Nobel Prize : ನೊಬೆಲ್​ ಪುರಸ್ಕೃತ ಬೆಲಾರಸ್​ನ ಮಾನವ ಹಕ್ಕುಗಳ ಹೋರಾಟಗಾರನಿಗೆ 10 ವರ್ಷ ಜೈಲು ಶಿಕ್ಷೆ! ಇಲ್ಲಿದೆ ಕಾರಣ - Vistara News

ವಿದೇಶ

Nobel Prize : ನೊಬೆಲ್​ ಪುರಸ್ಕೃತ ಬೆಲಾರಸ್​ನ ಮಾನವ ಹಕ್ಕುಗಳ ಹೋರಾಟಗಾರನಿಗೆ 10 ವರ್ಷ ಜೈಲು ಶಿಕ್ಷೆ! ಇಲ್ಲಿದೆ ಕಾರಣ

ನೊಬೆಲ್​ ಪುರಸ್ಕಾರ (Nobel Prize) ವಿಜೇತ ಅಲೆಸ್​ ಬಿಯಾಲಿಯಾಟ್​ಸ್ಕಿ ಹಾಗೂ ಅವರ ಮೂವರು ಸಹಚರರನ್ನು ಅಲ್ಲಿನ ಸರಕಾರ ಬಂಧಿಸಿ ಜೈಲಿನಲ್ಲಿಟ್ಟುತ್ತು.

VISTARANEWS.COM


on

Nobel laureate Belarusian human rights activist sentenced to 10 years in prison! Here's the reason
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನೊಬೆಲ್​ ಪ್ರಶಸ್ತಿ ಪುರಸ್ಕೃತ ಬೆಲಾರಸ್​ನ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್​ ಬಿಯಾಲಿಯಾಟ್​ಸ್ಕಿಗೆ ಅಲ್ಲಿನ ಕೋರ್ಟ್​ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಸರಕಾರದ ವಿರುದ್ಧ ಪ್ರತಿಭಟನೆಗೆ ಆರ್ಥಿಕ ನೆರವು ನೀಡಿದ ಆರೋಪಗಳು ಅವರ ಮೇಲಿವೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್​​ ಶುಕ್ರವಾರ ತೀರ್ಪು ಪ್ರಕಟಿಸಿದೆ.

ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಆರ್ಥಿಕ ನೆರವು ನೀಡಿದ್ದಾರೆ ಎಂಬ ಆರೋಪದಲ್ಲಿ ಅಲೆಸ್ ಹಾಗೂ ಅವರ ಮೂವರು ಸಹಚರರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿತ್ತು. ಏತನ್ಮಧ್ಯೆ ಅವರಿಗೆ ನೊಬೆಲ್​ ಪುರಸ್ಕಾರ ದೊರಕಿತ್ತು. ಇದೀಗ ಅವರ ಪ್ರಕರಣದ ವಿಚಾರಣೆ ನಡೆದು ಜೈಲು ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ : ರಾಜ ಮಾರ್ಗ | ಹೆಣ್ಮಕ್ಕಳಿಗೆ ಶಾಲೆಯೇ ಕನಸಾಗಿದ್ದ ಕಾಲದಲ್ಲಿ ಆಕೆ ಎರಡು ನೊಬೆಲ್‌ ಗೆದ್ದರು!: ಇದು ಮೇರಿ ಕ್ಯೂರಿಯ ಕಥೆ

ಬೆಲಾರಸ್​ನ ಸರ್ವಾಧಿಕಾರಿ ಅಲೆಕ್ಸಾಂಡರ್‌ ಲುಕಶೆಂಕೊ ಅವರು 2020ರ ಚುನಾವಣೆಯಲ್ಲಿ ಮತ್ತೊಮ್ಮೆ ಅಧ್ಯಕ್ಷ ಗಾದಿಗೆ ಏರಿದ್ದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಈ ಪ್ರಕರಣದಲ್ಲಿ ‘ವಯಸ್ನಾ ಮಾನವ ಹಕ್ಕು ಕೇಂದ್ರ’ದ ಸ್ಥಾಪಕರಾಗಿರುವ ಅಲೆಸ್‌ ಹಾಗೂ ಇತರ ಮೂವರು ಸಹೋದ್ಯೋಗಿಗಳು ಬಂಧಿತರಾಗಿದ್ದರು. ತಮ್ಮ ಸಂಘಟನೆಯ ಹಣವನ್ನು ರಾಜಕೀಯ ಕೈದಿಗಳ ಕಾನೂನು ಪ್ರಕ್ರಿಯೆಗಳಿಗಾಗಿ ಬಳಸಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು.

