Yuva Film: ಅಪ್ಪು ದಾರಿಯಲ್ಲೇ ನಡೆದರಾ ʻಯುವʼ ರಾಜ್‌ಕುಮಾರ್‌? ಸಿನಿಮಾ ಟೈಟಲ್‌ ಹಿಂದಿರೋ ಸತ್ಯವೇನು? - Vistara News

ಸಿನಿಮಾ

Yuva Film: ಅಪ್ಪು ದಾರಿಯಲ್ಲೇ ನಡೆದರಾ ʻಯುವʼ ರಾಜ್‌ಕುಮಾರ್‌? ಸಿನಿಮಾ ಟೈಟಲ್‌ ಹಿಂದಿರೋ ಸತ್ಯವೇನು?

ಯುವ (Yuva Film) ಟೀಸರ್‌ ಬಿಡುಗಡೆಯಾದಂತೆ ಟ್ವೀಟ್‌ನಲ್ಲಿ ದೊಡ್ಮನೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರಾಜ್‌ಕುಮಾರ್ ‘ಬೇಡರ ಕಣ್ಣಪ್ಪ’ ಚಿತ್ರದ ಅಣ್ಣಾವ್ರ ಫೋಟೊ ಜತೆ ‘ಯುವ’ ಫಸ್ಟ್ ಲುಕ್ ಪೋಸ್ಟರ್ ಕೊಲಾಜ್ ಮಾಡಿ ಶೇರ್ ಮಾಡಿದ್ದಾರೆ. ಇದೀಗ ಯುವ ಅವರ ಕಣ್ಣುಗಳು ಅಣ್ಣಾವ್ರ ರೀತಿ ಇದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

VISTARANEWS.COM


on

Yuva Film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಘವೇದ್ರ ರಾಜ್‌ಕುಮಾರ್‌ ಅವರ ಕಿರಿಯ ಮಗ ಯುವ ರಾಜ್‌ಕುಮಾರ್‌ ಚೊಚ್ಚಲ ಸಿನಿಮಾ ʻಯುವʼ (Yuva Film) ಟೀಸರ್‌ ಬಿಡುಗಡೆಗೊಂಡಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಸಂತೋಷ್ ಆನಂದ್‌ ರಾಮ್ ಈ ಸಿನಿಮಾ ಕಟ್ಟಿಕೊಡುತ್ತಿದ್ದಾರೆ. ಟೀಸರ್ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ. ಸಿನಿಮಾ ಮುಹೂರ್ತ ಕೂಡ ನೆರವೇರಿದೆ. ಡಿಸೆಂಬರ್ 22ಕ್ಕೆ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಯುವ ಟೀಸರ್‌ ಬಿಡುಗಡೆಯಾದಂತೆ ಟ್ವೀಟ್‌ನಲ್ಲಿ ದೊಡ್ಮನೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ರಾಜ್‌ಕುಮಾರ್ ‘ಬೇಡರ ಕಣ್ಣಪ್ಪ’ ಚಿತ್ರದ ಅಣ್ಣಾವ್ರ ಫೋಟೊ ಜತೆ ‘ಯುವ’ ಫಸ್ಟ್ ಲುಕ್ ಪೋಸ್ಟರ್ ಕೊಲಾಜ್ ಮಾಡಿ ಶೇರ್ ಮಾಡಿದ್ದಾರೆ. ಇದೀಗ ಯುವ ಅವರ ಕಣ್ಣುಗಳು ಅಣ್ಣಾವ್ರ ರೀತಿ ಇದೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಅಪ್ಪು ದಾರಿಯಲ್ಲೇ…

