ವಿಸ್ತಾರ Explainer: ದಿವಾಳಿಯಾದ ಪಾಕಿಸ್ತಾನ, ಪದೇ ಪದೆ ಭಾರತದ ಬೆನ್ನಿಗೆ ಇರಿದದ್ದಕ್ಕೆ ಪ್ರತಿಫಲ! - Vistara News

EXPLAINER

ವಿಸ್ತಾರ Explainer: ದಿವಾಳಿಯಾದ ಪಾಕಿಸ್ತಾನ, ಪದೇ ಪದೆ ಭಾರತದ ಬೆನ್ನಿಗೆ ಇರಿದದ್ದಕ್ಕೆ ಪ್ರತಿಫಲ!

ಪಾಕಿಸ್ತಾನ, ಭಾರತದ ಬೆನ್ನಿಗೆ ನಂಬಿಸಿ ಚೂರಿ ಹಾಕಿದ್ದು ಒಂದೆರಡು ಬಾರಿಯಲ್ಲ. ಹತ್ತಾರು ಬಾರಿ ನಂಬಿಕೆದ್ರೋಹ ಮಾಡಿದ, ಭಾರತದ ಮೇಲಿನ ದ್ವೇಷಕ್ಕಾಗಿಯೇ ತನ್ನೆಲ್ಲ ಸಂಪನ್ಮೂಲವನ್ನೂ ವೆಚ್ಚ ಮಾಡಿದ ಆ ದೇಶವನ್ನು ಅದರಿಂದಾಗಿಯೇ ಈಗ ದಿವಾಳಿತನ ಕಾಡುತ್ತಿದೆ.

VISTARANEWS.COM


on

wagah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಿಜ, ಪಕ್ಕದ ದೇಶ ದಿವಾಳಿಯಾದರೆ ಆ ದೇಶಕ್ಕೂ ಸುಖವಿಲ್ಲ, ನಮಗೂ ನೆಮ್ಮದಿಯಿಲ್ಲ. ಆದರೆ ಪಾಕಿಸ್ತಾನ ಮಾಡಿದ ಕಿತಾಪತಿ, ನಮ್ಮ ಬೆನ್ನಿಗೆ ಇರಿದ ನಂಬಿಕೆದ್ರೋಹ, ನಯವಂಚನೆ ಅಷ್ಟಿಷ್ಟಲ್ಲ. ಅದೆಲ್ಲದರ ಫಲ ಈಗ ಕಾಣಿಸುತ್ತಿದೆ (pakistan bankrupt) ಎಂದುಕೊಳ್ಳಲೂ ಸಾಧ್ಯವಿದೆ. ಪ್ರಗತಿಗಾಗಿ ಮಾಡಬೇಕಾದ ವೆಚ್ಚವನ್ನು ಭಾರತದ ಮೇಲಿನ ನಿರಂತರ ಹಗೆತನದಿಂದ ಮಿಲಿಟರಿ, ಭಯೋತ್ಪಾದನೆಗೆ ಸುರಿದಿದ್ದರ ಫಲವಿದು.

ಪಾಕಿಸ್ತಾನದ ಸಂಸ್ಥಾಪಕ ಮುಹಮ್ಮದ್ ಅಲಿ ಜಿನ್ನಾ ತಮ್ಮ ದೇಶವನ್ನು ಜಾತ್ಯತೀತ ರಾಷ್ಟ್ರ ಮಾಡಲು ಬಯಸಿದ್ದರು. ಆದರೆ ಪಾಕ್‌ ಸೃಷ್ಟಿಯಾದ ಕೇವಲ ಒಂದೇ ತಿಂಗಳಲ್ಲಿ ಭಾರತದ ಮೇಲೆ ದಾಳಿ ಮಾಡಲು ಬುಡಕಟ್ಟು ಸಮುದಾಯದ ಜನತೆ ಮತ್ತು ಸೈನಿಕರನ್ನು ತಳ್ಳಿದರು. ಅಲ್ಲಿಂದಲೇ ಆ ದೇಶದ ತಪ್ಪು ಹಾದಿ ಆರಂಭವಾಯಿತು. ಜಿನ್ನಾ ಅವರ ವಿಸ್ತರಣಾವಾದಿ ಯೋಚನೆಗಳು ಪಾಕಿಸ್ತಾನವನ್ನು ಆಕ್ರಮಣಕಾರಿ, ಮಿಲಿಟರೀಕರಣದ ಹಾದಿಯಲ್ಲಿ ಒಯ್ದವು.

ಜಿನ್ನಾ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಭಾರತದೊಂದಿಗೆ ಮಾತುಕತೆ ನಡೆಸಬಹುದು ಎಂಬ ಚಿಂತನೆಯೇ ಇರಲಿಲ್ಲ. ಜಮ್ಮು ಕಾಶ್ಮೀರವನ್ನು ಒಳಗೆ ಹಾಕಿಕೊಳ್ಳಲು ಜಿನ್ನಾ ದೇಶವನ್ನು ಅದರ ಸೈನ್ಯದ ಮೇಲೆ ಅತಿಯಾಗಿ ಅವಲಂಬಿಸುವಂತೆ ಮಾಡಿದರು. ಶೀಘ್ರದಲ್ಲೇ, ಸೈನ್ಯವೇ ಆ ರಾಷ್ಟ್ರದ ಚಾಲಕ ಶಕ್ತಿಯಾಯಿತು. ಅದರ ಪ್ರಜಾಪ್ರಭುತ್ವವನ್ನು ಕೊಂದಿತು. ಪಾಕಿಸ್ತಾನವನ್ನು ಇಸ್ಲಾಮಿಕ್ ರಾಷ್ಟ್ರವಾಗಿ ಪರಿ1947 ರ ಆಗಸ್ಟ್ 14 ರಂದು ಪಾಕಿಸ್ತಾನವನ್ನು ಭಾರತದಿಂದ ಸ್ವತಂತ್ರ ರಾಷ್ಟ್ರವಾಗಿ ಕೆತ್ತಲಾಯಿತು. ಅದಕ್ಕೂ ಮೊದಲು, ದೇಶವು ಭೌಗೋಳಿಕವಲ್ಲದ ಘಟಕವಾಗಿತ್ತು. ಪಾಕಿಸ್ತಾನವು ಯಾವುದೇ ಐತಿಹಾಸಿಕ ಸಂದರ್ಭವನ್ನು ಹೊಂದಿದ್ದರೆ, ಅದು 14 ಆಗಸ್ಟ್ 1947 ರವರೆಗೆ ದೊಡ್ಡ ಭಾರತೀಯ ದೃಷ್ಟಿಕೋನದಲ್ಲಿತ್ತು. ಪಾಕಿಸ್ತಾನದ ರಚನೆಯು ವಸಾಹತುಶಾಹಿ ಭಾರತದಲ್ಲಿ ಬೆಂಬಲ ಮತ್ತು ವಿರೋಧದ ಬೇಡಿಕೆಯಾಗಿತ್ತು. ಹಾಗಾಗಿ ಸ್ವಾತಂತ್ರ್ಯದ ನಂತರವೂ ಹೊಸ ರಾಷ್ಟ್ರದ ಬೇರುಗಳು ಭಾರತಕ್ಕೆ ಅಂಟಿಕೊಂಡಿವೆ.ವರ್ತಿಸಲಾಯಿತು ಮತ್ತು ದಿವಾಳಿಯಾಗಿದ್ದರೂ ಇನ್ನೂ ಅದರ ಸೈನ್ಯದ ಭಾರತ ವಿರೋಧಿ ಧೋರಣೆ ಮುಂದುವರಿದಿದೆ.

partition

1947ರಲ್ಲಿ ಶುರುವಾದ ಕಾಟ

1947ರ ಆಗಸ್ಟ್ 14ರಂದು ಪಾಕಿಸ್ತಾನವನ್ನು ಭಾರತದಿಂದ ಸ್ವತಂತ್ರ ರಾಷ್ಟ್ರವಾಗಿ ತುಂಡರಿಸಲಾಯಿತು. ಅದಕ್ಕೂ ಮೊದಲು, ದೇಶಕ್ಕಿದ್ದ ಇತಿಹಾಸ ಎಂದರೆ ಭಾರತದೊಂದಿಗಿನ ಸಾಂಸ್ಕೃತಿಕ ನಂಟು ಮಾತ್ರ. ಪಾಕಿಸ್ತಾನದ ರಚನೆಯ ಬಗ್ಗೆ ಬೆಂಬಲ ಮತ್ತು ವಿರೋಧವೆರಡೂ ಇತ್ತು. ಹಾಗಾಗಿ ಸ್ವಾತಂತ್ರ್ಯದ ನಂತರವೂ ಆ ರಾಷ್ಟ್ರದ ಬೇರುಗಳು ಭಾರತಕ್ಕೆ ಅಂಟಿಕೊಂಡಿವೆ.

ವಿಭಜನೆಯ ನಂತರ ವ್ಯಾಪಕ ಹಿಂಸಾಚಾರ ನಡೆಯಿತು. ಇದರಿಂದ ಶಾಂತಿ ಮತ್ತು ಪ್ರಗತಿಯ ಪಾಠ ಕಲಿಯಬಹುದಿತ್ತು. ಭಾರತದೊಂದಿಗೆ ಸಂವಾದದ ಮೇಜಿಗೆ ಬರಬಹುದಿತ್ತು. ಆದರೂ ಪಾಕಿಸ್ತಾನ ಯುದ್ಧವನ್ನು ಆರಿಸಿಕೊಂಡಿತು. ಬುಡಕಟ್ಟು ಜನರನ್ನು ಎತ್ತಿಕಟ್ಟಿತು. ಅವರೊಂದಿಗೆ ತನ್ನ ಸೈನಿಕರನ್ನು ಸೇರಿಸಿ ಅಕ್ಟೋಬರ್ 22, 1947ರಂದು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ಮಾಡುವ ಮೂಲಕ ಭಾರತದ ವಿರುದ್ಧ ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಾರಂಭಿಸಿತು. ಅಂತಿಮವಾಗಿ ಜುಲೈ 1949ರಲ್ಲಿ ಕದನ ವಿರಾಮದೊಂದಿಗೆ ಯುದ್ಧ ಕೊನೆಗೊಂಡಿತು. ಆಗ ಪಾಕಿಸ್ತಾನ ಆಕ್ರಮಿಸಿಕೊಂಡಿದ್ದ ಭಾರತದ ಒಂದು ಭಾಗ ಇಂದಿಗೂ ಅದರ ಬಳಿಯೇ ಇದೆ.

1965ರ ವಿಫಲ ಸಮರ

1965ರಲ್ಲಿ ಮತ್ತೆ ಪಾಕ್‌ ಹಿಂದುಗಡೆಯಿಂದ ಭಾರತದ ಮೇಲೆ ದಾಳಿ ಮಾಡಿತು. 1962ರ ಯುದ್ಧದಲ್ಲಿ ಚೀನಾದ ಮುನ್ನಡೆಯ ನಂತರ ಭಾರತದ ಸೈನ್ಯ ದುರ್ಬಲಗೊಂಡಿದೆ ಎಂದು ಅದು ಭಾವಿಸಿತ್ತು. 24 ಏಪ್ರಿಲ್ 1965ರಂದು ಗುಜರಾತ್‌ನ ರಣ್ ಆಫ್ ಕಛ್ ಮೇಲೆ ದಾಳಿ ಮಾಡಿ ಆರರಿಂದ ಎಂಟು ಮೈಲುಗಳ ಒಳಗೆ ನುಗ್ಗಿ ‘ಆಪರೇಷನ್ ಡೆಸರ್ಟ್ ಫಾಕ್ಸ್’ ಅನ್ನು ಪ್ರಾರಂಭಿಸಿತು.

