Women's Day 2023: ಮುಟ್ಟಿನ ರಜೆ ಆಯ್ಕೆಯಾಗಿರುವುದು ಸೂಕ್ತ - Vistara News

ಮಹಿಳೆ

Women’s Day 2023: ಮುಟ್ಟಿನ ರಜೆ ಆಯ್ಕೆಯಾಗಿರುವುದು ಸೂಕ್ತ

ಮುಟ್ಟಿನ ರಜೆಯನ್ನು (Women’s Day 2023) ಮಹಿಳೆಯರಿಗೆ ಒಂದು ಆಯ್ಕೆಯಾಗಿ ನೀಡುವುದೇ ಸೂಕ್ತ. ಆಗ ಅವಶ್ಯಕತೆ ಇರುವವರು ಉಪಯೋಗಿಸಬಹುದು. ಇಲ್ಲವಾದವರು ದಿನನಿತ್ಯದಂತೆ ಕೆಲಸ ಮಾಡಿಕೊಂಡು ಹೋಗಬಹುದು.

VISTARANEWS.COM


on

Menstrual leave is an option
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರತೀಕ್ಷಾ ಹೊಸಪಟ್ಟಣಕರ, ಮ್ಯಾನಿಫೆಸ್ಟೇಷನ್ ಕೋಚ್

ಸಮಾಜದ ವಿಷಯ ಬಂದಾಗ ಸಮಾನತೆ ಬಗ್ಗೆ ಮಾತನಾಡಬಹುದು, ವೈಯಕ್ತಿಕ ವಿಷಯಕ್ಕೆ ಬಂದಾಗ ಒಂದೇ ರೀತಿಯದ್ದನ್ನು ನಿರೀಕ್ಷಿಸಲಾಗದು. ಏಕೆಂದರೆ ಸಂಸ್ಕಾರ, ಆಹಾರ ಕ್ರಮ, ರೀತಿ ನೀತಿ, ಜೀವನಶೈಲಿ ಎಲ್ಲವೂ ವಿಭಿನ್ನ.

ಇದೇ ನಿಟ್ಟಿನಲ್ಲಿ ಪ್ರತಿಯೊಂದು ಮಹಿಳೆಯ ದೇಹ ಮತ್ತು ಆರೋಗ್ಯ ಕೂಡ ವಿಭಿನ್ನ. ಹೀಗಿರುವಾಗ ಎಲ್ಲರಿಗೂ ಒಂದೇ ರೀತಿಯ ಸಮಸ್ಯೆ ಇದೆ ಅಥವಾ ಇಲ್ಲಾ ಎಂದು ಭಾವಿಸಿ ಬೇಕೇ ಬೇಕು, ಬೇಡವೇ ಬೇಡ ಎನ್ನುವ ವಾದ ಮುಂದಿಡಲು ಸಾಧ್ಯವೇ ಇಲ್ಲಾ. ಹಾಗೆ ಒಂದು ಪಕ್ಷ ಮಾಡಿದಲ್ಲಿ ಒಂದಾ ನರಳುವ ಮಹಿಳೆಗೆ ಅನ್ಯಾಯವಾಗುವ ಇಲ್ಲವೇ ಕೊಟ್ಟ ಸೌಲಭ್ಯ ನಿರರ್ಥಕವಾಗಿಸುವ ಸಾಧ್ಯತೆ ಇದೆ.

ಹೀಗಾಗಿ ಮುಟ್ಟಿನ ರಜೆಯನ್ನು ಮಹಿಳೆಯರಿಗೆ ಒಂದು ಆಯ್ಕೆಯಾಗಿ ನೀಡುವುದೇ ಸೂಕ್ತ. ಆಗ ಅವಶ್ಯಕತೆ ಇರುವವರು ಉಪಯೋಗಿಸಬಹುದು. ಇಲ್ಲವಾದವರು ದಿನನಿತ್ಯದಂತೆ ಕೆಲಸ ಮಾಡಿಕೊಂಡು ಹೋಗಬಹುದು.

ಇದು ವಯಕ್ತಿಕ ಸ್ವಾತಂತ್ರ್ಯಕ್ಕೆ ಕೂಡ ಸಮರ್ಥನೆ ನೀಡುವ ಕಾರಣ ಯಾರಿಗೂ ಒತ್ತಾಯಪೂರ್ವಕವಾಗಿ ಹೇರಿದಂತೆ ಆಗುವುದಿಲ್ಲ, ನರಳುವಂತೆಯೂ ಮಾಡುವುದಿಲ್ಲ.

ಇದನ್ನೂ ಓದಿ : International Women’s Day 2023: ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ನನಗೆ ಕಾಡುತ್ತಿರುವ ಚಿಂತೆಯೆಂದರೆ ಈಗಾಗಲೇ ಹೆಣ್ಣು ಮಕ್ಕಳ ಮದುವೆ, ಮಕ್ಕಳುಗಳ ವಿಚಾರ ಮಾಡಿ ಕೆಲಸ ನೀಡಲು ಹಿಂದೇಟು ಹಾಕುತ್ತಿರುವ ಕಂಪನಿಗಳು ಈಗ ಇದಕ್ಕೂ ರಜೆ ಕಡ್ಡಾಯ ಮಾಡಿದರೆ ಹೆಣ್ಣು ಮಕ್ಕಳನ್ನು ಸೇರಿಸಿಕೊಳ್ಳಲು ಮತ್ತಿಷ್ಟು ಹಿಂದೇಟು ಹಾಕುವ ಸಾಧ್ಯತೆ ಜಾಸ್ತಿ ಇದೆ.

