Adani stocks : ಅದಾನಿ ಷೇರುಗಳಲ್ಲಿ 15,000 ಕೋಟಿ ರೂ. ಹೂಡಿ, 2 ದಿನಗಳಲ್ಲಿ 3,100 ಕೋಟಿ ರೂ. ಲಾಭ ಗಳಿಸಿದ ರಾಜೀವ್‌ ಜೈನ್ - Vistara News

ಪ್ರಮುಖ ಸುದ್ದಿ

Adani stocks : ಅದಾನಿ ಷೇರುಗಳಲ್ಲಿ 15,000 ಕೋಟಿ ರೂ. ಹೂಡಿ, 2 ದಿನಗಳಲ್ಲಿ 3,100 ಕೋಟಿ ರೂ. ಲಾಭ ಗಳಿಸಿದ ರಾಜೀವ್‌ ಜೈನ್

ಖ್ಯಾತ ಭಾರತೀಯ ಅನಿವಾಸಿ ಹೂಡಿಕೆದಾರ ರಾಜೀವ್‌ ಜೈನ್‌ ಅವರು ಅದಾನಿ ಕಂಪನಿಗಳಲ್ಲಿ 15,000 ಕೋಟಿ ರೂ. ಹೂಡಿಕೆ ಮಾಡಿ 2 ದಿನಗಳಲ್ಲಿ 3,100 ಕೋಟಿ ರೂ. ಲಾಭ ಗಳಿಸಿದ್ದಾರೆ. ಇದು ಷೇರುಪೇಟೆಯಲ್ಲಿ (Adani stocks ) ಸಂಚಲನ ಮೂಡಿಸಿದೆ. ವಿವರ ಇಲ್ಲಿದೆ.

VISTARANEWS.COM


on

rajiv jain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಖ್ಯಾತ ಭಾರತೀಯ ಅನಿವಾಸಿ ಹೂಡಿಕೆದಾರ ರಾಜೀವ್‌ ಜೈನ್‌ (Rajiv Jain) ನೇತೃತ್ವದ ಜಿಕ್ಯೂಜಿ ಪಾರ್ಟ್‌ನರ್ಸ್‌, ತೀವ್ರ ನಷ್ಟದಲ್ಲಿದ್ದ ಅದಾನಿ ಕಂಪನಿಗಳ ಷೇರುಗಳಲ್ಲಿ 15,446 ಕೋಟಿ ರೂ.ಗಳನ್ನು ಹೂಡಿಕೆ ಮಾಡಿರುವುದಲ್ಲದೆ, ಕೇವಲ 2 ದಿನಗಳಲ್ಲಿ ಬರೋಬ್ಬರಿ 3,100 ಕೋಟಿ ರೂ. ಲಾಭ ಗಳಿಸಿದೆ. (Adani stocks) ಹೂಡಿಕೆಯ ಮೇಲೆ 20% ಲಾಭ ಗಳಿಸಿರುವುದು ಇದಕ್ಕೆ ಕಾರಣ.

ಅದಾನಿ ಎಂಟರ್‌ಪ್ರೈಸಸ್‌, ಅದಾನಿ ಪೋರ್ಟ್ಸ್‌, ಅದಾನಿ ಗ್ರೀನ್‌ ಎನರ್ಜಿ, ಅದಾನಿ ಟ್ರಾನ್ಸ್‌ಮಿಶನ್‌ನಲ್ಲಿ ಜೈನ್‌ ಅವರ 15,446 ಕೋಟಿ ರೂ. ಹೂಡಿಕೆಯು 18,548 ಕೋಟಿ ರೂ.ಗೆ ಏರಿಕೆಯಾಗಿದೆ. ಹೀಗಾಗಿ 3,102 ಕೋಟಿ ರೂ. ಲಾಭವಾದಂತಾಗಿದೆ. (notional profit)

ಹಿಂಡೆನ್‌ ಬರ್ಗ್‌ ಕಳೆದ ಜನವರಿ 24ರಂದು ಅದಾನಿ ಗ್ರೂಪ್‌ ವಿರುದ್ಧ ವರದಿ ಪ್ರಕಟಿಸಿದ ಬಳಿಕ ಕಂಪನಿಯ ಷೇರು ದರ ತೀವ್ರ ಕುಸಿದಿತ್ತು. ಮಾರುಕಟ್ಟೆ ಮೌಲ್ಯದಲ್ಲಿ 12 ಲಕ್ಷ ಕೋಟಿ ರೂ. ತನಕ ನಷ್ಟವಾಗಿತ್ತು. ಜೈನ್‌ ಅವರು ಅದಾನಿ ಎಂಟರ್‌ಪ್ರೈಸಸ್‌ ಷೇರನ್ನು ಪ್ರತಿ ಷೇರಿಗೆ 1,416 ರೂ. ದರದಲ್ಲಿ ಖರೀದಿಸಿದ್ದರು. ಬಳಿಕ ಷೇರು ದರದಲ್ಲಿ 33% ಏರಿಕೆಯಾಗಿತ್ತು. ಇದು ಅವರಿಗೆ 1813 ಕೋಟಿ ರೂ. ಲಾಭ ತಂದುಕೊಟ್ಟಿತ್ತು.

60,000 ಅಂಕಗಳ ಮೈಲುಗಲ್ಲು ದಾಟಿದ ಸೆನ್ಸೆಕ್ಸ್:

ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಸೊಮವಾರ 415 ಅಂಕ ಚೇತರಿಸಿದ್ದು, 60,224 ಅಂಕಗಳಿಗೆ ದಿನದ ವಹಿವಾಟು ಮುಕ್ತಾಯಗೊಳಿಸಿತು. ನಿಫ್ಟಿ 117 ಅಂಕ ಚೇತರಿಸಿಕೊಂಡು 17,711ಕ್ಕೆ ಸ್ಥಿರವಾಯಿತು. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್‌ 1300 ಅಂಕ ಜಿಗಿದಿದ್ದು, 60 ಸಾವಿರ ಅಂಕಗಳ ಮೈಲುಗಲ್ಲನ್ನು ಕ್ರಮಿಸಿತು. ಬಿಎಸ್‌ಇಯ ಎಲ್ಲ ಷೇರುಗಳ ಮಾರುಕಟ್ಟೆ ಬಂಡವಾಳ ಮೌಲ್ಯ 265 ಲಕ್ಷ ಕೋಟಿ ರೂ.ಗೆ ಜಿಗಿಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

CAN vs USA: ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು.

VISTARANEWS.COM


on

CAN vs USA
Koo

ನ್ಯೂಯಾರ್ಕ್​: 9ನೇ ಆವೃತ್ತಿಯ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಇಂದು(ಭಾನುವಾರ) ನಡೆದ ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(CAN vs USA) ತಂಡ ಕೆನಡಾ ವಿರುದ್ಧ ಭರ್ಜರಿ 7 ವಿಕೆಟ್​ಗಳ ಗೆಲುವು ಸಾಧಿಸಿ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. ಕೆನಡಾ ಪರ ಕರ್ನಾಟಕದ, ದಾವಣಗೆರೆ ಮೂಲದ ಆಟಗಾರ ಶ್ರೇಯಸ್ ಮೋವಾ(Shreyas Movva) ಕೂಡ ಕಣಕ್ಕಿಳಿದು ಚೊಚ್ಚಲ ಟಿ20 ವಿಶ್ವಕಪ್​ ಪಂದ್ಯವನ್ನಾಡಿದ ಹಿರಿಮೆಗೆ ಪಾತ್ರರಾದರು.

