IND VS AUS: ಮೂರನೇ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಅವಕಾಶ; ರಾಹುಲ್‌ ಬಗ್ಗೆ ನಾಯಕ ರೋಹಿತ್‌ ಹೇಳಿದ್ದೇನು? - Vistara News

ಕ್ರಿಕೆಟ್

IND VS AUS: ಮೂರನೇ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಅವಕಾಶ; ರಾಹುಲ್‌ ಬಗ್ಗೆ ನಾಯಕ ರೋಹಿತ್‌ ಹೇಳಿದ್ದೇನು?

ಕೆ.ಎಲ್ ರಾಹುಲ್‌ ಅವರನ್ನು ಉಪನಾಯಕನ ಸ್ಥಾನದಿಂದ ವಜಾ ಮಾಡಿರುವುದು ಏನನ್ನೂ ಸೂಚಿಸುವುದಿಲ್ಲ ಎಂದು ನಾಯಕ ರೋಹಿತ್‌ ಶರ್ಮಾ ಹೇಳಿದ್ದಾರೆ.

VISTARANEWS.COM


on

IND VS AUS: Who will get the chance in third match; What did captain Rohit say about Rahul?
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದೋರ್‌: ಈಗಾಗಲೇ ಆಸ್ಟ್ರೇಲಿಯಾ(IND VS AUS) ವಿರುದ್ಧದ 2 ಟೆಸ್ಟ್‌ ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್‌ ಪ್ರದರ್ಶನದಿಂದ ಆಡುವ ಬಳಗದಲ್ಲಿ ಕೆ.ಎಲ್‌. ರಾಹುಲ್‌(KL Rahul) ಅವರ ಸ್ಥಾನ ಅಲುಗಾಡುತ್ತಿದೆ. ಅವರನ್ನು ಉಪನಾಯಕತ್ವದಿಂದಲೂ ಕೆಳಗಿಳಿಸಲಾಗಿದೆ. ಅವರ ಬದಲು ಶುಭಮನ್‌ ಗಿಲ್‌ಗೆ(shubman gill) ಅವಕಾಶ ನೀಡಬೇಕೆಂಬುವುದು ಮಾಜಿ ಆಟಗಾರರ ಒತ್ತಾಯವಾಗಿದೆ.

ಈ ಎಲ್ಲ ಚರ್ಚೆಗಳ ಮಧ್ಯೆ ಟೀಮ್‌ ಇಂಡಿಯಾದ ನಾಯಕ ರೋಹಿತ್‌ ಶರ್ಮಾ(Rohit Sharma) ಅವರು ರಾಹುಲ್‌ ವಿಚಾರವಾಗಿ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಮಂಗಳವಾರ(ಫೆ.28) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್, ಕೆ.ಎಲ್ ರಾಹುಲ್‌ ಅವರನ್ನು ಉಪನಾಯಕನ ಸ್ಥಾನದಿಂದ ವಜಾ ಮಾಡಿರುವುದು ಏನನ್ನೂ ಸೂಚಿಸುವುದಿಲ್ಲ ಎಂದು ಹೇಳಿದ್ದಾರೆ.

ರೋಹಿತ್‌ ಅವರ ಈ ಹೇಳಿಕೆಯಿಂದ ಮೂರನೇ ಪಂದ್ಯದಲ್ಲಿ ರಾಹುಲ್‌ಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ ಅಂತಿಮವಾಗಿ ಯಾರಿಗೆ ಅವಕಾಶ ಸಿಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್‌ ಪಂದ್ಯದ ಪಿಚ್‌ ರಿಪೋರ್ಟ್‌, ಸಂಭಾವ್ಯ ತಂಡ

