Iran Missile: ಟ್ರಂಪ್‌ರನ್ನು ಕೊಲ್ಲುವುದೇ ಗುರಿ: 1650 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಪರೀಕ್ಷಿಸಿದ ಇರಾನ್ - Vistara News

ವಿದೇಶ

Iran Missile: ಟ್ರಂಪ್‌ರನ್ನು ಕೊಲ್ಲುವುದೇ ಗುರಿ: 1650 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಪರೀಕ್ಷಿಸಿದ ಇರಾನ್

ಇರಾನ್‌ನ ಸೈನ್ಯದ ಮುಖ್ಯಸ್ಥ ಅಮಿರಾಲಿ ಹಾಜಿಜಾದೆ ಅವರು ಕ್ಷಿಪಣಿ ಉಡಾವಣೆ ಮಾಹಿತಿ ನೀಡಿದ್ದಾರೆ. ʼʼ1650 ಕಿಲೋಮೀಟರ್‌ ವ್ಯಾಪ್ತಿಯ ಕ್ಷಿಪಣಿಯನ್ನು ಇರಾನ್‌ನ ಸೈನ್ಯಕ್ಕೆ ಸೇರಿಸಲಾಗುತ್ತಿದೆʼʼ ಎಂದಿದ್ದಾರೆ. ಇದು ಅರಬ್‌ ಹಾಗೂ ಯುರೋಪ್‌ ಪ್ರಾಂತ್ಯದಲ್ಲಿ ಕಳವಳ ಹೆಚ್ಚಿಸಿದೆ.

VISTARANEWS.COM


on

Iran Missile
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೆಹರಾನ್:‌ ಇರಾನ್‌ 1650 ಕಿಲೋಮೀಟರ್‌ಗಳ ವ್ಯಾಪ್ತಿಯ ಹೊಸದೊಂದು ಕ್ಷಿಪಣಿಯನ್ನು ಪರೀಕ್ಷಾರ್ಥ ಉಡಾಯಿಸಿದೆ ಎಂದು ಆ ದೇಶದ ಸೈನ್ಯದ ಟಾಪ್‌ ಕಮಾಂಡರ್‌ ಮಾಹಿತಿ ನೀಡಿದ್ದಾರೆ. ಇದೇ ವೇಳೆಗೆ, ʼʼನಮ್ಮ ಉದ್ದೇಶ ಡೊನಾಲ್ಡ್‌ ಟ್ರಂಪ್‌ರನ್ನು ಕೊಲ್ಲುವುದುʼʼ ಎಂದಿದ್ದಾರೆ.

ಇರಾನ್‌ನ ಸೈನ್ಯದ ಮುಖ್ಯಸ್ಥ ಅಮಿರಾಲಿ ಹಾಜಿಜಾದೆ ಅವರು ಕ್ಷಿಪಣಿ ಉಡಾವಣೆ ಮಾಹಿತಿ ನೀಡಿದ್ದಾರೆ. ʼʼ1650 ಕಿಲೋಮೀಟರ್‌ ವ್ಯಾಪ್ತಿಯ ಕ್ಷಿಪಣಿಯನ್ನು ಇರಾನ್‌ನ ಸೈನ್ಯಕ್ಕೆ ಸೇರಿಸಲಾಗುತ್ತಿದೆʼʼ ಎಂದಿದ್ದಾರೆ. ಇದು ಅರಬ್‌ ಹಾಗೂ ಯುರೋಪ್‌ ಪ್ರಾಂತ್ಯದಲ್ಲಿ ಕಳವಳವನ್ನು ಹೆಚ್ಚಿಸುವಂಥ ನಡೆಯಾಗಿದೆ. ಅಮೆರಿಕದ ಬಗ್ಗೆ ವಿದ್ವೇಷದ ಮಾತುಗಳನ್ನು ಆಡುತ್ತ ಬಂದಿರುವ ಇರಾನ್‌ ನಿರ್ಮಿತ ಡ್ರೋನ್‌ಗಳನ್ನು ಇತ್ತೀಚೆಗೆ ರಷ್ಯಾದ ಸೈನ್ಯ ಕೂಡ ಬಳಸಿತ್ತು.

2020ರಲ್ಲಿ ಇರಾನ್‌ನ ಮಿಲಿಟರಿ ಕಮಾಂಡರ್‌ ಖಾಸಿಂ ಸುಲೇಮಾನಿ ಮೇಲೆ ಅಮೆರಿಕ ಡ್ರೋನ್‌ ದಾಳಿ ನಡೆಸಿ ಕೊಂದುಹಾಕಿದ ಬಳಿಕ, ಪ್ರತೀಕಾರ ತೀರಿಸಿಕೊಳ್ಳಲು ಇರಾನ್‌ನ ಸೈನ್ಯದ ಮುಖಂಡರು ಹಪಹಪಿಸುತ್ತಿದ್ದಾರೆ. ʼʼನಮ್ಮ ಉದ್ದೇಶ ಟ್ರಂಪ್‌ ಹಾಗೂ ಪಾಂಪೆಯೊ (ಮಾಜಿ ವಿದೇಶಾಂಗ ಕಾರ್ಯದರ್ಶಿ) ಅನ್ನು ಕೊಲ್ಲುವುದಾಗಿದೆʼʼ ಎಂದು ಅಲ್ಲಿನ ಸೇನಾ ಕಮಾಂಡರ್‌ ಸಂದರ್ಶನದಲ್ಲಿ ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇರಾನ್‌ ತನ್ನ ಅಣ್ವಸ್ತ್ರ ಹೊರಬಹುದಾದ ಬ್ಯಾಲಿಸ್ಟಿಕ್‌ ಕ್ಷಿಪಣಿಗಳ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ತಾನು ಹೈಪರ್‌ಸಾನಿಕ್‌ ಬ್ಯಾಲಿಸ್ಟಿಕ್‌ ಕ್ಷಿಪಣಿಯನ್ನೂ ಆವಿಷ್ಕರಿಸಿದ್ದೇನೆ ಎಂದು ಇರಾನ್‌ ಇತ್ತೀಚೆಗೆ ಹೇಳಿಕೊಂಡಿತ್ತು. ಆದರೆ ಇದನ್ನು ಅಮೆರಿಕ ಅಸಾಧ್ಯವೆಂದು ತಳ್ಳಿಹಾಕಿದೆ.‌