ಕರ್ನಾಟಕ ಪರವೂ ಆಡಿದ್ದರು


ಹೌದು, 30 ವರ್ಷದ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಆಗಿರುವ ಶ್ರೇಯಸ್ ಮೋವಾ ದಾವಣಗೆರೆಯವರಾಗಿದ್ದಾರೆ. ಬಾಲ್ಯದ ದಿನದಲ್ಲಿ ಅಂದರೆ, 2006ರಲ್ಲಿ ದಾವಣಗೆರೆ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದು, ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ನಡೆಸುವ ಅಂತಾರಾಜ್ಯ ವಯೋಮಿತಿ ಒಳಗೊಂಡ 19 ವರ್ಷದೊಳಗಿನ, 16 ವರ್ಷದೊಳಗಿನ ಪಂದ್ಯಾವಳಿಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಕೆನಡಾ ಪೌರತ್ವ


ದಾವಣಗೆರೆಯ ಬಾಪೂಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಶ್ರೇಯಸ್, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಕೆನಡಾಕ್ಕೆ ತರೆಳಿದರು. ಇಲ್ಲಿಯೂ ಕೂಡ ಕ್ರಿಕೆಟ್​ ನಂಟು ಬಿಡದ ಇವರು ಅಲ್ಲಿನ ಸ್ಥಳೀಯ ಕ್ರಿಕೆಟ್​ ಟೂರ್ನಿಗಳಲ್ಲಿ ಆಡುವ ಮೂಲಕ ಗಮನಸೆಳೆದಿದ್ದರು. ಬಳಿಕ ಕೆನಡಾ ದೇಶದ ಪೌರತ್ವ ಪಡೆದು ಇದೀಗ ಕೆನಡಾ ರಾಷ್ಟ್ರೀಯ ತಂಡದ ಪರ ಆಡುತ್ತಿದ್ದಾರೆ. ಇದುವರೆಗೆ 6 ಟಿ20 ಮತ್ತು 7 ಏಕದಿನ ಪಂದ್ಯಗಳನ್ನಾಡಿ ಒಟ್ಟು 171 ರನ್​ ಬಾರಿಸಿದ್ದಾರೆ. ವಿಕೆಟ್​ ಕೀಪರ್​ ಆಗಿರುವ ಇವರು ಇದೇ ವರ್ಷ ನಡೆದಿದ್ದ ನೇಪಾಳ ವಿರುದ್ಧದ ಏಕದಿನ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದರು.

ಇದನ್ನೂ ಓದಿ USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

ಇಂದು ನಡೆದ ಅಮೆರಿಕ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಶ್ರೇಯಸ್ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ 16 ಎಸೆತಗಳಿಂದ ಅಜೇಯ 32 ರನ್​ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಸಿಡಿಯಿತು. 20 ರನ್​ಗಳು ಬೌಂಡರಿ ಮತ್ತು ಸಿಕ್ಸರ್​ ಮೂಲಕವೇ ದಾಖಲಾಯಿತು. ಆದರೆ ಪಂದ್ಯ ಸೋತ ಕಾರಣ ಇವರ ಈ ಬ್ಯಾಟಿಂಗ್​ ಪ್ರದರ್ಶನ ವ್ಯರ್ಥವಾಯಿತು.

ಪಂದ್ಯ ಸೋತ ಕೆನಡಾ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading

ಕ್ರೀಡೆ

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

USA vs CAN: ಭಾನುವಾರ ನಡೆದ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿಕೆನಡಾ ವಿರುದ್ಧ ಅಮೆರಿಕ(USA vs CAN) 7 ವಿಕೆಟ್​ಗಳ ಗೆಲುವು ಸಾಧಿಸಿತು.

VISTARANEWS.COM


on

USA vs CAN
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(USA vs CAN) ಗೆಲುವಿನ ಖಾತೆ ತೆರೆದಿದೆ. ಭಾನುವಾರ ನಡೆದ ಬೃಹತ್​ ಮೊತ್ತದ ಮೇಲಾಟದಲ್ಲಿ ಕೆನಡಾ ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸಿ ಮೆರೆದಾಡಿದೆ. ಜತೆಗೆ ‘ಎ’ ಗುಂಪಿನಲ್ಲಿ ಅಂಕದ ಖಾತೆ ತೆರೆದಿದೆ.

ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

ಚೇಸಿಂಗ್​ ವೇಳೆ ಅಮೆರಿಕ ಆರಂಭಿಕ ಆಘಾತ ಎದುರಿಸಿತು. ತಂಡ ಖಾತೆ ತೆರೆಯುವ ಮುನ್ನವೇ ಸ್ಟೀವನ್ ಟೇಲರ್(0) ಶೂನ್ಯಕ್ಕೆ ವಿಕೆಟ್​ ಕೈಚೆಲ್ಲಿದರು. 42 ರನ್​ ಒಟ್ಟುಗೂಡುವಷ್ಟರಲ್ಲಿ ಮೊನಾಂಕ್ ಪಟೇಲ್(16) ವಿಕೆಟ್​ ಕೂಡ ಬಿತ್ತು. ಈ ವೇಳೆ ಜತೆಗೂಡಿದ ಆಂಡ್ರೀಸ್ ಗೌಸ್ ಮತ್ತು ಆರನ್ ಜೋನ್ಸ್ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಉತ್ತಮ ಹಿಡಿತ ಸಾಧಿಸಿದ್ದ ಕೆನಡಾ ಬೌಲರ್​ಗಳು ಗೌಸ್ ಮತ್ತು ಜೋನ್ಸ್ ಬ್ಯಾಟಿಂಗ್​ ಆರ್ಭಟದ ಮುಂದೆ ಸಂಪೂರ್ಣ ಲಯ ಕಳೆದುಕೊಂಡರು.

ಉಭಯ ಆಟಗಾರರು ಸೇರಿಕೊಂಡು ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಗೈದರು. ಕಿಕ್ಕಿರಿದು ನೆರೆದ ತವರಿನ ವೀಕ್ಷಕರಿಗೆ ಭರಪೂರ ರಂಜನೆ ಲಭಿಸಿತು. ಈ ಜೋಡಿ ಮೂರನೇ ವಿಕೆಟ್​ಗೆ ಬರೋಬ್ಬರಿ 131 ರನ್​ಗಳ ಅಮೂಲ್ಯ ಜತೆಯಾಟ ನಡೆಸಿತು. ಆಂಡ್ರೀಸ್ ಗೌಸ್ 46 ಎಸೆತಗಳಿಂದ 7 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 65 ರನ್​ ಬಾರಿಸಿದರು. ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಆರನ್ ಜೋನ್ಸ್ 40 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಸಿ ಅಜೇಯ 94 ರನ್​ ಬಾರಿಸಿದರು. ಗೆಲುವಿಗೆ ನಾಲ್ಕು ರನ್​ ಬೇಕಿದ್ದಾಗ ಸಿಕ್ಸರ್​ ಬಡಿದಟ್ಟಿ ತಂಡಕ್ಕೆ ಗೆಲುವು ತಂದುಕೊಟ್ಟುರು. ನ್ಯೂಜಿಲ್ಯಾಂಡ್​ ತಂಡ ತೊರೆದು ಅಮೆರಿಕ ಪರ ಆಡುತ್ತಿರುವ ಕೋರಿ ಆ್ಯಂಡರ್ಸನ್​ ಅಜೇಯ 3 ರನ್​ ಬಾರಿಸಿದರು. ಬೌಲಿಂಗ್​ನಲ್ಲಿ ಒಂದು ವಿಕೆಟ್​ ಪಡೆದರು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಕೆನಡಾ ಪರ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಶ್ರೇಯಸ್ ಮೊವ್ವ(32) ಆರಂಭಿಕ ಆಟಗಾರ ಆರನ್ ಜಾನ್ಸನ್(23) ರನ್​ ಬಾರಿಸಿದರು. ಬೃಹತ್​ ಮೊತ್ತ ಪೇರಿಸಿದರು ಕೂಡ ಬೌಲರ್​ಗಳಿಂದ ಸಂಘಟಿತ ಪ್ರದರ್ಶನ ಕಂಡು ಬಾರದ ಕಾರಣ ಪಂದ್ಯವನ್ನು ಕಳೆದುಕೊಂಡರು.