ಸಿಯಾಟ್ಲಾನಾ ಮಾಡಿರುವ ಟ್ವೀಟ್​ ಹೀಗಿದೆ

ಅಲೆಸ್​ ಅವರ ಬಂಧನವನ್ನು ವಿರೋಧ ಪಕ್ಷದ ನಾಯಕಿ ಸಿಯಾಟ್ಲಾನಾ ಟಿಕಾನೊಸ್ಕಾಯ ಖಂಡಿಸಿದ್ದಾರೆ. ಅಲೆಸ್​ ನಿಜವಾದ ಹೀರೋ. ಅವರನ್ನೇ ಬಂಧಿಸಿ ಜೈಲಿನಲ್ಲಿಡುವ ಮೂಲಕ ಸರ್ವಾಧಿಕಾರಿ ಧೋರಣೆ ತಾಳಲಾಗಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

All Eyes on Rafah: ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ರೋಹಿತ್‌ ಪತ್ನಿ ಪೋಸ್ಟ್‌; ಫುಲ್‌ ಟ್ರೋಲ್‌- ಏನಿದು ʼಆಲ್‌ ಐಸ್‌ ಆನ್‌ ರಫಾʼ?

All Eyes on Rafah:ಕ್ರಿಕೆಟಿಗ ರೋಹಿತ್‌ ಶರ್ಮಾ(Rohit Sharma) ಪತ್ನಿ ರಿತಿಕಾ ಸಜ್ದೇಹ್‌ ಕೂಡ ಸಾಮಾಜಿಕ ಜಾಲತಾಣದಲ್ಲಿ ಆಲ್ ಐಸ್‌ ಆನ್‌ ರಫಾ ಫೋಟೋ ಶೇರ್‌ ಮಾಡಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿದ್ದರು. ಇದರ ಬೆನ್ನಲ್ಲೇ ಅವರು ಭಾರೀ ಟೀಕೆಗೆ ಗುರಿಯಾಗಿದ್ದು, ಆಕೆಗೆ ರಫಾ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ನೆಟ್ಟಿಗರು ಜರಿದಿದ್ದಾರೆ.

VISTARANEWS.COM


on

All Eyes on Rafah
Koo

ನವದೆಹಲಿ: ಇಸ್ರೇಲ್-ಪ್ಯಾಲೆಸ್ಟೈನ್ ಯುದ್ಧ(Israel-Palestine War) ಮುಂದುವರೆದಿರುವಂತೆಯೇ, ಇನ್ಸ್ಟಾಗ್ರಾಮ್, ಫೇಸ್ಬುಕ್ ಮತ್ತು ಎಕ್ಸ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “ಎಲ್ಲರ ಕಣ್ಣುಗಳು ರಫಾ ಮೇಲೆ ”(All Eyes on Rafah) ಎನ್ನುವ ಫೋಟೋ ವು ವೈರಲ್ ಆಗಿದೆ. ಇದರ ಬೆನ್ನಲ್ಲೇ ಈ ಫೋಟೋಗಳನ್ನು ಹಂಚಿಕೊಂಡು ಸಿನಿಮಾ ತಾರೆಯರು, ಸೆಲೆಬ್ರಿಟಿಗಳು ಪ್ಯಾಲೆಸ್ತೀನ್‌ ಪರವಾಗಿ ಧ್ವನಿ ಎತ್ತಿದ್ದಾರೆ. ಅದೇ ರೀತಿ ಕ್ರಿಕೆಟಿಗ ರೋಹಿತ್‌ ಶರ್ಮಾ(Rohit Sharma) ಪತ್ನಿ ರಿತಿಕಾ ಸಜ್ದೇಹ್‌ ಕೂಡ ಸಾಮಾಜಿಕ ಜಾಲತಾಣದಲ್ಲಿ ಆಲ್ ಐಸ್‌ ಆನ್‌ ರಫಾ ಫೋಟೋ ಶೇರ್‌ ಮಾಡಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿದ್ದರು. ಇದರ ಬೆನ್ನಲ್ಲೇ ಅವರು ಭಾರೀ ಟೀಕೆಗೆ ಗುರಿಯಾಗಿದ್ದು, ಆಕೆಗೆ ರಫಾ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ನೆಟ್ಟಿಗರು ಜರಿದಿದ್ದಾರೆ.

ರಫಾ ಎಲ್ಲಿದೆ ಅನ್ನೋದಾದರೂ ಗೊತ್ತಿದೆಯೇ? ಕಾಶ್ಮೀರಿ ಪಂಡಿತರ ನರಮೇಧ, ಹಿಂದೂಗಳ ಮೇಲಿನ ದೌರ್ಜನ್ಯ, ಹಿಂಸಾಚಾರ, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ನರಮೇಧ ಇವುಗಳ ಬಗ್ಗೆ ಮೌನವಹಿಸಿದ್ದಿರಿ. ಈಗ ಹೇಗೆ ಪ್ಯಾಲೆಸ್ತೀನ್‌ ಪರವಾಗಿ ಧ್ವನಿ ಎತ್ತಲು ಸಾಧ್ಯವಾಯ್ತು ಎಂದು ಪ್ರಶ್ನಿಸಿದ್ದಾರೆ. ಇನ್ನು ಟ್ರೋಲ್‌ ಆಗುತ್ತಿದ್ದಂತೆ ರಿತಿಕಾ ಪೋಸ್ಟ್‌ ಡಿಲೀಟ್‌ ಮಾಡಿದ್ದಾರೆ.

