Shah Rukh Khan: ಶಾರುಖ್‌ ಖಾನ್‌ ಬಂಗಲೆಗೆ ಅಕ್ರಮವಾಗಿ ನುಗ್ಗಿದ ಇಬ್ಬರು ಯುವಕರು: ಆರೋಪಿಗಳ ವಿರುದ್ಧ ಎಫ್‌ಐಆರ್‌ - Vistara News

ಬಾಲಿವುಡ್

Shah Rukh Khan: ಶಾರುಖ್‌ ಖಾನ್‌ ಬಂಗಲೆಗೆ ಅಕ್ರಮವಾಗಿ ನುಗ್ಗಿದ ಇಬ್ಬರು ಯುವಕರು: ಆರೋಪಿಗಳ ವಿರುದ್ಧ ಎಫ್‌ಐಆರ್‌

ಮಾರ್ಚ್ 2ರಂದು ಬೆಳ್ಳಂಬೆಳಗ್ಗೆ ಈ ಘಟನೆ ಸಂಭವಿಸಿದ್ದು ಮನೆಯ ಕಾಂಪೌಂಡ್ ಗೋಡೆಯನ್ನು ಜಿಗಿದು ಶಾರುಖ್‌ (Shah Rukh Khan) ಮನೆಗೆ ಪ್ರವೇಶಿಸಿದ್ದಾರೆ. ನಂತರ ಯುವಕರನ್ನು ಶಾರುಖ್‌ ಭದ್ರತಾ ಸಿಬ್ಬಂದಿ ಹಿಡಿದು ಬಾಂದ್ರಾ ಪೊಲೀಸರಿಗೆ ಒಪ್ಪಿಸಿದ್ದಾರೆ.

VISTARANEWS.COM


on

Two Men Break In At Shah Rukh Khan's Bungalow Mannat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಂದ್ರಾದಲ್ಲಿರುವ ಶಾರುಖ್ ಖಾನ್ (Shah Rukh Khan) ಅವರ ಬಂಗಲೆ ಮನ್ನತ್‌ಗೆ ಇಬ್ಬರು ಯುವಕರು ಅಕ್ರಮವಾಗಿ ನುಗ್ಗಿದ್ದಾರೆ. ಮಾರ್ಚ್ 2ರಂದು ಬೆಳ್ಳಂಬೆಳಗ್ಗೆ ಈ ಘಟನೆ ಸಂಭವಿಸಿದ್ದು ಮನೆಯ ಕಾಂಪೌಂಡ್ ಗೋಡೆಯನ್ನು ಜಿಗಿದು ಶಾರುಖ್‌ ಮನೆಗೆ ಪ್ರವೇಶಿಸಿದ್ದಾರೆ. ನಂತರ ಯುವಕರನ್ನು ಶಾರುಖ್‌ ಭದ್ರತಾ ಸಿಬ್ಬಂದಿ ಹಿಡಿದು ಬಾಂದ್ರಾ ಪೊಲೀಸರಿಗೆ ಒಪ್ಪಿಸಿದ್ದಾರೆ. ಶಾರುಖ್‌ ಅವರು ಜವಾನ್ ಚಿತ್ರೀಕರಣದಲ್ಲಿದ್ದಾಗ ಅಭಿಮಾನಿಗಳು ಕಾಂಪೌಂಡ್‌ಗೆ ನುಗ್ಗಿರುವುದಾಗಿ ವರದಿಯಾಗಿದೆ.

ಮತ್ತೊಂದು ವರದಿ ಪ್ರಕಾರ ಈ ಘಟನೆ ಮುಂಜಾನೆ 4 ಗಂಟೆಯ ಸುಮಾರಿಗೆ ಸಂಭವಿಸಿದ್ದು, ಮತ್ತು ಇಬ್ಬರು ವ್ಯಕ್ತಿಗಳು ಭಾರತೀಯ ದಂಡ ಸಂಹಿತೆಯ (IPC) ಅಡಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಇದೀಗ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ.

ಪೊಲೀಸ್‌ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ʻʻಶಾರುಖ್‌ ಖಾನ್ ಅವರನ್ನು ಯುವಕರು ಹತ್ತಿರದಿಂದ ನೋಡಲು ಬಯಸಿದ್ದರು. ಇದುವರೆಗಿನ ವಿಚಾರಣೆಗಳ ಪ್ರಕಾರ ಇದನ್ನು ಬಿಟ್ಟು ಅಪರಾಧಿಗಳು ಯಾವುದೇ ದುರುದ್ದೇಶವಿರಲಿಲ್ಲ. ನಾವು ಅವರ ಕುಟುಂಬದ ಸದಸ್ಯರ ವಿವರಗಳನ್ನು ತೆಗೆದುಕೊಂಡಿದ್ದೇವೆ. ಮತ್ತು ಅವರಿಗೆ ಕರೆ ಮಾಡುತ್ತಿದ್ದೇವೆ ಮತ್ತು ಅವರು ಯಾವುದೇ ರೀತಿಯ ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದರೆ ಗುಜರಾತ್ ಪೊಲೀಸರೊಂದಿಗೆ ಪರಿಶೀಲಿಸುತ್ತೇವೆ. ಮುಂಬೈ ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆʼʼ ಎಂದಿದ್ದಾರೆ. 22 ಮತ್ತು 25 ವರ್ಷದ ಯುವಕರು ಆಗಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Shah Rukh Khan : ಶಾರುಖ್​ ಖಾನ್​ ಬಳಿ ಐಷಾರಾಮಿ ಕಾರುಗಳೇ ಇಲ್ಲವಂತೆ! ಹೌದಾ?

