Indian Tourism : ಪ್ರವಾಸಿಗರಿಗೆ ಶುಭ ಸುದ್ದಿ; ಹೊಸ ಪ್ಯಾಕೇಜ್‌ಗಳನ್ನು ಆರಂಭಿಸಿದ ರೈಲ್ವೆ ಇಲಾಖೆ - Vistara News

ದೇಶ

Indian Tourism : ಪ್ರವಾಸಿಗರಿಗೆ ಶುಭ ಸುದ್ದಿ; ಹೊಸ ಪ್ಯಾಕೇಜ್‌ಗಳನ್ನು ಆರಂಭಿಸಿದ ರೈಲ್ವೆ ಇಲಾಖೆ

ರೈಲ್ವೆ ಇಲಾಖೆಯು ಭಾರತ್‌ ಗೌರವ್‌ ರೈಲಿನ ಎರಡು ವಿಶೇಷ ಪ್ರವಾಸಿ ಪ್ಯಾಕೇಜ್‌ (Indian Tourism) ಆರಂಭಿಸಿದೆ. ಅದರ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

two youths run over by train in Delhi while recording insta reels
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದಲ್ಲಿ ರೈಲ್ವೆ ಪ್ರವಾಸೋದ್ಯಮ (Indian Tourism) ದೊಡ್ಡ ಹೆಸರು ಪಡೆದಿರುವ ಪ್ರವಾಸೋದ್ಯಮ ಎಂದೇ ಹೇಳಬಹುದು. ರೈಲ್ವೆ ಇಲಾಖೆಯು ಐಆರ್‌ಸಿಟಿಸಿ ಸಹಯೋಗದೊಂದಿಗೆ ಹಲವಾರು ಪ್ರವಾಸಿ ಪ್ಯಾಕೇಜ್‌ಗಳನ್ನು ಪರಿಚಯಿಸಿದೆ. ಇತ್ತೀಚೆಗೆ ಕೆಲವು ಹೊಸ ಪ್ಯಾಕೇಜ್‌ಗಳನ್ನು ಆರಂಭಿಸಲಾಗಿದ್ದು, ಅದರ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: Women’s Day 2023: ಪ್ರವಾಸ ಮಾಡುವ ಮಹಿಳೆಯರಿಗಾಗಿ ಇಲ್ಲಿವೆ ಟಾಪ್ 10 ಸ್ಥಳಗಳು
ಹೊಸದಾಗಿ ಮುಂಬೈನಿಂದ ಭಾರತ್‌ ಗೌರವ್‌ ರೈಲು ಪ್ಯಾಕೇಜ್‌ ಆರಂಭಿಸಲಾಗಿದೆ. ಈ ರೈಲು ಮಾರ್ಚ್‌ 9ರಂದು ಮುಂಬೈನಿಂದ ಪ್ರಯಾಣ ಆರಂಭಿಸಿದರೆ, ತಿರುಪತಿವರೆಗೆ ತಲುಪಿ ಮಾರ್ಚ್‌ 19ರಂದು ಮುಂಬೈಗೆ ವಾಪಸು ಬರಲಿದೆ. ಸರ್ಕಾರದ ʼದೇಖೋ ಅಪ್ನಾ ದೇಶ್‌ʼ ಯೋಜನೆಗೆ ಅನುಗುಣವಾಗಿ ಈ ಪ್ಯಾಕೇಜ್‌ ಮಾಡಲಾಗಿದೆ. ಮುಂಬೈನಿಂದ ಹೊರಡುವ ರೈಲು, ಕಲ್ಯಾಣ್, ಪುಣೆ, ವಾಡಿ, ಗುಂಟಕಲ್, ಬೆಂಗಳೂರು, ವೈಟ್‌ಫೀಲ್ಡ್, ತಿರುನೆಲ್ವೆಲಿ, ಕೊಚುಲಿಟಿ, ಮಧುರೈ ಮಾರ್ಗವಾಗಿ ರೆನಿಗುಂಟಾಕ್ಕೆ ತಲುಪಲಿದೆ. ವಾಪಸು ಬರುವಾಗ ದಂಡ್, ಪುಣೆ, ಕಲ್ಯಾಣ್‌ ಮಾರ್ಗವಾಗಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ರೈಲ್ವೆ ನಿಲ್ದಾಣಕ್ಕೆ ಬಂದು ತಲುಪಿದೆ.

