JDS Politics: ಹಾಸನ ಟಿಕೆಟ್‌ ಗೊಂದಲ ಇನ್ನೊಂದು ವಾರಕ್ಕೆ ಶಿಫ್ಟ್‌; ರೇವಣ್ಣರನ್ನು ರಾವಣನಿಗೆ ಹೋಲಿಸಿದ ಎಟಿಆರ್‌ - Vistara News

ಕರ್ನಾಟಕ

JDS Politics: ಹಾಸನ ಟಿಕೆಟ್‌ ಗೊಂದಲ ಇನ್ನೊಂದು ವಾರಕ್ಕೆ ಶಿಫ್ಟ್‌; ರೇವಣ್ಣರನ್ನು ರಾವಣನಿಗೆ ಹೋಲಿಸಿದ ಎಟಿಆರ್‌

JDS Politics: ಹಾಸನ ಟಿಕೆಟ್‌ ಗೊಂದಲ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌.ಡಿ.ರೇವಣ್ಣ ಕುಟುಂಬಸ್ಥರು, ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರಿ ಕುತೂಹಲಕ್ಕೆ ಕಾರಣವಾಗಿರುವ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಘೋಷಣೆ ಮತ್ತೆ ಮುಂದಕ್ಕೆ ಹೋಗಿದೆ. ಶನಿವಾರ (ಫೆ. 18) ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಹೇಳಲಾಗಿತ್ತಾದರೂ ಇನ್ನು ಒಂದು ವಾರದಲ್ಲಿ ಅಂತಿಮಗೊಳಸಿವುದಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ನಡುವೆ ಈಗಾಗಲೇ ಜೆಡಿಎಸ್‌ನಿಂದ ಕಾಲು ಹೊರಗಿಟ್ಟಿರುವ ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ಅವರು ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ರಾವಣನಿಗೆ ಹೋಲಿಕೆ ಮಾಡಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಚುನಾವಣಾ ಅಖಾಡ ದಿನೇದಿನೆ ರಂಗುಪಡೆದುಕೊಳ್ಳುತ್ತಿದೆ. ಅಲ್ಲದೆ, ಚುನಾವಣೆ ದಿನಾಂಕ ಪ್ರಕಟಕ್ಕೂ ಮುನ್ನವೇ ಜೆಡಿಎಸ್‌ ರಾಜ್ಯದ 120 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿತ್ತು. ಆದರೆ, ಹಾಸನ ಭಾಗದಲ್ಲಿ ಮಾತ್ರ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್.ಡಿ. ಕುಮಾರಸ್ವಾಮಿ ಯಾವುದೇ ಅಭ್ಯರ್ಥಿಯ ಪಟ್ಟಿಯನ್ನು ಪ್ರಕಟಪಡಿಸಿರಲಿಲ್ಲ. ಅಲ್ಲದೆ, ಈ ಭಾಗದಲ್ಲಿ ಸಹೋದರ ಎಚ್.ಡಿ. ರೇವಣ್ಣ ಅವರ ಪ್ರಾಬಲ್ಯವೂ ಹೆಚ್ಚಿರುವುದರಿಂದ ಅವರ ಅಭಿಪ್ರಾಯಕ್ಕೂ ಮನ್ನಣೆ ಕೊಡುವ ಉದ್ದೇಶವನ್ನು ಹೊಂದಲಾಗಿತ್ತು. ಈ ನಡುವೆ ಹಾಸನ ಕ್ಷೇತ್ರಕ್ಕೆ ಭವಾನಿ ರೇವಣ್ಣ ಅಭ್ಯರ್ಥಿಯಾಗುವ ಇಂಗಿತ ವ್ಯಕ್ತಪಡಿಸಿದ್ದು, ಆ ಪಕ್ಷದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿತ್ತು.

ಭವಾನಿ ಪರವಾಗಿ ಅವರ ಮಕ್ಕಳಾದ ಪ್ರಜ್ವಲ್‌ ರೇವಣ್ಣ ಹಾಗೂ ಸೂರಜ್‌ ರೇವಣ್ಣ ಸಹ ಬ್ಯಾಟ್‌ ಬೀಸಿದ್ದರು. ಇದರ ಜತೆಗೆ ಭವಾನಿ ಸಹ ಕ್ಷೇತ್ರ ಸಂಚಾರವನ್ನು ಕೈಗೊಂಡಿದ್ದರು. ಎಲ್ಲ ಬೆಳವಣಿಗೆ ಮಧ್ಯೆ ಪಕ್ಷದ ವರಿಷ್ಠ ದೇವೇಗೌಡರು ಎಲ್ಲರಿಗೂ ತಾಳ್ಮೆ ವಹಿಸಲು ಸೂಚನೆ ಕೊಟ್ಟಿದ್ದರು. ಆ ನಡುವೆಯೂ ಮೊಮ್ಮಕ್ಕಳಾದ ಪ್ರಜ್ವಲ್‌ ಹಾಗೂ ಸೂರಜ್‌ ಆಗಾಗ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಾಲಿಗೆ ಈ ಕ್ಷೇತ್ರ ಸ್ವಲ್ಪ ಕಗ್ಗಂಟಾಗಿಯೇ ಉಳಿದುಕೊಂಡಿದೆ. ಈ ನಡುವೆ ಮಾಜಿ ಶಾಸಕ ಎಚ್.ಎಸ್.‌ ಪ್ರಕಾಶ್‌ ಪುತ್ರ ಸ್ವರೂಪ್‌ ಸಹ ಸ್ಪರ್ಧಾಕಾಂಕ್ಷಿಯಾಗಿದ್ದು, ಅವರಿಗೇ ಟಿಕೆಟ್‌ ಕೊಡುವ ಬಗ್ಗೆ ಎಚ್‌ಡಿಕೆ ಒಲವು ತೋರಿದ್ದರು. ಇದೂ ಕೂಡ ಜಟಾಪಟಿಗೆ ಕಾರಣವಾಗಿದೆ. ಈಗ ಶನಿವಾರವೂ (ಫೆ. 18) ಈ ಕ್ಷೇತ್ರದ ಟಿಕೆಟ್‌ ಫೈನಲ್‌ ಮಾಡಲು ಆಗಲಿಲ್ಲ. ಹೀಗಾಗಿ ಇನ್ನೊಂದು ವಾರದಲ್ಲಿ 2ನೇ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ಎಚ್‌ಡಿಕೆ ಹೇಳಿದ್ದಾರೆ.

