UK Government : ಆದಾಯ ತೆರಿಗೆ ಇಲಾಖೆಯ ಸಮೀಕ್ಷೆ ವಿಚಾರದಲ್ಲಿ ಬಿಬಿಸಿಯನ್ನು ಸಮರ್ಥಿಸಿಕೊಂಡ ಬ್ರಿಟನ್ ಸರ್ಕಾರ - Vistara News

ವಿದೇಶ

UK Government : ಆದಾಯ ತೆರಿಗೆ ಇಲಾಖೆಯ ಸಮೀಕ್ಷೆ ವಿಚಾರದಲ್ಲಿ ಬಿಬಿಸಿಯನ್ನು ಸಮರ್ಥಿಸಿಕೊಂಡ ಬ್ರಿಟನ್ ಸರ್ಕಾರ

ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದಿರುವ ವಿಚಾರದಲ್ಲಿ ಬಿಬಿಸಿಯೊಂದಿಗೆ ನಿಲ್ಲುವುದಾಗಿ ಬ್ರಿಟನ್ ಸರ್ಕಾರ (UK Government) ಹೇಳಿದೆ.

VISTARANEWS.COM


on

Forex Violations allegations against BBC and ED asked documents
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಭಾರತದ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಸಮೀಕ್ಷೆ ನಡೆಸುತ್ತಿರುವ ವಿಚಾರದಲ್ಲಿ ಬ್ರಿಟನ್ ಸರ್ಕಾರವು (UK Government) ಬಿಬಿಸಿಯನ್ನು ಸಮರ್ಥಿಸಿಕೊಂಡಿದೆ.

ಬ್ರಿಟನ್ ದೇಶದ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತನಾಡಿರುವ ವಿದೇಶಾಂಗ, ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ ಕಚೇರಿ (ಎಫ್‌ಸಿಡಿಒ) ಕಿರಿಯ ಸಚಿವರು ಬಿಬಿಸಿ ಪರ ನಿಲ್ಲುವುದಾಗಿ ಹೇಳಿದ್ದಾರೆ. ಸದ್ಯ ಚಾಲ್ತಿಯಲ್ಲಿರುವ ತನಿಖೆ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲವಾದರೂ ಮಾಧ್ಯಮಕ್ಕೆ ವಾಕ್ ಸ್ವಾತಂತ್ರ್ಯ ನೀಡುವುದು ಸದೃಢ ಪ್ರಜಾಪ್ರಭುತ್ವದ ರೀತಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Bob Blackman: ಪ್ರಧಾನಿ ಮೋದಿ ಬಗೆಗಿನ ಬಿಬಿಸಿ ಸಾಕ್ಷ್ಯಚಿತ್ರವನ್ನು ಖಂಡಿಸಿದ ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್‌ಮನ್

ಎಫ್‌ಸಿಡಿಒ ಸಂಸದೀಯ ಅಧೀನ ಕಾರ್ಯದರ್ಶಿ ಡೇವಿಡ್ ರುಟ್ಲಿ ಅವರು ಮಾತನಾಡಿ, “”ನಾವು ಬಿಬಿಸಿಯೊಂದಿಗೆ ನಿಲ್ಲುತ್ತೇವೆ. ಅದಕ್ಕೆ ಧನಸಹಾಯ ಮಾಡುತ್ತೇವೆ. ಇದು ಅತ್ಯಂತ ಪ್ರಮುಖ ಸಂಸ್ಥೆ ಎಂದು ನಾವು ಭಾವಿಸುತ್ತೇವೆ. ಹಾಗಾಗಿ ಸಂಪಾದಕೀಯ ಸ್ವಾತಂತ್ರ್ಯವನ್ನು ಹೊಂದಬೇಕೆಂದು ನಾವು ಬಯಸುತ್ತೇವೆ. ಮಾಧ್ಯಮ ಸ್ವಾತಂತ್ರ್ಯವು ಮುಖ್ಯವಾಗಿದೆ. ಭಾರತ ಸೇರಿ ವಿಶ್ವದಲ್ಲಿರುವ ಎಲ್ಲ ಸ್ನೇಹಿತರಿಗೆ ಮಾಧ್ಯಮ ಸ್ವಾತಂತ್ರ್ಯದ ಪ್ರಾಮುಖ್ಯತೆಯನ್ನು ತಿಳಿಸಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

“ಭಾರತದೊಂದಿಗಿನ ನಾವು ವಿಶಾಲ ಮತ್ತು ಆಳವಾದ ಸಂಬಂಧ ಹೊಂದಿದ್ದೇವೆ. ಹಾಗಾಗಿ ಭಾರತದ ಸರ್ಕಾರದೊಂದಿಗೆ ವ್ಯಾಪಕ ಶ್ರೇಣಿಯ ಸಮಸ್ಯೆಗಳನ್ನು ಚರ್ಚಿಸಲು ಸಾಧ್ಯವಾಗುತ್ತದೆ. ಅದೇ ರೀತಿಯಲ್ಲಿ ಈ ಸಮಸ್ಯೆಯನ್ನು ಎತ್ತಲಾಗಿದೆ. ಹಾಗೆಯೇ ನಾವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ.” ಎಂದೂ ಅವರು ತಿಳಿಸಿದ್ದಾರೆ.