ಇವರಿಬ್ಬರು ಗುಜರಾತ್‌ನ ಸೂರತ್‌ ಮೂಲದವರಾಗಿದ್ದು, ಅವರ ಕುಟುಂಬದವರನ್ನು ಸಂಪರ್ಕಿಸಲಾಗುವುದು ಎಂದು ತನಿಖೆಯಿಂದ ತಿಳಿದುಬಂದಿದೆ. ಶಾರುಖ್ ಅವರು ಅಟ್ಲೀ ನಿರ್ದೇಶನದ ಜವಾನ್‌ನಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಅವರೊಂದಿಗೆ ನಟಿಸಲಿದ್ದಾರೆ. ಚಿತ್ರ ಪೋಸ್ಟ್-ಪ್ರೊಡಕ್ಷನ್ ಹಂತದಲ್ಲಿದ್ದು, ಈ ವರ್ಷ ಜೂನ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Kangana Ranaut: ದೂರದೃಷ್ಟಿಯೇ ಇಲ್ಲದ ರಾಹುಲ್ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ: ಕಂಗನಾ

ರಾಹುಲ್ ಗಾಂಧಿ ಎಂದರೆ ಅವ್ಯವಸ್ಥೆ. ಅವರಿಗೆ ತಮ್ಮ ಭಾಷಣಗಳಲ್ಲಿ, ನಡವಳಿಕೆಯಲ್ಲಿ ಗೊಂದಲಮಯರಾಗಿದ್ದಾರೆ. ಲೋಕಸಭೆಯಲ್ಲಿ ಭಾಷಣ ಮಾಡುವಾಗ ಹಿಂದೂ ದೇವರಾದ ಶಿವನ ಚಿತ್ರಗಳನ್ನು ತೋರಿಸಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರಣಾವತ್ (Kangana Ranaut), ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

VISTARANEWS.COM


on

By

Kangana Ranaut
Koo

ಕಾಂಗ್ರೆಸ್ ನಾಯಕ (Congress leader) ರಾಹುಲ್ ಗಾಂಧಿ (Rahul Gandhi) ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಸಂಸದೆ (BJP MP), ನಟಿ ಕಂಗನಾ ರಣಾವತ್ (Kangana Ranaut), ರಾಹುಲ್ ಗಾಂಧಿಗೆ ಯಾವುದೇ ದೂರದೃಷ್ಟಿ ಇಲ್ಲ ಮತ್ತು ನಿರಂತರವಾಗಿ ಮಾರ್ಗವನ್ನು ಬದಲಾಯಿಸುತ್ತಾರೆ. ಕಾಂಗ್ರೆಸ್ ಸಂಸದರು ಒಂದು ಕೊಳಕು ಎಂದು ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಕಂಗನಾ, ರಾಹುಲ್ ಗಾಂಧಿ ಎಂದರೆ ಅವ್ಯವಸ್ಥೆ. ಅವರಿಗೆ ತಮ್ಮ ಭಾಷಣಗಳಲ್ಲಿ, ನಡವಳಿಕೆಯಲ್ಲಿ ಗೊಂದಲಮಯರಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಭಾಷಣ ಮಾಡುವಾಗ ಹಿಂದೂ ದೇವರಾದ ಶಿವನ ಚಿತ್ರಗಳನ್ನು ತೋರಿಸಿದ್ದಕ್ಕಾಗಿ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ, ಅವರನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಯಾವುದೇ “ಸಂಘಟಿತ ಕಲ್ಪನೆ” ಕಾಣಲಿಲ್ಲ ಮತ್ತು ಅವರು ನಿರಂತರವಾಗಿ ಮಾರ್ಗಗಳನ್ನು ಬದಲಾಯಿಸುತ್ತಿದ್ದಾರೆ ಎಂದು ಆರೋಪಿಸಿದರು.

ಅವರು ನಾಯಕರಾಗಿ ಯಾರು ಎಂಬ ನಿರ್ಣಾಯಕ ಕಲ್ಪನೆಯನ್ನು ಹೊಂದಿಲ್ಲ ಎಂದು ತೋರುತ್ತದೆ. ಕೇವಲ ಕುರ್ಚಿಯನ್ನು ಬೆನ್ನಟ್ಟುತ್ತಿದ್ದಾರೆ ಮತ್ತು ಪ್ರತಿ ಬಾರಿ ಅವರು ತಮ್ಮ ಮಾರ್ಗವನ್ನು ಬದಲಾಯಿಸುತ್ತಿದ್ದಾರೆ ಎಂದು ಹೇಳಿದರು.

ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಕಂಗನಾ, ಕೇಂದ್ರ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪ್ರತಿಭಟನೆಗಳು ಭಾರತದಲ್ಲಿ ಬಾಂಗ್ಲಾದೇಶದಂತಹ ನಾಗರಿಕ ಅಶಾಂತಿಗೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ.

ಇತ್ತೀಚಿಗೆ ಸಂಸದೆ ಕಂಗನಾ ರಣಾವತ್‌ ರೈತರ ಪ್ರತಿಭಟನೆ ವಿರುದ್ಧ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಕೇಂದ್ರದಲ್ಲಿದ್ದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ರೈತರ ಪ್ರತಿಭಟನೆ ಭಾರತದಲ್ಲಿ ಬಾಂಗ್ಲಾದೇಶದಂತಹ ಪರಿಸ್ಥಿತಿಗೆ ಕಾರಣವಾಗುತ್ತಿತ್ತು ಎಂದು ಹೇಳಿಕೆ ನೀಡಿ ಮತ್ತೊಮ್ಮೆ ರೈತರ ಕೋಪಕ್ಕೆ ಕಾರಣವಾಗಿದ್ದರು.

ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕಂಗನಾ ರಣಾವತ್‌‌ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಸಮಯದಲ್ಲಿ, “ಶವಗಳನ್ನು ನೇತುಹಾಕುತ್ತಿರುವುದು ಕಂಡುಬಂದಿದೆ ಮತ್ತು ಅತ್ಯಾಚಾರಗಳು ನಡೆಯುತ್ತಿದ್ದವು,” ಎಂದು ಆರೋಪಿಸಿದ್ದರು. ಕಾನೂನುಗಳನ್ನು ಹಿಂತೆಗೆದುಕೊಂಡ ನಂತರವೂ ಪ್ರತಿಭಟನೆಗಳು ಮುಂದುವರಿಯುತ್ತಿರುವುದಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ಮತ್ತು “ವಿದೇಶಿ ಶಕ್ತಿಗಳೇ ” ಕಾರಣ ಎಂದು ದೂಷಿಸಿದ್ದರು.

ಇದನ್ನೂ ಓದಿ: Crimes Against Women: ಮಹಿಳೆಯರ ವಿರುದ್ಧದ ಅಪರಾಧ ಆರೋಪ: ಪ.ಬಂಗಾಳದ ಶಾಸಕ, ಸಂಸದರೇ ಹೆಚ್ಚು!

ಕಂಗನಾ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮೋದಿ ಸರ್ಕಾರದ ಪ್ರಚಾರ ಯಂತ್ರವು “ನಿರಂತರವಾಗಿ ರೈತರನ್ನು ಅವಮಾನಿಸುತ್ತಿದೆ” ಎಂದು ಆರೋಪಿಸಿದರು.


ಈ ಕುರಿತು ಎಕ್ಸ್ ನಲಿ ಪೋಸ್ಟ್ ಮಾಡಿರುವ ಅವರು, 378 ದಿನಗಳ ಮ್ಯಾರಥಾನ್ ಹೋರಾಟದಲ್ಲಿ 700 ಸಹೋದ್ಯೋಗಿಗಳನ್ನು ಬಲಿಕೊಟ್ಟ ರೈತರನ್ನು ಬಿಜೆಪಿ ಸಂಸದರು ಅತ್ಯಾಚಾರಿಗಳು ಮತ್ತು ವಿದೇಶಿ ಶಕ್ತಿಗಳ ಪ್ರತಿನಿಧಿಗಳು ಎಂದು ಕರೆಯುವುದು ಬಿಜೆಪಿಯ ರೈತ ವಿರೋಧಿ ನೀತಿ ಮತ್ತು ಉದ್ದೇಶಗಳಿಗೆ ಮತ್ತೊಂದು ಪುರಾವೆಯಾಗಿದೆ ಎಂದು ತಿಳಿಸಿದ್ದು, ರೈತ ಸಂಸ್ಥೆಗಳು ಮತ್ತು ರಾಜಕಾರಣಿಗಳ ಕುರಿತು ನಟಿಯ ಹೇಳಿಕೆಗಳನ್ನು ಖಂಡಿಸಿದ್ದಾರೆ.