Continue Reading

ಅಂಕಣ

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ಸೈಬರ್‌ ಸೇಫ್ಟಿ ಅಂಕಣ: ನಿಮ್ಮ ಟೆಕ್ನಾಲಜಿ ಯಾತ್ರೆಯನ್ನು ಸುರಕ್ಷಿತಗೊಳಿಸಲು ಬಹುರಾಷ್ಟ್ರೀಯ ಸೈಬರ್‌ ಭದ್ರತಾ ಸಂಸ್ಥೆಯೊಂದು ಡಿಸೆಂಬರ್‌ 2023ಲ್ಲಿ ಪ್ರಕಟಿಸಿದ ಟ್ರೆಂಡ್‌ಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಇಲ್ಲಿದೆ. ಇದು ತಂತ್ರಜ್ಞಾನವನ್ನು ಹೆಚ್ಚು ಪ್ರಜ್ಞಾಪೂರ್ವಕವಾಗಿ ಮತ್ತು ಸುರಕ್ಷಿತವಾಗಿ ಬಳಸುವ ಉತ್ತಮ ಅಭ್ಯಾಸಗಳನ್ನು ತಿಳಿಸುತ್ತದೆ.

VISTARANEWS.COM


on

cyber attack ನನ್ನ ದೇಶ ನನ್ನ ದನಿ
Koo
cyber-safty-logo

ಸೈಬರ್‌ ಸೇಫ್ಟಿ ಅಂಕಣ: ತಂತ್ರಜ್ಞಾನದ ಪ್ರಗತಿ ನಮ್ಮ ದೈನಂದಿನ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತಿದೆ. ನಮ್ಮ ಜೀವನದಲ್ಲಿ ಅದರ ಬಳಕೆ ಹೆಚ್ಚುತ್ತಿದೆ. ಹಾಗಾಗಿ ತಂತ್ರಜ್ಞಾನವನ್ನು ಪ್ರಜ್ಞಾಪೂರ್ವಕವಾಗಿ ಮತ್ತು ಸುರಕ್ಷಿತವಾಗಿ ಬಳಸುವ ಅಭ್ಯಾಸಗಳನ್ನು ಸಂಸ್ಥೆಗಳು, ಮತ್ತು ನಾವು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಅಭಿವೃದ್ಧಿಯ ಜೊತೆಗೆ ಆತಂಕಕಾರಿಯಾಗಿ ಸೈಬರ್ ದಾಳಿಗಳು (cyber attack) ಮತ್ತು ವಂಚನೆಯ (cyber fraud) ಪ್ರಕರಣಗಳೂ ಹೆಚ್ಚುತ್ತಿವೆ. ಆದ್ದರಿಂದ, ಪ್ರತಿ ವರ್ಷವೂ ಸೈಬರ್ ಭದ್ರತೆಯ (cyber security) ಟ್ರೆಂಡ್‌ಗಳ ಬಗ್ಗೆ ತಿಳಿದು ಮುನ್ನೆಚ್ಚರಿಕೆ ವಹಿಸುವುದು ಕಾರ್ಪೊರೇಟ್‌ (corporate) ವಲಯದಲ್ಲಿ ಮುಖ್ಯವಾದ ಕಾರ್ಯಕ್ರಮ.

2021ರವರೆಗೆ ಜಾಗತಿಕವಾಗಿ ಸೈಬರ್‌ ಅಟ್ಯಾಕ್‌ಗಳು ಶೇಕಡಾ 125ರಷ್ಟು ಹೆಚ್ಚಾಗಿದೆ. ಸೈಬರ್ ಕ್ರಿಮಿನಲ್‌ಗಳು (cyber criminals) ಕಂಪನಿಗಳಿಗೆ ಮತ್ತು ವ್ಯಕ್ತಿಗಳಿಗೆ ಬೆದರಿಕೆ ಹಾಕುತ್ತಲೇ ಇದ್ದಾರೆ. ರಷ್ಯಾ-ಉಕ್ರೇನ್ ಸಂಘರ್ಷವು ಸೈಬರ್ ದಾಳಿಗಳ ಮೇಲೆ ಭಾರಿ ಪರಿಣಾಮ ಬೀರಿದೆ. ಆನ್‌ಲೈನ್‌ನಲ್ಲಿ ಫಿಶಿಂಗ್ (fishing) ಮುಖಾಂತರ ಹಣ ದೋಚುವ ಕಾರ್ಯತಂತ್ರ ಹೆಚ್ಚಾಗಿದೆ. ಯುರೋಪಿನಲ್ಲಿ ransomware ದಾಳಿಯು ಶೇಕಡ 26ರಷ್ಟಿದ್ದು ಪ್ರಮುಖವಾದ ಪ್ರಕಾರವಾಗಿದೆ. ಸರ್ವರ್‌ ಮೇಲಿನ ದಾಳಿಗಳು (12%) ಮತ್ತು ಡೇಟಾ ಕಳ್ಳತನ (10%) ಇತರ ರೀತಿಯ ಸೈಬರ್ ದಾಳಿಗಳಾಗಿವೆ.

ಸೈಬರ್ ಕ್ರೈಮ್ ಹೆಚ್ಚು ಕಾಲ ನಿಶ್ಚಲವಾಗಿ ಉಳಿಯುವುದಿಲ್ಲ. ಕ್ರಿಮಿನಲ್‌ಗಳು ನಿರಂತರವಾಗಿ ಅವಕಾಶಗಳನ್ನು ಹುಡುಕುತ್ತಿರುತ್ತಾರೆ. ತಾಂತ್ರಿಕ ಮತ್ತು ಸಾಮಾಜಿಕ ಆವಿಷ್ಕಾರಗಳು, ಬ್ರೌಸರ್‌ಗಳ ಹೆಚ್ಚುವರಿ ಸುರಕ್ಷತಾ ಕ್ರಮಗಳನ್ನು ಏಮಾರಿಸಲು ಹ್ಯಾಕರ್‌ಗಳು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ. ಇಕಾಮರ್ಸ್ (E commerce) ಸೈಟ್‌ಗಳು ಅಥವಾ ಮೊಬೈಲ್ ಕಂಪ್ಯೂಟಿಂಗ್ ಸಾಧನಗಳ ಸುರಕ್ಷತೆಯಲ್ಲಿ ಲೋಪಗಳನ್ನು ಹುಡುಕುತ್ತಲೇ ಇರುತ್ತಾರೆ. ಸೈಬರ್‌ ಸೆಕ್ಯೂರಿಟಿ ಚಾಪೆ ಕೆಳಗೆ ತೂರಿದರೆ, ಸೈಬರ್‌ ಕ್ರಿಮಿನಲ್‌ಗಳು ರಂಗೋಲಿ ಕೆಳಗೇ ತೂರುವ ಜಾಣತನ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ನಿಮ್ಮ ಟೆಕ್ನಾಲಜಿ ಯಾತ್ರೆಯನ್ನು ಸುರಕ್ಷಿತಗೊಳಿಸಲು ಬಹುರಾಷ್ಟ್ರೀಯ ಸೈಬರ್‌ ಭದ್ರತಾ ಸಂಸ್ಥೆಯೊಂದು ಡಿಸೆಂಬರ್‌ 2023ಲ್ಲಿ ಪ್ರಕಟಿಸಿದ ಟ್ರೆಂಡ್‌ಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಮಾಡಿದ್ದೇನೆ. ಇದು ಕಂಪೆನಿಗಳ ಮುಖ್ಯಸ್ಥರಿಗಷ್ಟೇ ಅಲ್ಲ, ಜನಸಾಮಾನ್ಯರೂ ತಿಳಿದು ಜಾಗರೂಕರಾಗುವಂತಿದೆ. ತಂತ್ರಜ್ಞಾನವನ್ನು ಹೆಚ್ಚು ಪ್ರಜ್ಞಾಪೂರ್ವಕವಾಗಿ ಮತ್ತು ಸುರಕ್ಷಿತವಾಗಿ ಬಳಸುವ ಉತ್ತಮ ಅಭ್ಯಾಸಗಳನ್ನು ತಿಳಿಸುತ್ತದೆ.

