ಧವಳ ಧಾರಿಣಿ ಅಂಕಣ: ಸುವರ್ಚಲೆ: ಮದುವೆ ಎನ್ನುವುದು ಕನ್ಯೆಯದೇ ಆಯ್ಕೆ - Vistara News

ಅಂಕಣ

ಧವಳ ಧಾರಿಣಿ ಅಂಕಣ: ಸುವರ್ಚಲೆ: ಮದುವೆ ಎನ್ನುವುದು ಕನ್ಯೆಯದೇ ಆಯ್ಕೆ

ಭಾರತೀಯ ಸನಾತನ ಲೋಕವನ್ನು (Ancient India) ಪ್ರವೇಶಿಸಿದಾಗ ಸ್ತ್ರೀಯರ ಸ್ಥಾನಮಾನದ ಕುರಿತು ಅಚ್ಚರಿಯ ವಿಷಯಗಳು ಬೆಳಕಿಗೆ ಬರುತ್ತವೆ. ಹಾಗೆ ಸ್ತ್ರೀಯರ ವೈವಾಹಿಕ ಹಕ್ಕನ್ನು ಪ್ರತಿಪಾದಿಸಿದ, ಬ್ರಹ್ಮವಾದಿನಿಯಾದ ಸುವರ್ಚಲೆ ಎಂಬಾಕೆಯ ಕಥೆ ಕುತೂಹಲಕಾರಿಯಾಗಿದೆ.

VISTARANEWS.COM


on

suvarchala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೃದಯಕ್ಕೆ ಪ್ರಿಯನಾಗಿರುವ ರೂಪ ಗುಣ ಸ್ವಭಾವಗಳ ಅನುರೂಪತೆಯೇ ಸ್ವಯಂವರ

dhavala dharini
ಕದಾಚನ ಸ್ತರೀರಸಿ ನೇಂದ್ರ ಸಶ್ಚಸಿ ದಾಶುಷೇ
ಉಪೋಪೇನ್ನು ಮಘವನ್ ಭೂಯsಇನ್ನು ತೇ ದೇವಸ್ಯ ಪೃಚ್ಛತs ಆದಿತ್ಯೇಭ್ಯಸ್ತ್ವಾ II ಯ 8-2

(ವಿವಾಹ ಕಾಮನೆಯಿಂದ ಕೂಡಿದ ಯುವತಿಯಾದ ಸ್ತ್ರೀಯು ಛಲ, ಕಪಟಗಳ ಆಚರಣೆಯಿಲ್ಲದವನೂ, ಸತ್ಯಭಾವ ಪ್ರಕಾಶನೂ ಏಕಸ್ತ್ರೀವ್ರತನೂ ಜಿತೇಂದ್ರಿಯನೂ ಉದ್ಯೋಗಶೀಲನೂ ಧಾರ್ಮಿಕನೂ ದಾನಶೀಲನೂ ವಿದ್ವಾಂಸನೂ ಆದ ಪುರುಷನನ್ನು ವಿವಾಹ ಮಾಡಿಕೊಂಡು ಸದಾ ಸಂತೋಷವನ್ನು ಹೊಂದಬೇಕು.)

ಭಾರತೀಯ ಸನಾತನ ಲೋಕವನ್ನು (Ancient India) ಪ್ರವೇಶಿಸಿದಾಗ ಸ್ತ್ರೀಯರ ಸ್ಥಾನಮಾನದ ಕುರಿತು ಅಚ್ಚರಿಯ ವಿಷಯಗಳು ಬೆಳಕಿಗೆ ಬರುತ್ತವೆ. ಲೋಪಾಮುದ್ರಾ, ಘೋಶಾ, ವಿಶ್ವವರಾದೇವಿ, ಗಾರ್ಗಿ, ಸುಲಭಾ ಹೀಗೆ ಹಲವು ಹೆಸರುಗಳನ್ನು ಇಲ್ಲಿ ಹೇಳಬಹುದಾಗಿದೆ. ಇವೆಲ್ಲಕ್ಕಿಂತ ಮುಖ್ಯವಾಗಿ ಈ ಸ್ತ್ರೀಯರು ಪ್ರತಿಪಾದಿಸುತ್ತಿದ್ದ ವಿಷಯಗಳು ಪುರುಷರಿಗಿಂತಲೂ ಕಡಿಮೆಯೇನೂ ಇರುತ್ತಿರಲಿಲ್ಲ. ಪ್ರಜೋತ್ಪತ್ತಿಯೇ ಮುಖ್ಯವಾಗಿದ್ದ ಆ ಕಾಲದಲ್ಲಿ ಸ್ತ್ರೀಗೆ ಮುಕ್ತವಾದ ಸ್ವಾತಂತ್ರ್ಯವೂ ಇತ್ತು. ಅದರಲ್ಲಿಯೂ ಮದುವೆಯ ವಿಷಯದಲ್ಲಿ ತನ್ನ ಸಂಗಾತಿಯನ್ನು ತಾನೇ ಆರಿಸಿಕೊಳ್ಳುವ ಸ್ವಾತಂತ್ರ್ಯ ಆಕೆಗಿತ್ತು.

ಸ್ವಯಂವರ ಎನ್ನುವ ವಿಷಯವನ್ನು ಕ್ಷತ್ರಿಯ ರಾಜಮನೆತನದಲ್ಲಿ ಅನೇಕ ಸಲ ಕೇಳಿದ್ದೇವೆ. ಕ್ಷತ್ರಿಯರಲ್ಲಿ ಸ್ವಯಂವರ ಪದ್ಧತಿ ಇದ್ದಿದ್ದು ನಿಜವಾದರೂ ಅದು ಹೆಚ್ಚಾಗಿ ರಾಜಕೀಯ ಕಾರಣಗಳಿಗಾಗಿರುತ್ತಿತ್ತು. ಈ ಪದ್ಧತಿಯಲ್ಲಿ ತನ್ನ ಅಳಿಯ ಹೇಗಿರಬೇಕೆನ್ನುವುದನ್ನು ವಧುವಿನ ತಂದೆ ನಿರ್ಧರಿಸುತ್ತಿದ್ದ. ಆದರೆ ಬ್ರಹ್ಮವಾದಿನಿಯ ಲೋಕದಲ್ಲಿ ಹಾಗಿರಲಿಲ್ಲ. ಆ ಕಾಲದಲ್ಲಿ ಬಾಲ್ಯವಿವಾಹಗಳಿರುತ್ತಿರಲಿಲ್ಲ. ಕನ್ಯೆ ಪ್ರಬುದ್ಧಾವಸ್ಥೆಗೆ ಬಂದ ಮೇಲೆ ಆಕೆಯ ನಿರ್ಣಯದ ಮೇಲೆ ಯೋಗ್ಯ ವರನನ್ನು ಹುಡುಕಲಾಗುತ್ತಿತ್ತು. ಬ್ರಾಹ್ಮ್ಯ ವಿವಾಹ ಪದ್ಧತಿಯಲ್ಲಿ ವಧುವನ್ನು ಪತಿ ತನ್ನ ಅಧೀನಳು ಎಂದು ತಿಳಿಯುವುದಿಲ್ಲ; ಆಕೆಯನ್ನು ಮಿತ್ರಳು ಎಂದು ಸ್ವೀಕರಿಸುತ್ತಾನೆ. ಇಂಥ ಒಂದು ಮದುವೆಯ ವಿಷಯ ಬಂದಾಗ ಸುವರ್ಚಲೆ ಎನ್ನುವ ಬ್ರಹ್ಮವಾದಿನಿಯ ಹೆಸರು ಬರುತ್ತದೆ.