ಏನಿದು ಆಲ್ ಐಸ್ ಆನ್ ರಫಾ ಫೋಟೋ?

ಆಲ್ ಐಸ್ ಆನ್ ರಫಾ ಚಿತ್ರವು ಗಾಝಾದ ದಕ್ಷಿಣದಲ್ಲಿರುವ ರಾಫಾ ನಗರದ ನಿರಾಶ್ರಿತರ ಶಿಬಿರದಲ್ಲಿ ಡೇರೆಗಳನ್ನು ತೋರಿಸುತ್ತದೆ, ಅಲ್ಲಿ ಇಸ್ರೇಲ್ನಿಂದ ನಡೆಯುತ್ತಿರುವ ದಾಳಿಯ ನಂತರ ಅನೇಕ ಫೆಲೆಸ್ತೀನೀಯರು ಸ್ಥಳಾಂತರಗೊಂಡಿದ್ದಾರೆ. ಸ್ಥಳೀಯ ಅಧಿಕಾರಿಗಳ ಪ್ರಕಾರ, ಭಾನುವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 45 ನಾಗರಿಕರು ಸಾವನ್ನಪ್ಪಿದ್ದಾರೆ. ಇದರ ನಂತರ ಈ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು.

ರಫಾ ಮೇಲೆ ಎಲ್ಲರ ಕಣ್ಣು ಅರ್ಥ

‘ರಫಾ ಮೇಲೆ ಎಲ್ಲರ ಕಣ್ಣುಗಳು’ ಚಿತ್ರವು ನಡೆಯುತ್ತಿರುವ ಯುದ್ಧದ ಬಗ್ಗೆ ಜಾಗೃತಿ ಮೂಡಿಸಲು ಕರೆ ನೀಡುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಆಕ್ರಮಿತ ಫೆಲೆಸ್ತೀನ್ ಪ್ರದೇಶಗಳ ಕಚೇರಿಯ ನಿರ್ದೇಶಕ ರಿಕ್ ಪೀಪರ್ಕಾರ್ನ್ ಅವರ ಹೇಳಿಕೆಯಿಂದ ಈ ಘೋಷಣೆ ಹುಟ್ಟಿಕೊಂಡಿದೆ ಎಂದು ತೋರುತ್ತದೆ. ಫೆಬ್ರವರಿಯಲ್ಲಿ, “ಎಲ್ಲರ ಕಣ್ಣುಗಳು ರಫಾ ಮೇಲೆ ಇವೆ” ಎಂದು ಅವರು ಹೇಳಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ನಗರವನ್ನು ಸ್ಥಳಾಂತರಿಸುವ ಯೋಜನೆಗೆ ಆದೇಶಿಸಿದ ಸ್ವಲ್ಪ ಸಮಯದ ನಂತರ ಈ ಬೆಳವಣಿಗೆ ನಡೆದಿದೆ.

ರಫಾವನ್ನು ಹಮಾಸ್‌ ಉಗ್ರರ ಕಟ್ಟ ಕಡೇಯ ಭದ್ರಕೋಟೆ ಎಂದಿರುವ ನೆತನ್ಯಾಹು, ಅದನ್ನು ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದರು. ಈ ಪ್ರದೇಶದಲ್ಲಿ ಸುಮಾರು 14 ದಶಲಕ್ಷಕ್ಕೂ ಹೆಚ್ಚು ಫೆಲೆಸ್ತೀನೀಯರು ಆಶ್ರಯ ಪಡೆದಿದ್ದು, ಇಸ್ರೇಲ್‌ ನಡೆಸಿದ ದಾಳಿಯಲ್ಲಿ 45ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಪ್ಯಾಲೆಸ್ಟೈನ್ ಮೇಲಿನ ಇಸ್ರೇಲ್‌ನ ಇತ್ತೀಚಿನ ದಾಳಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಖಂಡಿಸಲಾಗುತ್ತಿದೆ. ಈ ಸಾಲಿನಲ್ಲಿ ಹಲವು ಭಾರತೀಯ ಸೆಲೆಬ್ರಿಟಿಗಳು ಸಹ ಸೇರಿದ್ದಾರೆ.

ಇದನ್ನೂ ಓದಿ:Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

ರಫಾ ಮೇಲಿನ ಇತ್ತೀಚಿನ ಇಸ್ರೇಲ್​​ ದಾಳಿಯು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಗಾಜಾದಲ್ಲಿ ಶೀಘ್ರ ಕದನ ವಿರಾಮಕ್ಕೆ ಕರೆ ನೀಡಿದ್ದಾರೆ. ಪ್ಯಾಲೆಸ್ಟೈನ್ ಜನರನ್ನು ಬೆಂಬಲಿಸಿ ಮಾತನಾಡಿದವರಲ್ಲಿಸೌತ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು ಕೂಡ ಒಬ್ಬರು. ಇಸ್ರೇಲ್‌ನ ಕ್ರಮಗಳನ್ನು ಖಂಡಿಸುವ ಬರಹವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿ ಸೆಕ್ಷನ್​ನಲ್ಲಿ ಶೇರ್ ಮಾಡಿದ್ದಾರೆ.

