Australia: ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ ಮೇಲೇಕೆ ದಾಳಿ? ಖಲಿಸ್ತಾನಿ ಬೆಂಬಲಿಗರ ಕೃತ್ಯಕ್ಕೆ ಇಲ್ಲವೇ ಕಡಿವಾಣ? - Vistara News

ದೇಶ

Australia: ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ ಮೇಲೇಕೆ ದಾಳಿ? ಖಲಿಸ್ತಾನಿ ಬೆಂಬಲಿಗರ ಕೃತ್ಯಕ್ಕೆ ಇಲ್ಲವೇ ಕಡಿವಾಣ?

ಆಸ್ಟ್ರೇಲಿಯಾದಲ್ಲಿ (Australia) ಹಿಂದೂ ದೇಗುಲಗಳನ್ನು ಟಾರ್ಗೆಟ್ ಮಾಡಿ, ದಾಳಿ ನಡೆಸುವ ಕೃತ್ಯಗಳು ಮುಂದುವರಿದಿವೆ. ಬ್ರಿಸ್ಬೆನ್‌ನ ಶ್ರೀ ಲಕ್ಷ್ಮೀ ನಾರಾಯಣ ದೇಗುಲದ ಹೊರ ಗೋಡೆಯನ್ನು ಧ್ವಂಸ ಮಾಡಿದ ಘಟನೆ ನಡೆದಿದೆ.

VISTARANEWS.COM


on

Khalistani supporters vandalise hindu temple in Australia
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬ್ರಿಸ್ಬೆನ್, ಆಸ್ಟ್ರೇಲಿಯಾ: ಖಲಿಸ್ತಾನಿ ಪರ ಬೆಂಬಲಿಗರು ವಿದೇಶಗಳಲ್ಲಿ ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡುವ ಪ್ರವೃತ್ತಿ ಮುಂದುವರಿದಿದೆ. ಆಸ್ಟ್ರೇಲಿಯಾದ(Australia) ಬ್ರಿಸ್ಬೆನ್‌ನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣ ದೇಗುಲವನ್ನು (Hindu Temple) ಖಲಿಸ್ತಾನಿ ಬೆಂಬಲಿಗರೂ ಧ್ವಂಸಗೊಳಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಿರಂತರವಾಗಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಹಾಗಿದ್ದೂ, ಖಲಿಸ್ತಾನಿ ಪರ ಬೆಂಬಲಿಗರ ವಿರುದ್ಧ ಅಲ್ಲಿನ ಸರ್ಕಾರವು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪ ಕೇಳಿ ಬಂದಿದೆ. ಈ ಹಿಂದೆ ಭಾರತೀಯ ವಿದೇಶಾಂಗ ಸಚಿವ ಜೈ ಶಂಕರ್ ಅವರು ಕ್ರಮಕ್ಕೆ ಆಗ್ರಹಿಸಿದ್ದರು.

ಆಸ್ಟ್ರೇಲಿಯಾ ಟುಡೇ ಮಾಧ್ಯಮದ ಜತೆ ಮಾತನಾಡಿದ ದೇಗುಲದ ಅಧ್ಯಕ್ಷ ಸತ್ಯೇಂದ್ರ ಶುಕ್ಲಾ ಅವರು, ದೇಗುಲದ ಹೊರ ಗೋಡೆಯನ್ನು ಧ್ವಂಸ ಮಾಡಿರುವ ಕುರಿತು ದೇಗುಲದ ಪೂಜಾರಿಗಳು ಮತ್ತು ಭಕ್ತರು ಕರೆ ಮಾಡಿ ನನಗೆ ತಿಳಿಸಿದರು” ಎಂದು ಹೇಳಿದ್ದಾರೆ.

ಹಿಂದೂ ಮಾನವ ಹಕ್ಕುಗಳ ನಿರ್ದೇಶಕಿಯಾಗಿರುವ ಸಾರಾ ಗೇಟ್ಸ್, “ದೇಗುಲದ ಗೋಡೆ ಹಾಳು ಮಾಡಿರುವ ಅಪರಾಧದ ರೀತಿಯ ಸಿಖ್ಸ್ ಫಾರ್ ಜಸ್ಟಿಸ್ (SFJ) ನಡೆಸುವ ರೀತಿಯಲ್ಲಿದೆ. ಇದು ಸ್ಪಷ್ಟವಾಗಿ ಆಸ್ಟ್ರೇಲಿಯಾದ ಹಿಂದೂಗಳನ್ನು ಭಯಭೀತಗೊಳಿಸಲು ಮಾಡಿರುವ ಪ್ರಯತ್ನವಾಗಿದೆ. ಪ್ರಪಗಂಡಾ, ಕಾನೂನುಬಾಹಿರ ಚಿಹ್ನೆಗಳು ಮತ್ತು ಸೈಬರ್‌ಬುಲ್ಲಿಂಗ್‌ ಸೇರಿದಂತೆ ಎಲ್ಲ ರೀತಿಯ ಬೆದರಿಕೆಗಳನ್ನು ಬಳಸಿಕೊಳ್ಳುತ್ತಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಕೆನಡಾ, ಆಸ್ಟ್ರೇಲಿಯಾಗಳಲ್ಲಿ ಹಿಂದೂ ದೇಗುಲಗಳ ಮೇಲೆ ಖಲಿಸ್ತಾನಿಗಳ ದಾಳಿ ಖಂಡನೀಯ

