ವಿಸ್ತಾರ ಸಂಪಾದಕೀಯ: ನಿಗಮ ಘೋಷಿಸಿದರೆ ಸಾಲದು, ಅದಕ್ಕೆ ಪೋಷಣೆಯೂ ಬೇಕು - Vistara News

ಕರ್ನಾಟಕ

ವಿಸ್ತಾರ ಸಂಪಾದಕೀಯ: ನಿಗಮ ಘೋಷಿಸಿದರೆ ಸಾಲದು, ಅದಕ್ಕೆ ಪೋಷಣೆಯೂ ಬೇಕು

ರಾಜ್ಯ ಸರ್ಕಾರ (Karnataka Government) ಕೇವಲ ಜಾತಿಗಳ ಓಲೈಕೆಗೆ ನಿಗಮ ಘೋಷಿಸದೆ, ಅದರಿಂದ ಘೋಷಿತ ಸಮುದಾಯಗಳಿಗೆ ಪ್ರಯೋಜನ ಆಗುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇಂಥ ಘೋಷಣೆಗಳೆಲ್ಲ ಕೇವಲ ಚುನಾವಣೆ ಗಿಮಿಕ್ ಆಗುತ್ತವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎರಡೇ ದಿನದಲ್ಲಿ ರಾಜ್ಯ ಸರ್ಕಾರ (Karnataka Government) 5 ನಿಗಮ ಮಂಡಳಿಗಳನ್ನು ಘೋಷಿಸಿದೆ. ನಾರಾಯಣಗುರು ಅಭಿವೃದ್ಧಿ ನಿಗಮ, ಮೇದರ ಅಭಿವೃದ್ಧಿ ನಿಗಮ, ಹಡಪದ ಅಭಿವೃದ್ಧಿ ನಿಗಮ, ಹೂಗಾರ ಅಭಿವೃದ್ಧಿ ನಿಗಮ ಮತ್ತು ಗಾಣಿಗ ಅಭಿವೃದ್ಧಿ ನಿಗಮಗಳನ್ನು ಸರ್ಕಾರ ಘೋಷಣೆ ಮಾಡಿದೆ. ಇನ್ನಷ್ಟು ನಿಗಮಗಳ ಘೋಷಣೆಯ ಸಾಧ್ಯತೆಯೂ ಇದೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ಬರುವ ಹೂಗಾರ, ಹೂವಾಡಿಗ, ಈಡಿಗ, ಬಿಲ್ಲವ, ಮೇದರ, ಮರಾಠ, ಗಾಣಿಗ ಮುಂತಾದ ಸಮುದಾಯಗಳ ಕ್ಷೇಮ ಚಿಂತನೆಗಾಗಿ ಈ ನಿಗಮಗಳು ಮೀಸಲಾಗಿವೆ. ಇವೆಲ್ಲವೂ ಅತ್ಯಂತ ಹಿಂದುಳಿದ ಸಮುದಾಯಗಳು ಎಂಬುದು ನಿಜ. ಇವುಗಳ ಹಿತಚಿಂತನೆಗಾಗಿ ಪ್ರತ್ಯೇಕ ಘಟಕಗಳು ಬೇಕು ಎಂಬ ಬೇಡಿಕೆ ಬಹುಕಾಲದ್ದಾಗಿತ್ತು. ಸದ್ಯ ಅದನ್ನು ಸರ್ಕಾರ ಈಡೇರಿಸಿದೆ. ಅದನ್ನು ಸ್ವಾಗತಿಸೋಣ.

ಆದರೆ ಚುನಾವಣೆಗೆ ಇನ್ನು ಕೇವಲ ಎರಡೇ ತಿಂಗಳು ಇರುತ್ತ, ನಿಗಮಗಳನ್ನು ಘೋಷಿಸಿರುವ ಸರ್ಕಾರದ ತರಾತುರಿಯೂ ಅರ್ಥವಾಗದ್ದೇನಲ್ಲ. ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಸರ್ಕಾರ ಜಾತಿ, ಸಮುದಾಯಗಳ ಓಲೈಕೆಗಾಗಿ ನಿಗಮಗಳ ರಚನೆಗೆ ವೇಗವನ್ನು ನೀಡಿದೆ. ರಾಜ್ಯದಲ್ಲಿ 90ಕ್ಕೂ ಅಧಿಕ ನಿಗಮ ಮಂಡಳಿಗಳಿದ್ದು, ಇವುಗಳಲ್ಲಿ 20ಕ್ಕೂ ಹೆಚ್ಚು ನಿಗಮಗಳು ಜಾತಿ- ಸಮುದಾಯಗಳ ಅಭಿವೃದ್ಧಿಗಾಗಿ ಮೀಸಲಾಗಿವೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಇಲಾಖೆಯೇ ಇದೆ. ಈ ಇಲಾಖೆಯಿಂದ ಅಭಿವೃದ್ಧಿ ಸಾಧಿತವಾಗುತ್ತಿಲ್ಲ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತೆ, ಸಾಲುಸಾಲಾಗಿ ಸಮುದಾಯಗಳ ನಿಗಮಗಳನ್ನು ಸ್ಥಾಪಿಸುತ್ತ ನಡೆದಿದೆ. ಹೀಗೆ ಜಾತಿಗೊಂದು ನಿಗಮವನ್ನು ಸ್ಥಾಪಿಸಬಹುದೇ, ಕೆಲವೇ ಕೆಲವು ಜಾತಿಗಳ ಅಭಿವೃದ್ಧಿಗಾಗಿ ಸಾರ್ವಜನಿಕರ ಹಣವನ್ನು ವಿನಿಯೋಗಿಸುವುದು ಸಂವಿಧಾನದ ಪರಿಚ್ಛೇದ 27ರ (ನಿರ್ದಿಷ್ಟ ಧರ್ಮ- ಜಾತಿಗಾಗಿ ಮೀಸಲಾಗಿ ತೆರಿಗೆ ಪಡೆಯುವಂತಿಲ್ಲ) ಉಲ್ಲಂಘನೆಯಲ್ಲವೇ ಎಂಬ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನೂ ಹೈಕೋರ್ಟ್‌ನಲ್ಲಿ ಎತ್ತಲಾಗಿದ್ದು, ಅದು ವಿಚಾರಣೆಯಲ್ಲೇ ಇನ್ನೂ ಇದೆ. ಹೀಗಾಗಿ ಇವುಗಳ ಸಾಂವಿಧಾನಿಕ ಮಾನ್ಯತೆಯ ಪ್ರಶ್ನೆಯನ್ನು ಕೋರ್ಟ್‌ಗೇ ಬಿಟ್ಟು, ಇವುಗಳ ಬಳಕೆಯಲ್ಲಿ ಆಗುತ್ತಿರುವ ಅಪಸವ್ಯಗಳ ಕುರಿತು ಕೊಂಚ ನೋಡಬಹುದು.