Continue Reading

ವೈರಲ್ ನ್ಯೂಸ್

Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

Viral Video:ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದ ಭಾರತೀಯ ಯೂಟ್ಯೂಬರ್‌ ಜೊತೆ ಮಾತನಾಡಿದ ಅಲ್ಲಿನ ವೃದ್ಧರೊಬ್ಬರು ಭಾರತ ಮತ್ತು ಅಫ್ಘಾನಿಸ್ತಾನ ಜೊತೆಗೂಡಿದರೆ ಪಾಕ್‌ ಅಂತ್ಯ ಖಂಡಿತ ಎಂಬ ಮಾತನ್ನು ಹೇಳಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದುಮಾಡುತ್ತಿದೆ. “ಭಾರತ ಮತ್ತು ಅಫ್ಘಾನಿಸ್ತಾನ ಮಿತ್ರ ರಾಷ್ಟ್ರಗಳು. ನಾವು ಸಹೋದರರಿದ್ದಂತೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಬೆಸುಗೆ ಎರಡೂ ದೇಶಗಳನ್ನು ಒಗ್ಗೂಡಿಸುತ್ತದೆ. ಹೀಗಾಗಿ ಎರಡೂ ರಾಷ್ಟ್ರಗಳು ಜೊತೆಗೂಡಿದರೆ ನಮ್ಮ ಶತ್ರು ರಾಷ್ಟ್ರವನ್ನು ಬಹಳ ಸುಲಭವಾಗಿ ಸರ್ವನಾಶ ಮಾಡಬಹುದಾಗಿ ಎಂದು ಅವರು ಹೇಳಿದ್ದಾರೆ.

VISTARANEWS.COM


on

Viral Video
Koo

ನವದೆಹಲಿ: ಪಾಕಿಸ್ತಾನ(Pakistan) ಎಂದರೆ ಭಾರತ ಮಾತ್ರ ಅಲ್ಲ, ಪ್ರಪಂಚದ ಬಹುತೇಕ ಎಲ್ಲಾ ರಾಷ್ಟ್ರಗಳು ದ್ವೇಷಿಸುವ ರಾಷ್ಟ್ರ. ಇನ್ನು ನೆರೆಯ ಅಫ್ಘಾನಿಸ್ತಾನ(Afghanistan) ಅಂತೂ ಪಾಕಿಸ್ತಾನದ ಕುಕೃತ್ಯದಿಂದ ಬೇಸತ್ತಿರೋದಂತೂ ಅಕ್ಷರಶಃ ನಿಜ. ಹೀಗಾಗಿಯೇ ಅಲ್ಲಿನ ಜನ ಪಾಕಿಸ್ತಾನ ಅಂದ್ರೆ ಸಾಕು ಕೆಂಡ ಕಾರುತ್ತಾರೆ ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ(Viral Video)ವೊಂದು ಭಾರೀ ಸದ್ದು ಮಾಡುತ್ತಿದ್ದು, ಹೀಗೇ ಮುಂದುವರೆದರೆ ಪಾಕ್‌ ಸಂಪೂರ್ಣವಾಗಿ ನಿರ್ಣಾಮ ಆಗದಂತೂ ನಿಜ ಅಂತಿದ್ದಾರೆ ವಿಡಿಯೋ ನೋಡಿದ ನೆಟ್ಟಿಗರು.

ಏನಿದು ವಿಡಿಯೋ?

ಅಫ್ಘಾನಿಸ್ತಾನ ಪ್ರವಾಸದಲ್ಲಿದ್ದ ಭಾರತೀಯ ಯೂಟ್ಯೂಬರ್‌ ಜೊತೆ ಮಾತನಾಡಿದ ಅಲ್ಲಿನ ವೃದ್ಧರೊಬ್ಬರು ಭಾರತ ಮತ್ತು ಅಫ್ಘಾನಿಸ್ತಾನ ಜೊತೆಗೂಡಿದರೆ ಪಾಕ್‌ ಅಂತ್ಯ ಖಂಡಿತ ಎಂಬ ಮಾತನ್ನು ಹೇಳಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದುಮಾಡುತ್ತಿದೆ. “ಭಾರತ ಮತ್ತು ಅಫ್ಘಾನಿಸ್ತಾನ ಮಿತ್ರ ರಾಷ್ಟ್ರಗಳು. ನಾವು ಸಹೋದರರಿದ್ದಂತೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಬೆಸುಗೆ ಎರಡೂ ದೇಶಗಳನ್ನು ಒಗ್ಗೂಡಿಸುತ್ತದೆ. ಹೀಗಾಗಿ ಎರಡೂ ರಾಷ್ಟ್ರಗಳು ಜೊತೆಗೂಡಿದರೆ ನಮ್ಮ ಶತ್ರು ರಾಷ್ಟ್ರವನ್ನು ಬಹಳ ಸುಲಭವಾಗಿ ಸರ್ವನಾಶ ಮಾಡಬಹುದಾಗಿ ಎಂದು ಅವರು ಹೇಳಿದ್ದಾರೆ.