20 ವರ್ಷಗಳ ಹಿಂದೆ ಪುನೀತ್ ರಾಜ್‌ಕುಮಾರ್ ‘ಅಪ್ಪು’ ಆಗಿ ಚಿತ್ರರಂಗದಲ್ಲಿ ಖ್ಯಾತಿ ಪಡೆದರು. ಮನೆಯಲ್ಲಿ ಎಲ್ಲರೂ ಪುನೀತ್ ರಾಜ್‌ಕುಮಾರ್ ಅವರನ್ನು ಅಪ್ಪು ಎಂದೇ ಕರೆಯುತ್ತಿದ್ದರು. ಹಾಗಾಗಿ ತಮ್ಮದೇ ಹೆಸರಿನ ಟೈಟಲ್ ಸಿನಿಮಾದಲ್ಲಿ ನಟಿಸಿ ಪುನೀತ್ ಗೆದ್ದರು. ಈಗ ಯುವ ಕೂಡ ತಮ್ಮದೇ ಹೆಸರಿನ ಟೈಟಲ್ ಸಿನಿಮಾದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಇದೀಗ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ ಅನ್ನುತ್ತಿದ್ದಾರೆ ಅಭಿಮಾನಿಗಳು. ಪೋಸ್ಟರ್‌ನಲ್ಲಿ ಯುವ ಜಾವಾ ಬೈಕ್ ಏರಿ ಲುಕ್‌ ರಿವೀಲ್‌ ಮಾಡಿದ್ದಾರೆ. ಅವರ ಪೋಸ್ಟರ್‌ನಲ್ಲಿ ಇದ್ದ ಬೈಕ್ ನಂಬರ್(M 144) ಹಾಗೂ ಪುನೀತ್ ರಾಜ್‌ಕುಮಾರ್ ಬಳಸುತ್ತಿದ್ದ ಕಾರುಗಳ ನಂಬರ್ ಸೇಮ್ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Kannada New Movie: ಈ ವಾರ ಸ್ಯಾಂಡಲ್‌ವುಡ್‌ನಲ್ಲಿ 12 ಸಿನಿಮಾಗಳು ರಿಲೀಸ್‌!

Yuva Film
https://twitter.com/RRK_Official_/status/1631781552538652673?s=20

ಅಜನೀಶ್ ಲೋಕನಾಥ್ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣ ‘ಯುವ’ ಚಿತ್ರಕ್ಕಿದೆ. ಪುನೀತ್‌ ರಾಜ್‌ಕುಮಾರ್‌ ನಿಧನರಾದಾಗ, ಯುವ ರಾಜ್‌ಕುಮಾರ್‌ ಅವರಲ್ಲಿ ಅಪ್ಪುವನ್ನು ನೋಡಲು ಬಯಸುತ್ತೇವೆ ಎಂದು ಅಭಿಮಾನಿಗಳು ಹೇಳಿಕೊಂಡು ಭಾವುಕರಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Pushpa 2: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ ಚಿತ್ರದ ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್‌ ಆಗಿದೆ. ಈಗಾಗಲೇ ರಿಲೀಸ್‌ ಆಗಿರುವ ಮೊದಲ ಹಾಡು ಸೂಪರ್‌ ಹಿಟ್‌ ಆಗಿದ್ದು, ಎರಡನೇ ಹಾಡಿನ ಬಗ್ಗೆ ಕುತೂಹಲ ಮೂಡಿದೆ. ಹಾಗಾದರೆ ಎರಡನೇ ಹಾಡು ಯಾವಾಗ ರಿಲೀಸ್‌ ಆಗಲಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Pushpa 2
Koo

ಹೈದರಾಬಾದ್‌: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡಿನ ರಿಲೀಸ್‌ಗೆ ಮುಹೂರ್ತ ಫಿಕ್ಸ್‌ ಆಗಿದೆ.

ʻಪುಷ್ಪ ಪುಷ್ಪʼ ಅಲ್ಲು ಅರ್ಜುನ್‌ ಪಾತ್ರವನ್ನು ಪರಿಚಯಿಸುವ ಹಾಡಾದರೆ ಇದೀಗ ರಿಲೀಸ್‌ ಆಗಲಿರುವ ಎರಡನೇ ಹಾಡಿನಲ್ಲಿ ನಾಯಕಿ ರಶ್ಮಿಕಾ ಮಂದಣ್ಣ ಕೂಡ ಇರಲಿದ್ದಾರೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ. ಈ ಬಗ್ಗೆ ರಶ್ಮಿಕಾ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಹಾಡು ರಿಲೀಸ್‌ ಯಾವಾಗ?

