Aero India: ಏರ್​ ಶೋ ಮುಗಿಯುತ್ತಿದ್ದಂತೆ ಯುದ್ಧ ವಿಮಾನದ ಮೇಲೆ ಮತ್ತೆ ಮೂಡಿತು ಹನುಮಂತನ ಚಿತ್ರ - Vistara News

ದೇಶ

Aero India: ಏರ್​ ಶೋ ಮುಗಿಯುತ್ತಿದ್ದಂತೆ ಯುದ್ಧ ವಿಮಾನದ ಮೇಲೆ ಮತ್ತೆ ಮೂಡಿತು ಹನುಮಂತನ ಚಿತ್ರ

ಬೆಂಗಳೂರಿನಲ್ಲಿ ಸೋಮವಾರದಿಂದ ಪ್ರಾರಂಭವಾದ ಏರ್​ಶೋ ಐದು ದಿನಗಳ ಕಾಲ ಅದ್ಭುತವಾಗಿ ನಡೆಯಿತು. ಅದರಲ್ಲಿ ಈ ಹನುಮಾನ್ ಚಿತ್ರವಿದ್ದ HLFT-42 ವಿಮಾನದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿ, ಚರ್ಚೆ ಶುರುವಾಗಿತ್ತು.

VISTARANEWS.COM


on

Aero India Lord Hanuman pic back on tail of HAL aircraft HLFT 42
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್​​ನ ನೂತನ ಯುದ್ಧ ತರಬೇತಿ ವಿಮಾನ HLFT-42 ರೆಕ್ಕೆಯ ಮೇಲೆ ಮತ್ತೆ ಆಂಜನೇಯನ ಚಿತ್ರ ಮೂಡಿದೆ. ಈ ವಿಮಾನವನ್ನು ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ (Aero India) ಶೋನಲ್ಲಿ ಪ್ರದರ್ಶನಕ್ಕೆ ಇಡಲಾಗಿತ್ತು. ಅದರ ರೆಕ್ಕೆಯ ಮೇಲಿದ್ದ ಹಿಂದು ದೇವತೆ ಹನುಮಂತನ ಚಿತ್ರ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಎಚ್ಎ​ಎಲ್​ ಅದನ್ನು ಕಳೆದ ಮೂರು ದಿನಗಳ ಹಿಂದೆ ತೆಗೆದು ಹಾಕಿತ್ತು. ನಿನ್ನೆ (ಫೆ.17) ಏರ್​ ಶೋದ ಕೊನೇ ದಿನದಂದು ವಿಮಾನದ ರೆಕ್ಕೆ ಮೇಲೆ ಮತ್ತೆ ಹನುಮಂತನ ಚಿತ್ರ ಮೂಡಿದೆ. ಗದೆ ಹಿಡಿದ ಭಗವಾನ್​ ಹನುಮಾನ್​​ನ ಚಿತ್ರವನ್ನು ‘The Storm Is Coming’ ಎಂಬ ಕ್ಯಾಪ್ಷನ್​​ನೊಂದಿಗೆ ವಿಮಾನದ ಮೇಲೆ ನೋಡಬಹುದು.

ಬೆಂಗಳೂರಿನಲ್ಲಿ ಸೋಮವಾರದಿಂದ ಪ್ರಾರಂಭವಾದ ಏರ್​ಶೋ ಐದು ದಿನಗಳ ಕಾಲ ಅದ್ಭುತವಾಗಿ ನಡೆಯಿತು. ಅದರಲ್ಲಿ ಈ ಹನುಮಾನ್ ಚಿತ್ರವಿದ್ದ HLFT-42 ವಿಮಾನದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿ, ಚರ್ಚೆ ಶುರುವಾಗಿತ್ತು. ಅದರ ಬೆನ್ನಲ್ಲೇ ತೆಗೆದುಹಾಕಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಬಳಿಕ ಎಚ್‌ಎಎಲ್‌ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಿ.ಬಿ ಅನಂತಕೃಷ್ಣನ್‌, ‘ಹನುಮಂತನ ಚಿತ್ರ ತೆಗೆದು ಹಾಕಲು ಯಾವುದೇ ಉದ್ದೇಶವಿಲ್ಲ. ಅದನ್ನಲ್ಲಿ ಹಾಕಿಕೊಳ್ಳಲೂ ಯಾವುದೇ ಉದ್ದೇಶ ಇರಲಿಲ್ಲ. ಕಾರ್ಯಕ್ರಮವು ಸಾಂಗವಾಗಿ ನಡೆಯ ಬೇಕಿರುವುದರಿಂದ, ವಿವಾದ ಆಗದೆ ಇರಲಿ ಎಂದು ಈಗದನ್ನು ತೆಗೆಯಲಾಗಿದೆ’ ಎಂದು ಹೇಳಿದ್ದರು.