“ನೀವು ಆಕಡೆಯಿಂದ ದಾಳಿ ನಡೆಸಿ.. ನಾವು ಈ ಕಡೆಯಿಂದ ದಾಳಿ ನಡೆಸುತ್ತೇವೆ. ಅಫ್ಘಾನಿಸ್ತಾನ ನಿಮ್ಮ ಜೊತೆ ಯಾವಾಗಲೂ ಇದೆ. ಆಫ್ಗನ್‌ ಜನ ನಿಮ್ಮ ಜೊತೆಗಿದ್ದಾರೆ. ಇಬ್ಬರು ಜೊತೆಗೂಡಿ ದಾಳಿ ನಡೆಸಿದರೆ ಪಾಕ್‌ ಅನ್ನು ಮಟ್ಟ ಹಾಕಬಹುದು. ಅಲ್ಲಿನ ಸಾಮಾನ್ಯ ಜನರೊಡನೆ ನಮಗೇನು ದ್ವೇಷವಿಲ್ಲ. ಬದಲಾಗಿ ಅಲ್ಲಿನ ಆಡಳಿತ ವ್ಯವಸ್ಥೆ ಬಗ್ಗೆ ನಮಗೆ ಅಸಮಾಧಾನ ಇದೆ” ಎಂದು ವೃದ್ಧ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗುತ್ತಿದ್ದು, ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ. ಪಿಒಕೆ ಶೀಘ್ರದಲ್ಲೇ ಮತ್ತೆ ನಮ್ಮದಾಗುತ್ತದೆ ಎಂದು ಒಬ್ಬರು ಕಮೆಂಟ್‌ ಮಾಡಿದರೆ, ಪಾಕಿಸ್ತಾನವನ್ನು ಯಾರೂ ಇಷ್ಟ ಪಡುವುದಿಲ್ಲ… ಅಫ್ಘಾನಿಸ್ತಾನ ಅತ್ಯಂತ ಹೆಚ್ಚಾಗಿ ದ್ವೇಷಿಸುತ್ತದೆ ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಮೋದಿ ಇದ್ದಲ್ಲಿ ಎಲ್ಲವೂ ಸಾಧ್ಯ ಎಂದು ಮತ್ತೊಬ್ಬ ನೆಟ್ಟಿಗ ರಿಯಾಕ್ಟ್‌ ಮಾಡಿದ್ದಾರೆ.

ಇನ್ನು ಈದೇ ವಿಡಿಯೋವನ್ನು ಇಟ್ಟುಕೊಂಡು ಹಲವು ಮೀಮ್ಸ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Continue Reading

ವಿದೇಶ

Nawaz Sharif: “ಕಾರ್ಗಿಲ್‌ ಯುದ್ಧ ನಮ್ಮಿಂದಲೇ ಆಗಿರುವ ಅತಿದೊಡ್ಡ ಪ್ರಮಾದ”- 23 ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಪಾಕ್‌

Nawaz Sharif: ತಮ್ಮ ಪಾಕಿಸ್ತಾನ ಮುಸ್ಲಿಂ ಲೀಗ್‌(N) ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ನವಾಜ್‌ ಷರೀಫ್‌, ಮೇ 28, 1998,ರಂದು ಪಾಕಿಸ್ತಾನ ಐದು ಅಣು ಬಾಂಬ್‌ ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಅಂದಿನ ಭಾರತದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇಲ್ಲಿಗೆ ಬಂದು ನಮ್ಮ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ನಾವು ಮಾತ್ರ ಆ ಒಪ್ಪಂದವನ್ನು ಮುರಿದೆವು.ಅದು ನಮ್ಮ ಅತಿ ದೊಡ್ಡ ತಪ್ಪು ಎಂದರು.

VISTARANEWS.COM


on

Nawaz Sharif
Koo

ಇಸ್ಲಮಾಬಾದ್‌: ಭಾರತದ ಜೊತೆ ಮಾಡಿಕೊಂಡಿದ್ದ 1999 ಲಾಹೋರ್‌ ಒಪ್ಪಂದ(1999 Lahore Declaration)ವನ್ನು ಪಾಕಿಸ್ತಾನವೇ ಮುರಿದಿತ್ತು. ಅದು ನಮ್ಮ ಅತಿ ದೊಡ್ಡ ತಪ್ಪಾಗಿತ್ತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌(Nawaz Sharif) ಬಹಿರಂಗ ಹೇಳಿಕೆ ನೀಡಿದ್ದಾರೆ. ಆ ಮೂಲಕ ಕಾರ್ಗಿಲ್‌ ಯುದ್ಧ(Kargil War) ಜನರಲ್‌ ಫರ್ವೇಜ್‌ ಮುಷಾರಫ್‌(Pervez Musharraf) ಕುಕೃತ್ಯ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣ(Viral Video)ದಲ್ಲಿ ಬಹಳ ಸದ್ದು ಮಾಡುತ್ತಿದೆ.

