Assault Case: ದೇವಸ್ಥಾನ ಪ್ರವೇಶ; ದಲಿತ ಸಮುದಾಯಕ್ಕೆ ಸೇರಿದ ತಾಯಿ, ಮಗನ ಮೇಲೆ ಹಲ್ಲೆ - Vistara News

ಕರ್ನಾಟಕ

Assault Case: ದೇವಸ್ಥಾನ ಪ್ರವೇಶ; ದಲಿತ ಸಮುದಾಯಕ್ಕೆ ಸೇರಿದ ತಾಯಿ, ಮಗನ ಮೇಲೆ ಹಲ್ಲೆ

Assault Case: ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ದೇಗುಲ ಪ್ರವೇಶ ಮಾಡಿದ್ದಕ್ಕೆ ತಾಯಿ ಮಗನ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Dalit mother, son attacked for entering temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ದೇವಾಲಯಕ್ಕೆ ಪ್ರವೇಶ ಮಾಡಿದ ಹಿನ್ನೆಲೆಯಲ್ಲಿ ದಲಿತ ಸಮುದಾಯದ ತಾಯಿ, ಮಗನ ಮೇಲೆ ಹಲ್ಲೆ (Assault Case) ನಡೆಸಿರುವ ಘಟನೆ ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಯಿ ಹೆಮ್ಮವ್ವ ಮಲ್ಲಾಡದ, ಪುತ್ರ ರಮೇಶ್ ಹಲ್ಲೆಗೊಳಗಾದವರು. ಕಳೆದ ಎರಡು ದಿನಗಳ ಹಿಂದೆ ನಂದಿಹಳ್ಳಿ ಜಾತ್ರಾ ಮಹೋತ್ಸವ ನಡೆದಿತ್ತು. ಈ ವೇಳೆ ಬಸವೇಶ್ವರ ದೇವಾಲಯಕ್ಕೆ ಹೋಗಲು ಮುಂದಾದಾಗ ದಲಿತ ಸಮುದಾಯದ ತಾಯಿ, ಮಗನನ್ನು ಮೇಲ್ವರ್ಗದ ಜನರು ಪ್ರವೇಶ ದ್ವಾರದಲ್ಲೇ ತಡೆದು ಎಚ್ಚರಿಕೆ ನೀಡಿದ್ದಾರೆ. ಆದರೆ, ತಾಯಿ, ಮಗ ದೇವಸ್ಥಾನ ಪ್ರವೇಶ ಮಾಡಿದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ | Theft Case: ಕೋಲಾರದಲ್ಲಿ ದೇವರಿಗೆ ಕನ್ನ ಹಾಕಿದ ಖದೀಮರು; ಉಡುಪಿಯಲ್ಲಿ ಮನೆಗಳ್ಳರ ಬಂಧನ

ದೇಗುಲ ಪ್ರವೇಶ ಮಾಡಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ ಮಾಡಿ ಮನೆ ಹೆಂಚು, ಬೈಕ್ ಜಖಂಗೊಳಿಸಿ ದೌರ್ಜನ್ಯ ಮಾಡಲಾಗಿದೆ ಎಂದು ಹಲ್ಲೆಗೊಳಗಾದವರು ಸುಮಾರು 30 ಜನರ ವಿರುದ್ಧ ಹಲಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

PGCET 2024 : ಪಿಜಿಸಿಇಟಿಯ ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನವಾಗಿದೆ ಎಂದು ಕೆಇಎ ಮಾಹಿತಿ ನೀಡಿದೆ.

