ನೇತ್ರ ದಾನ ಮಹಾದಾನ ಎಂದು ತೋರಿಸಿಕೊಟ್ಟ ಮೃತನ ಕುಟುಂಬಸ್ತರು - Vistara News

ಬೆಂಗಳೂರು

ನೇತ್ರ ದಾನ ಮಹಾದಾನ ಎಂದು ತೋರಿಸಿಕೊಟ್ಟ ಮೃತನ ಕುಟುಂಬಸ್ತರು

ಮೃತ ವ್ಯಕ್ತಿಯ ಕಣ್ಣುಗಳನ್ನು ದಾನಮಾಡಿ ನೇತ್ರ ದಾನ ಮಹಾದಾನ ಎಂದು ಮೃತನ ಕುಟುಂಬಸ್ತರು ತೋರಿಸಿ ಕೊಟ್ಟಿದಾರೆ.

VISTARANEWS.COM


on

ನೇತ್ರ ದಾನ ಮಹಾದಾನ
ಆಟೋ ಚಾಲಕ ಗಿರಿಸಾಗರ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸೋಮವಾರ ಬೆಳಗ್ಗೆ ಮೈಸೂರು ರಸ್ತೆಯಲ್ಲಿ, ಸ್ಯಾಟ್ ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿತ್ತು. ಪ್ರಕರಣದಲ್ಲಿ ಮೃತಪಟ್ಟ ಆಟೊ ಚಾಲಕ ಗಿರಿಸಾಗರ್‌ ಅವರ ಕಣ್ಣುಗಳನ್ನು ಕುಟುಂಬಸ್ತರು ದಾನ ಮಾಡಿದ್ದಾರೆ.

ಬೆಳ್ಳಂಬೆಳಗ್ಗೆ ಅಪಘಾತದ ಹೊಡೆತಕ್ಕೆ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿಕೊಂಡು ಬಿಟ್ಟಿತ್ತು. ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣವಾಗಿ ಜಖಂ ಆಗಿತ್ತು. ಆಟೋದಲ್ಲಿ ಸಿಲುಕಿದ್ದ ಆಟೋ ಚಾಲಕ ಗಿರಿಸಾಗರ್‌ನ ರಕ್ಷಣೆ ಮಾಡಲು ಅರ್ಧಗಂಟೆ ಸ್ಥಳೀಯರು ಹರಸಾಹಸ ಪಟ್ಟಿದ್ದರು.

ನೇತ್ರ ದಾನ ಮಹಾದಾನ
ಕಣ್ಣು ದಾನಕ್ಕೆ ಸಹಿ ಮಾಡುತ್ತಿರುವ ಕುಟುಂಬಸ್ತರು

ಅಪಘಾತದಿಂದ ಮೈಸೂರು ರಸ್ತೆ ಮೂರು ಕಿಲೋಮೀಟರ್‌ವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಅಪಘಾತಕ್ಕೊಳಗಾಗಿದ್ದ ನಾಲ್ಕು ವಾಹನಗಳನ್ನು ಬ್ಯಾಟರಾಯನಪುರ ಸಂಚಾರಿ ಪೊಲೀಸರು, ವಾಹನಗಳಡಿ ಸಿಲುಕಿದ್ದ ಗಿರಿಸಾಗರ್‌ ಅವರನ್ನು ಹೊರಗೆಳೆದರು. ಗಿರಿಸಾಗರ್‌ ಸ್ಥಿತಿ ಬಹಳ ಗಂಭೀರವಾಗಿದ್ದರಿಂದ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಗಿರಿಸಾಗರ್‌ ಸಾವನ್ನಪ್ಪಿದರು.