ಟಿಕೆಟ್‌ ಗೊಂದಲ ಬಗೆಹರಿಸುತ್ತೇವೆ ಎಂದ ಎಚ್‌ಡಿಕೆ

ಹಾಸನ ಟಿಕೆಟ್ ವಿಚಾರಕ್ಕೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಯಾವುದೇ ಗೊಂದಲ ಇಲ್ಲದೆ ಟಿಕೆಟ್‌ ವಿಚಾರ ಬಗೆಹರಿಸುತ್ತೇವೆ. ಯಾರೂ ತಲೆ ಕೆಡಿಸಿಕೊಳ್ಳೋದು ಬೇಡ. ಸುಲಭವಾಗಿ ಟಿಕೆಟ್‌ ಸಮಸ್ಯೆ ಬಗೆಹರಿಯಲಿದೆ. ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಇನ್ನೊಂದು ವಾರದಲ್ಲಿ ಸರಿ ಹೋಗಲಿದೆ. ಪಟ್ಟಿಯಲ್ಲಿ ಯಾವುದೇ ಗೊಂದಲ ಇಲ್ಲ. ದೇವೇಗೌಡರ ಅನುಮತಿ ಪಡೆದು ಪಟ್ಟಿ ಬಿಡುಗಡೆ ಮಾಡಲಿದ್ದೇವೆ. ಕಾಂಗ್ರೆಸ್, ಬಿಜೆಪಿ ಪಟ್ಟಿ ಬಿಡುಗಡೆ ಆಗುವುದರೊಳಗೆ ನಮ್ಮ ಪಟ್ಟಿ ಬಿಡುಗಡೆ ಆಗುತ್ತದೆ. ಹಾಸನದ ಟಿಕೆಟ್ ಕೂಡ ಘೋಷಣೆ ಆಗಲಿದೆ ಎಂದು ತಿಳಿಸಿದ್ದಾರೆ.

ಎಚ್.ಡಿ.ರೇವಣ್ಣರನ್ನು ರಾವಣನಿಗೆ ಹೋಲಿಕೆ ಮಾಡಿದ ಶಾಸಕ ಎ.ಟಿ.ರಾಮಸ್ವಾಮಿ

ಹಾಸನ: ರಾವಣನಿಗೆ ಸಕಲ ಐಶ್ವರ್ಯ ಇತ್ತು, ಈಶ್ವರನಿಂದ ಪಡೆದಂತಹ ಶಕ್ತಿಶಾಲಿ ಅಸ್ತ್ರಗಳಿದ್ದವು. ಆದರೆ ಅವನು ನಾಶವಾದ, ಲಂಕೆಯೂ ಕೂಡ ಬೂದಿ ಆಗಲಿಲ್ಲವೇ? ಯಾವುದೇ ವಿಷಯಕ್ಕೂ ಆದಿ, ಅಂತ್ಯ ಇರುತ್ತದೆ. ಹುಟ್ಟಿದ ಮೇಲೆ ಸಾಯುವುದು ನಿಶ್ಚಿತ, ನನ್ನಂತಹವನಿಗೆ ಹೀಗೆ ಮಾಡಿದ್ದಾರೆ ನಿಮ್ಮನ್ನು ಬಿಡುತ್ತಾರಾ ಎಂದು ಕಾರ್ಯಕರ್ತರಿಗೆ ಹೇಳುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರನ್ನು (JDS Politics) ಪರೋಕ್ಷವಾಗಿ ರಾವಣನಿಗೆ ಹೋಲಿಕೆ ಮಾಡಿ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಹೊಳ ನರಸೀಪುರ ತಾಲೂಕಿನ ಜೋಗಿಕೊಪ್ಪಲು ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ವಾಗ್ದಾಳಿ ಮಾತನಾಡಿದ ಅವರು, ನೀವೆಲ್ಲಾ ಸ್ವಾಭಿಮಾನಿಗಳಾಗಿ, ಆತ್ಮಗೌರವದಿಂದ ನಿಂತುಕೊಳ್ಳಿ. ಕೈಕಟ್ಟಿ ನಿಲ್ಲಬೇಡಿ, ಜತೆಯಲ್ಲಿ ಕುಳಿತುಕೊಳ್ಳುವ ಸ್ಥಾನಮಾನ ಎಲ್ಲಿ ಇರುತ್ತದೆಯೋ ಅಲ್ಲಿಗೆ ಹೋಗಿ. ಕೈಕಟ್ಟಿ ನಿಂತುಕೊಳ್ಳುವ ಕಡೆಗೆ ಹೋಗಬೇಡಿ, ಕೈ ಕಟ್ಟಿ ನಿಲ್ಲಬೇಡಿ. ಅವರಿಗೆ ಒಳ್ಳೆಯವರು ಬೇಕಾಗಿಲ್ಲ, ಕೆಲವು ಜನ ಸ್ವಾರ್ಥಕ್ಕೆ ಏನು ಬೇಕಾದರೂ ಮಾಡಲು ತಯಾರಾಗಿದ್ದಾರೆ ಎಂದು ಕಿಡಿ ಕಾರಿದರು.