ಅದಕ್ಕಾಗಿ ಕಡ್ಡಾಯವಾಗಿ ಬೇಕು ಬೇಡ ಎನ್ನುವ ವಾದಕ್ಕಿಂತ ಹೆಣ್ಣುಮಕ್ಕಳಿಗೆ ಮುಟ್ಟಿನ ರಜೆಯನ್ನು ಆಯ್ಕೆಯಾಗಿ ನೀಡುವುದೇ ಸರಿಯೆಂದು ನನ್ನ ವಿಚಾರ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Vijayanagara News: ಹೊಸಪೇಟೆಯಲ್ಲಿ ವಿಶ್ವ ಋತುಚಕ್ರ ನೈರ್ಮಲ್ಯ ದಿನಾಚರಣೆ

Vijayanagara News: ಹೊಸಪೇಟೆ ನಗರದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಶ್ವ ಋತುಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮ ಜರುಗಿತು.

VISTARANEWS.COM


on

World Menstrual Hygiene Day in Hosapete
Koo

ಹೊಸಪೇಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಮಂಗಳವಾರ ವಿಶ್ವ ಋತುಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮ (Vijayanagara News) ಜರುಗಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಂಕರ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, 11 ರಿಂದ 14 ವರ್ಷದ ಹೆಣ್ಣುಮಕ್ಕಳಲ್ಲಿ ಪ್ರಾರಂಭವಾಗುವ ಋತುಚಕ್ರದ ಕುರಿತು ಪ್ರತಿಯೊಬ್ಬ ಕಿಶೋರಿಯಿಂದ ಹಿಡಿದು ಎಲ್ಲ ಮಹಿಳೆಯರು ಜಾಗೃತಿ ಹೊಂದಬೇಕು.

ಋತುಸ್ರಾವವಾದಾಗ ವೈಯಕ್ತಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಹೊಸದಾದ ಘೋಷಣೆಯೊಂದಿಗೆ ತಿಳಿಸುವ ವಿಶ್ವ ಋತುಚಕ್ರದ ನೈರ್ಮಲ್ಯ ದಿನದ ಮಹತ್ವವನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಸಲಹೆ ಮಾಡಿದರು.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ ಮಾತನಾಡಿ, ಪ್ರತಿಯೊಬ್ಬ ಪ್ರಜೆ ಋತುಚಕ್ರದ ಕುರಿತು ಅರಿವು ಪಡೆದು ಜ್ಞಾನವಂತರಾಗಬೇಕು. ಮೂಢನಂಬಿಕೆಯನ್ನು ಹೋಗಲಾಡಿಸಬೇಕು. ಕಿಶೋರಿಯರು ಮತ್ತು ಮಹಿಳೆಯರು ಋತುಸ್ರಾವ ಉಂಟಾದಾಗ ವೈಯಕ್ತಿಕ ಕಾಳಜಿ, ಸಂತಾನೋತ್ಪತ್ತಿ, ಪೌಷ್ಟಿಕ ಆಹಾರದ ಸೇವನೆಯ ಬಗ್ಗೆ ತಿಳುವಳಿಕೆ ಹೊಂದಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಡಿಎಂಒ ಕಾರ್ಯಕ್ರಮದ ಅಧಿಕಾರಿ ಡಾ. ಕಮಲಮ್ಮ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಋತುಚಕ್ರ ಅಥವಾ ಋತುಸ್ರಾವ ಎಂದರೆ ಹದಿಹರೆಯದ ಹೆಣ್ಣುಮಕ್ಕಳು ಪ್ರೌಢಾವಸ್ಥೆ ತಲುಪುವ ಹಂತವಾಗಿದೆ. ಈ ಸಂದರ್ಭದಲ್ಲಿ ಮಹಿಳೆಯರು ಪೌಷ್ಠಿಕ ಆಹಾರ ಸೇವನೆ ಮಾಡಬೇಕು. ಋತುಸ್ರಾವ ಉಂಟಾದಾಗ ಹಳೆಯದಾದ ಉಪಯೋಗಿಸಿದ ಬಟ್ಟೆಗಳನ್ನು ಬಳಸಬಾರದು. ವಿಶೇಷವಾಗಿ ಋತುಚಕ್ರದ ಶುಚಿತ್ವ ನಿರ್ವಹಣೆಯ ಬಗ್ಗೆ ಗ್ರಾಮೀಣ ಭಾಗದ ಮಹಿಳೆಯರು ಹೆಚ್ಚಿನ ತಿಳುವಳಿಕೆ ಹೊಂದಬೇಕಿದೆ ಎಂದು ಸಲಹೆ ನೀಡಿದರು.