ಬಿಸಿಸಿಐ ಮೂಲಗಳ ಪ್ರಕಾರ ಮೂರನೇ ಪಂದ್ಯದಲ್ಲಿ ರಾಹುಲ್‌ ಬದಲು ಶುಭ್‌ಮನ್‌ ಗಿಲ್‌ಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಸೋಮವಾರ ಕೆ.ಎಲ್‌. ರಾಹುಲ್‌ ಮತ್ತು ಶುಭಮನ್‌ ಗಿಲ್‌ ಅವರಿಗೆ ಕೋಚ್‌ ರಾಹುಲ್‌ ದ್ರಾವಿಡ್‌ ಜತೆಯಾಗಿ ಕ್ಲಾಸ್‌ ತೆಗೆದುಕೊಂದ್ದರು. ಈ ವೇಳೆಯೂ ರಾಹುಲ್‌ ನಿರೀಕ್ಷಿತ ಪ್ರದರ್ಶನ ತೋರಿಲಲ್‌ ಎಂಬ ಮಾತುಗಳು ಕೇಳಿಬಂದಿವೆ. ಹೀಗಾಗಿ ಇನ್‌ಫಾರ್ಮ್ ಬ್ಯಾಟರ್‌ ಶುಭಮನ್‌ ಗಿಲ್‌ ಅವರಿಗೆ ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ನ್ಯೂಯಾರ್ಕ್‌ ಪಿಚ್‌ನಲ್ಲಿ ಆಡುವುದು ಸುಲಭವಲ್ಲ ಎಂದ ರೋಹಿತ್​

Rohit Sharma: ಅಮೆರಿಕ ವಿರುದ್ಧದ ಗೆಲುವಿನ ಬಳಿಕ ಮಾತನಾಡಿದ ರೋಹಿತ್​, ನಾವು ಮೂರು ಪಂದ್ಯಗಳನ್ನು ಗೆದ್ದಿರಬಹುದು ಆದರೆ ಈ ಪಂದ್ಯ ಗೆಲ್ಲಲು ನಾವು ಪಟ್ಟ ಕಷ್ಟ ನಮ್ಮ ತಂಡದ ಆಟಗಾರರಿಗೆ ಮಾತ್ರ ಗೊತ್ತು. ಇಲ್ಲಿ ಯಾವ ತಂಡ ಗೆಲ್ಲಬಹುದು ಎನ್ನುವುದನ್ನು ಊಹಿಸಲು ಕೂಡ ಅಸಾಧ್ಯ. ನಮ್ಮ ತಂಡದ ಗೆಲುವು ಅಷ್ಟು ಸುಲಭವಾಗಿರಲಿಲ್ಲ” ಎಂದು ಹೇಳಿದರು.

VISTARANEWS.COM


on

Rohit Sharma
Koo

ನ್ಯೂಯಾರ್ಕ್​: ಸತತ ಮೂರು ಗೆಲುವು ಸಾಧಿಸಿ ಸೂಪರ್​-8 ಪ್ರವೇಶ ಪಡೆದಿದ್ದರೂ ಕೂಡ ಟೀಮ್​ ಇಂಡಿಯಾದ(Team India) ನಾಯಕ ರೋಹಿತ್​ ಶರ್ಮ(Rohit Sharma) ಅವರು ನ್ಯೂಯಾರ್ಕ್​ನಲ್ಲಿ ಆಡಿದ್ದು ನಿಜಕ್ಕೂ ಸವಾಲಿನಿಂದ ಕೂಡಿತ್ತು ಎಂದು ಹೇಳಿದ್ದಾರೆ.

ಅಮೆರಿಕ ವಿರುದ್ಧದ ಗೆಲುವಿನ ಬಳಿಕ ಮಾತನಾಡಿದ ರೋಹಿತ್​, ನಾವು ಮೂರು ಪಂದ್ಯಗಳನ್ನು ಗೆದ್ದಿರಬಹುದು ಆದರೆ ಈ ಪಂದ್ಯ ಗೆಲ್ಲಲು ನಾವು ಪಟ್ಟ ಕಷ್ಟ ನಮ್ಮ ತಂಡದ ಆಟಗಾರರಿಗೆ ಮಾತ್ರ ಗೊತ್ತು. ಇಲ್ಲಿ ಯಾವ ತಂಡ ಗೆಲ್ಲಬಹುದು ಎನ್ನುವುದನ್ನು ಊಹಿಸಲು ಕೂಡ ಅಸಾಧ್ಯ. ನಮ್ಮ ತಂಡದ ಗೆಲುವು ಅಷ್ಟು ಸುಲಭವಾಗಿರಲಿಲ್ಲ” ಎಂದು ಹೇಳಿದರು.

