IND VS AUS: ಆಸ್ಟ್ರೇಲಿಯಾ ವಿರುದ್ಧದ ಮುಂದಿನ 2 ಟೆಸ್ಟ್ ಪಂದ್ಯ​ ಮತ್ತು ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ - Vistara News

ಕ್ರಿಕೆಟ್

IND VS AUS: ಆಸ್ಟ್ರೇಲಿಯಾ ವಿರುದ್ಧದ ಮುಂದಿನ 2 ಟೆಸ್ಟ್ ಪಂದ್ಯ​ ಮತ್ತು ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್​ ಶರ್ಮಾ ವೈಯಕ್ತಿಕ ಕಾರಣದಿಂದಾಗಿ ಹೊರಗುಳಿಯಲಿದ್ದಾರೆ.

VISTARANEWS.COM


on

IND VS AUS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಆಸ್ಟ್ರೇಲಿಯಾ ವಿರುದ್ಧದ ದ್ವಿತೀಯ ಟೆಸ್ಟ್​ ಪಂದ್ಯ ಮುಕ್ತಾಯ ಕಂಡ ಬೆನ್ನಲ್ಲೇ ಬಿಸಿಸಿಐ ಮುಂದಿನ ಎರಡು ಟೆಸ್ಟ್​ ಮತ್ತು ಏಕದಿನ ಸರಣಿಗೆ ಟೀಮ್​ ಇಂಡಿಯಾವನ್ನು ಪ್ರಕಟಿಸಿದೆ.

ಬಾರ್ಡರ್​-ಗವಾಸ್ಕರ್​ ಟೆಸ್ಟ್​ ಸರಣಿಯ ಮುಂದಿನ 2 ಪಂದ್ಯಗಳಿಗೆ ತಂಡದಲ್ಲಿ ಭಾರಿ ಬದಲಾವಣೆ ಸಂಭವಿಸಿಲ್ಲ. ಈ ಮೊದಲು ಟೆಸ್ಟ್​ ಸರಣಿಯಲ್ಲಿ ತಂಡದಲ್ಲಿ ಅವಕಾಶ ಪಡೆದಿದ್ದ ಜೈದೇವ್​​ ಉನಾದ್ಕತ್​ ಅವರನ್ನು ಮತ್ತೆ ತಂಡಕ್ಕೆ ಸೇರಿಸಲಾಗಿದೆ. ರಣಜಿ ಫೈನಲ್​ ಪಂದ್ಯದ ನಿಮಿತ್ತ ಅವರನ್ನು ದ್ವಿತೀಯ ಟೆಸ್ಟ್​ ಪಂದ್ಯದಿಂದ ಕೈ ಬಿಡಲಾಗಿತ್ತು. ಆದರೆ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ರೋಹಿತ್​ ಶರ್ಮಾ ಕುಟುಂಬ ಕಾರ್ಯಕ್ರಮದ ನಿಮಿತ್ತ ಗೈರಾಗಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಹಾರ್ದಿಕ್​ ಪಾಂಡ್ಯ ಮೊದಲ ಪಂದ್ಯದಲ್ಲಿ ತಂಡದ ನಾಯಕತ್ವ ವಹಿಸಲಿದ್ದಾರೆ.

ದ್ವಿತೀಯ ಏಕದಿನ ಪಂದ್ಯದ ವೇಳೆ ರೋಹಿತ್​ ತಂಡಕ್ಕೆ ಮತ್ತೆ ಮರಳಿ ನಾಯಕತ್ವ ವಹಿಸಲಿದ್ದಾರೆ. ಪ್ರಸಕ್ತ ಸಾಲಿನ ರಣಜಿ ವಿಜೇತ ಸೌರಾಷ್ಟ್ರ ತಂಡದ ನಾಯಕ ಜೈದೇವ್​ ಉನಾದ್ಕತ್​ ಅಚ್ಚರಿ ಎಂಬಂತೆ ಏಕ ದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಬೆನ್ನು ನೋವಿನಿಂದ ಚೇತರಿಕೆ ಕಾಣುತ್ತಿರುವ ಜಸ್​ಪ್ರೀತ್​ ಬುಮ್ರಾ ಟೆಸ್ಟ್​ ಸರಣಿಯಿಂದ ಹೊರಗುಳಿದಿದ್ದರೂ ಅವರು ಏಕದಿನ ಸರಣಿಯಲ್ಲಿ ತಂಡಕ್ಕೆ ಮರಳುವ ನಿರೀಕ್ಷೆ ಇತ್ತು. ಆದರೆ ಇದು ಹುಸಿಗೊಂಡಿದೆ. ಮೂರು ಪಂದ್ಯಗಳ ಏಕದಿನ ಸರಣಿಗೆ ಪ್ರಕಟಗೊಂಡ ತಂಡದಲ್ಲಿ ಅವರು ಅವಕಾಶ ಪಡೆದಿಲ್ಲ. ಇನ್ನೊಂದೆಡೆ ರವೀಂದ್ರ ಜಡೇಜಾ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ.