ಭಾರತದ ಕೆಲವು ಗಡಿ ಪೋಸ್ಟ್‌ಗಳ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿತು.‌ ಭಾರತೀಯ ಆಕ್ರಮಣವನ್ನು ಎದುರಿಸಲು ಟ್ಯಾಂಕ್ ರೆಜಿಮೆಂಟ್ ಅನ್ನು ನಿಯೋಜಿಸಿತು. ಬ್ರಿಟನ್‌ನ ಮಧ್ಯಸ್ಥಿಕೆಯ ನಂತರ, ಎರಡೂ ದೇಶಗಳು ಜುಲೈ 1, 1965ರಂದು ʼಕಛ್ ಒಪ್ಪಂದ’ಕ್ಕೆ ಸಹಿ ಹಾಕಿದವು. ಪಾಕಿಸ್ತಾನದ ಸೈನ್ಯ ಮರಳಿತು. ಶಾಂತಿ ಮರಳಿತು ಎಂದು ಭಾವಿಸಿದ್ದು ಸುಳ್ಳಾಯಿತು.

ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ʼಆಪರೇಷನ್ ಜಿಬ್ರಾಲ್ಟರ್’ ಅನ್ನು ಪ್ರಾರಂಭಿಸಿತು. ಆಗಸ್ಟ್ 1965ರಲ್ಲಿ ಒಳನುಸುಳುವಿಕೆ ಪ್ರಾರಂಭವಾಯಿತು. ಪಾಕಿಸ್ತಾನದಿಂದ 30,000 ತರಬೇತಿ ಪಡೆದ ನುಸುಳುಕೋರರು ರಾಜ್ಯದ ವಿವಿಧ ಭಾಗಗಳಲ್ಲಿ ಸೇರಿದರು. ಪಾಕಿಸ್ತಾನವು ಶ್ರೀನಗರವನ್ನು ವಶಪಡಿಸಿಕೊಳ್ಳಲು ಬಯಸಿತ್ತು, ಆದರೆ ಶೋಚನೀಯವಾಗಿ ವಿಫಲವಾಯಿತು. ಸ್ಥಳೀಯರು ಅದರ ಪಡೆಗಳನ್ನು ಬೆಂಬಲಿಸಲಿಲ್ಲ. ಭಾರತೀಯ ಸೇನೆ ತಕ್ಷಣವೇ ಪ್ರತಿ ಕಾರ್ಯಾಚರಣೆ ಆರಂಭಿಸಿತು. ಕಾಶ್ಮೀರ ಕಣಿವೆಯನ್ನು, ಕಾರ್ಗಿಲ್‌ನ ಬೆಟ್ಟಗಳನ್ನು, ಹಾಜಿ ಪಿರ್ ಪಾಸ್ ಮತ್ತು ಕಿಶನ್‌ಗಂಗಾ ಬಲ್ಜ್‌ನಲ್ಲಿನ ಪ್ರಮುಖ ಸ್ಥಾನಗಳನ್ನು ಗೆದ್ದು ಪುನಃ ವಶಪಡಿಸಿಕೊಂಡು ಪಾಕ್ ಪ್ರಾಬಲ್ಯವನ್ನು ತ್ವರಿತವಾಗಿ ಉರುಳಿಸಿತು.

ʼಆಪರೇಷನ್ ಜಿಬ್ರಾಲ್ಟರ್’ ವಿಫಲವಾದ ನಂತರ ಪಾಕಿಸ್ತಾನ 1 ಸೆಪ್ಟೆಂಬರ್ 1965ರಂದು ಮತ್ತೊಂದು ದಾಳಿ ಅಥವಾ ʼಆಪರೇಷನ್ ಗ್ರ್ಯಾಂಡ್ ಸ್ಲ್ಯಾಮ್’ ಅನ್ನು ಪ್ರಾರಂಭಿಸಿತು. ಅಖ್ನೂರ್ ವಲಯವನ್ನು ವಶಪಡಿಸಿಕೊಳ್ಳುವುದು, ನೌಶೇರಾ, ರಜೌರಿ ಮತ್ತು ಪಂಚ್‌ಗಳಲ್ಲಿ ಭಾರತೀಯ ಪಡೆಗಳನ್ನು ಪ್ರತ್ಯೇಕಿಸುವುದು, ಜಮ್ಮು ವಿಭಾಗವನ್ನು ವಶಪಡಿಸಿಕೊಳ್ಳುವುದು ಅದರ ಗುರಿಯಾಗಿತ್ತು. ಭಾರತೀಯ ವಾಯುಪಡೆ ಹಾಗೂ ಭೂಸೇನೆಗಳು ಪಾಕಿಸ್ತಾನದ ಹೆಜ್ಜೆಗಳನ್ನು ಕತ್ತರಿಸಿದವು. ಜಮ್ಮು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನದ ಅಂತಾರಾಷ್ಟ್ರೀಯ ಗಡಿಯುದ್ದಕ್ಕೂ ದಾಳಿ ಪ್ರತಿದಾಳಿಗಳು ನಡೆದವು.

Bangladesh

1971ರ ಸಮರ: ದ್ರೋಹಕ್ಕೆ ಸುಂಕ ಕಟ್ಟಿದ ಪಾಕ್‌

ಪೂರ್ವ ಪಾಕಿಸ್ತಾನ ಅಥವಾ ಪೂರ್ವ ಬಂಗಾಳವು ಮುಸ್ಲಿಮರ ಪ್ರಾಬಲ್ಯವಿರುವ ಬಂಗಾಳಿ ಮಾತನಾಡುವ ಮಿಶ್ರ ಜನಸಂಖ್ಯೆಯ ನೆಲೆಯಾಗಿತ್ತು. ಇವರು ಸಾಂಸ್ಕೃತಿಕವಾಗಿ ಮತ್ತು ಸಾಂಪ್ರದಾಯಿಕವಾಗಿ ಪಾಕಿಸ್ತಾನದಿಂದ ಭಿನ್ನರಾಗಿದ್ದರು. ಪಾಕಿಸ್ತಾನದಿಂದ ಪ್ರತ್ಯೇಕವಾಗುವ ಅಭಿಲಾಷೆ ಅವರದಾಗಿತ್ತು.

1970ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತ್ಯೇಕ ದೇಶ ಪ್ರತಿಪಾದಿಸುತ್ತಿದ್ದ ಶೇಖ್ ಮುಜಿಬುರ್ ರೆಹಮಾನ್ ನೇತೃತ್ವದ ಅವಾಮಿ ಲೀಗ್‌ಗೆ ಪ್ರಚಂಡ ವಿಜಯ ದೊರೆಯಿತು. ಇದನ್ನು ಪಾಕಿಸ್ತಾನ ಸೇನೆ ಮತ್ತು ಜುಲ್ಫಿಕರ್ ಅಲಿ ಭುಟ್ಟೋ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ನಿರಾಕರಿಸಿತು. ಇದು ಪೂರ್ವ ಪಾಕಿಸ್ತಾನದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಯಿತು.

ಪಾಕಿಸ್ತಾನ ಈ ಪ್ರತಿಭಟನೆಗಳನ್ನು ಹತ್ತಿಕ್ಕಲು ನಿರ್ದಯ ದಮನವನ್ನು ಪ್ರಾರಂಭಿಸಿತು. ಮಾರ್ಚ್ 25, 1971ರಂದು ಪ್ರಾರಂಭವಾದ ಇದು ಹೆಚ್ಚು ಹಿಂಸಾತ್ಮಕವಾಗಿ ಬೆಳೆಯಿತು. ‘ಆಪರೇಷನ್ ಸರ್ಚ್‌ಲೈಟ್’ನಲ್ಲಿ ಸಾವಿರಾರು ಬೆಂಗಾಲಿಗಳನ್ನು ಕಗ್ಗೊಲೆ ಮಾಡಲಾಯಿತು. ಪಾಕ್‌ ಸೈನ್ಯ ಎಷ್ಟು ಭಯೋತ್ಪಾದನೆ ಮಾಡಿತೆಂದರೆ, ಪೂರ್ವ ಬಂಗಾಳ ರೈಫಲ್ಸ್ ಮತ್ತು ಪೂರ್ವ ಪಾಕಿಸ್ತಾನ್ ರೈಫಲ್ಸ್‌ನ ಅರೆಸೈನಿಕ ಪಡೆಗಳು ಸೇರಿ ಕನಿಷ್ಠ 1 ಕೋಟಿ ಜನ ಭಾರತದ ವಿವಿಧ ಗಡಿ ರಾಜ್ಯಗಳಲ್ಲಿ ಆಶ್ರಯ ಪಡೆದರು.

ಈ ಎಂಟು ತಿಂಗಳುಗಳು ಭಾರತಕ್ಕೆ ಕಷ್ಟದ ಹಂತವಾಗಿದ್ದವು. ಆಗ ಭಾರತ ಆರ್ಥಿಕ ಸೂಪರ್ ಪವರ್ ಆಗಿರಲಿಲ್ಲ. ನಿರಾಶ್ರಿತರ ವಿಪರೀತ ಹೆಚ್ಚಳ ಅವರು ಇದ್ದ ಪ್ರದೇಶಗಳ ಆಡಳಿತ ರಚನೆಯನ್ನು ಅಸ್ಥಿರಗೊಳಿಸಿತು. ಆರ್ಥಿಕ ವೆಚ್ಚ ವಿಪರೀತವಾಗಿತ್ತು. ಇವರೆಲ್ಲ ಮುಕ್ತಿವಾಹಿನಿ ಅಥವಾ ಬಾಂಗ್ಲಾದೇಶ ಲಿಬರೇಶನ್ ಫೋರ್ಸ್‌ ರಚಿಸಿಕೊಂಡು ಆಕ್ರಮಣ ಆರಂಭಿಸಿದರು. ಆಗ ಪಾಕಿಸ್ತಾನದ ಸೇನೆ ಭಾರತೀಯ ಗಡಿಗಳನ್ನು ಉಲ್ಲಂಘಿಸತೊಡಗಿತು.

ಭಾರತ ಮೊದಲಿಗೆ ಸುಮ್ಮುನಿತ್ತು. ನಿರಾಶ್ರಿತರ ಬಿಕ್ಕಟ್ಟನ್ನು ನಿರ್ವಹಿಸಲು, ರಾಜತಾಂತ್ರಿಕ ಮಾತುಕತೆಯ ಪ್ರಕ್ರಿಯೆಯಾಗಿ ಅವರು ಪೂರ್ವ ಪಾಕಿಸ್ತಾನಕ್ಕೆ ಮರಳಲು ಅನುಕೂಲಕರವಾದ ಪರಿಸ್ಥಿತಿಗಳನ್ನು ಸೃಷ್ಟಿಸಲು ಪಾಕಿಸ್ತಾನವನ್ನು ಕೇಳಿತು.