ಬ್ರಿಟಿಷ್ ಸಂಸತ್ತಿನ ಸಿಖ್ ಸಂಸದ ತನ್ಮನ್ಜೀತ್ ಸಿಂಗ್ ಧೇಸಿ ಅವರು ಮಾತನಾಡಿ, “ಭಾರತ, ನಾವು ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೌಲ್ಯಗಳನ್ನು ಹಂಚಿಕೊಂಡಿರುವ ರಾಷ್ಟ್ರಗಳಾಗಿದ್ದೇವೆ. ಭಾರತದ ಪ್ರಧಾನ ಮಂತ್ರಿಯ ಕ್ರಮಗಳನ್ನು ಟೀಕಿಸುವ ಸಾಕ್ಷ್ಯಚಿತ್ರ ಪ್ರಸಾರವಾದ ನಂತರ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಲು ನಿರ್ಧರಿಸಲಾಗಿದೆ. ಭಾರತದಲ್ಲಿ ಅಧಿಕಾರಿಗಳು ಸರ್ಕಾರವನ್ನು ಟೀಕಿಸುವ ಮಾಧ್ಯಮ ಸಂಸ್ಥೆಗಳ ಮೇಲೆ ತನಿಖೆಯನ್ನು ಕೈಗೊಂಡಿರುವುದು ಇದೇ ಮೊದಲಲ್ಲ” ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Breast Ironing: ಆಫ್ರಿಕಾದಲ್ಲಿದೆ ಬಿಸಿ ವಸ್ತುಗಳಿಂದ ಯುವತಿಯರ ಸ್ತನ ಚಪ್ಪಟೆಗೊಳಿಸುವ ಕ್ರೂರ ಪದ್ಧತಿ!

breast ironing tradition: ವಿಶ್ವದಾದ್ಯಂತ ವಿಚಿತ್ರ ಸಂಪ್ರದಾಯಗಳಿವೆ. ಪ್ರತಿಯೊಂದು ಸಂಪ್ರದಾಯಕ್ಕೂ ತಮ್ಮದೇ ಆದ ಕಾರಣಗಳಿದ್ದರೂ ಬಹುತೇಕ ಸಂಪ್ರದಾಯಗಳು ಹೆಣ್ಣು ಮಕ್ಕಳ ಮೇಲೆ ನೋವುಂಟು ಮಾಡುವಂತದ್ದೇ ಆಗಿರುತ್ತದೆ. ಆಫ್ರಿಕದಲ್ಲೊಂದು ಸಂಪ್ರದಾಯ (African Culture) ಹೆಣ್ಣು ಮಕ್ಕಳ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಬಿರುತ್ತಿದ್ದರೂ ಇನ್ನೂ ಹೆಚ್ಚಿನ ಭಾಗಗಳಲ್ಲಿ ಆಚರಣೆಯಲ್ಲಿದೆ. ಇದೇನಿದು ಬ್ರೆಸ್ಟ್‌ ಐರೊನಿಂಗ್‌ ಪದ್ಧತಿ? ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

African Culture
Koo

ವಿಶ್ವದ ಪ್ರತಿಯೊಂದು ದೇಶವೂ ತನ್ನದೇ ಆದ ಸಂಸ್ಕೃತಿ, ಆಚರಣೆಗಳನ್ನು (Culture, ritual) ಹೊಂದಿರುತ್ತದೆ. ಕೆಲವೊಂದು (Breast Ironing) ವಿಚಿತ್ರ ಆಚರಣೆಗಳೂ ಇರುತ್ತವೆ. ಇದರಲ್ಲಿ ಆಫ್ರಿಕಾದಲ್ಲಿ (African Culture) ಯುವತಿಯರಿಗೆ ನಡೆಸುವ ಬ್ರೆಸ್ಟ್ ಐರನಿಂಗ್ (Breast Ironing) ಕೂಡ ಒಂದು. ಇದನ್ನು ಸ್ತನವನ್ನು ಚಪ್ಪಟೆಗೊಳಿಸುವುದು ಎನ್ನಲಾಗುತ್ತದೆ.

ಯುವತಿಯರ ಅಭಿವೃದ್ಧಿ ಹೊಂದುತ್ತಿರುವ ಸ್ತನಗಳ ಮೇಲೆ ಬಿಸಿಯಾದ ವಸ್ತುಗಳಿಂದ ಬಡಿಯುವುದು ಮತ್ತು ಮಸಾಜ್ ಮಾಡುವ ಕ್ರಮ ಇದಾಗಿದೆ. ಇದನ್ನು ತಾಯಿ ಅಥವಾ ಅಜ್ಜಿಯರಂತಹ ನಿಕಟ ಸ್ತ್ರೀ ಸಂಬಂಧಿಗಳು ತಮ್ಮ ಹೆಣ್ಣು ಮಕ್ಕಳಿಗೆ ಮಾಡಿಸುತ್ತಾರೆ. ಈ ಸಾಂಪ್ರದಾಯಿಕ ಅಭ್ಯಾಸವು ಲೈಂಗಿಕ ಕಿರುಕುಳ, ಸಣ್ಣ ವಯಸ್ಸಿನಲ್ಲಿ ಗರ್ಭಧಾರಣೆ ಮತ್ತು ಬಲವಂತದ ಮದುವೆಯಿಂದ ಹುಡುಗಿಯರನ್ನು ರಕ್ಷಿಸುವ ಗುರಿಯನ್ನು ಹೊಂದಿದೆ. ಈ ರೀತಿ ಮಾಡುವುದರಿಂದ ಅವರು ಪುರುಷರಿಗೆ ಕಡಿಮೆ ಆಕರ್ಷಕವಾಗಿರುತ್ತಾರೆ ಎನ್ನುವ ನಂಬಿಕೆ ಆ ಜನರಲ್ಲಿದೆ.

ಸ್ತನವನ್ನು ಚಪ್ಪಟೆಗೊಳಿಸುವ ಈ ಸಂಪ್ರದಾಯವು ಯುವತಿಯರ ದೈಹಿಕ ಮತ್ತು ಮಾನಸಿಕ ಮೇಲೆ ಗಂಭೀರ ಹಾನಿಯನ್ನು ಉಂಟು ಮಾಡುತ್ತದೆ. ಇದರಿಂದ ಸಾವನ್ನಪ್ಪುವವರೂ ಇದ್ದಾರೆ. ಆದರೆ ಬದುಕುಳಿದವರ ಮೇಲೆ ದೀರ್ಘಕಾಲ ಇದರ ಗುರುತು ಉಳಿದು ಬಿಡುತ್ತದೆ.