ʼಪುಷ್ಪ 2ʼ ಚಿತ್ರದ ಎರಡನೇ ಹಾಡು ನಾಳೆ (ಮೇ 29) ಬೆಳಿಗ್ಗೆ 11.07ಕ್ಕೆ ರಿಲೀಸ್‌ ಆಗಲಿದೆ ಎಂದು ರಶ್ಮಿಕಾ ತಿಳಿಸಿದ್ದಾರೆ. ರಶ್ಮಿಕಾ ಮತ್ತು ಅಲ್ಲು ಅರ್ಜುನ್‌ ಫೋಸ್‌ ಕೊಡುತ್ತಿರುವ ಪೋಸ್ಟರ್‌ ಈಗಾಗಲೇ ಗಮನ ಸೆಳೆದಿದೆ. ಗುಲಾಬಿ ಬಣ್ಣ, ಹಲವು ಡ್ಯಾನ್ಸರ್‌ಗಳ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ನಗುತ್ತಾ ಪೋಸ್‌ ನೀಡಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬರಲಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

ಇದನ್ನೂ ಓದಿ: Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Continue Reading

ಸ್ಯಾಂಡಲ್ ವುಡ್

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

Radhika Pandit: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ ಸದ್ಯ ನಟನೆಯಿಂದ ವಿರಾಮ ಪಡೆದುಕೊಂಡು ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಸಿನಿಮಾ ರಂಗಕ್ಕೆ ಮರಳಬೇಕೆಂದು ಆಗ್ರಹಿಸುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಈ ಮಧ್ಯೆ ಅವರು ನೀವು ಇಂದು (ಮೇ 28) ‘ನನಗೆ ಏನಾದರೂ ಕೇಳಬಹುದು’ʼ ಎಂದು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಘೋಷಿಸಿದ್ದು, ಪ್ರಶ್ನೆ ಕೇಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

VISTARANEWS.COM


on

Radhika Pandit
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ (Radhika Pandit) ಕನ್ನಡದ ಪ್ರತಿಭಾವಂತ ಕಲಾವಿದೆ. ಹಲವು ಚಿತ್ರಗಳಲ್ಲಿ ನಾಯಕಿಯಾಗಿ ಮಿಂಚಿದ ಅವರು ತಮ್ಮ ಅಭಿನಯ ಸಾಮರ್ಥ್ಯದಿಂದಲೇ ಅಭಿಮಾನಿಗಳ ಮನ ಗೆದ್ದವರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಟಿ ಸದ್ಯ ನಟನೆಯಿಂದ ವಿರಾಮ ತೆಗೆದುಕೊಂಡಿದ್ದಾರೆ. ರಾಕಿಂಗ್‌ ಸ್ಟಾರ್‌ ಯಶ್‌ (Yash) ಜತೆ ಸಪ್ತಪದಿ ತುಳಿದ ಬಳಿಕ ಅವರು ಅಭಿನಯದಿಂದ ವಿಮುಖರಾಗಿದ್ದಾರೆ. ಅದರಲ್ಲಿಯೂ ಎರಡು ಮಕ್ಕಳಾದ ಬಳಿಕ ಅವರು ಸಿನಿಮಾ ರಂಗದಿಂದ ದೂರ ಉಳಿದು ಅವರ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಅವರು ನಟನೆಗೆ ಮರಳಲಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣವಾಗಿದ್ದು ರಾಧಿಕಾ ಪಂಡಿತ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಪೋಸ್ಟ್‌. ಅದೇನು ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: Radhika Pandit: ಹೇಗಿತ್ತು ರಾಧಿಕಾ ಪಂಡಿತ್‌ ಬರ್ತಡೇ ಸೆಲೆಬ್ರೇಷನ್‌? ಇಲ್ಲಿದೆ ವಿಡಿಯೊ!

Continue Reading

South Cinema

Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

Rashmika Mandanna: ಟಾಲಿವುಡ್‌ನ ಕ್ಯೂಟ್‌ ಜೋಡಿ ಎಂದೇ ಕರೆಯಲ್ಪಡುವ ವಿಜಯ್‌ ದೇವರಕೊಂಡ ಮತ್ತು ಕನ್ನಡತಿ ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿದ್ದಾರಾ? ಇವರಿಬ್ಬರು ಈ ಬಗ್ಗೆ ಬಾಯಿ ಬಿಡದಿದ್ದರೂ ಹೌದು ಎನ್ನುವುದಕ್ಕೆ ಅನೇಕ ಕಾರಣ ಸಿಗುತ್ತವೆ. ಸದ್ಯ ವಿಜಯ್‌ ದೇವರಕೊಂಡ ಅವರ ಸಹೋದರ, ʼಬೇಬಿʼ ಖ್ಯಾತಿನ ನಟ ಆನಂದ್‌ ದೇವರಕೊಂಡ ಇದೇ ರೀತಿಯ ಪ್ರಶ್ನೆ ಕೇಳಿದ್ದು, ರಶ್ಮಿಕಾ ನಾಚಿ ನೀರಾಗಿದ್ದಾರೆ. ಇಲ್ಲಿದೆ ಆ ವಿಡಿಯೊ.

