Ganesh Hegde Dodmane: ಗಣೇಶ್ ಹೆಗಡೆ ದೊಡ್ಮನೆ ಸಾರ್ಥಕವಾಗಿ ಬದುಕಿದವರು: ಸಿಎಂ ಬಸವರಾಜ ಬೊಮ್ಮಾಯಿ - Vistara News

ಉತ್ತರ ಕನ್ನಡ

Ganesh Hegde Dodmane: ಗಣೇಶ್ ಹೆಗಡೆ ದೊಡ್ಮನೆ ಸಾರ್ಥಕವಾಗಿ ಬದುಕಿದವರು: ಸಿಎಂ ಬಸವರಾಜ ಬೊಮ್ಮಾಯಿ

Ganesh Hegde Dodmane: ಗಣೇಶ್ ಹೆಗಡೆಯವರು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದರು ಎನ್ನುವುದಕ್ಕೆ ಅವರು ಮಾಡಿರುವ ಕೆಲಸಗಳೇ ಸಾಕ್ಷಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

VISTARANEWS.COM


on

Ganesh Hegde Dodmane siddapura
ಶ್ರೀ ಗಣೇಶ ಹೆಗಡೆ ದೊಡ್ಮನೆಯವರ ಜನ್ಮಶತಮಾನೋತ್ಸವ 2023 -ಶತಸ್ಮೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿದ್ದಾಪುರ: “ವಿಚಾರವಂತರಾಗಿದ್ದ ಗಣೇಶ್ ಹೆಗಡೆ ದೊಡ್ಮನೆಯವರು (Ganesh Hegde Dodmane) ಯಾವುದೇ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಸಾರ್ಥಕತೆಯಿಂದ ಬದುಕಿದರು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಮಂಗಳವಾರ (ಫೆ.28) ನಡೆದ ಶ್ರೀ ಗಣೇಶ ಹೆಗಡೆ ದೊಡ್ಮನೆಯವರ ಜನ್ಮಶತಮಾನೋತ್ಸವ 2023 -ಶತಸ್ಮೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣೇಶ್ ಹೆಗಡೆಯವರು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದರು ಎನ್ನುವುದಕ್ಕೆ ಅವರು ಮಾಡಿರುವ ಕೆಲಸಗಳು ಸಾಕ್ಷಿ. ಶಿಕ್ಷಣ ಹಾಗೂ ಸಹಕಾರಿ ಸಂಸ್ಥೆಗಳನ್ನು ಕಟ್ಟಿದರು. ರಾಜ್ಯಮಟ್ಟದ ಸಂಸ್ಥೆಯನ್ನು ಪ್ರತಿನಿಧಿಸಿ, ಸಹಕಾರಿ ರಂಗದಲ್ಲಿ ದೊಡ್ಡ ಸಾಧನೆಯನ್ನು ಮಾಡಿದರು ಎಂದು ತಿಳಿಸಿದರು.

ರಾಮಕೃಷ್ಣ ಹೆಗಡೆ ಮತ್ತು ಗಣೇಶ ಹೆಗಡೆಯವರ ಸಂಬಂಧ ಎಲ್ಲರಿಗೂ ತಿಳಿದಿರುವುದೇ. ಅಂದು ಕುಟುಂಬದ ಒಬ್ಬರೇ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿದ್ದ ಕಾಲವದು. ತಮ್ಮ ತಂದೆಯೂ ಅವರ ಸಹೋದರನಿಂದಲೇ ಉನ್ನತ ಶಿಕ್ಷಣ ಪಡೆದಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಕೌಟುಂಬಿಕ ಸಂಬಂಧಗಳ ಮಹತ್ವವನ್ನು ಇದು ತೋರಿಸುತ್ತದೆ. ಸಂಬಂಧಗಳ ಮೌಲ್ಯಗಳು ಇಂದು ಕಾಣದಾಗಿದೆ. ಇಂದು ಎಲ್ಲವೂ ವ್ಯಾವಹಾರಿಕವಾಗಿದೆ. ಒಬ್ಬ ನಾಯಕ ಹಾಗೂ ಜನರ ಮಧ್ಯೆ ಭಾವನಾತ್ಮಕ ಸಂಬಂಧವಿತ್ತು. ಇಂದು ಅಂತಹ ಸಂಬಂಧಗಳು ಮರೆಯಾಗಿರುವ ಸಂದರ್ಭದಲ್ಲಿ ಗಣೇಶ್ ಹೆಗಡೆಯವರ ಬದುಕನ್ನು ಸ್ಮರಿಸುವುದು ಅವರ ಮೌಲ್ಯಗಳನ್ನು ಸ್ಮರಿಸಿದಂತೆ. ಅವರ ಸಾಧನೆಗಳು ಅಪಾರವಾಗಿತ್ತು” ಎಂದರು.

