Delhi Mayor Shelly Oberoi: ಯಾರು ಈ ದಿಲ್ಲಿ ಮೇಯರ್ ಶೆಲ್ಲಿ ಒಬೆರಾಯ್? ರಾಜಕೀಯಕ್ಕೆ ಬರುವ ಮುಂಚೆ ಏನಾಗಿದ್ದರು? - Vistara News

ದೇಶ

Delhi Mayor Shelly Oberoi: ಯಾರು ಈ ದಿಲ್ಲಿ ಮೇಯರ್ ಶೆಲ್ಲಿ ಒಬೆರಾಯ್? ರಾಜಕೀಯಕ್ಕೆ ಬರುವ ಮುಂಚೆ ಏನಾಗಿದ್ದರು?

Delhi Mayor Shelly Oberoi: ಆಮ್ ಆದ್ಮಿ ಪಕ್ಷದ ನಾಯಕಿ ಶೆಲ್ಲಿ ಒಬೆರಾಯ್ ಅವರು ದಿಲ್ಲಿಯ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

VISTARANEWS.COM


on

Who is Delhi Mayor Shelly Oberoi?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದಿಲ್ಲಿಯ ನೂತನ ಮೇಯರ್ ಆಗಿ ಆಮ್ ಆದ್ಮಿ ಪಕ್ಷ(ಆಪ್‌)ದ ಸದಸ್ಯೆ ಶೆಲ್ಲಿ ಒಬೆರಾಯ್ ಅವರು ಭರ್ಜರಿ ಜಯದೊಂದಿಗೆ ಆಯ್ಕೆಯಾಗಿದ್ದಾರೆ(Delhi Mayor Shelly Oberoi). 39 ವರ್ಷದ ಶೆಲ್ಲಿ ದಿಲ್ಲಿ ಮಹಾನಗರ ಪಾಲಿಕೆಯ ಪಟೇಲ್ ‌ನಗರದ ವಾರ್ಡ್ 86 ಅನ್ನು ಪ್ರತಿನಿಧಿಸುತ್ತಾರೆ. ನೂತನ ಮೇಯರ್ ಆಗುತ್ತಿದ್ದಂತೆ ಶೆಲ್ಲಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ನಿನ್ನೆಯವರೆಗೆ ಅಪರಿಚಿತರಾಗಿದ್ದ ಅವರೀಗ ಜನಪ್ರಿಯತೆಯ ತುದಿಗೆ ಹೋಗಿದ್ದಾರೆ.

ಶೆಲ್ಲಿ ಒಬೆರಾಯ್ ಮತ ಚಲಾಯಿಸಿದ ಕ್ಷಣದ ಟ್ವೀಟ್…

ಯಾರು ಈ ಶೆಲ್ಲಿ ಒಬೆರಾಯ್?

ಸದ್ಯಕ್ಕೆ ಎಲ್ಲರೂ ಕೇಳುತ್ತಿರುವ ಪ್ರಶ್ನೆ ಒಂದೇ- ಯಾರು ಈ ಶೆಲ್ಲಿ ಒಬೆರಾಯ್? 39 ವರ್ಷದ ಶೆಲ್ಲಿ ಅವರು ರಾಜಕೀಯಕ್ಕೆ ಬರುವುದಕ್ಕಿಂತಲೂ ಮುಂಚೆ ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಸಹಾಯಕ ಪ್ರೊಫೆಸರ್ ಆಗಿದ್ದರು. ಅಲ್ಲದೇ, ಇಂಡಿಯನ್ ಕಾಮರ್ಸ್ ಅಸೋಶಿಯೇಷನ್‌ನ ಆಜೀವ ಸದಸ್ಯರೂ ಹೌದು. ಇಂದಿರಾ ಗಾಂಧಿ ನ್ಯಾಷನಲ್ ಓಪನ್ ವಿಶ್ವವಿದ್ಯಾಲಯ(IGNOU)ಯ ಸ್ಕೂಲ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ತತ್ವಜ್ಞಾನದಲ್ಲಿ ಡಾಕ್ಟರೇಟ್ ಪಡೆದುಕೊಂಡಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯದ ಜಾಂಕಿ ದೇವಿ ಮೆಮೋರಿಯಲ್ ಕಾಲೇಜಿನಲ್ಲಿ ಅವರು ತಮ್ಮ ಬಿಕಾಂ ಪದವಿಯನ್ನು ಪೂರ್ಣಗೊಳಿಸಿದರು.

