Viral News : ಭಾವನೆ ಹಂಚಿಕೊಳ್ಳುವುದಕ್ಕೆ, ಮುಚ್ಚಿಡುವುದಕ್ಕೆ ಬಳಕೆಯಾಗುತ್ತಿದೆ ಇಮೋಜಿ; ಸಮೀಕ್ಷಾ ವರದಿ - Vistara News

ವೈರಲ್ ನ್ಯೂಸ್

Viral News : ಭಾವನೆ ಹಂಚಿಕೊಳ್ಳುವುದಕ್ಕೆ, ಮುಚ್ಚಿಡುವುದಕ್ಕೆ ಬಳಕೆಯಾಗುತ್ತಿದೆ ಇಮೋಜಿ; ಸಮೀಕ್ಷಾ ವರದಿ

ಮನುಷ್ಯರು ತಮ್ಮ ಭಾವನೆಗಳನ್ನು ಮುಚ್ಚಿಡುವುದಕ್ಕೆ ಮತ್ತು ಭಾವನೆಗಳನ್ನು ವ್ಯಕ್ತ ಪಡಿಸುವುದಕ್ಕೆ ಹೆಚ್ಚಾಗಿ ಇಮೋಜಿಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದು ಸಮೀಕ್ಷೆಯೊಂದರ ವರದಿಯಿಂದ (Viral News) ತಿಳಿದುಬಂದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಟೋಕಿಯೋ: ಇತ್ತೀಚಿನ ದಿನಗಳಲ್ಲಿ ಜನರು ನೇರ ಭೇಟಿ ಮಾಡಿ ಮಾತನಾಡುವುದಾಗಲಿ ಅಥವಾ ಕರೆ ಮಾಡಿ ಮಾತನಾಡುವುದಾಗಲಿ ಕಡಿಮೆಯಾಗಿದೆ. ಎಲ್ಲವೂ ಮೊಬೈಲ್‌ ಫೋನ್‌ನಲ್ಲೇ ನಡೆಯುತ್ತದೆ. ಒಂದು ಮೆಸೇಜ್‌ನಲ್ಲೇ ಎಲ್ಲವೂ ಮುಗಿದುಬಿಡುತ್ತದೆ. ಹೀಗಿರುವ ಯಾಂತ್ರಿಕ ಸಮಾಜದಲ್ಲಿ ಜನರು ತಮ್ಮ ಭಾವನೆಗಳನ್ನು ಮುಚ್ಚಿಡುವುದಕ್ಕೆ ಮತ್ತು ಭಾವನೆಯನ್ನು ಹಂಚಿಕೊಳ್ಳುವುದಕ್ಕೆ ಹೆಚ್ಚಾಗಿ ಇಮೋಜಿಗಳನ್ನು ಬಳಸುತ್ತಾರೆ ಎನ್ನುವ ಅಂಶ ಸಮೀಕ್ಷೆಯೊಂದರಿಂದ (Viral News) ತಿಳಿದುಬಂದಿದೆ.

ಇದನ್ನೂ ಓದಿ: Kangana Ranaut : ಕಿಯಾರಾ-ಸಿದ್ಧಾರ್ಥ್​​ ಜೋಡಿ ಬಗ್ಗೆ ಇನ್​ಸ್ಟಾಗ್ರಾಂ ಸ್ಟೋರಿ ಹಾಕಿದ ಕಂಗನಾ ರಣಾವತ್‌
ಜಪಾನ್‌ನ ಟೋಕಿಯೊ ವಿಶ್ವವಿದ್ಯಾಲಯದ ಮೊಯು ಲಿಯು ಅವರು ಈ ರೀತಿಯ ಸಮೀಕ್ಷೆಯನ್ನು ನಡೆಸಿದ್ದಾರೆ. ಅವರು ಮೊಬೈಲ್‌ ಚಾಟಿಂಗ್‌ ಅನ್ನು ಬಳಸುವ 1,289 ಜನರನ್ನು ಸಮೀಕ್ಷೆಗೆ ಬಳಸಿಕೊಂಡಿದ್ದಾರೆ. ಅವರುಗಳಿಗೆ ಒಂದಿಷ್ಟು ಸಂದೇಶಗಳನ್ನು ಕಳುಹಿಸಲಾಗಿದ್ದು, ಅದಕ್ಕೆ ತಾವು ಸಾಮಾನ್ಯವಾಗಿ ಪ್ರತಿಕ್ರಿಯಿಸುವಂತೆ ಪ್ರತಿಕ್ರಿಯಿಸಲು ತಿಳಿಸಲಾಗಿದೆ.