ಕಳೆದ ಜನವರಿ ತಿಂಗಳಲ್ಲಿ ಆಸ್ಟ್ರೇಲಿಯಾದ ಕ್ಯಾರಮ್ ಡೌನ್ಸ್‌ನಲ್ಲಿರುವ ಶ್ರೀ ಶಿವ ವಿಷ್ಣು ದೇವಾಲಯವನ್ನು ಹಿಂದೂ ವಿರೋಧಿ ಗೀಚುಬರಹದಿಂದ ಧ್ವಂಸಗೊಳಿಸಲಾಯಿತು. ಈಗ ಮತ್ತೆ ಅಂಥದ್ದೇ ಕೃತ್ಯಗಳನ್ನು ಎಸಗಲಾಗಿದೆ. ವಿಶೇಷವಾಗಿ ಆಸ್ಟ್ರೇಲಿಯಾದಲ್ಲಿ ಹಿಂದೂ ವಿರೋಧಿ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Doda Attack: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್‌ನ ‘ಕಾಶ್ಮೀರ ಟೈಗರ್ಸ್’ ಇತ್ತೀಚೆಗೆ ಜಮ್ಮುವಿನ ದೋಡಾದಲ್ಲಿ ನಡೆದ ದಾಳಿಯ ನಂತರದ ಘಟನೆಗಳನ್ನು ತೋರಿಸುವ ವಿಡಿಯೊವನ್ನು ಬಿಡುಗಡೆ ಮಾಡಿದೆ. ಈ ವಾರದ ಆರಂಭದಲ್ಲಿ ನಡೆದ ಈ ದಾಳಿಯಲ್ಲಿ ಸೇನಾಧಿಕಾರಿ ಮತ್ತು ಇತರ ಮೂವರು ಸೈನಿಕರು ಹುತಾತ್ಮರಾಗಿದ್ದರು. ವೈರಲ್ ಆಗುತ್ತಿರುವ ವಿಡಿಯೊದಲ್ಲಿ ಪಾಕಿಸ್ತಾನ ಮೂಲದವರು ಎನ್ನಲಾದ ಭಯೋತ್ಪಾದಕರು ಮೃತ ಸೈನಿಕನ ಶಿರಚ್ಛೇದ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಂಡು ಬಂದಿದೆ ಎನ್ನಲಾಗಿದೆ.

VISTARANEWS.COM


on

Doda Attack
Koo

ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (Jaish-e-Mohammed)ನ ‘ಕಾಶ್ಮೀರ ಟೈಗರ್ಸ್’ (Kashmir Tigers) ಇತ್ತೀಚೆಗೆ ಜಮ್ಮುವಿನ ದೋಡಾದಲ್ಲಿ ನಡೆದ ದಾಳಿಯ ನಂತರದ ಘಟನೆಗಳನ್ನು ತೋರಿಸುವ ವಿಡಿಯೊವನ್ನು ಬಿಡುಗಡೆ ಮಾಡಿದೆ ಎಂದು ʼದಿ ಪ್ರಿಂಟ್ʼ ವರದಿ ಮಾಡಿದೆ (Doda Attack). ಈ ವಾರದ ಆರಂಭದಲ್ಲಿ ನಡೆದ ಈ ದಾಳಿಯಲ್ಲಿ ಸೇನಾಧಿಕಾರಿ ಮತ್ತು ಇತರ ಮೂವರು ಸೈನಿಕರು ಹುತಾತ್ಮರಾಗಿದ್ದರು.

ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ವಿಡಿಯೊದಲ್ಲಿ ಪಾಕಿಸ್ತಾನ ಮೂಲದವರು ಎನ್ನಲಾದ ಭಯೋತ್ಪಾದಕರು ಮೃತ ಸೈನಿಕನ ಶಿರಚ್ಛೇದ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಂಡು ಬಂದಿದೆ ಎಂದು ʼದಿ ಪ್ರಿಂಟ್ʼ ತಿಳಿಸಿದೆ. ಕೆಲವು ದಿನಗಳ ಹಿಂದೆ ನಡೆದ ಎನ್‌ಕೌಂಟರ್‌ನಲ್ಲಿ ಮೃತ ಭಯೋತ್ಪಾದಕನ ದೇಹವನ್ನು ಸೈನಿಕರು ಎಳೆದೊಯ್ದಿದ್ದಕ್ಕೆ ಪ್ರತಿಕಾರವಾಗಿ ಈ ಕೃತ್ಯ ಎಸಗಲಾಗಿದೆ ಎಂದು ಭಯೋತ್ಪಾದಕ ಗುಂಪು ಹೇಳಿಕೊಂಡಿದೆ. ಸೇನಾ ಮೂಲಗಳು ಪ್ರಸ್ತುತ ಈ ವಿಡಿಯೊ ತುಣಿಕಿನ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ.

ಘಟನೆಯ ಸಮಯದಲ್ಲಿ ಸೈನಿಕರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಭಯೋತ್ಪಾದಕರು ಹೇಳಿಕೊಂಡಿರುವ ಎಕೆ – 47 ಅನ್ನು ಸಹ ವಿಡಿಯೊದಲ್ಲಿ ಕಂಡು ಬಂದಿದೆ ಎನ್ನಲಾಗಿದೆ.

ದೋಡಾ ಜಿಲ್ಲೆಯ ದೇಸಾ ಎಂಬ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಜುಲೈ 16ರಂದು ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದರು. ಉಗ್ರರಿಗಾಗಿ ನಡೆದ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಯೋಧರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದರು. ಇದೇ ವೇಳೆ ಯೋಧರು ಕೂಡ ಗುಂಡಿನ ದಾಳಿ ಆರಂಭಿಸಿದ್ದರು. ರಾತ್ರೋರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.

ಉಗ್ರರನ್ನು ಪತ್ತೆ ಹಚ್ಚಲು ಸೇನೆ ತನ್ನ ಕಾರ್ಯಾಚರಣೆಯನ್ನು ಗುರುವಾರ ತನಕ ಮುಂದುವರಿಸಿತ್ತು. ದೇಸಾ ಮತ್ತು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳನ್ನು ಕೂಂಬಿಂಗ್ ಮಾಡಲಾಗಿದೆ. ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಿಗ್ಗೆ ನಡುವೆ ದೇಸಾ ಕಾಡುಗಳಲ್ಲಿ ಎರಡು ಸಣ್ಣ ಗುಂಡಿನ ಚಕಮಕಿಗಳು ನಡೆದಿವೆ.

ದೋಡಾ ಜಿಲ್ಲೆಯನ್ನು 2005ರಲ್ಲಿ ಭಯೋತ್ಪಾದಕ ಚಟುವಟಿಕೆಗಳಿಂದ ಮುಕ್ತವೆಂದು ಘೋಷಿಸಿದ್ದರೂ ಇತ್ತೀಚೆಗೆ ಇಲ್ಲಿ ಮತ್ತೆ ಉಗ್ರ ಚಟುವಟಿಕೆ ಆರಂಭಗೊಂಡಿದೆ. ಜೂನ್ 12ರಂದು ಚಟರ್ಗಲಾ ಪಾಸ್‌ನಲ್ಲಿ ನಡೆದ ದಾಳಿಯೊಂದಿಗೆ ಮತ್ತೆ ಇಲ್ಲಿ ಹಿಂಸಾಚಾರ ಪ್ರಾರಂಭವಾಯಿತು. ಇದರಲ್ಲಿ ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಈ ವರ್ಷವೊಂದರಲ್ಲೇ ಇಲ್ಲಿ 11 ಸೈನಿಕರು ಹುತಾತ್ಮರಾಗಿದ್ದಾರೆ. ದೋಡಾದಲ್ಲಿ ನಾಲ್ವರು, ಜುಲೈ 8ರಂದು ಕಥುವಾದಲ್ಲಿ ಐವರು, ಮೇಯಲ್ಲಿ ಪೂಂಚ್‌ನಲ್ಲಿ ಓರ್ವ ಐಎಎಫ್ ಸಿಬ್ಬಂದಿ ಮತ್ತು ಜೂನ್‌ನಲ್ಲಿ ಓರ್ವ ಸಿಆರ್‌ಪಿಎಫ್‌ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. 

