Sindhuri Vs Roopa : ಪುರುಷ ಅಧಿಕಾರಿಗಳಿಗೆ ಅಂಥ ಚಿತ್ರ ಯಾಕೆ ಕಳಿಸಬೇಕು, ಸಂಸಾರ ಹಾಳು ಮಾಡೋಕಾ?; ರೂಪಾ ಗಂಭೀರ ಪ್ರಶ್ನೆ - Vistara News

ಕರ್ನಾಟಕ

Sindhuri Vs Roopa : ಪುರುಷ ಅಧಿಕಾರಿಗಳಿಗೆ ಅಂಥ ಚಿತ್ರ ಯಾಕೆ ಕಳಿಸಬೇಕು, ಸಂಸಾರ ಹಾಳು ಮಾಡೋಕಾ?; ರೂಪಾ ಗಂಭೀರ ಪ್ರಶ್ನೆ

ರೋಹಿಣಿ ಸಿಂಧೂರಿಯವರು (Sindhuri Vs Roopa) ಅಂಥ ಖಾಸಗಿ ಚಿತ್ರಗಳನ್ನು ಮೂವರು ಪುರುಷ ಅಧಿಕಾರಿಗಳಿಗೆ ಕಳುಹಿಸುವ ಉದ್ದೇಶವೇನು? ಅವರ ಸಂಸಾರ ಹಾಳು ಮಾಡುವ ಉದ್ದೇಶವೇ? ಹೀಗೆಂದು ಪ್ರಶ್ನಿಸಿದ್ದಾರೆ. ಜತೆಗೆ ತಾನೇಕೆ ಫೋಟೊ ಬಿಡುಗಡೆ ಮಾಡಿದೆ ಎಂಬುದನ್ನೂ ವಿವರಿಸಿದ್ದಾರೆ.

VISTARANEWS.COM


on

D roopa Rohini sindhuri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ಡಿ. ರೂಪಾ (Sindhuri Vs Roopa) ಅವರ ನಡುವಿನ ಬೀದಿ ಜಗಳ ರಾತ್ರಿಯಾದರೂ ನಿಂತಿಲ್ಲ. ಸಾಮಾಜಿಕ ಜಾಲ ತಾಣ ಮತ್ತು ಮಾಧ್ಯಮಗಳ ಮೂಲಕ ಅವರಿಬ್ಬರೂ ಜಗಳ ಮುಂದುವರಿಸಿದ್ದಾರೆ.

ತಮ್ಮ ಖಾಸಗಿ ಚಿತ್ರಗಳನ್ನು ಸೋಷಿಯಲ್‌ ಮೀಡಿಯಾ ಮತ್ತು ವಾಟ್ಸ್‌ ಆಪ್‌ ಸ್ಟೇಟಸ್‌ನಿಂದ ತೆಗೆದು ಪ್ರಕಟಿಸುವ ಮೂಲಕ ತೇಜೋವಧೆ ಮಾಡಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ರೋಹಿಣಿ ಸಿಂಧೂರಿ ಎಚ್ಚರಿಸಿದ್ದಾರೆ. ಇದೇ ವೇಳೆ ಡಿ. ರೂಪಾ ಅವರು ಇಂಥ ಫೋಟೊಗಳನ್ನು ಬಿಡುಗಡೆ ಮಾಡಬೇಕಾಗಿತ್ತಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದಲೂ ಕೇಳಿಬಂದಿದೆ.

ಇದಕ್ಕೆ ಸ್ವತಃ ಡಿ. ರೂಪಾ ಅವರೇ ಉತ್ತರ ನೀಡಿದ್ದಾರೆ. ಫೇಸ್‌ ಬುಕ್‌ ಪೋಸ್ಟ್‌ ಮೂಲಕ ಅವರು ಮತ್ತೆ ಸಿಂಧೂರಿ ಅವರನ್ನು ಕೆಣಕಿದ್ದು, ಯಾಕೆ ಈ ಫೋಟೊಗಳನ್ನು ಹಾಕಿದೆ ಎನ್ನುವುದಕ್ಕೆ ವಿವರಣೆ ನೀಡಿದ್ದಾರೆ.

ʻʻನಾನು ಯಾಕೆ ಆಕೆಯ ಪಿಕ್ಚರ್ಸ್ ಹಾಕಿದೆ ಅಂತ ಕೇಳುವವರಿಗೆ ನಾನು ಹೇಳೋದು ಇಷ್ಟೇ.. ಫೋಟೊ ಕಳಿಸುವಾಕೆಗೆ ಅದರ ದರ್ದು ಇಲ್ಲ ಅಂದ ಮೇಲೆ ಬೇರೆಯವರಿಗೆ ಯಾಕೆ ಇರಬೇಕು? ಈ ರೀತಿಯ ಪಿಕ್ಚರ್ಸ್ ಎಲ್ಲೂ ಅವರ ಸಾಮಾಜಿಕ ಜಾಲತಾಣದಲ್ಲಿಲ್ಲ. ಯಾರು ಯಾರಿಗೆ, ಯಾಕೆ ಕಳಿಸಿದರು ಅಂತ ಅವರೇ ಅವರ ಬಾಯಿಂದ ಹೇಳಲಿ. ಹೀಗೆ ಫೋಟೊ ಕಳುಹಿಸುವುದರ ಹಿಂದಿನ ಉದ್ದೇಶ ಏನು? ಸಂಸಾರಗಳಲ್ಲಿ ಹುಳಿ ಹಿಂಡುವುದೇ?ʼʼ ಎಂದು ಅವರು ಪ್ರಶ್ನಿಸಿದ್ದಾರೆ.

ʻʻಒಬ್ಬ ಹೆಣ್ಣಾಗಿ ಅನೇಕ ಹೆಣ್ಣು ಮಕ್ಕಳಿಗೆ ಮುಳ್ಳು ಆದ ಈಕೆಯ ಮೇಲೆ ಕನಿಕರ ಇಟ್ಟುಕೊಂಡಿರುವ ಕೆಲವರೇ, ಕೇಳಿ, ನಿಮ್ಮದು misplaced sympathy, ಅಂದರೆ ಅನಗತ್ಯವಾದ ಕರುಣೆʼʼ ಎಂದಿದ್ದಾರೆ ರೂಪಾ.

ಮೂವರು ಐಎಎಸ್‌ ಅಧಿಕಾರಿಗಳಿಗೆ ಫೋಟೊ!

ರೂಪಾ ಅವರ ಪ್ರಕಾರ, ರೋಹಿಣಿ ಸಿಂಧೂರಿಯವರು ಇಂಥ ಫೋಟೊಗಳನ್ನು ಮೂವರು ಐಎಎಸ್‌ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಅವರೇ ಹೇಳುವ ಪ್ರಕಾರ, ʻʻಈ ರೀತಿಯ ಪಿಕ್ಚರ್ಸ್ ಕೆಲವರಿಗೆ ನಾರ್ಮಲ್‌ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂವರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳ ನೇರವಾಗಿ ಕಳಿಸುತ್ತಾರೆ ಅಂದ್ರೆ ಅದಕ್ಕೆ ಏನರ್ಥ?ʼʼ ಎಂದು ಪ್ರಶ್ನಿಸಿದ್ದಾರೆ.

