Basavaraja Bommai : ಸುರ್ಜೇವಾಲಾ ಮೊದಲು ಕಾಂಗ್ರೆಸ್‌ನ ಒಳಜಗಳ ಸರಿಪಡಿಸಲಿ ಎಂದ ಬೊಮ್ಮಾಯಿ - Vistara News

ಕರ್ನಾಟಕ

Basavaraja Bommai : ಸುರ್ಜೇವಾಲಾ ಮೊದಲು ಕಾಂಗ್ರೆಸ್‌ನ ಒಳಜಗಳ ಸರಿಪಡಿಸಲಿ ಎಂದ ಬೊಮ್ಮಾಯಿ

ಕಾಂಗ್ರೆಸ್‌ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್‌ ಸುರ್ಜೇವಾಲಾ ಅವರ ಮೇಲೆ ಸಿಎಂ ಬೊಮ್ಮಾಯಿ (Basavaraja Bommai) ವಾಗ್ದಾಳಿ ನಡೆಸಿದ್ದಾರೆ. ಅವರು ಮೊದಲು ಕಾಂಗ್ರೆಸ್‌ ಒಳಜಗಳ ಸರಿ ಮಾಡಿಕೊಳ್ಳಲಿ ಎಂದಿದ್ದಾರೆ.

VISTARANEWS.COM


on

Bommai in hubli
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿಯಾಗಿರುವ ರಣದೀಪ್ ಸುರ್ಜೇವಾಲ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ? ಅವರು ಕಾಂಗ್ರೆಸ್‌ನ ಒಳಜಗಳವನ್ನು ಮೊದಲು ಸರಿಪಡಿಸಲಿ. ಆಮೇಲೆ ಕರ್ನಾಟಕದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು. ಅವರು ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಿಂದಾಗಿ ನರಕ ಸೃಷ್ಟಿಯಾಗಿದೆ ಎಂದಿರುವ ಸುರ್ಜೇವಾಲಾ ಅವರ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿ,ʻʻ ಕಾಂಗ್ರೆಸ್ ಸೃಷ್ಟಿಸಿದ್ದ ನರಕದಿಂದಾಗಿಯೇ ಅವರನ್ನು ಮನೆ ಜನ ಕಳುಹಿಸಿದ್ದಾರೆ. ಅತ್ಯಂತ ಬೇಜವಾಬ್ದಾರಿಯ ವಿರೋಧ ಪಕ್ಷವಿದು. ಜನರಿಗೆ ತಮ್ಮ, ನಮ್ಮ ವೈಫಲ್ಯಗಳನ್ನು ತೋರಿಸುವ ಬದಲು ಈ ರೀತಿಯ ಮಾತುಗಳು ಜನರ ಮೇಲೆ ಪ್ರಭಾವ ಬೀರುವುದಿಲ್ಲʼʼ ಎಂದರು.

ಅಸುರರ ಪಟ್ಟಿ ದೊಡ್ಡದಿದೆ

ʻʻಬಿಜೆಪಿಯವರು ಅಸುರರು, ಬೊಮ್ಮಾಯಿ ಅವರು ಭ್ರಷ್ಟಾಸುರʼʼ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ʻʻಜನರಿಗೆ ಯಾರು ಅಸುರರು, ಯಾರು ದೇವತೆಗಳು ಎಂದು ಗೊತ್ತಿದೆ. 70 ವರ್ಷ ಆಡಳಿತ ಮಾಡಿರುವ ಕಾಂಗ್ರೆಸನ್ನು ಕಿತ್ತೊಗೆದು ಅಸುರರು ಯಾರೆಂದು ತೋರಿಸಿದ್ದಾರೆ. ಕಾಂಗ್ರೆಸ್ ನಲ್ಲಿರುವ ಅಸುರರ ದೊಡ್ಡ ಪಟ್ಟಿಯೇ ಇದೆʼʼ ಎಂದರು.

ಸುರ್ಜೇವಾಲಾ ನೆನಪಿನ ಶಕ್ತಿ ಕಡಿಮೆಯಾಗಿದೆ

ʻʻರಾಜ್ಯ ಸರ್ಕಾರವು ಕಾಂಗ್ರೆಸ್‌ನ ಗೃಹಲಕ್ಷ್ಮಿ ಯೋಜನೆಯನ್ನು ನಕಲು ಮಾಡಿದೆ. ನಕಲು ಮಾಡುವಾಗಲಾದರೂ ಸ್ವಲ್ಪ ಬುದ್ಧಿ ಉಪಯೋಗಿಸಬೇಕುʼʼ ಎಂಬ ಸುರ್ಜೇವಾಲಾ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ʻʻಅವರಿಗೂ ನಮಗೂ ಬಹಳ ವ್ಯತ್ಯಾವಿದೆ. ಅವರು ಚುನಾವಣೆಗಾಗಿ ಆಕಾಶವನ್ನು ತೋರಿಸಿ ಜನರನ್ನು ಮರಳು ಮಾಡುವ ಪ್ರಯತ್ನ ಮಾಡಿದ್ದಾರೆ. ನಾವು ಯಾವುದಕ್ಕಾಗಿ, ಯಾರಿಗೆ, ಎಷ್ಟು ಹಣವಾಗುತ್ತದೆ ಎಂದು ವಿವರಿಸಿದ್ದೇವೆ. ಅವರು ನಮ್ಮನ್ನು ನಕಲು ಮಾಡಿದ್ದಾರೆ. ನಾವು ಗೃಹಿಣಿ ಶಕ್ತಿ ನೀಡಿದ ಮೇಲೆ ಗೃಹಲಕ್ಷ್ಮಿ ಯೋಜನೆ ಘೋಷಿಸಿದ್ದಾರೆ. ಸುರ್ಜೇವಾಲಾ ಅವರಿಗೆ ನೆನಪಿನ ಶಕ್ತಿ ಕಡಿಮೆಯಾಗಿದೆʼʼ ಎಂದರು.

ಅನುಷ್ಠಾನ ಸಮಿತಿ ರಚನೆ

ಕಳೆದ ಬಾರಿ ಆಯವ್ಯಯ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಬಹುತೇಕ ಶೇ 90 ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕೂಡ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಅನುಷ್ಠಾನ ಸಮಿತಿ ರಚಿಸಿ ಅನುಷ್ಠಾನ ಮಾಡಲಾಗುವುದು ಎಂದರು.