VISTARANEWS.COM


on

By

PGCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಎಂಬಿಎ/ ಎಂಸಿಎ / ಎಂಇ / ಎಂ.ಟೆಕ್ / ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಈಗಾಗಲೇ ಅಭ್ಯರ್ಥಿಗಳು (PGCET 2024) ಅರ್ಜಿಯನ್ನು ಸಲ್ಲಿಸಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸಲು, ಪರೀಕ್ಷಾ ಕೇಂದ್ರಗಳನ್ನು ನಮೂದಿಸಲು ಹಾಗೂ ಅರ್ಜಿಯಲ್ಲಿನ ಮಾಹಿತಿಯನ್ನು ತಿದ್ದುಪಡಿ ಮಾಡಲು ಜೂನ್ 24ರ ಸಂಜೆ 6ರವರೆಗೆ ಅವಕಾಶ ನೀಡಲಾಗಿದೆ.

ಈ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಮಾಹಿತಿ ನೀಡಿದ್ದಾರೆ. ಈ ಮೇಲಿನ ಕಾರ್ಯಗಳನ್ನು ಮಾಡಲು ಅನುಕೂಲವಾಗುವಂತೆ ಪೋರ್ಟಲ್ ಅನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸದೆ ಇರುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Actor Darshan: 12 ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿ ನಾಲ್ವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಅವರಿಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಸೇರಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹನ್ನೆರಡು ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್, ವಿನಯ್, ಪ್ರದೋಶ್ ಮತ್ತು ಧನರಾಜ್‌ನನ್ನು 24ನೇ ಎಸಿಎಂಎಂ ಕೋರ್ಟ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ. ಇದರಿಂದ 13 ವರ್ಷಗಳ ನಂತರ ನಟ ದರ್ಶನ್ ಮತ್ತೆ‌ ಜೈಲು ಸೇರುವಂತಾಗಿದೆ.

ರಾಜ್ಯ ಸರ್ಕಾರದ ಪರ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ವಿಚಾರಣೆ ವೇಳೆ ನಿಮಗೆ ಕಸ್ಟಡಿಯಲ್ಲಿ ಏನಾದರೂ ತೊಂದರೆ ಆಯ್ತಾ ಎಂದು ಆರೋಪಿಗಳನ್ನು ಜಡ್ಜ್‌ ಪ್ರಶ್ನಿಸಿದರು. ಇಲ್ಲ ಸ್ವಾಮಿ, ಯಾವುದೇ ತೊಂದರೆ ಆಗಿಲ್ಲ ಎಂದು ಆರೋಪಿಗಳು ಉತ್ತರಿಸಿದರು. ನಂತರ ರಿಮ್ಯಾಂಡ್ ಅರ್ಜಿಯನ್ನು ಎಸ್‌ಪಿಪಿ ಪ್ರಸನ್ನ ಕುಮಾರ್ ನೀಡಿದರು. ಈ ಹಿಂದೆ ರಂಗನಾಥ್ ರೆಡ್ಡಿ ದರ್ಶನ್ ಪರ ವಕೀಲರಾಗಿದ್ದರು, ಈಗ ಪ್ರವೀಣ್ ತಿಮ್ಮಯ್ಯ ಹೊಸದಾಗಿ ವಕಾಲತ್ತು ವಹಿಸಿದ್ದರು.

ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿರೋದಕ್ಕೆ ಸೂಕ್ತ ಸಾಕ್ಷ್ಯಗಳಿವೆ. ಈ ನಾಲ್ಕು ಮಂದಿ ರೇಣುಕಾಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ. ಇವರಿಗೆ ನೆಲದ ಕಾನೂನಿನ ಮೇಲೆ ಕಿಂಚಿತ್ತು ಗೌರವ ಇಲ್ಲ. ಎ1 ಪ್ರಚೋದನೆಗೆ ದರ್ಶನ್ ಮತ್ತು ಟೀಂ ಒಳಗಾಗಿ ಕೃತ್ಯ ಮಾಡಿದೆ. ಎಲ್ಲರಿಗೂ ಕೊಲ್ಲುವ ಸಮಾನ ಉದ್ದೇಶವೂ ಕಂಡು ಬಂದಿದೆ. ಅದಕ್ಕಾಗಿ ಲಕ್ಷಾಂತರ ರೂಪಾಯಿನ್ನು ಬಳಕೆ ಮಾಡಿದ್ದಾರೆ ಎಂದು ರಿಮ್ಯಾಂಡ್‌ ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಜಡ್ಜ್‌ ಆದೇಶ ನೀಡಿದರು.