ಶೆಲ್ಲಿಗೆ ಹಲವು ಪ್ರಶಸ್ತಿ

ಶೆಲ್ಲಿ ಒಬೆರಾಯ್ ಅವರು, ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಂಶೋಧನಾ ಪೇಪರ್ ಮಂಡಿಸಿ, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ICA ಸಮ್ಮೇಳನದಲ್ಲಿ ಚಿನ್ನದ ಪದಕವನ್ನು (ಪ್ರೊ ಮನುಭಾಯ್ ಶಾ ಪ್ರಶಸ್ತಿ) ಗೆದ್ದಿದ್ದಾರೆ.

ಇದನ್ನೂ ಓದಿ: Delhi Mayoral Poll: ಆಪ್‌ನ ಶೆಲ್ಲಿ ಒಬೆರಾಯ್ ದಿಲ್ಲಿಯ ನೂತನ ಮೇಯರ್, ಗೂಂಡಾಗಳಿಗೆ ಸೋಲಾಯಿತು ಎಂದ ದಿಲ್ಲಿ ಸಿಎಂ ಕೇಜ್ರಿವಾಲ್

ರಾಜಕೀಯಕ್ಕೆ ಬಂದಿದ್ದು ಯಾವಾಗ?

ಶೈಕ್ಷಣಿಕ ಕ್ಷೇತ್ರದಲ್ಲಿ ನಿರತವಾಗಿದ್ದ ಶೆಲ್ಲಿ ಒಬೆರಾಯ್ ಅವರು 2013ರಲ್ಲಿ ಆಮ್ ಆದ್ಮಿ ಪಾರ್ಟಿಯ ಸೇರಿ, ಆ ಮೂಲಕ ರಾಜಕೀಯಕ್ಕೆ ಎಂಟ್ರಿಕೊಟ್ಟರು. 2020ರಲ್ಲಿ ಆಪ್ ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿ ಆಯ್ಕೆಯಾದರು. ಎಂಸಿಡಿ ಎಲೆಕ್ಷನ್‌ನಲ್ಲಿ ತಮ್ಮ ಪ್ರತಿಸ್ಪರ್ಧಿ ದೀಪಾಲಿ ಕುಮಾರಿ ಅವರನ್ನು 269 ಮತಗಳ ಅಂತದರಿಂದ ಸೋಲಿಸಿ ಪಾಲಿಕೆಗೆ ಪ್ರವೇಶ ಪಡೆದಿದ್ದರು. ಇದೀಗ ಬಿಜೆಪಿಯ ರೇಖಾ ಗುಪ್ತಾ ಅವರನ್ನು ಸೋಲಿಸಿ, ದಿಲಿಯ ಮಹಿಳಾ ಮೇಯರ್ ಆಗಿದ್ದಾರೆ.

ಶೆಲ್ಲಿ ಒಬೆರಾಯ್ ಅವರ ಟ್ವೀಟ್…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Amit Shah: ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂಬುದಾಗಿ ಸೂಚಿಸಿದ್ದರು. ಈಗ ಅಮಿತ್‌ ಶಾ ಅವರೂ ಉನ್ನತ ಮಟ್ಟದ ಸಭೆ ನಡೆಸಿ, ಕಾಶ್ಮೀರದಲ್ಲಿ ಉಗ್ರವಾದವನ್ನು ನಿರ್ಮೂಲನೆ ಮಾಡಬೇಕು ಎಂಬುದಾಗಿ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗೆ ಸೂಚಿಸಿದ್ದಾರೆ.