ಈ ಸಮೀಕ್ಷೆಯಲ್ಲಿ ಜನರು ತಮ್ಮೊಂದಿಗೆ ಹೆಚ್ಚು ಆಪ್ತವಾಗಿರುವವರಿಗೆ ಮಾತ್ರ ಹೆಚ್ಚು ಇಮೋಜಿಗಳನ್ನು ಕಳುಹಿಸಿರುವುದು ತಿಳಿದುಬಂದಿದೆ. ಉನ್ನತ ಮಟ್ಟದ ಜನರೊಂದಿಗೆ ಅಥವಾ ಹೆಚ್ಚು ಆಪ್ತರಲ್ಲದವರೊಂದಿಗೆ ಇಮೋಜಿ ಬಳಕೆ ಕಡಿಮೆ ಇರುವುದು ಗೊತ್ತಾಗಿದೆ. ಹಾಗೆಯೇ ಜನರು ಅತಿ ಹೆಚ್ಚು ನೋವುಂಟಾದಾಗ ಮಾತ್ರ ನೋವಿನ ಇಮೋಜಿಗಳನ್ನು ಕಳುಹಿಸುತ್ತಾರೆ. ಸ್ವಲ್ಪ ಸಂತೋಷಕ್ಕೂ ಕೂಡ ಸಂತೋಷದ ಇಮೋಜಿ ಕಳುಹಿಸಿಕೊಡುತ್ತಾರೆ ಎನ್ನುವ ಅಂಶ ತಿಳಿದುಬಂದಿದೆ.

ಇದನ್ನೂ ಓದಿ: Viral Video: ಲೋಹದ ಬೇಲಿಯನ್ನೇ ಮುರಿದು, ನುಗ್ಗಿತು ಬೃಹತ್ ಮೊಸಳೆ; ಇಷ್ಟೊಂದು ಶಕ್ತಿಶಾಲಿಯಾ ಈ ಸರೀಸೃಪ?!
ಈ ರೀತಿ ಇಮೋಜಿ ಬಳಕೆಯಿಂದ ಮನುಷ್ಯ ತನ್ನ ನೋವನ್ನು ಹೆಚ್ಚಾಗಿ ಮುಚ್ಚಿಡಲು ಬಯಸುತ್ತಾನೆ. ಇದು ಆತನಿಗೆ ಮಾನಸಿಕವಾಗಿ ನೋವುಂಟು ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಸಮೀಕ್ಷೆ ನಡೆಸಿರುವ ತಂಡ ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral Video: ಜಡಿ ಮಳೆಗೆ ಒದ್ದೆಯಾಗುತ್ತಲೇ ಓಡೋಡಿ ಬಂದು ಕಾರು ಹತ್ತಿದ ರೋಹಿತ್​, ದ್ರಾವಿಡ್​

Viral Video: ಬುಧವಾರ ಟೀಮ್​ ಇಂಡಿಯಾದ ಆಟಗಾರರೆಲ್ಲ ರನ್ನಿಂಗ್​ ಮತ್ತು ಫುಟ್ಬಾಲ್​ ಆಡುವ ಮೂಲಕ ಫಿಟ್​ನೆಸ್​ ತರಬೇತಿ ಪಡೆದಿದ್ದರು. ಇಂದಿನಿಂದ(ಗುರುವಾರ) ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ನಡೆಸಲಿದ್ದಾರೆ.

VISTARANEWS.COM


on

Viral Video
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​(T20 World Cup 2024) ಆಡುವ ಸಲುವಾಗಿ ನ್ಯೂಯಾರ್ಕ್​ನಲ್ಲಿರುವ(New York) ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರು ಜಡಿ ಮಳೆಯಲ್ಲಿಯೇ ಒದ್ದೆಯಾಗುತ್ತಾ ಓಡಿ ಹೋಗಿ ಕಾರು ಹತ್ತಿದ ವಿಡಿಯೊ ವೈರಲ್​(Viral Video) ಆಗಿದೆ. ರೆಸ್ಟೋರೆಂಟ್​ನಲ್ಲಿ ಡಿನ್ನರ್​ ಮುಗಿಸಿ ಹೊರ ಬರುವ ವೇಳೆ ಭಾರೀ ಮಳೆ ಸುರಿದಿದೆ. ಮಳೆಯನ್ನು ಕೂಡ ಲೆಕ್ಕಿಸದೆ ರೋಹಿತ್​ ಓಡಿ ಹೋಗಿ ಕಾರು ಹತ್ತಿದ್ದಾರೆ. ಇದರ ಹಿಂದೆಯೇ ದ್ರಾವಿಡ್​ ಕೂಡ ಓಡೋಡಿ ಬಂದು ಕಾರು ಹತ್ತಿದರು.