ಕೊಲೆ ಕೇಸ್ ಸಂಬಂಧ ಜೂನ್ 11ರಂದು ದರ್ಶನ್‌ ಬಂಧನವಾಗಿತ್ತು. ಮೂರು ಬಾರಿ ದರ್ಶನ್‌ರನ್ನು ಪೊಲೀಸ್ ಕಸ್ಟಡಿಗೆ (12 ದಿನ) ಪಡೆಯಲಾಗಿತ್ತು. ಇದೀಗ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.

2011ರಲ್ಲಿ ಪತ್ನಿ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ‌ ನಟ‌ ದರ್ಶನ್ ಜೈಲು ಸೇರಿದ್ದರು. ಇದೀಗ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನವಾಗಿದ್ದರಿಂದ ಎರಡನೇ ಬಾರಿಗೆ ನಟ ಜೈಲು ಸೇರುತ್ತಿದ್ದಾರೆ.

ಇದನ್ನೂ ಓದಿ | Actor Darshan: ದರ್ಶನ್‌ ತುಂಬ ಮುಗ್ದ, ತಾಯಿ ಕಣ್ಣೀರು ಹಾಕೊಂಡು ಮಗನನ್ನು ಬೆಳೆಸಬೇಕು ಎಂದಿದ್ರು ಎಂದ ಲಹರಿ ವೇಲು!

ಕಸ್ಟಡಿಯಲ್ಲಿ ಎಲ್ಲ 17 ಆರೋಪಿಗಳ ವಿಚಾರಣೆ ಮಾಡಿದ್ದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು, ಆರೋಪಿಗಳ ಹೇಳಿಕೆ ದಾಖಲಿಸಿಕೊಂಡಿದ್ದರು. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ, ಸಾಕ್ಷ್ಯ ಸಂಗ್ರಹ ಮಾಡಿದ್ದಾರೆ.

ಆರ್. ಆರ್. ನಗರ ಶೆಡ್ ಬಳಿ ಸಿಸಿಟಿವಿ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಿಸಿಟಿವಿ ಫುಟೇಜ್ ಸಂಗ್ರಹಿಸಿ, ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಇನ್ನು ಈ ಕುರಿತು ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ನಿತರರ ಹೇಳಿಕೆಯನ್ನೂ ದಾಖಲಿಸಲಾಗಿದೆ.

ಇದನ್ನೂ ಓದಿ | Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸಿದ್ದು, ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನೆ ಮಾಡಲಾಗಿದೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ಹಾಗೂ ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ನಡೆಸಲಾಗುತ್ತಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ.

Continue Reading

ಪ್ರಮುಖ ಸುದ್ದಿ

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Swamji Murder : ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆ ಕ್ರಾಸ್ ಬಳಿ ಇರುವ ಆನಂದ ಮಾರ್ಗ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಕೊಲೆನಡೆದಿದೆ. ಧರ್ಮಪ್ರಾಣಾನಂದ ಸ್ವಾಮಿ, ಪ್ರಸನ್ನೇಶ್ವರನಂದ ಸ್ವಾಮಿ ಹಾಗೂ ಅರುಣ್ ಕುಮಾರ್ ಕೊಲೆ ಆರೋಪಿಗಳು. ಘಟನೆ ಬಳಿಕ ಅವರು ಪರಾರಿಯಾಗಿದ್ದಾರೆ.

