರೆ ಮಾರನೇ ದಿನವನ್ನೇ ಪರಿಗಣಿಸಬೇಕು.
೪. ಎರಡೂ ದಿನಗಳಲ್ಲಿಯೂ ತಿಥಿಯು ರಾತ್ರಿವ್ಯಾಪಿನಿಯಲ್ಲದಿದ್ದರೆ ಮಾರನೇ ದಿನವನ್ನೇ ಬಳಸಬೇಕು (ಹೇಮಾದ್ರಿ ಮತ್ತು ಕೌಸ್ತುಭ).
೫. ತ್ರಯೋದಶಿವಿದ್ಧವಾದ ಚತುರ್ದಶಿಯೇ ಶ್ರೇಷ್ಠ ಎಂಬುದಾಗಿ ಸ್ಕಂದಪುರಾಣ ಸಾರಿದೆ. ಈ ವ್ರತವು ಭಾನುವಾರ ಮತ್ತು ಮಂಗಳವಾರ ಹಾಗೂ ಶಿವ ಯೋಗದಿಂದ ಕೂಡಿದ್ದರೆ ಅತ್ಯಂತ ಶ್ರೇಷ್ಠ ಎಂಬುದಾಗಿ ತಿಳಿಯಬೇಕು.

ಶಿವನ ಸಂಖ್ಯೆ ಹನ್ನೊಂದು. ಚೈತ್ರಾದಿ ಮಾಸದಿಂದ ಮಾಘಮಾಸವು ಹನ್ನೊಂದನೇ ಮಾಸವಾಗಿದೆ. ಹಾಗಾಗಿ ಈ ಮಾಸವನ್ನು ʻʻಮಹಾಶಿವರಾತ್ರಿʼʼ ಎನ್ನಲಾಗಿದೆ. ʻʻಸಾಧಕರ ಅಂತರರಂಗದಲ್ಲಿ ಯಾವಾಗ ವಿಶೇಷವಾಗಿ ಶಿವನ ಸಾಕ್ಷಾತ್ಕಾರ ಆಗುತ್ತದೆಯೋ ಆ ಕಾಲವನ್ನೇ ಆಚರಣೆಗೆ ಬಳಸಬೇಕು” ಎಂಬುದು ಶ್ರೀರಂಗಮಹಾಗುರುಗಳ ಅಂತರಂಗವಾಗಿತ್ತು.

maha shivaratri 2023

ಉಪವಾಸ ಹೇಗೆ?

ಉಪವಾಸವು ಮಹಾಶಿವರಾತ್ರಿ ವ್ರತದಲ್ಲಿ ಬಹುಮುಖ್ಯವಾದ ಅಂಗ. ಆಹಾರದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದೇ ಉಪವಾಸ ಎಂಬರ್ಥವನ್ನು ಇಂದು ಎಲ್ಲಾ ಕಡೆ ಕಾಣುತ್ತೇವೆ. ಆದರೆ ಶ್ರೀರಂಗಮಹಾಗುರುಗಳು ಇದನ್ನು ವಿಶೇಷವಾಗಿ ವ್ಯಾಖ್ಯಾನಿಸುತ್ತಿದ್ದರು. “ಉಪ-ಸಮೀಪೇ, ವಾಸ-ಇರುವುದು. ಅಂದರೆ ಭಗವಂತನ ಬಳಿ ಮನಸ್ಸನ್ನು ಸದಾ ಇರಿಸುವುದೇ ಉಪವಾಸವಪ್ಪ” ಎಂದು. ಉಪವಾಸಕ್ಕೆ ನಿಜವಾದ ಅರ್ಥ ಇದುವೇ . ಇಂತಹ ಸ್ಥಿತಿಗೆ ಆಹಾರವನ್ನು ಬಳಸದೇ ಇರುವುದೂ ಕಾರಣ ಎಂಬರ್ಥದಲ್ಲಿ ಉಪವಾಸ ಪದದ ಬಳಕೆ ಉಚಿತವಾಗುವುದು.

