Air India Recruitment 2023 : ಪಿಯುಸಿ ಆದವರಿಗೂ ಏರಿ ಇಂಡಿಯಾದಲ್ಲಿ ಉದ್ಯೋಗ; ಇಲ್ಲಿದೆ ಸಂಪೂರ್ಣ ಮಾಹಿತಿ - Vistara News

ಉದ್ಯೋಗ

Air India Recruitment 2023 : ಪಿಯುಸಿ ಆದವರಿಗೂ ಏರಿ ಇಂಡಿಯಾದಲ್ಲಿ ಉದ್ಯೋಗ; ಇಲ್ಲಿದೆ ಸಂಪೂರ್ಣ ಮಾಹಿತಿ

ಏರ್‌ ಇಂಡಿಯಾವು ಈಗಾಗಲೇ ಪ್ರಕಟಿಸಿದಂತೆ ಬೃಹತ್‌ ನೇಮಕ ಪ್ರಕ್ರಿಯೆ (Air India Recruitment 2023) ಆರಂಭಿಸಿದ್ದು, ಸದ್ಯ ವಿಮಾನ ಸಿಬ್ಬಂದಿ ನೇಮಕಕ್ಕೆ ಸಂದರ್ಶನ ನಿಗದಿಪಡಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Air India Announces Major Recruitment Drive
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಈಗ ಟಾಟಾ ಗ್ರೂಪ್‌ನ ಒಡೆತನಕ್ಕೆ ಒಳಪಟ್ಟ ಏರ್‌ ಇಂಡಿಯಾವು ವಿಮಾನ ಸಿಬ್ಬಂದಿ (ಕ್ಯಾಬಿನ್‌ ಕ್ರೂ) ನೇಮಕಕ್ಕೆ (Air India Recruitment 2023) ಸಂದರ್ಶನ ನಡೆಸುತ್ತಿದೆ. ದೆಹಲಿ ಜೈಪುರ, ಚೆನ್ನೈ, ಹೈದರಾಬಾದ್‌, ಕೋಲ್ಕತ್ತಾ, ಗುವಾಹತಿ, ಅಹ್ಮದಾಬಾದ್‌, ಇಂದೋರ್‌, ಪುಣೆ ಮತ್ತು ಲಕ್ನೋದಲ್ಲಿ ಈ ಸಂದರ್ಶನ ನಡೆಯಲಿದೆ. ಮಾ.24ರ ವರೆಗೆ ವಿವಿಧ ದಿನ ಈ ಸಂದರ್ಶನ ನಡೆಯಲಿದೆ.

ವಿಮಾನದ ಪ್ರಯಾಣಿಕರನ್ನು ಸ್ವಾಗತಿಸುವುದು, ಅವರಿಗೆ ಅಗತ್ಯ ಸೇವೆ ನೀಡುವುದು, ಅವರ ಸುರಕ್ಷತೆಯನ್ನು ನೋಡಿಕೊಳ್ಳುವುದು ಹಾಗೂ ವಿಮಾನದ ಪ್ರಯಾಣದ ವೇಳೆ ನಿರ್ವಹಿಸಬೇಕಾಗಿರುವ ಎಲ್ಲ ಕಾರ್ಯಗಳನ್ನು ನಿರ್ವಹಿಸುವುದು ಈ ಸಿಬ್ಬಂದಿಯ ಕೆಲಸವಾಗಿದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೊಸಬರಾದರೆ 18 ರಿಂದ 27 ವರ್ಷದ ಒಳಗಿನವರಾಗಿರಬೇಕು. ಅನುಭವ ಹೊಂದಿದವರಾದರೆ 35 ವರ್ಷದೊಳಗಿನವರಾಗಿರಬೇಕು.

ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು 155 ಸೆಂ.ಮೀ. ಎತ್ತರವಿರಬೇಕು. ಎತ್ತರಕ್ಕೆ ತಕ್ಕ ತೂಕ ಹೊಂದಿರಬೇಕು. ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಚೆನ್ನಾಗಿ ಮಾತನಾಡಲು ಬರುತ್ತಿರಬೇಕು. ಪಶ್ಚಿಮಾತ್ಯ ಉಡುಗೆ ಧರಿಸಲು ಸಿದ್ಧರಿರಬೇಕು.

ಎಲ್ಲಿ ಎಂದು, ಯಾವಾಗ ಸಂದರ್ಶನ?