ರೋಹಿತ್​ ಅವರು ಈ ಹಿಂದೆಯೇ ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಪಿಚ್​ ಮತ್ತು ಮೈದಾನ ಕ್ರಿಕೆಟ್​ ಆಡಲು ಸೂಕ್ತವಾಗಿಲ್ಲ. ಆಟಗಾರರು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಿದ್ದರು. ಭಾರತ ಸೂಪರ್​-8 ಹಂತದ ಪಂದ್ಯಗಳನ್ನು ಕೂಡ ಇಲ್ಲೇ ಆಡಲಿದೆ. ಇದು ಭಾರತಕ್ಕೆ ದೊಡ್ಡ ಚಿಂತೆಗೀಡು ಮಾಡಿದೆ. ಸೂಪರ್​-8 ಹಂತದಲ್ಲಿ ಬಲಿಷ್ಠ ತಂಡಗಳ ಸವಾಲು ಎದುರಾಗಲಿದೆ.

ಇದನ್ನೂ ಓದಿ Rajal Arora: ಟೀಮ್​ ಇಂಡಿಯಾ ಜತೆಗಿರುವ ಏಕೈಕ ಮಹಿಳಾ ಸಿಬ್ಬಂದಿ ಯಾರು? ಇವರ ಕೆಲಸವೇನು?

ನ್ಯೂಯಾರ್ಕ್‌ ಪಿಚ್‌ ವಿರುದ್ಧ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಐಸಿಸಿಗೆ ಅನಧಿಕೃತ ದೂರು ಕೂಡ ನೀಡಿದೆ. ಅಪಾಯಕಾರಿ ಪಿಚ್‌ನಲ್ಲಿ ರೋಹಿತ್​ ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದರು. ಇದು ಮಾತ್ರವದಲ್ಲದೆ ಹಲವು ಆಟಗಾರರ ಬ್ಯಾಟ್​ ಕೂಡ ಮುರಿದಿತ್ತು. ಚೆಂಡು ಯಾವ ರೀತಿ ಪುಡಿದೇಳುತ್ತದೆ ಎನ್ನುವುದನ್ನು ಬ್ಯಾಟರ್​ಗಳಿಗೆ ಊಹಿಸಲು ಸಾಧ್ಯವಾಗುತ್ತಿಲ್ಲ. ಇದುವರೆಗೂ ಇಲ್ಲಿ ನಡೆದ ಪಂದ್ಯಗಳಲ್ಲಿ ಕನಿಷ್ಠ 120ರ ಗಡಿ ಕೂಡ ದಾಟಿಲ್ಲ.

ಅಡಿಲೇಡ್‌ ಓವಲ್‌ ನ ಗ್ರೌಂಡ್ಸ್‌ಮ್ಯಾನ್‌ ಡೇಮಿಯನ್‌ ಹ್ಯೂಗ್‌ ಅವರ ಉಸ್ತುವಾರಿಯಲ್ಲಿ ಇಲ್ಲಿನ ಟ್ರ್ಯಾಕ್‌ ನಿರ್ಮಾಣಗೊಂಡರೂ ಇದು ನಿರೀಕ್ಷಿತ ಯಶಸ್ಸು ಕಂಡಿಲ್ಲ. ಅನಿರೀಕ್ಷಿತ ಬೌನ್ಸ್‌ ಬ್ಯಾಟರ್‌ಗಳ ಪಾಲಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಸೂಪರ್​-8ಗೆ ಲಗ್ಗೆಯಿಟ್ಟ ಭಾರತ


ಅಮೆರಿಕ(IND vs USA) ವಿರುದ್ಧ ಭಾರತ 7 ವಿಕೆಟ್​ಗಳ ಗೆಲುವು ಸಾಧಿಸುವ ‘ಎ’ ವಿಭಾಗದಿಂದ ಮೊದಲ ತಂಡವಾಗಿ ಸೂಪರ್​-8 ಪ್ರವೇಶ ಪಡೆದಿದೆ. ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಮೆರಿಕ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 110 ರನ್​ ಬಾರಿಸಿತು. ಜವಾಬಿತ್ತ ಭಾರತ ಈ ಸಣ್ಣ ಮೊತ್ತವನ್ನು 18.2 ಓವರ್​ ಎದುರಿಸಿ 3 ವಿಕೆಟ್​ ಕಳೆದುಕೊಂಡು 111 ರನ್​ ಬಾರಿಸಿ ಗೆಲುವಿನ ದಡ ಸೇರಿತು.