ಬುಧವಾರ ಟೀಮ್​ ಇಂಡಿಯಾದ ಆಟಗಾರರೆಲ್ಲ ರನ್ನಿಂಗ್​ ಮತ್ತು ಫುಟ್ಬಾಲ್​ ಆಡುವ ಮೂಲಕ ಫಿಟ್​ನೆಸ್​ ತರಬೇತಿ ಪಡೆದಿದ್ದರು. ಇಂದಿನಿಂದ(ಗುರುವಾರ) ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ನಡೆಸಲಿದ್ದಾರೆ. ಬಿಡುವಿನ ವೇಳೆ ಆಟಗಾರರು ನ್ಯೂಯಾರ್ಕ್​ ಸಿಟಿಗೆ ಒಂದು ರೌಂಡ್​ ಹಾಕಿದ್ದಾರೆ. ಇಲ್ಲಿನ ಕೆಲ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಫೋಟೊಗಳನ್ನು ಆಟಗಾರರು ತಮ್ಮ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಭಾರತೀಯ ಕ್ರಿಕೆಟ್​ ಅಭಿಮಾನಿಗಳು ನೂತನ ಜೆರ್ಸಿ ತೊಟ್ಟು ತಂಡ ಕಪ್​ ಗೆಲ್ಲಲಿ ಎಂದು ಹಾರೈಸಿದ್ದಾರೆ.


ವಿರಾಟ್​ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್​ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ
Continue Reading

ವೈರಲ್ ನ್ಯೂಸ್

Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

Viral Video: ಹಳಿಯಲ್ಲಿ ನಿಂತು ರಾಣಿ ಕಿಶೋರ್‌ ಜೊತೆ ವಾಗ್ವಾದ ನಡೆಸುತ್ತಾಳೆ. ಆಗ ಅದೇ ಹಳಿಯಲ್ಲಿ ರೈಲು ಬಂದಿದ್ದು, ರೈಲನ್ನು ನೋಡುತ್ತಿದ್ದಂತೆ ರಾಣಿ ಫ್ಲ್ಯಾಟ್‌ಫಾರ್ಮ್‌ಗೆ ಹತ್ತಲ್ಲು ಓಡಿ ಬಂದಿದ್ದಾಳೆ. ಆಗ ರೈಲಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗಿದೆ.

VISTARANEWS.COM


on

Viral Video
Koo

ಆಗ್ರಾ: ಸಣ್ಣ ಪುಟ್ಟ ಕೋಪ, ಜಗಳದಿಂದ ಮಾಡು ತಪ್ಪು ಎಂಥಾ ದೊಡ್ಡ ಅನಾಹುತವನ್ನು ತಂದೊಡ್ಡುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಬಾಯ್‌ಫ್ರೆಂಡ್‌ ಜೊತೆ ಜಗಳ ಮಾಡಿಕೊಂಡು ಸಾಯುತ್ತೇನೆ ಎಂದು ಹೆಸರಿಸಲು ರೈಲ್ವೇ ಹಳಿ(Railway Track)ಗಿಳಿದ್ದಿದ್ದ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಈ ಭೀಕರ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಸೋಶಿಯಲ್‌ ಮೀಡಿಯಾ(Social Media)ದಲ್ಲಿ ವೈರಲ್‌(Viral Video) ಆಗುತ್ತಿದೆ.

ಘಟನೆ ವಿವರ:

ಆಗ್ರಾದ ರಾಜಾ ಕಿ ಮಂಡಿ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು38 ವರ್ಷದ ರಾಣಿ ಎಂದು ಗುರುತಿಸಲಾಗಿದೆ. ಸ್ಟೇಷನ್‌ನಲ್ಲಿ ಕುಳಿತಿದ್ದ ರಾಣಿ ಮತ್ತು ಆಕೆಯ ಲಿವಿಂಗ್‌ ಪಾರ್ಟನರ್‌ ಕಿಶೋರ್‌ ನಡುವೆ ಯಾವುದೋ ವಿಚಾರಕ್ಕೆ ಜಗಳ ನಡೆಯುತ್ತದೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರುತ್ತದೆ. ಕೊನೆಗೆ ಕೋಪದ ಭರದಲ್ಲಿ ರೈಲ್ವೇ ಹಳಿಗೆ ಹಾರಿದ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಿಶೋರ್‌ಗೆ ಬೆದರಿಕೆಯೊಡ್ಡಿದ್ದಾಳೆ. ರಾಣಿ ಸುಮ್ಮನೆ ಹೆದರಿಸಲು ಈ ರೀತಿ ಮಾಡುತ್ತಿರುವುದು ಎಂದು ಆತನೂ ಕುಳಿತ ಜಾಗದಿಂದ ಕದಡಲಿಲ್ಲ.