“ವಿಷಯಾ ವಿನಿವರ್ತಂತೇ ನಿರಾಹಾರಸ್ಯ ದೇಹಿನಃ”(ಗೀತಾ೨.೫೯) ಎಂಬ ಗೀತಾಚಾರ್ಯನ ಮಾತಿನಂತೆ ಆಹಾರವನ್ನು ಬಳಸದೇ ಇರುವುದು ವಿಷಯಲಾಲಸೆಯನ್ನು ದೂರಮಾಡುವುದು. ಆಗ ಇಂದ್ರಿಯನಿಗ್ರಹ ಮತ್ತು ಮನೋನಿಗ್ರಹ ಸುಲಭ. ನಿಗ್ರಹವೇ ಇಲ್ಲಿ ಮುಖ್ಯ ಉದ್ದೇಶವೇ ಹೊರತು ಕೇವಲ ಆಹಾರವನ್ನು ಬಳಸದಿರುವುದು ಎಂದೂ ಅಲ್ಲ. ಮತ್ತು ನಿಗ್ರಹವುಳ್ಳವನಿಗೆ ಹಸಿವು ಬಾಯಾರಿಕೆಗಳ ಪರಿವೆಯೇ ಇರದು. ಇಂತಹ ಕಂಡೀಶನ್ನು ಏನುಂಟು ಅದನ್ನೇ ಉಪವಾಸ ಎಂದು ಮಹರ್ಷಿಗಳು ಕರೆದಿದ್ದಾರೆ.

ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗು ಅಶಕ್ತರಾದವರು ಭಗವಂತನ ಪೂಜೆಗೆ ತೊಡಕು ಉಂಟಾಗದ ರೀತಿಯಲ್ಲಿ ಆಹಾರವನ್ನು ಬಳಸಿದರೆ ತಪ್ಪಲ್ಲ ಎಂದು ಶಾಸ್ತ್ರಗಳು ವಿಧಿಸಿವೆ. “ಉಪೋಷಿತೈಃ ಪೂಜಿತಃ ಸನ್ ನರಕಾತ್ ತಾರಯೇತ್ ತಥಾ”(ಗರುಡ) –ಈ ಉಪವಾಸವು ಎಲ್ಲಾ ಪಾಪಗಳನ್ನು ಪರಿಹರಿಸಿ ನಮ್ಮನ್ನು ಉದ್ಧಾರ ಮಾಡುವ ಉತ್ತಮವದ ವ್ರತಾಂಗವಾಗಿದೆ.