ನಂತರ ಆಸ್ಪತ್ರೆಗೆ ಬೇಟಿ ನೀಡಿದ ಗಿರಿಸಾಗರ್‌ ಮನೆಯವರು, ಗಿರಿಸಾಗರ್‌ ಕಣ್ಣುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾನ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಇಬ್ಬರು ಅಂಧರ ಬಾಳಿನಲ್ಲಿ ಬೆಳಕು ಮೂಡಿಸಿದ್ದಾರೆ. ನೇತ್ರ ದಾನ ಮಹಾದಾನ ಎಂದು ಸಾರಿದ್ದಾರೆ.

ಇದನ್ನೂ ಓದಿ: ಕಲಬುರಗಿ ಬಸ್-ಟೆಂಪೊ ಅಪಘಾತ: ಮೃತರ ಸಂಖ್ಯೆ ಏಳಕ್ಕೆ ಏರಿಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Prajwal Revanna Case: ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಹಾಗೂ ಡಿ.ಕೆ.ಶಿವಕುಮಾರ್‌ ಅವರು ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಈಗ ಲಭ್ಯವಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಮತ್ತೊಂದು ಆಡಿಯೊ ಬಯಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಾಸನ ಪೆನ್‌ಡ್ರೈವ್‌ ಕೇಸ್‌ಗೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda), ಮಾಜಿ ಸಂಸದ ಎಲ್‌.ಆರ್‌.ಶಿವರಾಮೇಗೌಡ (LR Shivarame Gowda) ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೊ ಲಭ್ಯವಾಗಿದ್ದು, ಮಾತುಕತೆಯು ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಕುರಿತೇ ಇವರು ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಲಭ್ಯವಾಗಿರುವ ಆಡಿಯೊ ಪ್ರಕಾರ, ಮೊದಲು ದೇವರಾಜೇಗೌಡ ಹಾಗೂ ಎಲ್‌.ಆರ್.ಶಿವರಾಮೇಗೌಡ ದೂರವಾಣಿಯಲ್ಲಿ ಮಾತನಾಡಿದ್ದಾರೆ. “ನಾನು ಫೋನ್‌ಅನ್ನು ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡುತ್ತೇನೆ. ಏನೇನಾಗಿದೆ ಎಲ್ಲದರ ಕುರಿತು ಮಾಹಿತಿ ಕೊಡು” ಎಂಬುದಾಗಿ ಶಿವರಾಮೇಗೌಡ ಅವರು ದೇವರಾಜೇಗೌಡರಿಗೆ ತಿಳಿಸುತ್ತಾರೆ. ಇದಾದ ಬಳಿಕ ದೇವರಾಜೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಇಲ್ಲಿದೆ ಆಡಿಯೊ ಸಂಭಾಷಣೆ

“ಏನೇನಾಯ್ತು? ಏನಿದೆ ಪರಿಸ್ಥಿತಿ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಕೇಳುತ್ತಾರೆ. ಆಗ ದೇವರಾಜೇಗೌಡ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನಾಳೆ ಕೋರ್ಟ್‌ನಲ್ಲಿ ಸ್ಟೇ ಆಗೋ ಚಾನ್ಸ್‌ ಇದೆ. ಸರಿಯಾಗಿ ದೂರು ಕೊಟ್ಟಿಲ್ಲ. ಮಹಿಳೆ ನೀಡಿರುವ ಹೇಳಿಕೆ ಹಾಗೂ ನಡೆದಿರುವ ಘಟನೆ ಮಧ್ಯೆ ಹಲವು ವರ್ಷ ವ್ಯತ್ಯಾಸ ಇದೆ. ಆದರೆ, ಎಸ್‌ಐಟಿಯವರು ಮಹಿಳೆಯನ್ನು ಕರೆದುಕೊಂಡು ಹೋಗಿ ವಿಚಾರಣೆ, ತನಿಖೆ ನಡೆಸಿದರೆ ಸೀರಿಯಸ್‌ ಕೇಸ್‌ ಆಗುತ್ತದೆ. ಆದರೆ, ಮಹಿಳೆಯು ಪ್ರಕರಣದಲ್ಲಿ ಸ್ಟ್ರಾಂಗ್‌ ಇಲ್ಲ” ಎಂದಿದ್ದಾರೆ.

