WPL 2023 : ಹರ್ಮನ್​ಪ್ರೀತ್​ ಕೌರ್​ ಸ್ಫೋಟಕ ಅರ್ಧ ಶತಕ, ಗುಜರಾತ್​ ತಂಡಕ್ಕೆ 208 ರನ್​ ಗೆಲುವಿನ ಗುರಿ - Vistara News

ಕ್ರಿಕೆಟ್

WPL 2023 : ಹರ್ಮನ್​ಪ್ರೀತ್​ ಕೌರ್​ ಸ್ಫೋಟಕ ಅರ್ಧ ಶತಕ, ಗುಜರಾತ್​ ತಂಡಕ್ಕೆ 208 ರನ್​ ಗೆಲುವಿನ ಗುರಿ

ಡಬ್ಲ್ಯುಪಿಎಲ್​ನ (WPL 2023) ಮೊದಲ ಪಂದ್ಯದಲ್ಲಿ ಮುಂಬಯಿ ತಂಡದ ಬ್ಯಾಟರ್​ಗಳು ಅಬ್ಬರಿಸಿದರು.

VISTARANEWS.COM


on

Harmanpreet Kaur's explosive half-century, Gujarat's target of 208 runs to win
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ನಾಯಕಿ ಹರ್ಮನ್​ಪ್ರೀತ್​ ಕೌರ್​ (66 ರನ್​, 30 ಎಸೆತ, 14 ಫೋರ್​) ಅವರ ಸ್ಫೋಟಕ ಅರ್ಧ ಶತಕ ಹಾಗೂ ಆರಂಭಿಕ ಬ್ಯಾಟರ್​ ಹೇಲಿ ಮ್ಯಾಥ್ಯೂಸ್​ (47) ಹಾಗೂ ಅಮೇಲಿಯಾ ಕೆರ್​ (45) ಭರ್ಜರಿ ಬ್ಯಾಟಿಂಗ್ ನೆರವು ಪಡೆದ ಮುಂಬಯಿ ಇಂಡಿಯನ್ಸ್​ ತಂಡ, ಮಹಿಳೆಯರ ಪ್ರೀಮಿಯರ್ ಲೀಗ್​ನ (WPL 2023) ಉದ್ಘಾಟನಾ ಪಂದ್ಯದಲ್ಲಿ ಎದುರಾಳಿ ಗುಜರಾತ್​ ಜಯಂಟ್ಸ್​ ತಂಡಕ್ಕೆ 208 ರನ್​ಗಳ ​ ಗೆಲುವಿನ ಗುರಿ ಒಡ್ಡಿದೆ.

ಇಲ್ಲಿನ ಡಿವೈ ಪಾಟೀಲ್​ ಸ್ಟೇಡಿಯಮ್​ನಲ್ಲಿ ಟಾಸ್​ ಗೆದ್ದ ಗುಜರಾತ್​ ತಂಡದ ನಾಯಕಿ ಬೆತ್​ ಮೂನಿ ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟ್​ ಮಾಡಿದ ಮುಂಬಯಿ ಇಂಡಿಯನ್ಸ್ ತಂಡ ತನ್ನ ಪಾಲಿನ 20 ಓವರ್​ಗಳು ಮುಕ್ತಾಯಗೊಂಡಾಗ 5 ವಿಕೆಟ್​​ ಕಳೆದುಕೊಂಡು207 ರನ್​ ಬಾರಿಸಿತು.

ಟಾಸ್​ ಗೆದ್ದ ಗುಜರಾತ್ ತಂಡದ ನಾಯಕಿ ಬೆತ್​ ಮೂನಿ ಎದುರಾಳಿ ತಂಡವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವ ಯೋಜನೆ ರೂಪಿಸಿದ್ದರೂ ಅದು ಯಶಸ್ಸು ಕಾಣಲಿಲ್ಲ. ಆರಂಭಿಕ ಬ್ಯಾಟರ್​ ಹೇಲಿ ಮ್ಯಾಥ್ಯೂಸ್​ ಭರ್ಜರಿ ಆರಂಭ ತಂದುಕೊಟ್ಟರೆ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್​ ಮಾಡಲು ಇಳಿದ ನ್ಯಾಟ್​ ಸ್ಕೀವರ್​ ಬ್ರಂಟ್​ (23) ರನ್​ ಗಳಿಕೆಯನ್ನು ಮುಂದುವರಿಸಿದರು. ಏತನ್ಮಧ್ಯೆ, ಆರಂಭಿಕ ಬ್ಯಾಟರ್​ ಯಸ್ತಿಕಾ ಭಾಟಿಯಾ 1 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು.

