Grama Deviya Jatre: ಯಲ್ಲಾಪುರ ಶ್ರೀ ಗ್ರಾಮ ದೇವಿಯರ ಜಾತ್ರೆಗೆ ಚಾಲನೆ; ಜನಸಾಗರದ ಮಧ್ಯೆ ಅಕ್ಕ ತಂಗಿಯರ ಆಗಮನ - Vistara News

ಉತ್ತರ ಕನ್ನಡ

Grama Deviya Jatre: ಯಲ್ಲಾಪುರ ಶ್ರೀ ಗ್ರಾಮ ದೇವಿಯರ ಜಾತ್ರೆಗೆ ಚಾಲನೆ; ಜನಸಾಗರದ ಮಧ್ಯೆ ಅಕ್ಕ ತಂಗಿಯರ ಆಗಮನ

Grama Deviya Jatre: ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಯಲ್ಲಾಪುರ ಶ್ರೀ ಗ್ರಾಮ ದೇವಿಯರ ಜಾತ್ರೆಗೆ ಅದ್ಧೂರಿ ಚಾಲನೆ ದೊರೆತಿದ್ದು, ಸಹಸ್ರಾರು ಭಕ್ತರು ಆಗಮಿಸಿದ್ದರು.

VISTARANEWS.COM


on

Grama Deviya Jatre yallapura
ದೇವಿಯ ವೈಭವದ ಮೆರವಣಿಗೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಸಹಸ್ರಾರು ಜನ ಭಕ್ತಾದಿಗಳ ಜಯಘೋಷ, ಕಣ್ಣು ಹಾಯಿಸಿದಷ್ಟು ಜನಸಾಗರದ ಮಧ್ಯೆ ಅಕ್ಕ, ತಂಗಿಯರ ಆಗಮನ. ಕರ್ನಾಟಕದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಯಲ್ಲಾಪುರ ಶ್ರೀ ಗ್ರಾಮ ದೇವಿಯರ ಜಾತ್ರೆಗೆ (Grama Deviya Jatre:) ಬುಧವಾರ (ಫೆ.೨೩) ಮಧ್ಯಾಹ್ನ ಅದ್ಧೂರಿ ಚಾಲನೆ ದೊರೆಯಿತು.

ಬೆಳಗ್ಗೆ 11 ಗಂಟೆ ಹೊತ್ತಿಗೆ ದೇವಿಯರ ಲಗ್ನ ಕಾರ್ಯ ನೆರವೇರಿಸಲಾಯಿತು. ನಂತರ 4 ಗಂಟೆ ಹೊತ್ತಿಗೆ ದೇವಿ ದೇವಸ್ಥಾನದಿಂದ ಧಾರ್ಮಿಕ ವಿಧಿ ವಿಧಾನ ಪೂರೈಸಿ, ದೇವಿಯರ ಮೆರವಣಿಗೆ ಗದ್ದುಗೆಯೆಡೆಗೆ ಆರಂಭವಾಯಿತು. ರಂಗವಲ್ಲಿ, ತಳಿರು, ತೋರಣ, ಕೇಸರಿ ಪತಾಕೆಗಳಿಂದ ಶೃಂಗಾರಗೊಂಡ ಪೇಟೆಯ ಬೀದಿಯಲ್ಲಿ ಮೆರವಣಿಗೆ ಸಾಗಿ ಉಡುಪಿಯ ತಂಡದ ಚಂಡೆ ವಾದನ, ರಾಮಾಪುರ-ಕಾಜಲವಾಡ ವಾದ್ಯ ತಂಡಗಳು, ಹೆಗ್ಗೂಡಿನ ಗಾರುಡಿ ಗೊಂಬೆಗಳು ಮೆರವಣಿಗೆಯ ಶೋಭೆಯನ್ನು ಹೆಚ್ಚಿಸಿದವು.