ಆಸೀಸ್​ ವಿರುದ್ಧದ ಮುಂದಿನ ಎರಡು ಟೆಸ್ಟ್​ ಪಂದ್ಯಕ್ಕೆ ಭಾರತ ತಂಡ

ಭಾರತ: ರೋಹಿತ್​ ಶರ್ಮಾ(ನಾಯಕ), ಚೇತೇಶ್ವರ ಪೂಜಾರ, ವಿರಾಟ್​ ಕೊಹ್ಲಿ, ಕೆ.ಎಲ್​. ರಾಹುಲ್, ಸೂರ್ಯಕುಮಾರ್​ ಯಾದವ್, ಶ್ರೇಯಸ್​ ಅಯ್ಯರ್​, ಅಕ್ಷರ್​ ಪಟೇಲ್​, ಕೆ.ಎಸ್​ ಭರತ್​, ರವೀಂದ್ರ ಜಡೇಜಾ, ಆರ್​. ಅಶ್ವಿನ್​, ಮೊಹಮ್ಮದ್​ ಸಿರಾಜ್​, ಮೊಹಮ್ಮದ್​ ಶಮಿ, ಕುಲ್​ದೀಪ್​ ಯಾದವ್​, ಉಮೇಶ್​ ಯಾದವ್​, ಜೈದೇವ್​ ಉನಾದ್ಕತ್​, ಇಶಾನ್​ ಕಿಶನ್​.

ಇದನ್ನೂ ಓದಿ IND VS AUS: 100ನೇ ಟೆಸ್ಟ್​ ಪಂದ್ಯವನ್ನಾಡಿದ ಪೂಜಾರಗೆ ವಿಶೇಷ ಉಡುಗೊರೆ ನೀಡಿದ ಆಸೀಸ್​ ತಂಡ

ಆಸೀಸ್​ ವಿರುದ್ಧದ ಏಕದಿನ ಸರಣಿಗೆ​ ಭಾರತ ತಂಡ

ರೋಹಿತ್​ ಶರ್ಮಾ(ನಾಯಕ), ಶುಭಮನ್​ ಗಿಲ್​, ವಿರಾಟ್​ ಕೊಹ್ಲಿ, ಕೆ.ಎಲ್​. ರಾಹುಲ್, ಸೂರ್ಯಕುಮಾರ್​ ಯಾದವ್, ಶ್ರೇಯಸ್​ ಅಯ್ಯರ್​, ಅಕ್ಷರ್​ ಪಟೇಲ್​, ರವೀಂದ್ರ ಜಡೇಜಾ, ಮೊಹಮ್ಮದ್​ ಸಿರಾಜ್​, ಮೊಹಮ್ಮದ್​ ಶಮಿ, ಕುಲ್​ದೀಪ್​ ಯಾದವ್​, ಉಮ್ರಾನ್​ ಮಲಿಕ್​​, ಜೈದೇವ್​ ಉನಾದ್ಕತ್​. ಇಶಾನ್​ ಕಿಶನ್​, ಶಾರ್ದೂಲ್ ಠಾಕೂರ್​, ಯಜುವೇಂದ್ರ ಚಹಲ್, ವಾಷಿಂಗ್ಟನ್​ ಸುಂದರ್​. (ಮೊದಲ ಪಂದ್ಯಕ್ಕೆ ರೋಹಿತ್​ ಅಲಭ್ಯ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Smriti Mandhana: ಸ್ಮೃತಿ ಮಂಧಾನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ಗಳನ್ನು ಪೂರ್ತಿಗೊಳಿಸಿದ ಮೈಲುಗಲ್ಲು ನಿರ್ಮಿಸಿದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾತಿಘ ಎನ್ನುವ ಹಿರಿಗೆಮೆ ಪಾತ್ರರಾದರು.