VISTARANEWS.COM


on

Amit Shah
Koo

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಇತ್ತೀಚೆಗೆ ಉಗ್ರರ ದಾಳಿಗಳು ಜಾಸ್ತಿಯಾಗಿವೆ. ಅದರಲ್ಲೂ, ಯಾತ್ರೆಗೆ ತೆರಳುವ ಹಿಂದುಗಳು, ನಾಗರಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ಮಾಡುತ್ತಿದ್ದು, ಕಣಿವೆಯಲ್ಲಿ ಭದ್ರತೆ ಕುರಿತು ಆತಂಕ ಎದುರಾಗಿದೆ. ಇದರ ಬೆನ್ನಲ್ಲೇ, ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರು ಜಮ್ಮು-ಕಾಶ್ಮೀರ ಭದ್ರತೆ ಕುರಿತು ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. “ಜಮ್ಮುವಿನಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿಗ್ರಹಿಸಬೇಕು” ಎಂಬುದು ಸೇರಿ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ್ದಾರೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌, ಸೇನಾ ಮುಖ್ಯಸ್ಥ ಜನರಲ್‌ ಮನೋಜ್‌ ಪಾಂಡೆ, ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ, ಗುಪ್ತಚರ ಸಂಸ್ಥೆ (IB) ನಿರ್ದೇಶಕ ತಪನ್‌ ದೇಕಾ, ಸಿಆರ್‌ಪಿಎಫ್‌ ಮಹಾ ನಿರ್ದೇಶಕ ದಯಾಳ್‌ ಸಿಂಗ್‌ ಸೇರಿ ಹಲವು ಅಧಿಕಾರಿಗಳೊಂದಿಗೆ ಅಮಿತ್‌ ಶಾ ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಜೂನ್‌ 26ರಿಂದ ಅಮರನಾಥ್‌ ಯಾತ್ರೆ ಕೈಗೊಳ್ಳಲಾಗುತ್ತದೆ. ಜೂನ್‌ 21ರಂದು ಶ್ರೀನಗರದಲ್ಲಿ ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಹಾಗಾಗಿ, ಕಾಶ್ಮೀರದ ಭದ್ರತೆಯು ಪ್ರಮುಖವಾಗಿದೆ.

“ಜಮ್ಮು-ಕಾಶ್ಮೀರದಲ್ಲಿ ಉಗ್ರವಾದವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು. ಕಾಶ್ಮೀರದಲ್ಲಿ ನಿಗ್ರಹಿಸಿದಂತೆ ಜಮ್ಮುವಿನಲ್ಲೂ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು. ಗಡಿಗಳನ್ನು ಇನ್ನಷ್ಟು ಭದ್ರಗೊಳಿಸಬೇಕು. ಒಳನುಸುಳುಕೋರರ ಮೇಲೆ ಹದ್ದಿನ ಕಣ್ಣಿಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು” ಎಂದು ಭದ್ರತಾ ಪಡೆಗಳಿಗೆ ಅಮಿತ್‌ ಶಾ ಸೂಚಿಸಿದರು. ಕೆಲ ದಿನಗಳ ಹಿಂದಷ್ಟೇ ನರೇಂದ್ರ ಮೋದಿ ಅವರು ಕೂಡ ಜಮ್ಮು-ಕಾಶ್ಮೀರ ಭದ್ರತೆ ಕುರಿತಂತೆ ಉನ್ನತಮಟ್ಟದ ಸಭೆ ನಡೆಸಿದ್ದರು. ಎಲ್ಲ ಸೈನಿಕರನ್ನು ಗಡಿ ಸೇರಿ ಆಯಕಟ್ಟಿನ ಪ್ರದೇಶಗಳಿಗೆ ನಿಯೋಜಿಸಬೇಕು ಎಂಬುದಾಗಿ ಸೂಚಿಸಿದ್ದರು.

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದರು. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪಾಕಿಸ್ತಾನದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿ ನಡೆಸಿದ್ದು, ಉಗ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಲ್ಲದೆ, ಉಗ್ರನ ಕುರಿತು ಸುಳಿವು ನೀಡಿದರೆ 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Continue Reading

ದೇಶ

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Lok Sabha Speaker: ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಉದ್ಧವ್‌ ಠಾಕ್ರೆ ಬಣದ ಶಿವಸೇನೆ ವಕ್ತಾರ ಸಂಜಯ್‌ ರಾವತ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಲೋಕಸಭೆ ಚುನಾವಣೆ (Lok Sabha Speaker) ಮುಗಿದಿದ್ದು, ಎನ್‌ಡಿಎ ಮೈತ್ರಿಕೂಟದ ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಗ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಕಸರತ್ತು ನಡೆದಿದೆ. ಇದರ ಮಧ್ಯೆಯೇ, ಟಿಡಿಪಿ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ (INDIA Bloc) ಬೆಂಬಲವು ಟಿಡಿಪಿಗೆ ಇರಲಿದೆ ಎಂದು ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ವಕ್ತಾರ ಸಂಜಯ್‌ ರಾವತ್‌ (Sanjay Raut) ಹೇಳಿದ್ದಾರೆ.

