Simbu Marriage: ಶ್ರೀಲಂಕಾದ ಉದ್ಯಮಿಯ ಮಗಳ ಜತೆ ಹಸೆಮಣೆ ಏರಲಿದ್ದಾರಾ ಸಿಂಬು? - Vistara News

ಕಾಲಿವುಡ್

Simbu Marriage: ಶ್ರೀಲಂಕಾದ ಉದ್ಯಮಿಯ ಮಗಳ ಜತೆ ಹಸೆಮಣೆ ಏರಲಿದ್ದಾರಾ ಸಿಂಬು?

ತಮಿಳು ಚಿತ್ರರಂಗದಲ್ಲಿ ಬಾಲನಟನಾಗಿ ಪದಾರ್ಪಣೆ ಮಾಡಿದರು. ಸಿಂಬು (Simbu Marriage) ತನ್ನ ಪ್ರತಿಭೆಯಿಂದ ಮಾತ್ರವಲ್ಲದೆ ಕೆಲವು ವಿವಾದಗಳಿಂದಲೂ ಗಮನ ಸೆಳೆದಿದ್ದಾರೆ.

VISTARANEWS.COM


on

Simbu Marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಲಿವುಡ್‌ ನಟ ಸಿಂಬು (Simbu Marriage), ಅವರ ನಿಜವಾದ ಹೆಸರು ಸಿಲಂಬರಸನ್ ಥೆಸಿಂಗು ರಾಜೇಂದರ್ (Silambarasan Thesingu Rajendar). ತಮಿಳು ಚಿತ್ರರಂಗದಲ್ಲಿ ನಟನಾಗಿ, ಕಥೆಗಾರ, ಸಂಗೀತ ನಿರ್ದೇಶಕ, ಬರಹಗಾರ, ಗಾಯಕ, ನೃತ್ಯಗಾರ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಟ ಶ್ರೀಲಂಕಾದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮದುವೆಯಾಗಲಿದ್ದಾರೆ ಎಂಬ ಗಾಸಿಪ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಮದುವೆಯಾಗುವ ಹುಡುಗಿಯ ತಂದೆ ಖ್ಯಾತ ಉದ್ಯಮಿ ಎಂದು ಹೇಳಲಾಗುತ್ತಿದೆ.

ಶ್ರೀಲಂಕಾದ ತಮಿಳು ಕುಟುಂಬಕ್ಕೆ ಸೇರಿದ ಯುವತಿಯನ್ನೇ ಸಿಂಬು ವಿವಾಹವಾಗುತ್ತಿದ್ದು, ಸಿಂಬು ಮದುವೆಯಾಗಲಿರುವ ಯುವತಿ ವೈದ್ಯ ವೃತ್ತಿಯಲ್ಲಿ ತೊಡಗಿದ್ದಾರಂತೆ. ಕಳೆದ ಕೆಲ ವರ್ಷಗಳಿಂದಲೂ ಇವರು ಪರಿಚಿತರೇ ಆಗಿದ್ದಾರೆ ಎಂಬ ಮಾತುಗಳು ಸಹ ಇವೆ. ತಮಿಳು ಚಿತ್ರರಂಗದಲ್ಲಿ ಬಾಲನಟನಾಗಿ ಪದಾರ್ಪಣೆ ಮಾಡಿದರು. ಸಿಂಬು ತನ್ನ ಪ್ರತಿಭೆಯಿಂದ ಮಾತ್ರವಲ್ಲದೆ ಕೆಲವು ವಿವಾದಗಳಿಂದಲೂ ಗಮನ ಸೆಳೆದಿದ್ದಾರೆ. ಅವರು ಈ ಹಿಂದೆ ಕೆಲಸ ಮಾಡಿದ ಕೆಲವು ನಟಿಯರೊಂದಿಗೆ ಅವರ ಪ್ರಣಯ ಸಂಬಂಧಗಳ ಬಗ್ಗೆ ಮಾಧ್ಯಮಗಳಲ್ಲಿ ನಿರಂತರ ವರದಿಗಳು ಬಂದಿವೆ.

ಇದನ್ನೂ ಓದಿ: Actor Suriya: ಸಚಿನ್ ತೆಂಡೂಲ್ಕರ್ ಭೇಟಿ ಮಾಡಿದ ಕಾಲಿವುಡ್‌ ನಟ ಸೂರ್ಯ: ಫೋಟೊ ವೈರಲ್‌

ನಯನತಾರಾ ಮತ್ತು ಹನ್ಸಿಕಾ ಜತೆ ರಿಲೇಶನ್‌ಶಿಪ್‌ನಲ್ಲಿದ್ರಾ ಸಿಂಬು?