ಆರ್‌ಬಿಎಸ್‌ಕೆ ವೈದ್ಯಾಧಿಕಾರಿ ಡಾ.ಆಶಾ, ಮುಟ್ಟಿನ ನೈರ್ಮಲ್ಯ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಆರ್‌ಸಿಎಚ್ ಸಿಬ್ಬಂದಿ, ಆರೋಗ್ಯ ಸಿಬ್ಬಂದಿ, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು, ತುಂಗಭದ್ರಾ ಸ್ಕೂಲ್ ಆಫ್ ನರ್ಸಿಂಗ್ ಹೋಂನ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

ಇದನ್ನೂ ಓದಿ: Child Trafficking Racket: ಅಂತಾರಾಜ್ಯ ಮಕ್ಕಳ ಕಳ್ಳಸಾಗಣೆ ದಂಧೆ ಪತ್ತೆ; 11 ಮಕ್ಕಳ ರಕ್ಷಣೆ

ಕಾರ್ಯಕ್ರಮದಲ್ಲಿ ಎಲ್ಲರಿಗೂ ಮುಟ್ಟಿನ ನೈರ್ಮಲ್ಯದ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ ಪ್ರಾಸಾವಿಕ ಮಾತನಾಡಿದರು. ಧರ್ಮನಗೌಡ ವಂದಿಸಿದರು.

Continue Reading

ಆರೋಗ್ಯ

Tips for Mothers: ಆಹಾರ- ಆರೋಗ್ಯ; ದುಡಿಯುವ ಬ್ಯುಸಿ ತಾಯಂದಿರಿಗೆ ಇಲ್ಲಿದೆ ಕಿವಿಮಾತು!

Tips for Mothers: ಕೆಲಸದ ಧಾವಂತದಲ್ಲಿ, ಗಡಿಬಿಡಿಯಲ್ಲಿ ಇಂಥ ಅಮ್ಮಂದಿರು ಮನೆಯವರಿಗೆ ಬೇಕಾದ್ದೆಲ್ಲವನ್ನೂ ಮಾಡಿ ಕೊಟ್ಟರೂ ತಮ್ಮ ಆಹಾರ, ಕಾಳಜಿಯ ಬಗ್ಗೆ ಅತ್ಯಂತ ಕಡಿಮೆ ಗಮನ ಹರಿಸುತ್ತಾರೆ. ಎಲ್ಲರ ಬೇಕು ಬೇಡಗಳ ಬಗ್ಗೆ ಗಮನ ಹರಿಸುವುದರಲ್ಲೇ ಅವರ ದಿನ ಕಳೆದು ಹೋಗುತ್ತದೆ. ಆದರೆ ದುಡಿಯುವ ತಾಯಂದಿರು ತಮ್ಮ ಆಹಾರ, ಆರೋಗ್ಯದ ಕಾಳಜಿಯನ್ನು ಮೊದಲು ಮಾಡಿಕೊಳ್ಳಬೇಕು. ಯಾಕೆಂದರೆ ಅವರು ಆರೋಗ್ಯವಾಗಿದ್ದರೆ ಮಾತ್ರ ಮನೆ ಮಂದಿ ಎಲ್ಲ ಆರೋಗ್ಯ ಚೆನ್ನಾಗಿರಲು ಸಾಧ್ಯ.

VISTARANEWS.COM


on

By

Tips for Mothers
Koo

ದುಡಿಯುವ ಅಮ್ಮಂದಿರಿಗೆ (Tips for Mothers) ತಮ್ಮ ವೃತ್ತಿಯನ್ನೂ ಮಕ್ಕಳನ್ನೂ (children) ಸಂಸಾರವನ್ನೂ (family) ತೂಗಿಸಿಕೊಂಡು ಹೋಗುವುದೇ ದೊಡ್ಡ ಸವಾಲು. ಕೆಲಸದ (work) ಧಾವಂತದಲ್ಲಿ, ಗಡಿಬಿಡಿಯಲ್ಲಿ ಇಂಥ ಅಮ್ಮಂದಿರು ಮನೆಯವರಿಗೆ ಬೇಕಾದ್ದೆಲ್ಲವನ್ನೂ ಮಾಡಿ ಕೊಟ್ಟರೂ ತಮ್ಮ ಆಹಾರ, ಕಾಳಜಿಯ ಬಗ್ಗೆ ಅತ್ಯಂತ ಕಡಿಮೆ ಗಮನ ಹರಿಸುತ್ತಾರೆ.

ಮಕ್ಕಳಿಗೆ ಬೇಕಾದ ಆಹಾರವನ್ನು, ಅವರ ಬೇಕು ಬೇಡಗಳನ್ನು ಗಮನ ಹರಿಸುವುದರಲ್ಲೇ ದಿನ ಕಳೆದು ಹೋಗಿ ತಮ್ಮ ಆಹಾರದ, ಆರೋಗ್ಯದ ಕಾಳಜಿಯನ್ನು ಮಾಡುವುದು ಗೌಣವಾಗುತ್ತದೆ. ಆದರೆ, ಮಹಿಳೆಯರ ಅತ್ಯಂತ ಅಗತ್ಯವಿರುವ ಇಂಥ ನಡುವಯಸ್ಸಿನಲ್ಲಿಯೇ ಬೇಕಾದ ಅಗತ್ಯ ಪೋಷಕಾಂಶಗಳು ಮಹಿಳೆಯರಿಗೆ ದಕ್ಕದೆ, ಹಲವಾರು ಆರೋಗ್ಯದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ, ಈ ಸುಲಭ ಅಭ್ಯಾಸಗಳನ್ನಾದರೂ ಬೆಳೆಸಿಕೊಳ್ಳುವ ಮೂಲಕ ದುಡಿಯುವ ಮಹಿಳೆಯರು ತಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿಕೊಳ್ಳಬಗಹುದು. ಅವು ಯಾವುವು ಎಂಬುದನ್ನು ನೋಡೋಣ.