ಜಾಗರಣ ಎಂದರೇನು?
ಜಾಗರಣವು ಶಿವರಾತ್ರಿಯ ಇನ್ನೊಂದು ಮುಖ್ಯವಾದ ಅಂಗ. ಜಾಗರಣ ಎಂದರೆ ಎಚ್ಚರವಾಗಿರುವುದು. “ತಸ್ಯಾಂ ಜಾಗರಣಾದ್ರುದ್ರಃ ಪೂಜಿತೋ ಭುಕ್ತಿಮುಕ್ತಿದಃ” (ಗರುಡ) ಈ ದಿನ ಮಾಡಿದ ಜಾಗರಣವು ಇಹದಲ್ಲಿ ಭೋಗಕ್ಕೆ ಬೇಕಾದ ಸಂಪತ್ತನ್ನೂ, ಮತ್ತು ಪರದ ಭೋಗಕ್ಕೆ ಬೇಕಾದ ವೈರಾಗ್ಯವನ್ನೂ ಕೊಡುವುದಾಗಿದೆ. ಆದ್ದರಿಂದ ಈ ದಿನ ಮಾಡುವ ಜಾಗರಣಕ್ಕೆ ಅಷ್ಟೊಂದು ವಿಶೇಷತೆ ಇದೆ. ಹಾಗಾದರೆ ಜಾಗರಣೆ ಎಂದರೆ ಕೇವಲ ನಿದ್ದೆ ಮಾಡದೆ ಎಚ್ಚರವಾಗಿರುವುದು ಎಂಬ ಅರ್ಥವಲ್ಲ. ನಮ್ಮ ಇಂದ್ರಿಯ, ದೇಹ, ಮನಸ್ಸು ಇವುಗಳನ್ನೆಲ್ಲಾ ಅತ್ಯಂತ ಪಟುವಾಗಿಸಿಕೊಂಡು ಅವುಗಳಿಂದ ಭಗವಂತನನ್ನು ಪೂಜಿಸಬೇಕು, ಸ್ತೋತ್ರಮಾಡಬೇಕು, ಧ್ಯಾನಿಸಬೇಕು ಎಂದರ್ಥ. ನಮ್ಮೆಲ್ಲಾ ಕರಣಕಳೆಬರಗಳನ್ನೆಲ್ಲವನ್ನೂ ಭಗವಂತನಿಗಾಗಿ ಮೀಸಲಿಡುವ ಪವಿತ್ರಕಾಲವೇ ಜಾಗರಣ. ಹೊರತು ಎಚ್ಚರವಾಗಿದ್ದುಕೊಂಡು ಇನ್ನಾವುದೋ ಬಹಿರ್ಮುಖವಾದ ವ್ಯಾಪಾರದಲ್ಲೋ, ಮೋಜು ಮಸ್ತಿನಲ್ಲೋ ಕಾಲಹರಣ ಮಾಡುವುದು ಜಾಗರಣ ಖಂಡಿತ ಆಗಲಾರದು. ಇದು ಭಗವಂತನಿಗೆ ಮಾಡುವ ಅಪಚಾರ. ಸ್ತ್ರೀಯರು ಪುರುಷರು ಎಲ್ಲಾ ಜಾತಿಜನಾಂಗದವರೂ ಎಲ್ಲರೂ ಈ ಜಾಗರಣವನ್ನು ಮಾಡಬಹುದು. ಇಲ್ಲಿ ಒಂದನ್ನು ಮಾತ್ರ ನಾವು ನೆನಪಿನಲ್ಲಿಟ್ಟುಕೊಳ್ಳಬೇಕು. ಅದೇನೆಂದರೆ ವ್ರತ ನಿಯಮಗಳೆಲ್ಲವೂ ಯಾರು ಭಗವಂತನ ಮಡಿಲನ್ನು ಸೇರಿ ಈ ಸಂಸಾರಬಂಧನದಿಂದ ಮುಕ್ತಿ ಪಡೆಯಬೇಕು ಎಂದು ಅಪೇಕ್ಷಿಸುತ್ತಾರೋ ಅಂತಹವರಿಗೆ ಮಾತ್ರ ಎಂದು.

ಶಿವರಾತ್ರಿಯ ಪೂಜಾ ವಿಧಾನ

ಶಿವರಾತ್ರಿಯ ದಿನ ಇಡೀ ರಾತ್ರಿ ಪೂಜೆಯನ್ನು ಮಾಡಬೇಕು. ನಾಲ್ಕೂ ಯಾಮಗಳೂ ಪೂಜಾ ಯೋಗ್ಯವಾದ ಕಾಲವಾಗಿವೆ. ಶಿವಲಿಂಗ ಅಥವಾ ಕಲಶದಲ್ಲಿ ಶಿವನನ್ನು ಆವಾಹಿಸಿ ಷೋಡಶೋಪಚಾರಗಳಿಂದ ಪೂಜಿಸಬೇಕು. “ಅಭಿಷೇಕಪ್ರಿಯಃ ಶಿವಃ” ಎಂಬಂತೆ ಅಭಿಷೇಕವು ಶಿವನಿಗೆ ಅತ್ಯಂತ ಶ್ರೇಷ್ಠ. ಹಾಗಾಗಿ ಮೊದಲನೆಯ ಯಾಮದಲ್ಲಿ ಹಾಲಿನಿಂದ, ಎರಡನೆ ಯಾಮದಲ್ಲಿ ಮೊಸರಿನಿಂದ, ಮೂರನೆ ಯಾಮದಲ್ಲಿ ತುಪ್ಪದಿಂದ ಮತ್ತು ನಾಲ್ಕನೆ ಯಾಮದಲ್ಲಿ ಜೇನುತುಪ್ಪದಿಂದ ಅಭಿಷೇಕ ಮಾಡಬೇಕು.