ಆದರೆ ಪಾಕಿಸ್ತಾನ ಸೊಕ್ಕಿತ್ತು. ಮತ್ತೆ 3ನೇ ಡಿಸೆಂಬರ್ 1971ರಂದು ಭಾರತದ ಮೇಲೆ ದಾಳಿ ಮಾಡಿತು. ಆಗ ನಡೆದ ಯುದ್ಧ ಪೂರ್ವ ಪಾಕಿಸ್ತಾನ ಅಥವಾ ಬಾಂಗ್ಲಾವನ್ನು ಸ್ವತಂತ್ರ ದೇಶ ಬಾಂಗ್ಲಾದೇಶವಾಗಿ ರೂಪಿಸಲು ಕಾರಣವಾಯಿತು. 16ನೇ ಡಿಸೆಂಬರ್ 1971ರಂದು ತನ್ನ 93,000 ಸಾಮಾನ್ಯ ಮತ್ತು ಅರೆಸೇನಾಪಡೆಯ ಯೋಧರು ಶರಣಾಗುವುದರೊಂದಿಗೆ ಪಾಕಿಸ್ತಾನ ಅವಮಾನಕರ ಸೋಲನ್ನು ಕಂಡಿತು.

kargil

ಕಾರ್ಗಿಲ್‌ ಯುದ್ಧ- ಮತ್ತೊಮ್ಮೆ ತಪ್ಪೆಣಿಸಿದ ಪಾಕ್‌

ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಫೆಬ್ರವರಿ 19, 1999ರಂದು ದೆಹಲಿ-ಲಾಹೋರ್ ಬಸ್‌ನಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದರು. “ಬಸ್ ರಾಜತಾಂತ್ರಿಕತೆ” ವಿಶ್ವಾಸವರ್ಧನೆಯ ಕ್ರಮಗಳ ಭಾಗವಾಗಿತ್ತು. ಇದರ ಮೂಲ 1998ರ ಕೊಲಂಬೊ ಸಾರ್ಕ್ ಶೃಂಗಸಭೆಯಲ್ಲಿ ಪಿಎಂ ವಾಜಪೇಯಿ ಮತ್ತು ಪಾಕ್ ಪಿಎಂ ನವಾಜ್ ಷರೀಫ್ ಅವರ ಭೇಟಿಯಲ್ಲಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಸದಾ-ಎ-ಸರ್ಹಾದ್ (ಫ್ರಾಂಟಿಯರ್ ಕರೆ) ಎಂದು ಕರೆಯಲ್ಪಡುವ ಬಸ್‌ಗೆ ಪ್ರಧಾನಿ ವಾಜಪೇಯಿ ಅವರು ಏರಿದರು.

ಕೇವಲ ಮೂರು ತಿಂಗಳ ನಂತರ, ಕಾರ್ಗಿಲ್‌ ಬೆಟ್ಟಗಳ ಮೇಲೆ ಪಾಕ್‌ ಬಂದು ಕೂತಿತ್ತು. 1965ರಂತೆಯೇ, ಪಾಕಿಸ್ತಾನವು ಮತ್ತೊಮ್ಮೆ ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿರಿಸಿಕೊಂಡಿತ್ತು ಮತ್ತು ಕಾರ್ಗಿಲ್ ಜಿಲ್ಲೆಯಲ್ಲಿ ಆಯಕಟ್ಟಿನ ಎತ್ತರಗಳನ್ನು ವಶಪಡಿಸಿಕೊಂಡಿತು. ಮೇ 1999ರಲ್ಲಿ ಪ್ರಾರಂಭವಾದ ಸಂಘರ್ಷ 11 ವಾರಗಳ ಕಾಲ ನಡೆದು 1999 ಜುಲೈ 26ರಂದು ʼಆಪರೇಷನ್ ವಿಜಯ್’ನಲ್ಲಿ ಭಾರತದ ವಿಜಯದೊಂದಿಗೆ ಮುಗಿಯಿತು. 1965 ಮತ್ತು 1971ರ ಯುದ್ಧಗಳಂತೆಯೇ ಪಾಕ್‌ಗೆ ಅವಮಾನಕಾರಿ ಹಿನ್ನಡೆಯಾಯಿತು. ಇದು ಭಾರತದ ಬೆನ್ನಿಗೆ ಪಾಕ್‌ ಚೂರಿ ಹಾಕಿದ ನಾಲ್ಕನೇ ದೊಡ್ಡ ಘಟನೆ. ಭಾರತದ ಸೇನಾ ಸಾಮರ್ಥ್ಯವನ್ನು ಲೆಕ್ಕಾಚಾರ ಮಾಡಲು ಪಾಕಿಸ್ತಾನ ಮತ್ತೊಮ್ಮೆ ವಿಫಲವಾಗಿತ್ತು.

parliment

ಭಾರತದ ಸಂಸತ್ತಿನ ಮೇಲೇ ಸ್ಕೆಚ್ಚು

ಭಾರತ ಮಾತುಕತೆಯ ಪ್ರಯತ್ನ ನಡೆಸುತ್ತಲೇ ಇತ್ತು. ತನ್ನ ಪ್ರಯತ್ನದ ಭಾಗವಾಗಿ ಪಾಕಿಸ್ತಾನದ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರನ್ನು ಆಗ್ರಾ ಶೃಂಗಸಭೆಗೆ ಆಹ್ವಾನಿಸಿತು. ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಮುಷರಫ್ ಪಾಕ್ ಸೇನಾ ಮುಖ್ಯಸ್ಥರಾಗಿದ್ದರು. ಜುಲೈ 14 ಮತ್ತು 16, 2001ರ ನಡುವಿನ ಶೃಂಗಸಭೆಯಲ್ಲಿ ಸಂಬಂಧಗಳನ್ನು ಪುನರಾರಂಭಿಸುವ ಕೆಲವು ಮಾತುಕತೆ ನಡೆದವು.

ಆದರೆ, ಕೇವಲ ನಾಲ್ಕು ತಿಂಗಳ ನಂತರ, 13 ಡಿಸೆಂಬರ್ 2001ರಂದು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಲಷ್ಕರೆ ತಯ್ಬಾ (LeT) ಮತ್ತು JeM ಭಾರತದ ಸಂಸತ್ತಿನ ಮೇಲೆ ದಾಳಿ ಮಾಡಿದವು. ಭಾರತದ ನೆಲದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಾಗಿತ್ತು ಅದು. ಈ ದಾಳಿಯಲ್ಲಿ ಒಂಬತ್ತು ಭಾರತೀಯರು ಕೊಲ್ಲಲ್ಪಟ್ಟರು. ಹತ್ಯೆಯಾದವರಲ್ಲಿ ಐವರು ಪಾಕಿಸ್ತಾನಿ ಉಗ್ರರು.

14 years to Mumbai terror Attack

ಮುಂಬಯಿಯ ಮೇಲೆ ಕರಾಳ ದಾಳಿ

2008ರಲ್ಲಿ ಮುಂಬಯಿ ಮೇಲೆ ನಡೆದ ಭಯೋತ್ಪಾದನಾ ದಾಳಿ, ಪಾಕಿಸ್ತಾನ ನಮ್ಮನ್ನು ವಂಚಿಸಿದ ಮತ್ತೊಂದು ಘಟನೆ. ಸೆಪ್ಟೆಂಬರ್ 2008ರಲ್ಲಿ, ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆ ಸಭೆಯ ನಂತರ ಜಂಟಿ ಹೇಳಿಕೆಯನ್ನು ನೀಡಿದರು. ಭಾರತ- ಪಾಕಿಸ್ತಾನ ಬಾಂಧವ್ಯದ ಸಂಪೂರ್ಣ ಪ್ರಯತ್ನ ಅದರ ಮುಖ್ಯ ಗುರಿಯಾಗಿತ್ತು. ಕದನ ವಿರಾಮದ ನಿಯಮಗಳನ್ನು ಗಟ್ಟಿಗೊಳಿಸುವುದರೊಂದಿಗೆ ಹಲವಾರು ವ್ಯಾಪಾರ ಮಾರ್ಗಗಳನ್ನು ಪ್ರಾರಂಭಿಸಲಾಯಿತು. ‘ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯವಿಧಾನ’ವನ್ನು ಅಭಿವೃದ್ಧಿಪಡಿಸಲು ವಿಶೇಷ ಸಭೆಯನ್ನೂ ನಡೆಸಲಾಯಿತು.

26 ನವೆಂಬರ್ 2008ರಂದು ಭಾರತದಲ್ಲಿ ಇನ್ನೊಂದು ಭೀಕರ ಭಯೋತ್ಪಾದಕ ದಾಳಿಯಾಯಿತು. 10 ಪಾಕಿಸ್ತಾನಿ ಭಯೋತ್ಪಾದಕರು ಭಾರತದ ಆರ್ಥಿಕ ರಾಜಧಾನಿ ಮುಂಬಯಿಯನ್ನು ಗುರಿಯಾಗಿಸಿಕೊಂಡು ಒಳನುಗ್ಗಿದರು. 26 ವಿದೇಶಿ ಪ್ರಜೆಗಳು ಸೇರಿದಂತೆ 174 ಜನರನ್ನು ಕೊಂದರು. ಮುಂಬೈನ ಮುಖ್ಯ ರೈಲು ನಿಲ್ದಾಣ, ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್, ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌, ಒಬೆರಾಯ್-ಟ್ರೈಡೆಂಟ್ ಹೋಟೆಲ್ ಮತ್ತು ಯಹೂದಿ ಸಮುದಾಯ ಕೇಂದ್ರವಾದ ನಾರಿಮನ್ ಹೌಸ್ ದಾಳಿಯ ಗುರಿಗಳಾಗಿದ್ದವು.

ಮುಂಬೈ ದಾಳಿಯ 14 ತಿಂಗಳ ನಂತರ, ಭಾರತವು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಮಟ್ಟದ ಮಾತುಕತೆಗೆ ಮುಂದಾಗಿ, ಅದನ್ನು 10 ಫೆಬ್ರವರಿ 2010ರಂದು ತಿಳಿಸಿತು. ಇದಾಗಿ ಎರಡೇ ದಿನಗಳ ನಂತರ 13 ಫೆಬ್ರವರಿ 2010ರಂದು, ಪುಣೆಯ ಪ್ರಸಿದ್ಧ ಜರ್ಮನ್ ಬೇಕರಿ ಬಾಂಬ್ ಸ್ಫೋಟದಲ್ಲಿ 17 ಜನ ಸಾವನ್ನಪ್ಪಿದರು ಮತ್ತು 64 ಮಂದಿ ಗಾಯಗೊಂಡರು. ಇದು ಪಾಕಿಸ್ತಾನ ಪ್ರೇರಿತ ಸಂಘಟನೆ ಇಂಡಿಯನ್ ಮುಜಾಹಿದೀನ್‌ನಿಂದ ನಡೆದಿತ್ತು.

ಜರ್ಮನ್ ಬೇಕರಿ ಸ್ಫೋಟದ ಒಂದು ವರ್ಷದ ನಂತರ, ಭಾರತ ಮತ್ತು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳು 2011ರ ಫೆಬ್ರವರಿ 6ರಂದು ಸಾರ್ಕ್ ಸಭೆಯ ಸಂದರ್ಭದಲ್ಲಿ ಭೂತಾನ್‌ನಲ್ಲಿ ಭೇಟಿಯಾದರು. 26/11 ಭಯೋತ್ಪಾದಕ ದಾಳಿಯ ಮೊದಲು ಮಾತುಕತೆ ಮೇಜಿನ ಮೇಲಿದ್ದ ಎಲ್ಲಾ ವಿಷಯಗಳ ಬಗ್ಗೆ ಮಾತುಕತೆ ನಡೆಸಲು ರಾಯಭಾರಿಗಳಾದ ಭಾರತದ ನಿರುಪಮಾ ರಾವ್ ಮತ್ತು ಪಾಕಿಸ್ತಾನದ ಕೌಂಟರ್ ಸಲ್ಮಾನ್ ಬಶೀರ್ ಒಪ್ಪಿಕೊಂಡರು.

ಇದನ್ನೂ ಓದಿ: Viral Video: ಹೇ ಅಲ್ಲಾ, ನಮಗೆ ಮೋದಿಯನ್ನು ಕೊಡು, ಅವರೇ ಈ ದೇಶವನ್ನು ಸರಿ ಮಾಡಲಿ ಎಂದು ಬೇಡಿಕೊಂಡ ಪಾಕಿಸ್ತಾನಿ ಯುವಕ

ಇದಾಗಿ ನಾಲ್ಕು ತಿಂಗಳ ನಂತರ ಮುಂಬಯಿ ಸರಣಿ ಸ್ಫೋಟಗಳನ್ನು ಕಂಡಿತು. ಜುಲೈ 13, 2011ರಂದು 12 ನಿಮಿಷಗಳಲ್ಲಿ ನಡೆದ ಮೂರು ಬಾಂಬ್ ಸ್ಫೋಟಗಳಲ್ಲಿ 27 ಜನ ಸಾವನ್ನಪ್ಪಿದರು, 127ಕ್ಕೂ ಹೆಚ್ಚು ಜನ ಗಾಯಗೊಂಡರು. ಇದನ್ನೂ ಇಂಡಿಯನ್‌ ಮುಜಾಹಿದೀನ್‌ ನಡೆಸಿತ್ತು.