ಈಗಾಗಲೇ ಜಾತಿಗೊಂದು, ಕುಲಕ್ಕೊಂದು ನಿಗಮಗಳಿವೆ. ಇವೆಲ್ಲವೂ ವ್ಯರ್ಥ ಅನ್ನುವಂತಿಲ್ಲ. ಈಗಾಗಲೇ ಬಜೆಟ್‌ನಲ್ಲಿ ಘೋಷಿಸಲಾಗಿರುವ ಅನುದಾನಗಳ ಬಳಕೆ ಮಾಡಿಕೊಂಡು ಕಾರ್ಯಕ್ರಮಗಳ ಜಾರಿ ಮಾಡುವುದಷ್ಟೇ ಈ ನಿಗಮ- ಮಂಡಳಿಗಳ ಕೆಲಸವಾಗಿರುತ್ತದೆ. ಆದರೆ ಇದನ್ನು ಎಲ್ಲ ನಿಗಮಗಳೂ ಪರಿಣಾಮಕಾರಿಯಾಗಿ ಮಾಡುತ್ತಿವೆಯೇ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಲೇಬೇಕು. ಅನೇಕ ನಿಗಮಗಳು ನಾಮಕಾವಸ್ಥೆ ಎನ್ನುವಂತಿವೆ. ಇವು ಯಾವುದೇ ಕೆಲಸ ಮಾಡಿದ ದಾಖಲೆಯಿಲ್ಲ. ಆದರೆ ಇವುಗಳ ಅಧ್ಯಕ್ಷರು, ಸದಸ್ಯರ ಸಂಬಳ ಸಾರಿಗೆಯಂತೂ ಗರಿಷ್ಠ ಮಟ್ಟದಲ್ಲೇ ಇದೆ. ಹೆಚ್ಚಿನ ನಿಗಮಗಳ ಅಧ್ಯಕ್ಷರಿಗೆ ಸಂಪುಟ ದರ್ಜೆ, ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಸಂಬಳವೂ ಅದೇ ಲೆಕ್ಕಾಚಾರದಲ್ಲೇ ಇದೆ. ನಿಗಮ ಮಂಡಳಿಗಳ ರಚನೆ ಆರಂಭವಾದದ್ದು ಸಚಿವಾಲಯದ ಭಾರ ತಗ್ಗಿಸುವ ಹಾಗೂ ಆಡಳಿತ ವಿಕೇಂದ್ರೀಕರಣದ ದೃಷ್ಟಿಯಿಂದ. ಆರಂಭದಲ್ಲಿ ಅಧಿಕಾರಿಗಳನ್ನೇ ಈ ಹುದ್ದೆಗಳಿಗೆ ನೇಮಿಸುತ್ತಿದ್ದರೂ ನಂತರ ನಾನಾ ಕ್ಷೇತ್ರದ ತಜ್ಞರ ನೆರವು ಪಡೆದುಕೊಳ್ಳಲು ಪ್ರಾರಂಭಿಸಲಾಯಿತು. ಇತ್ತೀಚೆಗೆ ಶಾಸಕರು ಮತ್ತು ಸಚಿವ ಸಂಪುಟದಲ್ಲಿ ಸ್ಥಾನಗಳಿಂದ ವಂಚಿತರಾದವರು ಈ ಸ್ಥಾನಗಳನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಇವು ಗಂಜಿಕೇಂದ್ರಗಳೆಂದೇ ಅಪಖ್ಯಾತಿ ಪಡೆದಿವೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ : ಅಧಿಕಾರಿಗಳು ಮಾದರಿಯಾಗಿರಲಿ, ಹುದ್ದೆಯ ಘನತೆ ಕಾಪಾಡಲಿ