ಇದನ್ನೂ ಓದಿ: Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

Continue Reading

ದೇಶ

Mohan Bhagwat: ಕೆಲವರು ದೇವರಾಗಲು ಬಯಸುತ್ತಾರೆ; ಪರೋಕ್ಷವಾಗಿ ಮೋದಿಗೆ ತಿವಿದ್ರಾ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್?

Mohan Bhagwat: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ ಹೇಳಿಕೆ ಈ ಚರ್ಚೆಯ ಕಿಡಿ ಹೊತ್ತಿಸಿದೆ. ಜಾರ್ಖಂಡ್‌ನ ಗುಮ್ಲಾದಲ್ಲಿ ವಿಕಾಸ್ ಭಾರತಿ ಆಯೋಜಿಸಿದ್ದ ಕಾರ್ಯಕರ್ತರ ಮಾತನಾಡಿದ ಭಾಗವತ್, ಸ್ವಯಂ ಅಭಿವೃದ್ಧಿಯ ಹಾದಿಯಲ್ಲಿ, ಒಬ್ಬ ಮನುಷ್ಯನು ‘ಸೂಪರ್‌ಮ್ಯಾನ್‌’, ನಂತರ ‘ದೇವತೆ’, ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಬಯಸಬಹುದು. ಆದರೆ ಮುಂದೇನು ಎಂದು ಯಾರಿಗೂ ಖಚಿತವಿಲ್ಲ. ಆಂತರಿಕ ಮತ್ತು ಬಾಹ್ಯ ಆತ್ಮದ ಬೆಳವಣಿಗೆಗೆ ಅಂತ್ಯವಿಲ್ಲ ಮತ್ತು ಮಾನವೀಯ ಕಾರ್ಯಕಕ್ಕಾಗಿ ಅವಿರತವಾಗಿ ಶ್ರಮಿಸಬೇಕುʼʼ ಎಂದು ಹೇಳಿದ್ದು, ಇದು ಪ್ರಧಾನಿ ಮೋದಿ ಅವರ ಮೇಲಿನ ಪರೋಕ್ಷ ವಾಗ್ದಾಳಿ ಎಂದೇ ಹಲವರು ವಿಶ್ಲೇಷಿಸುತ್ತಿದ್ದಾರೆ.

VISTARANEWS.COM


on

Mohan Bhagwat
Koo

ರಾಂಚಿ: ಕೆಲವರು ಸೂಪರ್‌ ಮ್ಯಾನ್ ಆಗಲು ಬಯಸುತ್ತಾರೆ, ನಂತರ ‘ಭಗವಾನ್’ (ದೇವರು) ಆಗಲು ಬಯಸುತ್ತಾರೆ, ಬಳಿಕ ವಿಶ್ವರೂಪ ಹೊಂದಲು ನೋಡುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಗುರುವಾರ ಹೇಳಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಈ ಹೇಳಿಕೆ ಪ್ರಧಾನಿ ಮೋದಿ ಅವರ ಮೇಲಿನ ಪರೋಕ್ಷ ವಾಗ್ದಾಳಿ ಎಂದೇ ಹಲವರು ವಿಶ್ಲೇಷಿಸುತ್ತಿದ್ದಾರೆ.

ಜಾರ್ಖಂಡ್‌ನ ಗುಮ್ಲಾದಲ್ಲಿ ವಿಕಾಸ್ ಭಾರತಿ ಆಯೋಜಿಸಿದ್ದ ಕಾರ್ಯಕರ್ತರ ಮಾತನಾಡಿದ ಭಾಗವತ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಸ್ವಯಂ ಅಭಿವೃದ್ಧಿಯ ಹಾದಿಯಲ್ಲಿ, ಒಬ್ಬ ಮನುಷ್ಯನು ‘ಸೂಪರ್‌ಮ್ಯಾನ್‌’, ನಂತರ ‘ದೇವತೆ’, ‘ಭಗವಾನ್’ ಮತ್ತು ‘ವಿಶ್ವರೂಪ’ ಆಗಲು ಬಯಸಬಹುದು. ಆದರೆ ಮುಂದೇನು ಎಂದು ಯಾರಿಗೂ ಖಚಿತವಿಲ್ಲ. ಆಂತರಿಕ ಮತ್ತು ಬಾಹ್ಯ ಆತ್ಮದ ಬೆಳವಣಿಗೆಗೆ ಅಂತ್ಯವಿಲ್ಲ ಮತ್ತು ಮಾನವೀಯ ಕಾರ್ಯಕಕ್ಕಾಗಿ ಅವಿರತವಾಗಿ ಶ್ರಮಿಸಬೇಕು. ಒಬ್ಬ ಕಾರ್ಮಿಕನು ತನ್ನ ಕೆಲಸದಿಂದ ಎಂದಿಗೂ ತೃಪ್ತನಾಗಬಾರದುʼʼ ಎಂದು ಹೇಳಿದ್ದಾರೆ.

“ಕೆಲಸ ಮುಂದುವರಿಯಬೇಕು. ಪರಿಸರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನಿರಂತರವಾಗಿ ಕೆಲಸ ಮಾಡಲು ಪ್ರಯತ್ನಿಸಬೇಕು. ಇದಕ್ಕೆ ಅಂತ್ಯವಿಲ್ಲ ಮತ್ತು ವಿವಿಧ ಕ್ಷೇತ್ರಗಳಲ್ಲಿ ನಿರಂತರ ಕೆಲಸವು ಏಕೈಕ ಪರಿಹಾರ. ಭಾರತದ ಪ್ರಕೃತಿಯಂತೆ ಈ ಜಗತ್ತನ್ನು ಸುಂದರ ಸ್ಥಳವನ್ನಾಗಿ ಮಾಡಲು ನಾವು ಶ್ರಮಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.

