Rename of places : ಐತಿಹಾಸಿಕ ಸ್ಥಳಗಳ ಹೆಸರು ಬದಲಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ, ಸುಪ್ರೀಂಕೋರ್ಟ್‌ ಹೇಳಿದ್ದೇನು? - Vistara News

ದೇಶ

Rename of places : ಐತಿಹಾಸಿಕ ಸ್ಥಳಗಳ ಹೆಸರು ಬದಲಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ, ಸುಪ್ರೀಂಕೋರ್ಟ್‌ ಹೇಳಿದ್ದೇನು?

ಗತಕಾಲದ ಇತಿಹಾಸ ವರ್ತಮಾನದ ಪೀಳಿಗೆ ಹಾಗೂ ಭವಿಷ್ಯದ ಪೀಳಿಗೆಯನ್ನು ಅಶಾಂತಿಗೆ ತಳ್ಳಬಾರದು ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಐತಿಹಾಸಿಕ ಸ್ಥಳಗಳ ಹೆಸರು ಬದಲಾವಣೆಗೆ ನಿರ್ದೇಶನ (Rename of places) ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

VISTARANEWS.COM


on

Supreme Court On Article 370
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಅತಿಕ್ರಮಣಕಾರರ ಕಾಲದಲ್ಲಿ ಬದಲಿಸಿದ್ದ ಐತಿಹಾಸಿಕ ಸ್ಥಳಗಳು ಮತ್ತು ನಗರಗಳ ಹೆಸರುಗಳನ್ನು ಮರು ನಾಮಕರಣಗೊಳಿಸಬೇಕು (Rename of places) ಎಂದು ಕೋರಿ ಬಿಜೆಪಿ ನಾಯಕ ಹಾಗೂ ವಕೀಲರಾದ ಅಶ್ವಿನಿ ಕುಮಾರ್‌ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ. ನ್ಯಾಯಮೂರ್ತಿ ಕೆಎಂ ಜೋಸೆಫ್‌ ಮತ್ತು ಬಿವಿ ನಾಗರತ್ನ ಅವರನ್ನು ಒಳಗೊಂಡಿದ್ದ ಪೀಠವು, ಅರ್ಜಿದಾರರ ಅರ್ಜಿ ಸಂವಿಧಾನದ ಜಾತ್ಯತೀತ ತತ್ತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿತು.

ನಾವು ಜಾತ್ಯತೀತರು ಮತ್ತು ಸಂವಿಧಾನದ ಮೌಲ್ಯಗಳನ್ನು ಸಂರಕ್ಷಿಸಬೇಕು. ನೀವು ಕಳೆದುಹೋಗಿರುವ ಕಾಲದ ಬಗ್ಗೆ ಕಳವಳಪಡುತ್ತಿದ್ದೀರಿ. ಮತ್ತು ಕಳೆದು ಹೋಗಿರುವ ಗತಕಾಲದ ಹೊರೆಯನ್ನು ವರ್ತಮಾನದ ಪೀಳಿಗೆಯ ಎದುರು ಇಡುತ್ತಿದ್ದೀರಿ. ಈ ನಿಟ್ಟಿನಲ್ಲಿ ನಿಮ್ಮ ಪ್ರಯತ್ನದಿಂದ ಸೌಹಾರ್ದತೆಗೆ ಮತ್ತಷ್ಟು ಧಕ್ಕೆಯೇ ಆಗಲಿದೆ ಎಂದು ಪೀಠ ಪ್ರತಿಪಾದಿಸಿತು.

ಅರ್ಜಿದಾರರು ಗತಕಾಲದ ಘಟನೆಗಳನ್ನು ಆಯ್ಕೆ ಮಾಡಿಕೊಂಡು ಪ್ರಸ್ತಾಪಿಸುತ್ತಿದ್ದಾರೆ. ಜತೆಗೆ ಇಡೀ ಸಮುದಾಯವನ್ನೇ ಅನಾಗರಿಕ ಎಂದು ಕರೆಯುವುದು ಸಮಂಜಸವಲ್ಲ. ದೇಶದ ಇತಿಹಾಸವು ತನ್ನ ವರ್ತಮಾನ ಮತ್ತು ಭವಿಷ್ಯದ ಪೀಳಿಗೆಗಳನ್ನು ಬೇಟೆಯಾಡಬಾರದು ಎಂದು ಸುಪ್ರೀಂಕೋರ್ಟ್‌ ಪೀಠ ಹೇಳಿತು.

ಹಿಂದೂ ಧರ್ಮ ಸೈದ್ಧಾಂತಿಕವಾಗಿ ಅತ್ಯಂತ ಶ್ರೇಷ್ಠ ಧರ್ಮ. ಅದು ನಿರ್ದಿಷ್ಟ ಮತ (religion) ಅಲ್ಲ. ದಯವಿಟ್ಟು ಅದನ್ನು ದುರ್ಬಲಗೊಳಿಸದಿರಿ. ಜಗತ್ತು ಯಾವಾಗಲೂ ನಮ್ಮನ್ನು ನೋಡುತ್ತದೆ. ನಾನೊಬ್ಬ ಕ್ರಿಶ್ಚಿಯನ್‌ ಆಗಿದ್ದರೂ, ಹಿಂದೂ ಧರ್ಮದ ಶ್ರೇಷ್ಠ ಮೌಲ್ಯಗಳನ್ನು ಅರಿತುಕೊಳ್ಳಲು ಯತ್ನಿಸಿದ್ದೇನೆ. ಇದನ್ನು ಪೂರ್ವಾಗ್ರಹಪೀಡಿತ ಉದ್ದೇಶಗಳಿಗೆ ದುರ್ಬಳಕೆ ಮಾಡದಿರಿ. ನಾನೂ ಕೇರಳದಿಂದ ಬಂದಿರುವೆ. ಅಲ್ಲಿ ಹಿಂದೂಗಳೂ ಚರ್ಚ್‌ಗಳಿಗೆ ಭೂಮಿಯನ್ನು ದಾನವಾಗಿ ನೀಡಿದ್ದಾರೆ ಎಂದು ನ್ಯಾಯಮೂರ್ತಿ ಜೋಸೆಫ್‌ ತಿಳಿಸಿದರು.

ಹಿಂದೂ ಧರ್ಮ ಉದಾತ್ತವಾಗಿರುವುದರಿಂದಲೇ ಜೀವನ ಮಾರ್ಗವಾಗಿದೆ ಹಾಗೂ ಅದು ಪರಮತ ದ್ವೇಷಿಯಲ್ಲ. ಆದ್ದರಿಂದಲೇ ಇಲ್ಲಿ ಎಲ್ಲರೂ ಒಟ್ಟಾಗಿ ಬಾಳುತ್ತಿದ್ದಾರೆ. ದೇಶದಲ್ಲಿ ಇತರ ಹಲವಾರು ಸಮಸ್ಯೆಗಳಿವೆ. ಅವುಗಳನ್ನು ಮೊದಲು ಬಗೆಹರಿಸಬೇಕು. ಬ್ರಿಟಿಷ್‌ ಮೂಲದ ಒಡೆದು ಆಳುವ ನೀತಿ ಸಮಾಜಕ್ಕೆ ಒಳ್ಳೆಯದಲ್ಲ ಎಂದು ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದರು.

ಈ ವಿಷಯವನ್ನು ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಕೋರ್ಟ್‌ ಪರಿಗಣಿಸಿದೆ. ಅದರ ಪ್ರಕಾರ ಕೋರ್ಟ್‌ ಮೂಲಭೂತ ಹಕ್ಕುಗಳಿಗೆ ಬದ್ಧವಾಗಿದೆ. ಸಂವಿಧಾನದ ಪ್ರಕಾರ ಭಾರತ ಜಾತ್ಯತೀತ ರಾಷ್ಟ್ರವಾಗಿದೆ. 9 ತೀರ್ಪುಗಳು ಇದನ್ನು ಎತ್ತಿ ಹಿಡಿದಿದೆ. ದೇಶವು ಗತಕಾಲದ ಕೈದಿಯಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಪೀಠ ಹೇಳಿದೆ.

ಅಶ್ವಿನಿ ಕುಮಾರ್‌ ಉಪಾಧ್ಯಾಯ ವಾದವೇನಾಗಿತ್ತು?

