ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆದ ಮೊದಲ ವಿಡಿಯೊ ಯಾವುದು ಗೊತ್ತಾ? ಇಲ್ಲಿದೆ ನೋಡಿ - Vistara News

ವಿದೇಶ

ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆದ ಮೊದಲ ವಿಡಿಯೊ ಯಾವುದು ಗೊತ್ತಾ? ಇಲ್ಲಿದೆ ನೋಡಿ

You Tube: ಯೂಟ್ಯೂಬ್‌ನಲ್ಲಿ ಎಂತೆಂಥಾ ವಿಡಿಯೋಗಳು ಸಿಗುತ್ತವೆ. ಎಷ್ಟೆಷ್ಟೋ ವಿಡಿಯೋಗಳು ಅಪ್ಲೋಡ್‌ ಆಗುತ್ತವೆ. ಅನೇಕರು ವಿಡಿಯೋ ಮೂಲಕವೇ ಹಣ ಗಳಿಕೆಯನ್ನೂ ಮಾಡುತ್ತಿದ್ದಾರೆ.

VISTARANEWS.COM


on

Youtube Video
ಮೊದಲ ವಿಡಿಯೋದ ಫೋಟೋ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಡಿಯೋ ಶೇರಿಂಗ್‌ ಆ್ಯಪ್‌ ಯೂಟ್ಯೂಬ್‌ ನಮ್ಮ ಜೀವನದ ಒಂದು ಭಾಗವೇ ಆಗಿದೆ ಎಂದರೂ ತಪ್ಪಾಗಲಾರದು. ಸೋಷಿಯಲ್‌ ಮೀಡಿಯಾಗಳ ಸಾಲಿನಲ್ಲಿಯೇ ಈ ಆ್ಯಪ್‌ಗೆ ಇದರದ್ದೇ ಆದ ಒಂದು ವಿಶಿಷ್ಟ ಸ್ಥಾನವಿದೆ. ಅದೆಷ್ಟೋ ಜನ ಯೂಟ್ಯೂಬ್‌ ಚಾನೆಲ್‌ ಕಟ್ಟಿಕೊಂಡು, ವಿಡಿಯೋ ಶೇರ್‌ ಮಾಡಿಯೇ ಹಣವನ್ನೂ ಗಳಿಸುತ್ತಿದ್ದಾರೆ. ಈಗಂತೂ ಬಿಡಿ ಯೂಟ್ಯೂಬ್‌ನಲ್ಲಿ ಕೋಟ್ಯಂತರ ವಿಡಿಯೋಗಳೇ ಇವೆ. ಆದರೆ ನೀವು ಎಂದಾದರೂ ಒಮ್ಮೆಯಾದರೂ ಈ ಯೂಟ್ಯೂಬ್‌ನಲ್ಲಿ ಪೋಸ್ಟ್‌ ಆದ ಅಥವಾ ಅಪ್ಲೋಡ್‌ ಆದ ಮೊಟ್ಟ ಮೊದಲ ವಿಡಿಯೋ ಯಾವುದು ಎಂದು ಯೋಚಿಸಿದ್ದೀರಾ? ಈ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಯೂಟ್ಯೂಬ್‌ ಪ್ರಾರಂಭವಾಗಿದ್ದು 2005ರಲ್ಲಿ. ಜಾವೇದ್‌ ಕರೀಮ್‌, ಸ್ವೀವ್‌ ಚೆನ್‌ ಮತ್ತು ಛಾಡ್‌ ಹರ್ಲಿ ಎಂಬುವರು ಸೇರಿ ಯೂಟ್ಯೂಬ್‌ ಸ್ಥಾಪಿಸಿದರು. ಬಳಿಕ ಅದರಲ್ಲಿ ಮೊಟ್ಟಮೊದಲು ಅಪ್‌ಲೋಡ್‌ ಆದ ವಿಡಿಯೋ ಆನೆಗಳಿಗೆ ಸಂಬಂಧಪಟ್ಟದ್ದು. ಅದು ಯಾವುದು ಎಂಬುದನ್ನು ಈಗ ಯೂಟ್ಯೂಬ್‌ ಇಂಡಿಯಾ ತನ್ನ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಶೇರ್‌ ಮಾಡಿಕೊಂಡಿದೆ. 17 ವರ್ಷಗಳ ಹಿಂದೆ ಯೂಟ್ಯೂಬ್‌ನಲ್ಲಿ ಮೊದಲ ವಿಡಿಯೋ ಅಪ್‌ಲೋಡ್‌ ಮಾಡಿದ್ದು ಸಂಸ್ಥಾಪಕರಲ್ಲಿ ಒಬ್ಬರಾದ ಜಾವೇದ್‌ ಕರೀಮ್‌. San Diego ಪ್ರಾಣಿ ಸಂಗ್ರಹಾಲಯದಲ್ಲಿ ಆನೆಗಳ ಎದುರಲ್ಲಿ ನಿಂತು ಅವರು ಮಾತನಾಡಿದ 19 ಸೆಕೆಂಡ್‌ಗಳ ವಿಡಿಯೋ ಇದು. ಇದರಲ್ಲಿ, ʼನಾವೀಗ ಆನೆಗಳ ಎದುರು ಇದ್ದೇವೆ. ಇವುಗಳಿಗೆ ತುಂಬ ತುಂಬ ಉದ್ದನೆಯ ಸೊಂಡಿಲು ಇದೆ. ಈ ಸೊಂಡಿಲುಗಳಿಂದಾಗಿ ತುಂಬ ಸುಂದರವಾಗಿಯೂ ಕಾಣುತ್ತಿವೆ.ʼ ಎಂದು ಕರೀಮ್‌ ಹೇಳಿದ್ದನ್ನು ಕೇಳಬಹುದು.