ಭಾರತ್‌ ಗೌರವ್‌ ಡಿಲಕ್ಸ್‌

ಅದಲ್ಲದೆ, ಭಾರತದ ಈಶಾನ್ಯ ರಾಜ್ಯಗಳ ಪ್ರವಾಸಕ್ಕೆಂದೇ ಭಾರತ್‌ ಗೌರವ್‌ ಡಿಲಕ್ಸ್‌ ಪ್ಯಾಕೇಜ್‌ ಆರಂಭಿಸಲಾಗಿದೆ. ಈ ಪ್ರವಾಸ ಮಾರ್ಚ್‌ 21 ರಂದು ನವದೆಹಲಿಯ ಸಫ್ದಾರ್ಜಂಗ್ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಈ ಪ್ಯಾಕೇಜ್‌ನಲ್ಲಿ ಪ್ರವಾಸಿಗರನ್ನು ಅರುಣಾಚಲ ಪ್ರದೇಶ, ಅಸ್ಸಾಂ, ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಸುತ್ತಿಸಲಾಗುವುದು. ಒಟ್ಟು 15 ದಿನಗಳ ಪ್ರವಾಸಿ ಇದಾಗಿದೆ. ಪ್ರವಾಸಿಗರಿಗೆ ಪ್ರಮುಖವಾಗಿ ಶಿವಸಾಗರ್, ಗುವಾಹಟಿ, ಜೋರ್ಹತ್, ಕಜಿರಂಗ, ಅಗಾರ್ತಲಾ, ಉನಕೋತಿ, ಕೊಹಿಮಾ, ಶಿಲ್ಲಾಂಗ್‌, ಚಿರಾಪುಂಜಿ ಮತ್ತು ದಿಮಾಪುರ ಸ್ಥಳವನ್ನು ತೋರಿಸಲಾಗುವುದು. ಪ್ರವಾಸಿಗರು ದೆಹಲಿ, ಆಲಿಗಢ, ಗಜಿಯಾಬಾದ್‌, ತುಂಡ್ಲಾ, ಲಕ್ನೋ, ಕಾನ್ಪುರದ ರೈಲು ನಿಲ್ದಾಣದಲ್ಲಿ ಈ ರೈಲನ್ನು ಹತ್ತಬಹುದು ಮತ್ತು ಇಳಿಯಬಹುದಾಗಿದೆ. ಡಿಲಕ್ಸ್‌ ಎಸಿ ರೈಲಾಗಿರುವ ಇದರಲ್ಲಿ 156 ಪ್ರಯಾಣಿಕರ ಪ್ರಯಾಣಕ್ಕೆ ಅವಕಾಶವಿದೆ. ಎರಡು ಅತ್ಯುತ್ತಮ ರೆಸ್ಟೋರೆಂಟ್‌ಗಳು, ಅಡುಗೆಮನೆ, ಸ್ನಾನದ ಮನೆ ಸೇರಿ ಹಲವಾರು ವಿಶೇಷ ಸೌಲಭ್ಯಗಳು ಇದರಲ್ಲಿವೆ.
ಈ ರೈಲಿನಲ್ಲಿ ದರದ ವಿವರ ಈ ಕೆಳಗಿನಂತಿದೆ:
ಎಸಿ 2 ಟೈಯರ್‌ – 1,06,990 ರೂ.(ಒಬ್ಬರಿಗೆ)
ಎಸಿ 1 ಕ್ಯಾಬಿನ್‌ – 1,31,990 ರೂ. (ಒಬ್ಬರಿಗೆ)
ಎಸಿ 1 ಕೂಪ್‌ – 1,49,290 ರೂ.(ಒಬ್ಬರಿಗೆ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

Lok Sabha Election 2024:ನಟ ಶೇಖರ್‌ ಸುಮನ್‌ ಮತ್ತು ಮಾಜಿ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶೇಖರ್‌ ಸುಮನ್‌ ಮತ್ತು ರಾಧಿಕಾರನ್ನು ಬಿಜೆಪಿ ಪ್ರಧಾನ ಕಾರ್ಯಕದರ್ಶಿ ವಿನೋದ್‌ ತಾವ್ಡೆ ಸ್ವಾಗತಿಸಿದರು.