ʻʻಇದು ಆಕೆಯ ಖಾಸಗಿ ವಿಷಯ ಆಗುವುದಿಲ್ಲ ಐಎಎಸ್ ಸೇವಾ ನಡವಳಿಕೆಗಳ ನಿಯಮಾವಳಿ ಪ್ರಕಾರ ಅಪರಾಧ. ಈ ಚಿತ್ರಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ತನಿಖೆ ಮಾಡಬಹುದು. ಸಲೂನ್‌ನಲ್ಲಿ ಹೇರ್‌ ಕಟ್‌ ಮಾಡಿಸಿಕೊಳ್ಳುವ ಚಿತ್ರ, ತಲೆದಿಂಬು ಇಟ್ಟು ಮಲಗಿ ತೆಗೆದಿರುವ ಚಿತ್ರ, ಕೆಲವರಿಗೆ ನಾರ್ಮಲ್‌ ಅನಿಸಬಹುದು. ಆದರೆ, ಕಳಿಸಿರುವ ಸನ್ನಿವೇಶ ಬೇರೇನೋ ಹೇಳುತ್ತದೆʼʼ ಎಂದು ನೇರದಾಳಿ ಮಾಡಿದ್ದಾರೆ ಡಿ. ರೂಪಾ.

ಇದನ್ನೂ ಓದಿ : Sindhuri Vs Roopa : ಸಿಂಧೂರಿ- ರೂಪಾ ಜಗಳದಲ್ಲಿ ಡಿ.ಕೆ. ರವಿ ಪತ್ನಿ ಕುಸುಮಾ ಎಂಟ್ರಿ: ಕರ್ಮ ಫಲ ಸಿಕ್ಕೇ ಸಿಗುತ್ತದೆ ಅಂತ ಹೇಳಿದ್ಯಾರಿಗೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

KRS Dam: ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಮುಹೂರ್ತದಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಲಾಯಿತು.

VISTARANEWS.COM


on

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
Koo

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯ (ಕೆಆರ್‌ಎಸ್‌) ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಬಾಗಿನ ಅರ್ಪಿಸಿದರು. ಬೆಳಗ್ಗೆ 11 ಗಂಟೆಗೆ ಅಭಿಜಿನ್ ಮುಹೂರ್ತದಲ್ಲಿ ಜಲಾಶಯಕ್ಕೆ (KRS Dam) ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂತರ ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಬಾಗಿನ ಅರ್ಪಿಸುವ ವೇಳೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯಸ್ವಾಮಿ, ವೆಂಕಟೇಶ್, ಮೈಸೂರು ಹಾಗೂ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ?: ಸಿಎಂ ಪ್ರಶ್ನೆ

ಮೈಸೂರು: ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಕೇಂದ್ರ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಫೆರಿಫೆರಲ್ ರಿಂಗ್ ರೋಡ್‌ಗೆ 3000 ಕೋಟಿ ಕೊಡುವುದಾಗಿ ಹೇಳಿದ್ದರು. ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..? ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು. ಈಗಲೂ ಸುಳ್ಳು ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐಐಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.

ಕೇಂದ್ರದ ನೀತಿಗಳಿಂದ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಶೇ.31 ಕಡಿಮೆಯಾಗಿದೆ

15ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ. ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ. 31 ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.

ಅವರೇ 2023-24 ನೇ ಬಜೆಟ್‌ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿಗಳನ್ನು ಕೊಟ್ಟಿಲ್ಲ . ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು ಎಂದರು.

ಕೇಂದ್ರ ಸರ್ಕಾರ 15 ಲಕ್ಷ ಕೋಟಿ ಸಾಲ ಮಾಡಿದೆ

ಕೇಂದ್ರದ ಧೋರಣೆಗೆ ನೀತಿ ಆಯೋಗದ ಸಭೆಯನ್ನು ನಾವು ಬಹಿಷ್ಕರಿಸಿದೆವು. ತಮಿಳುನಾಡು, ತೆಲಂಗಾಣ ಹಾಗೂ ಬಿಜೆಪಿ ವಿರುದ್ಧವಾಗಿರುವ ಅನೇಕ ರಾಜ್ಯಗಳು ಹೋಗಿಲ್ಲ. ಮಮತಾ ಬ್ಯಾನರ್ಜಿ ಅವರು ಸಭೆಗೆ ಹಾಜರಾಗಿ ಮಾತನಾಡಲು ಸಮಯ ನೀಡಿಲ್ಲ ಎಂದು ಸಭೆಯಿಂದ ಹೊರನಡೆದರು ಎಂದರು. ಇವರು ನಮಗೆ ಪಾಠ ಹೇಳಿಕೊಡುತ್ತಾರೆ. ಇವರ ತಪ್ಪುಗಳಿಗೆ ಇಂದು ದೇಶದಲ್ಲಿ ಹೂಡಿಕೆಯಾಗುತ್ತಿಲ್ಲ. ನಾವು ಸಾಲ ಹೆಚ್ಚು ಮಾಡಿದ್ದೇವೆ ಎನ್ನುತ್ತಾರೆ. ನಾವು ವಿತ್ತೀಯ ಹೊಣೆಗಾರಿಕೆ ಕಾಯ್ದೆಯಡಿ ಜಿಡಿಪಿಯ ಶೇ 25% ರೊಳಗೇ ಇದ್ದೇವೆ. ಅವರು ಸುಮಾರು 15 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದರು.

ಕರ್ನಾಟಕ ಭ್ರಷ್ಟ ರಾಜ್ಯವಲ್ಲ

ಕರ್ನಾಟಕದ ಸಂಸದರು ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಬೇಕು. ಕರ್ನಾಟಕ ಭ್ರಷ್ಟ ರಾಜ್ಯ ಎಂದು ಅವರು ಮಸಿ ಬಳಿಯುತ್ತಿದ್ದಾರೆ. ಕರ್ನಾಟಕ ಭ್ರಷ್ಟ ರಾಜ್ಯವಲ್ಲ. ನಾವು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತಿದೆ ಎಂದರು.

ಹೂಡಿಕೆ ಕುರಿತು ಸ್ಪಷ್ಟನೆ

ಕರ್ನಾಟಕದಲ್ಲಿ ಕೈಗಾರಿಕೆಗಳು ಹೂಡಿಕೆ ಮಾಡಲು ಮುಂದಾಗುತ್ತಿಲ್ಲ ಎಂಬ ಕೇಂದ್ರ ಹಣಕಾಸು ಸಚಿವರ ಹೇಳಿಕೆಗೆ ಸಂಬಂಧಪಟ್ಟಂತೆ ಎಂ. ಬಿ.ಪಾಟೀಲ್ ಹಾಗೂ ಪ್ರಿಯಾಂಕ ಖರ್ಗೆಯವರಿಗೆ ಈ ಬಗ್ಗೆ ಮಾತನಾಡಲು ಸೂಚಿಸುವುದಾಗಿ ಹೇಳಿದರು.