ಗಂಜಿಕೇಂದ್ರಗಳೇ ಆಗಿರಲಿ; ತಮ್ಮ ಸ್ಥಾಪನೆಯ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಿದ್ದರೆ ಸಾರ್ಥಕವಾಗುತ್ತಿತ್ತು. ಆದರೆ ಅಲ್ಲಿರುವ ಅಧ್ಯಕ್ಷರನ್ನು ಹೊರತುಪಡಿಸಿದರೆ ಬಹುತೇಕ ನಿಗಮಗಳಿಗೆ ನೀಡಲಾಗುತ್ತಿರುವ ಹಣ ಅಲ್ಲಿಯ ಸಿಬ್ಬಂದಿಗಳ ವೇತನಕ್ಕೂ ಸಾಲುವುದಿಲ್ಲ. ನಿಗಮದ ಸದಸ್ಯರು ಸಾಮಾನ್ಯವಾಗಿ ಆಯಾ ಕ್ಷೇತ್ರಗಳ ತಜ್ಞರುಗಳಾಗಿದ್ದು, ತಮ್ಮ ಅನುಭವವನ್ನು ಅಲ್ಲಿ ಧಾರೆಯೆರೆಯಲು ಕಾತುರರಾಗಿರುತ್ತಾರೆ. ಆದರೆ ಅದಕ್ಕೆ ತಕ್ಕ ಯೋಜನೆಗಳು, ಅನುದಾನ ಸಿಗದೇ ಹತಾಶರಾಗುತ್ತಾರೆ. ಅಷ್ಟರಲ್ಲಿ ಅವರ ಕಾಲಾವಧಿಯೂ ಮುಗಿದಿರುತ್ತದೆ.

ರಾಜ್ಯ ಸರ್ಕಾರ ಕೇವಲ ಜಾತಿಗಳ ಓಲೈಕೆಗೆ ನಿಗಮ ಘೋಷಿಸದೆ, ಅದರಿಂದ ಘೋಷಿತ ಸಮುದಾಯಗಳಿಗೆ ಪ್ರಯೋಜನ ಆಗುವಂತೆ ನೋಡಿಕೊಳ್ಳಬೇಕು. ಸಂಪುಟ ನಿರಾಶ್ರಿತರನ್ನು ನೇಮಿಸುವ ಕ್ರಮ ಕೈಬಿಟ್ಟು ಪರಿಣತರನ್ನು, ತಜ್ಞರನ್ನು ಇದಕ್ಕೆ ನೇಮಿಸಿ ಕಲ್ಯಾಣ ಉಪಕ್ರಮಗಳು ಜಾರಿಯಾಗುವಂತೆ ಪ್ರಯತ್ನಿಸಬೇಕು. ಹಿಂದುಳಿದ ಸಮುದಾಯಗಳಿಗೆ ಶಿಕ್ಷಣ ಹಾಗೂ ಉದ್ಯೋಗದ ಸಮಸ್ಯೆ ಹೆಚ್ಚಿದೆ. ಇದರತ್ತ ಹೆಚ್ಚಿನ ಲಕ್ಷ್ಯ ಹರಿಸಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Reliance Retail: ರಿಲಯನ್ಸ್ ರೀಟೇಲ್‌ಗೆ ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್‌ ಆದ “ಅಕೈಂಡ್” (Akind) ಬಿಡುಗಡೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್ ಅವರು ಅಕೈಂಡ್ ಅನ್ನು ಅನಾವರಣ ಮಾಡಿದರು.

VISTARANEWS.COM


on

Reliance Retail Tira unveils skin care brand Akind
Koo

ಮುಂಬೈ: ರಿಲಯನ್ಸ್ ರೀಟೇಲ್‌ಗೆ (Reliance Retail) ಸೇರಿದ ಸೌಂದರ್ಯ ರೀಟೇಲ್ ಪ್ಲಾಟ್‌ಫಾರ್ಮ್ ಟಿರಾ (Tira) ಬುಧವಾರ ತನ್ನ ಚರ್ಮರಕ್ಷಣೆ ಬ್ರಾಂಡ್ ಆದ “ಅಕೈಂಡ್” (Akind) ಬಿಡುಗಡೆ ಬಗ್ಗೆ ಘೋಷಣೆ ಮಾಡಿದೆ. ಮುಂಬೈನ ಜಿಯೋ ವರ್ಲ್ಡ್‌ ಡ್ರೈವ್‌ನಲ್ಲಿರುವ ಟಿರಾ ಮಳಿಗೆಯಲ್ಲಿ ಅಕೈಂಡ್ ಸಹ ಸಂಸ್ಥಾಪಕಿ ಮೀರಾ ಕಪೂರ್, ಅಕೈಂಡ್ ಅನ್ನು ಅನಾವರಣ ಮಾಡಿದರು.