African Culture
African Culture


ಸಾಂಸ್ಕೃತಿಕ ಸಮರ್ಥನೆ

ಇದನ್ನು ಕ್ಯಾಮರೂನ್‌ನಲ್ಲಿ ಹೆಚ್ಚಾಗಿ ಮಾಡಲಾಗುತ್ತದೆ. ಇತರ ಆಫ್ರಿಕನ್ ದೇಶಗಳಾದ ನೈಜೀರಿಯಾ, ಟೋಗೊ, ಗಿನಿಯಾ, ಕೋಟ್ ಡಿ’ಐವೊಯಿರ್, ಕೀನ್ಯಾ ಮತ್ತು ಜಿಂಬಾಬ್ವೆಯಲ್ಲೂ ಈ ಸಂಪ್ರದಾಯವಿದೆ. ನಗರ ಪ್ರದೇಶಗಳಲ್ಲಿ ಲೈಂಗಿಕ ದುರ್ಬಳಕೆಯ ಅಪಾಯ ಹೆಚ್ಚಾಗಿರುವುದರಿಂದ ಈ ಸಂಪ್ರದಾಯ ಹೆಚ್ಚು ಪ್ರಚಲಿತವಾಗಿದೆ.

ಸ್ತನವನ್ನು ಚಪ್ಪಟೆಗೊಳಿಸಲು ಮರದ ಕೀಟ, ಎಲೆ, ಬಾಳೆಹಣ್ಣು, ತೆಂಗಿನ ಚಿಪ್ಪು, ರುಬ್ಬುವ ಕಲ್ಲು, ಕಲ್ಲಿದ್ದಲಿನ ಮೇಲೆ ಬಿಸಿ ಮಾಡಲಾದ ಸುತ್ತಿಗೆಗಳನ್ನು ಬಳಸಲಾಗುತ್ತದೆ. ಈ ಪ್ರಕ್ರಿಯೆಯು ವಾರಗಳಿಂದ ಹಲವಾರು ತಿಂಗಳುಗಳವರೆಗೆ ನಡೆಯುತ್ತದೆ.

African Culture
African Culture

ಇತಿಹಾಸದಲ್ಲೂ ಉಲ್ಲೇಖ

ಸ್ತನವನ್ನು ಚಪ್ಪಟೆಗೊಳಿಸುವ ಈ ಅಭ್ಯಾಸವನ್ನು ಶುಶ್ರೂಷಾ ನೋವನ್ನು ನಿವಾರಿಸಲು ಪುರಾತನ ಕಾಲದಿಂದಲೂ ಮಾಡಲಾಗುತ್ತಿದೆ. ಈಗ ಇದು ಯುವತಿಯರ ಮೇಲೆ ನಿಯಂತ್ರಣ ಬೀರುವ ವಿಧಾನವಾಗಿ ಪರಿವರ್ತನೆಯಾಗಿದೆ ಎನ್ನಲಾಗುತ್ತದೆ.

ಆರೋಗ್ಯದ ಮೇಲೆ ಪರಿಣಾಮ

ಸ್ತನವನ್ನು ಚಪ್ಪಟೆಗೊಳಿಸುವುದು ತೀವ್ರ ತರದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ತೀವ್ರವಾದ ನೋವು, ಅಂಗಾಂಶ ಹಾನಿಯನ್ನು ಉಂಟು ಮಾಡುತ್ತದೆ. ದೈಹಿಕ ವಿರೂಪ, ಸ್ತನ್ಯಪಾನಕ್ಕೆ ತೊಂದರೆ, ವಿವಿಧ ರೀತಿಯ ಸೋಂಕು, ಸ್ತನ ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ. ಅಲ್ಲದೇ ಇದು ಯುವತಿಯರ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Viral News: ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ಗೆ ಕ್ರೀಡಾ ಸಚಿವೆ ಕಿಸ್‌ ಕೊಟ್ಟಿದ್ದು ಸಂಸ್ಕೃತಿಯ ಭಾಗ; ಸಮರ್ಥಿಸಿಕೊಂಡ ನೆಟ್ಟಿಗರು

ವ್ಯಾಪಕ ವಿರೋಧ, ಜಾಗೃತಿಗೆ ಯತ್ನ

ಸ್ತನವನ್ನು ಚಪ್ಪಟೆಗೊಳಿಸುವ ಸಂಪ್ರದಾಯವನ್ನು ತಡೆಯಲು ಕೆಲವು ಕಾನೂನುಗಳನ್ನು ರೂಪಿಸಿದ್ದರೂ ಅದು ಪರಿಣಾಮಕಾರಿಯಾಗಿ ಜಾರಿಯಾಗುವಲ್ಲಿ ವಿಫಲವಾಗಿದೆ. ಕೆಲವು ಸಂಘ ಸಂಸ್ಥೆಗಳು ಈ ಸಂಪ್ರದಾಯದ ವಿರುದ್ಧ ಜಾಗೃತಿಯನ್ನು ಮೂಡಿಸುವ ಪ್ರಯತ್ನ ನಡೆಸುತ್ತಿದೆ. ಆದರೂ ಆಫ್ರಿಕಾ ಖಂಡದಲ್ಲಿ ಈ ಭಯಾನಕ ಪದ್ಧತಿ ಜಾರಿಯಲ್ಲಿದೆ.

Continue Reading

ಪ್ರಮುಖ ಸುದ್ದಿ

Space mission : ಇಂಡೊ- ಯುಎಸ್​ ಬಾಹ್ಯಾಕಾಶ ಯಾನಕ್ಕೆ ಭಾರತದ ಶುಭಾಂಶು ಶುಕ್ಲಾ ‘ಪ್ರಧಾನ ಗಗನಯಾತ್ರಿ’

Space mission : “ಗಗನಯಾತ್ರಿ” ಎಂದೂ ಕರೆಯಲ್ಪಡುವ ಇಬ್ಬರೂ ಅಧಿಕಾರಿಗಳ ತರಬೇತಿ ಆಗಸ್ಟ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಯೋಜನೆ ಅವಧಿಯಲ್ಲಿ ಅಧಿಕಾರಿಗಳು ಐಎಸ್ಎಸ್​​ನಲ್ಲಿ ಆಯ್ದ ವೈಜ್ಞಾನಿಕ ಸಂಶೋಧನೆ ಮತ್ತು ತಂತ್ರಜ್ಞಾನ ಪ್ರದರ್ಶನ ಪ್ರಯೋಗಗಳನ್ನು ನಡೆಸಲಿದ್ದಾರೆ. ಬಾಹ್ಯಾಕಾಶ ಕುರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ.