ಬಿಜೆಪಿ ಪಾದಯಾತ್ರೆ: ರಾಜಕೀಯವಾಗಿ ವಿರೋಧಿಸುತ್ತೇವೆ

ವಾಲ್ಮೀಕಿ ಮತ್ತು ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಮಾಡಲಿ, ನಾವೂ ಕೂಡ ರಾಜಕೀಯವಾಗಿ ವಿರೋಧಿಸುತ್ತೇವೆ. ವಾಲ್ಮೀಕಿ ಹಗರಣದಲ್ಲಿ ನಾವು 84.63 ಕೋಟಿ ಹಗರಣವಾಗಿದೆ ಎನ್ನುವುದು ನಿಜ. ಎಸ್.ಐ.ಟಿ ರಚನೆಯಾಗಿದ್ದು ತನಿಖೆಯಾಗುತ್ತಿದೆ. ಅವರೂ ಕೂಡ ಸಿಬಿಐ, ಇಡಿಯವರೂ ತನಿಖೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ?

ಉಪಮುಖ್ಯಮಂತ್ರಿಗಳು ಅಯೋಗ್ಯ ಅಧಿಕಾರಿಗಳು ಹೀಗೆ ಮಾಡಿದ್ದಾರೆ ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿಲ್ಲವೇ? ಅದಕ್ಕಾಗಿಯೇ 21 ಹಗರಣಗಳನ್ನು ಪಟ್ಟಿ ಮಾಡಿ ಹೇಳಿದ್ದೇನೆ ಎಂದರು. ಕೆಲವು ತನಿಖೆಗಳು ನಡೆಯುತ್ತಿವೆ. ರಾಘವೇಂದ್ರ ಸಹಕಾರಿ ಬ್ಯಾಂಕ್ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ. ಇಂದಿನವರೆಗೂ ಸಿಬಿಐ ತನಿಖೆ ಪೂರ್ಣಗೊಳಿಸಿಲ್ಲ. ಅವರ ಅವಧಿಯಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ಕೊಟ್ಟಿಲ್ಲ. 7-8 ಹಗರಣಗಳನ್ನು ಸಿಬಿಐಗೆ ವಹಿಸಲಾಗಿದೆ. ಇದೆ ಬಿಜೆಪಿ ನಾವು ಅಧಿಕಾರದಲ್ಲಿದ್ದಾಗ ಸಿಬಿಐ ಅನ್ನು ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐ ಗೆ ಮೇಲೆ ಇವರಿಗೇನು ಪ್ರೀತಿ ಎಂದರು. ಈ ಕುರಿತ ದಾಖಲೆಗಳನ್ನು ನಾನು ಕೊಡುತ್ತೇನೆ ಎಂದರು.

ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ

ಮುಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು. ಕೋವಿಡ್ 19 ಸಂದರ್ಭದಲ್ಲಿ 3 ರಿಂದ 4 ಸಾವಿರ ಕೋಟಿ ರೂಪಾಯಿ ನುಂಗಿ ಹಾಕಿದ್ದಾರೆ. ನ್ಯಾಯಾಂಗ ತನಿಖೆ ಅಥವಾ ಸಿಬಿಐಗೆ ವಹಿಸಲು ಕೊಡಿ ಎಂಡು ಒತ್ತಾಯಿಸಿದೆ. ಆದರೆ ಅವರು ಕೊಡಲಿಲ್ಲ ಎಂದರು. ಯಾವುದೇ ತಪ್ಪಿಲ್ಲದಿದ್ದರೂ ಕೂಡ ಜನರ ಮನಸ್ಸಿನಲ್ಲಿ ಅನುಮಾನವಿರಬಾರದು ಎಂಬ ಕಾರಣಕ್ಕೆ ನ್ಯಾಯಾಂಗ ಆಯೋಗ ರಚಿಸಲಾಗಿದೆ ಎಂದರು. ಒಬ್ಬ ಸಚಿವರು, ಮುಖ್ಯಮಂತ್ರಿಯಾಗಿದ್ದವರು ಹೇಗೆ ಮಾತನಾಡಿದರೆ ಹೇಗೆ? ನಮಗೆ ನಮ್ಮ ಪೊಲೀಸರ ಮೇಲೆ ನಂಬಿಕೆ ಇದೆ ಎಂದರು.

ಬಿಜೆಪಿಯವರು ಸುಳ್ಳು ಹೇಳುವುದು ಹಾಗೂ ಬ್ಲಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು

ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಇಲ್ಲದ ಆರೋಪ ಈಗ ಬಂದಿರುವುದಕ್ಕೆ ಬೇಸರವಾಗಿದೆಯೇ ಎಂಬಾ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ನಾನು ತಪ್ಪು ಮಾಡಿದ್ದರೆ ನನಗೆ ಬೇಸರವಾಗುತ್ತದೆ. ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ, ಬ್ಲ್ಯಾಕ್ ಮೇಲ್ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಯಾವ ಸಿದ್ಧಾಂತವಿದೆ. ಸಾಮಾಜಿಕ ನ್ಯಾಯ, ಜಾತ್ಯತೀತತೆ, ಪ್ರಜಾಪ್ರಭುತ್ವ, ಸಂವಿಧಾನದ ವಿರುದ್ಧವಾಗಿದ್ದಾರೆ ಎಂದರು.

ಮುಡಾದಿಂದ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ?

ಬಹಳ ಮಾತನಾಡುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು 1984ರಲ್ಲಿ ಕೈಗಾರಿಕಾ ನಿವೇಶನವನ್ನು ಪಡೆದರು. ಸ್ವಾಧೀನಕ್ಕೆ ಕೂಡ ಪಡೆದಿದ್ದಾರೆ. ನಂತರ ಬದಲಿ ನಿವೇಶನಕ್ಕೆ ಅರ್ಜಿ ಹಾಕಿಕೊಂಡಿದ್ದಾರೆ. ಕೈಗಾರಿಕೆ ಮಾಡಿದ್ದಾರೆಯೇ? ಎಂಡಿ ಕೇಳಿದರು. ಸಿಐಡಿಬಿ, ಪುಟ್ಟಯ್ಯ ಇರುವಾಗ ಎಷ್ಟು ನಿವೇಶನಗಳು ದೇವೇಗೌಡರ ಕುಟುಂಬಕ್ಕೆ ಹೋಗಿದೆ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ದೆಹಲಿ ಪ್ರವಾಸ

ಸರ್ಕಾರ ಹಾಗೂ ಪಕ್ಷದ ಬಗ್ಗೆ ಚರ್ಚೆ ಮಾಡಲು ವರಿಷ್ಠರು ಕರೆದಿದ್ದಾರೆ .ಹಾಗಾಗಿ ನಾನೂ ಮತ್ತು ಉಪಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದನ್ನೂ ಓದಿ | CM Siddaramaiah: ನಾಳೆ ದಿಲ್ಲಿಗೆ ಸಿಎಂ- ಡಿಸಿಎಂ ದೌಡು; ಸಚಿವ ಸಂಪುಟದಲ್ಲಿ ಬದಲಾವಣೆ ಫಿಕ್ಸ್?

