Rajinikanth: ಬೆಂಗಳೂರಿನಲ್ಲಿ ಶಿವರಾತ್ರಿ ಆಚರಿಸಿದ ಸೂಪರ್‌ ಸ್ಟಾರ್‌ ರಜನಿಕಾಂತ್ - Vistara News

ಕಾಲಿವುಡ್

Rajinikanth: ಬೆಂಗಳೂರಿನಲ್ಲಿ ಶಿವರಾತ್ರಿ ಆಚರಿಸಿದ ಸೂಪರ್‌ ಸ್ಟಾರ್‌ ರಜನಿಕಾಂತ್

ರಜನಿಕಾಂತ್ (Rajinikanth) ಪುತ್ರಿ ಐಶ್ವರ್ಯ ಕೂಡ ಮಹಾಶಿವರಾತ್ರಿ ಆಚರಣೆಗಾಗಿ ಬೆಂಗಳೂರಿಗೆ ತೆರಳಿದ್ದರು. ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Rajinikanth and wife Latha Maha Shivratri celebrations in Bengaluru
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಫೆಬ್ರವರಿ 18ರಂದು ರಜನಿಕಾಂತ್ (Rajinikanth) ಮತ್ತು ಅವರ ಪತ್ನಿ (Rajinikanth and wife Latha) ಬೆಂಗಳೂರಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಮಹಾ ಶಿವರಾತ್ರಿ ಉತ್ಸವದಲ್ಲಿ ಭಾಗವಹಿಸಿದ್ದರು. ಶ್ರೀ ಶ್ರೀ ರವಿಶಂಕರ್ ಅವರ ಲಿವಿಂಗ್ ಆರ್ಟ್ ಆರ್ಗನೈಸೇಶನ್ ಆಯೋಜಿಸಿದ್ದ ಮಹಾ ಶಿವರಾತ್ರಿ ಉತ್ಸವದಲ್ಲಿ ರಜನಿಕಾಂತ್ ಭಾಗವಹಿಸಿರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕೇಂದ್ರದಲ್ಲಿ ಪತಿ-ಪತ್ನಿ ಇಬ್ಬರೂ ಧ್ಯಾನ ಮಾಡುತ್ತಿರುವ ಫೋಟೊಗಳು ವೈರಲ್‌ ಆಗಿವೆ.

ಲತಾ ಅವರು ಪಿಂಕ್ ಸೂಟ್ ಧರಿಸಿದ್ದರೆ, ರಜನಿಕಾಂತ್ ಸಾದಾ ಬಿಳಿ ಕುರ್ತಾ ಧರಿಸಿದ್ದರು. ರಜನಿಕಾಂತ್ ಪುತ್ರಿ ಐಶ್ವರ್ಯ ಕೂಡ ಮಹಾಶಿವರಾತ್ರಿ ಆಚರಣೆಗಾಗಿ ಬೆಂಗಳೂರಿಗೆ ತೆರಳಿದ್ದರು. ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ.

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಆಕ್ಷನ್ ಎಂಟರ್‌ಟೈನರ್ ಆಗಿರುವ ಜೈಲರ್ ಚಿತ್ರದಲ್ಲಿ ರಜನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಶೂಟಿಂಗ್ ನಡೆಯುತ್ತಿದೆ. ರಜನಿಕಾಂತ್ ಹೊರತುಪಡಿಸಿ, ಈ ಚಿತ್ರದಲ್ಲಿ ಜಾಕಿ ಶ್ರಾಫ್, ರಮ್ಯಾ ಕೃಷ್ಣನ್, ತಮನ್ನಾ, ಯೋಗಿ ಬಾಬು ಮತ್ತು ಮಲಯಾಳಂ ನಟ ವಿನಾಯಕನ್ ತಾರಾಗಣವಿದೆ. ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಮತ್ತು ಕನ್ನಡದ ಸೂಪರ್‌ಸ್ಟಾರ್ ಶಿವ ರಾಜ್‌ಕುಮಾರ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಾಣದ ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಜೈಲರ್ ಈ ವರ್ಷದ ಕೊನೆಯಲ್ಲಿ ಚಿತ್ರಮಂದಿರಗಳಿಗೆ ಬರಲಿದೆ. ರಜನಿಕಾಂತ್ ಕೊನೆಯದಾಗಿ ನಿರ್ದೇಶಕ ಸಿರುತೈ ಶಿವ ಅವರ ಅಣ್ಣಾತ್ತೆ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Rajinikanth and wife Latha  Maha Shivratri celebrations in Bengaluru
#image_title