ಇದಾದ ಬಳಿಕ ಡಿ.ಕೆ.ಶಿವಕುಮಾರ್‌, “ಏನಾದರೂ ಬೇರೆ ಎವಿಡೆನ್ಸ್‌ ಇದೆಯಾ” ಎಂದು ಪ್ರಶ್ನಿಸಿದ್ದಾರೆ. ಆಗ, ದೇವರಾಜೇಗೌಡ ಅವರು “ಯಾವುದೇ ಎವಿಡೆನ್ಸ್‌ ಇಲ್ಲ” ಎಂದಿದ್ದಾರೆ. ಇದಾದ ಬಳಿಕ ಇಬ್ಬರ ನಡುವಿನ ಮಾತುಕತೆ ಮುಗಿದಿದೆ. ದೇವರಾಜೇಗೌಡ ಅವರು ಜೈಲಿಗೆ ಹೋಗುವ ಮೊದಲು ನಡೆದ ಮಾತುಕತೆ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ದೇವರಾಜೇಗೌಡ ಗಂಭೀರ ಆರೋಪ

ಪೆನ್‌ಡ್ರೈವ್‌ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ಅವರ ಬಗ್ಗೆ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. “ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Continue Reading

ಕ್ರೈಂ

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Road Accident: ಬೆಂಗಳೂರು ಹಾಗೂ ಗದಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು. ಹಲವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದ್ದು, ಹೋಟೆಲ್‌ ಸೇರಿ ಮನೆಗಳಿಗೆ ಹಾನಿಯಾಗಿವೆ.

VISTARANEWS.COM


on

By

Road Accident
Koo

ಬೆಂಗಳೂರು/ಗದಗ/ಪುಣೆ: ಮಹಾರಾಷ್ಟ್ರದ ಪುಣೆಯ ಚಾಕನ ಶಿಕ್ರಾಪುರ ರಾಷ್ಟ್ರೀಯ ಹೆದ್ದಾರಿ ಮೇಲೆ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಫೋಟದಿಂದ ಮೂರು ಕಂಟೇನರ್ ವಾಹನಗಳು, ಒಂದು ಹೋಟೆಲ್ ಮತ್ತು ಮೂರು ಮನೆಗಳು ಬೆಂಕಿ ಆಹುತಿಯಾಗಿವೆ. ಭಾನುವಾರ ಬೆಳಗಿನ ಜಾವ 5 ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ. ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ (road Accident) ನಡೆದಿದೆ.

road Accident

ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ

ಕುಡಿದ ಅಮಲಿನಲ್ಲಿ ಕಾರು ಚಾಲನೆ ಮಾಡಿದ್ದರಿಂದ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು ಚಾಲಕನಿಂದ ಅಡ್ಡಾದಿಡ್ಡಿ ಚಾಲನೆಗೆ ಆಟೋ, ಎರಡು ಬೈಕ್‌ಗೆ ಡಿಕ್ಕಿಯಾಗಿದೆ. ಬೆಂಗಳೂರಿನ ರಾಜಾಜಿನಗರದ ಈಸ್ಟ್ ವೆಸ್ಟ್ ಪಬ್ಲಿಕ್ ಸ್ಕೂಲ್ ಬಳಿ ಅಪಘಾತ ನಡೆದಿದೆ. ಘಟನೆಯಲ್ಲಿ ಓರ್ವ ಸ್ಥಿತಿ‌ ಗಂಭೀರವಾಗಿದೆ. ಮಲ್ಲೇಶ್ವರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

road Accident

ಇದನ್ನೂ ಓದಿ: Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಗದಗದಲ್ಲಿ ಭೀಕರ ಅಪಘಾತ