VISTARANEWS.COM


on

Rashmika Mandanna
Koo

ಹೈದರಾಬಾದ್‌: ಕನ್ನಡತಿ, ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಟಾಲಿವುಡ್‌ ಸ್ಟಾರ್‌ ವಿಜಯ್‌ ದೇವರಕೊಂಡ (Vijay Deverakonda) ಮಧ್ಯೆ ಒಂದೊಳ್ಳೆ ಬಾಂಧವ್ಯವಿದೆ. ಇಬ್ಬರು ಪರಸ್ಪರ ಡೇಟಿಂಗ್‌ ಮಾಡುತ್ತಿರುವ ವಿಚಾರವನ್ನು ಬಾಯಿ ಬಿಟ್ಟು ಹೇಳಿಕೊಳ್ಳದಿದ್ದರೂ ಆಗಾಗ ಜತೆಯಲ್ಲಿ ಕಾಣಿಸಿಕೊಳ್ಳುತ್ತಿರುವುದು, ವಿಜಯ್‌ ಮನೆಗೆ ರಶ್ಮಿಕಾ ಭೇಟಿ ನೀಡುತ್ತಿರುವುದು ಮುಂತಾದ ಕಾರಣಕ್ಕೆ ಇಬ್ಬರು ಸದ್ಯದಲ್ಲೇ ಮದುವೆಯಾಗುತ್ತಾರೆ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಗಾಸಿಪ್‌ ಕಾಲಂಗಳಲ್ಲಿಯೂ ಇಬ್ಬರು ಆಗಾಗ ಕಾಣಿಸಿಕೊಳ್ಳುತ್ತಾರೆ. ಇದೀಗ ಇದೇ ವಿಚಾರವಾಗಿ ವಿಜಯ್‌ ದೇವರಕೊಂಡ ಅವರ ಸಹೋದರ, ನಟ ಆನಂದ್‌ ದೇವರಕೊಂಡ (Anand Deverakonda) ಜತೆ ರಶ್ಮಿಕಾ ಮಾತನಾಡಿದ್ದು, ವಿಡಿಯೊ ವೈರಲ್‌ ಆಗಿದೆ.

ಸೋಮವಾರ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮವೊಂದರಲ್ಲಿ ಆನಂದ್‌ ದೇವರಕೊಂಡ ಮತ್ತು ರಶ್ಮಿಕಾ ಜತೆಯಾಗಿ ಭಾವಹಿಸಿದ್ದರು. ಆ ವೇಳೆ ರಶ್ಮಿಕಾ ಬಳಿ ಆನಂದ್‌ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಈ ವೇಳೆ ನಿಮ್ಮ ನೆಚ್ಚಿನ ಸಹ ಕಲಾವಿದ ಯಾರು ಎಂದೂ ಪ್ರಶ್ನಿಸಿದ್ದರು. ಆನಂದ್‌ ಅವರು ವಿಜಯ್‌ ದೇವರಕೊಂಡ ಅವರನ್ನು ಉದ್ದೇಶಿಸಿಯೇ ಈ ಪ್ರಶ್ನೆ ಕೇಳಿದ್ದರು. ಇದನ್ನು ಅರಿತ ರಶ್ಮಿಕಾ ನಾಚಿ ನೀರಾಗಿದ್ದಾರೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇಲ್ಲಿದೆ ಕ್ಯೂಟ್‌ ವಿಡಿಯೊ