ಯಜುರ್ವೇದದಲ್ಲಿ ಬರುವ ರುದ್ರಾನುವಾಕ ಮಂತ್ರವನ್ನು ಅಭಿಷೇಕದ ಜೊತೆ ಪಠಿಸಬೇಕು. ಪಂಚಾಮೃತ, ಗಂಧ, ಕುಂಕುಮ, ಕರ್ಪೂರ, ತೀರ್ಥ, ಸುವರ್ಣತೀರ್ಥಗಳಿಂದ ಶಿವನಿಗೆ ಅಭಿಷೇಕ ಮಾಡಬೇಕು. ಎಕ್ಕೆ, ಕರವೀರ, ಬಿಲ್ವ ಬಕುಲ ಇವು ಶಂಕರನಿಗೆ ಪ್ರಿಯಕರ. ಇವುಗಳಲ್ಲೂ ಬಿಲ್ವಪತ್ರೆ ಅತ್ಯಂತ ಶ್ರೇಷ್ಠವಾಗಿದೆ. ಮೂರು ದಳಗಳು ತ್ರಿಮೂರ್ತಿಗಳ ಪ್ರತಿರೂಪ. “ಇದರ ದರ್ಶನ, ಸ್ಪರ್ಶ ಮತ್ತು ಸಮರ್ಪಣೆಗಳು ಶಿವಸ್ಥಾನಕ್ಕೆ ಏರಿಸಬಲ್ಲವು ಎಂಬುದನ್ನು ಶ್ರೀರಂಗಮಹಾಗುರುಗಳು ಪ್ರಯೋಗದೊಂದಿಗೆ ಪಾಠ ಮಾಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಲಿಂಗಾಷ್ಟಕ, ಬಿಲ್ವಾಷ್ಟಕ ಮೊದಲಾದ ಸ್ತೋತ್ರಗಳಿಂದ ಶಿವನನ್ನು ಸ್ತುತಿ ಮಾಡಬೇಕು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಶಿವ ಅಷ್ಟೋತ್ತರ ಅಥವಾ ಸಹಸ್ರನಾಮಗಳಿಂದ ಅರ್ಚನೆ, ಶಿವಕಥಾಶ್ರವಣ, ಭಜನ, ಶಿವನಾಮಸಂಕೀರ್ತನ, ಹೀಗೆ ಶಿವಮಯವಾಗಿ ಜಾಗರೂಕರಾಗಿ ರಾತ್ರಿಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಮರುದಿನ ಬೆಳಿಗ್ಗೆ ಪಾರಣೆ (ವ್ರತಾಂತಭೋಜನ) ಮಾಡಿ ಶಿವರಾತ್ರಿವ್ರತವನ್ನು ಪೂರ್ಣಗೊಳಿಸಬೇಕು.