ಇದನ್ನೂ ಓದಿ: Viral News : ನೃತ್ಯ ಮಾಡಿದ್ದಕ್ಕೇ 10 ವರ್ಷ ಜೈಲು ಶಿಕ್ಷೆ! ಇರಾನ್‌ನ ಜೋಡಿಗೆ ಬಂತು ಸಂಕಷ್ಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

World’s Newest Countries: ಇವು ವಿಶ್ವದ 10 ಹೊಸ ರಾಷ್ಟ್ರಗಳು! ಏನು ಈ ರಾಷ್ಟ್ರಗಳ ವಿಶೇಷ?

ಸಮಯದೊಂದಿಗೆ ಜಾಗತಿಕವಾಗಿಯೂ ಹಲವಾರು ಬದಲಾವಣೆಗಳು ಆಗುತ್ತಲೇ ಇರುತ್ತದೆ. ಪ್ರಸ್ತುತ ಜಗತ್ತಿನಲ್ಲಿ 195 ದೇಶಗಳಿವೆ. ಇವುಗಳಲ್ಲಿ ಕೆಲವು ಸಾಕಷ್ಟು ಹಳೆಯವು ಮತ್ತು ಕೆಲವು ಸಾಕಷ್ಟು ಹೊಸದು. ಇದರಲ್ಲಿ ಹತ್ತು ರಾಷ್ಟ್ರಗಳು ಕಳೆದ ಎರಡು ದಶಕಗಳಲ್ಲಿ (World’s Newest Countries) ಸ್ಥಾಪನೆಯಾಗಿರುವುದು. ಈ ಹತ್ತು ದೇಶಗಳ ಸಂಕ್ಪಿಪ್ತ ಪರಿಚಯ ಇಲ್ಲಿದೆ.

VISTARANEWS.COM


on

By

World's Newest Countries
Koo

ಕಳೆದ ಎರಡು ದಶಕಗಳಲ್ಲಿ ವಿಶ್ವದಲ್ಲಿ ಹತ್ತು ಹೊಸ ರಾಷ್ಟ್ರಗಳು (World’s Newest Countries) ರೂಪುಗೊಂಡಿದ್ದು, ಇದರಲ್ಲಿ ದಕ್ಷಿಣ ಸುಡಾನ್ (South Sudan) ಇತ್ತೀಚೆಗೆಷ್ಟೇ ಹುಟ್ಟಿಕೊಂಡಿದೆ. ಸಾಕಷ್ಟು ಸವಾಲುಗಳನ್ನು ಎದುರಿಸಿ ರೂಪುಗೊಂಡಿರುವ ಈ ಹೊಸ ರಾಷ್ಟ್ರಗಳು ಅನೇಕ ಅವಕಾಶಗಳನ್ನೂ ಸೃಷ್ಟಿಸಿದೆ.

ದಕ್ಷಿಣ ಸೂಡಾನ್ ಇದೀಗ ವಿಶ್ವದ ಹೊಸ ದೇಶಗಳ ಪಟ್ಟಿಯಲ್ಲಿದೆ. 2011ರ ಜುಲೈ 9ರಂದು ಸ್ವತಂತ್ರಗೊಂಡ (gained independence) ದಕ್ಷಿಣ ಸುಡಾನ್ ಈಗ ವಿಶ್ವದಲ್ಲಿ ಅಸ್ತಿತ್ವದಲ್ಲಿರುವ ಹೊಸ ದೇಶವಾಗಿದೆ. ಇದರೊಂದಿಗೆ ಹೊಸ ದೇಶಗಳ ಪಟ್ಟಿಯಲ್ಲಿ ಕೊಸೊವೊ (Kosovo), ಮಾಂಟೆನೆಗ್ರೊ (Montenegro), ಸೆರ್ಬಿಯಾ (Serbia), ಪೂರ್ವ ಟಿಮೋರ್ (East Timor) , ಪಲಾವ್ (Palau), ಎರಿಟ್ರಿಯಾ (Eritrea), ಜೆಕ್ ರಿಪಬ್ಲಿಕ್ (Czech Republic), ಸ್ಲೋವಾಕಿಯಾ (Slovakia) ಮತ್ತು ಕ್ರೊಯೇಷಿಯಾ (Croatia) ಕೂಡ ಸೇರ್ಪಡೆಯಾಗಿದೆ.

ಸಮಯದೊಂದಿಗೆ ಜಾಗತಿಕವಾಗಿಯೂ ಹಲವಾರು ಬದಲಾವಣೆಗಳು ಆಗುತ್ತಲೇ ಇರುತ್ತದೆ. ಪ್ರಸ್ತುತ ಜಗತ್ತಿನಲ್ಲಿ 195 ದೇಶಗಳಿವೆ. ಇವುಗಳಲ್ಲಿ ಕೆಲವು ಸಾಕಷ್ಟು ಹಳೆಯವು ಮತ್ತು ಕೆಲವು ಸಾಕಷ್ಟು ಹೊಸದು. ಇದರಲ್ಲಿ ಹತ್ತು ರಾಷ್ಟ್ರಗಳು ಕಳೆದ ಎರಡು ದಶಕಗಳಲ್ಲಿ ಸ್ಥಾಪನೆಯಾಗಿರುವುದು.

