International Women's Day : ಕಾರ್ಪೋರೇಟ್‌ ವಲಯಕ್ಕೆ ಕಣ್ಮಣಿಗಳಾಗಿ ದೇಶಕ್ಕೆ ಕೀರ್ತಿ ಈ ಮಹಿಳಾ ಉದ್ಯಮಿಗಳು - Vistara News

ಮಹಿಳೆ

International Women’s Day : ಕಾರ್ಪೋರೇಟ್‌ ವಲಯಕ್ಕೆ ಕಣ್ಮಣಿಗಳಾಗಿ ದೇಶಕ್ಕೆ ಕೀರ್ತಿ ಈ ಮಹಿಳಾ ಉದ್ಯಮಿಗಳು

ಕಾರ್ಪೇರೇಟ್‌ ವಲಯದಲ್ಲಿ ಭಾರತದ ಹೆಸರನ್ನು ವಿಶ್ವ ಮಟ್ಟಕ್ಕೆ ಕರೆದೊಯ್ದ ಅನೇಕ ಮಹಿಳಾ ಸಾಧಕಿಯರು ಭಾರತದಲ್ಲಿ ಇದ್ದಾರೆ. ಅದರಲ್ಲಿ ಕೆಲವರ ಪರಿಚಯ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೊಟ್ಟಿಲು ತೂಗುವ ಕೈ ಲೋಕವನ್ನು ಆಳಬಲ್ಲದು ಎಂದು ಹೆಣ್ಣು ಮಕ್ಕಳು ಈಗಾಗಲೇ ಸಾಧಿಸಿ ತೋರಿಸಿದ್ದಾರೆ. ಎಲ್ಲ ಕ್ಷೇತ್ರ, ಎಲ್ಲ ವಲಯದಲ್ಲೂ ಇಂದು ಹೆಣ್ಣು ಮಕ್ಕಳು ಗಂಡಿಗೆ ಸಮಾನವಾಗಿ ಬೆಳೆದು ನಿಂತಿದ್ದಾರೆ. ಮೊದಲು ಹೆಣ್ಣಿಗೆ ಸೂಕ್ತವಲ್ಲ ಎಂದೇ ಹೇಳಲಾಗುತ್ತಿದ್ದ ಕಾರ್ಪೋರೇಟ್‌ ವಲಯದಲ್ಲೂ ಈಗ ಹೆಣ್ಣು ಮಕ್ಕಳ ಸಾಧನೆ ದೊಡ್ಡ ಮಟ್ಟದಲ್ಲಿದೆ. ಭಾರತದಲ್ಲಿ ಕಾರ್ಪೋರೇಟ್‌ ವಲಯದಲ್ಲಿ ಹೆಸರು ಮಾಡಿದ ಕೆಲವು ಮಹಿಳಾ ಸಾಧಕಿಯರ ಪರಿಚಯ (International Women’s Day) ಇಲ್ಲಿದೆ.

ಸಾವಿತ್ರಿ ಜಿಂದಾಲ್ ಮತ್ತು ಕುಟುಂಬ

(ಅಧ್ಯಕ್ಷರು, OP ಜಿಂದಾಲ್ ಗ್ರೂಪ್)
(1.41 ಲಕ್ಷ ಕೋಟಿ ರೂ. ಮೌಲ್ಯ)
ಸಾವಿತ್ರಿ ಜಿಂದಾಲ್ ಭಾರತದ ಅತ್ಯಂತ ಶ್ರೀಮಂತ ಮಹಿಳೆ ಮತ್ತು ಭಾರತದ 10 ಅಗ್ರ ಶ್ರೀಮಂತರ ಪಟ್ಟಿಯಲ್ಲಿ ಇರುವವರು. ಅವರು ಸ್ಟೀಲ್ ಮ್ಯಾಗ್ನೆಟ್ ಎಂದೇ ಪ್ರಖ್ಯಾತವಾಗಿರುವ OP ಜಿಂದಾಲ್ ಗ್ರೂಪ್‌ನ ಅಧ್ಯಕ್ಷರಾಗಿದ್ದಾರೆ. ವಿದ್ಯುತ್ ಉತ್ಪಾದನೆ, ಮೂಲಸೌಕರ್ಯ ಮತ್ತು ಕೈಗಾರಿಕಾ ಅನಿಲಗಳ ಉದ್ಯಮದಲ್ಲಿಯೂ ಸಾವಿತ್ರಿ ಜಿಂದಾಲ್‌ ಹೆಸರಿದೆ. ಓಂ ಪ್ರಕಾಶ್ ಜಿಂದಾಲ್ ಅವರು 2005ರಲ್ಲಿ ಅಪಘಾತದಲ್ಲಿ ನಿಧನರಾದ ನಂತರ ಅವರ ಪತ್ನಿ ಸಾವಿತ್ರಿ ಅವರು ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಮಕ್ಕಳೂ ಕೂಡ ಅವರಿಗೆ ಸಾಥ್‌ ನೀಡಿದ್ದಾರೆ.

ಲೀನಾ ಗಾಂಧಿ ತಿವಾರಿ

#image_title

(ನಿರ್ದೇಶಕಿ, USV ಗ್ರೂಪ್)
(30,000 ಕೋಟಿ ರೂ. ಮೌಲ್ಯ)
ಫೋರ್ಬ್ಸ್ ಪಟ್ಟಿಯಲ್ಲಿ ಭಾರತದ ಎರಡನೇ ಶ್ರೀಮಂತ ಮಹಿಳೆಯಾಗಿ ಸ್ಥಾನ ಪಡೆದಿರುವುದು ಲೀನಾ ಗಾಂಧಿ ತಿವಾರಿ. ಬೋಸ್ಟನ್ ವಿಶ್ವವಿದ್ಯಾನಿಲಯದಿಂದ ಎಂಬಿಎ ಪದವಿ ಪಡೆದಿರುವ ಲೀನಾ ಅವರು USVಯ ನಿರ್ದೇಶಕರಾಗಿದ್ದಾರೆ. USV ಭಾರತದ ಅತ್ಯಂತ ಹಳೆಯ ಮತ್ತು ಹೆಚ್ಚು ಪ್ರಸಿದ್ಧತೆ ಇರುವ ಔಷಧೀಯ ಕಂಪನಿಗಳಲ್ಲಿ ಒಂದಾಗಿದೆ. ಅವರ ಪತಿ ಪ್ರಶಾಂತ್ ಟ್ವೇರಿ ಕೂಡ ಕಂಪನಿಯಲ್ಲಿ ನಿರ್ದೇಶಕರಾಗಿದ್ದಾರೆ.

ಸ್ಮಿತಾ ಕೃಷ್ಣ ಗೋದ್ರೆಜ್

(22,900 ಕೋಟಿ ರೂ. ಮೌಲ್ಯ)
ಸ್ಮಿತಾ ಕೃಷ್ಣಾ ಗೋದ್ರೇಜ್ ಅವರು ಪ್ರಸಿದ್ಧ ಗೋದ್ರೇಜ್ ಗುಂಪಿನ ಮೂರನೇ ತಲೆಮಾರಿನ ವಾರಸುದಾರರಾಗಿದ್ದಾರೆ. ಕುಟುಂಬದ ಆಸ್ತಿಯಲ್ಲಿ ಐದನೇ ಒಂದು ಪಾಲು ಸ್ಮಿತಾ ಅವರದ್ದಾಗಿದೆ. ಅವರ ಸಹೋದರ ಜಮ್ಶಿದ್ ಕಂಪನಿಯ ಗ್ರಾಹಕ ಸರಕುಗಳ ವ್ಯಾಪಾರ, ಗೋದ್ರೇಜ್ & ಬಾಯ್ಸ್ ಅನ್ನು ನಡೆಸುತ್ತಿದ್ದಾರೆ. ಅವರ ಪತಿ ವಿಜಯ್ ಕೃಷ್ಣ ಅವರು ಬಾಲಿವುಡ್‌ನಲ್ಲಿ ಕೆಲಸ ಮಾಡಿದ್ದರು ಹಾಗೂ ಗೋದ್ರೇಜ್ ಇಂಡಸ್ಟ್ರೀಸ್ ಮಂಡಳಿಯ ಸದಸ್ಯರೂ ಆಗಿದ್ದರು.

ಫಲ್ಗುಣಿ ಸಂಜಯ್ ನಾಯರ್

(Nykaa ಸ್ಥಾಪಕಿ ಮತ್ತು CEO )
(22,900 ಕೋಟಿ ರೂ. ಮೌಲ್ಯ)
50 ನೇ ವಯಸ್ಸಿನಲ್ಲಿ, ನೈಕಾ ಸಂಸ್ಥೆ ಸ್ಥಾಪಿಸಿದವರು ಫಲ್ಗುಣಿ ಸಂಜಯ್‌ ನಾಯರ್.‌ ಅಹಮದಾಬಾದ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಹಳೆಯ ವಿದ್ಯಾರ್ಥಿನಿಯಾಗಿರುವ ಫಲ್ಗುಣಿ 2012ರಲ್ಲಿ ಕೇವಲ $2 ಮಿಲಿಯನ್ ಹಣದಿಂದ Nykaa ಸಂಸ್ಥೆ ಪ್ರಾರಂಭಿಸಿದರು. ಸಂಸ್ಥೆ ಆರಂಭವಾಗಿ ಒಂದು ದಶಕದೊಳಗೆ ಮಿಲಿಯನ್‌ ಡಾಲರ್‌ ಮೌಲ್ಯಕ್ಕೆ ತಲುಪಿದೆ.