ಇದನ್ನೂ ಓದಿ | PM Modi: ಮೋದಿ ಜತೆಯೇ ಕೆಲಸ ಮಾಡುವೆ; ನಾನು ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಪ್ರಲ್ಹಾದ್‌ ಜೋಶಿ

ಕೆಲವರು ಸತ್ಯವನ್ನೇ ಸಾಯಿಸುತ್ತಾರೆ. ಆದರೆ, ಅದನ್ನು ಎದುರಿಸುವ ಶಕ್ತಿ ಜನ ನನಗೆ ಕೊಟ್ಟಿದ್ದಾರೆ. ರಾಜಕೀಯದಿಂದ ಹಿಮ್ಮುಖವಾಗುವ ಸಂದರ್ಭ ಇಲ್ಲವೇ ಇಲ್ಲ ಎಂದ ಅವರು, ನಾನು ಸ್ಪರ್ಧೆ ಮಾಡುವುದು ಖಚಿತ. ಪ್ರಧಾನಮಂತ್ರಿಯಾಗಿದ್ದ, ದೊಡ್ಡ ಹುದ್ದೆಯಲ್ಲಿದ್ದ ದೇವೇಗೌಡ ಅಂತಹವರನ್ನೇ ಮನೆಯಿಂದ, ಜಿಲ್ಲೆಯಿಂದ ಹೊರಗೆ ಹಾಕಿದಂತಹ ಜನ ನನ್ನನ್ನು ಬಿಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ದೇವೇಗೌಡರನ್ನು ಉತ್ಸವಮೂರ್ತಿ ಮಾಡಿಕೊಂಡಿದ್ದಾರೆ

ದೇವೇಗೌಡರು ಲೋಕಸಭಾ ಚುನಾವಣೆಗೆ ನಿಂತುಕೊಳ್ಳಲ್ಲ ಎಂದಿದ್ದರೆ ಅದು ಎರಡನೇ ಮಾತು, ಬೇರೆಯವರು ನಿಂತುಕೊಳ್ಳಬಹುದು. ಆದರೆ, ಅವರನ್ನು ಜಿಲ್ಲೆಯಿಂದ ಹೊರಗೆ ಹಾಕಿ ತುಮಕೂರಿಗೆ ಕಳುಹಿಸಿ ಸೋಲಿಸಿದರು. ಇದನ್ನು ರಾಜಕೀಯ ಇತಿಹಾಸದಲ್ಲಿ ಯಾರು ಕೂಡ ಮರೆಯಬಾರದು, ಮರೆಯುವಂತಹದ್ದಲ್ಲ. ದೇವೇಗೌಡರನ್ನು ಇವರೆಲ್ಲ ಉತ್ಸವಮೂರ್ತಿ ಮಾಡಿಕೊಂಡಿದ್ದಾರೆ. ಅಂತಹ ಮುತ್ಸದ್ದಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿದ್ದಾರೆ. ಅವರ ಮಾತಿಗೆ ಕಿಮ್ಮತ್ತು ಕೊಡುತ್ತಿಲ್ಲ ಎಂದು ಆರೋಪಿಸಿದರು.

ಪ್ರಜ್ವಲ್ ರೇವಣ್ಣ ಆಸ್ತಿ ಘೋಷಣೆ ಸರಿಯಾಗಿ ಮಾಡಿಲ್ಲ. ಈ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿತ್ತು. ಶಿಕ್ಷೆ ಆಗುವ ಸಂದರ್ಭ ಬಂದಿತ್ತು. ಆ ಕೇಸ್‌ನ್ನು ರಾಜಿ ಮಾಡಿಕೊಳ್ಳಲು ಸ್ವಾರ್ಥಕ್ಕಾಗಿ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ ಎಂದು ಟೀಕಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Prajwal Revanna Case: ಕೆ.ಆರ್.ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿತ್ತು. ಹೀಗಾಗಿ ಅವರು ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಳೆಗೆ ವಿಚಾರಣೆ ಮುಂದೂಡಿದೆ.

ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಸೋಮವಾರ ಪ್ರತ್ಯಕ್ಷವಾದ ಬೆನ್ನಲ್ಲೇ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿ ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಧೀಶರು ನೋಟೀಸ್ ನೀಡಿದ್ದರು. ಭವಾನಿ ರೇವಣ್ಣ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಮತ್ತೊಂದೆಡೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಇದನ್ನೂ ಓದಿ | Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಈ ಪ್ರಕರಣದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಅರ್ಹವಾಗಿದೆ. ಅಕ್ಷೇಪಣೆ ಸಲ್ಲಿಸುವವರೆಗೂ ಬಂಧನದಿಂದ ರಕ್ಷಣೆ ನೀಡಬೇಕು. ಇವತ್ತು ಬಂಧನ ಮಾಡಿದರೆ ಏನು ಮಾಡಲು ಆಗುತ್ತೆ. ಹೀಗಾಗಿ ನನ್ನ ಕಕ್ಷಿದಾರರಿಗೆ ಕಾನೂನು ರಕ್ಷಣೆ ಕೊಡಬೇಕು ಎಂದು ಭವಾನಿ ಪರ ವಕೀಲರು ಮನವಿ ಮಾಡಿದ್ದಾರೆ. ಇನ್ನು ಪ್ರಕರಣದಲ್ಲಿ ದಿನೇ ದಿನೇ ಆರೋಪಿಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. ಕೆಎಂಎಫ್ ಮಾಜಿ ಅಧ್ಯಕ್ಷರನ್ನು ಈ ಪ್ರಕರಣದಲ್ಲಿ 7ನೇ ಆರೋಪಿಯನ್ನಾಗಿ‌ ಸೇರಿಸಿದ್ದಾರೆ ಎಂದು ತಿಳಿಸಿದ್ದಾರೆ. ವಾದ-ಪ್ರತಿ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.

4 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಜೂ.3ಕ್ಕೆ ವಿಚಾರಣೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

ನಾಲ್ವರು ಆರೋಪಿಗಳ ಪೈಕಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಗೆಂದು ಮಂಗಳವಾರ ಹೈಕೋರ್ಟ್‌ಗೆ ಬಂದಿದ್ದ ಚೇತನ್‌ ಹಾಗೂ ನವೀನ್‌ಗೌಡನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕೋರ್ಟ್‌ಗೆ ಹಾಜರುಪಡಿಸಲು ಹಾಸನಕ್ಕೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | Gurmeet Ram Rahim: 22ವರ್ಷಗಳ ಹಳೆಯ ಕೊಲೆ ಕೇಸ್‌; ಗುರ್ಮೀತ್ ರಾಮ್​ ರಹೀಮ್​ ಖುಲಾಸೆ

ಹೈಕೋರ್ಟ್ ನ್ಯಾ. ಎಂ.ಜಿ. ಉಮಾ ಅವರಿದ್ದ ಪೀಠದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು,
ಎಸ್ಐಟಿ ಅಧಿಕಾರಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಜೂನ್ 3ಕ್ಕೆ ನ್ಯಾಯಾಧೀಶೆ ಮುಂದೂಡಿದ್ದಾರೆ.

Continue Reading

ದಕ್ಷಿಣ ಕನ್ನಡ

Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

Assault Case : ಅನುಮತಿಯಿಲ್ಲದೇ ಕೊಳವೆ ಬಾವಿ ಕೊರೆಯಲಾಗುತ್ತಿದೆ ಎಂದು ರೊಚ್ಚಿ ಗೆದ್ದ ಸ್ಥಳೀಯರು ಸಂಸ್ಥೆಯೊಂದರ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಪ್ರಕರಣ ಸಂಬಂಧ ಪರಸ್ಪರ ದೂರು ಪ್ರತಿ ದೂರು ದಾಖಲಿಸಿದ್ದಾರೆ.

VISTARANEWS.COM


on

By

assault case
Koo

ಮಂಗಳೂರು: ಬೋರ್‌ವೆಲ್ ಕೊರೆಯುತ್ತಿದ್ದ (Assault Case) ಲಾರಿ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಪ್ರಸಿದ್ಧ ಬಿಂದು ನೀರಿನ ಫ್ಯಾಕ್ಟರಿ ಪುರುಷರಕಟ್ಟೆ ಎಂಬಲ್ಲಿ ಕಾರ್ಯಾಚರಿಸುತ್ತಿದೆ. ಈ ಫ್ಯಾಕ್ಟರಿಗೆ ಸೇರಿದ ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುತ್ತಿದ್ದ ಸಂದರ್ಭದಲ್ಲಿ ಅನ್ಯಕೋಮಿನ ಸಂಘಟನೆಗೆ ಸೇರಿದ ಗುಂಪಿನಿಂದ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಕಲ್ಲು ತೂರಾಟದಲ್ಲಿ ಸಣ್ಣ ಮಕ್ಕಳು ಕೂಡ ಭಾಗಿಯಾಗಿರುವ ವಿಡಿಯೋವೊಂದು ವೈರಲ್‌ ಆಗಿದೆ.