ಹಳಿಯಲ್ಲಿ ನಿಂತು ರಾಣಿ ಕಿಶೋರ್‌ ಜೊತೆ ವಾಗ್ವಾದ ನಡೆಸುತ್ತಾಳೆ. ಆಗ ಅದೇ ಹಳಿಯಲ್ಲಿ ರೈಲು ಬಂದಿದ್ದು, ರೈಲನ್ನು ನೋಡುತ್ತಿದ್ದಂತೆ ರಾಣಿ ಫ್ಲ್ಯಾಟ್‌ಫಾರ್ಮ್‌ಗೆ ಹತ್ತಲ್ಲು ಓಡಿ ಬಂದಿದ್ದಾಳೆ. ಆಗ ರೈಲಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಗಾಯಗೊಂಡಿದ್ದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗಿದೆ. ಇನ್ನು ರಾಣಿ ಮತ್ತು ಕಿಶೋರ್‌ ಲಿವಿಂಗ್‌ ರಿಲೇಶನ್‌ಶಿಪ್‌ನಲ್ಲಿದ್ದು, ಲೋಹಾಮಂಡಿ ಪ್ರದೇಶದಲ್ಲಿ ವಾಸವಾಗಿದ್ದರು. ಕಿಶೋರ್‌ಗೆ ಕುಡಿಯುವ ಚಟ ಇರುವ ಕಾರಣ ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳ ಆಗುತ್ತಿರುತ್ತಿತ್ತು. ಸೋಮವಾರವೂ ಇದೇ ರೀತಿ ಜಗಳ ಆಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: Firecracker Explosion: ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಇನ್ನು ಕಿಶೋರ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆಕೆಯ ಮಾಜಿ ಪತಿ ಸಾವಿನ ಬಳಿಕ ರಾಣಿ ಬಹಳ ನೊಂದಿದ್ದಳು. ಅದೂ ಅಲ್ಲದೇ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದಳು ಎಂಬುದು ವಿಚಾರಣೆ ವೇಳೆ ಬಯಲಾಗಿದೆ.

Continue Reading

ವೈರಲ್ ನ್ಯೂಸ್

Viral Video: ಮುಂಬೈನ ಚಕಾಚಕ್‌ ʻರಜನೀಕಾಂತ್‌ʼ ಶೈಲಿಯ ದೋಸೆ ಈಗ ವೈರಲ್!‌

ಹಗಲು ರಾತ್ರಿಯೆನ್ನದೆ ಝಗಮಗಿಸುವ ಮುಂಬಯಿ ನಗರಿಯಲ್ಲಿ (Viral Video) ರಸ್ತೆಬದಿಯ ತಿಂಡಿಗಳಿಗೆ ಶ್ರೀಮಂತ ಬಡವರೆನ್ನದೆ ಎಲ್ಲರೂ ಮುಗಿ ಬೀಳುತ್ತಾರೆ. ಬೀದಿ ಬದಿಯ ಥರಹೇವಾರಿ ಚಾಟ್‌ಗಳೂ, ವಡಾಪಾವ್‌ಗಳೂ, ಸಮೋಸಾಗಳೂ, ದೋಸೆ, ಪರಾಠಾಗಳು ಹಲವರ ಹೊಟ್ಟೆಯನ್ನು ನಿತ್ಯವೂ ತುಂಬಿಸುತ್ತವೆ.

VISTARANEWS.COM


on

Viral Video
Koo

ಮುಂಬೈ ಎಂದರೆ ಹಲವು ಅಚ್ಚರಿಗಳ ಮಹಾನಗರಿ. ಇಲ್ಲಿ ಎಲ್ಲವೂ (Viral Video) ಇದೆ. ಇಲ್ಲಿ ಕೋಟ್ಯಾಧಿಪತಿಗಳೂ ಇದ್ದಾರೆ. ಏನೂ ಇಲ್ಲದೆ ದಿನಗೂಲಿಯಿಂದ ದಿನ ತಳ್ಳುವವರೂ ಇದ್ದಾರೆ. ಹಗಲು ರಾತ್ರಿಯೆನ್ನದೆ ಝಗಮಗಿಸುವ ಈ ನಗರಿಯಲ್ಲಿ ರಸ್ತೆಬದಿಯ ತಿಂಡಿಗಳಿಗೆ ಶ್ರೀಮಂತ ಬಡವರೆನ್ನದೆ ಎಲ್ಲರೂ ಮುಗಿ ಬೀಳುತ್ತಾರೆ. ಬೀದಿ ಬದಿಯ ಥರಹೇವಾರಿ ಚಾಟ್‌ಗಳೂ, ವಡಾಪಾವ್‌ಗಳೂ, ಸಮೋಸಾಗಳೂ, ದೋಸೆ, ಪರಾಠಾಗಳು ಹಲವರ ಹೊಟ್ಟೆಯನ್ನು ನಿತ್ಯವೂ ತುಂಬಿಸುತ್ತವೆ.