ಅಂದು ಯೂಟ್ಯೂಬ್‌ನಲ್ಲಿ ಪೋಸ್ಟ್‌ ಆದ ಈ ವಿಡಿಯೋಕ್ಕೆ 235 ಮಿಲಿಯನ್‌ (23.5 ಕೋಟಿ)ಗೂ ಜಾಸ್ತಿ ವೀವ್ಸ್‌ ಬಂದಿತ್ತು. ಈಗ ಇನ್‌ಸ್ಟಾಗ್ರಾಂನಲ್ಲಿ ಯೂಟ್ಯೂಬ್‌ ಇಂಡಿಯಾ ಶೇರ್‌ ಮಾಡಿಕೊಂಡಿರುವ ಹಳೇ ವಿಡಿಯೋ 168,236 ಕ್ಕೂ ಅಧಿಕ ವೀವ್ಸ್‌ ಕಂಡಿದೆ. ನೆಟ್ಟಿಗರು ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ʼಒಹ್‌ ಯೂಟ್ಯೂಬ್‌ನ ಮೊದಲ ವಿಡಿಯೋ ಒಂದು ವ್ಲಾಗ್‌ ಆಗಿತ್ತುʼ ಎಂದು ಒಬ್ಬರು ಹೇಳಿದ್ದರೆ, ಇನ್ನೊಬ್ಬರು, ʼಈ ಯೂಟ್ಯೂಬ್‌ ಎಂಬುದು ಇಂದು ಅನೇಕರ ಬದುಕನ್ನೇ ಬದಲಿಸಿದೆʼ ಎಂದಿದ್ದಾರೆ. ಹಾಗೆ, ಒಂದಷ್ಟು ಜನರು ʼಹೌದು ಈ ವಿಷಯ ನಮಗೆ ಗೊತ್ತಿದೆʼ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ರಣಾವತ್‌ ಹೊಸ ಲಕ್ಷುರಿಯಸ್‌ ಮನೆ ಹೇಗಿದೆ ಗೊತ್ತಾ? ಪೋಟೊಗಳು ವೈರಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಷ್ಯಾ-ಉಕ್ರೇನ್‌ ಕದನ

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Russia-Ukraine War: ಹೆಚ್ಚು ಕಾಲ ಬದುಕುಳಿಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಯುದ್ಧ ವಾತಾವರಣದಲ್ಲಿ ಉಕ್ರೇನ್ ನ 98 ವರ್ಷದ ಮಹಿಳೆಯೊಬ್ಬರು ಸುಮಾರು 10 ಕಿ.ಮೀ ದೂರ ನಡೆದು ಬಂದಿದ್ದು ಸುರಕ್ಷಿತ ತಾಣ ತಲುಪಿದ್ದಾಳೆ.

VISTARANEWS.COM


on

By

Russia-Ukraine War
Koo

ಬದುಕಬೇಕು ಎನ್ನುವ ಛಲ ಇದ್ದರೆ ಎಂತಹ ಕಠಿಣ ಪರಿಸ್ಥಿತಿಯಾದರೂ ಸರಿ ನಾವು ಹೋರಾಡುತ್ತೇವೆ. ಇದಕ್ಕೆ ಒಂದು ಉತ್ತಮ ನಿದರ್ಶನ 98 ವರ್ಷ ವಯಸ್ಸಿನ ಉಕ್ರೇನಿಯನ್ ವೃದ್ಧೆ (Ukrainian woman). ಲಿಡಿಯಾ ಸ್ಟೆಪನಿವ್ನಾ ಎನ್ನುವ ವೃದ್ಧ ವೃದ್ಧೆ ರಷ್ಯಾ- ಉಕ್ರೇನ್ ಯುದ್ಧದ (Russia-Ukraine War) ಪರಿಸ್ಥಿತಿಯಲ್ಲಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸುಮಾರು 10 ಕಿ.ಮೀ. ದೂರ ನಡೆದುಕೊಂಡೇ ಹೋಗಿ ಬಚಾವಾಗಿದ್ದಾರೆ.