1) ರಕ್ಷಣೆ ಮತ್ತು ದಾಳಿಗಾಗಿ ಕೃತಕ ಬುದ್ಧಿಮತ್ತೆಯ ಅಳವಡಿಕೆ: ಕೃತಕ ಬುದ್ಧಿಮತ್ತೆ ಹೆಚ್ಚು ಸಂಕೀರ್ಣವಾಗುತ್ತಿದೆ. ಸೈಬರ್ ದಾಳಿಕೋರರು ದಾಳಿಗಳನ್ನು ರೂಪಿಸಲು ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಸೈಬರ್ ಸುರಕ್ಷತಾ ಪರಿಣಿತರು ಕೃತಕ ಬುದ್ಧಿಮತ್ತೆಯ ಸಹಾಯದಿಂದ ಹೊಸ ಬಗೆಯ ರಕ್ಷಣಾ ವ್ಯವಸ್ಥೆಗಳನ್ನು ರೂಪಿಸುತ್ತಿದ್ದಾರೆ.

2) ಫಿಶಿಂಗ್ ಅಟ್ಯಾಕ್‌ಗಳ ವಿಕಸನ: ಫಿಶಿಂಗ್, ಆಕ್ರಮಣಕಾರರಿಗೆ ಪ್ರವೇಶವನ್ನು ನೀಡಲು ಬಳಕೆದಾರರನ್ನು ಮೋಸಗೊಳಿಸುವುದನ್ನು ಒಳಗೊಂಡಿರುವ ಒಂದು ರೀತಿಯ ಸಾಮಾಜಿಕ ಎಂಜಿನಿಯರಿಂಗ್ ದಾಳಿ. ಇದು 2024 ರಲ್ಲಿ ಆತಂಕಕಾರಿಯಾಗಿ ಮುಂದುವರಿಯುತ್ತದೆ. ವರ್ಷದ ಮೊದಲಾರ್ಧ ಮುಗಿಯುವಷ್ಟರಲ್ಲಿ ಇದು ಕಳೆದ ವರ್ಷಕ್ಕಿಂದ ಜಾಸ್ತಿಯಾಗಿರುವುದು ಗಮನಿಸಿದ್ದಾರೆ.

3) ಸಂಸ್ಥೆಗಳಲ್ಲಿ ಸೈಬರ್‌ ಸುರಕ್ಷತೆಗೆ ಆದ್ಯತೆ: ಸೈಬರ್‌ ದಾಳಿಗಳ ಹೆಚ್ಚುತ್ತಿರುವ ಆವರ್ತನದೊಂದಿಗೆ, 2024 ರಲ್ಲಿ ಐಟಿ ವಿಭಾಗದ ಅವಿಭಾಜ್ಯ ಅಂಗವಾಗಿರುವುದಕ್ಕಿಂತ ಹೆಚ್ಚಾಗಿ ಸೈಬರ್‌ ಸುರಕ್ಷತೆಯು ಸಂಸ್ಥೆಗಳಲ್ಲಿ ಕಾರ್ಯತಂತ್ರದ ಆದ್ಯತೆಯಾಗಿರಬೇಕು.

cyber attacks

4) IoT-ಚಾಲಿತ ಸೈಬರ್ ದಾಳಿಗಳು: ಇಂಟರ್ನೆಟ್ ಆಫ್‌ ತಿಂಗ್ಸ್ (IoT: ಮನೆಗಳಲ್ಲಿ ಧ್ವನಿ ಮೂಲಕ ಬಳಸುವ ಸಾಧನಗಳು ಉದಾಹರಣೆ: ಅಲೆಕ್ಸಾ) ಮೂಲಕ ಪರಸ್ಪರ ಸಂವಹನ ನಡೆಸುವ ಸಾಧನಗಳು ಹೆಚ್ಚಾಗುತ್ತಿದೆ. ಇದು ಸೈಬರ್ ದಾಳಿಕೋರರಿಗೆ ದಾಳಿ ಮಾಡಲು ಹೆಚ್ಚು ಸಂಭಾವ್ಯ ವ್ಯವಸ್ಥೆಗಳನ್ನು ಕೊಡುತ್ತದೆ.

5) ಸೈಬರ್ ಸ್ಥಿತಿಸ್ಥಾಪಕತ್ವ ಮತ್ತು ಸೈಬರ್ ಭದ್ರತೆ: 2024ರಲ್ಲಿ, ಸೈಬರ್ ಸ್ಥಿತಿಸ್ಥಾಪಕತ್ವ ಮತ್ತು ಸೈಬರ್ ಭದ್ರತೆಯ ನಡುವಿನ ಸ್ಪಷ್ಟವಾದ ವ್ಯತ್ಯಾಸವು ಹೊರಹೊಮ್ಮುತ್ತದೆ.

6) ಝೀರೋ-ಟ್ರಸ್ಟ್ ಮಾದರಿ: ಶೂನ್ಯ-ಟ್ರಸ್ಟ್ ಮಾದರಿಯು ಎಲ್ಲವೂ ಬೆದರಿಕೆ ಎಂದು ಪರಿಗಣಿಸುತ್ತದೆ. ಅಂದರೆ ಕಾರ್ಪೊರೇಟ್ ನೆಟ್‌ವರ್ಕ್‌ನಲ್ಲಿ ಒಳಗೊಂಡಿರುವ ಎಲ್ಲಾ ಸಂವಹನವನ್ನೂ ರೆಕಾರ್ಡ್ ಮಾಡಬೇಕು ಮತ್ತು ವಿಶ್ಲೇಷಿಸಬೇಕು. ಉದ್ಯೋಗಿಯ ಪ್ರವೇಶ ಮತ್ತು ಅವರಿಗೆ ಕೊಟ್ಟಿರುವ ವ್ಯಾಪ್ತಿಯ ಪರಿಧಿಯನ್ನು ವನ್ನು ಪರಿಶೀಲಿಸುವುದು.

7) ಸೈಬರ್ ವಾರ್‌ಫೇರ್ ಮತ್ತು ಪ್ರಭುತ್ವ-ಪ್ರಾಯೋಜಿತ ಸೈಬರ್ ದಾಳಿಗಳು: ಉಕ್ರೇನ್‌ನಲ್ಲಿನ ಯುದ್ಧದೊಂದಿಗೆ, ಸೈಬರ್ ವಾರ್‌ಫೇರ್ ಹೆಚ್ಚು ಜನಪ್ರಿಯವಾಗಿದೆ ಮತ್ತು ಸೈಬರ್ ದಾಳಿಯ ವಿಕಾಸವು ಸ್ಪಷ್ಟವಾಗಿದೆ.

8) Ransomware ಎವಲ್ಯೂಷನ್: Ransomware ಒಂದು ಸೇವೆಯಾಗಿ (RaaS – Ransomware as a service), ಬಳಕೆದಾರರು ಸುಲಿಗೆ ಪಾವತಿಸುವವರೆಗೆ ಕಂಪ್ಯೂಟರ್ ಸಿಸ್ಟಮ್‌ಗೆ ಪ್ರವೇಶವನ್ನು ನಿರ್ಬಂಧಿಸುವುದನ್ನು ಒಳಗೊಂಡಿರುವ ಈ ಸೈಬರ್‌ ದಾಳಿ, ವಿಶೇಷವಾಗಿ ಆರೋಗ್ಯ ಪೂರೈಕೆದಾರರಿಗೆ ಆತಂಕಕಾರಿಯಾಗಿದೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಜೀವನವೇ ಸ್ಕ್ರೋಲಿಂಗ್: ನೀವು ಸಾಮಾಜಿಕ ಮಾಧ್ಯಮದ ವ್ಯಸನಿಯಾಗಿದ್ದೀರಾ?