ಸಮಾಜದ ಕಲ್ಯಾಣಕ್ಕಾಗಿ ಪ್ರತಿಯೊಬ್ಬರೂ ಅವಿರತವಾಗಿ ಶ್ರಮಿಸಬೇಕು ಎಂದ ಅವರು ʼʼದೇಶದ ಭವಿಷ್ಯದ ಬಗ್ಗೆ ಯಾವುದೇ ಸಂದೇಹವಿಲ್ಲ. ಅಭಿವೃದ್ಧಿಗಾಗಿ ಎಲ್ಲರೂ ಕೈಜೋಡಿಸುತ್ತಿದ್ದಾರೆʼʼ ಎಂದಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ಭಾರತವು ಜಗತ್ತಿಗೆ ಶಾಂತಿ ಮತ್ತು ಸಂತೋಷದ ಮಾರ್ಗವನ್ನು ತೋರಿದೆ. ‘ಸನಾತನ ಧರ್ಮ’ ಮಾನವಕುಲದ ಕಲ್ಯಾಣದಲ್ಲಿ ನಂಬಿಕೆ ಇಟ್ಟಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್‌ ವಾಗ್ದಾಳಿ

ಭಾಗವತ್ ತಮ್ಮ ಭಾಷಣದಲ್ಲಿ ಮೋದಿ ಅವರ ಹೆಸರನ್ನು ಎಲ್ಲಿಯೂ ಉಲ್ಲೇಖಿಸದಿದ್ದರೂ ಕಾಂಗ್ರೆಸ್‌ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್‌ ಮುಖ್ಯಸ್ಥರು ಪ್ರಧಾನಿ ತನ್ನನ್ನು ದೇವರು ಕಳುಹಿಸಿದ್ದಾರೆ ಎಂಬ ಹೇಳಿಕೆಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ ಎಂದಿದ್ದಾರೆ. ಲೋಕಸಭೆ ಚುನಾವಣೆ ವೇಳೆ ನರೇಂದ್ರ ಮೋದಿ ಅವರು ‘ನಾನು ಜೈವಿಕವಾಗಿ ಜನಿಸಿದಂತೆ ಭಾಸವಾಗುತ್ತಿಲ್ಲ. ನನ್ನನ್ನು ಭಗವಂತನೇ ಕಳಿಸಿದ್ದಾನೆ ಎನಿಸುತ್ತಿದೆ’ ಎಂಬ ಹೇಳಿಕೆ ನೀಡಿದ್ದರು. ಇದಕ್ಕೂ ಮುನ್ನ ಭಾಗವತ್‌ ಅವರು ಈ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಗೆ ಕೆಲವು ನಾಯಕರ ಅಹಂಕಾರವೇ ಕಾರಣ ಎಂದು ಹೇಳಿದ್ದರು. ಜತೆಗೆ ಭಾಗವತ್ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕಲಹ ಪೀಡಿತ ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ಆದ್ಯತೆಯೊಂದಿಗೆ ಪರಿಗಣಿಸಬೇಕು ಎಂದು ಸಲಹೆ ನೀಡಿದ್ದರು.

ಸದ್ಯ ಭಾಗವತ್‌ ಅವರ ಹೇಳಿಕೆಯನ್ನು ಜೈರಾಂ ರಮೇಶ್‌ ʼಇದು ನಾಗಪುರದಿಂದ (ಆರ್‌ಎಸ್‌ಎಸ್‌ ಕಚೇರಿಯಿಂದ) ಲೋಕಕಲ್ಯಾಣ ಮಾರ್ಗದತ್ತ (ಪ್ರಧಾನಿ ನಿವಾಸದತ್ತ) ಹಾರಿಸಿದ ಅಗ್ನಿಕ್ಷಿಪಣಿ’ ಎಂದು ವ್ಯಂಗ್ಯವಾಡಿದ್ದಾರೆ.

Continue Reading

ದೇಶ

Air India Flight: 225 ಪ್ರಯಾಣಿಕರನ್ನು ಹೊತ್ತು ಸ್ಯಾನ್ ಫ್ರಾನ್ಸಿಸ್ಕೋಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ರಷ್ಯಾದಲ್ಲಿ ಲ್ಯಾಂಡಿಂಗ್‌

Air India Flight: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 225 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಕಳೆದ ವರ್ಷ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರಷ್ಯಾದ ಮಗದನ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿತ್ತು.

VISTARANEWS.COM


on

Air India Flight
Koo

ನವದೆಹಲಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 225 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋ (Delhi-San Francisco)ಗೆ ತೆರಳುತ್ತಿದ್ದ ಏರ್ ಇಂಡಿಯಾ (Air India Flight) ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Krasnoyarsk international airport)ಕ್ಕೆ ಕಳುಹಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಕಾಕ್ ಪಿಟ್ ಸಿಬ್ಬಂದಿ ತಾಂತ್ರಿಕ ದೋಷವನ್ನು ಪತ್ತೆ ಹಚ್ಚಿದ ಹಿನ್ನಲೆಯಲ್ಲಿ ಎಐ 183 (AI 183) ವಿಮಾನವನ್ನು ರಷ್ಯಾದ ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಈ ವಿಮಾನದಲ್ಲಿ 225 ಪ್ರಯಾಣಿಕರು ಮತ್ತು 19 ಸಿಬ್ಬಂದಿ ಸೇರಿ ಒಟ್ಟು 244 ಮಂದಿ ಇದ್ದರು. ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್‌ ಮಾಡಿದ ಬಳಿಕ ಅವರೆಲ್ಲರನ್ನೂ ಹೆಚ್ಚಿನ ಟರ್ಮಿನಲ್ ಕಟ್ಟಡಕ್ಕೆ ಕರೆದೊಯ್ಯಲಾಯಿತು ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ.

“ಕ್ರಾಸ್ನೋಯರ್ಸ್ಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ತನ್ನದೇ ಆದ ಸಿಬ್ಬಂದಿಯನ್ನು ಹೊಂದಿಲ್ಲದ ಕಾರಣ, ಪ್ರಯಾಣಿಕರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ಬೇರೆ ವ್ಯವಸ್ಥೆ ಮಾಡುತ್ತಿದ್ದೇವೆ” ಎಂದು ಏರ್‌ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ. “ಏರ್ ಇಂಡಿಯಾ ಸರ್ಕಾರಿ ಸಂಸ್ಥೆಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ತಲುಪಿಸಲು ಶೀಘ್ರ ಪರ್ಯಾಯ ವ್ಯವಸ್ಥೆ ಮಡುತ್ತೇವೆʼʼ ಎಂದು ಭರವಸೆ ನೀಡಿದೆ.