ಗಟ್ಟಿ ನಿಲುವು

“ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಿದ್ದಾಗ ಗಣೇಶ್ ಹೆಗಡೆಯವರ ಮೇಲೆ ಅಕ್ಕಿ ವ್ಯವಹಾರದ ಬಗ್ಗೆ ಆಪಾದನೆ ಬಂದಿತ್ತು. ಆ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ ಮತ್ತು ಗಣೇಶ್ ಹೆಗಡೆಯವರು ಬಹಳ ಗಟ್ಟಿ ನಿಲುವು ತೆಗೆದುಕೊಂಡು ಸಮಿತಿ ರಚಿಸಿ ತನಿಖೆಯಾಯಿತು. ಗಣೇಶ್ ಹೆಗಡೆಯವರು ನಿರಪರಾಧಿಯಾಗಿ ಹೊರಬಂದರು. ನೇರ ನುಡಿ, ವಿಚಾರಗಳನ್ನು ಗಟ್ಟಿಯಾಗಿ ಪ್ರತಿಪಾದಿಸುತ್ತಿದ್ದರು. ಬಹಳ ಗಟ್ಟಿ ಮನುಷ್ಯರಾಗಿದ್ದ ಅವರು ಕಷ್ಟಗಳಿದ್ದರೂ ಅದನ್ನು ಮೆಟ್ಟಿ ನಿಂತವರು. ನೆನಪಿನ ಅಂಗಳದಲ್ಲಿ ಅವರ ನೆನಪು ಚಿರಸ್ಥಾಯಿ” ಎಂದು ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: KS Eshwarappa : ನಮಗೆ ಮೋದಿ, ಶಾ ಇದಾರೆ, ನಿಮಗೆ ಯಾರೂ ಗತಿಯೇ ಇಲ್ವಲ್ಲಾ?: ಕಾಂಗ್ರೆಸ್‌ಗೆ ಈಶ್ವರಪ್ಪ ಗೇಲಿ

ತತ್ವಾಧಾರಿತ ನಿರ್ಣಯ

“ರಾಮಕೃಷ್ಣ ಹೆಗಡೆ ಅವರ ಕೊಡುಗೆ ದೇಶ ಹಾಗೂ ರಾಜ್ಯಕ್ಕೆ ಅಪಾರವಾದುದು. ಪ್ರತಿ ವಿಚಾರದಲ್ಲಿಯೂ ತತ್ವಾಧಾರಿತ ನಿರ್ಣಯಗಳನ್ನು ತೆಗೆದುಕೊಳ್ಳುವ ಜೀವಂತಿಕೆ ಅವರಲ್ಲಿತ್ತು. ರಾಷ್ಟ್ರಮಟ್ಟದ ಶ್ರೇಷ್ಠ ನಾಯಕತ್ವ ಅವರಲ್ಲಿತ್ತು. ಅವರನ್ನು ಹತ್ತಿರದಿಂದ ಬಲ್ಲವರೇ ಅದನ್ನು ತಿಳಿದುಕೊಳ್ಳಲು ಸಾಧ್ಯವಾಗಲಿಲ್ಲ. ರಾಮಕೃಷ್ಣ ಹೆಗಡೆಯವರೊಂದಿಗೆ ಹತ್ತು ನಿಮಿಷಗಳನ್ನು ಕಳೆದರೂ ಅವರ ಅಭಿಮಾನಿಯಾಗುವುದು ನಿಶ್ಚಿತ. ಅವರ ಜತೆಗೆ ಹತ್ತಿರದಿಂದ ಕೆಲಸ ಮಾಡುವ ಅವಕಾಶ ಕಲ್ಪಿಸಿದ್ದರು. ಅವರಿಂದ ಬಹಳಷ್ಟು ಕಲಿತಿದ್ದೇನೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಮ್ಮ ನಡುವೆ ಇನ್ನೂ ಜೀವಂತ

“ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವರು ಸಾಧಕ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು. ಗಣೇಶ್ ಹೆಗಡೆ ಅವರ ಸ್ಮರಣೆ ಮಾಡುತ್ತಿರುವುದು ಅವರು ನಮ್ಮ ನಡುವೆ ಇನ್ನೂ ಜೀವಂತವಾಗಿದ್ದಾರೆ ಎನ್ನುವುದಕ್ಕೆ ಸಾಕ್ಷಿ. ಸಾಧನೆ ಸದಾ ಜೀವಂತವಾಗಿರುತ್ತದೆ. ಅಧಿಕಾರ ಇಲ್ಲದೆ ಜನರ ಹೃದಯ ಗೆದ್ದಿರುವುದು ಸಾಧಕನಿಗೆ ಕಿರೀಟಪ್ರಾಯ. ಗಣೇಶ್ ಹೆಗಡೆ ಹಾಗೂ ರಾಮಕೃಷ್ಣ ಹೆಗಡೆಯವರ ಮಾರ್ಗದರ್ಶನದಲ್ಲಿ ನಡೆಯೋಣ” ಎಂದರು.

ಇದನ್ನೂ ಓದಿ: Karnataka Politics : ಕಾಂಗ್ರೆಸ್‌ ಮೋದಿ ಸಾವಿನ ಜಪ ಮಾಡ್ತಿದೆ ಎನ್ನುವುದು ದೊಡ್ಡ ಸುಳ್ಳು, ಹಾಗೆ ಹೇಳಿದವರ ಹೆಸರು ಹೇಳಿ: ಸಿದ್ದು ಸವಾಲು

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಉತ್ತರ ಕನ್ನಡ ಜಿಲ್ಲೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಷ್ಟ್ರೀಯ ನವ ನಿರ್ಮಾಣ ವೇದಿಕೆಯ ಅಧ್ಯಕ್ಷರು ಹಾಗೂ ರಾಮಕೃಷ್ಣ ಹೆಗಡೆಯವರ ಪುತ್ರಿ ಮಮತಾ ನಿಚ್ಛಾನಿ ಮೊದಲಾದವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Uttara Kannada News: ಸಾವಿರಾರು ಸಂಖ್ಯೆಯಲ್ಲಿ ಶಿಷ್ಯವೃಂದ ಹೊಂದಿರುವ ನಿವೃತ್ತ ಶಿಕ್ಷಕ ಜಿ.ಟಿ. ಭಟ್ ಬೊಮ್ಮನಹಳ್ಳಿ ಅವರು ಶಿಕ್ಷಣ ಕ್ಷೇತ್ರದೊಂದಿಗೆ ಯಕ್ಷಗಾನ, ನಾಟಕ ಹಾಗೂ ಕೃಷಿ ಕ್ಷೇತ್ರದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ 80ರ ಸಂಭ್ರಮವನ್ನು ಅವರ ಶಿಷ್ಯ ವೃಂದದವರಿಂದ ಅಭಿನಂದನಾ ಸಮಾರಂಭವನ್ನು ಮೇ 19 ರಂದು ಮಧ್ಯಾಹ್ನ 3 ಗಂಟೆಗೆ ಮಂಚೀಕೇರಿಯ ರಾಜರಾಜೇಶ್ವರಿ ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಕಾರ್ಯಕಾರಿ ಸಮಿತಿ ಸಂಚಾಲಕ ಜಿ.ಎನ್‌.ಶಾಸ್ತ್ರಿ ತಿಳಿಸಿದ್ದಾರೆ.