ಮೇಕೆದಾಟು ಯೋಜನೆ ಬಗ್ಗೆ ಚರ್ಚೆಗೆ ಸಿದ್ಧ

ಮೆಟ್ಟೂರು ಅಣೆಕಟ್ಟು ತುಂಬಿ ನೀರು ವ್ಯರ್ಥವಾಗುತ್ತಿದ್ದು, ಈ ಬಗ್ಗೆ ತಮಿಳುನಾಡು ಸರ್ಕಾರದೊಂದಿಗೆ ನಾವು ಮಾತನಾಡಲು ತಯಾರಿದ್ದೇವೆ. ಮೇಕೆದಾಟು ಯೋಜನೆಯಿಂದ ಅವರಿಗೆ ತೊಂದರೆಯಾಗದಿದ್ದರೂ ಮಾತನಾಡಲು ಅವರು ಸಿದ್ಧರಿಲ್ಲ. ಕೇಂದ್ರ ಸರ್ಕಾರ ಅನುಮೋದನೆ ಕೊಟ್ಟರೇ ನಾವು ನಿರ್ಮಾಣ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಾಂಗ್ಲಾದೇಶದಿಂದ 20 ಸಾವಿರ ಜನ ಬೆಂಗಳೂರಿಗೆ ವಲಸೆ ಬಂದಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ತಿಳಿದಿಲ್ಲ. ವಿಚಾರ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

Continue Reading

ಪ್ರಮುಖ ಸುದ್ದಿ

Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

ನಾವು ಸುಮಾರು 17 ಸ್ಥಳಗಳನ್ನು ಗುರುತಿಸಿದ್ದೇವೆ. ಇವುಗಳನ್ನು ಯಶಸ್ವಿ ರಾಜಾಜಿನಗರ- ಕೆಆರ್ ಸರ್ಕಲ್ ಸಿಗ್ನಲ್-ಮುಕ್ತ ಕಾರಿಡಾರ್ (Signal-Free Corridor) ಮಾದರಿಯಲ್ಲಿ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

VISTARANEWS.COM


on

signal free corridor
Koo

ಬೆಂಗಳೂರು: ನಗರದ ಟ್ರಾಫಿಕ್ ದಟ್ಟಣೆಯನ್ನು (Bangalore Traffic congestion) ನಿವಾರಿಸುವ ಪ್ರಯತ್ನದಲ್ಲಿ, ಬೆಂಗಳೂರಿನ 17 ಸ್ಥಳಗಳಲ್ಲಿ ಸುಮಾರು 100 ಕಿಲೋಮೀಟರ್‌ನಷ್ಟು ಉದ್ದದ ಸಿಗ್ನಲ್-ಮುಕ್ತ ಕಾರಿಡಾರ್‌ (Signal-Free Corridor) ಅಭಿವೃದ್ಧಿಪಡಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ (Karnataka Govt) ಪ್ರಕಟಿಸಿದೆ.

ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar), ನಗರದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ಎಲ್ಲಾ ರಾಜಕೀಯ ಪಕ್ಷಗಳ ಶಾಸಕರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ನಾವು ಸುಮಾರು 17 ಸ್ಥಳಗಳನ್ನು ಗುರುತಿಸಿದ್ದೇವೆ. ಇವುಗಳನ್ನು ಯಶಸ್ವಿ ರಾಜಾಜಿನಗರ- ಕೆಆರ್ ಸರ್ಕಲ್ ಸಿಗ್ನಲ್-ಮುಕ್ತ ಕಾರಿಡಾರ್ (Signal-Free Corridor) ಮಾದರಿಯಲ್ಲಿ ರೂಪಿಸಲಾಗುವುದು ಎಂದು ಅವರು ಹೇಳಿದರು.

ನಗರದ ಸಂಪೂರ್ಣ ಸಂಚಾರ ವಿಶ್ಲೇಷಣೆ, ಮುಂದಿನ ಕೆಲವು ವರ್ಷಗಳ ಯೋಜಿತ ಬೆಳವಣಿಗೆಯ ಮಾದರಿಗಳನ್ನು ಆಧರಿಸಿ ಈ ಸ್ಥಳಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಯ್ಕೆ ಮಾಡಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ 12,000 ಕೋಟಿ ರೂ. ವೆಚ್ಚವಾಗಲಿದೆ.

“ಇವುಗಳ ಅಗತ್ಯವನ್ನು ನಿರ್ಧರಿಸಲು ಟ್ರಾಫಿಕ್ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಲಾಗಿದೆ. ವಿಶ್ಲೇಷಕರು 2044ರವರೆಗೆ ನಿರೀಕ್ಷಿತ ಲೇನ್ ಅವಶ್ಯಕತೆಗಳನ್ನು ಸೂಚಿಸಿದ್ದಾರೆ. ನಿರ್ಣಾಯಕ ಜಂಕ್ಷನ್‌ಗಳಲ್ಲಿ ಸಿಗ್ನಲ್-ಮುಕ್ತ ಕಾರಿಡಾರ್‌ಗಳನ್ನು ಸೂಚಿಸಿದ್ದಾರೆ. ಅದನ್ನು ಈಗ ಜಾರಿಗೆ ಪ್ರಸ್ತಾಪಿಸಲಾಗಿದೆ” ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಟ್ರಾಫಿಕ್ ಅಧ್ಯಯನದ ಮೂಲಕ ಕಂಡುಬಂದ ವಿಚಾರ ಎಂದರೆ, ಆಯ್ದ ಕಾರಿಡಾರ್‌ಗಳಲ್ಲಿ ಹೆಚ್ಚಿನ ಟ್ರಾಫಿಕ್ ಹರಿವು ಕಂಡುಬರುತ್ತದೆ. ಈ ಮಾರ್ಗಗಳಲ್ಲಿ ವೇಗ ಗಂಟೆಗೆ 15-20 ಕಿಲೋಮೀಟರ್‌ಗಳಷ್ಟು ಕಡಿಮೆಯಾಗಿದೆ. ಇದರಿಂದ ಇಂಧನ ವ್ಯರ್ಥವಾಗುತ್ತಿದೆ ಹಾಗೂ ಉತ್ಪಾದಕತೆ ನಷ್ಟವಾಗುತ್ತಿದೆ.

“ಪ್ರಸ್ತುತ ಈ ಕಾರಿಡಾರ್‌ಗಳಲ್ಲಿ ಹಲವು ನಾಲ್ಕು ಅಥವಾ ಆರು ಲೇನ್‌ಗಳಿವೆ. ಪ್ರಸ್ತುತ ಟ್ರಾಫಿಕ್ ಸಾಂದ್ರತೆಯ ಪ್ರಕಾರ ಇಲ್ಲಿ ಕನಿಷ್ಠ ಎಂಟು ಲೇನ್‌ಗಳ ಅವಶ್ಯಕತೆಯಿದೆ. 2044ರ ವೇಳೆಗೆ 12 ಲೇನ್‌ಗಳಿಗೆ ಹೆಚ್ಚಿಸುವ ಅವಶ್ಯಕತೆಯಿದೆ. ರಸ್ತೆ ಅಗಲೀಕರಣ, ಎಲಿವೇಟೆಡ್ ಕಾರಿಡಾರ್‌ಗಳು ಅಥವಾ ಅಂಡರ್‌ಪಾಸ್‌ಗಳ ನಿರ್ಮಾಣದ ಅವಶ್ಯಕತೆಯಿದೆ” ಎಂದು ವರದಿ ಬಹಿರಂಗಪಡಿಸಿದೆ.