“ಏರ್ ಇಂಡಿಯಾ ವಿಮಾನದಲ್ಲಿರುವ ಪ್ರಯಾಣಿಕರು ಮತ್ತು ಸಿಬ್ಬಂದಿಯ ಬಗ್ಗೆ ಕಾಳಜಿ ವಹಿಸುತ್ತೇವೆ. ಆದಷ್ಟು ಶೀಘ್ರ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮತ್ತು ಅಲ್ಲಿಯವರೆಗೆ ಎಲ್ಲರ ಆರೋಗ್ಯ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಂದೆಯೂ ಆಗಿತ್ತು

ಇದೇ ರೀತಿಯ ಘಟನೆ ಈ ಹಿಂದೆಯೂ ನಡೆದಿತ್ತು. ಕಳೆದ ವರ್ಷ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಅದನ್ನು ರಷ್ಯಾದ ಮಗದನ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಗಿತ್ತು.

ಆ ಬೋಯಿಂಗ್ 777-200 ಎಲ್ಆರ್ (Boeing 777-200 LR) ವಿಮಾನದಲ್ಲಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿ ಇದ್ದರು. ತುರ್ತು ಭೂ ಸ್ಪರ್ಶದ ಬಳಿಕ ಅವರಿಗೆಲ್ಲ ಸಮೀಪದ ಶಾಲೆಯಲ್ಲಿ ತಾತ್ಕಾಲಿಕ ವಸತಿ ಸೌಲಭ್ಯ ಕಲ್ಪಿಸಲಾಗಿತ್ತು. ಅಲ್ಲಿ ಅವರು ಎರಡು ದಿನಗಳ ಕಾಲ ತಂಗಿದ್ದರು. ನಂತರ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಹೊತ್ತ ಬದಲಿ ವಿಮಾನವನ್ನು ಮುಂಬೈನಿಂದ ಕಳುಹಿಸಲಾಯಿತು. ಎರಡು ದಿನಗಳ ಬಳಿಕ ಪರ್ಯಾಯ ವಿಮಾನ ಮೂಲಕ ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಿದ್ದರು.

ಇದನ್ನೂ ಓದಿ: Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

ತುರ್ತು ಭೂ ಸ್ಪರ್ಶ

ಈ ವರ್ಷದ ಮೇಯಲ್ಲಿ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿತ್ತು. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿತ್ತು. ಆ ಮೂಲಕ ಭಾರೀ ಅವಘಡವೊಂದು ತಪ್ಪಿತ್ತು.

Continue Reading

ವಾಣಿಜ್ಯ

Tax Free Income: ತೆರಿಗೆ ಮುಕ್ತವಾಗಿರುವ ಆದಾಯ ಮೂಲಗಳಿವು; ಇದರ ಪ್ರಯೋಜನ ಪಡೆಯುವುದು ಹೇಗೆ?

2023- 24ರ ಹಣಕಾಸು ವರ್ಷದಿಂದ ಪರಿಚಯಿಸಲಾದ ಹೊಸ ತೆರಿಗೆ ಪದ್ಧತಿಯಲ್ಲಿ ಹಲವು ಆದಾಯಗಳಿಗೆ ತೆರಿಗೆ (Tax Free Income) ವಿನಾಯಿತಿಗಳನ್ನು ನೀಡಲಾಗಿದೆ. ಇವುಗಳ ಬಗ್ಗೆ ತಿಳಿದಿರುವುದು ಅತ್ಯಗತ್ಯ. ಈ ವಿನಾಯಿತಿಗಳನ್ನು ಅರ್ಥಮಾಡಿಕೊಳ್ಳುವುದರಿಂದ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ತೆರಿಗೆ ಉಳಿತಾಯವನ್ನು ಮಾಡಲು ಸಹಾಯ ಮಾಡುತ್ತದೆ. ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Tax Free Income
Koo

ದೇಶದ ಪ್ರತಿಯೊಬ್ಬ ನಾಗರಿಕನೂ ಪ್ರತಿ ವರ್ಷ ತಮ್ಮ ಆದಾಯದ (income) ಲೆಕ್ಕ ಪತ್ರಗಳನ್ನು ತೋರಿಸಬೇಕು. ಆದರೆ ಹೆಚ್ಚಿನವರಿಗೆ ಯಾವುದು ಆದಾಯ (Tax Free Income) ತೆರಿಗೆ (tax) ವ್ಯಾಪ್ತಿಯೊಳಗೆ ಬರುತ್ತದೆ, ಯಾವುದು ಬರುದಿಲ್ಲ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದಿಲ್ಲ. ಹೀಗಾಗಿ ಆದಾಯ ತೆರಿಗೆ ರಿಟರ್ನ್ (ITR) ಫೈಲ್ ಮಾಡುವಾಗ ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಆದಾಯ ತೆರಿಗೆ ಮುಕ್ತ ವಿನಾಯಿತಿಗಳನ್ನು ಅರ್ಥ ಮಾಡಿಕೊಂಡರೆ ಮಾತ್ರ ಸರಿಯಾದ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ.

ಭಾರತದಲ್ಲಿ 1961 ರ ಆದಾಯ ತೆರಿಗೆ (ಐಟಿ) ಕಾಯಿದೆಯ ಅಡಿಯಲ್ಲಿ ಕೆಲವು ಆದಾಯ ಮೂಲಗಳು ತೆರಿಗೆಯಿಂದ ವಿನಾಯಿತಿ ಪಡೆದಿವೆ. ಈ ತೆರಿಗೆ ಮುಕ್ತ ಆದಾಯಗಳು ವ್ಯಕ್ತಿಗಳು ತಮ್ಮ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವಾಗ ತೆರಿಗೆಗಳನ್ನು ಉಳಿಸಲು ಸಹಾಯ ಮಾಡುತ್ತದೆ.