ಅಶ್ವಿನಿ ಕುಮಾರ್‌ ಉಪಾಧ್ಯಾಯ

ದೇಶದಲ್ಲಿ ಈ ಹಿಂದೆ ಅತಿಕ್ರಮಣಕಾರರ ಕಾಲದಲ್ಲಿ ಹೆಸರುಗಳನ್ನು ಬದಲಿಸಲಾಗಿತ್ತು. ಅದನ್ನು ಮತ್ತೆ ಮೂಲ ಹೆಸರಿಗೆ ಮರು ನಾಮಕರಣ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತ್ಯೇಕ ಆಯೋಗವನ್ನು ರಚಿಸುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶಿಸಬೇಕು ಎಂದು ಅಶ್ವಿನಿ ಕುಮಾರ್‌ ಉಪಾಧ್ಯಾಯ ಅವರು ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ನಾವು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದೇವೆ. ಆದರೆ ಈಗಲೂ ಹಲವಾರು ಚಾರಿತ್ರಿಕ ಮತ್ತು ಸಾಂಸ್ಕೃತಿಕ ಮಹತ್ವದ ಸ್ಥಳ ಮತ್ತು ನಗರಗಳಿಗೆ ಅನಾಗರಿಕ ಮತ್ತು ಕ್ರೂರಿಗಳಾಗಿದ್ದ ವಿದೇಶಿ ಅತಿಕ್ರಮಣಕಾರರು ಇಟ್ಟಿರುವ ಹೆಸರುಗಳನ್ನೇ ಮುಂದುವರಿಸಲಾಗಿದೆ. ಈ ಐತಿಹಾಸಿಕ ಪ್ರಮಾದವನ್ನು ಸರಿಪಡಿಸಬೇಕು. ಈ ದೇಶದ ಐತಿಹಾಸಿಕ ನಗರ ಮತ್ತು ಸ್ಥಳಗಳಿಗೆ ಅವುಗಳ ಮೂಲ ಹೆಸರುಗಳನ್ನೇ ಮರು ನಾಮಕರಣಗೊಳಿಸಬೇಕು. ಈ ಮೂಲಕ ಅತಿಕ್ರಮಣಕಾರರು ಬಿಟ್ಟುಹೋಗಿರುವ ಕ್ರೌರ್ಯದ ಕೃತ್ಯಗಳ ಪರಿಣಾಮವನ್ನು ನಿರ್ಮೂಲನೆಗೊಳಿಸಬೇಕು ಎಂದು ಅರ್ಜಿದಾರರು ವಿವರಿಸಿದ್ದರು. ಹಿಂದೂಗಳು ಅಫಘಾನಿಸ್ತಾನದಿಂದ ಸಂಪೂರ್ಣ ಅಳಿಸಿ ಹೋಗಿದ್ದಾರೆ. ದೇಶದ 9 ರಾಜ್ಯಗಳಲ್ಲಿ ಅಲ್ಪಸಂಖ್ಯಾತರಾಗಿದ್ದಾರೆ. ಸಂವಿಧಾನವು ವಿದೇಶಿ ಅತಿಕ್ರಮಣಕಾರರ ಪರ ಇಲ್ಲ ಎಂಬುದು ನನ್ನ ಗ್ರಹಿಕೆಯಾಗಿದೆ ಎಂದು ಉಪಾಧ್ಯಾಯರು ಅರ್ಜಿಯಲ್ಲಿ ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Tumkur Lok Sabha Constituency: ತುಮಕೂರಿನ ಅದೃಷ್ಟ ಪರೀಕ್ಷೆಯಲ್ಲಿ ಗೆಲ್ಲುವರೇ ವಿ. ಸೋಮಣ್ಣ?

Tumkur Lok Sabha Constituency: ಈ ಬಾರಿ ಬೆಂಗಳೂರಿನ ಗೋವಿಂದರಾಜನಗರದ ಮಾಜಿ ಶಾಸಕ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ ವಿರುದ್ಧ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

VISTARANEWS.COM


on

Tumkur Lok Sabha Constituency
Koo

ತುಮಕೂರು ಲೋಕಸಭಾ ಕ್ಷೇತ್ರವು ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿದೆ. ತುಮಕೂರು ನಗರವು ರೇಷ್ಮೆ ಮತ್ತು ಹತ್ತಿ, ಜೊತೆಗೆ ಹಾಲು ಮತ್ತು ಡೈರಿ ಉತ್ಪನ್ನಗಳ ಉತ್ಪಾದನೆಗೆ ಹೆಸರುವಾಸಿ. ತುಮಕೂರು ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು, ಆದರೆ 1977ರ ನಂತರ ಇದನ್ನು ಕರ್ನಾಟಕಕ್ಕೆ ಸೇರಿಸಲಾಯಿತು. ಒಟ್ಟು 16 ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ 10 ಬಾರಿ ಗೆಲುವು ಸಾಧಿಸಿದ್ದರೆ, ತುಮಕೂರು ಕ್ಷೇತ್ರವನ್ನು ಬಿಜೆಪಿ 4 ಬಾರಿ ವಶಪಡಿಸಿಕೊಂಡಿದೆ. ಈ ಬಾರಿ ಬೆಂಗಳೂರಿನ ಗೋವಿಂದರಾಜನಗರದ ಮಾಜಿ ಶಾಸಕ ವಿ. ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಸ್.ಪಿ.ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ತುಮಕೂರು ಲೋಕಸಭಾ ಕ್ಷೇತ್ರವನ್ನು ವಿಶೇಷವಾಗಿ ಕಾಂಗ್ರೆಸ್ ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ಆದರೆ ಕಳೆದ ಮೂರು ದಶಕಗಳಲ್ಲಿ ಬಿಜೆಪಿ ಈ ಸ್ಥಾನವನ್ನು ನಾಲ್ಕು ಬಾರಿ ಗೆದ್ದಿದೆ. ಅಲ್ಲದೆ, 2019ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಗೂ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಅವರೇ ಸೋತಿದ್ದರು. ಬಿಜೆಪಿಯ ಜಿ. ಎಸ್ ಬಸವರಾಜು ಅವರು ಗೆಲುವು ಕಂಡಿದ್ದರು.

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿ.ಎಸ್.ಬಸವರಾಜು ಅವರು ಜೆಡಿಎಸ್​ನ ಅಭ್ಯರ್ಥಿ ಎಚ್.ಡಿ.ದೇವೇಗೌಡ ಅವರನ್ನು 13,339 ಮತಗಳ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.47.86ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಮುದ್ದಹನುಮೇಗೌಡ ಎಸ್.ಪಿ ಅವರು ಬಿಜೆಪಿಯ ಜಿ.ಎಸ್.ಬಸವರಾಜು ಅವರನ್ನು 74,041 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 39.03% ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಜಿ.ಎಸ್.ಬಸವರಾಜು ಅವರು ಜೆಡಿಎಸ್​ನ ಮುದ್ದಹನುಮೇಗೌಡ ಅವರನ್ನು 21,445 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.36.78ರಷ್ಟು ಮತಗಳನ್ನು ಪಡೆದಿತ್ತು.

ವಿಧಾನ ಸಭಾ ಕ್ಷೇತ್ರಗಳು ಎಷ್ಟಿವೆ?

ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳಿವೆ. ಅವುಗಳೆಂದರೆ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಗುಬ್ಬಿ ಮತ್ತು ಮಧುಗಿರಿ. ಕಾಂಗ್ರೆಸ್ 4, ಬಿಜೆಪಿ 2, ಜೆಡಿಎಸ್ 2 ಸ್ಥಾನಗಳನ್ನು ಹೊಂದಿವೆ.

ಇದನ್ನೂ ಓದಿ: Chitradurga Lok Sabha Constituency : ಚಿತ್ರದುರ್ಗ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳುವುದೇ ಕಾಂಗ್ರೆಸ್​?

2011 ರ ಜನಗಣತಿಯ ಪ್ರಕಾರ ತುಮಕೂರು 2678980 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 75.14% – ಮಹಿಳೆಯರಲ್ಲಿ 67.38% ಮತ್ತು ಪುರುಷರಲ್ಲಿ 82.81% ಆಗಿತ್ತು. ಸುಮಾರು 1207608 ಗ್ರಾಮೀಣ ಮತದಾರರು ಮತದಾರರಲ್ಲಿ ಸುಮಾರು 75% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 18% ಮತ್ತು 7.4% ರಷ್ಟಿದ್ದಾರೆ.

Continue Reading

ರಾಜಕೀಯ

PM Narendra Modi: ವಿಕಸಿತ ಭಾರತಕ್ಕೆ ಭದ್ರ ಅಡಿಪಾಯ; ದೇಶದ ಜನತೆಗೆ ಮೋದಿ ಭಾವುಕ ಪತ್ರ

ಕನ್ಯಾಕುಮಾರಿಯಲ್ಲಿ ಧ್ಯಾನ ಮಾಡಿದ ಬಳಿಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಪ್ರತಿಯೊಬ್ಬ (Narendra Modi Letter) ಭಾರತೀಯ ನಾಗರಿಕನಿಗೆ ಬರೆದಿರುವ ಮೊದಲ ಪತ್ರವಿದು. ಇದರಲ್ಲಿ ಅವರು ಸಾರ್ವತ್ರಿಕ ಚುನಾವಣೆಗಳ ಚುನಾವಣಾ ಪ್ರಚಾರದಿಂದ ಹಿಡಿದು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳು ಮತ್ತು ‘ವಿಕಸಿತ ಭಾರತ’ಕ್ಕೆ ಅಡಿಪಾಯ ಹಾಕುವವರೆಗೆ ಅನೇಕ ವಿಷಯಗಳ ಕುರಿತು ಹೇಳಿದ್ದಾರೆ.