ಕಾಂಗ್ರೆಸ್ಸಿನವರ ಕಿವಿಗಳ ಮೇಲೆ ಶಾಶ್ವತವಾಗಿ ಹೂವಿರಲಿದೆ

ʻʻವಿರೋಧ ಪಕ್ಷದವರು ಕಿವಿ ಮೇಲೆ ಹೂವಿಟ್ಟುಕೊಳ್ಳುವ ಅಭಿಯಾನ ಆರಂಭಿಸಿರುವ ಬಗ್ಗೆ ಉತ್ತರಿಸಿ ಇಷ್ಟು ದಿನ ಜನರಿಗೆ ಅವರು ಕಿವಿ ಮೇಲೆ ಹೂವಿಟ್ಟಿದ್ದು, ಇನ್ನು ಮುಂದೆ ಜನ ನಿಮಗೆ ಕಿವಿ ಮೇಲೆ ಹೂವಿಡುತ್ತಾಋಎ ಎಂದು ವಿಧಾನಸಭೆಯಲ್ಲಿಯೇ ಉತ್ತರಿಸಿದ್ದೇನೆ. ಶಾಶ್ವತವಾಗಿ ಅವರ ಕಿವಿಗಳ ಮೇಲೆ ಹೂವಿರಲಿದೆ. ಚುನಾವಣೆಯಾದ ನಂತರ ಅವರ ಕಿವಿ ಮೇಲೆ ಹೂವಿರಲಿದೆʼʼ ಎಂದರು ಬೊಮ್ಮಾಯಿ.

ಬಣ್ಣ ಬದಲಾಯಿಸುವ ವ್ಯಕ್ತಿ ನಿತೀಶ್‌ ಕುಮಾರ್‌

ವಿರೋಧ ಪಕ್ಷದವರು ಒಗ್ಗೂಡಿದರೆ ಬಿಜೆಪಿಯನ್ನು ಸೋಲಿಸಬುಹುದು ಎಂದಿರುವ ಬಿಹಾರದ ಮುಖ್ಯಮಂತ್ರಿಗಳ ಹೇಳಿಕೆಗೆ ಉತ್ತರಿಸಿ, ನಿತೀಶ್‌ ಕುಮಾರ್ ಅವರು ಎಷ್ಟು ಬಾರಿ ಬಣ್ಣ ಬದಲಾಯಿಸಿದ್ದಾರೆ ಎಂದು ಎಲ್ಲರಿಗೂ ತಿಳಿದಿರುವ ವಿಚಾರ ಬಣ್ಣ ಬದಲಾಯಿಸುವ ವ್ಯಕ್ತಿಯ ಮಾತಿಗೆ ಏನು ಉತ್ತರ ನೀಡಲು ಸಾಧ್ಯ ಎಂದರು.

ಉತ್ತರ ಕರ್ನಾಟಕದ ಪತ್ರಕರ್ತರಿಗೆ ಸೂಕ್ತ ಪ್ರಾತಿನಿಧ್ಯ

ಮಾಧ್ಯಮ ಅಕಾಡೆಮಿಯಿಂದ ಉತ್ತರ ಕರ್ನಾಟಕದ ಪತ್ರಕರ್ತರಿಗೆ ಅನ್ಯಾಯವಾಗುತ್ತಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಕಾಡೆಮಿಗೆ ನಾಮಕರಣವಾಗುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಪತ್ರಕರ್ತರಿಗೆ ಸೂಕ್ತ ಪ್ರಾತಿನಿಧ್ಯ ನೀಡಲು ಕ್ರಮ ವಹಿಸಲಾಗುವುದು ಎಂದರು.

ಇದನ್ನೂ ಓದಿ : Rama Mandir : ರಾಮ ನಗರದಲ್ಲಿ ರಾಮ ಮಂದಿರ ಕಟ್ಟಿಯೇ ಸಿದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Tata Motors: ಟಾಟಾ ಮೋಟಾರ್ಸ್ ಇಂದು ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಸ್ಪೋರ್ಟಿ ವರ್ಷನ್ ಆಗಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡಿದೆ. 1.2 ಲೀ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಕಾರ್ಯಕ್ಷಮತೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. 360 ಡಿಗ್ರಿ ಕ್ಯಾಮೆರಾ, 26.03 ಸೆಂ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳು ಹೀಗೆ ಹಲವಾರು ಫೀಚರ್‌ಗಳನ್ನು ಹೊಂದಿವೆ.

VISTARANEWS.COM


on

Altroz Racer launched by Tata Motors
Koo

ಬೆಂಗಳೂರು: ಭಾರತದ ಪ್ರಮುಖ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ (Tata Motors) ಇಂದು ಕಂಪನಿಯ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಸ್ಪೋರ್ಟಿ ವರ್ಷನ್ ಆಗಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡಿದೆ. 1.2 ಲೀ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಕಾರ್ಯಕ್ಷಮತೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ರೇಸ್ ಕಾರ್‌ಗಳಿಂದ ಸ್ಫೂರ್ತಿ ಪಡೆದು ರಚಿಸಿದ ಹೊರಾಂಗಣ ಮತ್ತು ಒಳಾಂಗಣ ಲುಕ್ ಅನ್ನು ಹೊಂದಿದೆ.

5500 ಆರ್‌ಪಿಎಂನಲ್ಲಿ 120 ಪಿಎಸ್ ಉತ್ಪಾದಿಸುವ, 1750ರಿಂದ 4000 ಆರ್‌ಪಿಎಂನಲ್ಲಿ 170 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ಅಲ್ಟ್ರೋಜ್ ಅತ್ಯುನ್ನತ ಡ್ರೈವಿಂಗ್ ಅನುಭವವನ್ನು ಒದಗಿಸಲಿದೆ. 360 ಡಿಗ್ರಿ ಕ್ಯಾಮೆರಾ, 26.03 ಸೆಂ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು 6 ಏರ್‌ಬ್ಯಾಗ್‌ಗಳು (ರೇಸರ್‌ನಲ್ಲಿ ಸ್ಟ್ಯಾಂಡರ್ಡ್ ಆಗಿ ಬರುತ್ತವೆ) ಹೀಗೆ ಹಲವಾರು ಫೀಚರ್‌ಗಳನ್ನು ಹೊಂದಿರುವ ರೇಸರ್ ಆವೃತ್ತಿಯು ಆಲ್ಟ್ರೊಜ್‌ ಕಾರು ಆವೃತ್ತಿಗಳಲ್ಲಿಯೇ ಅಗ್ರಸ್ಥಾನದಲ್ಲಿದೆ.