Continue Reading

ಸಿನಿಮಾ

Kangana Ranaut: ‘ಎಮರ್ಜೆನ್ಸಿ’ ಚಿತ್ರ ಬಿಡುಗಡೆಗೂ ಮುನ್ನ ಶಿರಚ್ಛೇದದ ಬೆದರಿಕೆ; ಪೊಲೀಸರ ಸಹಾಯ ಕೇಳಿದ ಕಂಗನಾ

ಸೆಪ್ಟೆಂಬರ್ 6 ರಂದು ಚಿತ್ರಮಂದಿರಗಳಲ್ಲಿ ಎಮರ್ಜೆನ್ಸಿ ಚಿತ್ರ ಬಿಡುಗಡೆಯಾಗುವುದಕ್ಕೂ ಮುನ್ನ ಸಾಮಾಜಿಕ ಮಾಧ್ಯಮದ ಮೂಲಕ ಕಂಗನಾ ರಣಾವತ್ ಗೆ (Kangana Ranaut) ಶಿರಚ್ಛೇದದ ಬೆದರಿಕೆ ಬಂದಿದ್ದು, ಅವರು ಪೊಲೀಸರ ರಕ್ಷಣೆ ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಅವರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತ ಪಡಿಸಿದ್ದಾರೆ.

VISTARANEWS.COM


on

By

Kangana Ranaut
Koo

ಮುಂಬೈ: ಬಹುನಿರೀಕ್ಷಿತ ಬಾಲಿವುಡ್‌ನ ʼಎಮರ್ಜೆನ್ಸಿʼ ಚಿತ್ರ (Emergency Movie) ಬಿಡುಗಡೆಗೂ ಮುನ್ನ ಸಾಮಾಜಿಕ ಮಾಧ್ಯಮದ (Social media) ಮೂಲಕ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ನಟಿ (actress), ಬಿಜೆಪಿ ಸಂಸದೆ (BJP MP) ಕಂಗನಾ ರಣಾವತ್ (Kangana Ranaut) ಪೊಲೀಸರ ಸಹಾಯವನ್ನು ಕೋರಿದ್ದಾರೆ. ಸೆಪ್ಟೆಂಬರ್ 6ರಂದು ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ನಟಿಸುವ ಜತೆಗೆ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬ, ಒಂದು ವೇಳೆ ಈ ಚಿತ್ರ ಬಿಡುಗಡೆಯಾದರೆ ನೀವು ಸರ್ದಾರರಿಂದ ಚಪ್ಪಲಿ ಏಟು ಪಡೆಯುತ್ತೀರಿ. ನಾನು ಅತ್ಯಂತ ಹೆಮ್ಮೆಯ ಭಾರತೀಯ. ನನ್ನ ದೇಶದಲ್ಲಿ, ನನ್ನ ಮಹಾರಾಷ್ಟ್ರದಲ್ಲಿ ನಾನು ಎಲ್ಲಿಯಾದರೂ ನಿಮ್ಮನ್ನು ಕಂಡರೆ ನಾನು ಸಿಖ್ ಮತ್ತು ಹೆಮ್ಮೆಯ ಮರಾಠಿ ಎಂದು ಹೇಳುತ್ತೇನೆ. ನನ್ನ ಎಲ್ಲ ಹಿಂದೂ, ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಹೋದರರು ಸಹ ಚಪ್ಪಲಿಗಳೊಂದಿಗೆ ನಿಮ್ಮನ್ನು ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ.

ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡ ಕಂಗನಾ, “ದಯವಿಟ್ಟು ಇದನ್ನು ನೋಡಿ” ಎಂದು ಬರೆದು ಹಿಮಾಚಲ, ಮಹಾರಾಷ್ಟ್ರ ಮತ್ತು ಪಂಜಾಬ್ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.


ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ. ಅವರು ಚಿತ್ರದಲ್ಲಿ ಸಿಖ್ಖರನ್ನು ಭಯೋತ್ಪಾದಕರಂತೆ ಬಿಂಬಿಸಿದ್ದಾರೆ. ಚಿತ್ರದಲ್ಲಿ ತೋರಿಸಿರುವ ದೃಶ್ಯಗಳು ನಿಜವಾಗಿ ಆಗಿದೆಯೇ? ಸತ್ವಂತ್ ಸಿಂಗ್ ಮತ್ತು ಬಿಯಾಂತ್ ಸಿಂಗ್ ಯಾರೆಂದು ನೆನಪಿಸಿಕೊಳ್ಳಿ. ಯಾರ ಮೇಲೆ ನಾವು ಬೆರಳು ತೋರಿಸುತ್ತೇವೆಯೋ ಉಳಿದ ಬೆರಳು ಗಳು ನಮ್ಮನ್ನು ತೋರಿಸುತ್ತವೆ. ನಮಗೆ ತಲೆಯ ಬಲಿ ನೀಡಲೂ ಗೊತ್ತಿದೆ, ತಲೆ ಕಡಿಯಲು ಗೊತ್ತಿದೆ ಎಂದು ಇನ್ನೊಬ್ಬ ವ್ಯಕ್ತಿ ಹೇಳಿರುವುದು ಈ ವಿಡಿಯೊದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Kannada New Movie: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಚಿತ್ರ ನ.15ಕ್ಕೆ ರಿಲೀಸ್‌

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಕೂಡಲೇ ಕಂಗನಾ ಸುರಕ್ಷತೆಯ ಬಗ್ಗೆ ಹಲವು ಬಳಕೆದಾರರು ಕಳವಳ ವ್ಯಕ್ತಪಡಿಸಿದ್ದಾರೆ.