ಎಚ್​​ಎಎಲ್​ ನಿರ್ಮಿಸಿರುವ ಮಾರುತ್​ ಯುದ್ಧ ವಿಮಾನದ ಸರಣಿಯ ವಿಮಾನವೇ ಈ HLFT-42. ಮಾರುತ್‌ ಎಂದರೆ ಪವನ ಅಥವಾ ವಾಯು. ಪವನ ಪುತ್ರನೇ ಹನುಮಂತ ಆಗಿರುವುದರಿಂದ ಈ ಯುದ್ಧ ವಿಮಾನದ ಮಾದರಿಯಲ್ಲಿ ಮಾರುತಿಯ ಚಿತ್ರವನ್ನು ಅಳವಡಿಸಲಾಗಿತ್ತು. ಅತ್ಯಾಧುನಿಕ ಯುದ್ಧ ವಿಮಾನಗಳ ಹಾರಾಟಕ್ಕೆ ಸಂಬಂಧಿಸಿ ಪೈಲಟ್‌ಗಳಿಗೆ ತರಬೇತಿ ಕೊಡಲು ಈ ವಿಮಾನಗಳು ನಿರ್ಣಾಯಕ ಪಾತ್ರ ವಹಿಸುತ್ತವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಅವಾಂತರ; ದುರಂತದಿಂದ ಪಾರಾದವರ Video ಇಲ್ಲಿದೆ

Rajendra Nagar Tragedy: ಶನಿವಾರ (ಜುಲೈ 27) ದೆಹಲಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗಿ ಮೂವರು ಮೃತಪಟ್ಟಿದ್ದಾರೆ. ಇದೀಗ ಈ ದುರಂತದಿಂದ ಪಾರಾದವರ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Rajendra Nagar Tragedy
Koo

ನವದೆಹಲಿ: ಶನಿವಾರ (ಜುಲೈ 27) ದೆಹಲಿಯಲ್ಲಿ (Delhi Floods) ಸುರಿದ ಧಾರಾಕಾರ ಮಳೆಯಿಂದ ಐಎಎಸ್‌ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ (Rajendra Nagar Tragedy). ರಾಜೇಂದ್ರ ನಗರದಲ್ಲಿರುವ ರಾವ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ (Rau’s IAS Coaching Institute)ನಲ್ಲಿ ಈ ದುರಂತ ಸಂಭವಿಸಿದೆ. ಸಂಜೆ ಏಕಾಏಕಿ ನೀರು ನುಗ್ಗಿದ ಕಾರಣ ನೆಲಮಹಡಿಯಲ್ಲಿದ್ದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಐಎಎಎಸ್‌ ಆಕಾಂಕ್ಷಿಗಳಾದ ತೆಲಂಗಾಣ, ಉತ್ತರ ಪ್ರದೇಶ ಮತ್ತು ಕೇರಳ ಮೂಲದ ತಾನಿಯಾ ಸೋನಿ (25), ಶ್ರೇಯಾ ಯಾದವ್ (25) ಮತ್ತು ನವೀನ್ ಡೆಲ್ವಿನ್ (28) ಎಂದು ಗುರುತಿಸಲಾಗಿದೆ. ಇದೀಗ ದುರಂತದಿಂದ ಕೂದಲೆಳೆ ಅಂತರದಿಂದ ಪಾರಾದವರ ವಿಡಿಯೊ ವೈರಲ್‌ (Viral Video) ಆಗಿದೆ.

ಘಟನೆಯನ್ನು ಖಂಡಿಸಿ ಈಗಾಗಲೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ದುರಂತಕ್ಕೆ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವೇ ಕಾರಣ ಎಂಬ ಕೂಗು ಎಲ್ಲೆಡೆ ಕೇಳಿ ಬಂದಿದೆ. ಈ ಮಧ್ಯೆ ದುರಂತದಿಂದ ಪಾರಾದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಹೃದೇಶ್ ಚೌಹಾಣ್ ಘಟನೆ ಯಾವಾಗ ನಡೆಯಿತು ಎಂಬುದರ ಆಘಾತಕಾರಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ನೆಲಮಹಡಿಗೆ ನೆರೆ ನುಗ್ಗಿದ ನಂತರ ಅಲ್ಲಿನ ಪರಿಸ್ಥಿತಿ ಹೇಗಿತ್ತು ಎನ್ನುವುದನ್ನು ಈ ವೈರಲ್ ವಿಡಿಯೊ ತೋರಿಸುತ್ತದೆ. ಹಲವು ವಿದ್ಯಾರ್ಥಿಗಳು ದುರಂತದಿಂದ ಪಾರಾಗುವುದನ್ನು ಕಾಣಬಹುದು. ಜತೆಗೆ ನೆರೆಯಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರಿಗೆ ವಿದ್ಯಾರ್ಥಿಗಳ ಗುಂಪು ಸಹಾಯಹಸ್ತ ಚಾಚಿ ನೆರವಾಗುತ್ತಿರುವುದೂ ಕಂಡು ಬಂದಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಡಿಯೊ ಹಂಚಿಕೊಂಡಿರುವ ಹೃದೇಶ್‌ ಚೌಹಾಣ್‌, ನೆಲಮಹಡಿಯು ಹತ್ತು ನಿಮಿಷಗಳಲ್ಲಿ ಪ್ರವಾಹದಿಂದ ತುಂಬಿಕೊಂಡಿತ್ತು ಎಂದು ಬರೆದುಕೊಂಡಿದ್ದಾರೆ. ಸಂಜೆ 6.40ಕ್ಕೆ ಈ ಘಟನೆ ನಡೆದಿದ್ದು, ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (National Disaster Management Authority)ಕ್ಕೆ ತಕ್ಷಣ ಮಾಹಿತಿ ನೀಡಲಾಯಿತು. ಆದರೆ ಅವರು ರಾತ್ರಿ 9ರ ನಂತರವೇ ತಲುಪಿದರು. ಇದು ಮೂವರು ಐಎಎಎಸ್‌ ಆಕಾಂಕ್ಷಿಗಳ ಸಾವಿಗೆ ಕಾರಣವಾಯಿತು ಎಂದಿದ್ದಾರೆ.