VISTARANEWS.COM


on

Smriti Mandhana
Koo

ಬೆಂಗಳೂರು: ಭಾನುವಾರ ನಡೆದ ದಕ್ಷಿಣ ಆಫ್ರಿಕಾ(NDW vs RSAW) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ 143 ರನ್​ ಜಯ ಸಾಧಿಸಿ ಸರಣಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಸೊಗಸಾದ ಬ್ಯಾಟಿಂಗ್​ ನಡೆಸಿ ಶತಕ ಬಾರಿಸಿದ ಎಡಗೈ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ(Smriti Mandhana) ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪದಲ್ಲಿ ಸೇರಿ 7 ಸಾವಿರ ರನ್‌ಗಳನ್ನು ಪೂರ್ಣಗೊಳಿಸಿದ ದಾಖಲೆ ಬರೆದಿದ್ದಾರೆ. ಮಂಧನಾ ಅವರ 6ನೇ ಏಕದಿನ ಶತಕ ಇದಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 56 ರನ್‌ಗಳನ್ನು ಕಲೆ ಹಾಕುತ್ತಿದ್ದಂತೆ ಸ್ಮೃತಿ ಮಂಧಾನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ಗಳನ್ನು ಪೂರ್ತಿಗೊಳಿಸಿದ ಮೈಲುಗಲ್ಲು ನಿರ್ಮಿಸಿದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾತಿಘ ಎನ್ನುವ ಹಿರಿಗೆಮೆ ಪಾತ್ರರಾದರು. ದಾಖಲೆ ಮಾಜಿ ಆಟಗಾರ್ತಿ ಮಿಥಾಲಿ ರಾಜ್(Mithali Raj) ಹೆಸರಿನಲ್ಲಿದೆ. ಮಿಥಾಲಿ ರಾಜ್ ಅವರು 10868 ರನ್‌ಗಳನ್ನು ಬಾರಿಸಿದ್ದಾರೆ. 7,059 ರನ್​ ಪೂರ್ತಿಗೊಳಿಸಿದ ಮಂಧಾನಗೆ ಬಿಸಿಸಿಐ ಶುಭ ಹಾರೈಸಿದೆ.


ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದಕೊಂಡ ಭಾರತ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. 15 ರನ್​ ಒಟ್ಟುಗೂಡುವಷ್ಟರಲ್ಲಿ ಶಫಾಲಿ ವರ್ಮ(7) ವಿಕೆಟ್​ ಪತನಗೊಂಡಿತು. ಬಳಿಕ ಬಂದ ಹೇಮಲತಾ(12), ಜೆಮಿಮಾ ರೋಡ್ರಿಗಸ್​(17), ನಾಯಕಿ ಹರ್ಮನ್​ ಪ್ರೀತ್​ ಕೌರ್​(10), ರಿಚಾ ಘೋಷ್​(3) ಕಳಪೆ ಬ್ಯಾಟಿಂಗ್​ ನಡೆಸಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಏಕಾಂಗಿಯಾಗಿ ಹೋರಾಡಿದ ಮಂಧನಾ ಶತಕ ಬಾರಿಸಿ ತಂಡದ ಪಾಲಿಗೆ ಆಪತ್ಬಾಂಧವರಾಗಿ ಮೂಡಿಬಂದರು.

47ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಮಂಧಾನ 12 ಬೌಂಡರಿ ಮತ್ತು ಒಂದು ಸಿಕ್ಸರ್​ ಸಿಡಿಸಿ 117 ರನ್​ ಬಾರಿಸಿದರು. ಇವರಿಗೆ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದ ದೀಪ್ತಿ ಶರ್ಮ ಮತ್ತು(37) ಮತ್ತು ಪೂಜಾ ವಸ್ತ್ರಾಕರ್​(31*) ಉತ್ತಮ ಸಾಥ್​ ನೀಡಿದರು. ಹೀಗಾಗಿ ತಂಡ 250ರ ಗಡಿ ದಾಟಿತು. ಚೇಸಿಂಗ್​ ನಡೆಸಿದ ದಕ್ಷಿಣ ಆಫ್ರಿಕಾ ಆಶಾ ಸೋಬನಾ( 4 ವಿಕೆಟ್​) ಅವರ ಸ್ಪಿನ್​ ಬೌಲಿಂಗ್​ ದಾಳಿಗೆ ಕೇವಲ 122 ರನ್​ಗೆ ಸರ್ವಪತನ ಕಂಡಿತು. ಪದಾರ್ಪಣ ಪಂದ್ಯದಲ್ಲೇ ಆಶಾ ಸೋಬನಾ ಅಮೊಘ ಪ್ರದರ್ಶನ ತೋರುವ ಮೂಲಕ ಭಾರತ ತಂಡದಲ್ಲಿ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಳ್ಳುವ ಭರವಸೆ ಮೂಡಿಸಿದ್ದಾರೆ.