Maha Shivaratri 2023

ಜಿಜ್ಞಾಸಾಪರಿಹಾರ

ಶಿವನು ತಮಸ್ಸಿಗೆ ಅಧಿದೇವತೆ, ಸಂಹಾರಕ ಅಂದರೆ ಕೊಲ್ಲುವವನು. ಹೀಗಿದ್ದೂ ಇಂತಹ ದೇವರನ್ನು ಪೂಜಿಸುವುದು ಮೂರ್ಖತನವಲ್ಲವೇ? ಇಂತಹ ದೇವರ ಪೂಜೆಯಿಂದ ಫಲವಾದರೂ ಏನು? ಮತ್ತು ಹಿಂದೆ ನೆನೆಪಿಸಿದ ಕಥೆಯ ತಾತ್ತ್ವಿಕವಾದ ಹಿನ್ನೆಲೆ ಏನು? ಎಂಬ ಮೊದಲಾದ ಪ್ರಶ್ನೆಗಳು ಓದುಗರ ಮನಸ್ಸಿನಲ್ಲಿ ಮೂಡುವುದು ಸಹಜ. ಈ ಸೃಷ್ಟಿಯಲ್ಲಿ ಸತ್ತ್ವ, ರಜಸ್ಸು ಮತ್ತು ತಮಸ್ಸು ಈ ಮೂರೂ ಗುಣಗಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಸಾಮರಸ್ಯ ಇರಲು ಸಾಧ್ಯ.

ಒಬ್ಬ ಮನುಷ್ಯ ದಿನದ ಇಪ್ಪತ್ತನಾಲ್ಕೂ ಗಂಟೆಗಳ ಕಾಲವೂ ಅವಿಶ್ರಾಂತವಾಗಿ ಕೆಲಸದಲ್ಲಿ ನಿರತನಾದರೆ ಆರೋಗ್ಯ ಕೆಡುವುದಿಲ್ಲವೇ? ಕಾಲಕಾಲಕ್ಕೆ ನಿದ್ದೆಯನ್ನು ಮಾಡಿ ಕೆಲಸವನ್ನು ಮಾಡಿದರೆ ಆರೋಗ್ಯವಾಗಿ ಬದುಕಬಹುದು. ಹಾಗೆಯೇ ಜೀವಿಗಳು ಕರ್ಮಫಲಗಳನ್ನು ಅನುಭವಿಸಿ ಬಳಲಿದಾಗ ವಿಶ್ರಾಂತಿ ಪಡೆಯಲು ಅವನು “ಮರಣ ರೂಪವಾದ ವಿಶ್ರಾಂತಿಯನ್ನು ಕರುಣಿಸುವ ಕರುಣಾಮಯನಾದ ದೇವನೇ ಆಗಿದ್ದಾನೆ. ಜಾಗೃತ್ತಿಗೆ ಹೇಗೆ ರಜಸ್ಸು ಕಾರಣವೋ. ಸಮಾಧಾನಕ್ಕೆ ಸತ್ತ್ವಗುಣ ಕಾರಣ. ನಿದ್ದೆಗೆ ತಮಸ್ಸು ಕಾರಣ. ಶಿವನ ಅನುಗ್ರಹದಿಂದಲೇ ನಾವು ನಿತ್ಯವೂ ಸುಖವಾಗಿ ನಿದ್ರಿಸುತ್ತಿದ್ದೇವೆ.ಯಾವುದೇ ಗುಣವು ವ್ಯತ್ಯಾಸವಾದರೂ ಸೃಷ್ಟಿಯಲ್ಲಿ ಏರುಪೇರು ಸಹಜ. ಒಬ್ಬ ಸಾಧಕನು ಈ ಜೀವನವನ್ನು ಸಾರ್ಥಕಪಡಿಸಿಕೊಳ್ಳಲು ಈ ಮೂರೂ ಗುಣಗಳ ಅಧಿಷ್ಠಾನ ದೇವತೆಗಳ ಪ್ರಸಾದ ಅತಿಮುಖ್ಯ.