ಇದನ್ನೂ ಓದಿ: University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

ಇದು 6 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಒದಗಿಸುವ ಏಕೈಕ ಹ್ಯಾಚ್‌ಬ್ಯಾಕ್ ಆಗಿದ್ದು, ನಗರದ ಟ್ರಾಫಿಕ್ ಮತ್ತು ಹೆದ್ದಾರಿಗಳಲ್ಲಿ ಅತ್ಯುತ್ತಮ ಚಾಲನಾ ಅನುಭವವನ್ನು ಒದಗಿಸುತ್ತದೆ. ಸುಧಾರಿತ ತಂತ್ರಜ್ಞಾನ, ವೈಶಿಷ್ಟ್ಯಗಳು ಮತ್ತು ಹ್ಯಾಚ್‌ಬ್ಯಾಕ್‌ನಲ್ಲಿ ಕ್ಲಾಸ್-ಲೀಡಿಂಗ್ ಸುರಕ್ಷತೆಯನ್ನು ಹೊಂದಿರುವ ಆಲ್ಟ್ರೋಜ್ ರೇಸರ್ 3 ವೇರಿಯಂಟ್‌ಗಳಲ್ಲಿ (ಆರ್1, ಆರ್2 ಮತ್ತು ಆರ್3) ಲಭ್ಯವಿರುತ್ತದೆ. ಮೂರು ಬಣ್ಣಗಳ (ಪ್ಯೂರ್ ಗ್ರೇ, ಅಟಾಮಿಕ್ ಆರೆಂಜ್ ಮತ್ತು ಅವೆನ್ಯೂ ವೈಟ್) ಆಯ್ಕೆ ಗ್ರಾಹಕರಿಗೆ ಸಿಗುತ್ತದೆ.

ಇದರ ಜತೆಗೆ ಅಲ್ಟ್ರೋಜ್ ಶ್ರೇಣಿಯನ್ನು ವಿಸ್ತರಿಸುತ್ತಾ ಟಾಟಾ ಮೋಟಾರ್ಸ್ ಎರಡು ಹೊಸ ವೇರಿಯಟ್‌ಗಳನ್ನು (ಎಕ್ಸ್‌ ಝಡ್‌ ಎಲ್‌ಯುಎಕ್ಸ್‌ ಮತ್ತು ಎಕ್ಸ್‌ ಝಡ್‌+ಎಸ್‌ ಎಲ್‌ಯುಎಕ್ಸ್‌) ಪರಿಚಯಿಸಿದೆ ಮತ್ತು ಅಲ್ಟ್ರೋಜ್ ಶ್ರೇಣಿಯ ಒಂದು ವೇರಿಯಂಟ್ ಅನ್ನು (ಎಕ್ಸ್‌ ಝಡ್‌+ಓಎಸ್) ನವೀಕರಿಸಿದೆ. ಈ ಎರಡು ಹೊಸ ಹೆಚ್ಚುವರಿ ವೇರಿಯಂಟ್‌ಗಳು ಪೆಟ್ರೋಲ್ ಮ್ಯಾನ್ಯುವಲ್, ಪೆಟ್ರೋಲ್ ಡಿಸಿಎ, ಡೀಸೆಲ್ ಮತ್ತು ಸಿ ಎನ್ ಜಿ ವಿಭಾಗಗಳ ಆಯ್ಕೆಯಲ್ಲಿ ಲಭ್ಯವಿರುತ್ತವೆ.

ದರ ಪಟ್ಟಿ

ರೇಸರ್ ವೇರಿಯಂಟ್‌ಗಳು ಪರಿಚಯಾತ್ಮಕ ಬೆಲೆ (ಪೆಟ್ರೋಲ್ ಎಂಟಿ), ಭಾರತೀಯ ರೂಪಾಯಿಗಳಲ್ಲಿ, ಎಕ್ಸ್ ಶೋರೂಂ, ದೆಹಲಿ ಆರ್1 -9,49,000, ಆರ್2- 10,49,000, ಆರ್3- 10,99,000 ಆಗಿವೆ.

ವೇರಿಯಂಟ್‌ಗಳು ಪರಿಚಯಾತ್ಮಕ ಬೆಲೆ (ಪೆಟ್ರೋಲ್ ಎನ್ಎ ಎಂಟಿ), ಭಾರತೀಯ ರೂಪಾಯಿಗಳಲ್ಲಿ, ಎಕ್ಸ್ ಶೋರೂಂ, ದೆಹಲಿ ಎಕ್ಸ್‌ ಝಡ್‌ ಎಲ್‌ಯುಎಕ್ಸ್ (ಹೊಸತು) – 8,99,900, ಎಕ್ಸ್‌ ಝಡ್‌+ಎಸ್ ಎಲ್‌ಯುಎಕ್ಸ್ – (ಹೊಸತು) -9,64,990, ಎಕ್ಸ್‌ ಝಡ್‌+ಓಎಸ್ (ಅಪ್ ಗ್ರೇಡೆಡ್) -9,98,900 ರಷ್ಟಿದೆ.

ಇದನ್ನೂ ಓದಿ: EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

ಟಾಟಾ ಆಲ್ಟ್ರೊಜ್ ರೇಸರ್ ಬಿಡುಗಡೆಯ ಕುರಿತು ಪ್ರತಿಕ್ರಿಯಿಸಿದ ಟಾಟಾ ಪ್ಯಾಸೆಂಜರ್ ಎಲೆಕ್ಟ್ರಿಕ್ ಮೊಬಿಲಿಟಿ ಲಿಮಿಟೆಡ್‌ನ ಮುಖ್ಯ ವಾಣಿಜ್ಯ ಅಧಿಕಾರಿ ವಿವೇಕ್ ಶ್ರೀವತ್ಸ ಮಾತನಾಡಿ, ಪ್ರತಿ ದಿನ ವಾಹನ ಚಾಲನೆ ಮಾಡುವವರಿಗೆ ಉತ್ಕೃಷ್ಟ ಅನುಭವ ಒದಗಿಸಲೆಂದೇ ವಿನ್ಯಾಸಗೊಂಡಿರುವ ಆಲ್ಟ್ರೋಜ್ ರೇಸರ್ ಅನ್ನು ಬಿಡುಗಡೆ ಮಾಡವ ಮೂಲಕ ಆಲ್ಟ್ರೋಜ್ ಶ್ರೇಣಿಯನ್ನು ಬಲಪಡಿಸಲು ಹೆಮ್ಮೆ ಪಡುತ್ತೇವೆ. ವಿಭಾಗ ಪ್ರಮುಖ ವೈಶಿಷ್ಟ್ಯಗಳನ್ನು ಹೊಂದಿರುವ ಮತ್ತು ತಂತ್ರಜ್ಞಾನ ಆಧರಿತವಾಗಿ ರೂಪುಗೊಂಡಿರುವ, ಅತ್ಯುನ್ನತ ಶಕ್ತಿ ಉತ್ಪಾದಿಸುವ ಸಾಮರ್ಥ್ಯ ಹೊಂದಿರುವ ರೇಸರ್, ವಿಭಿನ್ನ ಕಾರನ್ನು ಡ್ರೈವ್ ಮಾಡಲು ಬಯಸುವ, ಕನೆಕ್ಟೆಡ್ ಆಗಿರುವ ಮತ್ತು ಫ್ಯಾಷನ್ ಆಸಕ್ತಿಯನ್ನು ಹೊಂದಿರುವ ಹೊಸ ಪೀಳಿಗೆಯ ಗ್ರಾಹಕರನ್ನು ಹೆಚ್ಚು ಆಕರ್ಷಿಸಬಹುದಾಗಿದೆ.