ಕಿರಣ್ ಮಜುಂದಾರ್ ಶಾ

(ಬಯೋಕಾನ್ ಸಮೂಹದ ಅಧ್ಯಕ್ಷರು ಮತ್ತು ಸಂಸ್ಥಾಪಕರು)
(18,000 ಕೋಟಿ ರೂ. ಮೌಲ್ಯ)
ಕಿರಣ್ ಮಜುಂದಾರ್ ಶಾ ಅವರು 1990ರ ದಶಕದಲ್ಲಿ ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಿದವರು. ಬಯೋಕಾನ್‌ ಹೆಸರಿನಲ್ಲಿ ಆರಂಭವಾದ ಸಂಸ್ಥೆಯು, ಭಾರತದಲ್ಲಿ ಎನ್ಜೈಮ್‌ ತಯಾರಿಸಿ ಯುರೋಪ್‌ ಮತ್ತು ಅಮೆರಿಕಕ್ಕೆ ರಫ್ತು ಮಾಡುತ್ತಿರುವ ಮೊದಲ ಸಂಸ್ಥೆ ಎನ್ನುವ ಖ್ಯಾತಿಯನ್ನೂ ಪಡೆದಿದೆ. ಬಯೋಕಾನ್ ತನ್ನ ಜೆನೆರಿಕ್ ಔಷಧಿಗಳಿಗೆ ಹೆಸರುವಾಸಿಯಾಗಿದೆ. ಈ ಸಂಸ್ಥೆ ಮಲೇಷಿಯಾದ ಜೋಹರ್‌ನಲ್ಲಿ ಏಷ್ಯಾದ ಅತಿದೊಡ್ಡ ಇನ್ಸುಲಿನ್ ಕಾರ್ಖಾನೆಯನ್ನು ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

National Safe Motherhood Day: 35 ವರ್ಷ ನಂತರದ ತಾಯ್ತನದಲ್ಲಿ ಯಾವೆಲ್ಲ ಎಚ್ಚರಿಕೆ ಅಗತ್ಯ?

ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರ ಅಗತ್ಯವಾಗಿ ಬೇಕಾದ ಆರೈಕೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಸುರಕ್ಷಿತ ತಾಯ್ತನದ ದಿನವನ್ನು ಏಪ್ರಿಲ್‌ ತಿಂಗಳ 11ನೇ ತಾರೀಕು (National Safe Motherhood Day) ಆಚರಿಸಲಾಗುತ್ತದೆ. ಈ‌ ಹಿನ್ನೆಲೆಯಲ್ಲಿ ಸುರಕ್ಷಿತ ತಾಯ್ತನ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

National Safe Motherhood Day
Koo

ತಾಯ್ತನವೆಂಬುದು ಬದುಕಿನ ಆಹ್ಲಾದಕರ ಅನುಭವಗಳಲ್ಲಿ ಒಂದು. ಬರಲಿರುವ ಪುಟ್ಟ ಜೀವವನ್ನೇ ನೆನಸುತ್ತಾ ನವಮಾಸಗಳನ್ನು ಕಳೆಯುವುದು ಎಷ್ಟು ಆನಂದದಾಯಕವೋ ಕೆಲವೊಮ್ಮೆ ಅಷ್ಟೇ ತ್ರಾಸದಾಯಕವೂ ಆಗಬಹುದು. ಈ ದಿನಗಳಲ್ಲಿ ಮತ್ತು ಹೆರಿಗೆಯ ನಂತರ ಅಗತ್ಯವಾದ ಆರೈಕೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಸುರಕ್ಷಿತ ತಾಯ್ತನದ ದಿನವನ್ನು ಏಪ್ರಿಲ್‌ ತಿಂಗಳ 11ನೇ ತಾರೀಕು (National Safe Motherhood Day)ಆಚರಿಸಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ 30 ಅಥವಾ 35 ವರ್ಷಗಳ ನಂತರ ತಾಯ್ತನಕ್ಕೆ ಸಿದ್ಧವಾಗುವ ಮಹಿಳೆಯರ ಸಂಖ್ಯೆ ತೀವ್ರವಾಗಿ ಹೆಚ್ಚಿದೆ. ಕುಟುಂಬವನ್ನು ಬೆಳೆಸುವ ಯೋಜನೆಗಳು ಆಯಾ ದಂಪತಿಗಳ ವೈಯಕ್ತಿಕ ವಿಚಾರ ಹೌದಾದರೂ, ವಯಸ್ಸು ಹೆಚ್ಚಿದಂತೆ ಭಾವೀ ತಾಯಿಯ ಆರೋಗ್ಯದಲ್ಲಿ ಸಮಸ್ಯೆಗಳು ಹೆಚ್ಚುವುದನ್ನು ವೈದ್ಯರೂ ಒಪ್ಪುತ್ತಾರೆ. ಕೆಲವೊಮ್ಮೆ ಫಲವಂತಿಕೆಯೂ ಕುಸಿದಿರುತ್ತದೆ. ಹಾಗಾಗಿ ಇಪ್ಪತ್ತರ ಹರೆಯದಲ್ಲೇ ʻಎಗ್‌ ಫ್ರೀಜಿಂಗ್ʼ ತಂತ್ರಜ್ಞಾನದ ಮೊರೆ ಹೋಗುವವರೂ ಇದ್ದಾರೆ. ಈ ಎಲ್ಲವುಗಳ ಹಿನ್ನೆಲೆಯಲ್ಲಿ, 35ರ ನಂತರ ಮಾತೃತ್ವಕ್ಕೆ ಅಣಿಯಾಗುವ ತಾಯಂದಿರು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು?

Indication of pregnancy

ಮೊದಲೇ ಮಾತಾಡಿ

ತಾಯ್ತನವನ್ನು ತಡವಾಗಿ ಒಪ್ಪಿಕೊಳ್ಳುವ ಬಗ್ಗೆ ಗರ್ಭ ಧರಿಸುವ ಮೊದಲೇ ವೈದ್ಯರಲ್ಲಿ ಮಾತಾಡಿ. ಇದಕ್ಕೆ ಬೇಕಾದ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ. ಮಾತ್ರವಲ್ಲ, ನಿಮಗಿರುವ ಆರೋಗ್ಯ ಸಮಸ್ಯೆಗಳು, ಅದಕ್ಕಾಗಿ ಯಾವುದಾದರೂ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರೆ, ಇಂಥ ಎಲ್ಲವನ್ನೂ ವೈದ್ಯರಲ್ಲಿ ತಿಳಿಸಿ. ಸಣ್ಣ ಪ್ರಾಯದವರಿಗೂ ಮಧುಮೇಹ, ಥೈರಾಯ್ಡ್‌ ಸಮಸ್ಯೆಗಳು ವಕ್ಕರಿಸುತ್ತಿರುವುದರಿಂದ ಇದನ್ನೆಲ್ಲ ಮೊದಲೇ ವೈದ್ಯರಲ್ಲಿ ಮಾತಾಡಿಕೊಳ್ಳಿ.
ಒತ್ತಡ ನಿರ್ವಹಣೆ: ೩೫ರ ನಂತರ ವೃತ್ತಿಯಲ್ಲಿ ಮತ್ತು ಬಾಂಧವ್ಯಗಳಲ್ಲಿ ಹೆಚ್ಚಿನ ಸ್ಥಿರತೆ ಇರುತ್ತದೆ. ಆಗಲೇ ತಾಯ್ತನ ಒಪ್ಪಿಕೊಳ್ಳುವುದು ಸೂಕ್ತ ಎಂಬುದು ಒಂದು ವಾದ. ಆದರೆ ವಯಸ್ಸು ಏರುತ್ತಿದ್ದಂತೆ ಒತ್ತಡ ಧಾರಣಾ ಸಾಮರ್ಥ್ಯವೂ ತೀಕ್ಷ್ಣವಾಗಿ ಕುಸಿಯುತ್ತದೆ. ಜೊತೆಗೆ ವೃತ್ತಿಯಲ್ಲಿ ಮೇಲೇರುತ್ತಿದ್ದಂತೆ ಹೊಣೆಗಾರಿಕೆಯೂ ಹೆಚ್ಚಿರುತ್ತದೆ. ಹಾಗಾಗಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಬಗ್ಗೆ ಪರಿಣತರಲ್ಲಿ ಮಾತಾಡಿ, ಅವರ ಸಲಹೆಗಳನ್ನು ಅಳವಡಿಸಿಕೊಳ್ಳಿ. ಪ್ರಿನೇಟಲ್‌ ಯೋಗ, ಧ್ಯಾನ ಮುಂತಾದವು ಖಂಡಿತವಾಗಿ ಸಹಾಯ ಮಾಡುತ್ತವೆ. ಈ ಬಗ್ಗೆ ಗಮನ ಕೊಡದಿದ್ದರೆ ಗರ್ಭಾವಸ್ಥೆಯಲ್ಲಿ ರಕ್ತದೊತ್ತಡ, ಮಧುಮೇಹಗಳು ಕಾಡುವ ಸಾಧ್ಯತೆ ಹೆಚ್ಚುತ್ತದೆ.