ಯೋಜಿಸಲಾದ ಕೆಲವು ಪ್ರಮುಖ ಸಿಗ್ನಲ್-ಮುಕ್ತ ಕಾರಿಡಾರ್‌ಗಳು ಹೀಗಿವೆ:

1) ಕೆ.ಆರ್‌ ಪುರದಿಂದ ಯಶವಂತಪುರ- ಗೊರಗುಂಟೆಪಾಳ್ಯವರೆಗಿನ 23 ಕಿಲೋಮೀಟರ್ ವ್ಯಾಪ್ತಿಯ ಕಾರಿಡಾರ್.‌
2) ಆನೆಪಾಳ್ಯದಿಂದ ಸಿಲ್ಕ್ ಬೋರ್ಡ್‌ವರೆಗಿನ 5.5 ಕಿಲೋಮೀಟರ್ ಹೊಸೂರು ರಸ್ತೆ ಕಾರಿಡಾರ್
3) ಮಾರೇನಹಳ್ಳಿಯಿಂದ ಕನಕಪುರ ರಸ್ತೆ-ತಲಘಟ್ಟಪುರ ನೈಸ್ ರಸ್ತೆವರೆಗೆ 10 ಕಿಲೋಮೀಟರ್ ಎಲಿವೇಟೆಡ್ ಕಾರಿಡಾರ್
4) ಮಿನರ್ವದಿಂದ ಕಬ್ಬನ್ ಪಾರ್ಕ್‌ವರೆಗೆ 2.7 ಕಿಲೋಮೀಟರ್ ಎತ್ತರದ ರಸ್ತೆಯನ್ನು ಪ್ರಸ್ತಾಪಿಸಲಾಗಿದೆ.

ಟ್ರಾಫಿಕ್‌ ಪೊಲೀಸರಿಂದ ಬೆಂಗಳೂರಿನ ರಸ್ತೆಗಳಲ್ಲಿ ಮೊಳೆಗಳ ಸಂಗ್ರಹ

ಬೆಂಗಳೂರು: ಬೆಂಗಳೂರಿನ ಬೀದಿ ಬೀದಿಗಳಲ್ಲಿ ರಾಶಿಗಟ್ಟಲೆ ಮೊಳೆ (Nails) ಬಿಸಾಡಿ ವಾಹನಗಳ ಟಯರ್‌ ಪಂಕ್ಚರ್‌ (Puncture) ಆಗುವಂತೆ ಮಾಡಿ ದುಡ್ಡ ಮಾಡುವ ಮಾಫಿಯಾ (Mafia) ಕಾರ್ಯಪ್ರವೃತ್ತವಾಗಿದೆಯಾ ಎಂಬ ಅನುಮಾನ ಹೆಡೆಯೆತ್ತಿದೆ. ಜಾಲಹಳ್ಳಿಯ ಕುವೆಂಪು ವೃತ್ತದ (Kuvempu Circle) ಕೆಳಸೇತುವೆಯಲ್ಲಿ ಮುಷ್ಟಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಸ್ವತಃ ಟ್ರಾಫಿಕ್‌ ಪೊಲೀಸರೇ (Traffic Police) ಇವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್‌ ಮಾಡುವ ಅಭಿಯಾನ ನಡೆಸಿದ್ದಾರೆ. ಅದೀಗ ವೈರಲ್‌ (Viral Video) ಆಗಿದೆ.

ರಸ್ತೆ ಮಧ್ಯದಲ್ಲಿ ಮೊಳೆಗಳನ್ನು ಎಸೆದು ವಾಹನಗಳ ಪಂಕ್ಚರ್ ಮಾಡಿಸಲಾಗುತ್ತಿದೆ ಎಂಬ ವದಂತಿ ಮೊದಲಿನಿಂದಲೂ ಇದೆ. ಇದೀಗ ಸ್ವತಃ ಟ್ರಾಫಿಕ್ ಪೊಲೀಸರಿಂದಲೇ ರಾಶಿಗಟ್ಟಲೆ ಮೊಳೆಗಳ ಸಂಗ್ರಹ ನಡೆದಿದ್ದು, ಅನುಮಾನ ರುಜುವಾತು ಆದಂತಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳು ಪಂಕ್ಚರ್ ಆಗುತ್ತಿದ್ದು, ಸಮೀಪದಲ್ಲಿರುವ ಪಂಕ್ಚರ್ ಅಂಗಡಿಗಳಿಗೆ ಸಾಕಷ್ಟು ವ್ಯಾಪಾರವಂತೂ ಆಗುತ್ತಿದೆ.

ನಿನ್ನೆ ಕುವೆಂಪು ವೃತ್ತದ ಅಂಡರ್‌ಪಾಸ್‌ನಲ್ಲಿ ರಾಶಿಗಟ್ಟಲೆ ಲೋಹದ ಮೊಳೆಗಳನ್ನು ಪತ್ತೆಹಚ್ಚಿದ ಬೆಂಗಳೂರು ಟ್ರಾಫಿಕ್‌ ಪೊಲೀಸರು ಅವುಗಳನ್ನು ಸ್ವಚ್ಛಗೊಳಿಸಿದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್‌ಪಾಸ್‌ನಲ್ಲಿ ರಸ್ತೆಯನ್ನು ಗುಡಿಸುವ ವೀಡಿಯೊವನ್ನು ಎಕ್ಸ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೀಗ ವೈರಲ್‌ ಆಗಿದೆ.

ಇದನ್ನೂ ಓದಿ: DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Continue Reading

ಮಳೆ

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Karnataka rain: ಮಳೆಯು ನಾನಾ ಅವಾಂತರವೇ ಸೃಷ್ಟಿಯಾಗಿದೆ. ಹಳ್ಳ-ಕೊಳ್ಳದಲ್ಲಿ ಎಮ್ಮೆಗಳ ಕಳೇಬರ ಪತ್ತೆಯಾಗಿದೆ. ಒಂಟಗೋಡಿ ಗ್ರಾಮಕ್ಕೆ ಘಟಪ್ರಭಾ ನೀರು ನುಗ್ಗಿದ್ದು, ಬೆಳಗಾವಿಯ ಸುರೇಬಾನ-ರಾಮದುರ್ಗ ಸಂಪರ್ಕ ಸೇತುವೆ ಜಲಾವೃತ, ಚಿಕ್ಕೊಳಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.