ಚರ್ಮದ ಆರೈಕೆಗೆ ಅಕೈಂಡ್

ಪ್ರತಿ ವ್ಯಕ್ತಿಯೂ ತನ್ನ ಚರ್ಮದ ಆರೈಕೆ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳಲೇಬೇಕಾಗುತ್ತದೆ. ಏಕೆಂದರೆ ವ್ಯಕ್ತಿಯಿಂದ ವ್ಯಕ್ತಿಗೆ ಚರ್ಮವು ವಿಭಿನ್ನ ಹಾಗೂ ವಿಶಿಷ್ಟವಾಗಿರುತ್ತದೆ. ವೈಯಕ್ತಿಕವಾಗಿ ಪ್ರತ್ಯೇಕ ಆರೈಕೆ ಮಾಡಬೇಕಾಗುತ್ತದೆ. ಈ ಸಂಗತಿ “ಅಕೈಂಡ್” ಅರ್ಥ ಮಾಡಿಕೊಳ್ಳುತ್ತದೆ. ಇನ್ನು ಪ್ರತಿ ವ್ಯಕ್ತಿಯ ಚರ್ಮದ ಅಗತ್ಯಗಳನ್ನು ಅರಿತು, ಆರೈಕೆಯನ್ನು ಸರಳಗೊಳಿಸಲಾಗುತ್ತದೆ. ಈ ನಿಶ್ಚಿತ ಗುರಿಯ ವಿಧಾನದ ಮೂಲಕವಾಗಿ ಈ ಬ್ರ್ಯಾಂಡ್ ಪ್ರತಿ ವ್ಯಕ್ತಿಯ ಚರ್ಮ ಕಾಳಜಿಯ ಗುರಿಯನ್ನು ಸಾಧಿಸಲು ಬಲ ತುಂಬುತ್ತದೆ. ಅಕೈಂಡ್‌ನಲ್ಲಿ ಇರುವಂಥ ಪ್ರತಿ ಸೂತ್ರವು ವಿಶಿಷ್ಟ ಉದ್ದೇಶವನ್ನು ಈಡೇರಿಸಿ, ಚರ್ಮದ ಆರೋಗ್ಯಕ್ಕೆ ಇರುವ ಅಡೆತಡೆಗಳನ್ನು ನಿವಾರಿಸುತ್ತದೆ ಮತ್ತು ಅದು ಮೂರು ವರ್ಗಗಳ ಅಡಿಯಲ್ಲಿ ಬರುತ್ತದೆ.