ಗದಗ ಜಿಲ್ಲೆಯ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ವಿಜಯಪುರ- ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ನಸುಕಿನ ಜಾವ 4 ಗಂಟೆ ಸುಮಾರಿಗೆ ಸರಣಿ ಅಪಘಾತ ನಡೆದಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಹೋಗುತ್ತಿದ್ದ ವಾಹನಗಳ ನಡುವೆ ಅಪಘಾತ ನಡೆದಿದೆ.

road Accident

ಬೊಲೆರೋ ಪಿಕಪ್ ವಾಹನ ಎರ್ಟಿಗಾ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಎರ್ಟಿಗಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದಿನ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಾಶತ್‌ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಎರ್ಟಿಗಾ ಚಾಲಕ ಮತ್ತು ಸ್ನೇಹಿತ ಪಾರಾಗಿದ್ದಾರೆ. ಅಪಘಾತ ರಭಸಕ್ಕೆ ಕಾರು ‌ನಜ್ಜುಗುಜ್ಜಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ ಎಂದು ಆರ್.‌ ಅಶೋಕ್‌ ಹೇಳಿದರು.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ (Devarajegowda) ನೀಡಿದ ಹೇಳಿಕೆ ಸಂಚಲನ ಮೂಡಿಸಿದೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಅವರು 100 ಕೋಟಿ ರೂ. ಆಫರ್‌ ಮಾಡಿದ್ದರು ಎಂದು ದೇವರಾಜೇಗೌಡ ನೀಡಿದ ಹೇಳಿಕೆ ಕುರಿತು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಪ್ರತಿಕ್ರಿಯಿಸಿದ್ದು, “ಬೆಂಕಿ ಇಲ್ಲದೆ ಹೊಗೆಯಾಡಲ್ಲ” ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಭೇಟಿಯಾದ ಬಳಿಕ ಆರ್‌.ಅಶೋಕ್‌ ಸುದ್ದಿಗಾರರೊಂದಿಗೆ ಮಾತನಾಡಿದರು. “ದೇವರಾಜೇಗೌಡ ಬಳಿ ಸಾಕ್ಷ್ಯ ಇದೆ ಎಂಬ ಕಾರಣಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ. ದೇವರಾಜೇಗೌಡ ಹೊರಗಿದ್ದರೆ ದಾಖಲೆ ಬಿಡುಗಡೆ ಮಾಡುತ್ತಾರೆ ಎಂಬ ಭಯದಿಂದ ಬಂಧಿಸಲಾಗಿದೆ. ದೇವರಾಜೇಗೌಡ ಮಾಡಿದ ಆರೋಪಗಳು ನಿಜವೇ ಇರಬೇಕು. ಅದಕ್ಕೆಲ್ಲ ಅವರ ಬಳಿ ಸಾಕ್ಷ್ಯ ಇದೆ ಎನಿಸುತ್ತದೆ. ಅವರು ಹೇಳಿದ್ದೆಲ್ಲ ನೂರಕ್ಕೆ ನೂರು ಸತ್ಯ. ಅಷ್ಟಕ್ಕೂ ಬೆಂಕಿಯೇ ಇಲ್ಲದೆ ಹೊಗೆಯಾಡಲ್ಲ” ಎಂದು ಹೇಳಿದರು.

“ದೇವರಾಜೇಗೌಡ ಅವರೇ ತಮಗೆ ಹಣದ ಆಫರ್ ಮಾಡಿದ ಬಗ್ಗೆ ಹೇಳಿದ್ದಾರೆ. ಈಗಾಗಲೇ ಡಿಕೆಶಿ ಮಾತಾಡಿದ ದಾಖಲೆ ಸಹ ಬಿಡುಗಡೆ ಮಾಡಿದ್ದಾರೆ. ಅವರನ್ನು ಬಿಟ್ಟರೆ ಸರಣಿ ದಾಖಲೆ ಬಿಡುಗಡೆ ಮಾಡುತ್ತಾರೆ. ಸರ್ಕಾರಕ್ಕೆ ಮುಜುಗರ ಆಗುತ್ತದೆ ಎಂದು ಬಂಧಿಸಿದ್ದಾರೆ. ಇದೆಲ್ಲ ಮಾಧ್ಯಮಗಳಲ್ಲಿ ಬರಬಾರದು ಎಂಬುದು ಡಿಕೆಶಿ ಉದ್ದೇಶವಾಗಿದೆ. ದೇವರಾಜೇಗೌಡ ಹೇಳಿದ್ದೆಲ್ಲ ಸತ್ಯ ಇರಬಹುದು. ರಣದೀಪ್ ಸುರ್ಜೇವಾಲಾ, ಸಿಎಂ‌ ಸಿದ್ದರಾಮಯ್ಯ, ಡಿಕೆಶಿ ಸೇರಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ” ಎಂದು ಆರೋಪಿಸಿದರು.