ನಯನತಾರಾ ಮತ್ತು ಹನ್ಸಿಕಾ ಅವರೊಂಗೆ ನಟನ ಹೆಸರು ತುಳುಕು ಹಾಕಿಕೊಂಡಿತ್ತು.ಈ ವಿವಾದಗಳಿಂದಾಗಿ, ಅವರು ಸ್ವಲ್ಪ ಸಮಯದವರೆಗೆ ನಟನೆಯಿಂದ ವಿರಾಮ ತೆಗೆದುಕೊಂಡರು. ಇತ್ತೀಚೆಗಷ್ಟೇ‘ವೆಂದು ತಣಿದತು ಕಾಡು’(vendhu thanindhathu kaadu) ಸಿನಿಮಾ ತೆರೆಕಂಡಿದ್ದು, ಇನ್ನೂ ಹತ್ತು ಸಿನಿಮಾಗಳು ಸದ್ಯದಲ್ಲೇ ತೆರೆಗೆ ಬರಲಿವೆ. ಸಿಂಬು ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ ಮತ್ತು ಅವರ ಅಭಿಮಾನಿಗಳು ಅವರ ಮದುವೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Surya Prakash: ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

VISTARANEWS.COM


on

Surya Prakash Maayi director dies
Koo

ಬೆಂಗಳೂರು: ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ಸೋಮವಾರ (ಮೇ 27) ಹೃದಯಾಘಾತದಿಂದ ನಿಧನರಾದರು. ‘ಮಾಯಿ’, ‘ಮಾಣಿಕ್ಕಂ’ ಮತ್ತು ‘ದಿವಾನ್’ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸೂರ್ಯ ಪ್ರಕಾಶ್ (‘Maayi’ director) ಅವರ ಅಂತಿಮ ವಿಧಿವಿಧಾನಗಳ ಕುರಿತು ಕುಟುಂಬ ಮಾಹಿತಿ ಹಂಚಿಕೊಂಡಿಲ್ಲ.

ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ಕುಮಾರ್ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ. “ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯ್ತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆʼʼಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ರಾಧಿಕಾ ಶರತ್‌ಕುಮಾರ್ “ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ, ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Dhadak 2: ‘ಧಡಕ್ 2’ ಸಿನಿಮಾ ಅನೌನ್ಸ್‌ ಮಾಡಿದ ಕರಣ್‌ ಜೋಹರ್: ʻಅನಿಮಲ್‌ʼ ನಟಿ ನಾಯಕಿ!

ಸೂರ್ಯ ಪ್ರಕಾಶ್ ಅವರು ರಾಜ್‌ಕಿರಣ್‌ ಅವರ ‘ಮಾಣಿಕ್ಕಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ನಂತರ ಅವರು ಶರತ್‌ಕುಮಾರ್ ಮತ್ತು ಮೀನಾಅವರಿಗೆ ‘ಮಾಯಿ’ ಸಿನಿಮಾಗಾಗಿ ನಿರ್ದೇಶನ ಮಾಡಿದರು. ಇದು ಸಕಾರಾತ್ಮಕ ವಿಮರ್ಶೆಗಳನ್ನು ಪಡೆಯಿತು. ತೆಲುಗಿನಲ್ಲಿ ‘ಸಿಂಹರಸಿ’ ಮತ್ತು ಕನ್ನಡದಲ್ಲಿ ‘ನರಸಿಂಹ’ ಎಂದು ಸಿನಿಮಾ ರಿಮೇಕ್ ಆಗಿತ್ತು.

ರಾಜಶೇಖರ್ ಅಭಿನಯದ ‘ಭರತಸಿಂಹ ರೆಡ್ಡಿ’ ಚಿತ್ರದ ಮೂಲಕ ಟಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದರು. ಶರತ್‌ಕುಮಾರ್ ಅವರ ‘ದಿವಾನ್’ ಮತ್ತು ಜೀವನ್ ಅವರ ‘ಅಧಿಬರ್’ ಮೂಲಕ ತಮಿಳಿಗೆ ಮತ್ತೆ ಕಮ್‌ಬ್ಯಾಕ್‌ ಆಗಿದ್ದರು.

Continue Reading

ಕಾಲಿವುಡ್

Karthi next film: ಇಂದು ನಟ ಕಾರ್ತಿ ಬರ್ತ್‌ಡೇ: ತಮ್ಮನ ಚಿತ್ರಕ್ಕೆ ಅಣ್ಣ ಸೂರ್ಯ ಬಂಡವಾಳ!