Continue Reading

ಕ್ರೀಡೆ

Rajal Arora: ಟೀಮ್​ ಇಂಡಿಯಾ ಜತೆಗಿರುವ ಏಕೈಕ ಮಹಿಳಾ ಸಿಬ್ಬಂದಿ ಯಾರು? ಇವರ ಕೆಲಸವೇನು?

Rajal Arora: ಕೆಎಲ್ ರಾಹುಲ್ ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅವರೊಂದಿಗೆ ರಾಜಲ್​ ಅರೋರಾ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಇವರಿಬ್ಬರೂ ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜತೆಯಾಗಿ ಕಾಣಿಸಿಕೊಳ್ಳುತ್ತಾರೆ. ಇಶಾಂತ್ ಶರ್ಮಾ ಪತ್ನಿ ಜತೆಗೂ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ.

VISTARANEWS.COM


on

Rajal Arora
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾ ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ಹ್ಯಾಟ್ರಿಕ್​ ಗೆಲುವು ಸಾಧಿಸಿ ಈಗಾಗಲೇ ಸೂಪರ್​-8 ಹಂತಕ್ಕೇರಿದೆ. ಆದರೆ, ಟೀಮ್​ ಇಂಡಿಯಾ(Team India) ಕೋಚಿಂಗ್​ ಸಿಬ್ಬಂದಿಗಳ ಜತೆ ಮಹಿಳಾ ಅಧಿಕಾರಿಯೊಬ್ಬರು ಕೂಡ ಕಾಣಿಸಿಕೊಂಡಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿ. ಈಕೆ ಯಾರು? ಇವರಿಗೆ ಟೀಮ್​ ಇಂಡಿಯಾದಲ್ಲಿ ಏನು ಕೆಲಸ? ಎನ್ನುವ ವಿಚಾರ ತಿಳಿದುಕೊಳ್ಳಲು ತಿಳಿದುಕೊಳ್ಳವ ತವಕದಲ್ಲಿದ್ದಾರೆ.


ಹೌದು, ಇವರ ಹೆಸರು ರಾಜಲ್​ ಅರೋರಾ. ಈಕೆ ಭಾರತೀಯ ಕ್ರಿಕೆಟ್ ತಂಡದ ಸಾಮಾಜಿಕ ಮಾಧ್ಯಮ ತಂಡದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪುಣೆಯ ಸಿಂಬಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಮೀಡಿಯಾ ಅಂಡ್ ಕಮ್ಯುನಿಕೇಷನ್ಸ್‌ನಿಂದ ಪದವಿಯನ್ನು ಪೂರ್ಣಗೊಳಿಸಿ. ಕಂಟೆಂಟ್ ರೈಟರ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಅರೋರಾ, 2015ರಲ್ಲಿ ಬಿಸಿಸಿಐಗೆ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರಾಗಿ ಸೇರಿಕೊಂಡರು. ಅಂದಿನಿಂದ ಇಂದಿನವರೆಗೆ ಭಾರತ ತಂಡ ಎಲ್ಲೇ ಸರಣಿ ಆಡಲು ಪ್ರವಾಸ ಕೈಗೊಂಡಾಗ ತಂಡದ ಜತೆ ಪ್ರಮಾಣಿಸುತ್ತಾರೆ. ಆಟಗಾರರು ಅಭ್ಯಾಸ ನಡೆಸುವ ಸುದ್ದಿಗೋಷ್ಠಿ ಸೇರಿದಂತೆ ಹಲವು ಕಾರ್ಯಕ್ರಮದ ಫೋಟೊಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.