ತಮ್ಮ ಪಾಕಿಸ್ತಾನ ಮುಸ್ಲಿಂ ಲೀಗ್‌(N) ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ನವಾಜ್‌ ಷರೀಫ್‌, ಮೇ 28, 1998,ರಂದು ಪಾಕಿಸ್ತಾನ ಐದು ಅಣು ಬಾಂಬ್‌ ಪರೀಕ್ಷೆ ನಡೆಸಿತ್ತು. ಇದಾದ ಬಳಿಕ ಅಂದಿನ ಭಾರತದ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಇಲ್ಲಿಗೆ ಬಂದು ನಮ್ಮ ಜೊತೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ನಾವು ಮಾತ್ರ ಆ ಒಪ್ಪಂದವನ್ನು ಮುರಿದೆವು.ಅದು ನಮ್ಮ ಅತಿ ದೊಡ್ಡ ತಪ್ಪು ಎಂದರು.

ಫೆಬ್ರವರಿ 21, 1999 ರಂದು ಎರಡು ಬದ್ಧ ವೈರಿ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಭಾರತ ಲಾಹೋರ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ನೆರೆಹೊರ ರಾಷ್ಟ್ರಗಳ ನಡುವಿನ ಶಾಂತಿ ಒಪ್ಪಂದವು ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಜನ ಸಂಪರ್ಕವನ್ನು ಉತ್ತೇಜಿಸಲು ಕರೆ ನೀಡಿತು. ಆದಾಗ್ಯೂ, ಕೆಲವು ತಿಂಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯಲ್ಲಿ ಪಾಕಿಸ್ತಾನದ ಆಕ್ರಮಣವು ಕಾರ್ಗಿಲ್ ಯುದ್ಧಕ್ಕೆ ಕಾರಣವಾಯಿತು.

ಮಾರ್ಚ್ 1999 ರಿಂದ, ಪಾಕಿಸ್ತಾನ ಸೇನೆಯ ಜನರಲ್ ಆಗಿದ್ದ ಮುಷರಫ್, ಲಡಾಖ್‌ನ ಕಾರ್ಗಿಲ್ ಜಿಲ್ಲೆಯೊಳಗೆ ಪಾಕ್‌ ಸೇನೆಯ ರಹಸ್ಯ ಒಳನುಸುಳುವಿಕೆಗೆ ಆದೇಶಿಸಿದರು. ನವದೆಹಲಿ ಒಳನುಸುಳುವಿಕೆಯನ್ನು ಕಂಡುಹಿಡಿದ ನಂತರ ಪೂರ್ಣ ಪ್ರಮಾಣದ ಯುದ್ಧವು ಸ್ಫೋಟಗೊಂಡಿತು. ಈ ಯುದ್ಧವನ್ನು ಭಾರತ ಗೆದ್ದಿತ್ತು. ಈ ಸಂರ್ಭದಲ್ಲಿ ಷರೀಫ್‌ ಪಾಕಿಸ್ತಾನದ ಪ್ರಧಾನಿ ಆಗಿದ್ದರು.

ಇದನ್ನೂ ಓದಿ:Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

ಇದೀಗ ಇದೇ ವಿಚಾರ ಬಗ್ಗೆ ಪ್ರಸ್ತಾಪಿಸಿರುವ ಷರೀಫ್‌ ಅಂದು ತಮ್ಮ ಸರ್ಕಾರ ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಸರ್ಕಾರಿ ಸ್ವಾಮ್ಯದ ಪಾಕಿಸ್ತಾನ್ ಟೆಲಿವಿಷನ್ ಕಾರ್ಪೊರೇಷನ್ (ಪಿಟಿವಿ) ಪ್ರಸಾರ ಮಾಡಿದ ನವಾಜ್ ಷರೀಫ್ ಅವರ ಭಾಷಣದ ಒಂದು ಭಾಗವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Continue Reading

ವಿದೇಶ

Fraud Case: ಒಂದು ವರ್ಷ ಪ್ರೀತಿಸಿ ಮದುವೆಯಾದ; 12 ದಿನಗಳ ಬಳಿಕ ಬಯಲಾಯ್ತು ಆಕೆಯ ದೇಹ ರಹಸ್ಯ!

ಆಸ್ತಿ ಲಪಟಾಯಿಸಲು ಹೆಣ್ಣಿನಂತೆ ವೇಷಭೂಷಣ ತೊಟ್ಟು ಇಂಡೋನೇಷ್ಯಾದ ವ್ಯಕ್ತಿಯೊಬ್ಬನನ್ನು ಮದುವೆಯಾದ 12 ದಿನಗಳ ಬಳಿಕ ಆತನ ವಂಚನೆಯ (Fraud Case) ಜಾಲ ಬಯಲಾಗಿದೆ. ಈ ಕುರಿತ ಕುತೂಹಲಕಾರಿ ಕತೆ ಇಲ್ಲಿದೆ.