VISTARANEWS.COM


on

By

PM Narendra Modi
Koo

ಲೋಕಸಭೆ ಚುನಾವಣೆ 2024ರ (Loksabha election-2024) ಕೊನೆಯ ಹಂತದ (Narendra Modi Letter) ಮತದಾನದ ಬಳಿಕ ತಮಿಳುನಾಡಿನಲ್ಲಿರುವ (tamilnadu) ಕನ್ಯಾಕುಮಾರಿಯ (kanyakumari) ವಿವೇಕಾನಂದ ಸ್ಮಾರಕದಲ್ಲಿ (Vivekananda Rock Memorial ) 45 ಗಂಟೆಗಳ ತಮ್ಮ ಧ್ಯಾನ ಪೂರ್ಣಗೊಳಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ದೇಶದ ಜನತೆಗೆ ಸುದೀರ್ಘ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅವರು ಸಾರ್ವತ್ರಿಕ ಚುನಾವಣೆಗಳ ಚುನಾವಣಾ ಪ್ರಚಾರದಿಂದ ಹಿಡಿದು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳು ಮತ್ತು ‘ವಿಕಸಿತ ಭಾರತ’ಕ್ಕೆ ಅಡಿಪಾಯ ಹಾಕುವವರೆಗೆ ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅದರ ಪತ್ರದ ಸಂಪೂರ್ಣ ಸಾರ ಇಲ್ಲಿದೆ.


ನನ್ನ ಸಹ ಭಾರತೀಯರೇ,

ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬವಾದ 2024ರ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದೆ. ಈ ಕ್ಷಣದಲ್ಲಿ ನನ್ನ ಮನಸ್ಸು ಹಲವಾರು ಅನುಭವ ಮತ್ತು ಭಾವನೆಗಳಿಂದ ತುಂಬಿದೆ. ನನ್ನೊಳಗೆ ಮಿತಿಯಿಲ್ಲದ ಶಕ್ತಿಯ ಹರಿವನ್ನು ನಾನು ಅನುಭವಿಸುತ್ತಿದ್ದೇನೆ. ಇದರಲ್ಲಿ ಅಮೃತ ಕಾಲದ 2024ರ ಲೋಕಸಭಾ ಚುನಾವಣೆ ಮೊದಲನೆಯದ್ದು.

1857ರ ಮೊದಲ ಸ್ವಾತಂತ್ರ್ಯ ಸಂಗ್ರಾಮದ ನಾಡಾದ ಮೀರತ್‌ನಿಂದ ಕೆಲವು ತಿಂಗಳ ಹಿಂದೆಯಷ್ಟೇ ನಾನು ನನ್ನ ಚುನಾವಣಾ ಅಭಿಯಾನವನ್ನು ಪ್ರಾರಂಭಿಸಿದೆ. ಅಂದಿನಿಂದ ನಮ್ಮ ಮಹಾನ್ ರಾಷ್ಟ್ರದ ಉದ್ದ ಮತ್ತು ಅಗಲವನ್ನು ಕ್ರಮಿಸಿದ್ದೇನೆ. ಈ ಚುನಾವಣೆಗಳ ಅಂತಿಮ ರ‍್ಯಾಲಿಯು ನನ್ನನ್ನು ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಕರೆದೊಯ್ದಿತು. ಇದು ಮಹಾನ್ ಗುರು, ಸಂತ ರವಿದಾಸ್ ಜಿ ಅವರ ಭೂಮಿ.

ಬಳಿಕ ಭಾರತ ಮಾತೆಯ ಚರಣವಾದ ಕನ್ಯಾಕುಮಾರಿಗೆ ಬಂದೆ. ಚುನಾವಣೆಯ ಕಾವು ನನ್ನ ಹೃದಯ ಮತ್ತು ಮನಸ್ಸಿನಲ್ಲಿ ಪ್ರತಿಧ್ವನಿಸುತ್ತಿರುವುದು ಸಹಜ. ರ‍್ಯಾಲಿ ಮತ್ತು ರೋಡ್ ಶೋಗಳಲ್ಲಿ ಕಾಣುವ ಬಹುಸಂಖ್ಯೆಯ ಮುಖಗಳು ನನ್ನ ಕಣ್ಣ ಮುಂದೆ ಬಂದವು. ನಮ್ಮ ನಾರಿ ಶಕ್ತಿಯ ಆಶೀರ್ವಾದಗಳು, ನಂಬಿಕೆ, ವಾತ್ಸಲ್ಯ ಇವೆಲ್ಲವೂ ಬಹಳ ವಿನಮ್ರ ಅನುಭವ. ನನ್ನ ಕಣ್ಣುಗಳು ತೇವವಾಗುತ್ತಿದ್ದವು… ನಾನು ಧ್ಯಾನದ ಸ್ಥಿತಿಗೆ ಪ್ರವೇಶಿಸಿದೆ.

ಬಳಿಕ ಬಿಸಿಯಾದ ರಾಜಕೀಯ ಚರ್ಚೆ, ದಾಳಿ ಮತ್ತು ಪ್ರತಿದಾಳಿಗಳು, ಚುನಾವಣೆಯ ವಿಶಿಷ್ಟವಾದ ಆರೋಪಗಳ ಧ್ವನಿ ಮತ್ತು ಮಾತುಗಳೆಲ್ಲವೂ ಶೂನ್ಯವಾಗಿ ಕಣ್ಮರೆಯಾಯಿತು. ನನ್ನೊಳಗೆ ನಿರ್ಲಿಪ್ತತೆಯ ಭಾವ ಬೆಳೆಯತೊಡಗಿತು. ನನ್ನ ಮನಸ್ಸು ಬಾಹ್ಯ ಪ್ರಪಂಚದಿಂದ ಸಂಪೂರ್ಣ ಬೇರ್ಪಟ್ಟಿತು. ಅಂತಹ ದೊಡ್ಡ ಜವಾಬ್ದಾರಿಗಳ ನಡುವೆ ಧ್ಯಾನವು ಸವಾಲಿನದಾಗುತ್ತದೆ. ಆದರೆ ಕನ್ಯಾಕುಮಾರಿಯ ಭೂಮಿ ಮತ್ತು ಸ್ವಾಮಿ ವಿವೇಕಾನಂದರ ಸ್ಫೂರ್ತಿ ಅದನ್ನು ಮಾಡುವಂತೆ ಮಾಡಿತು. ನಾನು ಅಭ್ಯರ್ಥಿಯಾಗಿ ಪ್ರೀತಿಯ ಕಾಶಿಯ ಜನರ ಕೈಗೆ ನನ್ನ ಪ್ರಚಾರವನ್ನು ಬಿಟ್ಟು ಇಲ್ಲಿಗೆ ಬಂದಿದ್ದೇನೆ.

ಹುಟ್ಟಿನಿಂದಲೇ ನಾನು ಪಾಲಿಸಿಕೊಂಡು ಬದುಕಲು ಪ್ರಯತ್ನಿಸಿದ ಈ ಮೌಲ್ಯಗಳನ್ನು ನನಗೆ ತುಂಬಿದ ದೇವರಿಗೆ ನಾನು ಕೃತಜ್ಞನಾಗಿದ್ದೇನೆ. ಸ್ವಾಮಿ ವಿವೇಕಾನಂದರು ಕನ್ಯಾಕುಮಾರಿಯ ಈ ಸ್ಥಳದಲ್ಲಿ ಧ್ಯಾನ ಮಾಡುವಾಗ ಏನನ್ನು ಅನುಭವಿಸಿರಬಹುದು ಎಂದು ನಾನು ಯೋಚಿಸುತ್ತಿದ್ದೆ! ನನ್ನ ಧ್ಯಾನದ ಒಂದು ಭಾಗವು ಇದೇ ರೀತಿಯ ಆಲೋಚನೆಗಳ ಹೊಳೆಯಲ್ಲಿ ಕಳೆದಿದೆ.

ಈ ನಿರ್ಲಿಪ್ತತೆ, ಶಾಂತಿ ಮತ್ತು ಮೌನದ ನಡುವೆ ನನ್ನ ಮನಸ್ಸು ಭಾರತದ ಉಜ್ವಲ ಭವಿಷ್ಯದ ಬಗ್ಗೆ, ಭಾರತದ ಗುರಿಗಳ ಬಗ್ಗೆ ನಿರಂತರವಾಗಿ ಯೋಚಿಸುತ್ತಿತ್ತು. ಕನ್ಯಾಕುಮಾರಿಯಲ್ಲಿ ಉದಯಿಸಿದ ಸೂರ್ಯ ನನ್ನ ಆಲೋಚನೆಗಳಿಗೆ ಹೊಸ ಎತ್ತರವನ್ನು ನೀಡಿತು. ಸಾಗರದ ವೈಶಾಲ್ಯವು ನನ್ನ ಆಲೋಚನೆಗಳನ್ನು ವಿಸ್ತರಿಸಿತು ಮತ್ತು ದಿಗಂತದ ವಿಸ್ತಾರವು ಬ್ರಹ್ಮಾಂಡದ ಆಳದಲ್ಲಿ ಹುದುಗಿರುವ ಏಕತೆಯನ್ನು ನಿರಂತರವಾಗಿ ಅರಿತುಕೊಂಡಿತು. ದಶಕಗಳ ಹಿಂದೆ ಹಿಮಾಲಯದ ಮಡಿಲಲ್ಲಿ ಕೈಗೊಂಡ ಅವಲೋಕನ ಮತ್ತು ಅನುಭವಗಳು ಪುನರುಜ್ಜೀವನಗೊಳ್ಳುತ್ತಿರುವಂತೆ ತೋರುತ್ತಿದೆ.