ಇದನ್ನೂ ಓದಿ : WPL 2023 : ಟಾಸ್​ ಗೆದ್ದ ಗುಜರಾತ್​ ಜಯಂಟ್ಸ್​​ ತಂಡದಿಂದ ಫೀಲ್ಡಿಂಗ್ ಆಯ್ಕೆ

ಮೂರು ವಿಕೆಟ್ ಉರುಳಿದ ಬಳಿಕ ಮುಂಬಯಿ ತಂಡ ಬ್ಯಾಟಿಂಗ್​ನಲ್ಲಿ ಅಬ್ಬರಿಸಿತು. ಹರ್ಮನ್​ಪ್ರಿತ್ ಕೌರ್​ ಹಾಗೂ ಅಮೇಲಿಯಾ ಕೆರ್​ವಿಸ್ಫೋಟಕ ಬ್ಯಾಟಿಂಗ್ ನಡೆಸಿದರು. ಈ ಜೋಡಿ ನಾಲ್ಕನೇ ವಿಕೆಟ್​ಗೆ 89 ರನ್​ ಬಾರಿಸಿತು. ಅದರಲ್ಲೂ ಹರ್ಮನ್​ಪ್ರೀತ್​ ಕೌರ್​ ಅಬ್ಬರಿಸಿದರು. ಅವರು ಸತತ ಏಳು ಸೇರಿದಂತೆ ಒಟ್ಟು 14 ಫೋರ್​ ಬಾರಿಸಿ ಎದುರಾಳಿ ತಂಡಕ್ಕೆ ಆಘಾತ ಉಂಟು ಮಾಡಿದರು. ಕೊನೆಯಲ್ಲಿ ಪೂಜಾ ವಸ್ತ್ತಾಕರ್​ 15 ರನ್​ಗಳ ಕೊಡುಗೆ ಕೊಟ್ಟರು.

ಗುಜರಾತ್​ ತಂಡದ ಪರ ಸ್ನೇಹಾ ರಾಣಾ 2 ವಿಕೆಟ್ ಪಡೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

India Head Coach: ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

VISTARANEWS.COM


on

India Head Coach
Koo

ನವದೆಹಲಿ: ಟೀಮ್​ ಇಂಡಿಯಾದ(India Head Coach) ಮುಂದಿನ ಕೋಚ್​ ಯಾರಾಗಲಿದ್ದಾರೆ ಎಂಬ ಕತೂಹಲದ ಮಧ್ಯೆ ಬಿಸಿಸಿಐ(BCCI) ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕೋಚ್​ ಆಗಿರುವ ಸ್ಟೀಫನ್ ಫ್ಲೆಮಿಂಗ್(Stephen Fleming) ಅವರನ್ನು ಕೋಚ್​ ಹುದ್ದೆ ಅಲಂಕರಿಸುವಂತೆ ಮನವೊಲಿಸಲು ಧೋನಿ(MS Dhoni) ಬಳಿ ಮನವಿ ಮಾಡಿದೆ ಎಂದು ವರದಿಯಾಗಿದೆ.

ಹಿಂದೂಸ್ತಾನ್ ಟೈಮ್ಸ್‌ನ ವರದಿಯ ಪ್ರಕಾರ ಧೋನಿ ಬಳಿ ಬಿಸಿಸಿಐ ಸ್ಟೀಫನ್ ಫ್ಲೆಮಿಂಗ್ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗುವಂತೆ ಮಾತುಕತೆ ನಡೆಸಲು ಕೇಳಿಕೊಂಡಿದೆ ಎಂದು ತಿಳಿದುಬಂದಿದೆ. ಸ್ಟೀಫನ್ ಫ್ಲೆಮಿಂಗ್ ಅವರನ್ನು ಕೋಚ್​ ಹುದ್ದೆಗೆ ನೇಮಿಸಲು ಬಿಸಿಸಿಐ ಎಲ್ಲ ಯೋಜನೆ ನಡೆಸಿತ್ತು. ಇದೇ ವೇಳೆ ಅವರು ತಾನು ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಇನ್ನೂ ಕೆಲ ಕಾಲ ಕರ್ತವ್ಯನಿರ್ವಹಸುವ ಆಸಕ್ತಿ ಹೊಂದಿದ್ದೇನೆ ಎಂದು ಹೇಳುವ ಮೂಲಕ ಭಾರತ ತಂಡದ ಕೋಚ್​ ಹುದ್ದೆಗೆ ನಿರಾಸಕ್ತಿ ತೋರಿದ್ದರು. ಆದರೆ ಇದೀಗ ಬಿಸಿಸಿಐ ಧೋನಿಯ ಮಧ್ಯಸ್ಥಿಕೆಯಲ್ಲಿ ಅವರ ಮನವೊಲಿಸಲು ಮುಂದಾಗಿದೆ ಎನ್ನಲಾಗಿದೆ.