ಬಾದಾಮಿ ಗೆಳೆಯನಾಗಲಿ

ಬಾದಾಮಿ ನಿಮ್ಮ ಗೆಳೆಯನಾಗಲಿ. ಕಚೇರಿಗೆ ಹೋಗುವಾಗ ಒಂದಿಷ್ಟು ಬಾದಾಮಿ ನಿಮ್ಮ ಬ್ಯಾಗ್‌ನಲ್ಲಿರಲಿ. ಇದು ನಿಮ್ಮ ಆಪತ್ಬಾಂಧವನಾಗಿ, ಗೆಳೆಯನಾಗಿ ಸದಾ ನಿಮಮ ಸಹಾಯಕ್ಕೆ ಬರುತ್ತದೆ. ಪ್ರೊಟೀನ್‌, ಆರೋಗ್ಯಯುತ ಕೊಬ್ಬು, ನಾರಿನಂಶ ಹಾಗೂ ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಬಾದಾಮಿಯನ್ನು ಕಚೇರಿಯ ಬಿಡುವಿನಲ್ಲಿ ಹೊಟ್ಟೆಗಿಳಿಸಬಹುದು. ಆಗ, ಏನೋ ಸಿಕ್ಕಿದ್ದನ್ನು ತಿನ್ನುವ ಅಭ್ಯಾಸಕ್ಕೆ ಕಡಿವಾಣ ಬೀಳುತ್ತದೆ. ಮಹಿಳೆಯರ ದೇಹಕ್ಕೆ ಅಗತ್ಯ ಪೋಷಕಾಂಶಗಳೂ ದಕ್ಕುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಚರ್ಮ, ಕೂದಲ ಆರೋಗ್ಯವೂ ಇಮ್ಮಡಿಗೊಳ್ಳುತ್ತದೆ.

ಸಮಯ ಮೀಸಲಿಡಿ

ವಾರಾಂತ್ಯದಲ್ಲಿ ಒಂದಿಷ್ಟು ಸಮಯ ಕೇವಲ ನಿಮಗಾಗಿ ಮೀಸಲಿಡಿ. ಆ ವಾರವಿಡೀ, ಕಚೇರಿಯಲ್ಲಿ ನೀವು ತಿನ್ನಬಹುದಾದ ಆರೋಗ್ಯಯುತ ಆಹಾರಗಳ ಸೇವನೆಗಾಗಿ ಪಟ್ಟಿ ತಯಾರಿಸಿ. ಮುಂಚಿತವಾಗಿ ಪಟ್ಟಿ ರೆಡಿ ಮಾಡುವುದರಿಂದ ಪ್ರತಿ ದಿನ ಯಾವ ಸ್ನ್ಯಾಕ್ಸ್‌ ತಾನು ತಿನ್ನಬೇಕೆಂಬ ಮುಂಚಿತ ಅರಿವು ಇರುತ್ತದೆ.

ಸರಳ ಆಹಾರ ತಯಾರಿಸಿ

ಸುಲಭ ಹಾಗೂ ಸರಳವಾದ ಆಹಾರ ತಯಾರಿಸಿ. ವಾರಾಂತ್ಯದಲ್ಲೇ, ಈ ಬಗ್ಗೆ ತಯಾರಿ ನಡೆಸಿ, ಒಂದಿಷ್ಟು ಅಡುಗೆಗೆ ಪೂರಕ ತಯಾರಿಯನ್ನು ಮಾಡಿಡಬಹುದು. ಉದಾಹರಣೆಗೆ ಮಾರುಕಟ್ಟೆಯ ಕೆಚಪ್‌ ಪದೇ ಪದೇ ಬಳಸುವ ಮೊದಲು ಟೊಮೇಟೋ ಚಟ್ನಿ ತಯಾರಿಸಿ ಇಟ್ಟುಕೊಳ್ಳಬಹದು. ಒಂದಿಷ್ಟು ಚಟ್ನಿಪುಡಿಗಳು, ತರಕಾರಿ ಕತ್ತರಿಸಿಡುವುದು, ಹಿಟ್ಟು ಮೊದಲೇ ರೆಡಿ ಮಾಡಿಡುವುದು ಇತ್ಯಾದಿ ಕೆಲಸಗಳನ್ನು ಮಾಡಿದರೆ, ಕೆಲಸ ಸುಲಭವಾಗುತ್ತದೆ.