pregnancy exercise

ವ್ಯಾಯಾಮ

ನಿಯಮಿತವಾದ ವ್ಯಾಯಾಮಗಳು ಗರ್ಭಿಣಿಯರಿಗೆ ಅಗತ್ಯವಾಗಿ ಬೇಕಾದವು. ಯಾವುದನ್ನೆಲ್ಲ ಮಾಡಬಹುದು ಎಂಬ ಬಗ್ಗೆ ವೈದ್ಯರಲ್ಲೆ ಚರ್ಚಿಸುವುದು ಒಳಿತು. ಆದರೆ ನಡಿಗೆ, ಈಜು, ಪ್ರಿನೇಟಲ್‌ ಯೋಗ, ಕಡಿಮೆ ತೀವ್ರತೆಯ ಏರೋಬಿಕ್‌ ವ್ಯಾಯಾಮಗಳು ಗರ್ಭಿಣಿಯರಿಗೆ ಹಿತವಾಗುವಂಥವು. ಇದರಿಂದ ಶರೀರ ಹಗುರವಾಗಿದ್ದು, ಹೆರಿಗೆಗೆ ಬೇಕಾದ ಸಿದ್ಧತೆಗಳನ್ನು ದೇಹ ತಂತಾನೇ ಮಾಡಿಕೊಳ್ಳಲು ಅನುಕೂಲವಾಗುತ್ತದೆ.

pregnancy sleep

ನಿದ್ದೆ, ವಿಶ್ರಾಂತಿ

ಎಷ್ಟೋ ಗರ್ಭಿಣಿಯರಿಗೆ ರಾತ್ರಿಯ ನಿದ್ದೆ ಕಷ್ಟವಾಗುತ್ತದೆ. ಕಡೆಯ ಮೂರು ತಿಂಗಳಲ್ಲಂತೂ ಹೇಗೆ ಮಲಗಿದರೂ ಸರಿಯಾಗುವುದಿಲ್ಲ ಎನ್ನುವಂಥ ಸಮಸ್ಯೆ ಅವರದ್ದು. ಅಂಥ ದಿನಗಳಲ್ಲಿ ರೆಕ್ಲೈನರ್‌ ಮಾದರಿಯ ಹಾಸಿಗೆಗಳು ವಿಶ್ರಾಂತಿಗೆ ನೆರವಾಗುತ್ತವೆ. ದಿನದಲ್ಲೂ ಕೆಲಕಾಲ ನಿದ್ದೆಯಲ್ಲದಿದ್ದರೆ, ವಿಶ್ರಾಂತಿಯನ್ನಂತೂ ತೆಗೆದುಕೊಳ್ಳಬೇಕು. ದಿನಕ್ಕೆ ಹತ್ತು ತಾಸುಗಳ ನಿದ್ದೆಯಿಂದ ಮಗುವಿನ ಬೆಳವಣಿಗೆಗೂ ಸಹಾಯ ದೊರೆಯುತ್ತದೆ. ಈ ಬಗ್ಗೆ ಪ್ರತಿಯೊಬ್ಬರ ದೇಹವೂ ತನ್ನ ಅಗತ್ಯಗಳನ್ನು ತಾನೇ ಸೂಚಿಸುತ್ತದೆ, ಅದನ್ನು ಕೇಳಿ.

pregnancy food

ಆಹಾರ

ಮೊದಲನೆಯದಾಗಿ, ಗರ್ಭಾವಸ್ಥೆಯಲ್ಲಿ ಇಬ್ಬರಿಗಾಗಿ ತಿನ್ನುವ ಅಗತ್ಯವಿಲ್ಲ. ನಿತ್ಯದ ಆಹಾರಕ್ಕಿಂತ ೩೦೦ ಕ್ಯಾಲರಿಯಷ್ಟು ಮಾತ್ರವೇ ಹೆಚ್ಚಿಗೆ ಆಹಾರ ತೆಗೆದುಕೊಂಡರೆ ಸಾಕಾಗುತ್ತದೆ. ಅತಿಯಾಗಿ ತಿನ್ನುವುದು, ಸಿಹಿ, ಖಾರ, ಕರಿದಿದ್ದು, ಐಸ್‌ಕ್ರೀಂನಂಥವು, ಚಿಪ್ಸ್‌, ಸೋಡಾ ಮುಂತಾದ ಯಾವುದೇ ಗುಜರಿ ಆಹಾರಗಳು ಭ್ರೂಣದ ಬೆಳವಣಿಗೆಗೆ ಪೂರಕವಲ್ಲ. ಆಹಾರದಲ್ಲಿ ಋತುಮಾನದ ಹಣ್ಣು-ತರಕಾರಿಗಳು, ಧಾರಾಳವಾಗಿ ನೀರು, ಡೇರಿ ಉತ್ಪನ್ನಗಳು, ಹಸಿರು ಸೊಪ್ಪುಗಳು, ಇಡೀ ಧಾನ್ಯಗಳು, ಕಾಯಿ-ಬೀಜಗಳು, ಮೊಟ್ಟೆ-ಮೀನಿನಂಥವು ಇರಬೇಕು. ಕೆಫೇನ್‌ ಸೇವನೆಯನ್ನು ಕಡಿಮೆ ಮಾಡಿ. ಇದರಿಂದ ಇಬ್ಬರ ಸ್ವಾಸ್ಥ್ಯಕ್ಕೂ ಹಿತ.

pregnancy doctor test

ತಪಾಸಣೆ

35ರ ನಂತರದ ಗರ್ಭಧಾರಣೆಯಲ್ಲಿ ಮಧುಮೇಹ, ಬಿಪಿ, ಅವಧಿಪೂರ್ವ ಪ್ರಸವ, ಕಡಿಮೆ ತೂಕ ಶಿಶು ಜನಿಸುವುದು, ಶಿಶುವಿಗೆ ಡೌನ್ಸ್‌ ಸಿಂಡ್ರೋಮ್‌ನಂಥ ಆನುವಂಶಿನ ಕಾಯಿಲೆಗಳು ಬರುವಂಥ ಎಷ್ಟೋ ಸಮಸ್ಯೆಗಳು ಎದುರಾಗುತ್ತವೆ. ಹಾಗಾಗಿ ತಜ್ಞ ವೈದ್ಯರಿಂದ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ಅವಶ್ಯವಾದಂಥ ರಕ್ತಪರೀಕ್ಷೆಗಳು ಸಹ ಈ ತಪಾಸಣೆಯ ಭಾಗವೇ ಆಗಿದೆ. ಭ್ರೂಣದ ಬೆಳವಣಿಗೆ ಮತ್ತು ಗರ್ಭಿಣಿಯ ಆರೋಗ್ಯ ಒಂದಕ್ಕೊಂದು ತೀರಾ ಭಿನ್ನವಲ್ಲ; ಯಾವುದು ಸರಿಯಿಲ್ಲದಿದ್ದರೂ ಇಬ್ಬರಿಗೂ ಅಪಾಯ.

ಇದನ್ನೂ ಓದಿ: Balancing Hormones Naturally: ಹಾರ್ಮೋನು ಸಮತೋಲನಕ್ಕೆ ಬೇಕು ಇಂಥ ಆಹಾರಗಳು

Continue Reading

ಆರೋಗ್ಯ

Women’s Health: 40 ವರ್ಷ ದಾಟಿದ ಮಹಿಳೆಯರು ಈ ವಿಷಯದಲ್ಲಿ ಎಚ್ಚರ ವಹಿಸಲೇಬೇಕು

40 ವರ್ಷ ದಾಟಿದ ತಕ್ಷಣ ಮಹಿಳೆ (Women’s Health) ತನ್ನ ಆರೋಗ್ಯದ ಕಾಳಜಿಯನ್ನು ತುಸು ಹೆಚ್ಚೇ ಮಾಡಬೇಕು. ಮುಖ್ಯವಾಗಿ ಮಹಿಳೆಯ ಹಾರ್ಮೋನಿನಲ್ಲಿ ಈ ಸಂದರ್ಭ ಬದಲಾವಣೆಗಳಾಗುವುದರಿಂದ, ಮೆನೋಪಾಸ್‌ ಅಥವಾ ಋತುಬಂಧದ ಆರಂಭವಾಗುವ ಸನಿಹಕ್ಕೆ ಬರುವುದರಿಂದ ದೇಹದ ಶಕ್ತಿ ಕುಗ್ಗುತ್ತದೆ. ಹಾಗಾಗಿ ಮಹಿಳೆ ತನ್ನ ಆರೋಗ್ಯದತ್ತ ಈ ಸಂದರ್ಭ ಗಮನ ಹರಿಸುವುದು ಒಳಿತು.