ಇದನ್ನೂ ಓದಿ Smriti Mandhana: ಆರ್​ಸಿಬಿ ಅಭಿಮಾನಿಗಳ ಕ್ರೇಜ್​ಗೆ ಫಿದಾ ಆದ ಸ್ಮೃತಿ ಮಂಧಾನ

ಸಂಕ್ಷಿಪ್ತ ಸ್ಕೋರ್‌: ಭಾರತ-8 ವಿಕೆಟಿಗೆ 265 (ಮಂಧನಾ 117, ದೀಪ್ತಿ 37, ಪೂಜಾ ಔಟಾಗದೆ 31, ಅಯಬೊಂಗಾ ಖಾಕಾ 47ಕ್ಕೆ 3, ಮಸಬಟಾ ಕ್ಲಾಸ್‌ 51ಕ್ಕೆ 2). ದಕ್ಷಿಣ ಆಫ್ರಿಕಾ-37.4 ಓವರ್‌ಗಳಲ್ಲಿ 122 (ಸುನೆ ಲೂಸ್‌ 33, ಸಿನಾಲೊ ಜಾಫ‌¤ 27, ಮರಿಜಾನ್‌ ಕಾಪ್‌ 24, ಆಶಾ 21ಕ್ಕೆ 4, ದೀಪ್ತಿ 10ಕ್ಕೆ 2). ಪಂದ್ಯಶ್ರೇಷ್ಠ: ಸ್ಮೃತಿ ಮಂಧನಾ

Continue Reading

ಕ್ರೀಡೆ

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BAN vs NEP: ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ಸೋಮವಾರ ನಡೆದ ಟಿ20 ವಿಶ್ವಕಪ್​ನ(T20 World Cup 2024) ಲೀಗ್​ ಪಂದ್ಯದಲ್ಲಿ ನೇಪಾಳ(BAN vs NEP) ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡರೂ ಕೂಡ ಅಭಿಮಾನಿಯೊಬ್ಬ ನೇಪಾಳ ತಂಡಕ್ಕೆ ಬೆಂಬಲ ಸೂಚಿಸಿದ ರೀತಿ ಎಲ್ಲರ ಗಮನಸೆಳೆದಿದೆ. ಬಾಂಗ್ಲಾದೇಶದ ವಿಕೆಟ್​ ಪತನಗೊಂಡ ವೇಳೆ ಈ ಅಭಿಮಾನಿ ಸ್ಟೇಡಿಯಂನಲ್ಲಿದ್ದ ಸ್ವಿಮ್ಮಿಂಗ್ ಪೂಲ್​ಗೆ(Nepal Fan Jumps in Swimming Pool) ಜಿಗಿದು ಸಂಭ್ರಮಿಸಿದ್ದಾನೆ. ಈ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೊ ಎಲ್ಲೆಡೆ ವೈರಲ್​ ಆಗಿದೆ.

ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ. ಈ ವಿಡಿಯೊವನ್ನು ಐಸಿಸಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವುದರ ಜತೆಗೆ ಈ ದೃಶ್ಯಕ್ಕೆ ಉತ್ತಮ ಎಸೆತ, ಉತ್ತಮ ಕ್ಯಾಚ್, ಉತ್ತಮ ಪೂಲ್ ಆಚರಣೆ ಎಂದು ಇನ ಬರೆದುಕೊಂಡಿದೆ.


ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು. ಈ ಗೆಲುವಿನೊಂದಿಗೆ ಬಾಂಗ್ಲಾ ಸೂಪರ್​-8 ಹಂತಕ್ಕೂ ಪ್ರವೇಶ ಪಡೆಯಿತು. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading

ಕ್ರೀಡೆ

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

T20 World Cup 2024: ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024) ಟೂರ್ನಿಯ ಸೂಪರ್​-8 ಹಂತದ(Super Eight stage) ತಂಡಗಳ ಪಟ್ಟಿ ಅಂತಿಮಗೊಂಡಿದೆ. ಇಂದು(ಸೋಮವಾರ) ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೇಪಾಳ ವಿರುದ್ಧ ಗೆಲುವು ಸಾಧಿಸುವ ಮೂಲಕ ಈ ಪಟ್ಟಿ ಅಂತಿಮಗೊಂಡಿತು. 7 ತಂಡಗಳು ಈಗಾಗಲೇ ಈ ಹಂತಕ್ಕೇರಿತ್ತು. ಆದರೆ ಉಳಿದ ಒಂದು ಸ್ಥಾನಕ್ಕಾಗಿ ಡಿ ಗುಂಪಿನಿಂದ ಬಾಂಗ್ಲಾ ಮತ್ತು ನೆದರ್ಲೆಂಡ್ಸ್​ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಬಾಂಗ್ಲಾ ಮೇಲುಗೈ ಸಾಧಿಸಿ ಅಂತಿಮವಾಗಿ ತೇರ್ಗಡೆಗೊಂಡಿದೆ.