ರಷ್ಯಾ ಆಕ್ರಮಿಸಿಕೊಂಡಿರುವ ಡೊನೆಟ್ಸ್ಕ್ ನಲ್ಲಿರುವ ( Donetsk) ಓಚೆರೆಟೈನ್ (Ocheretyne) ಅನ್ನು ತೊರೆದು ಕೀವ್​​ (Kyiv) ನಿಯಂತ್ರಿಸುವ ಪ್ರದೇಶಗಳನ್ನು ತಲುಪಲು ಲಿಡಿಯಾ ಸ್ಟೆಪನಿವ್ನಾ ಸುಮಾರು 6 ಮೈಲು ದೂರ ನಡೆದಿದ್ದಾರೆ. ಈ ಕುರಿತು ಸೋಮವಾರ ಉಕ್ರೇನ್‌ನ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಮನಗೆದ್ದಿರುವ ಈ ವಿಡಿಯೋದಲ್ಲಿ ಲಿಡಿಯಾ ಸ್ಟೆಪನಿವ್ನಾ, ತಾನು ಆಹಾರ ಅಥವಾ ನೀರಿಲ್ಲದೆ ನಡೆದುಕೊಂಡು ಬಂದಿದ್ದೇನೆ. ಹಲವಾರು ಬಾರಿ ಬಿದ್ದಿದ್ದೇನೆ. ಆದರೆ ನೀರಿಕ್ಷೆ ಕಳೆದುಕೊಳ್ಳಲಿಲ್ಲ. ಎದ್ದು ಮನ್ನಡೆದು ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

ಮೂರನೇ ಯುದ್ದದಿಂದಲೂ ಬದುಕಿದೆ

ಎರಡನೇ ಮಹಾಯುದ್ದದಿಂದ ನಾನು ಬದುಕುಳಿದಿದ್ದೇನೆ. ಈಗ ಮತ್ತೆ ರಷ್ಯಾ- ಉಕ್ರೇನ್ ಯುದ್ಧದಿಂದಲೂ ಬದುಕುಳಿದಿದ್ದೇನೆ ಎಂದು ಸ್ಟೆಪನಿವ್ನಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ನಾನಿದ್ದ ಜಾಗಕ್ಕೆ ಶೆಲ್ ದಾಳಿಯಾದಾಗ ಕೋಲುಗಳ ಸಹಾಯದಿಂದ ನೆಲದ ಮೇಲೆ ಮಲಗಿದೆ. ಬಳಿಕ ಹಾಸಿಗೆಯ ಮೇಲೆ ಕುಳಿತು ಕೋಟ್ ಹಾಕಿಕೊಂಡೆ. ತಲೆಗೆ ಸ್ಕಾರ್ಫ್ ಕಟ್ಟಿದೆ. ಕೈಯಲ್ಲಿ ಮರದ ಕೋಲು ಬಿಟ್ಟರೆ ಬೇರೇನೂ ಉಳಿದಿರಲಿಲ್ಲ. ಕಾಲುಗಳ ಮೇಲೆ ಭರವಸೆ ಇಟ್ಟುಕೊಂಡು ನಡೆದುಕೊಂಡು ಬಂದೆ ಎಂದು ಅಜ್ಜಿ ಹೇಳಿಕೊಂಡಿದ್ದಾರೆ.


ಎರಡನೇ ಮಹಾಯುದ್ಧದಂತಿಲ್ಲ

ರಷ್ಯಾ ತನ್ನ ದೇಶದ ವಿರುದ್ಧ ನಡೆಸುತ್ತಿರುವ ಯುದ್ಧವು ಎರಡನೇ ಮಹಾಯುದ್ಧದಂತಿಲ್ಲ ಎಂದು ಹೇಳಿದ ಅವರು, ಮನೆಗಳು ಸುಟ್ಟು ಕರಕಲಾಗುತ್ತಿದ್ದು, ಮರಗಳು ಉರುಳುತ್ತಿವೆ ಎಂದು ತಿಳಿಸಿದ್ದಾರೆ.

ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಮಹಿಳೆಯ ಕುರಿತು ಉಕ್ರೇನ್‌ನ ಆಂತರಿಕ ಸಚಿವಾಲಯವು ತನ್ನ ವೆಬ್‌ಸೈಟ್‌ನಲ್ಲಿನ ಮಾಹಿತಿ ಹಂಚಿಕೊಂಡಿದೆ. ಮಹಿಳೆಯನ್ನು ಉಕ್ರೇನ್‌ನ ಮಿಲಿಟರಿ ಪತ್ತೆ ಹಚ್ಚಿದ್ದಾರೆ. ಬಳಿಕ ಅವರು ಪೊಲೀಸರಿಗೆ ಒಪ್ಪಿಸಿದರು. ಅವರು ಆಕೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಮಹಿಳೆ ಯಾವಾಗ ಪತ್ತೆಯಾಗಿದ್ದಾಳೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಕಾನೂನು ಜಾರಿ ಅಧಿಕಾರಿಗಳು ಮಹಿಳೆಯ ಸಂಬಂಧಿಕರನ್ನು ಹುಡುಕುತ್ತಿದ್ದಾರೆ ಎಂದು ಸಚಿವಾಲಯ ಹೇಳಿದೆ.

ರಷ್ಯಾ- ಉಕ್ರೇನ್ ಯುದ್ಧವು ಮೂರನೇ ವರ್ಷವೂ ಮುಂದುವರಿದಿದೆ. ಈಗಾಗಲೇ ಸಾವಿರಾರು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ. ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳು ಜನವಿಲ್ಲದೆ ಸ್ಮಶಾನದಂತಾಗಿದೆ. ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Continue Reading

ವಿದೇಶ

Jai Shri Ram Slogan: ಪ್ಯಾಲೆಸ್ತೇನ್ ವಿರುದ್ಧ ಜೈಶ್ರೀರಾಮ್ ಘೋಷಣೆ ಕೂಗಿದ ಇಸ್ರೇಲ್ ಬೆಂಬಲಿಗರು!

