Road Accident : ಸ್ಕೂಟಿಯಲ್ಲಿದ್ದ ಅಜ್ಜ ಮೊಮ್ಮಗನನ್ನು ಎರಡು ಕಿ.ಮೀ. ಎಳೆದೊಯ್ದ ಲಾರಿ! ಇಬ್ಬರೂ ಸಾವು - Vistara News

ಕ್ರೈಂ

Road Accident : ಸ್ಕೂಟಿಯಲ್ಲಿದ್ದ ಅಜ್ಜ ಮೊಮ್ಮಗನನ್ನು ಎರಡು ಕಿ.ಮೀ. ಎಳೆದೊಯ್ದ ಲಾರಿ! ಇಬ್ಬರೂ ಸಾವು

ಸ್ಕೂಟಿಯಲ್ಲಿ ತೆರಳುತ್ತಿದ್ದ ಅಜ್ಜ ಮೊಮ್ಮಗನಿಗೆ ಲಾರಿ ಡಿಕ್ಕಿ ಹೊಡೆದು ಎರಡು ಕಿ.ಮೀ.ನಷ್ಟು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ (Road Accident) ನಡೆದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಕೆಲ ವಾರಗಳ ಹಿಂದೆ ದೆಹಲಿಯಲ್ಲಿ ಯುವತಿಯೊಬ್ಬಳನ್ನು ಕಾರೊಂದು ಅಪಘಾತ ಮಾಡಿ ಎಳೆದೊಯ್ದಿದ್ದ ಘಟನೆ ನಡೆದಿತ್ತು. ಇದೀಗ ಅದೇ ರೀತಿಯಲ್ಲಿ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಆರು ವರ್ಷದ ಮೊಮ್ಮಗ ಮತ್ತು ಅಜ್ಜನನ್ನು ಎರಡು ಕಿ.ಮೀ.ವರೆಗೆ ರಸ್ತೆಯಲ್ಲೇ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ (Road Accident ) ನಡೆದಿದೆ.

ಇದನ್ನೂ ಓದಿ: Viral Video: ಮನೆಗೆ ಬಿಡು ಎಂದು ಆಟೋ ಹತ್ತಲು ಬಂದ ಘೇಂಡಾಮೃಗ! ಮುಂದೇನಾಯ್ತು ನೋಡಿ
ಮಹೋಬಾದಲ್ಲಿನ ಕಾನ್ಪುರ-ಸಾಗರ್ ಹೆದ್ದಾರಿ NH86 ನಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಉದಿತ್ ನಾರಾಯಣ ಚಾನ್ಸೋರಿಯಾ (67) ಮತ್ತು ಅವರ ಮೊಮ್ಮಗ ಸಾತ್ವಿಕ್(6) ಸ್ಕೂಟಿಯಲ್ಲಿ ಮಾರುಕಟ್ಟೆಗೆ ಹೋಗುತ್ತಿದ್ದರು. ಆಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಅಲ್ಲೇ ಬಿದ್ದ ಸ್ಕೂಟಿ ಹಾಗೂ ಅವರಿಬ್ಬರನ್ನು ಲಾರಿ ಸುಮಾರು ಎರಡು ಕಿ.ಮೀ.ನಷ್ಟು ದೂರ ಎಳೆದೊಯ್ದಿದೆ. ಈ ದೃಶ್ಯ ಸ್ಥಳೀಯರ ಕ್ಯಾಮೆರಾಗಳಲ್ಲಿಯೂ ಸೆರೆಯಾಗಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಲಾರಿಯ ಬಳಿ ಹಲವಾರು ಬೈಕ್‌ಗಳು ಚಾಲಕನನ್ನು ಎಚ್ಚರಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಎಷ್ಟೇ ಎಚ್ಚರಿಕೆ ಕೊಟ್ಟರೂ ನಿಲ್ಲಿಸದೆ ಚಾಲಕ ಲಾರಿ ಓಡಿಸಿದ್ದು, ಕೊನೆಗೆ ಪಕ್ಕದಲ್ಲಿದ್ದವರು ಕಲ್ಲು, ಬಂಡೆಗಳನ್ನು ರಸ್ತೆಗೆ ಹಾಕಿದ ನಂತರ ಲಾರಿ ನಿಲ್ಲಿಸಲಾಗಿದೆ. ಲಾರಿ ಚಾಲಕನಿಗೆ ಸ್ಥಳೀಯರು ಥಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