ಅದ್ಭುತ ಕಾರ್ಯಕ್ಷಮತೆಯ ಡಿಎನ್ಎ ಹೊಂದಿರುವ ಮತ್ತು ರೇಸ್ ಕಾರ್‌ನಿಂದ ಸ್ಫೂರ್ತಿ ಪಡೆದಿರುವ ಲುಕ್ ಹೊಂದಿರುವ ರೇಸರ್ ನಿಮ್ಮನ್ನು #RacePastTheRoutine ಎಂಬ ಭಾವನೆ ಉಂಟು ಮಾಡುವ ಪರಿಪೂರ್ಣ ಒಡನಾಡಿಯಾಗುವ ವಿಶ್ವಾಸ ನಮಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

2.5 ಲಕ್ಷ ಗ್ರಾಹಕರನ್ನು ಹೊಂದಿರುವ ಅಲ್ಟ್ರೋಜ್ ಅದರ ಸೊಗಸಾದ ವಿನ್ಯಾಸ, ಅಪೂರ್ವ ವೈಶಿಷ್ಟ್ಯಗಳು, ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಉತ್ತಮ ಸುರಕ್ಷತೆಯ ಮೂಲಕ ಭಾರತದಲ್ಲಿನ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ಗಳಲ್ಲಿಯೇ ಉನ್ನತ ಮಾನದಂಡವನ್ನು ಸ್ಥಾಪಿಸಿದೆ. ಈ ಕಾರು ಅನೇಕ ವಿಭಾಗಗಳಲ್ಲಿ ಪ್ರವರ್ತಕ ಫೀಚರ್ ಗಳನ್ನು ಹೊಂದಿದೆ. ಗ್ಲೋಬಲ್ ಎಸಿಎಪಿ 5 ಸ್ಟಾರ್ ಸುರಕ್ಷತಾ ರೇಟಿಂಗ್ ಗಳಿಸಿದ ಭಾರತದ ಮೊದಲ ಹ್ಯಾಚ್‌ಬ್ಯಾಕ್ ಎಂಬ ಹೆಗ್ಗಳಿಗೆ ಗಳಿಸಿದೆ. ಟ್ವಿನ್-ಸಿಲಿಂಡರ್ ತಂತ್ರಜ್ಞಾನವನ್ನು ಒಳಗೊಂಡಿರುವ ದೇಶದ ಮೊದಲ ಸಿಎನ್‌ಜಿ ಕಾರ್ ಮತ್ತು ಗ್ರಾಹಕರಿಗೆ ಆಯ್ಕೆ ಮಾಡಲು ಪವರ್‌ಟ್ರೇನ್ ಆಯ್ಕೆಗಳನ್ನು ಒದಗಿಸುವ ಏಕೈಕ ಹ್ಯಾಚ್‌ಬ್ಯಾಕ್ ಆಗಿದೆ.

Continue Reading

ಕರ್ನಾಟಕ

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Bengaluru News: ಆಯುಷ್ ಇಲಾಖೆಯ ವತಿಯಿಂದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

VISTARANEWS.COM


on

Minister Dinesh Gundurao drives 10 days Yogotsava programme in Bengaluru
Koo

ಬೆಂಗಳೂರು: ಯೋಗ ದಿನಾಚರಣೆ (Yoga Day) ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Bengaluru News) ತಿಳಿಸಿದರು.

ಆಯುಷ್ ಇಲಾಖೆಯು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಇಂದಿನಿಂದ ಹಮ್ಮಿಕೊಂಡಿರುವ 10 ದಿನಗಳ ಯೋಗೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ 10 ದಿನಗಳಲ್ಲಿ ಯೋಗವನ್ನು ಹೇಳಿಕೊಡಲಾಗುತ್ತದೆ. ಅಲ್ಲದೇ ಆಯುರ್ವೇದ ಚಿಕಿತ್ಸಾ ಪದ್ದತಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಆಗಲಿದೆ ಎಂದ ಅವರು, ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಹಾಗೂ ಆಯುರ್ವೇದದ ಮಹತ್ವ ನಮ್ಮ ಸಾಮಾನ್ಯ ಜನರಿಗೆ ತಲುಪಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Fortis Hospital: ನೈಜೀರಿಯನ್ ಯುವತಿಗೆ ಯಶಸ್ವಿ ‘ಡ್ಯುಯಲ್ ಕಾಕ್ಲಿಯರ್ ಇಂಪ್ಲಾಂಟ್ ಸರ್ಜರಿ’

ಯೋಗೋತ್ಸವದ ಅಂಗವಾಗಿ ವಿವಿಧ ಸಂಘ-ಸಂಸ್ಥೆಗಳು/ಇಲಾಖೆಗಳು ಆಯುಷ್ಇಲಾಖೆ ಸಹಕಾರದೊಂದಿಗೆ ಜೂನ್ 11 ರಿಂದ 20 ರವರೆಗೆ ಹತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿವೆ. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು /ಸಂಘ ಸಂಸ್ಥೆ ಯೋಗೋತ್ಸವದಲ್ಲಿ ಭಾಗವಹಿಸುತ್ತಿದ್ದು, ಈ 04 ಸಂಸ್ಥೆಗಳಲ್ಲಿ ಸುಮಾರು 4 ಲಕ್ಷ ಮಂದಿ ರಾಜ್ಯಾದ್ಯಂತ ಯೋಗ ಪ್ರದರ್ಶನವನ್ನು ಮಾಡುವುದರ ಮೂಲಕ ಯೋಗೋತ್ಸವನ್ನು ಆಚರಿಸಲಿದ್ದಾರೆ. ಅಲ್ಲದೆ ಈ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯಿಂದ ಆರೋಗ್ಯಕರ ಜೀವನ ಶೈಲಿಯ ಕುರಿತು ಮಾಹಿತಿ ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರಿನಲ್ಲಿನ ಬೆಂಗಳೂರು ಅಪಾರ್ಟ್‌ಮೆಂಟ್ ಅಸೋಸಿಯೇಷನ್, ಪ್ರಜಾಪಿತ ಬ್ರಹ್ಮಕುಮಾರಿ ಸಂಸ್ಥೆ, ಜೈನ್ ಯುನಿರ್ವಸಿಟಿ, ಲೂಲು ಮಾಲ್ ಹಾಗೂ ಮಾಲ್ ಆಫ್ ಏಷ್ಯಾ, ಸ್ಥಳಗಳಲ್ಲಿ ಯೋಗ ತರಬೇತಿ, ಆಯುಷ್ ವೈದ್ಯ ಪದ್ಧತಿಗಳ ಕುರಿತು ಅರಿವು ಹಾಗೂ ಆಯುಷ್ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯುಷ್ ಇಲಾಖಾ ವತಿಯಿಂದ ನಡೆಸಲಾಗುತ್ತಿದೆ.