Jai Shri Ram Slogan: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ ಕೂಗಿದ್ದಾರೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

VISTARANEWS.COM


on

Jai Shri Ram Slogan
Koo

ವಾಷಿಂಗ್ಟನ್‌: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (UCLA) ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ (Jai Shri Ram Slogan) ಕೂಗಿದ್ದಾರೆ.

ವಾರಾಂತ್ಯದಲ್ಲಿ ಯುಸಿಎಲ್ಎಯಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಇಸ್ರೇಲ್ ಪರ ಪ್ರತಿಭಟನಾಕಾರರ ನಡುವಿನ ಘರ್ಷಣೆಗಳು ತೀವ್ರಗೊಂಡಿದ್ದವು. ಬ್ಲೂಮಿಂಗ್ಟನ್‌ನ ಇಂಡಿಯಾನಾ ವಿಶ್ವವಿದ್ಯಾಲಯ, ಅರಿಜೋನಾ ಸ್ಟೇಟ್ ಯೂನಿವರ್ಸಿಟಿ ಮತ್ತು ಸೇಂಟ್ ಲೂಯಿಸ್‌ನ ವಾಷಿಂಗ್ಟನ್ ವಿಶ್ವವಿದ್ಯಾಲಯದಂತಹ ಇತರ ಕ್ಯಾಂಪಸ್‌ಗಳಲ್ಲಿಯೂ ಇದೇ ರೀತಿಯ ದೃಶ್ಯಗಳನ್ನು ಕಂಡು ಬಂದಿವೆ. ಇನ್ನು ಯುಸಿಎಲ್ಎಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಈ ಗೊಂದಲದ ಮಧ್ಯೆ ಅಮೆರಿಕದ ರಾಷ್ಟ್ರೀಯವಾದಿಯೊಬ್ಬರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವ ಮೂಲಕ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಈ ಘೋಷಣೆಯನ್ನು ಭಾರತದಲ್ಲಿ ಹಿಂದುಗಳಿಗೆ ಸಂಬಂಧಿಸಿದ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಕೂಗಲಾಗುತ್ತದೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

ಯುಸಿಎಲ್ಎಯ ಕಾರ್ಯತಂತ್ರದ ಸಂವಹನಗಳ ಉಪಕುಲಪತಿ ಮೇರಿ ಒಸಾಕೊ ಈ ಬಗ್ಗೆ ಮಾತನಾಡಿ, ʼʼಎರಡೂ ಕಡೆಯ ಪ್ರತಿಭಟನಾಕಾರರು ವಾಗ್ವಾದಗಳಲ್ಲಿ ತೊಡಗಿದ್ದರು. ಜತೆಗೆ ಘರ್ಷಣೆಯೂ ನಡೆಯಿತು. ಎರಡೂ ಕಡೆಯವರ ಘೋಷಣೆಗಳು ಮುಗಿಲು ಮುಟ್ಟಿದ್ದವುʼʼ ಎಂದು ವಿವರಿಸಿದ್ದಾರೆ. “ಯುಸಿಎಲ್ಎಯಲ್ಲಿ ಇದುವರೆಗೆ ಅನೇಕ ಶಾಂತಿಯುತ ಪ್ರತಿಭಟನೆ ನಡೆದಿದ್ದವು. ಆದರೆ ಇದೀಗ ಇಲ್ಲಿ ಭುಗಿಲೆದ್ದ ಹಿಂಸಾಚಾರ ತೀವ್ರ ನೋವುಂಟು ಮಾಡಿದೆʼʼ ಎಂದು ಹೇಳಿದ್ದಾರೆ.

ತೀವ್ರಗೊಂಡ ಪ್ರತಿಭಟನೆ

ಕಳೆದ ವಾರ ಅಮೆರಿಕದ ಕ್ಯಾಂಪಸ್‌ಗಳಲ್ಲಿ ವ್ಯಾಪಕವಾಗಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ನಡೆದವು. ಈ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯವೊಂದರಿಂದಲೇ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಯೇಲ್ ವಿಶ್ವವಿದ್ಯಾಲದಿಂದಲೂ ಅನೇಕರನ್ನು ವಶಕ್ಕೆ ಪಡೆಯಲಾಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದಲೂ ಪ್ರತಿಭಟನಾಕಾರರನ್ನು ಸೆರೆ ಹಿಡಿಯಲಾಗಿದೆ. ಆಸ್ಟಿನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿನ ಪ್ರತಿಭನಾಕಾರರನ್ನು ಬಲವಂತವಾಗಿ ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ಪ್ಯಾಲೆಸ್ತೀನ್‌ ವಿರುದ್ಧ ನಡೆಸುತ್ತಿರುವ ಯುದ್ಧವನ್ನು ಇಸ್ರೇಲ್ ನಿಲ್ಲಿಸಬೇಕು. ಇಸ್ರೇಲ್‌ಗೆ ಅಮೆರಿಕದ ಮಿಲಿಟರಿ ಸಹಾಯವನ್ನು ಕೊನೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಈ ರೀತಿಯ ಪ್ರತಿಭಟನೆಗಳು ಶಿಕ್ಷಣಕ್ಕೆ ಅಡ್ಡಿಪಡಿಸುತ್ತವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ ಅಧ್ಯಕ್ಷ ಜೋ ಬೈಡನ್ ಈ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prakash Raj: ಕಾಶ್ಮೀರವನ್ನು ಪ್ಯಾಲೆಸ್ತೀನ್‌ಗೆ ಹೋಲಿಸಿದ ಪ್ರಕಾಶ್‌ ರಾಜ್;‌ ಕೆಂಡವಾದ ಜನ