ʼʼನಿಮ್ಮ ನೆಚ್ಚಿನ ಕೋಸ್ಟಾರ್‌ ಯಾರು?ʼʼ ಎಂದು ಆನಂದ್‌ ಕೇಳುತ್ತಿದ್ದಂತೆ ನೆರೆದಿದ್ದ ಜನರೆಲ್ಲ ವಿಜಯ್‌ ದೇವರಕೊಂಡ ಎಂದು ಕೋಗಲು ಆರಂಭಿಸಿದರು. “ಆನಂದ್, ನನ್ನನ್ನು ಯಾಕೆ ಇಕ್ಕಟ್ಟಿಗೆ ಸಿಲುಕಿಸುತ್ತಿದ್ದೀರಿ?” ಎಂದು ನಗುತ್ತಲೇ ರಶ್ಮಿಕಾ ಪ್ರಶ್ನಿಸಿದರು. ನಂತರ ಅವರು “ರೌಡಿ ಬಾಯ್” ಎಂದು ವಿಜಯ್ ಹೆಸರನ್ನು ಸುತ್ತುಬಳಸಿ ಹೇಳಿ ಅಭಿಮಾನಿಗಳಿಗೆ ಇನ್ನಷ್ಟು ಸುಳಿವು ನೀಡಿದರು. ಸದ್ಯ ವಿಜಯ್‌-ರಶ್ಮಿಕಾ ಅಭಿಮಾನಿಗಳು ಈ ಕುರಿತು ಚರ್ಚೆ ನಡೆಸಲು ಆರಂಭಿಸಿದ್ದಾರೆ. ಶೀಘ್ರದಲ್ಲಿಯೇ ಇವರು ತಮ್ಮ ಸಂಬಂಧವನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದೆಲ್ಲ ಮಾತನಾಡಲು ಆರಂಭಿಸಿದ್ದಾರೆ.

ಯಾಕಾಗಿ ಗಾಸಿಪ್‌?

ವಿಜಯ್‌ ಮತ್ತು ರಶ್ಮಿಕಾ ಜತೆಯಾಗಿ ಅಭಿನಯಿಸಿದ ತೆಲುಗು ಚಿತ್ರ ʼಗೀತಾ ಗೋವಿಂದಮ್‌ʼ 2018ರಲ್ಲಿ ತೆರೆಕಂಡಿತ್ತು. ಮೊದಲ ಬಾರಿ ಜತೆಯಾಗಿ ಅಭಿನಯಿಸಿದ್ದ ಈ ಕ್ಯೂಟ್‌ ಜೋಡಿಯನ್ನು ಪ್ರೇಕ್ಷಕರು ಬಹುವಾಗಿ ಮೆಚ್ಚಿಕೊಂಡಿದ್ದರು. ತೆರೆಮೇಲೆ ಇವರ ಕೆಮೆಷ್ಟ್ರಿ ಮ್ಯಾಜಿಕ್‌ ಮಾಡಿತ್ತು. ಅಂದಿನಿಂದ ಇವರು ಡೇಟಿಂಗ್‌ ನಡೆಸುತ್ತಿದ್ದಾರೆ ಎನ್ನುವ ಗಾಸಿಪ್‌ ಹಬ್ಬಿದೆ. ಬಳಿಕ 2019ರಲ್ಲಿ ಇವರಿಬ್ಬರು ಜತೆಯಾಗಿ ಕಾಣಿಸಿಕೊಂಡ ʼಡಿಯರ್‌ ಕಾಮ್ರೇಡ್‌ʼ ತೆಲುಗು ಸಿನಿಮಾ ರಿಲೀಸ್‌ ಆಗಿತ್ತು. ಇದು ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡದಿದ್ದರೂ ಈ ಜೋಡಿ ಮತ್ತೊಮ್ಮೆ ಗಮನ ಸೆಳೆದಿತ್ತು. ಆದರೆ ಇವರು ಸಾವರ್ಜನಿಕವಾಗಿ ತನ್ನ ಸಂಬಂಧವನ್ನು ಇದುವರೆಗೆ ಒಪ್ಪಿಕೊಂಡಿಲ್ಲ ಜತೆಗೆ ನಿರಾಕರಿಸಿಲ್ಲ.

ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

ಈ ವರ್ಷದ ಏಪ್ರಿಲ್‌ನಲ್ಲಿ ರಶ್ಮಿಕಾ ಹುಟ್ಟುಹಬ್ಬವನ್ನು ಇಬ್ಬರು ಅಬುದಾಬಿಯಲ್ಲಿ ಆಚರಿಸಿಕೊಂಡಿದ್ದರು. ಇವರು ಇದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೊ ನೋಡಿದ ಅಭಿಮಾನಿಗಳು ಇಬ್ಬರು ಒಂದೇ ಸ್ಥಳದಲ್ಲಿ ಇದ್ದುದನ್ನು ಗುರುತಿಸಿದ್ದರು. ಸದ್ಯ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್‌ನಲ್ಲಿ ಬ್ಯುಸಿ ಇದ್ದಾರೆ. ರಶ್ಮಿಕಾ ದಕ್ಷಿಣ ಭಾರತದ ಸಿನಿಮಾಗಳ ಜತೆಗೆ ಬಾಲಿವುಡ್‌ನಲ್ಲಿಯೂ ಛಾಪು ಮೂಡಿಸಿದ್ದು, ಉತ್ತಮ ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಸದ್ಯ ಒಪ್ಪಿಕೊಂಡ ಸಿನಿಮಾ ಮುಗಿಸಿ ಇಬ್ಬರು ಉಂಗುರ ಬದಲಾಯಿಸಿಕೊಳ್ಳಲಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Continue Reading

ಕ್ರಿಕೆಟ್

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Andre Russell Dance: ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

VISTARANEWS.COM


on

Andre Russell Dance:
Koo

ಮುಂಬಯಿ: ಭಾನುವಾರ(ಮೇ 26) ನಡೆದಿದ್ದ ಐಪಿಎಲ್​ ಫೈನಲ್​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡ ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿತು. ಈ ಗೆಲುವಿನ ಬಳಿಕ ಕೆಕೆಆರ್​ ತಂಡ ಪಬ್​ನಲ್ಲಿ ಪಾರ್ಟಿ ಮಾಡಿತ್ತು. ಇದೇ ವೇಳೆ ಆ್ಯಂಡ್ರೆ ರಸೆಲ್(Andre Russell Dance)​ ಅವರು ಬಾಲಿವುಡ್ ನಟಿ ಅನನ್ಯಾ ಪಾಂಡೆ(Ananya Pandey) ಜತೆ ಶಾರೂಖ್ ಖಾನ್ ಅಭಿನಯದ ಡಂಕಿ ಚಿತ್ರದ​ ‘ಲುಟ್ ಪಟ್ ಗಯಾ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಇತ್ತೀಚಿಗೆ ರಸೆಲ್ ತನ್ನ ಕಾರಿನಲ್ಲಿ ಪ್ರಯಾಣಿಸುವಾಗ ಮತ್ತು ವಿಮಾನ ಪ್ರಯಾಣದ ಸಮಯದಲ್ಲಿ ಶಾರುಖ್​ ಖಾನ್​ ನಟನೆಯ(Shah Rukh Khan) ಡಂಕಿ ಚಲನಚಿತ್ರದ ಅಪ್ರತಿಮ ಹಾಡು “ಲುಟ್ ಪುಟ್ ಗಯಾ” ಹಾಡನ್ನು ಹಾಡಿದ್ದರು. ಈ ವೇಳೆ ರಿಂಕು ಸಿಂಗ್​ ಕೂಡ ರಸೆಲ್​ಗೆ ಸಾಥ್​ ನೀಡಿದ್ದರು. ಈ ವಿಡಿಯೊ ಕೂಡ ವೈರಲ್​ ಆಗಿತ್ತು.

ವೆಸ್ಟ್​ ಇಂಡೀಸ್​ ತಂಡ ಸ್ಫೋಟಕ ಬ್ಯಾಟರ್​ ರಸೆಲ್(Andre Russell) ಬಾಲಿವುಡ್​ ನಟಿ ಅವಿಕಾ ಗೋರ್(Avika Gor) ಜತೆ ಲುಂಗಿಯಲ್ಲಿ ಮಸ್ತ್​ ಸ್ಟೆಪ್ಸ್ ಹಾಕಿದ ವಿಡಿಯೊ ಕೂಡ ಕೆಲವು ದಿನಗಳ ಹಿಂದೆ ವೈರಲ್​ ಆಗಿತ್ತು. ​’ಲಡ್ಕಿ ತು ಕಮಲ್ ಕಿ’ ಎನ್ನುವ ಹಾಡಿಗೆ ರೆಸೆಲ್ ಅವಿಕಾ ಸೇರಿ ಹೆಜ್ಜೆ ಹಾಕಿರುವ ಈ ಹಾಡು ಯೂಟ್ಯೂಬ್​ನಲ್ಲಿ ಮೇ 9 ರಂದು ಬಿಡುಗಡೆಯಾಗಿತ್ತು.