ನೆಟ್ಟಿಗರಿಂದ ಆಕ್ರೋಶ

ಸದ್ಯ ಈ ವಿಡಿಯೊವನ್ನು 10 ಲಕ್ಷಕ್ಕಿಂತ ಅಧಿಕ ಮಂದಿ ವೀಕ್ಷಿಸಿದ್ದಾರೆ. ಹಲವು ಮಂದಿ ಆಡಳಿತ ಯಂತ್ರದ ವೈಫಲ್ಯವನ್ನು ಖಂಡಿಸಿದ್ದಾರೆ. ʼʼಇದು ನಿಜವಾಗಿಯೂ ಭಯಾನಕʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಈ ದುರಂತಕ್ಕೆ, ಮೂವರ ಸಾವಿಗೆ ನಾವು ನ್ಯಾಯಾಂಗ ವ್ಯವಸ್ಥೆಯನ್ನು ಹೊಣೆಗಾರರನ್ನಾಗಿ ಮಾಡಬಹುದೇ?ʼʼ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ.

“ದೆಹಲಿ ಪೊಲೀಸ್‌ ನೀವು ಸಮಯಕ್ಕೆ ಸರಿಯಾಗಿ ಏಕೆ ತಲುಪಲಿಲ್ಲ? ಮತ್ತು ಈಗ ನೀವು ಕೋಚಿಂಗ್ ಸೆಂಟರ್ ಮೇಲೆ ಎಫ್ಐಆರ್ ದಾಖಲಿಸುತ್ತೀರಿ. ಎಂತಹ ವಿಪರ್ಯಾಸ” ಎಂದು ಮತ್ತೊಬ್ಬರು ವ್ಯಂಗ್ಯವಾಡಿದ್ದಾರೆ. “ಈ ದುರಂತದ ಹಿಂದಿರುವ ಕಾರಣಕರ್ತರ ವಿರುದ್ಧ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಿರಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜಕೀಯ ಮಾಡದೇ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ಪ್ರವೃತ್ತರಾಗಬೇಕು” ಎಂದು ಮಗದೊಬ್ಬರು ಸೂಚಿಸಿದ್ದಾರೆ.

ಇದನ್ನೂ ಓದಿ: Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Continue Reading

ದೇಶ

India Pakistan War: ಭಾರತಕ್ಕೆ ನುಗ್ಗಿದ ಪಾಕ್‌ನ 600 ಕಮಾಂಡೋಗಳು; ನಡೆಯುತ್ತಾ ಮತ್ತೊಂದು ಯುದ್ಧ?

India Pakistan War: ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದು ಭಾರತ ಹಾಗೂ ಪಾಕಿಸ್ತಾನದ ನಡುವಿನ ಮತ್ತೊಂದು ಯುದ್ಧಕ್ಕೆ ಮುನ್ನುಡಿಯಂತಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