Chikkalluru Siddappaji Temple: ಚಿಕ್ಕಲ್ಲೂರಿನಲ್ಲಿ ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ನೀಡುವ ವಿಚಾರಕ್ಕೆ ಅರ್ಚಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ದೇವರ ತ್ರಿಶೂಲ, ಬೆತ್ತ ಹಿಡಿದು ಹೊಡೆದಾಡಿಕೊಂಡಿದ್ದಾರೆ.

VISTARANEWS.COM


on

By

Chikkalluru Siddappaji temple
Koo

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಸ್ಥಳ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಸಿದ್ದಪ್ಪಾಜಿ ದೇವಸ್ಥಾನದಲ್ಲಿ (Chikkalluru Siddappaji Temple) ಪೂಜೆ ವಿಚಾರಕ್ಕೆ ತ್ರಿಶೂಲಗಳಲ್ಲಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಮೂವರು ಅರ್ಚಕರಿಗೆ ಗಂಭೀರ ಗಾಯವಾಗಿದೆ. ಚಿಕ್ಕಲೂರು ದೇವಸ್ಥಾನದ ಅರ್ಚಕ ಶಂಕರಪ್ಪ (65), ಶಿವಕುಮಾರಸ್ವಾಮಿ (40) ಹಾಗೂ ನಂಜುಂಡಸ್ವಾಮಿ (32) ಗಂಭೀರ ಗಾಯಗೊಂಡವರು.

ಪೂಜೆ ಹಾಗೂ ದೀಕ್ಷೆ ಕೊಡುವ ವಿಚಾರಕ್ಕೆ ಅರ್ಚಕರ ಗುಂಪಿನಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ಹೋಗಿ, ಸಿದ್ದಪ್ಪಾಜಿ ದೇವಸ್ಥಾನದ ಬೆತ್ತ ಮತ್ತು ತ್ರಿಶೂಲಗಳನ್ನು ಹಿಡಿದುಕೊಂಡು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ.

ಸದ್ಯ ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿದ್ದಪ್ಪಾಜಿ ದೇವರ ಗುಡ್ಡ ದೀಕ್ಷೆ ನೀಡುವ ವಿಚಾರಕ್ಕೆ ಅರ್ಚಕರ ಗುಂಪಿನ ನಡುವೆ ಗಲಾಟೆ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

ದೇವಸ್ಥಾನಕ್ಕೆ ನುಗ್ಗಿ ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು

ವಿಜಯನಗರ: ಆಂಜನೇಯ ಮೂರ್ತಿಯನ್ನು ವಿರೂಪಗೊಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಆಂಜನೇಯ ಪ್ರತಿಮೆ ತುಂಡಾಗಿದೆ. ವಿಜಯನಗರ (Vijayanagara News) ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸ ಹಂಪಿ ಗ್ರಾಮದಲ್ಲಿ ಘಟನೆ ನಡೆದಿದೆ.

ತಡರಾತ್ರಿ ಕಾರ್ಯಸಿದ್ಧಿ ಶ್ರೀ ಆಂಜನೇಯ ಸ್ವಾಮಿ ದೇಗುಲದ ಬೀಗ ಮುರಿದು, ಒಳ ನುಗ್ಗಿರುವ ದುಷ್ಟರು ಮೂರ್ತಿಯನ್ನು ಒಡೆದು ಹಾಕಿದ್ದಾರೆ. ಮುಂಜಾನೆ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಬೆರಳಚ್ಚು ವಿಭಾಗ ತಜ್ಞರು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