ವಿಶೇಷವಾಗಿ 2023- 24ರ ಹಣಕಾಸು ವರ್ಷದಿಂದ ಪರಿಚಯಿಸಲಾದ ಹೊಸ ತೆರಿಗೆ ಪದ್ಧತಿಯಲ್ಲಿ ಈ ವಿನಾಯಿತಿಗಳ ಬಗ್ಗೆ ತಿಳಿದಿರುವುದು ಅತ್ಯಗತ್ಯ. ಈ ವಿನಾಯಿತಿಗಳನ್ನು ಅರ್ಥಮಾಡಿಕೊಳ್ಳುವುದರಿಂದ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಅವರ ತೆರಿಗೆ ಉಳಿತಾಯವನ್ನು ಮಾಡಲು ಸಹಾಯ ಮಾಡುತ್ತದೆ.

2024- 25ರಲ್ಲಿ ಭಾರತದಲ್ಲಿನ ವಿವಿಧ ತೆರಿಗೆ ಮುಕ್ತ ಆದಾಯ ಮೂಲಗಳ ವಿವರ ಇಲ್ಲಿದೆ.


ಕೃಷಿ ಆದಾಯ

ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 10(1) ಅಡಿಯಲ್ಲಿ ಕೃಷಿ ಮತ್ತು ಕೃಷಿಯಿಂದ ಬರುವ ಆದಾಯವು ತೆರಿಗೆ ಮುಕ್ತವಾಗಿದೆ. ರೈತರ ಕಲ್ಯಾಣ ಮತ್ತು ಕೃಷಿ ಬೆಳವಣಿಗೆಯನ್ನು ಬೆಂಬಲಿಸಲು 1961ರಲ್ಲಿ ಕಾಯಿದೆಯ ಅನುಷ್ಠಾನದ ಅನಂತರ ಈ ವಿನಾಯಿತಿ ಜಾರಿಯಲ್ಲಿದೆ.

ಕೃಷಿ ಆದಾಯದಲ್ಲಿ ಹಣ್ಣು, ತರಕಾರಿ, ಬೇಳೆಕಾಳು, ಧಾನ್ಯಗಳು ಮತ್ತು ಮಸಾಲೆಗಳಂತಹ ಕೃಷಿ ಬೆಳೆಗಳ ಮಾರಾಟದಿಂದ ಆದಾಯ, ಕೃಷಿ ಭೂಮಿ ಅಥವಾ ಕಟ್ಟಡಗಳಿಂದ ಬಾಡಿಗೆ ಆದಾಯ, ಕೃಷಿ ಭೂಮಿ ಮಾರಾಟದಿಂದ ಲಾಭ ಸೇರಿದಂತೆ ನಿವ್ವಳ ಕೃಷಿ ಆದಾಯವು 5,000 ರೂ. ಮೀರಿದರೆ ಮತ್ತು ಕೃಷಿಯೇತರ ಆದಾಯವು ಮೂಲ ವಿನಾಯಿತಿ ಮಿತಿಯನ್ನು ಮೀರಿದರ ಮಾತ್ರ ತೆರಿಗೆಗಳು ಅನ್ವಯವಾಗುತ್ತದೆ.

ಉಡುಗೊರೆಗಳು

ಆದಾಯ ತೆರಿಗೆ ಕಾಯಿದೆ ಸೆಕ್ಷನ್ 56ರ ಪ್ರಕಾರ ಸಂಬಂಧಿಕರು ಮದುವೆಯ ಸಂದರ್ಭದಲ್ಲಿ ಅಥವಾ ಉತ್ತರಾಧಿಕಾರಿಗಳಿಗೆ ನೀಡುವ ಉಯಿಲು ಇದರಲ್ಲಿ ಸ್ಥಳೀಯ ಅಧಿಕಾರ, ಟ್ರಸ್ಟ್‌, ಶಿಕ್ಷಣ, ವೈದ್ಯಕೀಯ ಸಂಸ್ಥೆಗಳ ಉಡುಗೊರೆಗಳು ತೆರಿಗೆ ಮುಕ್ತವಾಗಿರುತ್ತವೆ. ಇದು ಹಣ, ಆಸ್ತಿ, ಆಭರಣ, ಕಲೆ, ಡಿಜಿಟಲ್ ಸ್ವತ್ತುಗಳನ್ನು ಒಳಗೊಂಡಿರುತ್ತದೆ. ಸಂಬಂಧಿಗಳಲ್ಲದವರ ಉಡುಗೊರೆಗಳಿಗೆ ಪ್ರತಿ ಹಣಕಾಸು ವರ್ಷಕ್ಕೆ 50,000 ರೂ. ವರೆಗೆ ತೆರಿಗೆ ವಿನಾಯಿತಿ ಇದೆ.

ವಿದ್ಯಾರ್ಥಿ ವೇತನ ಮತ್ತು ಬಹುಮಾನಗಳು

ಖಾಸಗಿ ಸಂಸ್ಥೆಗಳು, ಸರ್ಕಾರಿ ಸಂಸ್ಥೆಗಳು ಅಥವಾ ಇತರ ಸಂಸ್ಥೆಗಳಿಂದ ಶೈಕ್ಷಣಿಕ ಉದ್ದೇಶಗಳಿಗಾಗಿ ಒದಗಿಸಲಾದ ವಿದ್ಯಾರ್ಥಿ ವೇತನಗಳು ತೆರಿಗೆ-ಮುಕ್ತವಾಗಿರುತ್ತವೆ. ಸೆಕ್ಷನ್ 10 (17A) ಪ್ರಕಾರ, ಸರ್ಕಾರ ಅಥವಾ ಮಾನ್ಯತೆ ಪಡೆದ ಅಧಿಕಾರಿಗಳಿಂದ ಬರುವ ಪ್ರಶಸ್ತಿಗಳು ತೆರಿಗೆಯಿಂದ ವಿನಾಯಿತಿ ಪಡೆದಿವೆ. ಹೆಚ್ಚುವರಿಯಾಗಿ, ಪರಮ ವೀರ ಚಕ್ರ, ಮಹಾವೀರ ಚಕ್ರ ಮತ್ತು ವೀರ ಚಕ್ರದಂತಹ ಶೌರ್ಯ ಪ್ರಶಸ್ತಿಗಳ ಪಿಂಚಣಿ ಸ್ವೀಕರಿಸುವವರು ತಮ್ಮ ಪಿಂಚಣಿಗಳ ಮೇಲಿನ ತೆರಿಗೆಯಿಂದ ವಿನಾಯಿತಿ ಪಡೆದಿದ್ದಾರೆ.