VISTARANEWS.COM


on

India Pakistan War
Koo

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ 1947-48ರಿಂದ ಇದುವರೆಗೆ ಪಾಕಿಸ್ತಾನವು ಭಾರತದ ವಿರುದ್ಧ ನಾಲ್ಕು ಬಾರಿ ಯುದ್ಧ (India Pakistan War) ಮಾಡಿದೆ ಹಾಗೂ ನಾಲ್ಕು ಬಾರಿಯೂ ಸೋತು ಸುಣ್ಣವಾಗಿದೆ. ಇಷ್ಟಾದರೂ, ಗಡಿಯಲ್ಲಿ ಉದ್ಧಟತನ ಮಾಡುವುದು, ಉಗ್ರರನ್ನು ಛೂ ಬಿಡುವುದನ್ನು ಮಾತ್ರ ಕುತಂತ್ರಿ ಪಾಕಿಸ್ತಾನ ಬಿಟ್ಟಿಲ್ಲ. ಇದಕ್ಕೆ ನಿದರ್ಶನ ಎಂಬಂತೆ, ಈಗ ಪಾಕಿಸ್ತಾನದ 600 ಕಮಾಂಡೋಗಳು ಭಾರತವನ್ನು ಪ್ರವೇಶಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಾರ್ಗಿಲ್‌ (Kargil War) ಮಾದರಿಯಲ್ಲೇ ಉಭಯ ದೇಶಗಳ ಮಧ್ಯೆ ಮತ್ತೊಂದು ಯುದ್ಧ ಆರಂಭವಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಹೌದು, ಪಾಕಿಸ್ತಾನದ 600 ಕಮಾಂಡೋಗಳು ಅಕ್ರಮವಾಗಿ ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಿದ್ದಾರೆ ಎಂಬುದಾಗಿ ಪಾಕ್‌ ಆಕ್ರಮಿತ ಕಾಶ್ಮೀರದ (PoK) ಹೋರಾಟಗಾರ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಅವರು ಸ್ಫೋಟಕ ಮಾಹಿತಿ ನೀಡಿರುವುದು ಇಂತಹದ್ದೊಂದು ಪ್ರಶ್ನೆಯನ್ನು ಹುಟ್ಟುಹಾಕಿದೆ. “ಪಾಕಿಸ್ತಾನದ ಎಸ್‌ಎಸ್‌ಜಿ ಜನರಲ್‌ ಆಫಿಸರ್‌ ಕಮಾಂಡಿಂಗ್‌ (ಜಿಒಸಿ) ಮೇಜರ್‌ ಜನರಲ್‌ ಆದಿಲ್‌ ರೆಹಮಾನಿಯು ಜಮ್ಮು ಪ್ರದೇಶದಲ್ಲಿ ದಾಳಿ ನಡೆಸುತ್ತಿದ್ದಾನೆ. ಪಾಕಿಸ್ತಾನದ 600 ಕಮಾಂಡೋಗಳು ಭಾರತಕ್ಕೆ ನುಗ್ಗಿದ್ದು, ಕುಪ್ವಾರದಲ್ಲಿ ಆಶ್ರಯ ಪಡೆದಿದ್ದಾರೆ” ಎಂಬುದಾಗಿ ಡಾ.ಅಮ್ಜದ್‌ ಅಯುಬ್‌ ಮಿರ್ಜಾ ಪೋಸ್ಟ್‌ ಮಾಡಿದ್ದಾರೆ.

“ಕಣಿವೆಯ ಸ್ಥಳೀಯ ಜಿಹಾದಿ ಹೋರಾಟಗಾರರು ಪಾಕಿಸ್ತಾನದ ಪರವಾಗಿ ಹೋರಾಡಲು ಸಜ್ಜಾಗಿದ್ದಾರೆ. ಜಮ್ಮುವಿನಲ್ಲಿ ನಡೆಯುತ್ತಿರುವ ದಾಳಿಯ ಉಸ್ತುವಾರಿಯನ್ನು ಪಾಕಿಸ್ತಾನದ ಲೆಫ್ಟಿನೆಂಟ್‌ ಕರ್ನಲ್‌ ಶಾಹಿದ್‌ ಸಲೀಮ್‌ ಜಂಜುವಾ ವಹಿಸಿಕೊಂಡಿದ್ದಾನೆ. ಭಾರತೀಯ ಸೇನೆಯ 15 ಕಾರ್ಪ್ಸ್‌ ಯೋಧರೇ ಅವರ ಗುರಿಯಾಗಿದ್ದಾರೆ. ಇನ್ನೂ ಎರಡು ಬೆಟಾಲಿಯನ್‌ಗಳು ಜಮ್ಮು-ಕಾಶ್ಮೀರ ಗಡಿಯ ಮೂಲಕ ಭಾರತವನ್ನು ಪ್ರವೇಶಿಸಲು ಮುಂದಾಗಿದ್ದಾರೆ” ಎಂದು ಎಚ್ಚರಿಸಿದ್ದಾರೆ. ಇದು ಈಗ ಆತಂಕದ ವಾತಾವರಣ ನಿರ್ಮಾಣವಾಗಲು ಕಾರಣವಾಗಿದೆ.

ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜನೆ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನದ ಉಪಟಳ ಜಾಸ್ತಿಯಾದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ವಾರ್ನಿಂಗ್‌ ಕೊಟ್ಟಿರುವ ಮೋದಿ

ಜುಲೈ 26ರ ಕಾರ್ಗಿಲ್‌ ವಿಜಯ ದಿವಸದಂದು ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. “ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ. ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಇದನ್ನೂ ಓದಿ: ದೇಶಗಳ ಗಡಿ ಮೀರಿದ ಮತ್ತೊಂದು ಲವ್‌ಸ್ಟೋರಿ; ಪ್ರಿಯತಮನೊಂದಿಗೆ ಬಾಳಲು ರಾಜಸ್ಥಾನಕ್ಕೆ ಬಂದ ಪಾಕ್‌ ಮಹಿಳೆ

Continue Reading

ಪ್ರಮುಖ ಸುದ್ದಿ

Viral Video : 25 ವರ್ಷದ ಕನ್ಯೆಯನ್ನು ಮದುವೆಯಾದ 70 ವರ್ಷದ ಮುದುಕ ಕಲೀಮುಲ್ಲಾ!