ಒಬ್ಬ ಬಳಕೆದಾರರು, ನಮ್ಮ ರಾಷ್ಟ್ರದಲ್ಲಿ ಏನಾಗುತ್ತಿದೆ? ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್‌ಗೆ ಜನರು ಬಹಿರಂಗವಾಗಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಸರಳವಾಗಿ ಭಾರತದ ಇತಿಹಾಸವನ್ನು ಚಿತ್ರಿಸಲು, ದೇಶದ ಬಲಿಷ್ಠ ಪ್ರಧಾನಮಂತ್ರಿಗಳಲ್ಲಿ ಒಬ್ಬರೆಂದು ಹೇಳಿಕೊಳ್ಳುವ ಭಾರತದ ಉಕ್ಕಿನ ಮಹಿಳೆಯ ಕಥೆಯನ್ನು ಹೇಳುವುದು ತಪ್ಪೇ? ದಯವಿಟ್ಟು ನಿಮ್ಮ ಭದ್ರತೆಯನ್ನು ಹೆಚ್ಚಿಸಿಕೊಳ್ಳಿ. ನಿಮ್ಮ ಸುರಕ್ಷತೆಗಾಗಿ ನಾವು ನಿಜವಾಗಿಯೂ ಕಾಳಜಿ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

Continue Reading

ಸಿನಿಮಾ

Aamir Khan: ಕುಟುಂಬಕ್ಕಾಗಿ ಬಾಲಿವುಡ್ ತೊರೆಯಲು ಮುಂದಾಗಿದ್ದ ಎಂದ ಅಮೀರ್ ಖಾನ್

ರಿಯಾ ಚಕ್ರವರ್ತಿ ಅವರ ಪಾಡ್‌ಕಾಸ್ಟ್‌ನ ಇತ್ತೀಚಿನ ಚಾಟ್‌ನಲ್ಲಿ ಅಮೀರ್ ಖಾನ್ (Aamir Khan) ಮಾತನಾಡಿ, ಕಿರಣ್ ರಾವ್ ಮತ್ತು ಅವರ ಮಕ್ಕಳೊಂದಿಗೆ ಕುಟುಂಬದ ಸಮಯವನ್ನು ಕೇಂದ್ರೀಕರಿಸಲು ಬಾಲಿವುಡ್ ಅನ್ನು ತೊರೆಯಲು ಸಿದ್ಧ ಎಂದು ತಿಳಿಸಿದರು. ಆದರೆ ಇದು ಅವರ ಕುಟುಂಬಕ್ಕೆ ಸಂಪೂರ್ಣವಾಗಿ ದಿಗ್ಭ್ರಮೆಗೊಳ್ಳುವಂತೆ ಮಾಡಿತು. ಅವರೊಂದಿಗೆ ಮಾತನಾಡಿ, ಸಿನಿಮಾದಿಂದ ದೂರ ಸರಿಯದಂತೆ ಒತ್ತಾಯಿಸಿದರು ಎಂದು ಹೇಳಿದ್ದಾರೆ.

VISTARANEWS.COM


on

By

Aamir Khan
Koo

ಬೆಂಗಳೂರು: ಮಾಜಿ ಪತ್ನಿ ಕಿರಣ್ ರಾವ್ (Kiran Rao) ಮತ್ತು ಮಕ್ಕಳೊಂದಿಗೆ ಸಮಯ ಕಳೆಯಲು ಬಾಲಿವುಡ್ (bollywood) ತೊರೆಯಲು ಸಿದ್ದ ಎಂದು ಬಾಲಿವುಡ್ ನ ಮಿಸ್ಟರ್ ಪರ್ಫೆಕ್ಟ್ (Mr. Perfect of Bollywood) ಅಮೀರ್ ಖಾನ್ (Aamir Khan) ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ರಿಯಾ ಚಕ್ರವರ್ತಿ (Rhea Chakraborty) ಅವರ ಪಾಡ್ ಕಾಸ್ಟ್‌‌ನಲ್ಲಿ ಮಾತನಾಡಿರುವ ಅಮೀರ್ ಖಾನ್, ಸಿನಿಮಾ ಉದ್ಯಮ ತೊರೆಯುವ ಕುರಿತು ಮಾತನಾಡಿದರು.