VISTARANEWS.COM


on

Women's Health
Koo

ಮಹಿಳೆಯ ದೇಹ (Women’s Health) ಮಾಗುತ್ತಾ ಮಾಗುತ್ತಾ ಬಹಳಷ್ಟು ಬದಲಾವಣೆಗಳಿಗೆ ಒಳಗಾಗುವುದರಿಂದ 40 ದಾಟುತ್ತಿದ್ದ ಹಾಗೆಯೇ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನೂ ಆಕೆ ಅನುಭವಿಸಬೇಕಾಗುತ್ತದೆ. ವಯಸ್ಸಾಗುವಿಕೆಯಿಂದ ಆರಂಭವಾಗುವ ಈ ಸಮಸ್ಯೆಗಳಿಗೆ ಬೇರೆ ವಿಚಾರಗಳ ಪ್ರಭಾವವೂ ಇರುತ್ತದೆ. ಉದಾಹರಣೆಗೆ ಆಕೆಯ ಜೀವನಶೈಲಿ, ಆಹಾರಕ್ರಮ, ಆಕೆಯ ಅಭ್ಯಾಸಗಳು ಇತ್ಯಾದಿ ಇತ್ಯಾದಿಗಳು ಆರೋಗ್ಯದ ಮೇಲೆ ನಲವತ್ತರ ನಂತರ ಪರಿಣಾಮ ಬೀರಲಾರಂಭಿಸುತ್ತದೆ. 40 ವರ್ಷ ದಾಟಿದ ತಕ್ಷಣ ಮಹಿಳೆ ತನ್ನ ಆರೋಗ್ಯದ ಕಾಳಜಿಯನ್ನು ತುಸು ಹೆಚ್ಚೇ ಮಾಡಬೇಕು. ಮುಖ್ಯವಾಗಿ ಮಹಿಳೆಯ ಹಾರ್ಮೋನಿನಲ್ಲಿ ಈ ಸಂದರ್ಭ ಬದಲಾವಣೆಗಳಾಗುವುದರಿಂದ, ಮೆನೋಪಾಸ್‌ ಅಥವಾ ಋತುಬಂಧದ ಆರಂಭವಾಗುವ ಸನಿಹಕ್ಕೆ ಬರುವುದರಿಂದ ದೇಹದ ಶಕ್ತಿ ಕುಗ್ಗುತ್ತದೆ. ಹಾಗಾಗಿ ಮಹಿಳೆ ತನ್ನ ಆರೋಗ್ಯದತ್ತ ಈ ಸಂದರ್ಭ ಗಮನ ಹರಿಸುವುದು ಒಳಿತು. ಬನ್ನಿ, ಪ್ರತಿ 40 ದಾಟಿದ ಮಹಿಳೆ ತನ್ನ ಆರೋಗ್ಯದ ಯಾವ ವಿಚಾರಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಿಕೊಳ್ಳಬೇಕು ಎಂಬುದನ್ನು ನೋಡೋಣ.

Kidney Stones Signs

ಕಿಡ್ನಿಯಲ್ಲಿ ಕಲ್ಲು

ಮೂತ್ರನಾಳ ಅಥವಾ ಕೋಶದಲ್ಲಿ ಖನಿಜಲವಣಗಳು ಕಲ್ಲಿನ ರೂಪದಲ್ಲಿ ಸಂಗ್ರಹವಾಗುವ ಸಮಸ್ಯೆ. ಇದು ಅತ್ಯಂತ ನೋವನ್ನು ನೀಡುವ ಆರೋಗ್ಯ ಸಮಸ್ಯೆಗಳಲ್ಲಿ ಒಂದು. ಸಾಮಾನ್ಯವಾಗಿ ಕಿಡ್ನಿಯಲ್ಲಿ ಕಲ್ಲು ಅಥವಾ ಸ್ಟೋನ್‌ ಪುರುಷರಲ್ಲಿ ಹೆಚ್ಚೆಂದು ಹೇಳಿದರೂ, ಮಹಿಳೆಯರಲ್ಲೂ ಇದು ಕಾಣಿಸಿಕೊಳ್ಳುತ್ತದೆ. ಸೊಂಟದ ಸಮೀಪ ತೀವ್ರ ನೋವು, ಕಿಬ್ಬೊಟ್ಟೆಯಲ್ಲಿ ವಿಪರೀತ ನೋವು, ಮೂತ್ರದಲ್ಲಿ ರಕ್ತ, ವಾಂತಿ, ಕೆಟ್ಟ ವಾಸನೆಯ ಮೂತ್ರ ಇತ್ಯಾದಿ ಕಿಡ್ನಿಸ್ಟೋನ್‌ನ ಸಾಮಾನ್ಯ ಲಕ್ಷಣಗಳು. ಹೆಚ್ಚು ನೀರು ಕುಡಿಯುವುದು ಇಲ್ಲಿ ಬಹಳ ಮುಖ್ಯ.

ಸಂಧಿವಾತ

ಮಹಿಳೆಯರಲ್ಲಿ ನಲುವತ್ತು ದಾಟಿದ ಮೇಲೆ ಕಾಣಿಸಿಕೊಳ್ಳುವ ಸಾಮಾನ್ಯ ತೊಂದರೆಗಳಲ್ಲಿ ಇದೂ ಒಂದು. ಮೂಳೆಯ ಸಾಂದ್ರತೆ ಕುಸಿಯುವುದರಿಂದ ಆಗುವ ನಿಃಶಕ್ತಿ, ಮೂಳೆಗಳಲ್ಲಿ ನೋವು, ಗಂಟುಗಳ ಬಿಗಿತ, ಸಂದಿಗಳಲ್ಲಿ ನೋವು ಇತ್ಯಾದಿ ಇತ್ಯಾದಿ ಸಮಸ್ಯೆಗಳು ಇದರಲ್ಲಿ ಕಾಣಿಸಿಕೊಳ್ಳುತ್ತವೆ.

Diabetes control

ಮಧುಮೇಹ

ಮಹಿಳೆಗೆ ನಲುವತ್ತು ದಾಟಿದ ಕೂಡಲೇ ಮಧುಮೇಹದ ಅಪಾಯವೂ ಇರುತ್ತದೆ. ರಕ್ತದಲ್ಲಿ ಸಕ್ಕರೆಯ ಪ್ರಮಾಣದಲ್ಲಿ ಏರಿಕೆ, ಇದರೆಂದಾಗಿ ತಲೆಸುತ್ತು, ಕೈಕಾಲು ನಡುಕ, ನಿಃಶಕ್ತಿ, ಕಣ್ಣು ಮಂಜಾಗುವುದು, ತೂಕ ಇಳಿಕೆ, ಒಸಡುಗಳು ಮೆದುವಾಗುವುದು ಇತ್ಯಾದಿ ಸಮಸ್ಯೆಗಳು ಆರಂಭವಾಗುತ್ತದೆ.

ಮೂಳೆ ಸವೆತ

40ರ ನಂತರ ಮೂಳೆಗಳ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗುತ್ತದೆ. ಮೂಳೆಯ ಸಾಂದ್ರತೆ ಕಡಿಮೆಯಾಗುವುದಲ್ಲದೆ, ಸವೆತವೂ ಕೆಲವರಲ್ಲಿ ಆರಂಭವಾಗುತ್ತದೆ. ಸಂದಿಗಳಲ್ಲಿ ವಿಪರೀತ ನೋವು ಹಾಗೂ ಸೆಳೆತ, ಸೊಂಟ ನೋವು, ಬೆನ್ನು ನೋವು, ಕಾಲು ನೋವುಗಳು ಹೆಚ್ಚಾಗುತ್ತವೆ. ಮೂಳೆ ಮುರಿತದಂತಹ ಸಮಸ್ಯೆಯೂ ಕೆಲವರಿಗೆ ಬರಬಹುದು. ಹಾಗಾಗಿ 40 ದಾಟಿದ ಮಹಿಳೆ ವೈದ್ಯರನ್ನು ಸಂಪರ್ಕಿಸಿ, ಸಲಹೆ ಸ್ವೀಕರಿಸಿ, ಕ್ಯಾಲ್ಶಿಯಂ ಹಾಗೂ ವಿಟಮಿನ್‌ ಡಿ ಸಪ್ಲಿಮೆಂಟ್‌ ಸೇವಿಸಬೇಕು.

ಮೂತ್ರ ಸಮಸ್ಯೆ

ವಯಸ್ಸಾಗುತ್ತಾ ಆಗುತ್ತಾ, ಮೂತ್ರವನ್ನು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಕೆಲವು ಮಹಿಳೆಯರಲ್ಲಿ ಕಡಿಮೆಯಾಗುತ್ತದೆ. ವಯಸ್ಸಾಗುತ್ತಾ ಆಗುತ್ತಾ ಆ ಭಾಗದ ಮಾಂಸಖಂಡಗಳ ಶಕ್ತಿಗುಂದುವುದೂ ಇದಕ್ಕೆ ಕಾರಣ. ಇಂಥ ಸಂದರ್ಭ ಹೆಚ್ಚು ಹೊತ್ತು ಮೂತ್ರ ಹಿಡಿದಿಟ್ಟುಕೊಳ್ಳಲು ಸಾಧ್ಯವಾಗದಿರುವಂಥ ಸಮಸ್ಯೆಗಳೂ ಬರಬಹುದು. ಸಣ್ಣ ಕೆಮ್ಮು, ಸೀನು ಇತ್ಯಾದಿಗಳಿಗೆ ಮೂತ್ರ ಚಿಮ್ಮುವುದು ಇತ್ಯಾದಿಗಳಿಗೂ ಇದೇ ಕಾರಣ.