VISTARANEWS.COM


on

Lok Sabha election 2024
Koo

ನವದೆಹಲಿ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ(Lok Sabha Election 2024)ಯ ಮೂರನೇ ಹಂತದ ಮತದಾನ ಬಿರುಸಿನಿಂದ ಸಾಗಿದೆ. ಇದರ ನಡುವೆಯೇ ನಟ ಶೇಖರ್‌ ಸುಮನ್‌(Shekhar Suman) ಮತ್ತು ಮಾಜಿ ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ(Radhika Khera) ಇಂದು ಬಿಜೆಪಿ(BJP). ಸೇರ್ಪಡೆಗೊಂಡಿದ್ದಾರೆ

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಶೇಖರ್‌ ಸುಮನ್‌ ಮತ್ತು ರಾಧಿಕಾರನ್ನು ಬಿಜೆಪಿ ಪ್ರಧಾನ ಕಾರ್ಯಕದರ್ಶಿ ವಿನೋದ್‌ ತಾವ್ಡೆ ಸ್ವಾಗತಿಸಿದರು. ಬಿಜೆಪಿ ಸೇರ್ಪಡೆಯಾದ ಬಳಿಕ ಮಾತನಾಡಿದ ರಾಧಿಕಾ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಕೌಸಲ್ಯಾ ಮಾತೆಯ ಜನ್ಮಭೂಮಿ ಛತ್ತೀಸ್‌ಗಡದಲ್ಲಿ ನಾನೊಬ್ಬ ರಾಮ ಭಕ್ತೆ ಎಂಬ ಕಾರಣಕ್ಕಾಗಿ ನನ್ನ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದರು.ಅವತ್ತು ನನ್ನ ಸಹಾಯಕ್ಕೆ ಬಿಜೆಪಿ ಮತ್ತು ಮೋದಿ ಸರ್ಕಾರ ಬರದೇ ಇದ್ದಿದ್ದರೆ ನಾನು ಇಲ್ಲಿ ಇರಲು ಸಾಧ್ಯವೇ ಇರಲಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಮಹಾತ್ಮ ಗಾಂಧಿಯವರ ಕನಸಿನಂತೆ ಈಗಿಲ್ಲ. ಅದು ರಾಮ ವಿರೋಧಿ, ಹಿಂದೂ ವಿರೋಧಿ ಪಕ್ಷವಾಗಿ ಬೆಳೆದು ನಿಂತಿದೆ. ರಾಹುಲ್‌ ಗಾಂಧಿಯವರ ನ್ಯಾಯಯಾತ್ರೆಯ ಸಂದರ್ಭದಲ್ಲಿ ಛತ್ತೀಸ್‌ಗಡ ಕಾಂಗ್ರೆಸ್‌ ಮುಖಂಡ ಸುಶಿಲ್‌ ಆನಂದ್‌ ಶುಕ್ಲಾ ಮದ್ಯ ಸೇವಿಸುವಂತೆ ನನ್ನನ್ನು ಒತ್ತಾಯಿಸಿದ್ದರು. ಮದ್ಯದ ಅಮಲಿನಲ್ಲಿ ಅವರು ಮತ್ತು ಅವರ 5-6 ಜನ ಕಾರ್ಯಕರ್ತರು ನನ್ನ ಕೋಣೆಯ ಬಾಗಿಲು ಬಡಿಯುತಿದ್ದರು. ನಾನು ಈ ಬಗ್ಗೆ ಸಚಿನ್‌ ಪೈಲಟ್‌ ಮತ್ತು ಜೈರಾಮ್‌ ರಮೇಶ್‌ ಅವರಿಗೆ ದೂರು ನೀಡಿದ್ದೆ ಆದರೆ ಯಾವ ಪ್ರಯೋಜನವೂ ಆಗಿರಲಿಲ್ಲ ಎಂದು ದೂರಿದ್ದಾರೆ.