ಈಕೆ ಅಸಿತ ದೇವಲ ಎನ್ನುವ ಋಷಿಯ ಮಗಳು. ಅಸಿತ ದೇವಲ ಓರ್ವ ಅಪ್ರತಿಮ ಸಾಧಕ. ನಾರದನೇ ಈತನಲ್ಲಿ ಪ್ರಪಂಚದಲ್ಲಿ ಜೀವಗಳ ಸೃಷ್ಟಿ ಹೇಗಾಯಿತೆಂದು ಕೇಳಿ ಅರಿತುಕೊಂಡಿದ್ದ. ಈತ ಸದಾಕಾಲವೂ ಹೊಸತನ್ನು ಅರಸುವತ್ತ ನಿರತನಾಗಿದ್ದ. ಅಧ್ಯಯನದಲ್ಲಿ ಮಗ್ನನಾಗಿದ್ದ ಈತ ಮದುವೆಯಾಗುವುದನ್ನೇ ಮರೆತುಬಿಟ್ಟಿದ್ದ. ಈತ ಒಮ್ಮೆ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿರುವಾಗ ಮರದ ಕೊಂಬೆಯ ಮೇಲೆ ಪಿತೃಗಳು ತಲೆ ಕೆಳಗಾಗಿ ನೇತಾಡುತ್ತಿರುವುದನ್ನು ನೋಡಿದ. ಯಾಕೆ ಎಂದು ಕೇಳಿದಾಗ, ತಾವೆಲ್ಲ ಆತನ ಪಿತೃಗಳು, ದೇವಲ ಇನ್ನೂ ಮದುವೆಯಾಗದೇ ಇರುವುದರಿಂದ ತಮಗೆಲ್ಲರಿಗೂ ಈ ಸ್ಥಿತಿ ಬಂದಿದೆ. ಎಷ್ಟು ತಪಸ್ಸನ್ನಾಚರಿಸಿದರೂ ಪಿತೃಋಣ ತೀರಿದ ಹೊರತೂ ಅದು ಸಿದ್ಧಿಸುವುದಿಲ್ಲ ಎಂದು ಹೇಳಿದರು. ಆಗ ದೇವಲನಿಗೆ ತನ್ನ ತಪ್ಪಿನ ಅರಿವಾಯಿತು.

ಚಿರಂಜೀವಿತ್ವ ಎಂದರೆ ತಾನೇ ತನ್ನ ಹೆಂಡತಿಯನ್ನು ಸೇರಿ ಮಗನಾಗಿ ಹುಟ್ಟುವುದು, ಈ ಕಾರಣಕ್ಕಾಗಿ ಹಂಡತಿಯನ್ನು ಜಾಯಾ ಎಂದು ಕರೆಯುತ್ತಾರೆ. ಸರಿ, ಮದುವೆಯಾಗುತ್ತೇನೆ ಎಂದು ಆತ ಕೌಂಡಿನ್ಯ ಋಷಿಯ ಮಗಳನ್ನು ಲಗ್ನವಾಗಿ ಅವಳಿಂದ ಸುವರ್ಚಲೆ ಎನ್ನುವ ಮಗಳನ್ನು ಪಡೆದ. ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಗಂಡು ಮಗುವಾದರೆ ಮಾತ್ರವೇ ಪಿತೃಗಳಿಗೆ ಸದ್ಗತಿ ದೊರೆಯುತ್ತವೆ ಎನ್ನುವುದನ್ನು ಉಪನಿಷತ್ತು ಒಪ್ಪುವುದಿಲ್ಲ. ಮೊದಲ ಮಗು ಅದು ಗಂಡಾಗಲೀ, ಹೆಣ್ಣಾಗಲಿ, ಅವರೆಲ್ಲರೂ ಧರ್ಮಜರು. ಹಾಗಾಗಿ ಸುವರ್ಚಲೆ ಜನಿಸಿದ ತಕ್ಷಣದಲ್ಲಿ ದೇವಲನಿಗೆ ಪಿತೃಋಣವನ್ನು ತೀರಿಸಿದಂತಾಯಿತು.

ಸುವರ್ಚಲೆಯಾದರೋ ಬಲು ಚೂಟಿ. ಆಕೆ ತನ್ನ ತಂದೆಯಲ್ಲಿಯೇ ವಿದ್ಯಾಭ್ಯಾಸವನ್ನು ಕಲಿತು ಸಂಪೂರ್ಣ ಜ್ಞಾನಿ ಎನಿಸಿಕೊಂಡಿದ್ದಳು. ಸುವರ್ಚಲೆ ಎಂದರೆ ಸೂರ್ಯನ ಕಿರಣದಂತೆ ವರ್ಚಸ್ಸುಳ್ಳವಳು ಎಂದು ಅರ್ಥ. ಅದಕ್ಕೆ ತಕ್ಕಂತೆ ಆಕೆ ವೇದ ವೇದಾಂಗ ಮತ್ತು ಸಕಲ ಶಾಸ್ತ್ರಗಳಲ್ಲಿಯೂ ಪಾರಂಗತಳಾಗಿದ್ದಳು. ಆಶ್ರಮದಲ್ಲಿ ದೇವಲರ ಶಿಷ್ಯರಿಗೆ ತಾನೇ ಪಾಠಪ್ರವಚನ ಮಾಡುವಷ್ಟು ಪರಿಣಿತಳಾಗಿದ್ದಳು. ಜಿಜ್ಞಾಸೆ ಮತ್ತು ಶಾಸ್ತ್ರಾರ್ಥಕ್ಕಾಗಿ ದೇವಲರನ್ನು ಹುಡುಕಿಕೊಂಡು ಬರುವ ಅನೇಕ ಋಷಿಮುನಿಗಳಲ್ಲಿ ಆಕೆ ಸಂವಾದವನ್ನು ನಡೆಸುತ್ತಿದ್ದಳು. ಸಣ್ಣಪ್ರಾಯದಲ್ಲಿಯೇ ಅನೂಚಾಮನಳಾಗಿದ್ದಾಳೆ (ವೇದಗಳನ್ನು ಸಂಪೂರ್ಣವಾಗಿ ತಿಳಿದಿದ್ದಾಳೆ) ಎಂದು ಎಲ್ಲಾ ಕಡೆಯೂ ಅವಳ ಕೀರ್ತಿ ಹಬ್ಬಿತ್ತು. ಎಲ್ಲ ತಂದೆತಾಯಿಯರಂತೆ ದೇವಲ ಋಷಿದಂಪತಿಗಳಿಗೂ ಆಕೆ ಪ್ರಾಯ ಪ್ರಬುದ್ಧಳಾದಾಗ ಮದುವೆ ಮಾಡಬೇಕೆನ್ನುವ ಸಹಜವಾದ ಬಯಕೆ ಉಂಟಾಯಿತು. ಈಕೆಗೆ ಯೋಗ್ಯನಾದ ವರ ಯಾರಾಗಬಹುದೆನ್ನುವ ಚಿಂತೆಯೂ ಕಾಡಿತು.