Viral Video Rajinikanth Style Dosas

ಗಡಿ ದಾಟಿದ ದೋಸೆ

ದೋಸೆ ಎಂಬ ಬೆಳಗಿನ ಉಪಹಾರವೂ ಕೇವಲ ದಕ್ಷಿಣ ಭಾರತೀಯರ ಬೆಳಗಿನ ಉಪಹಾರವಾಗಿ ಉಳಿಯದೆ ದೇಶ ಗಡಿಗಳ ಹಂಗು ತೊರೆದು ಎಲ್ಲರನ್ನೂ ಆಕರ್ಷಿಸುತ್ತಿದೆ. ಸಂಜೆಯ ಹೊತ್ತು ಬೀದಿಬದಿಯಲ್ಲಿ ಜನರನ್ನು ಆಕರ್ಷಿಸುವ ತಿನಿಸುಗಳ ಪೈಕಿ ಇಂದು ದೋಸೆಗೆ ಅಗ್ರಗಣ್ಯ ಸ್ಥಾನವಿದೆ. ಉತ್ತರ ಭಾರತದ ಮಹಾನಗರಿಗಳಲ್ಲೂ ಇದೀಗ ದೋಸೆ ಎಲ್ಲರ ಪ್ರಿಯವಾದ ತಿನಿಸಾಗಿ ಮಾರ್ಪಡುತ್ತಿದೆ. ಇದೀಗ ಮುಂಬೈನ ಬೀದಿಬದಿಯ ದೋಸೆ ಸ್ಟಾಲ್‌ ಒಂದು ಭಾರೀ ಸುದ್ದಿಯನ್ನೇ ಮಾಡುತ್ತಿದೆ. ರಜನೀಕಾಂತ್‌ ಸ್ಟೈಲ್‌ನ ದೋಸೆ ಎಂದೇ ವೈರಲ್‌ ಆಗುತ್ತಿರುವ ಈ ದೋಸೆಯ ವಿಶೇಷತೆ ಏನು ಎಂದು ಅರ್ಥ ಮಾಡಿಕೊಳ್ಳಬೇಕಾದರೆ ನೀವು ಆ ವಿಡಿಯೋವನ್ನು ನೋಡಬೇಕು.

Viral Video Rajinikanth Style Dosas

ದಾದರ್ ನ ಬೀದಿಯಲ್ಲಿ

ಮುಂಬೈನ ದಾದರ್‌ನಲ್ಲಿ ಬೀದಿ ಬದಿಯಲ್ಲಿ ತನ್ನ ದೋಸೆ ಗಾಡಿಯನ್ನಿಟ್ಟುಕೊಂಡು ದೋಸೆ ಮಾರುವ ಈತನ ದೋಸೆ ಮಾಡುವ ಶೈಲಿಯನ್ನೊಮ್ಮೆ ನೋಡಬೇಕು. ಚಕಾಚಕ್‌ ಎಂದು ಪಟಪಟನೆ ದೋಸೆ ಹೊಯ್ಯುವುದೂ ಅಲ್ಲದೆ, ಅದನ್ನು ತೆಗದು ತಟ್ಟೆಗೆ ಹಾಕುವ ಶೈಲಿಯೂ ವಿಶೇಷವಾದದ್ದೇ. ದೂರದಲ್ಲಿ ನಿಂತಿರುವ ದೋಸೆ ಸಪ್ಲೈ ಮಾಡುವಾತನ ತಟ್ಟೆಗಳಿಗೆ ಒಂದೊಂದಾಗಿ ಹಾರಿಕೊಂಡು ಹೋಗುವ ದೋಸೆಗಳನ್ನು ನೋಡುವುದೇ ಒಂದು ಮಜಾ. ದೋಸೆಯನ್ನು ಮಗುಚಿ ಎಸೆದರೆ ದೂರದಲ್ಲಿರುವ ಸಪ್ಲೈಯರ್‌ ಅದನ್ನು ತಟ್ಟೆಯಲ್ಲೇ ಕ್ಯಾಚ್‌ ಹಿಡಿದು ಗ್ರಾಹಕರಿಗೆ ನೀಡುತ್ತಾನೆ. ಈ ಇಬ್ಬರ ಕೌಶಲ್ಯದ ಜಾದೂ ನೋಡುವುದೇ ಅಲ್ಲಿಗೆ ದೋಸೆ ತಿನ್ನಲು ಬಂದವರಿಗೆ ಹಬ್ಬ. ಕಣ್ಣು ಬಾಯಿ ಬಿಟ್ಟುಕೊಂಡು ಕ್ರಿಕೆಟ್‌ ನೋಡುವಂತೆ ಈ ದೋಸೆ ಪ್ರದರ್ಶನವನ್ನು ವೀಕ್ಷಿಸುವ ಜೊತೆಗೆ ತಿಂದು ಹೊಟ್ಟೆ ತುಂಬಿಸಿಕೊಂಡು ಹೋಗುತ್ತಾರೆ.

Viral Video Rajinikanth Style Dosas

ದೋಸಾ ಕಾರ್ನರ್

ಮುತ್ತು ದೋಸಾ ಕಾರ್ನರ್‌ ಎಂಬ ಹೆಸರಿನ ದಾದರ್‌ನಲ್ಲಿರುವ ದೋಸೆ ಗಾಡಿ ರಜನೀಕಾಂತ್‌ ಸ್ಟೈಲ್‌ ದೋಸಾವಾಲಾ ಎಂದೇ ಫೇಮಸ್ಸು. ಈತನ ದೋಸೆ ಎಸೆಯುವ ಸ್ಟೈಲ್‌ ನೋಡಲೆಂದೇ ಈತನ ಸ್ಟಾಲ್‌ ಹುಡುಕಿಕೊಂಡು ಬರುವುದುಂಟು. ಅಷ್ಟು ವೇಗವಾಗಿ ದೋಸೆ ಮಾಡುವುದೂ ಅಲ್ಲದೆ, ಅಷ್ಟೇ ವೇಗವಾಗಿ ತನ್ನದೇ ಆದ ಸ್ಟೈಲ್‌ನೊಂದಿಗೆ ದೋಸೆ ಗಾಳಿಯಲ್ಲಿ ಹಾರಿಸಿ ಅದು ನೇರವಾಗಿ ತಟ್ಟೆಗೆ ಬೀಳಿಸುವ ಕೌಶಲ್ಯ ಮಾತ್ರ ವಿನೂತನವಾದದ್ದು. ಅದಕ್ಕಾಗಿಯೇ ಈತ ರಜನೀಕಾಂತ್‌ ಹೆಸರಿನಿಂದ ಪ್ರಸಿದ್ಧಿ ಪಡೆದಿದ್ದಾರೆ.