ಭಾರತ ತಂಡದ ಸೋಷಿಯಲ್ ಮೀಡಿಯಾ ಮಾತ್ರವಲ್ಲದೆ ಬಿಸಿಸಿಐನ ಆಂತರಿಕ ದೂರು ಸಮಿತಿಯ ಮುಖ್ಯಸ್ಥರಾಗಿಯೂ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಆಟಗಾರರ ದುರ್ವರ್ತನೆಯ ವಿರುದ್ಧದ ದೂರುಗಳನ್ನು ಅವರು ಮೇಲ್ವಿಚಾರಣೆ ಮಾಡುತ್ತಾರೆ.


ಅರೋರಾ ಅವರು 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಿಂದ ಭಾರತೀಯ ತಂಡದ ಸಹಾಯಕ ಸಿಬ್ಬಂದಿಯ ಭಾಗವಾಗಿದ್ದಾರೆ. ಪ್ರತಿ ಸರಣಿಗೂ ಮುನ್ನ ಆಟಗಾರರು ಮತ್ತು ಮಾಧ್ಯಮಗಳೊಂದಿಗೆ ಸಂವಾದ ನಡೆಸಲು ಸೂಕ್ತ ವ್ಯವಸ್ಥೆ ಮಾಡುವಲ್ಲಿ ಅರೋರಾ ಪ್ರಮುಖ ಪಾತ್ರ ವಹಿಸುತ್ತಾರೆ. ತಂಡದ ಸದಸ್ಯರಿಗೆ ಅಗತ್ಯವಿರುವಂತೆ ಸಹಾಯ ಮಾಡುವಲ್ಲಿ ಸಹಾಯಕ ಸಿಬ್ಬಂದಿ ಪ್ರಮುಖ ಪಾತ್ರ ವಹಿಸುತ್ತಾರೆ. ಐಪಿಎಲ್​ನಲ್ಲಿಯೂ ಇವರು ಬಿಸಿಸಿಐ ಪರ ಕಾರ್ಯನಿರ್ವಹಿಸುತ್ತಾರೆ.

ಇದನ್ನೂ ಓದಿ IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​


ಕೆಎಲ್ ರಾಹುಲ್ ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಅವರೊಂದಿಗೆ ರಾಜಲ್​ ಅರೋರಾ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಇವರಿಬ್ಬರೂ ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ಜತೆಯಾಗಿ ಕಾಣಿಸಿಕೊಳ್ಳುತ್ತಾರೆ. ಇಶಾಂತ್ ಶರ್ಮಾ ಪತ್ನಿ ಜತೆಗೂ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ.


ಸೂಪರ್​-8ಗೆ ಲಗ್ಗೆಯಿಟ್ಟ ಭಾರತ


ಅಮೆರಿಕ(IND vs USA) ವಿರುದ್ಧ ಭಾರತ 7 ವಿಕೆಟ್​ಗಳ ಗೆಲುವು ಸಾಧಿಸುವ ‘ಎ’ ವಿಭಾಗದಿಂದ ಮೊದಲ ತಂಡವಾಗಿ ಸೂಪರ್​-8 ಪ್ರವೇಶ ಪಡೆದಿದೆ. ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಮೆರಿಕ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 110 ರನ್​ ಬಾರಿಸಿತು. ಜವಾಬಿತ್ತ ಭಾರತ ಈ ಸಣ್ಣ ಮೊತ್ತವನ್ನು 18.2 ಓವರ್​ ಎದುರಿಸಿ 3 ವಿಕೆಟ್​ ಕಳೆದುಕೊಂಡು 111 ರನ್​ ಬಾರಿಸಿ ಗೆಲುವಿನ ದಡ ಸೇರಿತು.

Continue Reading

ಕ್ರೀಡೆ

IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​

IND vs USA: 2012ರಿಂದ ಟಿ20 ವಿಶ್ವಕಪ್​ ಆಡಲು ಆರಂಭಿಸಿದ ವಿರಾಟ್​ ಒಮ್ಮೆಯೂ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿರಲಿಲ್ಲ. ಕನಿಷ್ಠ ಒಂದು ರನ್​ ಆದರೂ ಗಳಿಸಿದ್ದರು.