ಸ್ಥಳ ದಿನಾಂಕಸಮಯ
ಮುಂಬಯಿ
3 March 2023

9:30 am to 12:30 pm
ದೆಹಲಿ6 march 2023,
13 March 2023,
20 March 2023
9:30 am to 12:30 pm
ಜೈಪುರ7 March 20239:30 am to 12:30 pm
ಚೆನ್ನೈ10 March 20239:30 am to 12:30 pm
ಹೈದರಾಬಾದ್‌10 March 20239:30 am to 12:30 pm
ಕೋಲ್ಕತ್ತಾ14 March 20239:30 am to 12:30 pm
ಗುವಾಹತಿ16 March 20239:30 am to 12:30 pm
ಅಹಮದಾಬಾದ್‌17 March 20239:30 am to 12:30 pm
ಇಂದೋರ್‌21 March 20239:30 am to 12:30 pm
ಮುಂಬಯಿ23 March 20239:30 am to 12:30 pm
ಪುಣೆ24 March 20239:30 am to 12:30 pm
ಲಕ್ನೋ24 March 20239:30 am to 12:30 pm

ಈ ನೇಮಕದ ಕುರಿತ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಲ್ಲಿ ಕ್ಲಿಕ್‌ (Click Here) ಮಾಡಿ.

5,100 ಮಂದಿಗೆ ಉದ್ಯೋಗ

ಕಳೆದ ವಾರ ಏರ್‌ ಇಂಡಿಯಾ 900 ಪೈಲಟ್‌ಗಳು ಹಾಗೂ 4,200 ಸಿಬ್ಬಂದಿಯನ್ನು ಶೀಘ್ರದಲ್ಲಿಯೇ ನೇಮಕ ಮಾಡಿಕೊಳ್ಳುವುದಾಗಿ (Air India hiring) ಪ್ರಕಟಿಸಿತ್ತು. ಒಟ್ಟು 5,100 ಮಂದಿಗೆ ಏರ್‌ಲೈನ್‌ನಲ್ಲಿ ಉದ್ಯೋಗಾವಕಾಶ ಸಿಗಲಿದೆ ಎಂದು ಪ್ರಕಟಿಸಲಾಗಿತ್ತು. ಅದರ ಬೆನ್ನಲ್ಲೇ ಈ ವಿಮಾನ ಸಿಬ್ಬಂದಿ ನೇಮಕದ ಪ್ರಕಟಣೆ ಹೊರ ಬಿದ್ದಿದೆ. ಕಳೆದ ವರ್ಷ ಅಂದರೆ 2022ರ ಮೇ ಮತ್ತು 2023ರ ಫೆಬ್ರವರಿ ನಡುವೆ ಏರ್‌ ಇಂಡಿಯಾ 1900 ಕ್ಯಾಬಿನ್‌ ಸಿಬ್ಬಂದಿಯನ್ನು ನೇಮಿಸಿತ್ತು.

ಇನ್ನಿತರ ಉದ್ಯೋಗದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ಏರ್‌ ಇಂಡಿಯಾ ಮುಂದಿನ 10 ವರ್ಷಗಳಲ್ಲಿ 470 ವಿಮಾನಗಳನ್ನು ಖರೀದಿಸಲು ಏರ್‌ಬಸ್‌ ಮತ್ತು ಬೋಯಿಂಗ್‌ ಜತೆ ಇತ್ತೀಚೆಗೆ ಒಪ್ಪಂದ ಮಾಡಿಕೊಂಡಿದೆ. ಈ ವಿಮಾನ ಖರೀದಿ 840ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ. ಏರ್‌ಬಸ್‌ ಫ್ರಾನ್ಸ್‌ ಮೂಲದ ಏರ್‌ಲೈನ್‌ ಆಗಿದ್ದರೆ, ಬೋಯಿಂಗ್‌ ಅಮೆರಿಕ ಮೂಲದ ಏರ್‌ಲೈನ್‌ ಕಂಪನಿಯಾಗಿದೆ. ಏರ್‌ ಇಂಡಿಯಾವು ಏರ್‌ಬಸ್‌ನಿಂದ ಕಳೆದ 17 ವರ್ಷಗಳ ಬಳಿಕ ಮೊದಲ ಸಲ ವಿಮಾನವನ್ನು ಖರೀದಿಸುತ್ತಿದೆ. ಈ ಡೀಲ್‌ ಪರಿಣಾಮ ಅಮೆರಿಕದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ.