ಸ್ನೇಹಿತರೇ,

ಕನ್ಯಾಕುಮಾರಿಯು ಯಾವಾಗಲೂ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದ್ದಾಳೆ. ಇಲ್ಲಿರುವ ವಿವೇಕಾನಂದ ಕಲ್ಲಿನ ಸ್ಮಾರಕವನ್ನು ಶ್ರೀ ಏಕನಾಥ್ ರಾನಡೆ ಅವರ ನೇತೃತ್ವದಲ್ಲಿ ನಿರ್ಮಿಸಲಾಯಿತು. ಏಕನಾಥ್ ಜೀ ಅವರೊಂದಿಗೆ ವ್ಯಾಪಕವಾಗಿ ಪ್ರಯಾಣಿಸುವ ಅವಕಾಶ ನನಗೆ ಸಿಕ್ಕಿತು. ಈ ಸ್ಮಾರಕದ ನಿರ್ಮಾಣದ ಸಮಯದಲ್ಲಿ ಇಲ್ಲಿ ಸ್ವಲ್ಪ ಸಮಯ ಕಳೆಯುವ ಅವಕಾಶ ಸಿಕ್ಕಿತು.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ… ಇದು ದೇಶದ ಪ್ರತಿಯೊಬ್ಬ ಪ್ರಜೆಯ ಹೃದಯದಲ್ಲಿ ಆಳವಾಗಿ ಬೇರೂರಿರುವ ಸಾಮಾನ್ಯ ಗುರುತು. ಇದು ಶಕ್ತಿ ಪೀಠ. ಇಲ್ಲಿ ಶಕ್ತಿ ಮಾತೆಯು ಕನ್ಯಾಕುಮಾರಿಯಾಗಿ ಅವತರಿಸಿದಳು. ಈ ದಕ್ಷಿಣದ ತುದಿಯಲ್ಲಿ ಶಕ್ತಿ ಮಾತೆಯು ತಪಸ್ಸು ಮಾಡಿ ಭಾರತದ ಉತ್ತರದ ಭಾಗದ ಹಿಮಾಲಯದಲ್ಲಿ ನೆಲೆಸಿರುವ ಭಗವಾನ್ ಶಿವನಿಗಾಗಿ ಕಾಯುತ್ತಿದ್ದಳು.

ಕನ್ಯಾಕುಮಾರಿ ಸಂಗಮಗಳ ನಾಡು. ನಮ್ಮ ದೇಶದ ಪವಿತ್ರ ನದಿಗಳು ವಿವಿಧ ಭಾಗದಲ್ಲಿ ಸಮುದ್ರಗಳನ್ನು ಸೇರುತ್ತದೆ. ಇಲ್ಲಿ ಆ ಸಮುದ್ರಗಳು ಸಂಗಮಿಸುತ್ತವೆ ಮತ್ತು ಇಲ್ಲಿ ನಾವು ಇನ್ನೊಂದು ಮಹಾ ಸಂಗಮಕ್ಕೆ ಸಾಕ್ಷಿಯಾಗಿದ್ದೇವೆ. ಅದು ಭಾರತದ ಸೈದ್ಧಾಂತಿಕ ಸಂಗಮ. ವಿವೇಕಾನಂದ ಕಲ್ಲಿನ ಸ್ಮಾರಕ, ಸಂತ ತಿರುವಳ್ಳುವರ್ ಅವರ ಭವ್ಯವಾದ ಪ್ರತಿಮೆ, ಗಾಂಧಿ ಮಂಟಪ ಮತ್ತು ಕಾಮರಾಜರ್ ಮಣಿ ಮಂಟಪವನ್ನು ಇಲ್ಲಿ ಕಾಣುತ್ತೇವೆ. ಈ ದಿಗ್ಗಜರ ಚಿಂತನಾ ಧಾರೆಗಳು ಇಲ್ಲಿ ಒಮ್ಮುಖವಾಗಿ ರಾಷ್ಟ್ರೀಯ ಚಿಂತನೆಯ ಸಂಗಮವನ್ನು ರೂಪಿಸುತ್ತವೆ. ಇದು ರಾಷ್ಟ್ರ ನಿರ್ಮಾಣಕ್ಕೆ ಮಹತ್ತರವಾದ ಸ್ಫೂರ್ತಿಯನ್ನು ನೀಡುತ್ತದೆ.

ಭಾರತದ ರಾಷ್ಟ್ರೀಯತೆ ಮತ್ತು ಏಕತೆಯ ಪ್ರಜ್ಞೆಯನ್ನು ಅನುಮಾನಿಸುವ ಯಾವುದೇ ವ್ಯಕ್ತಿಗೆ ಕನ್ಯಾಕುಮಾರಿಯ ಈ ಭೂಮಿ ಏಕತೆಯನ್ನು ಅಳಿಸಲಾಗದ ಸಂದೇಶವನ್ನು ನೀಡುತ್ತದೆ. ಕನ್ಯಾಕುಮಾರಿಯಲ್ಲಿರುವ ಸಂತ ತಿರುವಳ್ಳುವರ್ ಅವರ ಭವ್ಯವಾದ ಪ್ರತಿಮೆಯು ಸಮುದ್ರದಿಂದ ಭಾರತ ಮಾತೆಯ ವಿಸ್ತಾರವನ್ನು ನೋಡುತ್ತಿದೆ. ಅವರ ಕೃತಿ ತಿರುಕ್ಕುರಳ್ ಸುಂದರ ತಮಿಳು ಭಾಷೆಯ ಮುಕುಟಮಣಿಗಳಲ್ಲಿ ಒಂದಾಗಿದೆ. ಇದು ಜೀವನದ ಪ್ರತಿಯೊಂದು ಅಂಶವನ್ನು ಒಳಗೊಂಡಿದೆ. ನಮಗಾಗಿ ಮತ್ತು ರಾಷ್ಟ್ರಕ್ಕಾಗಿ ನಮ್ಮ ಅತ್ಯುತ್ತಮವಾದದ್ದನ್ನು ನೀಡಲು ಪ್ರೇರೇಪಿಸುತ್ತದೆ. ಅಂತಹ ಮಹಾನ್ ವ್ಯಕ್ತಿಗೆ ನಮನ ಸಲ್ಲಿಸುವುದು ನನ್ನ ಅದೃಷ್ಟ.

ಸ್ನೇಹಿತರೇ,

ಸ್ವಾಮಿ ವಿವೇಕಾನಂದರು ಒಮ್ಮೆ ಹೇಳಿದ್ದರು, ಪ್ರತಿಯೊಂದು ರಾಷ್ಟ್ರಕ್ಕೂ ತಲುಪಿಸಲು ಸಂದೇಶವಿದೆ, ಪೂರೈಸಲು ಒಂದು ಧ್ಯೇಯವಿದೆ, ತಲುಪಲು ಗಮ್ಯವಿದೆ. ಸಾವಿರಾರು ವರ್ಷಗಳಿಂದ ಭಾರತವು ಈ ಅರ್ಥಪೂರ್ಣ ಉದ್ದೇಶದ ಪ್ರಜ್ಞೆಯೊಂದಿಗೆ ಮುನ್ನಡೆಯುತ್ತಿದೆ. ಭಾರತವು ಸಾವಿರಾರು ವರ್ಷಗಳಿಂದ ಕಲ್ಪನೆಗಳ ತೊಟ್ಟಿಲು. ನಾವು ಸ್ವಾಧೀನಪಡಿಸಿಕೊಂಡದ್ದನ್ನು ನಮ್ಮ ವೈಯಕ್ತಿಕ ಸಂಪತ್ತು ಎಂದು ಪರಿಗಣಿಸಿಲ್ಲ ಅಥವಾ ಅದನ್ನು ಆರ್ಥಿಕ ಅಥವಾ ವಸ್ತು ನಿಯತಾಂಕಗಳಿಂದ ಸಂಪೂರ್ಣವಾಗಿ ಅಳೆಯುವುದಿಲ್ಲ. ಆದ್ದರಿಂದ, ‘ಇದಂ-ನಾ-ಮಮ’ ಅಂದರೆ ಇದು ನನ್ನದಲ್ಲ. ಭರತ್ ಪಾತ್ರದ ಅಂತರ್ಗತ ಮತ್ತು ನೈಸರ್ಗಿಕ ಭಾಗವಾಗಿದೆ.