“ಟಿಡಿಪಿಯ ಅಭ್ಯರ್ಥಿಯನ್ನೇ ಲೋಕಸಭೆ ಸ್ಪೀಕರ್‌ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂಬ ಮಾತುಗಳನ್ನು ನಾನು ಕೇಳಿದೆ. ಹಾಗೊಂದು ವೇಳೆ, ಟಿಡಿಪಿಯ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗುವುದಾದರೆ, ಇಂಡಿಯಾ ಒಕ್ಕೂಟದ ಪಕ್ಷಗಳು ಚರ್ಚಿಸುತ್ತವೆ. ಆ ಮೂಲಕ ಟಿಡಿಪಿ ಅಭ್ಯರ್ಥಿಗೇ ಬೆಂಬಲ ಸೂಚಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗೊಂದು ವೇಳೆ, ಬಿಜೆಪಿಯವರೇ ಕಣಕ್ಕಿಳಿರೆ, ಎನ್‌ಡಿಎ ಮೈತ್ರಿಕೂಟವೇ ಛಿದ್ರವಾಗಲಿದೆ” ಎಂದು ಸಂಜಯ್‌ ರಾವತ್‌ ಎಚ್ಚರಿಸಿದರು.

Modi 3.0 Government

ಸಂಜಯ್‌ ರಾವತ್‌ ಹೇಳಿಕೆಯ ಬೆನ್ನಲ್ಲೇ ಜೆಡಿಯು ಪ್ರತಿಕ್ರಿಯಿಸಿದೆ. “ಲೋಕಸಭೆ ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಬಿಜೆಪಿ ತೀರ್ಮಾನವೇ ಅಂತಿಮ” ಎಂಬುದಾಗಿ ತಿಳಿಸಿದೆ. ಹಾಗಾಗಿ, ಎನ್‌ಡಿಎ ಮೈತ್ರಿಕೂಟದಿಂದ ಲೋಕಸಭೆ ಸ್ಪೀಕರ್‌ ಚುನಾವಣೆಗೆ ಯಾವ ಪಕ್ಷದವರು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲಕ್ಕೆ ಈಡುಮಾಡಿದೆ. ಮೊದಲಿನಿಂದಲೂ ಟಿಡಿಪಿಯು ತಮ್ಮ ಅಭ್ಯರ್ಥಿಯೇ ಲೋಕಸಭೆ ಸ್ಪೀಕರ್‌ ಆಗಬೇಕು ಎಂಬ ಅಭಿಲಾಷೆ ಹೊಂದಿದೆ ಎಂದು ತಿಳಿದುಬಂದಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನವು ಪ್ರಮುಖವಾಗಿದೆ.

ಜೆಡಿಯು ಪಕ್ಷವು 12 ಸಂಸದರನ್ನು ಹೊಂದಿದ್ದರೆ, ಟಿಡಿಪಿ 16 ಸಂಸದರನ್ನು ಹೊಂದಿದೆ. ಎರಡೂ ಪಕ್ಷಗಳ ನಾಯಕರಾದ ನಿತೀಶ್‌ ಕುಮಾರ್‌ ಹಾಗೂ ಚಂದ್ರಬಾಬು ನಾಯ್ಡು ಅವರು ನಾವು ಎನ್‌ಡಿಎ ಜತೆ ನಿಲ್ಲುತ್ತೇವೆ ಎಂದಿದ್ದಾರೆ. ನರೇಂದ್ರ ಮೋದಿ ಅವರು ಸಂಪುಟ ರಚನೆಯ ವೇಳೆಯೂ ಪ್ರಾಬಲ್ಯ ಸಾಧಿಸಿದ್ದರು. ಕೇಂದ್ರ ಗೃಹ, ರಕ್ಷಣೆ, ಹಣಕಾಸು ಹಾಗೂ ವಿದೇಶಾಂಗ ಖಾತೆಗಳನ್ನು ಬಿಜೆಪಿಯೇ ಉಳಿಸಿಕೊಂಡಿದೆ. ಹಾಗಾಗಿ, ಟಿಡಿಪಿ ಅಭ್ಯರ್ಥಿಯೇ ಸ್ಪೀಕರ್‌ ಚುನಾವಣೆ ಕಣಕ್ಕೆ ಇಳಿಬಹುದು ಎನ್ನಲಾಗಿದೆ. ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್‌ ವಿಶೇಷ ಅಧಿವೇಶನ ನಡೆಯಲಿದ್ದು, ಜೂನ್‌ 26ರಂದು ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ: RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Continue Reading

ದೇಶ

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Patna Boat Accident: ದೇವರ ದರ್ಶನ ಮಾಡಿ ಮರಳುತ್ತಿದ್ದ 17 ಭಕ್ತರಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿ 6 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನದಿಯಲ್ಲಿ ಮುಳುಗಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅನಾಹುತ ನಡೆಯುವ ವೇಳೆ ದೋಣಿ ಬರ್ಹ್‌ನ ಉಮಾನಾಥ್ ಘಾಟ್‌ನಿಂದ ಡಿಯಾರಾಗೆ ಪ್ರಯಾಣಿಸುತ್ತಿತ್ತು.