ಭಾರತಕ್ಕೆ ಮುಂದಿನ 15 ವರ್ಷಗಳಲ್ಲಿ 2,000 ವಿಮಾನಗಳ ಅಗತ್ಯವಿದೆ. ಏರ್‌ ಇಂಡಿಯಾದ ಐತಿಹಾಸಿಕ ವಿಮಾನಗಳ ಖರೀದಿ ಡೀಲ್‌ನ ಮೌಲ್ಯ 115 ಶತಕೋಟಿ ಡಾಲರ್‌ ( 9.43 ಲಕ್ಷ ಕೋಟಿ ರೂ.) ಹೀಗಾಗಿ ಭಾರತದಲ್ಲೂ ಮುಂದಿನ ದಶಕದಲ್ಲಿ ಏರ್‌ ಇಂಡಿಯಾ ಒಂದರಲ್ಲಿಯೇ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ.

ಇದನ್ನೂ ಓದಿ: Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆ (Department of Atomic Energy)ಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (Indira Gandhi Centre for Atomic Research) ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IGCAR Recruitment 2024). ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30.

VISTARANEWS.COM


on

Job Alert
Koo

ನವದೆಹಲಿ: ಭಾರತ ಸರ್ಕಾರದ ಪರಮಾಣು ಶಕ್ತಿ ಇಲಾಖೆ (Department of Atomic Energy)ಯ ಅಡಿಯಲ್ಲಿ ಬರುವ ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (Indira Gandhi Centre for Atomic Research) ದೇಶಾದ್ಯಂತ ಖಾಲಿ ಇರುವ ವಿವಿಧ ವೈದ್ಯಕೀಯ ಮತ್ತು ತಾಂತ್ರಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IGCAR Recruitment 2024). ಸೈಂಟಿಫಿಕ್ ಆಫೀಸರ್, ಟೆಕ್ನಿಕಲ್ ಆಫೀಸರ್, ನರ್ಸ್ ಮತ್ತು ಟೆಕ್ನಿಷಿಯನ್ ಸೇರಿದಂತೆ ಒಟ್ಟು 91 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸೈಂಟಿಫಿಕ್‌ ಆಫೀಸರ್‌- 15 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ.
ಟೆಕ್ನಿಕಲ್‌ ಆಫೀಸರ್‌- 20 ಹುದ್ದೆ, ವಿದ್ಯಾರ್ಹತೆ: ಸಂಬಂಧಿತ ವಿಷಯದಲ್ಲಿ ಪದವಿ.
ನರ್ಸ್‌- 25 ಹುದ್ದೆ, ವಿದ್ಯಾರ್ಹತೆ: ನರ್ಸಿಂಗ್‌ನಲ್ಲಿ ಡಿಪ್ಲೋಮಾ / ಪದವಿ.
ಟೆಕ್ನೀಷಿಯನ್‌- 30 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ + ಸರ್ಟಿಫಿಕೇಷನ್‌

ವಯೋಮಿತಿ

ಸೈಂಟಿಫಿಕ್‌ ಆಫೀಸರ್‌: ಗರಿಷ್ಠ ವಯಸ್ಸು 35 ವರ್ಷ, ಟೆಕ್ನಿಕಲ್‌ ಆಫೀಸರ್‌: ಗರಿಷ್ಠ ವಯಸ್ಸು 30 ವರ್ಷ, ನರ್ಸ್‌: ಗರಿಷ್ಠ ವಯಸ್ಸು 32 ವರ್ಷ ಮತ್ತು ಟೆಕ್ನೀಷಿಯನ್‌: ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ದೇಶಾದ್ಯಂತ 25 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬಹುದು. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳಿವೆ. ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದ್ದು ಗಣಿತ, ವಿಜ್ಞಾನ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ.

IGCAR Recruitment 2024ರ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಗತ್ಯ ವಿವರಗಳನ್ನು ನೀಡಿ ಹೆಸರು ನೋಂದಾಯಿಸಿ.
  • ಈಗ ಅಪ್ಲಿಕೇಷನ್‌ ಫಾರಂ ತೆರೆದುಕೊಳ್ಳುತ್ತದೆ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 044 – 47749014ಕ್ಕೆ ಕರೆ ಮಾಡಿ. ಇಮೇಲ್‌ ವಿಳಾಸ: email: techsupport@i-register.co.in.

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading

ಕರ್ನಾಟಕ

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಯ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ.