9) ಗೌಪ್ಯತೆ ಮತ್ತು ನಿಯಂತ್ರಕ ಅನುಸರಣೆ: NIS2, ಯುರೋಪಿಯನ್ ಒಕ್ಕೂಟದ ನೆಟ್‌ವರ್ಕ್ ಮತ್ತು ಮಾಹಿತಿ ಭದ್ರತಾ ನಿರ್ದೇಶನ, ಸೈಬರ್ ಸುರಕ್ಷತೆಯನ್ನು ಸುಧಾರಿಸಲು ಮತ್ತು ಸೈಬರ್ ಬೆದರಿಕೆಗಳ ವಿರುದ್ಧ ಮೂಲಸೌಕರ್ಯಗಳನ್ನು ರಕ್ಷಿಸಲು ಸಮಗ್ರ ಪ್ರಯತ್ನ ಮಾಡುತ್ತಿದೆ.

10) ವಿಸ್ತೃತ ಪತ್ತೆ ಮತ್ತು ಪ್ರತಿಕ್ರಿಯೆ: (XDR – Extended Detection and Response) ನಿರಂತರ ತಾಂತ್ರಿಕ ಪ್ರಗತಿಯೊಂದಿಗೆ, ಸಾಂಪ್ರದಾಯಿಕ ಸೈಬರ್‌ ಸೆಕ್ಯುರಿಟಿ ಉಪಕರಣಗಳು ಸಮಗ್ರ ಪರಿಹಾರಗಳನ್ನು ಕೊಡುವಂತಹ ಉಪಕರಣಗಳಿಗೆ ಮತ್ತು ಕಾರ್ಯತಂತ್ರಗಳಿಗೆ ದಾರಿ ಮಾಡಿಕೊಡುತ್ತದೆ.

11) ಥರ್ಡ್-ಪಾರ್ಟಿ ರಿಸ್ಕ್ ಮ್ಯಾನೇಜ್‌ಮೆಂಟ್‌ನಲ್ಲಿ ಹೆಚ್ಚಿದ ಹೂಡಿಕೆಗಳು: ಇದು ಮೂರನೇ ವ್ಯಕ್ತಿಗಳಿಗೆ ಉಪಗುತ್ತಿಗೆ ನೀಡುವ ಪೂರೈಕೆದಾರರು ಅಥವಾ ಸೇವಾ ಪೂರೈಕೆದಾರರಿಗೆ ಸಂಬಂಧಿಸಿದ ಅಪಾಯಗಳನ್ನು ವಿಶ್ಲೇಷಿಸುವ ಮತ್ತು ಕಡಿಮೆ ಮಾಡುವ ಪ್ರಕ್ರಿಯೆಯಾಗಿದೆ.

12) ಗೌಪ್ಯತೆ-ಸಂರಕ್ಷಿಸುವ ತಂತ್ರಜ್ಞಾನಗಳು: ಡೇಟಾ ಗೌಪ್ಯತೆ (Data privacy) ಮತ್ತು ಅದರ ನಿಯಂತ್ರಣವು ಹೋಮೋಮಾರ್ಫಿಕ್ ಎನ್‌ಕ್ರಿಪ್ಶನ್‌ನಂತಹ ಗೌಪ್ಯತೆ-ಸಂರಕ್ಷಿಸುವ ತಂತ್ರಜ್ಞಾನಗಳ ಅಭಿವೃದ್ಧಿಗೆ ಚಾಲನೆ ನೀಡುತ್ತದೆ

13) DevSecOps ನ ಏಕೀಕರಣ: DevSecOps ಇನ್ನು ಮುಂದೆ ಒಂದು ಪರಿಕಲ್ಪನೆಯಾಗಿರುವುದಿಲ್ಲ ಆದರೆ ಸಾಫ್ಟ್‌ವೇರ್ ಅಭಿವೃದ್ಧಿಯ ಮೂಲಭೂತ ಭಾಗವಾಗುತ್ತದೆ

14) ಕ್ಲೌಡ್ ಮತ್ತು ಮಲ್ಟಿ-ಕ್ಲೌಡ್ ಪರಿಸರದಲ್ಲಿ ಭದ್ರತೆ: ಕ್ಲೌಡ್ (cloud) ಅಥವಾ ಬಹು-ಕ್ಲೌಡ್ ಪರಿಸರದಲ್ಲಿ ಭದ್ರತೆ ಐಟಿ ಪರಿಸರ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳ ಬೇಕಾದ ಪ್ರವೃತ್ತಿ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಸೈಬರ್‌ ಸೇಫ್ಟಿ ಅಂಕಣ: ಸ್ಮಾರ್ಟ್‌ ಫೋನಿನ ಸ್ಮಾರ್ಟ್ ಬಳಕೆಗೆ 12 ಸೂತ್ರಗಳು

Continue Reading

ಅಂಕಣ

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

ನನ್ನ ದೇಶ ನನ್ನ ದನಿ ಅಂಕಣ: ಶತಮಾನದ ಹಿಂದೆಯೇ, ಬ್ರಿಟಿಷರು ಆಳುತ್ತಿದ್ದಾಗಲೇ, ಬ್ರಿಟಿಷರ ಬಗೆಗೆ ಬಾಮನದಾಸರಂತಹವರು ಬರೆದಿಟ್ಟುಹೋಗಿದ್ದರೂ ನಮ್ಮ ಕನ್ನಡದ ನವ್ಯರಿಗೆ ರೋಮಿಲ್ಲಾ ಥಾಪರ್, ಇರ್ಫಾನ್ ಹಬೀಬ್, ಡಿ.ಎನ್.ಝಾ ರಂತಹ ಸುಳ್ಳು-ಇತಿಹಾಸಕಾರರ ಪುಸ್ತಕಗಳು ಮಾತ್ರವೇ ಪಥ್ಯವಾದವು. ಈಗಲೂ ವಿವಿಧ ಕ್ಷೇತ್ರಗಳಲ್ಲಿರುವ ಅವರ ಶಿಷ್ಯಕೋಟಿ ಇನ್ನೂ ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಬರೆಯುತ್ತಾರೆ, ಮಾತನಾಡುತ್ತಾರೆ, ವಾದಿಸುತ್ತಾರೆ.

VISTARANEWS.COM


on

ನನ್ನ ದೇಶ ನನ್ನ ದನಿ baman das basu
Koo

ಈ ಅಂಕಣವನ್ನು ಇಲ್ಲಿ ಆಲಿಸಿ:

ajjampura manjunath ನನ್ನ ದೇಶ ನನ್ನ ದನಿ

ನನ್ನ ದೇಶ ನನ್ನ ದನಿ ಅಂಕಣ: “ವಸಾಹತುಶಾಹಿ (colonialism) ನಿರ್ಗಮನದ ಅನಂತರವೂ ಒಬ್ಬ ಅದರ ಪರವಾಗಿಯೇ ಮಾತನಾಡುತ್ತಾನೆ, ಎಂದರೆ ವಸಾಹತುಶಾಹಿಯು ತುಂಬ ಪರಿಣಾಮಕಾರಿಯಾಗಿಯೇ ಬೇರೂರಿದೆ ಎಂದರ್ಥ”.

