Viral Video : ಕಾಡಿನ ರಾಜ ಸಿಂಹನಿಗೇ ಹೆದರಿಸಿದ ನೀರಾನೆ; ವೈರಲ್‌ ಆಯ್ತು ವಿಡಿಯೊ - Vistara News

ವೈರಲ್ ನ್ಯೂಸ್

Viral Video : ಕಾಡಿನ ರಾಜ ಸಿಂಹನಿಗೇ ಹೆದರಿಸಿದ ನೀರಾನೆ; ವೈರಲ್‌ ಆಯ್ತು ವಿಡಿಯೊ

ನೀರಾನೆಯು ಸಿಂಹವನ್ನು ಹೆದರಿಸಿ ಓಡಿಸುವ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ. ನೀರಾನೆಯೇ ಕಾಡಿನ ರಾಜ ಎಂದು ನೆಟ್ಟಿಗರು ಕಾಮೆಂಟ್‌ ಮಾಡಲಾರಂಭಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಡಿನ ರಾಜ ಸಿಂಹ ಎನ್ನುವುದು ನಾವೆಲ್ಲರೂ ಹೇಳುವ ವಿಚಾರ. ಅತ್ಯಂತ ಕ್ರೂರ ಮೃಗವಾದ ಸಿಂಹವನ್ನು ಕಂಡರೆ ಬೇರೆಲ್ಲಾ ಪ್ರಾಣಿಗಳು ಹೆದರುತ್ತವೆಯಾದ್ದರಿಂದ ಸಿಂಹಕ್ಕೆ ಕಾಡಿನ ರಾಜ ಎನ್ನುವ ಹೆಸರು ಬಂದಿದೆ. ಆದರೆ ಈ ವಿಡಿಯೊ (Viral Video) ನೋಡಿದ ಮೇಲೆ ನೀರಾನೆಯೇ ಕಾಡಿನ ರಾಜನಿರಬಹುದಾ ಎನ್ನುವ ಅನುಮಾನ ನಿಮ್ಮಲ್ಲಿ ಮೂಡಬಹುದು.

ಇದನ್ನೂ ಓದಿ: Viral News: ಬಹಳ ವಿಶೇಷವಾಗಿ ಪ್ರಪೋಸ್‌ ಮಾಡಿದ ಯುವಕ; ಕಣ್ಣೀರಿಟ್ಟ ಯುವತಿ ಮಾಡಿದ್ದೇನು?
ಸಿಂಹವೊಂದು ನೀರನ್ನು ಕುಡಿಯುವುದಕ್ಕೆ ನೀರಿನ ಬಳಿ ಬಂದಿದೆ. ಆ ವೇಳೆ ನೀರಿನಲ್ಲಿದ್ದ ನೀರಾನೆ ಸಿಂಹವನ್ನು ಗುರಾಯಿಸುತ್ತದೆ. ಸಿಂಹ ಇನ್ನೂ ನೀರು ಕುಡಿಯುತ್ತಿರುವುದನ್ನೇ ಕಂಡು ಅದರತ್ತ ನೀರಾನೆ ಓಡಲಾರಂಭಿಸುತ್ತದೆ. ಅದನ್ನು ಕಂಡೊಡನೆ ಸಿಂಹ ಹೆದರಿ ಓಡುತ್ತದೆ. ಆ ಸಿಂಹದೊಂದಿಗಿದ್ದ ಇನ್ನೂ ಕೆಲವು ಸಿಂಹಗಳೂ ಓಡುತ್ತವೆ. ಅದು ಓಡಿದ ನಂತರ ನೀರಾನೆ ವಾಪಸು ನೀರಿಗೆ ಬರುತ್ತದೆ.

ಈ ವಿಡಿಯೊವನ್ನು ಲೇಟೆಸ್ಟ್‌ ಸೈಟಿಂಗ್ಸ್‌ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊ ಸಾವಿರಾರು ಮಂದಿಯಿಂದ ವೀಕ್ಷಿಸಲ್ಪಟ್ಟಿದ್ದು, ಸಾವಿರಾರು ಲೈಕ್‌ಗಳನ್ನೂ ಪಡೆದುಕೊಂಡಿದೆ. ಹಲವರು ವಿಡಿಯೊಗೆ ಕಾಮೆಂಟ್‌ಗಳನ್ನು ಮಾಡಿದ್ದಾರೆ. “ನೀರಾನೆಯು ಮರಿಗಳನ್ನು ರಕ್ಷಿಸಿಕೊಳ್ಳುವ ದೃಷ್ಟಿಯಿಂದ ಈ ರೀತಿ ಮಾಡಿದೆ” ಎಂದು ಅನೇಕರು ವಿವರಿಸಲಾರಂಭಿಸಿದ್ದಾರೆ.