ಈ ವೇಳೆ ಶೇಖರ್‌ ಸುಮನ್‌ ಮಾತನಾಡಿದ್ದು, ನಿನ್ನೆಯವರೆಗೆ ನಾನು ಇಲ್ಲಿ ಬಂದು ಕೂರುತ್ತೇನೆ ಎಂದು ಭಾವಿಸಿಯೇ ಇರಲಿಲ್ಲ. ಜೀವನದಲ್ಲಿ ನಡೆದ ಅನೇಕ ಘಟನೆಗಳಿಂದಾಗಿ ನಾನು ಇಂದು ಇಲ್ಲಿ ಬಂದಿದ್ದೇನೆ. ಬಹಳ ಧನಾತ್ಮಕ ಚಿಂತನೆಯೊಂದಿಗೆ ನಾನು ಇಲ್ಲಿ ಬಂದಿದ್ದೇನೆ. ಇಲ್ಲಿ ಬರಲು ಪ್ರೇರೇಪಿಸಿದ ದೇವರಿಗೆ ನಾನು ಆಭಾರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

ತಮ್ಮ ಜೊತೆ ಪಕ್ಷದ ನಾಯಕರು ಅನುಚಿತವಾಗಿ ನಡೆದುಕೊಳ್ಳುತ್ತಿದ್ದಾರೆ ಮತ್ತು ರಾಮಭಕ್ತೆ ಎಂಬ ಕಾರಣಕ್ಕಾಗಿ ರೂಂನಲ್ಲಿ ಕೂಡಿ ಹಾಕಿದ್ದಾರೆ ಎಂದು ರಾಧಿಕಾ ಇತ್ತೀಚೆಗೆ ದೂರಿದ್ದರು. ಎಐಸಿಸಿಯ ವಕ್ತಾರೆಯೂ ಆಗಿದ್ದ ಆಕೆ ಇತ್ತೀಚೆಗೆ ಪಕ್ಷ ತೊರೆದಿದ್ದರು.

Continue Reading

ದೇಶ

Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

Rahul Gandhi: ರಾಹುಲ್‌ ಗಾಂಧಿಯವರು ಕೆಲವು ಜನರ ಜೊತೆ ಕುಳಿತು ಚರ್ಚೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೇಳೆ ಅವರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಲಿತರಿಗೆ ಅನ್ಯಾಯ ಆಗುತ್ತಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಿದರು. ನಮ್ಮ ದೇಶದಲ್ಲಿ ಮೇಲ್ವರ್ಗದ ಜನ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ತಯಾರಿಸುವುದರಿಂದ ದಲಿತರು ಅನುತ್ತೀರ್ಣರಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಪ್ರಧಾನಿ ನರೇಂದ್ರ ಮೋದಿ(Narendra Modi) ದ್ವಾರಕಾ ಪೂಜೆ ಸೇರಿದಂತೆ ದಿನಕ್ಕೊಂದು ಹೇಳಿಕೆ ಮೂಲಕ ವಿವಾದಕ್ಕೀಡಾಗುತ್ತಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಮೇಲ್ವರ್ಗದವರು ಪರೀಕ್ಷೆ ನಡೆಸುವುದರಿಂದಾಗಿಯೇ ದಲಿತರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿದ್ದಾರೆ ಎಂದು ಹೊಸ ವಿವಾದ ಕಿಡಿ ಹಚ್ಚಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗುತ್ತಿದ್ದು, ಬಿಜೆಪಿ ನಾಯಕರಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ವಿಡಿಯೋದಲ್ಲಿ ಏನಿದೆ?