ಹೊಸಪೇಟೆ ಡಿವೈಎಸ್‌ಪಿ ಶರಣಬಸವೇಶ್ವರ, ಹಂಪಿ ಪ್ರವಾಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಹಂಪಿ ಪ್ರವಾಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು

ದಾವಣಗೆರೆ ದೇವರ ಹರಕೆಗಾಗಿ ತಂದಿದ್ದ ಕುರಿಯನ್ನೇ ಕಳ್ಳರು (Theft Case) ಹೊತ್ತೊಯ್ದಿದ್ದಾರೆ. ದಾವಣಗೆರೆ (Davanagere news) ತಾಲೂಕಿನ ಮಾಯಾಕೊಂಡದಲ್ಲಿ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ‌ ಕಿರಾತಕರು ರಾತ್ರೋ ರಾತ್ರಿ ಕುರಿಯನ್ನು ಕದ್ದಿದ್ದಾರೆ.

ಸುಮಾರು 8 ಮಂದಿ ಖದೀಮರ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಯಾಕೊಂಡದ ನಿವಾಸಿ ಪ್ರಭು ಎಂಬುವರಿಗೆ ಸೇರಿದ ಕುರಿಯನ್ನು ಬೆಳಗಿನ‌ ಜಾವ 3ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದು ಎಗರಿಸಿದ್ದಾರೆ. ಸದ್ಯ ಪ್ರಭು ಅವರು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಖದೀಮರನ್ನು ಹಿಡಿಲು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Porsche Crash: ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕ ಮದ್ಯಪಾನ ಮಾಡಿ ಐಷಾರಾಮಿ ಪೋರ್ಷೆ ಕಾರನ್ನು ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು ಸಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇನ್ನೊಂದು ಮಹತ್ವದ ಬೆಳವಣಿಗೆ ಸಂಭವಿಸಿದೆ. ಸಾಕ್ಷ್ಯಗಳನ್ನು ತಿರುಚಿದ್ದಕ್ಕಾಗಿ ಬಾಲಕನ ತಾಯಿಯನ್ನು ಬಂಧಿಸಲಾಗಿದೆ.

VISTARANEWS.COM


on

Porsche Crash
Koo

ಮುಂಬೈ: ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಬಾಲಕ ಮದ್ಯಪಾನ ಮಾಡಿ ಐಷಾರಾಮಿ ಪೋರ್ಷೆ ಕಾರನ್ನು (Porsche Crash) ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು (IT Engineers) ಸಾಯಿಸಿದ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆ ಕಾರಣವಾಗಿದೆ. ಸದ್ಯ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಬಾಲಕನ ತಾಯಿ ಶಿವಾನಿ ಅಗರ್‌ವಾಲ್‌ ಅವರನ್ನು ಬಂಧಿಸಲಾಗಿದೆ. ಬಾಲಕ ಮದ್ಯಪಾನ ಸೇವಿಸಿದ್ದಾನೆಯೇ ಎಂದು ಪರೀಕ್ಷಿಸಲು ಆತನ ರಕ್ತದ ಮಾದರಿ ಸಂಗ್ರಹಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಶಿವಾನಿ ಅಗರ್‌ವಾಲ್‌ ತಮ್ಮ ರಕ್ತವನ್ನು ನೀಡಿ ತನಿಖೆಯ ದಾರಿ ತಪ್ಪಿಸಲು ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಅವರನ್ನೂ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಾಕ್ಷ್ಯಗಳನ್ನು ತಿರುಚಿದ್ದಕ್ಕಾಗಿ ಮತ್ತು ರಕ್ತದ ಮಾದರಿಗಳನ್ನು ತೆಗೆದುಕೊಂಡಾಗ ಆಸ್ಪತ್ರೆಯಲ್ಲಿದ್ದ ಕಾರಣ ಶಿವಾನಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿ ಪುಣೆ ಅಪರಾಧ ವಿಭಾಗವು ಈ ಹಿಂದೆ ಶಿವಾನಿ ಅವರ ಹೇಳಿಕೆಯನ್ನು ದಾಖಲಿಸಿತ್ತು. ಅಲ್ಲದೆ ರಕ್ತ ಪರೀಕ್ಷೆ ನಡೆಸಿದ ಸಸೂನ್ ಆಸ್ಪತ್ರೆಯ ಕೆಲವು ಸಿಬ್ಬಂದಿಗೆ ಪುಣೆ ಅಪರಾಧ ವಿಭಾಗವು ಸಮನ್ಸ್ ನೀಡಿ ವಿಚಾರಣೆ ನಡೆಸಿತ್ತು. ರಕ್ತದ ಮಾದರಿಗಳನ್ನು ಬದಲಾಯಿಸಿರುವ ಬಗ್ಗೆ ಅವರನ್ನು ಪ್ರಶ್ನಿಸಲಾಗಿತ್ತು.