ಇದನ್ನೂ ಓದಿ: Viral Video : ಸಚಿವೆ ಸ್ಮೃತಿ ಇರಾನಿ ಜತೆ ಸೇರಿಕೊಂಡು ಕಿಚಡಿ ತಯಾರಿಸಿದ ಬಿಲ್‌ ಗೇಟ್ಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಡಗು

Assault Case : ನಡುರಸ್ತೆಯಲ್ಲೇ ಜಾಡಿಸಿ ಒದ್ದು, ಥೂ ಎಂದು ಉಗಿದಾಡಿಕೊಂಡ ಖಾಸಗಿ ಬಸ್‌ಗಳ ಸಿಬ್ಬಂದಿ

Assault Case : ಕೊಡಗಿನ ನಡುರಸ್ತೆಯಲ್ಲೇ ಖಾಸಗಿ ಬಸ್‌ಗಳ ಸಿಬ್ಬಂದಿ ಕಿತ್ತಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಜಾಡಿಸಿ ಒದ್ದು, ಥೂ ಎಂದು ಉಗಿದಾಡಿಕೊಂಡಿದ್ದಾರೆ.

VISTARANEWS.COM


on

By

Assault Case
Koo

ಕೊಡಗು: ನಡುರಸ್ತೆಯಲ್ಲೇ ಜಗಳಕ್ಕಿಳಿದ ಖಾಸಗಿ ಬಸ್ಸುಗಳ ಸಿಬ್ಬಂದಿ ಒಬ್ಬರಿಗೊಬ್ಬರು (Assault Case) ಹೊಡೆದಾಡಿಕೊಂಡಿದ್ದಾರೆ. ಕೊಡಗಿನ ಗೋಣಿಕೊಪ್ಪದಲ್ಲಿ ಘಟನೆ ನಡೆದಿದೆ. ಒಂದು ಬಸ್ಸಿಗೆ ಮತ್ತೊಂದು ಬಸ್ಸನ್ನು ಅಡ್ಡ ನಿಲ್ಲಿಸಿದ ಎಂದು ಶುರುವಾದ ಗಲಾಟೆ ಸಾರ್ವಜನಿಕರ ಎದುರಿನಲ್ಲೇ ಹೊಡೆದಾಡಿಕೊಂಡಿದ್ದಾರೆ.

ಒಬ್ಬ ಸಿಬ್ಬಂದಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಲೇ ಜಾಡಿಸಿ ಒದ್ದಿದ್ದಾನೆ. ಖಾಸಗಿ ಬಸ್‌ಗಳ ಸಿಬ್ಬಂದಿ ಹೊಡೆದಾಟಕ್ಕೆ ಸಾರ್ವಜನಿಕರು ಬೆಪ್ಪಾದರು. ಅಲ್ಲಿದ್ದ ಸಾರ್ವಜನಿಕರ ಮೊಬೈಲ್‌ನಲ್ಲಿ ಗಲಾಟೆ ವಿಡಿಯೊ ಸೆರೆಯಾಗಿದೆ. ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ದುಬೈ ಪ್ರವಾಸಕ್ಕೆ ಹೋದ ಗೋಕಾಕ್‌ ಮೂಲದ ನಾಲ್ವರು ಸಜೀವ ದಹನ

ಜಮೀನಿಗಾಗಿ ಮಚ್ಚಿನಿಂದ ಹಲ್ಲೆ

ತುಮಕೂರು : ಜಮೀನು ವಿವಾದ ಹಿನ್ನೆಲೆಯಲ್ಲಿ ಮಚ್ಚಿನಿಂದ ಹಲ್ಲೆಗೆ ಯತ್ನಿಸಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಶಿವಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಜಮೀನು ತಮಗೆ ಸೇರಬೇಕೆಂದು ಗ್ರಾಮದ ನಾಗರಾಜ್ ಮೇಲೆ ಹರೀಶ್ ಎಂಬಾತ ಮಚ್ಚು ಹಿಡಿದು ಹಲ್ಲೆ ನಡೆಸಿದ್ದಾನೆ.