ಉಫಾ ಮಾತುಕತೆ ಬಳಿಕ ಮತ್ತೆ ವಂಚನೆ

ಪಿಎಂ ನರೇಂದ್ರ ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ರಷ್ಯಾದ ನಗರವಾದ ಉಫಾದಲ್ಲಿ ಜುಲೈ 10, 2015ರಂದು ಭೇಟಿಯಾದರು. ಸಭೆಯ ನಂತರ ಐತಿಹಾಸಿಕ ಜಂಟಿ ಘೋಷಣೆಯನ್ನು ಬಿಡುಗಡೆ ಮಾಡಲಾಯಿತು. ಭಾರತ-ಪಾಕಿಸ್ತಾನದ ಮಾತುಕತೆ ಪ್ರಕ್ರಿಯೆಯ ಪ್ರಮುಖ ವಿಷಯವಾಗಿ “ಭಯೋತ್ಪಾದನೆ” ಕಂಡುಬಂತು. ಭಾರತ-ಪಾಕಿಸ್ತಾನ ರಾಜತಾಂತ್ರಿಕ ಇತಿಹಾಸದಲ್ಲಿ ಇದು ಮೊದಲ ಬಾರಿಗೆ ಕಾಶ್ಮೀರವನ್ನು ಪ್ರಸ್ತಾಪಿಸಿತು. ಆದರೆ ನವಾಜ್ ಷರೀಫ್ ಅವರು ಸ್ವದೇಶಕ್ಕೆ ಮರಳಿದ ಬಳಿಕ ಇದಕ್ಕಾಗಿ ಕಟು ಟೀಕೆಗೆ ತುತ್ತಾದರು.

ಫಲಿತಾಂಶ? ಅದರ 16 ದಿನಗಳ ನಂತರ, ಭಾರತದ ಗಡಿ ಪಟ್ಟಣದ ಗುರುದಾಸ್‌ಪುರದಲ್ಲಿ 27 ಜುಲೈ 2015ರಂದು ಭಯೋತ್ಪಾದಕ ದಾಳಿ ನಡೆಯಿತು. ಮೂವರು ಭಯೋತ್ಪಾದಕರು ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಏಳು ಜನರನ್ನು ಕೊಂದರು. ಬಸ್ ಮತ್ತು ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು.

25ನೇ ಡಿಸೆಂಬರ್ 2015ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಿಂದ ಹಿಂತಿರುಗುತ್ತಿರುವಾಗ ಪ್ರಧಾನಿ ಮೋದಿಯವರು ಅಚ್ಚರಿ ಎಂಬಂತೆ ಲಾಹೋರ್‌ನಲ್ಲಿ ಇಳಿದರು. ಪಾಕ್ ಸೇನೆಯ ದ್ವೇಷ, ಭಯೋತ್ಪಾದಕರ ವ್ಯಗ್ರತೆ, ಐಎಸ್‌ಐನ ಪಿತೂರಿಗಳ ನಡುವೆಯೂ ನವಾಜ್ ಷರೀಫ್ ನೇತೃತ್ವದ ಸರ್ಕಾರ ಮಾತುಕತೆಗೆ ಮುಂದಾಗಬಹುದು ಎಂದು ಭಾರತ ಇನ್ನೂ ನಂಬಿತ್ತು.

ಇದನ್ನೂ ಓದಿ: Pakistan economic crisis : ಪಾಕಿಸ್ತಾನದಿಂದ ಸಾಲಕ್ಕಾಗಿ 75 ವರ್ಷಗಳಲ್ಲಿ 23 ಸಲ ಐಎಂಎಫ್‌ಗೆ ಮೊರೆ

ಷರೀಫ್ ಅವರ 66ನೇ ಹುಟ್ಟುಹಬ್ಬದಂದು ಹಾರೈಸಲು ಮತ್ತು ಅವರ ಮೊಮ್ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ನೀಡಿದ ಈ ಹಠಾತ್ ಭೇಟಿ ದೊಡ್ಡ ರಾಜತಾಂತ್ರಿಕ ಸಂಕೇತವಾಗಿತ್ತು. ಆದರೆ ಪಾಕಿಸ್ತಾನ ಅದನ್ನು ಗೌರವಿಸಲು ವಿಫಲವಾಯಿತು. ಕೇವಲ ಏಳು ದಿನಗಳ ನಂತರ, 2 ಜನವರಿ 2016ರಂದು, ಭಾರತವು ಪಠಾಣ್‌ಕೋಟ್ ಭಯೋತ್ಪಾದಕ ದಾಳಿಯನ್ನು ಕಂಡಿತು. ಪಠಾಣ್‌ಕೋಟ್‌ ವಾಯುಪಡೆ ನಿಲ್ದಾಣದ ಮೇಲೆ ಪಾಕಿಸ್ತಾನದ ಐವರು ಜೆಇಎಂ ಉಗ್ರರು ದಾಳಿ ನಡೆಸಿದರು. ಗುರುದಾಸ್‌ಪುರದಂತೆ ಪಠಾಣ್‌ಕೋಟ್ ಕೂಡ ಪಾಕಿಸ್ತಾನದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಪಾಕಿಸ್ತಾನ ಮೂಲದ ಜೆಇಎಂ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ ಏಳು ಯೋಧರು ಸಾವನ್ನಪ್ಪಿದರು.

kartharpur

ಕರ್ತಾರ್‌ಪುರ ಕಾರಿಡಾರ್‌ನಲ್ಲೂ ದ್ವೇಷ

ಪಾಕಿಸ್ತಾನದ ಕರ್ತಾರ್‌ಪುರದಲ್ಲಿ ಸಿಕ್ಖರ ದೊಡ್ಡ ಧರ್ಮಗುರು ಗುರುನಾನಕ್ ಅವರು ತಮ್ಮ ಜೀವನದ ಕೊನೆಯ 18 ವರ್ಷಗಳನ್ನು ಕಳೆದರು. ಇದನ್ನು ಗುರುದ್ವಾರ ಶ್ರೀ ಕರ್ತಾರ್‌ಪುರ್ ಸಾಹಿಬ್‌ ಎನ್ನಲಾಗುತ್ತದೆ. ಈ ಸ್ಥಳ ಭಾರತದ ಪಂಜಾಬ್ ರಾಜ್ಯದ ಗುರುದಾಸ್‌ಪುರ ಜಿಲ್ಲೆಯಲ್ಲಿರುವ ಡೇರಾ ಬಾಬಾ ನಾನಕ್ ದೇಗುಲಕ್ಕೆ ಧಾರ್ಮಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಸಂಪರ್ಕ ಹೊಂದಿದೆ. ಕರ್ತಾರ್‌ಪುರ ಕಾರಿಡಾರ್ ಈ ಎರಡು ಸ್ಥಳಗಳನ್ನು ಸಂಪರ್ಕಿಸುತ್ತದೆ ಮತ್ತು ಭಕ್ತರಿಗೆ ವೀಸಾ-ಮುಕ್ತ ಪ್ರಯಾಣ ಇಲ್ಲಿ ಸಾಧ್ಯ.

25 ನವೆಂಬರ್ 2018ರಂದು ಕಾರಿಡಾರ್‌ನ ಶಿಲಾನ್ಯಾಸ ಸಮಾರಂಭಕ್ಕೆ ಭಾರತ ತನ್ನ ಇಬ್ಬರು ಕೇಂದ್ರ ಮಂತ್ರಿಗಳಾದ ಹರ್‌ಸಿಮ್ರತ್ ಕೌರ್ ಬಾದಲ್ ಮತ್ತು ಹರ್‌ದೀಪ್ ಸಿಂಗ್ ಪುರಿ ಅವರನ್ನು ಕಳುಹಿಸಿತು. ಕೇವಲ ಎರಡು ತಿಂಗಳ ನಂತರ, 2019ರ ಫೆಬ್ರವರಿ 14ರಂದು ಪುಲ್ವಾಮಾ ಜಿಲ್ಲೆಯಲ್ಲಿ ಜೆಎಂ ಭಯೋತ್ಪಾದಕ ನಡೆಸಿದ ಭೀಕರ ಆತ್ಮಾಹುತಿ ದಾಳಿಯಲ್ಲಿ 44 ಸಿಆರ್‌ಪಿಎಫ್ ಸಿಬ್ಬಂದಿಗಳು ಸಾವನ್ನಪ್ಪಿದರು.

9ನೇ ನವೆಂಬರ್ 2019ರಂದು ಕರ್ತಾರ್‌ಪುರ ಕಾರಿಡಾರ್‌ನ ಉದ್ಘಾಟನೆಯಾಯಿತು. ಇದು ಭಾರತದ ಸಿಕ್ಖರ ಪಾಲಿಗೆ ಐತಿಹಾಸಿಕವೆನಿಸಿತು. ಆದರೆ ಪಾಕಿಸ್ತಾನ ಈ ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಂಪರ್ಕವನ್ನು ಪ್ರತ್ಯೇಕತಾವಾದಿ ಭಾವನೆಗಳನ್ನು ಭಾರತಕ್ಕೆ ತಳ್ಳಲು ಬಳಸಿಕೊಂಡಿತು. ಈ ಸಂಬಂಧ ಪಾಕಿಸ್ತಾನದ ಹೊರಡಿಸಿದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕೃತ ವೀಡಿಯೊದಲ್ಲಿ ಹತ್ಯೆಯಾದ ಮೂವರು ಹತ್ಯೆಯಾದ ಖಲಿಸ್ತಾನಿ ಉಗ್ರರಾದ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ, ಮೇ.ಜ. ಶಾಬೇಗ್ ಸಿಂಗ್ ಮತ್ತು ಅಮ್ರಿಕ್ ಸಿಂಗ್ ಖಾಲ್ಸಾ ಅವರ ಪೋಸ್ಟರ್‌ಗಳಿದ್ದವು. ಇತ್ತೀಚೆಗೆ ಪಂಜಾಬ್‌ನಲ್ಲಿ ಹೆಚ್ಚುತ್ತಿರುವ ಖಲಿಸ್ತಾನ್‌ ಹೋರಾಟದ ಹಿಂದೆ ಪಾಕ್‌ ಕೈವಾಡವಿರುವುದು ಖಚಿತವಾಗಿದೆ.

ಈ ಎಲ್ಲವೂ ಪಾಕಿಸ್ತಾನಕ್ಕೆ ಇಂದು ದುಬಾರಿಯಾಗಿವೆ. ಎಲ್ಲಿ ಖರ್ಚುವೆಚ್ಚ ಮಾಡಬೇಕೋ ಅಲ್ಲಿ ಮಾಡದೆ, ಮಿಲಿಟರಿಗೂ ಭಯೋತ್ಪಾದನೆಗೂ ಅನವಶ್ಯವಾಗಿ ಸುರಿದಿದ್ದರ ಫಲವನ್ನು ಆ ದೇಶ ಉಣ್ಣುತ್ತಿದೆ.

ಇದನ್ನೂ ಓದಿ: Pakistan economic crisis: ಪಾಕಿಸ್ತಾನ ದಿವಾಳಿ, ಮುಂದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಜೈಲಿನಲ್ಲಿರುವ ಅಮೃತಪಾಲ್ ಚುನಾವಣೆಗೆ ಸ್ಪರ್ಧಿಸಬಹುದು, ಕೇಜ್ರಿವಾಲ್ ಮತ ಚಲಾಯಿಸುವಂತಿಲ್ಲ! ಏನಿದು ನಿಯಮ?