ನಮ್ಮ ಜೀವನಕ್ಕೆ ಅಡ್ಡಿಪಡಿಸುವ ರಾಕ್ಷಸೀಸ್ವಭಾವನ್ನು ನಾಶಪಡಿಸುವುದು ಸಂಹಾರಕಾರ್ಯವಾದರೂ ಇದರಿಂದ ಜೀವಸಂಕುಲಕ್ಕೆ ಒಳಿತೇ. ಇಂತಹ ದೇವರನ್ನು ಪೂಜಿಸುವುದರಿಂದ ಜೀವಕ್ಕೆ, ಜೀವನಕ್ಕೆ ಹೊಸ ಉತ್ಸಾಹವನ್ನು ಕೊಡುತ್ತದೆ. ನಮ್ಮ ಮಹರ್ಷಿಗಳ ಯಾವ ಉದ್ಘೋಷವಿದೆಯೋ ಪುರುಷಾರ್ಥಮಯ ಬಾಳಾಟ ಇದೇ ಮಾನವನ ಚರಮ ಮತ್ತು ಪರಮ ಲಕ್ಷ್ಯ. ಇದನ್ನು ಪಡೆಯಲು ಶಿವರಾತ್ರಿಮಹೋತ್ಸವವು ಸಾಧನವಾಗಲಿ ಎಂದು ಶಂಕರನನ್ನು ಪ್ರಾಥಿಸಿ ಮಂಗಳಮಾಡುತ್ತೇನೆ.

– ಲೇಖಕರು ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ : Prerane : ಧ್ಯಾನದಿಂದ ಮಾತ್ರ ಮೃತ್ಯು ಭಯ ದಾಟಲು ಸಾಧ್ಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

ಯಾವುದೇ ಸಂದರ್ಭ ಇರಲಿ ದಿನದಲ್ಲಿ ಶುಭ ಸಮಯ ನೋಡಿ ಕೊಂಡು ಖರೀದಿ ಮಾಡುವುದು ಉತ್ತಮ ಎನ್ನಲಾಗುತ್ತದೆ. ಈ ಬಾರಿ ಅಕ್ಷಯ ತೃತೀಯದಂದು (Akshaya Tritiya 2024) ಚಿನ್ನವನ್ನು ಖರೀದಿಸಲು ಶುಭ ಸಮಯಗಳು ಹೇಗಿವೆ ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

Akshaya Tritiya 2024
Koo

ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯದಂದು ಆಚರಿಸಲ್ಪಡುವ ಹಬ್ಬ ಅಕ್ಷಯ ತೃತೀಯ (Akshaya Tritiya 2024) ಅಥವಾ ಅಕ್ಷಯ ತದಿಗೆ. ಈ ದಿನ ಕೃತ ಯುಗದ ಆರಂಭದ ದಿನ. ವಿಷ್ಣುವಿನ (vishnu) ದಶಾವತಾರಗಳಲ್ಲಿ ಆರನೇ ಅವತಾರವಾದ ಪರಶುರಾಮನ (parasuram) ಹಾಗೂ ಕಲ್ಯಾಣಕ್ರಾಂತಿಯ ರೂವಾರಿ ಬಸವೇಶ್ವರರ (basaweshwara) ಜನ್ಮ ದಿನ. ಭಗೀರಥನ (bhagiratha) ಪ್ರಯತ್ನದಿಂದ ಗಂಗೆ (ganga) ಭೂಮಿಗೆ ಬಂದ ದಿನವೂ ಹೌದು. ಸೂರ್ಯದೇವನು ಯುಧಿಷ್ಠಿರನಿಗೆ ಅಕ್ಷಯ ಪಾತ್ರೆ ನೀಡಿದ ದಿನವೆಂದು ನಂಬಲಾಗುತ್ತದೆ.