ಇದನ್ನೂ ಓದಿ: Rajinikanth: ಚಿಕ್ಕಬಳ್ಳಾಪುರದಲ್ಲಿ ಆದಿಯೋಗಿ ಪ್ರತಿಮೆ ದರ್ಶನ ಪಡೆದ ತಲೈವಾ ರಜಿನಿಕಾಂತ್

ಇದನ್ನೂ ಓದಿ: Actor Rajinikanth : ಜೈಸಲ್ಮೇರ್‌ನಲ್ಲಿ ರಜನಿಕಾಂತ್‌ ಕಾರಿಗೆ ಮುತ್ತಿಗೆ ಹಾಕಿದ ಅಭಿಮಾನಿಗಳು

ಐಶ್ವರ್ಯ ಅವರು ನಿರ್ದೇಶಿಸುತ್ತಿರುವ ‘ಲಾಲ್ ಸಲಾಮ್’ ಸಿನಿಮಾದಲ್ಲೂ ನಟಿಸುವುದಕ್ಕೆ ರಜನಿಕಾಂತ್‌ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ. ಲೈಕಾ ಪ್ರೊಡಕ್ಷನ್ ನಿರ್ಮಾಣ ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸುತ್ತಿರುವ ‘ಲಾಲ್ ಸಲಾಮ್’ (Laal Salam) ಸಿನಿಮಾವನ್ನು ಲೈಕಾ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರೊಂದಿಗೆ ರಜನಿಕಾಂತ್ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actress Nayanathara: ಬಾಹುಬಲಿ…. ಈ ಸಿನಿಮಾದ ಹೆಸರು ಕೇಳುತ್ತಲೇ ಮೈ ನವಿರೇಳುತ್ತದೆ. ಜನಮಾನಸದಲ್ಲಿ ಹಾಸುಹೊಕ್ಕಾಗಿರುವ ಸಿನಿಮಾವಿದು. ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಈ ಸೂಪರ್ ಹಿಟ್ ಚಿತ್ರದ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ನಟಿ ನಯನತಾರಾ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

Actress Nayanathara
Koo

ಬೆಂಗಳೂರು: ಕಾಲಿವುಡ್ ನಟಿ ನಯನತಾರಾ(Actress Nayanathara) ಹಾಗೂ ನಿರ್ಮಾಪಕ ವಿಘ್ನೇಶ್ ದಂಪತಿ ಉಯಿರ್ ಮತ್ತು ಉಲಗ್ ಎಂಬ ಅವಳಿ ಮಕ್ಕಳನ್ನು ಹೊಂದಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಈ ದಂಪತಿ ಇತ್ತೀಚಿಗೆ ತಮ್ಮ ಮುದ್ದಿನ ಮಕ್ಕಳೊಂದಿಗೆ ಖುಷಿ ಖುಷಿಯಾಗಿ ಸಮಯವನ್ನು ಕಳೆಯುತ್ತಿದ್ದಾರೆ. ಈ ನಡುವೆ ಈ ದಂಪತಿ ಸೂಪರ್ ಹಿಟ್ ಸಿನಿಮಾವೊಂದರ ದೃಶ್ಯವನ್ನು ತಮ್ಮ ಮಕ್ಕಳ ಮೂಲಕ ಮರು ಸೃಷ್ಟಿ ಮಾಡಿದ್ದಾರೆ.