VISTARANEWS.COM


on

Job News
Koo

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Job Alert: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಅಂತಹವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಚೇರಿ ಸಹಾಯಕ – 5,538 ಹುದ್ದೆ, ಆಫೀಸರ್ ಸ್ಕೇಲ್ 1 – 2,485 ಹುದ್ದೆ, ಆಫೀಸರ್ ಸ್ಕೇಲ್ 2 – 315 ಹುದ್ದೆ, ಆಫೀಸರ್ ಸ್ಕೇಲ್ 2 – 68 ಹುದ್ದೆ, ಆಫೀಸರ್ ಸ್ಕೇಲ್ 2 – 21 ಹುದ್ದೆ, ಆಫೀಸರ್ ಸ್ಕೇಲ್ 2 – 24 ಹುದ್ದೆ, ಆಫೀಸರ್ ಸ್ಕೇಲ್ 2 – 8 ಹುದ್ದೆ, ಆಫೀಸರ್ ಸ್ಕೇಲ್ 2 – 3 ಹುದ್ದೆ, ಆಫೀಸರ್ ಸ್ಕೇಲ್ 2 – 59 ಹುದ್ದೆ, ಆಫೀಸರ್ ಸ್ಕೇಲ್ 3 – 73 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಆಫೀಸರ್ ಸ್ಕೇಲ್ 1 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಆಫೀಸರ್ ಸ್ಕೇಲ್ 2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಆಫೀಸರ್ ಸ್ಕೇಲ್ 3 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 850 ರೂ. ಮತ್ತು ಪ.ಜಾ. / ಪ.ಪಂ. / ಅಂಗವಿಕಲ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಇಂಟರ್‌ನೆಟ್‌ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Unemployment Rate : ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ

VISTARANEWS.COM


on

Unemployment Rate
Koo

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತವು ಉದ್ಯೋಗದ ಪ್ರಮಾಣದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ವರದಿಯೊಂದು ಹೇಳಿದೆ ಭಾರತದ ನಿರುದ್ಯೋಗ ದರವು 2023ರಲ್ಲಿ ಶೇಕಡಾ 3.1 ಕ್ಕೆ ಇಳಿಕೆಯಾಗಿದ್ದು. ಇದು 2022 ರಲ್ಲಿ ಶೇಕಡಾ 7 ರಷ್ಟಿತ್ತು ಎಂದು ಕ್ಯಾಪ್​ಜೆಮಿನಿ ರೀಸರ್ಚ್​ ಸೆಂಟರ್​ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಿಡಿಪಿಯಲ್ಲಿನ ಒಟ್ಟು ಶೇಕಡಾವಾರು ರಾಷ್ಟ್ರೀಯ ಉಳಿತಾಯವು 2022 ರಲ್ಲಿ ಶೇಕಡಾ 29.9 ಕ್ಕೆ ಹೋಲಿಸಿದರೆ 2023 ರಲ್ಲಿ ಶೇಕಡಾ 33.4 ಕ್ಕೆ ಏರಿಕೆಯಾಗಿದೆ ಎಂದೂ ವರದಿ ಹೇಳಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ವಿಚಾರದಲ್ಲಿ ಜಾಗತಿಕವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಅತ್ಯುತ್ತಮವಾಗಿದೆ. ಇಲ್ಲಿ ಎಚ್ಎನ್​ಡಬ್ಲ್ಯುಐ ಸಂಪತ್ತಿನ ಬೆಳವಣಿಗೆಯನ್ನು ಕ್ರಮವಾಗಿ ಶೇಕಡಾ 12.4 ಮತ್ತು ಶೇಕಡಾ 7.9 ಮತ್ತು ಎಚ್​ಎನ್​ಡಬ್ಲ್ಯು ಜನಸಂಖ್ಯೆಯ ಬೆಳವಣಿಗೆ ಕ್ರಮವಾಗಿ ಶೇಕಡಾ 12.2 ಮತ್ತು ಶೇಕಡಾ 7.8 ರಷ್ಟು ದಾಖಲಾಗಿದೆ.