ಕಿರಣ್ ರಾವ್ ಮತ್ತು ಅವರ ಮಕ್ಕಳೊಂದಿಗೆ ಕುಟುಂಬದ ಸಮಯ ಮೀಸಲಿಡಲು ಬಾಲಿವುಡ್ ಅನ್ನು ತೊರೆಯಲು ಸಿದ್ಧ ಎಂದು ತಿಳಿಸಿದ್ದಾರೆ, ಆದರೆ ಇದು ಅವರ ಕುಟುಂಬಕ್ಕೆ ಸಂಪೂರ್ಣವಾಗಿ ದಿಗ್ಭ್ರಮೆಗೊಳ್ಳುವಂತೆ ಮಾಡಿತು. ಅವರೊಂದಿಗೆ ಮಾತನಾಡಿ, ಸಿನಿಮಾದಿಂದ ದೂರ ಸರಿಯದಂತೆ ಒತ್ತಾಯಿಸಿದರು. ಪಾಡ್‌ಕ್ಯಾಸ್ಟ್‌‌ನಲ್ಲಿ ಅಮೀರ್ ಖಾನ್ ಅವರ ಕುಟುಂಬವು ಚಲನಚಿತ್ರಗಳನ್ನು ತೊರೆಯದಂತೆ ತಾಕೀತು ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ನಾನು ಮೂರು ವರ್ಷಗಳ ಹಿಂದೆ ಚಲನಚಿತ್ರಗಳನ್ನು ತೊರೆಯುತ್ತಿದ್ದೇನೆ ಎಂದು ಹೇಳಿದಾಗ ಕುಟುಂಬದವರ ಪ್ರತಿಕ್ರಿಯೆ ಹೀಗಿತ್ತು, ನೀವು ಚಲನಚಿತ್ರಗಳನ್ನು ಹೇಗೆ ಬಿಡುತ್ತೀರಿ? ಕಳೆದ 30 ವರ್ಷಗಳಿಂದ ಹುಚ್ಚರಂತೆ ಅದರಲ್ಲೇ ತೊಡಗಿಸಿಕೊಂಡಿದ್ದೀರಿ. ಈಗ ಭಾವುಕರಾಗಿ ಹೀಗೆ ಹೇಳುತ್ತಿರಬೇಕು. ಆದರೆ ನಿಮಗೆ ಅದು ಸಾಧ್ಯವಾಗುವುದಿಲ್ಲ ಎಂದಿದ್ದರು ಎಂದು ಹೇಳಿದ್ದಾರೆ.

ನಂತರ ನಾನು ನನ್ನ ತಂಡ, ನಿರ್ಮಾಣ ತಂಡವನ್ನು ಕರೆದೆ. ಅದರಲ್ಲಿ ಕಿರಣ್ ಕೂಡ ಇದ್ದರು. ನಾನು ಇನ್ನು ಮುಂದೆ ಈ ಕಂಪನಿಯಲ್ಲಿ ಇರುವುದಿಲ್ಲ ಎಂದು ಹೇಳಿದೆ. ಯಾಕೆಂದರೆ ನಾನು ಚಲನಚಿತ್ರಗಳನ್ನು ಮಾಡುವುದನ್ನು ನಿಲ್ಲಿಸುತ್ತೇನೆ. ನೀವು ನನ್ನಿಂದ ಕಂಪನಿಯನ್ನು ತೆಗೆದುಕೊಂಡು ಚಲನಚಿತ್ರಗಳನ್ನು ಮಾಡಬೇಕೆಂದು ನಾನು ಬಯಸುತ್ತೇನೆ ಎಂದು ಹೇಳಿರುವುದಾಗಿ ತಿಳಿಸಿದರು.


ಲಾಲ್ ಸಿಂಗ್ ಚಡ್ಡಾದಲ್ಲಿ ಕೊನೆಯದಾಗಿ ನಟಿಸಿದ ಅಮೀರ್, ತನ್ನ ನಿರ್ಧಾರದಿಂದ ಎಲ್ಲರೂ ಆಘಾತಕ್ಕೊಳಗಾಗಿದ್ದರು, ಅದೇ ರೀತಿ ಅಸಮಾಧಾನಗೊಂಡಿದ್ದರು. ಕಿರಣ್ ರಾವ್‌, ನಮ್ಮೆಲ್ಲರನ್ನೂ ಬಿಟ್ಟು ಹೋಗುತ್ತೀಯ ಎಂದು ಕೇಳಿದ್ದರು. ನಾನು ಇಲ್ಲ, ನಾನು ಚಲನಚಿತ್ರಗಳನ್ನು ಬಿಡುತ್ತಿದ್ದೇನೆ. ನಿಮ್ಮೆಲ್ಲರೊಂದಿಗೆ ಹೆಚ್ಚು ಸಮಯ ಕಳೆಯುತ್ತೇನೆ ಎಂದು ಹೇಳಿದೆ.