ಈ ಹಾಡಿನಲ್ಲಿ ರಸೆಲ್​ ಕೇಸರಿ ಬಣ್ಣದ ಲುಂಗಿ ತೊಟ್ಟು, ಕಪ್ಪು ಬಣ್ಣದ ಬನಿಯನ್ ಹಾಗೂ ಸ್ಟೈಲಿಶ್ ಶರ್ಟ್​ ಧರಿಸಿ ಎಲ್ಲರ ಗಮನ ತನ್ನತ್ತ ಸೆಳೆದಿದ್ದಾರೆ. ಅವಿಕಾ ಗೋರ್ ನೀಲಿ ಸೀರೆಯಲ್ಲಿ ಮಿಂಚುವ ಜತೆಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ್ದಾರೆ. ಅವಿಕಾ ಗೋರ್ ಭಾರತೀಯ ನಟಿಯಾಗಿದ್ದು, ಅವರು ಮುಖ್ಯವಾಗಿ ಹಿಂದಿ ಮತ್ತು ತೆಲುಗು ಚಲನಚಿತ್ರಗಳು ಮತ್ತು ಕಿರುತೆರೆಯಲ್ಲಿ ನಟಿಸುತ್ತಾರೆ.

ಇದನ್ನೂ ಓದಿ IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೂರನೇ ಟ್ರೋಫಿ ಗೆದ್ದ ಕೆಕೆಆರ್​


ಚೆನ್ನೈಯ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದಿದ್ದ ಅತ್ಯಂತ ನೀರಸ ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಹೈದರಾಬಾದ್​ ತಂಡ 18.3 ಓವರ್​ಗಳಲ್ಲಿ 113 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಚೇಸಿಂಗ್​ ನಡೆಸಿದ ಕೆಕೆಆರ್​ ಕೇವಲ 10.3 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 114 ರನ್​ ಬಾರಿಸಿ ಚಾಂಪಿಯನ್​ ಪಟ್ಟ ಅಲಂಕರಿಸಿತು. ಇದು ಕೆಕೆಆರ್​ಗೆ ಒಲಿದ ಮೂರನೇ ಐಪಿಎಲ್​ ಟ್ರೋಫಿ.

Continue Reading
Advertisement
T20 World Cup 2024
ಕ್ರೀಡೆ23 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಭಾರತದ ಬ್ಯಾಟರ್​ಗಳಿವರು

Viral Video
ವೈರಲ್ ನ್ಯೂಸ್23 mins ago

Viral Video: ವಿಮಾನದ ರೆಕ್ಕೆ ಮೇಲೆ ನಡೆದುಕೊಂಡು ಹೊರ ಬಂದ ಪ್ರಯಾಣಿಕರು; ವೈರಲಾಯ್ತು ವಿಡಿಯೋ

self harming chandrashekar ವಾಲ್ಮೀಕಿ
ಪ್ರಮುಖ ಸುದ್ದಿ28 mins ago

ವಾಲ್ಮೀಕಿ ನಿಗಮ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರ ಮೇಲೆ ಎಫ್‌ಐಆರ್; ಡೆತ್‌ ನೋಟ್‌ನಲ್ಲಿರುವ ಸಚಿವ ಯಾರು?

Chetan and Naveen gowda
ಕರ್ನಾಟಕ41 mins ago

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣ; ಚೇತನ್, ನವೀನ್ ಗೌಡ ಎಸ್ಐಟಿ ವಶಕ್ಕೆ

Pushpa 2
ಸಿನಿಮಾ1 hour ago

Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Traffic Violation Case filed against driver if petrol runs out and vehicle stops on road
ಬೆಂಗಳೂರು1 hour ago

Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

Aravind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಜಾಮೀನು ವಿಸ್ತರಣೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

Success Story
ಕೃಷಿ2 hours ago

Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

Radhika Pandit
ಸ್ಯಾಂಡಲ್ ವುಡ್2 hours ago

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

chakravarthy sulibele
ಬೆಂಗಳೂರು2 hours ago

Chakravarthy Sulibele: ಮೈಸೂರಿನಲ್ಲಿ ಇಂದು ಸಂಜೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್‌ ಸಮ್ಮಾನ್‌ ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ21 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 week ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