ವೈರಲ್‌ ಆಗಿರುವ ವಿಡಿಯೋದಲ್ಲಿ ರಾಹುಲ್‌ ಗಾಂಧಿಯವರು ಕೆಲವು ಜನರ ಜೊತೆ ಕುಳಿತು ಚರ್ಚೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ. ಈ ವೇಳೆ ಅವರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ದಲಿತರಿಗೆ ಅನ್ಯಾಯ ಆಗುತ್ತಿದೆ ಎಂಬ ವಿಚಾರವನ್ನು ಪ್ರಸ್ತಾಪಿಸಿದರು. ಇಂತಹ ಜನಾಂಗೀಯ ತಾರತಮ್ಯ ಅಮೆರಿಕದಲ್ಲೂ ನಡೆದಿತ್ತು. ಪರೀಕ್ಷೆಗಳಲ್ಲಿ ಪಾರದರ್ಶಕತೆ ಇರಬೇಕೆಂದು ಅಂದೇ ಮಹಾತ್ಮ ಗಾಂಧಿ ಹೇಳಿದ್ದರು. ನಮ್ಮ ದೇಶದಲ್ಲಿ ಮೇಲ್ವರ್ಗದ ಜನ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ತಯಾರಿಸುವುದರಿಂದ ದಲಿತರು ಅನುತ್ತೀರ್ಣರಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಮೆರಿಕದಲ್ಲಿ SAT ಪರೀಕ್ಷೆಯಯ ಬಗ್ಗೆ ಪ್ರಸ್ತಾಪಿಸಿದ ಅವರು, ಈ ಪರೀಕ್ಷೆಗೆ ಸವರ್ಣೀಯರು, ಕಪ್ಪು ಜನಾಂಗದವರು ಮತ್ತು ಸ್ಪಾನಿಶ್‌ ಮಾತನಾಡುವವರು ಹಾಜರಾಗುತ್ತಾರೆ. ಈ ಪರೀಕ್ಷೆಯಲ್ಲಿ ಸವರ್ಣೀಯರು ಮಾತ್ರ ಉತ್ತಮ ಅಂಕ ಪಡೆಯುತ್ತಿದ್ದರು. ಆಫ್ರಿಕನ್‌ ಅಭ್ಯರ್ಥಿಗಳನ್ನು ಉದ್ದೇಶಪೂರ್ವಕವಾಗಿ ಅನುತ್ತೀರ್ಣಗೊಳಿಸಲಾಗುತ್ತಿತ್ತು. ಆ ಪರೀಕ್ಷೆಯಲ್ಲಿ ಬಿಳಿಯರನ್ನು ಹೊರತುಪಡಿಸಿ ಇತರರು ಯಾರೂ ಉತ್ತೀರ್ಣರಾಗುತ್ತಲೇ ಇರಲಿಲ್ಲ. ಇದು ಅನೇಕ ವರ್ಷಗಳವರೆಗೆ ನಡೆಯುತ್ತಿತ್ತು. ಬಳಿಕ ಒಂದು ಆಫ್ರಿಕನ್‌ ಜನರಿಗೆ ಪ್ರಶ್ನೆ ಪತ್ರಿಕೆ ತಯಾರಿಸುವ ಅವಕಾಶ ಕೊಡಲಾಯಿತು. ಆಗ ಬಿಳಿಯರೆಲ್ಲರೂ ಫೇಲ್‌ ಆಗಿದ್ದರು. ಅಂದರೆ ಮೆರಿಟ್‌ ಅನ್ನು ನಿರ್ಧರಿಸುವವರು ಯಾರು ಎಂಬ ಪ್ರಶ್ನೆ ಮೂಡುತ್ತದೆ. ಯಾರು ಪ್ರಶ್ನೆ ಪತ್ರಿಕೆ ತಯಾರಿಸುತ್ತಾರೋ, ಯಾರು ಪರೀಕ್ಷೆ ನಡೆಸುತ್ತಾರೋ ಅವರೇ ಮೆರಿಟ್‌ ನಿರ್ಧರಿಸುತ್ತಿದ್ದಾರೆ. ವ್ಯವಸ್ಥೆಯನ್ನು ಕಂಟ್ರೋಲ್‌ ಮಾಡುವವರೇ ಮೆರಿಟ್‌ ಅನ್ನು ನಿರ್ಧರಿಸುತ್ತಿದ್ದಾರೆ. ಐಐಟಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ದಲಿತರು ಫೇಲ್‌ ಆಗುತ್ತಿದ್ದಾರೆ ಅಂತಾದರೆ ದಲಿತರಿಗೆ ಪ್ರಶ್ನೆ ಪತ್ರಿಕೆ ತಯಾರಿಸಲು ಅವಕಾಶ ಮಾಡಿಕೊಡಿ ಎಂದು ಹೇಳಿದ್ದರು.