ಈ ಕಾರ್ಯಕ್ರಮಗಳಿಗೆ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಯೋಗ ಗಂಗೋತ್ರಿ ಟ್ರಸ್ಟ್, ಶ್ರೀ ಪತಂಜಲಿ ಯೋಗಾಶ್ರಮ ಟ್ರಸ್ಟ್, ಸಂಯಮ ಟ್ರಸ್ಟ್ ಹಾಗೂ ಇನ್ನಿತರ ಖಾಸಗಿ ಯೋಗ ಸಂಸ್ಥೆಗಳು ಅಗತ್ಯ ಸಹಕಾರವನ್ನು ನೀಡಲಿದ್ದು, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯದ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ.‌

ಇದೇ ಸಂದರ್ಭದಲ್ಲಿ ಆಯುರ್ವೇದ ಶಬ್ದಕೋಶ, ಯೋಗೋತ್ಸವ ಪೋಸ್ಟರ್, ಯೋಗೋತ್ಸವ ವೆಬ್‌ಸೈಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸುಲು, ಟ್ರಾನ್ಸ್‌ ಡಿಸಿಪ್ಲಿನರಿ ವಿಶ್ವವಿದ್ಯಾಲಯದ ಉಪಕುಲಪತಿ ದರ್ಶನ್ ಶಂಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

Rajeev Taranath: ಹಾಗೆ ನೋಡಿದರೆ ರಾಜೀವ್ ತಾರಾನಾಥ್ ಅವರು ಬಹಳ ಅದ್ಭುತ ಲೇಖಕರು. ಅಂದಿನ ನಮ್ಮ ಹಾಟ್ ಫೇವರಿಟ್ ಲೇಖಕ ಯು.ಆರ್.ಅನಂತಮೂರ್ತಿಯವರ ಕಥಾ ಸಂಕಲನ ‘ಮೌನಿ’ ಕೃತಿಗೆ ಅತ್ಯುತ್ತಮ ಮುನ್ನುಡಿ ಬರೆದಿದ್ದರು. ಅದೆಷ್ಟು ಒಳ್ಳೆಯ ಮುನ್ನುಡಿ ಬರೆದಿದ್ದರೆಂದರೆ, ಸಂಕಲನಕ್ಕಿಂತ ಮುನ್ನುಡಿಯನ್ನೇ ನಾವೆಲ್ಲ ನಾಲ್ಕಾರು ಬಾರಿ ಓದಿದ್ದೆವು. ತೊಂಬತ್ತೆರಡು ವರ್ಷ ಇದ್ದ ರಾಜೀವ್ ಇನ್ನಿಲ್ಲ. ಹಾಗೆನ್ನುವಾಗ, ನಮ್ಮ “ಯಾದೊಂಕೀ ಬಾರಾತ್”ನಲ್ಲಿ ಅವರ ಬರವಣಿಗೆ, ಅವರ ಮಾತು, ಅವರ ತುಂಬು ಕಂಠ, ಅವರ ಅಸದೃಶ ಸರೋದ್ ವಾದನ ಎಲ್ಲವೂ ಒಟ್ಟೊಟ್ಟಿಗೇ ನುಗ್ಗಿನುಗ್ಗಿ ಬರುತ್ತಿವೆ.

VISTARANEWS.COM


on

Rajiv Taranath
Koo

ಮಂಜುನಾಥ ಅಜ್ಜಂಪುರ

ಸಂಗೀತವೇ ಅದ್ಭುತ. ಅದರಲ್ಲೂ ಹಿಂದೂಸ್ತಾನಿ ಸಂಗೀತವೆಂಬುದು ಅನೂಹ್ಯ, ಅಸಾಮಾನ್ಯ. ಅದರ ಭಾವಲೋಕದ ಸಾಧ್ಯತೆಗಳೇ ಅಪಾರ. ಕ್ಷಣಕಾಲ ಕಣ್ಣುಮುಚ್ಚಿ ಕೇಳಿದರೂ ಅನುಭವ ಅನುಭಾವವಾಗಿಬಿಡುತ್ತದೆ.
ಬಾಲ್ಯದಲ್ಲಿ ಕರ್ನಾಟಕ ಸಂಗೀತದ ಕೆಲವು ವಾದ್ಯಗಳನ್ನು ನೋಡಿ ಪರಿಚಯ ಮಾಡಿಕೊಂಡಿದ್ದರೂ ಸಿತಾರ್, ಸರೋದ್, ಸಂತೂರ್, ಬಾನ್ಸುರಿ, ಸಾರಂಗಿಗಳಂತಹ ವಾದ್ಯಗಳನ್ನು ನೋಡುವ ಅವಕಾಶವೇ ಇರಲಿಲ್ಲ. ನಮ್ಮ ತಂದೆಯವರು (ಅಜ್ಜಂಪುರದ ಎ.ಪಿ. ನಾಗರಾಜ ಶ್ರೇಷ್ಠಿಯವರು) ರೇಡಿಯೋದಲ್ಲಿ ಮುಂಜಾನೆ ಬರುತ್ತಿದ್ದ ರಾಮರಾವ್ ನಾಯಕ್, ಮಲ್ಲಿಕಾರ್ಜುನ ಮನ್ಸೂರ್ ಮೊದಲಾದವರ ಗಾಯನ ಕೇಳುತ್ತಿದ್ದರು. ಕೇಳಿ ಕೇಳಿ ನಾನೂ ಹಿಂದೂಸ್ತಾನಿ ಸಂಗೀತ ಕೇಳುವ – ಆನಂದಿಸುವ ಸಂಸ್ಕಾರ ಬೆಳೆಸಿಕೊಂಡೆ. 1970ರ ದಶಕದ ಆರಂಭದ ಆ ಕಾಲದಲ್ಲಿ, ಪ್ರತಿ ವರ್ಷ ಆಕಾಶವಾಣಿಯಲ್ಲಿ ಬರುತ್ತಿದ್ದ ರೇಡಿಯೋ ಸಂಗೀತ ಸಮ್ಮೇಳನಗಳು, ಗಾಯನ ಮತ್ತು ವಾದ್ಯ ಸಂಗೀತಗಳ ಪರಮಾದ್ಭುತ ಲೋಕಕ್ಕೆ ಕರೆದೊಯ್ಯುತ್ತಿದ್ದವು. ಹಾಗೆ ವಿಜಯರಾಘವ ರಾವ್, ಬಿಸ್ಮಿಲ್ಲಾ ಖಾನ್, ಪರ್ವೀನ್ ಸುಲ್ತಾನಾ, ಶಿವಕುಮಾರ್ ಶರ್ಮ ಮೊದಲಾದವರ ದಿವ್ಯ ಸಂಗೀತದ ಪರಿಚಯವಾಯಿತು. ವಿಶೇಷವಾಗಿ ಸರೋದ್, ಸಂತೂರ್ ಮತ್ತು ಬಾನ್ಸುರಿಗಳು ಅಂದಿಗೂ – ಇಂದಿಗೂ ನನಗೆ ಬಹಳ ಬಹಳ ಆಪ್ಯಾಯಮಾನ.