ಅಧಿಕ ರಕ್ತದೊತ್ತಡ

ಅಧಿಕ ರಕ್ತದೊತ್ತಡ ವಯಸ್ಸಾಗುತ್ತಿದ್ದಂತೆ ಕಾಣಿಸಿಕೊಳ್ಳುವ ಸಾಮಾನ್ಯ ತೊಂದರೆಯಾದರೂ, ಇದು ಅತ್ಯಂತ ಅಪಾಯಕಾರಿ ಕೂಡಾ. ಈ ಸಮಸ್ಯೆ ಹೃದಯದ ತೊಂದರೆ, ಕಿಡ್ನಿ ತೊಂದರೆ, ಪಾರ್ಶ್ವವಾಯು ಮತ್ತಿತರ ಸಮಸ್ಯೆಗಳಿಗೂ ದಾರಿ ಮಾಡಿಕೊಡುತ್ತದೆ.

Belly Fat Reduction

ಬೊಜ್ಜು

40 ದಾಟುವ ಮಹಿಳೆಯ ಪ್ರಮುಖ ಸಮಸ್ಯೆ ಎಂದರೆ ಬೊಜ್ಜು. ಬದಲಾದ ಜೀವನಕ್ರಮ, ಮೆನೋಪಾಸ್‌ನಿಂದಾಗಿ ಹಾರ್ಮೋನಿನ ಏರುಪೇರು, ಅನಾರೋಗ್ಯಕರ ಆಹಾರಕ್ರಮ ಇವೆಲ್ಲವೂ ಇಂದಿನ ಮಹಿಳೆಯರ ಬಹುದೊಡ್ಡ ಸಮಸ್ಯೆಯಾದ ಬೊಜ್ಜಿಗೆ ಕಾರಣ. ಉತ್ತಮ ಆಹಾರ ಸೇವನೆ, ವೈದ್ಯರನ್ನು ಸಂಪರ್ಕಿಸಿ ಹಾರ್ಮೋನಿನ ವೈಪರೀತ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು, ನಿಯಮಿತ ವ್ಯಾಯಾಮ, ಕ್ರಿಯಾಶೀಲರಾಗಿರುವುದು ಇತ್ಯಾದಿಗಳಿಂದ ಈ ಸಮಸ್ಯೆಯಿಂದ ಹೊರಬರಬಹುದು. ತಮ್ಮನ್ನು ತಾವು ಫಿಟ್‌ ಆಗಿಟ್ಟು ಕೊಳ್ಳಬಹುದು.

Continue Reading

ಬೆಂಗಳೂರು ಗ್ರಾಮಾಂತರ

Begging Case : ಕುಡುಕ ಗಂಡನ ಮಾತು ಕೇಳಿ ಮಗು ಜತೆಗೆ ಭಿಕ್ಷಾಟನೆಗಿಳಿದ ತಾಯಿ

Begging Case : ಮಗು ಹಿಡಿದು ಭಿಕ್ಷಾಟನೆ ಮಾಡುತ್ತಿದ್ದಾಗಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡ ದಾಳಿ ಮಾಡಿದೆ. ತಾಯಿ-ಮಗುವನ್ನು ಇಬ್ಬರನ್ನು ರಕ್ಷಿಸಿ ಕೌನ್ಸಿಲಿಂಗ್‌ ಒಳಪಡಿಸಿದಾಗ ಅಧಿಕಾರಿಗಳೇ ಶಾಕ್‌ ಆಗಿದ್ದಾರೆ. ಕುಡುಕ ಗಂಡ ಕೊಟ್ಟ ಕಿರುಕುಳಕ್ಕೆ ಬೇಸತ್ತು ಮಹಿಳೆ ಭಿಕ್ಷೆ ಬೇಡಲು ಬಂದಿರುವುದಾಗಿ ತಿಳಿಸಿದ್ದಾಳೆ.

VISTARANEWS.COM


on

By

Begging Case
Koo

ಆನೇಕಲ್: ರಣ ಬಿಸಿಲನ್ನು ಲೆಕ್ಕಿಸದೆ ಮಡಿಲಿನಲ್ಲಿ ಪುಟ್ಟ ಮಗುವನ್ನು ಕೂರಿಸಿಕೊಂಡು ಮಹಿಳೆಯೊಬ್ಬರು ಭಿಕ್ಷಾಟನೆ (Begging Case) ಮಾಡುತ್ತಿದ್ದರು. ದೇವಸ್ಥಾನದ ಮುಂದೆ ಭಿಕ್ಷಾಟನೆ ಮಾಡುತ್ತಿದ್ದ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಅವರಿಬ್ಬರನ್ನು ವಶಕ್ಕೆ ಪಡೆದಿದ್ದರು. ನಂತರ ಕೌನ್ಸಿಲಿಂಗ್ ಮಾಡುವಾಗ ಮಹಿಳೆ ಹೇಳಿದ್ದನ್ನು ಕೇಳಿ ಅಧಿಕಾರಿಗಳೇ ಶಾಕ್‌ ಆಗಿದ್ದರು. ಮಹಿಳೆಯ ಅಸಹಾಯಕತೆಗೆ ಮರುಗಿದ್ದರು.

ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಶನಿಮಹಾತ್ಮ ಸ್ವಾಮಿ ದೇವಸ್ಥಾನದ ಮುಂಭಾಗ ಮಹಿಳೆಯೊಬ್ಬರು ಮಗು ಹಿಡಿದುಕೊಂಡು ಭಿಕ್ಷೆ ಬೇಡುತ್ತಿದ್ದಾರೆ ಎಂದು ದೂರು ಬಂದಿತ್ತು. ನಂತರ ನಾಲ್ಕೈದು ಬಾರಿ ಅಧಿಕಾರಿಗಳು ಭಿಕ್ಷೆ ಬೇಡದಂತೆ ಎಚ್ಚರಿಕೆಯನ್ನು ನೀಡಿದ್ದರು. ಆದರೆ ಮತ್ತೆ ದೇವಸ್ಥಾನದ ಮುಂಭಾಗ ಭಿಕ್ಷೆ ಬೇಡುತ್ತಿರುವ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆಶಾ ನೇತೃತ್ವದ ತಂಡ ದಾಳಿ ಮಾಡಿ, ಇಬ್ಬರನ್ನು ರಕ್ಷಿಸಿದ್ದರು.

Begging Case
ತಾಯಿ-ಮಗುವನ್ನು ರಕ್ಷಿಸಿದ ಅಧಿಕಾರಿಗಳ ತಂಡ

ನಂತರ ಮಹಿಳೆಯನ್ನು ಕೌನ್ಸಿಲಿಂಗ್‌ಗೆ ಒಳಪಡಿಸಿದಾಗ, ಆಕೆ ಹೇಳಿದ್ದು ಕೇಳಿ ಅಧಿಕಾರಿಗಳೇ ಒಂದು ಕ್ಷಣ ಮೌನಕ್ಕೆ ಜಾರಿದ್ದರು. ಕುಡುಕ ಗಂಡನನ್ನು ಕಟ್ಟಿಕೊಂಡ ತಪ್ಪಿಗೆ ಭಿಕ್ಷೆ ಬೇಡುವ ಪರಿಸ್ಥಿತಿ ಸೃಷ್ಟಿಯಾಗಿತ್ತು. ಕುಡಿತಕ್ಕೆ ದಾಸನಾಗಿದ್ದ ಪತಿ, ಭಿಕ್ಷೆ ಬೇಡಿ ಕುಡಿಯಲು ಹಣ ತರುವಂತೆ ತಿಳಿಸಿ, ಕಿರುಕುಳ ಕೊಟ್ಟಿದ್ದಾನೆ ಎನ್ನಲಾಗಿದೆ. ಈತನ ಕಾಟಕ್ಕೆ ಬೇಸತ್ತ ಮಹಿಳೆ ಮಗು ಹಿಡಿದುಕೊಂಡು ದೇವಸ್ಥಾನದ ಮುಂದೆ ಭಿಕ್ಷಾಟನೆ ಮಾಡುತ್ತಿದ್ದಳು.

ಸದ್ಯ ತಾಯಿ ಮತ್ತು ಮಗುವನ್ನು ರಕ್ಷಿಸಿ ಸ್ವಾಧಾರ್ ಗೃಹದಲ್ಲಿಟ್ಟು ಕೌನ್ಸಿಲಿಂಗ್ ಮಾಡಲಾಗುತ್ತಿದೆ. ಕೌನ್ಸಿಲಿಂಗ್ ಬಳಿಕ ಅಧಿಕಾರಿಗಳು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಿದ್ದಾರೆ. ಇನ್ನೂ ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಕಂಡರೆ 1098 ಅಥವಾ 122 ಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Drowned in water : ನೀರು ಕುಡಿಯಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದು ಮಹಿಳೆ ಸಾವು

ಮಕ್ಕಳಿಬ್ಬರಿಗೆ ವಿಷ ಕುಡಿಸಿ, ನೇಣಿಗೆ ಶರಣಾದ ತಂದೆ

ಕೋಲಾರ : ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಂದೆಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಕೋಲಾರ ಜಿಲ್ಲೆಯ (Kolar News) ಶ್ರೀನಿವಾಸಪುರ ತಾಲೂಕಿನ ಶೀಗೆಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ನಾರಾಯಣಸ್ವಾಮಿ (40) ಹಾಗೂ ಮಕ್ಕಳಾದ ಪವನ್ (12), ನಿತಿನ್ (10) ಮೃತ ದುರ್ದೈವಿಗಳು. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

Kolar News
ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿದ ಜನರು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸುತ್ತಿರುವ ಪೊಲೀಸರು

ವಿಷಯ ತಿಳಿಯುತ್ತಿದ್ದಂತೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶ್ರೀನಿವಾಸಪುರ ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ:Assault Case : ರಾಯಚೂರಿನಲ್ಲಿ ಬಿಜೆಪಿ ಶಾಸಕನಿಗೆ ಚಾಕು ತೋರಿಸಿದ ಅಪರಿಚಿತ; ಹಲ್ಲೆಗೆ ಯತ್ನ, ಅಪಾಯದಿಂದ ಜಸ್ಟ್‌ ಮಿಸ್‌

ಕೌಟುಂಬಿಕ ಕಲಹ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಗದಗ: ಕೌಟುಂಬಿಕ ಕಲಹಕ್ಕೆ (Family Dispute) ಒಂದೇ ಕುಟುಂಬದ ಮೂವರು (Self Harming) ಬಲಿ‌ಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ (Gadag News) ಈ ಘಟನೆ ನಡೆದಿದೆ. ರೇಣುಕಾ ತೇಲಿ (49), ಮಂಜುನಾಥ್ (22), ಸಾವಕ್ಕ ತೇಲಿ (47) ಮೃತ ದುರ್ದೈವಿಗಳು.