ಇತ್ತೀಚಿಗೆ ಸ್ಥಾಪನೆಯಾಗಿರುವ ಪ್ರಪಂಚದ ಹೊಸ ಅಥವಾ ಕಿರಿಯ ರಾಷ್ಟ್ರಗಳು ಅನನ್ಯ ಸವಾಲುಗಳನ್ನು ಎದುರಿಸುತ್ತಿರುವ ನಡುವೆ ಇಲ್ಲಿ ಸಾಕಷ್ಟು ಅವಕಾಶಗಳೂ ಎದ್ದು ಕಾಣುತ್ತಿವೆ. ದಶಕಗಳ ಸಂಘರ್ಷದಿಂದ ಹುಟ್ಟಿದ ದಕ್ಷಿಣ ಸುಡಾನ್‌ನಿಂದ ಹಿಡಿದು ಕೊಸೊವೊ ಅಂತಾರಾಷ್ಟ್ರೀಯ ಮನ್ನಣೆಯ ಹಾದಿಯನ್ನು ಪಡೆಯುವವರೆಗೆ ಪ್ರತಿಯೊಂದು ದೇಶಗಳು ವಿಶಿಷ್ಟವಾದ ಇತಿಹಾಸವನ್ನು ಹೊಂದಿವೆ.

ದಕ್ಷಿಣ ಸುಡಾನ್

2011ರ ಜುಲೈ 9ರಂದು ಸ್ವಾತಂತ್ರ್ಯ ಪಡೆದ ದಕ್ಷಿಣ ಸುಡಾನ್ ಈ ಮೂಲಕ ದಶಕಗಳ ಅಂತರ್ಯುದ್ಧದಕ್ಕೆ ಅಂತ್ಯವನ್ನು ಹಾಡಿತ್ತು. ವೈವಿಧ್ಯಮಯ ಜನಾಂಗೀಯ ಗುಂಪುಗಳಿಗೆ ಮತ್ತು ರಾಜಕೀಯ ಸ್ಥಿರತೆಯ ಹೋರಾಟಗಳಿಗೆ ಈ ರಾಷ್ಟ್ರ ಹೆಸರುವಾಸಿಯಾಗಿದೆ.


ಕೊಸೊವೊ

2008ರ ಫೆಬ್ರವರಿ 17ರಂದು ಸೆರ್ಬಿಯಾದಿಂದ ಕೊಸೊವೊ ಸ್ವಾತಂತ್ರ್ಯವನ್ನು ಘೋಷಿಸಿತು. ಅನೇಕ ದೇಶಗಳಿಂದ ಗುರುತಿಸಲ್ಪಟ್ಟಿದ್ದರೂ ಅಂತಾರಾಷ್ಟ್ರೀಯ ಮನ್ನಣೆ ಪಡೆಯುವಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.


ಮಾಂಟೆನೆಗ್ರೊ

2006ರ ಜೂನ್ 3ರಂದು ಜನಾಭಿಪ್ರಾಯ ಸಂಗ್ರಹಣೆಯ ಅನಂತರ ಮಾಂಟೆನೆಗ್ರೊ ಸ್ಟೇಟ್ ಯೂನಿಯನ್ ಆಫ್ ಸರ್ಬಿಯಾ ಮತ್ತು ಮಾಂಟೆನೆಗ್ರೊದಿಂದ ಸ್ವಾತಂತ್ರ್ಯವನ್ನು ಘೋಷಿಸಿತು. ಇದು ಆಡ್ರಿಯಾಟಿಕ್ ಕರಾವಳಿಗಳಿಗೆ ಹೆಸರುವಾಸಿಯಾಗಿದೆ ಮತ್ತು ಯುರೋಪಿಯನ್ ಯೂನಿಯನ್ ಸದಸ್ಯತ್ವಕ್ಕಾಗಿ ಅಭ್ಯರ್ಥಿಯಾಗಿದೆ.


ಸೆರ್ಬಿಯಾ

ಸೆರ್ಬಿಯಾ ಮತ್ತು ಮಾಂಟೆನೆಗ್ರೊ ರಾಜ್ಯ ಒಕ್ಕೂಟದ ವಿಸರ್ಜನೆಯ ಅನಂತರ ಸೆರ್ಬಿಯಾ 2006ರ ಜೂನ್ 5ರಂದು ಸ್ವಾತಂತ್ರ್ಯವನ್ನು ಘೋಷಿಸಿತು. ಇದು ಆರ್ಥಿಕ ಸುಧಾರಣೆಗಳು ಮತ್ತು ಯುರೋಪಿಯನ್ ಏಕೀಕರಣದ ಮೇಲೆ ಕೇಂದ್ರೀಕರಿಸಿದೆ.


ಪೂರ್ವ ಟಿಮೋರ್

2002ರ ಮೇ 20ರಂದು ರೂಪುಗೊಂಡ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಟಿಮೋರ್- ಲೆಸ್ಟೆ, ಆಗ್ನೇಯ ಏಷ್ಯಾದ ಒಂದು ಸುಂದರವಾದ ದ್ವೀಪ ರಾಷ್ಟ್ರವಾಗಿದೆ.


ಪಲಾವ್

1994ರ ಅಕ್ಟೋಬರ್ 1ರಂದು ಪಲಾವ್ ರಾಷ್ಟ್ರ ಕಾಂಪ್ಯಾಕ್ಟ್ ಆಫ್ ಫ್ರೀ ಅಸೋಸಿಯೇಷನ್ ​​ಅಡಿಯಲ್ಲಿ ಯುನೈಟೆಡ್ ಸ್ಟೇಟ್ಸ್ ನಿಂದ ಸ್ವತಂತ್ರವಾಯಿತು. ಇದು ಸಮುದ್ರದ ಜೀವವೈವಿಧ್ಯತೆ ಮತ್ತು ಪರಿಸರ ಸಂರಕ್ಷಣೆಯಲ್ಲಿನ ಪ್ರಯತ್ನಗಳಿಗೆ ಹೆಸರುವಾಸಿಯಾಗಿದೆ.