ಇದನ್ನೂ ಓದಿ:Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

ರಾಹುಲ್‌ ಗಾಂಧಿಯವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಕೀಯ ಲಾಭಕ್ಕಾಗಿ ರಾಹುಲ್‌ ಗಾಂಧಿ ಎಲ್ಲಾ ವಿಚಾರಗಳಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

Continue Reading

ಸಿನಿಮಾ

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Salman Khan: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಗುಂಡಿನ ದಾಳಿಗೆ ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಹೊರಗೆ ಗುಂಡಿನ ದಾಳಿ; ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು

ʼʼಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲʼʼ ಎಂದು ಲಾರೆನ್ಸ್ ಬಿಷ್ಣೋಯ್ ಹೇಳಿದ್ದ.

Continue Reading

ದೇಶ

Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Narendra Modi:ಕಾಂಗ್ರೆಸ್‌ನವರು ನಮ್ಮನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸುತ್ತಾ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಇದು ಮಾಜಿ ಪ್ರಧಾನಿ ದಿವಂಗತ ನೆಹರೂ ಕಾಲದಿಂದಲೂ ನಡೆಯುತ್ತಿದೆ. ತಮ್ಮನ್ನು ತಾವು ಮುಸ್ಲಿಮರ ಸ್ನೇಹಿ ಪಕ್ಷ ಎಂದು ಹೇಳುತ್ತಲೇ ಬಂದಿದೆ. ಇದರಿಂದ ಸಾಕಷ್ಟು ಲಾಭ ಪಡೆದಿದೆ. ಹೀಗಾಗಿಯೇ ಅವರು ಅನಾವಶ್ಯಕವಾಗಿ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಭಯ ಹುಟ್ಟಿಸಿ ರಾಜಕೀಯ ಲಾಭ ಪಡೆಯುವದೇ ಅವರ ಕೆಲಸವಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ(Narendra Modi)ಯವರನ್ನು ಪ್ರತಿಪಕ್ಷಗಳು ಮುಸ್ಲಿಂ ಮತ್ತು ಇಸ್ಲಾಂ ವಿರೋಧಿ ಎಂದು ಕರೆಯುವುದು ಸರ್ವೇ ಸಾಮಾನ್ಯ ವಿಚಾರ. ಇದೀಗ ಇದೇ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಧಾನಿ ಮೋದಿ, ನಾನು ಇಸ್ಲಾಂ(Islam) ಅಥವಾ ಮುಸ್ಲಿಂ ವಿರೋಧಿ(Anti Muslim) ಅಲ್ಲ. ಮುಸ್ಲಿಂ ಸಮುದಾಯದವರು ತಮ್ಮ ಭವಿಷ್ಯದ ಬಗ್ಗೆ ಚಿಂತಿಸಲಿ ಎಂಬುದನಷ್ಟೇ ನಾನು ಬಯಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ಆರೋಪವವನ್ನು ತಳ್ಳಿ ಹಾಕಿದ್ದಾರೆ