VISTARANEWS.COM


on

Swamji Murder
Koo

ಕೋಲಾರ: ಆಸ್ತಿ ಮತ್ತು ಅಧಿಕಾರಕ್ಕಾಗಿ ಸ್ವಾಮೀಜಿಗಳ ನಡುವೆ ನಡೆಯುತ್ತಿದ್ದ ಗಲಾಟೆಯೊಂದು ಸ್ವಾಮೀಜಿಯೊಬ್ಬರ ಕೊಲೆಯಲ್ಲಿ (Swamji Murder) ಅಂತ್ಯಗೊಂಡಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಆನಂದ ಮಾರ್ಗ ಆಶ್ರಮದಲ್ಲಿ ಶನಿವಾರ ಈ ಘಟನೆ ನಡೆದಿದೆ. 65 ವರ್ಷದ ಚಿನ್ಮಯಾನಂದ ಸ್ವಾಮೀಜಿ ಮೃತಪಟ್ಟವರು. ಅವರನ್ನು ಸ್ವಾಮೀಜಿಗಳ ಗುಂಪೊಂದು ಬೆನ್ನಟ್ಟಿ ದೊಣ್ಣೆ ಹಾಗೂ ಬಡಿಗೆಗಳಿಂದ ಹೊಡೆದು ಕೊಲೆ ಮಾಡಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆ ಕ್ರಾಸ್ ಬಳಿ ಇರುವ ಆನಂದ ಮಾರ್ಗ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಕೊಲೆನಡೆದಿದೆ. ಧರ್ಮಪ್ರಾಣಾನಂದ ಸ್ವಾಮಿ, ಪ್ರಸನ್ನೇಶ್ವರನಂದ ಸ್ವಾಮಿ ಹಾಗೂ ಅರುಣ್ ಕುಮಾರ್ ಕೊಲೆ ಆರೋಪಿಗಳು. ಘಟನೆ ಬಳಿಕ ಅವರು ಪರಾರಿಯಾಗಿದ್ದಾರೆ. ಆಶ್ರಮದ ಆಸ್ತಿ ಹಾಗೂ ಅಧಿಕಾರಕ್ಕಾಗಿ ಕೊಲೆಯಾದ ಸ್ವಾಮೀಜಿ ಹಾಗೂ ಕೊಲೆ ಮಾಡಿರುವ ಗುಂಪಿನ ನಡುವೆ ಸುಮಾರು ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿದೆ. ಕಳೆದ ಹತ್ತು ವರ್ಷಗಳ ಹಿಂದೆ ಮೃತ ಸ್ವಾಮೀಜಿಯ ಮೇಲೆ ಗುಂಡಿನ ದಾಳಿಯೂ ನಡೆದಿತ್ತು. ಈ ವೇಳೆ ಅವರು ಪಾರಾಗಿದ್ದಾರೆ. ಶನಿವಾರ ಅವರು ಒಪ್ಪರೇ ಇರುವ ಸಮಯದಲ್ಲಿ ದಾಳಿ ಮಾಡಿದ ಆರೋಪಿಗಳು ಗಂಭೀರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮೆರೆಸಿಕೊಂಡಿರುವ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

ಹಾವೇರಿಯಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನೇ ಕೊಂದ ವೃದ್ಧ

ಹಾವೇರಿ: ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಈ ಮಾತಿಗೆ ತದ್ವಿರುದ್ಧ ಎಂಬಂತೆ ಸಣ್ಣದಾಗಿ ಶುರುವಾದ ಜಗಳವು ವಿಕೋಪಕ್ಕೆ ತಿರುಗಿದ್ದು, ವೃದ್ಧರೊಬ್ಬರು ತಮ್ಮ ಪತ್ನಿಯನ್ನು ದೊಣ್ಣೆಯಿಂದ ಹೊಡೆದು (Murder case) ಕೊಂದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶಿವಪುರದಲ್ಲಿ ಘಟನೆ ನಡೆದಿದೆ.