ದಕ್ಷಿಣ ಭಾರತದ ಹಿಟ್ ಚಲನಚಿತ್ರಗಳಲ್ಲಿ ಒಂದಾದ ಬಾಹುಬಲಿ ಚಿತ್ರ ಜನರ ಮೆಚ್ಚುಗೆಯನ್ನು ಪಡೆದ ಸೂಪರ್ ಹಿಟ್ ಚಿತ್ರವಾಗಿತ್ತು. ಅದರ ಒಂದೊಂದು ದೃಶ್ಯವು ಅಮೋಘವಾಗಿ ಮೂಡಿಬಂದಿತ್ತು. ಹಾಗಾಗಿ ಅದು ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಇಂತಹ ಸೂಪರ್ ಹಿಟ್ ಚಿತ್ರ ದೃಶ್ಯವೊಂದನ್ನು ನಯನತಾರಾ ಹಾಗೂ ವಿಘ್ನೇಶ್ ಪುತ್ರರು ಮರುಸೃಷ್ಟಿ ಮಾಡಿದ್ದಾರೆ.

ಈ ಚಿತ್ರದಲ್ಲಿ ರಮ್ಯಕೃಷ್ಣರವರು ಶಿವಗಾಮಿ ಪಾತ್ರದಲ್ಲಿ ನೀರಿನಲ್ಲಿ ಮುಳುಗುತ್ತಿರುವಾಗ ಬಾಹುಬಲಿಯನ್ನು ಕೈಯಲ್ಲಿ ಎತ್ತಿ ಹಿಡಿದಿರುವ ದೃಶ್ಯ ಇಂದಿಗೂ ಎಲ್ಲರ ಮನದಲ್ಲಿ ನೆಲೆಯೂರಿದೆ. ಅಂತಹ ದೃಶ್ಯವನ್ನು ಇದೀಗ ವಿಘ್ನೇಶ್‌ ಅವರು ಮರುಸೃಷ್ಟಿ ಮಾಡಿದ್ದಾರೆ. ತಮ್ಮ ಮಕ್ಕಳಿಗೆ ಬಾಹುಬಲಿ ಸಾಂಪ್ರದಾಯಿಕ ಉಡುಗೆಯನ್ನು ತೊಡಿಸಿ, ವಿಘ್ನೇಶ್ ಅವರು ನೀರಿನಲ್ಲಿ ಮುಳುಗಿಕೊಂಡು ತಮ್ಮ ಮಕ್ಕಳನ್ನು ಕೈಯಲ್ಲಿ ಎತ್ತಿ ಹಿಡಿದಿದ್ದಾರೆ. ಹಾಗೇ ಇದಕ್ಕೆ ಸಂಬಂಧಿಸಿದ ಫೋಟೊವನ್ನು ನಯನತಾರಾ ಅವರು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡು “My dear Baahubali 1&2 cos of U 2. It’s a Happy Father’s Day. Life with U boys sooo sooo amazingly satisfying. Love you my uyir & ulag @nayanathara(sic)” ಎಂಬ ಶೀರ್ಷಿಕೆ ನೀಡಿದ್ದಾರೆ.

ನಯನತಾರಾ ಈ ಫೋಟೊವನ್ನು ಹಂಚಿಕೊಳ್ಳುವ ಮೂಲಕ ವಿಘ್ನೇಶ್ ಶಿವನ್ ಅವರಿಗೆ ತಂದೆಯ ದಿನದ ಶುಭಾಶಯ ತಿಳಿಸಿದ್ದಾರೆ. ಹಾಗೇ ಮಕ್ಕಳ ಆಗಮನದಿಂದ ಅವರ ಜೀವನ ಎಷ್ಟು ತೃಪ್ತಿಕರವಾಗಿದೆ ಎಂಬುದನ್ನು ವಿವರಿಸಿದ್ದಾರೆ.
ನಯನತಾರಾ ಹಾಗೂ ವಿಘ್ನೇಶ್ ತಮ್ಮ ಅವಳಿ ಗಂಡುಮಕ್ಕಳಾದ ಉಯಿರ್ ಮತ್ತು ಉಲಗ್ ಅವರನ್ನು ಅಕ್ಟೋಬರ್ 2022ರಲ್ಲಿ ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು. ಅಂದಿನಿಂದ ಅವರು ತಮ್ಮ ಮುದ್ದಾದ ಮಕ್ಕಳೊಂದಿಗಿನ ಫೋಟೊಗಳು ಮತ್ತು ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಅವರು ತಮ್ಮ ಮಕ್ಕಳೊಂದಿಗೆ ಮೋಜು ಮಸ್ತಿ ಮಾಡಲು ಹಾಂಗ್‌ಕಾಂಗ್‌ಗೆ ಹೋಗಿದ್ದರು.