ಎರಿಟ್ರಿಯಾ

ಸುದೀರ್ಘ ಸ್ವಾತಂತ್ರ್ಯ ಹೋರಾಟದ ಅನಂತರ 1993ರ ಮೇ 24ರಂದು ಎರಿಟ್ರಿಯಾ ಇಥಿಯೋಪಿಯಾದಿಂದ ಸ್ವಾತಂತ್ರ್ಯ ಪಡೆಯಿತು. ಇದು ಆಡಳಿತ, ಮಾನವ ಹಕ್ಕುಗಳು ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಸವಾಲುಗಳನ್ನು ಎದುರಿಸುತ್ತಿದೆ.


ಜೆಕ್ ಗಣರಾಜ್ಯ

ಜೆಕೊಸ್ಲೊವಾಕಿಯಾದ ಶಾಂತಿಯುತ ವಿಸರ್ಜನೆಯ ಅನಂತರ 1993ರ ಜನವರಿ 1ರಂದು ಜೆಕ್ ರಿಪಬ್ಲಿಕ್ ಅಥವಾ ಜೆಕಿಯಾ ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿತು. ಪ್ರಾಗ್ ಅದರ ರಾಜಧಾನಿ. ಇದು ವಾಸ್ತುಶಿಲ್ಪದ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ.

ಇದನ್ನೂ ಓದಿ: Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ


ಸ್ಲೋವಾಕಿಯಾ

ಜೆಕೊಸ್ಲೊವಾಕಿಯಾದ ಇತರ ಅರ್ಧಭಾಗವಾದ ಸ್ಲೋವಾಕಿಯಾ ಕೂಡ 1993ರ ಜನವರಿ 1ರಂದು ಸ್ವಾತಂತ್ರ್ಯವನ್ನು ಗಳಿಸಿತು. ಜೆಕ್ ಗಣರಾಜ್ಯದೊಂದಿಗೆ ಪ್ರತ್ಯೇಕ ರಾಷ್ಟ್ರವಾಯಿತು.


ಕ್ರೊಯೇಷಿಯಾ

ಕ್ರೊಯೇಷಿಯಾ ಗಣರಾಜ್ಯವು 1991ರ ಜೂನ್ 25ರಂದು ಸ್ವಾತಂತ್ರ್ಯವನ್ನು ಘೋಷಿಸಿತು. ಕ್ರೊಯೇಷಿಯಾ ಯುರೋಪ್‌ನಲ್ಲಿ ರೋಮಾಂಚಕ ಪ್ರವಾಸಿ ತಾಣವಾಗಿ ಹೆಚ್ಚು ಜನಪ್ರಿಯವಾಗುತ್ತಿದೆ.

Continue Reading

Latest

Women Arrest: ಅತ್ಯಾಚಾರಿಗೆ ಬೈದಿದ್ದಕ್ಕೆ ಜೈಲುಪಾಲಾದ ಮಹಿಳೆ! ಇದೆಂಥಾ ನ್ಯಾಯ?

Women Arrest: ಹ್ಯಾಂಬರ್ಗ್ ನ ಸಿಟಿ ಪಾರ್ಕ್ ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ 10 ಮಂದಿ ಯುವಕರು ಸೇರಿ ಕ್ರೂರವಾಗಿ ಅತ್ಯಾಚಾರ ಎಸಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 10ಮಂದಿಯಲ್ಲಿ ಒಬ್ಬನಿಗೆ ಶಿಕ್ಷೆ ವಿಧಿಸಿ ಉಳಿದವರನ್ನು ಮುಕ್ತಗೊಳಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅದರಲ್ಲಿ ಒಬ್ಬನ ಹೆಸರು ಮತ್ತು ಮೊಬೈಲ್ ಸಂಖ್ಯೆ ಸೋರಿಕೆಯಾಗಿತ್ತು. ಆಗ ಈ ಘಟನೆಯಿಂದ ಕುಪಿತಳಾದ 20 ವರ್ಷದ ಜರ್ಮನ್ ಮಹಿಳೆಯೊಬ್ಬರು ಆ ವ್ಯಕ್ತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಲು ಶುರು ಮಾಡಿದ್ದಾಳೆ. ಈ ಬಗ್ಗೆ ಆತ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹ್ಯಾಂಬರ್ಗ್ ವಾಂಡ್ಸ್ಬೆಕ್ ಜಿಲ್ಲಾ ನ್ಯಾಯಾಲಯ ಮಹಿಳೆಯನ್ನು ದೋಷಿ ಎಂದು ಪರಿಗಣಿಸಿ ಅವಮಾನ ಮತ್ತು ಬೆದರಿಕೆಗಾಗಿ ಆಕೆಗೆ 48 ಗಂಟೆಗಳ ಕಾಲ ಜೈಲು ಶಿಕ್ಷೆ ವಿಧಿಸಿ, ವಾರಾಂತ್ಯದಲ್ಲಿ ಜೈಲಿನಲ್ಲಿ ಬಂಧಿಯಾಗಿರಲು ಆದೇಶಿಸಿದೆ.

VISTARANEWS.COM


on

Women Arrest
Koo

ಜರ್ಮನಿ : 2020ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನ ಬಗ್ಗೆ ಅವಮಾನವೀಯ ಹೇಳಿಕೆ ನೀಡಿದ 20 ವರ್ಷದ ಜರ್ಮನ್ ಮಹಿಳೆಗೆ ಜೈಲು ಶಿಕ್ಷೆ (Women Arrest) ವಿಧಿಸಲಾಗಿದೆ ಹಾಗೂ ಮಹಿಳೆ ವಾರಾಂತ್ಯವನ್ನು ಜೈಲಿನಲ್ಲಿ ಕಳೆಯಲು ಆದೇಶಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.