VISTARANEWS.COM


on

By

Fraud Case
Koo

ಒಂದು ವರ್ಷ ಪ್ರೀತಿಸಿ, ಬಳಿಕ ಮದುವೆಯಾಗಿ 12 ದಿನಗಳ ಬಳಿಕ ಇಂಡೋನೇಷ್ಯಾದ (Indonesia) 26 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮಹಿಳೆಯಲ್ಲ (Fraud Case) ಎಂಬುದನ್ನು ತಿಳಿದು ಆಘಾತಗೊಂಡಿದ್ದಾನೆ. 2023ರಲ್ಲಿ ಅವರಿಬ್ಬರು ಸಾಮಾಜಿಕ ಜಾಲತಾಣದಲ್ಲಿ (social media) ಭೇಟಿಯಾಗಿದ್ದು, ಒಂದು ವರ್ಷದ ಬಳಿಕ ಇಬ್ಬರೂ ಮದುವೆಗೆ (wedding) ಸಮ್ಮತಿ ಸೂಚಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಭೇಟಿಯಾಗಿದ್ದ ಇಬ್ಬರೂ ಒಂದು ವರ್ಷದ ಬಳಿಕ ವೈಯಕ್ತಿಕವಾಗಿ ಭೇಟಿಯಾಗಲು ನಿರ್ಧರಿಸಿದ್ದರು. ಅದಿಂಡಾ ಹೆಸರಿನಲ್ಲಿ ಪರಿಚಯವಾದ ಹುಡುಗಿ ಸಂಪೂರ್ಣ ಮುಖವನ್ನು ಮುಚ್ಚುವ ಸಾಂಪ್ರದಾಯಿಕ ಮುಸ್ಲಿಂ ಉಡುಗೆಯನ್ನು ಯಾವಾಗಲೂ ಧರಿಸುತ್ತಿದ್ದ.ಳು. ಅದು ಯಾಕೆ ಎಂದು ಯುವಕ ಪ್ರಶ್ನೆ ಮಾಡಲಿಲ್ಲ. ಅದು ಆಕೆಯ ಇಸ್ಲಾಂ ಧರ್ಮದ ಮೇಲಿನ ಭಕ್ತಿಯ ಸಂಕೇತವೆಂದು ಎಕೆ ಭಾವಿಸಿದ್ದ.

ಕೊನೆಗೆ ಇಬ್ಬರೂ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದರು. ಮದುವೆಗೆ ಹಾಜರಾಗಲು ತನಗೆ ಯಾವುದೇ ಕುಟುಂಬವಿಲ್ಲ ಎಂದು ಅದಿಂಡಾ ಎಕೆಗೆ ತಿಳಿಸಿದ್ದಳು. ಆದ್ದರಿಂದ ಇವರಿಬ್ಬರು ಏಪ್ರಿಲ್ 12ರಂದು ಎಕೆ ಮನೆಯಲ್ಲಿ ಸಾಧಾರಣ ಸಮಾರಂಭದ ಮೂಲಕ ಪತಿಪತ್ನಿಯರಾದರು.

ಮದುವೆಯ ಅನಂತರವೂ ಅದಿಂಡಾ ತನ್ನ ಪತಿಯಿಂದ ತನ್ನ ಮುಖವನ್ನು ನಿರಂತರವಾಗಿ ಮರೆಮಾಡಿದಳು ಮತ್ತು ಅವನ ಹಳ್ಳಿಯಲ್ಲಿ ಅವನ ಕುಟುಂಬ ಮತ್ತು ಸ್ನೇಹಿತರೊಂದಿಗೆ ಬೆರೆಯಲು ನಿರಾಕರಿಸಿದಳು. ಇದಲ್ಲದೆ, ಅವಳು ಮದುವೆಯ ಅನಂತರದ ಶಾಸ್ತ್ರಗಳನ್ನು ಮಾಡಲು ನಿರಾಕರಿಸಿದಳು. ಋತುಚಕ್ರ, ಆರೋಗ್ಯ ಸಮಸ್ಯೆ ಎಂದು ಹೇಳಿ ಗಂಡನೊಂದಿಗೆ ಸೇರಲು ನಿರಾಕರಿಸಿದಳು.

12 ದಿನಗಳ ಬಳಿಕ ಮಾಹಿತಿ ಬಹಿರಂಗ

ಹನ್ನೆರಡು ದಿನಗಳ ಅನುಮಾನಾಸ್ಪದ ವರ್ತನೆಯ ಅನಂತರ ಎಕೆ ತನ್ನ ಹೆಂಡತಿಯನ್ನು ತನಿಖೆ ಮಾಡಲು ನಿರ್ಧರಿಸಿದ. ಅದಿಂಡಾ ಅವರ ಪೋಷಕರು ಇನ್ನೂ ಜೀವಂತವಾಗಿದ್ದಾರೆ ಎಂಬುದನ್ನು ಆತ ಕಂಡುಕೊಂಡ. ಮಗನ ಈ ಹೊಸ ಸಂಬಂಧದ ಬಗ್ಗೆ ಅವರಿಗೆ ಸಂಪೂರ್ಣವಾಗಿ ತಿಳಿದಿರಲಿಲ್ಲ. ಆಘಾತಕಾರಿ ವಿಷಯವೆಂದರೆ ಅದಿಂಡಾ ವಾಸ್ತವವಾಗಿ 2020ರಲ್ಲಿ ಕ್ರಾಸ್ ಡ್ರೆಸ್ಸಿಂಗ್ ಮಾಡುತ್ತಿರುವ ಇಎಸ್ ಹೆಚ್ ಎಂದು ಗುರುತಿಸಲ್ಪಟ್ಟಿದ್ದಾನೆ.