ಇದನ್ನೂ ಓದಿ: Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

ಪ್ರಸ್ತುತ ನಯನತಾರಾ ಅವರು ನಿವಿನ್ ಪೌಲಿ ಅವರೊಂದಿಗೆ ‘ಡಿಯರ್ ಸ್ಟೂಡೆಂಟ್ಸ್’ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಹಾಗೇ ಟೆಸ್ಟ್’ ಮತ್ತು ‘ಮನ್ನಂಗಟ್ಟಿ 1960’ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ವಿಘ್ನೇಶ್ ಅವರು ಪ್ರದೀಪ್ ರಂಗನಾಥನ್, ಕೃತಿ ಶೆಟ್ಟಿ ಮತ್ತು ಎಸ್.ಜೆ ಸೂರ್ಯ ಅಭಿನಯದ ‘ಲವ್ ಇನ್ಶೂರೆನ್ಸ್ ಕಾರ್ಪೊರೇಷನ್’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

Continue Reading

ಟಾಲಿವುಡ್

Varalaxmi Sarathkumar: ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Varalaxmi Sarathkumar: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 

VISTARANEWS.COM


on

Varalaxmi Sarathkumar invites Rajinikanth for her wedding
Koo

ಬೆಂಗಳೂರು: ತಮಿಳು-ತೆಲುಗು ನಟಿ ವರಲಕ್ಷ್ಮಿ ಶರತ್‌ಕುಮಾರ್ (aralaxmi Sarathkumar) ಅವರು ತಮ್ಮ ಕುಟುಂಬದೊಂದಿಗೆ ರಜನಿಕಾಂತ್, ಹಾಗೂ ಅವರ ಪತ್ನಿ ಲತಾ ಮತ್ತು ಮಗಳು ಐಶ್ವರ್ಯಾ ರಜನಿಕಾಂತ್ ಅವರನ್ನು ಚೆನ್ನೈನ ಪೋಯಸ್ ಗಾರ್ಡನ್‌ನಲ್ಲಿರುವ ಅವರ ಮನೆಗೆ ಭೇಟಿ ನೀಡಿ ಮದುವೆಗೆ ಆಹ್ವಾನಿಸಿದರು. ವರಲಕ್ಷ್ಮಿ ಶರತ್‌ಕುಮಾರ್ ಜತೆ ತಂದೆ ಶರತ್‌ಕುಮಾರ್, ತಾಯಿ ಮತ್ತು ಸಹೋದರಿ ಸೇರಿ ಇಡೀ ಕುಟುಂಬವೇ ಜತೆಗೆ ಇತ್ತು.

ಭೇಟಿಯ ಫೋಟೋಗಳನ್ನು ಹಂಚಿಕೊಂಡಿರುವ ವರಲಕ್ಷ್ಮಿ, “ನಮ್ಮ ತಲೈವರ್ ರಜಿನಿಕಾಂತ್ ಸರ್ ಅವರನ್ನು ಭೇಟಿ ಮಾಡಿದೆ. ಅವರನ್ನು ಮತ್ತು ಲತಾ ಆಂಟಿ ಅವರನ್ನು ಮದುವೆ ಆಹ್ವಾನಿಸಿದೆ. ಧನ್ಯವಾದಗಳು ಸರ್ʼʼಎಂದು ಬರೆದುಕೊಂಡಿದ್ದಾರೆ.

ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 

ಇದನ್ನೂ ಓದಿ: Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

aನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಕಾಲಿವುಡ್

Actor Suriya: ರೆಟ್ರೋ ಲುಕ್‌ನಲ್ಲಿ ಕಂಡ ನಟ ಸೂರ್ಯ; ಸಖತ್‌ ಥ್ರಿಲ್ ಆದ್ರು ಫ್ಯಾನ್ಸ್‌!