Lok Sabha Election 2024: ಜೈಲಿನಲ್ಲಿರುವ ಇಬ್ಬರು ಖೈದಿಗಳಲ್ಲಿ ಒಬ್ಬರಿಗೆ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅವಕಾಶ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತಿಲ್ಲ. ಏನಿದು ಚುನಾವಣೆ ಆಯೋಗದ ನಿಯಮ? ಇಲ್ಲಿದೆ ವಿಸ್ತೃತ ವಿವರಣೆ.

VISTARANEWS.COM


on

By

Lok Sabha Election-2024
Koo

ನವದೆಹಲಿ: ಪ್ರಪಂಚದಾದ್ಯಂತ ಚುನಾವಣೆಗಳಲ್ಲಿ (election) ವಿರೋಧಾಭಾಸಗಳು ಎದುರಾಗುತ್ತವೆ. ಇದರಲ್ಲಿ ಭಾರತವೂ ಹೊರತಾಗಿಲ್ಲ. ಇದೀಗ ಜೈಲಿನಲ್ಲಿರುವ (jail) ಇಬ್ಬರು ಕೈದಿಗಳಲ್ಲಿ (locked up) ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಸಿಕ್ಕಿದ್ದರೆ, ಇನ್ನೊಬ್ಬರಿಗೆ ಮತದಾನ (voting) ಮಾಡಲೂ ಅವಕಾಶ ನೀಡಲಾಗಿಲ್ಲ.

2024ರ ಲೋಕಸಭಾ ಚುನಾವಣೆಯ (Lok Sabha Election‌ 2024) ವೇಳೆ ಭಾರತದಲ್ಲಿ (india) ಅಂತಹ ಒಂದು ವಿರೋಧಾಭಾಸ ಕಾಣಿಸಿಕೊಂಡಿದೆ. 2,300 ಕಿ.ಮೀ. ದೂರದಲ್ಲಿರುವ ಎರಡು ವಿಭಿನ್ನ ಜೈಲುಗಳಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇವರಲ್ಲಿ ಒಬ್ಬರಿಗೆ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡಿದ್ದರೆ, ಇನ್ನೊಬ್ಬರಿಗೆ ಮತದಾನ ಮಾಡಲು ಅವಕಾಶ ಸಿಕ್ಕಿಲ್ಲ.

ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ (Amritpal Singh) ಅಸ್ಸಾಂನ ದಿಬ್ರುಗಢ್ ಜೈಲಿನಲ್ಲಿದ್ದರೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತಿಹಾರ್ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾನೂನು ಅನುಮತಿ ನೀಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಂತಹ ಲಕ್ಷಾಂತರ ವಿಚಾರಣಾಧೀನ ಕೈದಿಗಳು ಮತ ಚಲಾಯಿಸಲು ಅನುಮತಿ ನೀಡಲಾಗಿಲ್ಲ. ಯಾಕೆಂದರೆ ಭಾರತ ಕಾನೂನು ಪ್ರಕಾರ ಭಾರತದಲ್ಲಿ ಜನರು ಜೈಲಿನಲ್ಲಿ ಇದ್ದು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಜೈಲಿನಿಂದ ಮತ ಚಲಾಯಿಸಲು ಸಾಧ್ಯವಿಲ್ಲ!


ಅಮೃತ್ ಪಾಲ್ ಸ್ಪರ್ಧೆ

2023ರ ಏಪ್ರಿಲ್ 23ರಿಂದ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಜೈಲಿನಲ್ಲಿರುವ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಅವರು ಪಂಜಾಬ್‌ನ ಖಾದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ದಿಬ್ರುಗಢ ಕೇಂದ್ರ ಕಾರಾಗೃಹದಲ್ಲಿ ಭಾಯಿ ಸಾಹೇಬ್ ಅಮೃತಪಾಲ್ ಅವರನ್ನು ನಾನು ಭೇಟಿ ಮಾಡಿದ್ದೇನೆ. ಖಾಲ್ಸಾ ಪಂಥ್‌ನ ಹಿತಾಸಕ್ತಿಯಿಂದ ಅವರು ಈ ಬಾರಿ ಸಂಸದರಾಗಲು ಖದೂರ್ ಸಾಹಿಬ್‌ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ನಾನು ಅವರಿಗೆ ವಿನಂತಿಸಿದೆ ಎಂದು ಅಮೃತಪಾಲ್ ಅವರ ವಕೀಲ ರಾಜದೇವ್ ಸಿಂಗ್ ಖಾಲ್ಸಾ ಈ ಹಿಂದೆ ಹೇಳಿದ್ದು, ಭಾಯಿ ಸಾಹೇಬ್ ಒಪ್ಪಿದ್ದಾರೆ ಮತ್ತು ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದರು.

ಬಂಧನಕ್ಕೆ ಒಳಗಾಗಿರುವುದು ಏಕೆ?

ಅಮೃತಪಾಲ್ ಸಿಂಗ್ ಅವರನ್ನು ಪಂಜಾಬ್‌ನ ಮೋಗಾ ಜಿಲ್ಲೆಯ ರೋಡ್ ಗ್ರಾಮದಲ್ಲಿ ವರ್ಷದ ಹಿಂದೆ ಬಂಧಿಸಲಾಗಿತ್ತು. ಅಮೃತ್‌ಪಾಲ್ ಸಿಂಗ್ ಅವರು ಬೆಂಬಲಿಗರೊಂದಿಗೆ ಬಂದೂಕು ಮತ್ತು ಕತ್ತಿಗಳನ್ನು ಹಿಡಿದುಕೊಂಡು ಅಮೃತಸರದ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರಿಂದ ಅವರನ್ನು ಬಂಧಿಸಲಾಯಿತು. ಪ್ರತ್ಯೇಕತಾವಾದಿ ಈತ.

ಜೈಲಿನಿಂದ ಸ್ಪರ್ಧಿಸಿದವರು, ಗೆದ್ದವರಿವರು

1996 ರಲ್ಲಿ, ಡಾನ್- ಟರ್ನ್ಡ್ ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರು ಜೈಲಿನಲ್ಲಿದ್ದಾಗ ಬಿಎಸ್ಪಿ ಟಿಕೆಟ್‌ನಲ್ಲಿ ಉತ್ತರ ಪ್ರದೇಶದ ಮೌ ಅಸೆಂಬ್ಲಿ ಸ್ಥಾನಕ್ಕೆ ಸ್ಪರ್ಧಿಸಿದರು. ಕಳೆದ ತಿಂಗಳು ನಿಧನರಾದ ಅನ್ಸಾರಿ ಅವರು ಜೈಲಿನಿಂದಲೇ ಚುನಾವಣೆಯಲ್ಲಿ ಗೆದ್ದಿದ್ದರು.

2005ರಲ್ಲಿ ಸೆರೆವಾಸದಲ್ಲಿದ್ದ ಮುಖ್ತಾರ್ ಅನ್ಸಾರಿ ಅವರು ಜೈಲಿನಿಂದ 2007, 2012 ಮತ್ತು ಮತ್ತೆ 2017 ರಲ್ಲಿ ಒಟ್ಟು ಮೂರು ಬಾರಿ ಮೌ ಅಸೆಂಬ್ಲಿ ಸ್ಥಾನವನ್ನು ಗೆದ್ದರು.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 1998ರ ಲೋಕಸಭೆ ಚುನಾವಣೆ ವೇಳೆ ಮೇವು ಹಗರಣದಲ್ಲಿ ಜೈಲು ಸೇರಿದ್ದರು. ಬಿಹಾರದ ಮಾಧೇಪುರ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಜೈಲಿನಲ್ಲಿದ್ದೇ ಗೆದ್ದಿದ್ದರು.


ಕೇಜ್ರಿವಾಲ್ ಮತದಾನ ಸಾಧ್ಯವಿಲ್ಲ

ಅಪರಾಧಗಳ ಆರೋಪ ಹೊತ್ತಿರುವ ಜನರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ, ಅಪರಾಧಿಗಳೆಂದು ಸಾಬೀತಾಗದ ವಿಚಾರಣಾಧೀನ ಕೈದಿಗಳು ತಮ್ಮ ಮತವನ್ನು ಚಲಾಯಿಸಲು ಸಾಧ್ಯವಿಲ್ಲ.

ತಪ್ಪಿತಸ್ಥರೆಂದು ಸಾಬೀತಾಗದವರಿಗೂ ಭಾರತದಲ್ಲಿ ಜೈಲುಗಳಿಂದ ಮತದಾನ ಮಾಡಲು ಯಾವುದೇ ಅವಕಾಶವಿಲ್ಲ. 2019 ರ ಪ್ರವೀಣ್ ಕುಮಾರ್ ಚೌಧರಿ ವಿರುದ್ಧ ಭಾರತ ಚುನಾವಣಾ ಆಯೋಗದ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಕೈದಿಗಳಿಗೆ ಮತದಾನದ ಹಕ್ಕನ್ನು ಹೊಂದಿಲ್ಲ ಎಂದು ಪುನರುಚ್ಚರಿಸಿದೆ.

ಮೇ 25ರಂದು ದೆಹಲಿ ಮತದಾನ ನಡೆಯಲಿದೆ. ಏಪ್ರಿಲ್ 29 ರಂದು ಸುಪ್ರೀಂ ಕೋರ್ಟ್‌ ನೀಡುವ ತೀರ್ಪಿನ ಮೇಲೆ ಕೇಜ್ರಿವಾಲ್ ಮತ ಚಲಾಯಿಸಬಹುದೇ ಅಥವಾ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್, ಬಹು ಕಸ್ಟಡಿ ವಿಸ್ತರಣೆಗಳು ಮತ್ತು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಅನಂತರ ಅವರನ್ನು ನವದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಬಿಡುಗಡೆಯಾಗದೆ ಇದ್ದರೆ ಹೇಮಂತ್ ಸೊರೆನ್ ಗೂ ಅವಕಾಶ ಇಲ್ಲ

ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ವಿಚಾರಣಾಧೀನ ಕೈದಿಗಳಿದ್ದು, ಅವರಿಗೂ ಮತ ಚಲಾಯಿಸಲು ಸಾಧ್ಯವಿಲ್ಲ. ಅಂತೆಯೇ, ಭೂ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಆದೇಶಿಸದಿದ್ದರೆ ಮತದಾನ ಮಾಡಲಾಗುವುದಿಲ್ಲ.

ತನ್ನ ಬಂಧನವನ್ನು ಪ್ರಶ್ನಿಸಿ ಹೇಮಂತ್ ಸೊರೆನ್ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಯಾಕೆ ಈ ತಾರತಮ್ಯ?

2021 ರ ರಾಷ್ಟ್ರೀಯ ಅಪರಾಧ ವರದಿಗಳ ಬ್ಯೂರೋ (NCRB) ವರದಿಯ ಪ್ರಕಾರ, ಭಾರತದಾದ್ಯಂತ ವಿವಿಧ ಜೈಲುಗಳಲ್ಲಿ ಒಟ್ಟು 5,54,034 ಕೈದಿಗಳನ್ನು ಬಂಧಿಸಲಾಗಿದೆ. ಅಮೃತಪಾಲ್ ಸಿಂಗ್ ಅವರಿಗೆ ಇನ್ನೂ ಶಿಕ್ಷೆಯಾಗದ ಕಾರಣ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಶಿಕ್ಷೆಗೊಳಗಾದವರು ಕೂಡ ಜೈಲು ಶಿಕ್ಷೆ ಮುಗಿದ ಆರು ವರ್ಷಗಳ ಬಳಿಕ ಚುನಾವಣೆಗೆ ಸ್ಪರ್ಧಿಸಬಹುದು.