ಬಾಂಗ್ಲಾದೇಶ ‘ಎ’ ಗುಂಪಿನಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಅಪಘಾನಿಸ್ತಾನದ ಜತೆ ಸ್ಥಾನ ಪಡೆದಿದೆ. ‘ಬಿ’ ಗುಂಪಿನಲ್ಲಿ ವೆಸ್ಟ್​ ಇಂಡೀಸ್​, ಅಮೆರಿಕ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್​ ತಂಡಗಳು ಕಾಣಿಸಿಕೊಂಡಿವೆ. ಲೀಗ್​ ಹಂತದ ಪಂದ್ಯಕ್ಕೆ ನಾಳೆ ತೆರೆ ಬೀಳಲಿದೆ. ಅಂತಿಮ ಪಂದ್ಯದಲ್ಲಿ ವಿಂಡೀಸ್​ ಮತ್ತು ಆಫ್ಘಾನ್​ ಮುಖಾಮುಖಿಯಾಗಲಿವೆ. ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಅಫಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ಜೂನ್​ 20ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 24 ಭಾನುವಾರದಂದು ನಡೆಯಲಿದೆ. ಟೀಮ್​ ಇಂಡಿಯಾದ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರಗೊಳ್ಳಲಿದೆ.

ಇದನ್ನೂ ಓದಿ BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

ಭಾರತದ ಸೂಪರ್​-8 ಪಂದ್ಯದ ವೇಳಾಪಟ್ಟಿ

ಎದುರಾಳಿದಿನಾಂಕತಾಣಪ್ರಸಾರ
ಭಾರತ-ಅಫಘಾನಿಸ್ತಾನಜೂನ್​ 20ಬಾರ್ಬಡೋಸ್ರಾತ್ರಿ 8ಕ್ಕೆ
ಭಾರತ-ಬಾಂಗ್ಲಾದೇಶಜೂನ್​ 22ಆಂಟಿಗುವಾರಾತ್ರಿ 8ಕ್ಕೆ
ಭಾರತ-ಆಸ್ಟ್ರೇಲಿಯಾಜೂನ್​ 24ಸೇಂಟ್ ಲೂಸಿಯಾರಾತ್ರಿ 8ಕ್ಕೆ

ಬಾಂಗ್ಲಾಗೆ 21 ರನ್​ ಜಯ


ಸೋಮವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೇಪಾಳ ವಿರುದ್ಧ 21 ರನ್​ ಅಂತರದಿಂದ ಗೆದ್ದು ಸೂಪರ್​-8ಗೆ ಪ್ರವೇಶ ಪಡೆಯಿತು. ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading

ಕ್ರೀಡೆ

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

BAN vs NEP: ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ತಂಜಿಮ್ ಹಸನ್ ಸಾಕಿಬ್(7ಕ್ಕೆ 4) ಅವರ ಘಾತಕ ಬೌಲಿಂಗ್​ ದಾಳಿಯ ನೆರವಿನಿಂದಾಗಿ ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ(BAN vs NEP) ಮೇಲುಗೈ ಸಾಧಿಸಿದೆ. ನೇಪಾಳ ವಿರುದ್ಧ 21 ರನ್​ ಅಂತರದಿಂದ ಗೆದ್ದು ಸೂಪರ್​-8ಗೆ ಪ್ರವೇಶ ಪಡೆದಿದೆ. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಬಾಂಗ್ಲಾ ಗೆಲುವಿನಿಂದ ನೆದರ್ಲೆಂಡ್ಸ್​ ತಂಡ ಟೂರ್ನಿಯಿಂದ ಹೊರಬಿದ್ದಿತು.

ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು.

ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋಲು ಕಾಣುತ್ತಿದ್ದರೆ, ನೆದರ್ಲೆಂಡ್ಸ್​ ತಂಡಕ್ಕೂ ಸೂಪರ್​-8 ಹಂತಕ್ಕೇರುವ ಅವಕಾಶವಿತ್ತು. ಆದರೆ ಬಾಂಗ್ಲಾ ಗೆಲುವಿನಿಂದ ನೆದರ್ಲೆಂಡ್ಸ್​ ತಂಡ ಹೊರಬಿದ್ದಿತು. ನೆದರ್ಲೆಂಡ್ಸ್​ ತಂಡ ಲಂಕಾ ವಿರುದ್ಧ 83 ರನ್​ ಅಂತರದ ಸೋಲು ಕಂಡಿತು. ಈ ಪಂದ್ಯ ಗೆದ್ದಿದ್ದರೂ ಕೂಡ ನೆದರ್ಲೆಂಡ್ಸ್​ಗೆ ಯಾವುದೇ ಲಾಭವಾಗುತ್ತಿರಲಿಲ್ಲ.

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಇದನ್ನೂ ಓದಿ T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾ ತಂಡ ಖಾತೆ ತೆರೆಯುವ ಮುನ್ನವೇ ವಿಕೆಟ್​ ಕಳೆದುಕೊಂಡಿತು. ಬಳಿಕ ಬಂದ ಆಟಗಾರರು ಕೂಡ ಸತತವಾಗಿ ವಿಕೆಟ್​ ಕಳೆದುಕೊಂಡು ಪೆವಿಲಿಯನ್​ ಪರೇಡ್​ ನಡೆಸಿದರು. ನಾಯಕ ಶಕೀಬ್​ ಅಲ್​ ಹಸನ್​ 17 ರನ್​ ಬಾರಿಸಿದ್ದೇ ತಂಡದ ಪರ ಆಟಗಾರನೊಬ್ಬ ಬಾರಿಸಿದ ಗರಿಷ್ಠ ಸ್ಕೋರ್​. ನೇಪಾಳ ಪರ ಸೋಂಪಾಲ್ ಕಾಮಿ(2), ಅತ್ಯಾಚಾರ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ಇದೀಗ ನಿರಪರಾಧಿ ಎನಿಸಿಕೊಂಡಿರುವ ಸಂದೀಪ್ ಲಮಿಚಾನೆ(2), ನಾಯಕ ರೋಹಿತ್ ಪೌಡೆಲ್(2) ಮತ್ತು ದೀಪೇಂದ್ರ ಸಿಂಗ್(2) ವಿಕೆಟ್​ ಕಿತ್ತರು.

Continue Reading
Advertisement
Reasi Terror Attack
ವೈರಲ್ ನ್ಯೂಸ್2 mins ago

Reasi Terror Attack: ಪಾಕಿಸ್ತಾನದಲ್ಲಿ ರಿಯಾಸಿ ಭಯೋತ್ಪಾದಕ ದಾಳಿಯ ಮಾಸ್ಟರ್‌ ಮೈಂಡ್‌ನ ಹತ್ಯೆ; ವಿಡಿಯೊ ವೈರಲ್‌

Bakrid 2024
ಬೆಂಗಳೂರು15 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Actor Darshan Please leave Pavitra Darshan request to police
ಸಿನಿಮಾ27 mins ago

Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

Bakrid
Latest28 mins ago

Bakrid: ಬಕ್ರೀದ್ ಹಿನ್ನೆಲೆಯಲ್ಲಿ ಮಾರಾಟಕ್ಕಿಟ್ಟಿದ್ದ ಈ ಮೇಕೆಯ ಬೆಲೆ 69 ಲಕ್ಷ ರೂ!

Real Estate
ವಾಣಿಜ್ಯ33 mins ago

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Smriti Mandhana
ಕ್ರೀಡೆ35 mins ago

Smriti Mandhana: ಶತಕ ಬಾರಿಸಿ ವಿಶೇಷ ದಾಖಲೆ ಬರೆದ ಸ್ಮೃತಿ ಮಂಧಾನ

Actress Nayanathara
Latest45 mins ago

Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

Actor Darshan Rakshak Bullet Not Celebrating His Birthday Due To Darshan Arrest
ಸ್ಯಾಂಡಲ್ ವುಡ್49 mins ago

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

pattanagere shed darshan renuka swamy murder
ಕ್ರೈಂ56 mins ago

Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

murder Case in chikkodi
ಬೆಳಗಾವಿ1 hour ago

Murder Case : ನಡುರಸ್ತೆಯಲ್ಲಿ ಚಿಮ್ಮಿದ ರಕ್ತ; ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು15 mins ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ18 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ19 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