ಅವರು ತಮ್ಮ ಮಗಳನ್ನು ಕರೆದು “ಮಗಳೆ, ನಿನಗೆ ಮದುವೆ ಮಾಡಬೇಕೆಂದಿರುವೆ, ನಿನ್ನಿಷ್ಟದ ವರ ಯಾರು, ಆತ ಹೇಗಿರಬೇಕು?” ಎಂದು ಕೇಳಿದರು. ಆಗ ಸುವರ್ಚಲೆಯೊಂದು ವಿಚಿತ್ರವಾದ ಬೇಡಿಕೆಯನ್ನು ಇಟ್ಟಳು. “ನಾನು ವರಿಸುವ ವರ ಕಣ್ಣಿಲ್ಲದವನಾಗಬೇಕು, ಆದರೆ ಕುರುಡನಾಗಿರಬಾರದು. ಅಂತಹ ವರನನ್ನು ನೀನು ಹುಡುಕು”. ಇದು ದೇವಲರ ಚಿಂತೆಗೆ ಕಾರಣವಾಯಿತು. ಮಗಳ ಮದುವೆಯಾಗುವವ ಕಣ್ಣಿಲ್ಲದವನಾಗಿರಬೇಕು ಅದರೆ ಕುರುಡನಾಗಿರಬಾರದು ಎನ್ನುವುದರ ಹಿಂದಿನ ಮರ್ಮವೇನೋ ಇರಬೇಕು ಎಂದು ಅವರಿಗೆ ಅನಿಸಿತು. ಬಾಧಿಸುತ್ತಿದ್ದ ಚಿಂತೆ ಹೋಗಿ ಮಗಳ ಕುರಿತು ಹೆಮ್ಮೆಯೂ ಆಯಿತು. ಈಗ ಅವರಿಗೆ ಅಂತಹ ವರನನ್ನು ಹುಡುಕುವುದು ಎಲ್ಲಿಂದ ಎನ್ನುವ ಆಲೋಚನೆಗೆ ತೊಡಗಿದರು. ತಡಮಾಡಲಿಲ್ಲ. ತಕ್ಷಣವೇ ಒಂದು ಶುಭಮೂಹೂರ್ತವನ್ನು ಸುವರ್ಚಲೆಯ ಸ್ವಯಂವರಕ್ಕಾಗಿ ನಿಶ್ಚಯಿಸಿ ಆದಿನ ಆ ಕಾಲದ ಎಲ್ಲಾ ಋಷಿಕುಮಾರರನ್ನು ಸ್ವಯಂವರವನ್ನು ನಿಶ್ಚಯಿಸಿ ಆಹ್ವಾನಿಸಿದರು.

ಆ ದಿನವೂ ಬಂದೇ ಬಿಟ್ಟಿತು. ಆರ್ಯಾವರ್ತದ ಎಲ್ಲಾ ಸ್ನಾತಕರೂ ಆ ದಿನ ದೇವಲರ ಆಶ್ರಮದಲ್ಲಿ ಸೇರಿದರು. ಸೇರಿದ ಋಷಿಕುಮಾರರನ್ನು ವಿಧಿಪೂರ್ವಕವಗಿ ಪೂಜಿಸಿ “ನನ್ನ ಮಗಳು ಸುವರ್ಚಲೆ ಸಕಲ ಗುಣ ಸಂಪನ್ನೆಯೂ, ರೂಪವತಿಯೂ ಮತ್ತು ಸಕಲಶಾಸ್ತ್ರ ವಿಶಾರದಳೂ ಆಗಿದ್ದಾಳೆ. ಅವಳು ಈಗ ಮದುವೆಯ ವಯಸ್ಸಿಗೆ ಬಂದಿದ್ದಾಳೆ. ಅವಳನ್ನು ಯೋಗ್ಯ ವರನಿಗೆ ಕೊಟ್ಟು ಮದುವೆಯನ್ನು ಮಾಡುವುದಕ್ಕಾಗಿ ಇದೀಗ ನಿಮ್ಮನ್ನೆಲ್ಲರನ್ನೂ ಸೇರಿಸಿದ್ದೀನೆ. ನೀವು ಇದೀಗ ಆಕೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಬೇಕು” ಎಂದು ಉದ್ಘೋಷಿಸಿ ತಮ್ಮ ಮಗಳನ್ನು ಸ್ವಯಂವರಕ್ಕಾಗಿ ಸಭೆಗೆ ಕರೆದರು.

“ಮಗಳೆ, ಇವರೆಲ್ಲರೂ ವಿದ್ಯಾವಂತರೂ ಮತ್ತು ಸಕಲ ಶಾಸ್ತ್ರವನ್ನು ಅಧ್ಯಯನ ಮಾಡಿದವರೂ ಆಗಿದ್ದಾರೆ. ಇವರಲ್ಲಿ ಯಾರು ನಿನ್ನ ಮೆಚ್ಚಿನವರು ಎಂದು ಆರಿಸಿಕೊ, ನಿನಗೆ ಕನ್ಯಾದಾನವನ್ನು ಮಾಡಿದ ಪುಣ್ಯವನ್ನು ನಾನು ಗಳಿಸಿಕೊಳ್ಳುವೆ” ಎಂದು ಹೇಳಿದರು. ತನ್ನನ್ನು ಮದುವೆಯಾಗಲು ಬಂದ ಆ ಅತಿಥಿಗಳಿಗೆ ನಮಸ್ಕರಿಸಿ ಸುವರ್ಚಲೆ ಶಾಂತಮನಸ್ಕಳಾಗಿ ಎಲ್ಲರಿಗೂ ಕೇಳುವಂತೆ ಉಚ್ಚಕಂಠದಿಂದ “ನಿಮಗೆಲ್ಲ ಅಸಿತ ದೇವಲ ಮಹರ್ಷಿಯ ಆಶ್ರಮಕ್ಕೆ ಸ್ವಾಗತ. ನಿಮ್ಮಲ್ಲಿ ಯಾವನು ಕಣ್ಣಿಲ್ಲದವನಾಗಿಯೂ ಕುರುಡನಲ್ಲವೋ ಅಂತಹ ಋಷಿಕುಮಾರರು ಮುಂದೆ ಬರಬೇಕು, ಅವರನ್ನು ನಾನು ಮದುವೆಯಾಗುವೆ” ಈ ಮಾತುಗಳನ್ನು ಕೇಳಿದ ಋಷಿಕುಮಾರರೆಲ್ಲರೂ ಅವಾಕ್ಕಾದರು. ಕೆಲವರಿಗೆ ಕೋಪವೂ ಬಂತು. ಈಕೆಗೆ ಜಂಬ ಜಾಸ್ತಿ, ಸೊಕ್ಕಿನ ಹೆಣ್ಣು ಎನ್ನುತ್ತಾ ಅವಳನ್ನು ಮತ್ತು ದೇವಲ ಮಹರ್ಷಿಯನ್ನು ಜರೆಯುತ್ತಾ ಅವರೆಲ್ಲರೂ ಹೊರಟು ಹೋದರು.

ಈ ಸಂಗತಿ ದೂರದ ಊರಿಗೂ ಹಬ್ಬಿ ಆಕೆಯನ್ನು ಮದುವೆಯಾಗಲು ಕೆಲವರು ಬಂದು ಆಕೆಯ ಕರಾರನ್ನು ಕೇಳಿ ತಣ್ಣಗೆ ಹೋಗುತ್ತಿದ್ದರು. ರೂಪವತಿಯಾದ ತಮ್ಮ ಮಗಳಿಗೆ ಯೋಗ್ಯ ವರ ಸಿಕ್ಕದೇ ಇರುವದು ದೇವಲರ ಚಿಂತೆಯನ್ನು ಇನ್ನಷ್ಟು ಹೆಚ್ಚಿಸಿತು. ಹೀಗಿರುವಾಗ ಒಂದು ದಿನ ಅವರ ಆಶ್ರಮಕ್ಕೆ ತೇಜಸ್ಸಿನಿಂದ ಕೂಡಿದ ಋಷಿಕುಮಾರನೋರ್ವ ಬಂದು ತನ್ನ ಋಷಿಪರಂಪರೆಯ ಪರಿಚಯವನ್ನು ಹೇಳುತ್ತಾ ಅಭಿವಂದನೆ ಮಾಡಿದ. ಆತನ ವಂಶಾವಳಿಯನ್ನು ಕೇಳಿದ ದೇವಲರಿಗೆ ತುಂಬಾ ಸಂತೋಷವಾಯಿತು. ಆತ ಗೌತಮ ಗೋತ್ರದ ಉದ್ಧಾಲಕ ಋಷಿಯ ಹಿರಿಯ ಮಗ ಶ್ವೇತಕೇತು.