ಆರೋಗ್ಯಕರ ಸ್ನ್ಯಾಕ್

ಕಚೇರಿಗೆ ಒಯ್ಯುವಾಗ ಆರೋಗ್ಯಕರ ಸ್ನ್ಯಾಕ್‌ ತೆಗೆದುಕೊಂಡು ಹೋಗಿ. ಉದಾಹರಣೆ, ಒಂದು ಹಣ್ಣು, ಒಂದಿಷ್ಟು ಬಾದಾಮಿ ಅಥವಾ ಬೀಜಗಳು, ಒಣ ಹಣ್ಣುಗಳು, ಮೊಳಕೆಕಾಳು ಹಸಿ ತರಕಾರಿಗಳು, ಸಲಾಡ್‌ ಇತ್ಯಾದಿಗಳನ್ನು ತೆಗೆದುಕೊಂಡು ಹೋಗಬಹುದು.

ಇದನ್ನೂ ಓದಿ: Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

ಪೋಷಕಾಂಶಗಳ ಆಹಾರ

ಆಹಾರದ ಆಯ್ಕೆ ಮಾಡುವಾಗ ಪೋಷಕಾಂಶಗಳಿಂದ ಸಮೃದ್ಧವಾದ್ದನ್ನೇ ಆಯ್ಕೆ ಮಾಡಿ. ಸಂಪೂರ್ಣ ಆಹಾರದತ್ತ ಗಮನ ಇರಲಿ. ನಿತ್ಯವೂ ಬಗೆಬಗೆಯ ಪೋಷಕಾಂಶಗಳ ವೆರೈಟಿ ಆಹಾರಗಳು ಹೊಟ್ಟೆ ಸೇರಲಿ. ಒಂದೇ ಬಗೆಯ ನೀರಸ ಆಹಾರಗಳ ಅಭ್ಯಾಸವಿದ್ದರೆ ಬಿಟ್ಟುಬಿಡಿ.

ಮೈಂಡ್‌ಫುಲ್‌ ಈಟಿಂಗ್‌

ಮೈಂಡ್‌ಫುಲ್‌ ಈಟಿಂಗ್‌ ಬಗ್ಗೆ ಗಮನ ಹರಿಸಿ. ಅಂದರೆ ಪ್ರತಿ ತುತ್ತನ್ನೂ ಅನುಭವಿಸಿ ತಿನ್ನಿ. ನಿಧಾನವಾಗಿ ತಿನ್ನಲು ಅಭ್ಯಾಸ ಮಾಡಿ. ಊಟ ಮಾಡುವಾಗ ಬೇರೆ ಕೆಲಸಗಳ ಮೇಲೆ ಗಮನ ಹರಿಸಬೇಡಿ. ಊಟವನ್ನು ಅನುಭವಿಸಿ ಚೆನ್ನಾಗಿ ಜಗಿದು ನಿಧಾನವಾಗಿ ತಿನ್ನಿ. ನಿಧಾನವಾಗಿ ತಿನ್ನುವುದರಿಂದ ಹೆಚ್ಚು ತಿನ್ನುವ ಬಯಕೆಯಾಗುವುದಿಲ್ಲ. ಅಗತ್ಯಕ್ಕಿಂದ ಹೆಚ್ಚು ಉಣ್ಣುವುದು ತಪ್ಪುತ್ತದೆ. ಸರಿಯಾಗಿ ನಮ್ಮ ದೇಹಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇರುತ್ತದೆ.

Continue Reading

ಮಹಿಳೆ

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

ಭಾರತೀಯ ರೈಲ್ವೇಯ (Indian Railway) ಏಕ ವ್ಯಕ್ತಿ ಪ್ರಯಾಣಿಕ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮ ಕೈಗೊಂಡಿದೆ. ಇದು 1989ರಲ್ಲಿ ಜಾರಿಗೆ ಬಂದಿದ್ದರೂ ಹೆಚ್ಚಿನವರಿಗೆ ಈ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Indian Railway
Koo

ಮನೆಯ ಮಗಳು ರೈಲಿನಲ್ಲಿ (Indian Railway) ಒಬ್ಬಳೇ ಪ್ರಯಾಣ (Solo trip) ಮಾಡಬೇಕಾದ ಅನಿವಾರ್ಯತೆ ಬಂದಾಗ ಪೋಷಕರಿಗೆ ಒಂದು ಕ್ಷಣ ಗಾಬರಿಯಾಗುವುದು ಸಹಜ. ಇನ್ನು ಮಹಿಳೆಯರಿಗೂ ಅಷ್ಟೇ.. ಏಕಾಂಗಿಯಾಗಿ ರೈಲು ಪ್ರಯಾಣ (solo women travellers) ಮಾಡಬೇಕಾದ ಸಂದರ್ಭ ಬಂದರೆ ಕೊಂಚ ಆತಂಕವಂತೂ ಮನದಲ್ಲಿ ಇದ್ದೇ ಇರುತ್ತದೆ. ಆದರೆ ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸಬೇಕಾದರೆ ಈ ಚಿಂತೆ ಬೇಕಾಗಿಲ್ಲ.