ಅನೇಕ ವರ್ಷಗಳಿಂದ ಈ ಚಿಂತನೆ, ಈ ಮಾತು, ಈ ಸಂಗತಿ ನನ್ನನ್ನು ಕಾಡುತ್ತಲೇ ಇದೆ. ನಿಜ. ನಮ್ಮ ಮೇಲಾದ ಆಕ್ರಮಣಗಳು ಬಹು-ಮುಖೀ. ನಾವು ಶತಾಯಗತಾಯ ಯುದ್ಧಗಳನ್ನು (wars) ಸೋಲಬಾರದು. ಸೋತರೆ ಪ್ರಣಶ್ಯತಿ. ಅಬ್ರಹಾಮಿಕ್ (abrahamic) ಮತಗಳ ವಿನಾಶಕಾರೀ ಆಕ್ರಮಣಗಳನ್ನು, ಧ್ವಂಸ-ವಿಧ್ವಂಸಗಳನ್ನು ಅಧ್ಯಯನ ಮಾಡಿದಾಗ ಮತ್ತು ಇವುಗಳಿಗಿಂತಲೂ ನಮ್ಮಂತಹ ಗುಲಾಮದೇಶಗಳ ಜನರ ಮಾನಸಿಕತೆ – ಅಭಿಪ್ರಾಯಗಳ ಮೇಲಾದ ಭಯಾನಕ ದುಷ್ಪರಿಣಾಮಗಳನ್ನು ನೋಡುವಾಗ, ಹೌದು, ನಾವು ಶತ್ರುಗಳನ್ನು (enemies) ಯಾವ ಕಾರಣಕ್ಕೂ ಔದಾರ್ಯದಿಂದ ಕಾಣಬಾರದಿತ್ತು. ಅವರ “ಭಾಷೆಯಲ್ಲಿಯೇ” ನಾವೂ ಉತ್ತರ ನೀಡಬೇಕಿತ್ತು, ಎನಿಸುತ್ತದೆ. ಶ್ರೀಕೃಷ್ಣನಂತೆ, (SriKrishna) ಆಚಾರ್ಯ ಚಾಣಕ್ಯರಂತೆ (Chanakya) ಸಂಪೂರ್ಣ ಶತ್ರುನಾಶವೇ ನಮ್ಮ ಕಾರ್ಯತಂತ್ರವೂ ಆಗಬೇಕಿತ್ತು, ಅನಿಸುತ್ತದೆ. ಬ್ರಿಟಿಷರು (British) ಮತ್ತು ಅವರ “ಪ್ರೀತಿಪಾತ್ರರು” ಬರೆಸಿರುವ – ಬರೆದಿಟ್ಟಿರುವ ಇತಿಹಾಸ ಪುಸ್ತಕಗಳನ್ನು ನೋಡಿದರೆ, ಇಡೀ ದಕ್ಷಿಣ ಭಾರತವನ್ನು ಈಗಲೂ ನಾಶ ಮಾಡುತ್ತಲೇ ಇರುವ ಅವೈಜ್ಞಾನಿಕವಾದ ಆರ್ಯ – ದ್ರಾವಿಡ (Arya Dravida) ಪೊಳ್ಳು ಸಿದ್ಧಾಂತದ ಪರಿಣಾಮವನ್ನು ನೋಡಿದರೆ ಗಾಬರಿಯಾಗುತ್ತದೆ. ನೋಡಿ, ನಮ್ಮ ದೇಶದ ಶಿಕ್ಷಣ, ಕೃಷಿ, ಉದ್ಯಮಗಳನ್ನು ನಾಶ ಮಾಡಿದ ಬ್ರಿಟಿಷರು, ಬಹಳಷ್ಟು ಭಾರತೀಯರ ದೃಷ್ಟಿಯಲ್ಲಿ ಇಂದಿಗೂ ಆರಾಧ್ಯದೈವಗಳಾಗಿದ್ದಾರೆ, ಉದ್ಧಾರಕರಾಗಿದ್ದಾರೆ! ವಸಾಹತುಶಾಹಿಯ ಅಧ್ಯಾಯ ಮುಗಿದಿದೆ, ನಾವೊಂದು ಸ್ವತಂತ್ರ ರಾಷ್ಟ್ರ, ಎಂದು ನಾವು ಎಷ್ಟೆಷ್ಟು ಬಾರಿ ಹೇಳಿಕೊಂಡರೂ, ವಸಾಹತುಶಾಹಿಯ ಮಾನಸಿಕತೆ – ಅವರ ಬಗೆಗಿನ ಆರಾಧನೆಗಳು ನಮ್ಮೊಳಗೆ ಇದ್ದರೆ, ನಾವಿನ್ನೂ ಗುಲಾಮರಾಗಿಯೇ ಮುಂದುವರಿದಿದ್ದೇವೆ, ಎನಿಸುವುದಿಲ್ಲವೇ?

ಇತಿಹಾಸಕಾರ ಬಾಮನ (ವಾಮನ) ದಾಸ ಬಸು (Baman Das Basu) ಅವರ “ಹಿಸ್ಟರಿ ಆಫ್ ಎಜುಕೇಷನ್ ಇನ್ ಇಂಡಿಯಾ ಅಂಡರ್ ದಿ ರೂಲ್ ಆಫ್ ಈಸ್ಟ್ ಇಂಡಿಯಾ ಕಂಪನಿ” (ಪ್ರಕಟಣೆ 1922) ಕೃತಿಯ ಕೆಲವು ಸಾಲುಗಳನ್ನು ಗಮನಿಸುವಾಗ, ಸಹಜವಾಗಿಯೇ ಕನ್ನಡದ ನಮ್ಮ ನವ್ಯ ಸಾಹಿತಿಗಳ ಮಾತು – ಭಾಷಣಗಳೇ ನೆನಪಾಗುತ್ತವೆ. ನಾಲ್ಕೈದು ದಶಕಗಳ ಹಿಂದೆ ನಮ್ಮಂತಹವರ ಮೇಲೆ ತುಂಬಾ ಪ್ರಭಾವ ಬೀರಿದವರು ಈ ನವ್ಯರು. Of Course, ಅವರೆಲ್ಲಾ ತುಂಬ ಚೆನ್ನಾಗಿ ಮಾತನಾಡುತ್ತಿದ್ದರು, ಆಕರ್ಷಕವಾದ ಹೊಸದೊಂದು ಭಾಷೆಯಲ್ಲಿ ಬರೆಯುತ್ತಿದ್ದರು. ಭಾರತೀಯ ಸಾಹಿತ್ಯದ ಮೇಲೆ, ಶಿಕ್ಷಣ – ಜನಜೀವನ – ಸಾಮಾಜಿಕ ವ್ಯವಸ್ಥೆಗಳ ಮೇಲೆ, ವಸಾಹತುಶಾಹಿಯ ಪ್ರಭಾವದ ಬಗೆಗೆ ಈ ನವ್ಯರ ಮಾತುಗಳನ್ನು ಕೇಳಿ ನಾನು ಬೆರಗಾದುದುಂಟು. ತಮ್ಮ ಮಾತಿನ ಪ್ರತಿ ಎರಡು ವಾಕ್ಯಗಳಿಗೊಮ್ಮೆ ಭಾರತದ, ಮುಖ್ಯವಾಗಿ ಹಿಂದೂಗಳ ಮೂಢನಂಬಿಕೆಗಳ ಬಗೆಗೆ, ಅಸ್ಪೃಶ್ಯತೆ – ಜಾತಿವ್ಯವಸ್ಥೆ – ಮುಂತಾದವುಗಳ ಬಗೆಗೆ ತಪ್ಪದೇ ಪ್ರಹಾರ ಮಾಡುತ್ತಿದ್ದರು. ವಸಾಹತುಶಾಹಿ ಬಂದುದೇ ನಮ್ಮ ವಿಮೋಚನೆಗೆ ಎಂದು ಪರೋಕ್ಷವಾಗಿ ಹೇಳುತ್ತಿದ್ದರು. ಈ ದೇಶದಲ್ಲಿ ಹೆಣ್ಣುಮಕ್ಕಳಿಗೆ, ಶೂದ್ರರಿಗೆ, ಅಸ್ಪೃಶ್ಯರಿಗೆ ಕಳೆದ ಐದು ಸಾವಿರ ವರ್ಷಗಳಿಂದ ವಿದ್ಯಾಭ್ಯಾಸಕ್ಕೆ ಅವಕಾಶವಿರಲಿಲ್ಲ, ಎಂದು ರೋದಿಸುತ್ತಿದ್ದರು. ಬ್ರಿಟಿಷರ ಪ್ರೀತಿಪಾತ್ರರೇ ಬರೆಸಿದ ಇತಿಹಾಸದ ಪಠ್ಯಪುಸ್ತಕಗಳಲ್ಲಿ ಯೂರೋಪಿಯನ್ನರು ಇಲ್ಲಿಗೆ ಬಂದುದೇ ವ್ಯಾಪಾರದ ಹೆಸರಿನಲ್ಲಿ ಲೂಟಿ ಮಾಡಲು – ವಸಾಹತುಗಳನ್ನು ಸ್ಥಾಪಿಸಲು ಎಂದೆಲ್ಲಾ ಓದಿದವರಿಗೆ, ಈ ನವ್ಯರ ಮಾತುಗಳು ಗೊಂದಲವನ್ನುಂಟುಮಾಡುತ್ತಿದ್ದವು, ನಮಗೆಲ್ಲಾ ಅಯೋಮಯವಾಗುತ್ತಿತ್ತು. “ಈ ನವ್ಯ ಸಾಹಿತಿಗಳೆಲ್ಲಾ ವಸಾಹತುಶಾಹಿಯ ಪರವಾಗಿಯೇ ಮಾತನಾಡುತ್ತಿದ್ದಾರಲ್ಲಾ” ಎನಿಸಿ ವಿಷಾದವೂ ಉಂಟಾಗುತ್ತಿತ್ತು. ಭಾರತದಲ್ಲಿ ಆಸ್ಪತ್ರೆಗಳನ್ನು, ಶಾಲೆಗಳನ್ನು ಪ್ರಾರಂಭ ಮಾಡಿದವರೇ ಬ್ರಿಟಿಷರು. ಅವರಿಂದಾಗಿಯೇ ರೈಲು ವ್ಯವಸ್ಥೆ ಬಂದಿತು. ಆಧುನಿಕತೆ – ವಿಜ್ಞಾನ ಅವರಿಂದಲೇ ಬಂದಿತು…..ಇತ್ಯಾದಿ ಇತ್ಯಾದಿ……