ಕಾಂಗ್ರೆಸ್‌ನವರು ನಮ್ಮನ್ನು ಮುಸ್ಲಿಂ ವಿರೋಧಿ ಎಂದು ಬಿಂಬಿಸುತ್ತಾ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಇದು ಮಾಜಿ ಪ್ರಧಾನಿ ದಿವಂಗತ ನೆಹರೂ ಕಾಲದಿಂದಲೂ ನಡೆಯುತ್ತಿದೆ. ತಮ್ಮನ್ನು ತಾವು ಮುಸ್ಲಿಮರ ಸ್ನೇಹಿ ಪಕ್ಷ ಎಂದು ಹೇಳುತ್ತಲೇ ಬಂದಿದೆ. ಇದರಿಂದ ಸಾಕಷ್ಟು ಲಾಭ ಪಡೆದಿದೆ. ಹೀಗಾಗಿಯೇ ಅವರು ಅನಾವಶ್ಯಕವಾಗಿ ಜನರಲ್ಲಿ ಭೀತಿ ಹುಟ್ಟಿಸುತ್ತಿದ್ದಾರೆ. ಭಯ ಹುಟ್ಟಿಸಿ ರಾಜಕೀಯ ಲಾಭ ಪಡೆಯುವದೇ ಅವರ ಕೆಲಸವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಆದರೆ ಮುಸ್ಲಿಂ ಸಮುದಾಯ ಎಚ್ಚೆತ್ತುಕೊಂಡಿದೆ. ನಮ್ಮ ಸರ್ಕಾರ ತ್ರಿವಳಿ ತಲಾಖ್‌ ರದ್ದುಗೊಳಿಸಿದಾಗ ಅನೇಕ ಮುಸ್ಲಿಂ ಸಹೋದರಿಯರು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದರು. ಅಲ್ಲದೇ ನನಗೆ ಅವರ ಬಗ್ಗೆ ನಿಜವಾದ ಕಾಳಜಿ ಎಂಬುದು ಅವರಿಗೆ ಅರ್ಥವಾಗಿತ್ತು. ನಾನು ಆಯುಷ್ಮಾನ್‌ ಯೋಜನೆ ಜಾರಿಗೊಳಿಸಿದಾಗ ಎಲ್ಲರೂ ಸಂಸತ ವ್ಯಕ್ತಪಡಿಸದ್ದರು. ಕೋವಿಡ್‌ ಲಸಿಕೆ ಎಲ್ಲರಿಗೂ ಲಭ್ಯವಾಗುವಂತೆ ಮಾಡಿದಾಗ ನಾನು ಯಾರ ಬಗ್ಗೆಯೂ ತಾರತಮ್ಯ ಹೊಂದಿಲ್ಲ ಎಂಬುದು ಎಲ್ಲರಿಗೂ ಮನವರಿಕೆ ಆಗಿತ್ತು. ಪ್ರತಿಪಕ್ಷಗಳ ಸುಳ್ಳು ಬಯಲಾಗಿರೋದೇ ಅವರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿಯೇ ಅವರು ಜನರನ್ನು ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಸುಳ್ಳುಗಳ ಮೇಲ್ ಸುಳ್ಳು ಹೇಳುತ್ತಾ ಇದ್ದಾರೆ. ನನ್ನನ್ನು ಮುಸ್ಲಿಂ ವಿರೋಧಿ ಎಂದು ಬ್ರ್ಯಾಂಡ್‌ ಮಾಡುತ್ತಿದ್ದಾರೆ ಎಂದು ಪ್ರಧಾನಿ ಟಾಂಗ್‌ ಕೊಟ್ಟರು.

ಇದನ್ನೂ ಓದಿ:Narendra Modi: ಮತದಾನದ ಬಳಿಕ ಮಗುವನ್ನು ಎತ್ತಿ ಆಡಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ

ನಾನು ಮಸಲ್ಮಾನರಿಗೆ ಮನವಿ ಮಾಡುವುದು ಇಷ್ಟೇ.. ಸ್ವಯಂ ಅವಲೋಕನ ಮಾಡಿಕೊಳ್ಳಿ. ದೇಶ ಪ್ರಗತಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಿಮ್ಮ ಸಮದಾಯಕ್ಕೆ ಏನಾದರೂ ಕೊರತೆ ಕಂಡು ಬಂದಲ್ಲಿ ಅದು ಏನು? ಯಾಕಾಗಿ ಕೊರತೆ ಉಂಟಾಗಿದೆ ? ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿರುವಾಗ ನಮಗೇಕೆ ಸೌಲಭ್ಯಗಳು ಸಿಗುತ್ತಿರಲಿಲ್ಲ ಎಂದು ಯೋಜನೆ ಮಾಡಿ. ನಿಮ್ಮ ಮಕ್ಕಳ ಭವಿಷ್ಯದ ಬಗೆ ಚಿಂತನೆ ಇರಲಿ. ಯಾವ ಸಮುದಾಯದ ಜನರೂ ಕಾರ್ಮಿಕರಂತೆ ಬದುಕುವುದು ನನಗೆ ಇಷ್ಟವಿಲ್ಲ. ದೇಶದಲ್ಲಿರುವ ಎಲ್ಲಾ ಸಮುದಾಯಗಳ ಬಡ ಜನರಿಗೆ ಸರ್ಕಾರದ ಎಲ್ಲಾ ಸವಲತ್ತುಗಳು, ಮೀಸಲಾತಿ ಸಿಗಲೇಬೇಕು ಎಂಬುದು ನನ್ನ ಆಶಯ. ನಾನು ಯಾವುತ್ತೂ ಮುಸ್ಲಿಮರ ಮೀಸಲಾತಿ ಕಿತ್ತು ಹಾಕುತ್ತೇನೆ ಎಂದು ಹೇಳಿಲ್ಲ. ನಾನು ಹೇಳಿರುವುದು ಧರ್ಮದ ಆಧಾರದಲ್ಲಿ ಮೀಸಲಾತಿ ಕೊಡುವುದು ಸರಿಯಲ್ಲ ಎಂಬುದಷ್ಟೇ. ಸಾವಿರಾರು ವರ್ಷಗಳಿಂದ ದಲಿತರಿಗೆ ಅನ್ಯಾಯ ಆಗುತ್ತಿದೆ. ಅದಕ್ಕಾಗಿ ಅವರಿಗೆ ನಮ್ಮ ಸಂವಿಧಾನದಲ್ಲಿ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ. ಯಾವ ಪಕ್ಷವೂ ಇದನ್ನು ವಿರೋಧಿಸಲು ಸಾಧ್ಯವೇ ಇಲ್ಲ ಎಂದು ತಿಳಿಸಿದರು.