2020ರಲ್ಲಿ ಹ್ಯಾಂಬರ್ಗ್ ನ ಸಿಟಿ ಪಾರ್ಕ್ ನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 16-20 ವರ್ಷದೊಳಗಿನ 10 ಮಂದಿ ಯುವಕರು ಸೇರಿ ಕ್ರೂರವಾಗಿ ಅತ್ಯಾಚಾರ ಎಸಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 10 ಮಂದಿಯಲ್ಲಿ ಒಬ್ಬನಿಗೆ ಶಿಕ್ಷೆ ವಿಧಿಸಿ ಉಳಿದವರನ್ನು ಮುಕ್ತಗೊಳಿಸಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅದರಲ್ಲಿ ಒಬ್ಬನ ಹೆಸರು ಮತ್ತು ಮೊಬೈಲ್ ಸಂಖ್ಯೆ ಸೋರಿಕೆಯಾಗಿತ್ತು. ಆಗ ಈ ಘಟನೆಯಿಂದ ಕುಪಿತಳಾದ 20 ವರ್ಷದ ಜರ್ಮನ್ ಮಹಿಳೆಯೊಬ್ಬರು ಆ ವ್ಯಕ್ತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಮೆಸೇಜ್ ಮಾಡಲು ಶುರು ಮಾಡಿದ್ದಳು. ಇದರಿಂದ ಆ ವ್ಯಕ್ತಿಗೆ ಹೊರಗಡೆ ಮುಖ ತೋರಿಸಲೂ ಕಷ್ಟವಾಗಿದೆ. ಆದರೆ ಆ ಮಹಿಳೆಗೂ ಸಂತ್ರಸ್ತ ಬಾಲಕಿ ಹಾಗೂ ಅತ್ಯಾಚಾರಿಗಳಿಗೂ ಯಾವುದೇ ಸಂಬಂಧವಿರಲಿಲ್ಲ.

ಅತ್ಯಾಚಾರ ನಡೆದ ಸ್ಥಳ

ಹಾಗಾಗಿ ಈ ಬಗ್ಗೆ ಆತ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಹ್ಯಾಂಬರ್ಗ್ ವಾಂಡ್ಸ್ಬೆಕ್ ಜಿಲ್ಲಾ ನ್ಯಾಯಾಲಯ ಮಹಿಳೆಯನ್ನು ದೋಷಿ ಎಂದು ಪರಿಗಣಿಸಿ ಅವಮಾನ ಮತ್ತು ಬೆದರಿಕೆಗಾಗಿ ಆಕೆಗೆ 48 ಗಂಟೆಗಳ ಕಾಲ ಜೈಲು ಶಿಕ್ಷೆ ವಿಧಿಸಿ, ವಾರಾಂತ್ಯದಲ್ಲಿ ಜೈಲಿನಲ್ಲಿ ಬಂಧಿಯಾಗಿರಲು ಆದೇಶಿಸಿದೆ. ಅದರಂತೆ ಆಕೆಗೆ ಶುಕ್ರವಾರ ಸಂಜೆಯಿಂದ ಭಾನುವಾರ ಸಂಜೆಯವರೆಗೆ ಹ್ಯಾನೋಫರ್ ಸಂಡ್ ಯುವ ಬಂಧನ ಕೇಂದ್ರದಲ್ಲಿ ಬಂಧಿಯಾಗಿರಲು ಸೂಚಿಸಲಾಗಿದೆ.

ಹ್ಯಾಂಬರ್ಗ್‌ ಸಿಟಿ ಪಾರ್ಕ್‌

ಹಾಗೇ ಕೊಲೆ ಬೆದರಿಕೆಗಳು, ಹಿಂಸೆ ಮತ್ತು ಜನಾಂಗೀಯ ನಿಂದನೆ ಸೇರಿದಂತೆ ಅತ್ಯಾಚಾರಿಗಳ ಬಗ್ಗೆ ಇದೇ ರೀತಿಯ ಅವಮಾನವೀಯ ಹೇಳಿಕೆಗಳ ಕುರಿತು ಪೊಲೀಸರು ಇತರ 140 ಮಂದಿಯನ್ನು ತನಿಖೆ ಮಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮಹಿಳೆಗೆ ಶಿಕ್ಷೆಯಾದ ಹಿನ್ನಲೆಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅನೇಕರು ನ್ಯಾಯಾಧೀಶರ ವಿರುದ್ಧ ಕಿಡಿಕಾರಿದ್ದಾರೆ. ಅವರ ತೀರ್ಪನ್ನು ತಪ್ಪು ಎಂದು ದೂಷಿಸಿದ್ದಾರೆ. ಹಾಗೇ ಆಕೆ ಅತ್ಯಾಚಾರಿ ಯುವಕನಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆಯುವಂತಾಗಿದೆ ಎಂದು ಜನರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

ಸೆಪ್ಟೆಂಬರ್ 19, 2020ರಲ್ಲಿ ಹ್ಯಾಂಬರ್ಗ್ ನ ಸಿಟಿ ಪಾರ್ಕ್ ನಲ್ಲಿ ರಾತ್ರಿ ನಡೆದ ಉತ್ಸವದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಕುಡಿದ ಮತ್ತಿನಲ್ಲಿದ್ದ 10 ಮಂದಿ ಪುರುಷರು ಸೇರಿ ಆಕೆಯನ್ನು ಪೊದೆಗೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಪ್ರಕರಣವು ಪ್ರಪಂಚದಾದ್ಯಂತ ಆಘಾತವನ್ನುಂಟು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಒಪ್ಪಿಸಿದ್ದಾರೆ. ಕೋರ್ಟ್ ಅವರಲ್ಲಿ 19 ವರ್ಷದ ಯುವಕನಿಗೆ ಎರಡು ವರ್ಷ ಎಂಟು ತಿಂಗಳು ಜೈಲು ಶಿಕ್ಷೆ ವಿಧಿಸಿದರೆ ಒಬ್ಬನನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿತ್ತು, ಉಳಿದ ಎಂಟು ಮಂದಿಗೆ ಮುಕ್ತವಾಗಿ ನಡೆಯಲು ಅವಕಾಶ ನೀಡಲಾಗಿದೆ.