ಭಾರತದ ಕಲ್ಯಾಣವು ನಮ್ಮ ಗ್ರಹದ ಪ್ರಗತಿಯ ಪ್ರಯಾಣಕ್ಕೂ ಸಾಕಷ್ಟು ಕೊಡುಗೆಗಳನ್ನು ನೀಡಿದೆ. ಸ್ವಾತಂತ್ರ್ಯ ಚಳವಳಿಯನ್ನು ಉದಾಹರಣೆಯಾಗಿ ತೆಗೆದುಕೊಳ್ಳಿ. 1947ರ ಆಗಸ್ಟ್ 15ರಂದು ಭಾರತವು ಸ್ವಾತಂತ್ರ್ಯವನ್ನು ಗಳಿಸಿತು. ಆ ಸಮಯದಲ್ಲಿ, ಪ್ರಪಂಚದಾದ್ಯಂತದ ಅನೇಕ ದೇಶಗಳು ವಸಾಹತುಶಾಹಿ ಆಳ್ವಿಕೆಯಲ್ಲಿತ್ತು. ಭಾರತದ ಸ್ವಾತಂತ್ರ್ಯ ಯಾತ್ರೆಯು ಆ ದೇಶಗಳಲ್ಲಿ ಅನೇಕರಿಗೆ ತಮ್ಮದೇ ಆದ ಸ್ವಾತಂತ್ರ್ಯವನ್ನು ಸಾಧಿಸಲು ಸ್ಫೂರ್ತಿ ಮತ್ತು ಅಧಿಕಾರ ನೀಡಿತು. ಅದೇ ಚೈತನ್ಯವು ದಶಕಗಳ ಅನಂತರ ಒಂದು ಶತಮಾನದ ಕೋವಿಡ್-19 ಸಾಂಕ್ರಾಮಿಕದೊಂದಿಗೆ ಜಗತ್ತು ಮುಖಾಮುಖಿಯಾದಾಗ ಕಂಡುಬಂದಿತು. ಬಡವರು ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದಾಗ ಭಾರತದ ಯಶಸ್ವಿ ಪ್ರಯತ್ನಗಳು ಅನೇಕ ರಾಷ್ಟ್ರಗಳಿಗೆ ಧೈರ್ಯ ಮತ್ತು ಸಹಾಯವನ್ನು ನೀಡಿತು.

ಭಾರತದ ಆಡಳಿತ ಮಾದರಿಯು ಪ್ರಪಂಚದಾದ್ಯಂತ ಅನೇಕ ದೇಶಗಳಿಗೆ ಉದಾಹರಣೆಯಾಗಿದೆ. ಕೇವಲ 10 ವರ್ಷಗಳಲ್ಲಿ 25 ಕೋಟಿ ಜನರನ್ನು ಬಡತನದಿಂದ ಮೇಲಕ್ಕೆತ್ತಿರುವುದು ಅಭೂತಪೂರ್ವ. ಜನಪರ ಉತ್ತಮ ಆಡಳಿತ, ಮಹತ್ವಾಕಾಂಕ್ಷೆಯ ಜಿಲ್ಲೆಗಳು ಮತ್ತು ಬ್ಲಾಕ್‌ಗಳಂತಹ ನವೀನ ಅಭ್ಯಾಸಗಳು ಇಂದು ಜಾಗತಿಕವಾಗಿ ಚರ್ಚಿಸಲ್ಪಡುತ್ತವೆ. ನಮ್ಮ ಪ್ರಯತ್ನಗಳು, ಬಡವರಿಗೆ ಅಧಿಕಾರ ನೀಡುವುದರಿಂದ ಹಿಡಿದು ಕೊನೆಯ ಮೈಲು ತಲುಪಿಸುವವರೆಗೆ ಸಮಾಜದ ಕೊನೆಯ ಹಂತದಲ್ಲಿ ನಿಂತಿರುವ ವ್ಯಕ್ತಿಗಳಿಗೆ ಆದ್ಯತೆ ನೀಡುವ ಮೂಲಕ ಜಗತ್ತನ್ನು ಪ್ರೇರೇಪಿಸಿದೆ.

ಭಾರತದ ಡಿಜಿಟಲ್ ಇಂಡಿಯಾ ಅಭಿಯಾನವು ಈಗ ಇಡೀ ಜಗತ್ತಿಗೆ ಒಂದು ಉದಾಹರಣೆಯಾಗಿದೆ. ಬಡವರನ್ನು ಸಬಲೀಕರಣಗೊಳಿಸಲು, ಪಾರದರ್ಶಕತೆಯನ್ನು ತರಲು ಮತ್ತು ಅವರ ಹಕ್ಕುಗಳನ್ನು ಖಚಿತಪಡಿಸಿಕೊಳ್ಳಲು ನಾವು ತಂತ್ರಜ್ಞಾನವನ್ನು ಹೇಗೆ ಬಳಸಬಹುದು ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿರುವ ಅಗ್ಗದ ದತ್ತಾಂಶವು ಬಡವರಿಗೆ ಮಾಹಿತಿ ಮತ್ತು ಸೇವೆಗಳ ತಲುಪುವಿಕೆಯನ್ನು ಖಾತ್ರಿಪಡಿಸುವ ಮೂಲಕ ಸಾಮಾಜಿಕ ಸಮಾನತೆಯ ಸಾಧನವಾಗುತ್ತಿದೆ. ಇಡೀ ಜಗತ್ತು ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣವನ್ನು ನೋಡುತ್ತಿದೆ ಮತ್ತು ಅಧ್ಯಯನ ಮಾಡುತ್ತಿದೆ. ಪ್ರಮುಖ ಜಾಗತಿಕ ಸಂಸ್ಥೆಗಳು ನಮ್ಮ ಮಾದರಿಯ ಅಂಶಗಳನ್ನು ಅಳವಡಿಸಿಕೊಳ್ಳಲು ಅನೇಕ ದೇಶಗಳಿಗೆ ಸಲಹೆ ನೀಡುತ್ತಿವೆ.

ಭಾರತದ ಪ್ರಗತಿ ಮತ್ತು ಏರಿಕೆಯು ಇಂದು ಭಾರತಕ್ಕೆ ಮಾತ್ರ ಮಹತ್ವದ ಅವಕಾಶವಲ್ಲ. ಪ್ರಪಂಚದಾದ್ಯಂತದ ನಮ್ಮ ಎಲ್ಲಾ ಪಾಲುದಾರ ದೇಶಗಳಿಗೆ ಐತಿಹಾಸಿಕ ಅವಕಾಶವಾಗಿದೆ. ಜಿ-20 ಯಶಸ್ಸಿನ ಅನಂತರ ಪ್ರಪಂಚವು ಭಾರತಕ್ಕೆ ಹೆಚ್ಚಿನ ಪಾತ್ರವನ್ನು ಕಲ್ಪಿಸುತ್ತಿದೆ. ಇಂದು ಭಾರತವು ಜಾಗತಿಕ ದಕ್ಷಿಣದ ಪ್ರಬಲ ಮತ್ತು ಪ್ರಮುಖ ಧ್ವನಿಯಾಗಿ ಅಂಗೀಕರಿಸಲ್ಪಟ್ಟಿದೆ. ಭಾರತ್‌ನ ಉಪಕ್ರಮದಲ್ಲಿ ಆಫ್ರಿಕನ್ ಯೂನಿಯನ್ ಜಿ-20 ಗುಂಪಿನ ಭಾಗವಾಗಿದೆ. ಇದು ಆಫ್ರಿಕನ್ ದೇಶಗಳ ಭವಿಷ್ಯಕ್ಕೆ ನಿರ್ಣಾಯಕ ತಿರುವು ನೀಡಲಿದೆ.

ಸ್ನೇಹಿತರೇ,

ಭಾರತದ ಅಭಿವೃದ್ಧಿ ಪಥವು ನಮಗೆ ಹೆಮ್ಮೆ ಮತ್ತು ವೈಭವವನ್ನು ತುಂಬುತ್ತದೆ. ಆದರೆ ಅದೇ ಸಮಯದಲ್ಲಿ ಇದು 140 ಕೋಟಿ ನಾಗರಿಕರಿಗೆ ಅವರ ಜವಾಬ್ದಾರಿಗಳನ್ನು ನೆನಪಿಸುತ್ತದೆ. ಈಗ ಒಂದು ಕ್ಷಣವನ್ನು ವ್ಯರ್ಥ ಮಾಡದೆ ನಾವು ಹೆಚ್ಚಿನ ಕರ್ತವ್ಯ ಮತ್ತು ದೊಡ್ಡ ಗುರಿಗಳ ಕಡೆಗೆ ಹೆಜ್ಜೆ ಹಾಕಬೇಕು. ಹೊಸ ಕನಸುಗಳನ್ನು ಕಾಣಬೇಕು. ಅವುಗಳನ್ನು ವಾಸ್ತವಕ್ಕೆ ಪರಿವರ್ತಿಸಬೇಕು ಮತ್ತು ಆ ಕನಸುಗಳನ್ನು ಬದುಕಲು ಪ್ರಾರಂಭಿಸಬೇಕು.