ಇಬ್ಬರು ವೈದ್ಯರ ಅರೆಸ್ಟ್‌

ರಕ್ತದ ಮಾದರಿ ಬದಲಾಯಿಸಿದ ಘಟನೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ಇಬ್ಬರು ವೈದ್ಯರನ್ನು ಬಂಧಿಸಲಾಗಿತ್ತು. ʼʼಪುಣೆಯ ಸಾಸೂನ್‌ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಅಜಯ್‌ ತಾವರೆ ಮತ್ತು ಡಾ. ಶ್ರೀಹರಿ ಹರ್ನೂರ್‌ ಆರೋಪಿಯ ರಕ್ತದ ಮಾದರಿಯನ್ನೇ ಬದಲಿಸಿದ್ದಾರೆ. ಆಮೂಲಕ ಈ ಪ್ರರಕಣದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಅವರಿಬ್ಬರನ್ನೂ ಇದೀಗ ಬಂಧಿಸಲಾಗಿದೆʼʼ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದರು. ಅಲ್ಲದೆ ಪ್ರಕರಣದ ದಾರಿ ತಪ್ಪಿಸಲು ಪ್ರಯತ್ನಿಸಿದ್ದ ಎರವಾಡ ಪೊಲೀಸ್‌ ಠಾಣೆ ಇಬ್ಬರು ಪೊಲೀಸರನ್ನೂ ಅಮಾನತುಗೊಳಿಸಲಾಗಿತ್ತು.

ಪ್ರಕರಣದ ಹಿನ್ನೆಲೆ

ಇತ್ತೀಚೆಗೆ ಕಲ್ಯಾಣಿನಗರ ಪ್ರದೇಶದಲ್ಲಿನ ಬಾರ್‌ನಲ್ಲಿ ಮದ್ಯ ಸೇವಿಸಿ ಪಾನಮತ್ತನಾಗಿದ್ದ 17 ವರ್ಷದ ಬಾಲಕ ಚಾಲನೆ ಮಾಡುತ್ತಿದ್ದ ಪೋರ್ಷೆ ಕಾರು, ಬೈಕ್‌ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮೃತಪಟ್ಟಿದ್ದರು. ಇದಾದ ಬಳಿಕ ಪೊಲೀಸರು ಬಾಲಾಪರಾಧಿ ನ್ಯಾಯಾಲಯದ ತೀರ್ಪಿನಂತೆ ಬಾಲಕನನ್ನು ಬಂಧಿಸಿ ಬಳಿಕ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. ಬಳಿಕ ತಂದೆ ವಿಶಾಲ್​ ಅಗರ್ವಾಲ್​ರನ್ನು ಬಂಧಿಸಿದ್ದರು.

