Yeshwanthpur Apmc Yard: ಟ್ರಾಫಿಕ್‌ ಕಿರಿಕಿರಿ: ಯಶವಂತಪುರದಿಂದ ದಾಸನಪುರಕ್ಕೆ ಎಪಿಎಂಸಿ ಶಿಫ್ಟ್; ಸರ್ಕಾರದಿಂದ ಸೂಚನೆ - Vistara News

ಕರ್ನಾಟಕ

Yeshwanthpur Apmc Yard: ಟ್ರಾಫಿಕ್‌ ಕಿರಿಕಿರಿ: ಯಶವಂತಪುರದಿಂದ ದಾಸನಪುರಕ್ಕೆ ಎಪಿಎಂಸಿ ಶಿಫ್ಟ್; ಸರ್ಕಾರದಿಂದ ಸೂಚನೆ

Yeshwanthpur Apmc Yard: ಯಶವಂತಪುರದಲ್ಲಿರುವ ಎಪಿಎಂಸಿ ಮಾರುಕಟ್ಟೆ ದಾಸನಪುರಕ್ಕೆ ಶಿಫ್ಟ್‌ ಆಗಲಿದೆ. ಎಪಿಎಂಸಿ ಮಾರುಕಟ್ಟೆಗೆ ಸಾವಿರಾರು ಲಾರಿಗಳು ಬಂದು ಹೋಗುತ್ತಿರುವುದರಿಂದ ಸಂಚಾರಿ ದಟ್ಟಣೆ ಹೆಚ್ಚಾಗುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

APMC shift from Yeshwantpur to Dasanpur, Notice from the Government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಶವಂತಪುರ ಎಪಿಎಂಸಿ ಯಾರ್ಡ್‌ಗೆ (APMC) ಬರುವ ಸಾವಿರಾರು ಲಾರಿಗಳಿಂದ ಟ್ರಾಫಿಕ್ ಸಮಸ್ಯೆಯನ್ನು (Yeshwanthpur Apmc Yard) ತಂದೊಡ್ಡುತ್ತಿದ್ದು, ಹೀಗಾಗಿ ಯಶವಂತಪುರದಿಂದ ದಾಸನಪುರಕ್ಕೆ ಸ್ಥಳಾಂತರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಯಶವಂತಪುರ ಎಪಿಎಂಸಿಗೆ ನಿತ್ಯ 500ಕ್ಕೂ ಹೆಚ್ಚು ಲಾರಿಗಳು ಸಾಲುಸಾಲಾಗಿ ನಿಲ್ಲುವುದರಿಂದ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತಿದೆ. ಹೀಗಾಗಿ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಕ್ಕಪಕ್ಕದ ಶಾಲೆಗಳು, ಆಸ್ಪತ್ರೆಗಳು, ಕಾರ್ಖಾನೆಗಳು ದೂರಿವೆ. ಗೊರಗುಂಟೆಪಾಳ್ಯ, ಯಶವಂತಪುರ, ಇಸ್ಕಾನ್ ಜಂಕ್ಷನ್, ಮಹಾಲಕ್ಷ್ಮಿ ಲೇಔಟ್ ಹಾಗೂ ಮಲ್ಲೇಶ್ವರಂ, ಹೆಬ್ಬಾಳದ ಕಡೆಗೆ ಲಾರಿಗಳು ಪ್ರವೇಶಿಸುವ ವೇಳೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.

ಈರುಳ್ಳಿ, ಆಲೂಗಡ್ಡೆ, ಶುಂಠಿ ಪದಾರ್ಥಗಳು ಯಶವಂತಪುರದಿಂದ ಅತೀ ಹೆಚ್ಚಾಗಿ ತಮಿಳುನಾಡಿಗೆ ಸರಬರಾಜು ಆಗುತ್ತಿದೆ‌. ಈ ವೇಳೆ ಕೋರಮಂಗಲ, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಕಡೆ ಭಾರಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹೀಗಾಗಿ ಯಶವಂತಪುರದಿಂದ 10 ಕಿ.ಲೋ ಮೀಟರ್ ದೂರದಲ್ಲಿರುವ ದಾಸನಪುರಕ್ಕೆ ಮಾರ್ಕೆಟ್ ಶಿಫ್ಟ್ ಸೂಚನೆ ನೀಡಲಾಗಿದೆ.