ಪತಿ-ಪತ್ನಿ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ. ನಾಗವ್ವ (58) ಪತಿಯಿಂದಲೇ ಕೊಲೆಯಾದವರು. ಶೇಖಪ್ಪ (60) ಪತ್ನಿಯನ್ನೇ ಕೊಂದ ಆರೋಪಿಯಾಗಿದ್ದಾರೆ. ಕಳೆದ ರಾತ್ರಿ ನಾಗವ್ವ ಹಾಗೂ ಶೇಖಪ್ಪ ನಡುವೆ ಜಗಳ ನಡೆದಿತ್ತು. ಜಗಳ ವಿಕೋಪಕ್ಕೆ ತಿರುಗಿದ್ದು ಸಿಟ್ಟಿನಲ್ಲಿ ಶೇಖಪ್ಪ ಮನೆಯಲ್ಲಿದ್ದ ದೊಣ್ಣೆಯಿಂದ ನಾಗವ್ವಳ ತಲೆಗೆ ಹೊಡೆದಿದ್ದಾರೆ. ಒಂದೇ ಏಟಿಗೆ ಕುಸಿದು ಬಿದ್ದ ನಾಗವ್ವ ತೀವ್ರ ರಕ್ತಸ್ರಾವವಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಹಾನಗಲ್ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಾನಗಲ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಆರೋಪಿ ಶೇಖಪ್ಪನನ್ನು ಪೊಲೀಸರು ಬಂಧಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ತಂದೆಯನ್ನೇ ಕೊಂದ ಅಪ್ರಾಪ್ತ ಮಗ

ಮಗನೊಬ್ಬ ತನ್ನ ತಂದೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನ ಅರಬಿಳಚಿ ಗ್ರಾಮದಲ್ಲಿ ನಡೆದಿದೆ. ಸುಕ್ ರಾಜ್(53) ಕೊಲೆಯಾದವರು.

ಸುಕ್‌ ರಾಜ್‌ ಟ್ರ್ಯಾಕ್ಟರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಸುಕ್‌ ರಾಜ್‌ ತಮ್ಮ ಪತ್ನಿ ಜತೆಗೆ ಜಗಳವಾಡಿದ್ದರು. ಜಗಳ ವಿಚಾರಕ್ಕೆ ಸಿಟ್ಟಾ ಮಗ ತಂದೆಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಗಾಂಜಾ ಸೇವಿಸಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading

ಬೆಳಗಾವಿ

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Child Trafficking : ಯುವತಿಯೊಬ್ಬಳು ಮದುವೆಗೂ ಮುನ್ನವೇ ಗರ್ಭ ಧರಿಸಿದ್ದಳು. ನಕಲಿ ವೈದ್ಯನೊಬ್ಬ ಹಣದಾಸೆಗೆ ಆಪರೇಷನ್ ಮಾಡಿ, ಕೆಲ ದಿನಗಳ ಕಾಲ ಶಿಶುವನ್ನು ತನ್ನಲ್ಲಿರಿಸಿಕೊಂಡು ಪೋಷಿಸಿ ಮಾರಾಟ (Child Death) ಮಾಡಿದ್ದ. ಆದರೆ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಣೆಯಾಗಿದ್ದ ಆ ಮಗು ಮೃತಪಟ್ಟಿದೆ.

VISTARANEWS.COM


on

By

Child Death
Koo

ಬೆಳಗಾವಿ: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಣೆಯಾಗಿದ್ದ ಮಗುವೊಂದು (Child Death) ಮೃತಪಟ್ಟಿದೆ. ತಡರಾತ್ರಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹಸುಳೆ ಜೀವ ಬಿಟ್ಟಿದೆ. 30 ದಿನದ ಹೆಣ್ಣು ಮಗುವನ್ನು ಕೇವಲ 60 ಸಾವಿರ ರೂ.ಗೆ ನಕಲಿ ವೈದ್ಯನೊಬ್ಬ ಮಾರಾಟ (Child Trafficking) ಮಾಡಿದ್ದ.