Actor Suriya: ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ

VISTARANEWS.COM


on

Actor Suriya retro look from his next film with Karthik Subbaraj
Koo

ಬೆಂಗಳೂರು: ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಮತ್ತು ನಟ ಸೂರ್ಯ (Actor Suriya) ʻಸೂರ್ಯ 44ʼ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ನಟ ಮತ್ತು ನಿರ್ದೇಶಕ ಇಬ್ಬರೂ ಶೂಟಿಂಗ್ ಪ್ರಾರಂಭವಾಗಿದೆ ಎಂದು ವಿಡಿಯೊ ಮೂಲಕ ಘೋಷಿಸಿದ್ದಾರೆ. ಸೂರ್ಯ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿರುವುದನ್ನು ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಚಿತ್ರಕ್ಕಾಗಿ ತೆಗೆದ ಮೊದಲ ಶಾಟ್‌ವನ್ನು ನಟ ಬಹಿರಂಗಪಡಿಸಿದರು.

ಸೂಟ್‌ಕೇಸ್‌ ಜತೆಗೆ ಕುಳಿತುಕೊಂಡು ಸಮುದ್ರದ ಕಡೆಗೆ ನೋಡುತ್ತಿರುವ ಸೂರ್ಯ ಅವರ ಲುಕ್‌ ಬಹಿರಂಗಗೊಂಡಿದೆ. ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಚಿತ್ರದ ಚಿತ್ರೀಕರಣಕ್ಕೆ ಸೆಟ್‌ ಸಿದ್ಧಪಡಿಸಿದೆ ಎನ್ನಲಾಗಿದೆ.ಚಿತ್ರದಲ್ಲಿ ಉರಿಯಾಡಿ ವಿಜಯ್ ಕುಮಾರ್ ಪ್ರತಿಸ್ಪರ್ಧಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ನಟರಾದ ಜಯರಾಮ್ ಮತ್ತು ಜೋಜು ಜಾರ್ಜ್ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದ ತಾರಾಗಣದ ಬಗ್ಗೆ ಅಧಿಕೃತ ಮಾಹಿತಿ ಚಿತ್ರತಂಡ ಹಂಚಿಕೊಂಡಿಲ್ಲ.

ಇದನ್ನೂ ಓದಿ: Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ

ಸದ್ಯ ಸೂರ್ಯ ಅವರು ಶಿವ ನಿರ್ದೇಶನದ ‘ಕಂಗುವ’ ಚಿತ್ರದ ಬಿಡುಗಡೆಗಾಗಿ ಸೂರ್ಯ ಕಾಯುತ್ತಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

Kamal Haasan: ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

VISTARANEWS.COM


on

Kamal Haasan gives a fiery speech at Indian 2 event
Koo

ಚೆನ್ನೈ: ಕಮಲ್‌ ಹಾಸನ್‌ (Kamal Haasan) ಅಭಿನಯದ ʻಇಂಡಿಯನ್ 2ʼ ಸಿನಿಮಾ ಆಡಿಯೊ ಲಾಂಚ್‌ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ನಿರ್ದೇಶಕ ಶಂಕರ್, ಕಮಲ್ ಹಾಸನ್, ಅನಿರುದ್ಧ್ ರವಿಚಂದರ್, ರಕುಲ್ ಪ್ರೀತ್ ಸಿಂಗ್ ಮತ್ತು ಕಾಜಲ್ ಅಗರ್ವಾಲ್, ಸಿಲಂಬರಸನ್ ಟಿಆರ್, ಲೋಕೇಶ್ ಕನಕರಾಜ್, ನೆಲ್ಸನ್ ದಿಲೀಪ್‌ಕುಮಾರ್, ಬಾಬಿ ಸಿಂಹ ಮತ್ತು ಬ್ರಹ್ಮಾನಂದಂ ಹಾಜರಿದ್ದರು. ಕಾರ್ಯಕ್ರಮದಲ್ಲಿ ಅತ್ಯಂತ ಖಡಕ್‌ ಆಗಿ ಭಾಷಣ ಮಾಡಿದರು ಕಮಲ್‌ ಹಾಸನ್‌.