ಭಾರತದಲ್ಲಿ ರಸ್ತೆಗಳನ್ನು ಮಾಡಿಸಿದವರೂ ಬ್ರಿಟಿಷರೇ, ಎಂದು ಈಗಲೂ ಕೆಲವರು ಉಗ್ಘಡಿಸುವುದುಂಟು. “ಹಾಗಿದ್ದಲ್ಲಿ, ಸ್ವಾಮೀ, ಬ್ರಿಟಿಷರಿಗಿಂತ ಮೊದಲು ಇದ್ದ ಕೃಷ್ಣದೇವರಾಯನ ಐದು ಲಕ್ಷ ಸೈನಿಕರು, 1200 ಆನೆಗಳು, 60,000 ಕುದುರೆಗಳು ಏನು ಆಕಾಶದಲ್ಲಿ ಓಡಾಡುತ್ತಿದ್ದವೇ” ಎಂದು ಕೇಳಿದರೆ ಉತ್ತರಿಸುವುದಿಲ್ಲ.

ಈಗ ಹದಿನಾಲ್ಕು ವರ್ಷಗಳ ಹಿಂದೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರೊಬ್ಬರು, ತಮ್ಮ ಮಾತುಗಳ ಆರಂಭದಲ್ಲಿಯೇ “ಬ್ರಿಟಿಷರು ನಮ್ಮ ದೇಶಕ್ಕೆ ಬರದೇಹೋಗಿದ್ದರೆ, ನಾವೆಲ್ಲಾ ಇನ್ನೂ ಅಂಧಕಾರದಲ್ಲಿ ಇರುತ್ತಿದ್ದೆವು” ಎಂದು ಹೇಳಿ ಆಘಾತವನ್ನೇ ಉಂಟುಮಾಡಿದ್ದರು.

ಬಾಮನದಾಸರು ದಾಖಲಿಸಿರುವ ಕೆಲವು ಅಂಶಗಳು ಗಮನಿಸುವಂತಹವು. ಇದು ನೂರು ವರ್ಷಗಳ ಹಿಂದಿನ ಗ್ರಂಥ ಮತ್ತು ಬ್ರಿಟಿಷರು ಆಳುತ್ತಿದ್ದಾಗಲೇ ಪ್ರಕಟವಾದ ಗ್ರಂಥ ಎನ್ನುವುದನ್ನು ನಾವು ಮರೆಯುವಂತಿಲ್ಲ.

ಭಾರತಕ್ಕೆ ಸಮುದ್ರ ಮಾರ್ಗದಲ್ಲಿ ಬರಲು ಧಾವಿಸಲು, ಯೂರೋಪಿಯನ್ನರ ಮಧ್ಯೆ 15ನೆಯ ಶತಮಾನದಿಂದಲೇ ಸ್ಪರ್ಧೆ – ಯುದ್ಧ ನಡೆಯುತ್ತಿತ್ತು. ಪೋರ್ತುಗೀಸರನ್ನು, ಡಚ್ಚರನ್ನು, ಫ್ರೆಂಚರನ್ನು ಬಗ್ಗುಬಡಿದು ಬ್ರಿಟಿಷರ ಈಸ್ಟ್ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಪಾರಮ್ಯವನ್ನು ಸಾಧಿಸಿತು. ಭಾರತೀಯರ ಶಿಕ್ಷಣಕ್ಕೆ ಸಂಬಂಧಿಸಿದಂತೆ, ಬ್ರಿಟಿಷರೇನೂ ತಲೆ ಕೆಡಿಸಿಕೊಂಡಿರಲಿಲ್ಲ. ಇಲ್ಲಿನ ರಾಜರ – ಸುಲ್ತಾನರ ನಡುವೆ ರಾಜಕೀಯ ಮಾಡುತ್ತಾ ತಮ್ಮ ಲೂಟಿಯಲ್ಲಿ, ವ್ಯಾಪಾರದಲ್ಲಿ ಗರಿಷ್ಠ ಲಾಭ ಗಳಿಸುವಲ್ಲಿ ನಿರತರಾಗಿದ್ದರು. ಕೆಲಕಾಲಾನಂತರ ಭಾರತದ ಸ್ಥಳೀಯರಿಗೆ ಇಂಗ್ಲಿಷ್ ಶಿಕ್ಷಣ ನೀಡದಿದ್ದರೆ ತಾವು ಬಹಳ ಕಾಲ ವಸಾಹತುವನ್ನು ನಿಭಾಯಿಸಲು ಸಾಧ್ಯವಿಲ್ಲ, ಎಂಬುದು ಅವರಿಗೆ ಅರಿವಾಯಿತು. 18ನೆಯ ಶತಮಾನದ ಕೊನೆಯ ಹೊತ್ತಿಗೆ ಹಿಂದುಗಳಿಗೆ ಮತ್ತು ಮುಸ್ಲಿಮರಿಗೆ, ಕಾಶಿ ಮತ್ತು ಕೊಲ್ಕತ್ತಾಗಳಲ್ಲಿ ಸಂಸ್ಕೃತದ ಮತ್ತು ಇಸ್ಲಾಮೀ ಶಿಕ್ಷಣದ ಕಾಲೇಜುಗಳನ್ನು ಸ್ಥಾಪಿಸಿದರು. ತಮ್ಮ ಆಡಳಿತಾತ್ಮಕ ಉದ್ದೇಶಕ್ಕಾಗಿ ಈ ಕಾಲೇಜುಗಳನ್ನು ಸ್ಥಾಪಿಸಿದರೇ ವಿನಃ, ಸ್ಥಳೀಯರಿಗೆ ವಿದ್ಯೆ ಕಲಿಸುವ ಸದುದ್ದೇಶವಿರಲಿಲ್ಲ.