ಇಂದಿಗೂ ಪ್ರತಿನಿತ್ಯ ಕೇಳುತ್ತೇನೆ

ಹಾಗೆ ತಮ್ಮ ಸರೋದ್ ನಿಂದ ಪರಿಚಯವಾದವರು ರಾಜೀವ್ ತಾರಾನಾಥ್ (Rajeev Taranath). ಹಾಗೆ ನೋಡಿದರೆ, ಅವರು ಬಹಳ ಅದ್ಭುತ ಲೇಖಕರು. ಅಂದಿನ ನಮ್ಮ ಹಾಟ್ ಫೇವರಿಟ್ ಲೇಖಕ ಯು.ಆರ್.ಅನಂತಮೂರ್ತಿಯವರ ಕಥಾ ಸಂಕಲನ “ಮೌನಿ” ಕೃತಿಗೆ ಅತ್ಯುತ್ತಮ ಮುನ್ನುಡಿ ಬರೆದಿದ್ದರು. ಅದೆಷ್ಟು ಒಳ್ಳೆಯ ಮುನ್ನುಡಿ ಬರೆದಿದ್ದರೆಂದರೆ, ಸಂಕಲನಕ್ಕಿಂತ ಮುನ್ನುಡಿಯನ್ನೇ ನಾವೆಲ್ಲ ನಾಲ್ಕಾರು ಬಾರಿ ಓದಿದ್ದೆವು. ಇದೆಲ್ಲ ಅರ್ಧ ಶತಮಾನಕ್ಕೂ ಹಿಂದಿನ ವಿಷಯ.

ಬಹುಮುಖ ಪ್ರತಿಭೆಯ ಮತ್ತು ಕ್ರಾಂತಿಕಾರಿ ವ್ಯಕ್ತಿತ್ವದ ತಾರಾನಾಥರು ಇವರ ತಂದೆ. ಸಾಹಿತ್ಯವಂತೂ ಸಹಜವಾಗಿಯೇ ರಾಜೀವರಿಗೆ ಒಲಿದಿತ್ತು. ಆದರೂ ಅನಂತರದ ವರ್ಷಗಳಲ್ಲಿ ಅವರು ಸಂಗೀತಕ್ಕೆ ಆದ್ಯತೆ, ಪ್ರಾಧಾನ್ಯ ನೀಡಿದರು. ಬೆಂಗಳೂರಿನಲ್ಲಿ ಒಮ್ಮೆ ಅವರ ಸರೋದ್ ವಾದನದ ಕಛೇರಿ ಇತ್ತು. ಪ್ರಾಯಶಃ 1979 ಇಲ್ಲವೇ 1980 ಇರಬಹುದು. ಬಸವನಗುಡಿಯ ದೊಡ್ಡ ಗಣೇಶನ ಬಳಿಯ ಕಹಳೆ ಬಂಡೆಯ ಬಳಿ ಮುಂಜಾನೆಯೇ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಜೀವರನ್ನು ಮತ್ತು ಸರೋದ್ ವಾದ್ಯವನ್ನು ಮೊದಲ ಬಾರಿಗೆ ನೋಡುವ ಅವಕಾಶ. ಲೇಖಕ ರಾಜೀವರ ಅಭಿಮಾನಿಗಳಾದ ಮತ್ತು ಸರೋದ್ ವಾದನದ ಅಭಿಮಾನಿಗಳೂ ಆದ ನಮ್ಮಂತಹವರಿಗೆ ಅದೊಂದು ಸುವರ್ಣಾವಕಾಶವಾಗಿತ್ತು. “ಕ್ಯಾಲಿಫೋರ್ನಿಯಾದಿಂದ ಬಂದೆ” ಎಂದಿದ್ದರು. ನಾನೂ, ಮಾಲಾ ಸರೋದ್ ಕಚೇರಿ ಕೇಳಿದ್ದೇ ಅದೇ ಮೊದಲು. ರೇಡಿಯೋದಲ್ಲಿ ಕೇಳುವುದಕ್ಕೂ, ಮಹಾನ್ ಕಲಾವಿದರನ್ನು ನೇರಾನೇರ ನೋಡುತ್ತ ಕೇಳುವುದಕ್ಕೂ ತುಂಬ ವ್ಯತ್ಯಾಸವಿದೆ.

ಇನ್ನೊಮ್ಮೆ ಆರ್.ವಿ.ಕಾಲೇಜಿನಲ್ಲೂ ಅದೇ ಕಾಲಘಟ್ಟದಲ್ಲಿ ರಾಜೀವ್ ತಾರಾನಾಥರ ಸರೋದ್ ವಾದನ ಕೇಳುವ ದಿವ್ಯ ಅವಕಾಶ ನಮಗೆ ದೊರೆತಿತ್ತು. ಆ ಕಾಲವೇ ಹಾಗಿತ್ತು. ರೇಡಿಯೋ ಬಿಟ್ಟರೆ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಮಾತ್ರವೇ ಕೇಳುವ – ನೋಡುವ ಅವಕಾಶ ಲಭ್ಯ.