ರವಿಶಾಸ್ತ್ರಿ ಕೋಚಿಂಗ್​ ಅವಧಿ ಮಕ್ತಾಯದ ಬಳಿಕ ಕೋಚ್​ ಆದ ದ್ರಾವಿಡ್​ ಕೂಡ ಆರಂಭದಲ್ಲಿ ಈ ಹುದ್ದೆಗೆ ಉತ್ಸುಕರಾಗಿರಲಿಲ್ಲ. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ ಅವರು ಮನವೊಲಿಸಿ ದ್ರಾವಿಡ್​ ಅವರನ್ನು ಕೋಚ್​ ಹುದ್ದೆಗೇರುವಂತೆ ಮಾಡಿದ್ದರು. ಇದೀಗ ಫ್ಲೆಮಿಂಗ್ ಅವರನ್ನು ಕೂಡ ಧೋನಿಯ ಮೂಲಕ ಕೋಚ್​ ಹುದ್ದೆಗೇರುವಂತೆ ಮಾಡುವ ಪ್ರಯತ್ನದಲ್ಲಿದೆ.

ಇನ್ನೊಂದು ಮೂಲಗಳ ಪ್ರಕಾರ ಧೋನಿ ಅವರು ಭಾರತ ತಂಡದ ಕೋಚ್​ ಆಗಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಧೋನಿ 2021ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ಭಾರತ ತಂಡದ ಮೆಂಟರ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ಧೋನಿ ಅವರನ್ನು ಕೂಡ ಕೋಚ್​ ಮಾಡುವ ಯೋಚನೆಯೊಂದನ್ನು ಬಿಸಿಸಿಐ ನಡೆಸಿದೆ ಎನ್ನಲಾಗಿದೆ. ಧೋನಿ ನಾಯಕತ್ವದಲ್ಲಿ ಭಾರತ ಏಕದಿನ, ಟಿ20 ಮತ್ತು ಐಸಿಸಿ ಚಾಂಪಿಯನ್ಸ್​ ಟ್ರೋಫಿ ಗೆದ್ದಿತ್ತು. ಇದಾಗ ಬಳಿಕ ಭಾರತ ತಂಡ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ.

ಇದನ್ನೂ ಓದಿ Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಕೂಡ ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತರಾಗಿದ್ದಾರೆ. ಐಪಿಎಲ್​ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಗಮನಿಸುವಾಗ ಕೋಚಿಂಗ್​ ಹುದ್ದೆಗೆ ಅರ್ಜಿ ಸಲ್ಲಿಸುವ ಸೂಚನೆಯೊಂದು ಲಭಿಸಿದೆ. 

Continue Reading

ಕ್ರೀಡೆ

RCB: ಅಮೆರಿಕದ ಘಟಿಕೋತ್ಸವದಲ್ಲೂ ಆರ್​ಸಿಬಿಯದ್ದೇ ಹವಾ: ವಿಡಿಯೊ ವೈರಲ್​

RCB: ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದರು. “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

VISTARANEWS.COM


on

RCB
Koo

ನ್ಯೂಯಾರ್ಕ್​: ಅಮೆರಿಕದಲ್ಲಿರುವ ಕರ್ನಾಟಕ ಮೂಲಕದ ಆರ್​ಸಿಬಿಯ(RCB) ಅಪಟ್ಟ ಅಭಿಮಾನಿಯೊಬ್ಬ(RCB fan) ತನ್ನ ಕಾಲೇಜಿನ ಘಟಿಕೋತ್ಸವ(ಕಾನ್ವೋಕೇಷನ್)(convocation) ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸುವಾಗ ಆರ್​ಸಿಬಿ ತಂಡದ ಜೆರ್ಸಿಯನ್ನು ಪ್ರದರ್ಶಸಿದ್ದಾನೆ. ಈ ವಿಡಿಯೊ ವೈರಲ್​ ಆಗಿದೆ.