VISTARANEWS.COM


on

By

karnataka rain
Koo

ಬೆಳಗಾವಿ: ಸತತ ಮಳೆಗೆ (Karnataka rain) ಹಲವು ಜಿಲ್ಲೆಗಳು ನಲುಗಿ ಹೋಗಿವೆ. ಗುಡ್ಡ ಕುಸಿತ, ಸೇತುವೆಗಳು ಮುಳುಗಡೆ, ಮನೆಗಳು ಕುಸಿದು ಬೀಳುವ ಸಾಧ್ಯತೆ ಇದೆ. ಈ ನಡುವೆ ಪ್ರವಾಹದ ಭೀಕರತೆಗೆ ಜನರು ಬೆಚ್ಚಿ ಬೀಳುವಂತಾಗಿದೆ. ಹಳ್ಳ-ಕೊಳ್ಳಗಳಲ್ಲಿ ಎಮ್ಮೆಗಳ ಕಳೇಬರ ತೇಲಿ ಬರುತ್ತಿವೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಹಳ್ಳದಲ್ಲಿ ಎಮ್ಮೆಗಳ ಮೃತದೇಹ ತೇಲಿ ಬಂದಿದೆ. ಮೂರು ಎಮ್ಮೆಗಳು ತೇಲಿ ಬಂದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ನದಿ ದಾಟಲು ಹೋಗಿ ಅಥವಾ ನೀರು ಹೆಚ್ಚಾಗಿ ಕೊಚ್ಚಿಕೊಂಡು ಬಂದಿರುವ ಶಂಕೆ ಇದೆ.

ತೆರವುಗೊಳಿಸಿದ ಜಾಗದಲ್ಲೆ ಮಣ್ಣು ಕುಸಿತ

ಕೊಡಗು ಜಿಲ್ಲೆಯಾದ್ಯಂತ ಮಳೆ ಕೊಂಚ ತಗ್ಗಿದೆ. ಮಳೆ ಕಡಿಮೆಯಾದರೂ ಮಳೆ ಅನಾಹುತ ಇನ್ನೂ ನಿಂತಿಲ್ಲ. ಮಡಿಕೇರಿ ಮಾದಪು ರಸ್ತೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಮಾದಪುರದಿಂದ 2ಕಿ.ಮೀ ದೂರದಲ್ಲಿ ಗುಡ್ಡದ ಮಣ್ಣು ಕುಸಿಯುತ್ತಿದೆ. ಮಣ್ಣು ತೆರವು ಗೊಳಿಸಿದ ಜಾಗದಲ್ಲೆ ಪದೆಪದೇ ಮಣ್ಣು ಬೀಳುತ್ತಿದೆ. 2018ರಲ್ಲಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದು ಹಾನಿಯಾಗಿದ್ದ ಸ್ಥಳದಲ್ಲೆ ಮತ್ತೆ ಅಪಾಯ ಎದುರಾಗಿದೆ. ಮಳೆ ಹೆಚ್ಚಾಗಿ ಮತ್ತಷ್ಟು ಮಣ್ಣು‌ಕುಸಿದಲ್ಲಿ ಮಾದಪುರ ಮಡಿಕೇರಿ ರಸ್ತೆ ಬಂದ್ ಆಗುವ ಸಾಧ್ಯತೆ ಇದೆ.

ಟಿಬಿ ಡ್ಯಾಂನಲ್ಲಿ ಪ್ರವಾಸಿಗರ ಹುಚ್ಚಾಟ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿತುಂಗಭದ್ರಾ ಜಲಾಶಯ ಭರ್ತಿ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಆದರೆ ಜಲಾಶಯದ ಹಿನ್ನೀರಿನಲ್ಲಿ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ನೀರಿಗಿಳಿದು ಹುಚ್ಚಾಟ ತೋರುತ್ತಿದ್ದಾರೆ. ರಭಸವಾಗಿ ನೀರು ಬರುತ್ತಿದ್ದರೂ, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ.

ಒಂಟಗೋಡಿ ಗ್ರಾಮಕ್ಕೆ ನುಗ್ಗಿದ ಘಟಪ್ರಭಾ ನೀರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಅಬ್ಬರ ಜೋರಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮಕ್ಕೆ ನೀರು ನುಗ್ಗಿದೆ. ಗ್ರಾಮದಲ್ಲಿ ಹತ್ತಾರು ಮನೆಗಳು ಜಲಾವೃತಗೊಂಡಿದ್ದು, ಸರಕಾರಿ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ಶಾಲೆ ಮೈದಾನ ನೀರಿಂದ ಭರ್ತಿಯಾಗಿದ್ದು, ಕೆರೆಯಂತಾಗಿದೆ.

ಬೆಳಗಾವಿಯ ಸುರೇಬಾನ-ರಾಮದುರ್ಗ ಸಂಪರ್ಕ ಸೇತುವೆ ಜಲಾವೃತ

ಇತ್ತ ಮಲಪ್ರಭಾ ನದಿ ಅಬ್ಬರ ರಾಮದುರ್ಗ ಪಟ್ಟಣ ಸೇರಿ ಹಳ್ಳಿಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ರಾಮದುರ್ಗ ಪಟ್ಟಣದ ತೇರ ಬಜಾರ್ ಬಳಿಯ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಸುರೇಬಾನ-ರಾಮದುರ್ಗ ಸಂಪರ್ಕ ಸೇತುವೆ ಮುಳುಗಡೆಯಾಗಿದೆ. ಮುಳುಗಿದ ಸೇತುವೆ ಮೇಲೆ ಕಾಲೇಜು ವಿದ್ಯಾರ್ಥಿಗಳು, ಶಾಲಾ ವಾಹನ, ಜನರ ಓಡಾಡುವಂತಾಗಿದೆ. ಖಾನಾಪುರ, ಕಣಕುಂಬಿ ಭಾಗದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿ ಬಳಿಯ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ಐದು ಸಾವಿರ ಕ್ಯೂಸೆಕ್ ನೀರು ಮಲಪ್ರಭಾ ನದಿಗೆ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: Viral video: ರಸ್ತೆಯಿಂದ ರಾಶಿಗಟ್ಟಲೆ ಮೊಳೆ ಹೆಕ್ಕಿ ತೆಗೆದ ಟ್ರಾಫಿಕ್‌ ಪೊಲೀಸರು; ಪಂಕ್ಚರ್‌ ಮಾಫಿಯಾ ಸಕ್ರಿಯ?

ಚಿಕ್ಕೊಳಿ ಸೇತುವೆ ಸಂಚಾರಕ್ಕೆ ಮುಕ್ತ

ಪಶ್ಚಿಮ ಘಟ್ಟಗಳಲ್ಲಿ ಮಳೆ ಅಬ್ಬರ ಕೊಂಚ ತಣ್ಣಗಾಗಿದೆ. ಬೆಳಗಾವಿಯ ಒಂದು ಸೇತುವೆ ಸಂಚಾರಕ್ಕೆ ಮುಕ್ತ ವಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಹೊರವಲಯದ ಚಿಕ್ಕೊಳಿ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಲೋಕೊಪಯೋಗಿ,ಕಂದಾಯ,ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೇತುವೆ ಪರಿಸ್ಥಿತಿಯ ಪರಿಶೀಲಿಸಿದ ನಂತರ ಭಾರಿ ವಾಹನಕ್ಕೆ ಅವಕಾಶ ನೀಡಲಿದ್ದಾರೆ. ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಹೊರ ವಲಯದ ಕೃಷ್ಣ ನದಿಯಲ್ಲಿ ಬೃಹತ್ ಗಾತ್ರದ ಮೀನು ಕಾಣಿಸಿಕೊಂಡಿದೆ. ಸುಮಾರು 500 ಕೆ.ಜಿ ತೂಕವಿರುವ ಸಾಧ್ಯತೆ ಇದೆ. ಸ್ಥಳೀಯರ ಮೊಬೈಲ್‌ನಲ್ಲಿ ಬೃಹತ್ ಗಾತ್ರದ ಮೀನು ಸೆರೆಯಾಗಿದೆ.