ಗ್ರಾಮದ 33/5 ಎ 8.5 ಗುಂಟೆ ಜಮೀನು ತಮಗೆ ಸೇರಬೇಕೆಂದು ಹರೀಶ್‌ ಹಲ್ಲೆಗೆ ಮುಂದಾಗಿದ್ದಾರೆ. ಅಂದಹಾಗೇ ನಾಗರಾಜ್‌ ಅವರ ತಾಯಿ ಶಾರದಮ್ಮ ಹೆಸರಿನಲ್ಲಿರುವ ಜಮೀನು ಇದ್ದು, ನಾಗರಾಜ್‌ಗೆ ಇದು ಪಿತ್ರಾರ್ಜಿತ ಆಸ್ತಿಯಾಗಿದೆ . ಶಾರದಮ್ಮ ಹೆಸರಿನಲ್ಲಿರುವ ಜಮೀನಿನಲ್ಲಿ ತೆಂಗಿನಕಾಯಿ ಕೀಳಿಸಲು ಹೋದಾಗ ಪಕ್ಕದ ಜಮೀನಿನ ‌ಮಾಲೀಕ ಹರೀಶ್‌ ನಾಗರಾಜ್‌ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ನೊಣವಿನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಷ ಸೇವಿಸಿದ ಬಿಲ್‌ ಕಲೆಕ್ಟರ್‌

ಯಾದಗಿರಿ: ವಿಷ ಸೇವಿಸಿ ಬಿಲ್ ಕಲೆಕ್ಟರ್ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಾಪುರ ಪಂಚಾಯತಿ ಪಿಡಿಓ, ಅಧ್ಯಕ್ಷೆ ವಿರುದ್ಧ ಕೇಸ್ ದಾಖಲಾಗಿದೆ. ಪಿಡಿಓ ದೇವೇಂದ್ರಪ್ಪ ಹಾಗೂ ಅಧ್ಯಕ್ಷೆ ರೇಣುಕಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮದ ಹಲವು ಅಭಿವೃದ್ಧಿ ಕಾಮಗಾರಿ ಬಿಲ್ ಮಾಡದೇ ಸತಾಯಿಸುತ್ತಿದ್ದರು. ಇದರಿಂದ ಮನನೊಂದು ಬಿಲ್ ಕಲೆಕ್ಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕಾಮಗಾರಿ ‌ಮಾಡಿದ 3,75,000 ರೂ. ಬಿಲ್ ಮಾಡದೇ ಸತಾಯಿಸಿದ್ದರು. ಬಿಲ್ ಕಲೆಕ್ಟರ್ ಯಲ್ಲಪ್ಪ ಅವರ ಪುತ್ರ ವೆಂಕಟೇಶ್ ಅರಳಗುಂಡಗಿ ದೂರಿನನ್ವಯ ಸುರಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral News: ಸಿಕ್ಕ ಸಿಕ್ಕ ಕಾರಿನ ಮೇಲೆ ಜಿಗಿತಾಳೆ ಈ ನಾಗಿಣಿ !!; ವಿಡಿಯೊ ಇಲ್ಲಿದೆ ನೋಡಿ

ಬಿಷಪ್ ಕಾಟನ್ ಜಂಕ್ಷನ್ ಬಳಿ ಅನೇಕ ಕಾರು ಚಾಲಕರು ಯುವತಿಯ ವರ್ತನೆಗೆ ಬೆಚ್ಚಿ ಬಿದ್ದಿದ್ದಾರೆ. ತನ್ನಷ್ಟಕ್ಕೆ ತಾನೇ ಮಾತನಾಡಿಕೊಂಡು ಸಾಗುವ ಯುವತಿಯ ವಿಡಿಯೋ ಕಾರಿನ ಡ್ಯಾಷ್ ಕ್ಯಾಮ್ ನಲ್ಲಿ ಸೆರೆಯಾಗಿದೆ. ಟಿವಿ ಸಿರಿಯಲ್ ಗಳಲ್ಲಿ ಇರುವ ನಾಗಿಣಿಯಂತೆ ಈಕೆ ಕಾರಿನ ಮುಂದೆ ಬಂದು ಕಾರಿನ ಬಾನೆಟ್ ಮೇಲೆ ಕುಳಿತು ತನ್ನಷ್ಟಕ್ಕೆ ತಾನು ಮಾತನಾಡುವುದು ವಿಡಿಯೋದಲ್ಲಿ (Viral News) ಸೆರೆಯಾಗಿದೆ.