ಯಾವುದೇ ಒಂದು ವಿಶ್ವವಿದ್ಯಾನಿಲಯದ ಅಥವಾ ಇತರ ಅಂಗೀಕೃತ ಉನ್ನತ ಶಿಕ್ಷಣ ಸಂಸ್ಥೆಗಳ ಅಧ್ಯಯನ ಘಟಕವೊಂದರ ಶಿಕ್ಷಣವನ್ನು ಯಶಸ್ವಿಯಾಗಿ ಮುಗಿಸಿದ ಬಳಿಕ ಇಲ್ಲವೇ ಯಾವುದಾದರೊಂದು ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅಥವಾ ಪಾಂಡಿತ್ಯ ಸಾಧಿಸಿದ ಖ್ಯಾತ ವ್ಯಕ್ತಿಗಳಿಗೆ ಪದವಿ/ಪ್ರಶಸ್ತಿಯನ್ನು ನೀಡಲು ಏರ್ಪಡಿಸುವ ಸಾಂಪ್ರದಾಯಿಕ ಸಮಾರಂಭವನ್ನು ಘಟಿಕೋತ್ಸವ ಎಂದು ಕರೆಯಲಾಗುತ್ತದೆ. ಆರ್​ಸಿಬಿಯ ಈ ಅಭಿಮಾನಿ ಕೂಡ ಇತಂಹದ್ದೇ ಸಾಧನೆ ಮಾಡಿದ್ದ. ಆದರೆ ಆತನ ಸಾಧನೆಗಿಂತ ಆರ್​ಸಿಬಿ ಚೆನ್ನೈ ವಿರುದ್ಧ ಗೆದ್ದು ಪ್ಲೇ ಆಫ್​ ಪ್ರವೇಶಿಸಿದ್ದೇ ಆತನಿಗೆ ಎಲ್ಲಿಲ್ಲದ ಸಂತಸ ತಂದಿದೆ. ಕರಣ್​ ಎನ್ನುವಾತ ಈ ವಿಡಿಯೊವನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿದ್ದಾನೆ.

ಆರ್​ಸಿಬಿ ಅಭಿಮಾನಿಗಳು ತಮ್ಮ ಭಾವೋದ್ರಿಕ್ತ ಮತ್ತು ಅಚಲ ಬೆಂಬಲಕ್ಕೆ ಹೆಸರುವಾಸಿಯಾಗಿದ್ದಾರೆ. ಫ್ರ್ಯಾಂಚೈಸಿಯು ಭೌಗೋಳಿಕ ಗಡಿಗಳು ಮತ್ತು ಸಂಸ್ಕೃತಿಗಳನ್ನು ಮೀರಿದ ನಿಷ್ಠಾವಂತ ಅಭಿಮಾನಿಗಳನ್ನು ಹೊಂದಿದೆ. ಈ ಬಾರಿ ಆರಂಭಿಕ ಹಂತದಲ್ಲಿ ಸತತ ಸೋಲು ಕಂಡಿದ್ದ ಆರ್​ಸಿಬಿ ಆ ಬಳಿಕ ಪವಾಡ ಸೃಷ್ಟಿಸಿದಂತೆ ಸತತ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಪ್ರವೇಶಿಸಿತ್ತು. ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ರಾಜಸ್ಥಾನ್​ ವಿರುದ್ಧ ಆಡಲಿದೆ. ಗೆದ್ದರೆ 2ನೇ ಕ್ವಾಲಿಫೈಯರ್​ ಪಂದ್ಯವನ್ನಾಡಲಿದೆ.

ಶನಿವಾರ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಗಿತ್ತು. ಈ ಪಂದ್ಯ ಫೈನಲ್​ ಪಂದ್ಯಕ್ಕೂ ಮಿಗಿಲಾದ ಕಾತುಕ ಸೃಷ್ಟಿಸಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಆರ್​ಸಿಬಿ ಗೆಲುವಿನ ಬಳಿಕ ಅಭಿಮಾನಿಗಳ ಜೈಕಾರ ಮುಗಿಲು ಮುಟ್ಟಿತ್ತು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಸಂಭ್ರಮಾಚರಣೆ ಕಂಡು ಬಂದಿತ್ತು. ಪಂದ್ಯ ಮುಕ್ತಾಯವಾದಾಗ ತಡರಾತ್ರಿಯಾಗಿದ್ದರೂ ಅಭಿಮಾನಿಗಳ ಸಡಗರಕ್ಕೆ ಕೊರತೆ ಇರಲಿಲ್ಲ. ಪುಟ್ಟ ಮಕ್ಕಳು ಸೇರಿದಂತೆ ಆರ್‌ಸಿಬಿ ಫ್ಯಾನ್ಸ್‌ ರಸ್ತೆಯಲ್ಲೇ ಕುಣಿದು ಕುಪ್ಪಳಿಸಿದ್ದರು. ಮಕ್ಕಳಂತೂ ಈ ಸಲ ಕಪ್ ನಮ್ದೆ ಎನ್ನುವ ಘೋಷಣೆ ಕೂಗುತ್ತಿರುವುದು ಕಂಡು ಬಂದಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಎದುರಿನ ರಸ್ತೆ ಬ್ಲಾಕ್ ಮಾಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದರು. ಇದು ನಿಜವಾದ ಹೊಸ ಅಧ್ಯಾಯ ಎನ್ನುವ ಮಾತು ಎಲ್ಲೆಡೆ ಕೇಳಿ ಬಂದಿತ್ತು.

ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದರು. “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದರು.

Continue Reading

ಕ್ರಿಕೆಟ್

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

T20 World Cup 2024: ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ.

VISTARANEWS.COM


on

T20 World Cup 2024
Koo

ಸಿಡ್ನಿ: ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ(IPL 2024) ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಭಾರೀ ಸಂಚಲನ ಸೃಷ್ಟಿಸಿದ್ದ ಯುವ ಬ್ಯಾಟರ್​ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಕೊನೆಗೂ ಕ್ರಿಕೆಟ್​ ಆಸ್ಟ್ರೇಲಿಯಾ ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಪ್ರಯಾಣದ ಮೀಸಲು ಆಟಗಾರನಾಗಿ ಆಯ್ಕೆ ಮಾಡಿದೆ. ಇವರ ಜತೆಗೆ ಮ್ಯಾಟ್ ಶಾರ್ಟ್ ಕೂಡ ಅವಕಾಶ ಪಡೆದಿದ್ದಾರೆ. ಉಭಯ ಆಟಗಾರರನ್ನು ತಂಡಕ್ಕೆ ಸೇರ್ಪಡೆಗೊಳಿಸಿದ ವಿಚಾರವನ್ನು ಕ್ರಿಕೆಟ್​ ಆಸ್ಟ್ರೇಲಿಯಾ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದೆ. ಆಸ್ಟ್ರೇಲಿಯಾ(Australia T20 World Cup squad) ತನ್ನ ಮೊದಲ ಪಂದ್ಯವನ್ನು ಜೂನ್​ 3ರಂದು ಉಗಾಂಡ ವಿರುದ್ಧ ಆಡಲಿದೆ.

ಮೇ 25 ರ ತನಕ ಐಸಿಸಿ ಅನುಮತಿ ಇಲ್ಲದೆ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಆ ಬಳಿಕದ ಯಾವುದೇ ಬದಲಾವಣೆ ಮಾಡಬೇಕಿದ್ದರೆ ಐಸಿಸಿ ತಾಂತ್ರಿಕ ಸಮಿತಿಯ ಅನುಮತಿ ಅತ್ಯಗತ್ಯ. ಇದು ಕೂಡ ಆಟಗಾರರು ಗಾಯಗೊಂಡರೆ ಮಾತ್ರ ಬದಲಿ ಆಟಗಾರನ ಆಯ್ಕೆಯನ್ನು ಐಸಿಸಿ ಮಾನ್ಯ ಮಾಡುತ್ತದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. 

ಡೆಲ್ಲಿ ತಂಡದ ಪರ ಅತಿ ಕಡಿಮೆ ಎಸೆತಗಳಿಂದ ಅರ್ಧಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಫ್ರೇಸರ್-ಮೆಕ್‌ಗುರ್ಕ್ ಪಾತ್ರರಾಗಿದ್ದರು. ಜತೆಗೆ ಈ ಆವೃತ್ತಿಯ ಐಪಿಎಲ್​ನಲ್ಲಿ ಅತಿ ಕಡಿಮೆ ಎಸೆತಗಳಿಂದ(15) ಅರ್ಧಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಕೂಡ ಬರೆದಿದ್ದರು. ಈ ಬಾರಿ ಒಟ್ಟು 9 ಐಪಿಎಲ್​ ಪಂದ್ಯಗಳನ್ನಾಡಿದ ಮೆಕ್‌ಗುರ್ಕ್ 330 ರನ್​ ಬಾರಿಸಿದ್ದಾರೆ. 84 ರನ್​ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ.

ಇದನ್ನೂ ಓದಿ T20 World Cup 2024: ಇಂಡೋ-ಪಾಕ್​ ಮಿನಿ ವಿಶ್ವಕಪ್​ ಸಮರ ನಡೆಯುವ ಸ್ಟೇಡಿಯಂನ ವಿಡಿಯೊ ವೈರಲ್​