VISTARANEWS.COM


on

Patna Boat Accident
Koo

ಪಟನಾ: ದೇವರ ದರ್ಶನ ಮಾಡಿ ಮರಳುತ್ತಿದ್ದ 17 ಭಕ್ತರಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿ 6 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನದಿಯಲ್ಲಿ ಮುಳುಗಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ (Patna Boat Accident).

ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿಯ ಗಂಗಾ ನದಿಯಲ್ಲಿ ಪ್ರಯಾಣಿಕರಿದ್ದ ದೋಣಿ ಮುಳುಗಿ ಈ ದುರಂತ ಸಂಭವಿಸಿದೆ. ಅನಾಹುತ ನಡೆಯುವ ವೇಳೆ ದೋಣಿ ಬರ್ಹ್‌ನ ಉಮಾನಾಥ್ ಘಾಟ್‌ನಿಂದ ಡಿಯಾರಾಗೆ ಪ್ರಯಾಣಿಸುತ್ತಿತ್ತು. ಸದ್ಯ ಸ್ಥಳಕ್ಕೆ ಧಾವಿಸಿರುವ ಎಸ್‌ಡಿಆರ್‌ಎಫ್ ತಂಡ ಶೋಧ ಕಾರ್ಯ ಆರಂಭಿಸಿದೆ.

ʼʼಉಮನಾಥ್ ಘಾಟ್ ಸಮೀಪದಲ್ಲೇ ದೋಣಿ ಮುಳುಗಿದೆ. ದೋಣಿಯಲ್ಲಿ ಒಂದೇ ಕುಟುಂಬದ 17 ಮಂದಿ ಪ್ರಯಾಣಿಸುತ್ತಿದ್ದರು. ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ದೋಣಿಯಲ್ಲಿ ಯಾರಿಗೂ ಲೈಫ್ ಜಾಕೆಟ್ ಇರಲಿಲ್ಲ. ಕೆಲವರು ಈಜಿ ದಡ ಸೇರಿದ್ದಾರೆ. ಕೆಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ನಾಪತ್ತೆಯಾದ 6 ಮಂದಿ ಇನ್ನೂ ಪತ್ತೆಯಾಗಿಲ್ಲʼʼ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

ʼʼಸಣ್ಣ ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಜನ ತುಂಬಿದ್ದರಿಂದ ಅದು ಮಗುಚಿ ಬಿದ್ದಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ದೋಣಿಯಲ್ಲಿದ್ದ 11 ಮಂದಿ ಸುರಕ್ಷಿತವಾಗಿದ್ದಾರೆ. ಉಳಿದ 6 ಮಂದಿಗಾಗಿ ಎಸ್‌ಡಿಆರ್‌ಎಫ್ ತಂಡ ಶೋಧ ನಡೆಸುತ್ತಿದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಜನರನ್ನು ತುಂಬಿದ್ದೇ ಕಾರಣ?

ದೋಣಿ ಮಗುಚಿ ಬಿದ್ದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಕಾರಣ ಪತ್ತೆಗೆ ಆದೇಶ ಹೊರಡಿಸಿದ್ದಾರೆ. ಚಿಕ್ಕ ದೋಣಿಗೆ ಅಧಿಕ ಮಂದಿಯನ್ನು ತುಂಬಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಗೆ ಎಲ್ಲ ನೆರವು ನೀಡಿದೆ. ಸ್ಥಳದಲ್ಲಿ ನೂರಾರು ಮಂದಿ ನೆರೆದಿದ್ದಾರೆ.