ಇದನ್ನೂ ಓದಿ: Mollywood Sex Mafia: ಸ್ಟಾರ್‌ ನಟ, ನಿರ್ದೇಶಕನ ವಿರುದ್ಧ ಕಾಸ್ಟ್‌ ಕೌಚಿಂಗ್‌ ಆರೋಪ; SIT ತನಿಖೆಗೆ ಆದೇಶ

ಆಗ ಕಿರಣ್ , ನನಗೆ ಅರ್ಥವಾಗುತ್ತಿಲ್ಲ. ನೀನು ಸಿನಿಮಾಕ್ಕೆಂದೇ ಹುಟ್ಟಿದ ಮಗು. ನೀನು ಅದನ್ನು ತೊರೆದರೆ ಜೀವನ ಮತ್ತು ಜಗತ್ತನ್ನು ಬಿಡುತ್ತಿಯ. ನಾನು ಆ ಲೋಕದ ಭಾಗವಾಗಿದ್ದೇನೆ. ಹೀಗಾಗಿ ನೀನು ನಮ್ಮನ್ನು ಬಿಟ್ಟು ಹೋಗುತ್ತಿದ್ದೀಯ ಎಂದು ಅಳುತ್ತಿದ್ದಳು. ಆಗ ನಾನು ಅವಳಿಗೆ ಹೇಳಿದೆ, ನೀನು ತಪ್ಪಾಗಿ ಗ್ರಹಿಸುತ್ತಿದ್ದೀಯ ಎಂದೆ. ಆದರೆ ಅವಳು ಸರಿಯಾಗಿ ಹೇಳಿದ್ದಳು. ಎಂದು ಆಗ ನನಗೆ ತಿಳಿದಿರಲಿಲ್ಲ.

ಅಮೀರ್ ಖಾನ್ ಸದ್ಯ ಸಿತಾರೆ ಜಮೀನ್ ಪರ್ ಸಿನಿಮಾದಲ್ಲಿದ್ದಾರೆ. ವೈಯಕ್ತಿಕವಾಗಿ, ಅಮೀರ್ ಖಾನ್ ಮತ್ತು ಕಿರಣ್ ರಾವ್ 2005 ರಲ್ಲಿ ವಿವಾಹವಾಗಿದ್ದು, 2021ರಲ್ಲಿ ವಿಚ್ಛೇದನ ಪಡೆಯುವುದಾಗಿ ಘೋಷಿಸಿದರು.

Continue Reading

ಸಿನಿಮಾ

Amy Jackson : ಮದುವೆಯ ಮೊದಲ ಚಿತ್ರಗಳನ್ನು ಹಂಚಿಕೊಂಡ ನಟಿ ಆ್ಯಮಿ ಜಾಕ್ಸನ್‌

Amy Jackson : ಆಮಿ ವಧು ಧರಿಸುವ ಗೌನ್‌‌ನಲ್ಲಿ ಮಿಂಚಿದ್ದಾರೆ. ಸೊಗಸಾದ ಬಿಳಿ ಮತ್ತು ಕಪ್ಪು ಟಕ್ಸೆಡೋ ಧರಿಸಿದ ಎಡ್ ಭಾವಿ ಪತ್ನಿಗಾಗಿ ಕಾಯುತ್ತಿದ್ದಳು. ಅಲ್ಲಿನ ಅಲಂಕಾರವು ಕನಸಿನ ವಾತಾವರಣಕ್ಕೆ ಸಂಪೂರ್ಣವಾಗಿ ಪೂರಕವಾಗಿತ್ತು. ಆಮಿಯ ಗೌನ್‌ ಕೂಡ ಆಕರ್ಷಕವಾಗಿತ್ತು. “ಪ್ರಯಾಣವು ಈಗಷ್ಟೇ ಪ್ರಾರಂಭವಾಗಿದೆ” ಎಂದು ದಂಪತಿ ತಮ್ಮ ಮದುವೆಯ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

VISTARANEWS.COM


on

Amy Jackson
Koo

ಬೆಂಗಳೂರು: ‘ಸಿಂಗ್ ಈಸ್ ಬ್ಲಿಂಗ್’ ಸಿನಿಮಾ ಖ್ಯಾತಿಯ ಆಮಿ ಜಾಕ್ಸನ್ (Amy Jackson) ಪ್ರಿಯತಮ ಎಡ್ ವೆಸ್ಟ್ವಿಕ್ ಅವರನ್ನು ವಿವಾಹವಾದರು. ಇಟಲಿಯ ಅಮಲ್ಫಿ ಕರಾವಳಿಯಲ್ಲಿ ಐಷಾರಾಮಿ ನೌಕೆಯಲ್ಲಿ ನಡೆದ ಪಾರ್ಟಿಯಲ್ಲಿ ದಂಪತಿ ತಮ್ಮ ವಿವಾಹ ಆಚರಣೆಗಳನ್ನು ನಡೆಸಿದರು. ಅವರ ಆಪ್ತ ಸ್ನೇಹಿತರು ಮತ್ತು ಕುಟುಂಬವು ಮದುವೆಯ ಭಾಗವಾಗಿದ್ದರು. ವಿವಾಹಪೂರ್ವ ಉತ್ಸವಗಳ ಚಿತ್ರಗಳು ತಕ್ಷಣದಲ್ಲೇ ಆನ್‌ಲೈನ್‌ನಲ್ಲಿ ವೈರಲ್‌ ಆದವು. ದಂಪತಿಗಳು ಅಂತಿಮವಾಗಿ ಫೋಟೋಗಳ ಗುಂಪನ್ನು ಹಂಚಿಕೊಂಡಿದ್ದಾರೆ.