ಸಾಲದ ವಿಷಯಕ್ಕೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದ ರೇಣುಕಾ ತೇಲಿ ರೈಲು ಹಳಿಗೆ ಹಾರಿದ್ದರು. ತಾಯಿಯನ್ನು ಹಿಂಬಾಲಿಸಿ ಬಂದಿದ್ದ ಮಂಜುನಾಥ್‌ ತಾಯಿಯನ್ನು ಕಾಪಾಡಲು ಹೋಗಿ ಹಳಿಗೆ ಬಿದ್ದಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಇವರಿಬ್ಬರ ಪ್ರಾಣವನ್ನು ತೆಗೆದಿತ್ತು.

ಹಾವೇರಿ ಜಿಲ್ಲೆಯ ಎಲವಿಗಿ ರೈಲು ನಿಲ್ದಾಣದ ಬಳಿ ನಿನ್ನೆ ಭಾನುವಾರ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇತ್ತ ಅಕ್ಕ ರೇಣುಕಾಳ ಸಾವಿನ ವಿಷಯ ತಿಳಿದು ಸಾವಕ್ಕ ತೇಲಿ (47) ಎಂಬುವವರು ಮನೆಯಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಒಂದೇ ಕುಟುಂಬದ ಮೂವರನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಲಾಗಿದ್ದಾರೆ.

ಸಾವಕ್ಕ, ರೇಣುಕಾ ಮಧ್ಯೆ ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯವಾಗಿ ಜಗಳವಾಡಿಕೊಂಡಿದ್ದರು. ಬ್ಯಾಂಕ್‌ನಿಂದ 4 ಲಕ್ಷ ರೂ. ಸಾಲ ಪಡೆದು ಟ್ರ್ಯಾಕ್ಟರ್ ಖರೀದಿ ಮಾಡಿದ್ದರು. ಟ್ರ್ಯಾಕ್ಟರ್ ಕಂತು ವಿಚಾರವು ಕೂಡು ಕುಟುಂಬದಲ್ಲಿ ಗಲಾಟೆಗೆ ಕಾರಣವಾಗಿತ್ತು ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಫೂರ್ತಿ ಕತೆ

Raja Marga Column : ಬಹುಮುಖಿ ಸ್ತ್ರೀ; ನೀವು ಕಂಡು ಕೇಳರಿಯದ ಹೆಣ್ಣಿನ ಮುಖಗಳು

Raja Marga Column : ನಮ್ಮ ಬದುಕಿನಲ್ಲಿ ನಾನಾ ಪಾತ್ರಗಳನ್ನು ನಿರ್ವಹಿಸಿ ನಮ್ಮ ಜೀವನವನ್ನು ಸಹನೀಯವಾಗಿಸುವ ಮಹಿಳಾ ಲೋಕಕ್ಕೆ ಶುಭಾಶಯಗಳನ್ನು ಸಲ್ಲಿಸುವುದನ್ನು ಮರೆಯದಿರೋಣ. ಇಲ್ಲಿವೆ ನಾವು ನೆನಪಿಸಿಕೊಳ್ಳಲೇಬೇಕಾದ ಕೆಲವು ಚಿತ್ರಗಳು.

VISTARANEWS.COM


on

Raja Marga column faces of Woman
Koo
RAJA MARGA COLUMN Rajendra Bhat

Raja Marga Column : ಮಾರ್ಚ್ 8ರ ವಿಶ್ವ ಮಹಿಳಾ ದಿನ (International Womens day) ನೇಪಥ್ಯಕ್ಕೆ ಸರಿದೇ ಹೋಯಿತು. ಅದು ಆಕೆಯ ದಿನ ಆಗಿತ್ತು. ಆಕೆಗೋಸ್ಕರ ಮುಡಿಪಾದ ದಿನ. ಆಕೆಯ ಅಜ್ಞಾತವಾದ ತ್ಯಾಗವನ್ನು ನೆನೆಯುವ ದಿನ ಅದು. ಅದಿಲ್ಲದೆ ಆಚರಣೆ ಪೂರ್ತಿ ಆಗೋದಿಲ್ಲ. ಅಜ್ಜಿಯಾಗಿ, ತಾಯಿಯಾಗಿ, ಮಗಳಾಗಿ, ಮೊಮ್ಮಗಳಾಗಿ, ಅಕ್ಕನಾಗಿ, ತಂಗಿಯಾಗಿ, ಸೊಸೆಯಾಗಿ, ಅತ್ತಿಗೆಯಾಗಿ, ಅತ್ತೆಯಾಗಿ, ನಾದಿನಿಯಾಗಿ, ಓರಗಿತ್ತಿಯಾಗಿ, ಆಪ್ತತೆಯ ಗೆಳತಿಯಾಗಿ, ಹೆಂಡತಿಯಾಗಿ, ಪ್ರೇರಣೆ ನೀಡುವ ಪ್ರೇಯಸಿ ಆಗಿ, ಶಿಕ್ಷಕಿಯಾಗಿ….. ಹೀಗೆ ನೂರು ರೂಪಗಳಲ್ಲಿ ನಮ್ಮ ಬದುಕನ್ನು ಪ್ರಭಾವಿಸಿದ, ನೂರಾರು ಆಯಾಮಗಳಲ್ಲಿ ನಮ್ಮ ಬದುಕಿನಲ್ಲಿ ತಂಗಾಳಿ ಬೀಸಲು ಕಾರಣರಾದ, ತನ್ನ ಬದುಕಿನ ಇಂಚಿಂಚು ಹ್ಯಾಪಿನೆಸನ್ನು ತುಂಬಾ ಸಂಭ್ರಮಿಸಿದ ಪ್ರತಿಯೊಬ್ಬ ಸಹೃದಯೀ ಮಹಿಳೆಗೂ ಅವಳದ್ದೇ ಮಹಿಳಾ ದಿನದ ಶುಭಾಶಯಗಳನ್ನು (Wishes to all women) ಸಲ್ಲಿಸಲು ಬಾಕಿ ಇದ್ದವರು ಇಂದಾದರೂ ಸಲ್ಲಿಸಿ.

Raja marga Column : ಆ ನೆಪದಲ್ಲಿ ಒಂದು ದಿನ ತಡವಾಗಿ ಆದರೂ ಒಂದು ಸುತ್ತು ಪಟ್ಟಿ ಮಾಡೋಣ!

ಮಹಿಳಾ ದಿನದ ನೆಪದಲ್ಲಿ ಹೀಗೊಂದು ಅರ್ಥಪೂರ್ಣ ಮಹಿಳಾ ಸಾಧಕರನ್ನು ಪಟ್ಟಿ ಮಾಡುತ್ತ ಹೋಗೋಣ. ಹಾಗೂ ಅವರನ್ನು ಅಭಿನಂದನೆ ಕೂಡ ಮಾಡೋಣ.

1. ನೂರಾರು ಆಲದ ಮರ ನೆಟ್ಟು ಅವುಗಳನ್ನು ತನ್ನ ಮಕ್ಕಳಂತೆ ಪೋಷಣೆ ಮಾಡಿದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನಿಗೆ..

Raja Marga column faces of Woman salu marada thimmakka

2. ಸಾವಿರಾರು ಜಾನಪದ ಹಾಡುಗಳನ್ನು ನೆನಪಿಟ್ಟು ಅವುಗಳನ್ನು ಹಾಡುತ್ತ ಜನಜಾಗೃತಿ ಮೂಡಿಸುತ್ತಿರುವ ಸುಕ್ರಜ್ಜಿಗೆ…

3. ಚಾರ್ಲಿ ಚಾಪ್ಲಿನ್ ಎಂಬ ಅದ್ಭುತ ಪ್ರತಿಭೆಗೆ ಜನ್ಮ ಕೊಟ್ಟ ಮತ್ತು ಅವನ ಪ್ರತಿಭೆಗೆ ಕೊನೆಯ ಉಸಿರಿನತನಕ ಪ್ರೇರಣೆಯಾಗಿ ನಿಂತ, ತನಗೆ ಮರೆವಿನ ಕಾಯಿಲೆ ಇದ್ದರೂ ಮಗನಿಗಾಗಿ ಜೀವ ಹಿಡಿದುಕೊಂಡ ಅವನ ತಾಯಿ ಹಾನ್ನಾ ಚಾಪ್ಲಿನ್ ಅವರಿಗೆ.