ಗ್ರಾಚ್ಯುಟಿ

ಸರ್ಕಾರಿ ನೌಕರರು ಪಡೆಯುವ ಗ್ರಾಚ್ಯುಟಿಯು ಸಂಪೂರ್ಣ ತೆರಿಗೆ ಮುಕ್ತವಾಗಿದೆ. ಗ್ರಾಚ್ಯುಟಿ ಕಾಯಿದೆ 1972 ರ ಅಡಿಯಲ್ಲಿ ಸರ್ಕಾರೇತರ ಸಂಸ್ಥೆಗಳ ಉದ್ಯೋಗಿಗಳಿಗೆ ಗ್ರಾಚ್ಯುಟಿ 20 ಲಕ್ಷ ರೂ. ವರೆಗೆ ಕನಿಷ್ಠ ತೆರಿಗೆ ವಿನಾಯಿತಿ ಇದೆ. ಕಾಯಿದೆಯ ಅಡಿಯಲ್ಲಿ ಒಳಪಡದ ಸಂಸ್ಥೆಗಳಿಗೆ ಕನಿಷ್ಠ ವಿನಾಯಿತಿ ಮೊತ್ತವು ಗ್ರಾಚ್ಯುಟಿ 10 ಲಕ್ಷ ರೂ. ಗಳ ವರೆಗೆ ಇದೆ. ಸರ್ಕಾರಿ ನೌಕರರ ನಿವೃತ್ತಿ ಅಥವಾ ಮರಣದ ಗ್ರಾಚ್ಯುಟಿಗೆ ಸಂಪೂರ್ಣ ವಿನಾಯಿತಿ ಇದೆ.

ರಜೆ ವೇತನ

ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು ನಿವೃತ್ತಿಯ ಅನಂತರ ಪಡೆಯುವ ರಜೆಯ ವೇತನಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ಇದೆ. ಖಾಸಗಿ ವಲಯದ ಉದ್ಯೋಗಿಗಳಿಗೆ, ಯೂನಿಯನ್ ಬಜೆಟ್ 2023 ರ ಪ್ರಕಾರ ರಜೆ ಎನ್‌ಕ್ಯಾಶ್‌ಮೆಂಟ್‌ಗೆ ತೆರಿಗೆ ವಿನಾಯಿತಿ ಮಿತಿಯನ್ನು 25 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಹೆಚ್ ಯು ಎಫ್ ರಶೀದಿ

ಹಿಂದೂ ಅವಿಭಜಿತ ಕುಟುಂಬದ (ಹೆಚ್ ಯು ಎಫ್ ) ಸದಸ್ಯರು ಪಡೆದ ರಸೀದಿಗಳು ಐಟಿ ಕಾಯಿದೆಯಡಿಯಲ್ಲಿ ಹೆಚ್ ಯು ಎಫ್ ಅನ್ನು ಪ್ರತ್ಯೇಕವಾಗಿ ಮೌಲ್ಯಮಾಪನ ಮಾಡಿದ್ದರೆ ತೆರಿಗೆ ಮುಕ್ತವಾಗಿರುತ್ತದೆ. ಈ ವಿನಾಯಿತಿಯ ಪ್ರಯೋಜನ ಪಡೆಯಲು ಹೆಚ್ ಯುಎಫ್ ತನ್ನ ಸದಸ್ಯರಿಗೆ ಅಗತ್ಯವಾದ ತೆರಿಗೆಗಳನ್ನು ಪಾವತಿಸಿರಬೇಕು.

ಎಲ್ ಎಲ್ ಪಿ ಅಥವಾ ಪಾಲುದಾರಿಕೆ

ಆದಾಯ ತೆರಿಗೆಗಾಗಿ ಪ್ರತ್ಯೇಕವಾಗಿ ನಿರ್ಣಯಿಸಲಾದ ಎಲ್‌ಎಲ್‌ಪಿ ಅಥವಾ ಪಾಲುದಾರಿಕೆ ಸಂಸ್ಥೆಯ ಪಾಲುದಾರರು ತಮ್ಮ ಲಾಭದ ಪಾಲಿನ ತೆರಿಗೆಗಳಿಂದ ವಿನಾಯಿತಿ ಪಡೆದಿರುತ್ತಾರೆ. ಆದಾಗ್ಯೂ, ಸಂಬಳ ಅಥವಾ ಬಡ್ಡಿಯಂತಹ ಇತರ ರಸೀದಿಗಳು ಸಂಪೂರ್ಣವಾಗಿ ತೆರಿಗೆಗೆ ಒಳಪಡುತ್ತವೆ.

ಪಿಂಚಣಿ

ಕೆಲವು ಷರತ್ತುಗಳ ಅಡಿಯಲ್ಲಿ ಕಮ್ಯೂಟ್ ಮಾಡಿದಾಗ ಪಿಂಚಣಿ ಪಾವತಿಗಳನ್ನು ತೆರಿಗೆಯಿಂದ ವಿನಾಯಿತಿ ನೀಡಲಾಗುತ್ತದೆ. ಸರ್ಕಾರಿ ನೌಕರರಿಗೆ ಸಂಪೂರ್ಣ ವಿನಾಯಿತಿ ಇದೆ. ಇತರರಿಗೆ, ಅವರು ಗ್ರಾಚ್ಯುಟಿಯನ್ನು ಸ್ವೀಕರಿಸುತ್ತಾರೆಯೇ ಎಂಬುದರ ಆಧಾರದ ಮೇಲೆ ವಿನಾಯಿತಿ ಮೊತ್ತವು ಬದಲಾಗುತ್ತದೆ. ವಿಶ್ವಸಂಸ್ಥೆಯಂತಹ ಸಂಸ್ಥೆಗಳ ಪಿಂಚಣಿಗಳು ತೆರಿಗೆ ಮುಕ್ತವಾಗಿವೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ಸದಸ್ಯರ ಅವಲಂಬಿತರು ಪಡೆಯುವ ಕುಟುಂಬ ಪಿಂಚಣಿಗಳು ಸಹ ತೆರಿಗೆ ಮುಕ್ತವಾಗಿವೆ.