ಅನ್ಯಕೋಮಿನಿಂದ ಕಲ್ಲು ತೂರಾಟದ ಬಳಿಕ ಎರಡೂ ಕಡೆಯಿಂದಲೂ ಪರಸ್ಪರ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ. ಬೋರ್‌ವೆಲ್‌ಗಳನ್ನು ಫ್ಲಶ್ ಮಾಡುವ ಬದಲು ಹೊಸ ಬೋರ್‌ವೆಲ್ ಕೊರೆಯಲಾಗುತ್ತಿದೆ ಎಂದು ಆರೋಪಿಸಿ ಕಲ್ಲು ತೂರಾಟ ನಡೆಸಲಾಗಿದೆ. ಸದ್ಯ ಎರಡೂ ಗುಂಪುಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದೆ.

ದೂರಿನಲ್ಲಿ ಏನಿದೆ?

ನರಿಮೊಗರು ಗ್ರಾಮದ ಮೇಘಾ ಫ್ರುಟ್‌ ಪ್ರೊಸೆಸಿಂಗ್‌ ಪ್ರೈ ಲಿ. ನಲ್ಲಿ ಅನುಮತಿ ಇಲ್ಲದೇ ಕೊಳವೆ ಬಾವಿ ಶುದ್ದೀಕರಿಸಲಾಗುತ್ತಿತ್ತು. ಈ ವಿಚಾರ ತಿಳಿದ ಸ್ಥಳೀಯರು ಸಂಸ್ಥೆಯ ಒಳಗೆ ಹೋಗಿ ಗ್ರಾಮ ಪಂಚಾಯತ್ ಅಧಿಕಾರಿ ಬಂದ ಬಳಿಕ ಕೆಲಸ ಮುಂದುವರೆಸುವಂತೆ ತಿಳಿಸಿದ್ದಾರೆ. ಆದರೆ ಸಂಸ್ಥೆಯವರು ಕೊಳವೆ ಬಾವಿಯ ಶುದ್ಧೀಕರಣ ಕೆಲಸವನ್ನು ಮುಂದುವರೆಸಿದ್ದಾರೆ. ಹೀಗಾಗಿ ಕೂಡಲೇ ಗ್ರಾ.ಪಂ ಅಧಿಕಾರಿ ರವಿಚಂದ್ರರವರಿಗೆ ಕರೆ ಮಾಡಿ ವಿಚಾರವನ್ನು ತಿಳಿಸಿದ್ದಾರೆ.

ಇತ್ತ ಸಂಸ್ಥೆಯ ಒಳಗಡೆ ನಡೆಯುತ್ತಿರುವುದನ್ನು ವಿಡಿಯೋ ಮಾಡಲು ಪ್ರಯತ್ನಿಸುತ್ತಿದ್ದಾಗ ಕೆಲಸಗಾರರೊಬ್ಬರು ಅವಾಚ್ಯ ಶಬ್ಧಗಳಿಂದ ಬೈದು ಜೀವ ಬೆದರಿಕೆಯನ್ನು ಹಾಕಿದ್ದರಂತೆ. ಮಾತ್ರವಲ್ಲದೆ ಕೆಲವರು ಒಳಗಿನಿಂದ ಸ್ಥಳೀಯರ ಮೇಲೆ ಕಲ್ಲು ಬಿಸಾಡಿದ್ದರಿಂದ ಗಾಯಗೊಂಡಿದ್ದಾರೆ. ಕೆಲಸ ನಿರ್ವಹಿಸುವ ಸಂಸ್ಥೆಯಲ್ಲಿ ಹೊಸ ಕೊಳವೆ ಬಾವಿಯನ್ನು ಅನುಮತಿಯಿಲ್ಲದೇ ನಿರ್ಮಾಣ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದಕ್ಕೆ ಈ ಕೃತ್ಯವನ್ನು ಎಸಗಿದ್ದಾರೆ ದೂರು ನೀಡಿದ್ದಾರೆ.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಸಂಸ್ಥೆಯವರು ಹೇಳೋದು ಏನು?

ಮೇಘಾ ಫ್ರುಟ್‌ ಪ್ರೊಸೆಸಿಂಗ್‌ ಪ್ರೈ ಲಿ. ನಲ್ಲಿ ಮೆನೇಜರ್‌ ಆಗಿರುವ ಲಕ್ಷ್ಮಿನಾರಾಯಣ ಎಂಬುವವರು ಪ್ರತಿದೂರು ನೀಡಿದ್ದಾರೆ. ಆ ಪ್ರಕಾರ ಸಂಸ್ಥೆಯ ಕೊಳವೆ ಬಾವಿ ಶುದ್ದೀಕರಿಸುವ ಬಗ್ಗೆ ಭೂ ವಿಜ್ಞಾನ ಇಲಾಖೆ ಮತ್ತು ಗ್ರಾಮ ಪಂಚಾಯತ್‌ನಿಂದ ಅನುಮತಿ ಪಡೆದು ಕೊಂಡಿದ್ದೇವೆ. ಮೇ 27ರ ಸಂಜೆ ಸಂಸ್ಥೆಯ ಆವರಣದಲ್ಲಿ ಕೊಳವೆ ಬಾವಿ ಶುದ್ದೀಕರಿಸುವ ಸಮಯ ಸ್ಥಳೀಯ ನಿವಾಸಿಗಳಾಸ ಸಲೀಂ ಮತ್ತು ಇತರರು ಸೇರಿಕೊಂಡು ಸಂಸ್ಥೆಯ ಆವರಣದ ಒಳಗೆ ಅಕ್ರಮ ಪ್ರವೇಶ ಮಾಡಿದ್ದಾರೆ.