ನಾವು ಭಾರತದ ಅಭಿವೃದ್ಧಿಯನ್ನು ಜಾಗತಿಕವಾಗಿ ಕಾಣಬೇಕು. ಇದಕ್ಕಾಗಿ ಭಾರತದ ಆಂತರಿಕ ಸಾಮರ್ಥ್ಯಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಭಾರತದ ಶಕ್ತಿಗಳನ್ನು ಅಂಗೀಕರಿಸಬೇಕು, ಅವುಗಳನ್ನು ಪೋಷಿಸಬೇಕು ಮತ್ತು ಪ್ರಪಂಚದ ಪ್ರಯೋಜನಕ್ಕಾಗಿ ಬಳಸಿಕೊಳ್ಳಬೇಕು. ಇಂದಿನ ಜಾಗತಿಕ ಸನ್ನಿವೇಶದಲ್ಲಿ ಯುವ ರಾಷ್ಟ್ರವಾಗಿ ಭಾರತದ ಶಕ್ತಿಯು ಒಂದು ಅವಕಾಶವಾಗಿದೆ. ಇದರಿಂದ ನಾವು ಹಿಂತಿರುಗಿ ನೋಡಬಾರದು.

21ನೇ ಶತಮಾನದ ಜಗತ್ತು ಹಲವು ಭರವಸೆಗಳೊಂದಿಗೆ ಭಾರತದತ್ತ ನೋಡುತ್ತಿದೆ. ಜಾಗತಿಕ ಸನ್ನಿವೇಶದಲ್ಲಿ ಮುಂದುವರಿಯಲು ನಾವು ಹಲವಾರು ಬದಲಾವಣೆಗಳನ್ನು ಮಾಡಬೇಕಾಗಿದೆ. ಸುಧಾರಣೆಗೆ ಸಂಬಂಧಿಸಿದಂತೆ ನಮ್ಮ ಸಾಂಪ್ರದಾಯಿಕ ಚಿಂತನೆಯನ್ನೂ ನಾವು ಬದಲಾಯಿಸಬೇಕಾಗಿದೆ. ಭಾರತವು ಸುಧಾರಣೆಯನ್ನು ಕೇವಲ ಆರ್ಥಿಕ ಸುಧಾರಣೆಗಳಿಗೆ ಸೀಮಿತಗೊಳಿಸುವುದಿಲ್ಲ. ಸುಧಾರಣೆಯ ದಿಕ್ಕಿನತ್ತ ನಾವು ಜೀವನದ ಪ್ರತಿಯೊಂದು ಅಂಶದಲ್ಲೂ ಮುನ್ನಡೆಯಬೇಕು. ನಮ್ಮ ಸುಧಾರಣೆಗಳು 2047ರ ವೇಳೆಗೆ ‘ವಿಕಸಿತ ಭಾರತ’ ಅಂದರೆ ಅಭಿವೃದ್ಧಿ ಹೊಂದಿದ ಭಾರತದ ಆಶಯಗಳೊಂದಿಗೆ ಸಹ ಹೊಂದಿಕೆಯಾಗಬೇಕು.

ಸುಧಾರಣೆಯು ಯಾವುದೇ ದೇಶಕ್ಕೆ ಒಂದೇ ಆಯಾಮದ ಪ್ರಕ್ರಿಯೆಯಾಗುವುದಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಆದ್ದರಿಂದ, ನಾನು ದೇಶಕ್ಕಾಗಿ ಸುಧಾರಣೆ, ಸಾಧನೆ ಮತ್ತು ಪರಿವರ್ತನೆಯ ದೃಷ್ಟಿಕೋನವನ್ನು ಹಾಕಿದ್ದೇನೆ. ಸುಧಾರಣೆಯ ಜವಾಬ್ದಾರಿ ನಾಯಕತ್ವದ ಮೇಲಿದೆ. ಅದರ ಆಧಾರದ ಮೇಲೆ ನಮ್ಮ ಅಧಿಕಾರಶಾಹಿಯು ಕಾರ್ಯನಿರ್ವಹಿಸುತ್ತದೆ ಮತ್ತು ಉತ್ಸಾಹದೊಂದಿಗೆ ಜನರು ಸೇರಿಕೊಂಡಾಗ ನಾವು ಪರಿವರ್ತನೆಗೆ ಸಾಕ್ಷಿಯಾಗುತ್ತೇವೆ.

ನಮ್ಮ ದೇಶವನ್ನು ‘ವಿಕಸಿತ ಭಾರತ’ ಮಾಡಲು ನಾವು ಶ್ರೇಷ್ಠತೆಯನ್ನು ಮೂಲಭೂತ ತತ್ತ್ವವನ್ನಾಗಿ ಮಾಡಬೇಕು. ನಾವು ಎಲ್ಲಾ ನಾಲ್ಕು ದಿಕ್ಕುಗಳಲ್ಲಿ ತ್ವರಿತವಾಗಿ ಕೆಲಸ ಮಾಡಬೇಕಾಗಿದೆ.. ಅದು ವೇಗ, ಸ್ಕೇಲ್, ಸ್ಕೋಪ್ ಮತ್ತು ಮಾನದಂಡಗಳು. ಉತ್ಪಾದನೆಯ ಜೊತೆಗೆ ನಾವು ಗುಣಮಟ್ಟದ ಮೇಲೆ ಕೇಂದ್ರೀಕರಿಸಬೇಕು ಮತ್ತು ‘ಶೂನ್ಯ ದೋಷ- ಶೂನ್ಯ ಪರಿಣಾಮ’ ಮಂತ್ರಕ್ಕೆ ಬದ್ಧರಾಗಿರಬೇಕು.


ಸ್ನೇಹಿತರೇ,

ಭಗವಂತ ನಮಗೆ ಭರತ ನಾಡಿನಲ್ಲಿ ಜನ್ಮ ನೀಡಿದ್ದಾನೆ ಎಂದು ಪ್ರತಿ ಕ್ಷಣದಲ್ಲಿ ಹೆಮ್ಮೆ ಪಡಬೇಕು. ಭಾರತಕ್ಕೆ ಸೇವೆ ಸಲ್ಲಿಸಲು ಮತ್ತು ನಮ್ಮ ದೇಶದ ಉತ್ಕೃಷ್ಟತೆಯತ್ತ ಪಯಣದಲ್ಲಿ ನಮ್ಮ ಪಾತ್ರವನ್ನು ಪೂರೈಸಲು ದೇವರು ನಮ್ಮನ್ನು ಆರಿಸಿಕೊಂಡಿದ್ದಾನೆ. ಆಧುನಿಕ ಸಂದರ್ಭದಲ್ಲಿ ಪ್ರಾಚೀನ ಮೌಲ್ಯಗಳನ್ನು ಅಳವಡಿಸಿಕೊಂಡು ನಮ್ಮ ಪರಂಪರೆಯನ್ನು ಆಧುನಿಕ ರೀತಿಯಲ್ಲಿ ಪುನರ್ ವ್ಯಾಖ್ಯಾನಿಸಬೇಕು.

ಒಂದು ರಾಷ್ಟ್ರವಾಗಿ ನಾವು ಹಳೆಯ ಆಲೋಚನೆಗಳು ಮತ್ತು ನಂಬಿಕೆಗಳನ್ನು ಮರುಮೌಲ್ಯಮಾಪನ ಮಾಡಬೇಕಾಗಿದೆ. ವೃತ್ತಿಪರ ನಿರಾಶಾವಾದಿಗಳ ಒತ್ತಡದಿಂದ ನಮ್ಮ ಸಮಾಜವನ್ನು ಮುಕ್ತಗೊಳಿಸಬೇಕಾಗಿದೆ. ನಕಾರಾತ್ಮಕತೆಯಿಂದ ಸ್ವಾತಂತ್ರ್ಯವು ಯಶಸ್ಸನ್ನು ಸಾಧಿಸುವ ಮೊದಲ ಹೆಜ್ಜೆ ಎಂದು ನಾವು ನೆನಪಿನಲ್ಲಿಡಬೇಕು.

ಸಕಾರಾತ್ಮಕತೆಯ ಮಡಿಲಲ್ಲಿ ಯಶಸ್ಸು ಅರಳುತ್ತದೆ. ಭಾರತದ ಅನಂತ ಮತ್ತು ಶಾಶ್ವತ ಶಕ್ತಿಯಲ್ಲಿ ನನ್ನ ನಂಬಿಕೆ, ಭಕ್ತಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಕಳೆದ 10 ವರ್ಷಗಳಲ್ಲಿ ಭಾರತದ ಈ ಸಾಮರ್ಥ್ಯವು ಇನ್ನಷ್ಟು ಬೆಳೆಯುತ್ತಿರುವುದನ್ನು ನಾನು ನೋಡಿದ್ದೇನೆ ಮತ್ತು ಅದನ್ನು ನೇರವಾಗಿ ಅನುಭವಿಸಿದ್ದೇನೆ.