Karthi next film: ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

VISTARANEWS.COM


on

Karthi next film Suriya to produce Meiyazhagan
Koo

ಬೆಂಗಳೂರು: ಇಂದು ನಟ ಸೂರ್ಯ ಅವರ ಸಹೋದರ ಕಾರ್ತಿ ಜನುಮದಿನ. ನಟ ಸೂರ್ಯ ತನ್ನ ಸಹೋದರ, ನಟ ಕಾರ್ತಿ ಅವರಿಗೆ ಒಂದು ದಿನ ಮುಂಚಿತವಾಗಿ ವಿಶ್‌ ಮಾಡಿದ್ದಾರೆ. ಜತೆಗೆ ಕಾರ್ತಿ ಅವರ ಮುಂಬರುವ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದರು. ಪ್ರೇಮ್ ಕುಮಾರ್ ನಿರ್ದೇಶಿಸಿರುವ ಮತ್ತು ಸೂರ್ಯ ಅವರೇ ಸ್ವತಃ ನಿರ್ಮಿಸಿದ, ʻಮೇಯಳಗನ್ʼ (Meiyazhagan ) ಸಿನಿಮಾದಲ್ಲಿ ಕಾರ್ತಿ (Karthi next film) ಕಾಣಿಸಿಕೊಳ್ಳುತ್ತಿದ್ದಾರೆ. ಕಾರ್ತಿ ಮತ್ತು ಅರವಿಂದ್ ಸ್ವಾಮಿ (Arvind Swamy) ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಪೋಸ್ಟರ್ ಒಂದರಲ್ಲಿ ಅರವಿಂದ್ ಅವರು ಸೈಕಲ್ ಮೇಲೆ ಕುಳಿತಿದ್ದಾರೆ. ಹಿಂದೆ ಕಾರ್ತಿ ಕೂತ್ತಿದ್ದಾರೆ. ಸವಾರಿ ಮಾಡುವಾಗ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಕಾಣಬಹುದು. ಎರಡನೇ ಪೋಸ್ಟರ್‌ನಲ್ಲಿ, ಕಾರ್ತಿ ಅವರು ಎತ್ತಿನ ಎದುರು ನಿಂತಿದ್ದಾರೆ. ಅವರು ನಗುತ್ತಿದ್ದಾರೆ. ಇದು ಹಳ್ಳಿಯ ಕಥೆ ಇರಬಹುದು ಎನ್ನಲಾಗುತ್ತಿದೆ.

ವಿಜಯ್ ಸೇತುಪತಿ ಹಾಗೂ ತ್ರಿಷಾ ಕೃಷ್ಣನ್ ನಟನೆಯ ‘96’ ಚಿತ್ರವನ್ನು ಪ್ರೇಮ್ ಕುಮಾರ್ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘96’ ಬಳಿಕ ಅವರು ನಿರ್ದೇಶನ ಮಾಡುತ್ತಿರುವ ಮೊದಲ ಸಿನಿಮಾ ಇದು.  ‘96’ ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಗೋವಿಂದ್ ವಸಂತ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 96 ಸಿನಿಮಾಗೆ ಸ್ಟಂಟ್‌ ಮಾಸ್ಟರ್‌ ಇರಲಿಲ್ಲ. ಈ ಚಿತ್ರಕ್ಕೂ ಇಲ್ಲ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ಕಂಗುವ ಸಿನಿಮಾ

ಸೂರ್ಯ ಸದ್ಯ ಕಂಗುವ ಸಿನಿಮಾದಲ್ಲಿ ನಟಿಸಲಿದ್ದಾರೆ, ಅವರು ದ್ವಿಪಾತ್ರದಲ್ಲಿ ನಟಿಸಲಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿತ್ತು.

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Actress Nayanthara: ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ ನಯನತಾರಾ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು. ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Actress Nayanthara twin sons on auto ride
Koo

ಬೆಂಗಳೂರು: ನಯನತಾರಾ (Actress Nayanthara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗ್ ಅವರನ್ನು ಚೆನ್ನೈನಲ್ಲಿ ಆಟೋ ಸವಾರಿ ಮಾಡಿಸಿದ್ದಾರೆ. ಮೇ 20ರಂದು ‘ನಯನತಾರಾ’ ವೀಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು.

ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ನಯನತಾರಾ ಈ ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದರು. ಈವೆಂಟ್‌ನಲ್ಲಿ ʻʻನನ್ನ ಮೊದಲ ಮಗ ಉಯಿರ್ ರುದ್ರೋನಿಲ್ ಎನ್ ಶಿವನ್ ಮತ್ತು ನನ್ನ ಎರಡನೇ ಮಗ ಉಳಗ್ ದೈವಿಗ್ ಎನ್ ಶಿವನ್ʼʼ ಎಂದು ಹೇಳಿಕೊಂಡಿದ್ದರು. ನಯನತಾರಾ ಮಕ್ಕಳ ಆರೈಕೆಗಾಗಿ ನಟನೆಯಿಂದ ದೂರ ಸರಿಯಲಿದ್ದಾರೆ ಎನ್ನುವ ಮಾತುಗಳು ಕೂಡ ಹರಿದಾಡಿದ್ದವು. ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇದನ್ನೂ ಓದಿ: Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ನಯನತಾರಾ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಕಾಲಿವುಡ್

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Actor Rajinikanth: ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ.

VISTARANEWS.COM


on

Actor Rajinikanth attends grandson Ved cricket themed birthday party
Koo

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮೊಮ್ಮಗ ವೇದ್ ಕೃಷ್ಣ ಹುಟ್ಟುಹಬ್ಬದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Actor Rajinikanth) ಮತ್ತು ಅವರ ಪತ್ನಿ ಲತಾ ಪಾಲ್ಗೊಂಡಿದ್ದರು. ಮೇ 6ರಂದು ವೇದ್‌ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಕ್ರಿಕೆಟ್‌ ಥೀಮ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಜನಿಕಾಂತ್ ಅವರು ಕೇಕ್ ಅನ್ನು ಕತ್ತರಿಸುತ್ತಿರುವಾಗ ವೇದ್ ಅವರ ಹಿಂದೆ ನಿಂತಿರುವುದನ್ನು ನಾವು ನೋಡಬಹುದು. ಇದೀಗ ಈ ಪಾರ್ಟಿಯ ವಿಡಿಯೊಗಳು ವೈರಲ್‌ ಆಗುತ್ತಿವೆ.

ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ. ಸೌಂದರ್ಯಾ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿಲ್ಲವಾದರೂ, ಕೆಲವು ಫ್ಯಾನ್‌ ಪೇಜ್‌ಗಳು ಪೋಸ್ಟ್‌ ಮಾಡಿವೆ. ವೇದ್ ಕೃಷ್ಣ ಸೌಂದರ್ಯ ರಜನಿಕಾಂತ್ ಮತ್ತು ಅವರ ಮಾಜಿ ಪತಿ ಅಶ್ವಿನ್ ರಾಮ್‌ಕುಮಾರ್ ಅವರ ಮಗ. 2017 ರಲ್ಲಿ ದಂಪತಿಗಳು ವಿಚ್ಛೇದನ ಪಡೆದರು.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಅಶ್ವಿನ್‌ ರಾಮ್‌ಕುಮಾರ್‌ ಜತೆ ಸೌಂದರ್ಯ 2010ರಲ್ಲಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ 2015ರಲ್ಲಿ ಮೊದಲ ಮಗು ಜನಿಸಿತ್ತು. ಆ ಮಗುವೇ ವೇದ್‌. 2017ರಲ್ಲಿ ಸೌಂದರ್ಯ ಮತ್ತು ಅಶ್ವಿನ್‌ ವಿಚ್ಛೇದನ ಪಡೆದುಕೊಂಡರು. 2019ರಲ್ಲಿ ವಿಶಾಗನ್‌​ ವನಂಗಮುಡಿ ಜತೆ ಸೌಂದರ್ಯ ಎರಡನೇ ಮದುವೆ ಮಾಡಿಕೊಂಡರು.

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Continue Reading
Advertisement
Veer Savarkar flyover
ಕರ್ನಾಟಕ20 seconds ago

Veer Savarkar flyover: ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮಸಿ; ಎನ್‌ಎಸ್‌ಯುಐ ಕಾರ್ಯಕರ್ತರು ವಶಕ್ಕೆ

T20 World Cup 2024
ಕ್ರೀಡೆ24 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

Viral Video
ವೈರಲ್ ನ್ಯೂಸ್25 mins ago

Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

self harming chandrashekar ವಾಲ್ಮೀಕಿ
ಪ್ರಮುಖ ಸುದ್ದಿ29 mins ago

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

Chetan and Naveen gowda
ಕರ್ನಾಟಕ42 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಚೇತನ್, ನವೀನ್ ಗೌಡ ಎಸ್ಐಟಿ ವಶಕ್ಕೆ

Pushpa 2
ಸಿನಿಮಾ1 hour ago

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Traffic Violation Case filed against driver if petrol runs out and vehicle stops on road
ಬೆಂಗಳೂರು1 hour ago

Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

Aravind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Success Story
ಕೃಷಿ2 hours ago

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

Radhika Pandit
ಸ್ಯಾಂಡಲ್ ವುಡ್2 hours ago

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ21 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