uddhalaka

ಉಪನಿಷತ್ತಿನಲ್ಲಿ ಬರುವ ಋಷಿ ಪರಂಪರೆಯಲ್ಲಿ ಉದ್ಧಾಲಕ ಋಷಿ ತುಂಬಾ ಮಹತ್ವವನ್ನು ಪಡೆಯುತ್ತಾನೆ. ಈತ ಯಾಜ್ಞವಲ್ಕ್ಯ ಮತ್ತು ಗಾರ್ಗಿ ಇವರ ಸಮಕಾಲೀನ ಎನ್ನುವುದು ಬೃಹದಾರಣ್ಯಕೋಪನಿಷತ್ತಿನಲ್ಲಿ ಬರುತ್ತದೆ. ಛಾಂದೋಗ್ಯೋಪನಿಷತ್ತು ಈತನ ಕುರಿತು ಅನೇಕ ವಿವರಗಳಿವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಲ್ಕು ಮಹಾವಾಕ್ಯಗಳಲ್ಲೊಂದಾದ “ತತ್ತ್ವಮಸಿ” ಎನ್ನುವುದನ್ನು ಈತನನ್ನೇ ಉದ್ದೇಶಿಸಿ ಉದ್ಧಾಲಕ ವಾಜಶ್ರವ ಲೋಕಕ್ಕೆ ತಿಳಿಸಿದ್ದ. ಗ್ರಹಸ್ಥಾಶ್ರಮದ ಸುಧಾರಣೆಯ ವಿಷಯದಲ್ಲಿ ಶ್ವೇತಕೇತು, ಪತ್ನಿ ತನ್ನ ಗಂಡನನ್ನು ಬಿಟ್ಟು ಅನ್ಯರನ್ನು ಹೊಂದಬಾರದೆನ್ನುವ ನಿಬಂಧನೆಯನ್ನು ಹಾಕಿದ ಮಾರ್ಗಪ್ರವರ್ತಕನಾಗಿದ್ದ. ಅದಾಗಲೇ ಈತನ ಹೆಸರು ಎಲ್ಲಾ ಕಡೆ ಹಬ್ಬಿತ್ತು. ಉದ್ಧಾಲಕ ಋಷಿಯ ಕಿರಿಯ ಮಗ ನಚಿಕೇತ ಸಾವಿನಾಚೆಯ ಲೋಕದ ರಹಸ್ಯವನ್ನು ತಿಳಿಸಿದರೆ, ಹಿರಿಯ ಮಗ ಶ್ವೇತಕೇತು ಬದುಕಿನಲ್ಲಿ ಪತಿ ಪತ್ನಿಯರ ದಾಂಪತ್ಯಬದುಕಿನ ಪವಿತ್ರತೆಯ ಮಹತ್ವವನ್ನು ಲೋಕಕ್ಕೆ ತಿಳಿಸಿದವ. ಈತನ ತಾಯಿ ವಿಶ್ವವರಾದೇವಿಯೂ ಬ್ರಹ್ಮವಾದಿನಿಯೇ. ಅಕ್ಕ ಸುಜಾತಾ ಪ್ರಸಿದ್ಧ ವಿದ್ವಾಂಸನಾದ ಕಹೋಳ ಮುನಿಯ ಪತ್ನಿ. ಆಕೆಯ ಮಗನೇ ಅಷ್ಟಾವಕ್ರನೆಂದು ಪ್ರಸಿದ್ಧನಾದವ. ಮಹಾ ಜ್ಞಾನಿ. ತನ್ನ ತಂದೆ ಕಹೋಳ ಜನಕನ ಅಸ್ಥಾನದ ವಿದ್ವಾಂಸನಾದ ಬಂಡಿಯಲ್ಲಿ ವಾದ ಮಾಡಿ ಸೋತು ವರುಣನ ಸೆರೆಯಲ್ಲಿದ್ದ. ಅಂತಹ ಬಂಡಿಯನ್ನೇ ವಾದದಲ್ಲಿ ಸೋಲಿಸಿ ತನ್ನ ತಂದೆಯನ್ನು ಬಿಡಿಸಿಕೊಂಡು ಬಂದವ.

ಇಂಥ ಕುಟುಂಬಕ್ಕೆ ಸೇರಿದ ಶ್ವೇತಕೇತುವನ್ನು ನೋಡಿದ ಕೂಡಲೇ ದೇವಲನಿಗೆ ಹೇಳಲಾರದಷ್ಟು ಸಂತಸವಾಯಿತು. ತಂದೆಯಾದವ ತನ್ನ ಅಳಿಯ ವಿದ್ಯಾವಂತನಾಗಿರಬೇಕೆಂದು ಬಯಸುತ್ತಾನೆ, ಹಾಗಾಗಿ ಶ್ರೇಷ್ಠವಾದ ಋಷಿಮನೆತನದ ಈತನಲ್ಲದೇ ಬೇರೆ ಯಾರೂ ತನ್ನ ಮಗಳಿಗೆ ಯೋಗ್ಯರಲ್ಲವೆಂದು ತಿಳಿದು ಹಿಂದೆಮುಂದೆ ಯೋಚಿಸದೇ “ಮಗಳೇ, ಈತ ಶ್ವೇತಕೇತು. ಮಹಾಪ್ರಾಜ್ಞ, ಈತನನ್ನು ನೀನು ವರಿಸಬಹುದು” ಎಂದು ಸುವರ್ಚಲೆಯನ್ನು ಕರೆದು ಹೇಳಿಯೂಬಿಟ್ಟ. ತನ್ನ ಪ್ರಶ್ನೆಗಳಿಗೆ ಉತ್ತರಿಸದೇ ತಾನು ಇವನನ್ನು ವರಿಸುವುದು ಹೇಗೆ ಎನ್ನುವುದು ಗೊತ್ತಿದ್ದೂ ಸಹ ತನ್ನ ತಂದೆ ತನ್ನನ್ನು ಕೇಳದೇ ಹೀಗೆ ಹೇಳಿದುದಕ್ಕೆ ತನ್ನ ತಂದೆಯ ಮೇಲೆ ಸುವರ್ಚಲೆಗೆ ಸಿಟ್ಟೂ ಬಂತು. ಇದನ್ನು ಗಮನಿಸಿದ ಶ್ವೇತಕೇತು ದೇವಲನಿಗೆ “ಬ್ರಹ್ಮನ್, ನೀವು ನಿಮ್ಮ ಮಗಳನ್ನು ವಿಚಾರಿಸದೇ ಏಕಾಏಕಿಯಾಗಿ ಮದುವೆಯ ಪ್ರಸ್ತಾಪ ಮಾಡಿರುವುದು ವೇದಕ್ಕೆ ವಿರುದ್ಧವೂ ಆಗಿದೆ. ವೇದವಾಕ್ಯಗಳನ್ನು ಶ್ರದ್ಧಾ ಭಕ್ತಿಯಿಂದ ಪಾಲಿಸುವ ನೀವು ಅದು ಹೇಗೆ ಅದನ್ನು ಮೀರಬಲ್ಲಿರಿ. ಹೆಣ್ಣು ಮಕ್ಕಳ ಮದುವೆಯನ್ನು ಮಾಡುವಾಗ ನಿಮ್ಮ ವಿಚಾರಗಳನ್ನು ಅವಳ ಮೇಲೆ ಹೇರಕೂಡದು. ಈ ವಿಚಾರದಲ್ಲಿ ವೇದಗಳು,

ಉಪಾಯಾಮಗೃಹೀತೋऽಸ್ಯಾದಿತ್ಯೇಭ್ಯಸ್ತ್ವಾ।
ವಿಷ್ಣೋऽಉರುಗಾಯೈಷ ತೆ ಸೋಮಸ್ತ ಗ್ಂ ರಕ್ಷಸ್ವ ಮಾ ತ್ವಾ ದಭನ್ ॥ಯ -8-1 ॥

(ಬ್ರಹ್ಮಚರ್ಯವನ್ನು ಪಾಲಿಸಿದ ಯೋಗ್ಯ ವಯಸ್ಸಿನ ಪುತ್ರಿಯು ಅವಳ ಆಯ್ಕೆಯಂತೆ ಅವಳಷ್ಟೇ ವಿದ್ಯಾವಂತನಾದವನನ್ನು ಮದುವೆಯಾಗಬೇಕು) ಎಂದ.