ಲುಂಗಿ ಎನ್‌ಗಿಡಿ ಬದಲಿಗೆ ಆಲ್​ರೌಂಡರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಡೆಲ್ಲಿ ತಂಡ ಬದಲಿ ಆಟಗಾರನಾಗಿ ಮೂಲಬೆಲೆ 50 ಲಕ್ಷ ರೂ.ಗೆ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಮೆಕ್‌ಗುರ್ಕ್ ಲಿಸ್ಟ್ ಎ ಪಂದ್ಯದಲ್ಲಿ ಕೇವಲ 29 ಎಸೆತದಲ್ಲಿ ಶತಕ ಬಾರಿಸಿ ಅತ್ಯಂತ ವೇಗದ ಶತಕದ ವಿಶ್ವದಾಖಲೆ ಬರೆದಿದ್ದರು. ಈ ಬಾರಿಯ ಐಪಿಎಲ್​ನಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿಸಿದ್ದರು. ಮುಂದಿನ ಬಾರಿ ಇವರಿಗೆ ಹರಾಜಿನಲ್ಲಿ ದುಬಾರಿ ಬೆಲೆ ಸಿಗುವ ಸಾಧ್ಯತೆ ಇದೆ.

ಮಿಚೆಲ್​ ಮಾರ್ಷ್​ ತಂಡದ ನಾಯಕನಾಗಿದ್ದಾರೆ.

ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಟೆಸ್ಟ್​ ಮತ್ತು ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿರುವ ಡೇವಿಡ್ ವಾರ್ನರ್, ಟಿಮ್‌ ಡೇವಿಡ್ ಅವರನ್ನು ಬ್ಯಾಟಿಂಗ್​ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಗ್ಲೆನ್​ ಮ್ಯಾಕ್ಸ್‌ವೆಲ್‌, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ತಂಡದ ಸ್ಟಾರ್​ ಆಲ್​ರೌಂಡರ್​ಗಳಾಗಿದ್ದಾರೆ. ಸ್ಪಿನ್ಸ್‌ ಬೌಲರ್​ಗಳಾಗಿ ಆ್ಯಡಂ ಝಂಪಾ ಮತ್ತು ಆ್ಯಶ್ಟನ್​ ಅಗರ್ ಸ್ಥಾನ ಪಡೆದಿದ್ದಾರೆ. ವೇಗಿಗಳಾಗಿ ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಎಲ್ಲಿಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ. ಪ್ರಯಾಣದ ಮೀಸಲು ಆಟಗಾರರು: ಮ್ಯಾಟ್ ಶಾರ್ಟ್, ಜೇಕ್ ಫ್ರೇಸರ್-ಮೆಕ್‌ಗುರ್ಕ್

Continue Reading

ಕ್ರೀಡೆ

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

Rohit Sharma: ರೋಹಿತ್​ ಶರ್ಮ(Rohit Sharma) ಅವರ ಈ ಆರೋಪಕ್ಕೆ ಇದೀಗ ಸ್ಟಾರ್‌ಸ್ಪೋರ್ಟ್ಸ್ ಸ್ಪಷ್ಟನೆ ನೀಡಿದ್ದು, ರೋಹಿತ್‌ ಮಾತನಾಡಿರುವ ಯಾವುದೇ ಖಾಸಗಿ ಆಡಿಯೋಗಳನ್ನು ಪ್ರಸಾರ ಮಾಡಿಲ್ಲ ಎಂದು ಹೇಳಿದೆ.

VISTARANEWS.COM


on

Rohit Sharma
Koo

ಮುಂಬಯಿ: ಐಪಿಎಲ್‌(IPL 2024) ಪ್ರಸಾರಕರಿಂದ ತನ್ನ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಟ್ವೀಟ್​ ಮೂಲಕ ಸ್ಟಾರ್‌ಸ್ಪೋರ್ಟ್ಸ್(Star Sports) ವಿರುದ್ಧ ಗಂಭೀರ ಆರೋಪ ಮಾಡಿದ್ದ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರ ಈ ಆರೋಪಕ್ಕೆ ಇದೀಗ ಸ್ಟಾರ್‌ಸ್ಪೋರ್ಟ್ಸ್ ಸ್ಪಷ್ಟನೆ ನೀಡಿದ್ದು, ರೋಹಿತ್‌ ಮಾತನಾಡಿರುವ ಯಾವುದೇ ಖಾಸಗಿ ಆಡಿಯೋಗಳನ್ನು ಪ್ರಸಾರ ಮಾಡಿಲ್ಲ ಎಂದು ಹೇಳಿದೆ.