ಇದನ್ನೂ ಓದಿ: Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ; ಇಬ್ಬರು ವೈದ್ಯರು ಅರೆಸ್ಟ್‌

ಎಲ್ಲೆಡೆ ಪೊಲೀಸರ ನಿರ್ಧಾರಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬಾಲಕನ ಜಾಮೀನನ್ನು ರದ್ದುಗೊಳಿಸಿ ಮತ್ತೆ ಬಂಧಿಸಲಾಗಿತ್ತು. ಮೊದಲು ವಿಶಾಲ್ ಅಗರ್ವಾಲ್​ ತನ್ನ ಮಗ ಕಾರು ಓಡಿಸುತ್ತಿರಲಿಲ್ಲ ಕಾರಿಗೆ ಬೇರೆ ಡ್ರೈವರ್​ ಇದ್ದಾರೆ ಎಂದು ಹೇಳಿದ್ದರು. ಇನ್ನು ಬಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಶಂಕೆ ವ್ಯಕ್ತವಾಗಿತ್ತು. ಇದಕ್ಕೆ ಪೂರಕ ಎಂಬಂತೆ ಘಟನೆಗೂ ಮುನ್ನ ಆತ ಸ್ನೇಹಿತರ ಜತೆಗೂಡಿ ಬಾರ್‌ನಲ್ಲಿ ಕುಡಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿತ್ತು. ಹೀಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

Continue Reading

ಉಡುಪಿ

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Physical Abuse : ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬ, ಮಹಿಳಾ ಸಹೋದ್ಯೋಗಿಗೆ ರಾತ್ರಿಯಾದರೆ ವಿಡಿಯೊ ಕಾಲ್‌ ಮಾಡುವುದು, ಅಶ್ಲೀಲ ಸಂದೇಶ ಕಳಿಸಿ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸಂತ್ರಸ್ತೆ ವೈದ್ಯೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

VISTARANEWS.COM


on

By

Physical Abuse
Koo

ಉಡುಪಿ: ಉಡುಪಿಯ ಕುಂದಾಪುರ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಕಾಮಕಾಂಡಕ್ಕೆ ವೈದ್ಯೆಯೊಬ್ಬರು ಬೇಸತ್ತು (Physical Abuse) ಹೋಗಿದ್ದಾರೆ. ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರಾಬರ್ಟ್‌ ರೆಬೆಲ್ಲೋ ವಿರುದ್ಧ ದೂರು ದಾಖಲಾಗಿದೆ.

ಕಳೆದ ಆರು ತಿಂಗಳಿನಿಂದ ತಾಲೂಕು ಆಸ್ಪತ್ರೆಯ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. 2023ರಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಸೇರಿದ್ದ ಮಹಿಳೆ ಎನ್ಆರ್‌ಸಿ ವಿಭಾಗದಲ್ಲಿ ವೈದ್ಯಾಧಿಕಾರಿಯಾಗಿದ್ದಾರೆ. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ರಾಬರ್ಟ್‌ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನೆ ಮಾಡುತ್ತಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಮಾತ್ರವಲ್ಲದೆ ಡಾ. ರಾಬರ್ಟ್ ರೆಬೆಲ್ಲೋ ಫೋನ್‌ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಾ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕರ್ತವ್ಯದ ಸಮಯ ಮತ್ತು ಮುಗಿದ ಮೇಲೆ ರಾತ್ರಿ ಮೆಸೇಜ್ ಮಾಡುವುದು. ವಿಡಿಯೊ ಕಾಲ್ ಮಾಡಿ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸದ್ಯ ಕುಂದಾಪುರ ಪೊಲೀಸ್ ಠಾಣೆಯಲ್ಲಿ ವೈದ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

ಸಂಜೆಯಾದರೆ ರೂಮಿಗೆ ಬಾ ಅಂತಾರೆ! ಕೇಂದ್ರೀಯ ವಿವಿಯ ಪಿಎಚ್‌ಡಿ ಗೈಡ್ ಕಿರುಕುಳ

ಕಲಬುರಗಿ : ವಿದ್ಯಾಕಾಶಿಯಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಕೇಂದ್ರೀಯ ವಿವಿಯಲ್ಲಿ ವಿದ್ಯಾರ್ಥಿನಿಗೆ ಸಹಾಯಕ ಪ್ರಾಧ್ಯಾಪಕನಿಂದ ಮಾನಸಿಕ ಕಿರುಕುಳ (Physical Abuse) ನೀಡಲಾಗುತ್ತಿದೆ ಎನ್ನಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕೇಂದ್ರೀಯ ವಿವಿಯಲ್ಲಿ (Central University Of Karnataka) ಘಟನೆ ನಡೆದಿದೆ.

ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಾಯಕ ಪ್ರಾದ್ಯಾಪಕ ಪ್ರೊ. ವಿಜಯಕುಮಾರ್ ಎಂಬುವವರಿಂದ ವಿದ್ಯಾರ್ಥಿನಿಯರಿಗೆ ಮಾನಸಿಕ‌ ಕಿರುಕುಳ ನೀಡಲಾಗುತ್ತಿದೆ ಅಂತೆ. ಪಿ.ಎಚ್.ಡಿ ಗೈಡ್ ಆಗಿರುವ ಪ್ರೊ. ವಿಜಯಕುಮಾರ್‌, ಸಂಜೆ ಆಗುತ್ತಿದ್ದಂತೆ ವಿದ್ಯಾರ್ಥಿನಿಯರನ್ನು ಸಂಶೋಧನೆಗಾಗಿ ಕರೆಯುತ್ತಾರೆ.

ಸಂಜೆ ಹೊತ್ತಿಗೆ ಸಂಶೋಧನೆಗಾಗಿ ‌ತಮ್ಮ ಕೊಠಡಿಗೆ ಕರೆಯುತ್ತಿದ್ದರು ಎಂದು ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಆರೋಪಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಈತನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಜತೆಗೆ ರಾಷ್ಟ್ರಪತಿಗಳಿಗೂ ಪತ್ರ ಬರೆದಿದ್ದು ಕ್ರಮವಹಿಸುವಂತೆ ಒತ್ತಾಯಿಸಿದ್ದಾರೆ.

ಭಾನುವಾರ ಮತ್ತು ರಜಾದಿನದಲ್ಲೂ ಕೊಠಡಿಗೆ ಬರುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಹೋಗದೆ ಇದ್ದರೆ ಶಿಷ್ಯವೇತನ ಅರ್ಜಿಗೆ ಸಹಿ ಹಾಕುತ್ತಿರಲಿಲ್ಲ ಎಂದು ಪತ್ರದಲ್ಲಿ ವಿದ್ಯಾರ್ಥಿನಿ ಉಲ್ಲೇಖಿಸಿದ್ದಾಳೆ. ಇನ್ನೂ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಮಹಿಳಾ‌ ಆಯೋಗಕ್ಕೆ ದೂರು ನೀಡಿದ್ದಾರೆ. ಜತೆಗೆ ಗರ್ಭಿಣಿ ಎಂಬುದು ತಿಳಿದರೂ ವಿನಾಕಾರಣ ಮಾರ್ಗದರ್ಶಕರಿಂದ ತೊಂದರೆ ಆಗುತ್ತಿದೆ. ಮಾರ್ಗದರ್ಶಕರನ್ನು ಬದಲಾವಣೆ ಮಾಡಿ, ಸಂಶೋಧನಾ ಅಧ್ಯಯನಕ್ಕೆ ಸಹಾಯ ಮಾಡುವಂತೆ ಮಹಿಳಾ ಆಯೋಗಕ್ಕೆ ವಿನಂತಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಬಂದಾಗಿನಿಂದಲೂ ಉದ್ದೇಶಪೂರ್ವಕವಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನನ್ನ ವೈಯಕ್ತಿಕ ವಿಷಯ ಮಾತಾಡಿ ನಿಂದಿಸುವುದು, ಹಣದ ಆಮಿಷ ತೋರಿಸುವುದು, ವಿವಿಗೆ ರಜಾದಿನಗಳಲ್ಲಿ ಮತ್ತು ಭಾನುವಾರವೂ ವಿಭಾಗಕ್ಕೆ ಬರಬೇಕೆಂದು ಹೇಳುವುದು. ಅವಾಚ್ಯ ಶಬ್ಧಗಳಿಂದ ಬೈಯುತ್ತಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತುಮಕೂರು

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

Murder case : ಮಿಸ್ಸಿಂಗ್‌ (Missing Case) ಆಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಾಗ ವ್ಯಕ್ತಿಯನ್ನು ಆತನ ಸ್ನೇಹಿತರೇ ಕಂಠ ಪೂರ್ತಿ ಮದ್ಯ ಕುಡಿಸಿ, ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.