ಯಜುರ್ವೇದದ ಎಂಟನೆಯ ಅಧ್ಯಾಯದ ಮಂತ್ರಗಳ ಸಂಗ್ರಹ ತುಂಬಾ ಮಹತ್ವವಾದವು. ಇಲ್ಲಿ ಕನ್ಯೆಯನ್ನು ಯಾವನಿಗೋ ಕೊಟ್ಟು ಮದುವೆ ಮಾಡುವಂತೆ ಹೇಳಿಲ್ಲ. ಸಂಗಾತಿಯನ್ನು ಆಯ್ಕೆ ಮಾಡುವಾಗ ಆಕೆಯ ಅಭಿಪ್ರಾಯವನ್ನು ಸಂಪೂರ್ಣವಾಗಿ ಗೌರವಿಸಬೇಕು. ಬ್ರಹ್ಮಚರ್ಯವನ್ನು ಸೇವಿಸಿದ ಕನ್ಯೆಯರು ತಮತಮಗೆ ಸದೃಶವಾದ ರೂಪ, ಗುಣ, ಕರ್ಮ ಸ್ವಭಾವ ಮತ್ತು ವಿದ್ಯೆಗಳನ್ನುಳ್ಳವರನ್ನೂ, ತಮಗಿಂತ ಬಲಶಾಲಿಗಳಾದವರನ್ನೂ, ತಮಗೆ ಇಷ್ಟವಾದವರನ್ನೂ, ಹೃದಯಕ್ಕೆ ಪ್ರಿಯವಾದವರನ್ನೂ ಸ್ವಯಂವರ ವಿಧಿಯಿಂದ ಸ್ವೀಕರಿಸಿ ಸೇವಿಸಬೇಕೆಂದಿದೆ. ಅದೇ ವಿಧಾನವನ್ನು ಕುಮಾರ ಬ್ರಹ್ಮಚಾರಿಗಳಿಗೂ ಹೇಳಲ್ಪಟ್ಟಿದೆ. ಅದರ ಸಾರಾಂಶವನ್ನೇ ಶ್ವೇತಕೇತು ದೇವಲನಿಗೆ ಹೇಳಿಬಿಟ್ಟ. ಇಷ್ಟು ಹೇಳಿದವನೇ ಸುವರ್ಚಲೆಯನ್ನು ನೋಡಿ “ಸುಂದರಿ, ನನಗೆ ಕಣ್ಣುಗಳಿಲ್ಲ; ಆದರೆ ನಾನು ಕುರುಡನಲ್ಲ” ಎಂದುಬಿಟ್ಟ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಸೃಷ್ಟಿಯ ಹಿಂದಿರುವ ಪೂರ್ಣತೆಯೇ ಅರ್ಧನಾರೀಶ್ವರತ್ವ

ಸುವರ್ಚಲೆಗೆ ಈ ಮಾತನ್ನು ಕೇಳಿ ಸಂತೋಷವಾಯಿತು, ಜೊತೆಗೆ ನಾಚಿಕೆಯೂ ಆಯಿತು. ತನಗೆ ಅನುರೂಪನಾದವ ಈತನೇ ಎನ್ನುವುದು ಅರಿವಿಗೆ ಬಂತು. ಆದರೂ ತನ್ನ ಭಾವನೆಗಳನ್ನು ತೋರ್ಪಡಿಸದೇ, “ಸುಂದರ ವಿಶಾಲನೇತ್ರನಾದ ನೀನು ನನ್ನನ್ನು ಸುಂದರಿ ಎಂದು ಕರೆಯುತ್ತಿದ್ದೀಯ. ಅದು ಹೇಗೆ ನೀನು ಕಣ್ಣಿಲ್ಲದವನು ಎಂದು ಹೇಳಿಬಿಟ್ಟೆ? ವಿವರವಾಗಿ ತಿಳಿಸುವೆಯಾ?” ಎಂದು ಕೇಳಿದಳು.

ಶ್ವೇತಕೇತು ನಗುತ್ತಾ ಕೊಡುವ ಉತ್ತರ ಹೀಗಿದೆ.

“ಶಬ್ದ, ಸ್ಪರ್ಶ, ರೂಪ, ರಸ, ಗಂಧವೆಂಬ ಪಂಚತನ್ಮಾತ್ರಗಳಿಂದ ಕೂಡಿದ ಜೀವಾತ್ಮವು ಆ ಪರಮಾತ್ಮನ ಕಾರಣದಿಂದಲೇ ಅಸ್ತಿತ್ವದಲ್ಲಿದೆ. ಪರಮಾತ್ಮನ ಕಾರಣದಿಂದಲೇ ನನಗೆ ಎಲ್ಲವೂ ಕಾಣಿಸುತ್ತದೆ, ಕೇಳಿಸುತ್ತದೆ. ಆದರೆ ನನ್ನ ಕಣ್ಣುಗಳು (ಚಕ್ಷು) ನನ್ನವಲ್ಲ. ವಸ್ತುತಃ ಎಲ್ಲವನ್ನೂ ಅವನೇ ನೋಡುತ್ತಾನೆ. ನಾನಲ್ಲ. ಹಾಗಾಗಿ ಈ ಕಣ್ಣುಗಳು ನನ್ನವಲ್ಲ. ಹೀಗಾಗಿಯೇ ನನಗೆ ಕಣ್ಣುಗಳಿಲ್ಲ” ಎಂದು ಉತ್ತರಿಸಿದ. ಸುವರ್ಚಲೆ ಮತ್ತು ದೇವಲ ಇಬ್ಬರೂ ಬೆರಗಾಗಿ ಈತನನ್ನೇ ನೋಡುತ್ತಿದ್ದರು. “ಹಾಗಾದರೆ ನೀನು ಕುರುಡ ಹೇಗಲ್ಲವೆಂದು ತಿಳಿಸು” ಎಂದು ಆಕೆ ಕೇಳಿದಳು. ಅದಕ್ಕೆ ನಗುತ್ತಲೇ,

ತಚ್ಚಕ್ಷುರ್ವಿದ್ಯತೇ ಮಹ್ಯಂ ಯೇನ ಪಶ್ಯತಿ ವೈ ಸ್ಪುಟಂI
ಸುಲೋಚನೋಹಂ ಭದ್ರೇ ವೈ ಪೃಚ್ಛ ವಾ ಕಿಂ ವದಾಮಿ ತೇ I
ಸರ್ವಮಸ್ಮಿನ್ನ ಮೇ ವಿದ್ಯಾ ವಿದ್ಯಾವಾನ್ಹಿ ಪರಮಾರ್ಥತಃ II 12-228-32 ಮ.ಭಾ.

“ಮಂಗಳಕರಳೇ! ನನ್ನೊಳಗೆ ಇರುವ ಪರಮಾತ್ಮನ ಕಾರಣದಿಂದಲೇ ನನ್ನ ಸುತ್ತಲಿನ ಜಗತ್ತಿನ ಅನುಭೂತಿಯನ್ನು ಪಡೆಯಲು ನನಗೆ ಸಾಧ್ಯವಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆ ಸುಜ್ಞಾನದಿಂದಲೇ ಸಕಲ ವಿಶ್ವವು ನನಗೆ ಸ್ಫುಟವಾಗಿ ಕಾಣಿಸುತ್ತದೆ. ಹಾಗಾಗಿ ನಾನು ಕುರುಡನಲ್ಲ.”