VISTARANEWS.COM


on

By

Viral News
Koo

ಬೆಂಗಳೂರು: ನಗರದಲ್ಲೊಬ್ಬಳು ಮಾನಸಿಕ ಅಸ್ವಸ್ಥ (Mentally ill) ಹುಡುಗಿ ಪ್ರತ್ಯಕ್ಷವಾಗಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿದ್ದಾಳೆ. ಇದರ ವಿಡಿಯೋ (Video) ಈಗ ಭಾರೀ ವೈರಲ್ (Viral News) ಆಗುತ್ತಿದೆ. ಕಾರಿನ ಮುಂದೆ ಬಿದ್ದು ಭಯಗೊಳ್ಳುವಂತೆ ಮಾಡುವ ಈ ಹುಡುಗಿ ಕಾರಿನ ಬಾನೆಟ್ ಮೇಲೆ ನಿಂತು ಸುಮ್ಮನೆ ಬಡಬಡಿಸುತ್ತಾಳೆ.

ಬಿಷಪ್ ಕಾಟನ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಅನೇಕರು ಯುವತಿಯ ವರ್ತನೆಗೆ ಬೆಚ್ಚಿ ಬಿದ್ದಿದ್ದಾರೆ. ತನ್ನಷ್ಟಕ್ಕೆ ತಾನೇ ಮಾತನಾಡಿಕೊಂಡು ಸಾಗುವ ಯುವತಿಯ ವಿಡಿಯೋ ಕಾರಿನ ಡ್ಯಾಷ್ ಕ್ಯಾಮ್ ನಲ್ಲಿ ಸೆರೆಯಾಗಿದೆ. ಟಿವಿ ಸಿರಿಯಲ್ ಗಳಲ್ಲಿ ಇರುವ ನಾಗಿಣಿಯಂತೆ ಈಕೆ ಕಾರಿನ ಮುಂದೆ ಬಂದು ಕಾರಿನ ಬಾನೆಟ್ ಮೇಲೆ ಕುಳಿತು ತನ್ನಷ್ಟಕ್ಕೆ ತಾನು ಮಾತನಾಡುವುದು ಇದರ ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: Viral News: ರಜೆ ಅಂದ್ರೆ ಮಕ್ಕಳಿಗೆ ಖುಷಿ ನಿಜ.. ಆದ್ರೆ ಅದಕ್ಕಾಗಿ ಕೊಲೆನೇ ಮಾಡೋದಾ? ಈ ವಿಲಕ್ಷಣ ಸುದ್ದಿ ಕೇಳಿ ಎಲ್ಲರಿಗೂ ಶಾಕ್‌!

ಕೋರ್ಟ್ ಗೆ ಹಾಜರಾಗದ ವಕೀಲ ಬಂಧನ

ವಾರೆಂಟ್ ಜಾರಿಯಾದರೂ ಕೋರ್ಟ್ ಗೆ ಹಾಜರಾಗದ ಹಿನ್ನಲೆಯಲ್ಲಿ ವಕೀಲ ಕೆ.ಎನ್. ಜಗದೀಶ್ ಕುಮಾರ್ ನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗೋವಾದಲ್ಲಿ ಜಗದೀಶ್ ನನ್ನು ಬಂಧಿಸಿ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಜಗದೀಶ್ ವಿರುದ್ಧ 2022 ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು. ನ್ಯಾಯಾಲಯದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಕೋರ್ಟ್ ಗೆ ಹಾಜರಾಗದೇ ವಕೀಲ ಜಗದೀಶ್ ಕುಮಾರ್ ತಲೆಮರೆಸಿಕೊಂಡಿದ್ದ.

ಹಿಟ್ ಆಂಡ್ ರನ್ ಗೆ ಪಾದಚಾರಿ ಬಲಿ

ಬೆಳ್ಳಂಬೆಳಗ್ಗೆ ಹಿಟ್ ಆ್ಯಂಡ್ ರನ್ ಗೆ ಪಾದಚಾರಿಯೊಬ್ಬ ಬಲಿಯಾದ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಗ್ರಾಮದಲ್ಲಿ ನಡೆದಿದೆ. ನರೇಗಲ್ ಪಟ್ಟಣದ ನಿವಾಸಿ ಮಲ್ಲಯ್ಯ ಬಕ್ಕಯ್ಯನಮಠ (65) ಮೃತರು.