ಸದ್ಯ ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ಮೌಖಿಕವಾಗಿ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ. ದಾಸನಪುರದಿಂದ ನೈಸ್ ರಸ್ತೆ ಮೂಲಕ ತಮಿಳುನಾಡು ತಲುಪಲು ಪ್ಲ್ಯಾನ್ ಮಾಡಲಾಗಿದೆ. ಇದರಿಂದ ಲಾರಿಗಳು ನಗರಕ್ಕೆ ಎಂಟ್ರಿಯಾಗಂತೆ ರಿಂಗ್ ರಸ್ತೆ ಮೂಲಕ ತಲುಪಲು ಅನುಕೂಲ ಆಗುತ್ತದೆ. ಕೂಡಲೇ ಸ್ಥಳಾಂತರಕ್ಕೆ ಮತ್ತೊಮ್ಮೆ ಸೂಚನೆ ನೀಡಲಾಗುವುದು ಎಂದು ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 Yeshwanthpur Apmc Yard APMC shift from Yeshwantpur to Dasanpur, Notice from the Government

ಸ್ಥಳಾಂತರಕ್ಕೆ ವರ್ತಕರ ಆಕ್ರೋಶ

ಎಪಿಎಂಸಿ ಸ್ಥಳಾಂತರ ವಿಚಾರವು ವರ್ತಕರ ಆಕ್ರೋಶಕ್ಕೆ ಕಾರಣವಾಗಿದ್ದು, ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ದಾಸನಪುರಕ್ಕೆ ಶಿಫ್ಟ್ ಆದರೆ ಪಾರ್ಕಿಂಗ್ ಸಮಸ್ಯೆ ಸೇರಿದಂತೆ ರೈತರಿಗೆ ತೊಂದರೆ ಆಗುತ್ತದೆ. ಹೀಗಾಗಿ ಸ್ಥಳಾಂತರಕ್ಕೆ ವಿರುದ್ಧವಾಗಿ 300ಕ್ಕೂ ಅಧಿಕ ಆಕ್ಷೇಪಣೆಗಳು ಬಂದಿವೆ.‌ ಸರ್ಕಾರದ ನಡೆ ಖಂಡಿಸಿ ಕೋರ್ಟ್ ಮೊರೆ ಹೋಗಿದ್ದೇವೆ. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡುವುದಾಗಿ ವರ್ತಕರ ಸಂಘ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Bengaluru Cylinder Blast: ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ; 13 ವರ್ಷದ ಬಾಲಕ ಸಾವು

ಸಿಟಿಯಲ್ಲಿ ಹೆಚ್ಚಾಗುತ್ತಿರುವ ಸಂಚಾರ ದಟ್ಟನೆಗೆ ಬ್ರೇಕ್ ಹಾಕಲು ಸರ್ಕಾರ ಮಾರುಕಟ್ಟೆ ಸ್ಥಳಾಂತರಕ್ಕೆ ಮುಂದಾಗಿದೆ. ಆದರೆ, ಇದಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಳ್ಳಾರಿ

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Dr Vinayaka Prasanna: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ(50) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

VISTARANEWS.COM


on

Dr Vinayaka Prasanna passed away
Koo

ಬಳ್ಳಾರಿ: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ (50) (Dr Vinayaka Prasanna) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಡಾ‌. ವನಜ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ. ಇವರ ಪಾರ್ಥಿವ ಶರೀರವನ್ನು ಗುರುವಾರ ಸಂಜೆ 6 ಗಂಟೆಗೆ ಬಳ್ಳಾರಿಗೆ ತರಲಾಗುತ್ತದೆ. ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರೊ. ಡಾ.ವಿನಾಯಕ ಪ್ರಸನ್ನ ಅವರ ನಿಧನಕ್ಕೆ ವಿಮ್ಸ್ ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