“ಜೋ ಬೈಡನ್ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸುತ್ತಾರೆ. ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ತಮ್ಮ ದೃಷ್ಟಿಕೋನಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು ಎನ್ನುವುದು ಅವರ ಅಭಿಪ್ರಾಯ. ಆದರೆ ಅದು ಶಾಂತಿಯುತವಾಗಿರಬೇಕು. ಜತೆಗೆ ಯಹೂದಿ ವಿರೋಧಿ ಮತ್ತು ದ್ವೇಷ ಭಾಷಣವನ್ನು ಅವರು ಖಂಡಿಸುತ್ತಾರೆʼʼ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ತಿಳಿಸಿದ್ದಾರೆ.

Continue Reading

ವಿದೇಶ

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌ ಆಗಿದ್ದು, ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸ್‌ ಅಧಿಕಾರಿಗಳು ಬಲಿಯಾಗಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ

VISTARANEWS.COM


on

America Shootout
Koo

ಶಾರ್ಲೆಟ್‌: ಅಮೆರಿಕದಲ್ಲಿ ಮತ್ತೆ ಶೂಟೌಟ್‌(America Shootout) ಆಗಿದ್ದು, ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸ್‌ ಅಧಿಕಾರಿಗಳು(Police officers) ಬಲಿಯಾಗಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಕೆರೋಲಿನಾ(North Carolina)ದ ಮನೆಯೊಂದಕ್ಕೆ ಬಂದೂಕುಧಾರಿ(ಯೊಬ್ಬ ನುಗ್ಗಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತನನ್ನು ಹಿಡಿಯ ಮುಂದಾದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ಪೊಲೀಸರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಬಗ್ಗೆ ಶಾರ್ಲೆಟ್‌-ಮೆಕ್ಲೆನ್‌ಬರ್ಗ್‌ ಪೊಲೀಸ್‌ ಅಧಿಕಾರಿ ಜಾನಿ ಜೆನ್ನಿಂಗ್ಸ್‌ ಮಾಹಿತಿ ನೀಡಿದ್ದು, ಅಮಾಯಕ ಜನರ ರಕ್ಷಣೆಗೆಂದು ಕೆಲವು ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ದುಷ್ಕರ್ಮಿ ಇದ್ದಕ್ಕಿದ್ದಂತೆ ಗುಂಡು ಹಾರಿಸಲು ಶುರು ಮಾಡಿದ್ದಾನೆ. ದುರಾದೃಷ್ಟವಶಾತ್‌ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಾಣದ ಹಂಗು ತೊರೆದು ಹೋರಾಡಿದ ನಮ್ಮ ನಾಲ್ವರು ಧೀರ ಪೊಲೀಸ್‌ ಅಧಿಕಾರಿಗಳನ್ನು ಕಳೆದುಕೊಂಡಿದ್ದೇವೆ. ಸತತ ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ಮನೆಯೊಳಗೆ ಪೊಲೀಸರಿಗೆ ನುಗ್ಗಲು ಸಾಧ್ಯವಾಗಿತ್ತು. ಮನೆಯ ಹೊರಗೆ ನಿಲ್ಲಿಸಿದ್ದ ಶಸ್ತ್ರ ಸಜ್ಜಿತ ಪೊಲೀಸ್‌ ವಾಹನಗಳು, ಮರ ಗಿಡಗಳು ಸಂಪೂರ್ಣವಾಗಿ ಗುಂಡಿನ ದಾಳಿಗೆ ಧ್ವಂಸಗೊಂಡಿದ್ದವು. ಕೊನೆಗೂ ದುಷ್ಕರ್ಮಿಯನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾದರು ಎಂದು ತಿಳಿಸಿದರು.