ಭಾರತೀಯ ರೈಲ್ವೇಯ ಏಕ ವ್ಯಕ್ತಿ ಪ್ರಯಾಣಿಕ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮ ಕೈಗೊಂಡಿದೆ. ಇದು 1989ರಲ್ಲಿ ಜಾರಿಗೆ ಬಂದಿದ್ದರೂ ಹೆಚ್ಚಿನವರಿಗೆ ಈ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲಿದೆ.

1989ರಲ್ಲಿ ಜಾರಿಗೆ ಬಂದ ಈ ವಿಶೇಷ ಕಾನೂನು ಭಾರತೀಯ ರೈಲ್ವೇ ಕಾಯಿದೆ 1989 ರ ಸೆಕ್ಷನ್ 139 ರಲ್ಲಿ ವಿವರಿಸಲಾಗಿದೆ. ಒಂಟಿ ಮಹಿಳಾ ಪ್ರಯಾಣಿಕರಿಗೆ ವಿಶೇಷವಾಗಿ ಮಕ್ಕಳೊಂದಿಗೆ ಇರುವವರಿಗೆ ಇದು ರಕ್ಷಣೆ ನೀಡುತ್ತದೆ. ಉದಾಹರಣೆಗೆ ಈ ವಿಭಾಗದ ಪ್ರಕಾರ ಒಬ್ಬ ಮಹಿಳೆ ಪುರುಷ ಪ್ರಯಾಣಿಕರಿಲ್ಲದೆ ಒಂಟಿಯಾಗಿ ಪ್ರಯಾಣಿಸುತ್ತಿದ್ದರೆ ಮತ್ತು ಆಕೆ ತನ್ನ ಮಗುವಿನೊಂದಿಗೆ ಇದ್ದರೆ ಅವಳು ರೈಲು ಪಾಸ್ ಅಥವಾ ಟಿಕೆಟ್ ಇಲ್ಲದೆ ಕಂಡುಬಂದರೆ ರಾತ್ರಿಯಲ್ಲಿ ರೈಲಿನಿಂದ ಇಳಿಯಲು ಆದೇಶಿಸಲಾಗುವುದಿಲ್ಲ.

ಹದಿಹರೆಯದ ಹುಡುಗಿ ಅಥವಾ ಮಹಿಳೆ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದರೆ ಟಿಕೆಟ್ ಹೊಂದಿಲ್ಲದಿದ್ದರೆ ಟಿಟಿಇ ಅವರನ್ನು ರೈಲಿನಿಂದ ಹೊರಹಾಕಲು ಅನುಮತಿ ಇಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟವಾಗಿ ಹೇಳಿದೆ.

ಮಹಿಳೆಯ ಬಳಿ ಹಣವಿದ್ದರೆ ದಂಡ ಪಾವತಿಸಿ ಪ್ರಯಾಣ ಮುಂದುವರಿಸಬಹುದು. ಮಹಿಳೆಗೆ ಹಣದ ಕೊರತೆಯಿರುವ ಸಂದರ್ಭಗಳಲ್ಲಿ ಸಹ ಟಿಟಿಇ ಅವರನ್ನು ಕಂಪಾರ್ಟ್‌ಮೆಂಟ್‌ನಿಂದ ಹೊರಹಾಕಲು ಅನುಮತಿ ಇಲ್ಲ. ಆದರೆ ಹೆಚ್ಚಿನ ಮಹಿಳಾ ಪ್ರಯಾಣಿಕರಿಗೆ ಈ ಬಗ್ಗೆ ತಿಳಿದಿಲ್ಲ. ಒಂಟಿಯಾಗಿ ಪ್ರಯಾಣಿಸುವ ಪ್ರತಿಯೊಬ್ಬ ಮಹಿಳೆ ತಿಳಿದಿರಬೇಕಾದ ಪ್ರಮುಖ ಪ್ರಯಾಣಿಕರ ನಿಯಮಗಳಲ್ಲಿ ಇದು ಒಂದು. ಮಹಿಳಾ ಪ್ರಯಾಣಿಕರಿಗಾಗಿ ಅಧಿಕಾರಿಗಳು ಜಾರಿಗೆ ತಂದಿರುವ ಇನ್ನೂ ಕೆಲವು ನಿಯಮಗಳನ್ನು ಇಲ್ಲಿವೆ.


ಮಹಿಳಾ ಸುರಕ್ಷತೆಗಾಗಿ ಭಾರತೀಯ ರೈಲ್ವೇಯಲ್ಲಿ ಹಲವು ನಿಯಮಗಳು ಜಾರಿಯಲ್ಲಿವೆ
1. ಭಾರತೀಯ ರೈಲ್ವೆ ಕಾಯಿದೆ 1989 ರ ಸೆಕ್ಷನ್ 311 ರ ಅಡಿಯಲ್ಲಿ ಮಿಲಿಟರಿ ಸಿಬ್ಬಂದಿಗೆ ಮಹಿಳಾ ಕಂಪಾರ್ಟ್‌ಮೆಂಟ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

2. ಅಧಿಕಾರಿಗಳೊಂದಿಗೆ ಮಹಿಳಾ ಕಾನ್‌ಸ್ಟೆಬಲ್ ಇದ್ದಾಗ ಮಾತ್ರ ಮಹಿಳೆಯನ್ನು ಹೊರಹೋಗುವಂತೆ ಹೇಳಬಹುದು.