ಆಮಿ ವಧು ಧರಿಸುವ ಗೌನ್‌‌ನಲ್ಲಿ ಮಿಂಚಿದ್ದಾರೆ. ಸೊಗಸಾದ ಬಿಳಿ ಮತ್ತು ಕಪ್ಪು ಟಕ್ಸೆಡೋ ಧರಿಸಿದ ಎಡ್ ಭಾವಿ ಪತ್ನಿಗಾಗಿ ಕಾಯುತ್ತಿದ್ದಳು. ಅಲ್ಲಿನ ಅಲಂಕಾರವು ಕನಸಿನ ವಾತಾವರಣಕ್ಕೆ ಸಂಪೂರ್ಣವಾಗಿ ಪೂರಕವಾಗಿತ್ತು. ಆಮಿಯ ಗೌನ್‌ ಕೂಡ ಆಕರ್ಷಕವಾಗಿತ್ತು. “ಪ್ರಯಾಣವು ಈಗಷ್ಟೇ ಪ್ರಾರಂಭವಾಗಿದೆ” ಎಂದು ದಂಪತಿ ತಮ್ಮ ಮದುವೆಯ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

ಶನಿವಾರ, ಆಮಿ ತನ್ನ ಮೊದಲ ದಿನದ ವಿವಾಹ ದಿನದ ಸುಂದರವಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಅಲ್ಲಿ ಅವರು “ಐ ಲವ್ ಯು ಬಿಯಾಂಡ್” ಎಂದು ಬರೆದಿದ್ದಾರೆ.

ವಾರದ ಆರಂಭದಲ್ಲಿ, ಆಮಿ ತನ್ನ ಇನ್ಸ್ಟಾಗ್ರಾಮ್‌ನಲ್ಲಿ ತನ್ನ ಆಪ್ತರನ್ನು ಒಳಗೊಂಡ ಸರಣಿ ಚಿತ್ರಗಳನ್ನು ಹಂಚಿಕೊಂಡಿದ್ದರು. ಒಂದು ಚಿತ್ರದಲ್ಲಿ ದಂಪತಿಗಳು ವಿಮಾನದ ಮಧ್ಯದಲ್ಲಿ ಚುಂಬಿಸುತ್ತಿರುವುದನ್ನು ಕಾಣಬಹುದು. ಫೋಟೋಗಳಲ್ಲಿ ಅವರ ಅತ್ತೆ ಮಾವ ಮತ್ತು ಅವರ ಮಗ ಆಂಡ್ರಿಯಾಸ್ ಕೂಡ ಸೇರಿದ್ದಾರೆ. ತಮ್ಮ ಮಾಜಿ ಪಾಲುದಾರ ಜಾರ್ಜ್ ಪನಯೋಟೌ ಅವರಿಂದ ಬೇರ್ಪಟ್ಟ ಬಳಿಕ ಅವರು ಮದುವೆಯಾಗುತ್ತಿದ್ದಾರೆ. ಆಮಿ, “ಮದುವೆಯಾಗೋಣ, ಬೇಬಿ” ಎಂದು ಬರೆದಿರುವ ಜತೆಎಗೆ “ಇಟಲಿಗೆ ಬರುತ್ತೇನೆ ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: New Fashion Trend : ಯುವತಿಯರನ್ನು ಆಕರ್ಷಿಸುತ್ತಿದೆ ಇಂಡೊ-ವೆಸ್ಟರ್ನ್‌ ಡಿಸೈನ್‌‌‌ನ ಮ್ಯಾಚಿಂಗ್‌ ಸೀರೆ 

ಆಮಿ ಈ ಹಿಂದೆ ಜಾರ್ಜ್ ಪನಯೋಟೌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅವರಿಗೆ ಆಂಡ್ರಿಯಾಸ್ ಎಂಬ ಮಗ ಇದ್ದಾನೆ. ಆಮಿ ಜಾಕ್ಸನ್ 2010 ರಲ್ಲಿ ತಮಿಳು ಚಿತ್ರ ಮದ್ರಾಸಪಟ್ಟಣಂ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು ಮತ್ತು ನಂತರ ಎಕ್ ದೀವಾನಾ ಥಾ ಚಿತ್ರದ ಮೂಲಕ ಬಾಲಿವುಡ್‌ಗೆ ಕಾಲಿಟ್ಟಿದ್ದರು.

Continue Reading
Advertisement
Yettinahole project lift work to be inaugurated on September 6 Gowri festival
ಬೆಂಗಳೂರು40 mins ago

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Rain News
ಮಳೆ55 mins ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು2 hours ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ2 hours ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ3 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ3 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ4 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

karnataka weather Forecast
ಮಳೆ10 hours ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ18 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 day ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