4. ಎಡಿಸನ್ ಎಂಬ ಸಮಸ್ಯಾತ್ಮಕ ಮಗುವಿಗೆ ಜನ್ಮ ಕೊಟ್ಟು ನೂರಾರು ಸವಾಲುಗಳ ನಡುವೆ ಕೂಡ ಆತನ ಅಷ್ಟೂ ಸಂಶೋಧನಾ ಪ್ರವೃತ್ತಿಗಳಿಗೆ ಬೆಂಬಲವಾಗಿ ನಿಂತ ಆತನ ತಾಯಿ ಗ್ಲಾಡಿಸ್‌ರಿಗೆ

5. ಡಾಕ್ಟರ್ ರಾಜಕುಮಾರ್ ಎಂಬ ಲೆಜೆಂಡ್ ನಟನ ಮುಗ್ಧತೆಗೆ ಬೇಲಿಯಾಗಿ ನಿಂತ ಮಡದಿ ಪಾರ್ವತಮ್ಮ ರಾಜಕುಮಾರ್ ಅವರಿಗೆ.

Raja Marga Column parvathamma Rajkumar

6. ಕಾಳಿದಾಸನ ಕಾವ್ಯ ಪ್ರತಿಭೆಗೆ ಸ್ಫೂರ್ತಿ ದೇವತೆಯಾಗಿ ನಿಂತ ವಿದ್ಯಾಧರೆ ಎಂಬ ಸುಂದರ ರಾಜಕುಮಾರಿಗೆ.

7. ಶಿವಾಜಿ ಎಂಬ ಶಕ್ತಿಶಾಲಿ ಮಗನ ಮೂಲಕ ತಾನು ಕನಸು ಕಂಡ ಹಿಂದವೀ ಸಾಮ್ರಾಜ್ಯವನ್ನು ಕಡೆದು ನಿಲ್ಲಿಸಿದ ಮಹಾಮಾತೆ ಜೀಜಾಬಾಯಿಗೆ.

8. ನರೇಂದ್ರ(ಸ್ವಾಮಿ ವಿವೇಕಾನಂದ) ಎಂಬ ಆಧ್ಯಾತ್ಮ ಶಿಖರಕ್ಕೆ ಒತ್ತಾಸೆಯಾಗಿ ನಿಂತ ಆತನ ತಾಯಿಯಾದ ಭುವನೇಶ್ವರಿ ದೇವಿಗೆ.

9. ಅಂಕೋಲಾದ ಕಾಡುಗಳಲ್ಲಿ ವೃಕ್ಷ ರಾಶಿಯನ್ನು ಬೆಳೆಸಿ ಅದರ ಸಂರಕ್ಷಣೆ ಮಾಡಿ ನೇಪಥ್ಯದಲ್ಲಿ ನಿಂತ ತುಳಸೀ ಗೌಡ ಅವರಿಗೆ.

Raja Marga column  Tulsi Gowda

10. ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಉಸಿರಾಗಿ ಬೆಳೆಸಿದ, ಸಂಗೀತದ ಕಂಪನ್ನು ಜಾಗತಿಕ ಮಟ್ಟದಲ್ಲಿ ಬೆಳೆಸಿರುವ ಭಾರತ ರತ್ನ ಡಾ. ಎಂ ಎಸ್ ಸುಬ್ಬುಲಕ್ಷ್ಮಿ ಅವರಿಗೆ.

11. ಮಹಿಳಾ ಕ್ರಿಕೆಟನ್ನು ಭಾರತದಲ್ಲಿ ಜನಪ್ರಿಯತೆಯ ಶಿಖರದ ತುದಿಗೆ ಮುಟ್ಟಿಸಿದ ಬಲಿಷ್ಠ ಕ್ರಿಕೆಟರ್ ಮಿತಾಲಿ ರಾಜ್ ಅವರಿಗೆ..

12. ಭಾರತದ ಮೊದಲ ಮಹಿಳಾ ವೈದ್ಯೆಯಾಗಿ ಕೀರ್ತಿ ಪಡೆದು, ಪ್ರಾಕ್ಟೀಸ್ ಆರಂಭ ಮಾಡುವ ಮೊದಲೇ ನಿಧನರಾದ ಡಾಕ್ಟರ್ ಆನಂದಿಬಾಯಿ ಜೋಶಿ ಅವರಿಗೆ.

Raja Marga column : ರಾಜ್ಯಸಭೆಗೆ ಆಯ್ಕೆಯಾದ ಸಮಾಜಸೇವಕಿ ಸುಧಾಮೂರ್ತಿ

13. ಸರಳತೆ, ಸಮಾಜಸೇವೆ ಇವುಗಳಿಗೆ ಅನನ್ಯ ಮಾದರಿ ಆದ ಮತ್ತು ತನ್ನ ಪತಿಯ ಪ್ರತೀ ಉದ್ಯಮದ ಕನಸಿಗೂ ಒತ್ತಾಸೆಯಾಗಿ ನಿಂತ ಡಾಕ್ಟರ್ ಸುಧಾಮೂರ್ತಿ ಅವರಿಗೆ.

Raja marga Column Dr Sudha Murthy

14. ಎರಡೆರಡು ನೊಬೆಲ್ ಬಹುಮಾನಗಳನ್ನು ಪಡೆದು, ತನ್ನ ಸಂಶೋಧನೆಗಳ ಮೂಲಕ ಮಾನವ ಕುಲದ ಕಲ್ಯಾಣವನ್ನು ಹಾರೈಸಿದ ಮೇಡಂ ಕ್ಯೂರಿ ಅವರಿಗೆ.

15. ಮದುವೆಯಾಗಲು ತನ್ನನ್ನು ಒತ್ತಾಯಿಸಿದ ಹಿಂದೀ ಸಿನೆಮಾದ ಶೋಮ್ಯಾನ್ ಆದ ರಾಜ್ ಕಪೂರ್ ಅವರ ಪ್ರಸ್ತಾಪವನ್ನು ಪ್ರೀತಿಯಿಂದ ನಿರಾಕರಿಸಿ, ಕೊನೆಯವರೆಗೂ ಆತನ ಪ್ರಿಯತಮೆ ಆಗಿ ಉಳಿದು ಆತನಿಂದ ಮಹಾ ಸಿನೆಮಾಗಳನ್ನು ಮಾಡಿಸಿದ ಮೇರು ನಟಿ ನರ್ಗೀಸ್ ಅವರಿಗೆ.

16. ಹಾಡುವುದಕ್ಕಾಗಿಯೇ ಹುಟ್ಟಿ ಬಂದ, ಸಾವಿರಾರು ಹಾಡುಗಳನ್ನು ಹಾಡುವ ಮೂಲಕ ಭಾರತದ ಧ್ವನಿ ಎಂದೇ ಪ್ರಸಿದ್ಧಿ ಪಡೆದ ಮೇರು ಗಾಯಕಿ ಲತಾ ಮಂಗೇಷ್ಕರ್ ಅವರಿಗೆ.

Raja marga Column : ಗಟ್ಟಿತನಕ್ಕೆ ಇನ್ನೊಂದು ಹೆಸರು ಇಂದಿರಾ ಗಾಂಧಿ

17. ಗಟ್ಟಿತನ, ದಿಟ್ಟತನ ಮತ್ತು ಕಠಿಣ ನಿರ್ಧಾರಗಳಿಗೆ ಹೆಸರು ಮಾಡಿದ, ಎಲ್ಲಕ್ಕಿಂತ ಮುಖ್ಯವಾಗಿ ಬ್ಯಾಂಕ್ ರಾಷ್ಟ್ರೀಕರಣ ಮಾಡಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ.

 Raja Marga column 
 Indira Gandhi

18. ತಾನೇ ಸ್ವತಃ ಅನಾಥೆ ಆಗಿದ್ದರೂ, ಭಿಕ್ಷೆ ಬೇಡಿ ಅನಾಥಾಶ್ರಮಗಳನ್ನು ಕಟ್ಟಿ ಸಾವಿರಾರು ಅನಾಥ ಮಕ್ಕಳ ತಾಯಿಯಾದ ಸಿಂಧುತಾಯಿ ಸಪ್ಕಲ್ ಅವರಿಗೆ.

19. ರೆಕ್ಕೆ ಬಿಚ್ಚಿ ಹಾರಾಡುವ ತನ್ನ ಕನಸನ್ನು ಬಾಹ್ಯಾಕಾಶ ಯಾನದ ಮೂಲಕ ನನಸು ಮಾಡಲು ಹೊರಟು ಅರ್ಧದಲ್ಲಿಯೇ ಬೂದಿ ಆಗಿ ಹೋದ ಕಲ್ಪನಾ ಚಾವ್ಲಾ ಅವರಿಗೆ.

20. ಇಡೀ ಜಗತ್ತಿನ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರಾಗಿ ಪೋರ್ಚುಗೀಸರ ಜೊತೆಗೆ ಹೋರಾಡಿ ಅವರನ್ನು ಹಿಮ್ಮೆಟ್ಟಿಸಿದ ಉಳ್ಳಾಲದ ರಾಣಿ ಅಬ್ಬಕ್ಕ ಅವರಿಗೆ..