ಇದನ್ನೂ ಓದಿ: Women’s T20 World Cup: ಆಸ್ಟ್ರೇಲಿಯಾವನ್ನು ಮಣಿಸಲು ದೊಡ್ಡ ಮೊತ್ತ ಅಗತ್ಯ; ರಿಚಾ ಘೋಷ್​

ದೇವಿ ದೇವಸ್ಥಾನದಿಂದ ಮೈದಾನದವರೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ದಾರಿಯ ಇಕ್ಕೆಲಗಳಲ್ಲಿ, ಕಟ್ಟಡಗಳ ಮೇಲೆ ನಿಂತು ಜಯಘೋಷಗಳನ್ನು ಹಾಕುತ್ತಾ ದೇವಿಯರ ಹೊನ್ನಾಟವನ್ನು ವೀಕ್ಷಿಸಿದರು. ಸಂಜೆ 5.15ರ ಸುಮಾರಿಗೆ ಶ್ರೀದೇವಿಯರು ಜಾತ್ರಾ ಮಂಟಪದಲ್ಲಿ ವಿರಾಜಮಾನರಾದರು.

ಪಟ್ಟಣದೆಲ್ಲೆಡೆ ಭಕ್ತಾದಿಗಳಿಗೆ ಸ್ವಯಂ ಸೇವಕರು, ಭಕ್ತರು ಪಾನಕ, ತಂಪು ಪಾನೀಯ ವಿತರಿಸುತ್ತಿದ್ದರು. ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಮಧ್ಯೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಇದನ್ನೂ ಓದಿ: Yashaswini Scheme: ಯಶಸ್ವಿನಿ ಕಾರ್ಡ್‌ ಮಾಡಿಕೊಡುವುದಾಗಿ ವಂಚನೆ; ಯಶಸ್ವಿನಿ ಟ್ರಸ್ಟ್‌ನಿಂದ ದೂರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ತಗ್ಗಿದ್ದು, ಮುಂದಿನ ವಾರ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಒಳನಾಡಿನ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast
Koo

ಹಾವೇರಿ/ಬೆಂಗಳೂರು: ಹಾವೇರಿಯಲ್ಲಿ ನಿರಂತರ ಮಳೆಗೆ (Karnataka Weather Forecast) ಸರಕಾರಿ ಶಾಲೆ ಕಟ್ಟಡವೊಂದು ಸೋರುತ್ತಿದೆ. ಶತಮಾನ ಕಂಡಿರುವ ಹಾವೇರಿಯ ಕಳಸೂರಿನಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀರು ಸೋರಿಕೆಯಿಂದಾಗಿ ಮಕ್ಕಳು ಪರದಾಟ ಅನುಭವಿಸುತ್ತಿದ್ದಾರೆ. ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡದ ದುರಸ್ತಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮುಂದಿನ ವಾರ ಭಾರಿ ಮಳೆ

ಮುಂದಿನ ಒಂದು ವಾರ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದ್ದು, ನಿರಂತರ ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Road Accident : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ; ಪತಿ ಸಾವು, ಪತ್ನಿ ಕಾಲುಗಳು ಕಟ್‌, ಮಗು ಪಾರು

ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡ ನೈರುತ್ಯ

ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ, ದಕ್ಷಿಣ ಹಾಗೂ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಮಂಕಿ 11, ಶಿವಮೊಗ್ಗದ ಆನವಟ್ಟಿ, ಆಗುಂಬೆಯಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ. ಕ್ಯಾಸಲ್‌ ರಾಕ್‌, ಗೇರ್ಸೊಪ್ಪ, ಕದ್ರಾ, ಜಗಲಬೆಟ್‌ನಲ್ಲಿ 10ಸೆಂ.ಮೀ ಮಳೆಯಾಗಿದೆ. ಕೋಟ, ಕಮ್ಮರಡಿ,ಶೃಂಗೇರಿ, ಸಿದ್ದಾಪುರ, ಕುಮಟಾದಲ್ಲಿ 6 ಸೆಂ.ಮೀ, ಮೂಲ್ಕಿ, ಮಾಣಿ, ಕಾರವಾರ, ಯಲ್ಲಾಪುರ, ಪುತ್ತೂರು, ಹೊನ್ನಾವರ, ಕೊಪ್ಪ, ಜಯಪುರದಲ್ಲಿ 5 ಸೆಂ.ಮೀ ಮಳೆಯಾಗಿದೆ.