Viral News
Viral News


ಶುಕ್ರವಾರ ಬೆಳಗಿನ ಜಾವ 5.30 ರ ಸುಮಾರಿಗೆ ಮನೆಯಿಂದ ಚಹಾ ಕುಡಿಯಲೆಂದು ಹೊರಗೆ ಹೋಗಿದ್ದ ವೃದ್ದ ಮಲ್ಲಯ್ಯ ನರೇಗಲ್ ಪಟ್ಟಣ ಪಂಚಾಯತಿ ಬಳಿ ರಸ್ತೆಯಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಪೂಜಾರಿಕೆ ವೃತ್ತಿ‌ ಮಾಡುತ್ತಿದ್ದ ಮಲ್ಲಯ್ಯನ ಮೇಲೆ ಏಕಾಏಕಿ ಹರಿದ ಅಪರಿಚಿತ ವಾಹನದಿಂದಾಗಿ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ನರೇಗಲ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಾಹನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Continue Reading

ವೈರಲ್ ನ್ಯೂಸ್

Viral News: ತಂಗಿ ಮನೆಯಲ್ಲೇ ಚಿನ್ನ ಕದ್ದು ಸಿಕ್ಕಿಬಿದ್ದ ಅಕ್ಕ

ಗಂಡನಿಗೆ ಹುಷಾರಿಲ್ಲ ಎಂದು ಗಂಡನೊಂದಿಗೆ ಅಕ್ಕನ ಮನೆಗೆ ತಂಗಿ ಹೋಗಿದ್ದಾಗ ಅಕ್ಕ ತಂಗಿ ಮನೆಗೆ ಹೋಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾಳೆ. ತನಿಖೆ ವೇಳೆ ಇದು ಬಹಿರಂಗವಾಗಿದೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ (Viral News) ಆಗಿದೆ.

VISTARANEWS.COM


on

By

Viral News
Koo

ಬೆಂಗಳೂರು: ತಂಗಿ ಮನೆಯಲ್ಲೇ ಕಳ್ಳತನ (theft) ಮಾಡದ ಅಕ್ಕ ಪೊಲೀಸರ ಬಲೆಗೆ ಬಿದ್ದ ಘಟನೆ ಬೆಂಗಳೂರಿನ (bengaluru) ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral News) ಆಗಿದೆ. ಎಲೆಕ್ಟ್ರಾನಿಕ್ ಸಿಟಿ ಭಾಗದ ಶಶಿಕಲಾ (30) ಬಂಧಿತ ಆರೋಪಿ.

ಗಂಡನಿಗೆ ಹುಷಾರಿಲ್ಲ ಎಂದು ಗಂಡನೊಂದಿಗೆ ಅಕ್ಕನ ಮನೆಗೆ ತಂಗಿ ಹೋಗಿದ್ದಾಗ ಈ ಘಟನೆ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ಅಕ್ಕನ ಮನೆಗೆ ಹೋಗಿದ್ದ ತಂಗಿ ಮತ್ತು ಆಕೆಯ ಪತಿ ಔಷಧ ತರಲು ಅಕ್ಕನಿಗೆ ಸ್ಕೂಟರ್ ಕೀ ಕೊಟ್ಟಿದ್ದರು. ಸ್ಕೂಟರ್ ಕೀ ಯೊಂದಿಗೆ ತಂಗಿಯ ಮನೆ ಕೀ ಕೂಡ ಇತ್ತು. ಇದನ್ನು ಗಮನಿಸಿದ ಅಕ್ಕ ನೇರವಾಗಿ ತಂಗಿಯ ಮನೆಗೆ ಹೋಗಿದ್ದಾಳೆ.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ತಂಗಿಯ ಮನೆಯ 100 ಮೀಟರ್ ದೂರದಲ್ಲಿ ಸ್ಕೂಟರ್ ನಿಲ್ಲಿಸಿ ನಡೆದುಕೊಂಡು ತಂಗಿ ಮನೆಗೆ ಹೋದ ಅಕ್ಕನಿಗೆ ಬೀರು ಕೀ ಸಿಗದ ಕಾರಣ ಬೀರು ಒಡೆದು ಚಿನ್ನ ಮತ್ತು ಬೆಳ್ಳಿಯನ್ನು ಕಳ್ಳತನ ಮಾಡಿದ್ದಾಳೆ.