ಒಕ್ಕಲಿಗರ ಮುಗಿಸಲು ತಂತ್ರ

“ರಾಜ್ಯದಲ್ಲಿ ಒಕ್ಕಲಿಗರನ್ನು ಮುಗಿಸಲು ಕಾಂಗ್ರೆಸ್‌ ತಂತ್ರ ಮಾಡುತ್ತಿದೆ. ಈಗಾಗಲೇ ಸಿದ್ದರಾಮಯ್ಯ ದಲಿತರನ್ನು ಮುಗಿಸಿದ್ದಾರೆ. ಪರಮೇಶ್ವರ್ ಅವರು ಸಿಎಂ ಅಗೋದನ್ನು ತಪ್ಪಿಸಿದ್ದಾರೆ. ಸಿಬಿಐ ತನಿಖೆಗೆ ಕೊಟ್ರೆ ಸತ್ಯ ಹೊರಗೆ ಬರುತ್ತದೆ ಎಂದು ತನಿಖೆಗೆ ಕೊಡತ್ತಿಲ್ಲ. ಕೆ.ಜೆ. ಜಾರ್ಜ್‌ ವಿಚಾರದಲ್ಲೂ ಸಿಬಿಐ ತನಿಖೆ ನಡೆಯಿತು. ತಪ್ಪಿದ್ದರೆ ತಪ್ಪಿದೆ ಎಂದು, ತಪ್ಪಿಲ್ಲದಿದ್ದರೆ ತಪ್ಪಿಲ್ಲ ಎಂದು ಸಿಬಿಐ ವರದಿ ನೀಡುತ್ತದೆ. ಎಸ್ಐಟಿಯಿಂದ ಸತ್ಯ ಹೊರಗೆ ಬರುತ್ತದೆ ಎಂಬ ನಂಬಿಕೆ ಯಾರಿಗೂ ಇಲ್ಲ. ಸರ್ಕಾರ ಹೇಳಿದಂತೆ ಎಸ್‌ಐಟಿ ಕೆಲಸ ಮಾಡುತ್ತದೆ. ಕಾರ್ತಿಕ್‌ಗೆ ಜಾಮೀನು ನಿರಾಕರಿಸಿದರೂ ಯಾಕೆ ಬಂಧಿಸಿಲ್ಲ? ಯಾರೇ ತಪ್ಪು ಮಾಡಿದರೂ ಶಿಕ್ಷೆಯಾಗಲಿ. ಇದು ಪ್ರಜ್ವಲ್‌ ರೇವಣ್ಣ ಅವರಿಗೂ ಅನ್ವಯವಾಗುತ್ತದೆ. ಆದರೆ, ಪೆನ್‌ಡ್ರೈವ್‌ ಹಂಚಿಕೆ ಮಾಡಿದವರಿಗೂ ಶಿಕ್ಷೆಯಾಗಬೇಕು” ಎಂದು ಒತ್ತಾಯಿಸಿದರು.

ದೇವರಾಜೇಗೌಡ ಹೇಳಿದ್ದೇನು?

“ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ಕರೆತರೋಕೆ ಎಸ್‌ಐಟಿ ಮಾಸ್ಟರ್‌ ಸ್ಟ್ರೋಕ್!‌

Continue Reading

ಮಳೆ

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka Rain : ಒಂದೇ ಮಳೆಗೆ ಬೆಂಗಳೂರಿನ ಹಲವು ಏರಿಯಾಗಳು ಸಣ್ಣ ದ್ವೀಪದಂತಾಗಿದೆ. ಚಿಕ್ಕಮಗಳೂರಿನ ಕಳಸದಲ್ಲೂ ಮಳೆಯು ಅಬ್ಬರಿಸುತ್ತಿದೆ. ಹಲವೆಡೆ ಮಳೆಯಿಂದ ಅವಘಡ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು/ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಗಂಟೆ ಕಾಲ ಸುರಿದ ಮಳೆಗೆ (Karnataka Rain) ರಸ್ತೆಗಳೆಲ್ಲವೂ ಹೊಳೆಯಂತಾಗಿದೆ. ರಾಜಕಾಲುವೆಯಿಂದ ಯಲಹಂಕ ನಿವಾಸಿಗಳಿಗೆ ನಿತ್ಯ ಸಂಕಷ್ಟ ಎದುರಿಸುವಂತಾಗಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಮಳೆಗೆ ಇಡೀ ಏರಿಯಾ ಜಲಾವೃತಗೊಂಡಿದೆ.

karnataka rain

ಯಲಹಂಕದ ನಾರ್ಥ್‌ ಹುಡ್ ಅಪಾರ್ಟ್‌ಮೆಂಟ್ ಸುತ್ತಮುತ್ತ ನೀರು ತುಂಬಿ ಅವಾಂತರವೇ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರುವುದರಿಂದ ಈ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇನ್ನೂ ರಾಜಕಾಲುವೆ ನೀರಿನ ವಾಸನೆಗೆ ನಿವಾಸಿಗಳು ಕಂಗಾಲಾಗಿದ್ದಾರೆ. ಗಬ್ಬು ವಾಸನೆ ತಾಳಲಾರದೇ ಕೆಲ ನಿವಾಸಿಗಳು ಮನೆ ಖಾಲಿ ಮಾಡಿದ್ದಾರೆ. ರಾತ್ರಿಯಿಂದಲೂ ಮೋಟಾರ್‌ ಮೂಲಕ ನೀರು ಹೊರಹಾಕುತ್ತಿದ್ದಾರೆ. ಸುತ್ತಮುತ್ತಲಿನ ಐದಾರು ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸಂಕಷ್ಟ ಎದುರಾಗಿದೆ. ವಾರದ ಹಿಂದೆ ಬಿಬಿಎಂಪಿಗೆ ಪತ್ರ ಬರೆದರೂ ಯಾವುದೇ ಪ್ರಯೋಜವಿಲ್ಲ ಎಂದು ಕಿಡಿಕಾರಿದ್ದಾರೆ. ರಾಜಕಾಲುವೆಯಿಂದ ನೀರು ತುಂಬಿ 22 ಮನೆಗಳ ನಿವಾಸಿಗಳು ಪರದಾಡುತ್ತಿದ್ದಾರೆ. ಪಕ್ಕದಲ್ಲಿರುವ ಪುಟ್ಟೇನಹಳ್ಳಿ ಕೆರೆಗೆ ನೀರು ಹರಿಯದೇ ಇರುವುದರಿಂದ ಆ ನೀರು ಕೂಡ ಸೇರುತ್ತಿದೆ. ರಾಜಕಾಲುವೆ, ಮಳೆ ನೀರು ಸೇರಿ ಇಡೀ ಏರಿಯಾ ಕೆರೆಯಂತಾಗಿದೆ.