https://www.instagram.com/reel/C7WrLbqSOkS/?igsh=MXNzYnU1ZXRhdGZ1Mw==

ಸಪ್ಲಯರ್ ಕೌಶಲ್ಯ

ಹೀಗೆ ದೋಸೆ ಮಾಡು ಎಸೆಯುವಾಗ ಅದು ತಪ್ಪಿಯೂ ಬೇರೆಲ್ಲಿಯೋ ಹೋಗಿ ಬೀಳದು. ನೇರವಾಗಿ ಅದನ್ನು ತಟ್ಟೆಗೆ ಬೀಳುವಂತೆ ಮಾಡುವ ಸಪ್ಲಯರ್‌ ಕೌಶಲ್ಯವೂ ಇಲ್ಲಿ ಮೆಚ್ಚುವಂಥದ್ದೇ. ಈ ದೋಸೆ ವಿಡಿಯೋ ಇದೀಗ ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಹೆಸರು ಮಾಡಿದ್ದು ನೋಡುಗರೆಲ್ಲರೂ ಈತನ ಕಲೆಗೆ, ಕೌಶಲ್ಯಕ್ಕೆ ತಲೆದೂಗಿದ್ದಾರೆ. ಜನರು ಥರಹೇವಾರಿ ಕಮೆಂಟುಗಳನ್ನೂ ಮಾಡುತ್ತಿದ್ದಾರೆ. ಒಬ್ಬ ನೋಡುಗ, ಹೀಗೆ ದೋಸೆಯನ್ನು ನೇರವಾಗಿ ತಟ್ಟೆಗೆ ಕ್ಯಾಚ್‌ ಮಾಡುವಾತನನ್ನು ಭಾರತೀಯ ಕ್ರಿಕೆಟ್‌ ಟೀಮ್‌ನಲ್ಲಿ ಕ್ಯಾಚ್‌ ಹಿಡಿಯಲು ಕಳುಹಿಸಬಹುದು ಎಂದಿದ್ದಾರೆ!

ಇದನ್ನೂ ಓದಿ: Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

Continue Reading

ದೇಶ

Girlfriend: ‘ಬಾಡಿಗೆ ಗರ್ಲ್‌ಫ್ರೆಂಡ್‌’ ಆಗಲು ಸಿದ್ಧಳೆಂದ ಯುವತಿ; ಈಕೆಯ ‘ದರಪಟ್ಟಿ’ ನೋಡಿ,‌ ನೀವೂ ಟ್ರೈ ಮಾಡಿ

Girlfriend: ಭಾರತದಲ್ಲಿ ಈಗ ಗರ್ಲ್‌ಫ್ರೆಂಡ್‌ ಕೂಡ ಬಾಡಿಗೆಗೆ ಸಿಗಲಿದ್ದಾಳೆ. ಈ ಕುರಿತು ಯುವತಿಯೊಬ್ಬಳು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾಳೆ. ಯಾರು ಬೇಕಾದರೂ ಕರೆದುಕೊಂಡು ಹೋಗಿ ಎಂದಿದ್ದಾಳೆ. ಆದರೆ, ಒಂದು ದಿನದ ಮಟ್ಟಿಗೆ ಡೇಟ್‌ಗೆ ಕರೆದುಕೊಂಡು ಹೋಗುವುದು ಸೇರಿ ಹಲವು ಚಟುವಟಿಕೆಗಳಿಗೆ ಯುವತಿಯು ರೇಟ್‌ ಫಿಕ್ಸ್‌ ಮಾಡಿದ್ದಾಳೆ. ಆ ದರ ಪಟ್ಟಿ ನೋಡಿದ ಜನ ಬೆಚ್ಚಿಬಿದ್ದಿದ್ದಾರೆ.