ಮನೆಗೆ ಬಂದ ತಂಗಿಗೆ ಮನೆಯಲ್ಲಿ ಕಳ್ಳತನವಾಗಿರುವ ವಿಚಾರ ತಿಳಿದು ಆಡುಗೋಡಿ ಠಾಣೆಗೆ ದೂರು ನೀಡಿದ್ದರು. ಮನೆ ಕೀ ಒಡೆಯದೆ ಬೀರು ಬೀಗ ಮಾತ್ರ ಒಡೆದಿರುವುದು ಪೊಲೀಸರ ಸಂಶಯಕ್ಕೆ ಕಾರಣವಾಗಿತ್ತು.

ಈ ವೇಳೆ ಸಿಸಿಟಿವಿ ಮೂಲಕ ಟ್ರ್ಯಾಕ್ ಮಾಡಿ ಅಕ್ಕನ ವಿಚಾರಸಿದಾಗ ಸತ್ಯ ಬಹಿರಂಗವಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಳವಾದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯಿಂದ ಒಟ್ಟು 5,50,000 ಮೌಲ್ಯದ 70 ಗ್ರಾಂ ಚಿನ್ನ ಮತ್ತು 350 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ.

Viral News
Viral News


ದೆಹಲಿ ಗ್ಯಾಂಗ್ ಬಂಧನ

ದೆಹಲಿಯಿಂದ ಬಂದು ಬೆಂಗಳೂರಿನ ಮನೆ ಒಡೆದಿದ್ದ ಗ್ಯಾಂಗ್ ಅನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಅಕ್ಬರ್, ಸೋನು ಯಾದವ್ ಬಂಧಿತ ಆರೋಪಿಗಳು.

ಸಂಜಯ್ ನಗರದ ರೇಣುಕಾ ಎಂಬುವರ ಮನೆಯಲ್ಲಿ 50 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನು ಆರೋಪಿಗಳು ಕದ್ದಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಜಯ್ ನಗರ ಪೊಲೀಸರು ದೆಹಲಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಹಿಂದೆ ಹಲವು ರಾಜ್ಯಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಗಳು ಇದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಕದ್ದ ಮಾಲುಗಳನ್ನು ಪತ್ನಿ ಮುಬೀನಾಗೆ ನೀಡುತಿದ್ದ ಅಕ್ಬರ್. ಕದ್ದ ಚಿನ್ನವನ್ನು ಮಾರಾಟ ಮಾಡಲು ಹೋದಾಗ ಸಿಕ್ಕಿಬಿದ್ದಿದ್ದಾರೆ.

ಬಂಧಿತರಿಂದ 405 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದ್ದು, ಸಂಜಯ್ ನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Missing Case : ಕಾಣೆಯಾಗಿದ್ದ ನವ ವಿವಾಹಿತೆ ಬಾವಿಯಲ್ಲಿ ಜೀವಂತವಾಗಿ ಪತ್ತೆ! ಎಳೆದುಕೊಂಡು ಹೋಗಿ ಹಳೆ ಬಾವಿಗೆ ತಳ್ಳಿದವರ‍್ಯಾರು?

ಮನೆಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

ವೈಟ್ ಫೀಲ್ಡ್ ಪೊಲೀಸರು ಮನೆಗಳ್ಳತನ‌ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಅಲ್ ಮೋಹಿನ್ ಮುಲ್ಲಾ‌ (23), ಮೊಹಮ್ಮದ್ ಶಾರಿಫ್‌(24) ಬಂಧಿತ ಆರೋಪಿಗಳು.

ಕದ್ದ ಬೈಕ್ ನಲ್ಲಿ ಏರಿಯಾಗಳ ರೌಂಡ್ ಹಾಕುತಿದ್ದ ಆರೋಪಿಗಳು. ಬೆಳಗ್ಗೆ ಖಾಲಿ ಇರುವ ಮನೆಗಳನ್ನು ನೋಡಿ ಕಳ್ಳತನ ಮಾಡುತ್ತಿದ್ದರು.

ರಾತ್ರಿ ವೇಳೆ ಚಿಂದಿ ಆಯುವ ನೆಪದಲ್ಲಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದರು. ಮನೆಯೊಂದರಿಂದ 100 ಗ್ರಾಂ ಚಿನ್ನ, ನಾಲ್ಕು ವಾಚ್ ಗಳನ್ನು ಕಳವು ಮಾಡಿದ್ದ ಆರೋಪಿಗಳಿಂದ 76 ಗ್ರಾಂ ಚಿನ್ನ, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.