VISTARANEWS.COM


on

Space mission
Koo

ನವದೆಹಲಿ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಹಾಗೂ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೊ ಜಂಟಿಯಾಗಿ ಕೈಗೊಳ್ಳಲಿರುವ ಬಾಹ್ಯಾಕಾಶ ಯಾನ ಯೋಜನೆಗೆ (Space mission) ಭಾರತದ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಆಯ್ಕೆಯಾಗಿದ್ದಾರೆ. ಅವರನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (International Space Station) ಪ್ರಮುಖ ಗಗನಯಾತ್ರಿಯಾಗಿ ಕಳುಹಿಸಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶುಕ್ರವಾರ ತಿಳಿಸಿದೆ. ಇಸ್ರೋದ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್ (HSFC) ಅಮೆರಿಕ ಮೂಲದ ಆಕ್ಸಿಯೋಮ್ ಸ್ಪೇಸ್​​ನೊಂದಿಗೆ ಮುಂಬರುವ ಆಕ್ಸಿಯಮ್ -4 ಮಿಷನ್​ಗಾಗಿ ಬಾಹ್ಯಾಕಾಶ ಹಾರಾಟ ಒಪ್ಪಂದ ಮಾಡಿಕೊಂಡಿದೆ. ಅದರ ಪ್ರಕಾರ ಗ್ರೂಪ್ ಕ್ಯಾಪ್ಟನ್ ಶುಕ್ಲಾ ಪ್ರೈಮರಿ ಮಿಷನ್ ಪೈಲಟ್ ಆಗಿದ್ದರೆ, ಭಾರತೀಯ ವಾಯುಪಡೆಯ ಮತ್ತೊಬ್ಬ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಬ್ಯಾಕಪ್ ಮಿಷನ್ ಪೈಲಟ್ ಆಗಿದ್ದಾರೆ.

“ಗಗನಯಾತ್ರಿ” ಎಂದೂ ಕರೆಯಲ್ಪಡುವ ಇಬ್ಬರೂ ಅಧಿಕಾರಿಗಳ ತರಬೇತಿ ಆಗಸ್ಟ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ಯೋಜನೆ ಅವಧಿಯಲ್ಲಿ ಅಧಿಕಾರಿಗಳು ಐಎಸ್ಎಸ್​​ನಲ್ಲಿ ಆಯ್ದ ವೈಜ್ಞಾನಿಕ ಸಂಶೋಧನೆ ಮತ್ತು ತಂತ್ರಜ್ಞಾನ ಪ್ರದರ್ಶನ ಪ್ರಯೋಗಗಳನ್ನು ನಡೆಸಲಿದ್ದಾರೆ. ಬಾಹ್ಯಾಕಾಶ ಕುರಿತ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ.

ಆಕ್ಸಿಯೋಮ್ -4 ಮಿಷನ್ ಸಿಬ್ಬಂದಿಗಳ ಪಟ್ಟಿಯಲ್ಲಿ ಅಮೆರಿಕದ ಪೆಗ್ಗಿ ವಿಟ್ಸನ್ (ಕಮಾಂಡರ್), ಭಾರತದ ಗ್ರೂಪ್ ಕ್ಯಾಪ್ಟನ್ ಶುಕ್ಲಾ (ಪೈಲಟ್), ಪೋಲೆಂಡ್​​ನ ಸಾವೋಜ್ ಉಜ್ನಾನ್​ಸ್ಕಿ (ಮಿಷನ್ ಸ್ಪೆಷಲಿಸ್ಟ್) ಮತ್ತು ಹಂಗೇರಿಯ ಟಿಬೋರ್ ಕಾಪು (ಮಿಷನ್ ಸ್ಪೆಷಲಿಸ್ಟ್) ಇದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ 8ನೇ ದಿನವಾದ ಶನಿವಾರ ಭಾರತದ ಸ್ಪರ್ಧೆಗಳ ವಿವರ ಇಲ್ಲಿದೆ

ಕಳೆದ ವರ್ಷ ವಾಯುಪಡೆಯಿಂದ ನಾಲ್ಕು ಪರೀಕ್ಷಾ ಪೈಲಟ್​​​ಗಳನ್ನು ಆಯ್ಕೆ ಮಾಡಲಾಗಿತ್ತು. ಅವರ ಪ್ರಾಥಮಿಕ ತರಬೇತಿಯನ್ನು ಬೆಂಗಳೂರಿನ ಇಸ್ರೋದ ಗಗನಯಾತ್ರಿ ತರಬೇತಿ ಸೌಲಭ್ಯದಲ್ಲಿ ಪ್ರಾರಂಭಿಸಲಾಗಿತ್ತು. ಗಗನಯಾನ ಮಿಷನ್ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಭಾರತದ ಮಾನವ ಬಾಹ್ಯಾಕಾಶ ಹಾರಾಟ ಸಾಮರ್ಥ್ಯವನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ. ಮೂರು ದಿನಗಳ ಕಾರ್ಯಾಚರಣೆಗಾಗಿ ಮೂವರು ಸದಸ್ಯರ ತಂಡವನ್ನು 400 ಕಿ.ಮೀ ಕಕ್ಷೆಗೆ ಉಡಾಯಿಸಲು ಮಿಷನ್ ಯೋಜನೆ ರೂಪಿಸಿದೆ. ಇದು ಭಾರತೀಯ ಜಲಪ್ರದೇಶದಲ್ಲಿ ಸುರಕ್ಷಿತವಾಗಿ ಭೂಮಿಗೆ ಮರಳುವುದರ ಮೂಲಕ ಕೊನೆಗೊಳ್ಳುತ್ತದೆ.

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಯಾರು?

ಲಕ್ನೋದಲ್ಲಿ ಜನಿಸಿದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಸುಮಾರು 18 ವರ್ಷಗಳ ಹಿಂದೆ ಕಠಿಣ ಮತ್ತು ದೀರ್ಘ ಮಿಲಿಟರಿ ತರಬೇತಿಗಾಗಿ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರಿದ್ದರು. ಅಲ್ಲಿಂದ ಭಾರತೀಯ ವಾಯುಪಡೆಯಲ್ಲಿ ಅವರ ಪ್ರಯಾಣ ಪ್ರಾರಂಭವಾಯಿತು.