3 ಹಂತಗಳಲ್ಲಿ ಚರ್ಮದ ರಕ್ಷಣೆ

ಬಿಲ್ಡ್, ಬ್ಯಾಲೆನ್ಸ್ ಹಾಗೂ ಡಿಫೆನ್ಸ್ ಹೀಗೆ ಮೂರು ಶ್ರೇಣಿಗಳಿವೆ. ಅದರಲ್ಲಿ ಮೊದಲನೆಯ ಶ್ರೇಣಿಯಾದ ಬಿಲ್ಡ್ ಚರ್ಮದ ಅಡೆತಡೆಗಳನ್ನು ನಿವಾರಿಸಿ, ಅದರ ಸಹಜ ಸ್ಥಿತಿಗೆ ತರುವ ಕಡೆಗೆ ಗಮನ ಕೇಂದ್ರೀಕರಿಸುತ್ತದೆ. ಇನ್ನು ಎರಡನೆಯ ಶ್ರೇಣಿ ಚರ್ಮದ ಅಡೆತಡೆಗಳನ್ನು ನಯವಾಗಿ ನಿರ್ವಹಿಸುತ್ತದೆ, ಯಥಾ ಸ್ಥಿತಿಯಲ್ಲಿ ಇರಿಸುತ್ತದೆ, ಅದರ ಫಲಿತವಾಗಿ ಆರೋಗ್ಯಪೂರ್ಣವಾಗಿ, ಹೊಳೆಯುವಂಥ ಚರ್ಮವನ್ನು ಕಾಪಾಡುತ್ತದೆ. ಇನ್ನು ಮೂರನೆಯ ಶ್ರೇಣಿಯು ಮಾಲಿನ್ಯ, ಜೀವನಶೈಲಿ ಸಂಗತಿಗಳು ಹಾಗೂ ಸೂರ್ಯನ ಕಿರಣದಿಂದ ಆಗುವಂಥ ಹಾನಿಯಿಂದ ತಡೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಇಶಾ ಅಂಬಾನಿ ಈ ಕುರಿತು ಮಾತನಾಡಿ, “ಟಿರಾದ ಮೊದಲ ಚರ್ಮ ಆರೈಕೆ ಬ್ರ್ಯಾಂಡ್ ಆದ ಅಕೈಂಡ್ ಅನ್ನು ಸ್ವಂತ ಬ್ರಾಂಡ್‌ಗಳ ಪೋರ್ಟ್‌ಫೋಲಿಯೊದಲ್ಲಿ ಪರಿಚಯಿಸಲು ನಾವು ಉತ್ಸುಕರಾಗಿದ್ದೇವೆ. ಈಗ ಮಾಡಿರುವ ಉತ್ಪನ್ನದ ಬಿಡುಗಡೆಯು ಟಿರಾದ ಪಯಣದಲ್ಲಿ ಮಹತ್ವದ ಮೈಲುಗಲ್ಲು ಎನಿಸುತ್ತದೆ. ನಾವು ವಿಸ್ತರಿಸುವುದನ್ನು ಮತ್ತು ವಿಕಸನಗೊಳ್ಳುವುದನ್ನು ಮುಂದುವರಿಸಿದಂತೆ, ನಾವೀನ್ಯತೆ ಮತ್ತು ಉತ್ಕೃಷ್ಟತೆಗೆ ಬದ್ಧರಾಗಿರುತ್ತೇವೆ. ಪ್ರತಿ ಕೊಡುಗೆಯು ನಮ್ಮ ಗ್ರಾಹಕರ ಸೌಂದರ್ಯದ ಅನುಭವವನ್ನು ಹೆಚ್ಚಿಸುತ್ತದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಅಕೈಂಡ್ ಸಹ-ಸಂಸ್ಥಾಪಕಿ ಮೀರಾ ಕಪೂರ್ ಮಾತನಾಡಿ, ಬಹಳ ಹಿಂದೆಯೇನೂ ಅಲ್ಲ, ನನ್ನದೇ ಚರ್ಮ ರಕ್ಷಣೆಯ ಬಗ್ಗೆ ಪ್ರಶ್ನೆ ಕೇಳಿಕೊಳ್ಳುತ್ತಾ ಚರ್ಮದ ರಕ್ಷಣೆಯ ಈ ಪ್ರಯಾಣವು ನಿಜವಾಗಿಯೂ ಪ್ರಾರಂಭವಾಯಿತು. ಅಕೈಂಡ್ ಶ್ರೇಣಿಯು ಎಚ್ಚರಿಕೆಯಿಂದ, ಪ್ರಯೋಗಗಳಿಂದ ಮತ್ತು ತಪ್ಪುಗಳಿಂದ ಹಾಗೂ ನಿರ್ದಿಷ್ಟ ಸಮಸ್ಯೆಗಳಿಗೆ ಉದ್ದೇಶಿತ ಪರಿಹಾರವಾಗಿ ಕಾರ್ಯನಿರ್ವಹಿಸುವ ಉನ್ನತ-ಪರಿಣಾಮಕಾರಿ ಪದಾರ್ಥಗಳ ಬಗ್ಗೆ ವ್ಯಾಪಕವಾದ ಸಂಶೋಧನೆಯೊಂದಿಗೆ ನಿಖರವಾಗಿ ರೂಪಿಸಲಾಗಿದೆ ಮತ್ತು ಕ್ಯುರೇಟೆಡ್‌ ಬ್ರ್ಯಾಂಡ್‌ಗಳ ಪಾಲಿ ಅಂತಿಮ ತಾಣದಂತೆ ಇರುವ ಟಿರಾ ಮೂಲಕ ನಾವು ತಲುಪುವುದಕ್ಕಿಂತ ಉತ್ತಮವಾದ ಮಾರ್ಗ ಯಾವುದಿದೆ. ಇದರಿಂದ ನಮ್ಮ ದೃಷ್ಟಿ ಹೆಚ್ಚು ವ್ಯಾಪಿಸುತ್ತದೆ ಹಾಗೂ ಉದ್ದೇಶವನ್ನು ಜೀವಂತ ಇರಿಸುತ್ತದೆ. ಅಕೈಂಡ್ ಜತೆಗೆ, ಹೇಗೆ ನನಗೆ ಅತ್ಯುತ್ತಮ ಚರ್ಮ ರಕ್ಷಣೆಯ ಮಾರ್ಗ ದೊರೆಯಿತೋ ಅದು ಎಲ್ಲರ ಜತೆಗೂ ಈ ಚರ್ಮರಕ್ಷಣೆ ಸಂತೋಷವನ್ನು ಹಂಚಿಕೊಳ್ಳಲು ನಾನು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಟಿರಾ ಟೂಲ್ಸ್ (Tira Tools) ಯಶಸ್ವಿ ಬಿಡುಗಡೆಯ ನಂತರ, ಖಾಸಗಿ ಲೇಬಲ್ ಅಡಿಯಲ್ಲಿ ಪ್ರೀಮಿಯಂ ಕ್ಯುರೇಟೆಡ್ ಸೌಂದರ್ಯ ಪರಿಕರಗಳು ಮತ್ತು ನೈಲ್ಸ್ ಅವರ್ ವೇ, ರೋಮಾಂಚಕ ಉಗುರು ಬಣ್ಣಗಳು ಮತ್ತು ಕಿಟ್‌ಗಳ ವಿಶೇಷ ಶ್ರೇಣಿಯ ಮೂಲಕವಾಗಿ ರಿಲಯನ್ಸ್ ರಿಟೇಲ್ ಲಿಮಿಟೆಡ್ (RRL) ತನ್ನ ನವೀನ ಕೊಡುಗೆಗಳನ್ನು ವಿಸ್ತರಿಸುವುದನ್ನು ಮುಂದುವರಿಸಿದೆ.