ಬೋರ್‌ವೆಲ್‌ ಲಾರಿ ಹಾಗೂ ಅದರಲ್ಲಿದ್ದ ಕಾರ್ಮಿಕರ ಮೇಲೆ ಕಲ್ಲು ಬಿಸಾಡಿದ್ದಾರೆ. ಇದರಿಂದ ಕಾರ್ಮಿಕರಾದ ಸಾಂಗ್‌ಲಾಲ್‌ ಮತ್ತು ಶೇಖರ್‌ ಎಂಬವರಿಗೆ ಗಾಯವಾಗಿದೆ. ಲಾರಿಗೆ ಕಲ್ಲು ಬಿದ್ದು ಲಾರಿಯ ಗಾಜು ಪುಡಿಯಾಗಿದೆ. ಇದರಿಂದ ಸುಮಾರು ರೂ 10,000 ರೂ. ನಷ್ಟ ಉಂಟಾಗಿದೆ ಎಂದು ದೂರು ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Namaz: ಸಾರ್ವಜನಿಕ ನಮಾಜ್‌ ನಿಲ್ಲಿಸದಿದ್ದರೆ ಹನುಮಾನ್‌ ಚಾಲೀಸಾ ಪಠನ: ವಿಹಿಂಪ ಎಚ್ಚರಿಕೆ

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ (Namaz) ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿದೆ.‌

VISTARANEWS.COM


on

namaz in road mangalore
Koo

ಮಂಗಳೂರು: ಮಂಗಳೂರಿನ ಕಂಕನಾಡಿ ಬಳಿ ರಸ್ತೆಯಲ್ಲೇ ನಮಾಜ್ (Namaz in road) ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಶ್ವ ಹಿಂದೂ ಪರಿಷತ್ತು (Vishwa Hindu Parishad) ಆಕ್ಷೇಪ ವ್ಯಕ್ತಪಡಿಸಿದ್ದು, ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ನಿಲ್ಲಿಸದಿದ್ದರೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ (Hanuman Chalisa) ಪಠಿಸಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.

ಮೊನ್ನೆ ಶುಕ್ರವಾರ ಮಂಗಳೂರಿನ ಕಂಕನಾಡಿಯಲ್ಲಿ ಮಸೀದಿ ಮುಂಭಾಗ ಇರುವ ರಸ್ತೆಯಲ್ಲೇ ನಮಾಜ್ ಮಾಡಲಾಗಿತ್ತು. ರಸ್ತೆಯಲ್ಲಿ ನಡೆದ ನಮಾಜ್ ವೀಡಿಯೋ ವೈರಲ್ ಆಗಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳು ನಮಾಜ್ ಗಮನಿಸಿ ಯೂಟರ್ನ್ ಮಾಡಿಕೊಂಡಿದ್ದವು. ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಬೆಳವಣಿಗೆ ಬಗ್ಗೆ ವಿಹಿಂಪ ಆಕ್ಷೇಪಿಸಿದೆ.‌

“ಕೆಲವು ಕಡೆ ರಸ್ತೆ ಮತ್ತು ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡುತ್ತಿರುವ ಘಟನೆಗಳು ನಡೆಯುತ್ತಿರುವುದು ಜಿಲ್ಲೆಯಲ್ಲಿ ಅಶಾಂತಿ ನಿರ್ಮಿಸಲು ಸಂಚು ರೂಪಿಸುತ್ತಿದ್ದಾರೆ. ತಕ್ಷಣ ಜಿಲ್ಲಾಡಳಿತ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸಿದರೆ ಅದೇ ಸ್ಥಳದಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮಾಡುವುದರ ಮೂಲಕ ತಡೆಯುತ್ತೇವೆ ಎಂಬ ಎಚ್ಚರಿಕೆ ಕೊಡುತ್ತೇವೆ” ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಪಾಕಿಸ್ತಾನವಲ್ಲ, ಹಿಂದೂಸ್ತಾನ: ಈಶ್ವರಪ್ಪ