ಮನೆಯ ಒಳಗೆ ಪ್ರವೇಶಿಸಿದಾಗ ಮತ್ತೋರ್ವ ದುಷ್ಕರ್ಮಿ ಹಾಗೂ ಮಹಿಳೆ ಮತ್ತು 17 ವರ್ಷದ ಬಾಲಕ ಅಲ್ಲಿದ್ದರು. ದುಷ್ಕರ್ಮಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಅವರ ಹೆಸರು ಬಹಿರಂಗಪಡಿಸಿಲ್ಲ. ಇನ್ನು ಮಹಿಳೆ ಮತ್ತು ಬಾಲಕನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಹುತಾತ್ಮರಾದ ಅಧಿಕಾರಿಗಳ ಕುಟುಂಬಸ್ಥರನ್ನು ಭೇಟಿಯಾಗಿರುವ ಅಲ್ಲಿನ ಗವರ್ನರ್‌ ಸಾಂತ್ವನ ಹೇಳಿದ್ದಾರೆ. ಇನ್ನು ಗಾಯಗೊಂಡಿರುವ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ದುರ್ಘಟನೆಗೆ ಕಾರಣ ಏನು? ದುಷ್ಕರ್ಮಿ ಏಕೆ ಅಲ್ಲಿದ್ದ? ಮಹಿಳೆ ಮತ್ತು ಬಾಲಕ ಏಕೆ ಅಲ್ಲಿದ್ದರು ಹೀಗೆ ಅನೇಕ ಪ್ರಶ್ನೆಗಳಿಗೆ ತನಿಖೆಯಲ್ಲಿ ಉತ್ತರ ಸಿಗಲಿದೆ ಎಂದು ಜೆನ್ನಿಂಗ್‌ ಹೇಳಿದಾರೆ.

ಇದನ್ನೂ ಓದಿ:Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

ಅಮೆರಿಕದಲ್ಲಿ ಕಳೆದ ವರ್ಷವೂ ಒಂದೇ ದಿನ ಮೂರು ಸ್ಥಳಗಳಲ್ಲಿ ಶೂಟೌಟ್‌ ನಡೆದಿತ್ತು ಘಟನೆಯಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದರು. ಫಿಲಡೆಲ್ಫಿಯಾದಲ್ಲಿ ಮೊದಲು ಇಬ್ಬರ ನಡುವೆ ಗಲಾಟೆ-ಜಗಳ ಶುರುವಾಗಿತ್ತು. ಅವರು ಕೆಲವೇ ಹೊತ್ತಲ್ಲಿ ಪರಸ್ಪರ ಗುಂಡು ಹಾರಿಸಿಕೊಳ್ಳಲು ಶುರು ಮಾಡಿದ್ದರು. ಈ ಹೊಡೆದಾಟದಲ್ಲಿ ಅಲ್ಲಿಯೇ ಇದ್ದ ಬಾರ್‌ & ರೆಸ್ಟೋರೆಂಟ್‌ ಮೇಲೆ ಗುಂಡು ಹಾರಿಸಿದ್ದರಿಂದ ಮೂವರು ಮೃತಪಟ್ಟಿದ್ದರು. 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅಮೆರಿಕಾದಲ್ಲಿ ಇತ್ತೀಚೆಗೆ ಪದೇಪದೆ ಗುಂಡಿನ ದಾಳಿಯಾಗುತ್ತಿದೆ. ಇದಕ್ಕೂ ಮುನ್ನ ಟೆಕ್ಸಾಸ್‌ನ ಶಾಲೆಯೊಂದರಲ್ಲಿ ನಡೆದ ಶೂಟೌಟ್‌ನಲ್ಲಿ 19 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕಿಯರು ಮೃತಪಟ್ಟಿದ್ದರು. ಅದಾದ ಮೇಲೆ ಓಕ್ಲಹಾಮಾದ ಆಸ್ಪತ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸರ್ಜನ್‌ ಸೇರಿ ಐವರ ಸಾವಾಗಿತ್ತು. ಅಷ್ಟಕ್ಕೇ ನಿಲ್ಲದೆ, ಮಿಲ್ವಾಕಿಯ ದಕ್ಷಿಣದಲ್ಲಿ ರೇಸಿನ್‌ ಪ್ರದೇಶದ ಸ್ಮಶಾನದಲ್ಲಿ ಮತ್ತು ಮಧ್ಯಪಶ್ಚಿಮ ಭಾಗದಲ್ಲಿರುವ ಅಯೋವಾದಲ್ಲಿನ ಕಾರ್ನರ್‌ ಸ್ಟೋನ್‌ ಚರ್ಚ್‌ನಲ್ಲಿ ಕೂಡ ಶೂಟೌಟ್‌ ಆಗಿತ್ತು.

Continue Reading

ದೇಶ

Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Covishield Vaccine: ಕೋವಿಶೀಲ್ಡ್, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಟ್ಟ ಲಸಿಕೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಅಪರೂಪದ ಸಂದರ್ಭಗಳಲ್ಲಿ ಅದು ಟಿಟಿಎಸ್‌ ಸ್ಥಿತಿಗೆ ಕಾರಣವಾಗಬಹುದು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಈ ಲಸಿಕೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ನೀಡಲಾಗಿದೆ.

VISTARANEWS.COM


on

covishield vaccine
Koo

ಹೊಸದಿಲ್ಲಿ: ಬ್ರಿಟಿಷ್ ಔಷಧೀಯ ದೈತ್ಯ ಕಂಪನಿ ಅಸ್ಟ್ರಾಜೆನೆಕಾ (AstraZeneca), ತನ್ನ ಕೋವಿಡ್-19 (Covid 19) ಲಸಿಕೆ ಕೋವಿಶೀಲ್ಡ್ (Covishield Vaccine)‌ ಇದು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome – TTS) ಎಂಬ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕಂಪನಿಯ ವಿರುದ್ಧ ದಾಖಲಾಗಿರುವ ಒಂದು ಮೊಕದ್ದಮೆಯ ಸಂದರ್ಭದಲ್ಲಿ ಇದನ್ನು ಒಪ್ಪಿಕೊಳ್ಳಲಾಗಿದೆ.