ಇದನ್ನೂ ಓದಿ: Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

ದಿಗ್ಗಜರ ಒಡನಾಟ

ರಾಜೀವ್ ತಾರಾನಾಥರ ಬಹು ಆಯಾಮಗಳ ಪ್ರತಿಭೆಯ ಆಸ್ವಾದನಕ್ಕೆ ದೊರೆತ ಮತ್ತೊಂದು ಅವಕಾಶ ಎಂದರೆ, 1983ರಲ್ಲಿ ಗಿರೀಶ್ ಕಾಸರವಳ್ಳಿಯವರು ನಡೆಸಿಕೊಟ್ಟ 8 ದಿನಗಳ ಚಲನಚಿತ್ರ ರಸಗ್ರಹಣ ಶಿಬಿರ. ಗೆಳೆಯ ಅಪೂರ್ವ ಅಜ್ಜಂಪುರ ಅವರೊಂದಿಗೆ, ನಾನೂ – ಮಾಲಾ ಶಿಬಿರದಲ್ಲಿ ಭಾಗವಹಿಸಿದ್ದೆವು. ಇಂದಿಗೂ ನೆನಸಿಕೊಳ್ಳುವಂತಹ ಅಪೂರ್ವ ಶಿಬಿರವದು. ಚಲನಚಿತ್ರಗಳ ಸಂಗೀತದ ಆಯಾಮದ ಬಗೆಗೆ ರಾಜೀವ್ ವಿವರಣೆ ನೀಡುತ್ತಿದ್ದರು. ನೆನಪು ಮಾಡಿಕೊಂಡರೆ, ಇಂದಿಗೂ ರೋಮಾಂಚನವಾಗುತ್ತದೆ. ಅದು ಅಕ್ಷರಶಃ ದಿಗ್ಗಜರ ಒಡನಾಟ.
ಒಮ್ಮೆ ಜರ್ಮನಿಯ ಯಾತನಾ ಶಿಬಿರಗಳ ಸಾಕ್ಷ್ಯಚಿತ್ರ “ನೈಟ್ ಅಂಡ್ ಫಾಗ್” ತೋರಿಸಿದರು. Rarest ಎನ್ನಬಹುದಾದ ದೃಶ್ಯಗಳ ತುಣುಕುಗಳು ಅವು. ಮನಸ್ಸು, ಹೃದಯಗಳನ್ನು ಬಹುಕಾಲ ಕಲಕಿಬಿಡುವಂತಹ ಅನುಭವವಾಯಿತು. ಆ ಸಾಕ್ಷ್ಯಚಿತ್ರ ನೋಡಿ ಮುಗಿದ ಮೇಲೆ ನಮಗೆ, ಅಂದರೆ ಶಿಬಿರಾರ್ಥಿಗಳಿಗೆ, ರಾಜೀವ್ ” ಹಿಟ್ಲರನ ಸೈನ್ಯದ ಮೆರೆವಣಿಗೆಯ ದೃಶ್ಯದ ಅವಧಿಯಲ್ಲಿ ಹಿನ್ನೆಲೆ ಸಂಗೀತಕ್ಕೆ ಸಂಬಂಧಿಸಿದಂತೆ ಏನು ಗಮನಿಸಿದಿರಿ?” ಎಂದರು. ಆ ಇಡೀ ಸಾಕ್ಷ್ಯಚಿತ್ರ ಅತ್ಯಂತ ವೇದನಾದಾಯಕವಾದುದರಿಂದ, ಶಿಬಿರಾರ್ಥಿಗಳಿಗೆ ಹಿನ್ನೆಲೆ ಸಂಗೀತದ ಆ different ಆಯಾಮವನ್ನು ಗಮನಿಸಲು ಆಗಿರಲೇ ಇಲ್ಲ. ಕೊನೆಗೆ ರಾಜೀವ್ ಆ ದೃಶ್ಯವನ್ನು ಇನ್ನೊಮ್ಮೆ play ಮಾಡಿಸಿದರು. ಸೈನಿಕರ ಆ ಪಥಸಂಚಲನಕ್ಕೆ ಅಳುವ ಹಿನ್ನೆಲೆ ಸಂಗೀತವನ್ನು (Mourning Music) ನೀಡಲಾಗಿತ್ತು. ಅದು ಸೈನಿಕರ ಅಬ್ಬರದ ಪಥಸಂಚಲನವಾದರೂ, ಹಿಟ್ಲರನ ಪಡೆಗಳು ಎಸಗಿದ ಅಪಾರ ಕ್ರೌರ್ಯವನ್ನು ಆ ಸಂಗೀತ ಅದ್ಭುತವಾಗಿ ಪರಿಣಾಮಕಾರಿಯಾಗಿ ತೆರೆಯಮೇಲೆ ಹೊಮ್ಮಿಸಿತ್ತು.

ಡಾ|| ಯು.ಆರ್.ಅನಂತಮೂರ್ತಿ ಅವರ “ಸಮಕ್ಷಮ” ಅಪರೂಪದ ಸಂದರ್ಶನಗಳ ಸಂಕಲನವೂ ಹೌದು. ಅಲ್ಲಿ ರಾಜೀವ್ ತಾರಾನಾಥರ ಸಂದರ್ಶನವೂ ಇತ್ತು. ಶಿಬಿರದ ಬಿಡುವಿನಲ್ಲಿ ರಾಜೀವ್ ಅವರೊಂದಿಗೆ ಮಾತನಾಡುವಾಗ ಸಹಜವಾಗಿಯೇ ಅವರ ಆ ಸಂದರ್ಶನದ ವಿಷಯವು ಪ್ರಸ್ತಾಪವಾಗಿ ರೋಮಾಂಚನವಾಗುತ್ತಿತ್ತು.
ತೊಂಬತ್ತೆರಡು ವರ್ಷ ಇದ್ದ ರಾಜೀವ್ ಇನ್ನಿಲ್ಲ. ಹಾಗೆನ್ನುವಾಗ, ನಮ್ಮ “ಯಾದೊಂಕೀ ಬಾರಾತ್”ನಲ್ಲಿ ಅವರ ಬರವಣಿಗೆ, ಅವರ ಮಾತು, ಅವರ ತುಂಬು ಕಂಠ, ಅವರ ಅಸದೃಶ ಸರೋದ್ ವಾದನ ಎಲ್ಲವೂ ಒಟ್ಟೊಟ್ಟಿಗೇ ನುಗ್ಗಿನುಗ್ಗಿ ಬರುತ್ತಿವೆ.

ಅವರ ಅಪಾರ ಪ್ರತಿಭೆಗೆ ನಮೋ ನಮಃ.

Continue Reading

ಪ್ರಮುಖ ಸುದ್ದಿ

Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

Murder News : ಪದೇ ಪದೆ ಬೆದರಿಕೆ ಹಾಕುತ್ತಿದ್ದ ರಾಜೇಶ್​ಗೆ ಸೌಮ್ಯವಾಗಿ ಮಾತನಾಡಿದ್ದ ಪ್ರೇಮಾ ತನ್ನ ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಸಹೋದರ ಶಿವುನ ನೆರವಿನಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದಾಳೆ.
ನಂಜನಗೂಡು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

VISTARANEWS.COM


on

Murder News
Koo

ಮೈಸೂರು: ಖಾಸಗಿ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿ ಮರ್ಯಾದೆ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಪ್ರಿಯಕರನ್ನು ವಿವಾಹಿತ ಮಹಿಳೆಯೊಬ್ಬಳು ಸಹೋದರನ ಜತೆ ಸೇರಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ (Murder News) ಎಚ್​​​ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಬಳಿ ನಡೆದಿದೆ. ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಕೊಲೆ ಆರೋಪಿಗಳು. 32 ವರ್ಷದ ರಾಜೇಶ್​ ಕೊಲೆಯಾದ ವ್ಯಕ್ತಿ.