VISTARANEWS.COM


on

Retired Teacher G T Bhatt Bommanahalli 80th celebration programme on May 19
Koo

ಯಲ್ಲಾಪುರ: ಸಾವಿರಾರು ಮಂದಿಯ ಶಿಷ್ಯವೃಂದ ಹೊಂದಿರುವ ನಿವೃತ್ತ ಶಿಕ್ಷಕ ಜಿ.ಟಿ. ಭಟ್ ಬೊಮ್ಮನಹಳ್ಳಿ ಅವರು ಶಿಕ್ಷಣ ಕ್ಷೇತ್ರದೊಂದಿಗೆ ಯಕ್ಷಗಾನ, ನಾಟಕ ಹಾಗೂ ಕೃಷಿ ಕ್ಷೇತ್ರದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ 80ರ ಸಂಭ್ರಮವನ್ನು ಅವರ ಶಿಷ್ಯ ವೃಂದದವರಿಂದ ಅಭಿನಂದನಾ ಸಮಾರಂಭವನ್ನು ಮೇ 19ರಂದು ಆಯೋಜಿಸಲಾಗಿದೆ ಎಂದು ಅಭಿನಂದನಾ ಕಾರ್ಯಕಾರಿ ಸಮಿತಿ ಸಂಚಾಲಕ ಜಿ.ಎನ್‌. ಶಾಸ್ತ್ರಿ (Uttara Kannada News) ಹೇಳಿದರು.

ಪಟ್ಟಣದ ಅಡಿಕೆ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 80ರ ಸಂಭ್ರಮದ ಅಭಿನಂದನಾ ಕಾರ್ಯಕ್ರಮವನ್ನು ಮೇ 19ರಂದು ಮಧ್ಯಾಹ್ನ 3 ಗಂಟೆಗೆ ಮಂಚೀಕೇರಿಯ ರಾಜರಾಜೇಶ್ವರಿ ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಹೊಸಪೇಟೆಯ ಯಾಜಿ ಪ್ರಕಾಶನ ಪ್ರಕಟಿಸಿರುವ ಬೊಮ್ಮನಹಳ್ಳಿ ಜಂಗಮ ಗೌರವ ಗ್ರಂಥವನ್ನು ಕವಿ, ಕಥೆಗಾರ ಜಯಂತ ಕಾಯ್ಕಿಣಿ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ಹೆಗ್ಗೋಡು, ಯಕ್ಷಗಾನ ಕಲಾವಿದ ಶಿವಾನಂದ ಹೆಗಡೆ ಕೆರೆಮನೆ, ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅಹಲ್ಯಾ ಶರ್ಮ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಮಂಚಿಕೇರಿಯ ಹಾಸಣಗಿ ಸೊಸೈಟಿ ಅಧ್ಯಕ್ಷ ಆರ್.ಎನ್. ಹೆಗಡೆ ಗೋರ್ಸಗದ್ದೆ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ನಂತರ ನಡೆಯುವ ವಾಮನ ಚರಿತ್ರೆ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಅನಂತ ದಂತಳಿಕೆ, ನರಸಿಂಹ ಭಟ್ಟ ಹಂಡ್ರಮನೆ ಮೃದಂಗ, ಪ್ರಮೋದ್ ಯಲ್ಲಾಪುರ ಚಂಡೆ, ಅರ್ಥದಾರಿಗಳಾಗಿ ವಿದ್ವಾನ್ ಉಮಾಕಾಂತ ಭಟ್, ಜಬ್ಬಾರ್‌ಸಮೋ ಸಂಪಾಜೆ, ರಾಧಾಕೃಷ್ಣ ಕಲ್ಚಾರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಂ. ಗಣಪತಿ ಭಟ್ ಹಾಸಣಗಿ, ಕೆ ವಿ ಅಕ್ಷರ ಹೆಗ್ಗೋಡು, ವಿದ್ಯಾ ಹೆಗ್ಗೋಡು, ಪ್ರಮೋದ್ ಹೆಗಡೆ ಯಲ್ಲಾಪುರ, ಬಿ ಆರ್ ವೆಂಕಟರಮಣ ಐತಾಳ ಹೆಗ್ಗೋಡು, ಆರ್ ಜಿ ಭಟ್ಟ ಹಾಸಣಗಿ, ಡಾ.ರಾಜಪ್ಪ ದಳವಾಯಿ, ಹಬ್ಬು ಸಹೋದರು, ವಿ.ಎನ್. ಹೆಗಡೆ ಬೆದೆಹಕ್ಲು, ನಾರಾಯಣ ಯಾಜಿ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಈ ಸಂದರ್ಭದಲ್ಲಿ ಅಭಿನಂದನಾ ಸಮಿತಿ ಸದಸ್ಯರು ಹಾಗೂ ಜಿ.ಟಿ. ಭಟ್ಟರ ಶಿಷ್ಯರಾದ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ವಾಸೂಕಿ ಹೆಗಡೆ ಮಳಗಿಮನೆ, ಗಣೇಶ ರೋಕಡೆ ಮಂಚಿಕೇರಿ, ವಿಶ್ವನಾಥ ಬಾಮಣಕೊಪ್ಪ, ಜ್ಯೋತಿ ಭಟ್ಟ,ವಿದ್ಯಾ ಶರ್ಮಾ, ಡಾ.ಶೀಲಾ, ಶ್ರೀಪಾದ ಭಟ್ಟ ಇದ್ದರು.