ಭಾರತದ ನೂರೆಂಟು ಭಾಷೆಗಳನ್ನು ತಾವು ಕಲಿತು ಆಡಳಿತ ಮಾಡುವುದರ ಬದಲಿಗೆ, ಇಲ್ಲಿನವರಿಗೇ ಇಂಗ್ಲಿಷ್ ಕಲಿಸಿಬಿಡುವುದು ಅವರಿಗೆ ಲಾಭದಾಯಕವಾಗಿತ್ತು.

ಇದೇ ಬ್ರಿಟಿಷರೇ, ತಮ್ಮ ಆಳ್ವಿಕೆಯಲ್ಲಿ, ಅಮೆರಿಕೆಯಲ್ಲಿ “ಶಿಕ್ಷಣದ ಉದ್ದೇಶಕ್ಕಾಗಿ ಕಪ್ಪು ಗುಲಾಮರನ್ನು ಒಂದೆಡೆ ಸೇರಿಸುವುದು ಕಾನೂನಿಗೆ ವಿರುದ್ಧವಾಗುತ್ತದೆ. ಉಲ್ಲಂಘಿಸಿದವರಿಗೆ ಉಗ್ರ ಶಿಕ್ಷೆ ನೀಡಲಾಗುತ್ತದೆ” ಎಂದು ಕಾನೂನು ಮಾಡಿದ್ದರು. ಇದು ಬ್ರಿಟಿಷ್ ಧೂರ್ತರ ನಿಜಸ್ವರೂಪ.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

ನಮ್ಮ ದೇಶಕ್ಕೆ ಸಂಬಂಧಿಸಿದಂತೆ, ಮೆಕಾಲೆಯ ಶಿಫಾರಸ್ಸುಗಳೇನಿದ್ದವು, ಅವನ ಉದ್ದೇಶವೇನಿತ್ತು, ಇತ್ಯಾದಿ ನಮಗೆಲ್ಲ ಗೊತ್ತೇ ಇದೆ. ಬಾಮನದಾಸರು ತಮ್ಮ ಕೃತಿಯಲ್ಲಿ, ಮೆಕಾಲೆಯ ಬಂಧು ಚಾರ್ಲ್ಸ್ ಟ್ರೆವೆಲ್ಯಾನ್ ಎಂಬವನು, ಬ್ರಿಟಿಷ್ ಸಂಸತ್ತಿನ ಸಮಿತಿಯ ಮುಂದೆ ನೀಡಿದ ಹೇಳಿಕೆಯನ್ನೂ ಉಲ್ಲೇಖಿಸುತ್ತಾರೆ. “ಭಾರತದಲ್ಲಿರುವ ಹಿಂದೂಗಳು ಮತ್ತು ಮುಸ್ಲಿಮರು, ಬ್ರಿಟಿಷರನ್ನು ತಮ್ಮ ದೇಶವನ್ನು ವಶಪಡಿಸಿಕೊಂಡ ವಿದೇಶೀ ಶತ್ರುಗಳು ಎಂದೇ ಭಾವಿಸುತ್ತಾರೆ. ಐರೋಪ್ಯ ಶಿಕ್ಷಣವನ್ನು ನೀಡಿದ ಮೇಲೆ, ಅವರು ತಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡುವುದನ್ನೇ ಬಿಟ್ಟುಬಿಡುತ್ತಾರೆ. ಬ್ರಿಟಿಷರನ್ನು ತಮ್ಮ ಶತ್ರುಗಳು ಮತ್ತು ತಮ್ಮ ದೇಶವನ್ನು ಆಕ್ರಮಿಸಿಕೊಂಡವರು ಎಂದು ಭಾವಿಸುವುದನ್ನು ಮರೆತು, ತಮ್ಮ ಸ್ನೇಹಿತರಂತೆ – ಪೋಷಕರಂತೆ ಕಾಣುತ್ತಾರೆ ” ಎಂದಿದ್ದ ಈ ಚಾರ್ಲ್ಸ್ ಟ್ರೆವೆಲ್ಯಾನ್.

ಶತಮಾನದ ಹಿಂದೆಯೇ, ಬ್ರಿಟಿಷರು ಆಳುತ್ತಿದ್ದಾಗಲೇ, ಬ್ರಿಟಿಷರ ಬಗೆಗೆ ಬಾಮನದಾಸರಂತಹವರು ಬರೆದಿಟ್ಟುಹೋಗಿದ್ದರೂ ನಮ್ಮ ಕನ್ನಡದ ನವ್ಯರಿಗೆ ರೋಮಿಲ್ಲಾ ಥಾಪರ್, ಇರ್ಫಾನ್ ಹಬೀಬ್, ಡಿ.ಎನ್.ಝಾ ರಂತಹ ಸುಳ್ಳು-ಇತಿಹಾಸಕಾರರ ಪುಸ್ತಕಗಳು ಮಾತ್ರವೇ ಪಥ್ಯವಾದವು. ಬಹಳ ಜನ ಕೊನೆಯವರೆಗೆ ಭಾರತ-ವಿರೋಧಿಗಳಾಗಿಯೇ ಇದ್ದುಬಿಟ್ಟರು. ಧರ್ಮಪಾಲ್, ಅರುಣ್ ಶೌರಿ, ಸೀತಾರಾಮ ಗೋಯಲ್, ರಾಮಸ್ವರೂಪ್ ಮೊದಲಾದವರ ಸಂಶೋಧನೆ – ವಿಶ್ಲೇಷಣೆಗಳನ್ನು ಓದುವ, ಪರಾಮರ್ಶಿಸುವ ಗೊಡವೆಗೆ ಒಬ್ಬರೂ ಹೋಗಲಿಲ್ಲ. ದುರಂತವೆಂದರೆ, ಈಗಲೂ ವಿವಿಧ ಕ್ಷೇತ್ರಗಳಲ್ಲಿರುವ ಅವರ ಶಿಷ್ಯಕೋಟಿ ಇನ್ನೂ ಕಣ್ಣಿಗೆ ಬಟ್ಟೆ ಕಟ್ಟಿಕೊಂಡೇ ಬರೆಯುತ್ತಾರೆ, ಮಾತನಾಡುತ್ತಾರೆ, ವಾದಿಸುತ್ತಾರೆ.

ಹೌದು, “ವಸಾಹತುಶಾಹಿಯ ನಿರ್ಗಮನದ ಅನಂತರವೂ ಒಬ್ಬ ಅದರ ಪರವಾಗಿಯೇ ಮಾತನಾಡುತ್ತಾನೆ, ಎಂದರೆ ವಸಾಹತುಶಾಹಿಯು ತುಂಬ ಪರಿಣಾಮಕಾರಿಯಾಗಿಯೇ ಬೇರೂರಿದೆ ಎಂದರ್ಥ”.

ಇದನ್ನೂ ಓದಿ: ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Continue Reading
Advertisement
Muthyala Maduvu Waterfalls
ಪ್ರವಾಸ16 mins ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ20 mins ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Raveena Tandon attacked In Mumbai After Being Accused Of Rash Driving
ಬಾಲಿವುಡ್33 mins ago

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

gold rate today
ಕರ್ನಾಟಕ41 mins ago

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Drowned in water
ಚಿಕ್ಕಬಳ್ಳಾಪುರ1 hour ago

Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Virat Kohli
ಕ್ರೀಡೆ1 hour ago

Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

Exit Poll 2024
ದೇಶ1 hour ago

Exit poll 2024: ಮೂರು ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಸೀಟು 400 ದಾಟಲಿದೆ!

Karnataka Rain
ಮಳೆ1 hour ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Bhavani Revanna hide Not Present For SIT Questioning At Home
ಕರ್ನಾಟಕ2 hours ago

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಠ!

IND vs PAK
ಕ್ರಿಕೆಟ್2 hours ago

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು20 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