Viral Video : ಮದುವೆಯಾದ ಜೋಡಿಯ ಹೆಸರು ಮೊಹಮ್ಮದ್ ಕಲೀಮುಲ್ಲಾ ನೂರಾನಿ ಮತ್ತು ರೇಷ್ಮಾ ಪರ್ವೀನ್. ರೇಷ್ಮಾ ಪರ್ವೀನ್ ಅಮಾಸ್ ಬ್ಲಾಕ್ನ ಹಮ್ಜಾಪುರ ವಾರ್ಡ್ ಸಂಖ್ಯೆ 11 ರ ಇಸ್ಲಾಂನಗರದ ನಿವಾಸಿ. 70 ವರ್ಷದ ಕಲೀಮುಲ್ಲಾ ನೂರಾನಿ ಬೈಡಾ ಗ್ರಾಮದ ನಿವಾಸಿ. ಇಬ್ಬರೂ ತಮ್ಮ ಸ್ವಂತ ಇಚ್ಛೆಯಿಂದ ಮದುವೆಯಾಗಿದ್ದಾರೆ. ಆದಾಗ್ಯೂ, ಕಲೀಮುಲ್ಲಾ ತನಗಿನ್ನೂ ವಯಸ್ಸ 50 ಎಂದು ಹೇಳುತ್ತಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

VISTARANEWS.COM


on

Viral Video
Koo

ಗಯಾ: ಮುದುಕನ ಮದುವೆ ಹೊಸತಲ್ಲ. ಆದರೆ, ಪ್ರತಿ ಬಾರಿಯೂ ಮುದುಕರು ಮದುವೆಯಾಗಿರುವುದು ಸುದ್ದಿಯಾಗುವುದು ಅವರು ವರಿಸಿದ ಕನ್ಯೆಯ ವಯಸ್ಸಿನ ಆಧಾರದ ಮೇಲೆ ಅಂತೆಯೇ ಬಿಹಾರದಲ್ಲೂ ಒಂದು ಘಟನೆ ನಡೆದಿದೆ. ಕಲೀಮುಲ್ಲಾ ಎಂಬ ಹೆಸರಿನ 70 ವರ್ಷದ ವ್ಯಕ್ತಿ 25 ವರ್ಷದ ಯುವತಿಯನ್ನು ಮದುವೆಯಾಗಿ ಸುದ್ದಿಯಾಗಿದ್ದಾನೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು,ಕುಟುಂಬ ಮತ್ತು ಗ್ರಾಮಸ್ಥರೆಲ್ಲರೂ ಆತನ ಮದುಗೆ ಬಂದು ತಿಂದುಂಡು ಹೋಗಿದ್ದಾರೆ. ಅಚ್ಚರಿಯೆಂದರೆ ಮದುವೆಯನ್ನು ಸಂಪೂರ್ಣ ಧಾರ್ಮಿಕ ಸಂಪ್ರದಾಯಗಳ ಪ್ರಕಾರವೇ ನಡೆಸಲಾಗಿದೆ.

ಮದುವೆಯಾದ ಜೋಡಿಯ ಹೆಸರು ಮೊಹಮ್ಮದ್ ಕಲೀಮುಲ್ಲಾ ನೂರಾನಿ ಮತ್ತು ರೇಷ್ಮಾ ಪರ್ವೀನ್. ರೇಷ್ಮಾ ಪರ್ವೀನ್ ಅಮಾಸ್ ಬ್ಲಾಕ್ನ ಹಮ್ಜಾಪುರ ವಾರ್ಡ್ ಸಂಖ್ಯೆ 11 ರ ಇಸ್ಲಾಂನಗರದ ನಿವಾಸಿ. 70 ವರ್ಷದ ಕಲೀಮುಲ್ಲಾ ನೂರಾನಿ ಬೈಡಾ ಗ್ರಾಮದ ನಿವಾಸಿ. ಇಬ್ಬರೂ ತಮ್ಮ ಸ್ವಂತ ಇಚ್ಛೆಯಿಂದ ಮದುವೆಯಾಗಿದ್ದಾರೆ. ಆದಾಗ್ಯೂ, ಕಲೀಮುಲ್ಲಾ ತನಗಿನ್ನೂ ವಯಸ್ಸ 50 ಎಂದು ಹೇಳುತ್ತಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ.