Continue Reading

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಕರ್ನಾಟಕ

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Lok Sabha Election 2024: ಕಳಸಾ-ಬಂಡೂರಿ ಮತ್ತು ಮಹಾದಾಯಿ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುವ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ತಮ್ಮ ಚುನಾವಣಾ ಪ್ರಚಾರಕ್ಕೆ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಸಚಿವ ಸಂತೋಷ್‌ ಲಾಡ್‌ ಆರೋಪಿಸಿದ್ದಾರೆ.

VISTARANEWS.COM


on

Minister Santosh Lad latest statement in Dharwad
Koo

ಧಾರವಾಡ: ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಾದ ಕಳಸಾ-ಬಂಡೂರಿ (Kalasa-Banduri) ಮತ್ತು ಮಹಾದಾಯಿ (Mahadayi) ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ತಮ್ಮ ಚುನಾವಣಾ (Lok Sabha Election 2024) ಪ್ರಚಾರಕ್ಕೆ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಆರೋಪಿಸಿದ್ದಾರೆ.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕನಾಥ ಶಿಂಧೆ ಅವರನ್ನು ತಮ್ಮ ಪರ ಪ್ರಚಾರ ಮಾಡಲು ಪ್ರಲ್ಹಾದ್‌ ಜೋಶಿ ಕರೆಸಿದ್ದಾರೆ. ಅವರು ಜೋಶಿ ಪರವಾಗಿ ಮತ ಕೇಳುತ್ತಿದ್ದಾರೆ. ಶಿಂಧೆ ಅವರನ್ನು ಕರೆಸಿದ್ದರ ಬಗ್ಗೆ ಜನರೇ ಪ್ರಶ್ನೆ ಮಾಡಬೇಕು. ಕನ್ನಡ ನಾಡಿನ ಯೋಜನೆಗೆ ಅಡ್ಡಗಾಲು ಹಾಕುವ ಶಿಂಧೆ ಕರೆಸಿ, ಕರ್ನಾಟಕಕ್ಕೆ ಅಪಮಾನ ಮಾಡಿದ್ದಾರೆ ಎಂದು ಅವರು ದೂರಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈ ಹಿಂದೆ ರಾಜ್ಯದಲ್ಲೂ ಬಿಜೆಪಿ ಸರ್ಕಾರವಿತ್ತು. ಆದರೂ ಕಳಸಾ ಬಂಡೂರಿ ಮತ್ತು ಮಹಾದಾಯಿ ಯೋಜನೆಗಳನ್ನು ಏಕೆ ಜೋಶಿ ಅವರು ಸಾಕಾರ ಮಾಡಲಿಲ್ಲ. ಇದನ್ನು ಬಿಟ್ಟು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ದೂರುತ್ತಾರೆ. ಜೋಶಿ ಅವರು ಈ ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

Continue Reading

ವಿಜಯನಗರ

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

Lok Sabha Election 2024: ಹೊಸಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗುರುವಾರ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Voting Awareness for Passengers at Hosapete Railway Station
Koo

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗುರುವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ (Lok Sabha Election 2024) ಜರುಗಿತು. ನಗರಸಭೆಯ ಪೌರಾಯುಕ್ತ ಚಂದ್ರಪ್ಪ ಮತದಾನದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೇ 07ರಂದು ನಡೆಯುವ ಲೋಕಸಭಾ ಚುನಾವಣೆಗೆ ಎಲ್ಲ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: KL Rahul : ವಿಶ್ವ ಕಪ್​ ತಂಡದಲ್ಲಿ ರಾಹುಲ್​ಗೆ ಸ್ಥಾನ ನೀಡದಿರುವ ಬಗ್ಗೆ ಸ್ಪಷ್ಟನೆ ನೀಡಿದ ಆಯ್ಕೆಗಾರ ಅಜಿತ್ ಅಗರ್ಕರ್​​

ಹೊಸಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಮಾತನಾಡಿ, ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ವಿಜಯನಗರ ಜಿಲ್ಲೆಯ ಶೇಕಡಾವಾರು ಮತದಾನ ಪ್ರಮಾಣವು ಹೆಚ್ಚಳವಾಗಬೇಕು. ಈ ನಿಟ್ಟಿನಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರಿಗೂ ಪ್ರೇರೇಪಣೆಯಾಗಬೇಕು ಎಂದು ಸ್ವೀಪ್ ಕಾರ್ಯಕ್ರಮಗಳನ್ನು ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ವಿಜಯನಗರ ಜಿಲ್ಲೆಯ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾ ಅಧಿಕಾರಿ ಜೆ.ಎಂ. ಅನ್ನದಾನಸ್ವಾಮಿ, ಎಲ್ಲರಿಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ, ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.

ಆಟೋ ಚಾಲಕರಿಗೂ ಜಾಗೃತಿ

ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಸಂದರ್ಭದಲ್ಲಿ ಅಲ್ಲಿನ ಆಟೋ ಚಾಲಕರಿಗೂ ಸಹ ಮತದಾನ ಜಾಗೃತಿ ಮೂಡಿಸಲಾಯಿತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ಅಂದಾಜು ಮೌಲ್ಯಮಾಪನಾ ಅಧಿಕಾರಿ ಪತ್ರಿಬಸಪ್ಪ ಎನ್.ಕೆ., ಅಧೀಕ್ಷಕ ಲೋಕೇಶ್ ಬಾಬು, ಜಿಲ್ಲಾ ಐಇಸಿ ಫಾಜಿಲ್, ತಾಲೂಕು ಐಇಸಿ ನಾಗರಾಜ, ನಗರಸಭೆ ಅಭಿಯಂತರರಾದ ಆರತಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading
Advertisement
Tax Returns
ಪ್ರಮುಖ ಸುದ್ದಿ5 mins ago

Tax Returns: ಟ್ಯಾಕ್ಸ್‌ ರಿಟರ್ನ್ಸ್‌ ಸಲ್ಲಿಸದ 5 ಲಕ್ಷ ಜನರ ಸಿಮ್‌ ಕಾರ್ಡ್‌ ಶೀಘ್ರವೇ ಬಂದ್!

Dr Vinayaka Prasanna passed away
ಬಳ್ಳಾರಿ27 mins ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ29 mins ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ32 mins ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ33 mins ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ35 mins ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Yakshagana performance for voting awareness in Uttara Kannada district on May 4
ಉತ್ತರ ಕನ್ನಡ36 mins ago

Lok Sabha Election 2024: ಉ.ಕ. ಜಿಲ್ಲೆಯಲ್ಲಿ ಮತದಾನ ಜಾಗೃತಿಗಾಗಿ ಮೇ 4 ರಂದು ಯಕ್ಷಗಾನ

Reliance Retail Tira Beauty launch new brand Nails Our Way
ದೇಶ37 mins ago

Reliance Retail: ರಿಲಯನ್ಸ್ ರಿಟೇಲ್‌ನ ಟಿರಾ ಬ್ಯೂಟಿಯಿಂದ ಹೊಸ ಬ್ರ್ಯಾಂಡ್ ‘ನೈಲ್ಸ್ ಅವರ್ ವೇ’ ಅನಾವರಣ

M S Dhoni
ಪ್ರಮುಖ ಸುದ್ದಿ41 mins ago

M S Dhoni : ಧೋನಿಯನ್ನು ರನ್​ಔಟ್ ಮಾಡಿದ ಜಿತೇಶ್​ ಶರ್ಮಾ ನಿಂದಿಸಿದ ಅಭಿಮಾನಿಗಳು!

Rahul Gandhi
ದೇಶ57 mins ago

Rahul Gandhi: ಅಮೇಥಿಯಿಂದ ರಾಹುಲ್‌ ಗಾಂಧಿ, ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಲ್ಲ; ಯಾರಿಗೆ ಮಣೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ16 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