ಯಾಕಾಗಿ ವಂಚನೆ?

ಪೊಲೀಸ್ ತನಿಖೆಯ ಸಮಯದಲ್ಲಿ ಆಸ್ತಿ ಕದಿಯಲು ಎಕೆಯನ್ನು ಇಎಸ್ ಹೆಚ್ ವಿವಾಹವಾದ ಎಂದು ತಿಳಿದು ಬಂದಿದೆ. ಆತನನ್ನು ಬಂಧಿಸಿರುವ ಪೊಲೀಸರು ಆತನ ಧ್ವನಿ ಮಹಿಳೆಯಂತೆ ಇದೆ. ಆತ ನಿಜವಾಗಿಯೂ ತನ್ನ ಪಾತ್ರವನ್ನು ಚೆನ್ನಾಗಿ ನಿರ್ವಹಿಸಿದ್ದಾನೆ ಎಂದು ತಿಳಿಸಿದ್ದಾರೆ!

ಎಕೆ ಮತ್ತು ಇಎಸ್ ಹೆಚ್ ಮದುವೆಯ ಫೋಟೋಗಳನ್ನು ನೋಡಿದರೆ ಅದಿಂಡ ನಿಜವಾದ ಮಹಿಳೆಯಂತೆ ಕಾಣುತ್ತಾನೆ. ಸೌಮ್ಯವಾದ ಧ್ವನಿ ಮತ್ತು ಸ್ವರವೂ ಅವನಿಗಿದೆ. ಆದ್ದರಿಂದ ಅವನು ಮಹಿಳೆ ಎಂಬುದರ ಬಗ್ಗೆ ಯಾವುದೇ ಅನುಮಾನವಿರಲಿಲ್ಲ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ: Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

ಏನು ಶಿಕ್ಷೆ ?

ಸ್ಥಳೀಯ ಕಾನೂನುಗಳ ಅಡಿಯಲ್ಲಿ ವಂಚನೆ ಆರೋಪಗಳನ್ನು ಎದುರಿಸುತ್ತಿರುವ ಆತನಿಗೆ ನಾಲ್ಕು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುವುದು.

ಈ ಸುದ್ದಿ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರನ್ನು ಬೆಚ್ಚಿ ಬೀಳಿಸಿದೆ. ಒಬ್ಬ ವ್ಯಕ್ತಿ ಪಾಪ ಎಕೆ, ಒಂದು ವರ್ಷಕ್ಕೂ ಹೆಚ್ಚು ಕಾಲ ಅಡ್ಡ ಡ್ರೆಸ್ಸರ್‌ನೊಂದಿಗಿನ ಸಂಬಂಧದಲ್ಲಿದ್ದು ಮೋಸ ಹೋಗಿರುವುದು ಸಂಕಟ ಉಂಟು ಮಾಡುತ್ತದೆ. ಮದುವೆ ಮತ್ತು ಹಣ ಎರಡನ್ನೂ ಕಳೆದುಕೊಂಡಿದ್ದಾನೆ ಎಂದು ಕಾಮೆಂಟ್ ಮಾಡಿದ್ದಾರೆ.

Continue Reading
Advertisement
Hardik Pandya
ಕ್ರೀಡೆ9 mins ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Viral Video
ವೈರಲ್ ನ್ಯೂಸ್42 mins ago

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

TOP 5 Movies big budget Movie in OTT
ಒಟಿಟಿ44 mins ago

TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

panjurli daiva sharat shetty murder
ದಕ್ಷಿಣ ಕನ್ನಡ1 hour ago

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

Money Guide
ಮನಿ-ಗೈಡ್1 hour ago

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Prajwal Revanna Case
ಕರ್ನಾಟಕ1 hour ago

Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Gold Rate Today
ಚಿನ್ನದ ದರ2 hours ago

Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

World Digestive Health Day
ಆರೋಗ್ಯ2 hours ago

World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ರಾಹುಲ್‌ ಗಾಂಧಿ rahul gandhi ippb account 2
ಪ್ರಮುಖ ಸುದ್ದಿ2 hours ago

ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

All Eyes on Rafah
ವಿದೇಶ2 hours ago

All Eyes on Rafah: ಪ್ಯಾಲೆಸ್ತೀನ್‌ಗೆ ಬೆಂಬಲಿಸಿ ರೋಹಿತ್‌ ಪತ್ನಿ ಪೋಸ್ಟ್‌; ಫುಲ್‌ ಟ್ರೋಲ್‌- ಏನಿದು ʼಆಲ್‌ ಐಸ್‌ ಆನ್‌ ರಫಾʼ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