ಮದುಗೆ ಆದ ವಿಚಾರದ ಬಗ್ಗೆ ಕಲೀಮುಲ್ಲಾನನ್ನು ಮಾತನಾಡಿಸಿದಾಗ, ನನ್ನದೇನೂ ತಪ್ಪಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಹೇಳಿದ್ದಾನೆ. ಮದುವೆಗೆ ವಯಸ್ಸು ಲೆಕ್ಕವೇ ಅಲ್ಲ. ಹುಡುಗಿ ಕೂಡ ಈ ಮದುವೆಗೆ ಸಂತೋಷದಿಂದ ಒಪ್ಪಿಕೊಂಡಿದ್ದಾಳೆ. ಇದನ್ನು ಅವರು ಮಾಧ್ಯಮಗಳ ಮುಂದೆಯೂ ಹೇಳಿದ್ದಾಳೆ ಎಂದು ಸಮರ್ಥಿಸಿಕೊಂಡಿದ್ದಾನೆ. ಕಲೀಮುಲ್ಲಾ ವೃದ್ಧಾಪ್ಯದಲ್ಲಿ ಏಕೆ ವಿವಾಹವಾಗಿದ್ದೇನೆ ಎಂಬುದಕ್ಕೆ ಕಾರಣ ಕೊಟ್ಟಿದ್ದಾರೆ. ಮದುವೆಗೆ ಯಾವುದೇ ವಯಸ್ಸು ಇಲ್ಲ. ನನ್ನನ್ನು ನೋಡಿಕೊಳ್ಳಲು ಮನೆಯಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ನಾನು ಮದುವೆಯ ಬಗ್ಗೆ ಯೋಚಿಸಿದೆ. ಎಲ್ಲರೂ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: School Teacher : ಶಾಲಾ ಕೊಠಡಿಯಲ್ಲೇ ಚಾಪೆ ಹಾಸಿ, ಮಕ್ಕಳಿಗೆ ಗಾಳಿ ಹಾಕಲು ಹೇಳಿ ಗಡದ್ದಾಗಿ ನಿದ್ದೆ ಹೊಡೆದ ಟೀಚರ್​!

ಕಲೀಮುಲ್ಲಾ ಖಾನ್ ಪತ್ನಿ ನಿಧನ

ಮೊಹಮ್ಮದ್ ಕಲೀಮುಲ್ಲಾ ನೂರಾನಿ ಮತ್ತು ರೇಷ್ಮಾ ಪರ್ವೀನ್ ಯಾವುದೇ ಒತ್ತಡವಿಲ್ಲದೆ ಮದುವೆಯಾಗಿದ್ದಾರೆ. ಆದಾಗ್ಯೂ ಮದುವೆ ಚರ್ಚೆಯು ಇಡೀ ಪ್ರದೇಶದಲ್ಲಿ ಹರಡಿದಿದೆ. 70 ವರ್ಷದ ವ್ಯಕ್ತಿ 25 ವರ್ಷದ ಮಹಿಳೆಯನ್ನು ಏಕೆ ಮದುವೆಯಾಗಿದ್ದಾನೆ ಎಂದು ಚರ್ಚಿಸುತ್ತಿದ್ದಾನೆ. ಅಂದ ಹಾಗೆ ಕಲೀಮುಲ್ಲಾನ ಪತ್ನಿ ನಿಧನ ಹೊಂದಿದ್ದಾರೆ. ಅಲ್ಲಿಂದ ಆತನಿಗೆ ಏಕಾಂಗಿತನ ಕಾಡಿತ್ತು. ಅದಕ್ಕೆ ಎಲ್ಲ ಕೆಲಸ ಮಾಡಬಲ್ಲವಳನ್ನೇ ಮದುವೆಯಾಗಿದ್ದಾರೆ.

Continue Reading

ದೇಶ

Tamil Nadu News : ತಮಿಳುನಾಡಿನಲ್ಲಿ 24 ಗಂಟೆಯೊಳಗೆ ಇಬ್ಬರು ಪ್ರತಿಪಕ್ಷ ನಾಯಕರ ಕಗ್ಗೊಲೆ

Tamil Nadu News : ಶಿವಗಂಗೈನ ಬಿಜೆಪಿ ಕಾರ್ಯಕರ್ತನನ್ನು ಶನಿವಾರ ರಾತ್ರಿ ಗುಂಪೊಂದು ಕೊಚ್ಚಿ ಕೊಲೆ ಮಾಡಿದೆ. ಶಿವಗಂಗೈನ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಅವರು ಅದೇ ಪ್ರದೇಶದಲ್ಲಿ ತಮ್ಮ ಒಡೆತನದ ಇಟ್ಟಿಗೆ ಗೂಡುಗಳಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗಿದೆ.