ಕಮಲ್‌ ಭಾಷಣದಲ್ಲಿ ʻʻನಾನು ತಮಿಳಿಗ ಮತ್ತು ಭಾರತೀಯ. ನಾನು ಒಮ್ಮೆ ತಮಿಳಿಗ ಹಾಗೂ ಒಮ್ಮೆ ಭಾರತೀಯ ಎರಡೂ ಆಗಬಲ್ಲೆ. ಒಡೆದು ಆಳುವುದು ಬ್ರಿಟಿಷ್ ಪರಿಕಲ್ಪನೆಯಾಗಿತ್ತು. ಅವರು ಹಾಗೆ ಮಾಡಿದರು. ಏಕೆಂದರೆ ಭಾರತೀಯರು ಒಗ್ಗಟ್ಟಾದಾಗ ಓಡಿಹೋಗಲು ಅವರಿಗೆ ಒಂದು ಮನೆ ಎಂಬುದಿತ್ತು. ಆದರೆ ಇಂದು ಒಡೆದು ಆಳುತ್ತಿರುವವರು ಎಲ್ಲಿಗೆ ಓಡಿಹೋಗುತ್ತಾರೆ?’ ಎಂದು ಅವರು ಪ್ರಶ್ನೆ ಮಾಡಿದರು. ಭಾರತವನ್ನು ಒಡೆದು ಆಳುತ್ತಿರುವವರ ವಿರುದ್ಧ ಭಾರತೀಯರು ಒಂದಲ್ಲ ಒಂದು ದಿನ ದಂಗೆ ಏಳುತ್ತಾರೆ ಎಂದರು.

“ಪ್ರತಿಯೊಂದು ನಗರವೂ ​​ನಿಮ್ಮ ನಗರವೇ, ಎಲ್ಲರೂ ನಿಮ್ಮ ಬಂಧುಗಳೇ. ನಮ್ಮ ಈ ತಮಿಳು ರಾಜ್ಯಕ್ಕೆ ಬಂದವರಿಗೆ ನಾವು ಜೀವ ಕೊಡುವುದರಲ್ಲಿಯೂ ಹೆಸರುವಾಸಿಯಾಗಿದ್ದೇವೆ. ತಮಿಳಿಗನೊಬ್ಬ ದೇಶವನ್ನು ಆಳುವ ದಿನ ಏಕೆ ಬರಬಾರದು? ಇದು ನನ್ನ ದೇಶ, ಮತ್ತು ನಾವು ಏಕತೆಯನ್ನು ಕಾಪಾಡಬೇಕುʼʼಎಂದರು.  ಕಮಲ್ ಹಾಸನ್ ನಟರಾಗಿರುವ ಜೊತೆಗೆ ರಾಜಕಾರಣಿಯೂ ಹೌದು, ‘ಮಕ್ಕಳ್ ನಿಧಿ ಮಯಂ’ ಹೆಸರಿನ ಪಕ್ಷ ಕಟ್ಟಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ `ಇಂಡಿಯನ್ 2‘ (Indian 2 Audio Launch) ಬಿಡುಗಡೆಗೆ ಮುಂಚಿತವಾಗಿ, ಜೂನ್ 1ರಂದು ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಮೆಗಾ ಆಡಿಯೊ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ.

1996ರಲ್ಲಿ ತೆರೆಕಂಡ ಎಸ್‌. ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನೆಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

Continue Reading
Advertisement
Hunters Arrest
ಕ್ರೈಂ18 mins ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ19 mins ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ42 mins ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ48 mins ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ48 mins ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

MS Dhoni
ಕ್ರೀಡೆ52 mins ago

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Road Accident
ರಾಯಚೂರು52 mins ago

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Actor Darshan support by Anusha Rai
ಸ್ಯಾಂಡಲ್ ವುಡ್1 hour ago

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Gold Rate Today
ಚಿನ್ನದ ದರ1 hour ago

Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

GPF Interest
ಕರ್ನಾಟಕ1 hour ago

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು2 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ20 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ21 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