Continue Reading

ಕ್ರೈಂ

Indian Origin Doctor: ಅಮೆರಿಕದಲ್ಲಿ ಪತ್ನಿ ಮಕ್ಕಳ ಕೊಲೆಗೆ ಯತ್ನ; ಭಾರತೀಯ ಮೂಲದ ವೈದ್ಯನಿಗೆ ಜೈಲು ಶಿಕ್ಷೆ ಬದಲು ಮಾನಸಿಕ ಚಿಕಿತ್ಸೆ

Indian Origin Doctor: ಕ್ಯಾಲಿಫೋರ್ನಿಯಾದಲ್ಲಿ ರೇಡಿಯಾಲಾಜಿಸ್ಟ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಧರ್ಮೇಶ್‌ ಪಟೇಲ್‌, ಕಳೆದ ವರ್ಷ ತನ್ನ ಟೆಸ್ಲಾ ಕಾರಿನಲ್ಲಿ ಪತ್ನಿ ನೇಹಾ ಹಾಗೂ ಇಬ್ಬರು ಮಕ್ಕಳು ಕಾರಿನಲ್ಲಿ ಕರೆದೊಯ್ದು ಬಂಡೆಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮವಾಗಿ ಕಾರು 250 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದ. ಬಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಆದರೆ ಚಮತ್ಕಾರ ಎಂಬಂತೆ ಇಡೀ ಕುಟುಂಬ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿತ್ತು. ಇದಾದ ಬಳಿಕ ಕೇಸ್‌ ದಾಖಲಾಗಿದ್ದು, ಪೊಲೀಸ್‌ ತನಿಖೆ ವೇಳೆ ತನ್ನ ಪತಿ ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಎಸಗಿದ್ದಾನೆ ಎಂದು ಒಪ್ಪಿಕೊಂಡಿದ್ದಳು. ಆದರೆ ಆತನ ವಿರುದ್ಧ ಮೊಕದ್ದಮೆ ಹೂಡಲು ನಿರಾಕರಿಸಿದ್ದಳು.

VISTARANEWS.COM


on

Indian Origin Doctor
Koo

ನ್ಯೂಯಾರ್ಕ್‌: ಕಾರು ಡಿಕ್ಕಿ ಹೊಡೆಸಿ ಪತ್ನಿ ಮತ್ತು ಇಬ್ಬರು ಮಕ್ಕಳ ಹತ್ಯೆಗೆ ಯತ್ನಿಸಿದ್ದ ಭಾರತೀಯ ಮೂಲದ ವೈದ್ಯ(Indian Origin Doctor)ನಿಗೆ ಜೈಲು ಶಿಕ್ಷೆ ನೀಡಲು ಕೋರ್ಟ್‌(Court) ನಿರಾಕರಿಸಿದ್ದು, ಆತನನ್ನು ಮಾನಸಿಕ ಚಿಕಿತ್ಸೆಗೊಳಪಡಿಸುವಂತೆ ಸೂಚನೆ ನೀಡಿದೆ. ಭಾರತೀಯ ಮೂಲದ ವೈದ್ಯ ಧರ್ಮೇಶ್‌ ಪಟೇಲ್‌(Dharmesh Patel) ಎಂಬಾತ ತನ್ನ ಪತ್ನಿ ಹಾಗೂ 7 ಮತ್ತು 4 ವರ್ಷ ಮಕ್ಕಳ ಹತ್ಯೆಗೆ ಯತ್ನಿಸಿದ್ದ. ಅದೃಷ್ಟವಶಾತ್‌ ಎಲ್ಲರೂ ಅಪಾಯದಿಂದ ಪಾರಾಗಿದ್ದರು.

ಕ್ಯಾಲಿಫೋರ್ನಿಯಾದಲ್ಲಿ ರೇಡಿಯಾಲಾಜಿಸ್ಟ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಧರ್ಮೇಶ್‌ ಪಟೇಲ್‌, ಕಳೆದ ವರ್ಷ ತನ್ನ ಟೆಸ್ಲಾ ಕಾರಿನಲ್ಲಿ ಪತ್ನಿ ನೇಹಾ ಹಾಗೂ ಇಬ್ಬರು ಮಕ್ಕಳು ಕಾರಿನಲ್ಲಿ ಕರೆದೊಯ್ದು ಬಂಡೆಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮವಾಗಿ ಕಾರು 250 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದ. ಬಿದ್ದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಆದರೆ ಚಮತ್ಕಾರ ಎಂಬಂತೆ ಇಡೀ ಕುಟುಂಬ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿತ್ತು. ಇದಾದ ಬಳಿಕ ಕೇಸ್‌ ದಾಖಲಾಗಿದ್ದು, ಪೊಲೀಸ್‌ ತನಿಖೆ ವೇಳೆ ತನ್ನ ಪತಿ ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಎಸಗಿದ್ದಾನೆ ಎಂದು ಒಪ್ಪಿಕೊಂಡಿದ್ದಳು. ಆದರೆ ಆತನ ವಿರುದ್ಧ ಮೊಕದ್ದಮೆ ಹೂಡಲು ನಿರಾಕರಿಸಿದ್ದಳು.