ಅಮೃತಪಾಲ್ ಸಿಂಗ್ ಅವರಂತಹ ಜೈಲಿನಲ್ಲಿರುವ ವ್ಯಕ್ತಿಗಳು ತಮ್ಮ ಪ್ರತಿನಿಧಿಯ ಸಹಾಯದಿಂದ ಜೈಲಿನಿಂದಲೇ ನಾಮಪತ್ರ ಸಲ್ಲಿಸಬಹುದು. ಒಂದು ವೇಳೆ ಜೈಲಿನಲ್ಲಿರುವ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದರೆ, ತಜ್ಞರ ಪ್ರಕಾರ ಜೈಲಿನೊಳಗೆ ಪ್ರಮಾಣ ವಚನ ಬೋಧಿಸಲು ಅವಕಾಶವಿಲ್ಲದ ಕಾರಣ, ಪ್ರಮಾಣ ವಚನ ಸ್ವೀಕರಿಸಲು ಜೈಲಿನಿಂದ ಬಿಡುಗಡೆ ಮಾಡಬಹುದು.

ಆದರೆ ಜೈಲಿನಲ್ಲಿರುವ ವ್ಯಕ್ತಿಯ ಪರವಾಗಿ ಬೇರೆಯವರು ಮತವನ್ನು ಚಲಾಯಿಸಲು ಸಾಧ್ಯವಿಲ್ಲ. ಪತಿ ಅರವಿಂದ್ ಕೇಜ್ರಿವಾಲ್ ಬಂಧನದ ಅ ನಂತರ ಗಮನ ಸೆಳೆದಿರುವ ಸುನೀತಾ ಕೇಜ್ರಿವಾಲ್, ಎಎಪಿ ಪರ ಪ್ರಚಾರ ಮಾಡಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 62 (5) ಪ್ರಕಾರ ಯಾವುದೇ ವ್ಯಕ್ತಿ ಪೊಲೀಸರ ಕಾನೂನುಬದ್ಧ ವಶದಲ್ಲಿದ್ದರೆ ಅಥವಾ ಜೈಲಿನಲ್ಲಿ ಬಂಧಿಯಾಗಿದ್ದಲ್ಲಿ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ.

Continue Reading

ಆರೋಗ್ಯ

 Ayushman Bharat Yojana: ಆಪತ್ಕಾಲದಲ್ಲಿ ಆಯುಷ್ಮಾನ್‌ ಭಾರತ್‌ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Ayushman Bharat Yojana: ಆಯುಷ್ಮಾನ್ ಭಾರತ್ ಯೋಜನೆಯು ಭಾರತದಲ್ಲಿ ಸಾರ್ವತ್ರಿಕ ಆರೋಗ್ಯ ರಕ್ಷಣೆಯತ್ತ ಮಹತ್ವದ ಹೆಜ್ಜೆ. ದುರ್ಬಲ ಕುಟುಂಬಗಳಿಗೆ ಹೆಚ್ಚು ಅಗತ್ಯವಿರುವ ಆರ್ಥಿಕ ರಕ್ಷಣೆಯನ್ನು ನೀಡುತ್ತದೆ. ಇದರ ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ, ಇದರಿಂದ ಸಿಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

Ayushman Bharat Yojana
Koo

ಲಕ್ಷಾಂತರ ಭಾರತೀಯರಿಗೆ (indian) ಆರೋಗ್ಯ (health) ಸೇವೆಯನ್ನು (service) ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಗುರಿ ಹೊಂದಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ (Ayushman Bharat Yojana) ಪ್ರಯೋಜನ ಪಡೆಯುವುದು ಇನ್ನೂ ಹಲವಾರು ಮಂದಿಗೆ ಸವಾಲಾಗಿ ಪರಿಣಮಿಸಿದೆ. 2018ರಲ್ಲಿ ಜಾರಿಯಾಗಿರುವ ಆಯುಷ್ಮಾನ್ ಯೋಜನೆ ಇನ್ನೂ ಹಲವು ಮಂದಿಗೆ ಸರಿಯಾಗಿ ಅರ್ಥವೇ ಆಗಿಲ್ಲ. ಇದರಿಂದ ಸಾಕಷ್ಟು ಪರಿಣಾಮಕಾರಿಯಾಗಿ ಎಲ್ಲರನ್ನು ತಲುಪುವುದು ಸಾಧ್ಯವಾಗಿಲ್ಲ. ಭಾರತದಂತಹ ವಿಶಾಲ ಮತ್ತು ವೈವಿಧ್ಯಮಯವಾದ ದೇಶದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವುದು ಸವಾಲಾಗಿದೆ. ಇದನ್ನು ಗುರುತಿಸಿ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿತು. ಆಯುಷ್ಮಾನ್ ಭಾರತ್ ಯೋಜನೆಯು ಏನನ್ನು ಒಳಗೊಳ್ಳುತ್ತದೆ, ಆಯುಷ್ಮಾನ್ ಕಾರ್ಡ್ ಸೇರಿದಂತೆ ಅದರ ಪ್ರಯೋಜನಗಳಿಗಾಗಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದರ ಮಾಹಿತಿ ಇಲ್ಲಿದೆ.


ಏನಿದು ಆಯುಷ್ಮಾನ್ ಭಾರತ್ ಯೋಜನೆ?

ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (PMJAY) ಎಂದು ಕರೆಯಲ್ಪಡುವ ಆಯುಷ್ಮಾನ್ ಭಾರತ್ ಯೋಜನೆಯು ಭಾರತ ಸರ್ಕಾರವು ಪರಿಚಯಿಸಿದ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ದುರಂತದ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ, ಅರ್ಹ ಫಲಾನುಭವಿಗಳು ನಿಗದಿತ ಆಸ್ಪತ್ರೆಗಳಲ್ಲಿ ನಿರ್ದಿಷ್ಟ ಮೊತ್ತದವರೆಗೆ ನಗದು ರಹಿತ ಆರೋಗ್ಯ ಸೇವೆಗಳನ್ನು ಪಡೆಯಬಹುದು.

ಇದನ್ನೂ ಓದಿ: ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

ನೋಂದಣಿ ಹೇಗೆ?

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಾಯಿಸಲು ಮೊದಲು ಅದರ ಬಗ್ಗೆ ತಿಳಿದುಕೊಳ್ಳಿ.

ಅರ್ಹತೆಯನ್ನು ಪರಿಶೀಲಿಸಿ

ಆಯುಷ್ಮಾನ್ ಭಾರತ್ ಯೋಜನೆಗೆ ನೋಂದಣಿ ನಡೆಸುವ ಮೊದಲು ಆಯುಷ್ಮಾನ್ ಭಾರತ್ ಯೋಜನೆ ಪಡೆಯುವ ಅರ್ಹತೆ ನಿಮಗಿದೆಯೇ ಎಂಬುದನ್ನು ತಿಳಿದುಕೊಳ್ಳಿ. ಇದು ಪ್ರಾಥಮಿಕವಾಗಿ ಸಾಮಾಜಿಕ ಆರ್ಥಿಕ ಅಂಶಗಳು ಮತ್ತು ಮನೆಯ ಆದಾಯವನ್ನು ಆಧರಿಸಿರುತ್ತದೆ.


ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರ

ಆಯುಷ್ಮಾನ್ ಭಾರತ್ ಯೋಜನೆಗಾಗಿ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸಾಮಾನ್ಯ ಸೇವಾ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ. ನಿಮ್ಮ ಪ್ರದೇಶದಲ್ಲಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ನೆಮ್ಮದಿ ಕೇಂದ್ರಗಳನ್ನು ಪತ್ತೆ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಲ್ಲಿಗೆ ಭೇಟಿ ಮಾಡಿ.

ಅಗತ್ಯ ದಾಖಲೆಗಳನ್ನು ಒದಗಿಸಿ

ನೋಂದಣಿ ಪ್ರಕ್ರಿಯೆಯಲ್ಲಿ ನಿಮ್ಮ ಅರ್ಹತೆಯನ್ನು ಸ್ಥಾಪಿಸಲು ನೀವು ಕೆಲವು ದಾಖಲೆಗಳನ್ನು ಒದಗಿಸಬೇಕಾಗುತ್ತದೆ. ಇವುಗಳು ಗುರುತಿನ ಪುರಾವೆ, ವಿಳಾಸ ಪುರಾವೆ ಮತ್ತು ಆದಾಯ ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ.

ಸಂಪೂರ್ಣ ನೋಂದಣಿ ಅರ್ಜಿ

ಒದಗಿಸಿದ ಮಾಹಿತಿಯ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಸಾಮಾನ್ಯ ಸೇವಾ ಕೇಂದ್ರದಲ್ಲಿ ಒದಗಿಸಲಾದ ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ಕುಟುಂಬದ ಸದಸ್ಯರು, ಆದಾಯ ಮತ್ತು ಇತರ ಸಂಬಂಧಿತ ಮಾಹಿತಿಯ ಕುರಿತು ವಿವರಗಳನ್ನು ಒದಗಿಸಿ.

ಪರಿಶೀಲನೆ ಪ್ರಕ್ರಿಯೆ

ನೋಂದಣಿ ಫಾರ್ಮ್ ಮತ್ತು ಅಗತ್ಯ ದಾಖಲೆಗಳನ್ನು ಸಲ್ಲಿಸಿದ ಅನಂತರ ಅಧಿಕಾರಿಗಳು ಆಯುಷ್ಮಾನ್ ಭಾರತ್ ಯೋಜನೆಗೆ ನಿಮ್ಮ ಅರ್ಹತೆಯನ್ನು ಪರಿಶೀಲಿಸುತ್ತಾರೆ. ಈ ಪರಿಶೀಲನಾ ಪ್ರಕ್ರಿಯೆಯು ಸರ್ಕಾರಿ ಡೇಟಾಬೇಸ್‌ಗಳೊಂದಿಗೆ ಒದಗಿಸಲಾದ ಮಾಹಿತಿಯನ್ನು ಕ್ರಾಸ್-ಚೆಕ್ ಮಾಡುವುದನ್ನು ಒಳಗೊಂಡಿರುತ್ತದೆ.

ಆಯುಷ್ಮಾನ್ ಕಾರ್ಡ್ ಸ್ವೀಕರಿಸಿ

ಅರ್ಹತೆಯ ಯಶಸ್ವಿ ಪರಿಶೀಲನೆಯ ಅನಂತರ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಿರುವ ಆಯುಷ್ಮಾನ್ ಕಾರ್ಡ್ ಅನ್ನು ನಿಮಗೆ ನೀಡಲಾಗುತ್ತದೆ. ಈ ಕಾರ್ಡ್ ಯೋಜನೆಯಲ್ಲಿ ನಿಮ್ಮ ದಾಖಲಾತಿಗೆ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಪನೆಲ್ಡ್ ಆಸ್ಪತ್ರೆಗಳಲ್ಲಿ ನಗದು ರಹಿತ ಆರೋಗ್ಯ ಸೇವೆಗಳನ್ನು ಪ್ರವೇಶಿಸಲು ಅನುಮತಿ ನೀಡುತ್ತದೆ.

doctor

ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಿ

ಆಯುಷ್ಮಾನ್ ಕಾರ್ಡ್‌ನೊಂದಿಗೆ ನೀವು ಇದೀಗ ಆಯುಷ್ಮಾನ್ ಭಾರತ್ ಯೋಜನೆಯ ಅಡಿಯಲ್ಲಿ ಯಾವುದೇ ಎಂಪನೆಲ್ ಮಾಡಲಾದ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯಬಹುದು. ನಗದು ರಹಿತ ಚಿಕಿತ್ಸಾ ಪ್ರಕ್ರಿಯೆಯನ್ನು ಪ್ರಾರಂಭಿಸಲು ನಿಮ್ಮ ಕಾರ್ಡ್ ಅನ್ನು ಆಸ್ಪತ್ರೆಯ ಸ್ವಾಗತ ವಿಭಾಗದಲ್ಲಿ ನೀಡಿ.

ಪ್ರಯೋಜನಗಳು ಏನೇನು?