ಧರ್ಮಸ್ಥಳ, ಸಿದ್ದಾಪುರ, ಲಿಂಗನಮಕ್ಕಿ, ದಕ್ಷಿಣ ಕನ್ನಡ, ಜೋಯಿಡಾ, ಶಿರಾಲಿ, ಕುಂದಾಪುರ ಹಾಗೂ ಮಂಗಳೂರು, ಕಾರ್ಕಳ, ಬೆಳಗಾವಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಸುಳ್ಯ, ಗೋಕರ್ಣ, ಮಂಗಳೂರು, ಪಣಂಬೂರು, ಬೆಳ್ತಂಗಡಿ, ಹಳಿಯಾಳ, ಲೋಂಡಾ, ಎನ್‌ಆರ್‌ಪುರ, ಬಾಳೆಹೊನ್ನೂರು, ಮೂರ್ನಾಡು, ಭಾಗಮಂಡಲ, ಕಳಸ, ನಿಲ್ಕುಂದ, ಕಿರವತ್ತಿ, ಬೆಳಗಾವಿ, ತ್ಯಾಗರ್ತಿ ಸೇರಿದಂತೆ ಸೋಮವಾರಪೇಟೆ, ಹುಂಚದಕಟ್ಟೆ, ಹಿರಿಯೂರು, ಹಾಸನ, ಹಾರಂಗಿ, ತೊಂಡೇಬಾವಿ, ಬಿ ದುರ್ಗ, ದೊಡ್ಡಬಳ್ಳಾಪುರ, ಕೊಟ್ಟಿಗೆಹಾರ ಸುತ್ತಮುತ್ತ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮುಂದುವರಿಯಲಿದೆ ವಿಪರೀತ ಮಳೆ; ಕರಾವಳಿಗೆ ಆರೆಂಜ್‌, ಮಲೆನಾಡಿಗೆ ಯೆಲ್ಲೋ ಅಲರ್ಟ್‌

Rain News : ಭಾನುವಾರದಂದು ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್‌ ಹಾಗೂ ಯೆಲ್ಲೋ ಎಚ್ಚರಿಕೆಯನ್ನು (Karnataka Weather Forecast) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಮತ್ತೆ ಸಕ್ರಿಯವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

ಉತ್ತರ ಒಳನಾಡಿನ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

Farmer Death: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಅಂಕೋಲಾ ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತಪಟ್ಟ ರೈತ ಎಂದು ತಿಳಿದುಬಂದಿದೆ.

VISTARANEWS.COM


on

Farmer dies after falling under power tiller wheel in Moralli village
Koo

ಅಂಕೋಲಾ: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ (Farmer Death) ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತ ದುರ್ದೈವಿಯಾಗಿದ್ದಾನೆ.

ಇದನ್ನೂ ಓದಿ: Accident: ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ; ಮಹಿಳೆ ಬಲಿ; ಭೀಕರ ದೃಶ್ಯ ವೈರಲ್‌

ರೈತ ನಾಗರಾಜ ಶುಕ್ರವಾರ ಬೆಳಗ್ಗೆ ಮೊರಳ್ಳಿಯಲ್ಲಿರುವ ಸುರೇಶ ನಾಯಕ ಎಂಬುವವರ ಗದ್ದೆಯಲ್ಲಿ ಉಳುಮೆ ಮಾಡಲು ತೆರಳಿದ್ದ. ಈ ವೇಳೆ ವಿಪರೀತ ಮಳೆ ಬರುತ್ತಿದ್ದ ಹಿನ್ನಲೆ ವಾಪಸ್ಸಾಗಿದ್ದು, ಮದ್ಯಾಹ್ನದ ನಂತರ ಮಳೆ ಕಡಿಮೆಯಾದ ಬಳಿಕ ಮತ್ತೆ ಗದ್ದೆಗೆ ತೆರಳಿದ್ದ. ಪವರ್ ಟಿಲ್ಲರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ಚಕ್ರಕ್ಕೆ ಕಾಲು ಸಿಲುಕಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿದ್ದು, ಗದ್ದೆಯಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

ಸ್ಥಳಕ್ಕೆ ಅಂಕೋಲಾ ಠಾಣೆಯ ಪಿಎಸ್‌ಐ ಉದ್ದಪ್ಪ ಧರೆಪ್ಪನವರ್ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