ಘಟಪ್ರಭೆಯ ಅಬ್ಬರಕ್ಕೆ ನಲುಗುತ್ತಿರುವ ಕುಟುಂಬಗಳು

ಘಟಪ್ರಭೆಯ ಅಬ್ಬರಕ್ಕೆ ಕುಟುಂಬಗಳು ನಲುಗುತ್ತಿವೆ. ಬೆಳಗಾವಿಯ ಗೋಕಾಕ ನಗರಕ್ಕೆ ನೀರು ನುಗ್ಗಿದ್ದರಿಂದ ಉಟ್ಟ ಬಟ್ಟೆಯಲ್ಲಿ ಮನೆ ಬಿಟ್ಟ ಅಜ್ಜಿ ಕುಟುಂಬ ಕಣ್ಣೀರು ಹಾಕುತ್ತಿದೆ. ಗೋಕಾಕ ನಗರದ ಬೋಜಗರ್ ಗಲ್ಲಿಯಲ್ಲಿರುವ ಮೈರಾಬಿ ಬೋಜಗಾ ಎಂಬುವವರು ಮೊಮ್ಮಮ್ಮಕ್ಕಳು ಮಗಳ ಜತೆಗೆ ಕಾಳಜಿ ಕೇಂದ್ರದಲ್ಲಿದ್ದಾರೆ.

ತನ್ನೆರಡು ಗಂಡು ಮಕ್ಕಳ ಅಕಾಲಿಕ ಸಾವಿನಿಂದ ಕಂಗೆಟ್ಟಿರುವ ಅಜ್ಜಿ ಮೈರಾಬಿ, ಗಂಡು ಮಕ್ಕಳಿದಿದ್ದರೆ ಮನೆಯ ವಸ್ತುಗಳೆಲ್ಲ ಹೊರಗೆ ತರುತ್ತಿದ್ದರು. ನನ್ನ ಮಕ್ಕಳು ತೀರಿ ಹೋಗಿದ್ದಾರೆ, ಮನೆಯ ವಸ್ತುಗಳು ನೀರಲ್ಲಿವೆ ಎಂದು ರೋಧಿಸಿದ್ದಾರೆ. ಚುರುಮುರಿ ಭಟ್ಟಿಯಲ್ಲಿ ಕೆಲಸ ಮಾಡಿ ಬಡ ಕುಟುಂಬ ಜೀವನ ಸಾಗಿಸುತ್ತಿದ್ದಾರೆ. ಸದ್ಯ ಕಾಳಜಿ ‌ಕೇಂದ್ರದಲ್ಲಿ ದಿಕ್ಕೆ ತೋಚದಂತ ಸ್ಥಿತಿಯಲ್ಲಿದ್ದಾರೆ.

ಕೃಷ್ಣಾ ನದಿ ತೀರದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಇಟ್ಟಂಗಿ ನಿರ್ಮಾಣ ಘಟಕಗಳು ಜಲಾವೃತಗೊಂಡಿದೆ. ನೀರಿನ ಒಳ ಹರಿವು ಹೆಚ್ಚಾದರೇ ಮಾಂಜರಿ ಗ್ರಾಮಕ್ಕೂ ನೀರು ನುಗ್ಗಲಿದೆ. ಹುಣಶ್ಯಾಳ ಪಿ ಜಿ ಗ್ರಾಮದ ಲಕ್ಷ್ಮಿ ದೇವಾಲಯ ಸೇರಿ 200ಕ್ಕೂ ಅಧಿಕ ಮನೆಗಳು ‌ನೀರಿನಲ್ಲಿ ಮುಳುಗಡೆಯಾಗಿದೆ. ಐದು ಕಾಳಜಿ ಕೇಂದ್ರ ಓಪನ್ ಮಾಡಿ ಇಡೀ ಗ್ರಾಮದ ಜನರನ್ನು ರವಾನಿಸಲಾಗಿದೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಿರ್ಜಿವು ನಲುಗಿ ಹೋಗಿದೆ. ಮಿರ್ಜಿ ಗ್ರಾಮಕ್ಕೆ ನದಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. 87ಕ್ಕೂ ಹೆಚ್ಚು ಮನೆಗಳು ನೀರಲ್ಲಿ ಜಲಾವೃತಗೊಂಡಿದೆ. 87 ಕುಟುಂಬಗಳ 300ಕ್ಕೂ ಹೆಚ್ಚು ಜನರು ಕಾಳಜಿ ಕೇಂದ್ರಕ್ಕೆ ಶಿಫ್ಟ್‌ ಆಗಿದ್ದಾರೆ. ಮಿರ್ಜಿ ಗ್ರಾಮದ ಎತ್ತರ ಪ್ರದೇಶದಲ್ಲಿರುವ ಬಿಬಿ ಮುಧೋಳ, ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿರುವ ಕಾಳಜಿ ಕೇಂದ್ರಗಳನ್ನು ತೆರಯಲಾಗಿದೆ. ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು, ಉದ್ದು, ಸೇರಿ ಹಲವು ಬೆಳೆಗಳು ಮುಳುಗಡೆಯಾಗಿದೆ. ಶಾಶ್ವತ ಸ್ಥಳಾಂತರಕ್ಕೆ ಮಿರ್ಜಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

BJP-JDS Padayatra: ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ (BJP-JDS Padayatra) ನಾವು ಅನುಮತಿ ಕೊಡುವುದಿಲ್ಲ, ಬೇಕಿದ್ದರೆ ಪ್ರತಿಭಟನೆ ಮಾಡಿಕೊಳ್ಳಲಿ. ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಕ್ಷದ ವತಿಯಿಂದ ರಾಜಕೀಯ ಮಾಡುತ್ತೇವೆ. ಆದರೆ ಸರ್ಕಾರ ಉಪಯೋಗಿಸಿ ರಾಜಕೀಯ ಮಾಡಲ್ಲ. ಅವರು ರಾಜಕೀಯ ಮಾಡುತ್ತಿದ್ದಾರೆ, ನಾವೂ ರಾಜಕೀಯ ಮಾಡಬೇಕಾಗುತ್ತದೆ. ಮುಡಾ ಹಗರಣ ತನಿಖೆಗೆ ಆಯೋಗ ರಚನೆ ಮಾಡಿದ್ದೇವೆ. ವರದಿಯಲ್ಲಿ ತಪ್ಪು ಅಂತ ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಮಾತ್ರ ಅನುಮತಿ ಕೊಡುವುದಿಲ್ಲ, ಆದರೂ ಪಾದಯಾತ್ರೆ ಮಾಡಲು ಮುಂದಾದರೆ ತಡೆಯಲು ಹೋಗಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಕೌಂಟರ್ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣನೀತಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!ಇದನ್ನೂ ಓದಿ |