ಆಯುಷ್ಮಾನ್ ಕಾರ್ಡ್‌ ಹೊಂದಿರುವುದರಿಂದ ಪ್ರಮುಖ ಪ್ರಯೋಜನಗಳು ಇಂತಿವೆ.

ದುರ್ಬಲ ಕುಟುಂಬಗಳಿಗೆ ರಕ್ಷಣೆ

ಆಯುಷ್ಮಾನ್ ಭಾರತ್ ಯೋಜನೆಯು ಭಾರತದಾದ್ಯಂತ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಆರೋಗ್ಯ ವೆಚ್ಚಗಳ ವಿರುದ್ಧ ಆರ್ಥಿಕ ರಕ್ಷಣೆ ನೀಡುತ್ತದೆ.

ನಗದು ರಹಿತ ಚಿಕಿತ್ಸೆ

ಯೋಜನೆಯ ಫಲಾನುಭವಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ ನಿಗದಿತ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ವರೆಗೆ ನಗದು ರಹಿತ ಚಿಕಿತ್ಸೆಯನ್ನು ಪಡೆಯಬಹುದು.

ವ್ಯಾಪಕ ಆಸ್ಪತ್ರೆ ನೆಟ್‌ವರ್ಕ್

ಅಯುಷ್ಮಾನ್ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳನ್ನು ಒಳಗೊಂಡಂತೆ ನಿಗದಿತ ಆಸ್ಪತ್ರೆಗಳ ವ್ಯಾಪಕ ಜಾಲವನ್ನು ಹೊಂದಿದೆ. ಇದು ದೇಶದಾದ್ಯಂತ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಪಡೆಯಲು ಸಹಕರಿಸುತ್ತದೆ.

Ayushman Card

ಆಯುಷ್ಮಾನ್ ಕಾರ್ಡಗೆ ಅಗತ್ಯವಿರುವ ದಾಖಲೆಗಳು

1. ನಿವಾಸದ ಗುರುತು ಪತ್ರ
2. ವಯಸ್ಸು ಮತ್ತು ಗುರುತಿನ ಪುರಾವೆ- ಉದಾಹರಣೆಗೆ ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್
3. ಜಾತಿ ಪ್ರಮಾಣಪತ್ರ
4. ಸಂಪರ್ಕ ಮಾಹಿತಿ- ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ
5. ಆದಾಯ ಪ್ರಮಾಣ ಪತ್ರ
6. ಪ್ರಸ್ತುತ ಕುಟುಂಬದ ಸ್ಥಿತಿಯನ್ನು ಸೂಚಿಸುವ ದಾಖಲೆಗಳು

Continue Reading

ವಾಣಿಜ್ಯ

Donkey milk: ಕತ್ತೆ ಹಾಲು ಲೀಟರ್‌ಗೆ 7000 ರೂ! ಈ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌?

Donkey milk: ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ. ಗುಜರಾತ್‌ನಲ್ಲಿ ಧೀರೇನ್ ಸೋಲಂಕಿ ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟಕ್ಕೂ ಈ ಕತ್ತೆ ಹಾಲಿಗೆ ಏಕಿಷ್ಟು ಡಿಮ್ಯಾಂಡ್‌? ಇದರ ಹಿನ್ನೆಲೆ ಏನು? ಇಲ್ಲಿದೆ ಕುತೂಹಲಕರ ಮಾಹಿತಿ.

VISTARANEWS.COM


on

By

donkey milk
Koo

ಹಾಲು (milk) ಮಾರಾಟ ಮಾಡಿ ತಿಂಗಳಿಗೊಂದು ಎಷ್ಟು ಆದಾಯ ಗಳಿಸಬಹುದು? ಅಬ್ಬಬ್ಬಾ ಎಂದರೆ 10 ಸಾವಿರ ರೂ. ಗಡಿ ದಾಟಿದರೆ ಬಹುದೊಡ್ಡದು. ಆದರೆ ಇಲ್ಲೊಬ್ಬರು ಹಾಲು ಮಾರಾಟದಿಂದಲೇ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಆದರೆ ಇವರು ಮಾರುತ್ತಿರುವ ಹಾಲು ಹಸುವಿನದಲ್ಲ (cow) ಕತ್ತೆಯದ್ದು (Donkey milk).

ಹಾಲು ಉದ್ಯಮದಲ್ಲಿ ಕತ್ತೆಯ ಹಾಲು ಇಂದು ಬಿಳಿ ಚಿನ್ನವಾಗಿದೆ (white gold). ಗುಜರಾತ್‌ನಲ್ಲಿ (gujarat) ಧೀರೇನ್ ಸೋಲಂಕಿ ( Dhiren Solanki) ಅವರು ಕತ್ತೆಯ ಹಾಲು ಉತ್ಪಾದನೆಯಲ್ಲಿ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಅವರು ಅದರ ಹಾಲನ್ನು ಗೋವಿನ ಪ್ರತಿಸ್ಪರ್ಧಿಗಳು ಉತ್ಪಾದಿಸುವ ಹಾಲಿನ 70 ಪಟ್ಟು ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ.

ಪಟಾನ್ ಜಿಲ್ಲೆಯಲ್ಲಿ 42 ಕತ್ತೆಗಳಿರುವ ಫಾರ್ಮ್ ಹೊಂದಿರುವ ಧೀರೇನ್ ಸೋಲಂಕಿ, ದಕ್ಷಿಣ ಪ್ರದೇಶಗಳಲ್ಲಿನ ಗ್ರಾಹಕರಿಗೆ ಬೆಲೆಬಾಳುವ ಹಾಲನ್ನು ಮಾರಾಟ ಮಾಡುವ ಮೂಲಕ ತಿಂಗಳಿಗೆ 2- 3 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

ಸುಮಾರು ಎಂಟು ತಿಂಗಳ ಹಿಂದೆ ಕೇವಲ 20 ಕತ್ತೆಗಳೊಂದಿಗೆ 22 ಲಕ್ಷ ರೂ.ಗಳ ಆರಂಭಿಕ ಹೂಡಿಕೆ ಮಾಡಿರುವ ಸೋಲಂಕಿ ಈಗ ಕೋಟ್ಯಂತರ ಮೌಲ್ಯದ ಹಾಲು ವ್ಯಾಪಾರ ನಡೆಸುತ್ತಿದ್ದಾರೆ.

ಪ್ರಾರಂಭದಲ್ಲಿ ಸವಾಲು

ಗುಜರಾತ್‌ ನಲ್ಲಿ ಕತ್ತೆ ಹಾಲಿಗೆ ಹೆಚ್ಚು ಬೇಡಿಕೆ ಇಲ್ಲದ ಕಾರಣ ಪ್ರಾರಂಭಿಸಿದ ಐದು ತಿಂಗಳು ಸೋಲಂಕಿ ಅವರು ತುಂಬಾ ಕಷ್ಟ ಪಟ್ಟಿದ್ದರು. ಅದರ ಅನಂತರ ಅವರು ದಕ್ಷಿಣ ಭಾರತದಲ್ಲಿ ಕತ್ತೆ ಹಾಲಿನ ಹೆಚ್ಚಿನ ಅಗತ್ಯತೆ ಇರುವಲ್ಲಿ ತಮ್ಮ ವ್ಯಾಪ್ತಿಯನ್ನು ಬೆಳೆಸುವ ನಿರ್ಧಾರವನ್ನು ಮಾಡಿದರು.

ಪ್ರಸ್ತುತ ಅವರು ಕತ್ತೆ ಹಾಲನ್ನು ಹೆಚ್ಚಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಒದಗಿಸುತ್ತಿದ್ದಾರೆ. ಅವರ ಕೆಲವು ಗ್ರಾಹಕರು ಕತ್ತೆಗಳ ಹಾಲನ್ನು ಬಳಸುವ ಸೌಂದರ್ಯವರ್ಧಕ ಸಂಸ್ಥೆಗಳಾಗಿವೆ.


ಲೀಟರ್‌ಗೆ 5ರಿಂದ 7 ಸಾವಿರ ರೂ.

ಸೋಲಂಕಿ ಪ್ರಕಾರ ಕತ್ತೆ ಹಾಲು ಮಾರುಕಟ್ಟೆಯಲ್ಲಿ ಪ್ರತಿ ಲೀಟರ್‌ಗೆ 5,000 ರಿಂದ 7,000 ರೂ. ಗೆ ಮಾರಾಟವಾಗುತ್ತಿದೆ. ಹಸುವಿನ ಹಾಲಿಗೆ ಹೋಲಿಸಿದರೆ ಲೀಟರ್‌ಗೆ 65 ರೂ. ಗೆ ಮಾರಾಟವಾಗುತ್ತದೆ. ಹಾಲಿನ ತಾಜಾತನವನ್ನು ಕಾಪಾಡಲು ರೆಫ್ರಿಜರೇಟರ್‌ಗಳಲ್ಲಿ ಇರಿಸಲಾಗುತ್ತದೆ.

ದುಬಾರಿಯಾಗಲು ಕಾರಣ

ಕತ್ತೆಯ ಹಾಲಿನ ಬಗ್ಗೆ ಜನಪ್ರಿಯತೆ ಈಗಷ್ಟೇ ಬೆಳೆಯುತ್ತಿದೆ. ಬಹುತೇಕ ಫಾರ್ಮ್‌ಗಳು ಚಿಕ್ಕದಾಗಿದ್ದು, ಐದರಿಂದ 30 ಹಾಲು ಕರೆಯುವ ಕತ್ತೆಗಳನ್ನು ಒಳಗೊಂಡಿರುತ್ತದೆ. ಪ್ರತಿ ದಿನವೂ ಸರಿಸುಮಾರು ನಾಲ್ಕು ಕಪ್ ಅಂದರೆ ಒಂದು ಲೀಟರ್ ಹಾಲನ್ನು ಮಾತ್ರ ಉತ್ಪಾದಿಸಲಾಗುತ್ತದೆ. ಹೀಗಾಗಿ ಹಾಲು ಸ್ವಲ್ಪ ದುಬಾರಿಯಾಗಿದೆ ಮತ್ತು ಪಡೆಯುವುದು ಕಷ್ಟವಾಗುತ್ತದೆ.

ಕತ್ತೆ ಹಾಲಿನ ಪ್ರಯೋಜನಗಳು

ಕತ್ತೆ ಹಾಲಿನ ಬಳಕೆ ಸುಮಾರು 10 ಸಾವಿರ ವರ್ಷಗಳಿಂದಲೂ ಇದೆ. ಅದರ ಪೌಷ್ಟಿಕಾಂಶ ದಿಂದಾಗಿ ಸೌಂದರ್ಯವರ್ಧಕಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಹಲವಾರು ಆರೋಗ್ಯ ಪ್ರಯೋಜನಗಳಿಂದಾಗಿ ಇದು ಇತ್ತೀಚಿನ ದಿನಗಳಲ್ಲಿ ಇದಕ್ಕೆ ಮತ್ತೆ ಬೇಡಿಕೆ ಹೆಚ್ಚಾಗುತ್ತಿದೆ.

ಕತ್ತೆ ಹಾಲಿನ ಇತಿಹಾಸ

ಹಿಂದಿನ ಕಾಲದಲ್ಲಿ ಶಿಶುಗಳ ಆಹಾರಕ್ಕಾಗಿ ಕತ್ತೆ ಹಾಲನ್ನು ಬಳಸುವುದು ಸಾಮಾನ್ಯವಾಗಿತ್ತು. ಈಜಿಪ್ಟಿನ ರಾಣಿ ಕ್ಲಿಯೋಪಾತ್ರ ಕೂಡ ಅದನ್ನು ಇಷ್ಟಪಟ್ಟಿದ್ದಳು. ಅವಳು ತನ್ನ ಚರ್ಮದ ಕಾಂತಿಯನ್ನು ಕಾಪಾಡಿಕೊಳ್ಳಲು ಕತ್ತೆ ಹಾಲಿನಲ್ಲಿ ಸ್ನಾನ ಮಾಡುತ್ತಿದ್ದಳು. ದಂತಕಥೆಯ ಪ್ರಕಾರ ಅವಳಿಗೆ ನಿತ್ಯ ಅಗತ್ಯವಾದ ಹಾಲು ಒದಗಿಸಲು ಸುಮಾರು 700 ಕತ್ತೆಗಳು ಬೇಕಾಗಿದ್ದವು ಎನ್ನಲಾಗುತ್ತದೆ.