ಆರೋಪಿ ಪ್ರೇಮಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾರೆ. ಅವರು 15 ವರ್ಷದ ಹಿಂದೆ ನಂಜನಗೂಡಿನ ಶ್ರೀರಾಂಪುರಕ್ಕೆ ಮದುವೆ ಆಗಿ ಬಂದಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾಳ ಪತಿ ಆತ್ಮಹತ್ಯೆ. ಮಾಡಿಕೊಂಡಿದ್ದರು. ಆ ಬಳಿಕ ಪ್ರೇಮಾ ಪತಿಯ ಸ್ನೇಹಿತ ರಾಜೇಶ್​ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅವರಿಬ್ಬರು ಖಾಸಗಿ ಕ್ಷಣಗಳನ್ನೂ ಕಳೆದಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಂಡಿದ್ದ ರಾಜೇಶ್​​, ಆ ಕ್ಷಣದ ಫೋಟೋಗಳನ್ನು ತೆಗೆದಿಟ್ಟುಕೊಂಡು ಬೆದರಿಕೆ ಹಾಕಲು ಆರಂಭಿಸಿದ್ದ. ಬೆದರಿದ ಪ್ರೇಮಾ ಆತನ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದಾಳೆ. ಅಂತೆಯೇ ಆತನನ್ನು ತನ್ನ ಬಳಿಗೆ ಕರೆಸಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

ಪದೇ ಪದೆ ಬೆದರಿಕೆ ಹಾಕುತ್ತಿದ್ದ ರಾಜೇಶ್​ಗೆ ಸೌಮ್ಯವಾಗಿ ಮಾತನಾಡಿದ್ದ ಪ್ರೇಮಾ ತನ್ನ ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಸಹೋದರ ಶಿವುನ ನೆರವಿನಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದಾಳೆ.
ನಂಜನಗೂಡು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ


ಮೈಸೂರು: ಮೈಸೂರಿನ ಸಿದ್ದಾರ್ಥನಗರದಲ್ಲಿ ಅನ್ನದಾನೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಅವರ ಆಪ್ತ ಸಹಾಯಕನಿಂದಲೇ ಬರ್ಬರವಾಗಿ ಕೊಂದು (Murder case ) ಹಾಕಿದ್ದ. ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ರವಿ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥಗೊಂಡಿದ್ದ ಆರೋಪಿ ರವಿಯನ್ನು ಪೊಲೀಸರು ಕೆಆರ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಡಿತದ ಚಟಕ್ಕೆ ಒಳಗಾಗಿದ್ದ ರವಿಗೆ ಶಿವಾನಂದ ಸ್ವಾಮೀಜಿ ಬುದ್ಧಿವಾದ ಹೇಳಿದ್ದರು. ಸ್ವಾಮೀಜಿ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ರವಿ ಕೊಲೆ ಮಾಡಿದ್ದ ಎನ್ನಲಾಗಿದೆ. ಸದ್ಯ ಆರೋಪಿ‌ ರವಿ ಗುಣಮುಖನಾದ ಬಳಿಕ ಪೊಲೀಸರು ತನಿಖೆಯನ್ನು ಮುಂದುವರಿಸಲಿದ್ದಾರೆ.

ಏನಿದು ಪ್ರಕರಣ?
ನಿನ್ನೆ ಸೋಮವಾರ (ಜೂ.10) ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿತ್ತು. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು. ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿತ್ತು.

ರವಿ (60) ಎಂಬಾತನಿಂದ ಈ ಕೃತ್ಯ ನಡೆದಿತ್ತು. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

Continue Reading
Advertisement
Job Alert
ಉದ್ಯೋಗ7 mins ago

Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Actor Darshan political leaders appeal to the CM and Home Minister not to twist case
ಸ್ಯಾಂಡಲ್ ವುಡ್10 mins ago

Actor Darshan : ದರ್ಶನ್‌ ಪರ ವಹಿಸಿ ಸಿಎಂ, ಗೃಹ ಸಚಿವರಿಗೆ ಮನವಿ ಮಾಡಿದ್ರಾ ರಾಜಕೀಯ ನಾಯಕರು?

Actor Darshan Renukaswamy Send His Photos To Pavitra Gowda
ಸ್ಯಾಂಡಲ್ ವುಡ್13 mins ago

Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

Fraud Case
ಕ್ರೈಂ17 mins ago

Fraud Case: 300 ರೂ. ಬೆಲೆಯ ನಕಲಿ ಆಭರಣವನ್ನು ವಿದೇಶಿ ಮಹಿಳೆಗೆ 6 ಕೋಟಿ ರೂ.ಗೆ ಮಾರಿದರು!

Vastu Tips
ಧಾರ್ಮಿಕ36 mins ago

Vastu Tips: ಈ ನಕಾರಾತ್ಮಕ ವಸ್ತುಗಳನ್ನು ಮನೆಯಲ್ಲಿ ಇಡಲೇಬೇಡಿ!

Altroz Racer launched by Tata Motors
ಕರ್ನಾಟಕ40 mins ago

Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

Pawan Kalyan
ದೇಶ41 mins ago

Pawan Kalyan: ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಪವನ್‌ ಕಲ್ಯಾಣ್‌ ಆಯ್ಕೆ; ಇಂದು ಪ್ರಮಾಣ ವಚನ ಸ್ವೀಕಾರ

Minister Dinesh Gundurao drives 10 days Yogotsava programme in Bengaluru
ಕರ್ನಾಟಕ43 mins ago

Bengaluru News: 10 ದಿನಗಳ ‘ಯೋಗೋತ್ಸವ’ಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

Rajiv Taranath
ಪ್ರಮುಖ ಸುದ್ದಿ46 mins ago

Rajeev Taranath : ಮಹೋನ್ನತ ಪ್ರತಿಭೆಯ ರಾಜೀವ್ ತಾರಾನಾಥ್ ಸರೋದ್ ಲೋಕದ ಅದ್ಭುತ!

Actor Darshan Arrested Vijayalakshmi Darshan Unfollow Darshan On Instagram
ಸ್ಯಾಂಡಲ್ ವುಡ್53 mins ago

Actor Darshan Arrested : ದರ್ಶನ್​ನ ಅನ್​ಫಾಲೋ ಮಾಡಿ ಡಿಪಿ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ17 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ18 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ20 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ22 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