Continue Reading

ಗದಗ

Missing Case : ಕಾಣೆಯಾಗಿದ್ದ ನವ ವಿವಾಹಿತೆ ಬಾವಿಯಲ್ಲಿ ಜೀವಂತವಾಗಿ ಪತ್ತೆ! ಎಳೆದುಕೊಂಡು ಹೋಗಿ ಹಳೆ ಬಾವಿಗೆ ತಳ್ಳಿದವರ‍್ಯಾರು?

Missing Case : ನಸುಕಿನ ಜಾವ ಮನೆ ಮುಂದೆ ಕೆಲಸ ಮಾಡುತ್ತಿದ್ದ ನವವಿವಾಹಿತೆಯನ್ನು ಹಿಂದಿನಿಂದ ಲಾಕ್‌ ಮಾಡಿದ ಅಪರಿಚಿತ ಮಹಿಳೆಯೊಬ್ಬಳು ಕಿಡ್ನ್ಯಾಪ್‌ ಮಾಡಲು ಯತ್ನಿಸಿದ್ದಾಳೆ. ಬಳಿಕ ಮನೆಯಿಂದ ಹೊಲಕ್ಕೆ ಎಳೆದೊಯ್ದು ನೀರಿಲ್ಲದೇ ಹಳೇ ಬಾವಿಗೆ ಬಿಸಾಡಿದ್ದಾಳೆ.

VISTARANEWS.COM


on

By

Missing Case
ಸಾಂದರ್ಭಿಕ ಚಿತ್ರ
Koo

ಗದಗ: ಕಾಣೆಯಾಗಿದ್ದ ಮಹಿಳೆ ಬಾವಿಯಲ್ಲಿ (Missing Case) ಜೀವಂತವಾಗಿ ಪತ್ತೆಯಾಗಿರುವ ವಿಚಿತ್ರ ಘಟನೆ ಗದಗ ಜಿಲ್ಲೆ ತೋಟಗಂಟಿ ಗ್ರಾಮದಲ್ಲಿ ನಡೆದಿದೆ. ಮೂರು ದಿನ ಬಾವಿಯಲ್ಲಿದ್ದ ಮಹಿಳೆ ಬದುಕಿದ್ದೇ ಪವಾಡವಾಗಿದೆ. ಘಟನೆ ಬಳಿಕ ತೋಟಗಂಟಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಕಾಣೆಯಾಗಿದ್ದ ವಿವಾಹಿತೆಯೊಬ್ಬಳು ಅದೇ ಗ್ರಾಮದ ಹೊಲವೊಂದರಲ್ಲಿನ ನೀರಿಲ್ಲದ ಹಳೇ ಬಾವಿಯಲ್ಲಿ ಮೂರು ದಿನಗಳ ನಂತರ ಸಿಕ್ಕಿದ್ದಾಳೆ. ಅಸ್ವಸ್ಥಳಾಗಿದ್ದ ಮಹಿಳೆಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಇಲ್ಲಿ ವಿಚಿತ್ರ ಅಂದರೆ ಮಹಿಳೆ ಬಾವಿಗೆ‌ ಬಿದ್ದಿದ್ದು ಹೇಗೆ ಎಂಬ ಮಾಹಿತಿ ಕೇಳಿ ಗ್ರಾಮದ ಜನರೇ ಶಾಕ್‌ ಆಗಿದ್ದಾರೆ.

ಯಾಕೆಂದರೆ ಯಾರೋ ನನ್ನ ಎಳೆದುಕೊಂಡು ಹೋದರು ಅಂತ ಹೇಳಿದ್ದಾಳೆ. ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆಗಸ್ಟ್‌ 20 ರಂದು ನಸುಕಿನ ಜಾವ ಮನೆಯ ಅಂಗಳದಲ್ಲಿ ಕೆಲಸ ಮಾಡುತ್ತಿದ್ದಳು. ಅಲ್ಲಿಗೆ ಬಂದ ಅಪರಿಚಿತ ಮಹಿಳೆಯೊಬ್ಬಳು ನವವಿವಾಹಿತೆಯನ್ನು ಕಿಡ್ನಾಪ್ ಮಾಡಿದ್ದರಂತೆ.