ಶುಕ್ಲಾ ಅವರ ಹಿರಿಯ ಸಹೋದರಿಯ ಹೇಳುವಂತೆ, ಕಾರ್ಗಿಲ್ ಯುದ್ಧ ಸಮಯದಲ್ಲಿ ಭಾರತೀಯ ಸೈನಿಕರ ಶೌರ್ಯ ಮತ್ತು ತ್ಯಾಗದ ವೀರ ಕಥೆಗಳನ್ನು ಓದಿದ ನಂತರ ಸೇನೆ ಸೇರಲು ಪ್ರೇರಣೆ ಪಡೆದಿದ್ದರು. 1999 ರಲ್ಲಿ ಕಾರ್ಗಿಲ್​ನಲ್ಲಿ ಯುದ್ಧ ಪ್ರಾರಂಭವಾದಾಗ ಪಾಕಿಸ್ತಾನದ ಒಳನುಸುಳುವವರು ನಿಯಂತ್ರಣ ರೇಖೆಯನ್ನು (ಎಲ್ಒಸಿ) ದಾಟಿ ಭಾರತೀಯ ಪೋಸ್ಟ್ಗಳನ್ನು ಅತಿಕ್ರಮಿಸಿದಾಗ ಅವರಿಗೆ ಕೇವಲ 14 ವರ್ಷ ವಯಸ್ಸಾಗಿತ್ತು.

Continue Reading

Latest

Kriti Sanon: ನಟಿ ಕೃತಿ ಸನೋನ್‌ ಡೇಟಿಂಗ್‌ ಮಾಡುತ್ತಿರುವ ಈ ಕಬೀರ್ ಬಹಿಯಾ ಯಾರು?

ಬಾಲಿವುಡ್ ನಟಿ ಕೃತಿ ಸನೋನ್ (Kriti Sanon) ಹೆಸರೀಗ ಯುಕೆ ಮೂಲದ ಮಿಲಿಯನೇರ್ ಉದ್ಯಮಿ ಕಬೀರ್ ಬಹಿಯಾ ಅವರೊಂದಿಗೆ ಕೇಳಿ ಬರುತ್ತಿದೆ. ಈ ಹಿಂದೆ ನಟಿ ಹೆಸರು ಕಾರ್ತಿಕ್ ಆರ್ಯನ್, ಪ್ರಭಾಸ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಕೇಳಿ ಬಂದಿತ್ತಾದರೂ ಈ ಬಗ್ಗೆ ಕೃತಿ ಎಂದಿಗೂ ಪ್ರತಿಕ್ರಿಯಿಸಿರಲಿಲ್ಲ. ಇದೀಗ ಕೃತಿ ಮತ್ತೊಮ್ಮೆ ಡೇಟಿಂಗ್ ನಲ್ಲಿರುವುದು ಸುದ್ದಿಯಾಗುತ್ತಿದ್ದಂತೆ ಆ ವ್ಯಕ್ತಿ ಯಾರು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಕಬೀರ್‌ ಹಿನ್ನೆಲೆ ಏನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Kriti Sanon
Koo

ಕ್ರೂ, ಹಿರೊಪಂತಿ, ಮಿಮಿ, ದಿಲ್ವಾಲೆ, ಬರೇಲಿ ಕಿ ಬರ್ಫಿ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟಿ (bollywood actress) ಕೃತಿ ಸನೋನ್ (Kriti Sanon) ಈಗ ಯುಕೆ ಮೂಲದ ಮಿಲಿಯನೇರ್ (UK based millionaire) ಜೊತೆ ಡೇಟಿಂಗ್ ನಲ್ಲಿದ್ದಾರೆ ಎನ್ನುವ ವದಂತಿಗಳು ಕೇಳಿ ಬರುತ್ತಿವೆ. ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಆಕೆಯ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾತರರಾಗಿರುತ್ತಾರೆ.

ಕಾರ್ತಿಕ್ ಆರ್ಯನ್, ಪ್ರಭಾಸ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಡೇಟಿಂಗ್‌ನಲ್ಲಿದ್ದರು ಎನ್ನುವ ವದಂತಿ ಇತ್ತಾದರೂ ಈ ಬಗ್ಗೆ ಕೃತಿ ಎಂದಿಗೂ ಪ್ರತಿಕ್ರಿಯಿಸಿರಲಿಲ್ಲ. ಇದೀಗ ಕೃತಿ ಮತ್ತೊಮ್ಮೆ ಡೇಟಿಂಗ್‌ನಲ್ಲಿರುವುದು ಸುದ್ದಿಯಾಗುತ್ತಿದ್ದಂತೆ ಆ ವ್ಯಕ್ತಿ ಯಾರು ಎನ್ನುವ ಕುತೂಹಲ ಕೃತಿ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಕಬೀರ್ ಬಹಿಯಾ ಯಾರು?

1999ರ ನವೆಂಬರ್‌ನಲ್ಲಿ ಜನಿಸಿದ ಕಬೀರ್ ಬಹಿಯಾ ಇಂಗ್ಲೆಂಡ್‌ನ ಮಿಲ್‌ಫೀಲ್ಡ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಲಿಂಕ್ಡ್‌ಇನ್ ಪ್ರೊಫೈಲ್‌ನ ಪ್ರಕಾರ ಅವರು ಯುಕೆ ಮೂಲದ ಉದ್ಯಮಿಯಾಗಿದ್ದು, ಲಂಡನ್‌ನ ರೀಜೆಂಟ್ಸ್ ಯೂನಿವರ್ಸಿಟಿಯಿಂದ ವ್ಯಾಪಾರ, ನಿರ್ವಹಣೆ, ಮಾರ್ಕೆಟಿಂಗ್ ಮತ್ತು ಸಂಬಂಧಿತ ಬೆಂಬಲ ಸೇವೆಗಳ ಕುರಿತು ಅಧ್ಯಯನ ಪೂರ್ಣಗೊಳಿಸಿದ್ದಾರೆ.