ಇದನ್ನೂ ಓದಿ: Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆ

ಕಾಫಿನಾಡು ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾರೀ ಗಾಳಿ-ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕಳಸ ತಾಲೂಕಿನಾದ್ಯಂತ ಧಾರಾಕಾರ ಮಳೆಗೆ ಕಳಸ ದೇವಸ್ಥಾನದ ಎತ್ತರದ ಪ್ರದೇಶದಿಂದ ನೀರು ಹರಿಯುತ್ತಿದೆ. ದಕ್ಷಿಣ ಕಾಶಿ ಕಳಸೇಶ್ವರ ಸ್ವಾಮಿ ದೇವಸ್ಥಾನದ ಮೆಟ್ಟಿಲು ಮೇಲಿಂದ ನೀರು ಹರಿಯುತ್ತಿದೆ. ಇತ್ತ ಮೆಟ್ಟಿಲ ಮೇಲೆ ನಿಂತು ಮಳೆ ನೀರಲ್ಲಿ ಮಕ್ಕಳು ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಗಾಳಿ-ಮಳೆಗೆ ಮರ ಬಿದ್ದು ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಭದ್ರಾ ನದಿ ಒಳಹರಿವಿನಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದೆ.

karnataka rain

ಕೊಪ್ಪಳದಲ್ಲೂ ಮುಂಗಾರು ಪೂರ್ವ ಮಳೆ

ಕೊಪ್ಪಳದಲ್ಲಿ ಭಾನುವಾರ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೂರು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ. ನಿನ್ನೆ ಶನಿವಾರ ಸಂಜೆ ಸುರಿದಿದ್ದ ಮಳೆಯು ಭಾನುವಾರ ಬೆಳಗಿನವರೆಗೆ ಬಿಡುವು ಕೊಟ್ಟಿತ್ತು. ಮಧ್ಯಾಹ್ನದ ನಂತರ ಧೋ ಎಂದು ಗುಡುಗು ಸಹಿತ ಮಳೆ ಸುರಿಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Prajwal Revanna Case
ಕರ್ನಾಟಕ3 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Money Guide
ಮನಿ-ಗೈಡ್12 mins ago

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Road Accident
ಕ್ರೈಂ16 mins ago

Road Accident: ಬೆಂಗಳೂರು, ಗದಗದಲ್ಲಿ ಸರಣಿ ಅಪಘಾತ; ಗ್ಯಾಸ್ ಟ್ಯಾಂಕರ್ ಸ್ಫೋಟಕ್ಕೆ ಮನೆಗಳೇ ಭಸ್ಮ

Janhvi Kapoor felt sexualised at the age of 12
ಬಾಲಿವುಡ್22 mins ago

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Kundapur News
ಕರ್ನಾಟಕ30 mins ago

Kundapur News: ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

RCB vs CSK
ಕ್ರಿಕೆಟ್42 mins ago

RCB vs CSK: ಧೋನಿ ವರ್ತನೆಗೆ ‘ಇಟ್‌ ಹರ್ಟ್ಸ್‌​’ ಎಂದ ಆರ್​ಸಿಬಿ ಅಭಿಮಾನಿಗಳು; ಧೋನಿ ಮಾಡಿದ ತಪ್ಪೇನು?

Congress Manifesto
ದೇಶ44 mins ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಅಪಪ್ರಚಾರ; ವ್ಯಕ್ತಿ ಅರೆಸ್ಟ್‌-ಬಿಜೆಪಿ ಕಿಡಿ

Prajwal Revanna Case
ಕರ್ನಾಟಕ55 mins ago

Prajwal Revanna Case: ಡಿಕೆಶಿ 100 ಕೋಟಿ ರೂ. ಆಫರ್;‌ ಬೆಂಕಿ ಇಲ್ಲದೆ ಹೊಗೆಯಾಡಲ್ಲ ಎಂದ ಆರ್.‌ ಅಶೋಕ್

Karnataka Rain
ಮಳೆ58 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

FSSAI alert
ಆರೋಗ್ಯ1 hour ago

FSSAI Warning: ನೀವು ತಿನ್ನುವ ಮಾವಿನ ಹಣ್ಣು ಸುರಕ್ಷಿತವಾಗಿದೆಯೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ58 mins ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