ಅದಾಗ್ಯೂ ಪ್ರಕರಣದ ಸಂಬಂಧ ಕೋರ್ಟ್‌ ವಿಚಾರಣೆ ಮುಂದುವರೆದಿದೆ. ಧರ್ಮೇಶ್‌ ತನ್ನ ಮಕ್ಕಳು ಮಾನವ ಕಳ್ಳಸಾಗಾಟದ ದಂಧೆಗೆ ಬಲಿಯಾಗುತ್ತಾರೆ ಎಂಬ ಭೀತಿಯಲ್ಲಿದ್ದ. ಇದೇ ಕಾರಣದಿಂದ ಈ ಕೃತ್ಯ ಎಸಗಿದ್ದಾನೆ. ಆತ ಮಾನಸಿಕ ಖಿನ್ನತೆಗೊಳಗಾಗಿದ್ದಾನೆ. ಆತ ಸ್ಕಿಜೋಆಫೆಕ್ಟಿವ್ ಡಿಸಾರ್ಡರ್ ಎಂಬ ಖಾಯಿಲೆಯಿಂದ ಬಳಲುತ್ತಿದ್ದಾನೆ. ಘಟನೆಗೂ ಒಂದು ವಾರ ಹಿಂದೆ ಹೆಜ್ಜೆ ಸಪ್ಪಳ ಕೇಳಿಸಿಕೊಂಡು ಯಾರೋ ತನ್ನನ್ನು ಹಿಂಬಾಲಿಸುತ್ತಿದ್ದಾರೆ ಎಂದೇ ಭಾವಿಸಿ ಭೀತಿಗೊಳಗಾಗಿದ್ದ. ವಾಸ್ತವದಲ್ಲಿ ಇಲ್ಲದಿರುವ ವಿಚಾರವನ್ನು ಇದೇ ಎಂದು ಭಾವಿಸಿಕೊಳ್ಳುವಂತಹ ಮಾನಸಿಕ ಸಮಸ್ಯೆಗೆ ಅವರು ತುತ್ತಾಗಿದ್ದಾರೆ ಎಂದು ವೈದ್ಯರು ಕೋರ್ಟ್‌ಗೆ ತಿಳಿಸಿದರು.

ಆತನಿಗೆ ತನ್ನ ಮಕ್ಕಳು ಅಪಹರಣಕ್ಕೊಳಗಾಗುತ್ತಾರೆ. ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತದೆ ಎಂಬೆಲ್ಲಾ ಕಲ್ಪನೆ ಮಾಡಿಕೊಂಡು ಈ ರೀತಿ ಕೃತ್ಯ ಎಸಗಿದ್ದಾನೆ ಎಂದು ಕೋರ್ಟ್‌ಗೆ ವೈದ್ಯರು ಮನವರಿಕೆ ಮಾಡಿಕೊಟ್ಟರು. ಈ ಎಲ್ಲಾ ವಾದವನ್ನು ಪರಿಗಣಿಸಿದ ಕೋರ್ಟ್‌ ಧರ್ಮೇಂದ್ರ ಪಟೇಲ್‌ನನ್ನು ತಕ್ಷಣ ಮಾನಸಿಕ ಚಿಕಿತ್ಸೆಗೊಳಪಡಿಸಬೇಕು. ಮಾನಸಿಕ ಸ್ಥಿಮಿತ ಸರಿ ಇರದಿರುವ ವ್ಯಕ್ತಿಯಿಂದ ಆಗಿರುವ ಅಪರಾಧಕ್ಕೆ ಶಿಕ್ಷೆ ನೀಡಲು ಸಾಧ್ಯವಿಲ್ಲ. ಬದಲಾಗಿ ಆತನಿಗೆ ಚಿಕಿತ್ಸೆ ನೀಡುವುದೇ ಸೂಕ್ತ. ಆತನನ್ನು ಜಿಪಿಎಸ್‌ ಮೂಲಕ ಮೇಲ್ವಿಚಾರಣೆ ಮಾಡುತ್ತಾ, ವಾರಕ್ಕೆ ಒಂದು ಬಾರಿ ಆತನ ಮಾನಸಿಕ ಸ್ಥಿತಿಗತಿ, ಚಿಕಿತ್ಸೆ ಬಗ್ಗೆ ಕೋರ್ಟ್‌ಗೆ ವರದಿ ನೀಡಬೇಕು. ಆತನಿಗೆ ದೇಶ ಬಿಟ್ಟು ಹೋಗಲು ಅನುಮತಿ ನಿರಾಕರಿಸಲಾಗಿದೆ. ಅಲ್ಲದೇ ಆತನ ಡ್ರೈವಿಂಗ್‌ ಲೈಸೆನ್ಸ್‌ ಮತ್ತು ಪಾಸ್‌ಪೋರ್ಟನ್ನು ಅಧಿಕಾರಿಗಳಿಗೆ ಒಪ್ಪಿಸಬೇಕು ಎಂದು ಕೋರ್ಟ್‌ ಹೇಳಿದೆ.