VISTARANEWS.COM


on

By

Murder Case in tumkur
ಶಂಕರ ಹಾಗೂ ನಾಗೇಶ್‌ ಬಂಧಿತ ಆರೋಪಿಗಳು ಹಾಗೂ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರದೀಪ್‌ ಮೃತದೇಹ
Koo

ತುಮಕೂರು: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಕೊಲೆಯಾದ (Murder Case) ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಲಿಯೂರುದುರ್ಗ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಪುರದ ಶಂಕರ (30), ಹಾಗೂ ಬೂದಾನಹಳ್ಳಿಯ ನಾಗೇಶ್ (32) ಬಂಧಿತ ಆರೋಪಿಗಳು.

ಹುಲಿಯೂರುದುರ್ಗ ಬಳಿಯ ಮೂದನಹಳ್ಳಿ ಗ್ರಾಮದ ಪ್ರದೀಪ್ ಎಂಬಾತನನ್ನು ಹತ್ಯೆ ಮಾಡಿದ್ದರು. ತುಮಕೂರಿನ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಲಕ್ಷ್ಮೀಪುರದ ಉಲ್ಲಾಳಬೆಟ್ಟದಲ್ಲಿ ಕಳೆದ ಮೇ 30ರ ಗುರುವಾರ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಕೊಲೆಯಾದ ಪ್ರದೀಪ್‌ಗೆ ಆರೋಪಿಗಳಾದ ಶಂಕರ ಹಾಗೂ ನಾಗೇಶ್ ಮೂವರೂ ಸ್ನೇಹಿತರು.

ಪ್ರದೀಪ್ ವೃತ್ತಿಯಲ್ಲಿ ಟ್ರ್ಯಾಕ್ಟರ್ ಚಾಲಕನಾಗಿದ್ದ. ಇತ್ತೀಚೆಗೆ ಶಂಕರ ಹಾಗೂ ನಾಗೇಶ್ ಜತೆ ದುವರ್ತನೆ ತೋರಿ ಮನಬಂದಂತೆ ನಡೆದುಕೊಳ್ಳುತ್ತಿದ್ದ. ಇದು ಶಂಕರ್‌ ಹಾಗೂ ನಾಗೇಶ್‌ ಸಿಟ್ಟಿಗೆ ಕಾರಣವಾಗಿತ್ತು. ಪ್ರದೀಪ್‌ಗೆ ಸರಿಯಾಗಿ ಬುದ್ಧಿ ಕಲಿಸಬೇಕೆಂದು ಪ್ಲ್ಯಾನ್‌ ಮಾಡಿಕೊಂಡಿದ್ದರು.

ಕಳೆದ 27 ರಂದು ಹುಲಿಯೂರುದುರ್ಗ ಪಟ್ಟಣದ ಬಾರ್‌ವೊಂದರಲ್ಲಿ ಶಂಕರ ಹಾಗೂ ನಾಗೇಶ್‌ ಮದ್ಯದ ಬಾಟೆಲ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ನಂತರ ಈ ಮೂವರು ಸೇರಿ ಉಲ್ಲಾಳ ಬೆಟ್ಟದಲ್ಲಿ ಪಾರ್ಟಿ ಮಾಡಿದ್ದರು. ಇದೇ ಸರಿಯಾದ ಸಮಯವೆಂದು ಆರೋಪಿಗಳು ಪ್ರದೀಪ್‌ಗೆ ಕಂಠಪೂರ್ತಿ ಕುಡಿಸಿದ್ದರು. ಬಳಿಕ ನಶೆಯಲ್ಲಿದ್ದ ಪ್ರದೀಪ್‌ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು, ಅಲ್ಲಿಂದ ನಾಪತ್ತೆಯಾಗಿದ್ದರು.