ಕೋಲ್ಕತಾ ನೈಟ್​ ರೈಡರ್ಸ್​ ತಂಡದ ಸಹಾಯಕ ಕೋಚ್‌ ಜತೆ ರೋಹಿತ್‌ ಮಾತನಾಡುತ್ತ ಕುಳಿತ್ತಿದ್ದ ವೀಡಿಯೋವನ್ನು ಪ್ರಸಾರ ಮಾಡಲಾಗಿತ್ತು. ಇದಾದ ಬಳಿಕ ರೋಹಿತ್​ ಮುಂಬೈಯಲ್ಲಿ ನಡೆದಿದ್ದ ಐಪಿಎಲ್​​ ಪಂದ್ಯದ ವೇಳೆ ಧವಳ್ ಕುಲಕರ್ಣಿ ಅವರೊಂದಿಗೆ ಸಂಭಾಷಣೆ ನಡೆಸಿದ್ದರು. ಇದನ್ನು ರೆಕಾರ್ಡ್​ ಮಾಡುತ್ತಿರುವಾಗ ಕ್ಯಾಮೆರಾಮನ್​ಗೆ ಆಡಿಯೊ ಆಫ್​ ಮಾಡಿ ಎಂದು ಕೋರಿಕೊಂಡಿದ್ದರು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಇದೇ ವಿಚಾರವಾಗಿ ರೋಹಿತ್​ ಟ್ವೀಟ್​ ಮಾಡಿ ‘ತನ್ನ ವಿನಂತಿಯ ಹೊರತಾಗಿಯೂ, ಸ್ಟಾರ್ ಸ್ಪೋರ್ಟ್ಸ್ ನಾನು ತಂಡದ ಸಹ ಆಟಗಾರರು ಮತ್ತು ಸಹೋದ್ಯೋಗಿಗಳೊಂದಿಗೆ ಆಡಿದ ವೈಯಕ್ತಿಕ ಮಾತುಕತೆಗಳ ಆಡಿಯೊ ಮತ್ತು ವಿಡಿಯೊ ತುಣುಕನ್ನು ಹಂಚಿಕೊಳ್ಳುವುದನ್ನು ಸ್ಟಾರ್ ಸ್ಪೋರ್ಟ್ಸ್ ಮುಂದುವರೆಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್​ ಹುಟ್ಟಿಸುವ ಸಲುವಾಗಿ ಪ್ರಸಾರಕರು ಈ ರೀತಿ ಕ್ರಿಕೆಟಿಗರ ಗೌಪ್ಯತೆಗೆ ಅಡ್ಡಿಪಡಿಸುವುದು ಸರಿಯಲ್ಲ. ಸ್ವಲ್ಪವಾದರೂ ಸಾಮಾನ್ಯ ಜ್ಞಾನ ಇರಬೇಕು” ಎಂದು ಟ್ವೀಟ್​ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದರು.

ಕ್ರಿಕೆಟಿಗರ ಜೀವನವು ಎಷ್ಟು ಗೊಂದಲವಾಗಿದೆ ಎಂದರೆ, ಈಗ ನಾವು ನಮ್ಮ ಸ್ನೇಹಿತರು ಮತ್ತು ಸಹೋದ್ಯೋಗಿಗಳೊಂದಿಗೆ, ತರಬೇತಿ ಅಥವಾ ಪಂದ್ಯದ ದಿನಗಳಲ್ಲಿ ಗೌಪ್ಯವಾಗಿ ಮಾತನಾಡು ಕೂಡ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಾನು ನಡೆಸುವ ಪ್ರತಿಯೊಂದು ಸಂಭಾಷಣೆಯನ್ನು ಕೂಡ ಕ್ಯಾಮೆರಾಗಳು ರೆಕಾರ್ಡ್ ಮಾಡುತ್ತಿವೆ. ಇದು ಒಳ್ಳೆಯ ವಾತಾವರಣವಲ್ಲ ಎಂದು ರೋಹಿತ್​ ಬೇಸರ ವ್ಯಕ್ತಪಡಿಸಿದ್ದರು.

ಈ ಕುರಿತು ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್, ‘ಇದರಲ್ಲಿ ಯಾವುದೇ ಧ್ವನಿ ಇರಲಿಲ್ಲ. ಅಲ್ಲದೇ ನಮಗೆ ಅನುಮತಿ ನೀಡಿದ ಜಾಗದಲ್ಲೇ ಚಿತ್ರೀಕರಣ ಮಾಡಲಾಗಿತ್ತು. ಚಿತ್ರೀಕರಣದ ವೇಳೆಯಲ್ಲೂ ಧ್ವನಿ ಮುದ್ರಿಸಲಾಗಿರಲಿಲ್ಲ’ ಎಂದು ಹೇಳಿದೆ.