VISTARANEWS.COM


on

Tamil Nadu News
Koo

ಬೆಂಗಳೂರು: ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ತಮಿಳುನಾಡಿನಲ್ಲಿ ಇಬ್ಬರು ಪ್ರತಿ ಪಕ್ಷದ ನಾಯಕರನ್ನು 24 ಗಂಟೆಗಳ ಅವಧಿಯೊಳಗೆ ಕೊಲೆ ಮಾಡಲಾಗಿದೆ. ಕೊಲೆಯಾದವರಲ್ಲಿ ಒಬ್ಬರು ಬಿಜೆಪಿ ಮತ್ತು ಇನ್ನೊಬ್ಬರು ಎಐಎಡಿಎಂಕೆಯ ನಾಯಕರಾಗಿದ್ದಾರೆ. ಅವರಿಬ್ಬರನ್ನೂ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಇದರಿಂದ ಕೆರಳಿದ ವಿರೋಧ ಪಕ್ಷದ ನಾಯಕರು ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಯಾರಿಗೂ ಭದ್ರತೆ ಇಲ್ಲ ಎಂದು ಆರೋಪಿಸಿದ್ದಾರೆ.

ಶಿವಗಂಗೈನ ಬಿಜೆಪಿ ಕಾರ್ಯಕರ್ತನನ್ನು ಶನಿವಾರ ರಾತ್ರಿ ಗುಂಪೊಂದು ಕೊಚ್ಚಿ ಕೊಲೆ ಮಾಡಿದೆ. ಶಿವಗಂಗೈನ ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸೆಲ್ವಕುಮಾರ್ ಅವರು ಅದೇ ಪ್ರದೇಶದಲ್ಲಿ ತಮ್ಮ ಒಡೆತನದ ಇಟ್ಟಿಗೆ ಗೂಡುಗಳಿಂದ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಿ ಕೊಲ್ಲಲಾಗಿದೆ. ಅವರು ತಮ್ಮ ದ್ವಿಚಕ್ರ ವಾಹನದಲ್ಲಿದ್ದಾಗ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ವ್ಯಕ್ತಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿತ್ತು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ, “ಸಮಾಜ ವಿರೋಧಿ ಶಕ್ತಿಗಳಿಗೆ ಸರ್ಕಾರ ಅಥವಾ ಪೊಲೀಸರ ಬಗ್ಗೆ ಯಾವುದೇ ಭಯವಿಲ್ಲ. ಪೊಲೀಸರನ್ನು ತಮ್ಮ ನಿಯಂತ್ರಣದಲ್ಲಿಟ್ಟುಕೊಂಡಿರುವ ಮುಖ್ಯಮಂತ್ರಿಗಳು ರಾಜಕೀಯ ನಾಟಕವಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಪುದುಚೇರಿ ಗಡಿಗೆ ಹತ್ತಿರವಿರುವ ಕಡಲೂರು ಪ್ರದೇಶದಲ್ಲಿ ಎಐಎಡಿಎಂಕೆ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ತಿರುಪಪುಲಿಯೂರ್ ನಿವಾಸಿ ಪದ್ಮನಾಭನ್ ಕೊಲೆಯಾದ ವ್ಯಕ್ತಿ. ಘಟನೆಯ ದಿನದಂದು ಅವರು ಬಾಗೂರು ಗ್ರಾಮದ ಕಡೆಗೆ ಹೋಗುತ್ತಿದ್ದಾಗ ಕೆಲವು ಅಪರಿಚಿತ ವ್ಯಕ್ತಿಗಳು ಅವರನ್ನು ಸುತ್ತುವರೆದಿದ್ದರು. ಈ ವೇಳೆ ವಾಗ್ವಾದ ನಡೆದಿತ್ತು.ಬಳಿಕ ಅದು ಅವರ ಸಾವಿನಲ್ಲಿ ಕೊನೆಗೊಂಡಿತು.

ಕಡಲೂರು ಜಿಲ್ಲೆಯ ನವನೀತ ನಗರ ಪ್ರದೇಶದ ಮುರಳಿ ಮತ್ತು ಶ್ರೀಧರ್ ಎಂಬ ಇಬ್ಬರು ವ್ಯಕ್ತಿಗಳನ್ನು ವಿಚಾರಣೆಗಾಗಿ ಕರೆದೊಯ್ಯಲಾಗಿದೆ ಎಂದು ಬಹೌರ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಪಿ.ಕೆ.ಸಜಿತ್ ತಿಳಿಸಿದ್ದಾರೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಅವರು ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: School Teacher : ಶಾಲಾ ಕೊಠಡಿಯಲ್ಲೇ ಚಾಪೆ ಹಾಸಿ, ಮಕ್ಕಳಿಗೆ ಗಾಳಿ ಹಾಕಲು ಹೇಳಿ ಗಡದ್ದಾಗಿ ನಿದ್ದೆ ಹೊಡೆದ ಟೀಚರ್​!