ಇದನ್ನೂ ಓದಿ: Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

20ನೇ ಶತಮಾನದ ನಾಲ್ಕು ಮತ್ತು ಐದನೇ ದಶಕಗಳನ್ನು ಸ್ವಾತಂತ್ರ್ಯ ಚಳವಳಿಗೆ ಹೊಸ ವೇಗವನ್ನು ನೀಡಲು ಬಳಸಿಕೊಂಡಂತೆ 21ನೇ ಶತಮಾನದ ಈ 25 ವರ್ಷಗಳಲ್ಲಿ ನಾವು ‘ವಿಕಸಿತ ಭಾರತ’ಕ್ಕೆ ಅಡಿಪಾಯ ಹಾಕಬೇಕು. ಸ್ವಾತಂತ್ರ್ಯ ಹೋರಾಟವು ಮಹಾನ್ ತ್ಯಾಗಕ್ಕೆ ಕರೆ ನೀಡಿದ ಸಮಯವಾಗಿದೆ. ಪ್ರಸ್ತುತ ಸಮಯವು ಪ್ರತಿಯೊಬ್ಬರಿಂದ ಉತ್ತಮ ಮತ್ತು ನಿರಂತರ ಕೊಡುಗೆಗಳನ್ನು ಕೇಳುತ್ತದೆ.

1897ರಲ್ಲಿ ಸ್ವಾಮಿ ವಿವೇಕಾನಂದರು ಮುಂದಿನ 50 ವರ್ಷಗಳನ್ನು ದೇಶಕ್ಕಾಗಿ ಮೀಸಲಿಡಬೇಕು ಎಂದು ಹೇಳಿದ್ದರು. ಈ ಕರೆಗೆ ಸರಿಯಾಗಿ 50 ವರ್ಷಗಳ ಅನಂತರ ಭಾರತವು 1947ರಲ್ಲಿ ಸ್ವಾತಂತ್ರ್ಯವನ್ನು ಗಳಿಸಿತು.

ಇಂದು ನಮಗೆ ಅದೇ ಸುವರ್ಣಾವಕಾಶವಿದೆ. ಮುಂದಿನ 25 ವರ್ಷಗಳನ್ನು ದೇಶಕ್ಕಾಗಿ ಮುಡಿಪಾಗಿಡೋಣ. ನಮ್ಮ ಪ್ರಯತ್ನಗಳು ಮುಂಬರುವ ಪೀಳಿಗೆಗೆ ಮತ್ತು ಮುಂಬರುವ ಶತಮಾನಗಳಿಗೆ ಬಲವಾದ ಅಡಿಪಾಯವನ್ನು ಸೃಷ್ಟಿಸುತ್ತದೆ. ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ದೇಶದ ಶಕ್ತಿ ಮತ್ತು ಉತ್ಸಾಹವನ್ನು ನೋಡಿದರೆ ಗುರಿ ಈಗ ದೂರವಿಲ್ಲ ಎಂದು ಹೇಳಬಹುದು. ಶೀಘ್ರ ಹೆಜ್ಜೆಗಳನ್ನು ಇಡೋಣ…ಒಟ್ಟಾಗಿ ವಿಕಸಿತ ಭಾರತವನ್ನು ರಚಿಸೋಣ.

Continue Reading

ದೇಶ

Election Commission of India: “64 ಕೋಟಿ ಜನರಿಂದ ಮತದಾನ; ವಿಶ್ವದಾಖಲೆ ಬರೆದ ಭಾರತ”- ಚು.ಆಯೋಗ ಶ್ಲಾಘನೆ

Election Commission of India:ಈ ಬಾರಿ ದೇಶದಲ್ಲಿ 642 ಮಿಲಿಯನ್ ಅಂದರೆ 64 ಕೋಟಿಗೂ ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ ಎಂದಿರುವ ರಾಜೀವ್‌ ಕುಮಾರ್‌, ಈ ಸಂಖ್ಯೆ ವಿಶ್ವದ 29 ದೇಶಗಳ ಮತದಾರರಿಗಿಂತ ಐದು ಪಟ್ಟು ಹೆಚ್ಚು ಎಂದಿದ್ದಾರೆ. ಅಲ್ಲದೇ ಇದು ಎಲ್ಲಾ G7 ದೇಶಗಳ ಮತದಾರರಿಗಿಂತ 1.5 ಪಟ್ಟು ಮತ್ತು EU ನಲ್ಲಿ 27 ದೇಶಗಳ ಮತದಾರರಿಗಿಂತ 2.5 ಪಟ್ಟು ಹೆಚ್ಚು ಎಂದಿದ್ದಾರೆ.

VISTARANEWS.COM


on

Election Commission of india
Koo

ನವದೆಹಲಿ: ಲೋಕಸಭಾ ಚುನಾವಣೆ(Lok Sabha Election 2024) ಫಲಿತಾಂಶಕ್ಕೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ ಎನ್ನವಾಗಲೇ ಮುಖ್ಯ ಚುನಾವಣಾ ಆಯುಕ್ತರು(Election Commission of India) ಸುದ್ದಿಗೋಷ್ಠಿ ನಡೆಸಿ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌(Rajiv Kumar), ದೇಶದಲ್ಲಿ ಈ ಬಾರಿ 642 ಮಿಲಿಯನ್ ಅಂದರೆ 64 ಕೋಟಿಗೂ ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಈ ಬಾರಿ ಮತದಾನ ಪ್ರಮಾಣ ಬಹಳಷ್ಟು ಕಡಿಮೆ ಆಗಿದೆ ಎಂಬ ಅನೇಕರ ಕಳವಳಕ್ಕೆ ತೆರೆ ಎಳೆದಂತಾಗಿದೆ.

ವಿಶ್ವ ದಾಖಲೆ ಬರೆದ ಭಾರತ

ಈ ಬಾರಿ ದೇಶದಲ್ಲಿ 642 ಮಿಲಿಯನ್ ಅಂದರೆ 64 ಕೋಟಿಗೂ ಅಧಿಕ ಜನ ಮತದಾನ ಮಾಡುವ ಮೂಲಕ ಭಾರತ ವಿಶ್ವ ದಾಖಲೆ ಬರೆದಿದೆ ಎಂದಿರುವ ರಾಜೀವ್‌ ಕುಮಾರ್‌, ಈ ಸಂಖ್ಯೆ ವಿಶ್ವದ 29 ದೇಶಗಳ ಮತದಾರರಿಗಿಂತ ಐದು ಪಟ್ಟು ಹೆಚ್ಚು ಎಂದಿದ್ದಾರೆ. ಅಲ್ಲದೇ ಇದು ಎಲ್ಲಾ G7 ದೇಶಗಳ ಮತದಾರರಿಗಿಂತ 1.5 ಪಟ್ಟು ಮತ್ತು EU ನಲ್ಲಿ 27 ದೇಶಗಳ ಮತದಾರರಿಗಿಂತ 2.5 ಪಟ್ಟು ಹೆಚ್ಚು. ಇನ್ನು ದೇಶದಲ್ಲಿ 31 ಕೋಟಿ ಮಹಿಳಾ ಮತದಾರರಿದ್ದಾರೆ. ಇದೇ ಮೊದಲ ಬಾರಿಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತದಾನ ಮಾಡಿದ್ದಾರೆ. ಈ ಅಂಕಿ ಅಂಶವು ವಿಶ್ವದಲ್ಲೇ ಅತಿ ಹೆಚ್ಚು. ಈ ಮಹಿಳಾ ಮತದಾರರನ್ನು ನಾವು ಎದ್ದುನಿಂತು ಗೌರವಿಸಬೇಕು. ಮಹಿಳೆಯರ ಘನತೆಗೆ ಧಕ್ಕೆ ತರುವಂತಹ ಮಾತುಗಳನ್ನು ಯಾವ ನಾಯಕರೂ ಹೇಳಬಾರದು ಎಂದು ನಾವು ಚುನಾವಣೆಯುದ್ದಕ್ಕೂ ಪ್ರಯತ್ನಿಸಿದ್ದೇವೆ. ಯಾರಾದರೂ ಮಾಡಿದ್ದರೆ, ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು

ಇನ್ನು 85 ವರ್ಷ ಮೇಲ್ಪಟ್ಟ ಮತದಾರರು ಮನೆಯಲ್ಲಿ ಕುಳಿತು ಮತದಾನ ಮಾಡಿದರು. ವಯಸ್ಸಾದ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಮಾಡಿದ್ದೆವು, ಆದರೆ ಜನರು ಬೂತ್‌ಗೆ ಬರಲು ಬಯಸುತ್ತಾರೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಯುವಜನತೆಯೂ ಇದರಿಂದ ಸ್ಫೂರ್ತಿ ಪಡೆಯಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

100 ಪತ್ರಿಕಾ ಪ್ರಕಟಣೆ ರಿಲೀಸ್‌

ನಾವು ಮಾರ್ಚ್ 16 ರಂದು ಭೇಟಿ ಮಾಡಿದ್ದೇವು, ಈಗ ಚುನಾವಣೆ ಮುಗಿಯುತ್ತಿದೆ. ಅದಕ್ಕಾಗಿಯೇ ನಾವು ಮತ್ತೆ ಭೇಟಿಯಾಗುತ್ತಿದ್ದೇವೆ. ಈ ಬಾರಿ ನಾವು ಮೊದಲ ಬಾರಿಗೆ 100 ಪತ್ರಿಕಾ ಪ್ರಕಟಣೆಗಳನ್ನು ಮಾಡಿದ್ದೇವೆ. ಇಷ್ಟು ಪ್ರೆಸ್ ನೋಟ್‌ಗಳನ್ನು ಬಿಡುಗಡೆ ಮಾಡಿರುವುದು ಇದೇ ಮೊದಲು. ಇನ್ನು ಸೋಷಿಯಲ್ ಮೀಡಿಯಾದಲ್ಲಿ ‘ಕಾಣೆಯಾದ ಮಹನೀಯರು ಹಿಂತಿರುಗಿದ್ದಾರೆ’ ಎಂಬ ಮೀಮ್‌ಗಳನ್ನು ನೀವು ನೋಡುತ್ತೀರಿ ಆದರೆ ನಾವು ಎಂದಿಗೂ ಕಾಣೆಯಾಗಿಲ್ಲ ಎಂದು ಸೂಚಿಸಲು ಬಯಸುತ್ತೇವೆ ಎಂದು ರಾಜೀವ್‌ ಹೇಳಿದ್ದಾರೆ.