Missing Case
ಜ್ಯೂಸ್‌ ಕೊಟ್ಟು ಮಹಿಳೆಯನ್ನು ಕಾಪಾಡಿ ಧೈರ್ಯ ಹೇಳಿದ ಗ್ರಾಮಸ್ಥರು

ಇದನ್ನೂ ಓದಿ: Actor Darshan: ರಾತ್ರಿ ಕಳೆಯೊದ್ರೊಳಗೆ ಮತ್ತೆ ಟ್ರೆಂಡ್ ಆಗ್ತಿದೆ ದರ್ಶನ್ ಖೈದಿ ನಂಬರ್ !!

ನವವಿವಾಹಿತೆಯ ಕುತ್ತಿಗೆ ಭಾಗ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದ್ದಳಂತೆ. ಮಾತ್ರವಲ್ಲದೇ ನನ್ನ ಕೈಬಳೆ, ಕಾಲುಂಗರ ನೀಡುವಂತೆ ಅಪರಿಚಿತ ಮಹಿಳೆ ಒತ್ತಾಯ ಮಾಡಿದ್ದಳು. ಇನ್ನು ನನ್ನ ಕಣ್ಣಿಗೆ ಕಾಣದಂತೆ ಮರೆ ಮಾಡಿ ಕುತ್ತಿಗೆ ಹಿಡಿದು ಭಯಪಡಿಸಿದ್ದಳಂತೆ.

ಗೋವಿ‌ನ ಜೋಳ ಹೊಲದ ಮೂಲಕ ನನ್ನನ್ನು ಎಳೆದುಕೊಂಡು ಹೋಗಿ ನಂತರ ತಾಳಿ ಕೇಳಿ ನನ್ನನ್ನು ಬಾವಿಗೆ ತಳ್ಳಿದ್ದಳು. ಬಾವಿಗೆ ಬಿದ್ದ ಮಾರನೆ ದಿನ ನನಗೆ ಪ್ರಜ್ಞೆ ಬಂದಿತ್ತು. ಆಗ ಎಷ್ಟೇ ಕಿರುಚಿದರೂ ಸಹಾಯಕ್ಕೆ ಯಾರು ಬರಲಿಲ್ಲ. ಆ. 22 ರಂದು ಧ್ವನಿ ಕೇಳಿದ ಜನರು ನನ್ನ ಕಾಪಾಡಿದ್ದಾರೆ. ಆದರೆ ಯಾರು ನನಗೆ ಎಳೆದುಕೊಂಡು ಹೋದರು ಎನ್ನುವ ನಿಖರ ಮಾಹಿತಿ ಇಲ್ಲ ಎಂದಿದ್ದಾಳೆ. ಈ ವಿಚಿತ್ರ ರೀತಿಯ ಘಟನೆಗೆ ಗ್ರಾಮದ ಇತರೆ ಮಹಿಳೆಯರು ಆತಂಕಗೊಂಡಿದ್ದಾರೆ. ನಸುಕಿನ ಜಾವ ಓಡಾಡಲು ಹೆದರುವಂತಾಗಿದೆ. ಸದ್ಯ ಈ ಸಂಬಂಧ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಪೊಲೀಸರನ್ನು ಸಂಪರ್ಕ ಮಾಡಿದ್ದರಾ ಇಲ್ವಾ ಎಂಬುದು ತಿಳಿದು ಬಂದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
police Firing
ಕಲಬುರಗಿ50 mins ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

karnataka weather Forecast
ಮಳೆ6 hours ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ14 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

UPSC
ಪ್ರಮುಖ ಸುದ್ದಿ15 hours ago

CET/NEET: ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ, ಒಳ್ಳೆಯ ಪ್ರತಿಕ್ರಿಯೆ

TA Saravana elected as new chairman of government assurances committee
ಕರ್ನಾಟಕ16 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿಯ ನೂತನ ಅಧ್ಯಕ್ಷರಾಗಿ ಟಿ.ಎ ಶರವಣ ಆಯ್ಕೆ

Hair Care Habits
ಆರೋಗ್ಯ16 hours ago

Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

Sakhi Mahila Sangathan celebrates Raksha Sutra Diwas
ಬೆಂಗಳೂರು16 hours ago

Bengaluru News : ರಕ್ಷಾ ಸೂತ್ರ ದಿನ ಆಚರಿಸಿದ ಸಖಿ ಮಹಿಳಾ ಸಂಘಟನೆ

Sonal Monteiro
ಸಿನಿಮಾ17 hours ago

Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

karnataka weather Forecast
ಮಳೆ17 hours ago

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್21 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