“ರಸ್ತೆಯಲ್ಲಿ ನಮಾಜ್‌ ಮಾಡಲು, ಮುಸಲ್ಮಾನರು ಏನು ಬೇಕಾದರೂ ಮಾಡಬಹುದು ಎನ್ನಲು ಇದು ಪಾಕಿಸ್ತಾನ ಅಲ್ಲ, ಹಿಂದೂಸ್ತಾನ” ಎಂದು ಕೆ.ಎಸ್‌ ಈಶ್ವರಪ್ಪ ಗುಡುಗಿದ್ದಾರೆ. “ಮಂಗಳೂರು ಪಾಕಿಸ್ತಾನದ ಜಿಲ್ಲೆಯಲ್ಲ. ಮಂಗಳೂರು ಹಿಂದುತ್ವ ವೀರರ ಭೂಮಿ. ಇಲ್ಲಿ ರಸ್ತೆಯಲ್ಲಿ ನಮಾಜ್ ಮಾಡಲು ದುಷ್ಟ ಶಕ್ತಿಗಳು ಯಶಸ್ವಿಯಾಗಿದ್ದು ನೋವಾಗಿದೆ. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಸರಕಾರ ಸತ್ತಿದೆಯೋ ಬದುಕಿದೆಯೋ ಗೊತ್ತಾಗ್ತಿಲ್ಲ. ಒಬ್ಬ ಇದು ನಮ್ಮ ಸರ್ಕಾರ ಟಿಪ್ಪು ಸುಲ್ತಾನ್ ರಾಜ್ಯ ಅಂತಾನೆ. ಬಿಟ್ಟರೆ ಸಿಎಂ, ಗೃಹ ಸಚಿವರು, ಹಿಂದುಗಳ ಮನೆಗೆ ಬಂದು ನಮಾಜ್ ಮಾಡುತ್ತಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಮ್ಮ ಮನೆಯಲ್ಲಿ ನಜಾಮ್ ಮಾಡಿಸಿ ಬೇಡ ಅನ್ನಲ್ಲ. ಎಲ್ಲ ಮುಸ್ಲಿಮರನ್ನು ಟೀಕೆ ಮಾಡುತ್ತಿಲ್ಲ, ಅರ್ಥ ಮಾಡಿಕೊಳ್ಳಿ. ಇವರು ಯಾರೋ ರಾಷ್ಟ್ರದ್ರೋಹಿಗಳು ಮಾಡುತ್ತಿರುವ ಕುತಂತ್ರ. ಇಂತಹವರನ್ನು ಒಳಗೆ ಹಾಕಿದರೆ ಇತರ ಮುಸ್ಲಿಮರಿಗೂ ಸಂತೋಷ ಆಗುತ್ತದೆ. ಮುಸ್ಲಿಂ ಸಮುದಾಯಕ್ಕೆ ಅಪಮಾನ ಆಗುತ್ತಿದೆ ಅಂತ ಅವರೂ ಹೇಳುತ್ತಿದ್ದಾರೆ. ತುಷ್ಟೀಕರಣ ನೀತಿ ಸರ್ಕಾರವನ್ನು ಸುಡುತ್ತೆ, ಭಸ್ಮ ಮಾಡುತ್ತೆ. ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ತಕ್ಷಣ ಅರೆಸ್ಟ್ ಮಾಡಿ. ರಾಷ್ಟ್ರದ್ರೋಹದ ಕೃತ್ಯ ಕೇಸ್ ಹಾಕಿ” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

Continue Reading

ಚಿಕ್ಕಬಳ್ಳಾಪುರ

Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Physical Abuse: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಈಗ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಪ್ರಕರಣ ಸಂಬಂಧ ಮುಖ್ಯ ಶಿಕ್ಷಕನನ್ನು ಬಂಧಿಸಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

VISTARANEWS.COM


on

By

Physical Abuse
Koo

ಚಿಕ್ಕಬಳ್ಳಾಪುರ: ಗುರುವನ್ನು ಸಾಕ್ಷತ್‌ ಪರಬ್ರಹ್ಮನಿಗೆ ಹೋಲಿಕೆ ಮಾಡಲಾಗುತ್ತದೆ. ಮಕ್ಕಳಿಗೆ ದಾರಿ ತೋರಿಸದ ಬೇಕಾದ ಗುರುವೇ ದಾರಿ (Physical Abuse) ತಪ್ಪಿದ್ದಾನೆ. ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅಪ್ರಾಪ್ರೆ ಮೇಲೆ ಎರಗಿ ಲೈಂಗಿಕ ದೌರ್ಜನ್ಯವನ್ನು (Physical relationship) ಎಸಗಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ 7ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಮುಖ್ಯ ಶಿಕ್ಷಕನೇ (Physical assault) ಅತ್ಯಾಚಾರವೆಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ ಎಂಬಾತನನ್ನು ಬಂಧಿಸಲಾಗಿದೆ.

ವೆಂಕಟೇಶ್‌ 7ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆ 3 ತಿಂಗಳ ಗರ್ಭಿಣಿ ಆದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಮಗಳು ಗರ್ಭಿಣಿಯಾಗಿದ್ದು ತಿಳಿದು ಪಾಲಕರು ಕಂಗಾಲಾಗಿ ದೂರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆಯಿಂದ ವಿದ್ಯಾರ್ಥಿನಿಯನ್ನು ರಕ್ಷಿಸಿ ಆಪ್ತ ಸಮಾಲೋಚನೆ ಮಾಡಲಾಗುತ್ತಿದೆ.