ರಾಜ್ಯದಲ್ಲಿ ಭಯದ ವಾತವರಣದ ಕಾರಣ ಬಂಡವಾಳ ಬರುತ್ತಿಲ್ಲ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅನೇಕ ಕಾರಣಗಳಿಂದ ಕಂಪನಿಗಳು, ಆಯ್ಕೆಗಳನ್ನು ಇಟ್ಟುಕೊಂಡೇ ಬರುತ್ತವೆ. ಚೆನ್ನೈ, ಕರ್ನಾಟಕ, ಮಹಾರಾಷ್ಟ್ರ ಅಂತ ಆಯ್ಕೆ ಇರುತ್ತವೆ. ಅವರಿಗೆ ಎಲ್ಲಿ ಹೆಚ್ಚು ಸೌಲಭ್ಯಗಳು ಸಿಗುತ್ತವೋ ಅದರ ಪ್ರಕಾರ ತೀರ್ಮಾನ ಮಾಡುತ್ತಾರೆ. ಇಲ್ಲಿಯವರೆಗೆ ಯಾರು ಬಂದು ಹೊರಗೆ ಹೋಗುತ್ತೇವೆ ಎಂದು ಹೇಳಿಲ್ಲ. ಸುಮ್ಮನೆ ಇಲ್ಲಸಲ್ಲದ ಆಪಾದನೆ ಮಾಡುವುದು ಸರಿಯಲ್ಲ ಎಂದರು.

ಬಜೆಟ್‌ನಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡಬೇಡಿ ಎನ್ನಲ್ಲ, ಆದರೆ ಎಲ್ಲರಿಗೂ ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ದೆಹಲಿ, ಸುಪ್ರೀಂ ಕೋರ್ಟ್‌ವರೆಗೆ ತಲುಪಿದ್ದೇವೆ. ಕೊಟ್ಟಿದ್ದೀವಿ, ಕೊಟ್ಟಿದ್ದೀವಿ ಎನ್ನುತ್ತಾರೆ. ಏನು ಕೊಟ್ಟಿದ್ದೀವಿ ಅಂತ ಹೇಳಬೇಕಲ್ಲವೇ? ಭದ್ರಾ ಯೋಜನೆಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ದೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದೀವಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಬೆಂಗಳೂರು ದೇಶದ ಪ್ರತಿಷ್ಠಿತ ನಗರ, ಇದನ್ನ ಪ್ರಪಂಚಕ್ಕೆ ತೋರಿಸಬೇಕಲ್ವಾ? ನೀತಿ ಆಯೋಗಕ್ಕೆ ಮಮತಾ ಹೋಗಿ ವಾಕ್ ಔಟ್ ಮಾಡಿ ಬಂದಿದ್ದಾರೆ. ನಾವು ಹೋಗಿ ವಾಕ್ ಔಟ್ ಮಾಡಬೇಕಿತ್ತಾ? ರಾಜ್ಯ-ಕೇಂದ್ರದ ನಡುವಿನ ಸಂಬಂಧ ಚೆನ್ನಾಗಿರಬೇಕು. ಅದಕ್ಕೆ ರಾಜ್ಯವನ್ನು ಚೆನ್ನಾಗಿ ನಡೆಸಿಕೊಳ್ಳಬೇಕಲ್ವಾ ಎಂದರು.

ಬೆಂಗಳೂರಿನಲ್ಲಿ ನಾಯಿ ಮಾಂಸ ದಂಧೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಆಗಿದೆ. ಇದಾದ ಮೇಲೆ ಆರೋಗ್ಯ ಇಲಾಖೆಯವರು, ಪೊಲೀಸರು ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ವರದಿಯಲ್ಲಿ ಮೇಕೆ ಮಾಂಸ ಎಂದು ಬಂದಿದೆ. ಸುಳ್ಳು ಆರೋಪ ಮಾಡಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡದ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಕ್ರಮ ಆಗಿದೆ. ಹೊರ ರಾಜ್ಯದಿಂದ ಮಾಂಸ ತಂದು ಮಾರೋದು ಹೊಸದಲ್ಲ, ಜನರಿಗೆ ಗೊಂದಲ ಬೇಡ, ಬಂದಿದ್ದು ಮೇಕೆ ಮಾಂಸ ಎಂದು ಸ್ಪಷ್ಟನೆ ನೀಡಿದರು.

Continue Reading
Advertisement
ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ
ಕರ್ನಾಟಕ41 seconds ago

KRS Dam: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ; ಕಾವೇರಿ ಮಾತೆ ಪ್ರತಿಮೆಗೆ ವಿಶೇಷ ಪೂಜೆ

signal free corridor
ಪ್ರಮುಖ ಸುದ್ದಿ2 mins ago

Signal-Free Corridor: ಬೆಂಗಳೂರಿನಲ್ಲಿ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

karnataka rain
ಮಳೆ14 mins ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tharun Sudhir and Sonal modeled by eco-friendly invitations
ಸ್ಯಾಂಡಲ್ ವುಡ್17 mins ago

Tharun Sudhir: ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ಸೋನಾಲ್ ಮತ್ತು ತರುಣ್!

Ranbir Kapoor
ದೇಶ24 mins ago

Ranbir Kapoor: ಮೋದಿಯದ್ದು ‘ಆಯಸ್ಕಾಂತದಂಥ ವ್ಯಕ್ತಿತ್ವ’ ಎಂದ ರಣಬೀರ್‌ ಕಪೂರ್;‌ ಕನ್ನಡಿಗನಿಗೆ ನಟ ಹೇಳಿದ ಕತೆ ಏನು?

Viral News
ವೈರಲ್ ನ್ಯೂಸ್36 mins ago

Viral News: ಮನೆಯೊಳಗೆ ವಿಚಿತ್ರ ವಾಸನೆ, ಇಡೀ ಕುಟುಂಬ ಅಸ್ವಸ್ಥ; ರಹಸ್ಯ ಕೆಮೆರಾದಲ್ಲಿತ್ತು ಶಾಕಿಂಗ್‌ ದೃಶ್ಯ!

Actor Dhanush Shares FIRST Post After Speech
ಕಾಲಿವುಡ್53 mins ago

Actor Dhanush: ಮನೆ ಬಗ್ಗೆ ಮಾತಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬೆನ್ನಲ್ಲೇ ಹೊಸ ಪೋಸ್ಟ್‌ ಹಂಚಿಕೊಂಡ ನಟ ಧನುಷ್‌!

Curry Leaves
ಆರೋಗ್ಯ55 mins ago

Curry Leaves: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

BPNL Recruitment 2024
ಉದ್ಯೋಗ1 hour ago

BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,250 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

BJP-JDS Padayatra
ಕರ್ನಾಟಕ1 hour ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ14 mins ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ20 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ22 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ24 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಟ್ರೆಂಡಿಂಗ್‌