ಈ ಮೊಕದ್ದಮೆಯಲ್ಲಿ ಲಸಿಕೆಗೆ ಸಂಬಂಧಿಸಿ ಗಂಭೀರ ದೈಹಿಕ ಹಾನಿ ಮತ್ತು ಸಾವುಗಳನ್ನು ಆರೋಪಿಸಲಾಗಿದೆ. ಕೋವಿಶೀಲ್ಡ್, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಟ್ಟ ಲಸಿಕೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಅಪರೂಪದ ಸಂದರ್ಭಗಳಲ್ಲಿ ಅದು ಟಿಟಿಎಸ್‌ ಸ್ಥಿತಿಗೆ ಕಾರಣವಾಗಬಹುದು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಈ ಲಸಿಕೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ನೀಡಲಾಗಿದೆ.

ಟಿಟಿಎಸ್ ಎಂದರೇನು?

ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಜೊತೆಗಿನ ಥ್ರಂಬೋಸಿಸ್ ಅಪರೂಪದ ಸ್ಥಿತಿಯಾಗಿದ್ದು, ದೇಹದಲ್ಲಿನ ಅಸಾಮಾನ್ಯ ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗುತ್ತದೆ. ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆಯು ಕಡಿಮೆಯಾಗುತ್ತದೆ. ಪ್ಲೇಟ್‌ಲೆಟ್‌ಗಳು ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಸಣ್ಣ ಕೋಶಗಳು. ಆದ್ದರಿಂದ ಅವು ತುಂಬಾ ಕಡಿಮೆ ಇರುವುದು ಅಪಾಯಕಾರಿ.

ಅಡೆನೊವೈರಲ್ ವೆಕ್ಟರ್ COVID-19 ಲಸಿಕೆಗಳನ್ನು ಪಡೆದ ಜನರಲ್ಲಿ ಈ ಸ್ಥಿತಿಯನ್ನು ಗಮನಿಸಲಾಗಿದೆ. ಉದಾಹರಣೆಗೆ Vaxzevria, Covishield (AstraZeneca) ಮತ್ತು Johnson & Johnson/Janssen COVID-19 ಲಸಿಕೆ ಪಡೆದವರಲ್ಲಿ. ದೇಹದ ರೋಗನಿರೋಧಕ ವ್ಯವಸ್ಥೆಯು ಲಸಿಕೆಗೆ ಪ್ರತಿಕ್ರಿಯಿಸಿ, ರಕ್ತದ ಹೆಪ್ಪುಗಟ್ಟುವಿಕೆಯಲ್ಲಿ ಒಳಗೊಂಡಿರುವ ಪ್ರೋಟೀನ್ ಮೇಲೆ ದಾಳಿ ಮಾಡುವ ಪ್ರತಿಕಾಯಗಳನ್ನು ತಯಾರಿಸುವುದರಿಂದ TTS ಸಂಭವಿಸುತ್ತದೆ.

TTS ಅನ್ನು 2 ಹಂತಗಳಾಗಿ ವರ್ಗೀಕರಿಸಲಾಗಿದೆ.

ಹಂತ 1

  • ಅಪರೂಪದ ರಕ್ತ ಹೆಪ್ಪುಗಟ್ಟುವಿಕೆ, ಮೆದುಳು ಅಥವಾ ಕರುಳಿನಲ್ಲಿ, ಕೆಲವೊಮ್ಮೆ ಕಾಲುಗಳು ಅಥವಾ ಶ್ವಾಸಕೋಶಗಳಲ್ಲಿ.
  • ಕಡಿಮೆ ಪ್ಲೇಟ್ಲೆಟ್ ಎಣಿಕೆ (ಪ್ರತಿ ಮೈಕ್ರೋಲೀಟರ್‌ಗೆ 150,000ಕ್ಕಿಂತ ಕಡಿಮೆ).
  • ಧನಾತ್ಮಕ PF4 ವಿರೋಧಿ ELISA ಪರೀಕ್ಷೆಗಳು ರೋಗನಿರ್ಣಯವನ್ನು ಖಚಿತಪಡಿಸಲು ಸಹಾಯ ಮಾಡುತ್ತದೆ.
  • ಹಂತ 1 ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚು ತೀವ್ರವಾಗಿರುತ್ತವೆ ಮತ್ತು ಅಪಾಯಕಾರಿಯಾಗಿರುತ್ತವೆ.
  • ಇದು ಯುವ ಜನರಲ್ಲಿ ಹೆಚ್ಚು ಸಾಮಾನ್ಯವಾಗಿದೆ.