ಇದನ್ನೂ ಓದಿ: Suspicious Death : ಕೊಪ್ಪಳದಲ್ಲಿ ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

ಬಾಲಕಿ ನೀಡಿರುವ ಹೇಳಿಕೆ ಮೇರೆಗೆ ಆರೋಪಿ ಶಿಕ್ಷಕನ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದನಾಯಕನಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಾದ ವೆಂಕಟೇಶ ಸಂತ್ರಸ್ತೆಗೆ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ.

ಬಾಲಕಿಯ ಮೈ-ಕೈ, ಎದೆ ಭಾಗವನ್ನು ಮುಟ್ಟಿ ಮಾತನಾಡುತ್ತಿದ್ದನಂತೆ. ಇದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದಾಗ, ಏನು ತೊಂದರೆ ಆಗುವುದಿಲ್ಲ ಎಂದೇಳಿ ಆಫೀಸ್‌ ರೂಮಿನೊಳಗೆ ಕರೆದುಕೊಂಡು ಅತ್ಯಾಚಾರವೆಸಗಿದ್ದಾನೆ. ನಂತರ ನಡೆದ ಯಾವ ವಿಚಾರವನ್ನು ಯಾರ ಜತೆಗೂ ಹೇಳದಂತೆ ಷರತ್ತು ಹಾಕಿದ್ದಾನೆ.

ಕಳೆದ ಐದು ತಿಂಗಳಿಂದ ಮುಟ್ಟಾಗದೇ ಇರುವುದರಿಂದ ಆತಂಕಗೊಂಡ ಬಾಲಕಿ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಗರ್ಭಿಣಿಯಾಗಿರುವುದಾಗಿ ತಿಳಿಸಿದ್ದಾರೆ. ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಶಿಕ್ಷಕ ವೆಂಕಟೇಶ್‌ ವಿರುದ್ಧ ಪೋಕ್ಸೋ 376 ಅಡಿ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
car care tips
ಆಟೋಮೊಬೈಲ್16 mins ago

Car Care Tips : ಕಾಸು ಉಳಿಸಿ ಎಂಜಿನ್ ಬೆಳಗಿಸಿ, ಕಾರಿನ ಎಂಜಿನ್ ನೀವೇ ​ಕ್ಲೀನ್ ಮಾಡಲು ಇಲ್ಲಿವೆ ಟಿಪ್ಸ್​​​

Viral Video
ವೈರಲ್ ನ್ಯೂಸ್38 mins ago

Viral Video: ದಿಗಂಬರ ಜೈನ ಮುನಿಗಳಿಗೆ ಈ ಪಾಪಿ ಮಾಡಿದ್ದೇನು ಗೊತ್ತಾ? ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case
ಕರ್ನಾಟಕ40 mins ago

Prajwal Revanna Case: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

assault case
ದಕ್ಷಿಣ ಕನ್ನಡ50 mins ago

Assault Case : ರೊಚ್ಚಿಗೆದ್ದ ಸ್ಥಳೀಯರು; ಬೋರ್‌ವೆಲ್ ಕೊರೆಯುತ್ತಿದ್ದ ಲಾರಿ ಮೇಲೆ ಕಲ್ಲು ತೂರಾಟ

T20 World Cup 2024
ಕ್ರೀಡೆ1 hour ago

T20 World Cup 2024: 2ನೇ ಬ್ಯಾಚ್​ನಲ್ಲಿ ನ್ಯೂಯಾರ್ಕ್​ಗೆ ತೆರಳಿದ ಭಾರತದ ಮೂವರು ಆಟಗಾರರು

namaz in road mangalore
ದಕ್ಷಿಣ ಕನ್ನಡ1 hour ago

Namaz: ಸಾರ್ವಜನಿಕ ನಮಾಜ್‌ ನಿಲ್ಲಿಸದಿದ್ದರೆ ಹನುಮಾನ್‌ ಚಾಲೀಸಾ ಪಠನ: ವಿಹಿಂಪ ಎಚ್ಚರಿಕೆ

Veer Savarkar
ದೇಶ1 hour ago

Veer Savarkar: ಸ್ವಾತಂತ್ರ್ಯ ಯೋಧ ವೀರ್ ಸಾವರ್ಕರ್ ಜೀವನದ ಕುತೂಹಲಕರ ಸಂಗತಿಗಳಿವು

Drain pipe collapse
ದೇಶ1 hour ago

Drain Pipe collapse: 700 ಮೀಟರ್‌ ಉದ್ದದ ಕಬ್ಬಿಣದ ಪೈಪ್ ಕುಸಿತ; ವಾಹನಗಳು ಸಂಪೂರ್ಣ ಜಖಂ; ವಿಡಿಯೋ ವೈರಲ್‌

Umar Khalid
ದೇಶ1 hour ago

Umar Khalid: ದೆಹಲಿ ಗಲಭೆಯ ‘ಮಾಸ್ಟರ್‌ ಮೈಂಡ್‌ʼ ಉಮರ್ ಖಾಲಿದ್ ಜಾಮೀನು ಅರ್ಜಿ ವಜಾ

Physical Abuse
ಚಿಕ್ಕಬಳ್ಳಾಪುರ1 hour ago

Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ23 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