VISTARANEWS.COM


on

Girlfriend
Koo

ನವದೆಹಲಿ: ಈಗಿನದ್ದು ಬಾಡಿಗೆ ಜಮಾನ. ಮನೆ, ಕಾರು, ಬೈಕ್‌, ಬಟ್ಟೆ, ಆಭರಣ ಸೇರಿ ಸಾವಿರಾರು ವಸ್ತುಗಳು ಬಾಡಿಗೆಗೆ ಸಿಗುತ್ತವೆ. ಯಾರಾದರೂ ಸತ್ತಾಗ ಅಳಲು ಕೂಡ ‘ಬಾಡಿಗೆ ಜನ’ರಿದ್ದಾರೆ. ಅಷ್ಟರ ಮಟ್ಟಿಗೆ ನಮ್ಮ ‘ಬಾಡಿ’ಗೆ ಅನುಕೂಲವಾಗಲು ‘ಬಾಡಿಗೆಗೆ’ ಸಿಗುತ್ತವೆ. ಆದರೆ, ದೇಶದಲ್ಲಿ ಇದುವರೆಗೆ ಬಾಡಿಗೆಗೆ ಗರ್ಲ್‌ಫ್ರೆಂಡ್‌ ಸಿಗುತ್ತಿರಲಿಲ್ಲ. ಯಾರನ್ನೂ ಪಟಾಯಿಸಲು ಆಗದೆ, ಒಬ್ಬಂಟಿಯಾಗಿ ಇರಲೂ ಆಗದೆ ಯುವಕರು ಪರದಾಡುವಂತಾಗಿದೆ. ಆದರೆ, ಇನ್ನು ಮುಂದೆ ಬಾಡಿಗೆಗೆ ಗರ್ಲ್‌ಫ್ರೆಂಡ್‌ (Girlfriend) ಕೂಡ ಸಿಗಲಿದ್ದಾಳೆ. ಹೌದು, “ನನ್ನನ್ನು ಒಂದು ದಿನದ ಮಟ್ಟಿಗೆ ನಿಮ್ಮ ಗರ್ಲ್‌ಫ್ರೆಂಡ್‌ ಆಗಿ ಬಾಡಿಗೆಗೆ ಪಡೆಯಿರಿ” ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾಳೆ. ಆಕೆಯ ವಿಡಿಯೊ ಈಗ ಭಾರಿ ವೈರಲ್‌ (Viral Video) ಆಗಿದೆ.

ಯುವತಿಯೊಬ್ಬಳು ತನ್ನ ಹಾಗೂ ದರಪಟ್ಟಿಯ ವಿಡಿಯೊ ಹಂಚಿಕೊಂಡಿದ್ದಾಳೆ. “ನಾನು ಒಂದು ದಿನದ ಮಟ್ಟಿಗೆ ನಿಮ್ಮ ಗರ್ಲ್‌ಫ್ರೆಂಡ್‌ ಆಗಿ ಬಾಡಿಗೆಗೆ ಇರಬಲ್ಲೆ. ಯಾರು ಬೇಕಾದರೂ ನನ್ನನ್ನು ಗರ್ಲ್‌ಫ್ರೆಂಡ್‌ ಆಗಿ ಬಾಡಿಗೆಗೆ ಪಡೆಯಬಹುದು. ಆ ಮೂಲಕ ಸ್ಮರಣೀಯ ದಿನವನ್ನು, ಅತ್ಯುತ್ತಮ ನೆನಪುಗಳನ್ನು ಸೃಷ್ಟಿಸಿಕೊಳ್ಳಬಹುದು” ಎಂಬುದಾಗಿ ದಿವ್ಯಾ ಗಿರಿ ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್‌ ಮಾಡಲಾಗಿದೆ. ನೂರಾರು ಜನ ಪೋಸ್ಟ್‌ಗೆ ಪ್ರತಿಕ್ರಿಯೆ ಕೂಡ ನೀಡಿದ್ದಾರೆ.

ಯುವತಿಯ ‘ದರ’ಪಟ್ಟಿ ಹೀಗಿದೆ…

ಒಂದು ದಿನದ ಮಟ್ಟಿಗೆ ಡೇಟ್‌ಗೆ ಕರೆದುಕೊಂಡು ಹೋಗುವುದು ಸೇರಿ ಹಲವು ಚಟುವಟಿಕೆಗಳಿಗೆ ಯುವತಿಯು ರೇಟ್‌ ಫಿಕ್ಸ್‌ ಮಾಡಿದ್ದಾಳೆ. ಸುಮ್ಮನೆ ಹೋಗಿ ಕಾಫಿ ಕುಡಿದುಕೊಂಡು ಬರಲು 1,500 ರೂ., ಸಿನಿಮಾ ನೋಡಿ, ಊಟ ಮಾಡಿಕೊಂಡು ಬರುವುದಾದರೆ 2 ಸಾವಿರ ರೂ. ಕುಟುಂಬಸ್ಥರನ್ನು ಭೇಟಿ ಮಾಡಿಸಲು 3 ಸಾವಿರ ರೂ., ಬೈಕ್‌ನಲ್ಲಿ ಸುತ್ತಾಡುವುದಾದರೆ 4 ಸಾವಿರ ರೂ., ಡೇಟಿಂಗ್‌ ಬಗ್ಗೆ ಸಾರ್ವಜನಿಕವಾಗಿ ಪೋಸ್ಟ್‌ ಮಾಡುವುದಾದರೆ 6 ಸಾವಿರ ರೂ., ಎರಡು ದಿನ ವೀಕೆಂಡ್‌ನಲ್ಲಿ ಸುತ್ತಾಡಲು 10 ಸಾವಿರ ರೂ. ಸೇರಿ ಹಲವು ಚಟುವಟಿಕೆಗಳಿಗೆ ವಿವಿಧ ಮೊತ್ತ ನಿಗದಿಪಡಿಸಿದ್ದಾಳೆ.