ಇದನ್ನೂ ಓದಿ:Gold Rate Today: ಚಿನ್ನ ಕೊಳ್ಳಲು ಇದೇ ಸೂಕ್ತ ಸಮಯ; ಮತ್ತೆ ಬಂಗಾರದ ದರ ಇಳಿಕೆ

Continue Reading

ದೇಶ

Udupi-Chikmagalur Lok Sabha constituency: ಬದಲಾವಣೆ ನಡುವೆ ಯಾರಿಗೆ ಮಣೆ ಹಾಕಲಿದ್ದಾರೆ ಉಡುಪಿ ಕ್ಷೇತ್ರದ ಮತದಾರರು?

Udupi-Chikmagalur Lok Sabha constituency: 2019ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕುಮಾರಿ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್ ನ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರನ್ನು 1,81,000 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು.

VISTARANEWS.COM


on

Udupi-Chikmagalur Lok Sabha constituency
Koo

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ 2008ರ ಕ್ಷೇತ್ರ ಮರು ವಿಂಗಡಣೆ (Udupi-Chikmagalur Lok Sabha constituency) ನಂತರ ಅಸ್ತಿತ್ವಕ್ಕೆ ಬಂದಿತು. 2019 ರವರೆಗೆ ಈ ಕ್ಷೇತ್ರದಲ್ಲಿ ಮೂರು ಚುನಾವಣೆಗಳು ನಡೆದಿವೆ. ಇದರಲ್ಲಿ 2012 ರ ಉಪಚುನಾವಣೆಯೂ ಸೇರಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಭದ್ರಕೋಟೆಯಾಗಿದ್ದು ಉಪಚುನಾವಣೆಯಲ್ಲಿ ಮಾತ್ರ ಒಮ್ಮೆ ಕಾಂಗ್ರೆಸ್ ಗೆದ್ದಿದೆ. ಈ ಕ್ಷೇತ್ರದಲ್ಲಿ ಮೊದಲ ಚುನಾವಣೆ 2009ರಲ್ಲಿ ರಲ್ಲಿ ನಡೆಯಿತು. ಕುಂದಾಪುರ, ಉಡುಪಿ, ಕಾಪು, ಕಾರ್ಕಳ, ಶೃಂಗೇರಿ, ಮೂಡಿಗೆರೆ (ಎಸ್ಸಿ), ಚಿಕ್ಕಮಗಳೂರು, ತರೀಕೆರೆ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

2019ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 7,18,916 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್ ನ ಪ್ರಮೋದ್ ಮಧ್ವರಾಜ್ 3,69,317 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರನ್ನು 1,81,000 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ 5,81,168 ಮತಗಳನ್ನು ಪಡೆದರೆ, ಜಯಪ್ರಕಾಶ್ 3,99,525 ಮತಗಳನ್ನು ಪಡೆದರು.

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮಾಜಿ ಸಚಿವರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರು 2019 ರಿಂದ 2023 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಸದನದ ನಾಯಕರಾಗಿ ಮತ್ತು 2018-19 ರ ಅವಧಿಯಲ್ಲಿ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವರು 2024ಲ್ಲಿ ಕಾಂಗ್ರೆಸ್ ಅಭ್ಯರ್ಥಿ. 1994ರಲ್ಲಿ ಜನತಾದಳದ ಅಭ್ಯರ್ಥಿಯಾಗಿ ಹಾಗೂ 1999 ಮತ್ತು 2004ರಲ್ಲಿ ಸ್ವತಂತ್ರ ಶಾಸಕರಾಗಿ ಬ್ರಹ್ಮಾವರ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕ್ಷೇತ್ರ ಪುನರ್ವಿಂಗಡಣೆಯಿಂದಾಗಿ ಬ್ರಹ್ಮಾವರ ಕ್ಷೇತ್ರ ಅಸ್ತಿತ್ವ ಕಳೆದುಕೊಂಡಾಗ 2008ರ ವಿಧಾನಸಭೆ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು ಅವರು.

ಇದನ್ನೂ ಓದಿ: Dakshina Kannada Lok Sabha Constituency : ದಕ್ಷಿಣ ಕನ್ನಡದಲ್ಲಿ ವಿಜಯ ಅಭಿಯಾನ ಮುಂದುವರಿಸಲು ಬಿಜೆಪಿ ಕಾತರ

2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಪಿ ಸೇರಿದ ನಂತರ ಹೆಗಡೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ನಂತರ ಅವರ ಕಾಂಗ್ರೆಸ್​ ಪಕ್ಷಕ್ಕೆ ಸೇರಿ ಟಿಕೆಟ್​ ಪಡೆದುಕೊಂಡಿದ್ದರು. ಉಡುಪಿ ಚಿಕ್ಕಮಗಳೂರು ತನ್ನ ಗಡಿಯನ್ನು ಇತರ ಐದು ಲೋಕಸಭಾ ಕ್ಷೇತ್ರಗಳೊಂದಿಗೆ ಹಂಚಿಕೊಂಡಿದೆ. ದಾವಣಗೆರೆ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರ ಸುತ್ತಲಿದೆ.

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಜೆಡಿಎಸ್​​ನ ಪ್ರಮೋದ್ ಮಧ್ವರಾಜ್ ಅವರನ್ನು 3,49,599 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.62.43ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್​​ನ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು 1,81,643 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.56.2ರಷ್ಟು ಮತಗಳನ್ನು ಗಳಿಸಿದೆ.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಡಿ.ವಿ.ಸದಾನಂದ ಗೌಡ ಅವರು ಕಾಂಗ್ರೆಸ್​​ನ ಪಕ್ಷದ ಜಯಪ್ರಕಾಶ್ ಹೆಗ್ಡೆ ಅವರನ್ನು 27,018 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.48.06ರಷ್ಟು ಮತಗಳನ್ನು ಪಡೆದಿತ್ತು.

Continue Reading
Advertisement
World Bicycle Day
ಆರೋಗ್ಯ7 mins ago

World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು!

Battery Life Tips
ಗ್ಯಾಜೆಟ್ಸ್8 mins ago

Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

MP Renukacharya
ಕ್ರೈಂ15 mins ago

MP Renukacharya : ಎಂ.ಪಿ ರೇಣುಕಾಚಾರ್ಯ, ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

Nataša Stanković
ಕ್ರೀಡೆ25 mins ago

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Drowns in Lake
ಕರ್ನಾಟಕ34 mins ago

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Vijayanagara SP Shriharibabu drives to blood donation camp in Hosapete
ಆರೋಗ್ಯ34 mins ago

Vijayanagara News: ಹೊಸಪೇಟೆಯಲ್ಲಿ ರಕ್ತದಾನ ಶಿಬಿರಕ್ಕೆ ಎಸ್ಪಿ ಶ್ರೀಹರಿಬಾಬು ಚಾಲನೆ

Mantralaya Sri Subudhendra Theertha Swamiji ashirvachan
ಮೈಸೂರು36 mins ago

Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

Tumkur Lok Sabha Constituency
ಪ್ರಮುಖ ಸುದ್ದಿ50 mins ago

Tumkur Lok Sabha Constituency: ತುಮಕೂರಿನ ಅದೃಷ್ಟ ಪರೀಕ್ಷೆಯಲ್ಲಿ ಗೆಲ್ಲುವರೇ ವಿ. ಸೋಮಣ್ಣ?

Prajwal Revanna Case
ಕರ್ನಾಟಕ1 hour ago

Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

Road Accident
ಶಿವಮೊಗ್ಗ1 hour ago

Road Accident : ಎದುರಿಗೆ ಬಂದ ಬೈಕ್‌ ತಪ್ಪಿಸಲು ಹೋಗಿ ಮಹಿಳೆಗೆ ಗುದ್ದಿದ ಕಾರು; ಎಗರಿ ಬಿದ್ದವಳು ಸ್ಥಳದಲ್ಲೇ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