ಧಾರ್ಮಿಕ-ಸಾಮಾಜಿಕವಾಗಿ ಮಹತ್ವ ಪಡೆದ ಅಕ್ಷಯ ತೃತೀಯ ವರ್ಷದ ಮೂರೂವರೆ ಶುಭದಿನಗಳಾದ ವಿಜಯದಶಮಿ (vijayadashami), ದೀಪಾವಳಿ (deepavali) ಹಾಗೂ ಬಲಿಪಾಡ್ಯದ ಅರ್ಧದಿನಗಳಲ್ಲಿ ಒಂದಾಗಿದೆ. ಹೀಗಾಗಿ ಈ ದಿನ ಯಾವುದೇ ಶುಭ ಕಾರ್ಯಗಳನ್ನು ನಡೆಸಬಹುದಾಗಿದೆ. ಅಲ್ಲದೆ ಅಕ್ಷಯ ತೃತೀಯವು ಚಿನ್ನ ಖರೀದಿಗೆ ಒಳ್ಳೆಯ ದಿನ ಎಂದೇ ನಂಬಲಾಗುತ್ತದೆ. ಈ ದಿನ ಯಾವುದೇ ವಸ್ತು ಖರೀದಿ ಮಾಡಿದರೂ ಅದು ಅಕ್ಷಯವಾಗುತ್ತದೆ ಎನ್ನುವ ನಂಬಿಕೆ ಇದೆ. ಹೀಗಾಗಿ ಹೆಚ್ಚಿನವರು ಈ ದಿನ ಚಿನ್ನವನ್ನು ಖರೀದಿ ಮಾಡಲು ಆಸಕ್ತಿ ತೋರುತ್ತಾರೆ.

ಯಾವುದೇ ಸಂದರ್ಭ ಇರಲಿ. ದಿನದಲ್ಲಿ ಶುಭ ಸಮಯ ನೋಡಿಕೊಂಡು ಖರೀದಿ ಮಾಡುವುದು ಉತ್ತಮ ಎನ್ನಲಾಗುತ್ತದೆ. ಈ ಬಾರಿ ಅಕ್ಷಯ ತೃತೀಯದಂದು ಚಿನ್ನವನ್ನು ಖರೀದಿಸಲು ಶುಭ ಸಮಯಗಳು ಹೇಗಿದೆ ಎನ್ನುವ ಮಾಹಿತಿ ಇಲ್ಲಿದೆ.


ಶುಭ ಮುಹೂರ್ತ ಯಾವಾಗ?

ಅಖ ತೀಜ್ ಎಂದೂ ಕರೆಯಲ್ಪಡುವ ಅಕ್ಷಯ ತೃತೀಯದ ಹಬ್ಬವನ್ನು ಮೇ 10ರಂದು ಆಚರಿಸಲಾಗುತ್ತದೆ. ವೈಶಾಖ ಮಾಸದ ಶುಕ್ಲ ಪಕ್ಷ ತೃತೀಯದಲ್ಲಿ ಮಂಗಳಕರ ದಿನವನ್ನು ಆಚರಿಸಲಾಗುತ್ತದೆ ಮತ್ತು ಮಹತ್ವದ ಧಾರ್ಮಿಕ ಆಚರಣೆಗಳು ಮತ್ತು ಚಟುವಟಿಕೆಗಳಿಂದ ಗುರುತಿಸಲ್ಪಡುತ್ತದೆ. ಈ ದಿನ ಚಿನ್ನದ ಖರೀದಿಯು ಸಮೃದ್ಧಿ ಮತ್ತು ಯಶಸ್ಸನ್ನು ತರುತ್ತದೆ ಎಂದು ನಂಬಲಾಗಿದೆ. ಅಕ್ಷಯ ತೃತೀಯ 2024ರ ಪೂಜೆ ಮುಹೂರ್ತವು ಮೇ 10ರಂದು ಬೆಳಗ್ಗೆ 5.33ರಿಂದ ಮಧ್ಯಾಹ್ನ 12.18ರವರೆಗೆ ಇರುತ್ತದೆ. ತೃತೀಯ ತಿಥಿಯು ಮೇ 10ರಂದು ಬೆಳಗ್ಗೆ 4.17ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮರುದಿನ 2.50ಕ್ಕೆ ಮುಕ್ತಾಯಗೊಳ್ಳುತ್ತದೆ.