Kriti Sanon
Kriti Sanon


ಯುಕೆಯಲ್ಲಿ ಸೌಥಾಲ್ ಟ್ರಾವೆಲ್ ಎಂಬ ಪ್ರಮುಖ ಟ್ರಾವೆಲ್ ಕಂಪನಿಯನ್ನು ನಡೆಸುತ್ತಿರುವ ಕುಲ್ಜಿಂದರ್ ಬಹಿಯಾ ಅವರ ಮಗ ಕಬೀರ್. 2019ರ ಸಂಡೇ ಟೈಮ್ಸ್ ಶ್ರೀಮಂತರ ಪಟ್ಟಿಯ ಆಧರಿಸಿ ಹೇಳುವುದಾದರೆ ಕುಲ್ಜಿಂದರ್ ಮತ್ತು ಅವರ ಕುಟುಂಬವು 427 ಮಿಲಿಯನ್ ಪೌಂಡ್‌ಗಳ (ಸುಮಾರು 4590 ಕೋಟಿ ರೂ.) ನಿವ್ವಳ ಮೌಲ್ಯವನ್ನು ಹೊಂದಿದೆ. ಕಬೀರ್ ತನ್ನದೇ ಆದ ಟ್ರಾವೆಲ್ ಕಂಪನಿಯಾದ ವರ್ಲ್ಡ್‌ವೈಡ್ ಏವಿಯೇಷನ್ ​​ಮತ್ತು ಟೂರಿಸಂ ಲಿಮಿಟೆಡ್ ಅನ್ನು ಪ್ರಾರಂಭಿಸಿದ್ದು, 2021ರ ಜೂನ್ ನಿಂದ ಅದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ಕಬೀರ್ ಉದ್ಯಮಿಯಾಗಿದ್ದರೂ ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ಅವರ ನೆಚ್ಚಿನ ಫುಟ್‌ಬಾಲ್ ಕ್ಲಬ್ ಬೊರುಸ್ಸಿಯಾ ಡಾರ್ಟ್‌ಮಂಡ್ ಆಗಿದೆ. ಅವರು ಹಲವಾರು ಭಾರತೀಯ ಕ್ರಿಕೆಟಿಗರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ.

ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ ಅವರಿಗೂ ಪರಿಚಿತರು

ನತಾಸಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಅವರ ವಿವಾಹ ಸಮಾರಂಭದಲ್ಲಿ ಕಬೀರ್ ಭಾಗವಹಿಸಿದ್ದರು. ಅಲ್ಲದೇ ಮಹೇಂದ್ರ ಸಿಂಗ್ ಧೋನಿ ಮತ್ತು ಅವರ ಕುಟುಂಬದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. 2024ರ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಧೋನಿ ಮತ್ತು ಅವರ ಪತ್ನಿ ಸಾಕ್ಷಿಯೊಂದಿಗೆ ಕಬೀರ್ ಕಾಣಿಸಿಕೊಂಡಿದ್ದರು. ಕಬೀರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಇಬ್ಬರೂ ಕ್ರಿಕೆಟಿಗರೊಂದಿಗೆ ಅನೇಕ ಚಿತ್ರಗಳನ್ನು ಹೊಂದಿದ್ದಾರೆ.

Kriti Sanon
Kriti Sanon


ಕೃತಿ ಸನೋನ್ ಜೊತೆ ಡೇಟಿಂಗ್ ವದಂತಿ

ಕೃತಿ ಮತ್ತು ಕಬೀರ್ ಹೊಸ ವರ್ಷವನ್ನು ಒಟ್ಟಿಗೆ ಆಚರಿಸುತ್ತಿರುವಾಗ ಅವರ ನಡುವಿನ ಸಂಬಂಧದ ಬಗ್ಗೆ ವದಂತಿಗಳು ಪ್ರಾರಂಭವಾದವು. 2024ರ ಹೋಳಿ ಹಬ್ಬವನ್ನು ಕಬೀರ್ ಜೊತೆ ಕೃತಿ ನಡೆಸಿರುವುದಾಗಿ ಹೇಳುವ ಅನೇಕ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದು ನಟಿಯ ಅಭಿಮಾನಿಗಳು ಕುತೂಹಲ ಕೆರಳಿಸಿದೆ. ಕಬೀರ್‌ಗಿಂತ ಒಂಬತ್ತು ವರ್ಷ ಹಿರಿಯರಾದ ಕೃತಿ ತನ್ನ ಸಹೋದರಿ ನೂಪುರ್ ಮೂಲಕ ಅವರನ್ನು ಮೊದಲ ಬಾರಿ ಭೇಟಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

ಕೃತಿ ಸನೋನ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ವೇಳೆ ಕಬೀರ್ ಜೊತೆ ಪ್ರವಾಸ ನಡೆಸಿರುವುದಾಗಿ ಕೇಳಿ ಬಂದಾಗ ಅವರಿಬ್ಬರ ಡೇಟಿಂಗ್ ಗೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಸದ್ಯ ನಟಿ ಕೃತಿ ತನ್ನ ಸಹೋದರಿ ನೂಪುರ್ ಸನೋನ್ ಮತ್ತು ಸ್ನೇಹಿತರೊಂದಿಗೆ ಗ್ರೀಸ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಲ್ಲಿ ಅಭಿಮಾನಿಗಳು ಕೃತಿ ಮತ್ತು ಕಬೀರ್ ಒಟ್ಟಿಗೆ ಇರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹರಿದಾಡುತ್ತಿವೆ. ಇದನ್ನು ನೋಡಿರುವ ಅವರ ಅಭಿಮಾನಿಗಳು ನಟಿ ಕೃತಿ ತಮ್ಮ 34ನೇ ಹುಟ್ಟುಹಬ್ಬವನ್ನು ಕಬೀರ್ ಜೊತೆ ಆಚರಿಸಿದರು ಎಂಬುದಾಗಿ ಹೇಳುತ್ತಿದ್ದಾರೆ

Continue Reading

ದೇಶ

Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

ಪ್ರಧಾನಿ ಮೋದಿ ತಮ್ಮ ಡಿಜಿಟಲ್ ಸರ್ಕಾರದ ನೀತಿಗಳ ಮೂಲಕ 80 ಕೋಟಿ ಜನರನ್ನು ಬಡತನದಿಂದ ಮತ್ತು 25 ಕೋಟಿ ಜನರನ್ನು ಬಹು ಬಡತನದಿಂದ ಹೊರಬರಲು ಸಹಾಯ ಮಾಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಸಾಕಷ್ಟು ಪರಿವರ್ತನೆಯಾಗಿದೆ. ವಿಶ್ವ ಸಂಸ್ಥೆಯ ಜನರಲ್‌ ಅಸೆಂಬ್ಲಿ ಅಧ್ಯಕ್ಷರೇ ಈ ಬಗ್ಗೆ ಮೋದಿ ಆಡಳಿತಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಪ್ರಸ್ತಾಪಿಸಿದ್ದಾರೆ.