ಅಬ್ದುಲ್ ಗಫಾರ್ ಲಾಡಖಾಕ್‌ ಎಂಬಾತ ನರ್ಸ್ ಮಹಾದೇವಿ ಎಂಬಾಕೆಗೆ ಮಗುವನ್ನು ಮಾರಾಟ ಮಾಡಿದ್ದ. ಮಗು ಪಡೆದು ಬೆಳಗಾವಿಯಲ್ಲಿ ಮಾರಾಟ ಮಾಡುವಾಗ ಮಹಾದೇವಿ ಸಿಕ್ಕಿ ಬಿದ್ದಿದ್ದಳು. ಈ ವೇಳೆ ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆಯಲ್ಲಿ ಆರೈಕೆಗೆಂದು ಇರಿಸಲಾಗಿತ್ತು. ಆದರೆ ಬೆಳವಣಿಗೆ ಕುಂಠಿತ ಹಾಗೂ ತೂಕ ಹೆಚ್ಚಳವಾಗದೆ ಅನಾರೋಗ್ಯದಿಂದ ತಿಂಗಳ ಕೂಸು ಮೃತಪಟ್ಟಿದೆ.

ಇನ್ನೂ ಪೊಲೀಸರು ಹಾಗೂ ಮಗುವಿನ ತಂದೆ- ತಾಯಿ ಸಮ್ಮುಖದಲ್ಲಿ ಸಂಪ್ರದಾಯದಂತೆ ಸದಾಶಿವ ನಗರದ ರುಧ್ರಭೂಮಿಯಲ್ಲಿ ಸಂಸ್ಕಾರ ಮಾಡಿದ್ದರು. ತಾವೇ ತಮ್ಮ ಕೈಯಿಂದ ಹಣ ಹಾಕಿ ಮಗುವಿನ ಅಂತ್ಯ ಸಂಸ್ಕಾರವನ್ನು ಮಾಳಮಾರುತಿ ಪೊಲೀಸರು ನೆರವೇರಿಸಿದ್ದಾರೆ.

ಯುವತಿಯೊಬ್ಬಳು ಮದುವೆಗೂ ಮುನ್ನವೇ ಗರ್ಭ ಧರಿಸಿದ್ದಳು. ಆದಾಗಲೇ ಶಿಶುವಿಗೆ 7 ತಿಂಗಳಾಗಿತ್ತು. ಆಕೆಯಿದ್ದ 20 ಸಾವಿರ ರೂ. ಹಣ ಪಡೆದ ನಕಲಿ ವೈದ್ಯ ಆಪರೇಷನ್ ಮಾಡಿದ್ದ. ಕೆಲ ದಿನಗಳ ಕಾಲ ಶಿಶುವನ್ನು ತನ್ನಲ್ಲಿರಿಸಿಕೊಂಡು ಪೋಷಿಸಿ ನಂತರ ಮಗುವನ್ನು ಮಾರಾಟ ಮಾಡಿದ್ದ. ಆದರೆ ನಕಲಿ ವೈದ್ಯ ಹಾಗೂ ಮಾರಾಟ ಜಾಲದ ಹಣದಾಸೆಗೆ ಕಂದಮ್ಮವೊಂದು ಬಲಿಯಾಗಿದ್ದು ದುರಂತ.

ಇದನ್ನೂ ಓದಿ: Viral Video: ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

ಭ್ರೂಣಹತ್ಯೆ ಮಾಡಿದ್ದ ನಕಲಿ ವೈದ್ಯ

ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿತ್ತು. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿತ್ತು. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಇನ್ನೂ ಭ್ರೂಣಗಳನ್ನು ಹೂಳುತ್ತಿದ್ದ ಸಹಾಯಕ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಕ್ರೀಡೆ10 mins ago

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

PGCET 2024
ಶಿಕ್ಷಣ10 mins ago

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

The Lion King 30 years influence on fans and actors
ಬಾಲಿವುಡ್11 mins ago

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

Viral Video
ವೈರಲ್ ನ್ಯೂಸ್15 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ18 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ19 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ35 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ41 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್59 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ1 hour ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