VISTARANEWS.COM


on

IND vs USA
Koo

ನ್ಯೂಯಾರ್ಕ್​: ಅಮೆರಿಕ(IND vs USA) ವಿರುದ್ಧದ ಪಂದ್ಯದಲ್ಲಿ ವಿರಾಟ್​ ಕೊಹ್ಲಿ(Virat Kohli) ಅವರು ಶೂನ್ಯಕ್ಕೆ ವಿಕೆಟ್​ ಕಳೆದುಕೊಂಡಿದ್ದನ್ನು ನೋಡಿ ನಾನ್​ ಸ್ಟ್ರೈಕ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma) ಒಂದು ಕ್ಷಣ ದಂಗಾದರು. ಈ ವಿಡಿಯೊ ವೈರಲ್​ ಆಗಿದೆ. ಭಾರತೀಯ ಮೂಲದ, ಅಂಡರ್​-19 ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾ ಪರ ಆಡಿದ್ದ ಎಡಗೈ ವೇಗಿ ಸೌರಭ್ ನೇತ್ರವಲ್ಕರ್ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಕೊಹ್ಲಿ ವಿಕೆಟ್​ ಪತನಗೊಂಡಿತು. ಕಳೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿಯೂ ನೇತ್ರವಲ್ಕರ್ ತಾವೆಸೆದ ಮೊದಲ ಎಸೆತದಲ್ಲೇ ಮೊಹಮ್ಮದ್​ ರಿಜ್ವಾನ್​ ವಿಕೆಟ್​ ಕಿತ್ತಿದ್ದರು. 2 ವಿಕೆಟ್​ ಪತನದ ವಿಡಿಯೊವನ್ನು ಕೊಲಾಜ್​ ಮಾಡಿ ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ.

ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಗೋಲ್ಡನ್​ ಡಕ್(Virat Kohli Golden Duck)​ ಆಗುವ ಮೂಲಕ ಇದೇ ಮೊದಲ ಬಾರಿಗೆ ಟಿ20 ವಿಶ್ವಕಪ್​ನಲ್ಲಿ ಗೋಲ್ಡನ್​ ಡಕ್​ ಆಗ ಅವಮಾನಕ್ಕೆ ಸಿಲುಕಿದರು. 2012ರಿಂದ ಟಿ20 ವಿಶ್ವಕಪ್​ ಆಡಲು ಆರಂಭಿಸಿದ ವಿರಾಟ್​ ಒಮ್ಮೆಯೂ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿರಲಿಲ್ಲ. ಕನಿಷ್ಠ ಒಂದು ರನ್​ ಆದರೂ ಗಳಿಸಿದ್ದರು. ಕೊಹ್ಲಿ ಒಟ್ಟು 28 ಟಿ20 ವಿಶ್ವಕಪ್​ ಇನಿಂಗ್ಸ್​ ಆಡಿ 1146 ರನ್​ ಬಾರಿಸಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. 1, 4,0 ಇದು ಕೊಹ್ಲಿಯ ಈ ಬಾರಿಯ ಸ್ಕೋರ್​ ಆಗಿದೆ.

ಇದನ್ನೂ ಓದಿ IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

Continue Reading

ಕ್ರೀಡೆ

IND vs USA: ಬೆಸ್ಟ್​ ಫೀಲ್ಡಿಂಗ್​ಗೆ 2ನೇ ಚಿನ್ನದ ಪದಕ ಗೆದ್ದ ಮೊಹಮ್ಮದ್ ಸಿರಾಜ್

IND vs USA: ಯುವರಾಜ್​ ಸಿಂಗ್​(Yuvraj Singh) ಅವರು ವಿಶೇಷ ಅತಿಥಿಯಾಗಿ ಡ್ರೆಸ್ಸಿಂಗ್ ರೂಮ್​ಗೆ ಬಂದು ಸಿರಾಜ್​ಗೆ ಅತ್ಯುತ್ತಮ ಫೀಲ್ಡರ್ ಚಿನ್ನದ ಪದಕ ನೀಡಿ ಗೌರವಿಸಿದರು.

