IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 600 ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ - Vistara News

ಉದ್ಯೋಗ

IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 600 ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ

ದೇಶದ ಪ್ರಮುಖ ಅಭಿವೃದ್ಧಿ ಬ್ಯಾಂಕುಗಳಲ್ಲಿ ಒಂದಾದ ಐಡಿಬಿಐ ಬ್ಯಾಂಕ್‌ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಕ್ಕೆ ಆನ್‌ಲೈನ್‌ನಲ್ಲಿ (IDBI Recruitment 2023) ಅರ್ಜಿ ಆಹ್ವಾನಿಸಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Application invited for 600 Assistant Manager vacancies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಭಾರತ ಸರ್ಕಾರದ ಒಡೆತನಕ್ಕೆ ಸೇರಿದ, ದೇಶದ ಪ್ರಮುಖ ಅಭಿವೃದ್ಧಿಗೆ ಮೀಸಲಾದ ವಿತ್ತೀಯ ಸಂಸ್ಥೆಗಳಲ್ಲಿ (ಬ್ಯಾಂಕ್‌ಗಳಲ್ಲಿ) ಒಂದಾದ ಐಡಿಬಿಐ ಬ್ಯಾಂಕ್‌ ಭರ್ಜರಿ ನೇಮಕಕ್ಕೆ (IDBI SO Recruitment 2023) ಅಧಿಸೂಚನೆ ಹೊರಡಿಸಿದೆ. ಒಟ್ಟು 600 ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿರುತ್ತದೆ.

ಈ 600 ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 190, ಎಸ್‌ಟಿ ಅಭ್ಯರ್ಥಿಗಳಿಗೆ 17 ಒಬಿಸಿ ಅಭ್ಯರ್ಥಿಗಳಿಗೆ 89, ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 60 ಹುದ್ದೆಗಳನ್ನು ಹಾಗೂ ಉಳಿದ 244 ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ.

ವಿದ್ಯಾರ್ಹತೆ ಏನು?

ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆಯ ಜತೆಗೆ ಬ್ಯಾಂಕಿಂಗ್‌ ಅಥವಾ ವಿಮಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಖಾಸಗಿ ವಿತ್ತೀಯ ಸಂಸ್ಥೆಗಳಲ್ಲಿ, ಸಹಕಾರಿ ಬ್ಯಾಂಕುಗಳಲ್ಲಿ, ಬ್ಯಾಂಕೇತರ ವಿತ್ತೀಯ ಸಂಸ್ಥೆಗಳಲ್ಲಿ, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿ, ವಿಮಾ ಸಂಸ್ಥೆಗಳಲ್ಲಿ ಅನುಭವ ಹೊಂದಿದವರನ್ನು ಪರಿಗಣಿಸಲಾಗುತ್ತದೆ.

ಅನುಭವ ಇರುವ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ಎಷ್ಟು?

ಅಭ್ಯರ್ಥಿಯ ಕನಿಷ್ಠ ವಯಸ್ಸು 21 ವರ್ಷ. ಗರಿಷ್ಠ ವಯೋಮಿತಿ 30 ವರ್ಷ. ಎಸ್‌ಸಿ, ಎಸ್‌ಟಿ, ಓಬಿಸಿ, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ. ವಯೋಮಿತಿಯನ್ನು ದಿನಾಂಕ: 01-01-2023 ಕ್ಕೆ ಲೆಕ್ಕಹಾಕಲಾಗುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-02-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 28-02-2023
ಆನ್‌ಲೈನ್‌ನ ಪರೀಕ್ಷೆಯ ದಿನಾಂಕ : ಏಪ್ರಿಲ್‌ (ಸಂಭವನೀಯ)
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ:
https://www.idbibank.in/

ಅರ್ಜಿ ಶುಲ್ಕ ಎಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಒಂದು ಸಾವಿರ ರೂ. (ಇಂಟಿಮೇಷನ್‌ ಚಾರ್ಜ್‌ ಸೇರಿ) ಅರ್ಜಿಶುಲ್ಕ ಪಾವತಿಸಬೇಕಾಗಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 200 ರೂ. ಇಂಟಿಮೇಷನ್‌ ಶುಲ್ಕ ಮಾತ್ರ ಪಾವತಿಸಿದರೆ ಸಾಕು. ಅರ್ಜಿ ಶುಲ್ಕ ಪಾವತಿಸಲೂ ಫೆ.28 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ

ವೇತನ ಎಷ್ಟಿರುತ್ತದೆ?