ಹಂತ 2

  • ಕಾಲುಗಳು ಅಥವಾ ಶ್ವಾಸಕೋಶಗಳಲ್ಲಿರುವಂತೆ ಸಾಮಾನ್ಯ ರಕ್ತ ಹೆಪ್ಪುಗಟ್ಟುವಿಕೆ.
  • ಕಡಿಮೆ ಪ್ಲೇಟ್ಲೆಟ್ ಎಣಿಕೆ (ಪ್ರತಿ ಮೈಕ್ರೋಲೀಟರ್‌ಗೆ 150,000ಕ್ಕಿಂತ ಕಡಿಮೆ).
  • ರೋಗನಿರ್ಣಯಕ್ಕೆ ಧನಾತ್ಮಕ PF4 ELISA ಪರೀಕ್ಷೆ ಅಗತ್ಯ.

ರೋಗಲಕ್ಷಣಗಳು

TTSನ ಲಕ್ಷಣಗಳು ತೀವ್ರವಾದ ತಲೆನೋವು, ಹೊಟ್ಟೆ ನೋವು, ಕಾಲುಗಳಲ್ಲಿ ಊತ, ಉಸಿರಾಟದ ತೊಂದರೆ, ಚಿಂತನೆಯಲ್ಲಿ ಸಮಸ್ಯೆ, ದೇಹದ ಕಂಪನಗಳು. ಲಸಿಕೆ ಪಡೆದ ನಂತರ ಯಾರಲ್ಲಾದರೂ ಈ ಚಿಹ್ನೆಗಳು ಕಂಡುಬಂದರೆ ಅವರು ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

Continue Reading
Advertisement
Kaladarpana-Art Reflects
ಬೆಂಗಳೂರು41 mins ago

Kaladarpana-Art Reflects: ಬೆಂಗಳೂರಿನಲ್ಲಿ ಮೇ 5ರಂದು ಪ್ರತಿಭಾ ವೇದಿಕೆ ಸೀಜನ್‌-4 ಪ್ರಶಸ್ತಿ ಪ್ರದಾನ, ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

Covishield Vaccine
ಪ್ರಮುಖ ಸುದ್ದಿ58 mins ago

ವಿಸ್ತಾರ ಸಂಪಾದಕೀಯ: ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮ ಆತಂಕಕಾರಿ

Narendra modi
ಪ್ರಮುಖ ಸುದ್ದಿ1 hour ago

Narendra Modi : ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದ ಮೀಸಲಾತಿ ಇಲ್ಲ ಎಂದ ಮೋದಿ

DK Shivakumar
ಪ್ರಮುಖ ಸುದ್ದಿ1 hour ago

DK Shivakumar: ಅಶ್ಲೀಲ ಚಿತ್ರಕ್ಕೆ ಡಿಕೆಶಿ ಫೋಟೊ ಮಾರ್ಫಿಂಗ್ ಆರೋಪ; ಮೂವರ ವಿರುದ್ಧ ಎಫ್‌ಐಆರ್‌

IPL 2024
Latest1 hour ago

IPL 2024 : ‘ಆಲ್​ರೌಂಡರ್​’ ಪಾಂಡ್ಯ ನೇತೃತ್ವದ ಮುಂಬೈ ತಂಡವನ್ನು ಸೋಲಿಸಿದ ರಾಹುಲ್ ನಾಯಕತ್ವದ ಲಕ್ನೊ

Union Minister Pralhad Joshi election campaign in Shiggavi
ಧಾರವಾಡ2 hours ago

Lok Sabha Election 2024: ಈ ಲೋಕಸಭಾ ಚುನಾವಣೆ ಭಾರತದ ಸುವರ್ಣ ಯುಗಕ್ಕೆ ನಾಂದಿ: ಪ್ರಲ್ಹಾದ್‌ ಜೋಶಿ

Lok Sabha Election 2024 Bike rally for voting awareness in Hosapete
ವಿಜಯನಗರ2 hours ago

Lok Sabha Election 2024: ಹೊಸಪೇಟೆಯಲ್ಲಿ ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ

BJP National President JP Nadda Election Campaign for Haveri Gadag Lok Sabha Constituency BJP Candidate Basavaraj Bommai
ಕರ್ನಾಟಕ2 hours ago

Lok Sabha Election 2024: ಮೋದಿಯವರ ವಿಕಸಿತ ಭಾರತ ಸಾಕಾರಗೊಳಿಸಲು ಬೊಮ್ಮಾಯಿಯವರನ್ನು ಗೆಲ್ಲಿಸಿ: ಜೆಪಿ ನಡ್ಡಾ

2nd PUC Paper Leak
ಕರ್ನಾಟಕ2 hours ago

2nd PUC Paper Leak: ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ವಜಾಗೊಂಡಿದ್ದ ಎಸ್‌ಡಿಎ ಮರು ನೇಮಕ!

Lok Sabha Election
Lok Sabha Election 20242 hours ago

Lok Sabha Election: ಕಳೆದ ಬಾರಿಗೆ ಹೋಲಿಸಿದರೆ ಮೊದಲೆರಡು ಹಂತಗಳ ಮತದಾನದ ಪ್ರಮಾಣದಲ್ಲಿ ಕುಸಿತ; ಇಲ್ಲಿದೆ ಅಂಕಿ-ಅಂಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ20 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