VISTARANEWS.COM


on

By

Rajeev Chandrasekhar
Koo

ಕಳೆದ ಹತ್ತು ವರ್ಷಗಳಲ್ಲಿ ಭಾರತದ 80 ಕೋಟಿ ಜನರು ಬಡತನದಿಂದ (poverty) ಹೊರಬಂದಿದ್ದು, ಇದಕ್ಕಾಗಿ ವಿಶ್ವಸಂಸ್ಥೆ ಜನರಲ್‌ ಅಸೆಂಬ್ಲಿ (ಯುಎನ್‌ಜಿಎ) ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ (UNGA president Dennis Francis) ಅವರು ಭಾರತವನ್ನು ಶ್ಲಾಘಿಸಿರುವುದನ್ನು ಪ್ರಸ್ತಾಪಿಸಿರುವ ಬಿಜೆಪಿ ನಾಯಕ (bjp leader) ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ( Rajeev Chandrasekhar), ಭಾರತದಲ್ಲಿ ನಡೆದಿರುವ ಪರಿವರ್ತನೆಗೆ ಇದು ಸಾಕ್ಷಿ ಎಂದಿದ್ದಾರೆ.

ಪ್ರಧಾನಿ ಮೋದಿ ತಮ್ಮ ಡಿಜಿಟಲ್ ಸರ್ಕಾರದ ನೀತಿಗಳ ಮೂಲಕ 80 ಕೋಟಿ ಜನರು ಬಡತನದಿಂದ ಮತ್ತು 25 ಕೋಟಿ ಜನರಿಗೆ ಬಹು ಬಡತನದಿಂದ ಹೊರಬರಲು ಸಹಾಯ ಮಾಡಿದ್ದಾರೆ ಎಂದು ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಸಾಕಷ್ಟು ಪರಿವರ್ತನೆಯಾಗಿದೆ. ಎಂದ ಅವರು, ಪ್ರತಿ ದೇಶವು ತಮ್ಮ ಬಡವರನ್ನು ಮುನ್ನಡೆಸಲು ಈ ರೀತಿಯ ನೀತಿಗಳನ್ನು ರೂಪಿಸಬೇಕು ಎಂದು ಹೇಳಿದರು.


ತಂತ್ರಜ್ಞಾನ ಮತ್ತು ಮೊಬೈಲ್ ಫೋನ್‌ಗಳಿಂದ 80 ಕೋಟಿ ಜನರ ಜೀವನದಲ್ಲಿ ಈ ಬದಲಾವಣೆಯಾಗಿದೆ. 2014ರ ಮೊದಲು ವಿಶ್ವದ ಮುಂದೆ ಭಾರತ ಸರ್ಕಾರದ ನಿರೂಪಣೆಯೆಂದರೆ ಸರ್ಕಾರವು ಅತ್ಯಂತ ನಿಷ್ಕ್ರಿಯವಾಗಿದೆ, ಸರ್ಕಾರಿ ವ್ಯವಸ್ಥೆಯು ತುಂಬಾ ಸೋರಿಕೆ ಮತ್ತು ಭ್ರಷ್ಟವಾಗಿದೆ ಎಂದಾಗಿತ್ತು. ಭಾರತದಲ್ಲಿ ಬ್ಯಾಂಕಿಂಗ್ ಸೇರ್ಪಡೆ ಕೇವಲ ಶ್ರೀಮಂತ ಮತ್ತು ಮಧ್ಯಮ ವರ್ಗದವರಿಗೆ ಆಗಿತ್ತು. ಬಡವರಿಗೆ ಬ್ಯಾಂಕಿಂಗ್ ವ್ಯವಸ್ಥೆ ಸಂಪರ್ಕ ಕಡಿತವಾಗಿತ್ತು ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

2014ರ ಮೊದಲು ಕೇವಲ 17 ಕೋಟಿ ಜನರಿಗೆ ಇಂಟರ್ನೆಟ್ ಸಂಪರ್ಕ ಲಭ್ಯವಿತ್ತು. 2014ರ ಅನಂತರ ಪ್ರಧಾನಿ ಮೋದಿ ಈ 17 ಕೋಟಿ ಇಂಟರ್ನೆಟ್ ಸಂಪರ್ಕವನ್ನು 10 ವರ್ಷಗಳಲ್ಲಿ 90 ಕೋಟಿಗೆ ಪರಿವರ್ತಿಸಿದರು. 14 ಕೋಟಿ ಜನರು ಮಾತ್ರ ಬ್ಯಾಂಕ್ ಖಾತೆ ಹೊಂದಿದ್ದರು, ಇಂದು 52 ಕೋಟಿ ಜನರು ಬ್ಯಾಂಕ್ ಖಾತೆ ಹೊಂದಿದ್ದಾರೆ. ಇವೆಲ್ಲವನ್ನೂ ಒಟ್ಟುಗೂಡಿಸಿ 25 ಕೋಟಿ ಜನರು ಬಹುಆಯಾಮದ ಬಡತನದಿಂದ ಹೊರಬಂದಿದ್ದಾರೆ. ಕೋವಿಡ್ ಸಮಯದಲ್ಲಿ 80 ಕೋಟಿ ಜನರಿಗೆ ಪಡಿತರವನ್ನು ಒದಗಿಸಲಾಗಿದೆ. 200 ಕೋಟಿ ಜನರಿಗೆ ವ್ಯಾಕ್ಸಿನೇಷನ್ ಅನ್ನು ತಂತ್ರಜ್ಞಾನದ ಸಹಾಯದಿಂದ ನಿರ್ವಹಿಸಲಾಗಿದೆ ಎಂದು ರಾಜೀವ್‌ ವಿವರಿಸಿದ್ದಾರೆ.