ಶ್ವೇತಕೇತುವಿನ ಉತ್ತರ ಸುವರ್ಚಲೆಯನ್ನು ಸಂತುಷ್ಟಗೊಳಿಸಿತು ಎನ್ನುವುದಕ್ಕೆ ಮುಂದೆ ವಿವರಿಸಬೇಕಿಲ್ಲ. ಹೀಗೆ ಸುವರ್ಚಲೆ ಎನ್ನುವ ಹೆಣ್ಣುಮಗಳ ಕತೆಯು ವೇದಕಾಲದಲ್ಲಿ ಹೆಣ್ಣು ತನ್ನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಮುಕ್ತ ಸ್ವಾತಂತ್ರ್ಯವನ್ನು ಹೊಂದಿದ್ದಳು ಎನ್ನುವುದನ್ನು ತಿಳಿಸುತ್ತದೆ. ಸುವರ್ಚಲೆ ಸ್ವಾಭಿಮಾನದ ಪ್ರಬುದ್ಧ ಹೆಣ್ಣುಮಗಳು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಧರ್ಮಪ್ರಜ್ಞೆ ಸದಾ ಜಾಗೃತವಾಗಿರುವ ಶೃಂಗಾರದ ಪ್ರತಿಮೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

ರಾಜಮಾರ್ಗ ಅಂಕಣ: ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ವಿಶ್ವಕಪ್‌ ಟಿ20 ಪಂದ್ಯಾಟಗಳಿಗೆ ಆರಿಸಿದ ಭಾರತ ಕ್ರಿಕೆಟ್ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.‌ ಆದರೆ ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

VISTARANEWS.COM


on

rajamarga column t20 world cup team
Koo

ಕೆ.ಎಲ್ ರಾಹುಲ್, ದಿನೇಶ್ ಕಾರ್ತಿಕ್ ಅವರಿಗೆ ಅವಕಾಶ ಮಿಸ್ ಆದದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಲ್ ದ ಬೆಸ್ಟ್ ಟೀಮ್ ಇಂಡಿಯಾ!

ಐಪಿಎಲ್ (IPL) ಕಾರಣಕ್ಕೆ ಭಾರತದಲ್ಲಿ ನೂರಾರು ಕ್ರಿಕೆಟ್ (Cricket) ಪ್ರತಿಭೆಗಳು ಪ್ರಕಾಶನಕ್ಕೆ ಬಂದಿವೆ. ಹತ್ತು ಕ್ರಿಕೆಟ್ ಟೀಮ್ ರಚಿಸಲು ಸಾಧ್ಯ ಇರುವಷ್ಟು ಆಟಗಾರರು ಈಗ ಭಾರತದಲ್ಲಿ ಇದ್ದಾರೆ! ಅದರಿಂದಾಗಿ ಈ ಬಾರಿ ಕ್ರಿಕೆಟ್ ಆಯ್ಕೆ ಮಂಡಳಿಯು ಸಾಕಷ್ಟು ಅಳೆದು ತೂಗಿ ಒಂದು ಬಲಿಷ್ಠವಾದ ಟಿ 20 (T20) ತಂಡವನ್ನು ವಿಶ್ವಕಪ್‌ಗೆ (World Cup) ಆಯ್ಕೆ ಮಾಡಿದೆ. ಅದರಲ್ಲಿ ಒಂದಿಷ್ಟು ಅಪಸ್ವರ, ಒಂದಿಷ್ಟು ಭಿನ್ನ ಧ್ವನಿಗಳು ಬರುವುದು ಸಹಜವೇ ಆಗಿದೆ.

ಆದರೆ ಸ್ಟ್ರಾಟಜಿಯ ದೃಷ್ಟಿಯಿಂದ ಈ ಬಾರಿ ಆರಿಸಿದ ತಂಡವು ಹೆಚ್ಚು ಸಮತೋಲಿತ ಎಂದು ಖಂಡಿತವಾಗಿ ಹೇಳಬಹುದು.

ರೋಹಿತ್ ಶರ್ಮ – ಉತ್ತಮ ಕ್ಯಾಪ್ಟನ್

ರೋಹಿತ್ ಶರ್ಮ (Rohit Sharama) ಸದ್ಯಕ್ಕೆ ಭಾರತದ ಯಶಸ್ವೀ ಕ್ಯಾಪ್ಟನ್. ಐದು ಬಾರಿ ಐಪಿಲ್ ಟ್ರೋಫಿ ಎತ್ತಿದ ಸಾಧನೆ ಆತನದ್ದು. ಹಾಗೆಯೇ ಮೊನ್ನೆ ನಡೆದ ಕ್ರಿಕೆಟ್ ವಿಶ್ವಕಪ್ಪಿನಲ್ಲಿ ಅದ್ಭುತವಾಗಿ ಆಡಿ ಫೈನಲ್ ತನಕ ಬಂದ ಸಾಧನೆಯು ಸಣ್ಣದಲ್ಲ. ಆರಂಭಿಕ ಆಟಗಾರನಾಗಿ ಸಲೀಸಾಗಿ ಬೌಂಡರಿ, ಸಿಕ್ಸರ್ ಎತ್ತುವ ಛಾತಿ ಆತನಿಗೆ ಇದೆ. ಆದ್ದರಿಂದ ರೋಹಿತ್ ಶರ್ಮಾ ಆಯ್ಕೆಯು ನಿರ್ವಿವಾದ.

ಉಪನಾಯಕನಾಗಿ ಸಂಜು ಸ್ಯಾಮ್ಸನ್ ಅಥವಾ ರಿಷಭ್ ಪಂತ್ ಅವರಿಗೆ ಹೊಣೆ ನೀಡುವ ನಿರೀಕ್ಷೆ ಇತ್ತು. ಆದರೆ ಆಯ್ಕೆ ಮಂಡಳಿ ರಿಸ್ಕ್ ತೆಗೆದುಕೊಳ್ಳಲು ಹೋಗದೆ ಪಾಂಡ್ಯ ಅವರನ್ನೇ ಮುಂದುವರೆಸಿದೆ. ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಆತನ ನಾಯಕತ್ವದ ಹೆಚ್ಚಿನ ನಿರ್ಧಾರಗಳು ಟೀಕೆಗೆ ಗುರಿಯಾಗಿವೆ. ಆದರೆ ಪಾಂಡ್ಯ ಒಬ್ಬ ಆಲರೌಂಡರ್ ಮತ್ತು ಹೋರಾಟಗಾರ ಎಂಬ ಕಾರಣಕ್ಕೆ ಆತನಿಗೆ ತಂಡದಲ್ಲಿ ಸ್ಥಾನ ದೊರೆತಿದೆ ಎನ್ನುತ್ತದೆ ಆಯ್ಕೆ ಮಂಡಳಿ. ಆತನ ಬದಲಿಗೆ ತಿಲಕ್ ವರ್ಮ, ಸಾಯಿ ಸುದರ್ಶನ್ ಅಥವಾ ರುಥುರಾಜ್ ಗಾಯಕವಾಡ್ ಆಯ್ಕೆ ಆಗಿದ್ದರೆ ಚೆನ್ನಾಗಿತ್ತು ಎಂದು ಕ್ರಿಕೆಟ್ ಪ್ರೇಮಿಗಳು ಗಟ್ಟಿಯಾಗಿ ಹೇಳುತ್ತಿದ್ದಾರೆ. ಒಬ್ಬ ಬೌಲಿಂಗ್ ಆಲ್ರೌಂಡರ್ ಎಂಬ ದೃಷ್ಟಿಯಿಂದ ಹಾರ್ದಿಕ್ ಆಯ್ಕೆ ಆಗಿರಬಹುದು.

rajamarga column t20 world cup team

ಯಶಸ್ವೀ ಜೈಸ್ವಾಲ್ ಆಯ್ಕೆಯಲ್ಲಿ ಯಾರಿಗೂ ಅಚ್ಚರಿ ಆಗಲು ಸಾಧ್ಯವೇ ಇಲ್ಲ. ಕ್ರಿಕೆಟಿನ ಮೂರೂ ಫಾರ್ಮಾಟಗಳಲ್ಲಿ ಆತನ ನಿರ್ವಹಣೆಯು ತುಂಬಾ ಚೆನ್ನಾಗಿದೆ. ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಆತ ವಿಫಲನಾದರೂ ಈಗ ನಿಧಾನಕ್ಕೆ ಫಾರ್ಮ್ ಕಂಡು ಕೊಂಡಿದ್ದಾರೆ. ಆತನ ಆಕ್ರಮಣಶೀಲತೆ ಮತ್ತು ಹೊಡೆತಗಳ ಆಯ್ಕೆ ಚೆನ್ನಾಗಿರುವ ಕಾರಣ ಆತನ ಮೇಲೆ ಆಯ್ಕೆ ಮಂಡಳಿ ಭರವಸೆ ಇಟ್ಟ ಹಾಗಿದೆ.