ಕತ್ತೆ ಹಾಲು ಮುಖದ ಚರ್ಮದಿಂದ ಸುಕ್ಕುಗಳನ್ನು ನಿವಾರಿಸುತ್ತದೆ. ಚರ್ಮವನ್ನು ಮೃದು ಮತ್ತು ಬಿಳಿಯನ್ನಾಗಿ ಮಾಡುತ್ತದೆ ಎಂದು ನಂಬಲಾಗಿದೆ. ರೋಮನ್ ಚಕ್ರವರ್ತಿ ನೀರೋನ ಹೆಂಡತಿ ಪೊಪ್ಪಿಯಾ ಸ್ನಾನಕ್ಕೂ ಸಹ ಕತ್ತೆ ಬಳಸುತ್ತಿದ್ದಳು. ಈ ಕಾರಣಕ್ಕಾಗಿ, ಅವಳು ಪ್ರಯಾಣ ಮಾಡುವಾಗ ಕತ್ತೆಗಳ ಹಿಂಡುಗಳನ್ನು ಜೊತೆಗೆ ಕೊಂಡೊಯ್ಯುತ್ತಿದ್ದಳು.

ಕತ್ತೆ ಹಾಲಿನ ವಿಶೇಷತೆ

ಕತ್ತೆ ಹಾಲು ಹಸುವಿನ ಹಾಲು ಮತ್ತು ಮಾನವ ಎದೆ ಹಾಲು ಹಲವಾರು ಪೌಷ್ಟಿಕಾಂಶಗಳನ್ನು ಹೊಂದಿದೆ. ಪ್ರೋಟೀನ್ ಜೊತೆಗೆ ಇದು ಜೀವಸತ್ವ, ವಿಶೇಷವಾಗಿ ವಿಟಮಿನ್ ಡಿ ಮತ್ತು ಖನಿಜಗಳನ್ನು ಒಳಗೊಂಡಿರುತ್ತದೆ. ಕತ್ತೆ ಹಾಲು ಕಡಿಮೆ ಕೊಬ್ಬು ಮತ್ತು ಕ್ಯಾಲೋರಿಗಳನ್ನು ಹೊಂದಿದ್ದು, ಇವುಗಳಲ್ಲಿ ಹೆಚ್ಚಿನವು ಕಾರ್ಬೋಹೈಡ್ರೇಟ್‌ಗಳಿಂದ ಲ್ಯಾಕ್ಟೋಸ್ ಹಾಲಿನಲ್ಲಿರುವ ಸಕ್ಕರೆಯ ರೂಪದಲ್ಲಿರುತ್ತದೆ.

ಹಸುವಿನ ಹಾಲಿನ ಪ್ರೋಟೀನ್ ಅಲರ್ಜಿಯನ್ನು ಹೊಂದಿರುವ ಅನೇಕ ಜನರು ಕತ್ತೆ ಹಾಲನ್ನು ಅದರ ಕಡಿಮೆ ಕ್ಯಾಸೀನ್ ಮಟ್ಟದಿಂದ ಸೇವಿಸಬಹುದು. ಏಕೆಂದರೆ ಕತ್ತೆ ಹಾಲು ಅಲರ್ಜಿಯ ಪ್ರತಿಕ್ರಿಯೆಯನ್ನು ಉಂಟುಮಾಡುವುದಿಲ್ಲ.


ಕತ್ತೆ ಹಾಲಿನಲ್ಲಿ ಲ್ಯಾಕ್ಟೋಸ್, ಕ್ಯಾಲ್ಸಿಯಂ ಅನ್ನು ಒಳಗೊಂಡಿದ್ದು, ಬಲವಾದ ಮೂಳೆಗಳಿಗೆ ಅಗತ್ಯವಾದ ಖನಿಜಾಂಶವನ್ನು ಇದು ಒಳಗೊಂಡಿದೆ.

2010ರ ಪ್ರಯೋಗಾಲಯದ ಅಧ್ಯಯನದ ಪ್ರಕಾರ ಕತ್ತೆ ಹಾಲು ಸೈಟೊಕಿನ್‌ಗಳ ಬಿಡುಗಡೆಯನ್ನು ಹೆಚ್ಚಿಸುತ್ತದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುವ ಪ್ರೋಟೀನ್‌ಗಳಾಗಿವೆ. ಹಾಲು ನೈಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸಲು ಜೀವಕೋಶಗಳಿಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು ಹಿಗ್ಗಿಸಲು ಸಹಾಯ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತದ ಹರಿವನ್ನು ಸುಧಾರಿಸುತ್ತದೆ.

Continue Reading

EXPLAINER

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

ದೇಶದಲ್ಲಿ ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡಬೇಕು ಎಂಬ ಅರ್ಜಿಯನ್ನೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಆದರೆ, ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಗೊಂದಲ, ಅನುಮಾನ ಇದ್ದರೆ, ಆತನು ಮತಯಂತ್ರಗಳನ್ನು ಪರಿಶೀಲನೆ ಮಾಡಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್‌ ನೀಡಿದೆ. ಇದು ಮಹತ್ವದ ಆದೇಶ ಎನಿಸಿದೆ.

VISTARANEWS.COM


on

VVPAT Verification
Koo

ನವದೆಹಲಿ: ಚುನಾವಣೆ ಮತಯಂತ್ರಗಳ (EVM) ಬದಲು ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಯಾಗಬೇಕು, ಇವಿಎಂ ಹ್ಯಾಕ್‌ ಮಾಡಲಾಗುತ್ತಿದೆ, ಇವಿಎಂ-ವಿವಿಪ್ಯಾಟ್‌ ತಾಳೆಯಾಗಬೇಕು ಎಂದು ವಾದಿಸುತ್ತಿದ್ದವರಿಗೆ ಸುಪ್ರೀಂ ಕೋರ್ಟ್‌ ತೀರ್ಪು ಕಹಿಯಾಗಿದೆ. ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಗೆ ಬರಬೇಕು, ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ತಾಳೆ (EVM VVPAT Verification) ಹಾಕಬೇಕು ಎಂಬುದಾಗಿ ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ (ಏಪ್ರಿಲ್‌ 26) ತಿರಸ್ಕರಿಸಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶವೊಂದನ್ನು ನೀಡಿದೆ. ಚುನಾವಣೆ ಫಲಿತಾಂಶದ ಬಳಿಕ ಗೊಂದಲ ಇದ್ದರೆ ಆ ಅಭ್ಯರ್ಥಿಗಳು ಮತಯಂತ್ರ ಪರಿಶೀಲನೆಯ ಸೌಲಭ್ಯ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಏನಿದು ಹೊಸ ತಂತ್ರಜ್ಞಾನ?

“ದೇಶದಲ್ಲಿ ಚುನಾವಣೆ ವೇಳೆ ಪ್ರತಿಯೊಂದು ಮತಯಂತ್ರಗಳಿಗೂ ಮೈಕ್ರೋ ಕಂಟ್ರೋಲರ್‌ ಪ್ರೋಗ್ರಾಮ್‌ಗಳನ್ನು ಅಳವಡಿಸಬೇಕು. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮೈಕ್ರೋಕಂಟ್ರೋಲರ್‌ ಪ್ರೋಗ್ರಾಮ್‌ ಸೌಲಭ್ಯ ನೀಡಬೇಕು. ಅಂದರೆ, ಚುನಾವಣೆ ಫಲಿತಾಂಶದ ಬಳಿಕ ಯಾವುದೇ ಗೊಂದಲ ಇದ್ದರೆ, ಆ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಮತಯಂತ್ರಗಳನ್ನು ಎಂಜಿಯನಿಯರ್‌ಗಳ ತಂಡವು ಪರಿಶೀಲನೆ ಮಾಡಬೇಕು. ಚುನಾವಣೆ ಫಲಿತಾಂಶ ಪ್ರಕಟವಾದ ಏಳು ದಿನಗಳ ಒಳಗೆ ಈ ಕುರಿತು ಅಭ್ಯರ್ಥಿಯು ಮನವಿ ಮಾಡಿದರೆ ಮಾತ್ರ ಮತಯಂತ್ರಗಳ ಪರಿಶೀಲನೆ ಮಾಡಬಹುದು” ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಇದು ಮತಯಂತ್ರಗಳ ದಕ್ಷತೆ ಪ್ರಶ್ನಿಸುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಯಾವುದೇ ಗೊಂದಲ, ಅನುಮಾನ ಇದ್ದರೆ ಅಭ್ಯರ್ಥಿಯು ಇನ್ನುಮುಂದೆ ತಜ್ಞರ ನೆರವು ಪಡೆಯಬಹುದಾಗಿದೆ. ಇದಲ್ಲದೆ, ಸಿಂಬಲ್‌ ಲೋಡಿಂಗ್‌ ಪ್ರಕ್ರಿಯೆ ಮುಗಿದ ಬಳಿಕ ಸಿಂಬಲ್‌ ಲೋಡಿಂಗ್‌ ಯುನಿಟ್‌ಗಳನ್ನು (SLU) ಸೀಲ್‌ ಮಾಡಿ, 45 ದಿನ ಸಂಗ್ರಹಿಸಬೇಕು ಎಂಬುದು ಸುಪ್ರೀಂ ಕೋರ್ಟ್‌ನ ಮತ್ತೊಂದು ಆದೇಶವಾಗಿದೆ. ಇದರಿಂದ ಇವಿಎಂ ಡೇಟಾ ಚುನಾವಣೆ ಮುಗಿದ 45 ದಿನಗಳವರೆಗೆ ಸಂಗ್ರಹಿಸಿಡಲು ಸಾಧ್ಯವಾಗಲಿದೆ.

ಬ್ಯಾಲಟ್‌ ಪೇಪರ್‌ ಬೇಕಾಗಿಲ್ಲ

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯೂ ಬೇಕಾಗಿಲ್ಲ ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಏನಿದು ಪ್ರಕರಣ?

ಚುನಾವಣಾ ಮತಯಂತ್ರಗಳಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಯಂತ್ರಗಳ ಜತೆ ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡುವಂತೆ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಸಂಸ್ಥೆ ಸೇರಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಈಗ ಪ್ರತಿ ಕ್ಷೇತ್ರದಲ್ಲಿ ಐದು ಮತಯಂತ್ರಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲಾಗುತ್ತದೆ. ಶೇ.100ರಷ್ಟು ಇವಿಎಂಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲು ಆದೇಶ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿತ್ತು.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ತಾಳೆ ಹೇಗೆ ಮಾಡಲಾಗುತ್ತದೆ?

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣೆ ಆಯೋಗದ ವಾದ ಏನು?

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

Continue Reading
Advertisement
Mahanati Show complaint against Gagana Contestant and Ramesh
ಕಿರುತೆರೆ54 seconds ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ16 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ26 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ59 mins ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ1 hour ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ1 hour ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್2 hours ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ2 hours ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ2 hours ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Actress Haripriya Vasishta Simha Buys A Swanky New SUV Car
ಸ್ಯಾಂಡಲ್ ವುಡ್3 hours ago

Actress Haripriya: ಐಷಾರಾಮಿ ಕಾರು ಖರೀದಿಸಿದ ʻಸಿಂಹಪ್ರಿಯಾʼ! ಬೆಲೆ ಎಷ್ಟು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202423 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