Tax Free Income


ಭವಿಷ್ಯ ನಿಧಿಯಿಂದ ಆದಾಯ

ಸರ್ಕಾರಿ ನೌಕರರು ಶಾಸನಬದ್ಧ ಭವಿಷ್ಯ ನಿಧಿಯಿಂದ ಪಡೆದ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ. ಮಾನ್ಯತೆ ಪಡೆದ ಭವಿಷ್ಯ ನಿಧಿಯಿಂದ ಖಾಸಗಿ ಉದ್ಯೋಗಿಗಳು ಐದು ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ್ದರೆ ಅವರ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ. ಪಬ್ಲಿಕ್ ಪ್ರಾವಿಡೆಂಟ್ ಫಂಡ್‌ನಲ್ಲಿನ ಠೇವಣಿ ಮತ್ತು ಬಡ್ಡಿಯನ್ನು ಸಂಪೂರ್ಣವಾಗಿ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಜೀವ ವಿಮಾ ಪಾಲಿಸಿಯಿಂದ ಮೆಚ್ಯೂರಿಟಿ ಮೊತ್ತ

ಸೆಕ್ಷನ್ 10(10D) ಅಡಿಯಲ್ಲಿ 2012ರ ಏಪ್ರಿಲ್ 1ರ ಅನಂತರ ನೀಡಲಾದ ಪಾಲಿಸಿಗಳಿಗೆ ಪಾವತಿಸಿದ ಪ್ರೀಮಿಯಂ ಮೊತ್ತದ ವಿಮಾ ಮೊತ್ತದ ಶೇಕಡಾ 10 ರಷ್ಟು ಮತ್ತು ಮೊದಲು ನೀಡಲಾದ ಪಾಲಿಸಿಗಳಿಗೆ ಶೇ. 20ರಷ್ಟನ್ನು ಮೀರದಿದ್ದರೆ ಜೀವ ವಿಮಾ ಪಾಲಿಸಿ ಮೆಚ್ಯೂರಿಟಿ ಆದಾಯವು ತೆರಿಗೆ ಮುಕ್ತವಾಗಿರುತ್ತದೆ.

ಇದನ್ನೂ ಓದಿ: Anant Radhika Wedding: ಅನಂತ್ ಅಂಬಾನಿ ಮದುವೆ ಊಟಕ್ಕೆ 2500 ಬಗೆಯ ಖಾದ್ಯಗಳು! ಏನ್ ತಿಂದ್ರೋ ಏನ್ ಬಿಟ್ರೋ!

ಬಡ್ಡಿ ಆದಾಯ

ಕೆಲವು ಬಡ್ಡಿ ಆದಾಯಗಳಿಗೆ ಸೆಕ್ಷನ್ 10(15) ಅಡಿಯಲ್ಲಿ ಸಂಪೂರ್ಣ ವಿನಾಯಿತಿ ನೀಡಲಾಗಿದೆ ಅವುಗಳೆಂದರೆ ಸುಕನ್ಯಾ ಸಮೃದ್ಧಿ ಯೋಜನೆ, ಚಿನ್ನದ ಠೇವಣಿ ಬಾಂಡ್‌ಗಳ ಮೇಲಿನ ಬಡ್ಡಿ, ಸ್ಥಳೀಯ ಪ್ರಾಧಿಕಾರದ ಬಾಂಡ್‌ಗಳ ಮೇಲಿನ ಬಡ್ಡಿ, ಭೋಪಾಲ್ ಗ್ಯಾಸ್ ಸಂತ್ರಸ್ತರ ಠೇವಣಿಗಳಿಗೆ ಬಡ್ಡಿ, ತೆರಿಗೆ-ಮುಕ್ತ ಮೂಲಸೌಕರ್ಯ ಬಾಂಡ್‌ಗಳಿಂದ ಬಡ್ಡಿ, ಎರವಲು ಪಡೆದ ಹಣಕ್ಕೆ ಸ್ಥಳೀಯ ಅಧಿಕಾರಿಗಳು ಅಥವಾ ಸರ್ಕಾರದಿಂದ ಪಾವತಿಸಿದ ಬಡ್ಡಿ, ವಾರ್ಷಿಕವಾಗಿ 2.5 ಲಕ್ಷ ರೂ. ಗಿಂತ ಕಡಿಮೆ ಇಪಿಎಫ್ ಮತ್ತು ಪಿಪಿಎಫ್ ಕೊಡುಗೆಗಳ ಮೇಲಿನ ಬಡ್ಡಿ, ಎನ್ ಆರ್ ಇ ಖಾತೆಗಳಿಂದ ಬಡ್ಡಿ, ತೆರಿಗೆ-ಮುಕ್ತ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇದರಲ್ಲಿ ಒಳಪಟ್ಟಿರುತ್ತದೆ.

Continue Reading
Advertisement
Doda Attack
ಪ್ರಮುಖ ಸುದ್ದಿ13 mins ago

Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Urvashi Rautela Conversation With Manager 'Leaked',
ಬಾಲಿವುಡ್34 mins ago

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Kannadiga quota
ಕ್ರಿಕೆಟ್37 mins ago

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

CM Siddaramaiah and R Ashok karnataka assembly live
ಪ್ರಮುಖ ಸುದ್ದಿ45 mins ago

Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Mohan Bhagwat
ದೇಶ55 mins ago

Mohan Bhagwat: ಕೆಲವರು ದೇವರಾಗಲು ಬಯಸುತ್ತಾರೆ; ಪರೋಕ್ಷವಾಗಿ ಮೋದಿಗೆ ತಿವಿದ್ರಾ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್?

Womens Asia Cup 2024
ಕ್ರೀಡೆ1 hour ago

Womens Asia Cup 2024: ಇಂದು ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯ

railway track horrible accident
ಕ್ರೈಂ1 hour ago

Horrible Accident: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

Janhvi Kapoor hospitalised due to food poisoning
ಬಾಲಿವುಡ್1 hour ago

Janhvi Kapoor: ಅಂಬಾನಿ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ಜಾಹ್ನವಿ ಕಪೂರ್!

Paris Olympics 2024
ಕ್ರೀಡೆ2 hours ago

Paris Olympics 2024: ಅತ್ಲೀಟ್​ಗಳ ಕ್ರೀಡಾಗ್ರಾಮಕ್ಕೆ ಲಭಿಸಿತು ಅಧಿಕೃತ ಚಾಲನೆ

Health Tips Kannada Acidity from tea Then you are making these 5 mistakes
ಆರೋಗ್ಯ2 hours ago

Health Tips Kannada: ಚಹಾದಿಂದ ಅಸಿಡಿಟಿಯೇ? ಹಾಗಾದರೆ ನೀವು ಈ 5 ತಪ್ಪುಗಳನ್ನು ಮಾಡುತ್ತಿದ್ದೀರಿ ಎಂದರ್ಥ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ17 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ19 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