VISTARANEWS.COM


on

IND vs USA
Koo

ನ್ಯೂಯಾರ್ಕ್​: ಅಮೆರಿಕ(IND vs USA) ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ಫೀಲ್ಡರ್​ ಪ್ರಶಸ್ತಿಯನ್ನು ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(Mohammed Siraj)​ ಪಡೆದುಕೊಂಡಿದ್ದಾರೆ. ಸಿರಾಜ್​ಗೆ ಒಲಿದ 2ನೇ ಚಿನ್ನದ ಪದಕ ಇದಾಗಿದೆ. ಇದಕ್ಕೂ ಮುನ್ನ ಐರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಸಿರಾಜ್ ಈ​ ಪ್ರಶಸ್ತಿ ಗೆದ್ದಿದ್ದರು. ನಿನ್ನೆಯ ಪಂದ್ಯದಲ್ಲಿ ಸಿರಾಜ್​ ಅವರು 2 ಕ್ಯಾಚ್​ ಮತ್ತು ಒಂದು ರನೌಟ್​ ಮಾಡಿ ಗಮನಸೆಳೆದಿದ್ದರು. ಯುವರಾಜ್​ ಸಿಂಗ್​(Yuvraj Singh) ಅವರು ವಿಶೇಷ ಅತಿಥಿಯಾಗಿ ಡ್ರೆಸ್ಸಿಂಗ್ ರೂಮ್​ಗೆ ಬಂದು ಈ ಪ್ರಶಸ್ತಿ ಪ್ರದಾನ ಮಾಡಿದರು.

ಎನ್​ ಆರ್​ ಕುಮಾರ್​ ಅವರ ಕ್ಯಾಚೊಂದನ್ನು ಸಿರಾಜ್​ ಬೌಂಡರಿ ಲೈನ್​ನಲ್ಲಿ ಅತ್ಯದ್ಭುತ ರೀತಿಯಲ್ಲಿ ಹಾರಿ ಹಿಡಿದರು. ಕಳೆದ ವರ್ಷ ನಡೆದಿದ್ದ ಏಕದಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್​ ಇಂಡಿಯಾ ಮ್ಯಾನೆಜ್​ಮೆಂಟ್​ ಆಟಗಾರರಲ್ಲಿ ಹೆಚ್ಚಿನ ಸ್ಫೂರ್ತಿ ತುಂಬವ ನಿಟ್ಟಿನಲ್ಲಿ, ಪಂದ್ಯವೊಂದರಲ್ಲಿ ಉತ್ತಮ ಫೀಲ್ಡಿಂಗ್(Best Fielder Award) ನಡೆಸಿದರೆ ಆತನನ್ನು ಗುರುತಿಸಿ ಚಿನ್ನದ ಪದಕ ನೀಡುವ ಕಾರ್ಯವನ್ನು ಜಾರಿಗೆ ತಂದಿತ್ತು. ಈ ಪ್ರಕ್ರಿಯೆ ಟಿ20 ವಿಶ್ವಕಪ್​ನಲ್ಲಿಯೂ ಮುಂದುವರಿದೆ.

ಸೂಪರ್​-8ಗೆ ಲಗ್ಗೆಯಿಟ್ಟ ಭಾರತ


ಅಮೆರಿಕ(IND vs USA) ವಿರುದ್ಧ ಭಾರತ 7 ವಿಕೆಟ್​ಗಳ ಗೆಲುವು ಸಾಧಿಸುವ ‘ಎ’ ವಿಭಾಗದಿಂದ ಮೊದಲ ತಂಡವಾಗಿ ಸೂಪರ್​-8 ಪ್ರವೇಶ ಪಡೆದಿದೆ. ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಮೆರಿಕ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 110 ರನ್​ ಬಾರಿಸಿತು. ಜವಾಬಿತ್ತ ಭಾರತ ಈ ಸಣ್ಣ ಮೊತ್ತವನ್ನು 18.2 ಓವರ್​ ಎದುರಿಸಿ 3 ವಿಕೆಟ್​ ಕಳೆದುಕೊಂಡು 111 ರನ್​ ಬಾರಿಸಿ ಗೆಲುವಿನ ದಡ ಸೇರಿತು.