ಇದನ್ನೂ ಓದಿ : Womens Day 2024: ಉದ್ಯಾನನಗರಿಯ ಫ್ಯಾಷನ್‌ ಲೋಕದಲ್ಲಿ ಮಹಿಳೆಯರದೇ ಮೇಲುಗೈ!

21. ‘ದ ವುಮನ್ ವಿದ್ ದ ಲ್ಯಾಂಪ್’ ಎಂದು ಎಲ್ಲರಿಂದ ಕರೆಸಿಕೊಂಡು ಯುದ್ಧದಲ್ಲಿ ಸಂತ್ರಸ್ತರಾದ ಸೈನಿಕರ ಆರೈಕೆಗೆ ಸಂಕಲ್ಪ ಮಾಡಿದ, ವಿಶ್ವದ ಮೊದಲ ನರ್ಸಿಂಗ್ ಕಾಲೇಜನ್ನು ತೆರೆದ ಫ್ಲಾರೆನ್ಸ್ ನೈಟಿಂಗೇಲ್‌ ಅವರಿಗೆ.

22. ‘ಕಲಾ ಮಂಡಲಮ್ ‘ಎಂಬ ಸಂಸ್ಥೆಯನ್ನು ಸ್ಥಾಪನೆ ಮಾಡಿ, ಗೊಡ್ಡು ಸಂಪ್ರದಾಯಗಳ ವಿರುದ್ಧ ಹೋರಾಡಿ ಸಂಗೀತ ಮತ್ತು ನೃತ್ಯಗಳನ್ನು ಆರಾಧನೆ ಮಾಡಿದ ಮಹಾನ್ ಕಲಾವಿದೆ ರುಕ್ಮಿಣೀ ದೇವಿ ಆರುಂಡೇಲ್ ಅವರಿಗೆ…

23. ಗಂಡಾಗಿ ಹುಟ್ಟಿ, ಒಳಗಿನ ಧ್ವನಿಗಳಿಗೆ ಕಿವಿಕೊಟ್ಟು ಮುಂದೆ ಹೆಣ್ಣಾಗಿ ಪರಿವರ್ತನೆ ಆಗಿ, ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದರೂ, ಕನ್ನಡದ ಜಾನಪದ ಜಗತ್ತನ್ನು ವಿಸ್ತರಿಸಿದ ಮಂಜಮ್ಮ ಜೋಗತಿ ಅವರಿಗೆ.

Raja Marga Column Manjamma Joagathi

24. ಶಂಕರನಾಗ್ ಅವರ ನೂರಾರು ಅಪೂರ್ಣ ಕನಸುಗಳನ್ನು ಅವರ ಮರಣದ ನಂತರ ಒಂದೊಂದಾಗಿ ಪೂರ್ತಿ ಮಾಡಿ ಕನ್ನಡದಲ್ಲಿ ರಂಗ ಸಂಸ್ಕೃತಿಯನ್ನು ಬೆಳೆಸಿದ ಅವರ ಪತ್ನಿ ಅರುಂಧತಿ ನಾಗ್ ಅವರಿಗೆ.

25. ಕನ್ನಡದ ಅತೀ ಶ್ರೇಷ್ಟವಾದ ಕಾದಂಬರಿಗಳನ್ನು ಬರೆದು ಸಾರಸ್ವತ ಲೋಕಕ್ಕೆ ಪರಿಚಯ ಮಾಡಿದ ಕನ್ನಡದ ಮಹಾ ಲೇಖಕಿ ಎಂ ಕೆ ಇಂದಿರಾ ಅವರಿಗೆ.

26. ಬೆಂಗಳೂರಿನಲ್ಲಿ ಬಯೋಕಾನ್ ತೆರೆದು ಸಾವಿರಾರು ಮಂದಿಗೆ ಉದ್ಯೋಗ ನೀಡಿದ ಮಹಿಳಾ ಉದ್ಯಮಿ ಕಿರಣ್ ಮಜುಂದಾರ್ ಅವರಿಗೆ.

27. ಮಹಾಕವಿ ರನ್ನನ ಕಾವ್ಯ ಪ್ರತಿಭೆಗೆ ಸ್ಫೂರ್ತಿ ಮತ್ತು ಬೆಂಬಲವಾಗಿ ನಿಂತ ಮಹಾ ದಾನಿ ಅತ್ತಿಮಬ್ಬೆಗೆ.

28. ಭಾರತದ ಮೊದಲ ಐಪಿಎಸ್ ಅಧಿಕಾರಿ ಆಗಿ ಮೂಡಿಬಂದು, ತನಗೆ ದೊರೆತ ಅವಕಾಶಗಳನ್ನು ಅತ್ಯಂತ ಸಮರ್ಥವಾಗಿ ಬೆಳೆಸಿಕೊಂಡ ಪೊಲೀಸ್ ಅಧಿಕಾರಿ ಕಿರಣ್ ಬೇಡಿ ಅವರಿಗೆ .

raja Marga Column Kiran Bedi tihar jail

29. ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕವು ಸಿಗಲು ಸಾಧ್ಯವೇ ಇಲ್ಲ ಎಂಬ ಕೂಗಿನ ನಡುವೆಯೂ ಎಂಬತ್ತರ ದಶಕದಲ್ಲಿ ಭಾರತೀಯರಿಗೆ ಮೊದಲ ಬೆಳಕಿನ ಕಿಟಕಿ ತೆರೆದ ಪಯ್ಯೋಳಿ ಎಕ್ಸ್‌ಪ್ರೆಸ್‌ ಪಿ.ಟಿ. ಉಷಾ ಅವರಿಗೆ.

ಇದನ್ನೂ ಓದಿ : Raja Marga Column : ಈ ಹೆಣ್ಮಕ್ಕಳು ಜಗತ್ತಿನ ಮಹಾನ್ ಪವರ್‌ ಹೌಸ್‌ಗಳು

ನಾವು ಬದುಕುವ ಜಗತ್ತನ್ನು ತನ್ನ ಅದಮ್ಯ ಶಕ್ತಿಗಳ ಮೂಲಕ ಶ್ರೀಮಂತಗೊಳಿಸಿದ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರು ಇನ್ನೂ ಸಾವಿರ ಸಾವಿರ ಸಂಖ್ಯೆಯಲ್ಲಿ ಇದ್ದಾರೆ. ಅಷ್ಟರ ಮಟ್ಟಿಗೆ ಭಾರತವನ್ನು ಪುಣ್ಯಗರ್ಭೆ ಎಂದೇ ಕರೆಯಬಹುದು. ಅವರಿಗೆಲ್ಲ ಒಂದು ದಿನ ತಡವಾಗಿ ಆದರೂ ಮತ್ತೆ ಅವರದೇ ದಿನಗಳ ಶುಭಾಶಯಗಳು. ಸ್ತ್ರೀಯರನ್ನು ಗೌರವಿಸುವ ಎಲ್ಲರಿಗೂ ಎಲ್ಲಾ ದಿನವೂ ಮಹಿಳಾ ದಿನಗಳೇ ಎನ್ನುವುದು ನನ್ನ ನಂಬಿಕೆ.

Continue Reading
Advertisement
Amith Shah
ಪ್ರಮುಖ ಸುದ್ದಿ4 mins ago

Amit Shah: ಎಸ್​​ಸಿ, ಎಸ್​ಟಿ ಮೀಸಲು ರದ್ದು; ಅಮಿತ್​ ಶಾ ನಕಲಿ ವಿಡಿಯೊ ಬಗ್ಗೆ ಡೆಲ್ಲಿಯಲ್ಲಿ ಎಫ್​ಐಆರ್​​

Mahanati Show complaint against Gagana Contestant and Ramesh
ಕಿರುತೆರೆ14 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ29 mins ago

Physical Abuse : ಮದುವೆ ಪ್ರಸ್ತಾಪ ತಿರಸ್ಕರಿಸಿದ ಬಾಲಕಿ ಮೇಲೆ ಅತ್ಯಾಚಾರ, ಮುಖಕ್ಕೆ ಕಬ್ಬಿಣದಿಂದ ಬರೆ

ದೇಶ39 mins ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ1 hour ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Gurucharan Singh soon to get married faced financial crunch
ಸಿನಿಮಾ2 hours ago

Gurucharan Singh: ನಿಗೂಢವಾಗಿ ನಾಪತ್ತೆಯಾದ ಈ ನಟನಿಗೆ ಶೀಘ್ರದಲ್ಲೇ ಮದುವೆ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಡೇವಿಡ್ ವಾರ್ನರ್ ಅವರೊಂದಿಗೆ ‘ಈ’ ಅದ್ಭುತ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಕೊಹ್ಲಿ

War 2 A galaxy of stars descended at a Mumbai restaurant on Sunday evening
ಸ್ಯಾಂಡಲ್ ವುಡ್2 hours ago

War 2 Movie: `ವಾರ್‌2′, `ಬ್ರಹ್ಮಾಸ್ತ್ರ’ ತಂಡಕ್ಕೆ ಸ್ಪೆಷಲ್‌ ಡಿನ್ನರ್‌ ಪಾರ್ಟಿ ಆಯೋಜಿಸಿದ ಅಯಾನ್ ಮುಖರ್ಜಿ !

hd revanna prajwal revanna
ಪ್ರಮುಖ ಸುದ್ದಿ2 hours ago

Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ವಿದೇಶ2 hours ago

Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202421 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202423 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202423 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

ಟ್ರೆಂಡಿಂಗ್‌