3. ಸೆಕ್ಷನ್ 162 ರ ಪ್ರಕಾರ 12 ವರ್ಷದೊಳಗಿನ ಹುಡುಗರು ಮಹಿಳಾ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣಿಸಬಹುದು.

4. ಮಹಿಳಾ ಕೋಚ್‌ಗೆ ಪ್ರವೇಶಿಸುವ ಯಾವುದೇ ಪುರುಷ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ.

5. ಮಹಿಳೆಯರಿಗಾಗಿ ದೂರದ ಮೇಲ್/ ಎಕ್ಸ್‌ಪ್ರೆಸ್ ರೈಲುಗಳ ಸ್ಲೀಪರ್ ವರ್ಗದಲ್ಲಿ ಆರು ಬರ್ತ್‌ಗಳನ್ನು ಕಾಯ್ದಿರಿಸಲಾಗಿದೆ. ಅಲ್ಲದೆ, ಗರೀಬ್ ರಥ/ರಾಜಧಾನಿ/ ದುರೊಂಟೊ/ ಸಂಪೂರ್ಣ ಹವಾನಿಯಂತ್ರಿತ ಎಕ್ಸ್‌ಪ್ರೆಸ್ ರೈಲುಗಳ ಮೂರನೇ ಹಂತದ AC (3AC) ಕೋಚ್‌ಗಳಲ್ಲಿ ಆರು ಬರ್ತ್‌ಗಳನ್ನು ಮಹಿಳಾ ಪ್ರಯಾಣಿಕರಿಗೆ ಕಾಯ್ದಿರಿಸಲಾಗಿದೆ. ಅವರ ವಯಸ್ಸನ್ನು ಲೆಕ್ಕಿಸದೆ ಅಥವಾ ಅವರು ಏಕಾಂಗಿಯಾಗಿ ಅಥವಾ ಗುಂಪಿನಲ್ಲಿ ಪ್ರಯಾಣಿಸುತ್ತಿದ್ದರೆ ಇದನ್ನು ಮಾಡಲಾಗುತ್ತದೆ.

6. ಭಾರತೀಯ ರೈಲ್ವೇ ನಿಲ್ದಾಣಗಳಲ್ಲಿ ಸಿಸಿಟಿವಿಗಳು ಮತ್ತು ಮೇಲ್ವಿಚಾರಣಾ ಕೊಠಡಿಗಳನ್ನು ಸ್ಥಾಪಿಸುವ ಮೂಲಕ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸಿದೆ.

7. ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) 2020ರ ಅಕ್ಟೋಬರ್ 17ರಂದು ‘ಮೇರಿ ಸಹೇಲಿ’ ಎಂಬ ಪ್ಯಾನ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

8. ರೈಲಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಬೋರ್ಡಿಂಗ್‌ನಿಂದ ಡಿ-ಬೋರ್ಡಿಂಗ್‌ವರೆಗಿನ ಸಂಪೂರ್ಣ ಪ್ರಯಾಣಕ್ಕಾಗಿ ವರ್ಧಿತ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವ ಉದ್ದೇಶವನ್ನು ಇದು ಹೊಂದಿದೆ.

9. ಮಹಿಳಾ ಪ್ರಯಾಣಿಕರಿಗೆ ವಿಶೇಷವಾಗಿ ಒಂಟಿಯಾಗಿ ಪ್ರಯಾಣಿಸುವವರಿಗೆ ಭದ್ರತೆಯನ್ನು ಒದಗಿಸುವುದು ಉಪಕ್ರಮದ ಕಡೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ.

Continue Reading

ದೇಶ

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Isha Ambani: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ ತಿಳಿಸಿದ್ದಾರೆ.

VISTARANEWS.COM


on

Isha Ambani
Koo

ನವದೆಹಲಿ: ನಾಲ್ಕನೇ ಕೈಗಾರಿಕೆ ಕ್ರಾಂತಿಯಾದ ಈ ಡಿಜಿಟಲ್ ಯುಗದಲ್ಲಿ ಭಾರತ ದೇಶವು ವಿಶ್ವನಾಯಕ ಆಗಿ ಹೊರಹೊಮ್ಮಲು ಹೆಣ್ಣು ಮಕ್ಕಳನ್ನು ಮುಂದೆ ತರಬೇಕು. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಹಾಗೂ ಮಾಹಿತಿ ಮತ್ತು ಸಂವಹನ ಕ್ಷೇತ್ರಗಳಲ್ಲಿ ಯುವತಿಯರ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂದು ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕಿ ಇಶಾ ಅಂಬಾನಿ (Isha Ambani) ಅಭಿಪ್ರಾಯಪಟ್ಟರು.

ದೂರಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಗರ್ಲ್ಸ್ ಇನ್ ಐಸಿಟಿ ಇಂಡಿಯಾ– 2024 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ತಂತ್ರಜ್ಞಾನ ಕ್ಷೇತ್ರವನ್ನು ವೃತ್ತಿಯನ್ನಾಗಿ ತೆಗೆದುಕೊಳ್ಳಬೇಕು. ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆ ಹಾಗೂ ಪುರುಷರ ಪಾಲ್ಗೊಳ್ಳುವಿಕೆ ಅನುಪಾತವು ಸಮಾನವಾಗಿ ಇರಬೇಕು. ಇದಕ್ಕಾಗಿ ನಾವು ಇನ್ನೂ ಬಹಳ ದೂರ ಸಾಗಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಭಾರತ ಸರ್ಕಾರ, ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ (ದಕ್ಷಿಣ ಏಷ್ಯಾ), ಇನ್ನೋವೇಶನ್ ಸೆಂಟರ್ – ದೆಹಲಿ ಮತ್ತು ಇತರ ಯುಎನ್ ಏಜೆನ್ಸಿಗಳ ದೂರಸಂಪರ್ಕ ಇಲಾಖೆ ಜಂಟಿಯಾಗಿ ‘ಗರ್ಲ್ಸ್ ಇನ್ ಇನ್ಫರ್ಮೇಷನ್ ಅಂಡ್ ಕಮ್ಯುನಿಕೇಷನ್ ಟೆಕ್ನಾಲಜಿ (ಜಿಐಸಿಟಿ) ಇಂಡಿಯಾ – 2024’ ಅನ್ನು ಆಯೋಜಿಸಿವೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದ ಇಶಾ ಅಂಬಾನಿ, ಸರ್ಕಾರವು ಅಗತ್ಯ ಸುಧಾರಣೆಗಳನ್ನು ಮಾಡುತ್ತಿದೆ ಮತ್ತು ಅದರ ಫಲಿತಾಂಶಗಳು ಸಹ ಗೋಚರಿಸುತ್ತಿವೆ. ಕಳೆದ ಒಂದು ದಶಕದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರನ್ನು ಗಮನಿಸಿದರೆ ಮಹಿಳಾ ಪ್ರಾತಿನಿಧ್ಯವು ಶೇ. 6ರಷ್ಟು ಹೆಚ್ಚಾಗಿದೆ. ಆದರೆ ಉದ್ಯಮವು ತನ್ನ ಪಾತ್ರವನ್ನು ನಿರ್ವಹಿಸಬೇಕಾಗಿದೆ. ಮಹಿಳೆಯರ ವೃತ್ತಿ ಜೀವನದಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ವಿಧಾನಗಳು ಮತ್ತು ಸಾಧನಗಳನ್ನು ಸಿದ್ಧಪಡಿಸಬೇಕು. ಒಟ್ಟಾರೆಯಾಗಿ, ನಮ್ಮ ಹೆಣ್ಣುಮಕ್ಕಳು ನಾಳಿನ ನಾಯಕತ್ವ ವಹಿಸುವುದಕ್ಕೆ ಸಮಾನ ಅವಕಾಶಗಳನ್ನು ಹೊಂದಿರುವ ಭವಿಷ್ಯವನ್ನು ನಾವು ರೂಪಿಸಬಹುದು ಎಂದು ಹೇಳಿದರು.

ಇದನ್ನೂ ಒದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಇಶಾ ಅವರು ತಮ್ಮ ತಾಯಿ ನೀತಾ ಅಂಬಾನಿಯವರ ಮಾತನ್ನು ಉಲ್ಲೇಖಿಸಿ, “ಒಬ್ಬ ಪುರುಷನನ್ನು ಸಬಲಗೊಳಿಸಿದರೆ ಆತ ತನ್ನ ಕುಟುಂಬವನ್ನು ಪೋಷಿಸುತ್ತಾನೆ, ಆದರೆ ಮಹಿಳೆ ಸಬಲಳಾಗಿದ್ದರೆ, ಅವಳು ಇಡೀ ಗ್ರಾಮವನ್ನು ಪೋಷಿಸುತ್ತಾಳೆ” ಎಂದು ಅವರು ಪದೇ ಪದೇ ಹೇಳುತ್ತಾರೆ. “ನನಗೆ ಅಮ್ಮ ಹೇಳುವ ಮಾತಿನಲ್ಲಿ ಸಂಪೂರ್ಣ ವಿಶ್ವಾಸವಿದೆ. ಮಹಿಳೆಯರು ಹುಟ್ಟಿನಿಂದಲೇ ನಾಯಕಿಯರು. ಅವರಲ್ಲಿರುವ ಸಹಜವಾದ ನಿಸ್ವಾರ್ಥತೆಯು ಅತ್ಯುತ್ತಮ ನಾಯಕರನ್ನಾಗಿ ಮಾಡುತ್ತದೆ. ಮಹಿಳಾ ಉದ್ಯೋಗಿಗಳನ್ನು ಅವರ ವೃತ್ತಿ ಜೀವನದ ಆರಂಭದಿಂದಲೂ ಪ್ರೋತ್ಸಾಹಿಸಬೇಕು ಮತ್ತು ಕೇವಲ ಕಾಗದದ ಮೇಲೆ ಮಾತ್ರ ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯನ್ನು ತೋರಿಸುವುದರಿಂದ ಯಾವುದೇ ಬದಲಾವಣೆಯನ್ನು ಆಗುವುದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ತಿಳಿಸಿದರು.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ4 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ4 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ4 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ5 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ5 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ5 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ5 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ5 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ5 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ7 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು16 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