ನಾಯಕತ್ವದ ಕರ್ತವ್ಯಗಳಿಂದ ಮುಕ್ತರಾದ ನಂತರ ರೋಹಿತ್ ಈ ಬಾರಿ ದೊಡ್ಡ ಸ್ಕೋರ್ ಮಾಡುತ್ತಾರೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ಈ ನಿರೀಕ್ಷೆಗಳಲ್ಲೆ ಹುಸಿಯಾಗಿತ್ತು. ರೋಹಿತ್​ ಈ ಬಾರಿ 1 ಶತಕ ಬಾರಿಸಿದ್ದು ಬಿಟ್ಟರೆ ಉಳಿದ ಬಹುತೇಕ ಪಂದ್ಯಗಳಲ್ಲಿಯೂ ಕಳಪೆ ಪ್ರದರ್ಶನ ತೋರಿದ್ದರು. ಐಪಿಎಲ್​​ ವೇದಿಕೆಯಲ್ಲಿ ಮಿಂಚಲು ಸಾಧ್ಯವಾಗದಿದ್ದರೂ, ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ರೋಹಿತ್ ದೊಡ್ಡ ಮೊತ್ತವನ್ನು ಗಳಿಸಲು ಎದುರು ನೋಡುತ್ತಿದ್ದಾರೆ.

ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಮೇ 25ರಂದು ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ಈ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ಉಪನಾಯಕ ಹಾರ್ದಿಕ್​ ಪಾಂಡ್ಯ, ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಪ್ರಯಾಣಿಸಲಿದ್ದಾರೆ. ಉಳಿದ ಆಟಗಾರರು ಮೇ 26 ಐಪಿಎಲ್​ ಫೈನಲ್​ ಬಳಿಕ ವಿಮಾನ ಏರಲಿದ್ದಾರೆ. ಒಟ್ಟು 2 ಬ್ಯಾಚ್​ಗಳಾಗಿ ಭಾರತೀಯ ಆಟಗಾರರು ಪ್ರಯಾಣಿಸಲಿದ್ದಾರೆ.

Continue Reading
Advertisement
Mallikarjuna Kharge siddaramaiah
ಪ್ರಮುಖ ಸುದ್ದಿ56 seconds ago

CM Siddaramaiah: ಖರ್ಗೆಯೂ ಪಿಎಂ ಆಗಲ್ಲ! ಸಿದ್ದರಾಮಯ್ಯ ಯಾಕಿಂಥಾ ಮಾತಾಡಿದ್ರು?

murder Case in Vijayapura
ವಿಜಯಪುರ10 mins ago

Murder Case : ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಶವದ ಪಕ್ಕದಲ್ಲೇ ನಿದ್ರೆಗೆ ಜಾರಿದ ಕುಡುಕ ಪತಿ

Jayant Sinha
ದೇಶ10 mins ago

Jayant Sinha: ವೋಟೂ ಹಾಕಿಲ್ಲ..ಪ್ರಚಾರಕ್ಕೂ ಬಂದಿಲ್ಲ; ಜಯಂತ್‌ ಸಿನ್ಹಾಗೆ ಬಿಜೆಪಿ ಶೋಕಾಸ್‌ ನೊಟೀಸ್‌

Katrina Kaif And Vicky Kaushal Together In London
ಸಿನಿಮಾ18 mins ago

Katrina Kaif: ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಪತಿ ಜತೆ ಲಂಡನ್‌ನಲ್ಲಿ ಜಾಲಿ ಮೂಡ್‌!

gold rate today sruthi hassan
ಚಿನ್ನದ ದರ28 mins ago

Gold Rate Today: ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ, ಗ್ರಾಹಕರಿಗೆ ತುಸು ನಿರಾಳ

India Head Coach
ಕ್ರೀಡೆ36 mins ago

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

Viral Video
ವೈರಲ್ ನ್ಯೂಸ್44 mins ago

Viral Video: ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿಯನ್ನು ಈತ ಏಕಾಂಗಿಯಾಗಿ ಹೇಗೆ ನಂದಿಸಿದ ನೋಡಿ!

Contaminated Water
ಮೈಸೂರು53 mins ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Viral video
ವೈರಲ್ ನ್ಯೂಸ್59 mins ago

Chudidar Gang: ಚಡ್ಡಿ ಗ್ಯಾಂಗ್ ಆಯ್ತು, ಈಗ ದರೋಡೆಕೋರರ ಚೂಡಿದಾರ್ ಗ್ಯಾಂಗ್ ಆ್ಯಕ್ಟಿವ್ ಆಗಿದೆ; ಹುಷಾರ್! ವಿಡಿಯೊ ನೋಡಿ

Actor Upendra Ajaneesh Visited Hangary To Record Music
ಸ್ಯಾಂಡಲ್ ವುಡ್1 hour ago

Actor Upendra: ಹಂಗೆರಿಯಲ್ಲಿ ಉಪೇಂದ್ರ, ಅಜನೀಶ್: ʻUIʼ ಸಿನಿಮಾದ ಬಿಗ್‌ ಅಪ್‌ಡೇಟ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