ಇದನ್ನೂ ಓದಿ: SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

ಅದರ ಮೊದಲ ಚರ್ಮರಕ್ಷಣೆ ಬ್ರಾಂಡ್‌ನ ಸೇರ್ಪಡೆ, ಅಕೈಂಡ್ ಸೌಂದರ್ಯ ಮತ್ತು ವೈಯಕ್ತಿಕ ಆರೈಕೆ ವಿಭಾಗಗಳಾದ್ಯಂತ ಗ್ರಾಹಕರಿಗೆ ಉತ್ತಮ-ಗುಣಮಟ್ಟದ, ವೈವಿಧ್ಯಮಯ ಮತ್ತು ಟ್ರೆಂಡ್-ಸೆಟ್ಟಿಂಗ್ ಉತ್ಪನ್ನಗಳನ್ನು ಒದಗಿಸುವ ಟಿರಾ ಬದ್ಧತೆಯನ್ನು ಒತ್ತಿ‌ ಹೇಳುತ್ತದೆ.

Continue Reading

ರಾಯಚೂರು

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Raichur News: ನೀಟ್ ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ, ಎಐಡಿಎಸ್‌ಒ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

VISTARANEWS.COM


on

AIDSO protest demanding investigation into corruption in NEET entrance exam
Koo

ಮಾನ್ವಿ: ನೀಟ್ (NEET) ಪ್ರವೇಶ ಪರೀಕ್ಷೆಯಲ್ಲಿ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ, ಎಐಡಿಎಸ್ಓ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದ ಬಸವ ವೃತ್ತದಲ್ಲಿ ಗುರುವಾರ ಪ್ರತಿಭಟನೆ (Raichur News) ನಡೆಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷ ಪೀರ್ ಸಾಬ್ ಮಾತನಾಡಿ, ಜೂನ್ 4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪಾಲಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಾಣಿಕೆಯಾಗುತ್ತಿಲ್ಲ.

ಕೆಲವು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಅಂಕ ನೀಡಿರುವುದಾಗಿ ಎನ್‌ಟಿಎ ಸಮಜಾಯಿಷಿ ನೀಡಿದೆ. ಆದರೆ ಹೆಚ್ಚುವರಿ ಅಂಕಗಳನ್ನು ನೀಡಿರುವ ಮಾನದಂಡವು ಸಂಪೂರ್ಣವಾಗಿ ಪಕ್ಷಪಾತಿಯಾಗಿದೆ. ಈ ವರ್ಷ ಪ್ರಕಟಿಸಲಾಗಿದ್ದ ಮಾರ್ಗಸೂಚಿ ಅನ್ವಯ ಹೆಚ್ಚುವರಿ ಅಂಕಗಳನ್ನು ನೀಡಲು ಅವಕಾಶವಿಲ್ಲ. ಆಶ್ಚರ್ಯಕರವೆಂಬಂತೆ, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಮಾನ ಅಂಕಗಳನ್ನು ಗಳಿಸಿದ್ದಾರೆ. ಇದರೊಂದಿಗೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದವು ಅಥವಾ ಈ ಕುರಿತು ಸಮರ್ಪಕ ತನಿಖೆ ನಡೆಸಲಾಗಿಲ್ಲ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ: Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಒಟ್ಟಾರೆಯಾಗಿ ನೀಟ್ ಪರೀಕ್ಷ ಫಲಿತಾಂಶದಲ್ಲಿನ ಪಾರದರ್ಶಕತೆ ಕೊರತೆ ಮತ್ತು ಭ್ರಷ್ಟಾಚಾರದ ಕುರಿತು ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ರಾಜ್ಯಮಟ್ಟದಲ್ಲಿ ಜಂಟಿ ಪ್ರವೇಶ ಪರೀಕ್ಷೆಗಳು ಜಾರಿಯಲ್ಲಿದ್ದಾಗ ಭ್ರಷ್ಟಾಚಾರದ ಕಾರಣ ಒಡ್ಡಿಯೇ ಅಖಿಲ ಭಾರತ ಮಟ್ಟದ ನೀಟ್ ಪರೀಕ್ಷೆಯನ್ನು ಪ್ರಾರಂಭಿಸಲಾಗಿತ್ತು.

ಭ್ರಷ್ಟಾಚಾರದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟವರಿಗೆ ಸೂಕ್ತ ಶಿಕ್ಷೆ ವಿಧಿಸುವುದರ ಬದಲಿಗೆ ಪರೀಕ್ಷಾ ಪದ್ಧತಿಯನ್ನು ಬದಲಾಯಿಸುವುದು ಪರಿಹಾರವಲ್ಲ ಎಂದು ನಾವು ಆ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದೆವು. ನಮ್ಮ ಎಚ್ಚರಿಕೆಯು ಇಂದು ನಿಜವಾಗಿದೆ. ಸರ್ಕಾರದ ನಿಷ್ಕಾಳಜಿ ಮತ್ತು ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವ್ಯಾಪಾರಿಕರಣದಿಂದಾಗಿ ಇಡೀ ವೈದ್ಯಕೀಯ ಪ್ರವೇಶ ಪರೀಕ್ಷೆಯು ಕುಸಿತಕ್ಕೊಳಗಾಗುತ್ತಿದೆ. ಮತ್ತು ಅಮಾಯಕ ವಿದ್ಯಾರ್ಥಿಗಳು ಇದರ ಬಲಿಪಶುಗಳಾಗಿದ್ದಾರೆ ಎಂದು ಆರೋಪಿಸಿದ ಅವರು, ಈ ಹಿನ್ನೆಲೆಯಲ್ಲಿ ಒಟ್ಟು ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಇದರಲ್ಲಿ ಭಾಗಿಯಾದ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾಧ್ಯಕ್ಷ ಅಯ್ಯಾಳಪ್ಪ, ಜಿಲ್ಲಾ ಕಾರ್ಯದರ್ಶಿ ಬಸವರಾಜ, ಮಾನ್ವಿ ಸಂಘಟನಾ ಸಮಿತಿಯ ಸದಸ್ಯ ಎಸ್.ಎಫ್.ಎ. ಜೈದ್, ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಮುಖ್ಯಾಂಶಗಳು ಇಲ್ಲಿವೆ.