Continue Reading
Advertisement
Prajwal Revanna Case Who is behind pen drive mastermind Karthik HD Kumaraswamy Question
ರಾಜಕೀಯ18 mins ago

Prajwal Revanna Case: ಪೆನ್‌ಡ್ರೈವ್‌ ಸೂತ್ರಧಾರಿ ಕಾರ್ತಿಕ್‌ ಹಿಂದೆ ಯಾರಿದ್ದಾರೆ? ಎಲ್ಲಿದ್ದಾನೆ? ಅವನನ್ನೇಕೆ ಹಿಡಿಯಲಿಲ್ಲ? ಎಚ್‌ಡಿಕೆ ಪ್ರಶ್ನೆ

Lok Sabha election 2024
ದೇಶ27 mins ago

Lok Sabha Election 2024: ನಟ ಶೇಖರ್‌ ಸುಮನ್‌, ಕಾಂಗ್ರೆಸ್‌ ನಾಯಕಿ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

Prajwal Revanna Case Kumaraswamy demands DK Shivakumar dismissal behind pen drive conspiracy
ರಾಜಕೀಯ42 mins ago

Prajwal Revanna Case: ಪೆನ್‌ಡ್ರೈವ್‌ ಸಂಚಿನ ಹಿಂದಿರುವ ಡಿ.ಕೆ. ಶಿವಕುಮಾರ್‌ ವಜಾಗೆ ಕುಮಾರಸ್ವಾಮಿ ಆಗ್ರಹ

T20 World Cup 2024
ಕ್ರೀಡೆ54 mins ago

T20 World Cup 2024: ಟಿ20 ವಿಶ್ವಕಪ್​ಗೆ ಪ್ರಕಟಗೊಂಡ ಎಲ್ಲ ತಂಡಗಳ ಆಟಗಾರರ ಪಟ್ಟಿ

Theft Case In Bengaluru
ಬೆಂಗಳೂರು58 mins ago

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Sunita Williams
ತಂತ್ರಜ್ಞಾನ1 hour ago

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Money Guide
ಮನಿ ಗೈಡ್1 hour ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

Prajwal Revanna Case HD Revanna gets bail today court asked if there was a chance Hearing adjourned till tomorrow
ಕ್ರೈಂ1 hour ago

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Rahul Gandhi
ದೇಶ1 hour ago

Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

5 Day Work in Banks
ವಾಣಿಜ್ಯ2 hours ago

5 Days Work in Banks: ಬ್ಯಾಂಕ್‌ಗಳು ವಾರದಲ್ಲಿ ಐದೇ ದಿನ ಓಪನ್‌ ಇರಲಿವೆ; ಪರ್ಯಾಯ ವ್ಯವಸ್ಥೆಗೆ ಸಜ್ಜಾಗಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ19 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ20 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ20 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