ತಮಿಳುನಾಡಿನಲ್ಲಿ ರಾಜಕೀಯ ಪಕ್ಷದ ನಾಯಕರಿಂದ ಹಿಡಿದು ಸಾಮಾನ್ಯ ಮಹಿಳೆಯರವರೆಗೆ ಯಾರಿಗೂ ಭದ್ರತೆ ಇಲ್ಲ ಎಂದು ಹೇಳಿದ್ದಾರೆ. ರಾಜ್ಯದ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪಳನಿಸ್ವಾಮಿ, ಪ್ರತಿದಿನ ಕೊಲೆಗಳು ಮತ್ತು ದರೋಡೆಗಳು ನಡೆಯುತ್ತಿವೆ/ ಜನವರಿಯಿಂದ 595 ಕೊಲೆಗಳು ನಡೆದಿವೆ ಎಂದು ಆರೋಪಿಸಿದರು.

ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಕೊಲೆಗಳು ಮತ್ತು ದರೋಡೆಗಳು ಪ್ರತಿದಿನ ನಡೆಯುತ್ತಿವೆ. ತಮಿಳುನಾಡಿನಲ್ಲಿ ಕೊಲೆಗಳು ನಡೆಯದೆ ದಿನವೇ ಇಲ್ಲ . ಜನವರಿಯಿಂದ ಇಲ್ಲಿಯವರೆಗೆ 595 ಕೊಲೆಗಳು ನಡೆದಿವೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

Continue Reading
Advertisement
Rajendra Nagar Tragedy
ವೈರಲ್ ನ್ಯೂಸ್6 mins ago

Rajendra Nagar Tragedy: ದೆಹಲಿ ಕೋಚಿಂಗ್‌ ಸೆಂಟರ್‌ಗೆ ನೀರು ನುಗ್ಗಿ ಅವಾಂತರ; ದುರಂತದಿಂದ ಪಾರಾದವರ Video ಇಲ್ಲಿದೆ

Health Tips
ಆರೋಗ್ಯ7 mins ago

Health Tips: ಗ್ಯಾಸ್ಟ್ರಿಕ್‌, ಅಜೀರ್ಣ ಸಮಸ್ಯೆಗೆ ನಿಮ್ಮ ಮನೆಯಲ್ಲೇ ಇದೆ ಪರಿಣಾಮಕಾರಿ ಮದ್ದು!

Road Accident jigani anekal
ಬೆಂಗಳೂರು ಗ್ರಾಮಾಂತರ19 mins ago

Road Accident: ಕುಡಿದ ಮತ್ತಿನಲ್ಲಿ ಕಾರು ಹರಿಸಿದ ಚಾಲಕ, ಒಬ್ಬನ ಸಾವು, ಇಬ್ಬರಿಗೆ ಗಾಯ

India Pakistan War
ದೇಶ30 mins ago

India Pakistan War: ಭಾರತಕ್ಕೆ ನುಗ್ಗಿದ ಪಾಕ್‌ನ 600 ಕಮಾಂಡೋಗಳು; ನಡೆಯುತ್ತಾ ಮತ್ತೊಂದು ಯುದ್ಧ?

ITR Filing
ಮನಿ-ಗೈಡ್37 mins ago

ITR Filing: ಐಟಿಆರ್ ಸಲ್ಲಿಕೆ; ಜುಲೈ 31ರ ಗಡುವು ತಪ್ಪಿಸಿಕೊಂಡರೆ ಎಷ್ಟು ದಂಡ?

peenya flyover
ಪ್ರಮುಖ ಸುದ್ದಿ41 mins ago

Peenya flyover: ಇಂದಿನಿಂದ ಪೀಣ್ಯ ಮೇಲ್ಸೇತುವೆ ಎಲ್ಲ ವಾಹನಗಳಿಗೆ ಮುಕ್ತ

bbmp lorry road accident
ಬೆಂಗಳೂರು1 hour ago

Road Accident: ಬೆಂಗಳೂರಿನಲ್ಲಿ ಕಸದ ಲಾರಿಯ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ

Lakshadweep Tour
Latest1 hour ago

Lakshadweep Tour: ಲಕ್ಷದ್ವೀಪದಲ್ಲಿ ಪ್ರವಾಸಿಗರನ್ನು ಸೆಳೆಯುವ ಪಂಚರತ್ನಗಳಿವು

Monsoon Healthy Cooking Tips
ಆರೋಗ್ಯ1 hour ago

Monsoon Healthy Cooking Tips: ಮಳೆಗಾಲದಲ್ಲಿ ಸೊಪ್ಪಿನ ಅಡುಗೆ ಮಾಡುವ ಮುನ್ನ ಈ ಎಚ್ಚರಿಕೆಗಳನ್ನು ವಹಿಸಿ

Vastu Tips
ಧಾರ್ಮಿಕ2 hours ago

Vastu Tips: ಈ ವಾಸ್ತು ನಿಯಮ ಪಾಲಿಸಿ; ಹಣಕಾಸಿನ ಸಮಸ್ಯೆಯಿಂದ ಪಾರಾಗಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Tungabhadra Dam
ಕೊಪ್ಪಳ14 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ16 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ18 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ19 hours ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ3 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಟ್ರೆಂಡಿಂಗ್‌