ಇತ್ತ ಪ್ರದೀಪ್‌ ಕುಟುಂಬಸ್ಥರು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು. ಅನಂತರ ಮೇ 30ರಂದು ಉಲ್ಲಾಳ ಬೆಟ್ಟದಲ್ಲಿ ಪ್ರದೀಪ್‌ ಮೃತದೇಹವು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡ ಹುಲಿಯೂರುದುರ್ಗ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

ಮೈಸೂರು: ಮೈಸೂರಿನಲ್ಲಿ ಗುರಾಯಿಸಿದ್ದಕ್ಕೆ ಯುವಕನ (Murder case) ಕೊಲೆಯಾಗಿದೆ. ಯುವಕನ ಸಾವಿನ ಕೊನೆ ಕ್ಷಣದ ವಿಡಿಯೊಗಳು ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಅರ್ಬಾಜ್ ಖಾನ್ (18) ಕೊಲೆಯಾದವನು.

ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ಘಟನೆ ನಡೆದಿದೆ. ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿದ ಎಂಬ ಕಾರಣಕ್ಕೆ ಯುವಕರ ಮಧ್ಯೆ ಗಲಾಟೆ ಶುರುವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿತ್ತು. ನೋಡನೋಡುತ್ತಲೇ ನಾಲ್ವರು ಆರೋಪಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ವೇಳೆ ಕುತ್ತಿಗೆಗೆ ಸೀಳಿದ ಕಾರಣಕ್ಕೆ ಅರ್ಬಾಜ್‌ ಖಾನ್‌ ನಡುರಸ್ತೆಯಲ್ಲಿ ರಕ್ತಕಾರುತ್ತಾ ಒದ್ದಾಡುತ್ತಿದ್ದ. ಸ್ಥಳೀಯ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು, ಕೂಡಲೇ ಆಟೋದಲ್ಲಿ ಗಾಯಾಳು ಅರ್ಬಾಜ್‌ ಖಾನ್‌ನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಯಲ್ಲಿ ಅರ್ಬಾಜ್‌ ಖಾನ್‌ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇನ್ನೂ ಪರಸ್ಪರ ಗಲಾಟೆಯಲ್ಲಿ ಆರೋಪಿ ಶಹಬಾಜ್‌ ಎಂವಾತನಿಗೂ ಗಾಯವಾಗಿದ್ದ, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಪ್ರಕರಣ ಸಂಬಂಧ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Chikkalluru Siddappaji temple
ಧಾರ್ಮಿಕ4 mins ago

Chikkalluru Siddappaji Temple : ಚಿಕ್ಕಲ್ಲೂರಲ್ಲಿ ಪೂಜೆ ವಿಚಾರಕ್ಕೆ ತ್ರಿಶೂಲದಲ್ಲಿ ಹೊಡೆದಾಟ; ಮೂವರು ಅರ್ಚಕರಿಗೆ ಗಾಯ

Gold Rate Today
ಚಿನ್ನದ ದರ5 mins ago

Gold Rate Today: ಚಿನ್ನ ಕೊಳ್ಳಲು ಇಂದೇ ಸಕಾಲ, ಬಂಗಾರದ ಬೆಲೆಯಲ್ಲಿ ಇಳಿಕೆ

T20 World Cup 2024
ಕ್ರಿಕೆಟ್12 mins ago

Team India: ವೆಸ್ಟ್​ ಇಂಡೀಸ್​ ಮೈದಾನ ಭಾರತದ ಪಾಲಿಗೆ ಅನ್ ಲಕ್ಕಿ; ಹಿಂದಿನ 2 ವಿಶ್ವಕಪ್ ಟೂರ್ನಿಯ​ ಹಿನ್ನೋಟ ಇಲ್ಲಿದೆ

Porsche Crash
ದೇಶ35 mins ago

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Physical Abuse
ಉಡುಪಿ40 mins ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್1 hour ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ1 hour ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 20241 hour ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು1 hour ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20242 hours ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