ಪೋಸ್ಟ್‌ ನೋಡಿದ ಜನ ಏನೆಂದರು?

ಯುವತಿಯ ಪೋಸ್ಟ್‌ ನೋಡಿದ ಒಂದಷ್ಟು ಜನ ಕಂಗಾಲಾಗಿದ್ದರೆ, ಇನ್ನೊಂದಿಷ್ಟು ಜನ ತಮಾಷೆಯಾಗಿ ಕಮೆಂಟ್‌ ಮಾಡಿದ್ದಾರೆ. “ನನ್ನ ಕಾಲೇಜಿನ ಅಸೈನ್‌ಮೆಂಟ್‌ ಮುಗಿಸಿಕೊಡಲು ಎಷ್ಟು ಚಾರ್ಜ್‌ ಮಾಡುತ್ತೀರಿ” ಎಂದು ಕಿಡಿಗೇಡಿಯೊಬ್ಬ ಕಮೆಂಟ್‌ ಮಾಡಿದ್ದಾನೆ. “ನನ್ನ ಮನೆಯ ಕಸ ಗುಡಿಸಿ, ಟಾಯ್ಲೆಟ್‌ ಕ್ಲೀನ್‌ ಮಾಡಿ, ಬಟ್ಟೆ ತೊಳೆದುಕೊಡಲು ಎಷ್ಟು ಬೇಕು” ಎಂದು ಇನ್ನೊಬ್ಬ ಟಾಂಗ್‌ ಕೊಟ್ಟಿದ್ದಾನೆ. “ಯುವತಿಯು ಭಾರತದಲ್ಲಿ ಅಲ್ಲ, ಜಪಾನ್‌ನಲ್ಲಿದ್ದೇನೆ” ಎಂದು ಭಾವಿಸಿದ್ದಾಳೆ ಎಂಬುದಾಗಿ ಮಗದೊಬ್ಬ ತಮಾಷೆ ಮಾಡಿದ್ದಾನೆ. “ಇಂಥ ಕೆಲಸ ಮಾಡುವ ಬದಲು ದುಡಿದು ತಿನ್ನು” ಎಂದು ಮತ್ತೊಬ್ಬ ಅಸಮಾಧಾನ ವ್ಯಕ್ತಪಡಿಸಿದ್ದಾನೆ. ಹೀಗೆ, ನೂರಾರು ಜನ ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

Continue Reading
Advertisement
All We Imagine As Light actor rejected audition call by The Kerala Story
ಮಾಲಿವುಡ್6 mins ago

All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

IND vs PAK
ಕ್ರೀಡೆ7 mins ago

IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

Prajwal Revanna Case
ಪ್ರಮುಖ ಸುದ್ದಿ29 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Viral Video
ಕ್ರೀಡೆ40 mins ago

Viral Video: ಜಡಿ ಮಳೆಗೆ ಒದ್ದೆಯಾಗುತ್ತಲೇ ಓಡೋಡಿ ಬಂದು ಕಾರು ಹತ್ತಿದ ರೋಹಿತ್​, ದ್ರಾವಿಡ್​

Lok Sabha Election
Lok Sabha Election 20241 hour ago

Lok Sabha Election: ಫಲೋಡಿ ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಒಕ್ಕೂಟಕ್ಕೆ ಬರುವ ಸೀಟೆಷ್ಟು?

Ravichandran Birthday will give surprise To Fans
ಸ್ಯಾಂಡಲ್ ವುಡ್1 hour ago

Ravichandran Birthday: ಇಂದು ಕನಸುಗಾರನ ಜನುಮದಿನ: ಫ್ಯಾನ್ಸ್‌ಗೆ ಸರ್‌ಪ್ರೈಸ್‌ ಕೊಡ್ತಾರಾ ‘ಕ್ರೇಜಿ ಸ್ಟಾರ್’?

Norway Chess
ಕ್ರೀಡೆ1 hour ago

Norway Chess: ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್​ಗೆ ಸೋಲುಣಿಸಿದ ಪ್ರಜ್ಞಾನಂದ

Viral Video
ವೈರಲ್ ನ್ಯೂಸ್1 hour ago

Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

Viral Video
ವೈರಲ್ ನ್ಯೂಸ್2 hours ago

Viral Video: ಮುಂಬೈನ ಚಕಾಚಕ್‌ ʻರಜನೀಕಾಂತ್‌ʼ ಶೈಲಿಯ ದೋಸೆ ಈಗ ವೈರಲ್!‌

Actor Rajinikanth response to political questions is unmissable
ಕಾಲಿವುಡ್2 hours ago

Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