VISTARANEWS.COM


on

Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜೂನ್‌ 13) ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ರಾಜ್ಯದಲ್ಲಿ ಏಳನೇ ವೇತನ ಆಯೋಗದ (7th Pay Commission) ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದಾಗಿ, ಏಳನೇ ವೇತನ ಆಯೋಗದ ಜಾರಿ ಕುರಿತು ಭಾರಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇದರಿಂದ ನಿರಾಸೆಯಾದಂತಾಗಿದೆ.

ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಮುಖ್ಯಾಂಶಗಳು ಇಲ್ಲಿವೆ.

Reservation in outsourcing

ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

  • ಕಳೆದ ಸಚಿವ ಸಂಪುಟ ಸಭೆಯಲ್ಲಿ 147 ಟೆಂಡರ್‌ಗಳಿಗೆ ಟೆಂಡರ್ ಕರೆಯಲು ನೀಡಿರುವ ಆಡಳಿತಾತ್ಮಕ ಮಂಜೂರಾತಿಯ ಪೈಕಿ ಎಷ್ಟು ಟೆಂಡರ್ ಕರೆದು ಕೆಲಸ ಪ್ರಾರಂಭವಾಗಿದೆ ಎಂದು ಅವಲೋಕಿಸಿ, 94 ಪ್ರಸ್ತಾವಗಳಿಗೆ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ. 19 ಪ್ರಸ್ತಾವನೆಗಳು ಪರಿಶೀಲನೆಯಲ್ಲಿದ್ದು, 18 ಪ್ರಸ್ತಾವನೆಗಳಿಗೆ ಕಾರ್ಯಾದೇಶ ನೀಡಲಾಗಿದೆ. 7 ಕಾಮಗಾರಿಗಳು ಮುಕ್ತಾಯವಾಗಿವೆ. 53 ಪ್ರಸ್ತಾವನೆಗಳು ಟೆಂಡರ್ ಕರೆಯಲು ಬಾಕಿ ಇವೆ. ಸಚಿವ ಸಂಪುಟ ಇವುಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಆಡಾಳಿತಾತ್ಮಕ ಮಂಜೂರಾತಿ ನೀಡಿರುವ ಎಲ್ಲ ಟೆಂಡರ್‌ಗಳಿಗೆ ಮುಂದಿನ ಒಂದು ತಿಂಗಳೊಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
  • ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಸಚಿವ ಸಂಪುಟ ಅನುಮೋದಿಸಿದೆ. ಈಗಾಗಲೇ 75 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿ 15 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿದೆ.
  • ಕಾರ್ಮಿಕ ಇಲಾಖೆಯಲ್ಲಿ ಇಎಸ್‍ಐ ನಲ್ಲಿ ಗುತ್ತಿಗೆ ವೈದ್ಯರ ವಿಲೀನ ಮಾಡುವ ಬಗ್ಗೆ ಚರ್ಚೆಯಾಗಿ ಮುಂದೂಡಲಾಗಿದೆ. ಕಾನೂನು ಸಲಹೆ ಪಡೆಯಲು ಸೂಚಿಸಲಾಗಿದೆ.
  • ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
  • ಸಾರಿಗೆ ಇಲಾಖೆಯಲ್ಲಿ ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 112 ಪೂರ್ಣ ಕವಚ ನಿರ್ಮಿತ ಬಿಎಸ್. 4 ವೇಗದೂತ ಬಸ್ಸುಗಳನ್ನು 46.48 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಪ್ರಸ್ತಾವನೆಯನ್ನು ಸಚಿವ ಸಂಪುಟ ಒಪ್ಪಿದೆ. 62 ಹೊಸ ಬಸ್ಸುಗಳನ್ನು ಖರೀದಿಸಲು ಹಾಗೂ 50 ಬಸ್ಸುಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ವರ್ಗಾಯಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
  • ಗಣಿಗುತ್ತಿಗೆ ಅವಧಿ ಮುಕ್ತಾಯಗೊಂಡಿರುವ ಮೆ: ಭಾರತ್ ಚಿನ್ನದ ಗಣಿ ಸಂಸ್ಥೆ, ಕೆ.ಜಿಎಫ್ ಅವರು ಪಡೆದಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಭ್ಯವಿರುವ ಟೇಲಿಂಗ್ ಡಂಪ್ಸ್ ಗಳಿಗೆ ಎಂ.ಎಂ.ಡಿ.ಆರ್ ಕಾಯ್ದೆಯ ಕಲಂ 17 ರನ್ವಯ ಕೇಂದ್ರ ಸರ್ಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರಸ್ತಾವನೆ ಇದ್ದು, ಹೆಚ್ಚಿನ ತಾಂತ್ರಿಕ ವಿವರಗಳು ಅಗತ್ಯವಿರುವುದರಿಂದ ಇದನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.
  • ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆಗಾಗಿ Knowledge Partner ಆಯ್ಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇ-ಟೆಂಡರ್ ಕರೆದಿದ್ದು ಟೆಂಡರ್ ಪ್ರಕಾರ ಈಗಾಗಲೇ ಮೆ: ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಇಂಡಿಯಾ ಪ್ರೈ ಲಿ., ಇವರನ್ನು ಜಿಎಸ್‍ಟಿ ಒಳಗೊಂಡಂತೆ 21 ಕೋಟಿ ರೂ. ವೆಚ್ಚದಲ್ಲಿ Knowledge Partner ಆಗಿ ನೇಮಕ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
  • ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯಡಿ ರಾಜ್ಯದಲ್ಲಿ ಕಾನೂನು ಮತ್ತು ನೀತಿಗೆ ಅನುಮೋದನೆ ನೀಡುವ ಬಗ್ಗೆ ಎರಡು ಮೂರು ವಿಚಾರಗಳಲ್ಲಿ ಬದಲಾವಣೆ ಅಗತ್ಯವನ್ನು ಮನಗಂಡು ಮುಂದೂಡಲಾಗಿದೆ.
  • ಏಳನೇ ವೇತನ ಆಯೋಗದ ಬಗ್ಗೆ ಅಧಿಕೃತ ಪ್ರಸ್ತಾವನೆ ಬಂದಿದ್ದು ಈ ಬಗ್ಗೆ ಯಾವುದೇ ನಿರ್ಣಯಗಳಾಗಿಲ್ಲ.
  • ರಾಜ್ಯದ ಆಡಳಿತವನ್ನು ಹೆಚ್ಚು ಬಿಗಿಯಾಗಿ, ಪರಿಣಾಮಕಾರಿಯಾಗಿ, ಜನಸ್ನೇಹಿಯಾಗಿ ಮಾಡಬೇಕು, ವಿಳಂಬ ಆಗದ ಹಾಗೇ ಕೆಲಸಗಳಾಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ಹಾಗೂ ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Continue Reading