ಇತರ ದೇಶಗಳು ಸಹ ಭಾರತದ ಹೆಜ್ಜೆಗಳನ್ನು ಅನುಸರಿಸಬೇಕು ಎಂದು ಬ್ರಿಟನ್‌ ಮಾಜಿ ಪ್ರಧಾನಿ ಟೋನಿ ಬ್ಲೇರ್ ಹೇಳಿದ್ದರು. ಹತ್ತು ವರ್ಷಗಳಲ್ಲಿ ಏನಾಯಿತು ಎಂದು ನಮ್ಮ ವಿರೋಧ ಪಕ್ಷಗಳು ಕೇಳುತ್ತವೆ. ಆದರೆ ಪ್ರಧಾನಿ ಮೋದಿ ಬಡವರು ಮತ್ತು ರೈತರಿಗಾಗಿ ಏನು ಮಾಡಿದ್ದಾರೆ ಎಂಬುದು ಜಗತ್ತಿಗೆ ತಿಳಿದಿದೆ, ನಮಗೂ ತಿಳಿದಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಅವರನ್ನು ಸಬಲೀಕರಣಗೊಳಿಸಲಾಗಿದೆ. ಜಗತ್ತು ಅದನ್ನು ಒಪ್ಪಿಕೊಳ್ಳುತ್ತದೆ ಎಂದಿದ್ದಾರೆ ರಾಜೀವ್‌ ಚಂದ್ರಶೇಖರ್‌.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಕ್ಷಿಪ್ರ ಅಭಿವೃದ್ಧಿಗಾಗಿ ಡಿಜಿಟಲೀಕರಣದ ಬಳಕೆಯನ್ನು ಒತ್ತಿಹೇಳುತ್ತಾ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನದ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರು ಕಳೆದ 5-6 ವರ್ಷಗಳಲ್ಲಿ 800 ಮಿಲಿಯನ್ ಜನರನ್ನು ಬಡತನದಿಂದ ಮೇಲಕ್ಕೆತ್ತಿರುವ ಭಾರತದ ಕ್ರಮವನ್ನು ಶ್ಲಾಘಿಸಿದ್ದರು. ಭಾರತದ ಗ್ರಾಮೀಣ ಪ್ರದೇಶದ ಜನರ ಕೇವಲ ಸ್ಮಾರ್ಟ್‌ಫೋನ್ ಸ್ಪರ್ಶದಿಂದ ಹೇಗೆ ಪಾವತಿಗಳನ್ನು ಮತ್ತು ಬಿಲ್‌ಗಳನ್ನು ಸುಲಭವಾಗಿ ಪಾವತಿಸುತ್ತಿದ್ದಾರೆ ಎಂಬುದನ್ನು ಅವರು ತಿಳಿಸಿದ್ದರು.

Continue Reading
Advertisement
African Culture
ವಿದೇಶ4 mins ago

Breast Ironing: ಆಫ್ರಿಕಾದಲ್ಲಿದೆ ಬಿಸಿ ವಸ್ತುಗಳಿಂದ ಯುವತಿಯರ ಸ್ತನ ಚಪ್ಪಟೆಗೊಳಿಸುವ ಕ್ರೂರ ಪದ್ಧತಿ!

high-speed road corridor
ಪ್ರಮುಖ ಸುದ್ದಿ6 mins ago

High Speed Road Corridor : 8 ಹೊಸ ಹೈಸ್ಪೀಡ್​ ರೋಡ್​ ಕಾರಿರಾಡ್​ಗೆ ಒಪ್ಪಿಗೆ ಕೊಟ್ಟ ಕೇಂದ್ರ ಸರ್ಕಾರ

RRB ALP Recruitment
ಕರ್ನಾಟಕ10 mins ago

RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

Sri Vidyashreesha Theertha Swamiji ashirvachan at Vyasaraja Matha of Sosale village
ಮೈಸೂರು18 mins ago

Mysore News: ದೇವರ ಅನುಗ್ರಹ ದೊರೆತರೆ ಜೀವನದ ಎಲ್ಲ ತಾಪಗಳೂ ನಿವಾರಣೆ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ

Minister Shivaraj tangadagi visited and inspected Tungabhadra river side villages
ಮಳೆ21 mins ago

Koppala News: ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು; ನದಿಪಾತ್ರದ ಗ್ರಾಮಗಳಿಗೆ ತಂಗಡಗಿ ಭೇಟಿ

Space mission
ಪ್ರಮುಖ ಸುದ್ದಿ34 mins ago

Space mission : ಇಂಡೊ- ಯುಎಸ್​ ಬಾಹ್ಯಾಕಾಶ ಯಾನಕ್ಕೆ ಭಾರತದ ಶುಭಾಂಶು ಶುಕ್ಲಾ ‘ಪ್ರಧಾನ ಗಗನಯಾತ್ರಿ’

Actor Darshan
ಕರ್ನಾಟಕ44 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಾಕ್ಷಿ ಹೇಳದಂತೆ ಬೆದರಿಕೆ; ದರ್ಶನ್‌ ಗ್ಯಾಂಗ್ ವಿರುದ್ಧ ದೂರು

Fashion workshop
ಫ್ಯಾಷನ್51 mins ago

Fashion Workshop: ಬೆಂಗಳೂರಲ್ಲಿ ಜಪಾನಿನ ಖ್ಯಾತ ಡಿಸೈನರ್‌ ಶಿಂಗೊ ಸಾಟೊ ಫ್ಯಾಷನ್‌ ಕ್ಲಾಸ್‌!

Paris Olympics 2024
ಕ್ರೀಡೆ1 hour ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ 8ನೇ ದಿನವಾದ ಶನಿವಾರ ಭಾರತದ ಸ್ಪರ್ಧೆಗಳ ವಿವರ ಇಲ್ಲಿದೆ

Kasturirangan Report
ಕರ್ನಾಟಕ1 hour ago

Kasturirangan Report: ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಎಂದ ಸಿಎಂ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