Continue Reading

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Uttara Kannada News: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ಭಾವ ರಾಮಾಯಣ- ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ ಆರಂಭವಾದವು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

VISTARANEWS.COM


on

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
Koo

ಗೋಕರ್ಣ: ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ಮತ್ತು ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಭಾವ ರಾಮಾಯಣ-ರಾಮಾವತರಣ ಸರ್ಟಿಫಿಕೆಟ್ ಕೋರ್ಸ್ ಮತ್ತು ಅಲ್ಪಾವಧಿ ಕೋರ್ಸ್‍ಗಳ ತರಗತಿಗಳು ಮಂಗಳವಾರ (Uttara Kannada News) ಆರಂಭವಾದವು.

ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ‌ ಸ್ವಾಮೀಜಿ ಅವರು 40 ನಿಮಿಷಗಳ ಕಾಲ ಭಾವರಾಮಾಯಣ ತರಗತಿ ನಡೆಸಿಕೊಟ್ಟರು.

ರಾಮಾಯಣದ ಅನುಸಂಧಾನ ಅನಿರ್ವಚನೀಯ ಆನಂದವನ್ನು ಕೊಡುವಂಥದ್ದು. ಬದುಕಿಗೆ ಯಾವುದು ಹಿತ ಯಾವುದು ಅಹಿತ ಎನ್ನುವುದನ್ನು ರಾಮಾಯಣ ತಿಳಿಸಿಕೊಡುತ್ತದೆ. ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ ಎಂದು ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ ವಿಶ್ಲೇಷಿಸಿದರು.