ಇದನ್ನೂ ಓದಿ IND vs USA: ಭಾರತಕ್ಕೆ 5​ ಪೆನಾಲ್ಟಿ ರನ್ ಲಭಿಸಿದ್ದು ಹೇಗೆ?

ಎಡಗೈ ವೇಗಿ ಅರ್ಶ​ದೀಪ್​ ಸಿಂಗ್​ ಈ ಪಂದ್ಯದಲ್ಲಿ 4 ಓವರ್​ ಎಸೆದು ಕೇವಲ 9 ರನ್​ಗೆ 4 ವಿಕೆಟ್​ ಕಿತ್ತು ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಜತೆಗೆ ಟಿ20 ವಿಶ್ವಕಪ್​ನಲ್ಲಿ ಭಾರತ ಪರ ಶ್ರೇಷ್ಠ ಬೌಲಿಂಗ್​ ನಡೆಸಿದ ಆಟಗಾರ ಎನ್ನುವ ಹಿರಿಮೆಗೂ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಅಶ್ವಿನ್​ ಹೆಸರಿನಲ್ಲಿತ್ತು. ಅಶ್ವಿನ್​ ಅವರು 2014ರ ಟೂರ್ನಿಯಲ್ಲಿ 11ರನ್​ಗೆ 4 ವಿಕೆಟ್​ ಕೆಡವಿದ್ದರು.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸಲು ವಿಫಲವಾಗಿದ್ದ ಸೂರ್ಯಕುಮಾರ್​ ಮತ್ತು ದುಬೆ ಈ ಪಂದ್ಯದಲ್ಲಿ ಉತ್ತಮ ಜತೆಯಾಟ ನಡೆಸುವ ಮೂಲಕ ಗಮನಸೆಳೆದರು. ಗೆಲುವಿಗೆ 20 ರನ್​ ಬೇಕಿದ್ದಾಗ ಸೂರ್ಯಕುಮಾರ್​ ತಮ್ಮ ಎಂದಿನ ಶೈಲಿಯಾದ ಸ್ಫೋಟಕ ಬ್ಯಾಟಿಂಗ್​ಗೆ ಒಗ್ಗಿಕೊಂಡರು. ಸತತ ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ ನೆರದಿದ್ದ ಪ್ರೇಕ್ಷರಕರಿಗೆ ಕೊನೆಯ ಕ್ಷಣದಲ್ಲಿ ಮನರಂಜನೆ ನೀಡಿದರು. ಜತೆಗೆ ಅರ್ಧಶತಕ ಬಾರಿಸಿ ಮಿಂಚಿದರು. ದುಬೆ ಮತ್ತು ಸೂರ್ಯ ಜೋಡಿ 4 ವಿಕೆಟ್​ಗೆ ಅಜೇಯ 72 ರನ್​ ಒಟ್ಟುಗೂಡಿಸಿತು. ಸೂರ್ಯಕುಮಾರ್​ 49 ಎಸೆತ ಎದುರಿಸಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ ಭರ್ತಿ 50 ರನ್​ ಗಳಿಸಿದರೆ, ದುಬೆ 35 ಎಸೆತಗಳಿಂದ 31 ರನ್​ ಬಾರಿಸಿದರು.

Continue Reading
Advertisement
Narendra Modi
ಪ್ರಮುಖ ಸುದ್ದಿ4 mins ago

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

karnataka weather Forecast
ಮಳೆ23 mins ago

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Amith Shah
ಪ್ರಮುಖ ಸುದ್ದಿ31 mins ago

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Leg Cramps At Night
ಆರೋಗ್ಯ53 mins ago

Leg Cramps At Night: ರಾತ್ರಿ ಮಲಗಿದಾಗ ಕಾಡುವ ಕಾಲುನೋವಿಗೆ ಇದೆ ಪರಿಹಾರ!

Dina Bhavishya
ಭವಿಷ್ಯ2 hours ago

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Jammu Kashmir
ದೇಶ7 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ7 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ7 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ8 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ9 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