Karnataka Weather Forecast : ಮಳೆಗೆ (Rain News) ಹೊನ್ನಾವರದಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸಕ್ಕೆ ಮುಂದಾದ ಘಟನೆಯೂ ನಡೆದಿದೆ. ಭಾನುವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ
Koo

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Parul Chaudhary
ಕ್ರೀಡೆ5 mins ago

Parul Chaudhary : ಸ್ಟೀಪಲ್​ ಚೇಸ್​​ ಫೈನಲ್​ಗೆ ಅರ್ಹತೆ ಪಡೆಯಲು ಪಾರುಲ್ ಚೌಧರಿ ವಿಫಲ

Karnataka Weather Forecast
ಮಳೆ17 mins ago

Karnataka Weather : ನಿರಂತರ ಮಳೆಗೆ ಸೋರುತ್ತಿದೆ ಸರಕಾರಿ ಶಾಲೆ ಕಟ್ಟಡ; ಮುಂದಿನ ವಾರ ಹೇಗಿರಲಿದೆ ಅಬ್ಬರ

Priyanka Goswami
ಪ್ರಮುಖ ಸುದ್ದಿ27 mins ago

Priyanka Goswami : ರೀಲ್ಸ್​ ಮಾಡೋದಲ್ಲ, ಸ್ಪರ್ಧೆಯಲ್ಲಿ ಓಡಿ ಪದಕ ಗೆಲ್ಲು; ಪ್ರಿಯಾಂಕ ಗೋಸ್ವಾಮಿಗೆ ನೆಟ್ಟಿಗರ ತಪರಾಕಿ

Health tips for Over 40 supplimnt
ಆರೋಗ್ಯ42 mins ago

Health tips for Over 40: ನಿಮಗೆ 40 ದಾಟಿತೇ? ಹಾಗಾದರೆ ಈ ಸಪ್ಲಿಮೆಂಟ್‌ಗಳು ನಿಮಗೆ ಬೇಕಾಗಬಹುದು!

Marriage
ವೈರಲ್ ನ್ಯೂಸ್42 mins ago

ಮದುವೆಯಾದ ಮೇಲೂ ಪತ್ನಿಗೆ ಹಳೇ ಲವ್ವರ್‌ ಮೇಲೆ ಮೋಹ; ಆತನೊಂದಿಗೇ ಮದುವೆ ಮಾಡಿಸಿದ ಪತಿ!

Government Job
ಕರ್ನಾಟಕ49 mins ago

Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Paris Olympics
ಕ್ರೀಡೆ50 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್‌ ಪದಕ ಗೆಲುವಿಗೆ ಹಿನ್ನಡೆಯಾದ ಮೊಣಕಾಲಿನ ಗಾಯ; ಕಣ್ಣೀರು ಸುರಿಸುತ್ತಾ ಸೆಮಿಯಿಂದ ಹಿಂದೆ ಸರಿದ ಮರಿನ್‌

Money Guide
ಮನಿ-ಗೈಡ್1 hour ago

Money Guide: ನೆರೆ, ಭೂಕುಸಿತದಿಂದ ನಿಮ್ಮ ಮನೆಯನ್ನು ರಕ್ಷಿಸಲು ಜಸ್ಟ್‌ ಹೀಗೆ ಮಾಡಿ ಸಾಕು

Kiran Raj Ronny releasing on August 30th
ಸ್ಯಾಂಡಲ್ ವುಡ್1 hour ago

Actor Kiran Raj: ಕಿರಣ್‌ರಾಜ್‌ `ರಾನಿ’ ಸಿನಿಮಾಗೆ ಯು/ಎ ಸರ್ಟಿಫಿಕೇಟ್; ತೆರೆಗೆ ಯಾವಾಗ?

Paris Olympics 2024
ಪ್ರಮುಖ ಸುದ್ದಿ1 hour ago

Bikini vs : Hijab : ಸ್ಪೇನ್​, ಈಜಿಪ್ಟ್​ ನಡುವಿನ ಬೀಚ್ ವಾಲಿಬಾಲ್ ಪಂದ್ಯದ ವೇಳೆ ಕಿಡಿ ಹಚ್ಚಿದ ಬಿಕಿನಿ ವರ್ಸಸ್ ಹಿಜಾಬ್​ ಚರ್ಚೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ4 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 day ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