ಐಡಿಬಿಐ ಬ್ಯಾಂಕ್‌ನಲ್ಲಿನ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಯೂ ಗ್ರೇಡ್‌ “ಎʼʼ ಹುದ್ದೆಯಾಗಿದ್ದು, ಮಾಸಿಕ ಬೇಸಿಕ್‌ ವೇತನವು 36,000ಸಾವಿರ ರೂ.ಗಳಾಗಿರುತ್ತವೆ. ವೇತನ ಶ್ರೇಣಿ ಇಂತಿದೆ: 36000-1490(7)-46430-1740(2)–49910–1990(7)-63840(17years)

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ನೇಮಕ ಹೇಗೆ?

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್‌ ಟೆಸ್ಟ್‌ (OT) ನಡೆಸಲಾಗುತ್ತದೆ. ಏಪ್ರಿಲ್‌ನಲ್ಲಿ ಈ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಅಂದರೆ ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಳೆಯಲಾಗುತ್ತದೆ.

ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿದ್ದು (1.Logical Reasoning, Data Analysis & Interpretation, 2. English Language, 3.Quantitative Aptitude, 4. General/Economy/ Banking Awareness/ Computer/IT), ಪ್ರತಿ ವಿಷಯದಲ್ಲಿಯೂ ಅಭ್ಯರ್ಥಿಯು ಅರ್ಹತಾ ಅಂಕ ಪಡೆದಿರಬೇಕಾಗುತ್ತದೆ.

ಆಲ್‌ಲೈನ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಿ, ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿಯೂ ಆಯ್ಕೆಯಾದವರನ್ನು (Final Score = 3/4 of Online Test Score +1/4 of Interview Score) ವೈದ್ಯಕೀಯ ಪರೀಕ್ಷೆಗೊಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?

ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಾಗಿ ನಡೆಸಲಾಗುವ ಆನ್‌ಲೈನ್‌ ಟೆಸ್ಟ್‌ ಅನ್ನು ರಾಜ್ಯದ ಬೆಂಗಳೂರು, ಬೆಳಗಾವಿ ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.

ಇದನ್ನೂ ಓದಿ : KMF SHIMUL Recruitment 2023 : ಹಾಲು ಒಕ್ಕೂಟದಲ್ಲಿ 194 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (KPSC Group B (RPC) Recruitment 2024). ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading

ಉದ್ಯೋಗ

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಇನ್ಫಾರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು (Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ (IIMB Recruitment 2024). ಅನೇಕ ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ (Job alert).

ವಿದ್ಯಾರ್ಹತೆ

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಇನ್ಫಾರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಲ್ಲದೆ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ಸೈಬರ್ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್‌ ಕ್ಷೇತ್ರದಲ್ಲಿ 8 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯ. ಸೈಬರ್ ಸೆಕ್ಯುರಿಟಿ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವ ಮತ್ತು ಕಾರ್ಯಗತಗೊಳಿಸುವ ಅನುಭವ ಇರಬೇಕು.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 13,20,000 ರೂ. – 14,50,000 ರೂ. ವಾರ್ಷಿಕ ವೇತನ ದೊರೆಯಲಿದೆ.

IIMB Recruitment 2024 ಅಧಿಚೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
  • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲ ಮಾಹಿತಿ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಗಮನಿಸಿ, ಅಪೂರ್ಣ ಅರ್ಜಿಯನ್ನು ರಿಜೆಕ್ಟ್‌ ಆಗಲಿದೆ. ಹೀಗಾಗಿ ಸರಿಯಾಗಿ ಮಾಹಿತಿ ನೀಡಿ ಅಪ್ಲಿಕೇಷನ್‌ ಭರ್ತಿ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading

ಉದ್ಯೋಗ

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

Job Alert: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಪಾಸ್‌ ಆದವರೂ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್‌ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಮೇ 18. ಮಿಕ್ಕುಳಿದ ವೃಂದದಲ್ಲಿ 2,286 ಮತ್ತು ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Bmtc Conductor Recruitment 2024). ದ್ವಿತೀಯ ಪಿಯುಸಿ ಪಾಸ್‌ ಆದವರೂ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್‌ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಮೇ 18 (Job alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಿಕ್ಕುಳಿದ ವೃಂದದಲ್ಲಿ 2,286 ಮತ್ತು ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು. 3 ವರ್ಷಗಳ ಡಿಪ್ಲೊಮಾ ತೇರ್ಗಡೆಯಾದವರು ಕೂಡ ಅರ್ಜಿ ಸಲ್ಲಿಸಲು ಅರ್ಹರು. ಜತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರುವುದು ಕಡ್ಡಾಯ. ಪುರುಷರ ಎತ್ತರ 160 ಸೆಂಟಿ ಮೀಟರ್‌, ಮಹಿಳೆಯರ ಎತ್ತರ 150 ಸೆಂಟಿ ಮೀಟರ್‌ ಇರಬೇಕು. ಗಮನಿಸಿ: ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿ ಪಾಸಾದವರು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳನ್ನು ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (Commong Aptitude Test), ದೇಹದಾರ್ಢ್ಯತೆ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಯಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರಲಿದ್ದು, 200 ಅಂಕಗಳನ್ನು ಹೊಂದಿದೆ. ಗಮನಿಸಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು, ಬರೆಯುವಾಗ ಎಚ್ಚರ ವಹಿಸಬೇಕು. ಈ ಪರೀಕ್ಷೆ ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಧಾಕಾರದ ವೆಬ್‌ಸೈಟ್‌ನಿಂದ ಡೌಲ್‌ಲೋಡ್‌ ಮಾಡಿಕೊಳ್ಳಬೇಕು. ಇದರ ದಿನಾಂಕವನ್ನು ಬಳಿಕ ತಿಳಿಸಲಾಗುವುದು. ಪರೀಕ್ಷೆ ಬರೆಯಲು ಪ್ರವೇಶ ಪತ್ರದೊಂದಿಗೆ ಪ್ಯಾನ್‌ ಕಾರ್ಡ್‌ / ಲೈಸನ್ಸ್‌ / ಆಧಾರ್‌ ಕಾರ್ಡ್‌ / ಪಾಸ್‌ಪೋರ್ಟ್‌ / ವೋಟರ್‌ ಐಡಿ / ಸರ್ಕಾರಿ ನೌಕರರ ಐಡಿ ಪೈಕಿ ಒಂದು ಮೂಲ ಗುರುತಿನ ಚೀಟಿ ಹಾಜರು ಪಡಿಸಬೇಕು.

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ವೃತ್ತಿ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100 ರೂ. ನೀಡಲಾಗುವುದು. ಈ ತರಬೇತಿಯನ್ನು ಸಮರ್ಪಕವಾಗಿ ಪೂರೈಸಿದವರನ್ನು ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಗೆ ನೇಮಕಗೊಳಿಸಲಾಗುತ್ತದೆ. ಇದನ್ನು ತೃಪ್ತಿಕರವಾಗಿ ಪೂರೈಸಿದವರನ್ನು ನೇಮಕಾತಿ ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

ಬಿಎಂಟಿಸಿ ಅಧಿಸೂಚನೆ-ಕೆಕೆ (ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಬಿಎಂಟಿಸಿ ಅಧಿಸೂಚನೆ-ಆರ್‌ಪಿಸಿ (ಎನ್‌ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading
Advertisement
Aniruddha Jatkar Chef Chidambara Release Date announce
ಸ್ಯಾಂಡಲ್ ವುಡ್6 mins ago

Aniruddha Jatkar: ಅನಿರುದ್ದ್ ನಟನೆಯ “Chef ಚಿದಂಬರ” ರಿಲೀಸ್‌ ಡೇಟ್‌ ಅನೌನ್ಸ್‌!

Viral Video
ಕ್ರೀಡೆ26 mins ago

Viral Video: ಗಲ್ಲಿ ಕ್ರಿಕೆಟ್​ನಲ್ಲಿ ಎಡಗೈ ಬ್ಯಾಟಿಂಗ್​ ನಡೆಸಿದ ಕೆ.ಎಲ್​ ರಾಹುಲ್​

Physical Abuse
ಕ್ರೈಂ41 mins ago

Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

anjali murder suspect girish2
ಕ್ರೈಂ43 mins ago

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Viral video
ವೈರಲ್ ನ್ಯೂಸ್47 mins ago

Viral Video: ಅಬ್ಬಾ.. ಮದ್ವೆ ಮಂಟಪದಲ್ಲೇ ಬಿಗ್‌ ಫೈಟ್‌; ವರನಿಗಾಗಿ ಯುವತಿಯರ ಮಾರಾಮಾರಿ-ವಿಡಿಯೋ ವೈರಲ್‌

T20 World Cup 2024
ಕ್ರೀಡೆ55 mins ago

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

Anushka Shetty producer marriage news viral
ಟಾಲಿವುಡ್1 hour ago

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

RCB vs CSK
ಕ್ರೀಡೆ1 hour ago

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

shoot out doddaballapur murder case
ಕ್ರೈಂ2 hours ago

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Narendra Modi
Lok Sabha Election 20242 hours ago

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ21 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು24 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