ಚಿನ್ನ ಖರೀದಿಗೆ ಶುಭ ಸಮಯ

ಚಿನ್ನವನ್ನು ಖರೀದಿಸಲು ಮೇ 9ರಂದು ಬೆಳಗ್ಗೆ 4.17ಕ್ಕೆ ಪ್ರಾರಂಭವಾಗಿ ಮೇ 11ರಂದು ತೃತೀಯ ತಿಥಿ ಮುಗಿಯುವವರೆಗೆ ಇರುತ್ತದೆ. ನವದೆಹಲಿ, ಮುಂಬಯಿ ಮತ್ತು ಬೆಂಗಳೂರಿನಲ್ಲಿ ಅಕ್ಷಯ ತೃತೀಯ 2024ರಂದು ಚಿನ್ನವನ್ನು ಖರೀದಿಸಲು ನಿರ್ದಿಷ್ಟ ಸಮಯದಲ್ಲಿ ಸ್ವಲ್ಪ ಬದಲಾಗುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಹೊಸ ದೆಹಲಿಯಲ್ಲಿ ಬೆಳಗ್ಗೆ 5.33ರಿಂದ ಮಧ್ಯಾಹ್ನ 12.18ರವರೆಗೆ, ಮುಂಬಯಿಯಲ್ಲಿ ಬೆಳಗ್ಗೆ 6.6ರಿಂದ ಮಧ್ಯಾಹ್ನ 12.35ರವರೆಗೆ ಮತ್ತು ಬೆಂಗಳೂರಿನಲ್ಲಿ ಬೆಳಗ್ಗೆ 5.56ರಿಂದ ಮಧ್ಯಾಹ್ನ 12.16ರವರೆಗೆ ಚಿನ್ನ ಖರೀದಿ ಮಾಡಲು ಶುಭ ಸಮಯವಾಗಿದೆ.

Continue Reading

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading
Advertisement
Prajwal Revanna Case HD Revanna suffers heartburn and gastric problems Shift to hospital
ರಾಜಕೀಯ5 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಎದೆ ಉರಿ, ಗ್ಯಾಸ್ಟ್ರಿಕ್‌ ತೊಂದರೆ; ಆಸ್ಪತ್ರೆಗೆ ಶಿಫ್ಟ್

Lok Sabha Election 2024
Lok Sabha Election 20247 mins ago

Lok Sabha Election 2024: ಕೈಗಳಿಲ್ಲದಿದ್ದರೂ ಮತದಾನ ಮಾಡಿ ಮಾದರಿಯಾದ ಅಂಕಿತ್ ಸೋನಿ

Met Gala 2024
ಫ್ಯಾಷನ್12 mins ago

Met Gala 2024: ಮೆಟ್ ಗಾಲಾದಲ್ಲಿ 200 ಕ್ಯಾರಟ್ ವಜ್ರ ಧರಿಸಿ ಗಮನ ಸೆಳೆದ ಸುಧಾ ರೆಡ್ಡಿ! ಯಾರಿವರು?

IPL 2024: KKR's Flight to Kolkata Unexpectedly Diverted Mid-Air
ಪ್ರಮುಖ ಸುದ್ದಿ18 mins ago

IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

Akshaya Tritiya 2024
ಧಾರ್ಮಿಕ19 mins ago

Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

Kulgam
ದೇಶ30 mins ago

Kulgam: ಪೂಂಚ್‌ ದಾಳಿಗೆ ಸೇನೆ ಸೇಡು; ಒಬ್ಬ ಲಷ್ಕರ್‌ ಕಮಾಂಡರ್‌ ಸೇರಿ ಮೂವರು ಉಗ್ರರ ಖತಂ

Lok Sabha Election
Latest45 mins ago

Lok Sabha Election : ರಾಜಕೀಯಕ್ಕಾಗಿ ದ್ವೇಷ ಸೃಷ್ಟಿ; ಬಿಜೆಪಿ ವಿರುದ್ಧ ವಿಡಿಯೊ ಮೂಲಕ ಟೀಕೆ ಮಾಡಿದ ಸೋನಿಯಾ ಗಾಂಧಿ

guava leaves benefits
ಆರೋಗ್ಯ56 mins ago

Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

t20 world cup
ಕ್ರೀಡೆ1 hour ago

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

Lok Sabha Election 2024
ಪ್ರಮುಖ ಸುದ್ದಿ1 hour ago

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ3 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