ಕೊಹ್ಲಿ ಆಯ್ಕೆಯು ನಿರೀಕ್ಷಿತ

ವಿಶ್ವ ಕ್ರಿಕೆಟಿನ ಅತ್ಯದ್ಭುತ ಆಟಗಾರ ವಿರಾಟ್ ಕೊಹ್ಲಿ ಆಯ್ಕೆ ನಿರೀಕ್ಷಿತ. ಅದರೆ ಈ ಬಾರಿಯ ಐಪಿಲ್ ಪಂದ್ಯಗಳಲ್ಲಿ ಆತನ ಆಕ್ರಮಣಶೀಲತೆಯು ಕಡಿಮೆ ಆಗಿದೆ(?) ಎಂಬಂತೆ ಕಾಣುತ್ತಿರುವ ಕಾರಣ ಆತನನ್ನು ನಂಬರ್ 3 ಸ್ಥಾನಕ್ಕೆ ಆಡಿಸಬಹುದು ಅಥವಾ ನಂಬರ್ 3 ಸ್ಥಾನಕ್ಕೆ ಸಂಜು ಸಾಮ್ಸನ್ ಆಯ್ಕೆ ಪಡೆಯಬಹುದು. ಆದರೂ 90% ಭಾರತದ ಕ್ರಿಕೆಟ್ ಪ್ರೇಮಿಗಳು ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಇನಿಂಗ್ಸ್ ಆರಂಭಿಸಬೇಕು ಎಂದು ಆಸೆ ಪಡುತ್ತಾರೆ.

ಸೂರ್ಯಕುಮಾರ್ ಯಾದವ್ ಟಿ 20 ಫಾರ್ಮಾಟಿಗೆ ಹೇಳಿ ಮಾಡಿಸಿದ ಆಟಗಾರ. ಒಮ್ಮೆ ಕುದುರಿಕೊಂಡರೆ ಸರಾಸರಿಯನ್ನು ಸಲೀಸಾಗಿ 200 ದಾಟಿಸುವ ಶಕ್ತಿ ಇದೆ. ಆದರೆ ದೀರ್ಘ ಅವಧಿಗೆ ಗಾಯಾಳು ಆಗಿ ಹೊರಗೆ ಕೂತ ಕಾರಣ ಆತನ ತಲೆಯ ಮೇಲೆ ತೂಗುಕತ್ತಿ ಇದ್ದೇ ಇತ್ತು. ಆದರೆ ಆಯ್ಕೆ ಮಂಡಳಿ ಆತನ ಹಿಂದಿನ ಸಾಧನೆಯ ಮೇಲೆ ಭರವಸೆ ಇಟ್ಟ ಹಾಗಿದೆ. ನಂಬರ್ 3 ಸ್ಥಾನಕ್ಕೆ ಆಯ್ಕೆಗಳು ಹೆಚ್ಚಿದ್ದ ಕಾರಣ ಸಹಜವಾಗಿ ಕೆ ಎಲ್ ರಾಹುಲ್ ಹೊರಗೆ ಕೂರಬೇಕಾಯಿತು ಅಷ್ಟೇ.

rajamarga column t20 world cup team

ಸಂಜು ಸ್ಯಾಮ್ಸನ್ ದಶಕಗಳಿಂದ ಐಪಿಲ್ ಆಡುತ್ತಾ ಇದ್ದಾರೆ. ಈ ಐಪಿಎಲ್ ಟೂರ್ನಿಯಲ್ಲಿ ಆತನ ಸರಾಸರಿ ಮತ್ತು ಕನ್ಸಿಸ್ಟೇನ್ಸಿಗಳು ತುಂಬಾ ಚೆನ್ನಾಗಿ ಇದ್ದ ಕಾರಣ ಅವರ ಆಯ್ಕೆ ಸಲೀಸಾಯ್ತು. ರಾಹುಲ್ ಬ್ಯಾಟಿಂಗ್ ಮತ್ತು ಕೀಪಿಂಗ್ ಚೆನ್ನಾಗಿದ್ದರೂ ಡ್ರಾಪ್ ಆದರು. ಈ ನೋವು ಕನ್ನಡಿಗರನ್ನು ಕಾಡದೇ ಇರದು. ಸಂಜು ಸ್ಯಾಮ್ಸನ್ ಅವರಿಗೊಂದು ಅವಕಾಶ ಕೊಡಲೇಬೇಕು ಎಂದು ದೀರ್ಘಕಾಲದಿಂದ ಭಾರತ ಆಸೆ ಪಡುತ್ತಿತ್ತು.

ಬಲಿಷ್ಠ ಮಿಡಲ್ ಆರ್ಡರ್

ಭಾರತಕ್ಕೆ ಅಗತ್ಯವಾಗಿ ಬೇಕಾಗಿದ್ದ ಬಲಿಷ್ಠ ಮಿಡಲ್ ಆರ್ಡರ್ ಈ ಬಾರಿ ನಿಸ್ಸಂಶಯವಾಗಿಯೂ ದೊರೆತಿದೆ. ರಿಶಭ್ ಪಂತ್ ಮತ್ತು ಶಿವಂ ದುಬೆ ಅಲ್ಲಿ ಮಿಂಚು ಹರಿಸುವುದು ಖಂಡಿತ. ಇನ್ನಷ್ಟು ಬಲಿಷ್ಠ ಮಾಡಲು ರವೀಂದ್ರ ಜಡೇಜಾ ಇದ್ದೇ ಇರುತ್ತಾರೆ.

ಇಡೀ ಐಪಿಲ್ ಪಂದ್ಯಾಟದಲ್ಲಿ ಮಿಂಚಿದ ತಿಲಕ್ ವರ್ಮ, ರಥುರಾಜ್ ಗಾಯಕವಾಡ, ಅಭಿಷೇಕ್ ಶರ್ಮಾ, ಸಾಯಿ ಸುದರ್ಶನ್, ರಿಯಾನ್ ಪರಾಗ್ ಯಾಕೆ ಮಿಸ್ ಆದರು?ಎಂಬ ಪ್ರಶ್ನೆಯು ನಿಮ್ಮ ಮನಸಿಗೆ ಕೂಡ ಬಂದಿರಬಹುದು. ಅವರು ಮುಂದಿನ ವಿಶ್ವಕಪ್ ತನಕ ಕಾಯಲೇಬೇಕು ಅನ್ನುವುದು ವಾಸ್ತವ.