ಇದನ್ನೂ ಓದಿ: boat capsizes: ಬೋಟ್ ಮಗುಚಿ 6 ಶಾಲಾ ಮಕ್ಕಳ ದುರ್ಮರಣ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಈ ವರ್ಷದ ಜನವರಿಯಲ್ಲಿ ಗುಜರಾತ್‌ನ ವಡೋದಾರದ ಹರಿಣಿ ಸರೋವರದಲ್ಲಿ ಬೋಟ್ ಮಗುಚಿ 13 ಶಾಲಾ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟಿದ್ದರು. ನ್ಯೂ ಸನ್‌ರೈಸ್ ಶಾಲೆಯ ಮಕ್ಕಳು ಪಿಕ್‌ನಿಕ್‌ಗಾಗಿ ಕೆರೆಗೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿತ್ತು. ಬೋಟ್‌ನಲ್ಲಿ 27 ವಿದ್ಯಾರ್ಥಿಗಳಿದ್ದರು. ಮಕ್ಕಳ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತ ಮಕ್ಕಳ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಅಲ್ಲದೇ, ಈ ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ. ನೆರವು ನೀಡುವುದಾಗಿ ಪ್ರಕಟಿಸಿದ್ದರು.

ಅಲ್ಲದೆ ಕೆಲವು ದಿನಗಳ ಹಿಂದೆ ಭೀಕರ ಗಾಳಿಗೆ ದೋಣಿಯಿಂದು ಮಗುಚಿ ಬಿದ್ದು ಆರು ಮಂದಿ ನೀರುಪಾಲಾಗಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿತ್ತು. ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪುಟ್ಟ ಮಕ್ಕಳು ಸೇರಿ ಆರು ಮಂದಿ ಕಣ್ಮರೆಯಾಗಿದ್ದರು.

ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದರು.

Continue Reading

ದೇಶ

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

EVM Row: ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

EVM Row
Koo

ಮುಂಬೈ: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಕುರಿತು ಚರ್ಚೆ ಶುರುವಾಗಿದೆ. ಇವಿಎಂಗಳ ಬಳಕೆಯೇ ಬೇಡ ಎಂದು ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಇದರ ಬೆನ್ನಲ್ಲೇ, “ಭಾರತದಲ್ಲಿ ಇವಿಎಂಗಳನ್ನು ಪರಿಶೀಲನೆ ಮಾಡಲು ಯಾರಿಗೂ ಆಗುವುದಿಲ್ಲ” ಎಂಬುದಾಗಿ ರಾಹುಲ್‌ ಗಾಂಧಿ ಮಸ್ಕ್‌ ಅವರ ಮಾತನ್ನೇ ಅನುಮೋದಿಸಿದ್ದಾರೆ. ಇದರ ಬೆನ್ನಲ್ಲೇ, ಮೊಬೈಲ್‌ ಬಳಸಿ ಇವಿಎಂಅನ್ನು ಅನ್‌ಲಾಕ್‌ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶಿವಸೇನೆ ಸಂಸದ ರವೀಂದ್ರ ವೈಕರ್‌ (Ravindra Waikar) ಅವರ ಬಾವ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇದು ಇವಿಎಂ ತಿರುಚಲಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿಯನ್ನೂ ನೀಡಿದಂತಾಗಿದೆ.

ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ. ತಮ್ಮ ಮೊಬೈಲ್‌ಗೆ ಒಟಿಪಿ ಜನರೇಟ್‌ ಮಾಡಿಕೊಂಡು ಅನ್‌ಲಾಕ್‌ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

‌ಲೋಕಸಭೆ ಚುನಾವಣೆಯಲ್ಲಿ ರವೀಂದ್ರ ವೈಕರ್‌ ಅವರು ಶಿವಸೇನೆಯ (ಉದ್ಧವ್‌ ಠಾಕ್ರೆ ಬಣ) ಅಭ್ಯರ್ಥಿ ಅಮೋಲ್‌ ಗಜಾನನ ಕೀರ್ತಿಕಾರ್ ಅವರ ವಿರುದ್ಧ ಕೇವಲ 48 ಮತಗಳ ಅಂತರದಿದ್ದ ಗೆದ್ದಿದ್ದಾರೆ. ರವೀಂದ್ರ ವೈಕರ್‌ ಅವರ ಸಂಬಂಧಿಯು ಇವಿಎಂ ತಿರುಚಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಯು ಮರು ಎಣಿಕೆಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Continue Reading
Advertisement
Drowns in Lake
ಕರ್ನಾಟಕ6 mins ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ42 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ43 mins ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ1 hour ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ1 hour ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ2 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ3 hours ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ3 hours ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ8 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