ಇದನ್ನೂ ಓದಿ: Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

ರಾಮಾಯಣವನ್ನು ವಾಲ್ಮೀಕಿ ಸೀತಾಚರಿತೆ ಎಂದೂ ಕರೆದಿದ್ದಾರೆ. ರಾಮಾವತರಣದ ಕೊನೆಯಲ್ಲಿ ಬ್ರಹ್ಮ ಹೇಳುವಂತೆ ರಾಮ ಸಾಕ್ಷಾತ್ ವಿಷ್ಣುವಿನ ಅವತಾರ, ಸೀತೆ ಲಕ್ಷ್ಮಿಯ ಅವತಾರ. ರಾವಣ ಸಂಹಾರಕ್ಕಾಗಿ ವಿಷ್ಣು ಮನುಷ್ಯ ರೂಪದಲ್ಲಿ ಭುವಿಗೆ ಅವತರಿಸುತ್ತಾನೆ ಎಂದು ಶ್ರೀಗಳು ತಿಳಿಸಿದರು. ಬದುಕಿನಲ್ಲಿ ನಮಗೆ ಬೇಕಾದ ಎಲ್ಲವನ್ನೂ ಕೊಡುವಂಥದ್ದು ರಾಮಾಯಣ. ಇದರ ಅನುಸಂಧಾನದ ಮೂಲಕ ಬದುಕು ಸಾರ್ಥಕಪಡಿಸಿಕೊಳ್ಳೋಣ ಎಂದು ಶ್ರೀಗಳು ಕರೆ ನೀಡಿದರು.

ಝೂಮ್ ಮಾಧ್ಯಮದ ಮೂಲಕ ಶ್ರೀಗಳು ತರಗತಿ ನಡೆಸಿಕೊಟ್ಟರು. ಜತೆಗೆ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಕೂಡಾ ವ್ಯವಸ್ಥೆ ಮಾಡಲಾಗಿತ್ತು.

ಇದನ್ನೂ ಓದಿ: WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

ಕಾರ್ಯಕ್ರಮದಲ್ಲಿ ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು. ಪ್ರೊ.ಕೆ.ಎಸ್.ಕಣ್ಣನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಕೃತ ವಿವಿ ಕುಲಸಚಿವ ಡಾ.ರಾಮಕೃಷ್ಣ ಭಟ್ ಕೂಟೇಲು ನಿರೂಪಿಸಿದರು.

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading
Advertisement
Sanju Samson
ಕ್ರೀಡೆ4 mins ago

Sanju Samson: ಸತತ 4 ಸೋಲು; ಬೇಸರ ಹೊರಹಾಕಿದ ನಾಯಕ ಸಂಜು ಸ್ಯಾಮ್ಸನ್

Suspicious Case in Bengaluru
ಬೆಂಗಳೂರು40 mins ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Star Suvarna HuAnthiya UhuuAnthiya new celebrity game show
ಕಿರುತೆರೆ43 mins ago

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Hepatitis-A
ದೇಶ44 mins ago

Hepatitis-A: ಅಲರ್ಟ್‌..ಅಲರ್ಟ್‌! ಜನರ ನಿದ್ದೆಗೆಡಿಸ್ತಿದೆ ಮತ್ತೊಂದು ಡೆಡ್ಲಿ ವೈರಸ್‌

Anita Goyal
ದೇಶ45 mins ago

Anita Goyal: ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಪತ್ನಿ ಅನಿತಾ ಗೋಯಲ್‌ ನಿಧನ

hunsur road accident
ಕ್ರೈಂ53 mins ago

Road Accident: ಸರಣಿ ಅಪಘಾತ, ಬೈಕ್ ಸವಾರ ಸಾವು; ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

A Movie Re-ReleaseActress Chandni relives memories
ಸ್ಯಾಂಡಲ್ ವುಡ್1 hour ago

A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

Sunil Chhetri
ಕ್ರೀಡೆ1 hour ago

Sunil Chhetri: 20 ವರ್ಷಗಳ ಫುಟ್ಬಾಲ್ ವೃತ್ತಿಜೀವನಕ್ಕೆ ತೆರೆ ಎಳೆಯಲು ನಿರ್ಧರಿಸಿದ ಸುನೀಲ್‌ ಚೆಟ್ರಿ; ಕುವೈತ್ ವಿರುದ್ಧ ಅಂತಿಮ ಪಂದ್ಯ

Aishwarya Rai Injured heads to Cannes Film Festival with daughter
ಬಾಲಿವುಡ್1 hour ago

Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

Robert Fico
ವಿದೇಶ1 hour ago

Robert Fico: ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ ನಡೆಸಿದ್ದು ಓರ್ವ ಕವಿ; ಯಾಕೀ ದ್ವೇಷ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