rajamarga column t20 world cup team

ಬೌಲಿಂಗ್ ವಿಭಾಗ ಅಚ್ಚರಿ ಇಲ್ಲ

ಜಸ್ಪ್ರೀತ್ ಬುಮ್ರಾ, ಆರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ವೇಗದ ಬೌಲಿಂಗ್ ವಿಭಾಗದ ಅಸ್ತ್ರಗಳು. ಖಲೀಲ್ ಅಹ್ಮದ್ ಮತ್ತು ಆವೇಶ್ ಖಾನ್ ಅವರು ಮೀಸಲು ಆಟಗಾರರಾಗಿ ಇರುವ ಕಾರಣ ಇಲ್ಲಿ ಅಚ್ಚರಿಯ ಮುಖಗಳು ಇಲ್ಲ. ಹಾರ್ದಿಕ ಪಾಂಡ್ಯ ಕೂಡ ಮಿದು ವೇಗದ ಬೌಲಿಂಗ್ ಮಾಡಬಲ್ಲರು. ದಾಖಲೆ ವೇಗದಲ್ಲಿ ಎಸೆಯಬಲ್ಲ ಮಯಾಂಕ್ ಯಾದವ್ ಫಿಟ್ನೆಸ್ ಕಾರಣಕ್ಕೆ ಡ್ರಾಪ್ ಆದ ಕಾರಣ ಸಿರಾಜ್ ಆಯ್ಕೆ ಸುಲಭ ಆಯ್ತು. ಸ್ಪಿನ್ ವಿಭಾಗದಲ್ಲಿ ಐಪಿಎಲನ ಗರಿಷ್ಠ ವಿಕೆಟ್ ಕಿತ್ತಿರುವ ಯಜುವೇಂದ್ರ ಚಹಲ್, ಯಾವ ಮೈದಾನದಲ್ಲಿಯೂ ಬಾಲ್ ಸ್ಪಿನ್ ಮಾಡುವ ಶಕ್ತಿ ಇರುವ ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇರುತ್ತಾರೆ. ರವಿ ಬಿಷ್ಣೊಯಿ ಇರಬೇಕಿತ್ತು ಎಂಬುದು ಹಲವರ ಅಭಿಪ್ರಾಯ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ಭಾರತವು ಮೂರು ವೇಗ ಪ್ಲಸ್ ಎರಡು ಸ್ಪಿನ್ ಸಂಯೋಜನೆಯ ಜೊತೆಗೆ ಆಡಲು ಇಳಿಯಬಹುದು. ಇನ್ನು ಫಿನಿಶರ್ ಸ್ಥಾನಕ್ಕೆ ಶಿವಂ ದುಬೆ, ರಿಶಬ್ ಪಂತ್, ಸೂರ್ಯಕುಮಾರ್ ಯಾದವ್ ಮತ್ತು ರಿಂಕು ಸಿಂಘ್ (ಮೀಸಲು) ಇರುವ ಕಾರಣ ದಿನೇಶ್ ಕಾರ್ತಿಕ್ ಡ್ರಾಪ್ ಆದರು ಅನ್ನಿಸುತ್ತದೆ. ಆತನ ಪ್ರಾಯ ಕೂಡ ಇಲ್ಲಿ ನಿರ್ಣಾಯಕ ಆಗಿರಬಹುದು.

2024ರ ವಿಶ್ವಕಪ್‌ಗೆ ಇದು ಡ್ರೀಮ್ ಟೀಮ್

ಧೋನಿ ನಾಯಕತ್ವದಲ್ಲಿ ಚೊಚ್ಚಲ T20 ವಿಶ್ವಕಪ್ ಗೆದ್ದು ಸಾಧನೆ ಮಾಡಿದ್ದ ಭಾರತ ಈ ಬಾರಿ ಇನ್ನೂ ಬಲಿಷ್ಠ ತಂಡದ ಜೊತೆಗೆ ಆಡಲು ಇಳಿಯುತ್ತಿದೆ. ಈ ತಂಡದಲ್ಲಿ ಆಕ್ರಮಣ, ಅನುಭವ, ಪರಿಣತಿ, ವೇಗ, ತಂತ್ರಗಾರಿಕೆ… ಎಲ್ಲವೂ ಇದೆ. ಉತ್ತಮ ಆಲ್ರೌಂಡರ್ ಆಟಗಾರರೂ ಇದ್ದಾರೆ. ಒತ್ತಡ ತಡೆಕೊಳ್ಳುವ ಶಕ್ತಿ ಇದ್ದವರು ಮಾತ್ರ ವಿಶ್ವಕಪ್ ಗೆಲ್ಲುತ್ತಾರೆ.

ಆದರೆ ಐಪಿಎಲ್ 2024ರಲ್ಲಿ ಸಖತ್ ಮಿಂಚುತ್ತಿರುವ ವಿದೇಶಿ ಆಟಗಾರರಾದ ಫಿಲ್ ಸಾಲ್ಟ್, ವಿಲ್ ಜಾಕ್ಸ್, ಮಾರ್ಕಸ್ ಸ್ಟಾಯಿನಿಸ್, ಟಿಮ್ ಡೇವಿಡ್, ಮೊಹಮ್ಮದ್ ನಬಿ, ಹೆನ್ರಿ ಕ್ಲಾಸೆನ್, ಜೋಸ್ ಬಟ್ಲರ್ ……ಮೊದಲಾದವರು ಬ್ಯಾಟ್ ಬೀಸುವ ವೇಗವನ್ನು ನೋಡುವಾಗ ಭಾರತೀಯರ ಎದೆಬಡಿತವು ಸ್ವಲ್ಪ ಹೆಚ್ಚಾಗಬಹುದು. ಏನಿದ್ದರೂ ಭಾರತಕ್ಕೆ ‘ಆಲ್ ದ ಬೆಸ್ಟ್’ ಹೇಳೋದಕ್ಕೆ ನಾವು ಖಂಡಿತ ಕಂಜೂಸ್ ಮಾಡುವುದಿಲ್ಲ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading
Advertisement
Murder case in Bengaluru
ಬೆಂಗಳೂರು9 mins ago

Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

Prajwal Revanna Case Locked up as Prajwal arrives at Bengaluru airport
ಹಾಸನ10 mins ago

Prajwal Revanna Case: ಬೆಂಗಳೂರು ಏರ್‌ಪೋರ್ಟ್‌ಗೆ ಪ್ರಜ್ವಲ್‌ ಬರುತ್ತಿದ್ದಂತೆ ಲಾಕ್‌! ಏನಿದು SIT ಸೂಚನೆ?

Andre Russell
ಕ್ರಿಕೆಟ್22 mins ago

Andre Russell : ಬ್ರಾವೊ ರೀತಿಯಲ್ಲೇ ಬಾಲಿವುಡ್​ಗೆ ಎಂಟ್ರಿ ಪಡೆದ ಆ್ಯಂಡ್ರೆ ರಸೆಲ್​

Jolly LLB 3
ಸಿನಿಮಾ23 mins ago

Jolly LLB 3: ಬರ್ತಿದೆ ಅಕ್ಷಯ್‌ ಕುಮಾರ್‌ ನಟನೆಯ ಜಾಲಿ ಎಲ್‌ಎಲ್‌ಬಿ 3; ಈ ಬಾರಿ ಇದೆ ಸರ್‌ಪ್ರೈಸ್!

Davanagere lok sabha constituency bjp candidate gayatri siddeshwar election campaign in harapanahalli
ರಾಜಕೀಯ25 mins ago

Lok Sabha Election: ಹರಪನಹಳ್ಳಿಯಲ್ಲಿ ರೋಡ್‌ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್

MLC Chalavadi Narayanaswamy latest Statement in Hubballi
ಹುಬ್ಬಳ್ಳಿ26 mins ago

Lok Sabha Election: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿಲ್ಲ: ಛಲವಾದಿ ನಾರಾಯಣಸ್ವಾಮಿ

Mega Shetty
ಫ್ಯಾಷನ್35 mins ago

Mega Shetty: ದಾವಣಿ-ಲಂಗದಲ್ಲಿ ನಟಿ ಮೇಘಾ ಶೆಟ್ಟಿಯಂತೆ ನೀವೂ ಕಾಣಬೇಕೆ? ಈ ಟಿಪ್ಸ್ ಪಾಲಿಸಿ!

six seats of Karnataka Legislative Council Elections to be held on June 3
ಕರ್ನಾಟಕ36 mins ago

Karnataka legislative council: ವಿಧಾನ ಪರಿಷತ್‌ನ 6 ಕ್ಷೇತ್ರಗಳಿಗೆ ಜೂ.3 ಎಲೆಕ್ಷನ್;‌ ಜೂ. 6ಕ್ಕೆ ಫಲಿತಾಂಶ

Deepika Padukone
ಬಾಲಿವುಡ್39 mins ago

Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

Sania Mirza
ಕ್ರೀಡೆ47 mins ago

Sania Mirza: ಹೇಳಲು ತುಂಬಾ ಇದೆ, ಆದರೂ ಮೌನವಾಗಿದ್ದೇನೆ; ಸಾನಿಯಾ ಮಿರ್ಜಾ ಪೋಸ್ಟ್​ನ ಅರ್ಥವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