ಕರ್ನಾಟಕ

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯ ಪ್ರಕರಣದಲ್ಲಿ ದರ್ಶನ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ದರ್ಶನ್‌ ಅವರ ಪುತ್ರ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಹಂಚಿಕೊಂಡಿದ್ದಾನೆ. ನನ್ನ ತಂದೆ ಹಾಗೂ ತಾಯಿಗೆ ಇಂತಹ ಕಷ್ಟದ ಸಮಯದಲ್ಲಿ ಬೆಂಬಲದ ಅವಶ್ಯಕತೆ ಇದೆ ಎಂದು ಹೇಳಿದ್ದಾನೆ.

VISTARANEWS.COM


on

Actor Darshan
Koo

ಬೆಂಗಳೂರು: ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಚುರುಕುಗೊಳಿಸಿದ್ದಾರೆ. ರಾಜ್ಯಾದ್ಯಂತ ನಟ ದರ್ಶನ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳು ನಡೆಯುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದಾನೆ. “ನನ್ನ ತಂದೆಯನ್ನು ಕೆಟ್ಟ ಪದಗಳಿಂದ ನಿಂದಿಸಿದ ನಿಮಗೆಲ್ಲ ಧನ್ಯವಾದʼ ಎಂಬ ಬೇಸರದ ಪೋಸ್ಟ್‌ಅನ್ನು ವಿನೀಶ್‌ ಹಂಚಿಕೊಂಡಿದ್ದಾನೆ.

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದಾನೆ.

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು. ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ ಸ್ಥಿತಿ ಗಂಭೀರವಾಗಿತ್ತು. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.

ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ರೇಣುಕಾಸ್ವಾಮಿಗೆ ಒದ್ದಿರುವುದು ನಿಜ ಎಂಬುದಾಗಿ ವಿಚಾರಣೆ ವೇಳೆ ದರ್ಶನ್‌ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

Continue Reading
Advertisement
Maruti Suzuki
ಆಟೋಮೊಬೈಲ್11 mins ago

Maruti Suzuki: ಮಾರುತಿ ಸುಜುಕಿ ಸಿಎನ್‌ಜಿ ವಾಹನದ ಟೀಸರ್ ಔಟ್‌; ಹಲವು ವೈಶಿಷ್ಟ್ಯಗಳ ನಿರೀಕ್ಷೆ

Reliance Retail Tira unveils skin care brand Akind
ದೇಶ39 mins ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ41 mins ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು45 mins ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Joshimath Teshil Now Jyotirmath
ದೇಶ52 mins ago

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ATM Cash Withdrawal Fee
ವಾಣಿಜ್ಯ1 hour ago

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

Siddaramaiah
ಕರ್ನಾಟಕ2 hours ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

NEET UG Result 2024
ಶಿಕ್ಷಣ2 hours ago

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Actor Darshan
ಕರ್ನಾಟಕ2 hours ago

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Viral Video
ವೈರಲ್ ನ್ಯೂಸ್3 hours ago

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