ಇದನ್ನೂ ಓದಿ:Hijab Ban: ತರಗತಿಯಲ್ಲಿ ಹಿಜಾಬ್‌, ಬುರ್ಖಾ ನಿಷೇಧ; ಕಾಲೇಜು ಆದೇಶ ಎತ್ತಿಹಿಡಿದ ಹೈಕೋರ್ಟ್‌

Continue Reading

ಪ್ರಮುಖ ಸುದ್ದಿ

Sam Pitroda: ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡಾ ಮತ್ತೆ ನೇಮಕ; ದಕ್ಷಿಣ ಭಾರತೀಯರನ್ನು ಆಫ್ರಿಕನ್ನರಿಗೆ ಹೋಲಿಸಿದ್ದ ನಾಯಕ

Sam Pitroda: ಲೋಕಸಭೆ ಚುನಾವಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿ, ಭಾರಿ ವಿವಾದಕ್ಕೆ ಗುರಿಯಾಗಿ, ಕೊನೆಗೆ ಸ್ಯಾಮ್‌ ಪಿತ್ರೋಡಾ ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. ಈಗ ಅವರನ್ನು ಮತ್ತೆ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆದೇಶ ಹೊರಡಿಸಿದ್ದಾರೆ. “ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಸ್ಯಾಮ್‌ ಪಿತ್ರೋಡಾ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು.

VISTARANEWS.COM


on

Sam Pitroda
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್‌ ಪಿತ್ರೋಡಾ (Sam Pitroda) ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ (Indian Overseas Congress) ನೇಮಕ ಮಾಡಲಾಗಿದೆ. “ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಸ್ಯಾಮ್‌ ಪಿತ್ರೋಡಾ ಅವರನ್ನು ಮರು ನೇಮಕ ಮಾಡಿ ಎಐಸಿಸಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ತತ್‌ಕ್ಷಣದಿಂದಲೇ ಅವರು ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ಪ್ರಕಟಣೆ ತಿಳಿಸಿದೆ.

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಲೋಕಸಭೆ ಚುನಾವಣೆ ಹೊತ್ತಿನಲ್ಲೇ ಸ್ಯಾಮ್‌ ಪಿತ್ರೋಡಾ ಹೇಳಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಬಿಜೆಪಿಯ ಹಲವು ನಾಯಕರು ಸ್ಯಾಮ್‌ ಪಿತ್ರೋಡಾ ಹೇಳಿಕೆಯನ್ನು ಖಂಡಿಸಿದ್ದರು. ಇದರ ಹಿನ್ನೆಲೆಯಲ್ಲಿ ಸ್ಯಾಮ್‌ ಪಿತ್ರೋಡಾ ಅವರು ಮೇ 8ರಂದು ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು. “ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಸ್ಯಾಮ್‌ ಪಿತ್ರೋಡಾ ನಿರ್ಧರಿಸಿದ್ದಾರೆ. ಇದು ಅವರು ಸ್ವ ಇಚ್ಛೆಯಿಂದ ತೆಗೆದುಕೊಂಡಿರುವ ತೀರ್ಮಾನವಾಗಿದೆ. ಅವರ ನಿರ್ಧಾರವನ್ನು ಕಾಂಗ್ರೆಸ್‌ ಅಧ್ಯಕ್ಷರು ಸ್ವಾಗತಿಸಿದ್ದಾರೆ” ಎಂಬುದಾಗಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದರು.

ಪಿತ್ರೋಡಾ ಹೇಳಿದ್ದೇನು?

ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ಭಾರತದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿದ ಸ್ಯಾಮ್‌ ಪಿತ್ರೋಡಾ, ವಿವಾದ ಹುಟ್ಟುಹಾಕಿದರು. “ನಾವು ಜಗತ್ತಿನಲ್ಲಿ ಪ್ರಜಾಪ್ರಭುತ್ವದ ಉಜ್ವಲ ಉದಾಹರಣೆಯಾಗಿದ್ದೇವೆ. ನಾವು ವೈವಿಧ್ಯತೆಯನ್ನು ಒಟ್ಟಿಗೆ ಹಿಡಿದಿಟ್ಟುಕೊಂಡಿರುವ ದೇಶವಾಗಿದ್ದೇವೆ. ಇಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಹಾಗೆ ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಪಿತ್ರೋಡಾ ಹೇಳಿದ್ದರು.

ತಿರುಗೇಟು ಕೊಟ್ಟಿದ್ದ ಮೋದಿ

ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ಯಾಮ್‌ ಪಿತ್ರೋಡಾ ಅವರಿಗೆ ತಿರುಗೇಟು ನೀಡಿದ್ದರು. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ‘ಶೆಹಜಾದಾ’ನ (ರಾಹುಲ್‌ ಗಾಂಧಿ) ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕನೊಬ್ಬ ಅಮೆರಿಕದಲ್ಲಿದ್ದಾನೆ. ಆತ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ. ಈ ‘ಶೆಹಜಾದಾ’ ಮೂರನೇ ಅಂಪೈರ್‌ನಿಂದ ಸಲಹೆ ಪಡೆಯುತ್ತಾನೆ. ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ” ಎಂದು ಕುಟುಕಿದ್ದರು.

ಇದನ್ನೂ ಓದಿ: ಪಿತ್ರೋಡಾ ‘ಸಂಪತ್ತು ಹಂಚಿಕೆ’ ಹೇಳಿಕೆ, ಮಣಿಶಂಕರ್‌ ಅಯ್ಯರ್‌ ಪಾಕ್‌ ಪ್ರೇಮ; ಕಾಂಗ್ರೆಸ್‌ಗೆ ಈಗ ತೀವ್ರ ಫಜೀತಿ!

Continue Reading
Advertisement
World's Newest Countries
ವಿದೇಶ40 seconds ago

World’s Newest Countries: ಇವು ವಿಶ್ವದ 10 ಹೊಸ ರಾಷ್ಟ್ರಗಳು! ಏನು ಈ ರಾಷ್ಟ್ರಗಳ ವಿಶೇಷ?

Dina Bhavishya
ಭವಿಷ್ಯ1 hour ago

Dina Bhavishya : ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರ ವಹಿಸಿ

IND vs ENG Semi Final
ಕ್ರೀಡೆ4 hours ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ6 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ6 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ7 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ8 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ8 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ8 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ8 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ11 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ12 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು14 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ18 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