ಈ ಎರಡೂ ದೇಶಗಳಲ್ಲಿನ ಸಂಪತ್ತಿನ ಬೆಳವಣಿಗೆಯು ಸ್ಥಿರ ಆರ್ಥಿಕತೆ ಮತ್ತು ಈಕ್ವಿಟಿ ಮಾರುಕಟ್ಟೆಗಳ ದೃಢವಾದ ಕಾರ್ಯಕ್ಷಮತೆ ಆಗಿದೆ ಎಂದು ವರದಿ ತೋರಿಸಿವೆ. ಕಳೆದ ಆರು ತ್ರೈಮಾಸಿಕಗಳಲ್ಲಿ ಭಾರತದ ಆರ್ಥಿಕತೆಯು ತನ್ನ ತ್ವರಿತ ಗತಿಯಲ್ಲ ಬೆಳೆದಿದೆ. ಇದು ದೃಢವಾದ ಖಾಸಗಿ ಬಳಕೆ ಮತ್ತು ಉತ್ಪಾದನೆ ಮತ್ತು ನಿರ್ಮಾಣ ಚಟುವಟಿಕೆಗಳಲ್ಲಿನ ಸಕಾರಾತ್ಮಕ ಪ್ರವೃತ್ತಿಗಳಿಂದ ಆಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

2022 ರಲ್ಲಿ ಶೇಕಡಾ 6 ರಷ್ಟು ಹೆಚ್ಚಳದ ನಂತರ ದೇಶದ ಮಾರುಕಟ್ಟೆ ಬಂಡವಾಳೀಕರಣವು ಕಳೆದ ವರ್ಷ ಶೇಕಡಾ 29 ರಷ್ಟು ಹೆಚ್ಚಾಗಿದೆ. ಸುಧಾರಿತ ಬಂಡವಾಳ ವೆಚ್ಚ, ಬಲವಾದ ಬ್ಯಾಂಕಿಂಗ್ ವ್ಯವಸ್ಥೆ, ಸಾಲದ ಬೆಳವಣಿಗೆ, ವಾಹನಗಳು ಮತ್ತು ವಿದ್ಯುತ್​ಗೆ ಹೆಚ್ಚಿದ ಬೇಡಿಕೆ ಮತ್ತು ಡಿಜಿಟಲೀಕರಣ-ಚಾಲಿತ ಉತ್ಪಾದನೆಗಳ ಹೆಚ್ಚಳದಂತಹ ಅಂಶಗಳು ಈ ಪ್ರವೃತ್ತಿಯನ್ನು ಹೆಚ್ಚಿಸಿದೆ ಎಂದು ವರದಿಯು ತಿಳಿಸಿದೆ.

ವಿದೇಶಿ ಬಂಡವಾಳ ಹೂಡಿಕೆ (ಎಫ್ಪಿಐ) ಹರಿವು 2023-24ರಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಒಟ್ಟು ಎಫ್ಪಿಐ ಒಳಹರಿವು 24.9 ಬಿಲಿಯನ್ ಡಾಲರ್ (ಡಿಸೆಂಬರ್ 6 ರವರೆಗೆ) ಹಿಂದಿನ ಎರಡು ವರ್ಷಗಳ ನಿವ್ವಳ ಹೊರಹರಿವಿಗೆ ಹೋಲಿಸಿದರೆ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

Continue Reading
Advertisement
NED vs RSA
T20 ವಿಶ್ವಕಪ್44 seconds ago

NED vs RSA: ಹೋರಾಡಿ ಸೋತ ನೆದರ್ಲೆಂಡ್ಸ್​; ಹರಿಣ ಪಡೆಗೆ ಪ್ರಯಾಸದ ಗೆಲುವು

Karnataka police
ಕರ್ನಾಟಕ2 hours ago

Davanagere News: ದಾವಣಗೆರೆಯಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ; ನಾಲ್ವರ ಬಂಧನ

French Open Final 2024
ಪ್ರಮುಖ ಸುದ್ದಿ2 hours ago

French Open Final 2024: 4ನೇ​ ಫ್ರೆಂಚ್‌ ಓಪನ್‌ ಟ್ರೋಫಿ ಗೆದ್ದ ಇಗಾ ಸ್ವಿಯಾಟೆಕ್‌

Govt Employees
ಕರ್ನಾಟಕ2 hours ago

Govt Employees: ಪ್ರತಿ ಸೋಮವಾರ ಕೇಂದ್ರ ಕಚೇರಿಗಳಿಗೆ ಅಧಿಕಾರಿ, ನೌಕರರ ಹಾಜರು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Kisan Samman Nidhi
ಪ್ರಮುಖ ಸುದ್ದಿ2 hours ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ3 hours ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

World Environment Day Celebration at Kittur Rani Chennamma Residential School
ದಾವಣಗೆರೆ3 hours ago

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Physical Abuse
ಕರ್ನಾಟಕ3 hours ago

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

World Environment Day Celebration at Kamaruru Government higher Primary School
ಶಿವಮೊಗ್ಗ3 hours ago

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ3 hours ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ7 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